ಒಟ್ಟು 7419 ಕಡೆಗಳಲ್ಲಿ , 132 ದಾಸರು , 3991 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೂತೆ ಕೇಳ ದ್ರೌಪತಿಯ ಖ್ಯಾತಿ ಕೇಳಿದ ಮನುಜರಿಗೆಪಾತಕದೂರಾಗೊದೆಂಬೋ ಮಾತು ನಿಜವಮ್ಮಪ.ಉಮಾಶಚಿ ಶಾಮಲಾ ಉಷೆ ತಮ್ಮ ಪತಿಗಳ ಬೆರೆದು ರಮಿಸೆಬೊಮ್ಮಕಂಡುಕೋಪಿಸಿ ಶಾಪ ಝಮ್ಮನೆ ಕೊಟ್ಟಾನು1ಪರಮಮದದ ಬಾಲೆಯರಿವರುಪರಪುರುಷನ ಬೆರೆಯಲ್ಯಾ ್ಹಂಗೆನರದೇಹ ಬರಲೆಂದು ಬೊಮ್ಮಗೆ ನಾಲ್ವರು ನುಡಿದರು 2ಚಂದಾಗಿ ನಾಲ್ವರ ದೇಹ ಒಂದೇ ಮಾಡಿ ತೋರೆ ಬೊಮ್ಮಗಬಂದವು ಮೂರು ನರದೇಹಗಳ ಲೊಂದಾಗಿರಲೆಂದು 3ತಪ್ಪು ನಮ್ಮದೆಂದು ಶಾಪ ಒಪ್ಪಿಕೊಂಡು ನಾಲ್ವರುಜಪಿಸಿ ಸಾವಿರ ವರುಷ ಗೌಪ್ಯದಿ ಭಾರತಿಯ 4ಬಂದು ಮೊರೆಯ ಪೊಕ್ಕವರ ಚಂದಾಗಿ ದೇಹದಲ್ಲಿಟ್ಟುಅನಂದದಿಂದ ವಿಪ್ರಕನ್ಯೆ ಎಂದು ಜನಿಸಿದಳು 5ಎಲ್ಲರಕರ್ಮಒಂದಾಗಿ ಎಲ್ಲೆಲ್ಲೆ ಭಿನ್ನ ತೋರದ್ಹಾಂಗೆಫುಲ್ಲನಾಭನ ದಯವ ಪಡೆದಳು ಅಲ್ಲೆ ಆ ಬಾಲೆ 6ಮುದ್ಗಲ ನೆಂತೆಂಬೊ ಋಷಿಯು ಬಿದ್ದು ನಕ್ಕ ಬ್ರಹ್ಮನ ಕಂಡುಮುದ್ದು ಮಗಳ ರಮಿಸಿದಾತಗೆ ಬುದ್ಧಿಯಿಲ್ಲವೆಂದು 7ತ್ವರೆಯಿಂದಬೊಮ್ಮಮುನಿಗೆ ಬೆರಿಯೆ ಭಾರತಿಯ ಕಂಡುಕರವಮುಗಿದು ಎರಗಿ ಮುನಿಯು ಮೊರೆಯ ಹೊಕ್ಕಾನು8ಮಾರುತನ ದೇಹದಲ್ಲೆ ಭಾರತಿಯು ರಮಿಸುವಾಗಹಾರಿತಯ್ಯ ಸ್ಮøತಿಯು ಸುಖವು ತೋರದು ನಮಗಿನ್ನು 9ಮಂದಗಮನೆಯರಿಂದಭಾರತಿಇಂದ್ರ ಸೇನಳಾಗಿ ಜನಿಸೆಬಂದ ಮರುತ ದೇಹದ ಮುನಿಯು ಚಂದದಿ ಮದುವ್ಯಾದ 10ಮರುತ ಅಕೆÉಯಿಂದ ರಮಿಸ ಮಾರುತದೇಹದ ಮುನಿಯು ಏನುಗುರುತು ಇಲ್ಲಧಾಂಗೆ ಆತ ಇರುತಲಿದ್ದನು 11ಬಾಲೆಯ ಸಂತೋಷ ಪಡಿಸಿ ಮೂಲರೂಪಕಂಡುವಾಯುಮ್ಯಾಲ ವನಕೆ ನಡೆದ ಮುನಿಯು ಆ ಕಾಲದಲೆಚ್ಚತ್ತು12ಇಂದ್ರಸೇನ ಬಂದು ಆಗ ಇಂದಿರೇಶನದಯವ ಪಡೆಯೆನಂದಿವಾಹನ ನಮ್ಮ ಪತಿಯ ವಂದಿಸೆಂದಾರು 13ಪತಿಯ ಬಯಸಿದ ಬಾಲೆಯರಿಗೆ ಚತುರ್ವಾಹ ನುಡಿದನು ಶಿವನುಅತಿಶಯ ರೋದನವ ಮಾಡೆ ಮಿತಿ ಇಲ್ಲದಲೆ ಅಂಜಿ 14ಮಂದಗಮನೆಯ ಧ್ವನಿಯಕೇಳಿ ಬಂದ ಇಂದ್ರ ಬಹಳದಯದಿಬಂದಿತೆನಗೆ ಇಂಥಕ್ಲೇಶಎಂದು ನುಡಿದಳು15ಬಂದು ವರವ ಬೇಡಿ ಪತಿಗಳ ಹೊಂದಿರೆಂದು ನಾಲ್ಕುಬಾರಿಬಂದಿತೆಮಗೆ ಇಂಥಕ್ಲೇಶಎಂದು ನುಡಿದಳು16ಇಂಥ ಅನ್ಯಾಯ ಯಾಕೆಂದು ನಿಂತ ಒಟುಗೆ ನುಡಿದ ಇಂದ್ರಭ್ರಾಂತ ನರನ ನಿಂದೆ ಶಚಿಯ ಕಾಂತೆಗೆ ಶಿವನು 17ನಾನು ಸೃಷ್ಟಿ ಮಾಡಿದವನು ನೀನು ಏನು ನುಡಿದ ಶಿವನುಮಾನವನಾಗೊ ಬೊಮ್ಮಗ ತಾನು ಆತಗೆ 18ಉಮಾ ಮೊದಲಾದವರಿಗೆಲ್ಲ ತಮ್ಮ ಪತಿಗಳ ಹೊಂದಿರೆಂದಉಮಾ ನಿಮ್ಮ ಬೆರಿಯ ಬ್ಯಾಡ ಸುಮ್ಮನೆ ಹೋಗೆಂದ 19ಎತ್ತು ಗಿರಿಯ ಕೆಳಗ ಇದ್ದ ಮತ್ತÀ ನಾಲ್ವರ ನೋಡೆಸತ್ತ ಎಂದು ತಿಳಿಯೋ ನಿನ್ನ ಚಿತ್ತಕತಾ ಎಂದು 20ಕೇಳಿದ ಬೊಮ್ಮನ ನುಡಿಯು ತಾಳಿದ ಬಾಲಿಯರು ಬೆರೆದುಬಹಳ ಪ್ರೇಮದಿಂದಭಾರತಿಇಳಿದಳು ಬಂದು21ರಾಮೇಶನಕ್ಲುಪ್ತತಿಳಿದು ಭೀಮಸೇನನಾದ ವಾಯುಕಾಮಿನಿಯರ ಸಹಿತ ದ್ರೌಪತಿ ಪ್ರೇಮದಿ ಜನಿಸಿದಳು 22
--------------
ಗಲಗಲಿಅವ್ವನವರು
ದೂರ ನೋಡುವುದುಚಿತವಲ್ಲವೋವಾರವಾರಕೆ ಬಿಡದೆ ತುತಿಪೆ |ಮೀರಿದವನೆ ನಾ ನಿನಗೆ ಪವನ ಪರಾಮಚಂದ್ರನ ಸೇವೆಯ ನಿ-ಷ್ಕಾಮದಿಂದ ಮಾಡಿ ಬಹಳ |ತಾಮಸಜನಂಗಳ ತಂದೆನೀಂ ಮಹಾ ಸಮರ್ಥನೆಂದೇ ||ನೀ ಮನೆಯಿಲ್ಲದವನು ಎಂದೆನೆ | ಕೋತಿರೂಪಈ ಮುಖವು ಹೀಗೆ ಅಂದೆನೆ | ನಗವ ಪೊತ್ತಿಭೂಮಿಯೊಳಗೆ ಕಠಿಣನೆಂದೆನೆ | ಹನುಮನೆ 1ಪೊಕ್ಕು ರಣಕೆ ಹೆಜ್ಜೆಯ ಹಿಂದಕೆಯಿಕ್ಕದೆ ಭುಜವ ಚಪ್ಪರಿಸಲಾಗ |ನಕ್ಕವರ ಬಲ ಹುರಿದು ಹೋಯಿತು |ಅಕ್ಕಟಕ್ಕಟಾ ನೀ ವೀರನೆಂದೇ ||ರಕುತವ ಕುಡಿದ ನೀಚನೆಂದೆನೇ | ತಿಂದು ತಿಂದಿರಕ್ಕಸಿಯನು ಕೂಡಿದನೆಂದೆನೇ | ಒಡಲ ಬಾಕಸೊಕ್ಕು ನಿನಗೆ ಬಹಳವೆಂದೆನೇ | ಭೀಮನೇ 2ತಿಳಿದು ಪ್ರಾಣೇಶ ವಿಠಲನಿಚ್ಛೆ |ಇಳೆಯೊಳುದಿಸಿ ಹಲವು ಮತವ ||ನೆಲಕೆವೊರಿಸಿ ಮರುತ ಮತವ |ನಿಲ ಹಾಕಿದ ಗುರುಗಳೆಂದೇ ||ತುಳುವರಲ್ಲಿ ಪುಟ್ಟಿದೆಯೆಂದೆನೇ | ಬಹಳ ಗುಗ್ಗರಿಮೆಲಿದ ಭೂತ ಮಗುವು ಎಂದೆನೇ |ಭಾರತೀಶಸಲಹೋ ಬಿಡದತಿಮ್ಮನೆಂದರೆ | ಮಧ್ವನೇ 3
--------------
ಪ್ರಾಣೇಶದಾಸರು
ದೂರ ಮಾಡುವರೇನೆ ರಂಗಯ್ಯನ ಪದೂರು ಮಾಡುವರೇನೆ | ಚೋರನೆಂದಿವನನ್ನು |ಮೂರು ಲೋಕವನು ತಾ | ಪಾಡುವ ರಂಗಯ್ಯನ 1ನಂದ ಗೋಕುಲದಲ್ಲಿ ಕಂದರೊಡಗೂಡಿ ಆ-|ನಂದದಿಂದಲಾಡುವ | ಕಂದ ರಂಗಯ್ಯನ 2ಗೊಲ್ಲರ ಮನೆಯಲ್ಲಿ | ಕಳ್ಳತನದಲಿ ಪೊಕ್ಕು |ಗಲ್ಲವನು ಪಿಡಿದು ಮುದ್ದಿಡುವ ರಂಗಯ್ಯನೆಂದು 3ಕಾಮಾಂಧಕಾರದಲಿ | ಕಳವಳಗೊಳಿಸಿದ |ಶ್ಯಾಮಸುಂದರ ರಂಗ | ಸೋಲಿಸಿ ಪೋದನೆಂದು 4ಮಂಗಲ ಮೂರುತಿ ಪು | ರಂದರವಿಠಲನು |ರಂಗ ಮಂಚದಲಿ ನೆರೆದು | ಹಿಂಗಿ ಪೋದನೆಂದು 5
--------------
ಪುರಂದರದಾಸರು
ದೂರಹವು ದೂರಹವು ದುರಿತಗಳೆಲ್ಲಕ್ರೂರ ಸ್ತಂಭಿನಿ ಬಗಳೆ ಸ್ಮರಣೆ ಮಾತ್ರದಲಿಪಕಳ್ಳರಡಕಟ್ಟಿದಲ್ಲಿ ಕಾರಾಗೃಹದಲ್ಲಿಗುಲ್ಲಾದ ಸ್ಥಳದಲ್ಲಿಘನಗಾಳಿಯಲ್ಲಿಎಲ್ಲ ರೋಗಗಳಲ್ಲಿ ಚಿಂತೆಗಳು ಮುತ್ತಿದಲ್ಲಿಬಲ್ಲ ಬಗಳೆಯ ಸ್ಮರಣೆ ನಾಲಗೆಗೆ ಬರಲು1ಮಾರಿದುರ್ಗಿಯಲ್ಲಿ ಮಹಾಗ್ರಹವು ಹಿಡಿದಲ್ಲಿಮಾರಣವು ಮುಟ್ಟಿದಲ್ಲಿ ಮಹಾಕಾರ್ಯದಲ್ಲಿಊರು ಮುತ್ತಿದಲ್ಲಿ ವಸ್ತು ಹೋಗಿದ್ದಲ್ಲಿಕಾರಣ ಬಗಳೆ ಸ್ಮರಣೆ ನಾಲಗೆಗೆ ಬರಲು2ಮಳೆಯೊಳು ಸಿಕ್ಕಿದಲ್ಲಿ ಸಾಯ್ವಸಮಯದಲ್ಲಿಹೊಳೆಯೊಳು ಮುಳುಗಿದಲ್ಲಿ ಹೊಲ ಬೆಳೆಯದಲ್ಲಿ ಬ-ಹಳದಾರಿದ್ರ್ಯದಲ್ಲಿ ಬೇಗೆ ಸುತ್ತಡಸಿದಲ್ಲಿಬಲು ಚಿದಾನಂದ ಬಗಳೆ ಸ್ಮರಣೆ ನಾಲಗೆಗೆ ಬರಲು3
--------------
ಚಿದಾನಂದ ಅವಧೂತರು
ದೆಕ್ಕಬುಕ್ಕ ಇಕ್ಕಬೇಕು ಅಂಬನ ಮನದಅಕ್ಕರವು ತೀರುವತನಕಪಕೊರಳಿಗೆ ಬೀಳಬೇಕು ಅಂಬನ ಎದೆಯಸೆರಗ ಹಿಡಿದು ಎಳೆಯಬೇಕು ಅಂಬನಕರುಳನೀಗ ಪೀಕಬೇಕು ಅಂಬನ ಉಟ್ಟನಿರಿಗೆ ಜಗ್ಗಿ ಬೀಳಬೇಕು ಅಂಬನ1ತೊಡೆಯ ಮೇಲೆ ಹೊರಳಬೇಕು ಅಂಬನ ಮುಸುಕಹಿಡಿದು ಎಳೆಯಬೇಕು ಅಂಬನಕಡಿಯಬೇಕು ಗಲ್ಲವನ್ನು ಅಂಬನ ಸ್ತನವಹಿಡಿದು ಕುಡಿಯ ಬೇಕು ಅಂಬನ2ಓಡಿ ಬಂದು ಅಪ್ಪಬೇಕು ಅಂಬನ ಕುದುರೆಮಾಡಿ ಹೆಗಲನೇರಬೇಕು ಅಂಬನಓಡಬೇಕು ಒಡನಮುಟ್ಟಿ ಅಂಬನ ಸಾಕ್ಷಿಗೂಢ ಚಿದಾನಂದ ಬಗಳಾಂಬನ3
--------------
ಚಿದಾನಂದ ಅವಧೂತರು
ದೇವರನ್ನು ಹಸೆಗೆ ಕರೆದ ಪದಗಳುವೇದ ಉದ್ಧರಿಸೀದಾ ಮತ್ಸ್ಯಾವತಾರನೇ |ಆದಿತ್ಯಾರಿಗೊಲಿದಮೃತ ನೀಡಿದನೇ ||ಮೇದಿನಿಯನು ಪೊತ್ತ ವರಹವತಾರನೆ |ಆ ದೈತ್ಯನಳಿದು ಪ್ರಹ್ಲಾದಗೊಲಿದನೇ ||ಭೂ ದೇವಾ ರೂಪೀ ಹಸಿಗೇಳೂ 1ಭೃಗು ಕುಲೋದ್ಭವನೇ ಭೀಷ್ಮನ ಬೆಳಸಿದನೇ |ನಗಜ ರಮಣನ ಕಾರ್ಮೂಕ ಮುರಿದವನೇ ||ಹಗೆಯನಳಿದು ಪಾಂಚಜನ್ಯ ಘಳಿಸಿದನೆ |ಇಗಡ ದೈತ್ಯರ ಬುದ್ಧಿ ಭೇದ ಮಾಡಿದನೇ ||ಅಗಣಿತಮಹಿಮಾ ಹಸಿಗೇಳೂ 2ಕುದರೀಯೇರಿ ಕುಜನರಾ ಕುಲ ತರಿದವನೇ |ಬುಧರಗೋಸುಗ ಹತ್ತಾವತಾರವಾದವನೇ ||ಸುದರೂಶನ ಶಂಖ ಗದ ಜಲಜ ಧರನೇ |ವಿಧಿಪಿತಶ್ರೀ ರಮಣ ಪ್ರಾಣೇಶ ವಿಠ್ಠಲನೆ ||ಸುಧಿಗಡಲಾಲಯನೆ ಹಸಿಗೇಳೂ 3
--------------
ಪ್ರಾಣೇಶದಾಸರು
ದೇವವರಗೆ ಹಾರ ನೀಡಿದೆÀ ಪಗೋವರ ಮನಿ ಮಹಾದೈವನಾದವಗೆ ಅಪವೇದಚೊರನ ಕೊಂದ ಶೂರಗೆಭಾರಮೇದಿನಿತಂದಿಹ ವೀರಗೆ ಮಹಬೋಧರ ವರಫೋರರೂಪನಾದವಗೆ 1ತಿರುಕರೂಪಗೆಪರಶುಧರವನಚರಗೆಖರಾಸುರ ವೈರಿಗೆ ಕಂಸಮರ್ದನಗೆ 2ನೀತಸತಿವ್ರತ ಹಾರಗೆಖಳಜಾತಿ ಜನರ ಸಂಹಾರಗೆಖ್ಯಾತ ಗುರುಜಗನ್ನಾಥ ವಿಠಲಗೆ 3
--------------
ಗುರುಜಗನ್ನಾಥದಾಸರು
ದೇವಿ ಅಂಬುಜವಲ್ಲಿ ರಮಣನೆ ಭೂವರಾಹ ದಯಾನಿಧೆಪವಮಾನನ ದಿವ್ಯ ಕರದಲಿ ಸೇವೆ ಸಂತತಗೊಳ್ಳುವಿಅವನಿಯೊಳು ಶ್ರೀಮುಷ್ಣಕ್ಷೇತ್ರದಿ ನೀ ವಿಹಾರವ ಮಾಡುವಿಅತ್ಯಗಾಧ ಸುಶೀಲಜಾಹ್ನವಿಸುತ್ತು ಷೋಡಶತೀರ್ಥದಿಮತ್ತು ವರ್ಣಿಪೆ ತೀರ್ಥ ತಟದಲಿ ಉತ್ತಮಾಗ್ನೇಯಭಾಗದಿಕರಗಳೆರಡು ಕಟಿಯಲಿಟ್ಟು ಕೋರೆಹಲ್ಲನೆ ತೋರುತಘನ್ನಶ್ವೇತವರಾಹಮೂರುತಿ ಎನ್ನ ಪೂರ್ವದ ಪುಣ್ಯದಿಸುಂದರಾನನ ಕಂಜಮಧುಪನಇಂದುನೋಡಿದ ಕಾರಣಮಲ್ಲಮರ್ದನವೈಕುಂಠದಿಂದ ಮೆಲ್ಲಮೆಲ್ಲನೆ ಬಂದೆಯಸೂಕರಾಸ್ಯನೆ ನಿನ್ನ ಪಾದಕನೇಕ ವಂದನೆ ಮಾಡುವೆ
--------------
ಗೋಪಾಲದಾಸರು
ದೇವಿಯ ನೋಡಿರೊಪರದೇವಿಯ ನೋಡಿರೋಭಾವಿಸೆಅನುದಿನಹೃದಯದಿ ಬೆಳಗುವ ಕಳೆಯ ಚಿತ್ಪ್ರಭೆಯ ಪ್ರಭೆಯಪಎಲ್ಲರ ಕೈಯಲಿ ಪೂಜೆಯಕೊಂಬ ಗುಣಿಯ ರತ್ನದ ಗಣಿಯಒಲ್ಲೆನೆಂದರು ವರಗಳ ಕೊಡುವ ದಯಾಮಯಿಯ ಭಕ್ತ ಪ್ರಿಯೆಯಬೆಲ್ಲದಂದದಿ ಮಾತುಗಳಾಡುವ ಸುಧೆಯ ಸುಖ ಶಾರದೆಯಬಲ್ಲಿದಶತ್ರುಗಳಾಗಿಹ ರವರನು ಬಡಿವ ಕಡಿದುಡಿವ1ಬ್ರಹ್ಮ ವಿಷ್ಣುರುದ್ರಾದಿಗಳವರ ತಾಯಿ ಮಹಾಮಾಯಿಬೊಮ್ಮನು ಬರೆದಿಹ ಪ್ರಾರಬ್ಧವೆಲ್ಲವ ಸೆಳೆವ ಎಲ್ಲವ ಕಳೆವಚಿಮ್ಮಿ ಹಾಕುವಳು ಕಂಟಕಂಗಳ ಬಿಡಿಸಿಅಭಯಕೊಡಿಸಿತಮ್ಮವರೆಂದೇ ಭಕ್ತರ ಬದಿಯಲಿ ಇಹಳ ಮಹಾಮಹಿಮಳ2ಚಿತ್ಕಲಾತ್ಮ ಚಿದಾನಂದನೆಂಬ ವಿಭುವಾಮಹಾ ಪ್ರಭುವಹತ್ತಿರ ನಿಂತು ಬೆಳಗುತಲಿಹಳು ಕೋಟಿ ಸೂರ್ಯರ ಸಾಟಿಮತ್ತೇ ಮೀರಿಯೆ ಬ್ರಹ್ಮರಂದ್ರಕೆ ಸಾಗಿ ತಾ ವಾಸವಾಗಿನಿತ್ಯದಿ ಜ್ಯೋತಿರ್ಮಯವಾಗಿ ತೋರುವ ಸಖಿಯ ಬಗಳಾಮುಖಿಯ3
--------------
ಚಿದಾನಂದ ಅವಧೂತರು
ದೇವಿಯನೆತ್ತಿದನಾರೆಲಮ್ಮಾ ನಮ್ಮದೇವ ಸಿರಿಪತಿ ಕಾಣೆಲಮ್ಮಾದೇವಿ ನಮ್ಮ ದೇವರು ಬಂದರು ಕಾಣಮ್ಮ ಪ.ಕಣ್ಣೆವೆ ಇಕ್ಕದೆ ಮಾತಿಗೆ ಮನವಿಟ್ಟಸಣ್ಣದೊಡ್ಡನಾಹನಾರೆಲಮ್ಮಉನ್ಮತ್ತಖಳಸೋಮಕನವೈರಿಹೊಸ ಹೊನ್ನಬಣ್ಣದ ಮಚ್ಛವತಾರಿ ಅಲ್ಲೇನಮ್ಮ 1ಸಾರಿಸಾರಿಗೆ ಉಯ್ಯಾಲಿಡುತಲಿ ಮುಸುಡನುತೋರಿ ಜಾರಿದವನಾರೆಲಮ್ಮಆರಿಗು ಮೀರಿದಮಂದರಬೆನ್ನಲಿಭಾರಾಂತ ಶ್ರೀಕೂರ್ಮನಲ್ಲೇನಮ್ಮ 2ಘರ್ಘರಿಸುತ ಕಾಲಕೆದರಿ ಜಗದಗಲಭೋರ್ಗರೆವುತಲಿಹನಾರೆಲಮ್ಮದುರ್ಘಟ ದೈತ್ಯನ್ನ ದಂಷ್ಟ್ರದಿ ಚುಚ್ಚಿದನಘ್ರ್ಯವರಾಹದೇವನಲ್ಲೇನಮ್ಮ3ಕೂಗುತÀ ಕೊಲ್ಲುತ ಕಿಡಿಯನುಗುಳುತಲಗುಬಗೆದವನಾರೆಲಮ್ಮನೀಗಿದುಷ್ಟನ ಶರಣಾಗತ ಶಿಶುರಕ್ಷಯೋಗಿನರಹರಿ ಅಲ್ಲೇನಮ್ಮ4ಭೂಮಿ ಆಕಾಶಕೆ ಒಬ್ಬನೆ ಹಬ್ಬುತಸೀಮೆಯ ಮುಚ್ಚುವನಾರೆಲಮ್ಮಹೇಮಹೋಮದಿಮತ್ತಬಲಿಯನೊತ್ತ್ಯಾಳಿದಸಾಮದ ವಾಮನನಲ್ಲೇನಮ್ಮ 5ಸಾವಿರ ಕೈಯ್ಯವನಳಿದು ಕಡಿದು ತಾನೆಹೇವದಟ್ಟಿವನಾರೆಲಮ್ಮಈ ವಸುಧೆಯ ಭಾರವಿಳುಹಿದ ವೀರ ಭೂದೇವಕುಲದ ರಾಮನಲ್ಲೇನಮ್ಮ 6ಕರಡಿಕೋಡಗಕೊಂಡು ಕಡಲೊಳಗಾಡಿದಹುರುಡಿಲ್ಲದ ಬಿಲ್ಲನುಳ್ಳನಾರೆಲಮ್ಮಸರಕುಮಾಡಿ ರಕ್ಕಸರನೊದ್ದಸಮೀರಜವರದ ಸೀತಾರಾಮ ಅಲ್ಲೇನಮ್ಮ 7ಬಂಡಿ ಕುದುರಿ ಗೂಳಿ ಹಕ್ಕಿ ಸೀಳಿ ಗೊಲ್ಲಹೆಂಡಿರೊಳಾಡುವನಾರೆಲಮ್ಮಪಾಂಡವಪಾಲ ರುಕ್ಮಿಣಿ ವಿಜಯನುಬಂಡಿಕಾರ ಕೃಷ್ಣನಲ್ಲೇನಮ್ಮ 8ಉಡುಗೆಯನುಡದಂತರಾಟದಿ ಕದ ತಪ? ವಿದ್ದಮಡದೇರ ಕೆಡಿಸಿದನಾರೆಲಮ್ಮಮೃಡಸುರರುಬ್ಬಸಬಡಿಸುವ ಬೌದ್ಧರಕೆಡಿಪ ಮೋಹನ ಬುದ್ಧನಲ್ಲೇನಮ್ಮ 9ವಾಜಿಯನೇರಿ ಠೇವಿಡಿದು ಗಡಬಡಿಸಿಮೂಜಗ ಸುತ್ತುವನಾರೆಲಮ್ಮಮಾಜಿದ ಪುಣ್ಯವನೆತ್ತಿ ಕಲಿಯ ಕೊಂದಸೋಜಿಗದ ಕಲ್ಕಿ ಅಲ್ಲೇನಮ್ಮ 10ಮುಗ್ಧರಾಗಲಿ ಪ್ರೌಢ ಬಂಟರಾಗಲಿ ಕರೆದರೆದ್ದೋಡಿ ಬಂದವನಾರೆಲಮ್ಮಸಿದ್ಧಪುರುಷ ಪ್ರಸನ್ವೆಂಕಟಪತಿಸಾಧಿಸಿ ಪಾಡಿದಲ್ಲಿದ್ದನಮ್ಮ 11
--------------
ಪ್ರಸನ್ನವೆಂಕಟದಾಸರು
ದೇಹ ಮನೇಂದ್ರಿಯವೆಲ್ಲಾಆತ್ಮಸಹಾಯದಿ ಚರಿಸುವವೆಲ್ಲಾಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಮೂಢರು ತಿಳಿಯರು ಸುಮ್ಮೇದೇಹವ ಕೂಡುತೆ ಮಾಡಿತು ಹೆಮ್ಮೆ1ವಪು ಜಡವದು ಪ್ರಕಾಶಾ |ಸ್ವರೂಪವಿಡಿದಾಗುವದಾಭಾಸಾ2ಪಾವಕನಾಗಿರೆ ಲೋಹವಾಗಿರೆ |ಪಾವಕಲೋಹದ ಹತಿಗೆ3ಮಾಲಾ ಸರ್ಪವದಾಗೆ |ತೋರದೆ ವ್ಯಾಳೆನಿಸುದು ಮಾಲ್ವೋಗೆ (ಮಾಲೆಹೋಗೆ)4ಅಧಿಷ್ಠಾನ ದೃಷ್ಟಿಯಿಂದಾ |ಪ್ರಾಣಿಗೆ ದೊರಕದು ಶಂಕರ ಪದಾ5
--------------
ಜಕ್ಕಪ್ಪಯ್ಯನವರು
ದೋಷ ಎಣಿಸದೆ ಕಾಯೊ ಜೀಯಾ ಪಕಂಡ ಕಂಡವರ ಭಜಿಸೀ -ಬೇಡಿತೋಂಡವತ್ಸಲ ಕರುಣೆ ಸಲಿಸೀಪಾದಪುಂಡರೀಕ್ಯನ್ನೊಳಗೆ ಇರಿಸಿಕಾಯೋ 1ಮಾqಬಾರದ ಕೃತ್ಯವಾ - ನಾ ಬಲುಮಾಡಿದೆಗೃಹಕೃತ್ಯವಾಬೇಡದಕಿ ಭೃತ್ಯತ್ವವಾ - ಈ ದೋಷನೋಡದಲೆ ಭಕ್ತತ್ವವಾ ನೀಡೊ 2ದೀನ ಜನಪಾಲ ನಿನ್ನಾ-ರೂಪಧ್ಯಾನ ಮಾಡಿದೆ ಬಿಡದೆ ಘನ್ನಾ-ಗತಿಎನು ಪೇಳಯ್ಯಾ ಎನಗೆ ಮುನ್ನಾ ಸ್ವಾಮಿ 3ಗುರುರಾಘವೇಂದ್ರರಾಯ - ಎನ್ನಶರಣು ಪೊಕ್ಕೆನೊ ನಿನಗೆ ನಾನಯ್ಯಾ ಕರುಣೀ 4ಮಾತ ಪಿತ ಭ್ರಾತ್ರÀ ಬಂಧೂ - ಎನಗೆದಾತನಿನ್ನ ದೂತನೆಂದೂ- ಬಂದ-ನಾಥನನು ನೀ ಕಾಯುವುದು ಪ್ರಭುವೇ 5ಕರುಣಸಾಗರನೆ ಈಗ - ತವರೂಪಶರಣು ಪೊಕ್ಕವನ ವೇಗಾ-ಭವ-ಅರಣ ದಾಟಿಸುವಂಥ ಯೋಗಾ ಪೇಳಿ 6ಹೋಗುತಿದೆ ಹೊತ್ತು ಪದುಮಾಕ್ಷ -ಹ್ಯಾಗೆಆಗುವದೊ ನಿನ್ನಅಪರೋಕ್ಷಜಾಗುಮಾಡದೆಸಲಿಸ್ಯನ್ನಪೇಕ್ಷಾ ಸ್ವಾಮಿ7ಪಾರದೋಷಗಳನ್ನೆ ತಾಳೋಘೋರಅಙ್ಞÕನ ಕೀಳೋ- ಪರಲೋಕಸೇರಿಸೆನ್ನನು ಕೃಪಾಳೋ ಸ್ವಾಮಿ 8ಎಷ್ಟು ಪೇಳಲಿ ಎನ್ನ ತಾತಾ - ಕೃಪಾ -ದೃಷ್ಟಿಯಲಿನೋಡುನಾನಿನ್ನ ಪೋತಾಧಿಟ್ಟ ನೀಗುರುಜಗನ್ನಾಥಾ- ವಿಠಲನನಿನ್ನೊಳಗೆ ತೋರೋದಾತಾಖ್ಯಾತಾ9
--------------
ಗುರುಜಗನ್ನಾಥದಾಸರು
ದ್ವಂದ್ವವೆ ವಸಂತದ ಹಬ್ಬದ್ವಂದ್ವವೆ ಇಹಪರದಲ್ಲಿ ಹಬ್ಬ ಪ.ದ್ವಂದ್ವಾಮೃತ ಕ್ಷೇಮಅಭಯವಸಂತದ್ವಂದ್ವ ಜೀವೇಶರ ತಿಳಿದವ ಶಾಂತದ್ವಂದ್ವದ ನಡೆನುಡಿ ಬಲ್ಲವ ಸಂತದ್ವಂದ್ವವರಿಯದನ ಗತಿಯೆ ವಸಂತ 1ದ್ವಂದ್ವ ಶೀತೋಷ್ಣ ಸಮಾನವ ಕಂಡುದ್ವಂದ್ವ ನಿಂದಾಸ್ತುತಿ ಸರಿಯಿಟ್ಟುಕೊಂಡುದ್ವಂದ್ವವಮಾನವಹಿಡಿದರೆ ಭಂಡುದ್ವಂದ್ವ ಪಕ್ಷಿಗಳ ಬಗೆಯ ಕೇಳಿಕೊಂಡು 2ಫಾಲ್ಗುಣ ಪೌರ್ಣಿಮೆ ಬಂದಿತಿಳೆಗೆಬಾಲಕರೆಲ್ಲ ನೆರೆವುದೊಂದು ‌ಘಳಿಗೆಹೋಳಿಯನಾಡುವ ಸಂಭ್ರಮದೊಳಗೆಕಾಳಗಬೇಡಿರೊ ನಿಮ್ಮ ನಿಮ್ಮೊಳಗೆ3ಅಜೆÕೈಕ್ಯ ಪ್ರತಿಪದ ಹಿಂದಾದರಿಂದಸುಜ್ಞಾನ ದ್ವಿತಿಯಕ್ಕೆ ತೋರುವ ಚಂದ್ರಒಗ್ಗೂಡಿ ಗೆಳೆಯರೊಮ್ಮತದಿಂದಲಗ್ಗೆಕಾರರು ಮುಂದೆ ನಡೆವುದೆ ಚಂದ 4ಭಕ್ತೆಂಬೊ ಪುರದಲ್ಲಿ ಒಂಬತ್ತು ಬೀದಿ ವಿರಕ್ತಿರಂಹಸ ಬ್ರಹ್ಮದ್ಹಾದಿಯ ಐದಿವ್ಯಕ್ತವಾಗುವ ವಸ್ತು ಓದಿಕೆ ಓದಿರಿಕ್ತದ ನುಡಿಗಳು ತಮಸಿನ ಹಾದಿ 5ದಿನಪತಿ ಅಡಗಿರೆ ಮಲಗದೆ ಎದ್ದುಮನೆಯವರನು ಎಚ್ಚರಿಸಬ್ಯಾಡಿ ಸದ್ದುನೆನೆವ ವಿಷಯಗೋಡೆ ಏರುತ್ತ ಬಿದ್ದುಮನೆ ಮನೋವಾರ್ತೆಯ ಕುರುಳನೆ ಕದ್ದು 6ಹಾರುವರ ಕೇರಿಯ ಹೊಗಬ್ಯಾಡಿಕೇಳಿಬೇರೂರವರ ಬಿಟ್ಟು ಬಿಡಿ ದೂರದಲ್ಲಿದೂರುವರೊಡನಾಟ ದುರ್ದೆಶೆಫಲವು ವಸ್ತುದೋರುವ ಮನೆಯೇವೆ ಸರಸ ವೆಗ್ಗಳವು 7ಧೂಳಿ ನೀರುರಿಗಾಳಿ ಬಯಲೊಳಗಾಡಿಮ್ಯಾಲೆ ಮೂರುರಿಯೊಳು ಮತಿಗುಂದಬ್ಯಾಡಿಹಾಳು ತುರುಕರ ಕೇರಿಯೊಳು ನಿಷ್ಫಲವುಜಾಲಗಾರರ ಕೇರಿ ಹೊಕ್ಕರೆ ಫಲವು 8ಹಿಂಚಾದ ಹಿರಿಯರ ಮಾತಲೆ ನಡೆದುವಂಚಕ ಮೂವರ ಸಂಗವ ಕಡಿದುಮಿಂಚುವ ಮಾನ್ಯರ ಪ್ರೀತಿಯ ಪಡೆದುಸಂಚಿತಪ್ರಾರಬ್ಧಾಗಾಮಿಯ ಒಡೆದು9ಮುಚ್ಚಿದ ಕದವೆರಡನು ಮುರಿಹೊಯ್ದುಇಚ್ಛೆ ಮೂರೆಂಬ ನಾಯಿಗಳಜಿಹ್ವೆಕೊಯ್ದುಬೆಚ್ಚದೆ ಮನೆ ಮೆಲ್ಲನೆ ಹೊಗಿರಣ್ಣಸಚ್ಚಿದ ಗೋರಸ ಸೂರ್ಯಾಡಿರಣ್ಣ 10ಏಕಾಧಿಪತಿಯಾಜÕ ಅಭಯವು ಬೇಕುನಾಕು ಝಾವಿನ ರಾತ್ರಿ ನಲವಿರಬೇಕುಪೋಕಕಳ್ಳಾರ್ವರ ಮೆಟ್ಟ್ಯಾಳಬೇಕುಭೂಕಾಂತಗೆ ಸೇವೆಯೊಪ್ಪಿಸಬೇಕು 11ರಮಣನೊಲ್ಲದ ಆರ್ವರ ಸಂಗವಿಡಿದುರಮಿಸುವ ಬುದ್ಧಿಜಾರಿಯ ಗಟ್ಟಿವಿಡಿದುಅಮಿತ ವೈರಾಗ್ಯಹಗ್ಗದಿ ಕೈಯಕಟ್ಟಿಶ್ರೀರಮಣನಂಘ್ರಿಗೆ ಒಪ್ಪಿಸಲು ಕಾರ್ಯ ಗಟ್ಟಿ 12ಎಲ್ಲೆಲ್ಲ್ಯಜ್ಞಾನಾಹಿ ವಿಷಯ ತೇಳುಗಳುಎಲ್ಲೆಲ್ಲಿ ನಿರ್ಜಲಸೃತಿಯ ಬಾವಿಗಳುಎಲ್ಲೆಲ್ಲಿನಿರಯಕಮ್ಮರಿ ಮಿಟ್ಟೆಗಳುಎಲ್ಲ ತಪ್ಪಿಸಿ ಜ್ಞಾನ ಬೆಳದಿಂಗಳೊಳು 13ವ್ಯಾಳ್ಯವರಿತು ತತ್ವಸಂಧಿಯ ಒಲಿದುಸೂಳಿ ಮದೆಂಟರ ಕೈಸೆರೆವಿಡಿದುಕಾಲಾಖ್ಯ ತಳವಾರನಾಳಿಗೆ ಕೊಟ್ಟುಮ್ಯಾಳದ ಗೆಳೆಯರು ಸಂತೋಷಪಟ್ಟು 14ಎಂಬತ್ತು ನಾಲ್ಕು ಲಕ್ಷಾಗಾರ ಹೊಗುತಡೊಂಬಿಯಿಲ್ಲದೆ ಬಂದ ಬನ್ನವಬಡುತಕುಂಭಿಣಿಸುರ ಕುಲ ಭೂಮಿಗೆ ಬಂದುದಂಭ ಮಾಡದಲೆ ಕುರುಳ ಒಯ್ಯಿರೆಂದು 15ರಾಗ ಮತ್ಸರಗೂಡಿದರ ಕುರುಳನೊಟ್ಟಿಭೂಗಗನ ಹೊಗುವ ಕಾಮವಕಟ್ಟಿಯೋಗವಾಗಿರುವ ಹುಬ್ಬಿನ ಕ್ಷೇತ್ರದಲಿಮ್ಯಾಗ ವಿಜ್ಞಾನಗ್ನಿ ಹಾಕಬೇಕಲ್ಲಿ 16ಲೋಭ ಹೋಳಿಕೆಯ ಹೋಳಿಗೆ ತುಪ್ಪ ಸವಿದುಲಾಭಕ್ಕೆ ಕುಣಿಯಲು ವೇತ್ರರು ಹೊಯ್ದುಶೋಭನ ರಸ ಬೊಬ್ಬೆಯ ಸಾಧುಹಿಂಡುತ್ರಿಭುವನಪತಿಕಾಮನಯ್ಯನ ದಂಡು17ಸ್ವರ್ಧುನಿಜನಕನ ಗುಣಗಣಕೀರ್ತಿಊಧ್ರ್ವಸ್ವರದಿ ಹಾಡಿ ಹೊಗಳುವಅರ್ಥಿನಿರ್ಧೂಮಜ್ವಾಲೆಯ ಬೆಳಗಲಿ ಸುತ್ತಿದುರ್ದೇಹಿಗಳ ಕಿವಿಧಾರೆಯ ಕಿತ್ತಿ 18ಅವಿದ್ಯ ಕಾಮ್ಯಕರ್ಮದ ಹೋಳಿ ಸುಟ್ಟುಹ್ಯಾವಿನ ಮೈಯ ಬೂದಿಯ ಮಾಡಿಬಿಟ್ಟುಕೋವಿದರ ಚಾತುರ್ಯಕೆ ಒಡಂಬಟ್ಟು ಚಿದ್ಭಾವ ಮಂದಿರದ ಬ್ರಹ್ಮಕೆ ಲಕ್ಷ್ಯವಿಟ್ಟು 19ಹಂಗಿಲೆ ಬೆಳೆದ ವೃಕ್ಷದ ಮೂಲ ಮುರಿದೂಧ್ರ್ವಾಂಗಕ್ಕೆ ಸುತ್ತುವ ಜಾಣರ ಬಿರಿದುರಂಗು ಮುತ್ತಿನ ಮೂಗುತಿ ಹೆಣ್ಣವಿಡಿದುಶೃಂಗಾರ ಚೇಷ್ಟೆಯ ಮಾಡಿರೊಜಡಿದು20ಬೆಳಗಿನ ಝಾವದಿ ಬೂದಿ ಚಲ್ಲ್ಯಾಡಿಗೆಳೆಯರು ನೆರೆವುದೊಂದೆ ತಾಣ ನೋಡಿಜಲಜಾಕ್ಷನುದ್ಯಮದಂಗಡಿಯಲ್ಲಿನಲಿವ ಸ್ವಾನಂದದೂಟವ ಬೇಡಿಕೊಳ್ಳಿ 21ತಿರುತಿರುಗಿ ಬಂದು ದಣಿದು ನೀವಿಂದುಹರಿಯ ಮೈ ಬೆವರಿನ ಹೊಳೆಯಲ್ಲಿ ಮಿಂದುಥರ ಥರದ್ಹದಿನಾರು ವರ್ಣಗಳಿಂದತರುಣ ತರಣಿಯಂತೆ ಹೊಳೆವುದು ಚಂದ 22ಆನಂದಮಯವಾಸುದೇವನ ಕಂಡುಆನಂದಪುರದಿ ಭಕ್ತಿಯ ನೆರೆಗೊಂಡುಆನಂದ ತೀರ್ಥಗುರು ಕೃಪೆಯಿಂದಸ್ವಾನಂದದೋಕುಳಿಯಾಡುವ ಚಂದ 23ಈ ವಿಧ ಅಧ್ಯಾತ್ಮ ಹೋಳಿಯ ಭೇದಭಾವುಕ ಜನರಿಗೆ ಪರಮಾಹ್ಲಾದದೇವ ಋಷಿಕುಲದೈವ ಮುಕುಂದಕಾವನು ಕರುಣಾಬ್ಧಿಕೇಳಿಗೋವಿಂದ24ವೇದನ ತಂದ ಹಯಾಸ್ಯನ ಹೋಳಿಭೂಧರಧರಿಸಿದಮರ ಕಾರ್ಯಕೇಳಿಮೇದಿನ ತರಲಡ್ಡಾದವನೊಮ್ಮೆ ಹೋಳಿ ಪ್ರಹ್ಲಾದನಿಷ್ಠೆಗೆಹರಿಉದಿಸಿದಕೇಳಿ25ನಾನೆಂಬೊ ದಾನವೇಂದ್ರನ ಮದ ಹೋಳಿಹೀನರಿಗಾಗಿ ಕೊಡಲಿ ಹೊತ್ತಕೇಳಿಜಾನಕಿ ತಂದ ದಶಾಸ್ಯನ ಹೋಳಿಮಾನಿನಿಯರಾಳ್ದ ವಿಡಂಬನಕೇಳಿ26ಸನ್ಮಾರ್ಗ ಬಿಟ್ಟ ಖಳರ ಮತಿ ಹೋಳಿಉನ್ಮತ್ತಕಲಿಯನರಸಿ ಕೊಂದಕೇಳಿಚಿನ್ಮಯಮೂರ್ತಿ ಭೂಭಾರವ ಹೋಳಿಜನ್ಮಿಸಿಬಹುದೆಲ್ಲ ಮೋಹನಕೇಳಿ27ಅನಂತದುರಿತರಾಶಿಗಳನ್ನು ಹೋಳಿಆನಂದ ಸುಖವೀವ ನೆನೆದರೆಕೇಳಿಅನಂತ ಅನವದ್ಯಗುಣ ಪರಿಪೂರ್ಣಅನಂತಾದ್ಭುತಕರ್ಮದೀನ ದಯಾರ್ಣ28ಈಪರಿವಿಜ್ಞಾನವಸಂತದಾಟಚೌಪದಿ ರತ್ನಮಾಲಿಕೆ ಮಾಡಿ ಪಾಠಶ್ರೀಪ್ರಸನ್ವೆಂಕಟ ಕಿಟಿರೂಪಿ ಕೃಷ್ಣತಾ ಪರಿಪಾಲಿಪ ಪುರುಷವರಿಷ್ಠ 29
--------------
ಪ್ರಸನ್ನವೆಂಕಟದಾಸರು
ಧನ್ಯರೆ ನೀವು ಧನ್ಯರೆಪನ್ನಂಗ ಶÀಯನನ ಕನ್ಯೆಯರುನಮಮ್ಯಾಲೆ ಅನಂತ ದಯಮಾಡಿಮನ್ನಿಸಿ ಬನ್ನಿರಿ ಪ.ಇಂದಿರಾ ದೇವಿಯರು ಕುಂದುನೋಡದೆನಮ್ಮ ಮಂದಿರಕ್ಕೆ ಬನ್ನಿರೆಂದು ದ್ರೌಪತಿಯು 1ಮುದ್ದು ಪಾದಕೆ ನಾನು ಬಿದ್ದು ಬೇಡುವೆದಯಇದ್ದರೆ ಬಾ ಅನಿರುದ್ಧನ ರಾಣಿ 2ಕಡುಬ್ಯಾಗಸುಭದ್ರಾ ಅಡಿಗೆರಗುತಕರಹಿಡಿದು ರಾಮೇಶನ ಮಡದಿ ಬಾರಮ್ಮ 3
--------------
ಗಲಗಲಿಅವ್ವನವರು
ಧರಣಿಗೆ ದೊರೆಯೆಂದು ನಂಬಿದೆ - ಇಂಥ - |ಪರಮಲೋಭಿಯೆಂದು ಅರಿಯೆ ಶ್ರೀ ಹರಿಯೆ ಪಕಾಡಿಬೇಡುವರಿಗೆ ಕೊಡಲಾರದೆ ಅಂಜಿ |ಓಡಿ ನೀರೊಳು ಸೇರಿಕೊಂಡೆ ಬೇಗ ||ಹೇಡಿಯ ತೆರದಲಿ ಮೋರೆಯ ತೋರದೆ |ಓಡಿ ಅರಣ್ಯದಿ ಮೃಗಗಳ ಸೇರಿದೆ 1ಬಡವರಬಿನ್ನಪ ಲಾಲಿಸದಲೆ ಹಲ್ಲ |ಕಡುಕೋಪದಲಿ ತೆರೆದಂಜಿಸಿದೆ ||ತಡೆಯದೆ ಭಿಕ್ಷುಕನಾದರು ಬಿಡರೆಂದು |ಕೊಡಲಿಯ ಪಿಡಿದುಕೋಡಗ ಹಿಂಡ ಕಾಯ್ದೆಯೊ2ಉತ್ತಮನೆಂದರೆ ಮತ್ತೆ ಚೋರನಾದೆ |ಬತ್ತಲೆ ನಿಂತು ತೇಜಿಯನೇರಿದೆ |ಎತ್ತಪೋದರು ಬಿಡೆ ಬಿಡೆ ನಿನ್ನ ಪಾದವ |ಚಿತ್ತಜ ಜನಕ ಶ್ರೀ ಪುರಂದರವಿಠಲನೆ3
--------------
ಪುರಂದರದಾಸರು