ಒಟ್ಟು 459 ಕಡೆಗಳಲ್ಲಿ , 61 ದಾಸರು , 419 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಧುರ ಸಂಗವ ಮಾಡೋ ಪ್ರಾಣಿ | ಸಾಧುರ ಸಂಗಾ ಮಾಡಲು ಯೋಗಾ | ಸಾಧಿಸಿ ಬಾಹುದು ನೋಡೋ ಪ್ರಾಣಿ ಪ ಅತಿ ಬಳಲಿಸುವ ತಾಪತ್ರಯದೊಳಗ | ಮತಿಗಾಣದೆ ನೋಯ ಬ್ಯಾಡೋ ಪ್ರಾಣೀ | ಮತಿಯುತನಾಗಿ ಭವಖೋರೆ ದಾಟುವ | ಪಥವಾನರಿತು ಬ್ಯಾಗ ಕೂಡೋ ಪ್ರಾಣೀ 1 ಕ್ಷೀರ ನೀರ ವಿಭೇದವ ಮಾಡುವ ಮುಕ್ತಾ | ಹಾರನ ಗುಣ ಭರಣೀ ಮಾಡೋ ಪ್ರಾಣೀ | ಚಾರು ವಿವೇಕದಿ ಸೇವಿಸಿ ಸಾರಾವ | ಸಾರಾ ತ್ಯಜಿಸಿ ನಲಿದಾಡೋ ಪ್ರಾಣಿ 2 ಪರಿ ಜನದಲಿ ಮನವನು ಸಂಸಾರಲಿಡೋ ಪ್ರಾಣೀ ತನುಧನ ಬೆರಿಯದೆ ಮಹಿಪತಿಸುತ ಪ್ರಭು ವಿನ ಸ್ತುತಿ ಸ್ತವನವ ಪಾಡೋ ಪ್ರಾಣೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾಂಬಶಿವಾ ಜಯ ಸಾಂಬಶಿವಾ ಪ ಸುರರ ತೋರಿಕೆಗೆ ಬಂದು ಕೈಲಾಸ ಮಂದಿರ ಮಾಡೀ | ಧರೆಯೊಳು ಸರ್ವರ ಮನದಿರುವಾ 1 ತನ್ನವರನ್ನಯರು ಎಂಬಾ ಭಾವ ಭೇದವಿಲ್ಲದಲೆ ಉನ್ನಂತ ಸಂಪದ ಸಲಿಸುವಾ 2 ತಂದೆ ಮಹಿಪತಿ - ಪ್ರಭು ಶರಣೂ ಹೊಕ್ಕವರ ಚಿದಾ | ನಂದ ಸುಖಾಲಯ ಸೇರಿಸುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾರಿದೆನೋ ನಿನ್ನಾ ಶ್ರೀ ರಾಘವೇಂದ್ರರನ್ನಾ ಎಂದೆಂದಿಗೂ ನಿಮ್ಮ ಚರಣ ಬಿಡೆ ಪ್ರಭುವೇ ಪ ಜ್ಞಾನಿಗಳರಸನೇ ಶ್ರೀ ರಾಘವೇಂದ್ರಾ ಕಳೆಯುವೆ ಶ್ರೀ ರಾಘವೇಂದ್ರಾ 1 ನಿಮ್ಮನ್ನು ಸ್ತುತಿಪೆನಾ ನಿಮ್ಮ ಪದಸೇವಿಪೆನಾ ಕಾಲ ಶ್ರೀ ರಾಘವೇಂದ್ರಾ 2 ಘನ್ನ ಗುಣಮಣಿ ಶ್ರೀ ರಾಘವೇಂದ್ರಾ | ಬಗೆಬಗೆಯಿಂದಲಿ ಸ್ತುತಿಸಿ ಬೇಡುವೆ ಪ್ತಭುವೆ ತಡ ಮಾಡದಲೆ ಕಾಯೊ ಶ್ರೀ ರಾಘವೇಂದ್ರಾ 3
--------------
ರಾಧಾಬಾಯಿ
ಸಿರಿ ಇಂದಿರೇಶ ದಾಸಜನಪೋಷ ದಾಸನಾಶೋತ್ತರಕೆ ಬೇಸರಿಯಬೇಡ ಪ ಭೇದಭಾವನೆ ಬಿಡಿಸು ವಾದಮತಿ ಪರಿಹರಿಸು ಸಾಧುಸಜ್ಜನರ ಸುಬೋಧನುಡಿಗಲಿಸು ಕ್ರೋಧ ತಾಮಸ ಕಡಿಸು ವೇದವಾಕ್ಯವ ತಿಳಿಸು ಸಾಧನದಿ ಪರಲೋಕ ಹಾದಿಯೊಳು ನಡೆಸು 1 ಶಾಂತಿ ಸದ್ಗುಣ ಕಲಿಸು ಶಾಂತಿನುಡಿಗಳು ನುಡಿಸು ಶಾಂತಿ ಮಂತ್ರವ ಬೋಧಿಸು ಶಾಂತಿಸ್ಥಿರಗೊಳಿಸು ಶಾಂತರೊಡನಾಟವಿರಿಸು ಶಾಂತಿಸುಖ ಕರುಣಿಸು ಶಾಂತಜನಪ್ರಭುವೆ ವೇದಾಂತ ಎನಗೊಲಿಸು 2 ಕಾಸಿನಾಸೆಯು ಬಿಡಿಸು ಹೇಸಿ ಬವಣೆಯ ಗೆಲಿಸು ಮೋಸಮಯಪಹರಿಸು ದೋಷದೂರೆನಿಸು ದೋಷನಾಶನ ಜಗದೀಶ ಶ್ರೀರಾಮ ನಿನ್ನ ಸಾಸಿರ ನಾಮ ಎನ್ನ ಧ್ಯಾಸದೊಳು ನಿಲಿಸು 3
--------------
ರಾಮದಾಸರು
ಸುಂದರ ಕಾಂಡ ರಾಮಾಯಣ ಸಿರಿ ಸಿರಿ ಹನುಮನಾ ||ಮೆರೆವ ಸಚ್ಚರಿತೆ ಮಮ | ಗುರುವೆ ನುಡಿಸೀದಷ್ಟುಒರೆವೆ ಕೇಳ್ಪುದು ಸಜ್ಜನಾ ಪ ಗೃಹ ಮೇಧಿ ಇರುವ ಬಗೆ | ಬಹು ಪರೀಯಲಿ ತೋರಿಗುಹ ವನಂಗಳನೆ ಚರಿಸೀ |ಗೃಹಿಣಿಯನು ಕಾಣದಲೆ | ಬಹು ನಟಸಿ ನರರಂತೆಮಹ ಮಹಿಮ ರಾಮ ಬರಲೂ 1 ಪತಿ ದಶರಥನ | ಸುತನ ಕಂಡೆರಗಿ ರವಿಸುತಗೆ ರಾಜ್ಯವನೆ ಕೊಡಿಸೀ 2 ರಾಮನಾಣತಿ ಪೊತ್ತು | ಭೂಮಿಜೆಯ ವಾರ್ತೆಯನುನೇಮದಲಿ ತರುವೆ ನೆನುತಾ ||ಆ ಮಹಾ ಶರಧಿಯನು | ಧೀಮಂತ ಲಂಘಿಸುತಭೂಮಿಜೆಯ ಕಂಡು ಎರಗೀ 3 ಪತಿ | ರಾಮನ್ನ ಕಂಡ ಪರಿಆಮೋದದಲ್ಲಿರುತಿರೇ 4 ಶ್ರೀ ಲೋಲ ರಾಮನಿಗೆ | ಆಳಾಗಿ ಇರಲೊಂದುವಾಲುಳ್ಳ ಕಪಿಯು ಬಂದೂ ||ಕೇಳುವರು ಇಲ್ಲದಲೆ | ಪೋಲಾಗಿ ಹೋಯ್ತೆಂಬಕೀಳು ನುಡಿಗವಕಾಶ ಕೊಡದೇ 5 ವಂದೆರಡು ಹಣ್ಣಾನು | ತಿಂದ್ಹೋಗುವೇನೆಂದುಇಂದೀವರಾಕ್ಷಿಯ ಬೇಡುತಾ ||ನಂದೀಸಿ ಅಶೋಕ | ನಂದನ ವನವ ಮದಸಿಂಧೂರ ನಂತೆಸಗಿದೇ 6 ಕೋಟ್ಯಶೀತಿಯು ನಿ | ಶಾಟ ಯೂಥಪ ಸಹಸಾಷ್ಟ ಕಾಯುತ ಮುಖ್ಯರಾ ||ಖೇಟ ರಾವಣ ಸೇನೆ | ಕೂಟ ಮೂರರಲೊಂದುರೋಟಿಸುತ ನೀ ಮೆರೆದೆಯೋ 7 ಅಕ್ಷೋಹ್ಣಿ ಬಲ ಸಹಿತ | ರಾಕ್ಷಸಾಧಿಪ ಸುತನುಅಕ್ಷಯ್ಯ ಕುವರ ಬರಲೂ ||ಪಕ್ಷೀಂದ್ರ ತೆರ ಪಿಡಿದು | ಈ ಕ್ಷಿತಿಗೆ ಅಪ್ಪಳಿಸೆತಕ್ಷಣದಲಸು ನೀಗಿದಾ 8 ಮಂದಜಾಸನ ವರದಿ | ಇಂದ್ರಜಿತು ಮದವೇರಿಬಂದೆಸೆಯೆ ಬ್ರಹ್ಮಾಸ್ತ್ರವಾ ||ಛಂದದಲ್ಯೋಚಿಸುತ | ಬಂಧನಕೆ ನೀನಾಗಿನಂದದ ಲ್ವೊಳಗಾದೆಯೋ 9 ತೆತ್ತೀಸ ಕೋಟಿ ದೇ | ವತ್ತೀಗಳಿಗೆಲ್ಲಾಉತ್ತೂಮನಾದ ನೀನೂ ||ಸುತ್ತೀಸಿ ಬಾಲವನು | ಹತ್ತೂತಲೆಯವನನೆತ್ತೀಯ ಮೇಲ್ ಕುಳಿತೆಯೋ 10 ನಾರೀಯ ಚೋರ ನಿ | ನ್ನಾರೆಂದು ಕೇಳಾಲುಮಾರುತ್ತರವಿತ್ತು ಜರಿದೇ ||ಮಾರೀಚ ಮೊದಲಾದ | ನೂರಾರು ರಕ್ಕಸರದೂರೋಡಿಸೀದವನ ದೂತಾ 11 ಕೋಟಲೆಗಳ ಕೊಟ್ಟ | ತಾಟಕಾದೀ ದೈತ್ಯಕೂಟಗಳ ಸಂಹರಿಸಿದಾ ||ಕೂಟಸ್ಥ ಲೋಕಗಳ | ನೋಟದಲಿ ದಹಿಪ ವೈರಾಟ ಪ್ರಭುವಿನಾಳೂ 12 ಕೇಳೆಲೋ ರಾವಣನೇ ತಿಳಿಯಯಾ ನೀನು ನಿನ್‍ಹುಳುವೆಂದು ನಿಜ ಬಾಲದೀ |ಸಿಲುಕಿಸಿ ಜಲನಿಧಿ | ನಾಲಕ್ಕು ಮುಳುಗಿದವಾಲಿ ಪೆಸರನು ಮರೆತೆಯಾ 13 ತಾಲಮರಗಳ ಶೀಳಿ | ವಾಲೀಯನೆ ಕೊಂದರ್ಕಬಾಲಗೇ ರಾಜ್ಯ ಕೊಡಿಸೀ ||ಕೋಲಿನಿಂ ನಿಮ್ಮೆಲ್ಲ | ಹೂಳುವ ರಾಮನಆಳು ನಾನೆಂದು ತಿಳಿಯೋ 14 ರಕ್ಕಸ ಪತಿಯಾಜ್ಞೆ | ಇಕ್ಕಿ ತಲೆಯಾ ಮೇಲೆರಕ್ಕಸರೆಲ್ಲ ತವ ಪುಚ್ಛ ||ಕಿಕ್ಕಲೂ ಉರಿ ಲಂಕೆ | ಪೊಕ್ಕು ಪುರವನೆ ದಹಿಸಿಅಕ್ಕರದಿ ವನದಿ ಹಾರೀ 15 ಕಾಯ ಸಹಿತರ ನೋಡಿಪ್ರೀಯ ದ್ವಾರ್ತೆಯ ನರುಹಲೂ ||ಗೇಯ ಹನುಮನ ತುತಿಸಿ || ರಾಯಗೆರಗುವ ವನದಿಕಾಯ ಕುಪ್ಪಳಿಸುತಿರಲೂ 16 ಕಾತುರತೆಯ ಕಪಿ | ಜಾತೆಗಳ ಸಂತೈಸಿಪ್ರೀತಿಯಿಂ ಮಧುವನವನಳಿದ ||ಸೀತೆಯನು ಕಂಡಂಥ | ವಾರ್ತೆಯನು ಪೇಳೆ ರಘುಜಾತ ನಿನ್ನನು | ಅಪ್ಪಿದಾ 17 ಎರಡೇಳು ಭುವನದೊಳು | ಇರುವರೇ ನಿನ್ಹೊರತುಹರಿಗೆ ಪ್ರೀತ್ಯಾಸ್ಪದನು ಎನಿಸೀ ||ಮೆರೆವ ಭಕ್ತಾಗ್ರಣಿಯೆ | ಎರಗುವೆನು ತ್ವತ್ವದಕೆಹರಿಭಕ್ತಿ ಕರುಣಿಸಯ್ಯಾ 18 ಉದಯಕಾಲದಲೆದ್ದು | ಮುದದಿಂದಲೀ ಪದವಸದಯ ಹೃದಯರು ಪಠಿಸಲೂ ||ಬದಿಗ ಗುರು ಗೋವಿಂದ | ವಿಠಲನೋಳ್ ಸದ್ಭಕ್ತಿವದಗಿ ಪಾಲಿಪ ಹನುಮನೂ 19
--------------
ಗುರುಗೋವಿಂದವಿಠಲರು
ಸುಮ್ಮನೆ ಗತಿಯ ಬಯಸಿದರಾಹುದೇ | ಹಮ್ಮ ನೀಗಿ ಕ್ಷಿತಿಯೊಳು ವಮ್ಮನವಾಗಿ ನಿಲ್ಲದೇ ಪ ಭಕುತಿಯಂಕುರವಿಲ್ಲಾ ಯುಕುತಿ ಸಾಧನವಿಲ್ಲಾ | ಮುಖದಲಿ ಸ್ತುತಿ ಸ್ತವನಗಳಿಲ್ಲಾ | ಪ್ರಕಟದಿ ಶೋಡಷ | ಸುಕಲೆಯಾರ್ಚನೆಯಿಲ್ಲಾ | ಅಕಳಂಕ ದೇವ ನಂಬುಗೆ ದೃಢ ವಿಡಿಯಲಿಲ್ಲಾ 1 ವೇದ ಪುರಾಣವನು ಓದಿ ಕೇಳಿದರೇನು | ವಾದಗುಣದಿ ಹಿಂಗಲಿಲ್ಲಾ ತಾನು | ಸಾಧಿಸಿಕೊಳ್ಳದೇ | ಸಾಧುರ ಬೋಧವನು | ಗಾರ್ದಭ ಚಂದನ ಹೊತ್ತಂತೆ ಏನಾದರೇನು 2 ಗುರುಪಾದಕೆರಗದೆ | ಗುರುಮಾರ್ಗವರಿಯದೆ | ಮೊರೆವಾರು ಅರಿಮದವ ಮುರಿಯದೇ | ಪರವಸ್ತು ಇದೆಯೆಂದು | ನರಭಾವ ಮರೆಯದೆ | ಗುರುಮಹಿಪತಿ ಸುತ ಪ್ರಭು ಗುರುತ ದೋರದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸುಮ್ಮನೆ ದೋರೈಯ್ಯಾ | ರಮ್ಮೆಯ ಕರದಲಿ | ಒಮ್ಮೆಗೆ ಅಗಲದೆ ನಮಿಸಿಕೊಳುತಿಹ ಪಾದಾ ಪ ಇಳೆಯ ನೆರೆ ಬೇಡುವ ನೆವದಲಿ ಬಂದು ಬಲಿಗುದ್ಧರಿಸೆಂದು | ಹಲವು ಕಾಲದಿ ಶಿಲೆಯಾದಂಗನೆಗೆ ಸತಿಗತಿ ನೀಡಿದ ಪಾದಾ 1 ಉರಗಾಶರ ಬರೆ ಉಂಗುಟ ಲೋತ್ತಿನರ ನುಳಹಿದ ಕೀರ್ತಿ | ಸುಯೋಧನನುರುಳಿಸಿಗೆಡಹಿದಾ ಪಾದಾ 2 ತಂದೆ ಮಹಿಪತಿ ಪ್ರಭುದಯದಿಂದಲಿ ಎಂದೆಂದು | ಮುನಿಜನ ನಯನ ಚಕೋರರ ಚಂದಿರವಾಗಿಹ ಪಾದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸುಳಾದಿ ಕೌಸ್ತುಭ ಫಾಲ ಸಿಂಗಾಡಿಯಂತಿಪ್ಪ ಪುರ್ಬುಕೂರ್ಮನಂದದಿಗಲ್ಲ ಚುಬುಕ ಚುಬುಕಾಗ್ರದಿಂಸಿರಿಯರಸ ಹಯವದನ ಶೇಷಗಿರಿ ಅರಸನ ಕಿರೀಟದÀಪರಿಪರಿಯ ಸೊಬಗ ನಾ ಕಂಡು ಕೃತಾರ್ಥನಾದೆ ನಾ 1 ಮಠ್ಯತಾಳ ಇಂದಿನದಿನ ಸುದಿನ ಗೋವಿಂದನ ಕಂಡ ಕಾರಣಹಿಂದಿನ ಪಾಪವೃಂದವು ಬೆಂದುಹೋಯಿತು ಎನಗೆಮುಂದಿನ ಮುಕುತಿ ದೊರಕಿತುತಂದೆ ಹಯವದನನೊಲವಿಂದ 2 ತ್ರಿಪುಟತಾಳ ಪಾದ ಪದುಮದ ನೆನಹೊಂದಿದ್ದರೆ ಸಾಕು 3 ರೂಪಕತಾಳ ಗುರು ಭಕುತಿಯಿರಬೇಕು ಹಿರಿಯರ ಕರುಣವು ಬೇಕುಹರಿಕಥೆಗಳ ನಿತ್ಯದಲಿ ಕೇಳುತಿರಬೇಕುವಿರಕುತಿ ಬೇಕು ವಿಷ್ಣುವಿನಾರಾಧನೆ ಬೇಕುವರಮಂತ್ರ ಜಪಬೇಕು ತಪಬೇಕು ಪರಗತಿಗೆಪರಿಪರಿಯ ವ್ರತಬೇಕು ಸಿರಿಪತಿ ಹಯವದನನಪರಮಾನುಗ್ರಹ ಬೇಕು ವಿಷಯನಿಗ್ರಹಬೇಕು 4 ಝಂಪೆತಾಳ ಹರಿಸಗುಣ ಸಾಕಾರ ಸಕಲಸುರರೊಡೆಯ ನಿ-ರ್ಜರರೆಲ್ಲ ಹರಿಯ ಕಿಂಕರರೆಂದರಿಯಬೇಕುಮರಣಜನನ ದೋಷಗಳಿಗತಿ ದೂರತರನೆನಿಪಸ್ಮರಣೆ ಸಂತತಬೇಕು ದುರಾಚಾರ ಬಿಡಬೇಕುಸಿರಿ ಹಯವದನ ಶೇಷಗಿರಿ ಅರಸನಸ್ಮರಣೆಯಿದ್ದವನು ಸಂಸಾರ ಭಯವನುತ್ತರಿಸುವ 5 ಆದಿತಾಳ ಶ್ರೀನಾಥ ಪ್ರಭುವೆತ್ತ ಹೀನಯೋನಿಗಳೊಳುನಾನಾದುಃಖಗಳುಂಬ ಹೀನ ಮಾನವನೆತ್ತಭಾನುಮಂಡಲವೆತ್ತ ಶ್ವಾನನುಬ್ಬರವೆತ್ತಮಾನವ ಹರಿ ನಾನೆಂಬುದ ನೆನೆಯದಿರುದಾನವಕುಲವೈರಿ ಹಯವದನ ವೆಂಕಟಶ್ರೀನಿವಾಸನ ದಾಸರ ದಾಸನೆನಿಸಿಕೊ 6 ಏಕತಾಳ ಕೈವಲ್ಯವನೀವ ನಮ್ಮಶ್ರೀವಲ್ಲಭನ ಕೈಯಿಂದನೀವೆಲ್ಲ ಕ್ಷುದ್ರವ ಬೇಡಿಗಾವಿಲನ ಪೋಲದಿರಿಸಾವಿಲ್ಲದ ಮುಕುತಿಪಥವಬೇಡಿಕೊಳ್ಳಿರೊನೋವಿಲ್ಲದಂತೆ ಸುಖಿಸಬಲ್ಲಕೋವಿದರೆಲ್ಲರುಪೂವಿಲ್ಲನಯ್ಯ ವೆಂಕಟಪತಿ ಹ-ಯವದನನ್ನ ಪ-ದವಲ್ಲದನ್ಯತ್ರ ದಾವಲ್ಲಿ ಭಯ ತಪ್ಪದು 7 ಅಟ್ಟತಾಳ ಗಾತ್ರವ ಬಳಲಿಸಿ ಸ್ತೋತ್ರವ ಪಾಡುತ್ತಯಾತ್ರೆಯ ಮಾಡಿ ವೆಂಕಟೇಶನ ಮೂರ್ತಿಯನೇತ್ರದಿ ನೋಡಿ ತಮ್ಮಿಷ್ಟವ ಪಡೆವ ಸ-ದ್ಭಕ್ತರ ಕಂಡುನಿನ್ನ ಮನದ ಭ್ರಮೆಯ ಬಿಡುದೈತ್ಯ ಪೌಂಡ್ರಕಮತವ ನೆಚ್ಚಿ ಕೆಡಬೇಡಚಿತ್ರಚರಿತ್ರ ಹಯವದನನೊಲಿಸಿಕೊ 8 ದಿಲ್ಲಿಯರಾಯನ ಕಂಡು ಪುಲ್ಲಿಗೆಯ ಬೇಡುವರೆತಲ್ಲೆಯೂರಿ ತಪಸು ಇದ್ದಲ್ಲಿ ಸಾಧಿಸಿಕೊಳ್ಳಿರೊಕ್ಷುಲ್ಲಕರೆಂಜಲನುಂಡು ಬಾಳ್ವರ ನೋಡು ಲಕ್ಷುಮಿವಲ್ಲಭನಲ್ಲದೆ ಹೀನಫಲದಾಸೆ ಸಲ್ಲದಯ್ಯಚೆಲ್ವ ಹಯವದನ ತಿಮ್ಮನಲ್ಲದೆ ಕೈವಲ್ಯಕೆಹಲ್ಲು ಹಂಚಿಗೆ ಬಾಯಿತೆರೆದಂತೆ ಅಲ್ಲಲ್ಲಿಗೆ ಪೋಗದಿರಿ 9 ರೂಪಕತಾಳ ಹನುಮಂತನ ನೋಡು ತನುಮನಧನಂಗಳಶ್ರೀನರಸಿಂಹಗರ್ಪಿಸಿದಪ್ರಹ್ಲಾದನ ನೋಡುಅನುದಿನ ವನದಲ್ಲಿ ತಪವ ಮಾಡುವಮುನಿಜನರ ಕಂಡು ನಿನ್ನ ಮನದ ಭ್ರಮೆಯ ಬಿಡುಘನಮಹಿಮ ವೆಂಕಟಪತಿ ಹಯವದನನ ಭೃತ್ಯರ ಪರಿಚಾರಕರ ಭೃತ್ಯನೆನಿಸಿಕೊ 10 ಜತೆÀ ತಿರುಮಲೆರಾಯ ತ್ರಿವಿಕ್ರಮಮೂರುತಿಸಿರಿ ಹಯವದನನ [ಚರಣವೆ ಗತಿಯೆನ್ನು]
--------------
ವಾದಿರಾಜ
ಸ್ವಾ'ುಲಾಲೀ ತುಲಸೀ ರಾಮಲಾಲೀಪ್ರೇಮತುಲಸೀನಳಿನಾಕ್ಷಧಾಮ ಲಾಲೀ ಪಪ್ಲವಂಗಾಷಾಢಬಹುಳದಶಿ'ುಭಾರ್ಗ' ಲಾಲೀಭು'ಯವತಾರ ಸಾಯಂತ್ರಂ ಮೃಗಶಿರಯುತ ಲಾಲೀ 1ವೇಂಕಟಲಕ್ಷಾಂಬೋದರಪಯೋಧಿಸೋಮ ಲಾಲೀಪಂಕಜಲೋಚನ ಪ್ರಥಮಾಶ್ರಮವ್ರತನೇಮ ಲಾಲೀ 2ಸಿದ್ಧವಟಾ'ರ್ಭವ ವೈಷ್ಣವ ದೇವ ಲಾಲೀ ಇದ್ದರತುಲಸೀಕುಲಕೊಂಡಾರ್ಯಪ್ರಿಯಸುತ ಲಾಲೀ 3ಸಕಲಾಗಮ ಶಾಸ್ತ್ರಾರ್ಥಪರಿಶ್ರಮಸೇಯು ಲಾಲೀಶುಕವಾಗಝ ಸಂಶೋಭಿತ ಚರಿತ ಸತ್ಕ' ಲಾಲೀ 4ಶಮದಮಸದ್ಗುಣ ಶಾಂತಪ್ರತಿಭಸೂನೃತ ಲಾಲೀತೆಮಲಕನೆಪ್ಪುಡು ತಾರಕಮಂತ್ರುಪದೇಶಿ ಲಾಲೀ 5ಶ್ರೀಮದಹೋಬಿಲಸ್ವಾ'ುಯತೀಂದ್ರಸೇವಕ ಲಾಲೀಕೋಮಲಭಾತಕ'ಜನವಂದಿತ ಕೌಶಲ ಲಾಲೀ6ರಾಮಕೃಷ್ಣಪರಬ್ರಹ್ಮಮಹೋತ್ಸವರುಚಕೃತ ಲಾಲೀನೇಮರ'ತಮೂರ್ಖಾದಿಪತಿತೋದ್ಧಾರ ಲಾಲೀ 7ತವಗುಣಜಿತಕೇಯೂರಸತ್ವಾಭರಣ ಲಾಲೀಸುವರ್ಣಮಣಿಮಯಭೂಷಣ ಸ್ವಾರ್ಥತ್ಯಾಗ ಲಾಲೀ 8ಪುರಪುರಭಜನಾಗಾರಾ ಗಣಿತಸ್ಥಾಪಿತ ಲಾಲೀಪರಮೋದಾರಪರ ಚಿಂತನ ಕರುಣಾಕರ ಲಾಲೀ 9ಧರಮ'ಸೂರ್ಪುರವರ ಪ್ರಭುಪೂಜಿತ ಸ್ಮರಜಿತಲಾಲೀತಿರುರಾಮೋತ್ಸವ ತುಲಸೀವನಪ್ರತ್ಟಿತ ಲಾಲೀ 10ದುರಿತನಗಾಸಿನಿ ಸುಮತಮುಖ ಧಾರ್ಮಿಕಲಾಲೀಭರತಪುರಿಯರ್ಚಾವತಾರ ಭಾ'ಕ ಲಾಲೀ 11ಆಧಾರಭ್ರೂಮಧ್ಯಾಂತರ್ಬ' ವೇದ್ಯ ಲಾಲೀಖೇದಮೋದರ'ತ ಬ್ರಹ್ಮಾನಂದ ಲಾಲೀ 12ಪುತ್ತಡಿಗುರುಧರಲಕ್ಷ್ಮಿ ಸಂಪದ್ಯುಕ್ತ ಲಾಲೀಚಿತ್ತುಅಚಿತ್ತೀಶ್ವರ ತತ್ವತ್ರಯ ಶೇ ಲಾಲೀ 13ಸಿರಿಮುಳುಬಾಗಲಸನ್ನಿಧಿ ಸ್ಥಾಪನಚೇಯು ಲಾಲೀಧರರಂಗಸ್ವಾ'ುದಾಸ ಜೀವೋದ್ಧಾರಕ ಲಾಲೀ 14
--------------
ಮಳಿಗೆ ರಂಗಸ್ವಾಮಿದಾಸರು
ಸ್ವಾಮೀ ರಕ್ಷಿಸು ಸುಬ್ರಹ್ಮಣ್ಯ ಕಾಮಿತಪ್ರದ ಸುರಸ್ತೋಮಾಗ್ರಗಣ್ಯಪ. ಜನ್ಮ ಜನ್ಮಾಂತರದ ಕರ್ಮಾನುಸಾರದಿಂ ದುರ್ಮತಿಗೆಳಸಿಯಹಮ್ಮಮತೆಯಲಿ ದುರಿತ ದೂರವಿರಿಸು ನಿರ್ಮಲಜ್ಞಾನೋಪದೇಶವನಿತ್ತೆನ್ನ1 ಪ್ರತ್ಯಗಾತ್ಮನ ನಾಮ ಕೀರ್ತನೆ ಗೈಯುತ್ತ ಭಕ್ತಿಸೌಭಾಗ್ಯವಿರಕ್ತಿಯ ನೀಡು ಭೃತ್ಯವತ್ಸಲ ಭವಭಯಹರ ಗಿರಿಜಾ- ಪುತ್ರನೆ ಪರಮಪವಿತ್ರ ಸುಚರಿತ್ರನೆ2 ಸುರಲೋಕವನು ಕಾವ ಧುರಧೀರ ಪ್ರಭು ನಿನಗೀ ನರಲೋಕವನು ಕಾವದುರು ಕಷ್ಟವೇನು ಪರಿಶುದ್ಧ ಸ್ಥಾನಿಕಧರಣೀಸುರಕುಲ- ಗುರುವೆಂದು ಚರಣಕ್ಕೆ ಶರಣಾಗತನಾದೆ3 ಸಾಕುವಾತನು ನೀನೆ ಸಲಹುವಾತನು ನೀನೆ ಬೇಕು ಬೇಡೆಂಬುವರ ನಾ ಕಾಣೆ ದೊರೆಯೆ ಲೋಕೇಶ ಸುಕುಮಾರ ಶೋಕಮೋಹವಿದೂರ ನೀಕರಿಸದೆಯೆನ್ನ ಸ್ವೀಕಾರ ಮಾಡಯ್ಯ4 ಪೃಥ್ವಿಯೊಳ್ಪಾವಂಜೆ ಕ್ಷೇತ್ರಾಧಿವಾಸನೆ ಸುತ್ರಾಮಾದಿ ಸುರಮೊತ್ತ ಪೂಜಿತನೆ ಕರ್ತ ಲಕ್ಷ್ಮೀನಾರಾಯಣನ ಸಾರೂಪ್ಯನೇ ದೈತ್ಯದಲ್ಲಣ ವಲ್ಲೀದೇವಿ ಮನೋಹರನೆ5
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ವೀಕರಿಸೈ ಕರುಣಾಕರ ಶ್ರೀವರ ಲೋಕವಂದಿತ ಪ್ರಭುವೆ ಪ ಮಾಕಮಲಾಸನ ನಾಕಪಾಲವಂದ್ಯ ಮಾತುಳಾಂತಕ ಮಧುಸೂದನ ಶ್ರೀಹರಿ ಅ.ಪ ಮಾವು ಮಾದಳ ದ್ರಾಕ್ಷ ಬಾಳೆ ಕಿತ್ತಳೆ ಮೊದಲಾದ ಫಲಗಳೆಲ್ಲ ಮಾಧವ ನೀನಿದನಾರೋಗಣೆ ಮಾಡು ಶ್ರೀ ರಮಣಿಯ ಪ್ರಿಯ ಶ್ರೀನಿವಾಸನೆ ಬೇಗ 1 ನಾನಾ ವಿಧದ ಫಲ ಹಾಲು ಸಕ್ಕರೆ ಬೆಣ್ಣೆ ನಾರಾಯಣ ನಿನಗೆ ಬಾಲೆ ಲಕುಮಿ ಪರಮಾದರದಿಂದಲಿ ಸೇವೆಗೆ ಪರಮಾನ್ನವನರ್ಪಿಸುವಳು2 ತನುವೆಂಬೊ ತಟ್ಟೆಯೊಳಿರಿಸಿ ಫಲವ ನಿ- ರ್ಮಲಮನವೆಂಬ ವಸ್ತ್ರವನ್ಹೊದಿಸಿ ಸನ್ಮತವೆಂಬ ಸಾರಣೆಮಾಡಿ ನಮ್ಮ ಗುರುಕರುಣದ ರಂಗವಲಿಯನ್ಹಾಕುವೆ 3 ನವವಿಧ ಭಕುತಿಯ ನಳನಳಿಸುವ ವೀಳ್ಯ ಚಲುವ ಶ್ರೀ ಹರಿ ನಿನಗೆ ಸವಿನಯ ನುಡಿಗಳ ಮಂತ್ರ ಪುಷ್ಪಗಳು ಸನಕಾದಿವಂದ್ಯ ಸರ್ವೇಶ ಶ್ರೀ ಕೃಷ್ಣ 4 ಕ್ಷೀರ ಸಾಗರವಾಸಿ ಶ್ರೀ ಭೂರಮಣನೆ ಮಾರಜನಕ ಹರಿಯೆ ಕಾರುಣ್ಯಸಾಗರ ಕಮಲನಾಭ ವಿಠ್ಠಲ ಪಾರುಗಾಣಿಸೊ ಭವಸಾಗರದಿಂದಲಿ5
--------------
ನಿಡಗುರುಕಿ ಜೀವೂಬಾಯಿ
ಹರಿ ನೀನೆವೆ ಸರ್ವ ಚೇತನ ಧೃತಿಯ ಸಕಲವೇ | ಧರಿಯೊಳು ನಾನೆಂಬುವ ಗುಣವೇ ವರಶೃತಿ ನೇಹನಾ ನಾಸ್ತಿಯಂದು | ಸಾರುವದಿದಕನು ಮಾನವೇ ಪ ಬಯಲೊಳು ಪುಟ್ಟದ ಪರಿಪರಿನಾದದ | ಹೊಯಿಲಿನ ಮಂಜುಳ ಶಬ್ದವಾ | ಬಯಲದಿ ಕೇಳಿತಲ್ಲಿನವ ಹೊಂದುವಾ | ಬಯಲಾಧಾರ ನೀನಲ್ಲವೇ 1 ಸೃಷ್ಟಿಯೊಳಗ ಕಮನೀಯ ಲಾವಣ್ಯದು | ತ್ಕøಷ್ಟತರ ಮೋಹನ ರೂಪವಾ | ದೃಷ್ಟಿಲಿ ಕಾಣುತ ಸುಖದೋಳಗಾಗುವ | ದೃಷ್ಟಸ್ವ ತೇಜ ನೀನಲ್ಲವೆ 2 ಕಮಲ ಪಾರಿಜಾತ ಮಲ್ಲಿಗೆ ಮಕ | ರಂಗದೊಳಗ ಸುಳಿದಾಡುತ | ಮಂದ ಮಾರುತ ಬಂದು ಸೋಕಲು ನಲಿವಾ | ಸುಂದರ ರೂಪನು ನೀನಲ್ಲವೆ 3 ರಸಭರಿತ ಬೇರೆ ಬೇರೆ ದೋರುತಲಿಹಾ | ಅಸಮತೆರೆದ ಪದರ್ಥವನು | ರಸನಾದಿ ಕೊಂಡು ಸವಿಗೆ ತಲೆದೂಗುವಾ | ಕುಶಲ ಭೋಕ್ತನುನೀನಲ್ಲವೇ 4 ಚೆನ್ನಾಗಿ ಕಸ್ತೂರಿ ಪುಳಕವ ಕೂಡಿಸಿ | ಪನ್ನೀರವನು ಮೇಲೆದಳಿದು | ಉನ್ನತ ಚಂದನ ಲೇಪಿಸೆ ಸುವಾ | ಸನೆ ಕೊಂಬುವ ನೀನಲ್ಲವೇ 5 ಅಷ್ಟದಳ ಕಮಲದಳ ಗದ್ದುಗಿಯೊಳು ನಿಂದು | ಅಷ್ಟಮ ಸ್ಥಳಗಳ ಮುಟ್ಟಿಸಿ | ನೆಟ್ಟಿನೆ ಮುಖದೊಳು ಸವಿಸವಿ ಮಾತವ | ಸ್ಪಷ್ಟದಿ ನುಡಿಪ ನೀನಲ್ಲವೇ 6 ಭಜಕನ ಮಾಡಿ ಸೌಮ್ಯತನದಿ ಕರದಿಂದ | ರಜತಮ ವಿರಹಿತ ದಾನವನಾ | ದ್ವಿಜರಿಗೆ ಕುಡಿಸಿ ಅದರಶ್ರಯ ಕೊಂಬುವ | ನಿಜಶಯ ಕರ್ತನು ನೀನಲ್ಲವೇ 7 ಪವನಭ್ರವ ನಡೆಸುವಪರಿಚರಣದಿ | ಜವದಿ ಸುಕೇತ್ರ ಯಾತ್ರೆಯಾ | ಬವರದಿ ಮಾಡಿ ಪುಣ್ಯ ಅರ್ಪಿಸಿ ಕೊಂಬಾ | ಭುವನ ಪಾವನ ನೀನಲ್ಲವೇ 8 ರಸನುಂಡು ಕಬ್ಬ ಹಿಪ್ಪಿಯುಗುಳುವಂತೆ | ಅಸಮತೆ ರಚಿಸಿ ಸರ್ವಾಂಗರ | ರಸವಿತ್ತು ಮಲವಘ ಮುಖದಿಂದ ಪವನದಿ | ಬಿಡಸುವನು ನೀನಲ್ಲವೇ 9 ಅಂಗನೆಯರ ಧೃಡಾಲಿಂಗನವನು ಮನ| ದಿಂಗಿತದಂದದಿ ಗೈಯ್ಯಲು | ಅಂಗಸಂಗದ ಲೋದಗುವ ಭೋಗಿಪ | ಅಂಗಜ ಜನಕ ನೀನಲ್ಲವೇ 10 ಯಂತ್ರವಾಹಕ ನಂದದಿ ಜಗನಿರ್ಮಿಸಿ | ಚಿತ್ರ ವಿಚಿತ್ರವ ದೋರುವಾ | ಅಂತ್ರ ಬಾಹ್ಯವ್ಯಾಪಕ ಮಹಿಪತಿ ಸುತ ಪ್ರಭು | ಸೂತ್ರಧಾರಿ ನೀನಲ್ಲವೆ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಭಜನೆಯ ಮಾಡು ಮನವೇ ಪ ಚರಿತವ ಕೇಳಿ ಹರುಷದಿ ಬಾಳೀ | ಸ್ಮರಿಸುತ ಜಿಹ್ವದಿ ವನಮಾಲಿ ಮನವೇ 1 ತನುಧನವಾಣೀ ಇಂದ್ರಿಯ ಶ್ರೇಣಿ | ಕಮಲ ಪಾಣಿ ಮನವೇ 2 ಗುರುಮಹಿಪತಿ ಪ್ರಭು ಧರಿಯೊಳಿದು | ಇಹಪರ ಗತಿಮನವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಲೀಲೆಯ ನೋಡೀ ಹರಿಯಾಡುವದೀ ಪ ಹೊಕ್ಕಳ ಹೂವಿಲಿ ಬೊಮ್ಮನ ಪಡೆದವ | ಅಕ್ಕರದಲಿ ನಂದನ ಮಗನಾದ 1 ವಶವಲ್ಲದ ಪಾಲ್ಗಡಲಿನ ಮುನಿಯವ | ಯಶೋದೆಯ ಮೊಲೆವಾಲುಂಬುವ 2 ಮಹಿಪತಿ ಸುತ ಪ್ರಭು ಚರಿತೆಯ ಪಾಡಲು | ಇಹಪರ ಸುಖವನು ನೀಡುವದೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಹರಿ ಎನ್ನಬಾರದೇ ಮನವೇ ನೀನು ಪ ಕಂಡವರಾ ಬಿಡ ಮಾತುಗಳಾಡುತ | ಭಂಡತನದಿ ಫಲವೇನು 1 ಊರಗುದ್ದಲಿ ಕೊಂಡು ನಾಡಗಾವಲಿಯಾ | ದಾರಿ ತಿದ್ದುವರೇ ತಾನು 2 ಮಹಿಪತಿ ಸುತ ಪ್ರಭು ನಾಮವ ನೆನೆದರೆ | ಪರ ಸುಖಕರ ಧೇನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು