ಒಟ್ಟು 2523 ಕಡೆಗಳಲ್ಲಿ , 120 ದಾಸರು , 1847 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳಯ್ಯ ಸದ್ಗುರುರಾಯ | ಈಗ ಏಳು ತುರಗ ಸೂತನುದಯಿಸುವ ಸಮಯ ಪ ಎದ್ದು ಶಿಷ್ಯರ ಕರೆಯಬೇಕು | ಗುರು ಇದ್ದ ದೋಷವ ಕಳೆಯಬೇಕು ಪರಿ ಶುದ್ಧರ ಮಾಡಿ ನೀನುದ್ಧರಿಸಬೇಕು 1 ಭಾಗವತ ಶಾಸ್ತ್ರವಿಚಾರ ಮುರೆರಡು ವಿಧ ಭೇದ ತಾರತಮ್ಯ ಸಾರುತ ಸಲಹೋ ಶಿಷ್ಯಪರಿವಾರ 2 ಪದಸುಳಾದಿಗಳ ಕೇಳಬೇಕು | ಕೇಳಿ ಅದರೊಳಿರುವ ತತ್ವವಿವರಿಸಬೇಕು ಮದಡತನವ ಕಳೆಯಬೇಕು ನಿನ್ನ ಪದ ನಂಬಿದವರಿಗೆ ಮುದಗರಿಯ ಬೇಕು 3 ಸತ್ಯನಾರಾಯಣ ಕಥೆಯ | ಬಹುವಿಸ್ತಾರವಾಗಿ ನೀ ಬಿತ್ತರಿಸಯ್ಯ | ಭೃತ್ಯರಾ ಮಾಯೆ ಓಡಿಸಯ್ಯ ಅಜ್ಞಾನ ಜ್ಞಾನ ಭಕ್ತಿ ವೈರಾಗ್ಯ ಸಂಪತ್ತು ನೀಡಯ್ಯ 4 ಒಂದೂರು ನಿಲಯನೆ ಏಳೊ ಶಾಮ ಸುಂದರವಿಠಲನ ಮಂದಿರನಾಳೋ ಬಂದ ನಿಂದೆಗಳೆಲ್ಲ ಹೂಳೋ ನಿನ್ನ ಪೊಂದಿದ ನಮ್ಮನ್ನು ಅಗಲಿದೆ ಆಳೊ 5
--------------
ಶಾಮಸುಂದರ ವಿಠಲ
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳು ಏಳು ಕೇಶವಾ ಶ್ರೀಮಾಧವಾ ಏಳು ಏಳು ಕೇಶವಾ ಪ ಏಳಯ್ಯ ಮಧುಸೂದನ ಚಕ್ರಧಾರೀ ಏಳಯ್ಯ ನಿಜಶೌರಿ ದಶರೂಪಧಾರೀ ಏಳಯ್ಯ ದೇವಕಿಕಂದ ಉದಾರೀ ಏಳಯ್ಯ ಮುರಹರ ಕೌಸ್ತುಭಧಾರೀ1 ತ್ರಿಜಗವನ್ನು ಬೇಗ ಪಾಲಿಸಲೇಳು ಭಜಕರ ಕರುಣದಿ ರಕ್ಷಿಸಲÉೀಳÀು ಸುಜನರ ಮರೆಯದೆ ವರದೆತ್ತಲಿಕೆ ಯೇಳು ಕುಜನರ ಹರುಷದಿ ತರಿಯಲೇಳು 2 ದಾಸದಾಸರು ಬಂದು ಸೇವಿಸುತಿಹರೇಳು ತಾಸು ತಾಸಿಗೆ ತತ್ವವರುಹಲೇಳು ದಾಸಗೆ ನಿತ್ಯದಿ ಭಾಸವಾಗಲೇಳು ದಾಸಗೆ ಮುಕ್ತಿಯ ಪಾಲಿಸಲೇಳು 3 ಅರುಣೋದಯವಾಯ್ತು ಕಿರುಣೋದಯವಾಯ್ತು ಭರದಿಂದ ಸೂರ್ಯನು ಮೇಲೇರುತಿಹನು ಚರಣ ಕಿಂಕರರೆಲ್ಲ ಸಂಸಾರ ಶರಧಿಯ ಸರಸದಿ ದಾಂಟಿ ನಿಂನನು ಸೇರುತಿಹರು 4 ವಿದ್ಯೆಯರುಹಲು ಯೇಳು ಜ್ಞಾನವೀಯಲು ಯೇಳು ಬುದ್ದಿಯ ಕಲಿಸಿ ಆತ್ಮವ ಸೇರಲೇಳು ಮದ್ದು ಭವರೋಗಕ್ಕೆ ಬೇಗನೀಯಲು ಯೇಳು ಎದ್ದು ಲೋಕಕ್ಕೆ ನೀ ಬೆಳಗಲೇಳು 5 ಸನ್ನುತ ವರ ದೂರ್ವಾಪುರಕೆ ದಿಗ್ದೇಶದಿಂ ದೀನದಾಸರು ಬಂದು ಘನಭಕ್ತಿಯಿಂದ ನಿತ್ಯ ಮಾಡುವರಯ್ಯ ಚನ್ನಕೇಶವಾ ಸೇವೆ ಸ್ವೀಕರಿಸೇಳು 6
--------------
ಕರ್ಕಿ ಕೇಶವದಾಸ
ಏಳು ಬೆಳಗಾಯಿತು ಯದುಕುಲೋತ್ತಮ | ಪರಮೇಷ್ಠಿ ಹರ ಸುರಪಾಲಕರು ಪ ಆಳುಸಹಿತದಲಿ ರಂಗಾಅ.ಪ. ವೇದವನು ತಮ ಕದ್ದು ಒಯ್ದನು | ಆಧಾರಾಗದೆ ಅದ್ರಿ ಮುಣಗಿತು || ಮೇದಿನಿಯ ಬಳಕೊಂಡು ಹೋದನು | ಅದಿತಿಯ ಸುತನು ಭಾದಿಗಾಗದಲೆ ಬಂದು ಸಕಲರು || ಆದರಣೆಯಿಂದ ಕೈಯ ಮುಗಿದು ನೀ | ದಯಾನಿಧಿ ಎಂದು ಹೊರಗೆ ಕಾದು ಐದಾರೆ ರಂಗ 1 ಅಟ್ಟುಳಿ ಹೆಚ್ಚಿತು ವೆ ಗ್ಗಳಿಸಿದರು ಛತ್ರಿಯರು ಈರೈದು ತಲೆಯವನು || ಬಲವಂತನಾದನು ಆರಿಗೊಶವಿಲ್ಲ | ಇಳೆಗೆ ಭಾರವು ತೂಕವಾಯಿತು ಕಳ-| ವಳಗೊಳಲಾರೆವೆನುತಲಿ ಅಳುಕಿ ಭಯದಲಿ | ನಿಮ್ಮ ಬಾಗಿಲ ಬಳಿಯ ಸಾರಿದರೊ ರಂಗಾ2 ಮೂರು ಪುರದವರೀಗ ನಮ್ಮನ್ನ ಮೀರಿದರು | ಕಲಿಪುರುಷ ಸುಜನರ ಮೇರೆದಪ್ಪಿಸಿ ನಡೆಸಿ || ಬಲು ವಿಕಾರ ಮಾಡಿದನು ಈ ರೀತಿ ಶ್ರಮವೆಂದು | ಸಿರಿ ವಿಜಯ- || ವಿಠ್ಠಲ ಕಾರಣಾರ್ಧವ ಕಳೆದು | ಮುಂದೆ ಉದ್ಧಾರ ಮಾಡಿದನು 3
--------------
ವಿಜಯದಾಸ
ಏಳು ರಂಗಯ್ಯ ನೀನೇಳು ಕೃಷ್ಣಯ್ಯ ಏಳಯ್ಯ ದೊರೆ ಬೆಳಗಾಯಿತೇಳೆಂದು ಪಾಲ್ಗಡಲೊಡೆಯ ಹರಿಯನೆಬ್ಬಿಸಿದಳಂದು ಬಾಲೆ ಯಶೋದೆಯು ಬಹು ಸಂಭ್ರಮದಿಂದ ಪ ಶಕ್ರನುಪಟಳವ ನೀ ಪರಿಹರಿಸಬೇಕು ವಿಕ್ರಮದಿ ಗೋವರ್ಧನ ಎತ್ತಬೇಕು ಚಕ್ರಧರ ನಿನ್ನ ಮಧುರೆಗೆ ಕರೆದೊಯ್ಯೆ 1 ಮಾವ ಕಂಸನು ನಿನ್ನ ಬಾ ಎಂದನಂತೆ ಸಾವು ಅವನಿಗೆ ಸಮೀಪದಲಿದೆಯಂತೆ ದೇವಕಿ ವಸುದೇವ ಸೆರೆಯಲಿರುವರಂತೆ ಕಾವುದಕೆ ನೀ ಪೋಗಲೇಬೇಕಂತೆ 2 ಬಿಲ್ಲ್ಹಬ್ಬದಲಿ ಜಯಶೀಲನಾಗಬೇಕು ಖುಲ್ಲ ರಕ್ಕಸ ದಲ್ಲಣನೆನಿಸಬೇಕು ಬಲ್ಲಿದ ಮಗಧನ ಕೊಲ್ಲಿಸಲುಬೇಕು 3 ದೇವಿ ದ್ರೌಪದಿಗೆ ಸುಚೇಲವೀಯಬೇಕು ಭಾವಮೈದುಗೆ ಬೋವÀನಾಗಬೇಕು ಪಾವಿನ ಶರದಿಂದವನ ಪೊರೆಯಬೇಕು ಯಾವತ್ತು ಭೂ ಭಾರವನಿಳುಹಬೇಕು 4 ಮಧ್ವರಾಯರ ಹೃತ್ಪದ್ಮದಿ ನಿಲಬೇಕು ಇದ್ದು ಉಡುಪಿಯೊಳು ಪೂಜೆಗೊಳಲುಬೇಕು ಶುದ್ಧ ವೈಷ್ಣವರಿಷ್ಟಗಳ ಸಲಿಸಬೇಕು ಮುದ್ದು ರಂಗೇಶವಿಠಲನೆನಿಸಬೇಕು 5
--------------
ರಂಗೇಶವಿಠಲದಾಸರು
ಒಂದಾನು ಒಂದು ದಿನ ಶಿಂಧುವಿನೊಳ್ ನೆರೆದು ಬಂದಾರು ದೇವತೆಗಳುವೃಂದಾವು ದುಷ್ಟ ಜನರಿಂದಾಲೆ ಭೂಮಿ ನೊಂದಾಳುಎಂದುಸುರಿತಾ ಪ ಕಂದರ್ಪತಾತ ನಿನಗೊಂದಿಸಿ ಬೇಡುವೆನು ಛಂದಾದಸೂರ್ಯಸುತನಾಮಂದಿರದೋಳ್ ಜನಿಸಿ ನಂದಾದಿ ಗೋಕುಲದಿ ನಿಂದಾತ್ಮಲೀಲೆ ತೋರೊ ಅ.ಪ. ಅಂದಾಡಿದೂತ ಸುರವೃಂದಾರ ವಾಕ್ಯಗಳ ಕಿವಿಯಿಂದಾಲೆಕೇಳಿ ಹರಿಯುಛಂದಾದಿ ನೀವುಗಳು ಮುಂದಾಗಿ ಜನಿಸುವದು ಹಿಂದಾಗಿನಾ ಜನಿಸುವೇಅಂದಾಡಿದಂಥ ಹರಿ ಸುಂದರಾ ಮಾತವನು ತಂದಾನುಬ್ರಹ್ಮ ಮನದೀಇಂದ್ರಾದಿಗಳಿಗೆಲ್ಲ ಅವನಂದದ್ದು ಪೇಳೆ ನಿಜಮಂದಿರಖೋಗಿರೆಂದಾ 1 ಎಲ್ಲಾ ಅಮರರೂ ನಿಜವಲ್ಲಾಭಿಯರು ಸಹ ಅಲ್ಲಲ್ಲೆಜನಿಸುತಿಹರೂಫುಲ್ಲಾಕ್ಷತಾ ಮಥುರೆಯಲಿಟ್ಟು ಗೋಕುಲದಿ ಮೆಲ್ಲಾನೆಬೆಳೆಯುತಿರಲುಅಲ್ಲಿದ್ದ ಗೋಪಿಯರು ಯಲ್ಲಾರು ತಾವು ನಿಜವಲ್ಲಾಭೆರೆಂದು ಹರಿಯೋಳ್‍ಎಲ್ಲಾನು ಬಿಟ್ಟು ಅವನಲ್ಲಿಗೆ ಸ್ನೇಹವನು ಉಲ್ಹಾಸಮಾಡುತಿರಲು 2 ವ್ರಜ ಕರ ವೃಂದಾವನದಲ್ಲಿಳುಹಿದಾ 3 ವಂದೀನ ರಾತ್ರಿ ರವಿನಂದಿನಿಯೋಳ್ ಹರಿಯುನಿಂದೂದಲಾಗ ಕೊಳಲುವೃಂದಾದರಾಗಗಳಿಂದಾಲೆ ಕೇಳಿ ವ್ರಜದಿಂದಾವರಾನಿಹರೂಮಂದೀರದೊಳಗೆ ನಿಜ ಕಂದಾರು ನಾಥಗಳು ಛಂದಾದವಸ್ತ್ರಂಗಳುವಂದಾನು ನೋಡದಲೆ ವಂದಾರು ಯಮುನೆಯಲಿಂದಾರುಮೈಯ್ಯ ಮರೆತು 4 ಬಂದೇವು ನಾವು ನಿಜ ಮಂದೀರ ಬಿಟ್ಟು ನಿಮ್ಮ ಸುಂದರಕೊಳಲ ಧ್ವನಿಗೇಛಂದಾದ ಸ್ಮರಣೆ ಸುಖದಿಂದಿತ್ತು ನಮಗೆ ದ್ವಿಜೇಂದ್ರೇತಕಾಯೋ ಯನಲುಅಂದಾವರಾಮಾತು ನಂದಾನುಸೂನ ದಯದಿಂದಾಲೆಕೇಳಿ ಹರಿಯೂಮುಂದಣಿಯಾಗ ಅವರಿಂದಾಲೆ ಕೂಡಿ ದಯದಿಂದಾಲೆನಲಿದು ಮರೆದೂ 5 ಬಂದಾನು ಮಥುರೆಯಲಿ ಕೊಂದಾನು ಮಾತುಳನೆತಂದೀಯಾ ಬಂಧನವ ಬಿಡಿಸೀಸಾಂದೀಪಗಿತ್ತು ಕಂದಾನಸೂನ ಕುರು ನಂದಾರಕೊಲ್ಲಿಸಿದನೂಇಂದ್ರತ್ವ ಜ್ವಾಲೆಗಳೂ ಅಂತಿತ್ತು ರಾಜ ಸುಖ ಸಂದೇಹ ಸಂತೋಷದೀಇಂದ್ರಾದಿ ಸರ್ವಸುರ ಸಂದೇಹ ಪ್ರಾರ್ಥಿಸಿದ ಒಂದೊಂದೆ ಮಹಿಮೆಗಳನೂ 6 ಛಂದಾಗಿ ಮಾಡಿದ್ವಶ ಮಡುಹಿಕರ ವೃಂದಾವಪಾಲಿಸಿದನೂನಂದಾತ್ಮ ಜಾತವು ಒಂದೊಂದೆ ಮಹಿಮೆಗಳ ತಂದೊಮ್ಮೆಮನದಿ ಸ್ಮರಿಸೀಬೆಂದಾವು ಪಾಪಗಳು ಬಂದಾವು ಸೌಖ್ಯಗಳುಸಂದೇಹವಿಲ್ಲನಿದರೋಳ್‍ಕಂದಾರ ಕೊಡುವ ಧನ ವೃಂದಾವು ಪೊರೆವಾ ಮಂದೀರವಿತ್ತು ಸಲಹುವ 7 ಇಂದೆನ್ನ ಮಾನಸದಿ ತಂದಾತ್ಮ ರೂಪವನೂ ಛಂದಾಗಿ ಸಂತೈಸಲೀನಂದಬಾಲಾಷ್ಟಕವನೂ ಇಂದುವಾವರು ಪಠಿಸುವಾ ಇಂದಿರೇಶನು ಪಾಲಿಸುವನೂ 8
--------------
ಇಂದಿರೇಶರು
ಒಂದಾನೊಂದು ದಿನ ನಂದ ಯಶೋದೆಯು ಕಂದನ ಪ್ರೀತಿಂದಾಡಿಸಲು ಅಂದುಗೆ ಅರಳೆಲೆ ಬಿಂದಿಗೆ ಮಾಗಾಯಿ ಚಂದದಿ ಮಗನನ ಮಾತಾಡಿಸಲು 1 ಉಂಗುರ ಉಡಿದಾರ ರಂಗು ಮಾಣಿಕವು ನೀ- ಲಾಂಗಗೆ ಎತ್ತಿ ಆಲಿಂಗನೆ ಮೋಹದಲಿ ರಂಗನ ಎತ್ತಿ ಆಲಿಂಗನ ಮಾಡುತ್ತಾ ಲಿಂಗನ ಸಹಿತ ಸಮೋಹದಲ್ಲಿ 2 ಅಂಗನೆ ಗೋಪಿಯು ನರಸಿಂಗವಿಠಲಗೆ ಮಂಗಳ ವಾಕ್ಯವು ಮೋಹರಿಸಿ ರಂಗಕುರಂಗ ಚಾತಕ ಸಂಗದಿ ಪಕ್ಷಿಗಳ ಕರೆಸಿ 3
--------------
ನರಸಿಂಹವಿಠಲರು
ಒಂದು ಪ್ರಾರ್ಥಿಸಲು ನೂರೊಂದು ಕೊಟ್ಟಿಯೊ ದೇವ ತಂದೆ ನಿನ್ನಯ ಕರುಣವೆಂದಿಗೂ ಇರಲಿ ಪ ಇಂದು ನೀನಿತ್ತ ನೂರೊಂದು ನಿನ್ನಯ ಪಾದ ದ್ವಂದ್ವಕರ್ಪಿಸುವೆ ನಿನ್ನಯ ಸೇವೆ ಎಂದೆನುತ ಅ.ಪ ನಿನ್ನ ಮೂರ್ತಿಯ ನೋಡಿ ನಿನ್ನ ಸ್ತುತಿಯನೆ ಮಾಡಿ ನಿನ್ನ ಕರದಲಿ ಪಿಡಿದು ಪುಣ್ಯಗಳಿಸಿದೆನೊ ನಿನ್ನ ಸುಂದರ ರೂಪ ಸತತ ಹೃದಯದಿ ಪೊತ್ತು ಧನ್ಯನಾಗಿರುವೆನಿನ್ನೇನು ಬೇಕಿಹುದೆನಗೆ 1 ನಿಟ್ಟುಸಿರು ಬಿಡಿಸಿದೆಯೊ ಹೊಟ್ಟೆಯನು ಸುಡಿಸಿದೆಯೊ ಕಟ್ಟಕಡೆಯಲಿ ಕರವನಿತ್ತು ಮೇಲೆತ್ತಿದೆಯೊ ಕಟ್ಟುಬಣ್ಣವಿದಲ್ಲ ಸುಟ್ಟರಿದು ಪೋಗದೊ ಘಟ್ಟಿಯಾಯಿತು ಎನ್ನ ಪ್ರೇಮ ನಿನ್ನೊಳಗೆ 2 ಕೆಸರಿನಲಿ ಕಂಬದಂತಿದ್ದ ಎನ್ನಯ ಸ್ಥಿತಿಯು ಕುಸಿಯಲಿಲ್ಲವೊ ದೇವ ಶಶಿಕುಲ ಪ್ರಸನ್ನ ಹೊಸದಾದ ಚೈತನ್ಯವೆನಗೆ ವಿಕಸಿತವಾಯ್ತು ಉಸಿರಿರುವ ತನಕ ನಾ ಮರೆವುದಿಲ್ಲವೊ ನಿನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಒಂದೆ ಮಾತನು ಕೇಳು ಒಂದೆ ನುಡಿಯ ಕೇಳು ಒಂದಿಪೆ ನಿನ್ನ ನಾನಿಂದು ಮಂದರಧರ ಚಂದದಿ ನೀತೆನಗಿಷ್ಟವರಾ ಪ ದುರಿತ ತನ್ಮಯವಾಗಿ ಇರುತಿರ್ಪ ಭವದೊಳು ಕಂಟಕ ಹೋರಿ ಹೋರಿಯು ಹರಿನಾಮ ಮಂತ್ರವ ಮರೆಯದೆ ಜಪಿಸಲು ಉರಿದರ ತಕ್ಷಣದೊಳು ಗಮಿಸುವವು 1 ಭವ ಬಾಧೆಗೆ ಶಿಲ್ಕಿ ತಾ ಶೋಧಿಸುತಿರೆ ನರ ಬಾದ್ಯವನು ಆದಿಮುನಿಯು ರಾಮ ಬೋಧನೆ ಪೇಳಲು ಬೂದಿಗೈದವಘರಾಶಿಗಳು 2 ಸುರಗಣನಾಯಕ ನರಸಿಂಹವಿಠಲ ಪೊಗಲಳವೆ ನಿನ್ನ ವರಲೀಲೆಯು ಮರೆಯದೆ ಪಿಡಿದಿಹೆ ನಿನ್ನಂಘ್ರಿಕಮಲವ ನಿರುತದಿ ನೀಡೋ ನೀ ಸೇವೆಯನು3
--------------
ನರಸಿಂಹವಿಠಲರು
ಒಂದೆ ಸುಪಥವೆ ಲೇಸು ಸದ್ಗುರು ಭಕುತಿಗೆ ಧ್ರುವ ಪಿಡಿದರೆ ದೃಢ ಗುರುಭಕುತಿ ಸಾಕು ಷಡದರುಷಣ ಗೂಢವ್ಯಾತಕೆ ಬೇಕು ನಡಿನುಡಿಯಲಿ ನಿಜ ಭೇದಿಸಬೇಕು ಪಡಕೊಂಡರೆ ಬಾಹುದು ಘನಥೋಕÁ 1 ಒಂದರಿಯದೆ ನಿಜದೋರುದು ಖೂನ ಸಂದಿಸಿ ಬೆರೆವುದು ಮನ ಚಿದ್ಛನ ತಂದೆ ಸದ್ಗುರು ದಯದನುಸಂಧಾನ ಎಂದೆಂದಿಗೆ ಅದ ತಾ ನಿಧಾನ 2 ಒಂದಾಗುದೆ ನಿಜಗುರು ದಯಕರುಣ ವಂದಿಸಿ ನೋಡಬೇಕಿದೆ ಘನಸ್ಫುರಣ ಹೊಂದಿ ಬದುಕಿರೊ ಮಹಿಪತಿಗುರುಚರಣ ಚಂದವಿದೆ ಇಹಪರ ಭೂಷಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಒಂದೇ ಬೇಡುವೆ ನಿನ್ನನು ನಿನ್ನಡಿಗಳನೆಂದಿಗು ನೆನೆವುದನು ಪ. ಒಂದೇ ಬೇಡುವೆನು ಮುಕುಂದ ಇದರ ಬಲ ದಿಂದ ಸರ್ವಾರ್ಥವ ಹೊಂದುವ ಮನದಿಂದ ಅ.ಪ. ಪಾತಕಗಳನೆಲ್ಲ ಪರಿಹರಿಸುವ ದುರ್ವಿ- ಘಾತಕವೈರ ಕತ್ತರಿಸುವುದು ಶ್ರೀಕರುಣಿಯ ಸನ್ನಿಧಾನವನಿರಿಸುವ ಆತತಾಯಿಗಳ ಭಂಗಿಸಿ ಬಾಧೆ ಪಡಿಸುವ 1 ಉಂಬಾಗ ಉಡುವಾಗ ಕೊಂಬಾಗ ಕೊಡುವಾಗ ತುಂಬಿದ ಜನರೊಡನಾಡುವಾಗ ನಂಬಿದ ಸತಿಯೊಳು ನಯನುಡಿ ನುಡಿವಾಗ ಅಂಬುದನಿಭ ನಿನ್ನ ಹಂಬಲಗೊಳುವುದ 2 ನಡೆವಾಗ ನುಡಿವಾಗ ಮಡಿಯನುಟ್ಟಿರುವಾಗ ಪೊಡವಿ ಪಾಲಕರೊಡನಾಡುವಾಗ ಕಡಲಶಯನ ನಿನ್ನ ನೆನೆವರೆ ನಾಚಿಕೆ ಕಾಲ ದೃಢದಿಂದ ಸ್ಮರಿಸುವ 3 ಖೇದ ಮೋದಗಳೆಂಬ ಭೇದವಿಡದೆ ಯಾವಾ- ಗಾದರು ಸರಿಯಾಗಿ ಸ್ಮರಿಸುವರ ಕಾದುಕೊಂಡಿರುವಂಥ ಕರುಣಿಯೆಂಬುದರಿಂದ- ಗಾಧ ಮಹಿಮೆ ನಿನ್ನ ಹಾದಿ ತೋರಿಸುವುದ 4 ಶ್ರಮವಿಲ್ಲದೆ ಸ್ಮøತಿ ಭ್ರಮಣೆ ಬಿಡಿಸುವ ಶ್ರೀ- ರಮಣ ವೆಂಕಟಗಿರಿ ನಾಯಕನೆ ನಮಿಸಿ ಬೇಡವೆನೆಂಬ ಮಮತೆಯಿರಿಸಿ ನಿನ್ನ ಕಮನೀಯಪದಕಲ್ಪದ್ರುಮ ನೆರಳಿರಿಸೆಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಒಂದೇ ಮತ ಹರಿಯ ಮತ ಒಂದೇ ಭಾವ ಸಿರಿಯರಸನ ಭಾವ ಸಲಹಿದ ನರಹರಿ ಒಂದೇ ಮನದಂಬರೀಷನ ಕಾಯ್ದ ಹರಿ ಒಂದೇ ಮನದಿ ಧ್ರುವನ ಕಾಯ್ದ ಹರಿ ಒಂದೇ ಗಳಿಗೆಯಲಿ ತನ್ನುಂಗುಟದಿ ಸೋಕಿಸೆ ಕಲ್ಲಾಗಿದ್ದಹಲ್ಲೆಯ ಪೆಣ್ ಮಾಡಿದ ತಂದೆಯಂದದಿ ಭಕ್ತರ ಹಿಂದೆ ಕಾದಿದ್ದು ಕರುಣಾಸಿಂಧು ಭಕ್ತರ ಬಂಧು ಸುಂದರಿ ಸಿಂಧುಸುತೆಯರಸನ ನಿತ್ಯ ನೆನಯಿರಿ ಹರಿ ಭಕ್ತರು 1 ಸಾರ ನಾಲ್ಕು ಯುಗದಾಧಾರ ನಾಲ್ಕು ಮುಖದಲಿ ನೆಲಸಿ ಸೃಷ್ಟಿಕಾರ್ಯವ ನಡೆಸಿ ನಾಲ್ಕು ಮುಖ ಬೊಮ್ಮನಲಿ ನಾನಿಲ್ಲವೆನಿಸಿ ನಾಲ್ಕು ಯುಗದಲಿ ಜನಿಸಿದ ರಕ್ಕಸರಿಗೆ ತಿಳಿಸಿ ನಾಲ್ಕು ಲೋಕದಿ ಮೆರೆದ ನಾಕಚಾರ ವಂದ್ಯ ನಾಲ್ಕು ಹಸ್ತದಿ ನಾಲ್ಕು ವೇದತಂದಾ ಮೂರ್ತಿ ನಾಲ್ಕು ವೇದದ ಸಾರದಮೃತ ಭಕ್ತರಿಗಿತ್ತು ಹದಿನಾಲ್ಕು ಲೋಕಕೆ ನಾನೇ ಕರ್ತನೆಂದರಿಸಿ ನಾಲ್ಕು ವಿಧದಲಿ ಕಾವ ಶ್ರೀ ಶ್ರೀನಿವಾಸನ ಭಕ್ತರಾದರೆ ಈ ಕಲಿಯುಗದಿ ನಾಲ್ಕು ಜನರು ಮೆಚ್ಚುವರು ನಿಮ್ಮ ಹರಿ ಭಕ್ತರೆ ಕೇಳಿ2 ನಿನ್ನ ಸಹವಾಸ ಸೈ ನಿನ್ನ ಒಡನಾಟ ಸೈ ನಿನ್ನ ರೂಪ ಚತುರ ಬುದ್ಧಿ ಎನ್ನ ಸೈ ಎನ್ನಲಾಪರೆ ನಿನ್ನ ಕೈ ಚಳಕವಿಲ್ಲದಲೆ ಜೈಸುವದೆಂತೀ ಕಲಿಕಾಲದಿ ಸ್ವಾಮಿ ಜೈಲುವಾಸದಿ ಕೂತು ನಿನ್ನ ಕಲ್ಯಾಣವ ಕಟ್ಟಿದರೊ ನಿನ್ನ ಭಕ್ತರು ಜೈ ಕರುಣಾಕರ ನಿನ್ನ ಭಕ್ತರ ಮಹಿಮೆ ನಾ ಪೊಗಳುವದೆಂತೊ ಜೈ ಎನಿಸಿಕೊಳ್ಳಲು ನಿನ್ನೊಲುಮೆ ಕಾರಣವಲ್ಲವೆ ಜೈವೆಂಕಟ ಶ್ರೀಶಾ ಶ್ರೀ ಶ್ರೀನಿವಾಸ ನಿನ್ನ ಭಕ್ತರಿಗೆ ಜಯ ಅಪಜಯವೆಲ್ಲಿ ನಿನ್ನ ಭಕ್ತರಿಗೆ ಎಂದೆಂದಿಗೂ ಜೈ ಹರಿಭಕ್ತರ ನೆನೆಯಿರಿ ಹರಿಭಕ್ತರು 3 ಯನ್ನ ಯತ್ನವೇನಿಲ್ಲಿದರೋಳು ಪನ್ನಗಾದ್ರಿ ನಿವಾಸನಲ್ಲದೇ ಯನ್ನ ಯತ್ನ ಸಲ್ಲುವುದೇ ಎನ್ನ ಮನಸಿಲಿ ಬಂದು ನಿಂದು ತಾನೇ ನುಡಿಸಿದನಿಂದು ಚೆನ್ನಗಿರಿಯರಸ ಭಕ್ತ ಜನ ಬಂಧು ಬಂದು ನಿಂದು ಎನ್ನ ಮನದಭಿಲಾಷೆ ಸಲಿಸೆ ದೀನ ವತ್ಸಲನು ಎನ್ನ ಕರದಲಿ ಬರೆಸಿ ನಲಿದಾಡಿದ ತನ್ನ ವಾಣಿಯನಿತ್ತು ಎನ್ನ ಕುಲದೈವ ಶ್ರೀ ಶ್ರೀನಿವಾಸನ ಕೃಪೆ ಎನ್ನ ಮೇಲೆಂತುಟೊ ಕಾಣೆ ಇನ್ನು ಈ ವಾಣಿ ಹರಿಯದೆಂದು ನುಡಿವುದು ಹರಿಭಗವದ್ಭಕ್ತರು 4 ಪಾಮರರಿಗೆ ಕಲ್ಪತರು ಪಾಮರರಿಗೆ ಜಗದ್ಗುರು ವರವ ತೋರಿ ಪಾಮರರ ಪುನೀತರನು ಮಾಡೆ ಹರಿ ಪಾಮರೆಂದು ಲೆಕ್ಕಿಸದೇ ತಾವಲಿದು ನುಡಿಸಿದ ಪತಿತ ಪಾವನ್ನ ಶ್ರೀ ಶ್ರೀನಿವಾಸನದೇ ಈ ಉಕ್ತಿಯಲ್ಲರ ನೃತ್ರವಿಲ್ಲೆಂದು ತಿಳಿದು ಪಾಮರರನ್ನುದ್ಧರಿಸಲು ಹರಿಭಕ್ತರು ಪಠಿಸುವುದು ಈ ನುಡಿಯ 5 ಜತೆ ಶರಣು ಭಕ್ತರ ಪಾಲ ಶರಣು ಶ್ರೀಲೋಲಾ ಶರಣು ನಿನಗೆ ಸದಾ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಒಬ್ಬರ ಮಾತ್ಯಾಕೆ ನಾಲಗೆ ನೀನು ಉಬ್ಬದೆ ಸುಮ್ಮನಿರು ನಾಲಗೆ ಪ ಮಬ್ಬಿನಿಂದ ನೀ ಒಬ್ಬರ ಮಾತಾಡಿ ಕೊಬ್ಬನಿಂ ಕೆಡಬೇಡ ನಾಲಗೆ ಅ.ಪ ಮಂದಿ ಮಾತಾಡಲು ನಾಲಗೆ ನಿನಗೆ ಬಂದ ಭಾಗ್ಯವೇನು ನಾಲಗೆ ಒಂದು ಅರಿಯದೆ ಮನಬಂದಂತೆ ಮಾತಾಡಿ ಅಂದಗೆಡಲಿ ಬ್ಯಾಡ ನಾಲಗೆ 1 ನಿಂದೆಯಾಡಬೇಡ ನಾಲಗೆ ನೀನು ಕುಂದುವಡೆಯ ಬೇಡ ನಾಲಗೆ ಒಂದಿನ್ಹೋಗ್ವುದು ನಿನಗೆಂದಿಗೆ ತಪ್ಪದು ಮುಂದಿನ ಸುಖ ನೋಡು ನಾಲಗೆ 2 ಸತ್ಯ ತಪ್ಪಬೇಡ ನಾಲಗೆ ನೀನ ಸತ್ಯ ನುಡಿಯ ಬೇಡ ನಾಲಗೆ ಮೃತ್ಯುಗೀಡಾಗ ಬ್ಯಾಡ ನಾಲಗೆ 3 ಸುಳ್ಳನಾಡಬೇಡ ನಾಲಗೆ ಸದಾ ಒಳ್ಳೆ ಮಾತಾಡು ಕಂಡ್ಯ ನಾಲಗೆ ಸುಳ್ಳು ಈ ಜಗಕೆ ಮಳ್ಳನಾಗಿ ಯಮ ಕೊಳ್ಳಕೆ ಬೀಳ ಬ್ಯಾಡ ನಾಲಗೆ 4 ಹಾಳುಗೋಜ್ಯಾಕೆ ಕಂಡ್ಯ ನಾಲಗೆ ಕಾಲ ಹೇಳಿ ಬರದು ನಿನಗೆ ನಾಲಗೆ ಶೀಲಮನಸಿನಿಂದ ಪಾಲ ಶ್ರೀರಾಮಪಾದ ಕಾಲತ್ರಂiÀiದಿ ನೆನೆ ನಾಲಗೆ 5
--------------
ರಾಮದಾಸರು
ಒಲಿದವಳ ಬಿಡುವುದು ಧರ್ಮವಲ್ಲ | ಚಲುವ ನಿನಗಾಗಿ ನಾ ಯೇಸು ಕಾಲಕೆ ತಪವಿದ್ದೆ ಪ ತಂದೆತಾಯಿಗಳಲ್ಲಿ ಪುಟ್ಟಿದಾಕ್ಷಣದಲ್ಲಿ | ಅಂದೆ ನೇಮಿಸಿದರು ಪೆಸರನಿಟ್ಟು | ಸಂದೇಹಗೊಳದಿರು ಮೈಲಿಗೆಯವಳೆಂದು | ಬಂದ ಪ್ರಾಣವÀ ನೋಡು ಬರಿದೆ ಪೇಳುವಳಲ್ಲ 1 ಕನ್ಯಾವಸ್ಥಿಯಲಿಂದ ನಿನ ನಿನ್ನ ಧ್ಯಾನವಲ್ಲವೇ | ಅನ್ಯಪುರುಷರಾಪೇಕ್ಷೆ ಮಾಡಲಿಲ್ಲ | ಅನ್ಯಾಯವೇನು ಆಗಲಿ ಪೋಗುವರೇನೊ | ಅನ್ಯಥಾ ಈ ನುಡಿಗೆ ನಿಜಕೆ ನಿಲ್ಲುವೆ ನಾನು 2 ಮಲದಲ್ಲಿ ಮೂರುದಿನ ಪೋಗಾಗಿ ಹೋಗಿದ್ದೆ | ಬಲು ಶುಚಿಯಾದೆನೊ ಶುದ್ಧ ಜಲದಿ | ಘಳಿಗೆ ಕಡೆದರೆ ಎನ್ನ ಪ್ರಾಣನಿಲ್ಲವೊ | ಎನ್ನನಗಲಿ ಮೈ ತಪ್ಪಿಸಿ | ದೂರ ಕರೆದೊಯ್ಯೊ ಕರುಣದಲಿ 3 ನಗೆಗೇಡಿ ಮಾಡದಿರು ಜಗದೊಳಗೆ ಇಪ್ಪವಳ | ಸೊಗಸಿಗನೆ ಸರಸವಾಡುವನೆ ಬಾರೊ | ಮಗುಳೆ ಮತ್ತೊಬ್ಬರು ಮೆಚ್ಚಿದರೆ ಇದೆ ಪಾಟು | ಮಗುಳೇನು ಹೊಸ ಪರಿಯು ತೋರುವುದು ನೋಡಿದರೆ 4 ಕಂಡ ಕಾಣದ ಹಾಗೆ ಮಾತನಾಡಿದಿರೆನ್ನ | ಅಂಡೊಲಿವ ಖ್ಯಾತಿ ಎಂದಿಗೆ ತೀರದೂ | ಕುಂಡಲಿಗಿರಿವಾಸ ವಿಜಯವಿಠ್ಠಲ ವೆಂಕಟ | ಹಿಂಡು ಬಂಧುಗಳಿದ್ದರೇನು ಮಾನವನು ತೊರೆದೆ 5
--------------
ವಿಜಯದಾಸ
ಒಲ್ಲೆ ಒಲ್ಲೆ ಸ್ವಾಮಿ ಒಲ್ಲೆ ಒಲ್ಲೆ ಪ ವಲ್ಲಭ ಶ್ರೀ ಕೃಷ್ಣವಿಠಲನಲ್ಲದೆ ಬೇರೆ ವಲ್ಲಭನನು ನಾ ಅ.ಪ. ಹರಿ ನಿಮ್ಮ ಗುಣಗಳ ಪಾಡದೆ ಇರಲೊಲ್ಲೆ ನಿತ್ಯ ಕೇಳದೆ ಇರಲೊಲ್ಲೆ ಚರಣ ಪೂಜೆಯನಿರುತ ಮಾಡದೆ ಇರಲೊಲ್ಲೆ ದೊರೆಯೆ ನಿಮ್ಮನು ಬಿಟ್ಟು ಬೇಡೆ ಅನ್ಯರ ನಾನು 1 ದುಷ್ಟಜನರ ಸಂಗ ಎಂದೆಂದಿಗುವಲ್ಲೆ ಶಿಷ್ಟಜನರ ಸಂಗ ಎಂದಿಗು ಬಿಡಲೊಲ್ಲೆ ಅಷ್ಟಕರ್ತನು ಜಗಕೆ ವಿಷ್ಣು ಒಬ್ಬನೆ ಬಲ್ಲೆ ಕಷ್ಟ ನೀಡುವ ಭವವ ಎಂದೆಂದಿಗು ಮುಂದೆ 2 ದುರಿತ ರಾಶಿಯ ಮತ್ತೆ ಮಾಡಲು ನಾನೊಲ್ಲೆ ಅರಿಷಡ್ವರ್ಗಂಗಳ ಜಯಿಸದೆ ಬಿಡಲೊಲ್ಲೆ ಗುರುಪಾದ ಪದ್ಮಗಳ ಒಲೆಸದೆ ಬಿಡಲೊಲ್ಲೆ ಪರನಾರಿಯರ ಸಂಗ ಎಂದೆಂದಿಗು ಒಲ್ಲೆ 3 ಉತ್ತಮೋತ್ತುಮ ಕೃಷ್ಣಸಾರದೆ ಇರಲೊಲ್ಲೆ ಭೃತ್ಯ ನಿನ್ನವನೆಂದು ಸಾರದೆ ಇರಲೊಲ್ಲೆ ನಿತ್ಯ ಶೃತಿಯ ಆಜ್ಞೆ ನಡಿಸದೆ ಬಿಡಲೊಲ್ಲೆ ಸುತ್ತಿ ಕಾಯುವೆ ನಮ್ಮ ಬಲ್ಲೆಬಲ್ಲೆನು ಸತ್ಯ 4 “ಶ್ರೀ ಕೃಷ್ಣವಿಠಲ”ನೆ ಪರಮಾಪ್ತ ಸರಿಬಲ್ಲೆ ವಾಕು ಸತ್ಯವೆಂಬುದ ಬಲ್ಲೆ ಏಕ ಭಕ್ತಿಯ ಬಿಟ್ಟು ಏನೇನು ನಾನೊಲ್ಲೆ ಶ್ರೀಕಾಂತನನು ಬಿಟ್ಟು ಕ್ಷಣವು ಜೀವಿಸಲೊಲ್ಲೆ5
--------------
ಕೃಷ್ಣವಿಠಲದಾಸರು