ಒಟ್ಟು 9847 ಕಡೆಗಳಲ್ಲಿ , 135 ದಾಸರು , 5174 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮಾಯನ್ನಿ ರಾಮಾಯನ್ನಿ ರಾಮಯನ್ನಿರೈ | ವಿಷವಾಧರಿಸಿ ಶೆಖೆ ಘಸಣೆಗಾರದೇ ಶಿವಾ | ವಸೆದು ಜಪಿಸಲು ನಾಮಾ ಸ್ವಖಾನಂದವ ನಿತ್ತಾ 1 ಗಿಳಿಯ ನುಡಿಸುವ ನೆವದಲಿ ಗಣಿಕಾನನದಲಿ | ವಳಿದು ಬರಲು ನಿಂದಾಚಲ ಪದವಿಯಿತ್ತಾ 2 ಒಂದು ಗ್ರಾಮದಿ ದೈತ್ಯರಿಂದಾ ದಂಪತಿಗಳಾ | ಬಂದು ಬಾಧೆ ಬಿಡಿಸಿ ಛಂದದಿ ಸಲುಹಿದಾ 3 ಕುಂದು ಕೊರತೆಗಳಾ ಒಂದು ನೋಡದೇ ಬಂದು | ತಂದೆ ಮಹಿಪತಿಸ್ವಾಮಿ ಹೊಂದಿದ್ದವರ ಕಾವಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಮಾರ್ಯ ನಿಮ್ಮಂಘ್ರಿ ಕಮಲಗಳಿಗೆ ಕರವ ಕರುಣದಿ ನೋಡು ವೆಂಕಟ ಪ. ಬಾಹ್ಯ ಕರ್ಮವ ತೊರೆದು ಸರ್ವಗತನಾದ ನರ ಸಿಂಹನ ಪ್ರೀತಿಗಳಿಸುವ ಸ್ನೇಹದಿ ಮಹ್ಯಮರರಿಗೆ ವಿದ್ಯೆ ವಸ್ತ್ರಾನ್ನ ಪ್ರತಿ ದಿವಸ ಸಹ್ಯವಿಲ್ಲದೆ ಕೊಟ್ಟು ಮೋದಿಸುವ ವೆಂಕಟ1 ವಾಸುದೇವ ವಿಠಲನಂಘ್ರಿಗಳ ರಾ ಜೀವ ಮಧುಕರ ಮಧ್ವ ಶಾಸ್ತ್ರಜ್ಞನೇ ಅವ ದೇಶದೊಳಿದ್ದರೇನ್ಮರೆಯದೆ ನಿಮ್ಮ ಸೇವ ಸೇವಕರೊಳಗೆ ಎಣಿಸುವುದು ವೆಂಕಟ2 ಬಾಲಕನ ಬಿನ್ನಪ ಲಾಲಿಸಿ ಕರುಣದಿ ಗೋ ಪಾಲ ವಿಠಲನ ದಾಸರ ಮಗನೆಂದು ಪಾಲಿಪುದು ಪರಮ ಕರುಣಾಳು ಜಗನ್ನಾಥ ವಿಠಲ ಗಾಳೆನಿಪ ಪವಮಾನ ಗಾಯನನೆ ವೆಂಕಟ 3
--------------
ಜಗನ್ನಾಥದಾಸರು
ರಾಮೇಶ್ವರನ ನೋಡೋ ಹೇ ಮಾನವ ರಾಮೇಶ್ವರನ ನೋಡೋ | ನೇಮದಿ ಕೊಂಡಾಡೊ ನೀಮಾಡಿದಂಥ ಪಾಪ | ಸ್ತೋಮಗಳೀಡ್ಯಾಡೋ ಪ ವಾರಿಧಿ ನಾರಶೂರ ರಘುವೀರನು ಸ್ಥಾಪಿಸಿದ 1 ಚಿತ್ತಶುದ್ದಿಲಿ ಬಂದ | ಭೃತ್ಯಜನರ ಬಹ್ಮ ಹತ್ಯಾದಿ ದೋಷ ಕಳೆದು | ಉತ್ತಮಗತಿ ಕೊಡುವ 2 ಶ್ರೀ ಶಾಮಸುಂದರ | ದಾಶರಧಿ ಮಹಿಮೆ ಲೇಸಾಗಿ ಸತಿಗೆ ಪೇಳ್ದ | ಭೇಶ ಶೇಖರನಾದ 3
--------------
ಶಾಮಸುಂದರ ವಿಠಲ
ರಾಯ ಕಳುಹಿದ ರಂಗ ರಾಯ ಕಳುಹಿದ ಪ್ರಿಯಭಾವೆ ರುಕ್ಮಿಣಿಯರಪ್ರೇಮಭಾಳೆ ನಿಮ್ಮ ಮ್ಯಾಲೆ ಪ. ಕೇಳೋರಾಯ ನಿಮ್ಮ ಮ್ಯಾಲಿ ಬಹಳ ಪ್ರೇಮಕೃಷ್ಣರಾಯ ಹೇಳಲ್ಪಶವೆಮುಯ್ಯ ತಂದು ಏಳು ದ್ವಾರ ದಾಟಿ ಬಂದು1 ಚಂಚಲಾಕ್ಷಿ ಅರಸಿಯರು ನಿಮಗೆ ಪಂಚಪ್ರಾಣ ಕೃಷ್ಣರಾಯ ಕೆಂಚಿ ರುಕ್ಮಿಣಿಮುಯ್ಯ ತಂದುಮುಂಚಿ ಬಾಗಿಲಮನೆಯೊಳು ಇಳಿದರು 2 ಕುಂತಿದೇವಿಯರ ಅರಮನೆಗೆ ಚಿಂತಾಮಣಿಯ ತಾನೆ ಬಂದ ಎಂಥ ಸುಕೃತರಾಯ ನಿಮ್ಮಇಂಥ ಭಾಗ್ಯ ಎಲ್ಲಿ ಕಾಣೆ 3 ಸುದ್ದಿ ಕೇಳಿ ಧರ್ಮರಾಯ ಗದ್ಗದಿ ನುಡಿಯನೆ ನುಡಿದಾನಮುದ್ದು ಮುಖವ ನೋಡಿಪಾದಕೆ ಬಿದ್ದು ಧನ್ಯರಾದೆವಮ್ಮ 4 ಅಂದ ಮಾತು ಕೇಳಿರಾಯ ನಂದ ಬಟ್ಟು ನಂದ ಭಾಷ್ಪಬಿಂದು ಉದುರಿ ಬಿಗಿದು ಕಂಠಛಂದದಿ ರೋಮಗಳು ಉಬ್ಬಿ 5 ಇಂದು ಭದ್ರೆ ದ್ರೌಪತಿಗೆ ತಂದರಮ್ಮ ರುಕ್ಮಿಣಿ ಮುಯ್ಯಆನಂದದಿಂದ ಭಾವೆ ಕೃಷ್ಣಇಂದು ನಿಮ್ಮ ಅರಮನೆಗೆ 6 ಎಷ್ಟು ಸುಕೃತರಾಯ ನಿಮ್ಮ ಧಿಟ್ಟ ರಾಮೇಶತಾನೆ ಬಂದ ಅಷ್ಟ ಸೌಭಾಗ್ಯದ ಮುಯ್ಯ ಶ್ರೇಷ್ಠ ತೋರೋದಮ್ಮ ಸಭೆಯು 7
--------------
ಗಲಗಲಿಅವ್ವನವರು
ರಾಯ ಹರಿಯ ಪ್ರಿಯ ಕೃಷ್ಣರಾಯದಾರಿ ನೋಡುವನು ತೊರೆಯದಿ ಅಪ್ಪಣೆಯ ಬೇಡಿ ಎರಗಿ ನಿಂತಳು ಪ. ಹರಿಯ ಬದಿಯಲಿ ಹೋಗಿ ನೀನು ಪರಮ ಪ್ರೇಮದಿಂದಲೈವರು ಬರುವರು ಈ ಕ್ಷಣದಲಿ ಎಂದು ಎರಗಿ ಹೇಳಮ್ಮ1 ಚಿತ್ತಜನೈಯನ ನೋಡಿ ಚಿತ್ತಹರುಷ ಬಡಿಸೆವಮ್ಮವೃತ್ತಾಂತವ ಹೋಗಿ ಹೇಳೆ ಕೀರ್ತಿವಂತಗೆ2 ಮಿತ್ರೆ ದ್ರೌಪತಿಯು ದೂತೆಗೆ ತೃಪ್ತಿಪಡಿಸಿ ಭೋಜನಾದಿಮುತ್ತು ರತ್ನದ ವಸ್ತ ವಸ್ತ್ರಗಳೆ ಕೊಟ್ಟಳು 3 ಅಂಬುಜಾಕ್ಷೆ ದ್ರೌಪತಿಯುತಾಂಬೂಲ ಅಡಿಕೆ ಕೊಟ್ಟುಸಂಭ್ರಮದಿ ಆನೆ ಅಂಬಾರಿ ಕೊಟ್ಟಳು 4 ಕುಂತಿದೇವಿ ಮೊದಲಾದವರುಕಾಂತೆಯರ ಪರಿವಾರ ಸಹಿತ ಕಂತುನೈಯನ ಕರೆಯ ಬರಲು ನಿಂತಾರಂತ್ಹೇಳೆ 5 ಪಂಚ ಪಾಂಡವರ ಮಡದಿ ಪಾಂಚಾಲಿ ದೇವಿಯುತಾನು ಕೆಂಚೆಯರಿಂದ ಕೂಡಿಮುಂಚೆ ಬಾಹೋರಂತ್ಹೇಳೆ6 ಪನ್ನಂಗ ಶಯನನ ನೋಡದೆ ಅನ್ನ ಸೊಗಸವಮ್ಮ ನಮಗೆ ಚನ್ನರಂಗಯ್ಯನ ಮುಂದೆ ಇನ್ನು ನೀ ಹೇಳೆ 7 ಮುದ್ದು ರಂಗನಮುಖವ ನೋಡದೆ ನಿದ್ರೆ ಬಾರದಮ್ಮ ನಮಗೆ ಹದ್ದು ವಾಹನನ ಮುಂದೆ ಸುದ್ದಿ ನೀ ಹೇಳೆ 8 ವೀತ ದೋಷ ರಾಮೇಶನ ಪ್ರೀತಿ ಇರಲಿ ಅಂತೆ ಹೇಳಮ್ಮಆತನ ಕಾಣದೆ ಒಂದು ಮಾತು ಸೊಗಸದು 9
--------------
ಗಲಗಲಿಅವ್ವನವರು
ರಾಯರ ನೋಡಿರೈ ಮ'ಪತಿರಾಯರ ಪಾಡಿರೈ ಪರಾಯರ ನೋಡುತ ಪಾಡುತ ಭಕುತಿಯಮಾಡಲು ಬೇಡಿದ ವರಗಳ ಕೊಡುವಾ 1ತಂದೆಯ ನೋಡಿರೈ ಮ'ಪತಿಕಂದನ ಪಾಡಿರೈಕುಂದಗಳೆಣಿಸದೆ ಬಂದು ಭಕುತಜನ ವೃಂದವ ಪೊರೆಯುವ ತಂದೆ ಮ'ಪತಿ 2ಭೋಗಿಯ ನೋಡಿರೈ ತಾಪಸಯೋಗಿಯ ಪಾಡಿರೈತ್ಯಾಗರಾಜ ಭೂಪತಿ'ಠ್ಠಲಪ್ರಿಯ ಭೋಗಿಭೂಷಣಾಂಕ ವೈಷ್ಣವಾಗ್ರಣಿ 3
--------------
ಭೂಪತಿ ವಿಠಲರು
ರಾಯರ ನೋಡಿರೈ ಶ್ರೀ ಗುರು |ರಾಯರ ಪಾಡಿರೈ |ಶ್ರೀ ಯರಸನ ಪ್ರಿಯಕಂಜಾಪ್ತಾಭಸು |ಕಾಯ ಕವಿಜನಗೇಯಾ ಪ ಶ್ರೀ ಸುಧೀಂದ್ರ ಕರಕಮಲದಲಿ ಸಂಭೂತಾ |ಬಹು ವಿಖ್ಯಾತಾ |ಶ್ರೀಶನ ಗುಣಗಳ ತುತಿಸುವ ಯತಿ ಶಿರೋಮಣಿಯೊ | ಚಿಂತಾಮಣಿಯೊ |ಈ ಸುಜನರ ಮನಸಿಗೆ ತೋರುವದಹಲ್ಲಾದಾ |ಶಿರಿ ಪ್ರಲ್ಹಾದಾ 1 ದಂಡಕಮಂಡಲ ಕಾಷಾಯವು ಸೂವಸನಾ |ವೇದ ವ್ಯಸನಾ |ಪುಂಡರೀಕ ಪದಭೃಂಗಾ ಮುನಿಕುಲೋತ್ತುಂಗಾ |ಕರುಣಾಪಾಂಗಾ |ಮಂಡಲದೊಳು ಬಹುತೋಂಡರ ಪರಿಪಾಲಕಾ |ವರ ಬಾಹ್ಲೀಕಾ 2 ತುಂಗಾ ತೀರದಿ ಮಂತ್ರಾಲಯದೊಳಗಿರುವೊ |ಕಲ್ಪ ತರುವೊ |ಗಂಗಾಜನಕ ವಿಹಂಗವಾಹನ ಇಲ್ಲಿಹನು |ನತ ಸುರದೇನು |ಮಂಗಳ ಮಹಿಮರ ದರುಶನ ಮಾತ್ರಾ ಫನಾಶಾ |ಶ್ರೀ ಗುರುವ್ಯಾಸಾ 3 ಪರಿಮಳ ವಿರಚಿಸಿ ಬುಧರಿಗೆ ಬೀರಿದದೀಶಾ |ಗುಣಗಂಭೀರಾ |ಪರಿಪರಿ ಚರಿತೆಯ ತೋರ್ದಭೂದೇವರ ದೇವಾ |ದೇವ ಸ್ವಭಾವಾ |ನರ ಇವರನು ಕ್ಷಣಬಿಡದಲೆ ಭಜಿಸಲು ಸುಖವೊ |ಅಹಿಕಾಮುಕವೊ (ಅಘ ಪರಿಹರವೊ) 4 ದುಷ್ಟ ಮತವ ಖಂಡಿಸಿ ಹರಿಪರನೆಂದೊರೆದಾ |ಭೀಷ್ಟಿಯಗರದಾ |ಸೃಷ್ಠಿಯೊಳಗೆ ಶ್ರೀಶ ಪ್ರಾಣೇಶ ವಿಠ್ಠಲನದಾಸಾಮುನಿಕುಲೋತ್ತಂಸಾ |ಎಷ್ಟು ಪೊಗಳಲಾಶಕ್ಯವು ಸದ್ಗುಣ ಸಾಂದ್ರಾ |ಶ್ರೀ ರಾಘವೇಂದ್ರಾ 5
--------------
ಶ್ರೀಶಪ್ರಾಣೇಶವಿಠಲರು
ರುಕುಮಾಯಿ ಮನೋಹರಾ ಪ ಮೃಕಂಡು ಸುತ ಪ್ರಿಯಾಖಂಡ ತೇಜ ಅ.ಪ ಇಷ್ಟಭಕುತ ಪ್ರೀತಿಯಿಂದ ನಿನಗೆ ಕೊಟ್ಟ ಇಟ್ಟಿಗೆ ಮೇಲೆ ನೆಲಸಿರುವ ದೇವ 1 ಮರೆತಾದರು ಸಂಸ್ಮರಿಸುವಜನರಘ ಪರಿಹರಿಸುವೆನೆಂಬ ಬಿರುದು ಕಟ್ಟ್ಟಿಹ 2 ದೇವ ಗುರುರಾಮ ವಿಠಲನೆಲಸಿದೆ 3
--------------
ಗುರುರಾಮವಿಠಲ
ರುಕ್ಮಿಣಿಯ ದಿವ್ಯತರ ರೂಪವನು ವರ್ಣಿಸಲು ರುಕ್ಮಗರ್ಭಗೆ ವಶವೆ ರೂಢಿಯೊಳಗೆ ಪ ಮಿಕ್ಕ ಮನುಜರ ಮಾತು ಲೆಕ್ಕವೇತರದಯ್ಯಾ ಪಕ್ಷಿವಾಹನ ಕೇಳು ಪರಮಪುರುಷ ಅ.ಪ ಆ ದೇವಿಯಂಘ್ರಿಗಳ ಕೋಮಲಕೆ ಕುರುಹಾಗಿ ಭೂದೇವಿ ತರುಗಳಲಿ ತಳಿರ ತಾಳಿಹಳೊ 1 ಪಾದ ನಖಕಾಂತಿ ತಾ ಪ್ರಕಾಶಿಪ ತೆರೆಯು ಈ ಪುತ್ಥಳಿಯ ಗಮನವಾದರ್ಶ ಹಂಸಕೆ 2 ಬಡನಡುವ ತಾ ನೋಡಿ ಅಡವಿ ಸೇರಿತು ಸಿಂಹ ಚೆಲುವ ನೇತ್ರವ ನೋಡಿ ಚಪಲ ಹೊಂದಿತು ಹರಿಣ3 ನೀಲವೇಣಿಯ ನೋಡಿ ನಾಗಗಳು ನಾಚಿದವುಶ್ರೀ ಲಕುಮಿಯಾ ಕನ್ಯೆ ಶ್ರೀ ಕರಿಗಿರೀಶನರಾಣಿ 4
--------------
ವರಾವಾಣಿರಾಮರಾಯದಾಸರು
ರುಕ್ಮಿಣೀಶ ವಿಠಲ | ಕಾಪಾಡೊ ಇವನಾ ಪ ವಿಖನ ಸಾಂಡದ ದೊರೆಯೆ | ಅಖಳಂಕ ಮಹಿಮಾ ಅ.ಪ. ಸುಪಥದಲಿ ನಡೆವಂತ | ನಿಪುಣತರ ನಿವನೀಗೆಉಪದೇಶವಿತ್ತಿಹೆನೊ | ಅಪವರ್ಗದಾತಾ |ಕೃಪಣ ವತ್ಸಲ ನಿನ್ನ | ಕೃಪೆ ದೃಷ್ಟಿಯಲಿ ನೋಡಿಅಪೇಕ್ಷಿತವನಿತ್ತು | ನೀ ಪೋಷಿಸಿವನಾ 1 ಜ್ಞಾನವಿಜ್ಞಾನದಲಿ | ನೀನಿರುವ ತತ್ವವನುನೀನಾಗಿ ತಿಳಿಸುತ್ತ | ಕಾಪಾಡೊ ಹರಿಯೇ |ಶ್ರೀನಿವಾಸನೆ ದಯಾ | ಪೂರ್ಣ ನೀನಾಗುತ್ತಜ್ಞಾನಭಕ್ತಿಯನಿತ್ತು | ಕಾಪಾಡೊ ಹರಿಯೆ 2 ಎಲ್ಲೆಲ್ಲು ನೀನಿರುವೆ | ಸೊಲ್ಲನ್ನು ಅನುಭವಕೆಉಲ್ಲಾಸದಲಿ ಇತ್ತು | ಬಿಲ್ಲಾಳು ಎನಿಸೋಬಲ್ಲಿದರ ಕೂಟದಲಿ | ಬಿಲ್ಲಿ ನಂತರಿಸುತ್ತಮಲ್ಲಮರ್ದನಕೃಷ್ಣ | ಕಾಪಾಡೊ ಇವನ 3 ಸತಿಸುತರು ಹಿತರಲ್ಲಿ | ವ್ಯಾಪ್ತ ನೀನೆಂದೆಂಬಮತಿಯನೇ ಕರುಣಿಸುತ | ಅತಿಶಯವ ತೋರೀಮತಿಮತಾಂವರರಂಘ್ರಿ | ರತಿಯನ್ನೆ ಕರುಣಿಸುತಮತಿವಂತ ನೆನಸಿವನ | ಮಾರುತನ ಮತದೀ 4 ದೇವತವ ಮಹಿಮೆಗಳು | ಭಾವದಲಿ ಪೊಳೆಯಲ್ಕೆಕೋವಿದರ ಸಂಗವನು | ನೀ ವೊಲಿದು ಈಯೋ |ನೀ ವೊಲಿಯದಿನ್ನಿಲ್ಲ | ಗೋವುಗಳ ಪರಿಪಾಲದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ರುದ್ರ (ಶಿವ) ಸ್ತುತಿ ಲೋಕರಕ್ಷಕನೆಂಬೊ ಹರ ಗಂಗಾಧರಗೆ ಪ ನೀಕಮಲಮುಖಿ ಅಖುವೈರಿ ಅ- ನೇಕ ಮೈಯೊಳು ಸುತ್ತಿಕೊಂಡು ವಿ- ವೇಕವಿಲ್ಲದೆ ವಿಷವನುಂಡ ಪಿ- ನಾಕಧರನಿಗೆ ಸೋಲುವುದೆ ಅ.ಪ ಶಿರದೊಳು ಶಶಿಯ ಕೆಂಜಡೆಯಿಪ್ಪಭೋಗಿ ಸ್ಮರನದಹಿಸಿ ಭಸ್ಮ ಹಣೆಗಿಟ್ಟಯೋಗಿ ಇರುವೊಡೆ ಸ್ಥಳವಿಲ್ಲ ದಂತೆ ತಾ ಪೋಗಿ ಬೆರೆವ ಸ್ಮಶಾನ ಮಂದಿರ ಸುಖವಾಗಿ ಬರಿದೆ ಒಲಿವುದೆ ಗರುವೆ ಪಾರ್ವತಿ1 ಜಾಹ್ನವಿ ಶಶಿಯನ್ನೆ ಮಾಡಿ ರುಂಡಮಾಲೆಗಳ ಕೊರಲೊಳಗಿಟ್ಟು ಆಡಿ ಕುಂಡಲಗಳ ಧರಿಸಿರುವನ ನೋಡಿ ಖಂಡಪರಶುವೆಂದು ಅವನ ಕೊಂಡಾಡಿ ದಿಂಡೆಯಾಹ ಪ್ರಾಯದವಳು ನೀ ಕಂಡು ನೀನವ ಗಂಡನೆಂದು ಪ್ರಾ- ಚಂಡಗೊಲಿದಿಹೆ ಸರಿಯೆ ಪಾರ್ವತಿ 2 ವಿರಚಿಸುವ ಲೀಲಾವಿನೋದನ ವರದ ಶ್ರೀ ಗುರುರಾಮವಿಠಲನ ಪರಮ ಪ್ರಿಯ ಪರಮೇಶ ಶಿವಗೆ 3
--------------
ಗುರುರಾಮವಿಠಲ
ರುದ್ರ ದೇವರು ಕಂಟಕವ ಪರಿಹರಿಸೊ ಶ್ರೀ ಕಂಠಮೂರುತಿಯೇ ಪ ಬಂಟನೆಂದೆನಿಸೆನ್ನ ವೈಕುಂಠಮೂರುತಿಗೇ ಅ.ಪ ತಂಟೆಸಂಸಾರದ ಲಂಪಟದಲೆನ್ನ ಮನ ಮರ್ಕಟದÀ ತೆರದಿ ಪರ್ಯಟನ ಮಾಡೆ ಅಂಟಿಕೊಂಡಿಹ ಈ ಭವಾಟವಿಯ ದಾಂಟಿಸುವೆ ನೆಂಟ ನೀನಹುದಯ್ಯ ಶಿತಿಕಂಠದೇವಾ 1 ನಿರ್ಜರೇಶನ ಬಿಂಬ ಮೂರ್ಜಗದೊಳಗೆಲ್ಲ ಧೂರ್ಜಟಯೆ ನೀನೆ ಭವವರ್ಜಿತನ ಮಾಡೋ ದುರ್ಜಯವು ಎನ್ನ ಮನ ಆರ್ಜಿಸದೆ ಹರಿಭಕುತಿ ಪತಿ ಜನಾರ್ದನನೊಳ್ ಮನ ನಿಲ್ಲಿಸೋ2 ತ್ರ್ಯಂಬಕನೆ ಎನ್ನ ಮನದಂಬರದೋಳ್ ಹರಿಪಾದ ಅಂಬುರುಹ ತೋರಯ್ಯ ಶಂಭೋ ಮಹಾದೇವಾ ಕುಂಭಿಣಿಯೊಳು ಒಂದೆ ಇಂಬುತೋರದು ಎನಗೆ ವೈರಿ ಭವಭಯ ಹಾರೀ 3 ವಾಮದೇವನೆ ಕಾಯೊ ತಾಮಸಮತಿ ಹರಿಸಿ ಶ್ರೀ ಮನೋಹರನಲ್ಲಿ ಸನ್ಮನವ ನೀಡೋ ಸೋಮಶೇಖರ ಸುರಸ್ತೋಮದಲಿ ನಿನ್ನಂಥ ಪ್ರೇಮಿಗಳ ನಾ ಕಾಣೆ ಉಮೆಯರಸ ಸಲಹಯ್ಯ 4 ಶಿಕ್ಷಕನು ನೀ ಜ್ಞಾನಚಕ್ಷುವ ನೀಡು ವಿರೂ ಪಾಕ್ಷಮೂರುತಿ ಶ್ರೀ ವೇಂಕಟೇಶನ ಭಕ್ತ ಈ ಕ್ಷಿತಿಯೊಳ್ ಉರಗಾದ್ರಿವಾಸವಿಠಲನ ಪ್ರ ತ್ಯಕ್ಷದಲಿ ನೋಳ್ಪ ಶ್ರೀ ತ್ರ್ಯಕ್ಷಮೂರುತಿಯೇ 5
--------------
ಉರಗಾದ್ರಿವಾಸವಿಠಲದಾಸರು
ರುದ್ರಕುಮಾರನ ಚರಣಕ್ವಂದನೆ ಮಾಡಿ ವಿದ್ಯಾಭಿಮಾನಿ ವಾಣಿಯ ಸು - ಪದ್ಮ ಪಾದಗಳಿಗೆ ಎರಗಿ ನಾ ಪೇಳುವೆ ಶುದ್ಧವಾಗಿ ಕೊಡು ಮತಿಯ 1 ಶ್ರಾವಣಮಾಸ ಶುಕ್ಕುರುವಾರ ಶುಭಮೂರ್ತೆ (ಮುಹೂರ್ತೆ?) ಕಾಲದಿ ಕಮಲಾಕ್ಷಿಯನು ಆಲಯದೊಳಗಿಟ್ಟಾದರದಿಂದ ಪೂಜಿಸೆ ಬೇಡಿದಭೀಷ್ಟ ನೀಡುವಳು 2 ಇರುತಿರಲೊಂದು ಪಟ್ಟಣದಲ್ಲಿ ರಾಜನು ತನಯರಿಲ್ಲದ ಕಾರಣವು ವಿವಹದುತ್ಸವಕೆಂದು ತೆರಳೋ ಪತಿಯ ಕಂಡು ತೆಗೆದಿಟ್ಟಳಾತನಾಯುಧವ 3 ಪಟ್ಟದ ಕತ್ತಿಯ ಬಿಟ್ಟು ಬಂದೆನೆಂದು ಅಟ್ಟಿಹ ತನ್ನ ದೂತರನು ನೆಟ್ಟನೆರಡು ಕಾಲು ಚಾಚಿ ಕುಳ್ಳಿರಲಾಗ ತಟ್ಟನೆ ದಾಟಿ ನಡೆದನು 4 ಮೂರು ತಿಂಗಳು ಗರ್ಭಸಾಕ್ಯಾ (ವಾಸಕ್ಕಾ?)ಗಿ ಬಂದಿತು ನೀನೀಗ ದಾಟಿ ಪೋಗುವರೆ ಕೇಳಿ ಸಂಭ್ರಮದಿಂದ ಹೇಳೆ ರಾಜಗೆ ಬಂದು ತಾಳಿದ ಪರಮ ಹರುಷವನು 5 ಸದ್ದು ಮಾಡದೆ ಸೂಲಗಿತ್ತಿ ಕರೆಸಿ ತಾ- ನಿದ್ದ ವಾರ್ತೆಗಳ ಹೇಳಿದಳು ಮುತ್ತಿಲು ತುಂಬ್ಹೊನ್ನು ಕೊಡುವೆ 6 ಹುಡುಕುತ ಬಂದಳು ಕಡೆಯ ಬಜಾರಕ್ಕೆ ಬಡವ ಬ್ರಾಹ್ಮಣನ ಮಂದಿರದಿ ಮಡದಿಗೆ ಮೂರು ತಿಂಗಳು ಗರ್ಭವಾಗಿದೆ ಕÀಡೆಹಾಯ್ಸಲೆನ್ನ ಕರೆಸೆಂದ್ಲು 7 ಮೂರು ತಿಂಗಳ ರಾಜನರಸಿಗೆ ಮೊಗ್ಗೆಯು ಏಳು ತಿಂಗಳು ಹೂವ ಮುಡಿಸಿ ಎಂಟು ತಿಂಗಳಿಗೆ ಶ್ರೀಮಂತದುತ್ಸವ ಮಾಡಿ ಬಂತಾಗ ನವಮಾಸಗಳು 8 ವಿಪ್ರನ ಮಡದಿಗೆ ಒತ್ತಿ ಬಂದವು ಬ್ಯಾನೆ ಕಟ್ಟಿ ಕಣ್ಣುಗಳ ನಿಚ್ಚಣಿಕೆ ಹತ್ತಿ ಇಳಿದು ಹಡೆದಳ ಗಂಡುಕುಮಾರನ ಎತ್ತಿಕೊಂಡೊಯ್ದಳಾಕ್ಷಣವೆ 9 ಕಲ್ಲು ಗುಂಡನೆ ಹಡೆದಿಯೆ ನೀನೆಂಬಂಥ ಸೊಲ್ಲು ಕೇಳುತಲೆ ತಲ್ಲಣಿಸಿ ಎಲ್ಲಿದ್ದರೆನ್ನ ಕುಮಾರನು ಸುಖಬಾಳಲೆಂ- ದಲ್ಲಿ ನೇಮವ ನಡೆಸಿದಳು 10 ಜಾತಕ ಬರೆಸಿ ಸಕ್ಕರೆ ಸಗಟದಿಂದ್ಹಂಚಿ ದಕ್ಷಿಣೆ ತಾಂಬೂಲ ಸಹಿತ ಬ್ರಾಂಬರಿಗೆಲ್ಲ ಇಟ್ಟು ಭೋಜನವ ಮಾಡಿಸಿದ 11 ನಾಮಕರಣ ಜಾವಳ ಜುಟ್ಟು ಉಪÀನಯನ ಪ್ರೇಮದಿಂದ್ವಿದ್ಯವ ಕಲಿಸಿ ಸೋಮನಂದದಿ ಹೊರಗ್ಹೊರಟು ತ- ಮ್ಮಮ್ಮನ ನೋಡಿ ಮೋಹಿಸಿದÀನಾಕ್ಷಣದಿ 12 ಕತ್ತಲೊಳಗೆ ಬರುತಿರಲು ಬಾಗಿಲ ಮುಂದೆ ಕಟ್ಟಿದ ಗೋವು ಕಾಣದಲೆ ವತ್ಸದ ಕಾಲು ತುಳಿಯಲಾಗ ಅದು ಬಾಯಿ ಬಿಟ್ಟೊದರಿತು ಭಯದಿಂದ 13 ಅಮ್ಮ ನೀ ಬಾರೆ ತಮ್ಮಮ್ಮನರಿಯದವ ನಮ್ಮನು ಬಲ್ಲನೆ ಒಮ್ಮ್ಯಲ್ಲದೆರಡುಬಾರ್ಯಾಲಿಸ್ಯದರ ಮಾತು ತಮ್ಮಿ ್ಹರಿಯರನು ಕೇಳಿದನು 14 ಮಂದಾಕಿನಿಯ ಸ್ನಾನವ ಮಾಡಿ ಬಂದರೆ ಸಂದೇಹ ಪರಿಹಾರವಾಗುವುದು ಹಾ- ಗೆಂದು ಹೇಳಿದ ಹಿರಿಯರ ವಾಕ್ಯವ ಕೇಳಿ ಗಂಗಾಯಾತ್ರೆಗೆ ತೆರಳಿದನು 15 ನಡೆದು ಬಂದನು ನಡುಮಾರ್ಗದಿ ಪಟ್ಟಣ ಹಡೆದ ಮನೆಯ ಬಾಗಿಲಲ್ಲಿ ಕೊಡಬೇಕು ನಮಗಿಷ್ಟು ಸ್ಥಳಗಳೆಂದೆನುತಲಿ ನುಡಿದು ಪವಡಿಸಿದ ತಾನಲ್ಲಿ 16 ಹೊರಗಿಂದ ಶೆಟವಿ ಬಂದಳು ಮಹಾಲಕ್ಷುಮಿ ಒಳಗಿಂದ ಬಂದಳು ಎನ್ನ ವರಪುತ್ರ ಇವನ ದಾಟಲು ನಿನ್ನ ಶಿರವು ಸಿಡಿದು ಸಾ(ಸಹ?)ಸ್ರೊ ್ಹೀಳಾಗೋದೆನಲು17 ಅದು ಕೇಳಿ ಶೆಟವಿ ತಾ ತಿರುಗಿ ಪೋಗುತಲಿರೆ ಬದಿಯಲ್ಲಿ ಬದುಕಿದ್ದ ಶಿಶುವು ಇದು ನಿನ್ನ ಪುಣ್ಯದಿಂದುಳಿದಿತೆಂದೆನುತಿರೆ ಅಧಿಕ ಸಂತೋಷವಾಗಿ ಹೊರಟು 18 ಭಾಗೀರಥಿಯ ಸ್ನಾನವಮಾಡಿ ತಾನು ಪ್ರ- ಯಾಗಕೆ ನಡೆತರಲು ಬ್ಯಾಗ ಮಾಡಿದ ದಾನಧರ್ಮಕಾರ್ಯಗಳ ತಾ- ನಾಗ ಕಂಡನು ಚತುರ್ಹಸ್ತ 19 ನಾಲ್ಕು ಹಸ್ತಗಳ ಕಂಡಕಾರಣೇನೆಂದು ವ್ಯಾ- ಕುಲದಿಂದ ಕೇಳಿದನು ಸಾಕಿದವರು ಹಡೆದವರುಂಟು ನಿನಗೆಂದ್ವಿ- ವೇಕಬುದ್ಧಿ ಅವರು ಹೇಳಿದರು 20 ಗೊತ್ತಿಲೆ ಬಂದನು ಪಟ್ಟಣದೊಳಗೊಂಡು ಹೆತ್ತರಂದಿನದ (?) ಮಂದಿರದಿ ಹೊಸ್ತಿಲೊಳಗೆ ಅಡ್ಡಮಲಗಿದ್ದ ಕಾಲಕ್ಕೆ ಮತ್ತಾಗ ಬಂದಳು ಶೆಟವಿ 21 ಚೊಚ್ಚಿಲ ಮಗನ ದಾಟಲು ನಿನ್ನ ಶಿರವು ಬಿಚ್ಚಿ ಸಾಸ್ರೊ ್ಹೀಳಾಗೋದೆನಲು ಲಕ್ಷ್ಮಿ ಮಾತಿಗೆ ತಿರುಗಿದಳೆನ್ನ ತುತ್ತಿಗೆ ಮಿತ್ರ್ಯಾದ ಪಾಪಿ ಎಂದೆನುತ 22 ಸತ್ಯವಂತನೆ ನಿನ್ನ ಪುಣ್ಯದಿಂದಿಬ್ಬರು ಪುತ್ರರು ಉಳುದÀರಂತಿಹರು
--------------
ಹರಪನಹಳ್ಳಿಭೀಮವ್ವ
ರುದ್ರದೇವರ ಪ್ರಾರ್ಥನೆ ಫಾಲಲೋಚನ ಎನ್ನ ಪಾಲಿಸು ಬೇಗ ನೀಲಕಂಧರ ಕರುಣಾಳು ಕೇಳೀಗ ಪ. ಬಂದ ಮೋಕ್ಷಕೆ ಹೇತುವೆಂದು ಪುಟ್ಟಿದ ಮನ ಮಂದಿರ ನೀ ಎನ್ನ ಕುಂದನೆಣಿಸದಿರು 1 ತುಂಬಿತ್ತೆನ್ನುವ ಶಶಿಬಿಂದಾ ಕೂಡಿಟ್ಟಿದೀ- ಡಂಬ ನೀನೆಂತು ತ್ರಯಂಬಕನಾಗುವಿ 2 ರಾಮಚಂದ್ರನ ದಿವ್ಯ ನಾಮಾಮೃತವ ನಿತ್ಯ ನೇಮದಿ ಪನ್ನಂಗ ಲಲಾಮನ ಸೇವಿಸುವಿ 3 ಪಾವನಾತ್ಮಕ ಲಕ್ಷ್ಮಿಧಾಮನ ಸಹಸ್ರ ಸುತ್ರಾಮ ತಾನರಿಯನು 4 ವೈಷ್ಣವಾಗ್ರಣಿ ನೀನು ಕೃಷ್ಣನ ಪ್ರೀತಿಗಾಗಿ ದುಷ್ಟರಿಗೊರವಿತ್ತು ಭ್ರಷ್ಟಗೊಳಿಸುವಿ 5 ಜೇಡಿ ಮೈಯಲಿ ಧರಿಸಿ ಮೂಢರ ಮೋಹಿಸುವಿ ನೋಡುವಿ ಮನದಿ ಗರೂಡಗಮನನ 6 ಪಾದ ಪಂಕಜ ಭಜಿಸುತಕಿಂಕರವರದನಾದ ಶಂಕರರಾಯ 7
--------------
ತುಪಾಕಿ ವೆಂಕಟರಮಣಾಚಾರ್ಯ
ರುದ್ರದೇವರ ಸ್ತುತಿ ಪರಾಕು ಸಜ್ಜನಪ್ರೇಮಿಪ. ಕರುಣಾಕರ ಕೋಟಿದಿವಾಕರ ಪೂರ್ಣ ಸುಧಾ- ಕರ ಮಕುಟಲಲಾಮಅ.ಪ. ಭೋಗೀಂದ್ರ ಫಣಾಮಣಿಮಂಡನ ಸ- ದ್ಯೋಗೀಂದ್ರ ಮನೋವಿಶ್ರಾಮಿ ಭಾಗೀರಥಿ ಸುತರಂಗೊತ್ತುಂಗ ಮಹಾ ಸಾಗರ ತೇ ನೌಮಿ1 ಕೇವಲ ಪಾಪಿ ಸದಾವ್ರತಹೀನನ ಕಾವುದು ಗೋಪತಿಗಾಮಿ ನೀನೊಲಿದರೆ ಮತ್ತಾವುದು ಭಯ ಮಹಾ- ದೇವ ವಶೀಕೃತಕಾಮಿ2 ಲಕ್ಷ್ಮೀನಾರಾಯಣದಾಸಾರ್ಯ ಮ- ಹೋಕ್ಷಧ್ವಜ ಸುರಸುಕ್ಷೇಮಿ ದಕ್ಷಾಧ್ವರಹರ ವರಪರಮೇಶ ಮು- ಮುಕ್ಷುಜನಾಂತರ್ಯಾಮಿ3
--------------
ತುಪಾಕಿ ವೆಂಕಟರಮಣಾಚಾರ್ಯ