ಒಟ್ಟು 19658 ಕಡೆಗಳಲ್ಲಿ , 137 ದಾಸರು , 8696 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನುಪೇಕ್ಷೆಯ ಮಾಡೆ ಬೇರೆ ಗತಿಯಾರೆನಗೆನಿಗಮಗೋಚರ ಮುಕುಂದ ಪ ಗಾನರಸಲೋಲ ಆಗಮಶೀಲ ಭಕ್ತಪರಿಪಾಲಸನ್ನುತ ಗೋಪಾಲ ಬಾಲ ಅ ಸಿರಿನಲ್ಲ 1 ದಿವಿಜ ಮುನಿವಂದ್ಯ ಅಭಿಮಾನಿ ಎನ್ನನೂ ಸಲಹದೆ - ಬರಿದೆ 2 ಈಶಣತ್ರಯದ ಬಯಲಾಸೆಯಲಿ ಭ್ರಮೆಗೊಂಡುಬೇಸರದಿ ಮನದಿ ನೊಂದುಹೇಸಿಗೆಯ ಸಂಸಾರ ಮಾಯಕ್ಕೆ ಸಿಲುಕಿ ನಾಘಾಸಿ ಪಡಲಾರೆನಿಂದುವಾಸುದೇವನೆ ನಿನ್ನ ಪೊಂದಿ ಬದುಕುವೆನೆಂದುಆಸೆ ಪಡುತಿಹೆನು ಇಂದುದಾಸನೆಂದೆನಿಸಿ ಡಂಗುರ ಹೊಯ್ಸಿ ಬಡದಾದಿಕೇಶವನೆ ಕರುಣಿಸಯ್ಯಾ ಬಂದು3
--------------
ಕನಕದಾಸ
ನೀನುಳಿಯೆ ರಕ್ಷಕರ ಕಾಣೆನೀ ಜಗದೊಳಗೆ ಶ್ರೀನಿವಾಸ ಜಗನ್ನಿವಾಸ ಪ ದೀನರಕ್ಷಕ ನಿಖಿಲ ಮಾನವರ ಮಾನಾಭಿ ಮಾನದೊಡೆಯನು ನೀನೆಯಲ್ಲದಿಲ್ಲಾ ಅ.ಪ ನಕ್ರಮುಖದಲ್ಲಿ ಸಿಕ್ಕಿ ದುಃಖಿಸುವ ಕರಿರಾಜ ಚಕ್ರವರ್ತಿಯು ಶರಣುಹೊಕ್ಕೆನೆನಲು ಚಕ್ರವನು ಪಿಡಿದು ನೀನಕ್ಕರೆಯೊಳೈತಂದು ನಕ್ರವದನವ ಸೀಳಿ ರಕ್ಷಿಸಿದೆ ಗಜವಾ ದೇವಾ 1 ಹಿಂದೆ ನಾನಾ ನಗರಿಯಿಂದ ಬಹದಾರಿಯೊಳು ಸಂದುಗಳೀಚಲು ಭಂಡಿ ಸಂಜೆಯೊಳಗೆ ಮುಂದಾಗ ಜೊತೆಯೊಳಗೆ ಬಂಧುಜನದಲ್ಲಿ ನೀ ಬಂದು ಬೆಳಕನು ತೋರಿ ಮುಂದೆಗೂಡಿದೆ ಕೃಷ್ಣಾ 2 ಇಂದು ನಿಜಸತಿಯು ನೊಂದಳುಬ್ಬಸರೋಗ ದಿಂದ ಗಾಳಿಯದೀಪದಂದಮಾಗಿ ನಂದಿ ಪೋಗದ ಮುನ್ನ ಬಂದು ನೀಮರೆಯಾಗು ಎಂದು ಮೊರೆಯಿಡಲಾಗ ಬಂದು ಸಲಹಿದೆ ತಂದೆ 3 ಗುರುಸುತನ ಸಂಯಮದೀ ಪುರದಿಂದ ತಂದಿತ್ತೆ ತುರುಗಾಯ್ವರಸುಗಳನು ಮರಳಿ ಪಡೆದೆ ನರಪೌತ್ರನ ಬಾಣದುರಿಯಿಂದ ರಕ್ಷಿಸಿದೆ ಸರಿಯಾರು ನಿನಗೆ ಸುರನರಭುಜಂಗರಲ್ಲಿ 4 ತರಳಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಕರು ವರವಿಭೀಷಣ ತಾಪಸರನು ಪೊರೆದೆ ಶರಣರನು ಪಾಲಿಸುವ ಬಿರುದು ಧರಿಸಿಹ ವ್ಯಾಘ್ರ ಗಿರಿಯೊಳಗೆ ನೆಲೆಸಿರುವ ವರದವಿಠಲರಾಯ 5
--------------
ವೆಂಕಟವರದಾರ್ಯರು
ನೀನೆ ಅನಾಥ ರಕ್ಷಕ ಪ ನಿಖಿಲ ದ್ವೈತ್ಯ ಶಿಕ್ಷಕ ಅ.ಪ ವಿಧಿ ಸೃಷ್ಟಿಯೊಳಿಲ್ಲದ ರೂಪದಿ ದಿತಿ ಸುತನುದರ ಬಗೆದು ಭೇದಿಸಸುರನ ಮೋದದಲಿ ಕರುಳನು ಧರಿಸಿದೆ 1 ಶರಣಸುರರ್ತನಗೆನ್ನುತ ಹರಶರಭಾಕೃತಿಯಂಬತಿ ಘೋರ ಯುದ್ಧದಿ ಧಾರುಣಿಯೊಳಗೆ ಕೆಡಹಿ ತುಳಿದೆ 2 ಅಷ್ಟಮುಖಭೇರುಂಡನೆಂದು ಸೃಷ್ಟಿಯೊಳ್ ಪ್ರಸಿದ್ಧವಾಯ್ತು ದಿಟ್ಟಗುರುರಾಮ ವಿಠ್ಠಲ ಪ್ರಹ್ಲಾದವರದ 3
--------------
ಗುರುರಾಮವಿಠಲ
ನೀನೆ ಎನಗಾಗಿ ಬಂದು ನೀನೆ ನೀನಾಗೆನಗಿಂದು ಧ್ರುವ ಅಪ್ಪನಾಗೆನಗೆ ನೀ ಬಂದು ತಪ್ಪು ಕ್ಷಮೆ ಮಾಡಿದಿಂದು ಒಪ್ಪಿಸಿಕೊಳಲೆನ್ನ ಬಂದು ಅಪ್ಪಳಿಸಿದೆ(?) ಜನ್ಮವಿಂದು 1 ಅಮ್ಮನಾಗೆನಗೆ ನೀ ಬಂದು ರಂಬಿಸಿದೆ ಎನಗಿಂದು ಸಮ್ಯಜ್ಞಾನದಲಿ ನೀ ಬಂದು ಸುಮ್ಮನÉದೋರಿದೆನಗಿಂದು 2 ಅಣ್ಣನಾಗೆನಗೆ ನೀ ಬಂದು ಕಣ್ಣಿನೊಳಗೆ ಸುಳಿದಿಂದು ಸುಗುಣ ಸಹಕಾರದಲಿ ಬಂದು ಪುಣ್ಯಚರಣದೋರಿದಿಂದು 3 ಅಕ್ಕನಾಗೆನಗೆ ನೀ ಬಂದು ಅಕ್ಕಿದೆ ಆತ್ಮದಲಿಂದು ಸಾಕಿ ಸಲಹಲೆನ್ನ ಬಂದು ಸಿಕ್ಕಿದಕ್ಕಿದೆ ಎನಗಿಂದು 4 ತಮ್ಮನಾಗೆನಗೆ ನೀ ಬಂದು ತಮ್ಮೊಳರ್ಪಿಸಿಕೊಂಡೆ ಇಂದು ತಮ್ಮ ನಿಜವಾದಾರ(?) ಬಂದು ತನುವಿನೊಳಗೆ ಸುಳಿದಿಂದು 5 ತಂಗಿಯಾಗೆನಗೆ ನೀ ಬಂದು ಹಿಂಗಿಸಿದೆ ಭವವಿಂದು ಸಂಗ ಸುಖವದೋರ ಬಂದು ಅಂತರಂಗದಿ ಸುಳಿದಿಂದು 6 ಈಸು ಪರಿಯಲೆನಗಿಂದು ಆಶೆಪೂರಿಸಿದೆನಗಿಂದು ಭಾಸ್ಕರ ಗುರುವಾಗಿ ಬಂದು ಭಾಸಿ ಪಾಲಿಸಿದೆನಗಿಂದು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೆ ಕರುಣಿ ದೀನಪಾಲ ದಾನವಾಂತಕನಾಥಬಂಧು ಪ ಕಾಸಾರಕಿಳಿದು ಕರಿಯ ಕಾಯ್ದಿ ಹೇಸದೆ ತರುಣಿ ಮೊರೆಯ ಕೇಳ್ದಿ ಬೇಸರಿಲ್ಲದೆ ದಾಸಜನರ ಆಸೆ ಪೂರೈಸಿ ಪೊರೆದಿ ಪ್ರಭು 1 ಬಾಲಗೈದ ತಪಕೆ ಒಲಿದಿ ಮೇಲುಪದವಿ ಕರುಣಿಸಿದಿ ಕಾಲಗೆ ಕಾಲನಾಗಿ ಮೆರೆವ ಖೂಳರಕ್ಕಸನುದರ ಸೀಳ್ದಿ 2 ನಿಗಮ ತಂದಿ ಭಾರಬೆನ್ನಲಿ ಪೊತ್ತು ನಿಂದಿ ಹಾರೈಸಿ ಕರೆವ ಭಕುತ ಜನಕಾ ಧಾರ ಮಮಪ್ರಾಣೇಶ ಶ್ರೀರಾಮ 3
--------------
ರಾಮದಾಸರು
ನೀನೆ ಕಾಮಿಸಿ ನಿರುತವು ಕೆಡುವೆ ಪ ಸ್ವರೂಪವರಿಯದೆ ನೀ ಕರೆಕರೆ ಪಡುವೆ 1 ಭ್ರಾಂತಿಯಪಡುತಲಿ ಬಾಯಿ ಬಾಯಿ ಬಿಡುವೆ 2 ನಾಯಂದದಿ ಪರಸ್ತ್ರೀಯರ ಬಯಸುತ ಹೇಯನೆನಿಸಿಕೊಂಡು ನೊಯ್ಯುವೆಯಲ್ಲದೆ 3 ಮಲಮೂತ್ರದಿ ನೀ ಮಲಗಿರಲಿಲ್ಲವೇ ಮರೆತು ಯೌವ್ವನ ಗರ್ವದಲಿ ತಲೆ ತೂಗುತ4 ಪರಿಪರಿವಿಧದಲಿ ಭಕ್ತರ ಪಾಲಿಪ ಗುರುರಾಮವಿಠಲನ ಚರಣವ ನಂಬದೆ 5
--------------
ಗುರುರಾಮವಿಠಲ
ನೀನೆ ಕೃಪಾಳು ಶ್ರೀ ಚನ್ನಕೇಶವನೇ ಜ್ಞಾನಿಗಳನ್ನು ಕಾವ ಸನಕವಂದಿತನೆ ಪ ಶರಣರ ಪೊರೆಯುವ ಪ್ರಣವ ಸ್ವರೂಪನೆ ಸ್ಮರಿಸುವ ದಾಸರ ಮರೆಯ ಬೇಡಯ್ಯ ಅ.ಪ. ದೀನರ ಸಲಹುವ ಭಕ್ರವತ್ಸಲನೇ ಮಾನಿನಿ ದ್ರೌಪದಿ ಮಾನ ಕಾಯ್ದವನೇ ಮೌನದಿಂದಲಿ ನಿಂನ ಧ್ಯಾನ ತತ್ವರನಾದೇ ಪನ್ನಗಶಯನನೇ ಸಲಹೊ ಕರುಣದಲೀ1 ಸನ್ನುತ ಹರಿ ನಿಂನ ಕೀರ್ತನೆ ಪಾಡುವೆ ಜಾನ್ಹಕಿ ರಮಣ ಶ್ರೀ ಕಾಕುತ್ಸ್ಥರಾಮಾ ಹೀನನ ಮಾತನ್ನು ನಲಿಯುತ್ತ ಕೇಳಿ ನೀ ಸಾನುರಾಗದಿ ಕಾಯಾ ಧೇನು ಪಾಲಕನೇ2 ಪಂಕಜನೇತ್ರ ಶ್ರೀ ಪರಮ ಪಾವನನೇ ಲಂಕೇಶನಿಗೆ ಯಮನಾದ ಶ್ರೀಧರನೇ ಶಂಕೆಯಿಲ್ಲದೆ ಕಾಯೊ ದೂರ್ವಾಪುರೇಶನೆ ಅಮಿತ ಸದ್ಗುಣಿಯೇ 3
--------------
ಕರ್ಕಿ ಕೇಶವದಾಸ
ನೀನೆ ಗತಿ ಎನಗಿನ್ನು ಕರುಣಿಸು ಮಾಧವ ದೀನನ ಮರೆಯದಿರು ಸಿರಿಯರ ಜೀವ ಪ ನೀನೆ ಕರುಣಾಳು ಭಕ್ತಜನರಭಿಮಾನಿ ನೀನೆನ್ನ ಬಿಟ್ಟ ಬಳಿಕ ಕಾಮಿತವ ಪೂರೈಸಿ ಕಾಯ್ವರಕಾಣೆನಾರನು ಕಮಲನಾಭ ಅ.ಪ ಎಡಬಿಡದೆನ್ನನು ಕಾಡುತಿರುವ ಅತಿ ಜಡಭವ ಕಡುದು:ಖ ತಡಿಲಾರೆನಭವ ಅಡರಿಕೊಂಡೆನ್ನ ಸುಡುತಲಿರುವ ಒಡಲತಾಪ ಗಡನೆ ಬಿಡಿಸಿ ಬಿಡದೆ ಎನ್ನನು ಪಿಡಿದು ರಕ್ಷಿಸು ಮಡದಿಗಕ್ಷಯದುಡುಪು ಇತ್ತನೆ 1 ಶರಧಿಸಂಸಾರದ ಉರುತರ ಪರಿಬಾಧೆ ಕಿರಿಕಿರಿ ಪರಿಹರಿಸಿ ಪೊರೆಯಯ್ಯ ಜವದಿ ಶರಣುಮಾಡುವೆ ಶರಣಜನರ ಕರುಣಮಂದಿರ ಮರೆಯದಿರೆಲೊ ತರಳ ನಿರುತದಿ ಚರಣಸ್ಮರಿಸಿ ಕರೆಯೆ ಕಂಬದಿ ಭರದಿ ಬಂದನೆ 2 ಮುಂದೆನಗೆ ಭವಬಂಧ ಎಂ ದೆಂದಿಗಿಲ್ಲದಂತೆ ತಂದೆ ಕರುಣಿಸು ದಯಾ ಸಿಂಧು ಶ್ರೀರಾಮ ವಂದಿ ಭಜಿಸುವೆ ಮಂದರಾದ್ರಿ ಮಂದಿರನೆ ತ್ವರ ಬಂದು ಕಾಯೊ ಬಂಧನದಿ ಜಗ ತಂದೆ ನಿಮ್ಮ ಪಾದಕೆಂದು ಪೂವಗೆ (?) ಬಂದು ಪೊರೆದನೆ 3
--------------
ರಾಮದಾಸರು
ನೀನೆ ಗತಿ ಮುಕುತೆನೆಗೆ ಅನಂತ ಜನುಮಗಳಲಿ ಪ ಆನೇನರಿಯೆ ಗರುಡಗಮನ ಸಿರಿಕೃಷ್ಣ ರಾಯಾ ಅ.ಪ ಅನ್ಯವಾರ್ತೆ ಅನ್ಯಸಂಗ ಅನ್ಯಜನರಾರಾಧನೆಅನ್ಯಸತಿ ಅನ್ಯಕರ್ಮ ಮೊದಲು ಸಕಲತನ್ನು ಮನ್ನ(=ತನುಮನ) ವಾಕ್ಯಗಳಿಂದ ಜರಿದೆ ನಿನ್ನವರೊಳುಎನ್ನ ಕೂಡಿಸೊ ನಿನ್ನ ಚರಣ ಭಕುತಿಯಲಿ ಶ್ರೀಶ 1 ಅಂದು ವೇದೋದ್ಭವಳ ಮೊರೆಯನು ಕೇಳಿ ಕಾಯ್ದಂತೆಮಂದ ಗಜೇಂದ್ರನಿಗೊಲಿದು ರಕ್ಷಿಸಿದ ಪರಿಯಂತೆತಂದೆತಾಯಿ ಬಂಧುಬಳಗ ಎಂದೆಂದು ನೀನೇ ದಯಾ-ಸಿಂಧು ನಿನ್ನ ದಾಸರ ದಾಸನೆಂದೆನಿಸೆನ್ನ2 ಪಾದ ಜಂಘೆ ಜಾನೂರುಕಟಿಘನ್ನ ಬಾಹು ಉದರವಕ್ಷ ಭುಜ ಕುಂತಳದಿಚನ್ನ ಕಿರೀಟ ಸರ್ವಾಲಂಕಾರದಿಂ ಶೋಭಿಸುವನಿನ್ನ ಮೂರ್ತಿಯನ್ನೆ ತೋರೊ ಭಕ್ತವತ್ಸಲ ಸಿರಿಕೃಷ್ಣ3
--------------
ವ್ಯಾಸರಾಯರು
ನೀನೆ ಗತಿ ಶ್ರೀಪತಿ ನೀನೆ ಗತಿ ನಿರಾಕೃತ ದಾನವತತಿ ದೀನಾನುಕಂಪಿತ ಮತಿ ಪ. ಏನೆಂಬೆನು ನಿನ್ನಯ ಕರುಣಾ ಪವಮಾನ ಮತಿಯ ಜನಾದರಣಾ ದೀನಬಂಧು ದುರಿತೌಘ ನಿವಾರಣ ಶುಭ ಸಂಚಯ ಕರಣ 1 ನಿರವಧಿ ಸುಖದಾಯಕ ನಿನಗನ್ಯರು ಸರಿಯಂಬರು ನರಕದಿ ಹೊರಳುವರು ಚರಣಯುಗ್ಮಸರಸಿಜವಿಂತಿರಲು ಬರಿದೆ ಭವದಿ ತಿಳಿಯದೆ ಬಳಲುವರು 2 ಸ್ಮರಣೆ ಮಾತ್ರದಿಂದೊಲಿವ ಮನವರಿತು ಪಾಡಿದರೆ ನಲಿವ ಸಿರಿಸಮೇತ ಮಂದಿರದೊಳಗಿರುವ ಉರಗ ಗಿರೀಂದ್ರನ ಶಿರದಲಿ ನಲಿವ 3
--------------
ತುಪಾಕಿ ವೆಂಕಟರಮಣಾಚಾರ್ಯ
ನೀನೆ ಗುರುವಾಗೆನಗೆ ಕೋನೇರಿವಾಸ ಙÁ್ಞನವಿಲ್ಲದ ಮನುಜ ತಾನಿದ್ದು ಫಲವೇನು ಪ ನಾಳವಿಲ್ಲದ ಘಂಟೆ ಭಾರವಾಗಿದ್ದರೇನು ತೋಳ ಬಲಹಿಲ್ಲದವ ದೊರೆಯಾದರೇನು ಹಾಳು ಭೂಮಿಯು ತನ್ನ ಮೂಲವಾದರೆಯೇನು ಬಾಳಲೀಸದ ಮನೆಯ ಬಲವಂತವೇನು 1 ತಿದ್ದಬಾರದ ತೇಜಿ ಉದ್ದವಾಗಿದ್ದರೇನು ಮೂರ್ತಿ ಮುದ್ದಾದರೇನು ಕದ್ದ ಕಳ್ಳನ ಮಾತು ಬದ್ಧವಾದರೆಯೇನು ಮದ್ದನರಿಯದೆ ಧಾತು ತಿಳಿದಿದ್ದರೇನು 2 ಗೊಡ್ಡು ದನವಿನ ಕ್ರಯವು ಅಡ್ಡವಾದರೆಯೇನು ಬಡ್ಡು ಅರಸಿನ ಬಂಟನೊಡ್ಡೊಕ್ಕರೇನು ಹೆಡ್ಡನಾದವ ಬಹಳ ಗಡ್ಡವಿರಿಸಿದರೇನು ಕಡ್ಡಾಯದಂಗಡಿಯಲಿದ್ದು ಫಲವೇನು3 ಒಕ್ಕಲಿಲ್ಲದ ಊರು ಮಕ್ಕಳಿಲ್ಲದ ಮನೆಯು ಅಕ್ಕರಿಲ್ಲದ ತವರು ಇದ್ದು ಫಲವೇನು ಚೊಕ್ಕ ಹೆಂಡತಿಯವಳ್ಗೆ ತಕ್ಕ ವರನಿಲ್ಲದಿರೆ ಕುಕ್ಕೆ ತುಂಬಿದ ರೊಕ್ಕವಿದ್ದು ಫಲವೇನು 4 ಬಡಿಗೆಯಿಲ್ಲದೆ ಚಿನ್ನ ಕಡಗವಾಗುವುದೇನೊ ಪೊಡವಿ ಕಡಿಯದೆ ಬೆಳೆಯ ನೆಡುವುದೇನೊ ಕಡಗೋಲು ಹೊರತಾಗಿ ಬೆಣ್ಣೆ ತೋರುವುದೇನೊ ತುಡುಬು ಬಡಿಯದೆ ಧ್ವನಿಯ ಕೊಡುವುದೇನೊ 5 ಅಡವಿಯೊಳಗಿಹ ವೇಣು ತಿದ್ದಿದರೆ ಮೈಗೊಟ್ಟು ಕಡುಹುಳ್ಳ ದೊರೆಗಳನು ಹೊರವುತಿಹುದು ಶುಕ ಪಕ್ಷಿಯನು ಅಡಗಿಸಿಯೆ ಹಾಲೆರೆದು ಒಡನೆ ಹೇಳಿದ ನುಡಿಯ ತಾ ನುಡಿವುದು 6 ಬಂಟ ಬಿಡದೆ ಸೇವೆಯ ಮಾಳ್ಪ ಮಡದಿ ತಾ ಚೆಲುವಾಗಿ ಅಡಿಗೆ ಮಾಡುವಳು ಕಡೆಯ ಕಾಲಕೆ ತನ್ನ ದೃಢ ಬುದ್ಧಿ ಹಿಂಗುವುದು ಒಡೆಯನನು ಭಜಿಸಲಿಕೆ ಮನವಿಲ್ಲವು 7 ಗುರುವಾಗು ಇಹಪರಕೆ ಸ್ಥಿರವಾದ ಸೌಖ್ಯವನು ಒರೆದು ಮಾರ್ಗವ ತೋರು ಉರಗಗಿರಿವಾಸ ಗುರುವೆಂದು ಭಾವಿಸಿಯೆ ಕರಮುಗಿದು ಶಿರಬಾಗಿ ಸರಸಿಜಾಂಘ್ರಿಯ ನೆನೆವೆ ವರಾಹತಿಮ್ಮಪ್ಪ 8
--------------
ವರಹತಿಮ್ಮಪ್ಪ
ನೀನೆ ತಾಯಿಯು ನೀನೆ ತಂದೆಯು ನೀನೆ ಬಾಂಧವನು ರಂಗ ಪ ನೀನೆ ನಿತ್ಯನನಾದಿದೇವನು ನೀನೆ ಸತ್ಯಲೋಕೇಶನೀಶನು ಅ.ಪ ಲೋಕಭರಿತ ಅನೇಕಚರಿತ ಲೋಕಪಾಲಕನು ವಿಭವ ಲಯಗಳೇಕಕರ್ತನು ಶ್ರೀಕರಾ ಕೃಪಾಕರಾಸುರ ಭೀಕರಾಂಗನು ಪಿನಾಕಿ ವಿನುತನೂ ಕಳತ್ರನು 1 ನಂದಗೋಪನ ಕಂದ ಕೃಷ್ಣ ನೀನೆಂದು ನಂಬಿದೆನೋ ಮಂದಹಾಸವದನವ ನಾನೆಂದು ನೋಡುವೆನೋ ಸುಂದರಾರವಿಂದ ಪಾದವನೆಂದು ಪೂಜಿಪೆನೋ ತಂದೆ ಮಾಂಗಿರಿರಂಗನೊಲವನೆಂದು ಪಡೆದೇನೋ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನೆ ದಯಮಾಡಲು ನಾನುದ್ಧಾರಾಗುವೆನು ಏನೇನು ಪರಲೋಕ ನಾನರಿಯೆ ಶ್ರೀಹರಿಯೆ ಪ ಹೀನಸಂಸಾರದೊಳಗೆ ಮುಳುಗಿ ಶ್ವಾನನಂದದಿ ಕರಗಿ ಕೊರಗಿ ಜ್ಞಾನಶೂನ್ಯನಾಗಿ ಬಳಲುವೆ ಜ್ಞಾನಮೂರುತಿ ಅಭಯ ಪಾಲಿಸು ಅ.ಪ ಉದಯದಲ್ಲೇಳುತ ಸದಮಲ ತವಪಾದ ಮುದದಿಂದ ನೆನೆಯದೆ ಅಧಮತನದಿ ವಿಧವಿಧದಿ ಅಧಮಜನರ ಸುದ್ದಿ ವದನದಿಂದಾಡುತ ಮುದಿಕೋಣನಂದದಿ ಮದಮುಚ್ಚಿ ನಡೆದೆ ಎಡಬಿಡದೆ ಕುದಿದೆನನುದಿನ ಪರರ ಮನೆ ಸಂ ಪದವ ನೋಡಿ ಸಹಿಸದವರ ಸದನ ಮುರಿಯುವ ಬುದ್ಧಿ ಹುಡುಕಿದೆ ಪದುಮನಾಭಪರಾಧ ಕ್ಷಮಿಸಿ1 ಒಂದು ನಾನರಿಯದೆ ಮುಂದೆ ಭಲಾಯೆಂದು ಹಿಂದೆ ನಿಂದಿಸಿ ನಕ್ಕೆ ದ್ವಂದ್ವಕರ ಬಡಿದು ಬಲು ಜರಿದು ಹಂದ್ಯಮೇದ್ಯಕಂಡಾನಂದಿಪತೆರದನ್ಯ ಸುಂದರಿಯರ ನಯನದಿಂದ ನೋಡಿದೆ ಎವೆಯಿಕ್ಕದೆ ಇಂದಿರೇಶನೆ ನಿಮ್ಮ ಪಾದವ ಒಂದೆ ಮನದಿಂ ಭಜಿಸದೆ ಭವ ದಂದುಗದಲಿ ಬಿದ್ದು ನೊಂದವ ಕಂದನೊಳು ಕೃಪಾದೃಷ್ಟಿಯಿತ್ತು 2 ದಾಸಜನರ ಆವಾಸ ನಾ ಬಯಸದೆ ಈಷಣ ಪ್ರಪಂಚದ್ವಾಸನದಲ್ಲಿ ಬಹು ತೊಳಲಿ ಆಸೆಯೆಂಬುವ ಮಹಪಾಶದಬಲೆಯೊಳು ಘಾಸಿಯಾಗುವೆ ಸಿಲ್ಕಿ ಸೋಸಿ ನೋಡದಲೆ ಮರೆ ಮೋಸದಲಿ ದಾಸ ಬುದ್ಧಿಯಿಂದ ಮಾಡಿದ ಬಲು ದೋಷರಾಶಿಗಳೆಲ್ಲ ನಾಶಿಸಿ ಶ್ರೀಶ ಶ್ರೀರಾಮ ನಿಮ್ಮ ಪಾದ ದಾಸನಿಗೆ ನಿಜಧ್ಯಾಸ ನಿಲ್ಲಿಸು 3
--------------
ರಾಮದಾಸರು
ನೀನೆ ದಯಾನಿಧಿಯು ಶ್ರೀ ಗುರುರಾಯ ನೀನೆ ದಯಾನಿಧಿಯು ಧ್ರುವ ಕರುಣದಿ ಕುಂತಿಯ ಪುತ್ರರಿಗೆ ಒಲಿದು ಕಾಳ ನಿರ್ಮಿಸಿ ಕೌರವರಳಿದು ಉಳಿಯದೆ ಇಳೆಯೊಳು ವಂಶವ ಸವರಿದ ಶೇಷಶಯನ ಶ್ರೀ ಕೇಶವ ನೀನೆ 1 ನರಗೊಲಿದು ನರಕಾಸುರನ ಮರ್ದಿಸಿ ನಾರಗನೆಂದಜಮಿಳನ ನೀ ತಾರಿಸಿ ನಾರದಗೊಲಿದು ನಾಟ್ಯವನಾಡಿದ ನರಹರಿಯು ನಾರಾಯಣ ನೀನೆ 2 ವೇದವ ಕದ್ದೊಯಿದಸುರನ ಸೀಳಿ ಮಚ್ಛವತಾರದ ರೂಪವ ತಾಳಿ ಮಾವನ ಕೊಂದ ಮಾನ್ಯರ ಮಡುಹಿದ ಮಾಧವ ನೀನೆ 3 ಗೋಕುಲದಲಿ ಪುಟ್ಟಿ ಧರೆಯೊಳು ಬೆರಳಲಿ ಗೋವರ್ಧನ ಗಿರಿಯನೆತ್ತಿ ಗೋಕುಲ ಕಾಯ್ದಿ ಗೋಪಿಯರಿಗೊಲಿದ ಗೋಪಾಲಕೃಷ್ಣ ಗೋವಿಂದನು ನೀನೆ4 ಸೃಷ್ಟಿನೆಲ್ಲ ಬೆನ್ನಿಲಿ ತಾಳಿದ ಶೇಷನ ಸಂ ಕಷ್ಟವ ಪರಿಹರಿಸಿದ ಶಿಷ್ಟ ವಿಭೀಷಣಗೊಲಿದು ಪಟ್ಟವಗಟ್ಟವು ವಿಷ್ಣವು ನೀನೆ 5 ಮದನನೊಲಿದು ಕಾಳಿಂಗನ ತುಳಿದು ಕದನದಲಿ ಬಾಣಾಸುರನಳಿದು ಮೇದಿನಿಯೊಳು ಮರೆ ಇಲ್ಲದೆ ದೈತ್ಯರ ಮರ್ದಿಸಿದ ಮಧುಸೂದನನು ನೀನೆ 6 ತ್ರಿಪುರವನಳಿದು ತ್ರಿಗುಣವ ತಾಳಿದ ತೆತ್ತೀಸ ಕೋಟಿ ದೇವರುಗಳಿಗಾಳಿದ ಅಕ್ರೂರಗೊಲಿದು ಚರಿತ್ರವದೋರಿದ ತ್ರಿಜಗಪತಿ ತ್ರಿವಿಕ್ರಮ ನೀನೆ7 ವಾಲಿಯನಳಿದು ವಾಲ್ಮೀಕಿಗೊಲಿದು ಬಲಿಚಕ್ರನ ಮುನಿಮುಂದಲಿ ಸುಳಿದು ಬ್ರಾಹ್ಮಣನಾಗಿ ದಾನವ ಬೇಡಿದ ಮಾನ್ನವಗೊಲಿದ ಶ್ರೀ ವಾಮನ ನೀನೆ 8 ಸೃಷ್ಟಿನೆಲ್ಲ ನಿರ್ಮಿಸಿ ವಕ್ಷ ಸ್ಥಳದಲಿ ಶ್ರೀ ಮಹಾಲಕ್ಷ್ಮಿಯ ಧರಿಸಿದ ಶ್ರೀನಿಧಿ ಶ್ರೀಪತಿ ಶ್ರೀಗುರುಮೂರುತಿ ಶ್ರೀದೇವಿಗೊಲಿದಿಹ ಶ್ರೀಧರ ನೀನೆ 9 ದಾಸರ ಕ್ಲೇಶಕಿಲ್ಮಿಷಗಳ ತೊಳೆದು ಅಂಬರಿಷ ರುಕ್ಮಾಂಗದಗೊಲಿದು ಶುಕ ಶೌನಕ ಪರಾಶರ ಮುನಿಗಳಿಗೆ ಹರುಷನಿತ್ತ ಹೃಷಿಕೇಶನು ನೀನೆ 10 ಕ್ಷಿತಿಯೊಳು ದೃಢ ಪತಿವ್ರತೆಗೊಲಿದು ಯತಿ ಮುನಿಗಳಿಗಿನ್ನು ಗತಿಗಳನಿತ್ತು ಪತಿತರ ತಾರಿಸಿ ಪಾವನಗೈಸಿದ ಪರಂಜ್ಯೋತಿ ಪದ್ಮನಾಭನು ನೀನೆ 11 ದೇವಕಿಗೊಲಿದು ಸ್ಥಾಪಿಸಿ ಧರೆಯೊಳು ದ್ವಾರಕಿಯಲಿ ನಿಜ ಲೀಲೆಯು ತೋರಿದ ದುರಿತ ವಿಧ್ವಂಸನ ದೇವಕಿ ಪುತ್ರ ದಾಮೋದರ ನೀನೆ 12 ಸಿದ್ದ ಶರಣರಿಗೊಲಿದ ಸದ್ಗತಿ ಸುಖಸಾಧನ ಸಹದೇವಗದೋರಿದ ಸಂಭ್ರಮದಿ ಸುಧಾಮಗ ಒಲಿದು ಸಂತೋಷವನಿತ್ತ ಸಂಕರುಷಣ ನೀನೆ 13 ವಸುಧಿಯೊಳು ಭಸ್ಮಾಸುರನ ಮರ್ದಿಸಿ ಭಾಷೆಯನಿತ್ತು ಭಕ್ತರ ಪಾಲಿಸಿ ಋಷಿ ವೇದವ್ಯಾಸಗೊಲಿದಾತನು ವಸುದೇವಸುತ ವಾಸುದೇವನು ನೀನೆ 14 ವಿದುರುದ್ಧವ ಗರುಡಗೊಲಿದು ಭೃಗುಮುನಿ ಕಪಿಲ ಯೋಗೇಂದ್ರನ ಸಲಹಿದ ಸ್ಥಿರಪದವಿತ್ತರೊಂದು ಮಂದಿಗೆ ಪ್ರಸನ್ನವಾದ ಪ್ರದ್ಯುಮ್ನನು ನೀನೆ 15 ಸೀತಾ ಸುದ್ದಿಯ ತಂದವಗೊಲಿದು ಹತ್ತು ತಲೆಗಳ ಇದ್ದವನಳಿದು ಕದ್ದುಬೆಣ್ಣೆಯ ಮುದ್ದೆಯ ಮೆದ್ದು ಉದ್ದವಗೊಲಿದ ಅನಿರುದ್ಧನು ನೀನೆ 16 ಸೋಕಿಸಿ ಪೂತಣಿಯ ಕಾಯವು ಹೀರಿದ ಭಕ್ತ ಪುಂಡಲೀಕನ ಸಲಹಿದ ಭಕ್ತಿಗೆ ಒಲಿದು ಮುಕ್ತಿಯನಿತ್ತ ಪರಮ ಪರುಷ ಪುರುಷೋತ್ತಮನು ನೀನೆ 17 ಅಕ್ಷಯವೆಂದು ರಕ್ಷಿಸಿ ಸಭೆಯೊಳು ದ್ರೌಪದಿ ಕರುಣಕಟಾಕ್ಷದಿ ಸಲಹಿದ ಭಕ್ತವತ್ಸಲನಾಗಿ ಗಜೇಂದ್ರಗೆ ಅಧೋಕ್ಷಜ ನೀನೆ 18 ನರನಾರಿಯು ನಾಂಟೀಶರನಾಗಿ ನಖಮುಖದಲಿ ಹಿರಣ್ಯಕನ ಸೀಳಿ ಭಕ್ತಪ್ರಹ್ಲಾದಗ ಒಲಿದು ಸ್ತಂಭದಿ ಪ್ರಕಟಿಸಿದ ನರಸಿಂಹನು ನೀನೆ 19 ಅನಿಳ ಸ್ನೇಹಿತ ಅಜಗ್ನಾನಗ ಒಲಿದು ಅಹಲ್ಯಾ ಶಾಪ ವಿಮೋಚನ ಮಾಡಿದ ನೆಚ್ಚಿದ ಧ್ರುವನ ನಿಜ ಭಕ್ತಿಗೆ ಒಲಿದು ಅಚಲ ಪದವಿತ್ತುಚ್ಯುತ ನೀನೆ 20 ಜಗದೊಳು ಭಕ್ತಜನರಿಗೆ ಒಲಿದು ಜಾಹ್ನವಿ ನಿರ್ಮಿಸಿ ಜನಕನ ಸಲಹಿದ ಸಾಧು ಸಜ್ಜನ ಮುನಿ ಸಂಜೀವನ ಜಾನಕೀಪತಿ ಜನಾರ್ಧನನು ನೀನೆ 21 ಅಂಗದಗೊಲಿದಾನಂದವನಿತ್ತು ಕುಂದದೆ ಕರೆದುಪಮನ್ಯುನ ಸಲಹಿದ ದಿನಕರ ಚಂದ್ರ ಕಳಿಯಗಳಿತ್ತು ಇಂದ್ರಗೆ ಒಲಿದ ಉಪೇಂದ್ರನು ನೀನೆ 22 ಧರೆಯೊಳು ಭಕ್ತನ ಜನ್ಮವು ಹರಿಸಿ ಹರಿಶ್ಚಂದ್ರನ ಕ್ಲೇಶವು ಪರಿಹರಿಸಿದ ಸುರಮುನಿಗೊಲಿದ ಶ್ರೀ ಹರಿಯು ನೀನೆ 23 ಕಾಳಿ ಮಥನವು ಮಾಡಿ ಕರುಣದಿ ಸುರರಿಗೆ ಅಮೃತವನಿತ್ತು ಸಲಹಿದ ಕಲ್ಕ್ಯಾವತಾರದ ಲೀಲೆಯ ತೋರಿದ ಕಪಟ ನಾಟಕ ಶ್ರೀ ಕೃಷ್ಣನು ನೀನೆ 24 ಸಂಧ್ಯಾನದ ಸಾಹಾಯವನಿತ್ತು ಕಾಯದಿ ಸದ್ಗತಿ ಸಾಧನದೋರಿದ ನರಕೀಟಕ ಮಹಿಪತಿ ತಾರಕ ಗುರುಮೂರ್ತಿಯ ಪರಮ ದಯಾನಿಧಿಯು ನೀನೆ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೆ ದಯಾಶರಧಿ ತ್ರಿಜಗದಿ ಧ್ಯಾನದಾಯಕ ಮಮಪ್ರಾಣ ಜಾನಕೀ ಜೀವ ಪ ದೀನರ ಪಾಲಿಪ ಜಾಣ ಮಹಿಮ ಪ್ರಭು ಕ್ಷೋಣಿಯೋಳ್ನಿನ್ನ ಸಮಾನ ದೇವರ ಕಾಣೆ 1 ಒಲಿದು ಕಂಬದಿ ಬಂದಿ ಬಲಿಯ ಬಾಗಿಲ ಕಾಯ್ದಿ ಲಲನಾಮಣಿಗೆ ಒಲಿದು ಕುಲವನುದ್ಧರಿಸಿದಿ 2 ಕರಿಯು ಕರೆಯಲು ಬಂದಿ ತರುಣಿ ಬೆಂಬಲ ನಿಂದಿ ಚರಣದಾಸರ ಪ್ರಿಯ ಕರುಣಿ ಶ್ರೀರಾಮ 3
--------------
ರಾಮದಾಸರು