ಒಟ್ಟು 808 ಕಡೆಗಳಲ್ಲಿ , 90 ದಾಸರು , 711 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನವಾತ್ಮರೆ ನಿಮ್ಮ ಮಾನಸ ಪೂಜೆಯಿಂಮಾನವನಿಗೆ ಮೋಕ್ಷ ಸಾಧಿಸೀರಿ ಪ ರತ್ನ ನಿರ್ಮಿತ ಸುಚರಿತ್ರ ಮಂಟಪವನ್ನುಸತ್ಯಭಾಮೆಯ ಪತಿಗಿತ್ತು ಪೂಜಿಸುವೆ1 ಆಸನ ನೀಡುವೆ ಶೇಷಶಯನನೆ ಇಲ್ಲಿವಾಸ ಮಾಡಿ ಎನ್ನ ಸೇವೆ ಸ್ವೀಕರಿಸು2 ಧ್ಯಾನ ಮಾಡುವೆ ನಿನ್ನ ಗಾನ ಮಾಡುವೆ ನಿನ್ನಜ್ಞಾನ ಭೂಷಣ ಶೋಭಿತಾನನಾಂಬುಜ 3 ಧೃತ ವೇಣುಗೋಪಾಲ ಬಾರೋ ಮನಸಿಗೆ ತೋರೊಮೂರುತಿ ನಿನ್ನಯ ಸಮೀರ ಸಂಸ್ತುತನೆ 4 ಅಘ್ರ್ಯ ನೀಡುವೆ ನಾನು ಅನಘ್ರ್ಯ ವಸ್ತುಗಳಿಂದಸ್ವಘ್ರ್ಯಗ್ರಹಣ ಮಾಡೋ ಭರ್ಗ ಸೇವಿತನೆ 5 ಪಾದ್ಯ ನೀಡುವೆ ವೇದ ವೇದ್ಯ ಮಹಿಮನೇ ಮುನ್ನಾವದ್ಯ ಕಳೆದು ಭವದಿಂದ ಉದ್ಧರಿಸೆನ್ನ 6 ಆಚಮನವ ನೀಡುವೆ ಹೇ ಚತುರಾನನೇಶವಾಚಾಮಗೋಚರ ಮೋಚಕ ಹೇತು 7 ಸುದತಿ ಮೋಹನ ತವಮಧುಪರ್ಕವನೀವೆ ಮುದದಿ ಸ್ವೀಕರಿಸು 8 ಮತ್ತೆ ಆಚಮನವನಿತ್ತು ಪೂಜಿಪೆ ಕರವೆತ್ತಿ ಮುಗಿವೆ ಸರ್ವಭಕ್ತ ಪೋಷಕನೆ 9 ಗಂಗೆ ಯಮುನೆ ಗೋದಾ ತುಂಗೆ ಜಲವ ತಂದಿಹೆ ಅ-ನಂಗ ಜನಕ ಮಾಡೋ ಅಭ್ಯಂಗ ಸ್ನಾನ 10 ನಿರಿಗೆಗಳನೆ ಹಾಕಿ ಜರದ ಪೀತಾಂಬರ ಗ-ರುಡವಾಹನ ನೀನು ಧರಿಸು ಮಧ್ಯದಲಿ 11 ಹಾರ ಕಿರೀಟ ಕಾಂಚಿ ನೀರ ನೂಪುರ ಸು-ಕೇಯೂರ ನೂಪುರನೀವೆ ಧಾರುಣಿಪತಿಗೆ 12 ಸ್ವರ್ಣ ರಚಿಸಿದ ಸೂತ್ರವನು ಕೊಡುವೆ ಲಕ್ಷ್ಮೀರನ್ನ ಸೌರಭ ಗಂಧವನು ಸ್ವೀಕರಿಸು 13 ವಾಸುದೇವನೆ ದಿವ್ಯ ನಾಸಿಕೇಂದ್ರಿಯದಿಂದಈಸು ಧೂಪದ ಗಂಧ ವಾಸನೆ ಗ್ರಹಿಸೋ 14 ಮರುಗು ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸುಮಗಳ ಪರಿಮಳ ಧರಿಸೋ ಮಧ್ಯದಲಿ 15 ಹತ್ತು ಅಂಗಗಳಿಂದ ಉತ್ತಮ ಸುಧೂಪವಎತ್ತುವೆ ನಿನಗೆ ಸರ್ವೋತ್ತಮ ಹರಿಗೆ16 ಆಕಳ ಘೃತದ ಅನೇಕ ದೀಪಗಳ್ಹಚ್ಚಿಶ್ರೀಕರ ತವ ಮುಖಾವಲೋಕಿಸುತ್ತಿಹೆನು 17 ಏಕಾರತಿ ಗೋಪಿಪ್ರೀತನೆ ಬೆಳಗುವೆನಾಕ ನಾಯಕ ಸುರಲೋಕ ಸೇವಿತನೆ 18 ಆರು ವಿಧದ ಅನ್ನ ಸಾರು ಪಾಯಸ ಭಕ್ಷ್ಯಭೂರಿ ಶಾಕಗಳೀವೆ ನೀರಜಾಂಬಕನೆ 19 ಮಾರಜನಕನೆ ಮುತ್ತಿನಾರತಿ ಬೆಳಗುವೆಶ್ರೀರಾಮನೆ ನಿನ್ನ ಮೋರೆಯ ತೋರೊ20 ಛತ್ರ ಚಾಮರ ವ್ಯಜನ ದರ್ಪಣ ಪರ್ಯಂಕಕರ್ಪುರ ತಾಂಬೂಲವಿತ್ತು ಪೂಜಿಸುವೆ 21 ಹತ್ತಾರು ಉಪಚಾರ ಚಿತ್ರ ಚರಿತನೆ ನಿನಗೆಅರ್ಥಿಯಲಿ ಕೊಡುವೆನು ಮುಕ್ತಿ ನೀಡೆನಗೆ 22 ಇಂದಿರೇಶನೆ ನಿನ್ನ ಮುಂದೆ ತುತಿಪನೆ ನಿಂತುನಂದಬಾಲನೆ ಕೃಪೆಯಿಂದ ನೋಡೆನ್ನ 23
--------------
ಇಂದಿರೇಶರು
ಮಾನಾಗ, ಉರಿಯು ಹೆಣ್ಣು ಹೈಕಳ ಕೂಡೆಶ್ರೀನಾಥ ನಿನಗೆ ಸಲ್ಲದು ಮಕ್ಕಳಾಟ ಪ ತರಳ ನೀನೆಮ್ಮ ಸೀರೆಗಳನೆತ್ತಿಕೊಂಡುತರುವನೇರುತ ಕಕ್ಕಳ ಕೆಳೆವೆತರುವಳಿತನ ಸಾಕು ನಿನ್ನ ಪೇರುರದಲಿತರುಣಿ ನಗುತಾಳೆ ಪೊಕ್ಕಾಟ ಸಾಕು 1 ಅರಸಿನ ಮಗನೆಂದು ತಾಳಿದೆವಲ್ಲದೆಸರಸಿಜಾಕ್ಷಿಯ ಮನೆಯ ಮಳಲಲ್ಲಿಸರಸದೊಳಿಹರೆ ನಿನ್ನಂಗದೊಳಿರ್ದಸುರರೋಡಬೇಕು ಸಲ್ಲದು ಮಕ್ಕಳಾಟ2 ಬೊಮ್ಮ ನಿನ್ನುದರದ ಜಗನಿನ್ನ ಅಂಗದೊಳಿದ್ದ ಸುರಮುನಿಗಳುನಿನ್ನನೆ ನಗುವರೊ ನೀನರಿಯದೆ ಎಮ್ಮಚೆನ್ನ ಹೆದ್ದಾಟ ಹೊಕ್ಕಾಟ ಸಾಕು 3 ಕಾಲ ಪೆಂಡೆಯುಹೊಸ ಹೊಸ ಚೆನ್ನಿಗ ಪರಿಹಾಸ ಸಾಕೋ4 ತುತಿಸಿ ತುತಿಸಿ ಕಾಣರು ಬ್ರಹ್ಮರುದ್ರರುಮತಿಗೊಳಗಾಗೆ ಮುನೀಶ್ವರರಶ್ರುತಿಗಳು ನಿನ್ನನು ಪುಡುಕಲರಿಯವು ಬಾಲಸತಿಯರೊಡನೆ ಖೇಳಮೇಳವೆ ಸಾಕು 5 ಸ್ನಾನಮಾಡಲೀಯೆ ಮೌನಗೌರಿಯನೋನಲೀಯದೆ ಮೌನವ ಕೆಡೆಸಿಧ್ಯಾನ ಮಾಡಲೀಯೆ, ನಿನ್ನ ಚೆನ್ನಿಗರುಹಾನಿ ನೀಗುವರು ಎಂಬುದರಿಯೆವೊ 6 ಚೆಲುವರರಸ ಶಿಖರ ಶಿಖಾಮಣಿಯೆಲಲನೆಯರ ಮನ ಸೂರೆಗಾರಫಲಿಸಿತು ವ್ರತ ನಮ್ಮ ಕೃಷ್ಣ ನಿನ್ನೊಲುಮೆಯಬಲೆಗೆ ಸಿಕ್ಕದರಾರೊ ಸೊಬಗು ಸುಗ್ಗುಳಿಯೇ7
--------------
ವ್ಯಾಸರಾಯರು
ಮಾನಿನಿ ಆ ಮಹಾಭಕುತಿಗಭಿಮಾನಿ ಪ ಸುತ್ರಾಮ ಕಾಮ ರವಿ ಸೋಮವಿನುತೆ ಮದಸಾಮಜ ಗಮನೆ ನೀಲಕುಂತಳೆ ಮೋಹನ್ನೇ-ಸುವಾಣಿ ಚನ್ನೆ ಬಾಲಾರ್ಕ ತಿಲಕರನ್ನೆ ಫಾಲೆ ವಿಶಾಲೆ ಗುಣರನ್ನೆ -ಕುಂದರದನ್ನೆ ಮೂರ್ಲೋಕದೊಳು ಪಾವನ್ನೆ ಕಾಳವ್ಯಾಳ ವೇಣಿ ಮ್ಯಾಲೆ ರ್ಯಾಗಟೆ ಪೊ ನ್ನೊಲೆ ಚವುರಿಗೊಂಡ್ಯ ಹೆರಳು ಭಂಗಾರ ಕು- ನಾಸಿಕ ನೀಲೋ ತ್ಪಲೆ ನೇತ್ರಳೆ ಪಾಂಚಾಲಿ ಕಾಳಿ ನಮೋ 1 ಪೊಳಿವೊ ಕೆಂದುಟಿ ನಸುನಗೆ ಪತ್ತು ದಿಕ್ಕಿಗೆ ಬೆಳಕು ತುಂಬಿರಲು ಮಿಗೆ ಥಳಕು ವೈಯಾರದ ಬಗೆ ಮೂಗುತಿಸರಿಗೆ ಸಲೆ ಭುಜಕೀರ್ತಿ ಪೆಟ್ಟಿಗೆ ಥಳಥಳಿಸುವ ಕೊರಳೊಳು ತ್ರಿವಳಿ ನ್ಯಾ ವಳಿ ತಾಯಿತು ಸರಪಳಿಯ ಪದಕ ಪ್ರ ವಳ ಮುತ್ತಿನ ಸರಪಳಿಗಳು ತೊಗಲು ಎಳೆ ಅರುಣನ ಪೋಲುವ ಕರತಳವ 2 ಕಡಗ ಕಂಕಣ ಮಣಿದೋರೆ-ದೋಷ ವಿದೂರೆ ಝಡಿತದುಂಗುರ ಶೃಂಗಾರೆ ಮುಡಿದ ಮಲ್ಲಿಗೆ ವಿಸ್ತಾರೆ-ಕಂಚುಕಧರೆ ಉಡಿಗೆ ಶ್ವೇತಾಂಬರ ನೀರೆ ಬಡ ನಡು ಕಿಂಕಿಣಿ ನಿಡುತೋಳ್ಕದಳಿಯ ಪೊಡವಿಗೊಡೆಯ ನಮ್ಮ ವಿಜಯವಿಠ್ಠಲನ್ನ ಅಡಿಗಳರ್ಚಿಪುದಕೆ ದೃಢಮನ ಕೊಡುವಳ 3
--------------
ವಿಜಯದಾಸ
ಮಾಯ ಮೋಹಿಗಳಿಗೆಲ್ಲ ಭವಬಂಧಳಿಯುವುದೇ ಕಾಯ ಶುದ್ಧಲ್ಲದವಗೆ ಕರ್ಮಬಂಧ್ಹರಿಯುವುದೇ ಪ ಮುಣುಗು ಕಲಿತಿರುವನು ದಣಿವಿನಿಂ ಮುಕ್ತಹನೆ ಕುಣಿತಕಲಿತಿರುವವ ಮನದಿ ನಾಚುವನೆ ಒನಪು ಕಲಿತಿರುವಗೆ ಮನಸಿಜ ದೂರನೆ ಮನೆಮನೆ ತಿರುಗುವನು ಘನತೆಗೆ ಬಹನೆ 1 ಪಾದ ತಾಡಣೆಯು ತಪ್ಪುವುದೆ ಕೇಡುಗಾರಿಗೆ ಸುಖದ ಜಾಡು ತಿಳಿಯುವುದೆ ಕಾಡಡವಿಲಿರುವವಗೆ ರೂಢಿಯ ಸುದ್ದಿಹುದೆ ನಾಡ ಮಾತಾಡುವಗೆ ಕೇಡು ತಪ್ಪುವುದೆ 2 ನಿಂದಕಗೆ ಮುಂದಿನ್ನು ಹಂದಿಜನ್ಮ ತಪ್ಪುವುದೆ ಛಂದಸ್ಸರಿಯದವಗೆ ಕವಿತದಂದ ತಿಳಿಯುವುದೆ ಮಂದಿಗೋಷ್ಠಿಗ್ಹೋಗುವಗೆ ಕುಂದೊದಗದಿರುತಿಹ್ಯದೆ ತಂದೆತಾಯನ್ಹಳಿಯುವಗೆ ಬಂಧ ತಪ್ಪುವುದೆ 3 ಮೋಸಕಾರಿಗೆಮಶಾಪವು ತಪ್ಪುವುದೆ ಆಶಕಾರಿಗೆ ಮಹನಾಶ ಬಿಡುತಿಹ್ಯದೆ ದೇಶದೇಶ ತಿರುಗುವಗೆ ಘಾಸಿಯು ತಪ್ಪುವುದೆ ದಾಸಜನ ದೂಷಕಗೆ ಈಶನೊಲಿಮಿಹ್ಯದೆ 4 ಸುಗುಡಿಗೆ ಪತಿಸರಸ ಸೊಗಸಾಗಿ ಕಾಣುವುದೆ ಜಗಳಗಂಟಿಗೆ ವ್ರತದ ಬಗೆಯುಶೋಭಿಪುದೆ ಸುಗುಣೆಯರೊಡನಾಟ ಷಂಡನಿಗೆ ಸಲ್ಲುವುದೆ ಸುಗುಣ ಸಂಗಿಲ್ಲದೆ ನರಕ ಭುಗಿಲು ತಪ್ಪುವುದೆ 5 ಕಪಟತ್ವ ನೀಗದೆ ತಪವೃದ್ದಿಯಾಗುವುದೆ ಕೃಪಣತ್ವ ಬಿಡದವಗೆ ತಾಪತ್ರಳಿಯುವುದೆ ಜಪವಿಲ್ಲದೆ ವಿನಾ ಸುಫಲದೊರಕುವುದೆ ಗುಪಿತವನು ತಿಳಿಯದವಗಪರೋಕ್ಷವಿಹ್ಯದೆ 6 ಮಾನವನ ಗುಣರಿಯದೆ ಜ್ಞಾನ ಸ್ಥಿರವಾಹುದೆ ಜ್ಞಾನವಿಲ್ಲದೆ ಬೇರೆ ಧ್ಯಾನ ಸಿದ್ದಿಪುದೆ ದೀನನಾಥ ಮಮ ಪ್ರಾಣೇಶ ಶ್ರೀರಾಮನಡಿ ಖೂನವರಿಯದೆ ಮುಕ್ತಿ ಜಾಣೆ ಸುಖಬಹುದೆ 7
--------------
ರಾಮದಾಸರು
ಮಾಯೆ ಮುಟ್ಟದಿರೆನ್ನನು ನಿನ್ನಯ ಮೂರುಕಾಯಾಭಿಮಾನವೆನಿಸುವ ಮೈಲಿಗೆಯನು ಹೇಯವಿದೆಂದು ಬಿಟ್ಟರಿಕೆಯ ಮಡಿಯುಟ್ಟೆಬಾಯ ಹೊೈುಸುವೆನಿನ್ನು ತಪ್ಪಿದೆಯಾದರೆ ಪಧೀರತನದಿ ಸದಸದ್ವಿವೇಕವ ತೊಟ್ಟು | ಸಾರಿ ಧನಾದಿ ಭೋಗಗಳ ಬಿಟ್ಟುಸಾರವಲ್ಲೆಂದು ಸ್ವರ್ಗಾದಿ ಸುಖಂಗಳ | ಮೀರಿದ ವಿರತನು ನಾನೆಂದೆನಲ್ಲದೆ ನಿನ್ನನಾರಿಯಬೇಕೆಂದೆನೆ ವಿಷಯವಿ | ಕಾರದೊಳ್ಬಳಿಸಂದೆನೆ ಧ್ಯಾನ ಸಾಧನಕಾರವೆ ಸಾಕೆಂದೆನೆ ಕಲ್ಪಿತವಾದ ಘೋರ ಸಂಸಾರವಸಾರವೆಂದೆನಲ್ಲದೆ 1ಶಮೆುಂದ ಚಿತ್ತ ವಿಕ್ಷೇಪವ ತೊಲಯ | ದಯೆುಂದಿಂದ್ರಿಯಗಳ ತಗ್ಗಿಸಿಕ್ರಮದಿಂ ತಿತಿಕ್ಷೆುಂ ಸಹನವ ಮಾಡಿ | ಯಮಿತೋಪರಮದಲಗ್ಗಳನೆಂದೆನಲ್ಲದೆಸಮತೆುಲ್ಲದೆ ಬಂದೆನೆ ತನು ಭೋಗ | ಮಮತೆಯೊಳಗೆ ನಿಂದೆನೆ ವಿಘ್ನವಿಕ್ರಮಕೊಳಗಾದೆನೆಂದೆನೆ ವೇದಾಂತೋಪಕ್ರಮವೆನ್ನೊಳಾುತೆಂದು ವಿವರಿಸಿದೆನಲ್ಲದೆ 2ದೀಪಿತ ಮೋಕ್ಷೇಚ್ಛೆುಂದ ತೋರುವ ಸಕಲ | ತಾಪತ್ರಯಗಳ ತೊಲಗಿಸಿಈಪರಿ ವೇದಾಂತ ಶ್ರವಣ ಮನನದ ಪ್ರ | ತಾಪದಿಂದರಿಗಳಿಲ್ಲೆನಗೆಂದೆನಲ್ಲದೆನೀ ಪುಸಿಯಲ್ಲೆಂದೆನೆ ಕಲ್ಪಿತ ನಾಮ | ರೂಪವ ನಿಜವೆಂದೆನೆ ತಾದೃಶ್ಯ ವಿಲೋಪಕನಲ್ಲೆಂದೆನೆ ಕೇಳು ಪ್ರತಿಜ್ಞೆಯ | ಗೋಪಾಲಾರ್ಯನೆ ನಾನೆಂದೆನಲ್ಲದೆ3
--------------
ಗೋಪಾಲಾರ್ಯರು
ಮುಚುಕುಂದ ವರದ ವಿಠಲ | ಕಾಪಾಡೊ ಇವಳಾ ಪ ಖಚರಾರಿವಹ ಸವ್ಯ | ಸಾಚಿಸಖ ದೇವ ಅ.ಪ. ಕೃತಿ ರಮಣದೇವಾ |ಮತಿಮತಾಂ ವರರಂಘ್ರಿ | ಹಿತ ಸೇವೆ ಕೈಕೊಂಡುಅತಿಶಯದ ಸಾಧನದಿ | ಸಂಪನ್ನಳೆನಿಸೊ 1 ಗುರುವೆ ತಾರಕನೆಂಬ | ವರಮತಿಯ ಕರುಣಿಸುತಹರಿಗುರು ಸೇವೆಯಲಿ | ಪರಮ ಸದ್ಯಕ್ತೀಕರುಣಿಸಿ ಪೊರೆಯುವುದು | ಸರ್ವಾಂತರಾತ್ಮಕನೆಸರ್ವಸುರ ಸಂಸೇವ್ಯ | ಮರುತಂತರಾತ್ಮ 2 ಹರಿಯೆ ಸರ್ವೊತ್ತಮನು | ಶಿರಿವಾಯು ಮೊದಲಾದಸುರರೆಲ್ಲ ಹರಿಯ ಕಿಂ | ಕರರೆಂಬ ಮತಿಯಾಕರುಣಿಸುತ ಸಾಧನವ | ಪರಿಪೂರ್ತಿ ಗೈಸೊಹರಿಸುರಮುನಿಯ ಸಂಸೇವ್ಯ | ಕಾರುಣ್ಯ ಮೂರ್ತೇ 3 ಕರಿವರದ ಜಾಮಿಳನ | ವರದನೆಂದೆನುತ ಶ್ರುತಿಓರಲುತಿವೆ ಹೇ ಸ್ವಾಮಿ | ಗರುಡ ಧ್ವಜಾತ್ಮಾದುರಿತ ದುಷ್ಕತ ಕಳೆದು | ಪರಿಪರಿಯ ಸೌಖ್ಯಗಳಕರುಣಿಸಿ ಪೊರೆಯುವುದು | ಸುರಸಾರ್ವಭೌಮ 4 ಭವ | ನೋವ ಕಳೆಯಲ್ಕೇನೀವೊಲಿದು ಇವಳೀಗೆ | ಪಾವನ ಸ್ಮøತಿಯಿತ್ತುಕಾವುದೆನೆ ಬೇಡ್ವೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮುದವ ಬೀರುವುದೊ | ಬದರಿಯ ನಿಲಯನೇ ಪ ಮುದವ ಬೀರುವುದು | ಬದರಿಯ ನಿಲಯ ಶ್ರೀವಿಧಿ ವಿಬುಧಾದ್ಯರ | ಮುದಕೆ ಕಾರಣನೇ ಅ.ಪ. ಪಾದ ಉರ | ಮಂದೀರದಲಿ ಧರಸುಂದರಾಂಗನೆ | ಗೋವಿಂದ 1 ಇಂದ್ರ ನಿನ್ನಯ ತಪ | ಕುಂದೀಸೆ ಅಪ್ಸರವೃಂದಾ ಕಳುಹೆ | ಗೋವಿಂದ ||ಚೆಂದಾದುಡಿಗೆ ಉಟ್ಟ | ಅಂದಾಭರಣ ತೊಟ್ಟಮಂದಾಗಮನೆರೆಲ್ಲ | ಗೋವಿಂದ || ಅಂದಿಗೆ ಕಾಲ್ಗೆಜ್ಜೆ ದಂಧಣಿರೆನ್ನ ಕುಣಿದುನೊಂದು ಶ್ರಮಗಳಿಂದ | ಗೋವಿಂದ ||ಕಂದರ್ಪ ಪಿತ ತನ್ನ | ಸುಂದರೂರುವಿನಿಂದಸುಂದರಿಯನ್ನೆ ಕೊಟ್ಟ | ಗೋವಿಂದ 2 ಮಂದಗಮನೆರೆಲ್ಲ | ಸುಂದರಿಯನ್ನೆ ಕೊಂಡುಇಂದ್ರಂಗೆ ಇತ್ತರು | ಗೋವಿಂದ ||ಎಂದೆಂದು ಕಾಣದ | ಸುಂದರಾಕೃತಿ ಕಂಡು ಕಂದೀತು ಇಂದ್ರ ಮುಖ | ಗೋವಿಂದ ||ವೃಂದಾರಕೇಂದ್ರನು | ಅಂದು ಪರಾಶರಜಗೊಂದಿಸಿ ಕ್ಷಮೆಯನು | ಬೇಡಿದ ||ಇಂದ್ರಾವರಜ ಗುರು | ಗೋವಿಂದ ವಿಠಲನದ್ವಂದ್ವ ಪಾದಂಗಳ್ಗೆ | ಶರಣೆಂದ 3
--------------
ಗುರುಗೋವಿಂದವಿಠಲರು
ಮುದ್ದು ಮೋಹನದಾಸರೆ | ಎನ್ನನು ಬೇಗ ಉದ್ಧರಿಸಿರಿ ಪ್ರೀತರೆ ಪ. ಬಿದ್ದಿಹೆ ದುರ್ವಿಷಯಾಂಧ ಕೂಪದೊಳೀಗ ಶುದ್ಧ ಜ್ಞಾನವನಿತ್ತು ಪದ್ಮನಾಭನ ತೋರಿ ಅ.ಪ. ಪರಮಯತಿಚರ್ಯರೆ | ಈ ಜಗದೊಳು ವರ ಭಕ್ತಿವೆಗ್ಗಳರೆ ತರಳತನದಲಿ ಪಾದಚಾರಿಗಳಾಗಿ ಧರೆಯ ಕ್ಷೇತ್ರವನೆಲ್ಲ ಚರಿಸಿರ್ಪ ವಶಗೈದು ಹರಿಯ ಮೆಚ್ಚಿಸಿ ದಾಸಭಾವದಿ ಪರಿಪರಿಯ ಅಂಕಿತದಿ ಶಿಷ್ಯರ ಪರಮ ಸಂಭ್ರಮಗೊಳಿಸಿ ಮೆರೆಯುತ ಸಿರಿವರನ ಪದಸಾರಿದಂಥ 1 ಶೀಲವಂತರೆ ನಿಮ್ಮನು | ಕೊಂಡಾಡೆ ಈ ಸ್ಥೂಲಮತಿಗೆ ಸಾಧ್ಯವೆ ಕಾಲಕಾಲದಿ ಹರಿಲೀಲೆಯ ಪಾಡುತ ನೀಲವರ್ಣನ ಹೃದಯಾಲಯದಿ ಕಂಡು ಮೂಲರೂಪಿಯ ಪಾದಕಮಲದಿ ಲೋಲುಪಡುತಲಿ ಓಲ್ಯಾಡಿದ ಬಹು ಶೀಲಗುಣಗಣಪಾಲರೆ ಎನ್ನ ಪಾಲಿಸಿರಿ ಸಿರಿಲೋಲನ ತೋರಿ 2 ಸಂದೇಹವಿನ್ಯಾತಕೆ | ಮಂತ್ರದ ಮನೆ ಮಂದಿರದೊಳಗಿರೆ ಬಂದಿರಿ ದಾಸತ್ವದಿಂದ ಧರೆಯೊಳು ನಂದಕಂದನ ಲೀಲೆ ಅಂದ ಪಾಡುತಲಿ ಅಂದು ಗ್ರಂಥಗಳನೋದಿ ಪದವನು ಒಂದು ರಚಿಸಿ ಸಾಲದೆ ಮು- ಕುಂದನಾ ಗುಣವೃಂದ ಪೊಗಳಲು ಚಂದದಿಂದ ವಸುಂಧರೆಯೊಳು 3 ವರತತ್ವ ಅಂಶದಲಿ | ಶ್ರೀ ಗುರುವಿಗೆ ತಾರಕರೆನಿಸಿದಿರಿ ಸಾರಿರೆ ನಿಮ್ಮ ಪದ ಸ್ವಪ್ನದೊಳು ತೋರಿ ತೀರುಥವನೆ ಕೊಟ್ಟು ಸುಮ್ಮನಿರಲು ಗುರು ಸಾರಿ ಬಂದು ಬದಿಯಲಿ ನಿಂದು ಭೂರಿ ಕರುಣವ ಮಾಡಬೇಕೆಂದು ತೋರಿ ಪೇಳಲು ಹರಿ ನಿರ್ಮಾಲ್ಯ ಅಪಾರ ಕರುಣದಿ ಕೊಟ್ಟು ಪೊರೆದಿರಿ 4 ಸ್ತುತಿಸಲಳವೆ ನಿಮ್ಮನು | ಈ ಜಡಮತಿ ಕೃತಕವಲ್ಲವು ಇದಿನ್ನು ಅತಿಪ್ರೇಮ ಗುರುಗಳ ಹಿತದಿಂದ ನುಡಿದುದು ಚ್ಯುತದೂರ ಗೋಪಾಲಕೃಷ್ಣವಿಠ್ಠಲನ ಸತತ ಸ್ತುತಿಸುವ ಮತಿಯ ಪಾಲಿಸಿ ಪಥವ ತೋರಿರಿ ಕರ್ಮಜರೆ ಬೇಗ ಸತತ ಶ್ರೀ ಗುರು ವ್ರತವ ಪಾಲಿಪ ಮತಿಯ ದೃಢದಲಿ ಹಿತದಿ ಕರುಣಿಸಿ 5
--------------
ಅಂಬಾಬಾಯಿ
ಮುಳಬಾಗಲುರಂಗಸ್ವಾ'ುೀ ಯಮ್ಮನುಳುಹಬೇಕು ಭಕ್ತಪ್ರೇ'ುೀ ಪನಳಿತೋಳು ಕಳೆಮುಖ ತಲೆಗೆ ಕಿರೀಟವುನಳಿನಲೋಚನಮೂರ್ತಿ ಕಳೆುಂದ ಬೆಳಗುವೆಅ.ಪಅದ್ವೈತ ಶಾಸ್ತ್ರಾನುಭವರು ನಮ್ಮಅಣ್ಣಯ್ಯಸ್ವಾ'ುಯ ಸುತರೂಸಾಧ್ವೀಗುರ್ರಮಗರ್ಭಾಂಬುಧಿ ಶಶಿಯಾಗಿಸದ್ವಿಲಾಸದೊಳು ಸಂಜನಿಸಿದ ಚಲುವ 1ಕೃತ್ತಿಕಾನಕ್ಷತ್ರ ಪ್ರಥಮಾ ಪಾದತಿಥಿಯು ದ್ವಾದಶಿ 'ಭವನಾಮಾ'ತವಾದ ಧನುರ್ಮಾಸ ಸ್ಥಿರವಾರದುದಯದೊಳ್‍ಪೃಥಿ'ೀಪಥನವಾದ ಪರಮಪುರುಷಮೂರ್ತಿ 2ಸದ್ಗುಣದಾಟಿನೋಟಗಳೂ ಶಾಸ್ತ್ರ'ದ್ಯ ಸಂಯೋಗಪಾಠಗಳೂ ಸದ್‍ವೃದ್ಧಿ ಸ'ಯ ವ್ಯಾಪಾರ ವರ್ಜಿತಮಾಡಿಶುದ್ಧವೈಷ್ಣವ ತುಲಸಿರಾಮರ ಭಜಿಸುವ 3ಹರಸೀ ವಾಗೀಶಕಿರೀಟಾ ಗುರುಪರಂಪರೆ ಕಥೆನುಡಿದಾಟ ಹರುಷದಿ ಮೆಚ್ಚಿಸಿ ಧರಿಸಿ ಕಿರೀಟಾ ನಿರುಪಮ ಪರತತ್ವದೊಳಗೆ 'ಶೇಷಾ 4ಪರಕಾಲಮಠಕಾಗಾ'ುಸಿದೇ ಜನರತರುಣೋಪಾಯಗಳ ಮಾಡಿಸಿದೇತಿರುಮಂತ್ರಸಂಸ್ಕಾರ ಚರಮಾರ್ಥದೊರಕಿಸಿಪರಮಪಾವನರಾಗಿ ಮಾಡುತಲಿರುತಿಹ 5ವರಯತಿಗುರುಗಳ ಭಾಷಾ ಪೂರ್ಣಪರತತ್ವಬೋಧೆ ಗುಣಭೂಷಪರಮಾನುಭವಜ್ಞಾನ ಅರು' ಭಕ್ತರನೆಲ್ಲ ಪರಲೋಕಸಾಧನ ಅರಿವು ತೋರಿಸುವಂಥಾ 6ಚನ್ನಪಟ್ಣಾದಿರಾಮಕೋಟಿ ಅಲ್ಲಿಜನಕೆನೀ ತುಂಬಿದೆ ನಾಟಿಮುನ್ನುಮಾಡಿದ ಪಾಪವೆಲ್ಲವು ಪರಿಹಾರವುನ್ನತಮಾರ್ಗವ ತೋರಿದ ಗುರುದೇವ 7ರಾಮಕೃಷ್ಣೋತ್ಸವಗಳನೂ ಬಹುಪ್ರೇಮದಿನಡೆಸಿದಾದರನೂಆಮಹಾ ಕಾರ್ಯಕಾತುರದುರಂಧರನೂುೀಮ'ಯೊಳು ಪ್ರಖ್ಯಾತನಾಗಿಹನೂ 8ಪುರಪುರಗ್ರಾಮಗಳಲ್ಲಿ ಗುರು ತಿರುನಕ್ಷತ್ರೋತ್ಸವವಲ್ಲಿಪರಮವೈಭವದಿಂದ ಸ್ಥಿರವಾಗಿ ನಡೆಯಲುಹರುಷದಿ ಸೌಲಭ್ಯ ದೊರಿಕಿಸಿ ಇರುವಂಥಾ 9ಪ್ರತಿವರ್ಷ ಧನುರ್ಮಾಸ ಭಜನೇ ಒಳ್ಳೆಶೃತಿಮೃದಂಗವು ತಾಳರಚನೇಸತತವು ಹರಿಕಥೆ ತೀರ್ಥಪ್ರಸಾದವು'ತಕರಗುರುಸೇವಾ ದುರಂಧರಬಿರುದುಳ್ಳ 10ಭರತಪುರೀವಾಸಶ್ರೇಷ್ಟಾ ಗುರುವರತುಲಸಿರಾಮ ಪ್ರತಿಷ್ಠಾಪರಿಪರಿತತ್ಸೇವಾನಿರತ ಸಂತುಷ್ಟಾಗುರುಪಾದಸರಸಿಜ ಭೃಂಗಾವೆ ಸ್ವಷ್ಟಾ 11ಅಪರೋಕ್ಷಜ್ಞಾನ ಸಂಪೂರ್ಣ ಜನ್ಮಸಫಲಮಾರ್ಗದಲ್ಲಿ ಉತ್ತೀರ್ಣಾ ಅಪರಾಧಗಳನು ಮನ್ನಿಸಿ ಶ್ರಿತಜನರನ್ನುಸಫಲಗೊಳಿಸಿ ಜನ್ಮಸಾರ್ಥಕಪಡಿಸುವ 12ಪತಿತಪಾಮರರಿಗೆಯೆಲ್ಲಾಪ್ರತಿಫಲ'ಲ್ಲಾದುಪದೇಶ ಬಲ್ಲಾ'ತಕರವಾಗಿ ತೋರ್ಪುದು ಶಿಷ್ಯಜನಕೆಲ್ಲಾ ಸತತವು ತವಪಾದ ಗತಿಮೋಕ್ಷದಾಯಕ 13ಜ್ಞಾನಭಕ್ತಿಯು ವೈರಾಗ್ಯ ಸುಜ್ಞಾನದಿ ತುಳುಕುವ ಭಾಗ್ಯಮಾನವ ಜನ್ಮದಿ ಅವತರಿಸಿರುತಿಹದೀನರ ಮುಕ್ತಿಗೆ ಕಾರಣವಾಗಿಹ 14ಅಂಗ ದ್ವಾದಶನಾಮಧಾರಾ ಬಹುಶೃಂಗಾರತರ ಮಕುಟಾಂಬರಾರಂಗುಮಂಟಪದಿ ಲಂಘಿಸಿ ರಾಗ ಪಾಡುತ್ತಮಂಗಳಕರ ತುಲಸಿನಳಿನಾಕ್ಷಹಾರುಳ್ಳ 15ಗೃಹಮಣಿ ಸುಬ್ಬಾಂಬನವರೂ ನಿಮ್ಮಮಹದಾಂಶ ಸುಗುಣವಂತೆಯರುಸಹಚರಿಸುತ ಪುರಗ್ರಾಮ ಮಾದರಿಯಾಗಿಸಹಪತ್ನಿಸ'ತ ಭಕ್ತರನು ಪಾಲಿಸತಿರ್ಪಾ 16ದಿನಚರಿಬರುವ ದಾಸರನೂ ಮನದನುವಾರಿತಾನ್ನದಾನವನೂಮನದೊಳು ಭಕ್ತರವೊಡಲ ಪರೀಕ್ಷಿಸಿಘನವಾದ ಮೋಕ್ಷಾರ್ಹವಾದನರ ಕೈಪಿಡಿದ 17ಅಂಕಿತಮಾಡದೆ ುಹೆನೂ ಚಕ್ರಾಂಕಿತ 'ಲ್ಲದ್ಯೋಚಿಪೆನೂ ಕಿಂಕರನಾಗಿ ಬೇಡುವೆ ಪಾದವನೂಅಂಕಿತಕನುವiತಿ ಆಗಹೊಂದುವೆನೂ 18ಸೋಮೆಗೌಡನ ಪುರವಾಸಾ ರಂಗಸ್ವಾ'ುದಾಸರ ದಾಸದಾಸಪ್ರೇಮಭೈರವಗೌಡನೊಳಗೆ ತೋರಿಸಬೇಕು ಸ್ವಾ'ುನಿನ್ನಾಜ್ಞೆಗೇ ಬಾಗಿದಂಕಿತ'ದು19
--------------
ಮಳಿಗೆ ರಂಗಸ್ವಾಮಿದಾಸರು
ಮೂರ್ತಿ ಕೃಪಾಕರ ಈತೋಕನಿಗೊಲಿಯೆ ಬಿನ್ನೈಸುವೆ ಹರಿಯೆ ಪ ಲೋಕದೊಳುಳ್ಳಖಿಳಜನಾಳಿಗೆಬೇಕೆನಿಸಿದ ವರ ನೀ ಕೊಡೊದಿಲ್ಲನೆ ಅ.ಪ. ಮಲ್ಲರ ದಲ್ಲಣ - ವಲ್ಲಭ ಲಕುಮಿಗೆಸೊಲ್ಲನು ಲಾಲಿಸಿ ಕಾಯೊ ಕೃಪಾಳು 1 ಆರ್ತೇಷ್ಟದ ಹರಿ - ಅರ್ಥ ಸಾಧನವೋ ಕಾಮ ರೂಪ ವರ್ತಿಸಲೈಕ್ಯವು - ಆವುದಸಾಧನೆ 2 ಬಿಸಜ ಸಂಭವ ಪಿತ - ವಶವಿರೆ ಜಗವೆಲ್ಲಹಸುಳೆಯ ಕಾಯ್ವ - ದಸಾಧ್ಯದೆ ನಿನಗೆ 3 ಅಗಣಿತ ಮಹಿಮೆಯಪೊಗಳುವುದನು ಕೇಳೀ - ಮಿಗೆ ಶರಣೆಂಬೆನೊ4 ಗೋವತ್ಸ ಧನಿ ಕೇಳಿ - ಆವು ಧಾವಿಸುವಂತೆನೀ ವೊಲಿಯೋ ಗುರು - ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಮೂವರೇರಿದ ಬಂಡಿ ಹೊರೆನೆನದುದೇವಕೀ ನಂದನನು ತಾನೊಬ್ಬ ಬಲ್ಲ ಪ ಆಡಿ ಪೊತ್ತವನೊಬ್ಬ ನೋಡಿ ತಿರುಗಿದನೊಬ್ಬಓಡಾಡಿದನೊಬ್ಬ ಈ ಮೂವರುಆಡಿದವಗೆ ಕಿವಿಯಿಲ್ಲ ನೋಡಿದವನ ಮಗ ಪಾಪಿಓಡಾಡಿದವನೊಬ್ಬ ಓಡನಯ್ಯ 1 ಕಾಯ ಕಾಯ ಬಡಲಿಗ ಚೆಲ್ವಕಾಯ ಗಿರಿ ಪೊತ್ತವನು ಕಡುಧರ್ಮಿಯು 2 ಹರಿಗೆ ಮಾವನು ಆದ ಹರಿಗಳಿಯ ತಾನಾದಹರಿಯು ತನ್ನೊಳಗೆ ತಾ ಹರಿಯೊಳಗೆ ಇಪ್ಪಹರಿಯ ರೂಪವ ತಾಳಿ ಇರುಳು ದೈತ್ಯನ ಕೊಂದಸಿರಿಧರನು ಕಾಗಿನೆಲೆಯಾದಿಕೇಶವರಾಯ3
--------------
ಕನಕದಾಸ
ಮೇಲ್ ಮೇಲ್ ಮೇಲ್ ಮೇಲ್ ಹರಿನಾಮ ಮೇಲು ಮೂಜಗಸೂತ್ರ ಹರಿನಾಮ ಪ ಕಾಲಕುಜನಕುಲ ಹರಿನಾಮ ಪಾಲಸುಜನಗಣ ಹರಿನಾಮ ಜಾಲಮಾಯ ದರ್ಪಣ್ಹರಿನಾಮ ವಿಶ್ವ ಹರಿನಾಮ ಅ.ಪ ಶರನಿಧಿಮಂದಿರ ಹರಿನಾಮ ಶರಧಿಮಥನ ಮುರಹರಿನಾಮ ಪುರತ್ರಯಸಂಹರ ಹರಿನಾಮ ಸುರಗಣಭೋಜನ ಹರಿನಾಮ ಶರಣರ ಸಿರಿತಾನ್ಹರಿನಾಮ ಪರತರ ಪಾವನ ಹರಿನಾಮ1 ಶಾಪವಿಮೋಚನ ಹರಿನಾಮ ತಾಪತ್ರಯಗಳ್ಹರ ಹರಿನಾಮ ಗೋಪೇರಾನಂದ ಲೀಲ ಹರಿನಾಮ ಕಪಾಲಧರನುತ ಹರಿನಾಮ ಗೌಪ್ಯಕೆ ಗೌಪ್ಯದ ಹರಿನಾಮ 2 ದುರಿತ ದಾರಿದ್ರ್ಯ ದೂರ್ಹರಿನಾಮ ಪರಿಹರ ಜರಾಮರಣ್ಹರಿನಾಮ ನರನ ಸಿರಿಯ ಭಾಗ್ಯ ಹರಿನಾಮ ಸುರತರು ಹರಿನಾಮ ಅರಿವಿನ ಅರಮನೆ ಹರಿನಾಮ ಪರಕ ಪರಮಸಿರಿ ಹರಿನಾಮ 3 ನಿಜಮತಿ ಭಂಡಾರ ಹರಿನಾಮ ಕುಜಮತಿ ಖಂಡನ ಹರಿನಾಮ ಭಜಕರನಿಜಧೇನ್ಹರಿನಾಮ ಭುಜಗಾದ್ರಿ ಪರ್ಯಂಕ ಹರಿನಾಮ ದ್ವಿಜರಿಗಮೃತನಿಧಿ ಹರಿನಾಮ ಅಜನಿಗುತ್ಪತ್ತಿ ಮಂತ್ರ ಹರಿನಾಮ 4 ವೇದಗಳಾಧಾರ ಹರಿನಾಮ ಸಾಧುಸಂತ ಪ್ರೇಮ ಹರಿನಾಮ ಭೇದವಾದÀರಹಿತ್ಹರಿನಾಮ ಸಾಧಿಸಲಸದಲ ಹರಿನಾಮ ಆದಿ ಅನಾದಿವಸ್ತು ಹರಿನಾಮ ಭೋಧ ಸ್ವಾದಸಾರ ಹರಿನಾಮ 5 ಕಾಲ ಹರಿನಾಮ ಕೀಳರ ಎದೆಶೂಲ್ಹರಿನಾಮ ಶೀಲರ ಜಪಮಾಲ್ಹರಿನಾಮ ಲೋಲಗಾನಪ್ರಿಯ ಹರಿನಾಮ ಕೀಲಿ ವೇದಾಂತದ ಹರಿನಾಮ ಫಾಲನೇತ್ರಗೆ ಶಾಂತಿ ಹರಿನಾಮ 6 ಪ್ರಳಯಕೆ ಅಳುಕದ ಹರಿನಾಮ ಪ್ರಳಯ ಪ್ರಳಯಗೆಲುವ್ಹರಿನಾಮ ಮಲಿನದಿ ಸಿಲುಕದ ಹರಿನಾಮ ಚಲಿಸದ ನಿರ್ಮಲ ಹರಿನಾಮ ಬೆಳಗಿನ ಬೆಳಗೀ ಹರಿನಾಮ ಕುಲಮುನಿ ಪಾವನ ಹರಿನಾಮ 7 ವಿಷಮಸಂಸಾರಖಡ್ಗ ಹರಿನಾಮ ವ್ಯಸನಕಾಷ್ಠಕಗ್ನಿ ಹರಿನಾಮ ವಿಷಕೆ ಮಹದಮೃತ ಹರಿನಾಮ ಮಸಣಿಮಾರಿಧ್ವಂಸ ಹರಿನಾಮ ಅಸಮಸುಖದ ಋಣಿ ಹರಿನಾಮ ವಸುದೇಜೀವಜೀವಳ್ಹರಿನಾಮ8 ಧರ್ಮಶಾಸ್ತ್ರದ ಗುಟ್ಟು ಹರಿನಾಮ ಮರ್ಮ ತಿಳಿಸುವ ರಟ್ಟು ಹರಿನಾಮ ಕರ್ಮ ಕಡಿಯುವ ಶಸ್ತ್ರ ಹರಿನಾಮ ನಿರ್ಮಲಾನಂದ ಪದವೀ ಹರಿನಾಮ ನಿರ್ಮಾಣ ನಿಜಜ್ಞಾನ ಹರಿನಾಮ ಬ್ರಹ್ಮಕಿಟ್ಟಿಗುರಿ ಹರಿನಾಮ 9 ಭವಗುಣಮರ್ದನ ಹರಿನಾಮ ಭವನಿಧಿ ಸೇತುವೆ ಹರಿನಾಮ ಭವನ ಭೀತಿಹರ ಹರಿನಾಮ ರವಿಕುಲ ಪಾವನ ಹರಿನಾಮ ಬುವಿತ್ರಯ ಪವಿತ್ರ ಹರಿನಾಮ ಸಾಯುಜ್ಯಪದಸ್ಥಾನೀ ಹರಿನಾಮ 10 ಸತ್ಯಕ್ಕೆ ಬಹು ನಿರ್ಕು ಹರಿನಾಮ ಮಿಥ್ಯಕ್ಕೆ ಅನರ್ಥ ಹರಿನಾಮ ನಿತ್ಯಕ್ಕೆ ಮಹಸುರ್ತು ಹರಿನಾಮ ಚಿತ್ತಕ್ಕೆ ಚಿಜ್ಜ್ಯೋತಿ ಹರಿನಾಮ ಅರ್ತವರಿಗೆ ಗುರ್ತು ಹರಿನಾಮ ಭೃತ್ಯಜನರ ಮತ್ತು ಹರಿನಾಮ 11 ಮಾಯಕ್ಕೆ ಪ್ರತಿಮಾಯ ಹರಿನಾಮ ಮಾಯ ಕತ್ತಲುನಾಶ ಹರಿನಾಮ ಕಾಯಕ್ಕೆ ಶೋಭಾಯ ಹರಿನಾಮ ಭಾವಕ್ಕೆ ಪರಿಶುದ್ಧ ಹರಿನಾಮ ತಾಯಿತಂದೆ ಜೀವಕ್ಹರಿನಾಮ ಅಮೃತ ಹರಿನಾಮ 12 ಪುಣ್ಯ ಶರಧಿಗೆ ಚಂದ್ರ್ಹರಿನಾಮ ಮನ್ನಣೆ ಮೂಲೋಕದ್ಹರಿನಾಮ ಧನ್ಯರಿಗೆ ಧನ್ಯ ಹರಿನಾಮ ಉನ್ನತ ಸಾಮ್ರಾಜ್ಯ ಹರಿನಾಮ ಮುನ್ನ ಕೈವಲ್ಯಪದ ಹರಿನಾಮ ಸನ್ನಿಧಿ ವೈಕುಂಠ ಹರಿನಾಮ 13 ನಿಗಮಕೆ ಸೊಬಗಿನ ಹರಿನಾಮ ಸುಗುಣರೊಳ್ನೆಲೆಗೊಂಡು ಹರಿನಾಮ ಅಗೋಚರ ಆಗಮಕ್ಹರಿನಾಮ ಸೊಗಸುವ ಭಕ್ತರಲ್ಹರಿನಾಮ ಅಗಜೇಶ ಪೊಗಳುವ ಹರಿನಾಮ ಅಗಜೆಯು ಒಪ್ಪಿದ ಹರಿನಾಮ 14 ವಿಮಲ ಗುಣಗಣ ಹರಿನಾಮ ದಮೆ ದಯಾನ್ವಿತ ಹರಿನಾಮ ಶಮೆ ಶಾಂತಿಮಂದಿರ ಹರಿನಾಮ ಸುಮನಸ ಕಲ್ಪದ್ರುಮ ಹರಿನಾಮ ನಮಿತ ಸುರಾದ್ಯರಖಿಲ ಹರಿನಾಮ ಅಮಿತ ವಿಶ್ವರೂಪ ಹರಿನಾಮ 15 ಮೂರು ಕಾಲದರಿವದ್ಹರಿನಾಮ ಮೂರಾರಿಕ್ಕಡಿಗೈವುದ್ಹರಿನಾಮ ಪಾರಪಂಚ ಪರುಷ್ಹರಿನಾಮ ಸಾರಸೌಖ್ಯಾಂಬುಧಿ ಹರಿನಾಮ ದಾರಿ ವೈಕುಂಠಕ್ಕೆ ಹರಿನಾಮ ಸೇರಿ ದಾಸರನಗಲದ್ಹರಿನಾಮ 16 ಭಕ್ತವತ್ಸಲ ಜಯ ಹರಿನಾಮ ಮುಕ್ತಿದಾಯಕ ಜಯ ಹರಿನಾಮ ಹತ್ತಾವತಾರ ಜಯ ಹರಿನಾಮ ಸತ್ಯ ಶೀಲ ಜಯ ಹರಿನಾಮ ನಿತ್ಯ ನಿರುಪಮ ಜಯ ಹರಿನಾಮ ಕರ್ತು ಶ್ರೀರಾಮ ಜಯ ಹರಿನಾಮ 17
--------------
ರಾಮದಾಸರು
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಮೊದಲಿಗೆ ಶ್ರೀ ಯಮಧರ್ಮ ತನಯೆಶ್ರೀ ಕೃಷ್ಣನಂಗದಿಂದ ಜನಿಸಿದಳುಕಮಲಸಂಭವನ ಲೋಕದೊಳಗಿದ್ದುಕೃಷ್ಣ ಕೃಷ್ಣೆ ಎಂದೆನಿಸಿದಳು 1ಸುಮನಸರೆಲ್ಲರು ಪ್ರಾರ್ಥನೆ ಮಾಡಲುಕೈಲಾಸಕೆ ದಯಮಾಡಿದಳುಆ ಮಹಾದೇವನ ಜಟಾಜೂಟದಿಂಸಹ್ಯಾದ್ರಿಗೆ ಬಂದಿಳಿದಿಹಳು 2ಮುಂದೆ ಮುಂದೆ ತಾ ಸಾಗಿಬರತಿರಲುವೇಣಿನದಿಯು ಬಂದು ಕೂಡಿದಳುಕೃಷ್ಣ ವೇಣಿಗಳ ಸಂಗಮವಾಗಲುಕೃಷ್ಣವೇಣಿ ಎಂದೆನಿಸಿದಳು 3ಕೃಷ್ಣವೇಣಿ ಹರಿದಂಥ ಸ್ಥಳಗಳುಋಮುನಿಗಳು ತಪವ ಗೈದಿಹರುಋಮುನಿಗಳು ತಪವ ಗೈದಕ್ಷೇತ್ರಗಳುಪುಣ್ಯಕ್ಷೇತ್ರ ವೆಂದೆನಿಸಿದವು 4ಗಾಲವೃಗಳು ತಪವಗೈದಸ್ಥಳಗಾಲವಕ್ಷೇತ್ರವು ಗಲಗಲಿಯುಗಲಗಲಿಯಲ್ಲಿಯ ಚಕ್ರತೀರ್ಥರ ಋಬಂಡಿಗಳೇ ಗಾಲವರ ಆಶ್ರಮವು 5ಗಾಲವಕ್ಷೇತ್ರದ ಪಂಚಕೋಶವುಪುಣ್ಯಭೂ'ು ಎಂದೆನಿಸುವದುಗಾಲವಗಳ ಪುಣ್ಯದ ಬಲವೇಗಲಗಲಿಯ ಕೀರ್ತಿಗೆ ಕಾರಣವು 6ಗಾಲವೃಗಳ ನಂಬಿದ ಜನರಿಗೆಭೂಪತಿ'ಠ್ಠಲ ಒಲಿಯುವನುಗಾಲವೃಗಳ ಮರೆತುಬಿಟ್ಟರೆನಷ್ಟವಾಗುವದು ಗಲಗಲಿಯು 7
--------------
ಭೂಪತಿ ವಿಠಲರು
ಮೊದಲು ನಡು ಕಡಿ ಬರಲು ಲಘುತಾ ಇದನುಯರತಾ ಗಣಗಳಂದದಿ ವದಗಿ ಗುರುವಿರಮಧ್ಯವಸಾನದಲಿ ಭಜಸಾ ಸದರ ಗಣ ತಿಳಿಮೂರು ಗುರುಲಘು ವದಗಿರಲು ಮನಗಣಗಳಾದವು ಮುದದಿ ಗಣ ವೆಂಟೆಂದು ಮಹಿಪತಿ ಕಂದಸಾರಿದನು 1
--------------
ಕಾಖಂಡಕಿ ಶ್ರೀ ಕೃಷ್ಣದಾಸರು