ಒಟ್ಟು 1007 ಕಡೆಗಳಲ್ಲಿ , 90 ದಾಸರು , 805 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಗರ ಎಂಥನಗರ ನಿಂತು ವರ್ಣಿಸಬೇಕುಶ್ರೀಕಾಂತೆಯಿಂದ ಇಂತು ರಮಿಸುವುದು ಪ. ಮುಂದಕ್ಕೆ ನೋಡಲು ಹೊಂದಿದ್ದ ಮನೆಗಳುಹಂದರದ ಜಗಲಿ ಸುಳಿಗೊಳಹಂದರದ ಜಗಲಿ ಸುಳಿಯೆಲಿ ಬೀದಿಯಲಿತುಂಬಿದ ಜನರು ಕಡೆಯಿಲ್ಲ 1 ಅತ್ತಿತ್ತ ನೋಡಲು ಕಾಣುವ ಗೋಪುರಮುತ್ತಿನಂಗಡಿ ಎಡಬಲಮುತ್ತಿನಂಗಡಿ ಎಡಬಲ ನೋಡುತ ಕತ್ತೆತ್ತಿ ನೋಡಿದರೂ ಕಡೆಯಿಲ್ಲ 2 ಕೋಗಿಲದ ಸ್ವರದಂತೆ ಮಕ್ಕಳ ಜೋಗುಳಹಾಡುತೆ ಮನೆ ಬಾಗಿಲ ಮುಂದೆಹಾಡುತೆ ಮನೆಮುಂದೆ ಮಕ್ಕಳಲಾಲಿ ಪಾಡುವರು ಕಡೆಯಿಲ್ಲ3 ನವನೀತ ಭಾರವ ವಹಿಸಿ ಕೆಲರುಭಾರವ ವಹಿಸಿ ಕೆಲರು ಅಲ್ಲಲ್ಲಿಸಾರಿ ಮಾರುವವರು ಕಡೆಯಿಲ್ಲ4 ಹಸಿರು ಬಳೆತೊಟ್ಟು ಕುಸುರಿನ ಸಿಂಬೆಯಲಿಮೊಸರ ಗಡಿಗೆ ಎಸಗುತಮೊಸರ ಗಡಿಗೆ ಎಸಗುತ ಮಾರುವ ಬಿಸಜನೇತ್ರಿಯರು ಕಡೆಯಿಲ್ಲ 5 ಬಿಳಿಯ ದಟ್ಟಿಯುಟ್ಟು ಸಣ್ಣ ಬುಟ್ಟಿಹೊತ್ತುಕಣ್ಣು ಕಜ್ಜಲದ ಕೆಲದೆಯರು ಕಣ್ಣು ಕಜ್ಜಲದ ಕೆಲದೆಯರು ಕೂಗುತಹಣ್ಣು ಮಾರುವವರು ಕಡೆಯಿಲ್ಲ 6 ಅಮ್ಮಮ್ಮ ರಮಿಯರಸು ಒಮ್ಮೊಮ್ಮೆ ಬೀದಿಲೆಸುಮ್ಮನೆ ಸುಳಿವ ಯಮಕದಿಸುಮ್ಮನೆ ಸುಳಿವ ಯಮಕದಿ ಶ್ರೀಕೃಷ್ಣತನ್ನ ಭಕುತರನ ಸಲುಹಲಿ 7
--------------
ಗಲಗಲಿಅವ್ವನವರು
ನಗುವು ಬರುತಿದೆ ಎನಗೆ ನಗುವು ಬರುತಿದೆಬಿಗಿದು ಶ್ವಾಸ ಮೂಗ ಹಿಡಿದು ನಿಟಿಲ ನೋಡುವವರ ಕಂಡು ಪ ಹಡೆದ ದೈವ ಹತ್ತಿರಿರಲು ನೋಡಿದರು ನೋಡದಂತೆಮೃಡನು ತಾನೆ ಇರಲು ಮೂಗ ಕೊನೆಯ ನೋಡುವವರ ಕಂಡು 1 ಹೊಳೆಯುತಿಹುದು ಪರಬ್ರಹ್ಮ ನಾನಾ ರೂಪಗಳನು ತಾಳಿತಿಳಿಯದಲೆ ತನ್ನನೀಗ ಕಣ್ಣು ಮುಚ್ಚುವವರ ಕಂಡು2 ಮನಕೆ ನಿಲುಕದವನು ತಾನೆ ಮಂಗಳವಾಗಿ ಬೆಳಗುತಿರಲುಮನದಿ ಪೂಜೆಯನ್ನು ಮಾಡ್ವ ಮಂದಮತಿಗಳನ್ನು ಕಂಡು3 ತಾನು ದೇವ ನಿಜವಿದಿರಲು ತಂದು ಪ್ರತಿಮೆ ಇಟ್ಟುಕೊಂಡುಏನೋ ಮಂತ್ರ ಒದರುತಿರುವ ಮನುಜರನ್ನು ಕಂಡು ನನಗೆ4 ಯೋಗ ಮಾಡಿಕೊಂಬುದೇನು ಯೋಗಮಾಡುವವನೆ ಇರಲುಯೋಗಿಯಾದ ಚಿದಾನಂದ ತಾನೆ ಸಾಕ್ಷಿಯಾಗಿ ಇರಲು5
--------------
ಚಿದಾನಂದ ಅವಧೂತರು
ನಡತೆಯನೆಣಿಸಿದರೆ ಗುಣವೇನು ತೃಣಕುಕಡೆಯಾಗುವಲ್ಲಿ ಸಂದೇಹವಿಲ್ಲ ಪನೀನು ಹಿಂದೆಗೆಯೆ ಕಣ್ಣು ಕಾಣದೆಂಬೆಯಲ್ಲೋ ುೀಗಕಾಣು ಕಿಮಿಂದ ರೂಪ ಜಾಣೆಯ ಮಗನೆ 1ಕೇಳು ಮೂಗಿನಿಂದಾ ನುಡಿಯ ತಾಳು ಗಂಧವ ಬಾುಂದಾಹೇಳು ಮಾತ ಕಣ್ಣಿನಿಂದಾ ಕೂಳುಗೊಂಬೆ 2ನಡೆಯೊ ಕೈುಂದ ಕಾಲಿಂ ಪಿಡಿಯೊಗುದದಲುಣ್ಣೋ ಪಡೆಯೊ ನೀನುಪಸ್ಥೆಯ ಬಿಟ್ಟಾನಂದವಾ 3ವಾಕಿನಿಂ ವಿಸರ್ಗವನ್ನು ಸೋಕಿಸೊ ಸ್ಪರ್ಶವ ನೀನುತಾಕದೊಲ್ ತ್ವಗಿಂದ್ರಿಯವ ಕಾಕಿ ಮನವೆ 4ಜೀವನು ಕುರುಡನೇನೊ ಪ್ರಾಣಗಳ್ [ಕೊ]ರಡುಗಳೇನೊಯಾವಗವು ನೀನೊರ್ವ ಬಾಳುವೆಯೇನೊ 5ಕಾದಿ ಮನೆಗೆ ಕೇಡು ತಾ ದರಿದ್ರತೆಗೆ ಬೀಡುಸಾಧುವಾಗಿ ನಮ್ಮೊಳಾಡು ಕೆಡಬೇಡ ನೋಡು 6ಹತ್ತು ದಾರಿಯೊಳಾಡುವೆ ಗೊತ್ತಿಗೆ ನೀನಿಲ್ಲದಿರೊಮತ್ತನಾಹೆ ಕೆಣಕಲು ಸತ್ತವನಂತೆ 7ನಿನ್ನ ಹತ್ತಿರೆ ದೈವವು ಬನ್ನ ಬಡಿಸಲೆಮ್ಮನುಕಣ್ಣುಗಾಣದೆ ಸೇರಿಸಿತು ಕಾಲಗತಿುಂದಾ 8ತಿರುಪತೀಶನೊಲವನು ಸರಸದಿಂ ಸಾಧಿಪ ನೀನುತೊರೆಯಲೆಮ್ಮ ತಿಳಿದುದು ಜಾಣುಮೆ ತಾನು 9ಕಂ||ಕರಣಗಳಾಡಿದ ಮಾತನು ಹರುಷದಿ ಕೇಳುತ್ತ ಜೀವ ತನು ಸಹ ಮನಮಂ ಪರಿಪರಿ ವಿಧದಲಿ ಬೋಧಿಪ ಪರಿುಂ ದೂಸಿದನಾಗ ನಾಚುವ ತೆರದಿಂ
--------------
ತಿಮ್ಮಪ್ಪದಾಸರು
ನಡಿ ನೀರೇ ಪೋಪಾ ದೇವಿ ಇದ್ದೆಡೆಗೆ| ಕಡು ಕೋಪವ್ಯಾಕ ಶ್ರೀರಮೆ ಕೂಡ ಎನಗೆ ಪ ಫುಲ್ಲ ಲೋಚನೆ ಕುಂದರದನೆ ಸುಫಣಿ ವೇಣಿ| ಮಲ್ಲಿಕಾ ಮಂದಸ್ಮಿತೆ ಚಲ್ಪಕದಪು| ಬಿಲ್ಲು ಕಾಮನ ಸೋಲಿಪ ಭ್ರೂಲತೆಯುಳ್ಳ| ಸಲ್ಲಲಿತಾಂಗಿಯಾವಾಗ ಕಂಡೆಪೆನೆ 1 ಹುಣ್ಣಿಮೆ ಚಂದ್ರನ ಮಂಡಲ ಪೊಳೆವಾ|ಪೊಂ| ಬಣ್ಣವದನೆ ಮಹಾಸಿಂಹನ ಜರೆವಾ| ಸಣ್ಣ ನಡುವಿನಿಂದೊಪ್ಪುವ ಸಿರಿಯನು| ಕಣ್ಣಾರೆನೋಡಿ ಮತಾಡುವೆ-ನೇಳೆ 2 ಬರಬಾರದು ದೇವಿಯಗಲಿ ಬಂದರ| ಸ್ಥಿರವಾಗದು ಅರಫಳಿಗೆನ್ನ ಮನಸು| ಗುರುಮಹಿಪತಿ ಸುತ ವರದ ದೇವತೆಯಾಗಿ| ಧರೆಯೊಳು ಮೆರವಾ ಶ್ರೀ ಲಕ್ಷೀಯ ತೋರೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂದ ಕಂದನೇ ಇವಸುರವೃಂದ ವಂದ್ಯನೇ ಧರೆಯ ಮರೆಗಿಂದು ಬಂದನೇ ಹಿಂದೆವೇದವನೆ ರಕ್ಷಿಸಿದವನೇ ಮಂದರಗಿರಿ ಪೊತ್ತವನೇ ಸುಂದರಿ ಶರಯನೆ ಬಿಡಿಸಿದ ದೇವನೇ ಛಂದದಿ ಮಗು ಕಾಯ್ದವನೇ 1 ನಾನಾ ರೂಪನೇ ಧರಿಸಿ ಧರ್ಮವನೆ ಸ್ಥಾಪನೇ ಮಾಡುವದುಷ್ಟ ಜನ ಲೋಪನೇ ತುನಾಭಿಲಾಷನೇ ನೆಗೆಹಿದ ಪರುಷನೇ ಮಾನಿನೀ ಕೃತ್ಕೂಲುಷನೇ ಮಾನಿನೀ ಹೃತ್ಕಲುಷನೇ ಬುದ್ಧ ಕಲ್ಕೇಶನೇ ದಾನವ ಜಗದಂಕುಶನೇ 2 ಮಾನುವೆನ್ನಲೆ ಗಿರಿಯ ಪೊತ್ತದೇನು ಕಣ್ಣಿಲೇ ಕಾಣದೇ ಜನ ತಾನು ತನ್ನಲೇ ಸ್ವಾನಂದ ಲೀಲೆ ದೋರಲು ಬಾಲೇ ನಿಜಗುಣ ಮಾತೇ ಮಹಿಪತಿಜ ಪ್ರಿಯನ ಬಲೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬಿ ನೋಡಿರೋ ಅಂಬುಜಾಕ್ಷನ ಗುಂಭಗುರುತ ಹಂಬಲಿಸದೆ ಇಂಬುದೋರುದು ಧ್ರುವ ಬಿಡದೆ ವಂದಿಸಿ ನೋಡಿ ಸಂಧಿಸಿದರೆ ಭಿನ್ನವಿಲ್ಲದೆ ನೋಡಿ ಚೆನ್ನಾಗಿ ಕೂಡಿಕೊಂಬ ಧನ್ಯಗೈಸಿ ಜೀವ ಪ್ರಾಣ ಪಾವನ ಮಾಡುವ 1 ಕಂತು ಪಿತನ ನಿತ್ಯ ಯೋಗಕ್ಷೇಮ ತಾ ಹೊತ್ತು ನಡೆಸುವ ಹತ್ತಿಲೆ ತಂದು ತಪ್ಪದೆ ತುತ್ತು ಮಾಡ್ಯುಣಿಸುವ 2 ಸಣ್ಣ ದೊಡ್ಡದೆನ್ನ ಗುಡದೆ ಕಣ್ಣದೆರಿಸಿ ಚಿನ್ನುಮಯದ ಬಣ್ಣ ಭಾಸುತ ಪುಣ್ಯಮಹಿಮೆ ಕಾಣಿಸುವದು ವಾಸನೆ ಪೂರಿಸಿದ ವಾಸುದೇವ ನಿಶ್ಚಯ ಲೇಸಾಗಿ ಪಾಲಿಸುತಿಹ್ಯ ದಾಸ ಮಹಿಪತಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಂಬಿಗಿಲ್ಲಾ ಈ ಮನಸಿನಾ ಪ ಒಂದು ನೆನೆಯೆ ಮತ್ತೊಂದು ನೆನೆಯುತಾ | ಒಂದರೆ ಘಳಿಗೆ ಹೊಂದದೆ ಸದ್ಗುಣ | ಕೂಪ ಹೋಗುವಂದದಿ ವಿಷಯ | ಮ | ದಾಂಧದಿ ಜೀವನ ಬಂಧಿಸುದೈಯ್ಯಾ 1 ಧೀರ ಶಾಸ್ತ್ರ ವಿಚಾರ ಕರ್ಮದಿ | ಶೂರರ ತಪ ವಿಹಾರರ ಜಗದೊಳು | ಆರಾದರಾಗಲಿ ಕ್ರೂರ ಕರ್ಮದಾ | ಗಾರ ಹುಗಿಸಿ ಘನ ಹೊರುವದೈಯ್ಯಾ 2 ಪುಣ್ಯದ ದಾರಿಗೆ ಕಣ್ಣವ ದೆರಿಯದು | ಅನ್ಯಾಯದಿ ಒಡಲನೇ ಹೊರುವದು | ಸನ್ನತ ಮಹಿಪತಿ ಚಿನ್ನನ ಪ್ರಭುದಯ | ಮುನ್ನಾದರ ಇನ್ನಾನರಿಯೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬಿದೇ ಗುರುವರಾ ನಂಬಿದೇಪ ನಂಬಿದೆ ಗುರುಸಾರ್ವಭೌಮಾ ತುಂಟುಮನದೊಳು ಹರಿಭಕ್ತಿ ನಿಸ್ಸೀಮಆಹಾ ಅಂಬುಜೋದ್ಭವಪಿತನ ಕಂಭದಿ ತೋರಿದ ಶಂಬರ ಕುಲದೀಪ ಪ್ರಹ್ಲಾದ ವ್ಯಾಸಮುನಿಯೇ ಅ.ಪ. ದಾಸನೆಂದಡಿಗೆ ಬಿದ್ದೆನೋ ಈಗ ದೋಷ ನಾಶಮಾಡೋ ಎನಗೆ ಬೇಗ ಆಹಾ ವಾಸುಕಿಶಯನನ ಬ್ಯಾಸರದೆ ಸ್ತುತಿಸಿ ಈಶನ ಸರ್ವತ್ರವ್ಯಾಪ್ತಿಯನರುಹಿದ ಭೂಪ 1 ಪಾತಕರೊಳಗೆ ಅಗ್ರೇಸರನಾನು ಪೂತಮಾಡುವರೊಳಗೆ ನಿಸ್ಸೀಮ ನೀನು ಆಹಾ ತಾತನಪ್ಪಣೆಯಂತೆ ವ್ಯಾಸರಾಜಾಎನಿಸಿ ಖ್ಯಾತಿಯಿಂದಲಿ ತರ್ಕತಾಂಡವರಚಿಸಿ ಮೆರೆದೇ 2 ತಾಪಸಶ್ರೇಷ್ಠ ಬ್ರಹ್ಮಣ್ಯಕುವರನಾದೆ ಗೋಪಾಲಕೃಷ್ಣನ್ನ ಕುಣಿಕುಣಿದಾಡಿಸಿ ಭೂಪನ ಕುಹಯೋಗ ಕಳೆದ ಯತಿಕುಲತಿಲಕ 3 ಮಧ್ವಶಾಸ್ತ್ರಗಳ ಮಂದರರಿಯದಿರಲು ಮುದದಿಂದ ಪದಸುಳಾದಿಗಳ ರಚಿಸಿದೆ ನೀನು ಆಹಾ ಆದರದಿಂದಲಿ ಪುರಂದರಕನಕರಿಗೆ ಸದುಪದೇಶವ ಕೊಟ್ಟು ಜಗದುದ್ಧಾರಮಾಡಿದ ಪ್ರಭುವೇ 4 ಮತ್ತೆ ಪುಟ್ಟಿದೆ ವೆಂಕಣ್ಣಭಟ್ಟ ನೆಂದೆನಿಸೀ ಮತ್ತ ಕೇಸರಿಯಂತೆ ಮಧ್ವಶಾಸ್ತ್ರದಿ ಮೆರೆದೇ ಆಹಾ ಕತ್ತಲೆ ಅದ್ವೈತವಾದಗಳಿಗೆಲ್ಲಾ ಕತ್ತಿಎನಿಸಿದ ಪರಿಮಳಾಚಾರ್ಯ ಗುರುವೇ 5 ವಿಪ್ರನು ದಿಟ್ಟತನದಿ ನಿನ್ನ ಗಂಧವ ತೇದುಕೊಡುಎನೆ ಕ್ಷಿಪ್ರದಿ ತೋರಿದೆ ನಿನ್ನ ಮಹಿಮೆಯಜಗಕೇ ಆಹಾ ಅಪ್ಪ ಶ್ರೀರಾಮರ ಪೂಜಿಸಬೇಕೆಂದು ಒಪ್ಪಿಸನ್ಯಾಸವ ರಾಘವೇಂದ್ರನಾದ 6 ಮುದದಿ ದೇಶ ದೇಶವ ಚರಿಸಿದೇ ಸಮಯದಿ ಸುಜನರಕ್ಲೇಶಗಳಳಿದೇ ಆಹಾ ಮೋದಮುನಿಯ ಗ್ರಂಥಗಳಿಗೆಲ್ಲ ಟಿಪ್ಪಣಿ ಮಾಡುತ ಬುಧರಿಗೆ ತತ್ವ ಕನ್ನಡಿ ತೋರ್ದ ಗುಣಗಣನಿಧಿಯೇ7 ಪರಿಪರಿ ಮಹಿಮೆಯ ತೋರುವ ಗುರುವೇ ಸುರತರು ಅಂದದಿ ಹರಕೆ ಗಳೀವೆ ಪ್ರಭುವೇ ಆಹಾ ಮೂರೆರಡು ಒಂದುನೂರು ವರುಷ ಪರಿಯಂತ ಸಾರಿಸಾರಿದವರ ಪೊರೆದು ಮೆರೆಯುವ ದಿವಿಜವಂದಿತ ಗುರು8 ದಯದಿಂದ ನೋಡೆನ್ನ ದೀನೋದ್ಧಾರ ಭವ ಬಿಡಿಸು ಕರುಣಾಸಾರ ಆಹಾ ಜಯತೀರ್ಥವಾಯ್ವಂತರ್ಗತ ಶ್ರೀಕೃಷ್ಣ ವಿಠಲನ ಹೃ- ದಯಮಂದಿರದಿ ತೋರೆನಗೆ ಗುರುಸಾರ್ವಭೌಮ 9
--------------
ಕೃಷ್ಣವಿಠಲದಾಸರು
ನಮಗೊಬ್ಹಾನೆ ತಾ ಜೀವಜೀವದ ಗೆಳೆಯ ಧ್ರುವ ಸುತ್ತಿ ಸೂಸ್ಯಾಡುತ್ಹಾನೆ ನೆತ್ತಿಯೊಳಗೆ ತುಂಬ್ಯಾನೆ ತುತ್ತುಮಾಡಿ ಉಣಿಸುತ್ಹಾನೆ ಹತ್ತಿಲೆ ತಾ ಹಾನೆ 1 ಹೊಟ್ಟೆಲೆನ್ನ ಹಿಡಿದಾನೆ ಘಟ್ಯಾಗಿ ರಕ್ಷಿಸುತಾನೆ ದೃಷ್ಟಿಸಿ ನೋಡುತ್ಹಾನೆ ಗುಟ್ಟಿನೊಳ್ಹಾನೆ 2 ತಾನೆ ಸೋತು ಬರುತ್ಹಾನೆ ಎನಗುಳ್ಳ ಸದ್ಗುರು ನಾಥ್ಹಾನೆ ಕನಗರಸಿದಾಗೊಮ್ಹಾನೆ ಮನದೊಳು ನಿಂದ್ಹಾನೆ 3 ಮಾಯದ ಸುಖ ಮರಿಸ್ಯಾನೆ ತಾಯಿ ತಂದೆ ತಾನಗ್ಹ್ಯಾನೆ ಸಾಹ್ಯ ಬಲು ಮಾಡುತ್ಹಾನೆ ಭವಭಯ ಬಿಡಿಸ್ಹ್ಯಾನೆ 4 ಮನ್ನಿಸಿ ದಯ ಬೀರುತ್ಹಾನೆ ಧನ್ಯ ಪ್ರಾಣಗೈಸುತ್ಹಾನೆ ಚಿಣ್ಣ ಮಹಿಪತಿಯ ಗುರು ತಾನೆ ಕಣ್ಣಿನೊಳ್ಹಾನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮ್ಮ ರಂಗ ಮಧುರೆಗೆ ನಡೆತರಲು ಪ ಮಥುರೆಗೆ ನಡೆತರಲು ಅತಿ|ಹರುಷದಲಿ ಅಕ್ರೂರನೊಡನೆ| ರಥದಲಿ ಕುಳಿತು ಫಡ ಫಡಫಡಲೆಂದು| ಪಥದಲಿ ನಡಸ್ಯಾಡುತಲಿ 1 ಬಿಲ್ಲಹಬ್ಬದ ನೆವದಲ್ಲಿ|ಫುಲ್ಲಲೋಚನ ಮೋಹನ ಕೃಷ್ಣ| ಇಲ್ಲಿಗೆ ಬಂದನು ಎನುತಲಿ ಕೇಳಲು| ಎಲ್ಲರು ನಡೆದರು ನೋಡಲಾಗಿ 2 ಆಲಯದೊಳಗೆ ನಿಲ್ಲದೇ|ಬಾಲಕಿಯರು ತಮತಮ್ಮ| ಚಾಲವರುತಿಹಾ ತೊಟ್ಟಿಲೊಳಗಿನಾ|ಬಾಲಕರಿಗೆ ಮೊಲೆಗುಡದೆ 3 ಒಬ್ಬಳು ಅರೆಯಣ್ಣೆತಲೆಯಲಿ|ಒಬ್ಬಳು ತಿಗರವ ಹಚ್ಚಿದ ಮೈಯಲಿ ನಡೆದರು ಸಂಭ್ರಮದಿಂದ4 ಅಚ್ಚಮೈಯಲಿ ಕುಳಿತಿರೆ ಒಬ್ಬಳು|ಬಚ್ಚಲೊಳಗೆ ಮಜ್ಜಕನಾಗಿ ಅಚ್ಯುತನಾತುರದಿಂದಲಿ ಒಬ್ಬಳು ಎಚ್ಚರ ದೇಹದ ಬಿಟ್ಟು ನಡೆದಳು 5 ಎಲೆಳುಶಿಶುವೆಂದು ಬಗಲಿಲಿ|ಅಳತೆಯ ಮಾನವನಿರಿಸಿಕೊಂಡು| ನೆಲೆನೊಡದೇ ನಡೆದಳೊಬ್ಬಳು|ಚೆಲುವ ಕೃಷ್ಣನ ನೋಡಲಾಗಿ6 ಕದವನು ಒತ್ತಿಮುಂದಕ|ಒದಗದಿ ಕೆಲವರು ಮಾಳಿಗೆ ಏರಿ| ಸದಮಲಾನಂದಗ ತಲೆಯನು|ಬಾಗಿ ಪದುಮಕರವ ಮುಗಿದು7 ದಣ್ಣನೆ ನೋಡೀ ನೋಡುತಾ|ಕಣ್ಣುಪಾರಣೆ ಮಾಡಿಕೊಂಡು| ಮುನ್ನಿನ ದೋಷವ ಕರಗುವ ಪರಿಯಲಿ| ಪುಣ್ಯ ಸಾಮಗ್ರಿಯ ಮಾಡಿದರಂದು 8 ಕಂಡಾ ಪರಿಯ ರೂಪವಾ| ಧರಿಸಿಕೊಂಡು ಅಂತರಂಗದಲಿ|ತ್ವರಿತದಿಂದಲಿ ಧ್ಯಾಯಿಸುತಾ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನವನೀತ ಚೋರ ಎಲ್ಲರ ಭುಲ್ಲೈಸಿದಿ ನಂದಕುಮಾರ ಧ್ರುವ ಪರಿಪರಿ ಅಡಿಸಿದಿ ನೀ ಪರನಾರಿಜಾರ ಮರುಳು ಮಾಡಿದಿ ನಮ್ಮ ಗೊಲ್ಲತೇರ ಕರಗೂಡುತಲಿ ತಿಂದ್ಯೋ ನೀ ಪಾಲ್ಮೊಸರ ಆರಿಗೆ ಹೇಳಬೇಕು ನಿನ್ನ ದೂರ 1 ಮಾಡದ ಮಾಡಿದಿ ನೀ ಮನಬಂದ್ಹಾಂಗೆ ಪಡೆದು ಲೋಕದಲುಸುರಗುಡದ್ಹಾಂಗೆ ಹಿಡಿದೇನಂದರ ನೀ ಕೈಗೂಡಿ ಬ್ಯಾಗೆ ತುಡುಗತನ ಮಾಡಿದಿ ನಿನಗಕ್ಕು ಹಾಂಗೆ 2 ಬಿಡಲರಿ ಯೆವು ನಿನ್ನ ತಿಳಿಕೊ ವಿಚಾರ ಮಾಡಲಿಕ್ಕಾಗದು ಇದಕೆ ತಾ ಪರಿಹಾರ ಹಿಡಿದೇವು ನಿನ್ನಾಟ ಕಂಡು ಕಣ್ಣಾರ ಮೂಢ ಮಹಿಪತಿಗಾಯಿತು ತಾ ಮನೋಹರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾ ಕಣ್ಣ ತುಂಬ ನೋಡಿ ನಲಿವೆನು ಲೋಕೇಶ ಶ್ರೀ ವೈಕುಂಠನನ್ನು ಪ ಶರಧಿ ಮಧ್ಯದಲ್ಲಿ ಉರಗಶಯನನಾಗಿ ನಿರುತ ಲಕ್ಷ್ಮೀತಾ ಚರಣ ಪೊತ್ತುತಿರುವವನ್ನ 1 ಸಾರಸೋದ್ಭವನಪಾರಲೀಲೆ ನೋಡಿ ನಾರದ ತುಂಬುರರ ಸಾರಗಾವ ಕೇಳ್ವವನ್ನ 2 ಗರುಡ ಆಂಜನೇಯರು ಮುಂಗಡೆ ಕರವ ಮುಗಿದು ತಾ ಸೇವೆ ಗೈಸುವವನ 3 ಬಿಡದೆ ಭಕ್ತರ ಎಡರುಗಳನು ಹರಿಸಿ ಒಡನೆ ಕಾಯ್ದಿಹ ಒಡೆಯ ಜಾಜೀಹರಿಯ 4
--------------
ಶಾಮಶರ್ಮರು
ನಾ ಕರೆವುದಕಿಂತತಾನಾಗಿ ಕರೆವಳ ಕಂಡರೆ ಸೊಗಸುನಾನೆ ನೀನುನೀನೇ ನಾನುಏನನುಮಾನವೋ ಬಾರೆಂದೆನುತಲಿ ಪ ಕಣ್ಣ ಸನ್ನೆಯ ಮಾಡಿ ಕರೆವುತಬಣ್ಣಿಸಿ ಬೇಟವ ತೋರುತ್ತನಿನ್ನನಾ ಬಿಡೆನೆಂದು ನಗುತ ಮಾತಾಡುತ 1 ನೆಂಟರಿಷ್ಟರು ಕಾಣದಂದದಿ ಬಂದುಗಂಟೆರಡನು ಸಡಲಿಸುತಲಿ ನಿಂದುಬಂಟನಾದರೆ ನೀನೆರೆಬಾರೆಂದು 2 ಕುಂಭ ಕುಚಂಗಳ ತೋರುತ್ತತಾಂಬೂಲವ ಹಸಮಾಡುತ್ತನಂಬುಗೆ ರಾಮೇಶ್ವರನಿದಕೆನುತ 3
--------------
ಕೆಳದಿ ವೆಂಕಣ್ಣ ಕವಿ