ಒಟ್ಟು 1732 ಕಡೆಗಳಲ್ಲಿ , 112 ದಾಸರು , 1287 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಣೇಶ ಪ್ರಾರ್ಥನೆ ನಿರ್ವಿಘ್ನ ನೀಡೋ ನಭದೀಶಾ ಪ ಗಜಮುಖ ಅಗಜ ಅಂಗಜ ಮೃದ್ಭವ ಗಜವರದನ ನಿಜ ದಾಸ 1 ನಾಕಪವಂದ್ಯ ಪಿನಾಕಿಧರನುತ ಏಕದಂತ ದ್ರಿತ ಪಾಶಾ 2 ಶಿರಿಗೋವಿಂದ ವಿಠಲನ ದಾಸರಿಗೆ ನಿಖಿಳ ಭಯ ನಾಶ 3
--------------
ಅಸ್ಕಿಹಾಳ ಗೋವಿಂದ
ಗದ್ಯ ದಂಡಕ ಅಧರ ಚುಬುಕ ದಂತಗಳ 10 ಅಗರು ಚಂದನದಮುತ್ತಿನ ಮಲುಕು ಪೆಂಡೆಯಸರ ಕೊರಳಲ್ಲಿಹತ್ತೆಗಟ್ಟಿದ ವಾಗ್ಗೊರಳು ಮುತ್ತುಗಳಮುತ್ತು ಮಾಣಿಕ ನವರತ್ನದ ಚಿಂತಾಕ-ವತ್ತಿ ಸೇರಿದ ಕಂಠಮಾಲೆ ಸರಗಳ 20 ಮಣಿ ತಾಯಿತ್ತುಮೆರೆವ ಹಮ್ಮೀರ ತಾಯಿತಿ ಕಾಂತಿಗಳಕಡಗ ಕಂಕಣ ಸುರಿಗೆ ಬಿಚ್ಚು ಬಳೆಗಳುಹಿಡಿವುಡಿಯಲ್ಲಿ ವಜ್ರದ ಥಳವುಗಳಕಡು ಮೋಹವಾದ ಮುರುಡಿಯ ಸರಪಣಿಝಡಿವ ಮುಂಗೈಯ ಮುರಾರಿ ಕವಡೆಯ30 ನೀಲ ವೈಜಯಂತಿ ಮಾಲೆ ಶೋಭಿಸುವ 40 ಕದಳಿ ನಖ ಚಂದ್ರಿಕೆಯ 50 ಕಮಲ ವಾಸವಾಗಿಪ್ಪ ಕೃಷ್ಣನಪದುಮ ಚರಣಕ್ಕೆ ನಮೊ ನಮೊ ನಮೋ ಎಂಬೆ ನಾ. 60
--------------
ವ್ಯಾಸರಾಯರು
ಗಂಧವಾಹನ ಮತವ ಪೊಂದವರು ಹಂದಿನಾಯಿಗಳಾಗಿ ಬಹುಕಾಲ ಕಳೆದಂತೆ ಪ ಇಳೆಯಾಣ್ಮನಿಲ್ಲದಾ ನಾಡು ಶೋಭಿಸದಂತೆ ಜಲವಿಲ್ಲದಾ ವಾಪಿ ಕೂಪದಂತೆ ನಳಿನ ಬಾಂಧವ ಮಿತ್ರನುದಯಿಸದ ದಿನದಂತೆ ಕುಲಹೀನನಾದವರ ಸಂಗಮಾಡಿದಂತೆ 1 ಕೋಣನಾ ಸಮ್ಮುಖದಿ ವೀಣೆ ಬಾರಿಸಿದಂತೆ ಜಾಣತನವಿಲ್ಲದಾಮಾತ್ಯನಂತೆ ವಾನರನ ಕೈಯಲ್ಲಿ ಮಾಣಿಕವ ಕೊಟ್ಟಂತೆ 2 ಶಾಮಸುಂದರನಾಮ ವರ್ಣಿಸದÀ ಕವಿಯಂತೆ ಪಾಮರಗೆ ಪೌರಾಣ ಪೇಳಿದಂತೆ ಕಾಮಾದಿಗುಣ ಬಿಡದೆ ಸನ್ಯಾಸಿಯಾದಂತೆ ಕೋಮಲಾಂಗದ ಸತಿಗೆ ಕ್ಲೀಬ ದೊರಕಿದಂತೆ 3
--------------
ಶಾಮಸುಂದರ ವಿಠಲ
ಗರುಡನೇರಿ ಬಂದ ಸಿರಿರಮಣನು ತಾನು ಪ ಗರುಡನೇರಿ ಬಂದ ಸಿರಿರಮಣನು ತನ್ನ ಶರಣ ಕರುಣದಿ ಪೊರೆಯಲೋಸುಗ ಭರದಿ ಅ.ಪ. ಕರಿರಾಜನು ಅಂದು ಕ್ರೂರ ನಕ್ರಗೆ ಸಿಲ್ಕಿ ತೆರವಿಲ್ಲದೆ ಕೂಗುತ ಚೀರುತಿರಲು ಸುರರು ಮೊದಲಾಗಿ ಸತಿಸುತ ಬಾಂಧವರು ಅರಿತು ಅರಿಯದಂತೆ ತ್ರಾನದಿಂದ್ದಾಗ 1 ಉತ್ತಾನಪಾದನು ಚಿತ್ತದಿ ಮರುಗದೆ ಮತ್ತೆ ಬÁಲನ ಕರೆದು ಮನ್ನಿಸದೆ ಅತ್ತ ಸಾರೆಂದು ಸುರುಚಿ ನೂಕಿದ ಮೇಲೆ ಚಿತ್ತಜನಯ್ಯನ ಸ್ಮರಿಸಿದ ಮಾತ್ರದಿ 2 ನೀಚ ರುಕ್ಮನು ತನ್ನನುಜಾತೆಯನಂದು ಮಾಚಿಸಿ ಶಿಶುಪಾಲಗೀವೆನೆಂದು ಯೋಚಿಸಿ ಮನದೊಳು ಹರಿಯ ದೂರುತಲಿರೆ ತಾ ಚಿಂತೆ ತಾಳಿದ ರುಕ್ಮಿಣಿಯ ಕೈಪಿಡಿಯಲು 3 ಅಕ್ಷಯ ಪಾತ್ರೆಯ ತೊಳೆದು ಪಾಂಚಾಲೆ ಪಕ್ಷಿದೇರನ ಧ್ಯಾನದೊಳು ಕುಳಿತಿರಲು ಭಿಕ್ಷೆ ಬೇಡುತ ಬಂದು ದೂರ್ವಾಸ ಮುನಿಪನು ಶಿಕ್ಷಿಸೆನೆಂದಾಗ ಸತಿಗೆ ಮುಂದೋರದಂದು 4 ಗರುವ ಪಾರ್ಥನು ಅಂದು ಗಂಗಾ ಶಾಪದಲಿ ಅಸುವ ತೊರೆದು ರಣದೊಳು ಬಿದ್ದಿರಲು ಅರಿತು ಮನದೊಳು ಅನಿಲಜನೊಡಗೂಡಿ ಸಿರಿ ರಂಗೇಶವಿಠಲನು 5
--------------
ರಂಗೇಶವಿಠಲದಾಸರು
ಗಾಡಿಯೆತ್ತಲಿಂದ ಬಂದುದೆ ಮಾತ ನಾಡಲರಿಯದಿಪ್ಪ ಹೊಚ್ಚ ಹೊಸ ಹರೆಯದ ಮುಗುದೆಗೀ ಪ ಬಳುಕೆ ಸಿಂಹಮಧ್ಯ ಬಟ್ಟಮೊಲೆಗಳು ಮರೆ ತೋರವಾದ ಬಳವಿ ಮುಡಿಯೊಳಲರು ಹೊಯ್ಯನಿಳೆಯಲುದುರಲು ಜಲಜಮುಖದಿ ಬೆಮರುದೋರೆ ವಲಯಹಾರ ಉರದಿ ಘಲಿರು ಘಲಿರೆನೆ ಆವಕಡೆಯು ಕುಲುಕಿ ಕುಲುಕಿ ನಡೆವ ಈ 1 ಮಿಸುಪ ಮಂದಹಾಸ ಮುಖದಿ ಮಸಗಿದಂತ ಕಾಂತಲಜ್ಜೆ ಮುಸುಕೆ ಮಿಸುಪ ಕದಪಿನಲ್ಲಿ ಎಸೆವ ಓಲೆ ಢಾಳಿಸಿ ಸಸಿನೆ ತಿದ್ದಿ ಉರದಿ ಜರಿಯ ವಸನವನ್ನು ಸಂತವಿಸುತ ಕುಸುರಿಲಂಗ ದಂದವನ್ನು ಎಸಸಿ ಬಿಡುವ ನಡೆವ 2 ಕರವನೊಯ್ಯಗೊಲಿದು ಉರಗಗಿರಿಯ ಮೇಲೆ ಬಾಲಚಂದ್ರ ನಿರಲು ಸೆರಗ ಮರೆಯಮಾಡಿ ಮರಳಿ ಮರಳಿ ನೋಡುತಾ ಸ್ಮರನತಾತ ಸುರನಗರದೆರೆಯ ವೈಕುಂಠಲಕ್ಷ್ಮಿಯರಸನೊಡನೆ ನೆರೆದ ಪರಿಯ ಸಿರಿಯ ಗರುವ ಗಮನದಾ 3
--------------
ಬೇಲೂರು ವೈಕುಂಠದಾಸರು
ಗಾಡಿಯೆತ್ತಲಿಂದ ಬಂದುದೇ ಮಾತ ನಾಡಲರಿಯದಿಪ್ಪ ಹೊಚ್ಚಹೊಸ ಹರೆಯದ ಮುಗುದೆಗೀ ಪ ಬಳುಕೆ ಸಿಂಹಮಧ್ಯ ಬಟ್ಟ ಮೊಲೆಗಳದುರೆ ತೋರವಾದ ಬಳಲುಮುಡಿಯೊಳಲರು ಒಯ್ಯನಿಳೆಯೊಳುದುರಲೂ ಜಲಜಮುಖದಿ ಬೆವರುದೋರೆ ವಲಯತೋರಹಾರ ಉರದಿ ಘಲಿರು ಘಲಿರನುಲಿವ ಕುಲುಕಿ ಕುಲಕಿ ನಡೆವ ಯೀ 1 ಮಿಸುಪ ಮಂದಹಾಸ ಮುಖದಿ ಮಸಗಿದಂತ ಕಾಂತಿ ಲಜ್ಜೆ ಮುಸುಕೆ ಮಿಸುಪ ಕದಪಿನಲ್ಲಿ ಎಸೆವ ಓಲೆ ಢಾಳಿಸೆ ಸಸಿನೆ ತಿದ್ದಿ ಉರದಿ ಜರಿವ ವಸನವನ್ನು ಸಂತವಿಸುತ ಉಸುರಿಲಿಂದ ಗಂಧವನ್ನು ಎಸಸಿಬಿಡುವ ನಡೆವ ಯೀ 2 ಕರವನೊಯ್ಯನೊಲಿದು ರೋಜಗಿರಿಯ ಮೇಲೆ ಬಾಲಚಂದ್ರ ನಿರಲುಸೆರಗಮರೆಯಮಾಡಿ ಮರಳಿಮರಳಿನೋಡುತಾ ಸ್ಮರನತಾತ ಸುರನಗರ ದೆರೆಯ ಲಕ್ಷ್ಮಿಯರಸನೊಡನೆ ನೆರೆದಪರಿಯ ಸಿರಿಯ ಗರುವಗಮನದಾ ಯೀ 3
--------------
ಕವಿ ಲಕ್ಷ್ಮೀಶ
ಗಾಯಿತ್ರಿ ಹಿರಿಮೆ ಹತ್ತು ರೂಪದ ಗಾಯಿತ್ರಿ ನಿನಗೆ ರಂಗದ ತಾನ ಹತ್ತು ರೂಪಗಳಲ್ಲಿ ಕುಣಿಯುತಿಹೆ ನೀನು ಹತ್ತು ಸಲವಾದರೂ ಗಾಯಿತ್ರಿ ಜಪಿಸದಿರೆ ನಿನ್ನಲ್ಲಿ ಭೂಸುರತೆ ಉಳಿಯುವದೆಂತು? 89 ತನ್ನಾಮದರ್ಥವೇ ವ್ಯಾಪ್ತಿರೂಪದ ಮೀನು ಅಮೃತಸವನದಕತದಿ ಕೂರ್ಮನಿಹೆ ನೀನು ಭೂವರಾಹನು ನೀನು ವರೇಣ್ಯನಾಮಕನು ಶತ್ರುಭರ್ಜನದಿಂದ ಭರ್ಗನಾಗಿರುವೆ 90 ಪ್ರಾಣವನು ಮೇಲೆತ್ತಿ ಅಪಾನವನು ಕೆಳಗಿರಿಸಿ ಮಧ್ಯದಲಿ ವಾಮನನು ದೇವ ನೀನಿರುವೆ&ಚಿmಠಿ;ಟಿ, bsಠಿ;91 ಮಹಿಯ ಭಾರವ ತೆಗೆದ ಪರಶುರಾಮನು ನೀನು ಪ್ರಾಣನ ಪ್ರೀತಿಕರ ರಾಮ ನೀನಿರುವೆ 92 ಕಲಿಯುಗದ ದೇವನೇ ಜ್ಞಾನರೂಪದ ಕೃಷ್ಣ ಬುದ್ಧ ನೀನಿರುವೆ ಧರ್ಮ ಪ್ರಸಾರಣಕೆ ಹಯವನ್ನು ಚೋದಿಸುವ ಕಲ್ಕಿನಾಮಕ ನೀನು ತಿಳಿದು ಜಪ ಮಾಡು 93 ಗಾಯನದಿ ರಕ್ಷಿಸುವೆ ಗಾಯಿತ್ರಿಯೇ ನಮಗೆ ಬ್ರಾಹ್ಮತೇಜವನುಳಿಸಿ ರಕ್ಷಿಪುದು ನಮ್ಮ ಗಾಧಿಪುತ್ರನು ತಾನು ಕ್ಷತ್ರಿಯನದಾದರೂ ಬ್ರಹ್ಮರ್ಷಿಯಾಗಿ ಬಾಳಿದನು ನಿಜವೈ 94 ಸಿರಿವರನೆ ನೀನು ಭಾಸ್ಕರನ ಮಂಡಲದಲ್ಲಿ ಕಮಲದಾಸನದಲ್ಲಿ ಶೋಭಿಸುತಲಿರುವೆ ಚಕ್ರ ಶಂಖ ಮಕರಕುಂಡಲಾದಿಗಳಿಂದ ಲೆನ್ನ ಹೃದಯಕೈತಂದು ನೆಲೆನಿಲ್ಲು 95 ನಿನ್ನ ಸೌವರ್ಣ ತೇಜದ ಬೆಳಕಿನಿಂದೆನ್ನ ಆತ್ಮದ ಜ್ಯೋತಿಯನು ಬೆಳಗಿಸುತ ನೀನು ನಿನ್ನನ್ನೆ ಹಂಬಲಿಪ ಭವಬಂಧ ತಪ್ಪಿಸುವ ನಿನ್ನ ಬಳಿಬರುವ ದಾರಿಯನು ತೋರಿಸೆಲಾ 96 ಗಾಯಿತ್ರಿಯ ಜ್ಯೋತಿ ನಂದದಂತಿರಲು ನಾನಷ್ಟಾಕ್ಷರಿಯ ಮಂತ್ರ ಜಪಿಸುವೆನು ನಾನು ವಿದ್ಯುತ್ತಿನದು ರಕ್ಷೆ ನಾರಾಯಣನ ಮಂತ್ರ ಅದರಿಂದ ರಕ್ಷಣೆಯ ಮಾಡುವೆನು ನಾನು 97 ಆತ್ಮರಕ್ಷಕನು ಹರಿ ದೇಹರಕ್ಷಕನು ಹರ ಹರನ ದೇಹವು ಪ್ರಕೃತಿಪಂಚಕದಿ ರಚಿತ ಆತ್ಮದಲ್ಲಿರುವಹಂಕೃತಿಗೊಡೆಯ ಹರ ಹರಿಹರರೇ ದೇಹಾತ್ಮ ರಕ್ಷಣೆಯ ಮಾಡಿ98 ವಿದ್ಯುತ್ತು ಬಿಳಿ ಕಪ್ಪು ಕೆಂಪು ನೀಲಿಗಳೆಂಬ ಐದು ಮುಖ ಹರನಿಗಿಹುದದರಿಂದ ನಾನು ಪಂಚಾಕ್ಷರಿಯ ಮಾಡಿ ಹರನನ್ನು ಧ್ಯಾನಿಸುವೆ ಧರ್ಮಾಯತನದ ದೇಹ ರಕ್ಷಣೆಯ ಮಾಳ್ಪೆ 99 ವೈರಿ ಮನದಲ್ಲೆ ಹುಟ್ಟಿದವ ಮನದೊಡೆಯ ರುದ್ರನನ್ನೇ ಹೊಡೆಯಲೆಂದು ಐದು ಬಯಕೆಗಳೆಂಬ ಬಾಣದಿಂ ಹೊಡೆಯುತಿರೆ ಕಾಮದಹನವ ಹೊಂದಿ ಬೂದಿಯಾದನವ 100 ಆ ಕಾಮನೇ ಮತ್ತೆ ಅಂಗಹೀನನದಾಗಿ ರುದ್ರನನ್ನರ್ಧನಾರೀಶ್ವರನ ಮಾಡಿ ಮನವನ್ನು ಕೆಡಿಸುತಲಿ ಮಾನವರೆಲ್ಲರನು ದುಃಖದಾ ಮಡುವಿನಲಿ ಕೆಡಹುವನು ನಿಜದಿ 101 ದೇಹಸೃಷ್ಟಿಗೆ ಮೂಲ ಮಣ್ಣು ತೇಜವು ನೀರು ಈ ಮೂರು ಮೂರುವಿಧವಾಗಿ ಪರಿಣಮಿಸಿ ಪಾಲನೆಯು ನಡೆಯುವದು ದೇವರಿಂದಲೇ ಇದನು ಉಪನಿಷತಿನಾಧಾರದಿಂದ ಪೇಳುವೆನು 102 ಭಕ್ಷ್ಯಭೋಜ್ಯವು ಲೇಹ್ಯ ಪೇಯವೆಂಬೀ ನಾಲ್ಕು ಪ್ರಾಣದಾಹುತಿಯನ್ನು ನಾವು ಕೊಡುತಿಹೆವು ಅದರಿಂದ ಪಾಕವನು ಮಾಡುತ್ತ ದೇವನವ ಸಪ್ತಧಾತುಗಳನ್ನು ಮಾಡಿ ರಕ್ಷಿಸುವ 103 ತೇಜವದು ವಾಗ್ರೂಪ ತಾಳುವದು ಮತ್ತದುವೆ ಅಸ್ಥಿಮಜ್ಜಗಳಾಗುವವು ನಿಜವ ಪೇಳ್ವೆ ವೈದ್ಯಕೀಯಪರೀಕ್ಷೆಗೊಳಗಾಗಿ ತಿಳಿವೆ ನೀನ್ ಶ್ರುತಿತತ್ವವೆಂದೆಂದು ಸಾರುತಿಹುದಿದನೆ 104 ಮಣ್ಣಿನನ್ನವೆ ಮೊದಲು ಮನವಾಗಿ ಮತ್ತದುವೆ ಮಾಂಸ ರೂಪವ ತಾಳಿ ಮಲವದಾಗುವುದು ನೀರೆ ಮುಖ್ಯ ಪ್ರಾಣ ಮತ್ತೆ ಶೋಣಿತವಾಗಿ ಮೂತ್ರರೂಪವ ತಾಳಿ ಹೊರಗೆ ಹೋಗುವುದು 105 ಸ್ವೇದಜೋದ್ಭಿಜ್ಜ ಮತ್ತಂಡಜ ಜರಾಯುಜಂಗಳು ಎಂಬ ನಾಲ್ಕು ವಿಧ ಜೀವಜಂತುಗಳು ನಾರಾಯಣನು ತಾನು ಜಲವಾಸಿಯಾಗುತಲಿ ಜೀವಜಂತುಗಳನ್ನು ಸೃಷ್ಟಿ ಮಾಡುವನು 106 ನಿನ್ನ ಗುಣದೋಷಗಳ ಪರರೆಂಬ ದರ್ಪಣದಿ ನೋಡಿದರೆ ತೋರುವವು ನಿನ್ನವೇ ತಿಳಿಯೈ ಪರರಲ್ಲಿ ಕಾಣುತಿಹ ದೋಷಗಳನು ತೊರೆಯುತ್ತ ಗುಣಗಳನು ಎಣಿಸುವವ ಲೋಕಮಾನ್ಯ 107 ಊಧ್ರ್ವಮೂಲದ ದೇವನೂಧ್ರ್ವದ ಹಿಮಾಲಯದೊ ಳುತ್ತುಂಗ ನಾರಾಯಣಪರ್ವತದಲಿ ತಾರಕನು ರಾಮನಂತೆಲ್ಲ ನರರನು ತನ್ನ ಬಳಿಗೆ ಕರೆದೊಯ್ಯಲ್ಕೆ ಮೇಲೆ ನಿಂತಿರುವ 108 ಮಧ್ವಗುರುಹೃದಯಭಾಸ್ಕರನು ನಾರಾಯಣನು ಬದರಿಯೊಳಿಹ ನೆಲೆಗೆ ಕರೆಯಿಸುತಲೆಮ್ಮನ್ನು ಸೇವೆಯನು ಕೈಕೊಂಡು ಭಾವಗತನಾಗಿದ್ದು ಪ್ರೇರಿಸಿದನೀಕೃತಿಗೆ ಪ್ರಕೃತಿ ಪರಮಾತ್ಮ&ಚಿmಠಿ;ಟಿbs, ಠಿ; 109 ಆತ್ಮದಲಿ ಒಳಗಿದ್ದು ಅಂತರಾತ್ಮನು ನೀನು ಆತ್ಮದ ಬಹಿರ್ಗತನು ಪರಮಾತ್ಮ ನೀನು ದೇಹದಿಂ ಹೊರಗಿದ್ದು ಕಾಲಾತ್ಮಕನು ನೀನು ನೀನಿಲ್ಲದಿಹ ದೇಶಕಾಲವೆಲ್ಲಿಹುದು? 110 ಮೂರು ನಾಮಗಳಿಹವು ಶ್ರೀನಿವಾಸನೆ ನಿನಗೆ ಅವುಗಳನು ನೆನೆದರೇ ಪಾಪ ಪರಿಹಾರ ಅಚ್ಯುತಾನಂತಗೋವಿಂದನೆನ್ನುವ ನಾಮ ಕೃತದೋಷ ಪರಿಹಾರಕಾಗಿ ಜಪಮಾಳ್ಪೆ 111 ಮಧುರಾಖ್ಯನಾಮವನು ಹಿಂದು ಮುಂದಾಗಿಸುತ ಮಧ್ಯದಕ್ಷರವನ್ನು ಕೈಯಲ್ಲಿಯಿರಿಸು ನಾಮಜಪ ಮಾಡದಿರೆ ಅವನ ಮುಖಕೆಸೆದು ನೀ ನನವರತ ಜಪಮಾಡಿ ಸಿದ್ಧಿಪಡೆ ಮನುಜಾ 112 ಅಣುವಿಂದ ಅಣುವಾಗಿ ಮಹದಿಂದ ಮಹತ್ತಾಗಿ ನಿನ್ನ ದರುಶನವು ಜನರಾರಿಗೂ ಇಲ್ಲ ಮಧ್ಯಕಾಲದಿ ಮಾತ್ರ ದರುಶನವು ವಸ್ತುವಿಗೆ ಅವತಾರ ರೂಪಗಳೆ ಪೂಜಾರ್ಹವಿಹವು 113 ಎಲ್ಲರೂ ಶ್ರೀಹರಿಯ ನೆಲೆಯೆಂದು ನೀನರಿತು ಮಮತೆಯಿಂ ನೋಡುತಲಿ ಸುಖವನನುಭವಿಸು ಹೊಲೆಯನಾದರು ನಿನ್ನ ನಂಬಿ ಮರೆಹೊಕ್ಕಿದರೆ ಕೈಬಿಡದೆ ನೀನವನ ರಕ್ಷಿಸಲೆ ಮನುಜಾ 114 ಹಲವಾರು ಜಾತಿಗಳು ಹಲವಾರು ಮತಗಳಿಹ ವವುಗಳಿಗೆ ಮೂಲಮತ ವೇದಮತವೊಂದೆ ಬೈಬಲ್ ಖುರಾನ್ ಮೊದಲಾದ ಪೆಸರಿಂದದುವೆ ಲೋಕದಲ್ಲೆಲ್ಲು ಪಸರಿಸುತಲಿಹವು 115 ಭವಬಂಧನವ ಕಳೆದು ತನ್ನ ಬಳಿಗೊಯ್ಯುವವ ನೀನಲ್ಲದಿನ್ನಾರು ಹರಿಯೆ ಶ್ರೀರಾಮ ಸಾಂತಾನಿಕದ ಲೋಕಕೊಟ್ಟು ರಕ್ಷಿಸಿದ ಹರಿ ತಾರಕನು ನೀನಿರುವೆ ನೀನೆ ಗತಿ ದೊರೆಯೆನಗೆ 116 ಪರಶುರಾಮನ ರೂಪದಿಂದ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದಿ ನೀನು ಅವನ ಹೃದಯವ ಹೊಕ್ಕು ಮಧ್ವಮತವನು ಜಗದಿ ದೇವ ಪಸರಿಸಿದೆ 117 ಮಿನುಗು ಹುಳಗಳ ಸೃಜಿಸಿ ಬೆಳಕನದರಲ್ಲಿರಿಸಿ ಕಗ್ಗತ್ತಲೆಯ ಕಾಡುಗಳಲಿ ರಕ್ಷಿಸುವೆಯೊ ಅಂತೆಯೇ ನಮ್ಮ ದೇಹದೊಳಗಿದ್ದು ನೀನ್ ಪ್ರತಿಬಿಂಬ ಜೀವವನು ರಕ್ಷಿಸುವೆ ದೇವಾ 118 ಪರಶುರಾಮನು ರಾಮ ಪರಶುರಾಮನು ಕೃಷ್ಣ ನರನು ನಾರಾಯಣನು ವ್ಯಾಸ ಮೊದಲಾಗಿ ಒಂದಾಗಿ ಬೇರೆಯಾಗಿಯೆ ರೂಪ ತಾಳುತ್ತ ಭಕ್ತರಕ್ಷಕನಾಗಿ ದುಷ್ಟವಂಚಕನು 119 ಇಂದ್ರಿಯಂಗಳ ಹೊರಮುಖವಾಗಿ ಸೃಷ್ಟಿಸಿದೆ ಹೃದಯಗುಹೆಯಲ್ಲಿರುವೆ ಕಾಣುವುದದೆಂತು? ಮನದಬಾಗಿಲ ತೆರೆದು ಅಂತರ್ಮುಖದಿ ನೋಡೆ ಪ್ರತ್ಯಗಾತ್ಮನು ನೀನು ಕಾಣುವದು ನಿಜವು 120 ಕುರುಡನಾಗಿಹೆ ನಾನು ಕುರುಡು ಇಂದ್ರಿಯಂಗಳಿಂ ತೋರುಬೆರಳಿಂದ ತೋರಿಸಲು ಬಯಸಿದೆನು ನನಗೆ ಅಂಜನಹಾಕಿ ತೋರು ನಿನ್ನ ಜ್ಯೋತಿ ವಿಶ್ವತಶ್ಚಕ್ಷು ಪರಮಾತ್ಮ ಶರಣೆಂಬೆ 121 ಕೋಟಿ ಗೋದಾನಕ್ಕೂ ಮಿಗಿಲಾಗಿ ಪುಣ್ಯಕರ ನಿನ್ನ ನಾಮದ ಜಪವು ತಾರಕನು ನೀನು ತಿಳಿದ ಗುಣಸಾಗರದ ಹನಿಗಳನು ಹೆಕ್ಕಿ ನಾನ್ ನುತಿಸಿದೆನು ನಿನ್ನನ್ನು ಮುಕ್ತಿದಾಯಕನೆ 122 ಸುಗುಣೇಂದ್ರ ಮೊದಲಾದ ಯತಿವರರ ಪೂಜೆಯಿಂ ಜ್ಞಾನರೂಪದ ನೀನು ಸಂತಸವ ತಾಳಿ ಜ್ಞಾನಭಂಡಾರಿ ಯತಿವರರಿಗೆಲ್ಲರ್ಗೆ ಜ್ಞಾನಾಮೃತವ ಕೊಟ್ಟು ರಕ್ಷಿಸುವೆ ಹರಿಯೇ 123 ಭವದಿ ಬಂಧಿಸಿಯೆನ್ನ ಭಾವಗತನಾಗಿದ್ದು ದುಷ್ಕರ್ಮ ಮಾಡಿಸುತ ಫಲ ಕೊಡುವದೇಕೆ? ಎನ್ನ ಕೈಯಿಂದೆತ್ತಿ ಬಳಿಗೆ ಕರೆದೊಯ್ಯು 124 ಉಚ್ಛ್ವಾಸ ನಿಶ್ವಾಸ ರೂಪದಿಂದೊಳಹೊಕ್ಕು ಆತ್ಮ ಸಂದರ್ಶನವ ಮಾಡುತ್ತ ವಾಯು ಇಪ್ಪತ್ತಒಂದುಸಾಸಿರ ಮತ್ತೆ ಆರ್ನೂರು ಹಂಸಮಂತ್ರದ ಜಪವ ಮಾಡುವನು ದಿನಕೆ 125 ಪರಶುರಾಮನು ರಾಜರೆಲ್ಲರನು ಸಂಹರಿಸಿ ಭೂಮಿಯನು ನಕ್ಷತ್ರಮಂಡಲವ ಮಾಡಿ ವಿಶ್ವಜಿತ್‍ಯಾಗದಲಿ ಕಶ್ಯಪರಿಗೀಯಲದ ಕಾಶ್ಯಪಿಯ ನಾಮವನು ಭೂಮಿ ಪಡೆಯಿತಲಾ 126 ಕಶ್ಯಪರ ತಪದಿಂದ ರಾಜರಿಲ್ಲದ ಭೂಮಿ ಭಾರದಿಂ ಕೆಳಗಿಳಿಯೆ ಊರುವಿಂದೆತ್ತಿ ಅವಳ ಮೊರೆ ಕೇಳಿ ರಾಜವಂಶವನ್ನುದ್ಧರಿಸೆ ಉರ್ವಿನಾಮವ ಪಡೆಯಿತು ಭೂಮಿ ನಿಜವು 127 ವ್ಯಾಸಪುತ್ರನದಾಗಿ ವ್ಯಾಸಪಿತ ನಾನಾಗಿ ವ್ಯಾಸಭವನದ ಒಳಗೆ ಭದ್ರನಾಗಿದ್ದೆ ಈ ಭವನದಿಂದೆನ್ನ ನಿನ್ನ ಭವನಕೆ ಒಯ್ಯು ಅಮೃತಲೋಕದಿ ನಿನ್ನ ಸೇ, ವೆ ಗೈಯ್ಯುವೆನು 128 ರಾಧಿಕಾರಮಣನೆ ಮಧುರಾಪುರಾಧಿಪತಿ ದಾನವಾಂತಕ ಕೃಷ್ಣ ಸತ್ಯಸ್ವರೂಪ ವಿಶ್ವಜ್ಞ ಪೂಜಿತನೆ ರಕ್ಷಿಸೆನ್ನನು ಹರಿಯೇ ಚಿತ್ತದಲಿ ನೆಲೆನಿಲ್ಲು ತಂದೆ ಕಾಪಾಡು 129 ಇಂದ್ರಾಣಿ ತಪಗೈದ ತಾನದಲಿ ಚ್ಯವನಮುನಿ ವೇದಾದ್ರಿ ಎಂಬಲ್ಲಿ ತಪಗೈಯುತ್ತಿದ್ದ ಸ್ವರ್ಣವರ್ಣವನ್ನಿತ್ತು ಕಣ್ಣಿತ್ತ ಸ್ವರ್ಣನದಿ ಹರಿಯುತಿಹುದಿಲ್ಲಿಯೇ ಈಗಲೂ ನಿಜವು 130 ಪ್ರಕೃತಿ ಪ್ರಕೃತಿಯ ಭೇದ ಪ್ರಕೃತಿ ಜೀವದ ಭೇದ ಜೀವ ಜೀವಗಳ ಭೇದ ಮೂರನೇಯದು ಜೀವೇಶ ಭೇದವದು ಪ್ರಕೃತೀಶ ಭೇದವೆಂ ದಿಹವು ಪ್ರಪಂಚದಲಿ ಪಂಚಭೇದಗಳು 131
--------------
ನಿಡಂಬೂರು ರಾಮದಾಸ
ಗಿI. ಲೋಕ ನೀತಿ ಅಮೃತ ಸುರಿದಂತೆ ಸಜ್ಜನರ ಸಂಗ ಅಮೃತ ಸುರಿದಂತೆ ಪ ಅಮೃತುಂಡಿತಿಹ್ಯ ಸಾಮ್ರಾಜ್ಯದಲಿ ಬಂದು ನಮ್ರತೆಯಿಂದಪಮೃತ್ಯು ಗೆಲಿಸುವಂಥ ಅ.ಪ ಮಾಯ ಮುಸುಕು ತೆಗೆಸಿ ನಿರುತ ಕಾಯಕರ್ಮ ಕೆಡಿಸಿ ಭಾವಶುದ್ಧಮಾಡಿ ಸಾವಧಾನವಿತ್ತು ಸಾವು ಹುಟ್ಟಳುಕಿಸಿ ಪಾವನವೆನಿಸುವ ದಿವ್ಯ 1 ಆಶಪಾಶಕಡಿದು ವಿಷಯ ದ್ವಾಸನೆಯನು ತೊಡೆದು ದೋಷರಾಶಿಗಳ ನಾಶಮಾಡಿ ಭವ ಘಾಸಿ ತಪ್ಪಿಸಿ ಮಹ ಶಾಶ್ವತಪದವೀವ2 ಅಡರಿಕೊಂಡು ಬರುವ ಸಂಸಾರ ತೊಡರು ಕಡಿವ ಪೊಡವಿತ್ರಯಂಗಳ ಒಡೆಯ ಶ್ರೀರಾಮನ ಅಡಿದೃಢವಿತ್ತು ಮುಕ್ತಿಗೊಡೆಯನೆನಿಸುವಂಥ 3
--------------
ರಾಮದಾಸರು
ಗುರು ಎಂಥಾ ಗಾರುಡಿಗಗುರುವಿನ ನಂಬಿ ಗುಣವೆಲ್ಲ ಕಳಕೊಂಡೆ ಪ ಶರಣು ಮಾಡೆಂದರೆ ಶರಣು ಮಾಡುತ್ತಲಿರ್ದೆಕರದಲ್ಲಿ ಏನಿತ್ತೋ ಜವೆಯ ಬೂದಿಶಿರದ ಮೇಲೆನ್ನ ಮೈಮೇಲೆ ಎಳೆಯಲು ಶರೀರವಮರೆತೆನೆ ಇದಕೆ ಸಾಕ್ಷಿಯಾದನೆ ಗುರು 1 ಆರು ಇಲ್ಲದುದ ನೋಡಿ ಬೇರೆನ್ನ ಕರೆದೊಯ್ದುಮೋರೆಯನು ಕಿವಿಯೊಳಗಿಟ್ಟು ಮಂತ್ರಿಸಿದನಾರಿ ಬದುಕು ಮನಮಕ್ಕಳನೆಲ್ಲವಸೇರಿ ಸೇರದಂತೆ ಮಾಡಿದನೆ ಗುರು2 ಭವಗೇಡಿ ಕುಲಗೇಡಿ ಸಂಗಗೇಡಿಯಾದೆಇವನ ವಿಶ್ವಾಸದ ಫಲದಲಿಂದಇವನ ಮೇಲೆ ಎನ್ನ ವ್ಯಾಕುಲ ಹತ್ತಿದೆವ್ಯವಹಾರವೆಂಬುದು ಎಡವಟ್ಟಾಯಿತು3 ಮಂತ್ರಿಸಿದ ಕ್ರಿಯೆ ಮರಳಲೀಯದೆ ಎನ್ನಮಂತ್ರ ತಂತ್ರಕ್ಕದು ಬಗ್ಗಲಿಲ್ಲಮಂತ್ರದ ಮಹಿಮೆಯು ಮಹಾಮಹಿಮೆಯುಮಾಂತ್ರಿಕರೊಳಗೆ ದೊಡ್ಡವನಹುದೋ ಗುರು 4 ಇವನ ನಂಬಿದ ಮೇಲೆ ಇವನಂತಲ್ಲದೆಭುವನಕ್ಕೆ ತಿರುಗಿ ತಾ ತಾರೆನೆವಿವರಿಸೆ ಹುರುಳಿಲ್ಲ ಹೇಳಿ ಕೇಳೋದೇನುಭುವನ ರಕ್ಷಕ ಚಿದಾನಂದನೆ ಗುರು 5
--------------
ಚಿದಾನಂದ ಅವಧೂತರು
ಗುರು ಚರಣವನು ಸಂಸ್ಮರಿಸಿರೋ ಪಗುರು ಲಕ್ಷ್ಮಿ ವರಜಾತ | ಗುರು ಲಕ್ಷ್ಮಿಪ್ರಿಯ ತೀರ್ಥ ಚರಣ ಸರಸಿಜ ಭಜಿಸೆ | ಕರಣದಂತರ ಬಾಹ್ಯ ಪರಿಶುದ್ಧಿಯನೆ ಗೈದು | ಜ್ಞಾನ ಭಕ್ತಿಯನಿತ್ತು ಹರಿ ಪೊರೆವ ಸಂತತದಲಿ ಅ.ಪ. ಪೂರ್ವಾಶ್ರಮಾ ನಾಮ | ಭೂವಿಬುಧ ಕೃಷ್ಣಾಖ್ಯ ದೇವರಾಯನ ದುರ್ಗ | ದಾವ ನರಸೀಪುರದಿಆವಾಸಿಸುತ್ತಿರಲು | ಓರ್ವ ಸಖನಿವರ ಜ್ಞಾನಾನುಸಂಧಾನದಾ |ಭಾವ ತಿಳಿಯುತ ಮನದ | ಯಾವ ದೊಂದಭಿಲಾಷೆನೀವು ಸಲಿಸುವುದೆನ್ನೆ | ಆವುದೆನುತಲಿ ಕೇಳೆಯಾವ ಪನಸದ ಫಲವ | ಆಸ್ವಾದು ಮಧು ಒಡನೆಓವಿ ಕರಡಿಯು ಕಲಸಿದ 1 ಅದರ ಪ್ರಾಪುತಿಗಾಗಿ | ಬದಿವನನೊಂದಿನವುಬೆದರದಲೆ ಪೊಗುತಿರಲು | ಎದುರೊಂದು ಶಿಲೆ ಮೇಲೆವದಗಿ ಕಲಸಿದ ಕಂಡು | ಅದರೊಡನೆ ಮರನೇರೆ ಬಂದಿತದು ಮರಿಗಳೊಡನೆ |ಅದಕು ಇವರಿಂಗಾಯ್ತು | ಕದನವೂ ಕೆಲಕಾಲ ಒದಗೆ ಜಯ ವಿಬುಧರಿಗೆ | ಹದುಳದಲಿ ಗೃಹಸೇರಿಮುದದಿಂದ ಶ್ರೀಹರಿಯ | ಪದ ಸ್ಮರಣೆಯಲ್ಲವರು ದಿನಗಳನೆ ಕಳೆಯುತಿಹರು 2 ಯತಿ ಲಕ್ಷ್ಮಿ ವರರಿಂದ | ಯತಿಗಳಾಶ್ರಮ ಪೊಂದಿಹಿತದಿಂದಲಾ ಬೂದಿ | ನೆತ್ಯಾಖ್ಯ ಗ್ರಾಮದಲಿಸ್ಥಿತರಾಗಿ ಶಿಷ್ಯರಿಗೆ | ಹಿತದ ಉಪದೇಶವ ಪ್ರೀತಿಯಲಿ ಮಾಡುತಿರಲು |ಯತಿಗಳಾಶ್ರಮದಲ್ಲಿ | ಮತಿ ವಂತ ವಿಪ್ರೋರ್ವಕ್ಷಿತಿಯೊಳಾ ನಾಕನಿಭ | ಮಂತ್ರ ಮಂದಿರ ಸೇವೆ ಅತಿಹಿತದಲೆಸಗುತಿರೆ | ಯತಿಗಳಾಶೀರ್ವದಿಸೆ ಪಥವಾಯ್ತು ಪ್ರಿಯರಲ್ಲಿಗೇ 3 ಪತಿ ಸೇವೆ | ಯುಕುತನಾಗಿರಲ್ವೊರೆದು ನಾಲ್ವತ್ತು ದಿನ ಮಿತಿಯಲಿ |ಕಕುಲಾತಿ ತೊರೆದು ನಿಜ | ಭಕುತಿಯಿಂ ಗೈವುತಿರೆಲಕುಮಿ ಪ್ರಿಯರಾಚಾರ | ಉಕುತಿಯಲಿ ದುರ್ಭಾವಪ್ರಕಟವಾಗಲು ಮನದಿ | ಬಂಕಪುರ ಮಾರ್ಗವನೆ ತೆರಳಲನುವಾದನೂ 4 ಮತ್ತೆ ನರಹರಿ ತಾನು | ವ್ಯಕ್ತಯಿಂತೈಜಸನುಒತ್ತಿಪೇಳಲು ಬುಧನು | ಮತ್ತೆ ಗುರುಪದಕೆರಗಿಬಿತ್ತರಿಸೆ ತನ್ನಸ್ವಪ್ನ | ವಾರ್ತೆಗಳ ವಿಶ್ವಮಿತ್ರನ ಭಾವವನೆ ತೋರುತ |ಇತ್ತಲಿಂದೆರಡೊರ್ಷ | ಕಿತ್ತಪೆವು ಆಶ್ರಮವಆರ್ಥಿಯಿಂದಿರುತಿರ್ದು | ಹಸ್ತಿವರದನ ಸೇವೆಉತ್ಸಹದಲೆಸಗುವುದೆ | ನುತ್ತಲಾಶೀರ್ವದಿಸಿ ಚಿಂತಿಸುತ್ತಿರೆ ಹರಿಯನು 5 ಗ್ರಾಮದೊಳಗುಳ್ಳ ಖಲ | ಸ್ತೋಮ ಬಂದಡರುತ್ತಭೂಮಿ ಗೋಸುಗ ಕಲಹ | ಸೀಮೆ ಮೀರುತ ಗೈಯ್ಯೆಅ ಮಹಾಯತಿವರ್ಯ | ಭೂಮಿ ಕೃಷ್ಣಾಂಕಿತವುಕಾಮನೆಯ ಬಿಡಿರೆನುತಲಿ | ನೇಮದಲಿ ಘರ್ಜಿಸಲು |ಆ ಮಹಾ ದುಷ್ಟಜನ ಈ ಮರದ ಸಂಪದವ ಕಾಮಿಸುತ ಮನದಲ್ಲಿನೇಮದಿಂ ಪತ್ರೋರ್ವ | ಪಾಮರನ ಒಡನವರು ಯಾಮ ಸಂಜೆಲಿ ಕಳುಹಲು 6 ಪರಿವಾರ ಜನಕೆಲ್ಲ | ಇರುವ ನೆಲೆ ಬಿತ್ತರಿಸಿಸರಿಯುತಲಿ ಸುಕ್ಷೇಮ | ನೆರೆಯ ಸಾರುವುದೆನುತಒರೆಯಲೂ ಕೆಲವರು | ಮರೆಮಾಡಿ ತೃಣ ಬಣವಿ ನೆರೆ ಬಿಡದೆ ಸಾರುತಿರಲು |ವರನಿಶೀ ಸಮಯದಲಿ | ದುರುಳರೆಲ್ಲರು ಮಠಕೆಬರಬರುತ ಕವಣೆಕಲ್ | ನೆರೆಬೀರ್ವ ಜನಗಳೂಉರಿವ ತೃಣ ಬಣವಿಯಂ | ದುರೆ ಜ್ವಾಲೆ ಪರಿಕ್ರಮಣ ಭಯ ಭ್ರಾಂತಿಯಿಂದಿರುತಿರೆ 7 ಸಿರಿ ಹರಿಯ ನಮಿಸುತಿರಲು 8 ಪರಿ | ಚರರಿಘರಸುತ್ತ ಬಲುಪರಿಯ ಹರಿ ಮಹಿಮೆಗಳ | ಒರೆಯುತಾನಂದಾಶ್ರೂ ಸುರಿಸುತವ ಶೇಷನಿಶಿ | ಹರಿಕರುಣ ಸ್ಮರಣೆಯಲಿ ಸರಿಸಿದರು ಶಿಷ್ಯರೊಡನೇ 9 ಗರ ಮಿಶ್ರ | ಯತಿಗೆ ಬಡಿಸೇ ಜೀರ್ಣಿಸುತ ಪಾಪಿ ವಿಪ್ರರ್ಗೆ | ಗತಿಸಿದವು ಅಕ್ಷಿಗಳು ಮೃತ್ಯಂತಲಂದರಾಗಿ 10 ಗರ ಮಿಶ್ರ | ಸತ್ಯವಾದುದ ಕಂಡು ಪ್ರೋಕ್ಷಿಸಲು ಶಂಖದುದಕ |ವ್ಯಕ್ತವಾಯಿತು ಇವರ | ಉತ್ತುಂಗ ಮಹಿಮೆಗಳುಹಸ್ತಿವರದನು ಭೋಜ್ಯ | ವಸ್ತುಗಳ ಸ್ವೀಕರಿಸಿದತ್ತ ಮಾಡಲು ಪುನಃ | ಮತ್ತೆ ಜೀರ್ಣಿಸಿಕೊಂಡು ಹರಿಯನ್ನೆ ಚಿಂತಿಸುತಲಿ 11 ನೆಲೆಸಿರಲ್ಲಬ್ಬುರೊಳು | ಗಳ ಗ್ರಾಹಕರು ಮತ್ತೆಮಿಳಿತರಾಗುತ ರಾತ್ರಿ | ಛಲವ ಸಾಧಿಸೆ ನಿಶಿತಅಲಗು ಕತ್ತಿಯ ಪಿಡಿದು | ನೆಲಕೆ ಯತಿ ಶಿರವನ್ನು ಇಳಹುವ ಮತಿ ಮಾಡಲೂ |ಒಲವಿನಿಂ ಯತಿಯಕುಲ | ತಿಲಕ ವೃಂದಾವನವ ಬಳಸಿ ನಮಿಸಲು ಸಂಜೆ | ಯಲಿ ಪೇಳ್ದ ಬ್ರಹ್ಮಣ್ಯಒಳ ಪೊಗುತಲಾರಾಮ | ನೆಲೆಸೇರಿ ಮಠಸಾರಿ ಎಂದೆನುತ ಎಚ್ಚರಿಸಿದರ್12 ಮತ್ಸರಿಗಳಿನ್ನೊಮ್ಮೆ | ಕುತ್ಸಿತದ ಬುದ್ಧಿ ಮಹಉತ್ಸವದ ಸಮಯದಲಿ | ಹೆಚ್ಚು ಜನ ಸಂಧಿಸಿರೆನೆಚ್ಚಿದ್ದ ಪಾಚಕರು | ಉಚ್ಚಳಿಸಿ ಕೆಲಸಾರೆ ಕೆಚ್ಚಿದೆಯನೇ ತೋರುತ |ಮುಚ್ಚಿಮಠದ್ವಾರಗಳ | ಹೆಚ್ಚುತಲಿ ಪಲ್ಯಗಳ ಮತ್ಸಕೇತನ ಪಿತನು | ಮೆಚ್ಚುವಂದದಿ ಪಾಕಪೆಚ್ಚಿಸುತಲಿ ಹರಿಯ | ಅರ್ಚನೆಯ ಕೈಕೊಂಡು ಮೆಚ್ಚಸಿದರು ಸುಜನರ 13 ಜ್ವರತಾಪದಿಂದೊಮ್ಮೆ | ನೆರೆ ಬಳಲು ವಂತಿರ್ಪಗುರುವರರ ಕಂಡೋರ್ವ | ವರ ಶಿಷ್ಯ ಪ್ರಶ್ನಿಸಲುನೆರೆ ಬದುಕ ಬೇಕೆಂಬ | ಶರಿರವನೆ ತೊರೆವೆ ನೆಂಬೆರಡುಕ್ತಿ ಸಲ್ಲದಿದಕೊ |ನರರಾಡಿ ಕೊಳದಂತೆ | ವರ ಭಿಷಜ ತಾಕೊಟ್ಟವರಗುಳಿಗೆ ನುಂಗುವೆವು | ಹರಿ ಪೂಜೆ ವಿರುದ್ಧಜ್ವರ ಕುಂಟಿ ಧನ್ವಣತ್ರಿ | ವರಮಂತ್ರ ಕೈ ಸೇರಿ ಪರಿಪರಿ ಮೆರೆಯುತಿರಲು 14 ಯತಿವರರ ಮಹಿಮೆಗಳ | ತುತಿಸಲೆನ್ನಳವಲ್ಲಯುಕ್ತಿಯಲಿ ಅಪವಾದ | ಹೊತ್ತು ಕೊಳದಲೆ ಅವರು ಜಿತ ಇಂದ್ರಿಯತ್ವವನು | ಮತಿಮತಾಂ ಸುಜನಕ್ಕೆ ಪ್ರತಿರಹಿತದಿಂ ತೋರುತ |ಹಿತದಿಂದ ಲಾರಾಮ | ಸೇತು ಯಾತ್ರೆಯ ಗೈದುಕ್ಷಿತಿ ಚರಿಸಿ ಬರಬರುತ | ಹಿತಶಿಷ್ಯ ವ್ಯಾಜದಿಂಸತ್ಯ ಧೀರ್ರನು ಚರರ | ಕೃತ ಬಹಿಷ್ಕರ ಗೆಲ್ದು ಶಾಂತತೆಯನೇ ತೋರ್ದರು 15 ವರಲಕ್ಷ್ಮಿ ಪ್ರಿಯ ತೀರ್ಥ | ಕರಗಳಿಂದರ್ಚಿತವುಪರಿಸರಾರ್ಚಿತ ಯೋಗ | ನರಹರಿಯು ವ್ಯಾಸಮುನಿವರದ ಗೋಪತಿ ಕೃಷ್ಣ | ಸಿರಿವ್ಯಾಸಯತಿ ರಚಿತ ಎರಡೇಳು ರಜತ ಪ್ರತಿಮೆ |ಗುರುವರ ಬ್ರಹ್ಮಣ್ಯ | ವರದ ವಿಠ್ಠಲದೇವಸರ್ವಜ್ಞರರ್ಚಿಸಿದ | ವರ ಶರಣ್ಯ ವಿಠಲನುನಿರುತ ಪೂಜಿತವಾಗಿ | ಶರಿರ ಭೌತಿಕ ಬಿಡುವ ವರ ಸಮಯ ತಾನುಸುರಿರೆ16 ಸಂತೈಸಿ ಇತ್ತರಾಶಿಷವ 17 ನೀಲ ಕಾಲ | ವರುಷವನು ಪೈಂಗಳವು | ಎರಡೊಂದನೇ ಮಾಸವರಶುಕ್ಲ ಹರಿದಿನದಿ | ಸರಿತು ವರ ಕಣ್ವತಟಪರಮ ಸುಕ್ಷೇತ್ರದಲಿ | ವರಯೋಗ ಮಾರ್ಗದಲಿ ದೇಹ ಹರಿಗರ್ಪಿಸಿದರು 18 ಜಯ ಜಯತು ಶುಭಕಾಯ | ಜಯಜಯತು ತಪಶೀಲಜಯ ಶಮೋದಮವಂತ | ಜಯ ಶಾಪನುಗ್ರಹನೆಜಯಲಕ್ಷ್ಮಿ ವರಜಾತ ಜಯಲಕ್ಷ್ಮಿ ಪ್ರಿಯ ತೀರ್ಥ ಜಯ ಜಯತು ವಿಶ್ವಮಿತ್ರ |ಪ್ರಿಯ ಗುರುಗಳಾಂತರ್ಯ | ಜಯ ದೇವ ನೋಳ್ಪರಮಪ್ರಿಯನಾದ ತಂದೆ ಮುದ್ದು | ಮೋಹನ್ನ ವಿಠಲಾತ್ಮಜಯ ಗುರೂ ಗೋವಿಂದ | ವಿಠ್ಠಲನ ಭಜಿಸಿದರೆ ನಯಸುವನು ಪರಮಗತಿಗೆ 19
--------------
ಗುರುಗೋವಿಂದವಿಠಲರು
ಗುರು ಸತ್ಯಜ್ಞಾನರ ಚರಣ ದರುಶನದಿ ನೂರಾರು ಜನ್ಮ ಪಾವನವಾಯಿತು ಮುದದಿ ಪ ಗುರುಗಳುಪದೇಶದಿಂ ಪರಮ ಪಾವನನಾದೆ ನರಹರಿಯ ಭಜಿಸುವ ಅಧಿಕಾರಿಯಾದೆ ಗುರುಮಧ್ವರಾಯರಾ ಗ್ರಂಥಶ್ರವಣಾದಿಗಳ ನಿರುತದಲಿ ಮಾಡುವುದಕರ್ಹನಾದೆ 1 ಗುರುಗಳುಪದೇಶವಿಲ್ಲದೆ ಮಾಡುವ ಮಂತ್ರ ಗುರುಗಳುಪದೇಶವಿಲ್ಲದ ಜ್ಞಾನವು ಗುರುಗಳುಪದೇಶವಿಲ್ಲದ ಕರ್ಮಕವನಗಳು ಉರಗವಾಸದಂತೆ ಕಾಣಯ್ಯ 2 ಅಂಕಿತವಿಲ್ಲದಾ ಪದ್ಯಗಳು ಶೋಭಿಸವು ಅಂಕಿತವು ಇಲ್ಲದಿರಬಾರದೆನುತಾ ಪಂಕಜನಾಭ ಹನುಮೇಶ ವಿಠಲನೆಂಬೊ ಅಂಕಿತವನಿತ್ತಾ ಗುರುವು ಮಾಡಿ ಮಮತಾ 3
--------------
ಹನುಮೇಶವಿಠಲ
ಗುರು ಸಾರ್ವ _ ಭೌಮಾ ದೊರಕಿಸುತ ಹರಿಕರುಣ ಪೊರೆ ರಾಘವೇಂದ್ರಾ ಪ ಅಂದು ಹರಿ ತವಶರದಿ ಕರ ಪೊರೆದಂತೆ ನಂದಿ ಸುತ ದುರಿತೌಘ ಇಂದೆನಗೆ _ ಮೈದೊರು ಗುರುವೇ ಕುಂದು ಮಯ ಕಲಿಯೊಳಗೆ ಕಂದುತಿಹ ಕಂದರನು ತಂದೆ ಗುರು ಕಾಯದಿರೆ ಮುಂದು ಬರೆ ಆಗುವದೆ ಸ್ವಾಮೀ 1 ಕತ್ತಲೆಯು ಸುತ್ತಿಹುದು ಮುತ್ತಿಹವು ಕುತ್ತುಗಳು ಬತ್ತಿಹವು ಶಕ್ತಿಗಳು ಹತ್ತವೈ ಚಿತ್ತದೊಳು ಏನೂ ಎತ್ತುಗಳ ತೆರದಂತೆ ಸುತ್ತುತಲಿ ಭವದಲ್ಲಿ ಭಕ್ತಿಯನು ಕಾಣದಲೆ ಮೃತ್ಯುವಿಗೆ ತುತ್ತಾಹೆ ನಲ್ಲೋ 2 ಪರಿಪರಿಯ ಹರಕೆಗಳ ಪೂರೈಸಿ ಭಕುತರಿಗೆ ನಿರುತದಲಿ ಪೊರೆವವಗೆ ಭಾರವೇ ನಾ ನೊಬ್ಬ ಧೊರೆಯೇ ಗುರು ಸೇವೆ ಮಾಡರಿಯೆ ಬರಿ ಮೂಢ ಕಡು ಪಾಪಿ ಶಿರವಿಡುವೆ ಚರಣದಲಿ ಕರುಣಾಳು ಭರವಸೆಯೆ ನನಗೇ 3 ಪ್ರಹ್ಲಾದ ಬಲಿತಾತ ಬಾಹ್ಲೀಕ ಕುರುಪೋಷ ಶ್ರೀ ಹರಿಯು ಗುರುಭಕ್ತಿ ವಾಹಿನಿಯ ಹರಿಸೈಯ ಸತ್ಯಸಂಧಾ ದೇಹದಲಿ ಬಲವಿಲ್ಲ ಈಹಗಳು ಬಿಡದಲ್ಲ ಬಾಹಿರನು ನಿನಗಲ್ಲ ತ್ರಾಹಿ ಗುರು ನೀ ಬಲ್ಲೆ ಎಲ್ಲಾ4 ಶ್ರೀ ಮಧ್ವ ಗುರು ಚೇಲ ತಾಮಸರ ನಿರ್ಮೂಲ ಶ್ರೀಮಂತ ಗುಣಮಾಲ ಶ್ರೀ ಮನೋಹರ ಕೃಷ್ಣವಿಠಲ ಯಜಕಾ ಕಾಮಿತಾ ಫಲದಾತ ನೇಮದಲಿ ಹರಿನಾಮ ನುಡಿಸೆಂಬೆ ಸತತಾ 5
--------------
ಕೃಷ್ಣವಿಠಲದಾಸರು
ಗುರು ಹೊಂದಿದವನೀಗ ಎಂದಿಗೂ ಕೆಡನುಮರಳಿ ಹುಟ್ಟಿದರೇನು ಗುರುವು ಕಾಯುವನು ಪ ಗುರು ಹೇಳಿದಂತಿರದೆ ಗುರು ಆಜ್ಞೆಯಂತಿರದೆಬರಿಯ ಪ್ರಾಪಂಚದ ನಡೆಯನೆ ನಡೆದುಮರೆತೆಯಾದರೇನು ಗುರು ಕರುಣ ತಾನದುವೆನರಕಕ್ಕೆ ಕಳುಹದೋ ಯಮನ ಸೇರಿಸದೋ 1 ತನ್ನ ಅವಗುಣದಿ ಜನ್ಮಗಳ ಸೇರಿದರೇನುಅನ್ಯಕೆ ಎಳಸದದು ಸೋಂಕಿನಲಿ ಮನವುಚೆನ್ನಾಗಿಯೇ ಗುರುದ್ವಾರವನು ಕಾದಿಹನುಭಿನ್ನಿಸದೆ ಪರತತ್ವ ಬೋಧೆ ಹೇಳುವನು 2 ಭ್ರಷ್ಟತ್ವದಿಂ ತನ್ನ ಪಾಪವನು ಉಣುತಲಿಹುಟ್ಟುತಿಹ ಹಂದಿ ಪಶುವಾಗಿ ತಾನುಘಟ್ಯಾಗಿ ನರಜನ್ಮ ಧರಿಸುತ್ತ ಕಡೆಯಲಿಶಿಷ್ಟ ಚಿದಾನಂದ ಬಗಳೆಯನು ಕೂಡುವನು 3
--------------
ಚಿದಾನಂದ ಅವಧೂತರು
ಗುರುದತ್ತ ದಿಗಂಬರ ಸ್ತುತಿ ಈಸಲಾರೆ ಗುರುವೆ ಸಂಸಾರಶರಧಿಯ ಮೋಸದಿಂದ ಬಿದ್ದು ನಾನು ಘಾಸಿಯಾಗಿ ನೊಂದೆ ಗುರುವೆ ಪ ಗುರುವೆ ಬೇರೆ ಗತಿಯ ಕಾಣೆ ನೀನೆಗತಿ ದಿಗಂಬರೇಶ ಮರಯ ಹೊಕ್ಕೆನಿಂದು ನಿಮ್ಮ ಚರಣ ಕಮಲವ ತರುಣ ದಿಂದಲೆನ್ನ ಭವದ ಶರಧಿಯನ್ನು ದಾಟುವಂಥ ಪರಿಯನೊರೆದು ನಾವೆಯಿಂದ ದಡವ ಸೇರಿಸೋ 1 ಮಡದಿ ಮಕ್ಕಳೆಂಬುದೊಂದು ನೆಗಳುಖಂಡವನ್ನು ಕಚ್ಚಿ ಮಡುವಿಗೆಳೆದು ತಿನ್ನು ತಾವೆ ತಡೆಯಲಾರೆನು ನಡುವೆ ಸೊಸೆಯು ಎಂಬನಾಯಿ ಜಡಿದು ಘೋರ ಸರ್ಪದಂತೆ ಕಡಿಯೆ ವಿಷಮ ನೆತ್ತಿಗಡರಿ ಮಡಿವಕಾಲ ಬಂದಿತು 2 ಹಲವು ಜನ್ಮದಲ್ಲಿ ಬಂದು ಹಲವು ಕರ್ಮವನು ಮಾಡಿ ಹಲವು ಯೋನಿಯಲ್ಲಿ ಹುಟ್ಟಿ ಹಲವು ನರಕವ ಹಲವು ಪರಿಯ ಲುಂಡು ದಣಿಯ ನೆಲೆಯ ಗಾಣದೆನ್ನಜೀವ ತೊಳಲಿತಿನ್ನುಗತಿಯ ಕಾಣೆ ಗುರು ಚಿದಂಬರ 3 ಕಾಲವೆಲ್ಲಸಂದು ತುದಿಯಕಾಲ ಬಂತು ಕಂಡ ಪರಿಯೆ ತಾಳಿ ಕಿವಿಗೆ ಊದ್ರ್ವಗತಿಗೆ ಪೋಪಮಂತ್ರವನ್ನು ತಿಳಿಸಿ ನಿರಾಳ ವಸ್ತುವನ್ನು ತೋರೋವರ ದಿಗಂಬರಾ 4 ಆಸೆಯೆಂಬ ನಾರಿಯನ್ನು ನಾಶಗೈದು ಗುರುವಿನಡಿಗೆ ಹಾಸಿತನುವ ದಡದಂತೆ ಬೇಡಿಕೊಂಡೆನು ಈಸ ಮಸ್ತಲೋಕವನ್ನು ಪೋಷಿಸುವ ಲಕ್ಷ್ಮೀಪತಿಯ ದಾಸಗಭಯವಿತ್ತು ಕಾಯೋವರ ದಿಗಂಬರ 5
--------------
ಕವಿ ಪರಮದೇವದಾಸರು
ಗುರುಮಧ್ವಮುನಿರಾಯಾ ಎನಗೊಂಬೊದಗಿದಾನು ಸಹಾಯ ಪ ಕತ್ತಲೆ ಕವಿದಿತ್ತು ಸುತ್ತಲೆ ಕಾಣದಂತೆ ಇತ್ತು ಬಟ್ಟೆ ದೃಶ್ಯವಿತ್ತು ಮತ್ತುರೆ ಭವತಮ ಸುತ್ತಲೆ ಮುಸುಕಿರೆ ಉತ್ತಮಾನಂದತೀರ್ಥ ಬಿಡು ಉದಯಸಿದಾ 1 ಹರಿಬೀಜಾವರಿ ಅಲ್ಲಾ ಧರೆಯೊಳು ಸದ್ಗತಿ ದೊರಿಲಿಲ್ಲಾ ಗುರುವೇ ಇರಲಿಲ್ಲಾ ಧರೆಯೊಳು ಹರಿಯನಾವ ಬಲ್ಲ ಸುರರೊಳು ಸುರತರುವರ ವಾಡ ಸೂನು ಧರೆಯೊಳವತರಿಸಿ ಹರಿಪಥ ತೋರಿದಾ 2 ಎಲ್ಲ ರೋಗಕೆ ಮದ್ದು ಸಲ್ಲುವದಿವರ ನಾಮ ಮುದ್ದು ಹುಲ್ಲಜನರ ಸದ್ದು ನಿಲ್ಲದೆ ಪೋದಿ ತಡವಿ ಬಿದ್ದು ಬಲ್ಲಿದ ನರಸಿಂಹ ವಿಠಲನ ನೆನೆಯಲು ಎಲ್ಲ ಕಾಮಿತಫಲ ನಿಜವೆಂದರುಹದಾ 7
--------------
ನರಸಿಂಹವಿಠಲರು