ಒಟ್ಟು 1352 ಕಡೆಗಳಲ್ಲಿ , 79 ದಾಸರು , 814 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೈ ಬಾರೈ ಭಾರತಿ ಮನೋಹರ ಮಾರುತಿ ಗುರುವರನೆ ದೇವ ಪ ಪವನದೇವ ಬಾರೋ ಪವಿಸಮಗಾತ್ರ ಬಾರೋ ರವಿಜನ ಭಯ ಹರ | ಪಾವನ್ನ ಮೂರುತಿ 1 ಮಧ್ವಮುನಿಯೆ ಬಾರೋ | ಉದ್ಧರಿಸಲು ಬಾರೋ | ಶುದ್ಧ ಮುಕುತಿದಾತ ದದ್ದಲಪುರವಾಸ 2 ಸಿಂಧು ಬಂಧನ ಬಾರೋ | ಮಂದರೋದ್ಧಾರ ಶಾಮಸುಂದರ ಪ್ರಿಯಸಖ3
--------------
ಶಾಮಸುಂದರ ವಿಠಲ
ಬಾರೊ ಬಾರೊ | ಕರುಣಾಕರ ರಂಗನೆ ಬಾರೊ ||ತೋರೊ ತೋರೊ ಚರಣಾರ ವಿಂದವನೆ ಪ ಇಂದಿರೆ ರಮಣನೆ ಬಾರೊಸಿಂಧು ಶಯನ ಅರವಿಂದ ನಯನ | ಎನ್ನ ತಂದೆ ತಾಯಿ ಬಾರೊ 1 ಸರ್ಪಶಯನ ಬಾರೊ | ಕಂದರ್ಪನಯ್ಯಾ ಬಾರೋಶೂರ್ಪಕರ್ಣ ಪ್ರಿಯ ಭ | ಕ್ತಾರ್ಪಿತಾಲ್ಪಕೊಳ್ವ ಬಾರೋ2 ದೋಷ ದೂರ ಬಾರೊ | ಮಧ್ವೇಶ ವದಗಿ ಬಾರೋಶ್ರೀಶ ಮುದ್ದು ಮೋಹಾಭಿಧ | ಗುರು ಗೋವಿಂದ ವಿಠ್ಠಲ ಬಾರೋ 3
--------------
ಗುರುಗೋವಿಂದವಿಠಲರು
ಬಾರೊ ಹನುಮ ಬಾರೊ ಭೀಮ ಬಾರೊ ಮಧ್ವಮುನಿಪ ಪ. ಬಾರೊ ರಾಮಕೃಷ್ಣ ವೇದವ್ಯಾಸರ ಪ್ರಿಯ ಭಕ್ತ ಅ.ಪ. ಅಂಜನೇಯ ಸುತನು ಆಗಿ ಸಂಜೀವನ ಗಿರಿಯ ತಂದೆ ಕಂಜಲೋಚನೆಯ ವಾರ್ತೆ ಮಂಜುಭಾಷಣ ರಾಮನಿಗರುಹಿದೆ 1 ಪಾಪಿ ಕೌರವ ಕುಲವ ಕೊಂದು ದ್ರೌಪದಿಯ ಕಾಯ್ದ ಮಹಿಮ ಶ್ರೀಪತಿ ಶ್ರೀ ಕೃಷ್ಣನ ಭಜಿಸಿದ ಭೂಪ ಭೀಮಸೇನ ಬೇಗ 2 ಭೂಸುರ ಜನ್ಮದಲಿ ಬಂದು ಆಸೆಯಿಂದ ಆಶ್ರಮ ಕೊಂಡು ದೋಷಿ ಅನ್ಯಮತವ ಮುರಿದು ಭೂಸುರರ ಕಾಯ್ದ ಮಧ್ವ 3 ಸಕಲ ಸುಜನರ ಸೇವೆ ಕೊಂಡು ಮುಕುತಿಮಾರ್ಗಪ್ರದ ನೀನಾಗಿ ಭಕುತಿಮಾರ್ಗವ ತೋರಿ ಎನ್ನ ಹೃತ್ಕಮಲ ಮಧ್ಯದಲಿ ನಿಲ್ಲೊ 4 ಗೋಪಾಲಕೃಷ್ಣವಿಠ್ಠಲನ ರೂಪ ನೋಡುವ ಕೃಪೆಯ ಮಾಡೊ ಶ್ರೀಪತಿ ಶ್ರೀ ಶ್ರೀನಿವಾಸಗೆ ನೀ ಪ್ರೀತಿಕರನೆಂದು ನಮಿಪೆ 5
--------------
ಅಂಬಾಬಾಯಿ
ಬಾಲಕ ಕಂಡೆನು ನಿನ್ನ | ಬಾಲಕ ಪ. ಬಾಲಕ ಕಂಡೆನು ನಿನ್ನಾ | ಮುದ್ದು ಬಾಲ ತೊಡಿಗೆ ಇಟ್ಟರನ್ನಾ | ಆಹ ಕಾಲ ಕಾಲದ ಪೂಜೆ ಮೇಲಾಗಿ ಕೈಕೊಂಡು ಪಾಲಿಪ ಸುಜನರ ಅ.ಪ. ವಸುದೇವ ಕಂದ ಗೋವಿಂದ ವಸುಧಿ ಭಾರವನಿಳುಹೆ ಬಂದಾ | ಪುಟ್ಟ ಹಸುಗಳ ಕಾಯ್ವ ಮುಕುಂದ | ರ ಕ್ಕಸರನೆಲ್ಲರ ತಾನೆ ಕೊಂದಾ | ಆಹಾ ಹಸುಮಕ್ಕಳೊಡಗೂಡಿ ಮೊಸರು ಬೆಣ್ಣೆಯ ತಿಂದು ಶಶಿಮುಖಿಯರಮನಕಸಮ ಸಂತಸವಿತ್ತು 1 ವಿಶ್ವವ್ಯಾಪಕನಾದ ಬಾಲಾ | ಸರ್ವ ವಿಶ್ವ ತನ್ನೊಳಗಿಟ್ಟ ಬಾಲಾ | ಸ ರ್ವೇಶ್ವರನೆನಿಸುವ ಬಾಲಾ | ಬ್ರಹ್ಮ ಈಶ್ವರ ಸುರ ಪರಿಪಾಲಾ | ಆಹ ವಿಶ್ವ ಪ್ರದೀಪಕ ವಿಶ್ವನಾಟಕ ಸರ್ವ ವಿಶ್ವಚೇಷ್ಟಕನಾದ 2 ಸಿರಿಗರಿಯದ ಗುಣನೀತಾ | ಮತ್ತೆ ಸಿರಿಯ ತನ್ನೊಳಗಿಟ್ಟಾತಾ | ಆ ಸಿರಿಯಲ್ಲಿ ತಾನಿರುವಾತಾ | ಸೃಷ್ಟಿ ಸಿರಿಯಿಂದ ಮಾಡಿಸುವಾತಾ | ಆಹ ಸಿರಿಯ ಬಿಟ್ಟಗಲದೆ ಸಿರಿಗೆ ಮೋಹಕನಾಗಿ ಸಿರಿ ಸೇವೆ ಕೈಕೊಂಬ ಸಿರಿಕಾಂತ ಶ್ರೀಕೃಷ್ಣ 3 ಪ್ರಳಯಾಂಬುವಟಪತ್ರ ಶಯನಾ | ಥಳ ಥಳಿಸುವ ಪದತಳ ಅರುಣಾ | ವರ್ಣ ಎಳೆಗೂಸಿನಂತಿಹ ಚಿಣ್ಣಾ | ಆರು ತಿಳಿಯಲಾಗದ ಗುಣಪೂರ್ಣ | ಆಹ ನಳಿನಭವನ ಪೊಕ್ಕಳಲಿ ಪಡದು ತನ್ನ ನಿಲಯ ತೋರಿಸಿ ಕಾಯ್ದ ಚಲುವ ಚನ್ನಿಗ ದೇವ4 ಸತಿ ಪ್ರಾಯ ಕೆಡಿಸದೆ ತನ್ನಾ | ಮೈಯ್ಯೋಳ್ ಸುತರ ಪಡೆದಂಥ ಸಂಪನ್ನಾ | ವೇದ ತತಿಗೆ ಶಿಲ್ಕದ ಸುಗುಣಾರ್ಣ | ಅ ದ್ಭುತ ರೂಪ ಜಗದೇಕ ಘನ್ನಾ | ಆಹ ಜಿತಮಾನಿಗಳಿಗೆ ಹಿತಕೃತಿ ಕಲ್ಪಿಸಿ ಜತನದಿ ಜಗಜೀವತತಿಗಳ ಕಾಯೂವ 5 ಸುರತತಿಗಳನೆ ನಿರ್ಮೀಸಿ | ಅವರೊಳ್ ತರತಮ ಭೇದ ಕಲ್ಪಿಸಿ | ತನ್ನ ವರಪುತ್ರನೋಶಕೆ ವಪ್ಪೀಸಿ | ಸೃಷ್ಟಿ ಗರಸನ್ನ ಮಾಡಿ ನೀ ನಿಲಿಸೀ | ಆಹ ಪರಮೇಷ್ಟಿ ಪದವಿತ್ತು ಸರುವ ಜೀವರ ಶ್ವಾಸಕ್ಕರಸನೆಂದೆನಿಸಿದ 6 ಸರಿ ಇಲ್ಲ ವಾಯುಗೆಂದೆನಿಸೀ | ತತ್ವ ಸುರರಿಗಧೀಶನೆಂದೆನಿಸೀ | ತನ್ನ ಶರಣರ ಕಾಯ್ವನೆಂದೆನಿಸೀ | ಅವ ನಿರುವಲ್ಲಿ ತಾ ಸಿದ್ಧನೆನಿಸೀ | ಆಹ ತರಣಿಜಗೊಲಿಯುತ್ತ ಕುರುಕುಲವಳಿಯುತ್ತ ಪರಮತ ಖಂಡಿಸಿ ಕರೆಯೆ ತನ್ನನು ಬಂದಾ 7 ತ್ರಿವಿಧ ಜೀವರಗತಿದಾತಾ | ನಮ್ಮ ಪವನನಂತರ್ಯಾಮಿ ಈತಾ | ಪದ್ಮ ಭವ ರುದ್ರ ತ್ರಿದಶರ ಪ್ರೀತಾ | ಭಕ್ತ ರವಸರಕೊದಗುವ ದಾತಾ ಪವನಜ ಸತಿಭಕ್ತ ನಿವಹ ತಾಪದಿ ಕೂಗೆ ಭುವಿಯಲ್ಲಿ ಪೊರೆದಂಥ 8 ಶೋಣಿತ ನೀಲ ಕಾಯಾ | ದೇವ ಅಕ್ಲೇಶ ಆನಂದಕಾಯಾ | ಯುಗಕೆ ತಕ್ಕಂಥ ವರ್ಣಸುಕಾರ್ಯ | ಮಾಳ್ಪ ರಕ್ಕಸಾಂತಕ ಕವಿಗೇಯಾ | ಆಹ ಪೊಕ್ಕಳ ನಾಡಿಯೊಳ್ ಸಿಕ್ಕುವ ಜ್ಞಾನಿಗೆ ದಕ್ಕುವ ಸುರರಿಗೆ ಠಕ್ಕಿಪ ದನುಜರ 6 ಸಚ್ಚಿದಾನಂದ ಸ್ವರೂಪ | ಭಕ್ತ ರಿಚ್ಛೆ ಸಲ್ಲಿಸಿ ಕಳೆವ ತಾಪಾ | ಶ್ರೀ ಭವ ಕೂಪಾ | ದಲ್ಲಿ ಮುಚ್ಚಿಡ ತನ್ನನ್ನೆ ಸ್ತುತಿಪಾ | ಆಹ ಅಚ್ಚ ಭಾಗವತರ ಮೆಚ್ಚಿ ಕಾಯುತ ಅಘ ಕೊಚ್ಚಿ ತನ್ನುದರದಿ ಬಚ್ಚಿಟ್ಟು ಕಾಯುವ 10 ವಲ್ಲನು ಸಿರಿಸತಿ ಪೂಜೆ | ಮತ್ತೆ ವಲ್ಲನು ಸುರ ಸ್ತುತಿ ಗೋಜೆ | ತಾ ನೊಲ್ಲನು ಮುನಿಗಳ ಓಜೆ | ಹರಿ ವಲ್ಲನು ಋಷಿಯಾಗವ್ಯಾಜೆ | ಆಹ ಬಲ್ಲಿದ ಭಕುತರ ಸೊಲ್ಲಿಗೊದಗಿ ಬಂದು ಚಲ್ವರೂಪದಿ ಹೃದಯದಲ್ಲಿ ನಿಲ್ಲುವ ಕರುಣಿ11 ಅಂಬುದಿಶಯನ ಶ್ರೀಕಾಂತಾ | ಸರ್ವ ಬಿಂಬನಾಗಿಹ ಮಹಶಾಂತ | ತನ್ನ ನಂಬಿದ ಸುಜನರ ಅಂತಾ | ರಂಗ ಅಂಬುಜ ಮಧ್ಯ ಪೊಳೆವಂಥಾ | ಆಹ ಭಂಜನ ಪಶ್ಚಿ- ಮಾಂಬುಧಿ ತಡಿವಾಸ ಶಂಬರಾರೀಪಿತ12 ಸ್ವಪ್ನದಿ ಗೋಪಿಕರ ತಂದು | ಎನ ಗೊಪ್ಪಿಸೆ ತನ್ನ ಕೂಸೆಂದು | ಚಿನ್ನ ದಪ್ಪಾರಭರಣವದೆಂದೂ | ನಾನು ವಪ್ಪದಿರಲು ಎತ್ತೆನೆಂದೂ | ಆಹಾ ತಪ್ಪಿಸಿಕೊಳ್ಳೆ ಮತ್ತೊಪ್ಪಿಸಿ ಪೋದಳು ಅಪ್ಪಿ ಎನ್ನ ತೋಳೊಳೊಪ್ಪಿದ ಶಿಶುರೂಪ 13 ಶ್ರೀ ಮಾಯಾಜಯ ಶಾಂತಿ ರಮಣಾ | ಕೃತಿ ನಾಮಕ ಶಿರಿವರ ಕರುಣಾ | ಪೂರ್ಣ ಹೇಮಾಂಡ ಬಹಿರಾವರ್ಣ | ವ್ಯಾಪ್ತ ಮಾ ಮನೋಹರ ಪ್ರಣವ ವರ್ಣಾ | ಆಹ ಸ್ವಾಮಿ ಸರ್ವೋತ್ತಮ ಧಾಮತ್ರಯದಿ ವಾಸ ಶ್ರೀಮದಾಚಾರ್ಯರ ಪ್ರೇಮ ಮೂರುತಿ ಮುದ್ದು14 ದ್ವಿ ದಳ ಮಧ್ಯದಿ ರಥ ನಿಲಿಸೀ | ಪಾರ್ಥ ನೆದೆಗುಂದೆ ತತ್ವಾರ್ಥ ತಿಳಿಸೀ | ನಿನ್ನ ಅದುಭುತ ರೂಪ ತೋರಿಸೀ | ಸ- ನ್ಮುದವಿತ್ತು ಕುರುಕುಲವರಸಿ | ಆಹ ವಿದುರನ ತಾತ ನಿನ್ನೊಡೆಯ ಬಾಣದಿ ಫಣೆ ಯದುವೀರ ಚಕ್ರ ಹಸ್ತದಿ ಧರಿಸುತ ಬಂದ 15 ನಿತ್ಯನೂತನ ದೇವ ದೇವಾ | ಸರ್ವ ಶಕ್ತ ನಿನ್ಹೊರತಾರು ಕಾವಾ | ಎನ್ನ ಚಿತ್ತದಿ ನೆಲಸು ಪ್ರಭಾವಾ | ಸರ್ವ ಕೃತ್ಯ ನಿನ್ನದೊ ವಿಜಯ ಭಾವಾ | ಆಹಾ ಮುಕ್ತಿ ಪ್ರದಾತನೆ ಮುಕ್ತರಿಗೊಡೆಯನೆ ತತ್ವ ನಿಯಾಮಕ ತತ್ವಾರ್ಥ ತಿಳಿಸೈಯ್ಯಾ 16 ಚರಣತಳಾರುಣ ಪ್ರಭೆಯೂ | ಹತ್ತು ನಖ ಪಂಕ್ತಿಯ ಪರಿಯೂ | ಗೆಜ್ಜೆ ಸರಪಳಿ ಪಾಡಗರುಳಿಯೂ | ಮೇಲೆ ಜರೆಯ ಪೀತಾಂಬರ ನೆರಿಗೆಯೂ | ಆಹ ವರ ಜಾನುಜಂಘೆಯು ಕರಿಸೊಂಡಲಿನ ತೊಡೆ ಸರ ಮಧ್ಯ ಉರುಕಟಿ ಕಿರಿಗೆಜ್ಜೆ ಉಡುದಾರ 17 ಸರಸಿಜೋದ್ಭವ ವರಸೂತ್ರ | ಮೇಲೆ ಮೆರೆವಂಥ ಸಿರಿಯ ಮಂದೀರ | ಹೃದಯ ವರರತ್ನ ಪದಕದ ಹಾರ | ಸ್ವಚ್ಛ ದರ ವರ್ಣ ಪೊಲ್ವ ಕಂಧಾರಾ | ಆಹ ಕರದ್ವಯ ಕಂಕಣುಂಗುರ ತೋಳ ಬಾಪುರಿ ಸುರರಿಗಭಯ ತೋರ್ಪ ಕರಕಮಲದ ಪುಟ್ಟ 18 ಮೊಸರರ್ಧ ಕಡದಿರೆ ಜನನೀ | ಬಂದು ಹಸುಗೂಸು ಮೇಲೆ ಬೇಡೆ ನನ್ನೀ | ಯಿಂದ ಮುಸುಗಿಟ್ಟು ಪಾಲ್ಕುಡಿಯಲು ನೀ | ಒಲೆ ಬಿಸಿ ಹಾಲುಕ್ಕಲು ಪೋಗೆ ಜನನೀ | ಆಹ ಹಸಿವಡಗದ ಕೋಪಕ್ಮಸರ್ಗಡಿಗೆಯ ವಡ- ದೆಸೆವ ಕಡಗೋಲ್ವಡಿದ್ಕೊಸರೋಡಿ ಬಂದ ಹೇ19 ಪದ್ಮ ಮುಖದ ಕಾಂತಿ ಸೊಂಪೂ | ಅಧರ ತಿದ್ದಿ ಮಾಡಿದ ದಂತ ಬಿಳುಪೂ | ತುಂಬಿ ಮುದ್ದು ಸುರಿಸುವ ಗಲ್ಲದಿಂಪೂ | ಕರ್ಣ ಕುಂಡಲ ಕೆಂಪೂ | ಆಹ ಮಧ್ಯ ಮೂಗುತಿ ನಾಸ ಪದ್ಮದಳಾಕ್ಷವು ಸದ್ಭಕ್ತರೇಕ್ಷಣ ಶುದ್ಧಾತ್ಮ ಸುಖಪೂರ್ಣ20 ಕಮಲಸಂಭವ ವಾಯುಚಲನಾ | ಹುಬ್ಬು ವಿಮಲ ಫಣೆ ತಿಲುಕದಹನಾ | ಮೇಲೆ ಭ್ರಮರ ಕುಂತಳ ಕೇಶ ಚನ್ನಾ | ವಜ್ರ ಅಮಿತ ಸುವರ್ಣ ಮುತ್ತೀನಾ | ಆಹ ಕಮನೀಯ ಮಕುಟವು ಸುಮನಸರೊಂದಿತ ಕಮಲ ತುಳಸಿಹಾರ ವಿಮಲಾಂಗ ಸುಂದರ 21 ಅಂತರ ಬಹಿರ ದಿವ್ಯಾಪ್ತಾ | ಸರ್ವ ರಂತರ ಬಲ್ಲ ನೀ ಗುಪ್ತಾ | ಜೀವ ರಂತರಂಗದಿ ವಾಸ ಸುಪ್ತಾ | ದಿಗ ಳಂತಾನೆ ನಡೆಸುವ ಆತ್ತಾ | ಆಹ ಸಂತತ ಚಿಂತಿಪರಂತರಂಗದಿ ನಿಂತು ಕಂತುಪಿತ ಇನಕೋಟಿಕಾಂತಿ ಮೀರಿದ ಪ್ರಭ22 ಎಚ್ಚತ್ತು ಇರುವ ಸರ್ವದಾ | ಕಾಲ ಮುಚ್ಚಿ ಕೊಂಡಿಪ್ಪೊದೆ ಮೋದಾ | ಅಜ ನುಚ್ವಾಸದುತ್ಪತ್ತಿಯಾದ | ಬಾಯ ಪಾದ | ಆಹ ಮುಚ್ಚೆ ಭೂವ್ಯೋಮವು ಹೆಚ್ಚಿನ ಕೋಪವು ಇಚ್ಚಿಪವನವಾಸ ಸ್ವೇಚ್ಛಾ ವಿಹಾರನೇ 23 ಗೊಲ್ಲರೊಡನಾಟ ಬಯಸೀ | ವಸ್ತು ವಲ್ಲದೆ ಪರಸ್ತ್ರೀಯರೊಲಿಸೀ | ಮತ್ತೆ ಚಲ್ವ ಕುದುರೆ ಏರಿ ಚರಿಸೀ | ತಾ ನೆಲ್ಲಿ ನೋಡಲು ಪೂರ್ಣನೆನಿಸೀ | ಆಹ ವಲ್ಲದೆ ದ್ವಾರಕೆ ಇಲ್ಲಿಗೈತಂದು ಮ ತ್ತೆಲ್ಲರ ಕಾಯುವ ಚೆಲ್ವ ಮಧ್ವೇಶ ಶ್ರೀ 24 ಗೋಪಿ ಕಂದನೆ ಮುದ್ದು ಬಾಲಾ | ಚೆಲ್ವ ರೂಪ ಸಜ್ಜನ ಪರಿಪಾಲಾ | ಗುರು ನಿತ್ಯ ನಿರ್ಮಾಲಾ | ದೇವಾ ಗೋಪಾಲಕೃಷ್ಣವಿಠ್ಠಾಲ | ಆಹ ಪರಿ ನಿಂತು ಮ ಕೊಂಡ ಶ್ರೀಪತಿ ಮರುತೇಶ 25
--------------
ಅಂಬಾಬಾಯಿ
ಬಾಲಕೃಷ್ಣ ಸುಮ್ಮನೆ ಹಟವ್ಯಾತಕಮ್ಮಾ ನಿನಗೆಮೊಮ್ಮುಣಿಸುವೆ ನಾನು ಕೇಳೊ ಕೃಷ್ಣಯ್ಯ ಪ. ಹಶಿವಿಯಾಗಿಹುದೇನೊ ನಿನಗೆ ಸಣ್ಣಹಸುಳರಂಜಿಪ ಬಾವಾ ಬಂದಾನೊ ಹೊರಗೆಮೊಸರಕಡೆದು ನಾ ಬೇಗ ಅಟ್ಟಿಹೊಸ ಬೆಣ್ಣೆ ಕೊಡುವೆನೊ ಕಂದಯ್ಯ ನಿನಗೆ 1 ಹಾಲು ಕುಡಿಸುವೆನೊ ನಾ ಒಬ್ಬಕೀಳು ತಿರುಕ ಬಾಗಿಲಲ್ಲಿ ಬಂದಿಹನೊಬಾಲಯ್ಯ ಅಳದೀರೊ ನೀನು ತನ್ನಜೋಳಗೆಯಲಿ ನಿನ್ನ ಕೊಂಡೊಯುವನು 2 ಅರಳೆಲೆ ಅಂದಿಗಿ ಇಡಿಸಿ ನಿನ್ನಪೆರನೂಸಲಲಿ ಕಸ್ತೂರಿಯ ಧರಿಸಿಪರಿಪರಿಯಲಿ ಸಿಂಗರಿಸಿ ಗೊಲ್ಲತರಳರೊಡನ ಆಡಕಳುವೆನೋ ಕರಸಿ 3 ಉಂಗುರು ಸರಪಳಿಯಿಟ್ಟು ಬಣ್ಣದಂಗಿಯ ತೊಡಿಸುವೆ ಕೇಳೋ ನಿ ಇಷ್ಟುರಂಗಯ್ಯ ಬಂತ್ಯಾಕೊ ಸಿಟ್ಟು ನಿನಗೆಮಂಗಳಾತ್ಮಕ ಏನೂ ಬೇಕೊ ಹೇಳಿಷ್ಟು 4 ಸಿರಿ ವೆಂಕಟರಾಯಾನಿನ್ನಾಟವಬಲೇಶ ನಿಚಯಾ ನೋಡಿಕರಂಣಿನೊಳಗಿಟ್ಟು ಹೀರುವರಯ್ಯಾ 5 ಪಾಪ ಕರ್ಮವ ಮಾಡಬ್ಯಾಡಾ ನರಕಕೂಪದೊಳಗೆ ಬಿದ್ದು ಹೊರಳಾಡಬ್ಯಾಡಕಾಕಪುರುಷರ ಸಂಗ ಕೇಡಾ ನಮ್ಮಶ್ರೀಪತಿಯ ಸ್ಮರಣೆ ಮಾಡದೆ ಬಿಡಬ್ಯಾಡಾ 6 ವಿಹೀತ ಕರ್ಮಗಳನ್ನು ಮಾಡೋ ನೀನುಅಹಿತಲ್ಪನೊಲಿಸಿ ಸದ್ಗತಿಯನ್ನು ಬೇಡೊಅಹಿತ ವಿಷಯ ಸುಖ ದೂಡೋ ಲೋಕ ದಹಿತನ ಸೇವೆಗೆಯುತಲಿ ಕೊಂಡಾಡೊ 7 ಸತ್ಯವಚನದಿಂದ ಬಾಳೊ ಬಲುಭಕ್ತಿಪೂರ್ವಕದಿ ಸಚ್ಛಾಸ್ತ್ರ ಕೇಳೊಚಿತ್ತದಿ ಶಾಂತಿಯ ತಾಳೊ ದುಷ್ಟ_ರುಕ್ತಿ ಕೇಳದೆ ನಿನ್ನ ಕಿವಿ ಮುಚ್ಚಿಕೊಳ್ಳೊ 8 ಪಂಚಭೇದ ಪ್ರಪಂಚವು ನಿಜವೆನ್ನೊ ಮೂಢಾ 9 ಜೀವೇಶಾರೊಂದೆಂಬೊ ಹೊಲಿಯಾ ಪರಿಭಾವಿಸೂ ದ್ವಾಸುಪರ್ಣವೆಂಬೊ ಶ್ರುತಿಯಾಕಾವನಯ್ಯನೆ ಜಗದೊಡೆಯಾ ನಮ್ಮಜೀವಾತ್ಮ ಭೃತ್ಯನೊ ಖರಿಯಾ 10 ಅದ್ವೈತರೊಡನಾಟ ಬ್ಯಾಡ ನಮ್ಮಮಧ್ವಮತದ ಪದ್ಧತಿ ಬಿಡಬ್ಯಾಡಾಖದ್ಯೋತಸುತಗಂಜಬ್ಯಾಡಾ ನೀನುಪೊಂದು ಐಹೊಳಿಯ ವೆಂಕಟನಂಘ್ರಿಗಾಢಾ 11
--------------
ಐಹೊಳೆ ವೆಂಕಟೇಶ
ಬಾಲನೆ ಬಹುವಿಭವದಲಿ ಬಾಳೆಲೊ ಚಿರಕಾಲದಲಿ ಪ ಶುದ್ಧ ಸದ್ಭಕುತಿ ಭಾವದಲಿ ಮಧ್ವಶಾಸ್ತ್ರವ ಪಠಿಸುತಲಿ | ಸದ್ವೈಷ್ಣವನೆಂದೆನಿಸುತಲಿ ಬಾಳೆಲೋ ನೀ ಚಿರಕಾಲದಲಿ 1 ತಾಯಿನುಡಿಯ ಸೇವೆಗೈದು ನ್ಯಾಯಮಾರ್ಗದಲಿ ನಡೆದು | ಬೇಗ ಆಯಿತ ಜಯ ಯಶ ಪಡೆದು ಬಾಳೆಲೊ 2 ದಾಸವೃತ್ತಿಯನು ಅನುಸರಿಸಿ ಶ್ರೀ ಶಮಸುಂದರ ನೊಲಿಸಿ ಸತಿ ಸುತರಿಂದಲಿ ಹಿತದಿಂದಲಿ ಬಾಳೋ 3
--------------
ಶಾಮಸುಂದರ ವಿಠಲ
ಬಾಳೊ ಸುಖದಿ ಬಾಲನೆ ವರಗುಣ ಶೀಲನೆ ಪ ಬಾಳೊ ಸುಖದಿ ಬಹುಕಾಲಶ್ರೀವೇಣು ಗೋ- ಪಾಲನ ದಯದಿ ಸುಶೀಲ ಸತಿಯಳ ಕೂಡಿ 1 ಪಾದ ತೋಯಜ ಸ್ಮರಿಸುತ ಕಾಯದಾರೋಗ್ಯದೀರ್ಘಾಯುತ್ವವ ಪಡೆದು 2 ಕೃದ್ಧನಾಗದೆ ಜ್ಞಾನ ವೃದ್ಧರಸೇವಿಸಿ ಮಧ್ವಮತದ ತತ್ವ ಶ್ರದ್ಧದಿ ಕೇಳುತ 3 ತಂದೆ ತಾಯಿಗಳಲ್ಲಿ ಇಂದಿರೆರಮಣನೆ ನಿಂದು ಪಾಲಿಪನೆಂದು ವಂದನೆ ಪಾಡುತ 4 ಭಕ್ತಿಯಿಂದತಿಥಿಗಳ ನಿತ್ಯದಿ ಸೇವಿಸುತ ಪುತ್ರ ಪೌತ್ರಾದಿ ಸಂಪತ್ತಿಯ ಪಡೆದು 5 ಭೂಸುರರೊಡಗೂಡಿ ತೋಷದಿಕೃತ ಹರಿ ವಾಸರ ವೃತ ಫಲ ಶ್ರೀಶನಿಗರ್ಪಿಸುತ 6 ಧಾರುಣಿಯೊಳು ಕೃಷ್ಣಾತೀರ ಕಾರ್ಪರನಿಲಯ ನಾರಸಿಂಹನ ಪದ ವಾರಿಜ ಸೇವಿಸುತ 7
--------------
ಕಾರ್ಪರ ನರಹರಿದಾಸರು
ಬಿದ್ದೆ ನಿಮ್ಮಯ ಪಾದದಲ್ಲಿ ನಾ ಪ ಮಧ್ವರಾಯರ ಮನದಲ್ಲಿ ಇದ್ದು ವಲಿವ ವೇದವ್ಯಾಸ ಅ.ಪ. ವೇದ ಓದದ ಶುದ್ಧ ಕಳ್ಳನಾ ಮೆದ್ದು ಮೆಲ್ಲುತ ವೃದ್ಧನಾದೆ ಭಲ್ ಗದ್ದ ದಾಸಗೆ ಕರುಣದಿ ತೋರಿ ಉದ್ಧರಿಸುವ ಬಗೆ ಬಲ್ಲೀ 1 ಅನ್ಯದೇವರ ನಾ ನೊಲ್ಲೆ ನಿನ್ನ ಪಾದವ ಬಿಡಲೊಲ್ಲೆ ಘನ್ನಕರುಣಿ ನೀನು ಬಲ್ಲೆ ನಿನ್ನ ಬಿಡಲು ಜಗಕಲ್ಲೇ 2 ಉತ್ತಮೋತ್ತಮ ದೇವ ಸತ್ಯ ಭೃತ್ಯಜೀವನು ಎಂಬೆನಿತ್ಯ ಭಕ್ತ ಪ್ರಥಮ ಪ್ರಾಣನೀನೇ ಮುಕ್ತಿನಿನ್ನಾಧೀನವೇನೇ 3 ವಿಧಿ ಪರಿವಾರ ಎಂದೆಂದಿಗೂ ಭಿನ್ನರೇನೇ ಎಂದೆಂದು ಅಧೀನರೇನೇ 4 ಶ್ರೀಕೃಷ್ಣವಿಠಲ ಏಕ ಸಕಲ ದೋಷ ವಿದೂರ ಪೊರೆಯೋ ಎಂದು ಕೂಗಿ 5
--------------
ಕೃಷ್ಣವಿಠಲದಾಸರು
ಬಿಸಜ ಕಾನಮಿಪೇ ಪ ವಾತಸುತನೆನ್ನಿಸುತ | ಸೀತೆ ರಮಣನ ಕಂಡುಸೀತೆ ವಾರ್ತೆಯ ನರುಹಿ | ಖ್ಯಾತ ನೀನಾದೇ |ಮಾತರಿಶ್ವನೆ ಹರಿಯ | ಪ್ರೀತಿ ನಿನ್ನೊಳಗೆಂತೋಪೋತ ಭಾವ ದೊಳಾಂತೆ | ಪ್ರೀತಿ ಅಪ್ಪಿಗೆಯಾ 1 ಉರ ರಕ್ತವನು | ಕುಡಿದಂತೆ ತೋರಿ ಜಗನಡುಗುವಂತೆಸಗಿವೆಯೊ | ಕಡುಗಲಿಯ ಭೀಮಾ 2 ಸನ್ಯಾಸದಾಶ್ರಮವ ಅ | ನ್ಯಾಯದಲಿ ಗೊಂಡುಶೂನ್ಯ ಮತ ತತ್ವ ಪ್ರ | ಚ್ಛನ್ನದಲಿ ಪೇಳ್ದಾಅನ್ಯಾಯ ಕಳೆವುದಕೆ | ಜನ್ಯನಾಗುತ ಮಧ್ವಚೆನ್ನ ಪೆಸರಲಿ ಪೇಳ್ದ | ಘನ್ನ ತತ್ವಗಳಾ 3 ಆರು ಕೋಣ್ಯು ಪರಿಯಾ | ಕಾರದಲಿ ವಲಯಾಮೂರು ಕೋಟಿಯ ಸಂಖ್ಯೆ | ವಾನರಾಕೃತಿ ಬದ್ಧವೂ |ಚಾರು ಯಂತ್ರದಿ ಸೌಮ್ಯ | ದಾಕಾರದಲಿ ಜಪದಹಾರ ಪಿಡಿಯುತ ವ್ಯಾಸ | ತೀರಥಿರಿಗ್ವೊಲವೇ 4 ವಕ್ರ ಮನವನು ತ್ಯಜಿಸಿ | ಚಕ್ರತೀರ್ಥದಿ ಮಿಂದುವಕ್ರ ಬಕರಿಪು ನಿನ್ನ | ಚೊಕ್ಕ ರೂಪವ ಸೇವಿಸೀಅಕ್ರೂರ ವರದ ಗುರು | ಗೋವಿಂದ ವಿಠ್ಠಲನಅಕ್ಕರದಿ ಭಜಿಸುವಗೆ | ಚಕ್ರಿಪುರ ವೀವೇ5
--------------
ಗುರುಗೋವಿಂದವಿಠಲರು
ಬುದ್ಧಿಮಾನಿಯೆ ಎನ್ನ ಉದ್ಧರಿಸು ತಾಯೆ ಪ ಶ್ರದ್ಧಾದೇವಿ ನಿನ್ನ ಕೃಪೆಯಾಗೆ ಹರಿ ನಲಿವ ಅ.ಪ. ಮಧ್ವಮುನಿ ಮನದೈವನತಿ ಮುದ್ದು ಪರಿಸರಳೆ ವಿದ್ಯಾ ಅಸಾದ್ಯ ಕರುಣಾಬ್ಧಿ ದೇವಿ ಪ್ರಧ್ವಂಸ ಮಾಡು ಮಮ ಹೃದ್ರೋಗ ಮೂಲ ಪ್ರ ಬುದ್ಧರಲಿ ಪದವಿತ್ತು ಉದ್ಧಾರ ನೀ ವಹಿಸು 1 ನಿನ್ನ ಕೃಪೆಯಮೃತ ರಸವಿನ್ನು ದೊರೆಯಲು ನಾವು ಧನ್ಯ ಧನ್ಯರು ಮಾತೆ ಭಕ್ತಿಮೂರ್ತೆ ವಿಧಿ ರುದ್ರಸೇವ್ಯ ಪದ ಪುಷ್ಕರಳೆ ಪುಣ್ಯ ಪುರುಷ ಸಮೀರ ಸಂತ ಸಂಸ್ತುತೆ ಪಾಹಿ 2 ನೀನೊಲಿಯದ ಜೀವ ಏನು ಸಾಧನೆ ಮಾಡೆ ಪ್ರಾಣವಿಲ್ಲದ ದೇಹ ಶೃಂಗರಿಸಿದಂತೆ ವಾನರ ಪ್ರತಿಬಿಂಬ ಜಯೇಶವಿಠಲ ತಾನೊಲಿಯ ಅವಗೆಂದು ನಿನ್ನವರ ಕರವಶನು 3
--------------
ಜಯೇಶವಿಠಲ
ಬೆಳಗಾಗಲು ಅರಘಳಿಗೆಯು ಇರುತಿರೆ ಸ್ಮರಿಸುವೆ ವಿಶ್ವಮೂರುತಿಯನ್ನು ಬೆಳಗಾಗಲು ಹರಿಧ್ಯಾನವ ಮಾಡುತ ಬಹಿರ ಭೂಮಿಗ್ಹೋಗುತ ಮುನ್ನು 1 ಕಲಿ ಮೊದಲಾಗಿಹ ದೈತ್ಯರನೆಲ್ಲಾ ವಿ- ಸರ್ಜನೆ ಮಾಡುತ ಮತ್ತಿನ್ನೂ ದಂತ ಧಾವನೆಯ ಮಾಡುತ ಶ್ರೀ ಮಾ- ಧವನನು ಸ್ಮರಿಸುವೆ ನಾನಿನ್ನೂ 2 ಮುಖವನು ತೊಳೆಯುತ ಮುರಹರಿ ಧ್ಯಾನದಿ ಶ್ರೀತುಳಸಿಯ ನಮಿಸುತಲಿನ್ನೂ ಮೀಸಲ ನೀರನು ಎರೆಯುತ ಬೇಗದಿ ಮೃತ್ತಿಕಿ ಫಣಿಗಿಡುತಲಿ ಇನ್ನು 3 ಮೂರು ಪ್ರದಕ್ಷಿಣಿ ಮಾಡುತ ಬೇಗದಿ ಮುದದಿ ನಮಸ್ಕರಿಸುತಲಿನ್ನೂ ದೇವರ ಮನೆಕಡೆ ಪೋಗುತ ನಿಂದಿಹ ಜಯವಿಜಯರಿಗೊಂದಿಸಿ ಮುನ್ನು 4 ದೇವರ ದರ್ಶನಕಾಜ್ಞೆಯ ಕೇಳುತ ದೇವರ ಗೃಹದೊಳು ಪೋಗುತಲಿ ಮಾಯಾ ಪತಿಯನು ಮನದೊಳು ಧ್ಯಾನಿಸಿ ವಂದನೆ ಮಾಡುತ ಬೇಗದಲಿ 5 ದೇವರ ಮನೆಯನು ಸಾರಿಸಿ ಶಂಖುಚಕ್ರವುಗದೆ ಪದುಮನ್ಹಾಕುತಲಿ ಗಜವರದನ ಕೊಂಡಾಡುತ ಮುದದಿ ಗಜೇಂದ್ರ ಮೋಕ್ಷನ ಸ್ಮರಿಸುತಲಿ 6 ಗೋವೃಂದದ ಕಡೆ ಪೋಗುತ ಶ್ರೀ- ಗೋವಿಂದನ ಸ್ಮರಿಸುತ ನಿತ್ಯದಲಿ ಗೋಪೀ ಬಾಲನ ಗೋಕುಲವಾಸನ ಗೋವ್ಗಳ ಮಧ್ಯದಿ ಸ್ಮರಿಸುತಲಿ 7 ಬಾಲಕೃಷ್ಣನ ಲೀಲೆಯ ಪೊಗಳುತ ಬಾಲಲೀಲೆಗಳ ಕೇಳುತಲಿ ಪುರಾಣವ ಪೇಳುವ ದ್ವಿಜರಿಗೆ ವೃದ್ಧರಿಗೆರಗುತ ಪ್ರತಿನಿತ್ಯದಲಿ 8 ಮುರಳಿಯನೂದುತ ಮೆರೆಯುವ ಕೃಷ್ಣನ ಅನುದಿನ ಮಾಡುತಲಿ ಸರಸಿಜನಾಭನ ಸ್ಮರಿಸುತ ಮನದಲಿ ಸ್ನಾನಕೆ ತೆರಳುತ ಶೀಘ್ರದಲಿ 9 ನದಿಯ ಸ್ನಾನಕೆ ಪೋಗುವ ಸಮಯದಿ ನಾರದವಂದ್ಯನ ಸ್ಮರಿಸುತಲಿ ಭಾಗೀರಥಿಯಲಿ ಸ್ನಾನವು ಮಾಡುತ ಬಾಗುತ ಸಿರವನು ಬೇಗದಲಿ10 ಫಣಿರಾಜನ ಶಯನದಿ ಮಲಗಿಹ ಶ್ರೀ- ಪರಮಾತ್ಮನ ನೋಡುತ ಬೇಗ ಪಾದಗಳ ಸೇವಿಪ ಶ್ರೀ ಭೂದೇವಿಯ- ರೇನುಧನ್ಯರೆಂದೆನುತಾಗ11 ಪೊಕ್ಕಳ ಮಧ್ಯದಿ ಪೊರಟಿಹ ನಾಳದ ತುದಿಯಲಿ ರಂಜಿಪ ಕಮಲದಲಿ ಉದ್ಭವಿಸಿದ ನಾಲ್ಮೊಗನನು ನೋಡುತ ಬಗೆ ಬಗೆ ಪ್ರಾರ್ಥಿಸುತಲಿ ಇನ್ನು 12 ನೆರೆದಿಹ ಸುರ ಪರಿವಾರವೆಲ್ಲ ಶ್ರೀ- ಹರಿಯನು ವಾಲೈಸುತಲಿನ್ನೂ ಪರಮವೈಭವದಿ ಮೆರೆಯುವ ದೇವನ ಸ್ಮರಿಸುವೆ ಜಲಮಧ್ಯದೊಳಿನ್ನು 13 ದೇವರ ರಥವನು ತೊಳೆಯುವೆನೆಂಬ- ನುಸಂಧಾನದಿ ಸ್ನಾನವು ಮಾಡಿ ದೇವರ ರಥ ಶೃಂಗರಿಸುವೆನೆನ್ನುತ ಶ್ರೀಮುದ್ರೆಗಳ್ಹಚ್ಚುತ ಪಾಡಿ 14 ನಿತ್ಯ ಕರ್ಮಮುಗಿಸುವ ಬೇಗದಿ ಶ್ರೀ- ಹರಿಪೂಜೆಗೆ ಅಣಿಮಾಡುತಲಿ ಪುಷ್ಪಗಳನು ಗಂಧಾಕ್ಷತೆ ಶ್ರೀ ತುಳಸಿಯ ತಂದಿಡುವೆನು ಮೋದದಲಿ 15 ಪಂಚಭಕ್ಷ ಪಾಯಸಗಳ ಮಾಡುತ ಪಂಚಾತ್ಮಕ ನ ಸ್ಮರಿಸುತಲಿ ಮಿಂಚಿನಂತೆ ಹೊಳೆಯುವ ತಬಕಿಲಿ ತಾಂಬೂಲವ ನಿರಿಸುತ ಬೇಗದಲಿ 16 ಬ್ರಹ್ಮನು ಈ ವಿಧ ಪೂಜೆಯ ಪ್ರತಿದಿನ ಬ್ರಹ್ಮನ ಪಿತಗರ್ಪಿಸುತಲಿರಲು ಸುಮ್ಮಾನದಿ ಮಹಲಕುಮಿಯು ಇದ- ನೊಯ್ಯತ ಸುರಮುನಿ ವಂದ್ಯನಿಗೆ ತಾನರ್ಪಿಸಲು17 ಪರಮಾತ್ಮನು ಈ ವಿಧ ಸೇವೆಯ ಕೈ- ಗೊಳುತಲಿ ಸಂತಸ ಪಡಲಿನ್ನು ಅರಿತವರೆಲ್ಲರು ನಿರುತದಿ ಹರಿ ಧ್ಯಾ- ನವ ಮಾಡುತಲಿರೆ ತಾವಿನ್ನು 18 ದೇವಪೂಜೆ ವೈಶ್ವದೇವವು ನಿತ್ಯದಿ ಗೋಬ್ರಾಹ್ಮಣನರ್ಚಿಸಿ ಇನ್ನು ಸಾಯಂ ಸಮಯದಿ ಸಾಧುಗಳೊಡನೆ ದೇವರ ಕಥೆ ಕೇಳುತಲಿನ್ನೂ 19 ಝಾಮಝಾಮದಿ ಜಯಶಬ್ದಗಳಿಂ ಜಯಾಪತಿಯನು ಪೊಗಳುತಲಿ ಆರತಿ ಜೋಗುಳ ಹಾಡುತ ಮುದದಲಿ ಮಧ್ವೇಶಾರ್ಪಣ ಪೇಳುತಲಿ 20 ಮಲುಗುವಾಗ ಮುಕುಂದನ ಸ್ಮರಿಸುತ ಲಯ ಚಿಂತನೆಯನು ಮಾಡುತಲಿ ಕರಮುಗಿಯುತ ಕಾಯೇನ ವಾಚಾ ಎಂ- ದ್ಹೇಳುತ ಪ್ರಾಜ್ಞನ ಸ್ಮರಿಸುತಲಿ 21 ಝಾಮಝಾಮದಿ ಶ್ರೀ ಹರಿ ಮಾಧವ ಆಗಲು ಬೆಳಗಿನ ಝಾವದಿ ಸೃಷ್ಟಿಯ ಚಿಂತನೆ ಮಾಡಿ ಎಂದೆನುತ22 ಮಳಲಗೌರಿ ನೋಂತಿಹ ಸತಿಯರಿಗೆ ಮುರಳೀಧರ ಒಲಿದಿಹನೆನ್ನುತ ಉದಯವಾಗಲು ವಿಶ್ವನ ಸ್ಮರಿಸುತ ವಿಧಿ ನೇಮಗಳನುಸರಿಸುತ್ತ 23 ನಿತ್ಯದಿ ಈ ತೆರವಾಚರಿಸುವ ನರ ಮುಕ್ತನು ಧರೆಯೊಳಗೆಂದೆನುತ ಅತ್ಯುತ್ಸಾಹದಿ ಬರೆದೋದುತಲಿ- ದರರ್ಥವ ತಿಳಿದಾಚರಿಸುತ್ತ24 ಈ ವಿಧ ಚಿಂತನೆ ಮಾಡುವ ಮನುಜಗೆ ದಾರಿದ್ರ್ಯವು ದೂರಾಗುವದು ಮಾರಮಣನು ತನ್ನವರೊಡಗೂಡುತ ವಾಸವಾಗುವನೆಂಬುವ ಬಿರುದು25 ಕರೆಕರೆಗೊಳ್ಳದೆ ಕೇಳಿರಿ ನಿತ್ಯವು ಕನಕಗಿರಿವಾಸನ ಮಹಿಮೆ ಕನಲಿಕೆ ಕಳೆವುದು ಕಮಲನಾಭ- ವಿಠ್ಠಲನು ಕೊಂಡಾಡುತ ಮಹಿಮೆ 26
--------------
ನಿಡಗುರುಕಿ ಜೀವೂಬಾಯಿ
ಬೆಳಗುಝಾವದಿ ಬಾರೊ ಹರಿಯೆ ನಿನ್ನ ಚರಣತೊಳೆದು ತೀರ್ಥ ಪಾನ ಮಾಡುವೆ ನಾ ಪನೀರುಬಿಟ್ಟು ಮೇಲೆ ಬಾರೋ ಬೆನ್ನ ಭಾರವನು ಕೆಳಗಿಟ್ಟು ಬಾರಯ್ಯಾ ಹರಿಯೆಕೋರೆದಾಡಿಯ ತೋರ ಬಾರೋ ನಿನ್ನಧೀರ ಗಂಭೀರ ನರಹರಿ ರೂಪ ತೋರೊ1ಪುಟ್ಟ ಬ್ರಾಹ್ಮಣನಾಗಿ ಬಾರೊ ಆ-ದುಷ್ಟ ಕ್ಷತ್ರಿಯರನ್ನು ತಿರಿದವನೆ ಬಾರೋಸತ್ಯಸಂಧ ರಾಮ ಬಾರೋ ಬಲುಸಿಸ್ತಾಗಿ ಕೊಳಲನೂದುತ ಕೃಷ್ಣ ಬಾರೋ 2ಬುದ್ಧ ಪ್ರಬುದ್ಧನಾಗಿ ಬಾರೊ ಬಲುದೊಡ್ಡ ತೇಜಿಯನೇರಿ ಭರದಿಂದ ಬಾರೋಮುದ್ದು ಭೂಪತಿ 'ಠ್ಠಲ ಬಾರೋ ನಮ್ಮಮಧ್ವರಾಯರಿಗೊಲಿದ ಕೃಷ್ಣಯ್ಯ ಬಾರೋ 3
--------------
ಭೂಪತಿ ವಿಠಲರು
ಬೇಸಾಯ ಮಾಡಬೇಕು ಬೇಸಾಯ ಮಾಡಬೇಕು ಪ ಹೃದಯವೆಂಬ ಕ್ಷೇತ್ರದಲಿ ಬೇಸಾಯ ಮಾಡಬೇಕು ಅ.ಪ ಮಧ್ವಾಚಾರ್ಯರವರ ಗ್ರಂಥಗಳೆಂಬ ಸರೋವರ ತುಂಬಿಹುದು ಬುದ್ಧಿ ಜಲವ ವರಗುರುಗಳೆಂಬ ತೂಬಿನಲಿ ತರಲಿಬೇಕು ಶುದ್ಧ ಧರ್ಮದಾಚರಣೆಗಳೆಂಬ ನೇಗಿಲ ಪಿಡಿಬೇಕು ಪರಿ ನೆಲವನುಳಲಿಬೇಕು 1 ತತ್ವಜಲವು ಹರಿದೋಡದ ಪರಿಯಲಿ ತೆವರಿ ಹಾಕಬೇಕು ಸುತ್ತಲು ದುರ್ಜನ ನರಿಗಳ ತಡಿಯಲು ಬೇಲಿ ಹಾಕಬೇಕು ಉತ್ತಮ ರೀತಿಯ ಭಕುತಿ ಪೈರುಗಳ ನಾಟಿ ಮಾಡಬೇಕು ಮತ್ತೆ ಪೈರುಗಳು ಒಣಗದಂತೆ ಜಲವನು ಹಾಯಿಸುತಿರಬೇಕು 2 ಬೆಳೆಯುವ ವಿಷಯದ ಅನುಭವದಾಸೆಯ ಕಳೆಯು ಕೀಳಬೇಕು ಕೊಳೆವೆಯ ರೋಗಕೆ ಸಜ್ಜನ ಸಂಘದ ಔಷಧಿ ಕೊಡಬೇಕು ಕಲಿಪುರುಷನ ತಲೆಯೆಂಬ ಗೊಬ್ಬರವ ತುಳಿಯುತಲಿರಬೇಕು ಕುಳಿತೆಡೆಯಲಿ ವರಭಕುತ ಪ್ರಸನ್ನನು ಕೊಡುವ ಮುಕುತಿ ದವಸ 3
--------------
ವಿದ್ಯಾಪ್ರಸನ್ನತೀರ್ಥರು
ಬೊಮ್ಮ ಪ ಉಲಿವ ಘಂಟೆಗಳಿಂದ | ಬಾಲವೂ ಬಲು ಛಂದಚೆಲುವ ಮೂರುತಿ ಭಾವ | ಸುಂದರ ಪ್ರಭಾವ |ಕಲಿಮಲವ ಕಳೆವಂಥ | ನಿನಗಿಹುದು ಸತ್ಪಂಥಗುರ್ಹೊಸೂರಲಿ ವಾಸ | ಭಕುತ ಜನ ತೋಷಾ 1 ಭವ ಮೋಹಪ್ರಧ್ವಂಸವೆನಿಸಯ್ಯ | ಮಧ್ವಮುನಿ ಜೀಯಾ 2 ನಿತ್ಯ ಮುದಗೊಳ್ವ 3
--------------
ಗುರುಗೋವಿಂದವಿಠಲರು
ಬೋಧ ಸದ್ಗುರು ಜಿತಮದನ ಪ ಬಾದರಾಯಣ ವೈದೇಹಿ ಚರಣಾಬ್ಜಾ ರಾಧಕ ನಮಿಪೆ ಸನ್ಮೋದವಿತ್ತು ಕಾಯೊ ಅ.ಪ. ಶ್ರೀ ಮಧ್ವ ಮತವಾರಿಧಿ ಸೋಮ | ದ್ವಿ ಜ ಸನ್ನುತ ಗುಣಧಾಮಾ ಕಾಮಿತಜನ ಕಲ್ಪಭೂಜ ವಿಬುಧ ಸು ಪ್ರೇಮ ಸಂಯಮಿಕುಲೋದ್ಧಾಮ ದಯಾಂಬುಧೇ ಗೋಮಿನೀವಲ್ಲಭನ ಪದಯುಗ ತಾಮರರಸಗಳನನುದಿನದಿ ಬಿಡ ದೇ ಮನಾಬ್ಜದಿ ಭಜಿಸುತಿಪ್ಪಮ ಹಾ ಮಹಿಮ ತುತಿಸಿಬಲ್ಲನೆ 1 ದೀನಜನರ ಬಂಧು ನಿನ್ನಾ | ಪಾದ ಕಾನೆರಗುವೆ ಸುಪ್ರಸನ್ನಾ ದಾನ ಮಾನಗಳಿಂದ ಜ್ಞಾನಿಜನರಿಗೆ ಮ ಹಾನಂದ ಬಡಿಸುತ ಸಾನುರಾಗದಿ ನಿತ್ಯಾ ಶ್ರೀ ನಿಕೇತನ ಪರಮ ಕಾರು ಣ್ಯ ನಿವಾಸ ಸ್ಥಾನನೆನಿಪ ಮ ಹಾನು ಭಾವ ಭಗವತ್ಪದಾಂಭೋ ಜಾನುಗರೊಳೆನ್ನೆಣಿಸಿ ಪಾಲಿಸು 2 ಸತ್ಯಪ್ರಿಯರ ಕರಕಮಲ | ಜಾತ ನಿತ್ಯ ನಿರ್ಜಿತ ಘೋರ ಶಮಲಾ ಚಿತ್ತಜಪಿತ ಜಗನ್ನಾಥ ವಿಠಲನ ಚಿತ್ತಾನುವರ್ತಿಗಳಾಗಿ ಸಂಚರಿಸುತಾ ಅತ್ಯಧಿಕ ಸಂತೋಷದಲಿ ಪ್ರತ್ಯರ್ಥಿಗಳಿಗುತ್ತರಿಸಿ ಮಿಗೆ ಪುರು ಷೋತ್ತಮನೆ ಪರನೆಂದು ಡಂಗುರ ವೆತ್ತಿ ಹೊಯ್ಸಿ ಕೃತಾರ್ಥನೆನಿಸಿದ 3
--------------
ಜಗನ್ನಾಥದಾಸರು