ಒಟ್ಟು 840 ಕಡೆಗಳಲ್ಲಿ , 100 ದಾಸರು , 740 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ ಮುಖ್ಯ ಪ್ರಾಣಾ ನಂಬಿದೇ ನಿನ್ನಯ ಪಾದಾ ಡಂಬರ ತೊಲಗಿಸಿ ಡಿಂಬದೊಳಗೆ ಹರಿಯ ಬಿಂಬ ಪೊಳೆವಂತೆ ಮಾಡೊ ಪ ಇಪ್ಪತ್ತು ಒಂದು ಸಾವಿರ ಐದೊಂದು ನೂರು ಅಪ್ರತಿಹಂಸಮಂತ್ರ ತಪ್ಪದೆ ದಿನದಿನ ಒಪ್ಪದಿಂದಲಿ ಭಜಿಸಿ ತಪ್ಪಿಸೋ ಭವವಾ ಸ ಮೀಪದ ಜೀವ ಕೊ ಅಪ್ಪನಂದದಿ ಪುಣ್ಯ ವಪ್ಪಂತೆ ಕರುಣಿಸೊ ಕಪ್ಪುವರ್ಣನ ಕೂಡಪ್ಪಿಸಿ ಪಾಲಿಸೋ 1 ಹತ್ತೇಳು ಎರಡಾಯುತ ನಾಡಿಯೊಳು ಉತ್ತರÀ ಪಾಲಿಸೋ ಉತ್ಕ್ರಮಣದಲ್ಲಿ ನೆತ್ತಿಯದ್ವಾರದಿಂದ ಎತ್ತಮರಿಯಲೀ ಸದದೆ ತತ್ತುವರೊಳು ಜೀವೋ ತ್ತಮನೆ ಸತ್ ಚಿತ್ ಎನಗೆ ಕೊಡು ಉತ್ತರ ಧರಿಸೋ 2 ಅಂತರಂಗದಿ ಉಸುರಾ ಹೊರಗೆ ಬಿಟ್ಟು ಅಂತರಂಗಕ್ಕೆ ಸೇರುವ ಪಂಥದೊಳು ನೀನೆ ನಿಂತು ನಾನಾಬಗೆ ತಂತು ನಡಿಸುವ ಹೊಂತಕಾರಿ ಗುಣವಂತ ಬಲಾಢ್ಯ 3 ಪಂಚಪರಣ ರೂಪನೆ ಸತ್ವ ಕಾಯಾ ಪಂಚೇಂದ್ರಿಯಗಳ ಲೋಪನೆ ಪರಮೇಷ್ಟಿ ಸಂಚಿತಾಗಾಮಿ ಬಿಡಿಸಿ ಕೊಂಚ ಮಾಡೋ ಪ್ರಾರಬ್ಧ ವಂಚನೆ ನೆನೆದೊ ಅಂಚಗಂಚಿಗೆ ಪರಪಂಚವೆ ಓಡಿಸಿ ಪಂಚವಕ್ತ್ರ ಹರಿ ಮಂಚದ ಗುರುವೇ 4 ಯೋಗಾಸನದೊಳಿಪ್ಪ ಯಂತ್ರೋದ್ಧಾರಾ ಭಾಗವತರಪ್ಪಾ ಯೋಗಿಗಳೀಶಾ ವ್ಯಾಸಾ ಯೋಗಿಗೊಲಿದ ವ್ಯಾಸಾ ಶ್ರೀ ತುಂಗಭದ್ರಾ ವಾಸಾ ಬಾಗುವೆ ಕೊಡು ಲೇಸಾ ಜಾಗರ ಮೂರುತಿ5
--------------
ವಿಜಯದಾಸ
ಪಾದ ಕ್ಕೆರಗಿ ಯಾಚಿಸುತಲೆ ಮುಗಿವೆನು ಕೈಯ್ಯಾನೆರೆ ನಂಬಿದವರನು ಎರವು ಮಾಡಲು ನಿನಗೊಳತೇನಯ್ಯಾ ಪಿಡಿ ಬೇಗನೆ ಕೈಯ್ಯ ಕರದಶಿಗಳರಸನೆ ಕಾಮಿತ ಫಲದನೆ ಕರಿರಾಜನ ಭೀಕರ ಹರ ವೆಂಕಟ ಪ ಆಪಾರ ಮಹಿಮಾ ಆಪದ್ಬಂಧೋ ಆಪನ್ನರ ಪಾಲಿಪ ವ್ಯಾಪಾ ನಿನಗಲ್ಲದೆ ಮತ್ತೊಂದು ಕಾಣೆನೊ ಜಗದೀ ಭೂಪಾನೆ ಭೂಮ್ನ ಗುಣಗಣಸಿಂಧೋ ಸ್ವಾಮಿಯೆ ಎನಗಿಂದು ಪರಿಪಾಲಿಸು ಶ್ರೀಪತಿ ಅಂಜನ ಗಿರಿರಾಜ 1 ಕಲಿಯುಗದೊಳಗೀ ಪರ್ವತಕೆಲ್ಲಿ ಸರಿಗಾಣೆನು ಯೆಂದು ನೆಲಸಿದೀ ನೀನೆ ಈ ಸ್ಥಳದಲ್ಲಿ ವೈಕುಂಠಕಿಂತ ನೆಲೆಯು ವೆಗ್ಗಳವೆಂದು ನೀ ಬಲ್ಲೀ ಅದಕಾರಣ ಇಲ್ಲೀ ತಲೆಯಾಗುವರಯ್ಯಾ ಭಳಿರೆ ಕಾಂಚನ 2 ತರುಜಾತಿ ಮೃಗಪಕ್ಷಿಗಳಾಕಾರ ಮೊದಲಾದ ರೂಪದಿ | ನೂರಾರು ಕಿನ್ನರು ತಮ್ಮ ಪರಿವಾರ ಒಡಗೂಡಿ ನಿನ್ನ ಚರಣಾರಾಧನೆ ಮಾಡಿದ ವಿಸ್ತಾರ ಈ ಬಗೆ ಶೃಂಗಾರ ಸರಿಗಾಣೆನೊ ಹೇ ತಿರುಪತಿ ವೆಂಕಟ ಗಿರಿರಾಜ3 ಹದಿನಾಲ್ಕು ಲೋಕದ ಭಾಗ್ಯಗಳಲ್ಲಿ ಅಮರತತಿಗೆ ಕೊಟ್ಟ ವಿಧವೆಲ್ಲಾ ಪ್ರತ್ಯಕ್ಷವು ಪುಸಿಯಲ್ಲ ನಾನವರ ನೋಡೆ ಅಧಮಾಧಮನು ನೀನೆ ಬಲ್ಲೆಲ್ಲಾ ಎನ್ನ ಯೋಗ್ಯತಯ ಫಣಿ 4 ಸುವರ್ಣ ಮುಖರಿತೀರ ನಿವಾಸ ನವರಾತ್ರಿಯಲ್ಲೀ ಆವ ಬ್ರಹ್ಮೋತ್ಸವ ನೋಡಲು ಶ್ರೀಶ ಸಂಪದವನಿತ್ತು ಪೊ ರವಾನು ಕಲುಷದ ಭಯ ಬರಲೀಸ ಶ್ರೀನಿವಾಸ ಭೂದೇವರ ವರದ5
--------------
ವಿಜಯದಾಸ
ಪಾದ ನಂಬಿದೆ ಜನಕೆ ಪಾರುಗಾಣಿಪ ಪರಮ ಕರುಣಿ ಶ್ರೀ ಧೀರೇಂದ್ರವರ್ಯಾ ಪ ನಿತ್ಯ ಅನವರತ ಭಕ್ತಿಯನೆ ಇತ್ತೆನ್ನ ಕಾಯೆಯ್ಯ ಕರುಣಾನಿಧೆ ಅ.ಪ. ವಸುಧೀಂದ್ರ ಕರಕಮಲ ಸಂಜಾತ ವಸುಧೆಯೊಳು ವಾಸವಾಗಿಹ ಭಕ್ತ ಜನಕೆಲ್ಲಾ ವಾಸವಾನುಜ ಶ್ರೀ ವಾಸುದೇವನ ಸರ್ವಜಗಕೆಲ್ಲಾಪಾಯನೆಂಬಾ ವಾಸುದೇವನ ಮತವ ಬೋಧಿಸುತೆ ಸಾತಾರಾ ಪುನಯಾದಿ ನಗರದ ವಾದಿಗಳನೆಲ್ಲಾ ವಾದದಿಂದಲಿ ಗೆದ್ದು ಬಹುಮಾನವನೆ ಪಡೆದು ಮಹಿಯೊಳಗೆ ಬಹು ಖ್ಯಾತಿ ಪಡೆದ ಮಹಾಮಹಿಮ 1 ಭೂರಮಣ ಶ್ರೀಕಾಂತ ಬಹುಕೋಪದಿಂದಲಿ ಕೋದಂಡಪಾಣಿಯಾಗಿ ಭವಜನಕೆ ಮೋಹವನೆ ಬೀರುವಾ ಸಮಯದಲಿ ಬಹು ಭ್ರಾಂತಿಗೊಂಡು ಇರಲು ಭಾರತೀಶನ ದಯದಿ ಭಾಗೀರಥಿಯ ಕೂಡಿ ಬಹುಭಕ್ತಿಯಿಂದ ಒಲಿಸಿ ಭೂಮಿಜೆಯ ಕಳ್ಳನನೆ ಸಂಹರಿಪ ಕಾರ್ಯದಲಿ ಬಹುಸೇವೆಗೈದಂಥ ಪುಣ್ಯಶಾಲಿ 2 ಶ್ರೀರಮಣನಾಜ್ಞೆಯಲಿ ಭಜಿಪ ಭಕ್ತರಿಗೆಲ್ಲ ಬೇಡಿದಿಷ್ಟಾರ್ಥಗಳ ಸಲಿಸುತ್ತಲೀ ಶ್ರೀಕೃಷ್ಣಭಕ್ತರಿಗೆ ಕೃಷ್ಣವಾಗಿಹ ಮನವ ಉತ್ಕøಷ್ಟಗೈಯ್ಯುತ್ತಲೇ ಶ್ರೀಸುರಪನಾಯಕೆ ಸರಿಮಿಗಿಲು ಎಂದೆನಿಪ ಬಹುಭಾಗ್ಯವನ್ನೆ ಪಡೆದು ಶ್ರೀಗುರುತಂದೆವರದ-ಗೋಪಾಲ ಅಸಿ ಬಿಟ್ಟು ಬಿಡದಲೆ ಭಕ್ತಿಯಿಂ ಭಜಿಪ ಗುರುವರ್ಯ 3
--------------
ಸಿರಿಗುರುತಂದೆವರದವಿಠಲರು
ಪಾದ ಮಾನಸಾನಂದಿಸೋ ಶತ ಭಾನುತೇಜನೇ ಪ ಹನ ಚಿತ್ರಭಾನು ದನುಜಾರಿ ಹರಿ ಅ.ಪ ಮಾಡುವೆನಯ್ಯ ಇಂದುವದನಾ ಶ್ರೀ ಪುಲಿಗಿರಿ ಮಂದಿರ ಮಂದರಧರ 1 ದುಷ್ಟಮನುಜರ ಕೂಡಿ ಭ್ರಷ್ಟನಾದೆನು ಇಷ್ಟಫಲ ದಾಯಕ ತ್ರಿವಿಷ್ಟಪಾಧಿಪಾನುಭವ್ಯ ಅಷ್ಟಸಿದ್ಧಿಪ್ರದ ನಿನ್ನ ಗಟ್ಟಿಯಾಗಿ ನಂಬಿದೆನು 2 ಉರಿಹಸ್ತ ಬೇಡಲು ಲೋಕಮೋಹಿನಿಯ ರೂಪು ಸ್ವೀಕರಿಸಿ ಶಿವನಕಾಯ್ದೆ 3 ಕೀರ್ತಿ ನೋಡಿಸೋ ನಿನ್ನಯಮೂರ್ತಿ ಬೇಡಿಸದಿರು ನಿನ್ನ ನಾಡಿನೊಳಗಾಡಿಸೋ ಮುರಾರಿಹರಿ4 ಶುಭ ವೇಷವಿಪುಲ ದುರಿತಗಣ ಶೋಷಣ ಶ್ರೀವರದವಿಠಲ 5
--------------
ಸರಗೂರು ವೆಂಕಟವರದಾರ್ಯರು
ಪಾದ ಸರೋಜಯುಗಳವ ನೆರೆ ನಂಬಿದೆ ಜೀಯ್ಯ ಪ ತಿಮಿರ ಕಾನನ ಯತಿವರ್ಯ ಮಹಾಶೌರ್ಯ ಮೇರು ಸಮ ಧೈರ್ಯ ತ್ರಿವಿಧ ಜೀವರಿಗೆ ಆಚಾರ್ಯ ಅ.ಪ ರಾಮದೂತಾನಾಗಿ ಸೀತೆಗುಂಗುರವಿತ್ತೆ ಕಲಿಯುಗದಿ ಭೂಸುರಕುಲದಿ ಪುಟ್ಟಿ ನೀ ಮೆರೆದಿ ಆರ್ತಜನ ಕೃಪಾಶರಧಿ 1 ಅನುಸಂಧಾನ ಪೂರ್ವಕ ಕೊಡು ವಿಜ್ಞಾನ 2 ಮೂರವತಾರದಿ ಶ್ರೀರಾಮ ಕೃಷ್ಣ ವ್ಯಾಸ- ರಾರಾಧಿಸಿ ಗೈದ ಧೀರ ಶಿಖಾಮಣಿ ಭವ ಭಯನಾಶ ಕೊಡುವುದು ಲೇಸಾ ಗುರುರಾಮವಿಠಲನದಾಸ 3
--------------
ಗುರುರಾಮವಿಠಲ
ಪಾದಂಗಳ ನಂಬಿದೆ ಕೊನೆಗೆ ಪ ಜ್ಞಾನಿಯ ಜೊತೆ ಸೆರಲಿಲ್ಲ 1 ಭಕ್ತಿಪಥದಿಮನ ವರ್ತಿಸಲಿಲ್ಲ ಯುಕ್ತಿಯಿಂ ವಿಷಯವಿರಕ್ತನಾನಲ್ಲ 2 ಭಾಗವತರ ಪರಿಚರ್ಯವಿಲ್ಲ 3 ತಂತ್ರದೊಳಗೆ ಜಾಣ್ಮೆಯನಗಿನಿತಿಲ್ಲ 4 ಸಂಗತಿ ವರ್ಜಿಸಲಿಲ್ಲ 5 ದುರುಳ ಕಾಮುಕಸಂಗ ಕಿರಿದಾಗಿಲ್ಲ 6 ಶ್ರೀಪುಲಿಗಿರಿ ವರದ ವಿಠಲನೆ 7
--------------
ಸರಗೂರು ವೆಂಕಟವರದಾರ್ಯರು
ಪಾದಗಳಂ ನಂಬಿದೆನಾಂ ಶ್ರೀಧರಾಚ್ಯುತಗೋವಿಂದ ಪ ಮಧ್ಯೆದೊಳಾದರದಿ ಕುಣಿಯುತಿರುವಅ.ಪ ಅಳೆದು ಮೂರಡಿಯಿಂದ ಜಗವ ಬಲಿಯ ಪಾತಾಳಕ್ಕೆ ತುಳಿದು ಲಲನೆಗಂಗೆಯ ಪೆತ್ತು ಮಂಗಳಗಳನು ಭಕ್ತರಿಗೀವ ಶುಭದಾ 1 ಧನುವ ಮೆಟ್ಟಿಮುರಿದು ಮೊಳಲಸದಾನಂದದೊಳಿರುವ 2 ಗರಡುದೇವ ನಿತ್ಯಪೊತ್ತ ಸಿರಿಯು ಸದಾ ಒತ್ತುತಿರುವ ಪರಮಪಾವನ ಹೆಜಾ ಜಿಯ ವರದನೆನುತ ನಾರದನೆನೆವ 3
--------------
ಶಾಮಶರ್ಮರು
ಪಾದವನು ನಂಬಿದೆನೊ ಪರಮಪುರುಷಾ ಪಾವನನ ಮಾಡೆನ್ನ ಶ್ರೀರಂಗನಾಥ ಪ ಪಾದ ಪಾದ ಬಲಿಯ ಪಾದ ಪಾದ 1 ಪಾದ ಪಾದ ಪಾದ ಪಾದ 2 ಪಾದ ಪಾದ ಪಾದ 3 ಪಾದ ಪಾದ ಪಾದ ಪಾದ 4 ದುರುಳ ಕಂಸಾಸುರನ ಎದೆಯ ತುಳಿದ ಪಾದ ಮುಚುಕುಂದಗೆ ಮುಕ್ತಿಯನಿತ್ತ ಪಾದ ಕಿಚ್ಚು ಬಳಸಲು ಪರ್ವತವನೆತ್ತಿದ ಪಾದ5 ಶಿಲೆಯಾದ ಆಹಲ್ಯೆಯನು ಕಾಯ್ದ ಪಾದ ಪಾದ ಹರನ ಧನುವನು ಮುರಿದು ಜಾನಕಿಯ ತಂದ ಪಾದ ಪಾದ 6 ಪಾದ ಪಾದ ಸೇತುಬಂಧನ ಮಾಡಿ ಸೀತೆಯನು ತಂದ ಪಾದ ಪಾದ 7 ಪಾದ ಪಾದ ಪಾದ 8 ರಾಜಸೂಯಾಗದಲಿ ಪೂಜೆಗೊಂಡ ಪಾದ ಪಾದ ದಂತವಕ್ರಾದಿಗಳನು ಸೆಳೆದುಕೊಂಡ ಪಾದ ಪಾದ 9 ಕÀುರುಪಾಂಡವರಿಗೆ ಸಂಧಿಗೈತಂದ ಪಾದ ವಿದುರನಾ ಮನೆಯಲ್ಲಿ ಭೋಜನಗೈದ ಪಾದ ಪಾದ ದುರುಳ ದುರ್ಯೋಧನನ ಉರುಳಿಸಿದ ಶ್ರೀಪಾದ 10 ರಣದೊಳಗೆ ಅರ್ಜುನಗೆ ಸಾರಥಿಯಾದ ಪಾದ ದೊರೆ ಧರ್ಮಾದಿಗಳ [ನು] ಒಲಿದ ಪಾದ ಪಾದ ಪಾದ 11 ಪಾದ ಇಕ್ಷ್ವಾಕು ಶ್ರೀರಾಮರಾರಾಧಿಸಿದ ಪಾದ ಧರ್ಮವರ್ಮಾದಿ ಚೋಳೇಂದ್ರ ಪೂಜಿತ ಪಾದ ಪಾದ 12 ತೊಂಡಮಾನ್ ಚಕ್ರವರ್ತಿಗೊಲಿದು ಬಂದ ಪಾದ ಶೇಷಾದ್ರಿಗಿರಿಯಲ್ಲಿ ನೆಲೆಸಿರ್ಪ ಪಾದ ಪಾದ ಪಾದ 13 ಅಜನ ಯಜ್ಞಕುಂಡದೊಳಗುದಿಸಿ ಬಂದ ಪಾದ ಪಾದ ವ್ಯಾಧರೂಪಿನಲ್ಲಿ ನಡೆತಂದ ಶ್ರೀಪಾದ ಪಾದ 14 ಪಾದ ಯಾದವಾಗಿರಿಯಲ್ಲಿ ನೆಲೆಸಿರ್ಪ ಪಾದ ವರಸಂಧಿಗೃಹದಲ್ಲಿ ವಾಸವಾಗಿಹ ಪಾದ ಪಾದ 15 ಕರುಣದಿಂದರ್ಜುನಿಗೆ ಸಾರಥಿಯಾದ ಪಾದ ಕೈರವಿಣೀ ತೀರದಲಿ ನೆಲೆಸಿರ್ಪ ಪಾದಾ ರುಕ್ಮಿಣೀ ಬಲಭದ್ರರೊಡನೆ ಒಪ್ಪಿದ ಪಾದ ಕರುಣ ವೆಂಕಟಕೃಷ್ಣನೆಂಬೊ ಬಿರುದರಳ್ಳ ಪಾದಾ 16
--------------
ಯದುಗಿರಿಯಮ್ಮ
ಪಾಪ ಹತ್ತಿದೆ ಜಗಕೆ ಪಾಪ ಹತ್ತಿದೆಪಾಪದೊಳಗೆ ಮಹಾಪಾಪ ಪುರುಷ ಬೀಜಕೆ ಬಂದಿದೆ ಮೃತ್ಯು ಪ ಅಂದು ಕೃತಯುಗದಿ ಪಾರ್ವತಿಯಾಯಿತು ಭಸ್ಮಾಸುರಗೆಮುಂದೆ ತ್ರೇತಾಯುಗದಿ ಸೀತೆಯಾಗಿ ಹಿಡಿಯಿತು ರಾವಣಂಗೆ ಮೃತ್ಯು1 ಹಿಂದೆ ದ್ವಾಪರಯುಗದಿ ದ್ರೌಪದಿಯಾಗಿ ದುರ್ಯೋಧನನ ಮುರಿಯಿತು ಮೃತ್ಯುಇಂದು ಕಲಿಯುಗದಿ ನೋಡಲು ಇದಕೋ ಮನೆಮನೆಗೆ ಮೃತ್ಯು 2 ಹೆಡಕತ್ತಲಿ ಕೂತು ಹಗಲು ಇರುಳು ಕಾಯಿತಿದೆ ಮೃತ್ಯುಬಿಡಿಸಿಕೊಂಡು ಸ್ವರ್ಗಕೆ ಹೋದರೆ ಬೆನ್ನ ಬಿಡದು ಅಲ್ಲಿ ಮೃತ್ಯುಅಡ ಶಿರೋಶಿ ಇಲ್ಲಿಗೆ ಬಂದರೆ ಅಡರಿ ಕೊಂಬುದು ಮೃತ್ಯು3 ಮೃತ್ಯುಭಯವ ಬಿಡಿಸಿ ಮುಂದೆ ಕಾವರಿಲ್ಲವೋಮೃತ್ಯುಂಜಯರು ಚಿದಾನಂದ ಭಕ್ತರುಂಟುನಂಬಿದರೆ ಮೃತ್ಯು ಮಗ್ಗುಲಲಿದ್ದರೇನು ಮೋಹವಿಲ್ಲದಂತೆ ಮಾಡುವುದು4
--------------
ಚಿದಾನಂದ ಅವಧೂತರು
ಪಾರಿಜಾತ ಶ್ಲೋಕ : ದ್ವಾರಾವತಿಯಲಿ ದÀನುಜದಲ್ಲಣ ಮುಕುಂದ ಸಾರೆ ರುಕ್ಮಿಣಿಸಹಿತ ಆನಂದದಿಂದ ವಾರಿಜಾಂಬಕ ವಾಲಗದೊಳು ಚಂದ ನಾರಂದಮುನಿ ತಾ ಪಾರಿಜಾತವ ತಂದ 1 ಪದ : ಬಲ್ಲಿದ ಮುನಿಯ ಕುಳ್ಳಿರಿಸಿದ ಸತ್ಕರಿಸಿದ ಪುಷ್ಪಯಾರಿಗೆ ಎಂದ ವಲ್ಲಭೆರುಕ್ಮಿಣಿಗಲ್ಲದೆ ಬ್ಯಾರೆ ಸಲ್ಲದು ಎಲ್ಲ ನೀನು ಬಲ್ಲದೆ ಇಂತೆಂದ ಈ ಸುದ್ದಿ ಸತ್ಯಭಾಮೆಗೆ ತಂದು ಹೇಳಿದರಂದು ಕೇಳಿದಳಾಕೆ ನಿಂದು ಮನದಲ್ಲಿ ಅತಿನೊಂದು 1 ಶ್ಲೋಕ : ಇಂದ್ರಲೋಕದ ಚಂದದ ಕುಸುಮವನ್ನು ಮಂದಗಮನೆಯ ಮುಡಿಗೆ ತಾ ಮುಡಿಸಿದನು ಎರವು ಇಲ್ಲವು ಕಾಣಿ ಇಂದು ಮಾಡಿದ ಕುಹಕವ ಕೃಷ್ಣ ತಾನು 2 ಇನ್ನಾರಿಗೆ ಪೇಳುವೆನು ರುಕ್ಮಿಣಿ ತನ್ನ ಜೀವ ಬಹುಪ್ರೀತಿ ಬಡಿಸಿದ ಠಕ್ಕುಠವಳಿಗಳಿಲ್ಲಿ 2 ಶ್ಲೋಕ : ಮೆಚ್ಚಿ ಬಂದೆನೆ ಮೋಹಕ್ಕೆ ಮರುಳಾದೆನೆ ಹಚ್ಚಿರೆ ಮಾತ ಹರಿಯು ತಾ ಕೇಳಿದನೆ ನೆಚ್ಚಿ ಇದ್ದೆನೆ ಎನ್ನೊಳು ವಂಚಿಸಿದನೆ ರಚ್ಚಿಗಿಕ್ಕಿದ ರಂಪು ಮಾಡಿದ ಕಾಣೆ 3 ಪದ : ಮಾರನಟ್ಟುಳಿ ತಾಳಲಾರೆನೆ ಮುಖದೋರನೆ ಇನ್ನೇನು ತೆರನೆ ಕಂತು ಕಮಲಜನಯ್ಯ ಏನೆಂದು ತಿಳಿಯದು ಬಹು ಪ್ರೀತಿ ಇದ್ದವ[ಳ] 3 ಶ್ಲೋಕ : ಮಳೆ ಇಲ್ಲದ ಮೇಘವಿದ್ಯಾತಕ್ಮಮ್ಮ ಬೆಳೆ ಇಲ್ಲದ ಭೂಮಿ ಮತ್ಯಾತಕಮ್ಮ ಗಿಳಿಇಲ್ಲದ ಗೂಡು ತಾನ್ಯಾತಕಮ್ಮ ತಾಳಲಾರೆನೊ ಶ್ರೀ ಕೃಷ್ಣನಿಲ್ಲದೆ ಎಮ್ಮ 4 ಮಾತೆನ್ನ್ಯಾಕ ಪಡೆದಳೊ ಕುಹಕ ಮೂರುಲೋಕ ಪ್ರಸಿದ್ಧ ಓಡಿ ತನಗ್ಯಾಕಿದು ಬ್ಯಾಡಿ 4 ಶ್ಲೋಕ : ಬಿಸಜಾಕ್ಷನ ಬಹಳ ನಂಬಿದ್ದೆ ನಾನು ವಶವಾದನೆ ಒಲಿದು ರುಕ್ಮಿಣಿಗೆ ತಾನು ಅಟ್ಟುಳಿ ಇದೇನು ಆಸೆಬಟ್ಟೆನೆ ಬಹಳ ವಸುದೇವ ಸುತಗೆ 5 ಎಲ್ಲರೊಡನೆ ಕೋಪಿಸುತ ಮನದೊಳು ಮರುಗುತ ಸುರಪಾರಿಜಾತವೆ 5 ಶ್ಲೋಕ :ದೇವಲೋಕದ ಹೂವ ತನಗಿಲ್ಲವಲ್ಲ ಭಾವೆ ಎನ್ನೊಳು ಮುನಿಯದೆ ಬಿಡುವಳಲ್ಲ ಆವ ಪರಿಯಲಿ ತಿಳಿದು ಹೇಳುವೆನು ಸೊಲ್ಲ ಜೀವದೊಲ್ಲಭೆಯೊಡನೆ ಪಂಥವು ಸಲ್ಲ 6 ಎನ್ನೊಡನೆ ನುಡಿಯಳೊ ಇಂದು ಅಪ್ರಬುದ್ಧನಾದರೆ ಕೋಪವನು ತಾಳುವಳೊ ಇಂ ಬಾಗಿಲೊಳು ನಿಂದನು 6 ಶ್ಲೋಕ :ಚಿತ್ತದೊಲ್ಲಭೆ ಚದÀುರೆ ಮೋಹನಾಕಾರೆ ಮುತ್ತುರತ್ನವ ಮನೆಯೊಳಗೆಲ್ಲ ಬೀರಿ ಎತ್ತ ಹೋದಳೊ ಎನ್ನ ಪ್ರಾಣದ ನಾರಿ ಸತ್ಯಭಾಮೆಯ ಸುಳುಹು ಕಾಣೆನು ತೋರಿ 7 ಕೋಕಿಲವಾಣಿಯ ಇನ್ನೆಲ್ಲಿ ಹೋದಳು ತೋರಿಸೆ ಹತ್ರ ಸೇರಿಸೆ ಬಂದೆನು ಹಾರೈಸಿ ನಿಂತವರು ಕಣ್ಣು ಮಾ[ತಾ]ಡಿ 7 ಶ್ಲೋಕ :ಹಾಸಿ ಮಲಗಿದ್ದ ಸತಿಯ ಕಂಡು ಬೀಸಣಿಕೆಯಲಿ ಬೀಸಿದ ಕೃಷ್ಣ ತಾನು ಸೂಸು ಪರಿಮಳ[ದ] ಪಾರಿಜಾತದ ಹೂವ ಹಾ- ರÉೈಸಿ ಕಂಗಳು ತೀರ[ವು] ನೋಡಿದಳು ಕಾಂತೆ 8 ಫಲ್ಗುಣನ ಸಾರಥಿಯ ಇದು ಏನು ಸೋಗೆಂದು ಹಿಂಡು ಸ್ತ್ರೀಯರ ಶಿರೋರನ್ನಳೆ ಮೋಹನ್ನಳೆ ಮುನಿಸ್ಯಾತಕೆನ್ನೊಡನೆ ಅಪರಾಧವ ಕ್ಷಮಿಸೆ 8 ಶ್ಲೋಕ :ಅಕ್ಕರಿಂದಲೆ ರುಕ್ಮಿಣಿಗೆ ಇತ್ತ ಹೂವ ಮಿಕ್ಕ ಸತಿಯರಿಗ್ಯಾತಕೆಂಬ ಭಾವ ಕಕ್ಕುಲಾತಿಯ ಕಂಡೆ ನಿನ್ನಲ್ಲಿ ಜೀವ ಸೊಕ್ಕಬ್ಯಾಡವೊ ಸಾಕು ಹೋಗೆಲೊ ಗೋವ 9 ಮನ್ನಿಸೆ ಕೃಪಾಸಿಂಧು ಕೋಕಿಲಸ್ವರಗಾನೆ ಕುಳ್ಳಿರಿಸಿದ ಹೆಳವನಕಟ್ಟೆಯ ರಂಗನು ಕೃಪಾಂಗನು ದೇವೋತ್ತುಂಗ ವಿಕ್ರಮನು 9
--------------
ಹೆಳವನಕಟ್ಟೆ ಗಿರಿಯಮ್ಮ
ಪಾರ್ವತಿದೇವಿ ಕರುಣದಿ ಕಾಯೆ ತಾಯೆ ಕರುಣಾಭರಣೆ ವಿಶ್ವಂಭರಣೆ ಪ. ಕರುಣಿಸಿ ಕಾಯೆ ತಾಯೆ ಮರೆಯದೆ ನಿನ್ನಯ ಚರಣಸ್ಮರಣೆಯಿತ್ತು ಭರದಿ ಕಾಪಾಡೆ ಅ.ಪ. ಅಂಬಾ ಲೋಕೇಶ್ವರಿ ಅಂಬಿಕೆ ನಿನಪಾದ ನಂಬಿದವರಿಗೆ ಕಷ್ಟಗಳುಂಟೆ ತಾಯೆ ನಿನ್ನ ಕಂಬುಕಂಠನರಾಣಿ ಬೆಂಬಿಡದಲೆ ಕಾಯೆ ಸಂಭ್ರಮದಲಿ ನಿನ್ನ ಇಂಬ ತೋರಿಸುತ 1 ಅಖಿಳಾಂಡನಾಯಕಿ ಸುಖಪ್ರದಾಯಕಿ ಸಖ ಶಂಕರನೊಳು ಸುಖಿಪ ಕಲ್ಯಾಣಿ ಅಕಳಂಕ ಮಹಿಮಳೆ ಸಕಲಕಾಲದಿ ನಿನ್ನ ಭಕುತಿಯೊಳ್ ಪೂಜಿಪÀ ಸಖರೊಳಗಿರಿಸೆ 2 ಭಕ್ತ ಮಂದಾರೆ ಭಕ್ತಿ ಮುಕ್ತಿಯನೀಯೆ ಸಹೋದರಿ ಕಾಯೆ ಭುಕ್ತಿಗೋಸುಗ ನಿನ್ನ ಸ್ಮರಣೆ ನಾನೊಲ್ಲೆನೆ ಶಕ್ತಿ ಸ್ವರೂಪಿಣಿ ಶಂಕರಿ ಶುಭಕರಿ 3
--------------
ಸರಸ್ವತಿ ಬಾಯಿ
ಪಾರ್ವತಿದೇವಿ ಪಾದ ನಂಬಿದೆ ಪ ಪಾದ ಜಗದಂಬೆ ಅರುಣೆ ಪಂಚಭೇದಾ ಆಹಾಶಂಭುವಿನರ್ಧಾಂಗಿ ಬಿಂಬನ ತೋರಿಸೆಅಂಬುಜೋದ್ಭವನ ಪ್ರತಿಬಿಂಬವ ರಾಣಿಯೆ ಅ.ಪ. ಮನದಭಿಮಾನಿ ದೇವತೆಯೆ ಯನಮನವ ನಿಲ್ಲಿಸು ಪಾರ್ವತಿಯೆ ಆಹಾಮುನಿಜನ ವಂದ್ಯಳೆ ಮನ್ಮಥ ಜನನಿಯೆಸಾನುರಾಗದಲಿ ನೀ ಜ್ಞಾನ ಕೊಡುವೆಯೆಂದು 1 ಸಾರಥಿ 2 ಶರಣು ಬಂದೆನೆ ನಾ ನಿನಗೆ ತವಚರಣ ಭಜನೆ ಕೊಡು ಎನಗೆ ಆಹಾಶರಧಿ ಶಯನ ತಂದೆವರದವಿಠಲನನ್ನುಪರಿಪರಿ ಸ್ತುತಿಸುವ ವರಕಾಳಿ ದೇವಿಯೆ3
--------------
ಸಿರಿಗುರುತಂದೆವರದವಿಠಲರು
ಪಾಲನುತ ಶ್ರೀಶೈಲಮಂದಿರ ಮಲ್ಲಿಕಾರ್ಜುನ ರಕ್ಷಿಸು ಪ ಏಳುಕೊಳ್ಳಗಳೇಳು ನೆಲೆಗಳ ಮೇಲೆ ತೋರ್ಪ ಲಿಂಗನೆ ಕಾಲಕಾಲದಿ ಬಾಲನೆಂದೆನ್ನ ಮಲ್ಲಿಕಾರ್ಜುನ ರಕ್ಷಿಸು 1 ಶೀಲ ಭಕುತರ ಪಾಲಿಸಲು ಪಾತಾಳಗಂಗೆಯ ನಿರ್ಮಿಸಿ ಪಾಲಿಸಿದಿ ಬುವಿ ಪಾಲಿಸಿ ವರ ಮಲ್ಲಿಕಾರ್ಜುನ ರಕ್ಷಿಸು 2 ಸಾರಸೌಖ್ಯ ನೀಡುದ್ಧಾರ ಮಾಡಿದ ಮಲ್ಲಿಕಾರ್ಜುನ ರಕ್ಷಿಸು 3 ಅಂಗಜಹರ ಗಂಗಾಧರ ಗುರುಲಿಂಗಜಂಗಮಾತ್ಮಕ ಭವ ಮಲ್ಲಿಕಾರ್ಜುನ ರಕ್ಷಿಸು 4 ಕಾಲಕಾಲ ಕಾಲಕೇಶ್ವರ ಶೂಲಪಾಣಿಯೆ ನಂಬಿದೆ ಕಾಲನ ಮಹದಾಳಿ ಗೆಲಿಸೆನ್ನ ಮಲ್ಲಿಕಾರ್ಜುನ ರಕ್ಷಿಸು 5 ಕಳೆದೆ ದಿನಗಳ ಇಳೆಯ ಸುಖಮೆಚ್ಚಿ ತಿಳಿಯದೆ ತವಮಹಿಮೆಯ ಒಲಿದು ಕ್ಷಮಿಸೆನ್ನ ಬಾಲನೆಂದೆತ್ತಿ ಮಲ್ಲಿಕಾರ್ಜುನ ರಕ್ಷಿಸು 6 ಅಷ್ಟವರ್ಣ ವಿಶಿಷ್ಟಭಕ್ತಿಯ ಕೊಟ್ಟು ಕುರಣಾದೃಷ್ಟಿಯಿಂ ಅನುದಿನ ಮಲ್ಲಿಕಾರ್ಜುನ ರಕ್ಷಿಸು 7 ದುಷ್ಟಭವಕಿನ್ನು ಹುಟ್ಟಿಬರುವಂಥ ಕೆಟ್ಟ ಬವಣೆಯ ತಪ್ಪಿಸು ಇಷ್ಟದಾಯಕ ಮುಟ್ಟಿಪೂಜಿಪೆ ಮಲ್ಲಿಕಾರ್ಜುನ ರಕ್ಷಿಸು 8 ಪರಕೆ ಪರತರ ಪರಮಪ್ರಕಾಶ ವರದ ಶ್ರೀರಾಮಮಿತ್ರನೆ ಮರೆಯ ಬಿದ್ದೆನು ಕರುಣಿಸಿ ಮುಕ್ತಿ ಮಲ್ಲಿಕಾರ್ಜುನ ರಕ್ಷಿಸು 9
--------------
ರಾಮದಾಸರು
ಪಾಲಯಮಾಂ ಶ್ರೀ ರಾಮಾ ಮೂಲ ಸುಗುಣ ಶೀಲನೆ ಪ ನೀಳ್ಗರೆವ ಹೃದಯನಿವಾಸಾ ಕಾಲಾಂತಕ ಕರ್ಮನಾಶಾ ಚಾಳಿಕ ಚಿನ್ಮಯ ಸುರೇಶ ಹರೀ ಲೋಲಗುಣಾತೀತನೆ 1 ಚಂಡಕಿರಣ ಕುಲಜರಾಘವಾ ಸುಂದರಶ್ರೀ ಸೀತಾಧವಾ ಛಂಧ ನಿಜಾನಂದ ವೀಯುವಾ ಬಂದಭಯನಿವಾರನೇ ನೀ 2 ದಶಮುಖರಾವಣ ನಿವಾರಣಾ ಅಸುರಾಸುರ ನಿಕ್ರಂದ ನಾ ಋಷಿಯಾಗವ ಕಾಯ್ದ ದೇವಾ 3 ಅಂಬುಜಾಕ್ಷಾನಂತರೂಪಾ ತುಂಬಿಹ ಸದ್ಗುರು ಸ್ವರೂಪಾ ನಂಬಿದ ಭಕ್ತರನೆ ಪಾಲಿಪಾ ಚಿದಂಬರ ಶಾಂತಿದಾಯಕಾ 4
--------------
ಶಾಂತಿಬಾಯಿ
ಪಾಲಿಸಮ್ಮ ಶ್ರೀ| ಮೂಕಾಂಬಿಕೆಯೆ|| ಹಿಮಶೈಲಸಂಭವೆ|| ಪಾಲಿಸಮ್ಮ ಶ್ರೀ| ಮೂಕಾಂಬಿಕೆಯೇ|| ಪ ಸುಲಲಿತೆ| ದೇವಿ ಮಂಗಳೆ|| ಬಾಲೆಯನುಪಮ| ಲೀಲೆ ಶುಭಚರಿತೆ|ಭೂಲೋಕಪಾಲೆ ಸುಶೀಲೆ ಕಾತ್ಯಾಯಿನಿ 1 ಅಂಬುಜಾಕ್ಷಿ ಸ್ವ| ಯಂಭುಮುನಿ ನಿಕು| ರುಂಬನುತೆ ಜಗ|ದಂಬೆ ಶಂಕರಿ|| ಶುಂಭಧ್ವಂಸಿ ನಿ|ಶುಂಭಮರ್ದಿನಿಯೆ|ನಂಬಿದೆ ನಿನ್ನ ಹೇರಂಬನ ಮಾತೆಯೆ 2 ವೀವುದನುದಿನ|| ಭಾವವಿರಿಸುತ | ಪಾವನಾತ್ಮಕಿಯೆ| ದೇವಿ|ಮೃಡಾನಿ|ಭವಾನಿ|ಶರ್ವಾಣಿಯೆ 3
--------------
ವೆಂಕಟ್‍ರಾವ್