ಒಟ್ಟು 1908 ಕಡೆಗಳಲ್ಲಿ , 102 ದಾಸರು , 1280 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ಎಂಥಾ ಗಾರುಡಿಗಗುರುವಿನ ನಂಬಿ ಗುಣವೆಲ್ಲ ಕಳಕೊಂಡೆ ಪ ಶರಣು ಮಾಡೆಂದರೆ ಶರಣು ಮಾಡುತ್ತಲಿರ್ದೆಕರದಲ್ಲಿ ಏನಿತ್ತೋ ಜವೆಯ ಬೂದಿಶಿರದ ಮೇಲೆನ್ನ ಮೈಮೇಲೆ ಎಳೆಯಲು ಶರೀರವಮರೆತೆನೆ ಇದಕೆ ಸಾಕ್ಷಿಯಾದನೆ ಗುರು 1 ಆರು ಇಲ್ಲದುದ ನೋಡಿ ಬೇರೆನ್ನ ಕರೆದೊಯ್ದುಮೋರೆಯನು ಕಿವಿಯೊಳಗಿಟ್ಟು ಮಂತ್ರಿಸಿದನಾರಿ ಬದುಕು ಮನಮಕ್ಕಳನೆಲ್ಲವಸೇರಿ ಸೇರದಂತೆ ಮಾಡಿದನೆ ಗುರು2 ಭವಗೇಡಿ ಕುಲಗೇಡಿ ಸಂಗಗೇಡಿಯಾದೆಇವನ ವಿಶ್ವಾಸದ ಫಲದಲಿಂದಇವನ ಮೇಲೆ ಎನ್ನ ವ್ಯಾಕುಲ ಹತ್ತಿದೆವ್ಯವಹಾರವೆಂಬುದು ಎಡವಟ್ಟಾಯಿತು3 ಮಂತ್ರಿಸಿದ ಕ್ರಿಯೆ ಮರಳಲೀಯದೆ ಎನ್ನಮಂತ್ರ ತಂತ್ರಕ್ಕದು ಬಗ್ಗಲಿಲ್ಲಮಂತ್ರದ ಮಹಿಮೆಯು ಮಹಾಮಹಿಮೆಯುಮಾಂತ್ರಿಕರೊಳಗೆ ದೊಡ್ಡವನಹುದೋ ಗುರು 4 ಇವನ ನಂಬಿದ ಮೇಲೆ ಇವನಂತಲ್ಲದೆಭುವನಕ್ಕೆ ತಿರುಗಿ ತಾ ತಾರೆನೆವಿವರಿಸೆ ಹುರುಳಿಲ್ಲ ಹೇಳಿ ಕೇಳೋದೇನುಭುವನ ರಕ್ಷಕ ಚಿದಾನಂದನೆ ಗುರು 5
--------------
ಚಿದಾನಂದ ಅವಧೂತರು
ಗುರು ಚರಣ ಮ'ಮೆಯನು ಗಣಿಸಿ ಬದುಕುವೆನುದುರಿತಾಂಧಕಾರಕ್ಕೆ ದಿವ್ಯ ಭಾನುವನೂ ಪನಿತ್ಯವಾಗಿರುವುದನು ನಿಜ ಸುಖಾತ್ಮಕವನ್ನುಸತ್ಯದಲಿ ಸರ್ವವನು ಸಲ' ತೋರ್ಪುದನುಅತ್ಯಂತ ಕಾಂತಿುಂದಾಢ್ಯತರವೆನಿಪುದನುುತ್ತೆನ್ನ ಮಸ್ತಕವನಿದನೆ ನಂಬುವೆನು 1ಅರಿ'ನತಿಘನವಾಗಿಯಜ್ಞಾನವಳಿವುದನುಅರಿಕೆಯನು ಜನರಿಗಿತ್ತದನು ನಿಲಿಪುದನುಬೆರೆದು ಕರಣಗಳಲ್ಲಿ ಬೇರಾಗಿ ಹೊಳೆವದನುಬರಿಯ ಭ್ರಾಂತಿಯ ಬಿಡಿಸಿ ಭಾಗ್ಯ'ೀವುದನು 2ನಿರುಪಮ ನಿಜಾನಂದ ನಿರ್'ಕಲ್ಪಕವನ್ನುಶರಣಾಗತರ ಕಾಯ್ವ ಸುರಧೇನುವನ್ನುತಿರುಪತಿಯ ವೆಂಕಟನ ತತ್ವದತಿಶಯವನ್ನುಧರಿಸಿರುವ ಗುರು ವಾಸುದೇವರಡಿಯನ್ನು 3ಓಂ ವಾಸುದೇವಾಯ ನಮಃ
--------------
ತಿಮ್ಮಪ್ಪದಾಸರು
ಗುರು ಮಧ್ವೇಶ ವಿಠಲ | ಪೊರೆಯ ಬೇಕಿವಳ ಪ ಪರಮ ಭಕುತಿಲಿ ನಿನ್ನ | ದಾಸ್ಯ ಕಾಂಕ್ಷಿಪಳ ಅ.ಪ. ಹರಿಗುರೂ ಸದ್ಭಕ್ತಿ | ಹಿರಿಯರಲಿ ಅಸಕ್ತಿನಿರುತ ಕರುಣಿಸಿ ಇವಳ | ಪೊರೆಯೊ ಹರಿಯೇ |ಅರುಹ ಲೇನಿಹುದಿನ್ನು | ಸರ್ವಜ್ಞ ನೀನಿರುವೆಕರುಣದಲಿ ಪೊರೆಯೆಂದು | ಪ್ರಾರ್ಥಿಸುವೆ ಹರಿಯೇ 1 ಕೃದ್ಧಖಳ ಜನರನ್ನು | ಪ್ರಧ್ವಂಸ ಮಾಡುತಲಿಬುದ್ಧಿಯೊಳು ನೀ ನಿಂತು | ವಿದ್ಯೆ ಪ್ರದನಾಗೋಮಧ್ವಮತ ಪದ್ಧತಿಗಳುದ್ಧರಿಸಿ ಇವಳಲ್ಲಿಪದ್ಮನಾಭನೆ ಪೊರೆಯೊ | ಮಧ್ವಾಂತರಾತ್ಮಾ 2 ಕಂಸಾರಿ ಹರಿಯೇ 3 ನಿನ್ನ ಪ್ರೇರಣೆಯಂತೆ | ಕನ್ಯೆಗಂಕಿತವಿತ್ತೆನನ್ನೆಯಿಂ ಪೊರೆಯಿವಳ ಪನ್ನಂಗ ಶಯನಾ |ನಿನ್ನಂಥ ಕರುಣಾಳು | ಅನ್ಯರಾರಿಹರಯ್ಯಪನ್ನಗಾರಿಯ ವಾಹ | ಅನ್ನಂತ ಮಹಿಮಾ 4 ಪಾವನಾತ್ಮಕ ದೇವ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ಶರ್ವವಂದ್ಯಾ ಭಾವದೊಳು ಮೈದೋರಿ | ಕಾವ್ಯದನೆ ಬಿನ್ನಪವಾನೀ ವೊಲಿದು ಸಲಿಸೊ ಗುರು | ಗೊವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗುರು ರಾಘವೇಂದ್ರ ತವ ಚರಣ ದರುಶನಕೆ ಬರಲಿಲ್ಲವೆಂದು ಕೋಪವ ಮಾಡ್ವದ್ಯಾಕೊ ಪ ಧನವಿಲ್ಲ ಕೈಯೊಳಗೆ ತನುವಿನಲಿ ಬಲವಿಲ್ಲಾ ಅನುಕೂಲವಿಲ್ಲವೊ ಎನ್ನ ಮನೆಯೊಳಗೆ ಘನ ಸುಪ್ರಯಾಸ ನಿನ ದಾಸಗೊದಗಿದ ಮೇಲೆ ಎನ ಮೇಲೆ ದೋಷವೇನಿರುವದಿದರೊಳಗೆ 1 ಗೆಲುವಿಲ್ಲ ಮನದೊಳಗೆ ಫಲವಿಲ್ಲ ಸಂಸಾರ ಬಲೆಯೊಳಗೆ ಸಿಲುಕಿ ನಾ ಬೇಸತ್ತೆನೋ ಹಲುಬುವೆನೊ ದಾರಿದ್ರ್ಯ ಬವಣೆಯನು ತಪ್ಪಿಸಿ ಸುಲಭ ಸಾಧನೆ ಪೇಳಿ ಸಲಹೊ ಗುರುವರನೇ2 ಒಂದು ಬಗೆಯನು ತೋರೋ ಇಂದೇ ನಾ ಹೊರಡುವೆನೂ ಛಂದದಿಂದಲಿ ಪರಿವಾರ ಸಹಿತಾ ತಂದೆ ಹನುಮೇಶ ವಿಠಲನ ಕಂದನೆ ನಿನ್ನ ಬಂದು ನೋಡುವೆ ಮಾಡ್ವೆ ಸೇವೆ ತವ ದೂತಾ 3
--------------
ಹನುಮೇಶವಿಠಲ
ಗುರುಕೂರ್ಮಚಾರ್ಯರ ಚರಣಕಮಲಯುಗ್ಮ ಮಾನವ ಪ ಧರಣಿಯೊಳಗೆ ಸುಕ್ಷೇತ್ರಗಾಲವ ಪುರದಿ ಶ್ರಿ ನರಶಿಂಹಾ ಚಾರ್ಯರ ತರುಣಿಯಳ ಗರ್ಭಾಬ್ಧಿಯಲಿಹಿಮ ಕರನ ತೆರದಲಿ ಜನಿಸಿಮೆರೆದ ಅ.ಪ ವರಕೊಲ್ಹಾಪುರದಿ ಪೋಗಿರಲು ಸುಂದರವಾದ ಸಿರಿಯರೂಪವ ಕಾಣುತ್ತ ಅರಿತು ಪ್ರಾರ್ಥಿಸಲು ಶ್ರೀ ನರಶಿಂಹಾರ್ಯರಿಗೊಲಿದು ಕರುಣದಿಂದಲಿ ಕೊಟ್ಟಂಥ ಚರಣಕವಚ ಸ್ವರಣ ಸಂಪುಟದಲ್ಲಿ ನಿರುತ ಪೂಜೆಯ ಮಾಡುತ್ತ ಪ್ರವಚನಾಸಕ್ತ ಧರೆಯೊಳಗೆ ಬಹು ಶರಣು ಜನ ರಘ ತರಿದು ಸೌಖ್ಯವ ಗರಿವುದಕೆ ಸಂ ಚರಿಸುತಲಿ ಸಚ್ಛಾಸ್ತ್ರ ಮರ್ಮವ ನರುಹಿಜನರನುದ್ಧರಿಸಿದಂಥ 1 ಪೊಳೆವ ಫಾಲದಿ ಪುಂಡ್ರ ತಿಲಕ ಮುದ್ರಾಕ್ಷತಿ ವಿಲಸಿತ ಶುಭಗಾತ್ರದಿ ಅಲವ ಬೋಧರ ಮತದೊಳು ತತ್ವಬೋಧಕ ಸುಲಲಿತೋಪನ್ಯಾಸದಿ ಬಲು ವಿಧಾರ್ಥವ ಪೇಳಿಕುಳಿತಪಂಡಿತರನ್ನು ಒಲಿಸುತಿರೆ ಪೂರ್ವದಿ ಪಂಢರಪುರದಿ ಭವ ಮುದ್ಗಲಾಚಾರ್ಯರಿ ಗೊಲಿದು ಬಂದಿಹ ಚಲುವ ವಿಠ್ಠಲ ಮೂರುತಿಯ ಪದ ಜಲಜ ಮಧುಕರರೆನಿಸಿದಂಥ 2 ಜಡಜಾಪ್ತನುದಯದಿ ನಡೆದು ದ್ವಿಜಗೃಹದೇವ ರಡಿ ಗೊಂದನೆಯ ಮಾಡುತ್ತ ಎಡೆಬಿಡದಲೆ ತಮ್ಮ ಅಡಿಗೊಂದಿಸುವ ಭಕ್ತ ಗಡಣವ ಮನ್ನಿಸುತ ಬಿಡದೆ ಶತತ್ರಯ ಕೊಡ ಜಲದಲಿ ಸ್ನಾನ ದೃಢಮನದಲಿ ಮಾಡುತ್ತ ತಂತ್ರ ಸಾರೋಕ್ತ ಎಡಬಲದಿ ಶೇವೆಯನು ಮಾಡುವ ಪೊಡವಿಸುರಕೃತ ವೇದ ಘೋಷದಿ ಜಡಜನಾಭನ ಪೂಜಿಸುವ ಬಹು ಸಡಗರವ ನಾನೆಂತು ಬಣ್ಣಿಪೆ 3 ಭೂತಲದಲಿ ಶ್ರೇಷ್ಠವಾತ ಮಾತಾಂಬುಧಿ ಶೀತ ಕಿರಣನೆನಿಸಿ ಪ್ರಾತರಾರಭ್ಯ ಶ್ರೀನಾಥನೆ ಪರನೆಂಬೊ ಶಾಸ್ತ್ರದಿ ಮನವಿರಿಸಿ ಖ್ಯಾತ ಸತ್ಯಧ್ಯಾನ ತೀರ್ಥರೆಂಬುವ ಗುರು ಪ್ರೀತಿಯ ಸಂಪಾದಿಸಿ ಪುತ್ರರಿಗೆ ಬೋಧಿಸಿ ಪ್ರೀತಿಯಲಿ ಶಿಷ್ಯರಿಗೆ ಭಗವ ದ್ಗೀತೆಯನು ಪ್ರತಿದಿನದಿ ಪೇಳುತ ಪಾತಕವ ಪರಿಹರಿಸಿ ಪರಮ ಪು- ನೀತ ಗಾತ್ರರ ಮಾಡಿ ಸಲಹಿದ 4 ಧರೆಯೊಳಧಿಕಮಾದ ಗಿರಿ ವೇಂಕಟೇಶನ ದರುಶನವನೆ ಕೊಳ್ಳುತ ಗುರುವಾಜ್ಞೆಯಲಿ ಬಂದು ವರ ಸಭೆಯೊಳು ತಮ್ಮ ಪರಿವಾರದಿಂದಿರುತ ವರಷ ಶಾರ್ವರಿಯೊಳು ವರ ಮಾಘ ಪ್ರತಿಪದ ಬರಲು ಧ್ಯಾನವ ಮಾಡುವ ಹರಿಪದಾಸಕ್ತ ಪರಮ ಭಕುತಿಯಲಿಂದ ಶೇವಿಪ ಶರಣು ಜನ ಮಂದಾರ ನೆನಿಸುತ ಮೆರೆವ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ 5
--------------
ಕಾರ್ಪರ ನರಹರಿದಾಸರು
ಗುರುಜಗನ್ನಾಥಾರ್ಯ ಕರುಣಿಸಯ್ಯ ಮೊರೆ ಹೊಕ್ಕೆ ತ್ವತ್ವದಕೆ ಮರೆಯದಲೆ ಪಿಡಿಕೈಯ್ಯ || ಪ್ರಹ್ಲಾದನನುಗ್ರಹವು ಎಲ್ಲ ಕಾಲದಲಿ ನಿ ನ್ನಲ್ಲಿ ಸುಂಪೂರ್ಣವಾಗಿರುವದೆಂಬಾ ಸೊಲ್ಲು ಲಾಲಿಸಿ ನಿನ್ನ ಪಲ್ಲವಾಂಘ್ರಿಗೆ ನಮಿಪೆ ಬಲ್ಲಿದನೆ ಹರಿಧ್ಯಾನದಲ್ಲಿ ನಿಲ್ಲಿಸು ಮನವ 1 ಕನಕಾಗ್ರ ಜಾತಾರ್ಯನೆನಿಸಿ ಜನಿಸುತ ಮಂತ್ರ ಮುನಿ ನಿಲಯ ಮುನಿವರ್ಯ ಶ್ರೀರಾಯಾರಾ ಗುಣಸ್ತವನ ವಿರಚಿಸುತ ಪ್ರಣತರಿಗೆ ಪಠಿಸುತ್ತ ಮನದಿಚ್ಛೆ ಪಡೆವದಕ್ಕೆ ಅನುಕೂಲಿಸಿದ ಜ್ಞಾನಿ 2 ಶ್ರೀ ಶಾಮಸುಂದರ ದಾಸವರ್ಯರ ಉಪ ಕೊಂಡ ಉಪವಾಸನೆಯನು ಲೇಸಾಗಿ ಬಿಡಿದೆ ಪ್ರತಿವಾಸರದಿ ಗೈವಂಥ ಭೂಸುರಾಗ್ರಣಿಯಾದ ಕೋಸಿಗೆಯ ದಾಸಾ 3
--------------
ಶಾಮಸುಂದರ ವಿಠಲ
ಗುರುರಾಯಾ ದೊಡ್ಡವನೈ ಬಲು ಪರೋಪಕಾರಿ | ಪರಿ | ಪರಗತಿಯ ಸಾಧಕರಾಗುವ ಸಹಕಾರಿ | ಬೋಧ ಸುಧೆಯ ಉದಾರಿ | ಯುಕ್ತಿಯ ದೋರುವ ದಾರಿ 1 ಹಲವು ಶಾಸ್ತ್ರದ ಮಾತುಗಳ ಕೇಳಿ ಮುಂಗಾಣದೆ | ತೊಳಲುವ ಮನ ಸಂಶಯವಾ ವಂದು ಮಾತಿನಿಂದೆ | ಕಳೆದನು ದೃಢ ನೆಲೆಗೊಳಿಸಿ ಸ್ವಾನುಭವದಿಂದೆ | ಭವ ತಮ ಮೂಲದಿಂದಲೇ | ಬೆಳಗವ ದೋರುವ ತಂದೇ2 ಮೂಢ ಪಾಮರ ಮಂದಧಿಯನಾನೆಂದರಿಯೆನು | ನೋಡಿ ಕರುಣ ಕಟಾಕ್ಷದಲಿ ಮುಂದಕ ಕರೆದನು | ನೀಡಿ ಅಭಯ ಹಸ್ತವನು ರೂಢಿಯೊಳು ನಂದನೆನಿಸಿದನು | ಮಹಿಪತಿ ತ್ಯಾಜವಿತ್ತನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವರ್ಯರನು ಭಜಿಸೋ ರಾಘವೇಂದ್ರ ಗುರುವರ್ಯರನು ಭಜಿಸೋ ಪ ಧರೆತಲದಲಿ ಅವತರಿಸಿ ಸುಜನರನು ಪರಿಪÀರಿ ವಿಧದಲಿ ಪೊರೆಯುತಲಿರುವ ಸದ್ ಅ.ಪ ನಳಿನನಾಭ ಶ್ರೀರಾಮರ ರುಚಿರ ಪದಗಳ ಸಂತತದಿ ಭಜಿಸಿ ಖಳರ ದುರ್ಮತಗಳನಳಿಸಿ ದಶಪ್ರಮತಿ ಗಳ ದಿವ್ಯ ಶಾಸ್ತ್ರಾರ್ಥಗಳನು ಸುಲಭದಲಿ ಇಳೆಯೊಳು ಸುಜನಕೆ ತಿಳಿಯುವ ತೆರದಲಿ ಬೆಳಗುತಿರುವ ಪರಿಮಳ ಮುಖವರ ಗ್ರಂಥ ಗಳನು ರಚಿಸುತ ಉಳಿಸಿ ಸುಮತಿಯನು ಇಳೆಯೊಳು ವರಮಂತ್ರ ನಿಲಯದಿ ನೆಲೆಸಿದ 1 ಮಂಗಳಕರಳೆಂದು ಚರಿತೆಯುಳ್ಳ ತುಂಗಾತೀರದಿ ನೆಲೆಸಿ ಕಂಗೊಳಿಸುತ ಚರಣಂಗಳ ಭಜಿಪರ ಸಂಘಕ್ಕೆ ತಮ್ಮ ಅಪಾಂಗ ವೀಕ್ಷಣದಿಂದ ಮಂಗಳ ತತಿಗಳ ನೀಡಿ ಅವರ ಆಘ ಭಂಗವಗೈಯುತ ಅನುದಿನದಲಿ ದ್ವಿಜ ಪುಂಗವ ನಿಕರದಿ ಪೂಜೆಯಗೊಂಬ ಉ ತ್ತುಂಗ ಚರಿತರಥಾಂಗಧರ ಪ್ರಿಯ 2 ಮುನ್ನ ಪ್ರಹ್ಲಾದನೆನೆಸಿ ಶ್ರೀ ನರಹರಿಯನ್ನು ಸತತ ಭಜಿಸಿ ಇನ್ನೊಂದು ಜನುಮದಿ ಮಾನ್ಯ ಶ್ರೀ ವ್ಯಾಸಮುನಿ ಯೆನ್ನಿಸಿ ಖಲಮತವನ್ನು ಖಂಡಿಸುತಲಿ ಚಿನ್ನ ಶ್ರೀಕೃಷ್ಣನ ಉನ್ನತ ಮಹಿಮೆಗ ಳನ್ನು ಬೋಧಿಸುತ ತನ್ನ ಭಕುತಜನ ರನ್ನು ಹರುಷದಲಿ ಧನ್ಯರೆನಿಸಿದ ಪ್ರ ಸನ್ನ ಶ್ರೀರಾಮರ ಭಕುತ ಶಿರೋಮಣಿ 3
--------------
ವಿದ್ಯಾಪ್ರಸನ್ನತೀರ್ಥರು
ಗುರುವಿನಾ ಯಾಕೆ ಮರೆಯುವಿರಣ್ಣಾ | ಈ ಲೋಕದೊಳಗ | ಶುಭ ಧರೆಯೊಳು ದೀನರುದ್ಧರಿಸುತ ಮೆರೆವಾ ಪ ಮನಸಿನ ಜಾಡ್ಯ ತನವನು ಬಿಡಿಸಿ | ಶ್ರವಣಾದಿಗಳಿಂದ | ಅನುವಾಗಿ ಬೋಧಾಮೃತವನೆ ಕುಡಿಸಿ | ಭಕ್ತಿಯ ಕಳೆಯಂಬಾ | ಘನವಾದಲಂಕಾರವನೆ ತೊಡಿಸೀ | ಯೋಗದ ಸಿರಿಯಿಂದಾ | ಚಿನುಮಯ ಮಂದಿರವನು ತೋರಿಸುವಾ 1 ನೀರಿನಾ ಬೊಬ್ಬುಳಿಯಂತೀ ತನುವು | ಮಿಂಚಿನಾ ತೆರನಂತೆ | ಮೃಗ | ನೀರಂತೆ ಕಾಣದೆ ಮೋಹಿಪ ಮನವು | ಇದನೆಚ್ಚದೆ ಬ್ಯಾಗ | ಜಾರಿ ಶುಭೇಚ್ಛೆ ವಿಚಾರಕ ತಂದು 2 ವೇದಾಂತದ ನುಡಿಯಾ | ಲೋಹ ಪರಸವ ನೆಶಿದಾ | ಸ್ವಾನುಭವ ಸುಖದಾ | ಗತಿ ಮತಿ ಕೂಡಿಸಿ ಗತಿಯನೆ ಕೊಡುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗೋಪಾಲ ಪಾಲಿಸೊ ನಿನ್ನ ಪಾದಸೇವಕನಿವನೆಂದು ನೀ ಭಾವಿಸಿ ಗೋಪಾಲ ಪಾಲಿಸೊ ಪ ನಾರಿಜನರುಟ್ಟ ಸೀರೆ ಸೆಳೆದು ತಾ ಭಾರಿ ಮರವನ್ನೇರಿ ವಿನೋದವ ತೋರಿದ ಸುರರಿಪು ವೈರಿಯೇ ಎನ್ನಯ ಕೋರಿಕೆ ನಡಸಲಿನ್ಯಾರಿಗೆ ಬೇಡಲೊ 1 ತುಂಗಫಣಿಫಣ ಶೃಂಗದೊಳು ಚರ ಣಂಗಳ ಕುಣಿಸು ಭುಜಂಗಮವರನಿಗೆ ಭಂಗಪಡಿಸಿ ಕೃಪಾಪಾಂಗದಿ ಸಲಹಿದ ಮಂಗಳಮಹಿಮ ರಥಾಂಗಧರ ಬಾಲ 2 ಬಂಧು ಬಳಗ ನೀನೆಂದು ತಿಳಿದು ಮ ತ್ತೊಂದನೆಣಿಸದೆ ಇಂದಿರಾರಮಣನೆ ಎಂದೆಂದಿಗೂ ಸಲಹೆಂದು ನಾ ಬೇಡುವೆ ಸಿರಿ 3 ಖಿನ್ನ ನಿಜ ಜನರನ್ನು ಸಲಹುವ ಪನ್ನಗಶಯನ ಪ್ರಸನ್ನ ಹೃದಯನಾಗಿ ಎನ್ನ ಮನೋರಥವ ಪೂರೈಸುವ ರನ್ಯರು ಯಾರಯ್ಯ ಚಿನ್ಮಯ ಮೂರುತಿ 4 ಕಾಮಜನಕನೆ ನಾಮಗಿರಿ ಸಿರಿ ಸ್ವಾಮಿ ನೃಸಿಂಹನೆ ಕಾಮಿತ ಕೊಡುವಂಥ ಕಾಮಧೇನು ಚಿಂತಾಮಣಿ ಎನ್ನಯೋಗ ಕ್ಷೇಮವು ನಿನ್ನದಯ್ಯ ಸೋಮಕುಲಾಧಿಪ 5
--------------
ವಿದ್ಯಾರತ್ನಾಕರತೀರ್ಥರು
ಗೋಪಾಲಕೃಷ್ಣ ಬಾರೊ ಗೋವಿಂದ ಗೋಪಾಲಕೃಷ್ಣ ಬಾರೊ ಪ. ಮಾಧವ ಗೋಪಿಯ ಕಂದ ಬಾರೊ ಅ.ಪ. ನವನೀತ ಚೋರ ಸುಂದರ ಮೂರುತಿ ಬಾ ಕೃಷ್ಣ ಸುಂದರ ಚಂದನ ಗಂಧ ಲೇಪಿತಾನಂದ ಅಂದದಿ ಮೋಹಾಕಾರ ಮುಕುಂದ 1 ಮುರಳೀಧರನೆ ಮುರಮರ್ಧನನೆ ಚಂದ್ರವಂಶನೆ ಬಾ ಕೃಷ್ಣ ಹರುಷವ ಬೀರಿ ಚರಣವ ತೋರಿ ವರಗೆಜ್ಜೆ ನಾದದೊಳು ಸುಂದರ 2 ಚಂದಿರ ಸದೃಶಾನಂದನೆ ಬಾ ಬಾ ಕುಂದರದನೆ ಬಾ ಶ್ರೀಕೃಷ್ಣ ಅಂದದ ಪದುಮಿಣಿವಲ್ಲಭ ಶ್ರೀ ಶಾ ಶ್ರೀ ಶ್ರೀನಿವಾಸನೆ ಬಾ ಗೋವಿಂದಾ 3
--------------
ಸರಸ್ವತಿ ಬಾಯಿ
ಗೋಪಿ | ತೋರಿಸೇ || ಅವನ ದೂರಿಂದ ಸಾಕಾರ | ನೋಡುವೆ ಜೋಗಿಯಾ ಪ ಚಿಕ್ಕ ಮಕ್ಕಳು ಅಂಜಿ | ಪಕ್ಕನೆ ಒಳಮನೆ || ಪೊಕ್ಕರು ನೋಡುತಾ || ಮುಕ್ಕಣ್ಣಿನವನ 1 ಎಂದ ಮುದ್ದಿನ ನುಡಿ | ಚೆಂದದಿ ಕೇಳುತ || ಕಂದನೆತ್ತಿಕೊಂಡು | ಬಂದಳೆಶೋದಾ 2 ಇಂದು ಮೌಳಿಯ ನೋಡಿ | ಮಂದಹಾಸದಲಿಂದಾ | ನಂದವ ನಿತ್ತನು | ಬಂದ ಮಹೇಶಗೆ || 3 ಶುಭ | ಚರಣಕೆ ಎರಗುತ || ತೆರಳಿದ ಸಾಂಬನು | ಹರಷದಲಿಂದ 4 ಅನುದಿನ | ಧರೆಯೊಳು ಕಾಂಬುವರ | ಸುಕ್ರತವೆಂತೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗೋಪಿ ಪ ತನ್ನ ಬಳಿಗೆ ಬಾರೆನ್ನುತಲೋಡಿದ ಅ.ಪ ನೊರೆ ನೊರೆ ಹಾಲನು ಸುರಿಸುರಿದು ತನ್ನ ಕಿರು ಬೆರಳಾಡಿಸಿ ಕೊರಳನು ಕೊಂಕಿಸಿ ಪರಿ ಹಾಸ್ಯ ಕುಚೋದ್ಯವ ಮಾಡುತ ಮುರಳಿಯನೂದಿ ಬಾರೆನ್ನುತ ಬಂದನೆ1 ಬೆಣ್ಣೆಯ ಕದ್ದು ಕೈ ಸುಣ್ಣವಾಯಿತು ಎಂದು ಕಣ್ಣು ಬಾಯಿಗಳಿಂದ ಸನ್ನೆಯ ಮಾಡಿ ಹಣ್ಣನು ತಿನ್ನುವೆ ಎನ್ನುತಲೋಡಿದ ಚಿಣ್ಣನು ಮಾಂಗಿರಿರಂಗನು ನೋಡೇ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋಪಿದೇವಿ ಎಂತು ಪೇಳಲೆ ನಾನೆಂತು ತಾಳಲೆ ಪ ಶ್ರೀಪತಿ ಬಂದು ನಿಂದು ಏಕಾಂತವನ್ನ ಆಡುತಾನೆ | ಪಾಪ ಇಂಥಾದುಂಟೇನೆ ಕೇಳೆ ಲಕ್ಷ್ಮೀಕಾಂತನೀತನೆ || ಮಂಥನ ಮಾಡುವಲ್ಲಿ ಮಂಥಣಿಯ ಒಡೆದನು | ಕುಂತಳವ ಪಿಡಿದು ಎನ್ನ ಕುಳ್ಳಿರಿಸಿದಾ ಕಿರಿಬೆವರನೊರಸಿದಾ 1 ಚಿಕ್ಕಮಕ್ಕಳ ಕೂಡಿ ಚಕ್ಕನೆ ತಾ ಬಂದು ಬೇಗ | ಬೆಕ್ಕು ಕುನ್ನಿ ಮರ್ಕಟವ ತಂದನಮ್ಮಾ ಇದು ಚಂದವೇನಮ್ಮ || ಉಕ್ಕುತಿಹ ಪಾಲ್ಗೊಡಗಳ ಉರುಳಿಸಿದಾ ಸುಮ್ಮನೆ | ಚೊಕ್ಕವೇನೆ ಸುಮ್ಮನೆ ಮೊಸರ ಸುರಿದಾ ಮೀಸಲು ಮುರಿದಾ 2 ರಕ್ಕಸರ ಗಂಡ ನಮ್ಮ ರಾಜ್ಯದೊಳಗಿವಗಿನ್ನು | ತಕ್ಕ ಬುದ್ದಿಯ ಪೇಳುವರದಾರು ಮೀರಿದ ಗೋಪಗೆ || ಸಿಕ್ಕ ಪಿಡಿದೇವೆಂದರೆ ಸಿಕ್ಕನಮ್ಮ ಇವ ಗುಡಿವಡ್ಡಿ ಬೇಡವೇ | ಕಕ್ಕಸದಲಿ ಬಲು ಕಕ್ಕಲಾತಿಯಲಿ 3 ಬಿರಬಿರನೆ ತಾ ಬಂದು ಬೆದರಿ ಎನಗಂದು | ಹರವಿಯ ಹಾಲು ಕುಡಿದಾ ತಾ ಎತ್ತ ಓಡಿದನೆ || ವಾರಿಗಣ್ಣಿನಿಂದಲಿ ನೋಡಿ ಒದಗಿ ಬಳಿಗೆ ಬಂದು | ತೋರವಾದ ಕುಚಗಳ ಪಿಡಿದಾನೆ ಬಲಿದನೇನೆ 4 ಹಾರ ಪದಕವು ಹಿಡಿ ಹಿಡಿ ಎಂದು ಎನ್ನ ಕೂಡ | ಸರಸವನಾಡಲಿಕ್ಕೆ ಅರಸನೇನೆ ನಮಗೆ ಪುರುಷನೇನೆ || ಪುರುಷರು ಕಂಡರೆನ್ನ ಪರಿಪರಿ ಬಾಧಿಸ್ಯಾರು | ತರಳನ ಕರೆದ್ಹೇಳು ತಿದ್ದಿ ನೀನು ಇವಗೆ ಬುದ್ಧಿ5 ಚಂಡನಾಡುತಲಿ ಚಿಕ್ಕ ಮಿಂಡಿಯರ ಕಂಡು ತಾನು | ಚಂಡು ಅಂತ ಕುಚಗಳ ಪಿಡಿದಾನೆ ಇಂಥದುಂಟೇನೆ || ಭಂಡು ಮಾಡತಾನೆ ಭಂಡಿಯ ಗೋವಳಗಿಂದು | ದಂಡಿಸವ್ವಾ ದಂಡವನು ಕೊಡು ನೀನು 6 ಚಂಡ ಪ್ರಚಂಡನಿವನು ಗೋಪಿಕೆಯರಿಗೆಲ್ಲ | ಉದ್ದಂಡನಿವನು ತಂಡ ತಂಡದಲಿ ತುರು- || ಹಿಂಡುಗಳ ಕಾಯುವ ಗೊಲ್ಲಬಾಲಕನಮ್ಮಾ |ಪಾಂಡುರಂಗ ವಿಜಯವಿಠ್ಠಲರಾಯ ಬಲು ದಿಟ್ಟನಿವನು7
--------------
ವಿಜಯದಾಸ
ಗೋವಿಂದ ಗೋವಿಂದ ಗೋವಿಂದನೆನ್ನಲು ಪ ಏನೆಂದು ಪೇಳಲಿ ಆನಂದವನು ನಾ ಅ.ಪ ಹಸಿವು ತೋರದೆನಗೆ ತೃಷೆಯು ತೋರದೆನಗೆ ಪರಿ ನಾಮರಸವ ಸೇವಿಸುತಿರೆ 1 ದ್ವೇಷವು ತೋರದು ರೋಷವು ತೋರದು ಶೇಷಶಯನ ನಿನ್ನ ಹರುಷದಿ ಪೊಗಳಲು 2 ಭಯವು ತೊಲಗುವುದು ಜಯವು ತೋರವುದು ನಯನಗಳಲಿ ಸುಖ ಜಲವು ಸುರಿಯುವುದು 3 ಎಂದಿನ ಪುಣ್ಯವೊ ಇಂದರಿತೆನು ಗೋ- ವಿಂದನಾಮ ಮಕರಂದದ ಸವಿಯನು4 ನಿನ್ನ ಸುಕರುಣದ ಚಿನ್ಹೆ ಕಾಣಿಸಿತು ಪ್ರ ಸನ್ನನಾಗುವಿಯೆಂದು ಚೆನಾÀÀ್ನಗಿ ಅರಿತೆನು5
--------------
ವಿದ್ಯಾಪ್ರಸನ್ನತೀರ್ಥರು