ಒಟ್ಟು 7546 ಕಡೆಗಳಲ್ಲಿ , 133 ದಾಸರು , 4390 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾರಿ ಭಜಿಸಿರೋ | ವಿಜಯ ಗುರುಗಳೆಂಬರಾ ಪ ಚಾರು | ಚರಣ ತೊರ್ಪರಾ ಅ.ಪ. ಸತ್ರಯಾಗದೀ ಗಂಗೆ | ಕ್ಷೇತ್ರ ತೀರದಿಭ್ರಾತೃವರ್ಗವೂ ಅವರ ತುತಿಸಿ ಕಳುಹಲೂ 1 ಗಿರಿಜೆ ರಮಣನಾ ಪುರವ | ಸಾರಿ ಬೇಗನೇಮಾರ ಕೇಳಿಯಾ ನೋಡಿ | ಗಿರಿಯ ತ್ಯಜಿಸಿದಾ 2 ಚತುರವದನನಾ ದಿವ್ಯ | ಸತ್ಯಲೋಕವಾಚತುರ ಸೇರುತಾ ಅವನ | ಸ್ತುತಿಯ ಮಾಡಿದ 3 ವೇದ ಪಠಿಸುತಾ | ಬಧಿರನಂತಿರೇವದಗಿ ಸಾಗಿದಾ | ನಾರ್ದ ದೂತನೂ4 ಹರಿಯೆ ಕಾಣುವೆ ಎಂದು | ತ್ವರದಿ ಬಂದನೂಹರಿಯ ಮಾಯವಾ ಜಗದಿ | ಯಾರು ಅರಿವರು 5 ನಿದ್ರೆ ಬಂದವಾ | ನಂತೆ ಮಲಗಿಹಾಭದ್ರ ಮೂರ್ತಿಯಾ ತಾನು ಕಾಲಿಲೊದ್ದನು 6 ಪಾದ ಒತ್ತುತಾಮೋದ ಬಡಿಸಿದಾ ತಾನು | ಸಾಧು ಮುನಿಯನು 7 ಹರಿಯೆ ಪರನೆಲ್ಲಾ | ಹರಿಯ ಸರ್ವಜ್ಞಾಹರಿಗಿನ್ನಿಲ್ಲವೋ | ಸಮರು ಅಧಿಕರವಾ 8 ಎಂದು ಸ್ಥಾಪಿಸೀ | ತಾನು ಬಂದು ನಿಂತನುಛಂದದಿಂದಲಿ ಯಜ್ಞ | ಸಾಂಗಗೈಸಿದಾ 9 ಪದಸುಳ್ಹಾದಿಯಾ | ರಚಿಸಿ ಮೋದದಿಂದಲೀವೇದ ಸಾರವಾ | ಜನಕೆ ಬೋಧಿಸೀರುವಾ 10 ಪವನನಯ್ಯನಾ ಗುರು | ಗೋವಿಂದ ವಿಠಲನಾಸ್ತವನ ಮಾಡುತ ತಾನು | ಭವವ ಕಳದನಾ 11
--------------
ಗುರುಗೋವಿಂದವಿಠಲರು
ಸಾರಿ ಭಜಿಸಿರೋ ವಾದಿ ರಾಜ ಗುರುಗಳಾಘೋರ ಸಂಕಟದಿಂದಾ ಪಾರು ಮಾಳ್ಪರಾ ಪಭುಜಗುಣಸ್ಥರಾ ಅಜನ ಪದಕೆ ಅರ್ಹರಾಸುಜನವಂದ್ಯರಾ ವಾಜಿವದನ ದಾಸರಾ 1ವಕ್ರತರ್ಕದಾ ವಾದಿ ಸೊಕ್ಕು ಮುರಿದರಾಯುಕ್ತಮಲ್ಲಿಕಾ ರಚಿಸಿ ಮುಕ್ತಿ ತೋರ್ಪರಾ 2ಕುದುರೆ ಮೋರೆಯಾ ದೇವ ಮುದದಿ ಮೆಲುವನುಕಡಲೆ ಹೂರಣಾ ನೀವು ಕೊಡಲು ಅನುದಿನಾ3ಭೂತರಾಜನು ಸೋತ ದಾಸನಾದನುಅತಿ ಮಹತ್ವದಾ ಸೇವೆ ಸತತ ಮಾಳ್ವನು 4ಭಕ್ತಿುಂದಲಿ ಇವರ ಸ್ತುತಿಯ ಮಾಡಲುಭೂಪತಿ'ಠ್ಠಲಾ ಒಲಿದು ವರವಾ ಕೊಡುವನು 5'ಜುೀಂದ್ರರು
--------------
ಭೂಪತಿ ವಿಠಲರು
ಸಾರಿದ ಸಿರಿವರ ಸಡಗರದಿಂದಲಿ ಕೌರವಪುರಕೆ ಪ ಧೀರ ಪಾಂಡವರ ಕೋರಿಕೆ ಸಲ್ಲಿಸಲು ಸಾರಸ ನಯನನು ಅ.ಪ. ಪ್ರಾತರಾಹ್ನೀಕವ ತಾ ತೀರಿಸಿ ವರ ಪೀತ ವಸನ ಧರಿಸಿ ವೀತರಾಗ ಸಂಪ್ರೀತಿಯಲಿ ಫಾಲದಿ ತಾ ತಿಲಕವ ಧರಿಸಿ ಹೇಮ ಮಕುಟೋತ್ತಮಾಂಗದಿ ಧರಿಸಿ ಜ್ಯೋತಿರ್ಮಯಗತಿ ಪ್ರೀತಿಯಿಲಿ ತರುಣಿರಾ ರುತಿ ಬೆಳಗಲು ತಾ ಸುಮುಹೂರ್ತದಿ 1 ಅಂಡಜಾಧಿಪನು ಪ್ರಕಾಂಡ ಪೀಠನುದ್ದಂಡರಥವ ತರಿಸಿ ಚಂಡಗದಾ ಕೋದಂಡಾದ್ಯಾಯುಧ ಬಂಡಿಗೆಯೊಳಗಿರಿಸಿ ಮಾರ್ತಾಂಡನಂತೆ ಮೆರೆಸಿ ಹಿಂಡುಬಳಗಗಳ ಕಂಡಾದರಿಸುತ ಪಾಂಡುಸುತರ ಬೀಳ್ಕೊಂಡು ಭರದಲಿ 2 ಸುಖದಿ ಪ್ರಯಾಣ ಬೆಳಸಿ ಪ್ರಕಟ ಪಥದಿ ಮುನಿನಿಕರಂಗಳ ಮನವಿಕಸಿತಗೊಳಿಸಿ ಶುಕಪಿಕಾದಿ ಖಗಪಿಕರಂಗಳರವ ಸುಖವ ಮನದಿ ನಿಲಿಸಿ ಸಕಲಾಂತರ್ಗತ ಕರಿಗಿರೀಶ ತಾ ಯುಕುತಿಯಿಂದ ಸಂಧಾನವ ನಡೆಸಲು 3
--------------
ವರಾವಾಣಿರಾಮರಾಯದಾಸರು
ಸಾರಿರೈಯ್ಯಾ ಜನರು ಗಂಭೀರ ಗುಣನಿಧಿ ಮುಖ್ಯ ಪ್ರಾಣನ ಪ ರೋಷದಿಲಂಕೆಯವಳಿಸಿ ವಿಭೀಷಣ ನಾಮವೇ ಉಳಿಸಿ || ಔಷಧಗಿರಿ ತಂದಿಳಿಸಿ ಕಾಯದಾ ಸೌಮಿತ್ರಿಯ ಪ್ರಾಣವೆನುಳಿಸಿ1 ಅರಗಿನ ಮನೆಯಿಂದಾ ಐವರನು ಹೊರಡಿಸಿ ತಂದಾ | ಪುರ ಬೋಧನಕ ಬಂದಾ | ಸುರರಾ ಕಾಯದಾ ಕರುಣ ದಿಂದಾ 2 ಹರಿಪರಂ ದೈವೆಂದರಸೀ | ದುರುಳರ ಮತವನು ಪರಿಹರಿಸಿ | ಹೊರೆದನು ಜಗ ಉದ್ಧರಿಸೀ ಎಂ | ದೆರಗಿದ ಮಹಿಪತಿ ನಂದನುದ್ಧರಿಸೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾರಿರೊ ಡಂಗುರವ ನಮ್ಮ ಪ ಭಾರತಿರಮಣ ವಾಯುವೆ ಜಗದ್ಗುರುವೆಂದು ಅ.ಪ ಭೋರಿಡುತಲಿಪ್ಪ ಸಮುದ್ರವ ಲಂಘಿಸಿಧಾರುಣಿಸುತೆಯ ದುಃಖವ ಕಳೆದುಚೋರರಾವಣ ವನವನಲಗಾಹುತಿಯಿತ್ತುಶ್ರೀರಾಮಗೆರಗಿದಾತನೆ ಪ್ರಸಿದ್ಧನೆಂದು 1 ಕುಶಲದಿ ಕುಂತಿಗೆ ಮಗನಾಗಿ ಭೀಮನೆ-ನಿಸಿ ಆ ಕೌರವ ಕಪಟದಲಿ ಕೊಟ್ಟವಿಷದ ಕಜ್ಹಾಯವ ತಿಂದು ಜೀರ್ಣಿಸಿಕೊಂಡಅಸಮ ಬಲಾಢ್ಯ ಮೂರುತಿಯೆ ಬದ್ಧವೆಂದು 2 ಕಲಿಯುಗದÀಲಿ ಮಧ್ಯಗೇಹಾಭಿಧಾನದತುಳುವ ಬ್ರಾಹ್ಮಣನಲಿ ಅವತರಿಸಿಒಲಿದು ಶ್ರೀ ಅಚ್ಯುತಪ್ರೇಕ್ಷಾಚಾರ್ಯರಿಂ-ದಲಿ ಆಶ್ರಮಗೊಂಡ ಪೂರ್ಣಪ್ರಜ್ಞನೆಂದು 3 ಕಾಲ ಪ್ರಳಯದ ಸಿಡಿಲು ಬಂದೆರಗಿದಂತೆಕಾಲಿಂದ ತುಳಿದವನಸುವಗೊಂಡನು ಎಂದನು 4 ಬಳಿಕ ಇಪ್ಪತ್ತೊಂದು ದುರ್ಭಾಷ್ಯಂಗಳಹಳಿದು ವೇದಾಂತ ಶಾಸ್ತ್ರಂಗಳಲಿಉಳುಹಿ ವೈಷ್ಣವ ಮತವವನಿಯೊಳಗೆ ನಮ್ಮಸಲಹುವ ಮಧ್ವೇಶ ಕೃಷ್ಣ ಪ್ರಿಯನೆಂದು5
--------------
ವ್ಯಾಸರಾಯರು
ಸಾರ್ಥಕವು ವರ ವೈಷ್ಣವ ಜನುಮವು ಸಾರ್ಥಕವು ಪ ಸಾರ್ಥಕವಿದು ಪುರುಷಾರ್ಥಕೆ ಸಾಧನಅ.ಪ ಸ್ವಾಮಿದಾಸ ಭಾವವನು ನಿರಂತರ ನಿಯಮದಿಂದ ಬೋಧಿಸುತಿರುವ ಕಾಮಕ್ರೋಧಗಳ ಜರಿದು ಶ್ರೀ ಹರಿಯಲಿ ಪ್ರೇಮವೇ ಪರಮ ಸಾಧನವೆಂದರಿತರೆ 1 ದಾನ ಸ್ನಾನ ಜಪ ಸಂಧ್ಯಾತ್ರಿಯಗಳು ಜ್ಞಾನಕೆ ಸಾಧನವೆಂಬುದರಿಯುತ ಕಾಣಲು ಹರಿಯನು ಹೃದಯಾಂಬರದಲಿ ಕರ್ಮ ಸವೆಯುತಿರೆ 2 ವಿಶ್ವ ಜನನ ಸ್ಥಿತಿ ಪ್ರಳಯಗಳಿಗೆ ಸದಾ ಈಶ್ವರ ತಾನು ಪ್ರಸನ್ನನಾಗಲು ಶಾಶ್ವತವಾದ ಸ್ವರೂಪಾನಂದವ ಸ್ವಪ್ನಯೋಗ್ಯ ರೀತಿಯಲಿ ಪಡೆಯುವುದೇ 3
--------------
ವಿದ್ಯಾಪ್ರಸನ್ನತೀರ್ಥರು
ಸಾರ್ಥಕಾಗುವುದು ರವಿಮಾರ್ಗ ಅ ನರ್ಥ ಊಹಿಸುವುದು ಶಶಿಮಾರ್ಗ ಪ ತೀರ್ಥಪಾದನಾಧೀನವಿದೆನ್ನದೆ ಕರ್ತನಾವೆನುತ ಕೆಲರು ಕೆಡುತಿಹರು ಅ.ಪ ದೇವರುಪೂಜೆಯ ಮಾಡುವರ ಸ- ದ್ಭಾವ ಭಕುತಿಯಿಂದ ಪೂಜೆಪುದು ನೋವಿದು ಪೂಜೆಗೆ ಕೂಲಿ ಎಂದು ದುರ್ ಭಾವದಿಂದ ದುಷ್ಟರು ತಾವ್ ಕೆಡುವರು 1 ಮೇಲಾಸಕ್ತಿಯು ಸಜ್ಜನಕೆ ಶ್ರೀ- ಲೋಲನುಭಯರೊಳಗೆ ನಿಂತು ತ- ತ್ಕಾಲ ಪ್ರೇರಿಸಿ ಎರಡುಗತಿ ಕೊಡಿಸುವ 2 ಬದಲಿಗೆ ಬದಲೇ ಶಶಿಮಾರ್ಗ ಸ- ಮ್ಮುದ ನಿಷ್ಕಾಮವು ರವಿಮಾರ್ಗ ಪದುಮೆಯರಸ ಗುರುರಾಮವಿಠಲ ದ್ವಿ ವಿಧರಿಗೆ ಮುಕ್ತಿಯು ಸಂಸಾರ ಕೊಡುವ 3
--------------
ಗುರುರಾಮವಿಠಲ
ಸಾಲದೆ ನಿನ್ನದೊಂದು ದಿವ್ಯನಾಮ - ಅ-ಕಾಲ ಮೃತ್ಯುವಿನ ಗಂಟಲಗಾಣ ಹರಿಯೆ ಪ ರಣದೊಳಗೆ ಅಂಗಾಂಗ ಖಂಡತುಂಡಾಗಿ ಪ್ರತಿರಣವನುತ್ತರಿಸಿ ಮರಣವ ತಾಳಿರೆಪ್ರಣವ ಗೋಚರ ನೀನು ಗೋಚರಿಸಿ ಬಂದೆನ್ನಹೆಣಕೆ ಪ್ರಾಣವ ಪ್ರಯೋಗಿಸಿದಂತರಾತ್ಮ1 ಕುಂತದಿಂ ತೂಂತುಗೊಂಡೆನ್ನ ಬೆನ್ನಿಂದಿಳಿವಸಂತತ ನೆತ್ತರನೊರಸಿ ಬಿಸುಟೆತಿಂತ್ರಿಣಿಯ ಮರದಡಿಯೆ ಹಾವು ಕಡಿದೊರಗಿರಲುಮಂತ್ರಿಸಿ ಮನೆಗೆ ಕಳುಹಿದೆ ಗರುಡಗಮನ 2 ಗರಳ ತೈಲವ ಸೇವಿಸೆವೇಣುನಾದದಲಿ ಹಣೆಯನೇವರಿಸಿ ಪಂಚಪ್ರಾಣ ಪ್ರತಿಷ್ಠೆಯ ಮಾಡಿದೆ ಮಹಾತ್ಮ 3 ತಮ್ಮ ಹವಣನರಿಯದೆ ಕೊಬ್ಬಿದ ಪಿಶಾಚಿಗಳುಎಮ್ಮ ಮನೆಗೊಂದೆ ಸಮ ಕಲ್ಲಲಿಟ್ಟುಹೆಮ್ಮಕ್ಕಳ ಬಾಧಿಸುವುದನು ಕಂಡುಬೊಮ್ಮಜಟ್ಟಿಗರ ಶಿರವರಿದೆ ನರಹರಿಯೆ 4 ಓದಿ ಹೇಳಿದರೊಂದು ಕಥೆಯಾಗುತಿದೆ ಮಹಾಂಬೋಧಿಶಯನನೆ ವೇದಶಾಸ್ತ್ರ ಮುಖದಿಬಾಧಿಸುವ ದುರಿತಾಗ್ನಿಗಂಬು ಶ್ರೀ ಕಾಗಿನೆಲೆಯಾದಿಕೇಶವನ ನಾಮ ಸಂಕೀರ್ತನ 5
--------------
ಕನಕದಾಸ
ಸಾಲವ ಕೊಡದಿದ್ದರೆ ನಿನಗೆ | ನಾಲಿಗೆಂಬೊದು ಇಲ್ಲೊ ಉತ್ತರಾಡುವುದಕ್ಕೆ ಪ ಏಸು ದಿವಸದಿಂದ ಎಲ್ಲರ ಸೇವಿಸಿ | ಕಾಸು ಕಾಸಿಗೆ ನಾನು ಕೂಡಹಾಕಿ | ಲೇಸು ಉಳ್ಳವನೆಂದು ಕೊಟ್ಟರೆ ನೀ ನಿಂತು | ಮೋಸಗೊಳಿಸುವರೆ ಕಾಣಿಸಿಕೊಳ್ಳಿದಲೆ 1 ಬಡ್ಡಿ ಏನಾಯಿತೊ ಕೊಟ್ಟ ಗಂಟಿಗೆ ನಿನ | ಗಡ್ಡ ಬೀಳುವೆನೊ ಸಾಲವ ತೀರಿಸೊ | ಖಡ್ಡಿ ಮಾನವನೆಂದು ನೋಡ ಸಲ್ಲಾ ಎನ್ನ | ದೊಡ್ಡವರು ಕಂಡರೆ ಅಡ್ಡಗೈಸದೆ ಬಿಡರು 2 ಗುಣಿಸಿ ನೋಡಿದರೆ ಏನಯ್ಯಾ ಮುತ್ತಯ್ಯಾ ಯಾ ಕೆ ನಿಲ್ಲದೆ ನಿನಗೆ ಸಾಲವಿತ್ತೆ | ಧನವ ಎಣಿಸಲಾಗಿ ನೆಲೆಗಾಣೆಯಿನ್ನು ಸು | ಮ್ಮನೆ ಕೂಗದೆ ನಿಂದು ಋಣವ ತಿದ್ದು ಚಲುವಾ3 ಸಾಲಾ ಬಂದರೆ ಒಳಿತೆ ಇಲ್ಲದಿದ್ದರೆ ಕೇಳು | ಮೇಲೆ ಮೇಲೆ ಬಿದ್ದು ನಿನ್ನ | ಕೀಲಿಸಿ ಬಿಡದಲೆ ತೊಲಗ ಬಿಡೆ ದೇವಾ 4 ಬತ್ತಲಿದ್ದವರಿಗೆ ಭಯವಿಲ್ಲವೆಂಬೊ ಗಾದಿಗೆ | ನೆತ್ತಿಯೆತ್ತಿ ಮೋರೆ ತೋರ ಬೇಕೊ | ಹತ್ತರ ಇದ್ದು ತೀರಿಸಬೇಕೊ ಸರ್ವೇಶಾ | ಸುತ್ತಿ ಭಳಿರೆ ಸಂದೇಹ ಬೇಡ ನೀ ಬರೆದ ಬರಹ ನೋಡು 5 ಬಡತನ ಬಂದರಾಗ ನಾ ನಿನಗೆ ಬಾಯಿ | ಬಿಡುವೆನೆ ದೈನ್ಯದಲಿ ಭಾಗ್ಯವಂತಾ | ತಡ ಮಾಡಲಾಗದು ಕೊಡು ಎನ್ನ ಒಡಿವೆ | ಪೊಡವಿಲಿ ಪರರಿಗೆ ಸಲ್ಲದೊ ಸರ್ವೇಶಾ 6 ಗತಿಯಿಲ್ಲ ನಾನಪ್ರಮಾಣಿಕ ನಾನಹುದೆಂದು | ಸಂತತ ಸಂತರ ಮುಂದೆ ನುಡಿದು ಬಿಡುವೆ | ಪತಿತ ಪಾವನ ನಮ್ಮ ವಿಜಯವಿಠ್ಠಲ ನಿನ್ನ | ನುತಿಸಿಕೊಳ್ಳುತ್ತ ಕಾಲಕ್ರಮಣ ಮಾಡುವೆ 7
--------------
ವಿಜಯದಾಸ
ಸಾವಧಾನವಾಗಿ ನೋಡೋ ಸ್ವಾಮಿ ಸದ್ಗುರು ಶ್ರೀಪಾದ ಬೋಧ ಧ್ರುವ ತಿರುಗಿ ನೋಡೋ ನಿನ್ನ ನೀನು ಅರಿತು ಸ್ವಾನುಭವದಿಂದ ಕರಗಿ ಮನ ನೋಡಿ ನಿಜದೋರುತದೆ ಬ್ರಹ್ಮಾನಂದ ಸೆರಗವಿಡಿದು ಸೇರು ಬ್ಯಾಗೆ ಗುರುಕರುಣ ಕೃಪೆಯಿಂದ ಪರಮ ಸುಪಥವಿದೆ ವರಮುನಿಗಳಾನಂದ 1 ಹಚ್ಚಿ ನಿಜಧ್ಯಾಸವಂದು ಕಚ್ಚಿಕೊಂಡಿರೋ ಸುಹಾಸ ಮುಚ್ಚಿಕೊಂಡು ಮುಕ್ತಿ ಮಾರ್ಗ ನೆಚ್ಚಿರೋ ನಿಜಪ್ರಕಾಶ ಹುಚ್ಚುಗೊಂಡು ಹರಿಯ ರೂಪ ಅಚ್ಚರಿಸೋ ನಿರಾಶ ಎಚ್ಚತ್ತು ನಿನ್ನೊಳಗೆ ಬೆರೆಯೋ ಘನಸಮರಸ 2 ಸಾವಧಾನವೆಂದು ಶ್ರುತಿ ಸಾರುತದೆ ತಾ ಪೂರ್ಣ ಸುವಿದ್ಯ ಸುಖವಿದು ಸಾಧಿಸು ಅನುದಿನ ಪಾವನ್ನಗೈಸುದಿದೆ ಮಹಿಪತಿ ಜೀವಪ್ರಾಣ ಭಾವ ಬಲಿದು ನೋಡಲಿಕೆ ದೋರುತದೊ ನಿಧಾನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾವಧಾನವೆಂದು ಶ್ರುತಿಸಾರುತಿದೆಕೋ ಭಾವದಿಂದಲಿ ಮನವೆ ನೀ ಎಚ್ಚತ್ತುಕೋ ಧ್ರುವ ಭವದ ನಿದ್ರಿಗಳೆದು ಸಾವದಾನವಾಗೋ ನಿವಾಂತ ಕೂಡಲಿಕ್ಯದ ಬಲು ಬೆಳಗೋ ವಿವೇಕವೆಂಬ ಸ್ಮರಣೆ ಇದೆ ನಿನಗೋ ಭವಹರ ಗುರುವಿಗೆ ಶರಣಯುಗೋ 1 ಮುಚ್ಚಿದ ಮಾಯದ ಮುಸಕ್ಹಾರಿಸುವದೆ ಙÁ್ಞನ ಎಚ್ಚತ್ತಮ್ಯಾಲಿದೆ ಖೂನ ಸುವಸ್ತು ಧ್ಯಾನ ಅಚ್ಯುತಾನಂತನ ಕಾಂಬುದನುಸಂಧಾನ ಅಚಲವೆಲ್ಲಕ್ಕಿದೆ ಸುಪಥಸಾಧನ 2 ಬೆಳಗಿನ ಬೆಳಗಿದೆ ಬಲು ನಿಶ್ಚಲ ಒಳಗೆ ಹೊರಗೆ ತೋರುವ ಆನಂದ ಕಲ್ಲೋಳ ಹೊಳೆವ ಮಹಿಪತಿಸ್ವಾಮಿ ಪ್ರಭೆಯು ಬಹಳ ಬೆಳಗಾಯಿತು ಗುರುದಯ ಪ್ರಬಳ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾವಾತ ನಾನಲ್ಲಾ ಸಾವು ಮೊದಲೆನಗಿಲ್ಲಾ ಯೋಗಿ ತಾ ಬಲ್ಲಾ ಪ ಧರೆಯೆನಿಸಿ ದೊರೆಯಾಜÉ್ಞಯೊಳಾಳುತಿಹೆ ನಾನು ವರಮಂತ್ರಿಯಾಗಿ ವರ್ತಿಸುವವನೆ ನಾನು ಕರಣಿಕರ ತೆರದಿ ಲೆಕ್ಕವ ನೋಡುತಿಹೆ ನಾನು ಪರಿವಾರವಾಗಿ ಓಲೈಸುವವನೆ ನಾನು 1 ವಾಹನ ಹೊರುವಾತ ನಾನು ಹೊತ್ತಂತಿರುವೆ ನಾನು ಹರಿನಾಮ ಹರನಾನು ನರನಾನು ಸರ್ವವೀ ಪರಿಯೊಳಗೆ ಮೆರೆದು ವಿಸ್ತರಿಪೆ ನಾನು 2 ಅಣುರೇಣು ತೃಣಕಾಷ್ಠ ಭರಿತನಾಗಿಹೆ ನಾನು ಗಣನೆಯಿಲ್ಲದ ಗುಣವ ತೋರ್ಪೆ ನಾನು ಉಣಲಿಕ್ಕುವವ ನಾನು ಉಂಡು ತೃಪ್ತಿಪೆ ನಾನು ರಣನಾನು ರಣವ ಗೆಲುವಾತ ನಾನು 3 ಭೂಮಿಯಾಗಿಹೆ ನಾನು ಬೆಳೆವ ಬೆಳೆಯೇ ನಾನು ಸೋಮ ಸೂರ್ಯಾಗ್ನಿ ವಾಯುಗಳೆ ನಾನು ನಾಮರೂಪಾತೀತ ವಸ್ತುವಾಗಿಹೆ ನಾನು ಕಾಮಿನಿಯರಾಗಿ ಕಾಮಿಸುವವನೆ ನಾನು 4 ಒಲಿವಾತನೇ ನಾನು ಒಲಿದರಗಲೆ ನಾನು ಕೊಲಿಸಿಕೊಂಬುವೆ ನಾನು ಕೊಲುವಾತ ನಾನು ಸುಲಭದಿಂದಲಿ ಜ್ಞಾನ ಫಲವಿಕ್ಕುವವ ನಾನು ಚೆಲುವ ವಿಮಲಾನಂದ ಗುರುರಾಯ ನಾನು 5
--------------
ಭಟಕಳ ಅಪ್ಪಯ್ಯ
ಸಾಸಿರನಾಮ ಪೂಜೆಸಾಸಿರ ನಾಮ ಪೂಜೆಯ ಸಮಯಾ ಶ್ರೀವಾಸುದೇವನೆ ರಕ್ಷಿಪ ಸಮಯಾ ಸ್ವಾಮಿ ಪಸಾಸಿರ ದಳ ಪದ್ಮ ಮಧ್ಯಕೆ ಶ್ರೀ ವೇದವ್ಯಾಸ ಗುರುವು ಬಂದಿಹ ಸಮಯಾ ಭಾಸುರ ಛಂದಸ್ಸು ಮುಖಮಂಡಲದಿ ಪ್ರಕಾಶಿಸಿ ಮಂತ್ರ ಸಿದ್ಧಿಪ ಸಮಯಾ ಸ್ವಾಮಿ 1ಶ್ರೀರಮೆ ಧರೆ ಸಹ ಹೃದಯಮಧ್ಯದಿ ಶ್ರೀಮನ್‍ನಾರಾಯಣ ನೀನಿಹ ಸಮಯಾತೋರುತಿದಿರೆ ಪೀಠದಿ ಪೂಜೆಗೊಳುತೆನ್ನಸ್ಮೇರಾಸ್ಯದಿಂ ನೋಡುವ ಸಮಯಾ ಸ್ವಾಮಿ 2ಬೀಜನಾಮವು ದಕ್ಷಿಣ ಸ್ತನ ದೇಶದಿಭ್ರಾಜಿಸಿ ಭಕ್ತಿಗೂಡುವ ಸಮಯಾರಾಜಿಪ ಶಕ್ತಿ ನಾಮವು ವಾಮದಿ ಫಲರಾಜಿಯ ಬೆಳಸುತಿರುವ ಸಮಯಾ ಸ್ವಾಮಿ 3ಹೃದಯದಿ ಕೀಲಕ ನಾಮವು ನಿನ್ನಯಪದಸನಿಯವ ಸೇರಿಪ ಸಮಯಾಪದರದೆ ವಿಘ್ನತತಿಗೆ ಭಜಿಸೆನ್ನುತಸದಯ ಸದ್ಗುರು ನಿಯಮಿಪ ಸಮಯಾ ಸ್ವಾಮಿ 4ಅಂಗುಲಿಗಳು ನಿನ್ನ ಮಂಗಳ ನಾಮಗಳಸಂಗದಿ ಶುದ್ಧಿವಡೆದಿಹ ಸಮಯಾಗಂಗೆಯ ಪಡೆದ ನಿನ್ನಡಿಗೆ ತುಲಸಿ ಕುಸುಮಂಗಳನರ್ಪಿಸುತಿಹ ಸಮಯಾ ಸ್ವಾಮಿ 5ಅಂಗಗಳಾರು ಶುಭಾಂಗಗಳಾಗಿ ನಿನ್ನಮಂಗಳ ತನುವ ಧ್ಯಾನಿಪ ಸಮಯಾತೊಂಗದೆ ವಿಷಯಗಳೊಳು ನಿನ್ನ ಪದದುಂಗುಟದುದಿಯ ಸೇರಿಹ ಸಮಯಾ ಸ್ವಾಮಿ 6ದಶನಾಮ ದಶಕ ದಶಕ ಸಮಯದಿ ದಿವ್ಯದಶವಿಧ ಭೋಜ್ಯ ಭೋಜಿಪ ಸಮಯಾದಶವಿಧದಾರತಿಗಳ ಬೆಳಕಿಗಿಂದ್ರಿಯದಶಕವು ವಶಕೆ ಬಂದಿಹ ಸಮಯಾ ಸ್ವಾಮಿ 7ಮೀನ ಕಮಠ ಬುದ್ಧ ಕಲ್ಕಿನೀನಾಗಿ ಭಕತರಿಷ್ಟವನಿತ್ತೆ ನನ್ನಯದೀನತೆಯಳಿವರಿದೇ ಸಮಯಾ ಸ್ವಾಮಿ 8ಅನುಗ್ರಹಶಕ್ತಿಯೊಳಿರುತಷ್ಟಶಕ್ತಿಗಳನು ನೋಡಿ ಸೇವೆಗೊಳುವ ಸಮಯಾಸನಕಾದಿಗಳು ಶ್ರುತಿ ಸ್ಮøತಿ ಪುರಾಣಂಗಳುವಿನಮಿತರಾಗಿ ನುತಿಪ ಸಮಯಾ ಸ್ವಾಮಿ 9ವರ ಸಿಂಹಾಸನದಗ್ನಿ ದಿಕ್ಕಿನೊಳ್ ಧರ್ಮನುಹರುಷದಿಂ ಸೇವೆಗೈಯುವ ಸಮಯಾನಿರುರುತಿ ದೇಶದಿ ಜ್ಞಾನನು ತಾಮಸಬರದಂತೆ ಕಾದು ನಿಂದಿಹ ಸಮಯಾ ಸ್ವಾಮಿ 10ವೈರಾಗ್ಯ ವಾಯವ್ಯದೊಳು ನಿಂದು ದುಃಖವಹಾರಿಸುತಲಿ ಸೇವಿಪ ಸಮಯಾಸಾರಿರುತೈಶ್ವರ್ಯನೀಶನೆಡೆಯೊಳ್ ನೀನುತೋರಿದೂಳಿಗ ಗೈಯುವ ಸಮಯಾ ಸ್ವಾಮಿ 11ಸುರಪತಿ ದೆಶೆಯೊಳಧರ್ಮನು ಬೆದರುತಕರವ ಮುಗಿದು ನಿಂದಿಹ ಸಮಯಾಇರುತ ದಕ್ಷಿಣದಲಜ್ಞಾನನು ಚೇಷ್ಟೆಯತೊರೆದು ಭಯದಿ ಭಜಿಸುವ ಸಮಯಾ ಸ್ವಾಮಿ 12ವರುಣದಿಕ್ಕಿನೊಳವೈರಾಗ್ಯನು ನಿನ್ನಡಿಗೆರಗುವವರ ನೋಡುವ ಸಮಯಾಇರುತಲುತ್ತರದಲನೈಶ್ವರ್ಯ ಮಂತ್ರದುಚ್ಚರಣೆಯ ತಪ್ಪನೆಣಿಪ ಸಮಯಾ ಸ್ವಾಮಿ 13ಕಾಮಾದಿಗಳು ಪೀಠಸೀಮೆಯೊಳಗೆ ನಿಂತು ಕೈಮುಗಿದಲುಗದಿರುವ ಸಮಯಾತಾಮಸ ರಾಜಸ ಸಾತ್ವಿಕಗಳು ನಿನ್ನನಾಮದ ಬಲುಹ ತಿಳಿವ ಸಮಯಾ ಸ್ವಾಮಿ 14ಎಂಟು ದಿಕ್ಕಿನ ದೊರೆಗಳು ಪರಿವಾರ ಸಹಬಂಟರಾಗಿಯೆ ಕಾದಿಹ ಸಮಯಾಎಂಟು ಬಗೆಯ ಸಿರಿದೇವಿಯರೊಂದಾಗಿನಂಟುತನವ ಬಳಸಿಹ ಸಮಯಾ ಸ್ವಾಮಿ 15ಮೊದಲ ನಾಮವು ವಿಶ್ವಮಯ ನಿನ್ನ ನಿರ್ಗುಣಪದವ ಸೂಚಿಸಿ ಸಲಹುವ ಸಮಯಾತುದಿಯ ನಾಮದಿ ಭಕತರಿಗಾಗಿ ತನುದಾಳಿಒದೆದು ದುರಿತವ ರಕ್ಷಿಪ ಸಮಯಾ ಸ್ವಾಮಿ 16ದೂರಕೆ ದುರಿತವು ಹಾರಿ ಹೋಗಿಯೆ ಭಕ್ತಿಸೇರಿ ನಿನ್ನೆಡೆಯೊಳಾನಿಹ ಸಮಯಾದಾರಿದ್ರ್ಯ ದುಃಖವು ತೋರದಾನಂದವ ಸಾರಿ ನಿನ್ನನು ನುತಿಸುವ ಸಮಯಾ ಸ್ವಾಮಿ 17ಸಾಸಿರ ತಾರಕ ಜಪ ಮೊದಲು ಲಭಿಸಿಸಾಸಿರ ನಾಮ ಜಪವು ಮಧ್ಯದಿಸಾಸಿರ ವಂದನೆ ಕುಸುಮ ತುಲಸಿಗಳಸಾಸಿರದಿಂದೊಪ್ಪುವ ಸಮಯಾ ಸ್ವಾಮಿ 18ಸಾಸಿರ ಸಾಸಿರ ಜನ್ಮ ಜನ್ಮಗಳೊಳುಸಾಸಿರ ಸಾಸಿರ ತಪ್ಪುಗಳಾಸಾಸಿರ ಬಾರಿ ಮಾಡಿದ್ದರು ನಾಮದಸಾಸಿರ ಪ್ರಭೆಯೊಳಳಿವ ಸಮಯಾ ಸ್ವಾಮಿ 19ಮುಂದೆನ್ನ ಕುಲವೃದ್ಧಿಯೊಂದಿ ನಿನ್ನಯ ಕೃಪೆುಂದ ಭಕತಮಯವಹ ಸಮಯಾುಂದೆನ್ನ ಭಾಗ್ಯಕೆಣೆಯ ಕಾಣದೆ ನಿನ್ನಮುಂದೆ ನಾ ನಲಿದು ಕುಣಿವ ಸಮಯಾ ಸ್ವಾಮಿ 20ಗುರುವÀರನುಪದೇಶಿಸಿದ ಮಂತ್ರಕೆ ಸಿದ್ಧಿಬರುವ ನಿನ್ನಯ ಕೃಪೆಗಿದು ಸಮಯಾಕರುಣದಿಂ ನೋಡಿ ಕೈವಿಡಿದಭಯವನಿತ್ತುಪೊರೆವದಕೆನ್ನನಿದೇ ಸಮಯಾ ಸ್ವಾಮಿ 21ಧನ್ಯನು ಧನ್ಯನು ಧನ್ಯನು ನಾನೀಗಧನ್ಯನು ಮತ್ತು ಧನ್ಯನು ವಿಭುವೆಧನ್ಯರು ಜನನೀ ಜನಕ ಬಾಂಧವರೆಲ್ಲಧನ್ಯರೆಮ್ಮನು ನೋಡುವ ಸಮಯಾ ಸ್ವಾಮಿ 22ಮೂಲ ಮಂತ್ರಾಕ್ಷರ ಮೂಲ ನೀನಾಗಿಯೆಮೂಲಾವಿದ್ಯೆಯ ತೊಲಗಿಪ ಸಮಯಾಮೂಲೋಕನಾಯಕ ಮುಕ್ತಿ ಮಾರ್ಗಕೆುದೆಮೂಲವಾಗಿಯೆ ಬದುಕುವ ಸಮಯಾ ಸ್ವಾಮಿ 23ಮುರಹರ ಮಾಧವ ತಿಮಿರ ಭಾಸ್ಕರ ಕೃಷ್ಣಶರಣುಹೊಕ್ಕೆನು ನಿನ್ನ ಚರಣ ಪಂಕಜಗಳಪೊರೆಯುವರೆನ್ನನಿದೆ ಸಮಯಾ ಸ್ವಾಮಿ 24ತಿರುಪತಿಯೊಡೆಯನೆ ಶ್ರೀ ವಾಸುದೇವಾರ್ಯಗುರುವಾಗಿ ಕಾವೇರಿ ತೀರದಲಿಕರುಣದಿಂ ಪಾದುಕೆಗಳನಿತ್ತ ಭಾಗ್ಯವುಸ್ಥಿರವಾಗಿ ಭಕತಿ ಹೆಚ್ಚುವ ಸಮಯಾ ಸ್ವಾಮಿ 25 ಓಂ ಶಕಟಾಸುರಭಂಜನಾಯ ನಮಃ
--------------
ತಿಮ್ಮಪ್ಪದಾಸರು
ಸಿಂಗನಾ ಏರಿದ ನರಸಿಂಗ ತೋಮರವ ಪಿಡಿದು | ರಂಗ ವೈಭೋಗದಿಂದ | ನಲಿದು ಚತು | ರಂಗ ಬೀದಿಯೊಳು ಮೆರೆದಾ ಪ ಮುತ್ತಿನ ಕಿರೀಟ ಮೇಲೆ ಎತ್ತಿದ ಸತ್ತಿಗೆ ಪೊಳೆಯ | ವಾಹನ ರಥ | ಹತ್ತಿ ಬರುವ ಪುರದ ಜನಗಳು 1 ಸನಕಸನಂದನ ಸನತ್ಸುಜಾತ ಸನತ್ಕುಮಾರ | ಮುನಿವರರು ವೇದ ಘೋಷಣೆ ಉಚ್ಚರಿಸುತ್ತ | ಅನಿಮಿಷರಾಗಿ ಇಚ್ಚೈಸುತಾ 2 ಗಂಧರ್ವಾದಿ ಗಾಯನಾ ನಾರಂದನು ಪಾಡುತ್ತ ಬರೆ | ಎಂದು ತುಂಬರನು ಹಾಡಿ ಪಾಡುತಾ 3 ವೇಶ್ಯ ಜನರು ರಂಭೆ ಊರ್ವಶಿ ಪಾತ್ರ ಮಾಡುತಿರೆ | ದಾಸಾನುದಾಸರು ಪಾಡುತಾ | ಸಲಹೊ ಶ್ರೀನಿ ವಾಸನೆಂದು ಬೇಡಿಕೊಳುತಾ 4 ಮಂಗಳಪಾಂಗ ಸಾಂಗೋಪಾಂಗದಿಂದ ಒಪ್ಪೆ ಅಲಮೇ ವೆಂಗಳೇಶ ಶ್ರೀ ವೆಂಕಟೇಶಾ 5
--------------
ವಿಜಯದಾಸ
ಸಿಂದೂರಗಮನೆ ಸಾರೆ ಮಲಗಿರುವನ್ಯಾರೆ ಪ ಸಂದರೀ ಮಂದಿರದೊಳಿವನ್ಯಾರೆ ಸೌಂದರ್ಯದ ಮ್ಯಾರೆ ಛಂದದಲಿ ನೀ ಸಾರೆ ಇಂದು ನಭದಲಿ ಚರಿಸುತಲಿ ಮನ ನೊಂದು ಬೇಸರದಿಂದ ಇಲ್ಲಿಗೆ ಬಂದು ಮಲಗಿಹನೇನೆ ಸುಖದಿ 1 ಶೀಲೆ ನೋಡಿವನ ಮುಖಕಮಲ ಸಂಗರದೊಳತಿ ಚಟುಲ ಸುವಿಶಾಲ ಭುಜಯುಗಲ ಶ್ರೀ ಲಕುಮಿವರ ಪಾಲ ನಯನ ಮರಾಳ ಧ್ವಜರೊಳ ಗಾವನೊ ಇವ ಪೇಳುವದು ಕೀಲಾಲಜಾಂಬಕಿ2 ನಾರಿ ಮಾತನಾಡಿಸೇ ಇವನ ಮನ ಮೋಹದವರನ ಕಮನೀಯ ಗುಣಯುತನ ವಾರಿಜಾಸನ ಮುಖ್ಯ ಸುರಪರಿವಾರ ಸೇವಿಯ ಕೊಳುವ ಕಾರ್ಪರನಾರಸಿಂಹನೆ ಪವಡಿಸಿಹನೆ 3
--------------
ಕಾರ್ಪರ ನರಹರಿದಾಸರು