ಒಟ್ಟು 7653 ಕಡೆಗಳಲ್ಲಿ , 131 ದಾಸರು , 4746 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರತಿಯೆತ್ತಿದರೆ ಕೇಶವ ನಾರಾಯಣಗೆ ಪ. ಶಾಶ್ವತವೀವ ಮಾಧವ ವಾಸವವಂದ್ಯ ಗೋವಿಂದಗಾರತಿಯನೆತ್ತಿದರೆ ಅ.ಪ. ದ್ವಾಪರ ರಹಿತ ಶ್ರೀವಿಷ್ಣುವಿಗೆ ಅಪಾರ ಮಧುಸೂದನಗೆ ಪಾಪರಹಿತ ತ್ರಿವಿಕ್ರಮಗಾರತಿಯನೆತ್ತಿದರೆ1 ಸಾಧುಸೇವಿತ ವಾಮನಗೆ ಶ್ರೀಧರ ಹೃಷೀಕೇಶನಿಗೆ ಆದಿಮೂರುತಿ ಪದ್ಮನಾಭಗಾರತಿಯನೆತ್ತಿದರೆ 2 ದÁಮೋದರ ವಾಲುಳ್ಳವಗೆ(?) ಪ್ರೇಮದಿ ಸಂಕರ್ಷಣಗೆ ಕಾಮಿತಾರ್ಥವನೀವ ವಾಸುದೇವಗಾರತಿಯನೆತ್ತಿದರೆ 3 ಅನಿರುದ್ಧ ಪುರುಷೋತ್ತಮಗೆ ವಿನಯದಿಂದಲಿ ಅಧೋಕ್ಷಜಗಾರತಿಯನೆತ್ತಿದರೆ 4 ನರಸಿಂಹರೂಪನಾದವಗೆ ವರದ ಮೂರುತಿ ಅಚ್ಯುತಗೆ ಅರಿಭಯಂಕರ ಜನಾರ್ದನಗಾರತಿಯನೆತ್ತಿದರೆ 5 ಉಪೇಂದ್ರನೆಂದೆನಿಸಿಕೊಂಡವಗೆ ಅಪಾರಮಹಿಮ ಶ್ರೀಹರಿಗೆ ಗೋಪಾಲಮೂರುತಿ ಶ್ರೀಕೃಷ್ಣಗಾರತಿಯನೆತ್ತಿದರೆ 6 ಚತುರವಿಂಶತಿಮೂರುತಿಗಳಾ ಅತಿಶಯ ಧವಳವ ಪಾಡೆ ಸಿರಿ ಹಯವದನ 7
--------------
ವಾದಿರಾಜ
ಆರಾಧನೆ ಪರಮಾನಂದ ಪ ತಾರಾನಾಥ ಕುಲೋದ್ಭವ ಕೃಷ್ಣನ ಅ.ಪ ಘೋರವು ಈ ಸಂಸಾರವೆನ್ನುವುದು ದೂರಿನ ನುಡಿಯಿದು ಬಾಳುವಗೆ ನೂರು ವರುಷಗಳ ಮೀರಿ ಜೀವಿಸಲು ಕೋರಿಕೆ ಬರುವುದು ಧೀರ ಜನರಿಗೆ 1 ನಿರ್ಮಲ ದೇಹವು ನಿರ್ಮಲ ಹೃದಯವು ನಿರ್ಮಲ ನಡೆನುಡಿ ಕರ್ಮಗಳು ಮರ್ಮಜ್ಞರ ಮಾರ್ಗಗಳಲಿ ಸ್ವೋಚಿತ ಧರ್ಮಗಳಲಿ ವಿಶ್ವಾಸವಿರುವವರಿಗೆ 2 ಅನ್ನವಿರುವವರಿಗೆ ತಿನ್ನಲಾಗದು ತಿನ್ನಬಲ್ಲವರಿಗೆ ಅನ್ನವು ಸಿಗದು ಘನ್ನ ಮಹಿಮನ ಪ್ರಸನ್ನತೆಯಿಂದಲಿ ಅನ್ನ ಪಡೆದು ತಿನ್ನಲು ಬಲ್ಲವರಿಗೆ 3
--------------
ವಿದ್ಯಾಪ್ರಸನ್ನತೀರ್ಥರು
ಆರಿಲ್ಲಿಲ್ಲೋ ಮನುಜಾ | ಅರಿಲ್ಲಿಲ್ಲೋ | ಹರಿಭಕ್ತರಿಗೆ ಸರಿ ಉಂಟೇನಣ್ಣಾ | ಆರಿಲ್ಲಿಲ್ಲೋ ತಮ್ಮಾ | ಬಿರದಿನ ಘಲಗಳ ನಡೆಸುವರಯ್ಯಾ ಪ ಕಂಭದೊಳಗ ಹರಿ ಬಿಂಬವ ತೋರಿಸಿ | ಹಿರಣ್ಯ ಕನಾ | ವೆಂಬ ಶಾರ್ದೂಲ ಕರಳವ ಹಾರಿಸಿದ | ನಂಬಿದ ಪ್ರಲ್ಹಾದ ಮಾಸಾಳ ನಮಾ 1 ಕಂಡು ಸೀತಾಪತಿ ನೊಯ್ದು ರಾವಣ ನೆಂಬಾ | ಖಂಡಿಸಿ ಮದ ಸೊಕ್ಕಿದಾನಿಯನು | ತುಂಡ ಮುಂಡ ಮಾಡಿ ಪದವಿಯ ಪಡದಾ | ಚಂಡ ವಿಭೀಷಣ ಮಾಸಾಳ ನಮಾ 2 ಖಂಡ ದಾಸನಬೇಡಿ ಹೊಂದಿದ್ದ ಕಾಯನ | ಸಂದ ಬಿಡಿಸಿ ಮಲ್ಲಯುದ್ಧದಲಿ | ಮಂದರ ಧರನತಿ ಮೆಚ್ಚಿಸಿ ಮೆರೆದಾ | ನಂದ ಭೀಮಶೇನ ಮಾ-ಸಾಳ ನಮಾ 3 ಬೊಮ್ಮ ಸಾರಥಿ | ಉರಗಸ ಹದಿ ಮೇರು ಗಿರಿ ಪಾಪವು | ಹರಿಶರದಿಂದಲಿ ತ್ರಿಪುರವ ಕೆಡಹಿದ | ಸುರ ರಕ್ಷ ಮಹೇಶ ಮಾಸಾಳನಮಾ 4 ಹಿಂದಿನ ಮಾತಿಂದು ಇಂದಿಲ್ಲ ವೆನಬ್ಯಾಡಿ | ಎಂದೆಂದು ಸ್ವರ್ಗದ ಸುಖಗಳಿಗೆ | ಕುಂದವ ನಿಡುವರು ಮಹಿಪತಿ ಸುತ ಪ್ರಭು | ಹೊಂದಿದ್ದ ದಾಸರು ಮಾಸಾಳರೈಯ್ಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರು ನಿನ್ನಂಘ್ರಿ ಭಜಿಸುವರೈಯ್ಯಾ ಸಾರಹೃದಯರ ಪ್ರೀಯ ಸುರಮುನಿಜನ ಧ್ಯೇಯಾ ಪ ಕಮಲಭವಶಿವ ಇಂದ್ರ ನೀನಾಗೇನು ರಮೆ ಧರಾದೇವಿ ರಮಣಾದರೇನು ಯಮದೂತರೊಳಗಾದ ಆಜಮಿಳ ಪೆಸೆ ರ್ಗೊಳೆ ಸುಮನಿಸುರ ನಯ್ಯವನ ಕಾಯದಿದ್ದೊಡೆ 1 ಜಗದುತ್ಪತ್ತಿ ಸ್ಥಿತಿಲಯ ಕರ್ತನಾಗೇನು ಮಗುಳಿ ಸೂತ್ರಧಾರಿಯಾದರೇನು ಸುಗುಣ ಪ್ರಲ್ಹಾದಂಬರೀಷ ಕರಿವರ ಧ್ರುವಾದಿಗಳನುದ್ದರಿಸಿ ತಾರಿಸದಿದ್ದಡೆ 2 ಎಂದೆಂದು ಅರ್ತಜನ ಬಂದು ದೀನಾನಾಥ ತಂದೆ ಮಹಿಪತಿ ಸ್ವಾಮಿಯಂದಡೇನು ಮಂದಮತಿ ಕುಂದಘನವಂದು ನೋಡದ್ದೆ ಇಂದು ನಂದನಗೆ ಸೇವೆ ಪದಲಿಡದಿದ್ದರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರು ಬದುಕಿದರಯ್ಯ ಹರಿ ನಿನ್ನ ನಂಬಿ ಪ ತೋರು ಈ ಧರೆಯೊಳಗೆ ಒಬ್ಬರನು ಕಾಣೆ ಕೃಷ್ಣ ಅ ಕಲಹ ಬಾರದ ಮುನ್ನ ಕರ್ಣನೊಬ್ಬನ ಕೊಂದೆಸುಲಭದಲಿ ಕೌರವರ ಮನೆಯ ಮುರಿದೆನೆಲನ ಬೇಡಲು ಪೋಗಿ ಬಲಿಯ ಭೂಮಿಗೆ ತುಳಿದೆಮೊಲೆಯನುಣ್ಣಲು ಪೋಗಿ ಪೂತನಿಯ ಕೊಂದೆ 1 ಕರುಳೊಳಗೆ ಕತ್ತರಿಯನಿಟ್ಟೆ ಹಂಸಧ್ವಜನಸರಸದಿಂ ಮಗಳ ಗಂಡನ ಕೊಲಿಸಿದೆಮರುಳಿನಿಂದಲಿ ಪೋಗಿ ಭೃಗುಮುನಿಯ ಕಣ್ಣೊಡೆದೆಅರಿತು ನರಕಾಸುರನ ಹೆಂಡಿರನು ತಂದೆ2 ತಿರುಪೆ ಕೂಳ್ ಪುಟ್ಟದೈ ಕೃಷ್ಣ3
--------------
ಕನಕದಾಸ
ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಆರುತೀಯ ತಾರೆ ಶ್ರೀಹರಿಗೆ ಸುರಸಾರ್ವಭೌಮಗೆ ಪ ಬೇಗನೆ ಸಾರಸಾಂಬಕಿಅ.ಪ ಮಾರಜನಕಗೆ ವಾರಿಜಭವ ಕು- ಮಾರ ಜನಕ ಮುಖಾಮರೇಡ್ಯಗೆ ಚಾಪ ಮುರಿದ ಸುಕು- ಮಾರ ಶರೀರ ಸೀತಾರಾಮ ಚಂದ್ರಗೆ 1 ಇಂದಿರವರಗೆ ಮಂದರಧರ ಪು- ರಂದರಾನುಜ ಸಿಂಧುಶಯನಗೆ ಮಂದಯಾನೆ ಛಂದದಿಂದ ಬಂದೀಗ ವಂದೀಶ್ಯಾನಂದಾದಿ ಬೆಳಗಲು 2 ವಾರಣಭಯ ನಿವಾರಣ ಜಗ- ತ್ಕಾರಣಗೆ ಸುಖಪೂರ್ಣದೇಹಗೆ ಸೇರಿ ತನ್ನ ಸೇವಿಪರಘ ದೂರ ಕೊಪ್ಪರ ಶ್ರೀ ನಾರಸಿಂಹನಿಗೆ 3
--------------
ಕಾರ್ಪರ ನರಹರಿದಾಸರು
ಆರ್ತನಾಭೀಷ್ಟವನು | ಪೂರ್ತಿಗೊಳಿಸೊ ಪ ಕಾರ್ತಸ್ವರ ಮೊದಲಾದ | ವಾರ್ತೆ ನಾನೊಲ್ಲೇ ಅ.ಪ. ಫಲ ಗಿಡೆಲೆ ಮರ ಬಳ್ಳಿ | ಜಲ ಬಿಂದು ನವ ನದಿಯುಜಲ ನಿಧಿಯು ವನಗಿರಿಯು | ಜಲ ಚರಾಚರಧೀ ||ಒಳ ಹೊರಗೆ ಸಂವ್ಯಾಪ್ತ | ಚಲಿಪೆ ನೆಲೆಯಿಲ್ಲದಲೆತಿಳಿಸೊ ತವ ಮಹಿಮೆಗಳ | ಅಲವ ಭೋದಾತ್ಮಾ 1 ಕಂಡ ನೀರೊಳು ಮುಳುಗಿ | ಅಂಡಲೆದು ಬೆಂಡಾದೆಪುಂಡರೀಕಾಕ್ಷ ಪದ | ಬಂಡುಣಿ ಎನಿಸದೇ ||ಹಿಂಡು ತೀರದ ಗತ | ಪಾಂಡುರಂಗನ ರೂಪಕಂಡು ಹಿಗ್ಗುವುದೆಂದೊ | ಕುಂಡಲಿಯ ಶಯನಾ 2 ಜ್ಞಾನಾಯು ರೂಪಕನೂ | ಪ್ರಾಣಾಂತರಾತ್ಮ ನಿನಜ್ಞಾನ ಕೊಟ್ಟು ಧರಿಸೊ | ಗಾನ ಪ್ರಿಯನೇ ||ಪ್ರಾಣನಿಗೆ ಪ್ರಾಣ ಗುರು | ಗೋವಿಂದ ವಿಠ್ಠಲನೆನೀನಾಗಿ ಒಲಿಯದಲೆ | ಅನ್ಯಗತಿ ಕಾಣೇ3
--------------
ಗುರುಗೋವಿಂದವಿಠಲರು
ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜ್ಞಾನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಆಲದೆಲಿಯ ಮ್ಯಾಲ ಮಲಗ್ಯುಂಗುಟ ಚಪ್ಪರಿವನು ನೀನಾರೈ ಮೂಲರೂಪದ ನಿಜದೋರದೆ ಬಾಲಕನಾಗಿಹ ನೀನಾರೈಧ್ರುವ ಚಲುವ ಕಂಗಳ ನೋಡದಲ್ಹೊಳವುತ ಜಲದೊಳಗಾಡುವನಾರೈ ಕಾಲುಡಿಗಿಸಿ ಬೆನ್ನಿಲೆ ಬಲು ಕಠಿಣವ ತಾಳಿದವ ನಿನಾರೈ 1 ಕೋರ್ಹಲ್ಲಿಲಿ ಬೇರನೆ ಅಗಳ್ಯಾಡುತ ದೋರುವ ನೀನಾರೈ ನರಮೃಗರೂಪದಿ ತರಳಗೊಳಿದು ಭರದಲಿ ಬಂದವನಾರೈ 2 ಒಪ್ಪಿಲಿ ಮೂರುಪಾದ ಭೂಮಿಯೊಪ್ಪಿಸಿಕೊಂಡವನಾರೈ ಚಪ್ಪಗೊಡಲಿ ಕೈಯಲಿ ಪಿಡಕೊಂಡು ಇಪ್ಪವ ನೀನಾರೈ 3 ಬಳ್ಳಿಹಿಡಿದು ಕಲ್ಲನೆ ಉದ್ಧರಿಸಿದ ಮಲ್ಲನು ನೀನಾರೈ ಗೊಲ್ಲತೆಯರ ಮೋಹಿನಿ ಎಳಿದಾಡುವ ಚಲುವನು ನೀನಾರೈ 4 ಚದುರನು ನೀನಾರೈ ಕುದುರೆಯನೇರಿ ಹದನದಿ ತಿರವ್ಯಾಡುವ ರಾವುತನಾರೈ 5 ಕುರುಹುದೋರದೆ ನರನಾರಿಯರ ರೂಪದಲ್ಯಾಡಿದವನಾರೈ ಬಡಿಸಿದವ ನೀನಾರೈ 6 ಅಗಣಿತ ಗುಣದಲಿ ಬಗೆ ಬಗೆ ಅಡುವ ಸುಗುಣ ನೀನಾರೆ ೈ ಝಗಝಗಿಸುವ ಜಗನ್ಮನೋಹರನಾಗ್ಯಾಡುವ ನೀನಾರೈ 7 ಖೂನ ಕುರುಹದೋರಿದ ಭಾನುಕೋಟಿ ತೇಜನಹುದೋ ಬಾರೈ ದೀನ ಮಹಿಪತಿ ಸನಾಥಮಾಡಿದ ದೀನೋದ್ಧಾರಹುದಹುದೈ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆಲದೆಲೆಯ ಮ್ಯಾಲೆ ಮಲಗಿದ್ದಾದಿಕೇಶವ(ನ) ನೋಡ ಬನ್ನಿರಾಲದೆಲೆಯ ಮ್ಯಾಲೆ ಕೃಷ್ಣ ಬಾಲರೂಪ ಧರಿಸಿ ಅಂಧಕಾರ ಪ್ರಳಯ ಜಲದ ಒಳಗೊಂದಾಲದೆಲೆÉಯ ಮ್ಯಾಲೆ ಕೃಷ್ಣ ಪ ಪ್ರಳಯ ಕಾಲದಲ್ಲೆ ಹರಿಯು ಸರ್ವ ಜೀವರನೆಲ್ಲ ತನ್ನ ಉದರದೊಳಗಿಂಬಿಟ್ಟುಕೊಂಡು ಛಲವ ಮಾಡದಂತೆ ರಂಗ ಬೆರಳು ಬಾಯೊಳಗಿಟ್ಟು ಚೀಪುತ ಹರಳು ಮಾಣಿಕ್ಯದರಳೆಲೆ ಮಾಗಾಯಿ ಕೌಸ್ತುಭ ಕಟಿಸೂತ್ರ ಕರುಣ ಸಾಗರಗಿನ್ನು ವರ ವೈಕುಂಠವಾಸ ಒಂದಾಲದೆಲೆಯ ಮ್ಯಾಲೆ 1 ಅಷ್ಟು ಜೀವರನೆಲ್ಲ ತನ್ನ ಹೊಟ್ಟೆಯೊಳಗಿಂ ಬಿಟ್ಟು ಕೊಂಡು ಸೃಷ್ಟಿ ಲಯಕೆ ಕರ್ತನಾದ ಶ್ರೇಷ್ಠ ಸುಂದರಾಂಗ ತನ್ಹೆಬ್ಬೆಟ್ಟು ಬಾಯೊಳ ಗಿಟ್ಟು ಚೀಪುತ ವಕ್ಷಸ್ಥಳದಿ ಹೆಚ್ಚಿನ ಶ್ರೀವತ್ಸ ತೋರುತ ಉತ್ತಮ ವೈಜ(ಯಂ)ತಿ ವಜ್ರ ಕೆತ್ತಿದ ಕಿರೀಟ ಲಕ್ಷ್ಮೀಚಿತ್ತ ಚೋರನಾದ ಪರಮಾತ್ಮ ಪರಮ ಹರುಷದಿಂ ದ್ವೊಂದಾಲದೆಲೆಯ ಮ್ಯಾಲೆ 2 ಗಂಧ ಕಸ್ತೂರಿ ಪರಿಮಳ ಸುಗಂಧವಾದ ಕುಸುಮ ಕೆಲದಿ ಹೊಂದಿ ಕಟ್ಟಿದ ತುಳಸಿಮಾಲಿಕಿಂದೆ ಪರಮ ಶೋಭಿತವಾದ ಬಂದಿ ಕಂಕಣ ಬಾಹುಪ್ಪುರಿಗಳು ದುಂಡುಮುತ್ತಿನ ಕೂದಲ ಕಾಂತಿ ಕದಪಿಲೆಸೆಯಲು ಅಂದಿಗೆ ಪಾಗಡ ಗೆಜ್ಜೆ ಚೆಂದವಾದ ನಾದಗಳಿಂದ ಇಂದುಕೋಟಿ ರವಿಯ ತೇಜ ಮಂದಹಾಸ ಮುಖದ ಹರಿ ಒಂದಾಲದೆಲೆಯ ಮ್ಯಾಲೆ 3 ಥಳಥಳಿಸುವಂತ್ಹೊಳೆವೊ ಚಕ್ರ ಧವಳವರಣ ಶಂಖ ಕರದಿ ಹವಳದುಟಿಯು ಹರಿಯ ಪದ್ಮ ದಳಗಳಂತಕ್ಷಿಗಳ ಚೆಲುವ ಅರುಣನಂತೆ ಚರಣ ಕರದಲ್ಲಿ ಒತ್ತುವೊ ಸಿರಿಯ ಪರಮಪುರುಷ ನೋಡಿ ಸರಸದಿ ಜರ ಪೀತಾಂಬರ ನಾಭಿಕಮಲಕ್ಕೊಲೆವೊ ಒಡ್ಯಾಣವನೆ ಇಟ್ಟು ಹಲವು ಸೂರ್ಯರಂತೆ ಲಕ್ಷ್ಮೀರಮಣ ಶ್ಯಾಮವರಣ ಹರಿ ಒಂದಾಲದೆಲೆಯ ಮ್ಯಾಲೆ 4 ಅಳಕÀನಂದನ ಪಿತನು ತಾ ಘ- ನೋದಕÀದೊಳು ತಾ ರಂಗ ಚಾಮರ ಎಣಿಕಿಲ್ಲದೆ ಮಾ ಣಿಕ್ಯದಾಭರಣ ಫಣಿಪಮಂಚಶಯನ ನೀಲ ಕನಕರತ್ನ ಬಿಗಿದ್ಹಾಸಿಕೆಯಲಿ ಪಂಚಶರನ ಜನಕ ಜಗವ ನಿಟ್ಟು ತನ್ನಲ್ಲಿ ಅಳಕಗೂದಲು ಚೆಂಡಿಕೆಲ್ಲೆ ಅರಳುಮಲ್ಲಿಗೆ ಸುತ್ತಿಹರಿಗೆ ಝಳಕು ಮಿಂಚಿನಂತೆ ಜಗಕÉ ಬೆಳಕಿನÀಲಿ ಭೀಮೇಶ ಕೃ ಷ್ಣೊಂದಾಲದೆಲೆಯ ಮ್ಯಾಲೆ 5
--------------
ಹರಪನಹಳ್ಳಿಭೀಮವ್ವ
ಆಲವವೆ ನಮಗೆ ಸಫಲವು ಕಾಣಿರೊ ಶ್ರೀಲಕುಮಿಯ ಪತಿಯ ನೆನೆವೆಯಾಗಿ ಪ ಕೀಳು ಜನರಿಂದ ಆಡುವಾ ನುಡಿಗಳು ಹಾಳು ಹರಟೆಗಳು ಬಹು ಜಾಳು ಮಾತುಗಳು ಕಾಲ ಪರಿವುದು ಕೇಳಿ ಜನರುಗಳೆ ನಾಳೆ ನೋಡಿದಂಥ ದಾಸರು ದೊರೆಯರು1 ವ್ಯಾಳೆ ಬಂದಾಗ ಸಾಧಿಸದವನಾ ಬಾಳಿವೆ ಬೋಳೆ ಅದು ಗೋಳಲ್ಲವೆ ಗಾಳಿ ಬಂದಾ ಕೈಲೆ ತೂರಿಕೊಳ್ಳಿರೊ ಮ್ಯಾಲೆ ತನ್ನೊಶವೇನೊ ದೇಶಕಾಲಗಳು 2 ಸೋಲಿಸಿ ದುರ್ಮತರ ಕೀಳು ಮಳಿಗೆಗಳ ಪರಿ ಸೀಲಿಸೊ ಪ್ರತಿ ದಿವಸದಲಿ ಅಲವ ಬೋಧರ ಮತವ ಲೀಲೆಯಿಂ ತಿಳಿಕೊಂಬ್ಯ ಪಾಲಿಸುವ ದಯದಿಂದ ವಾಸುದೇವವಿಠಲ 3
--------------
ವ್ಯಾಸತತ್ವಜ್ಞದಾಸರು
ಆವ ಕರ್ಮವಿಲ್ಲ ಆವ ಧರ್ಮವಿಲ್ಲವೋ |ಕೇವಲಾನಂದಭಾವ ಬೋಧದಲ್ಲಿ ಬೆರೆಯಲು ಪ ತನುವು ಬೇರೆ ಮನವು ಬೇರೆ | ಮನದ ಒಳಗೆ ನೆನಹು ಬೇರೆ | ತನುವು ಮನವು ನೆನವಿಗಿನ್ನು | ಸಾಕ್ಷಿಯಾಗಿಹ | ಚಿನುಮಯಾತ್ಮ ತಾನೆ ತನಗೆ | ಜನನ ಮರಣ ಎಂಬುದೆಲ್ಲ | ಮನದ ಆಟವೆಂದು ತಿಳಿದು | ಉನ್ಮನದಿ ಘನದಿ ನಲಿವಗೆ 1 ಸತ್ಯ ಶರಣರಡಿಯ ಪಿಡಿದು | ತತ್ತ್ವ ಶಾಸ್ತ್ರವನ್ನು ತಿಳಿದು |ನಿತ್ಯಾನಿತ್ಯವನು ವಿವರಿಸುತಲಿ | ಭಕ್ತಿಯಿಂದಲಿ ||ನಿತ್ಯ ಪೂರ್ಣ ವಸ್ತು ತಾನೆ | ಮತ್ತೆ ಬೇರೆ ಇಲ್ಲವೆಂದು |ಚಿತ್ತದಲ್ಲಿ ತಿಳಿದುಕೊಂಡು | ಮಿಥ್ಯವೆಲ್ಲ ಕಳೆದಗೆ 2 ಹಿಂದಾದುದ ನೆನಿಸಲಿಲ್ಲ | ಮುಂದೆ ಒಂದು ಬಯಸಲಿಲ್ಲ |ಬಂದುದೆಲ್ಲ ಸುಖವು ಎಂದು ಶಾಂತದಿಂದಲಿ ||ತಂದೆ ಭವತಾರಕನ | ಹೊಂದಿ ಪೂರ್ಣ ವಸ್ತುವಾಗಿ |ಬಂಧನವನು ಕಡಿದು ಕೊಂಡು | ಆನಂದದಲಿರುವವಗೆ 3
--------------
ಭಾವತರಕರು
ಆವ ಕುಲವಾದರೇನು ಶ್ರೀ ವಾಸು-ದೇವನೆಂದವನೆ ಧನ್ಯಾ ಪ ವಿಪ್ರ ಮಾ-ದಿಗಗಿಂತ ನಿಕೃಷ್ಟನೋ 1 ಊಧ್ರ್ವ ಪುಂಡ್ರಗಳ ಧರಿಸೀ ಶಿರದಲ್ಲಿಪದ್ಮಾಕ್ಷಿ ತುಲಸಿ ಮಾಲೆ ಹಾಕಿಮಧ್ವ ವಲ್ಲಭನೆನ್ನದಾ ಆ ವಿಪ್ರಶುದ್ಧ ಚಾಂಡಾಲನೆನ್ನೋ 2 ಪಂಚ ಮುದ್ರೆಗಳ ಧರಿಸೀ ಲೋಕ ಪ್ರ-ಪಂಚಕ್ಕೆ ದಾಸನೆನಿಸೀಪಂಚ ಭೇದವು ತಿಳಿಯದಾ ಆ ವಿಪ್ರಪಂಚ ಮಹಾ ಪಾತಕಿಯೋ3 ನಾರದಾನೆಂಬವನನೂ ಕುಲದಲ್ಲಿಆರೆಂದು ತಿಳಿಯೊ ನೀನು ನಮ್ಮನಾರಾಯಣನ ಸ್ಮರಿಸಲು ನೀಚ್ಯೋನಿಮೀರಿ ಸುರಮುನಿಯಾದನೋ 4 ವಿದುರ ವಾಲ್ಮೀಕರ ನೋಡು ಅವರ ತುದಿಮೊದಲು ನೀ ತಿಳಿದು ನೋಡು ನಮ್ಮಮದನನಯ್ಯನ ಭಜಿಸಲು ಅವರೆಲ್ಲಸದಮಲಾರಾದುದರಿಯಾ 5 ಜಾತಿ ಕಾರಣವಲ್ಲವೋ ಶ್ರೀ ಹರಿಗೆಭೂತಿ ಕಾರಣವಲ್ಲವೋ ||ಸ್ವಾತಂತ್ರ್ಯವನ್ನು ಮರೆದು ಶ್ರೀ ಹರಿಯಪ್ರೀತ್ಯಾಗಲೆನ್ನಬೇಕೋ 6 ಅನ್ಯ ಕರ್ತೃತ್ವ ಮರೆದು ಶ್ರೀ ಹರಿಗೆನಿನ್ನ ನಿನ್ನವನೆಂದಡೇತನ್ನ ದಾಸ್ಯವನೆ ಇತ್ತು ನಮ್ಮ ಮೋ-ಹನ್ನ ವಿಠ್ಠಲ ಸಲಹುವಾ 7
--------------
ಮೋಹನದಾಸರು
ಆವ ಜನುಮದ ಪಾಪ ವೊದಗಿತೋ ಎನಗಿಂದು | ದೇವ ಗಂಗೆಯ ನೋಡಿದೆ ಪ ದೇವಕೀಸುತ ಒಲಿದು ಕರೆತಂದು ಎನ್ನನು | ಪಾವನ್ನ ಮಾಡಿದನು ಇನ್ನೂ-ಮುನ್ನೂ ಅ.ಪ ಗುರುಗಳನು ವಹಿಸಿ ಭೂಸುರರಿಗೆ ಕಠಿಣ | ಉ- ತ್ತರ ಪೇಳಿಸಾಗಿದ್ದನೊ | ವರ ಬ್ರಾಹ್ಮಣರ ತಪ್ಪು ಬಲು ಇರಲು ಇಲ್ಲದೇ | ಸರಿಯೆಂದು ಸ್ಥಾಪಿಸಿದೆನೊ | ಮುರಿವ ಲಗ್ನಕೆ ಪೋಗಿ ಪುಸಿ ದ್ರವ್ಯವನೆ ಪೇಳಿ | ಮರಳಿ ಪೂರ್ತಿಸಿ ಇದ್ದೆನೊ | ವರ ವಿಪ್ರರಿಗೆ ವಧೆಯು ಬರಲು ಸಾಕ್ಷಿಯಾಗಿ | ಪರಿಹರಿಸಿ ಬಂದಿದ್ದನೋ ಏನೋ 1 ಘನ ತೀರ್ಥಯಾತ್ರೆಗೆ ಪೋಗುವಾಗ-ಲು | ವಂ ಕರ್ಮ ಮಾಡಿದ್ದೆನೊ | ಜನಪತಿಗಳ ಮಾತು ಕೇಳದೆ ಧರ್ಮಕ್ಕೆ | ಅನುಕೂಲನಾಗಿದ್ದೆನೊ | ಮನೆಗೆ ಬಂದತಿಥಿಗಳು ಜರಿದು ಪಿತ್ರಾದ್ಯರಿಗೆ | ಉಣಿಸಿ ಸುಖಪಡಿಸಿದ್ದೆನೊ | ವನಗಳನು ಕಡಿದು ದೇವಾಲಯವ ಕಟ್ಟಿಸಿ | ಕ್ಷಣ ಕ್ಷಣಕೆ ಅರ್ಚಿಸೆದೆನೋ ಏನೊ 2 ಉತ್ತಮನು ಮನೆಗೆ ಬಂದಾಗ ಮಾಡುವಂಥ | ಸತ್ಕರ್ಮ ತೊರೆದಿದ್ದೆನೋ | ಹೆತ್ತವರ ಬಾಂದವರ ಧನದಿಂದ ಕೆರೆ ಭಾವಿ | ಹತ್ತೆಂಟು ಕಟ್ಟಿಸಿದೆನೊ | ದತ್ತಾಪಹಾರವನು ಮಾಡಿ ಅದರಿಂದನಗ್ನಿ- ಹೋತ್ರವನು ಸಾಧಿಸೆದೆನೊ | ಇತ್ತ್ಯಧಿಕ ನಿರ್ಬೀಜ ಪಾಪಗಳನೆಸಗಿ | ಕೃ- ತಾರ್ಥನಾದೆನೊ ವಿಜಯವಿಠ್ಠಲನ್ನ ಕರುಣದಲಿ3
--------------
ವಿಜಯದಾಸ