ಒಟ್ಟು 743 ಕಡೆಗಳಲ್ಲಿ , 94 ದಾಸರು , 661 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿನ್ನಹಕೆ ಬಾಯಿಲ್ಲ ಭೂತನಾಥ ಪ ನಿನ್ನ ಪದರಜ ಸ್ನಾನ ನೀಡೆನ್ನ ಉದ್ಧರಿಸು ಅ.ಪ. ಹೀನ ಯೋಗ್ಯತೆಗಿನ್ನು ಏನು ಮಾಡಲೊ ಸ್ವಾಮಿ ಧೇನು ವತ್ಸನ ತೆರದಿ ಪಾಲಿಸೆನ್ನ ವೇಣುಗೋಪಾಲನಾ ಧ್ಯಾನ ನಿಲ್ಲದು ಮನದಿ ನಾನು ನನ್ನದು ಬಿಡದು ಎನಗಾವ ಗತಿಯಿನ್ನು 1 ನೀಲಕಂಠನೆ ನಿನ್ನ ನೀಳಪಾದದ ಧೂಳಿ ಮೂರ್ಲೋಕದಘತೂಲಕಗ್ನಿ ಸತತ ಫಾಲಾಕ್ಷ ಪತಿತ ಪರಿಪಾಲಕನು ನೀನೊಬ್ಬ ಹಾಲಲ್ಲಿ ಅದ್ದೆನ್ನ ಹರಿಭಕ್ತರ ಬಂಧು 2 ಮನಕರಣ ತನು ವಿಷಯ ಘನಪಾಶದಲಿ ಸಿಕ್ಕಿ ಉಣಿಸುವುವು ಮಹದುಃಖ ಎನ್ನ ಮೀರಿ ತುಂಬಿ ಎನಿತು ನಿನ್ನಲಿ ನಿಂದು ಪೊರೆಯೆಂದು ಮೊರೆ ಇಡಲಿ 3 ದುಷ್ಟವಾಸನೆ ಶಕ್ತಿ ಮೆಟ್ಟಿ ಆಳುವುದೆನ್ನ ವೃಷ್ಟೀಶನಲಿ ಎನ್ನ ಪೋಗಬಿಡದೊ ದುಷ್ಟನಕ್ರಗೆ ಸಿಕ್ಕ ಕರಿಯಂತೆ ಬಾಯ್ಬಿಡುವೆ ಕಷ್ಟ ಪರಿಹರಿಸಯ್ಯ ಹರಿನಿಷ್ಠಧ್ಯಾನವನಿತ್ತು 4 ಶತಕೋಟಿ ಶ್ರುತಿಯಲಿ ಜಯೇಶವಿಠಲ ನತಬಂಧು ಎಂತೆಂದು ಸಾರುತಿಹುದು ಹಿತಭಕ್ತ ನೀ ಹರಿಗೆ ಹರಿಮೀರ ನಿನ್ನುಕ್ತಿ ಪತಿತಪಾವನ ನನ್ನ ಹರಿಭಕ್ತನ ಮಾಡು5
--------------
ಜಯೇಶವಿಠಲ
ಬಿಸಜ ಕುಸುಮಾಸ್ತ್ರನÀ ಜನನಿ ಬೇಗ ನೀ ಪ ಎಸೆವ ಪೀಠಕೆ ನಸುನಗುತಲಿ ದಶರಥ ನೃಪನ ಸೊಸೆಯೆ ಕರುಣದಿ ಅ.ಪ ಕಮಲ ಪತಿ ಸಹಿತವಾಗಿ ಆನಳಿನಜಾದಿ ಪರಿವಾರದೊಡನೆ ಆನಂದಾಮೃತ ವೃಷ್ಟಿಯ ಕರೆಸುತೆ 1 ಕಾಲಲಂದಿಗೆ ಗೆಜ್ಜೆಗಳ್ ಮೆರೆಯೆ ಸುರರು ತಾ ಹೊಮಳೆಯ ಸುರಿಯೆ ಕಾಲ ಕಾಲದಿ ನಿನ್ನೋಲಗವಿತ್ತು ಪಾಲಿಸಲ್ಕೆ ಭಕ್ತ ಜನರನು 2 ಕೃತಿ ಶಾಂತಿ ರಮೆ ನಿರ | ಕಾಯುವಳು ನೀನೆಂದು ಶೃತಿ ನಿ | ಕಾಯ ಮುತ್ತೈದೆಯರ್ ಕರೆವರು 3 ತಟ್ಟೆಯೊಳಗರಿಸಿನ ಕುಂಕುಮಾಕ್ಷತೆಗ ಕೃಷ್ಣರಾಯನ ಪಟ್ಟದ ರಾಣಿಯೆ 4 ಹತ್ತುವಿಧದ ವಾದ್ಯಗಳು ಮೊರೆಯೆ ಚಿತ್ಪ್ರಕಾಶ ಜ್ಯೋತಿಗಳು ಹೊಳೆಯೆ ಚಿತ್ತೈಸಮ್ಮ ಚಿತ್ರಮಂಟಪದಲಿ 5
--------------
ಗುರುರಾಮವಿಠಲ
ಬುದ್ಧಿಮಾತು ಹೇಳಿದರೆ ಕೇಳ ಬೇಕಮ್ಮ ಮಗಳೆ ಮನ ಶುದ್ದಳಾಗಿ ಗಂಡನೊಡನೆ ಬಾಳ ಬೇಕಮ್ಮ ಪ ಮಾತು ಮಾತಿಗೆ ಮಾತ ಜೋಡಿಸಿ ಆಡಬೇಡಮ್ಮಮಗಳೆ ಪ್ರೀತಿ ಪಡುವ ಗಂಡನೆಂದು ಹೆಮ್ಮೆ ಬೇಡಮ್ಮ ನೀತಿ ತಪ್ಪಿ ನಡಿಯಬೇಡ ಯೆಂದಿಗಾದರೂ ಮಗಳೆ ಸೋತು ನಡೆಯಲು ಲೇಸುಯೆಂದು ತಿಳಿಯ ಬೇಕಮ್ಮ 1 ಅತ್ತೆ ಮಾವ ಗಂಜಿ ಕೊಂಡು ನಡಿಯ ಬೇಕಮ್ಮ ಮಗಳೆ ಮತ್ತೆ ಪತಿಯ ಮನವ ಮೆಚ್ಚಿಸಿ ಬಾಳ ಬೇಕಮ್ಮ ದುಡಿಯ ಬೇಕಮ್ಮ ಮಗಳೆ ಚಿತ್ತದಲ್ಲಿ ಹರಿಯ ಭಕ್ತಿ ಬಿತ್ತಬೇಕಮ್ಮ 2 ನೋಟ ಆಟದಲ್ಲಿ ಮಮತೆ ಬಹಳ ಬೇಡಮ್ಮ ಮಗಳೆ ಕೊಟ್ಟು ಕ್ರಯವ ತಿಂಡಿ ತಿಂಬೊ ನಡತೆ ಬೇಡಮ್ಮ ಕೂಟ ಜನರ ಮಾತು ಕೇಳೆ ಕೇಡು ಕೇಳಮ್ಮ ಮಗಳೆ ಸಾಟಿ ನಾನು ಗಂಡಗೆಂದು ಹಠವು ಬೇಡಮ್ಮ 3 ಕ್ಲೇಶ ಕೇಳಮ್ಮ ಮಗಳೆ ಗಂಡ ತಂದುದೆ ದೊಡ್ಡದೆಂದು ಉಂಡು ಬಾಳಮ್ಮ ಗಂಡೀ ನಂತೆ ಮೆರೆಯ ಬಾರ್ದು ತಗ್ಗಿ ನಡೆಯಮ್ಮ ಮಗಳೆ ತೊಂಡಳಾಗಿ ಹರಿಗೆ ಬಾಳೆ ಸುಖವು ನಿನಗಮ್ಮ 4 ಹರಿಯು ಕೊಟ್ಟರೂಪವೆ ಛಂದ ಲಜ್ಜೆ ಬೇಡಮ್ಮ ಮಗಳೆ ಬರಿಯ ವೇಷ ನಾಟಕದಂತೆ ಮೋಸ ಕಾಣಮ್ಮ ಜರಿಯ ಬೇಡ ಹಿರಿಯರ ಮಾತು ಹಾನಿ ಹೌದಮ್ಮ ಮಗಳೆ ಮರಿಯೆ ಹರಿಯ ಭವವು ತಪ್ಪದು ಜೋಕೆ ನೋಡಮ್ಮ 5 ಸೊಲ್ಲು ಕೇಳಮ್ಮ ಮಗಳೆ ನಲ್ಲನ ಬಲುಮೆಗೆ ಒಳ್ಳೆ ಗುಣವೆ ಮುಖ್ಯ ತಿಳಿಯಮ್ಮ ಮಗಳೆ ಒಳ್ಳೆ ಮಾತನಾಡಿ ಸರ್ವರ ಹಿತವ ಕೋರಮ್ಮ 6 ಏನೇ ಬಂದರು ಜರಿದು ಪತಿಯ ನುಡಿಯ ಬೇಡಮ್ಮಮಗಳೆ ನಿನ್ನದೆಂದು ಪುಟ್ಟಿದ ಮನೆಯ ತಿಳಿಯ ಬೇಡಮ್ಮ ಮಾನವೆ ಮುಖ್ಯ ಮಾನಿನೀಗೆ ತಿಳಿದು ಬಾಳಮ್ಮಾ ಮಗಳೆ ಮಾನವು ನೀಡೆ ಮಾನವು ಬಾಹೋದು ಮರ್ಮ ತಿಳಿಯಮ್ಮ 7 ನಾನು ನಾನು ನಾನೆಂಬೋದೆ ಹೀನ ಕೇಳಮ್ಮಾ ಮಗಳೆ ಸಾನುರಾಗದ ನುಡಿಯೆ ಸಕ್ಕರೆ ಕೀರ್ತಿ ಉಳಿಸಮ್ಮ ಸ್ನಾನ ಪಾನದಲ್ಲೇ ಮುಳುಗದೆ ಹರಿಯ ಸೆನೆಯಮ್ಮ ಮಗಳೆ ಶ್ರೀನಿವಾಸನ ಭಕ್ತರ ಪೂಜೆ ಯತ್ನದಿ ಮಾಡಮ್ಮಾ 8 ಪರರ ಸಿರಿಯ ನೋಡಿ ಮನದಿ ಕೊರಗ ಬೇಡಮ್ಮ ಮಗಳೆ ಹರಿಯು ನೀಡಿಹ ಸಿರಿಯೆ ಸಾಕುಯೆಂದು ಸುಖಿಸಮ್ಮ ಯರವಿನಿಂದ ಒಡವೆ ವಸ್ತ್ರ ಧರಿಸ ಬೇಡಮ್ಮ ಮಗಳೆ ಅರಿತು ಹರಿಯ ಗುಣಗಳ ಮನದಿ ನೆನೆದು ನೆನೆಯಮ್ಮ 9 ಸತತ ನಗೆ ಮೊಗಳಾಗಿ ಬಾಳು ಗಂಟು ಬೇಡಮ್ಮ ಮಗಳೆ ಸತತ ಕಾಯುವ ಹರಿಯೇಯೆಂದು ದೃಢದಿ ಭಜಿಸಮ್ಮ ಕೇಳಮ್ಮಾ ಮಗಳೆ ನಿತ್ಯ ಸುಖಿಸಮ್ಮ 10 ಪತಿಯ ಭಕ್ತಿಯೆ ತಾರಕ ನಿನಗೆ ಧೋರಣೆ ಬೇಡಮ್ಮ ಮಗಳೆ ಪತಿಯ ಜರಿಯುತ ವ್ರತಗಳ ಮಾಡೆ ಫಲವೇ ಇಲ್ಲಮ್ಮ ರತಿಯಿಂ ನುಡಿದಿಹೆ ಶೃತಿಗಳಸಾರ ಯುಕ್ತಿಗಳಮ್ಮ ಮಗಳೆ ಮೊರೆಯ ಹೋಗಮ್ಮ 11
--------------
ಕೃಷ್ಣವಿಠಲದಾಸರು
ಬೇಗನೆ ಕರೆತಾರೇ ಸಖಿಯೇ [ಬೆಗನೆಕರೆತಾರೆ] ಪ ನಾಗಶಯನನವ ಕೂಗದೆ ಬಾರನೆ ಅ.ಪ ಪೂತನಿ ಶಿಶುಗಳ ಫಾತಿಸುತಿಹಳೆಂಬ ಮಾತನವಗೆ ಪೇಳೆ ಭೀತಿಯತೋರಿ ಆತುರದಿಂದವ ಐತರುವನೆ ಸಖಿ ಪ್ರೀತಿಯೊಳೀವೆನೀ ರತುನದ ಹಾರವ 1 ಕರಿ ಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಮೊರೆಯಿಡುವುದ ಹೇಳೆ ಭರದಲಿ ಬರುವ ಉರಗನ ಗರಳದಿ ಕರುತುರು ನೋಯುವ ಪರಿಯ ಬಿತ್ತರಿಸಿ | ಮುರಳೀಧರಗೆ 2 ಸಂಗಡ ಬರದಿರೆ ಭಂಗಿಸುವರು ಗೋ ಪಾಂಗನೆಯರು ಎಂದು ರಂಗಗೆ ಹೇಳೇ ಇಂಗಿತಜ್ಞನು ನಮ್ಮ ಮಾಂಗಿರಿಯರಸನು ಸಂಗಡ ಬರುವನು ಸಂದೇಹವಿಲ್ಲ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬೇಡಲೇತಕೆ ಪರರ ದೇಹಿಯೆಂದು ಪ ನೀಡುವಾ ಧೊರೆ ಎನಗೆ ನೀನಿರಲು ಸರ್ವದಾ ಅ.ಪ. ಗ್ರಾಸವನು ಬೇಡೆ ದೂರ್ವಾಸ ಮುನಿಗಂದನ್ನ ಅನಾ ಯಾಸದಿಂ ತತ್ಕಾಲದಲಿ ಕಲ್ಪಿಸಿ ಆ ಸಂಯಮಿಗೆ ಉಣಿಸಿ ದಣಿಸಿದ ಮಹಾ ದಾತಾ ದಾಶರಥೆ ನಿನ್ನ ಬಿಟ್ಟನ್ಯ ದೇವತೆಗಳನು 1 ಖಳ ದುಶ್ಯಾಸನನು ದ್ರೌಪದಿಯ ಸಭೆಯೊಳು ದು ಕೂಲವನು ಸೆಳೆಯೆ ದ್ವಾರಕ ಮಂದಿರಾ ಶ್ರೀ ಲೋಲ ಶ್ರೀ ಕೃಷ್ಣ ಕರುಣಿಸು ಕರುಣಿಸೆನೆ ಪಾಂ ಚಾಲಿ ಮೊರೆ ಕೇಳಿ ದಿವ್ಯಾಂಬರ ನಿಚಯವಿತ್ತೆ 2 ಮಡದಿ ಕಳುಹಲು ಬಂದ ಬ್ರಾಹ್ಮಣನ ಪೀಡಿಸುವ ಬಡತನವ ಕಳೆದೆ ಒಪ್ಪಿಡಿಯವಲಿಗೆ ಪೊಡವಿಯನ್ನಾಳಿಸಿದೆ ಕ್ರಿಮಿಗೊಲಿದು ಕಾರುಣ್ಯದಲ್ಲಿ ಮೃಡ ಬಿಡೌಜರೀಪ್ಸಿತ ಕೊಡುವೆ 3 ತಾಪಸೋತ್ತಮ ಮೃಕಂಡಾತೃಜಗೆ ಕಲ್ಪಾಯು ನೀ ಪೂರ್ತಿ ಮಾಡಿ ಅಲ್ಪಾಯು ಕಳೆದು ಆ ಪರ್ವತೇಶ್ವರನ ಪಟ್ಟಣವ ಸಾರ್ದು ಸಾಂ ದೀಪ ತನಯನ ತಂದ ಸರ್ವಾಂತರ್ಯಾಮಿ 4 ವಿಶ್ವ ಜೀವರಿಗನ್ನ ಕಲ್ಪಕನೆ ನೀನಿರಲು ಜ್ಞಾನ ದ್ರವ್ಯ ಅಲ್ಪ ಮಾನವರಿಗಾಲ್ಪರಿರೇನಹುದು ಅಹಿ ತಲ್ಪ ಜಗನ್ನಾಥ ವಿಠ್ಠಲ ಕಲ್ಪತರುವಿರಲು 5
--------------
ಜಗನ್ನಾಥದಾಸರು
ಬೇಡಿಕೊಂಬೆಗೋಪಾಲ ಬೇಡುವೆನೈ ದಯ ಪ ಮಾಡಿ ಎನ್ನೊಳು ಬೇಗ ಗಾಢ ಮಹಿಮ ವರ ನೀಡೋ ಕೃಪಾಂಬುಧೇ ಅ.ಪ ಮರುಳನಾಗಿ ನಾನು ತಿರುಗುವೆ ಧರೆಯೊಳು ಸಿರಿವರ ನಿಮ್ಮಯ ಚರಣವ ಸ್ಮರಿಸದೆ ಪರಿ ನರಕಕ್ಕೆ ಗುರಿಯಾದೆ ಮುರಹರ ಕರುಣದಿಂ ಮನ್ನಿಸಿ ಪೊರೆ ಸುರವರ 1 ದೀನದಯಾಪರ ಜಾನಕೀ ಮನೋಹರ ನೀನೆ ಗತಿಯೆಂದು ಧ್ಯಾನಿಸಿ ಬೇಡುವೆ ಹೀನನ ಮಾಡದೆ ಧ್ಯಾನಿಪ ಭಕ್ತನಂ ಮಾನದಿಂ ರಕ್ಷಿಸು ವೇಣುಧರಹರಿ2 ಸುರುಪರೀಶ ಹರಿ ಚರಣದಾಸರ ಮೊರೆ ಕರುಣದಿ ಆಲಿಸಿ ಕರಪಿಡಿದು ಪೊರೆ ನೆರೆನಂಬಿದೆ ನಿಮ್ಮ ಚರಣವ ಪರಿಪರಿ ಪರಮಪಾವನ ಮಾಡು ಸಿರಿವರ ಶ್ರೀರಾಮ 3
--------------
ರಾಮದಾಸರು
ಬ್ರಹ್ಮ ಲಿಖಿತವ ಮೀರಿ ಬಾಳ್ವರುಂಟುನಿರ್ಮಳದಿ ವೈಷ್ಣವರ ಮನಮುಟ್ಟಿ ಭಜಿಸಿ ಪ ಪಾಪಕೆ ಹೇಸದ ಶಬರ ಬಟ್ಟೆಯನು ಕಾದಿರಲುಆ ಪಥದಿ ಸಲೆ ವೈಷ್ಣವನು ಬಂದುಪಾಪವನು ತಪ್ಪಿಸಿ ರಾಮನಾಮವ ಕೊಡಲುಕಾಪಥಕ ವಾಲ್ಮೀಕಿ ಮುನಿಯಾಗಲಿಲ್ಲವೆ ? 1 ಪಂಚಮಹಾಪಾತಕವ ಮಾಡಿದ ಅಜಾಮಿಳನವಂಚಿಸಿ ಯಮದೂತರೆಳೆದೊಯ್ಯುತಿರಲುಕಿಂಚಿತ್ತು ಹರಿನಾಮವನಾಕಸ್ಮಿಕದಿ ನೆನೆಯೆಅಂಚಿಗೆಳೆದೊಯ್ದವರು ವಿಷ್ಣುದೂತರಲ್ಲವೆ ?2 ಬಾಲಕ ತನ್ನ ತಾಯ್ತಂದೆಯೊಳ್ ಮುನಿದು ಹಲವುಕಾಲ ವನದೊಳು ತಪವ ಮಾಡಲುನೀಲಮೇಘಶ್ಯಾಮ ಮೆಚ್ಚಿ ಬಾಲಕನಿಗೆಮೇಲಾದ ಪದವಿಯನು ಕೊಡಲಿಲ್ಲವೆ ? 3 ದಶಕಂಠನನುಜನು ಜಾನಕಿಯ ಬಿಡ ಹೇಳೆಅಸುರ ಕೋಪವ ತಾಳಿ ಹೊರಗಟ್ಟಿದಾಗಪೆಸರಗೊಳುತ ಬಂದು ಮೊರೆಹೊಕ್ಕ ವಿಭೀಷಣಗೆಶಶಿರವಿ ಪರ್ಯಂತ ಪಟ್ಟಗಟ್ಟಲಿಲ್ಲವೆ ? 4 ಕಲಿಗೆ ಬೆದರುವರಲ್ಲ ಕಾಲನ ಬಾಧೆಗಳಿಲ್ಲಛಲದಿ ನರಳಿ ಪುಟ್ಟುವ ಗಸಣೆಯಿಲ್ಲಒಲಿದು ಕಾಗಿನೆಲೆಯಾದಿಕೇಶವರಾಯನಸಲೆ ನಂಬಿದವರಿಗೆ ಮುಕುತಿಯಿತ್ತುದಿಲ್ಲವೆ ? 5
--------------
ಕನಕದಾಸ
ಭಕುತಿಯಾಬೇಡುವೆ ಪ ಮುಕುತರೊಡೆಯ ನಿನ್ನಪದಪಂಕಜದೊಳುಅ.ಪ ಬಾರಿಬಾರಿಗೆ ನಿನ್ನ ನಾಮವ ನಾ| ಸ್ಮರಿಸಲು ದಾರಿಯ ಕಾಣೆನೊ ಮಾರಮಣನೆ ದಯತೋರದಿರಲು ಇ- ನ್ಯಾರಿಗೆ ಮೊರೆಯಿಡಲಯ್ಯ ಶ್ರೀಹರೇ 1 ಘನ್ನದುರಿತಗಳಿಂದ ಹಿಂದೆ ನಾ ಬನ್ನಪಟ್ಟು ಬಹು ಖಿನ್ನನಾಗಿಹೆ ಸನ್ನುತಾಂಗ ಶ್ರೀನಲ್ಲನೆ ನೀ ಇನ್ನುಮನ್ನಿಸದಿರೆ ಇನ್ನಾರಿಗೆ ಪೇಳಲೊ 2 ಮಂಕುಮತಿಯಾಗಿದ್ದರೆನ್ನ ಹೃ- ತ್ಪಂಕಜದೊಳಗೆ ಅಕಳಂಕನಾಗಿಹೆ ಶಂಕೆ ಏಕೋ ನಿನ್ನ ಕಿಂಕರನಲ್ಲವೇ ಸಂಕಟ ಹರಿಸೋ ಶ್ರೀ ವೆಂಕಟೇಶನೆ 3
--------------
ಉರಗಾದ್ರಿವಾಸವಿಠಲದಾಸರು
ಭಕ್ತರ ಸುರಧೇನು ಶಕ್ತರ ಬಂಧು ನೀ ಪ ಭಕ್ತರ ಮೊರೆ ಕೇಳೋ ಲಕ್ಷ್ಮೀಪ್ರಿಯ ರಮಣ ಅ.ಪ ಪ್ರಾಚೀನ ಹಿರಿಯರ ಯೋಚಿಸಿ ನೋಡಲು ಕಂಟಕ ವಿಮೋಚಿಸಿ ಕಾಯ್ದಯ್ಯ1 ಕರಿರಾಜ ಧ್ರುವಮುನಿ ವರ ವಿಭೀಷಣರನ್ನು ಪರಮಪದವನಿತ್ತು ಕರುಣದಿ ಪೊರೆದಯ್ಯಾ 2 ದೀನನೋಳ್ದಯವಾಗಿ ಹೀನಸ್ಥಿತಿ ಪರಿಹರಿಸೊ ಧ್ಯಾನಿಸುವರಿಗತಿ ಸುಲಭನೆ ಶ್ರೀರಾಮ 3
--------------
ರಾಮದಾಸರು
ಭಕ್ತವತ್ಸಲ ಭಾರಕರ್ತಾ | ಕರುಣವಂತ ನಿತ್ಯ ನಿರ್ಮಲ ಸರ್ವ ಶಕ್ತ | ಶಾಂತಾತ್ಮಕ ಪ. ಸುತ್ತ ವಿರಜೆ ಉನ್ಮತ್ತ ಮುಕ್ತರ ನೃತ್ಯ ಗೀತೆ ವೈಚಿತ್ರದೋಲಗವು ಇತ್ತಂಡದಿ ಮೈಹತ್ತಿ ಕುಳಿತ ಸತಿಯ ರೆತ್ತಲಿತ್ತ ಬಂದ ಚಿತ್ರ ಮಹಿಮ ಹೇ ಅ.ಪ. ವಿಹಂಗ ಗಮನ ತು- ರಂಗರೂಪನೆ ಅಂತರಂಗದಿ ನೆಲಸಿ ಸು- ಸಂಗದಿಂದಲಿ ಲಿಂಗ ಭಂಗಗೈಸುತ ಜ- ನ್ಮಂಗಳ ಕಡೆ ಮಾಡು ರಂಗ ಕರುಣಾಪಾಂಗ ಇಂಗಡಲಳಿಯನೆ ತುಂಗ ಮಹಿಮ ನರ- ಸಿಂಗ ನಿನ್ನಯ ಚರಣಂಗಳ ತೋರಿಸೋ ಭಂಗಪಡುವೆ ಭವಹಿಂಗಿಸಿ ಪೊರೆ ಕಾ- ಳಿಂಗ ಮಥನ ಯದುಪುಂಗವ ಕರುಣಿ 1 ಗತಿ ನೀನೆ ಎಂದು ಶ್ರೀಪತಿ ನಿನ್ನ ಮೊರೆಹೊಕ್ಕೆ ಹಿತದಿಂದ ಕಾಯೊ ದ್ರೌಪದಿಯ ಕಾಯ್ದಂಥ ದೈವ ಚ್ಯುತದೂರ ಮುಕ್ತರ ಸ್ತುತಿಪ್ರಿಯ ಶ್ರೀ ವಾಯು- ಪಾದ ಪ್ರತಿ ಕಾಣೆ ನಿನಗೆಣೆ ಕರ್ಮ ಸು- ಪಥ ಕಾಣೆನು ಗತಿಯಿಲ್ಲದೆ ಶ್ರೀ- ಪತಿ ಕೃಪೆ ಮಾಡುತ ತತುವ ಮಾನಿಗಳ ಕೃತಿ ತಿಳಿಸುತ ನಿನ ತುತಿಸುವ ಮತಿಕೊಡು 2 ಗೋಪಿಕಂದನೆ ಬಾಲರೂಪಧಾರಕ ಮಧ್ವ- ರಪಾರ ಸ್ತುತಿ ಕೇಳಿ ಗೋಪೀಚಂದನದಿ ಬಂದು ಪರಿ ನಿಂತ ದೇವಪತಿ ಜನಗಳ ಪೊರೆದು ಕಾಪಾಡುವ ಕರ್ತ ಗೋಪಾಲಕೃಷ್ಣವಿಠ್ಠಲ ಶ್ರೀಪದ್ಮಜಮುಖ ಸುರಾಪ ಧರೇಂದ್ರರು ತಾಪಸಿಗಳೂ ನಿನ್ನ ವ್ಯಾಪಾರ ತಿಳಿಯದೆ ಗೋಪ್ಯಾದಿ ನುತಿಸಿ ಸ್ವರೂಪ ಯೋಗ್ಯತೆಯಂತೆ ವ್ಯಾಪಕ ನಿನ್ನಯ ರೂಪವ ಕಾಂಬರು 3
--------------
ಅಂಬಾಬಾಯಿ
ಭಕ್ತವತ್ಸಲ ಹರಿ ಎಂಬ ಬಿರುದು ನಿನ ಗಿತ್ತವರ್ಯಾರಯ್ಯಾ ಹೇ ಜೀಯಾ ಪ ತತ್ತರಿಸುತಲಿಹರು ಈ ಜಗದೊಳು ಅ.ಪ ಪರಿಪರಿಯಲಿ ನಿನ್ನ ಮೊರೆಯ ಹೊಕ್ಕಿರುವ ಪರಮ ಸುಜನರುಗಳು ಈ ಧರೆಯೊಳು ಒರಳಿಗೊಡ್ಡಿರುವ ಶಿರಗಳುಳ್ಳವರಂತೆ ದುರುಳರ ಭಯದಿಂದ ನರಳುತಿರೆ 1 ವಾಸಕೆ ಗೃಹವಿಲ್ಲ ಲೇಶ ಸುಖಕೆ ಅವ ಕಾಶ ಇವರಿಗಿಲ್ಲ ಈ ಭುವಿಯೊಳು ಶ್ರೀಶನಾಗಿರೆ ನಿನ್ನ ದಾಸರೊಳಗೆ ಪರಿ ಹಾಸ ಮಾಡುತಲಿಹೆಯೋ ಜಗದೀಶ 2 ಪರಿ ಘನ್ನಬಿರುದುಗಳು ಇನ್ನು ಉಳಿವುದೆಂತೋ ನಾ ಕಾಣೆ ಸನ್ನುತಿಸುವವರಿಗೆ ಇನ್ನಾದರು ಸುಖ ವನ್ನು ನೀ ದಯಮಾಡೋ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಭಜನೆಯ ಪದ ಭಕ್ತ ವತ್ಸಲ ಸ್ವಾಮಿ ಭಯನಿವಾರಣ ದೇವ ಭರದಿಂದ ಬಂದುದ್ಯಾಕೆ ಪೇಳಯ್ಯಾ ಪ ಭಾರ ಹೊತ್ತು ಬಂದೆಯಾ ಕೋರೆದಾಡಿಗಳಿಂದ ಧಾರೂಣಿ ಎತ್ತೀ ತಂದು ಭಾರ ವಾಯಿತೆಂದು ಬಂದೆಯಾ 1 ಬಾಲಕಾನಾ ನುಡಿಯ ಕೇಳಿ | ಬೇಗದಿಂದಾ ಬಂದೆಯಾ ದುರುಳನ್ನ ಕೊಂದು ಕರುಳ ಮಾಲೆಯಧರಿಸಿ ನೀ ತರಳಗಭಯವಿತ್ತು ಬಂದೆಯಾ2 ಬಲಿಯ ದಾನಾಬೇಡಿ ನೀನು ಕೊಡಲಿ ಪಿಡಿದೂ ನಿಂತೆಯಾ ಮಡದಿಯಾ ಕದ್ದವನ ಬಿಡದೆ ಬೆನ್ನಟ್ಟಿಕೊಂಡು ಸಡಗರದಲಿ ನೀ ಬಂದೆಯಾ 3 ಮಧರೇಲಿ ಹುಟ್ಟಿ ಮಲ್ಲಾರ ಮಡುಹೀ ಮಾವ ಕಂಸನ ಕೊಂದು ಬಂದೆಯಾ ಆನಂದಿಂದಿಲ್ಲಿ ಬಂದೆಯಾ 4 ವಸನಾ ವಿಲ್ಲದೆ ನೀನು ಪಶುವನ್ನೇರಿಕೊಂಡು ವಸುಧೆಯ ಒಳಗೆಲ್ಲಾ ತಿರುಗೀದೆಯಾ ನೀ ಬಂದೆಯಾ5 ಕರಿಯಾ ಮೊರೆಕೇಳಿ ನೀ ತ್ವರಿತಾದಿಂದಾ ಬಂದೆಯಾ ಮ ಕರಿವರದನೆಂದೆನಿಸಿಕೊಂಡೆಯಾ 6 ಕಷ್ಟ ಪಡುವಾ ಜನರ ಕಂಡು ಕಡುದಯದಿಂ ಬಂದಿಯಾ ಪಕ್ಷಿವಾಹನನೇ | ಲಕ್ಷಮಿರಮಣನೆ | ಕಟಾಕ್ಷವನೇ ಬೀರುವಿಯಾ 7 ಹತ್ತವತಾರವ ಎತ್ತಿ ಬೇಸತ್ತು ನೀ ಮತ್ತೆ ನೀನಿಲ್ಲ ಬಂದಿಹೆಯಾ ಬರುವರು ಕಂಡೆಯಾ 8 ಲಕ್ಷ್ಮಿ ಇಲ್ಲದೆ ನಾನಿರೆನೆನುತಲಿ ವೈಕುಂಠ ಬಿಟ್ಟು ಬಂದೆಯಾ ಭಕ್ತಾರ ಸಲಹಲು ಬಂದಿಹೆಯಾ 9 ಹುಡುಕೀಕೊಂಡಿಲ್ಲೇ ಬಂದಿಹೆಯಾ 10 ಪಾಪನಾಶಿನಿ ಸ್ನಾನ ಮಾಡೋರು | ನಿನ್ನ ಧ್ಯಾನ ಬೇಡೋರು ಮನದಿಕ್ಷ್ಟಾರ್ಥಗಳ ಸಲಿಸಲು | ಆತೂರದಿಂದಲಿ ಬಂದೆಯಾ 11 ರೀತಿಗಳಿಂದ ಸೇವಿಸುವರು ನಿನ್ನ ಕೆರಂಡಾಡುವರು 12 ಬಳಿ ಬಂದಿಹರು ಬೇಡುತಾ ನಿಂದಿಹರೂ13 ಪಡುತಲಿ ಬಂದಿಹರು ಸಂತಯಿಸಬೇಕೆನುತ ಬಂದಿಹೆಯಾ14 ಬಳಿ ಬಂದಿಹರೂ ಬೀಸಾಡಲೂ ಬಂದಿರುವಿಯಾ 15 ಬಂದಿಹರೂ ನಿನಗೊಂದಿಸುವರೂ 16 ಹೆಜ್ಜೆಗೆ ನಿನ್ನ ವಂದಿಸುತಲೀ ಬಾಷ್ಟಗಳ ಸುರಿಸುವರೂ 17 ನಲಿಯುವರೂ ಕುಣಿ ದಾಡುವರೂ 18 ದೋಬಿಕೊಳ್ಳುತ ನೀ ನಿಂತಿರುವೇ ಯಲ್ಲಾನುಕಸಕೊಂಡು ಕಳುಹುವಿಯೇ 19 ತೀರೀತೆಂದು ತಿಳಿಯುತಲೀ ಧನ್ಯರಾದೇವೆನುತ ತೆರಳುತಿಹರೂ 20 ಮೇಲಾದ ಭಕ್ಷಗಳ ಬಡಿಸುವೋರು
--------------
ರಾಧಾಬಾಯಿ
ಭಜಿಸುವೆನು ನಾನಿನ್ನ ಭಕ್ತಾಧೀನ ಅಜಹರನುತ ಅಗಣಿತಚರಿತ ಹರಿ ಪ ಅಂದು ಮುನಿಸತಿ ಶಾಪದಿಂದ ಶಿಲೆಯಾಗಿರೆ ಛಂದದಿ ಚರಣಾರವಿಂದ ಸ್ಪರ್ಶವಾಗಲು ಕುಂದು ಪರಿಹಾರವಾಗಿ ಸುಂದರ ಮಣಿಯಾದಳೆಂದು ನಿಮ್ಮಯ ಪಾದದ್ವಂದ್ವ ಬಿಡದಲೆ ನಾ 1 ಕಂದ ಕರೆಯಲು ಶ್ರೀ ಗೋವಿಂದ ಘನ ಸ್ತಂಭದೊಳ್ ಬಂದು ದೈತ್ಯನ ಕೊಂದ ಇಂದಿರಾರಮಣ ಕಂದರ್ಪ ಜನಕ ಮುಚುಕುಂದ ವರ ಕೃಷ್ಣಾ ಮಂದರಧರ ಸಲಹೆಂದು ಅನವರತ 2 ದೃಢ ಧ್ರುವರಾಯನ ಬಿಡದೆ ಮಲತಾಯಿ ತಾ ಅಡವಿಗೆ ನೂಕಿಸಲು ಕಡು ಮುದದಿ ಕಡಲಶಯನ ಜಗದೊಡಿಯನೆ ಕಾಯ್ದೆ ಗರುಡವಾಹನನೊಡನೆ ನುಡಿಯಯ್ಯ 3 ದುರುಳ ರಾವಣನ ದಶಶಿರಗಳು ಖಂಡಿಸಿ ಶರಣೆಂದು ವಿಭೀಷಣ ಗೇ ಸ್ಥಿರದಿ ಪಟ್ಟವನಿತ್ತು ಪರಮಪುರುಷ ಶಿರಿವರ ನರಹರಿ ಶೌರಿ ಮೊರೆ ಹೊಕ್ಕೆ ರಕ್ಷಿಸೋ ಮುರಹರ ಕರುಣಾಂಬುಧೆ 4 ಕರಿಸರೋವರದಿ ಮಕರಿಯ ಬಾಧೆಗೆ ಸಿಕ್ಕು ಹರಿನೀನೆ ಗತಿಯೆಂದು ಸ್ಮರಿಸುತಲಿರಲು ಭರದಿಪೋಗಿ ಕಷ್ಟಪರಿಹರಿಸಿ ಪೊರೆದಿ ಶ್ರೀಧರವರÀ ಹೆನ್ನೆಯಪುರ ಲಕ್ಷ್ಮೀನರಸಿಂಗ 5
--------------
ಹೆನ್ನೆರಂಗದಾಸರು
ಭಯ ನಿವಾರಣ ಸುಳಾದಿ ನಾಕೇಶ ದೇವತತಿ ಆ ಕಮಲನಾಭ ಯತಿ ನಿಕರಗೊಲಿದನೆ ಶ್ರೀಕರವದನ ಸರ್ವಲೋಕಕಧಿಪ ಕೃಪಾ- ಲೋಕನದಲಿ ನೋಡಿ ಸುಖತೀರ್ಥನುತ ಚರಣ ವ್ಯಾಕುಲ ಬಿಡಿಸಿ ನಿನ್ನಾನೇಕ ಮಹಿಮೆ ತಿಳಿಸಿ ಜೋಕೆಯಿಂ ಕಾಯ್ದ ಗುರು ಆಕಾರಂತರ್ಯಾಮಿ ಈ ಕಾಲದಲಿ ಮನ ವ್ಯಾಕುಲಪಡಿಸುವ ಕಾಕು ಭಯವ ಬಿಡಿಸಿ ನೀ ಕಾಯಬೇಕೊ ದೇವ ಲೋಕ ಲೋಕಾದಿಗಳ ಸಾಕುವ ಭಾರಕರ್ತ ಆ ಕಮಲಭವನಭಯ ವ್ಯಾಕುಲ ಬಿಡಿಸಿದೆ ಲೋಕ ಸೃಷ್ಟಿಪ ಶಕ್ತಿ ಏಕಚಿತ್ತವ ಕೊಟ್ಟು ಲೋಕಲೋಕಾಧಿಪರ ನೀ ಕಾಯ್ದೆ ಕರುಣದಿ ಲೋಕವೆಲ್ಲವ ಕೊನೆಗೆ ಏಕಾಪೋಶನಗೈವ ಲೋಕಪತಿಯೆ ಭಕ್ತಾನೀಕಕÀಭಯದಾತ ಭೀಕರ ಬೆನ್ಹತ್ತಿ ತಾಕಿದ ಮನಸಿನ ವ್ಯಾಕುಲ ಭಯಬಿಡಿಸಿ ಜೋಕೆಯಿಂದಲಿ ಕಾಯೊ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠ್ಠಲ ಈ ಕಾಲಕೊದಗೆ ನಿನ್ನಾನೇಕ ಕೀರ್ತಿಯು ನಿಜವೋ 1 ಭಯ ನಿವಾರಕದೇವ ಭಕ್ತವತ್ಸಲ ನೀನೆ ದಯಮಾಡು ಮನಸಿನಲಿ ತಗುಲಿದ ಭಯವನೆ ಬಿಡಿಸಿ ಭಯಪಡಿಸುತಿರೆ ಖಳನು ಬಾಲಕನ ಪ್ರತಿದಿನದಿ ನಯವಿನಯದಿ ಕಂದ ನಿನ್ನನು ಮೊರೆಯಿಡೆ ಕೇಳಿ ದಯಮಾಡುತ ತರಳನಲಿ ಕನಲುತ ದೈತ್ಯನ ಕೊಂದು ಭಯ ಬಿಡಿಸಿದೆ ಬಾಲಕಗೆ ಭಕ್ತವತ್ಸಲ ನೃಹರೆ ಅಯೋನಿಜೆ ದ್ರೌಪದಿಗೊದಗಿದ ಅನುತಾಪಗಳನೆಲ್ಲ ದಯದಲ್ಲಿ ಪರಿಹರಿಸಿದ ಆಪದ್ಭಾಂಧವ ಸ್ವಾಮಿ ಭಯಪಡಿಸುತ ಭಸ್ಮಾಸುರ ಮೃತ್ಯುವಿನಂದದಿ ಮೃತ್ಯುಂ ಜಯನನು ಬೆನ್ನಟ್ಟಿ ಬರೆ ಹರನು ನಿನ್ನನು ಮೊರೆಹೋಗಲು ಸಂತೈಸಿ ತರುಣಿಯ ರೂಪದಿ ಖಳನ ಕೈಯಿಂದಲೆ ಅವನ ಶಿರ ಉರಿಸುತ ಶಿವನನು ಪೊರೆದೆ ಭಯಹಾರಕ ನರಹರೆ ಶ್ರೀ ಗೋಪಾಲಕೃಷ್ಣವಿಠ್ಠಲ ಜಯವಲ್ಲದೆ ದಾಸರಿಗೆ ಭಯವುಂಟೆ ಪೇಳೋ 2 ನಿತ್ಯ ನಿನ್ನನು ನಂಬಿ ಚಿತ್ತದಿ ನೆನೆವಂಥ ಆಪ್ತವರ್ಗಕೆ ಇನ್ನು ಮೃತ್ಯು ಭಯವು ಉಂಟಿ ಆಪ್ತನಲ್ಲವೆ ನೀನು ಚಿತ್ತಕಂಟಿದ ಭಯ ಮೃತ್ಯು ಪರಿಹರಿಸೈಯ್ಯ ಎತ್ತ ನೋಡಲು ನಿನ್ನ ವ್ಯಾಪ್ತಿ ಸುತ್ತಿರೆ ಜಗದಿ ಮೃತ್ಯುವೆತ್ತಣದೊ ನಿನ್ನುತ್ತಮ ಭಕ್ತರಿಗೆ ಇತ್ತ ದೇಹವು ನಿಂದು ಚಿತ್ತಾದಿಂದ್ರಿಯ ನಿಂದು ನಿತ್ಯ ನಡೆವ ಜೀವಕೃತ್ಯವು ನಿನದೈಯ್ಯ ಸುತ್ತುವೊ ಗ್ರಹಗತಿ ಮೃತ್ಯು ಪರಿವಾರವೆಲ್ಲ ಭೃತ್ಯರಲ್ಲವೆ ನಿನ್ನ ಚಿತ್ತಕ್ಕೆದುರಾಗುವರೆ ಭೃತ್ಯತ್ವದಲ್ಲಿರೆ ಎತ್ತಣ ಭಯವೈಯ್ಯ ಹತ್ತಿಕಾಡುವ ದುಷ್ಟಗ್ರಹಗಳ ಕಡೆಗೆ ನೂಕಿ ಚಿತ್ತ ನಿರ್ಮಲವಿತ್ತು ಮತ್ತೆ ಮಂಗಳವಿತ್ತು ನಿತ್ಯ ಕಾಯಲಿಬೇಕೊ ನಿನ್ನ ಸೇವೆಯನಿತ್ತು ಮೃತ್ಯು ಮೃತ್ಯುವೆ ಮಹಾದೈತ್ಯ ಸಂಹರಣನೆ ಚಿತ್ತದಲ್ಲಿ ನೀನು ಆಪ್ತನಾಗಿರೆ ಬೇರೆ ಹತ್ತಿಕಾಡುವ ಗ್ರಹ ಹತ್ತಿರ ಬರಲುಂಟೆ ಸಿರಿ ಗೋಪಾಲಕೃಷ್ಣವಿಠ್ಠಲ ಹತ್ತಿದ ಮೃತ್ಯು ಭಯ ಕಿತ್ತಿ ಬಿಸುಟು ಕಾಯೊ 3 ವಾಸುದೇವನೆ ನಿನ್ನ ದಾಸನ ಕಾಯುವಂಥ ಈಶನಲ್ಲವೆ ಜೀವರಾಶಿಗಳಿಗೆ ಬಿಂಬ ಸುಷುಪ್ತಿಯಲ್ಲಿ ಕಾವ ಆತ್ಮ ಆನಂದರೂಪ ತಾಸು ತಾಸಿಗೆ ಬಂದ ಭಯವ ಬಿಡಿಸುವದರಿದೆ ದಾಶರಥಿಯೆ ನಿನ್ನ ಅನುಜನ ಜೀವಭಯ ದಾಸ ಹನುಮನಿಂದ ಗಿರಿತರಿಸಿ ಹರಿಸಿದೆ ಆ ಸುಗ್ರೀವನ ಮೊರೆ ಕೇಳಿ ಅಭಯವಿತ್ತು ತೋಷದಿಂದಲಿ ಒಲಿದು ರಾಜ್ಯ ಸುಖವನಿತ್ತೆ ವಾಸವ ಮೊರೆಯಿಡೆ ಒಲಿದು ಅಮೃತವಿತ್ತು ಘಾಸಿಗೊಳಿಪ ಮೃತ್ಯುದೈತ್ಯರ ಸದೆಬಡಿದೆ ನಾಶರಹಿತ ನೃಹರಿ ಗೋಪಾಲಕೃಷ್ಣವಿಠ್ಠಲ ನಾಶದ ಭಯ ಉಂಟೆ ನಿನ್ನ ನಂಬಿದವರಿಗೆ 4 ತರಳತ್ವದಲಿ ಭಯವು ವರ ಯೌವ್ವನದಲಿ ಭಯವು ಜರೆ ಮರಣದಲಿ ಭಯವು ಪರಿಪರಿ ರೋಗದ ಭಯವು ಆರೆಘಳಿಗೆಯು ಬರದಂತೆ ಹರಿ ನೀ ಪರಿಹರಿಸುತಲಿ ಪರತರ ನಿನ್ನಯ ಮಂಗಳ ಚರಿತೆಯ ಸ್ಮರಣೆಯನಿತ್ತು ಹರಿಭಕ್ತರ ಕಾಯುವುದು ಬಿರುದಲ್ಲವೆ ನಿನಗಿನ್ನು ಪರಿಪರಿ ಭಯ ಕ್ಲೇಶಗಳ ಪರಿಹರ ಮಾಡುತ ಕಾಯೊ ವರಯಂತ್ರ ಮಂತ್ರಗಳು ಪರಿಪರಿ ಜಪ ಹೋಮಗಳು ತರತರದೌಷಧ ಪಥ್ಯ ನರಹರಿ ಎಲ್ಲವು ನೀನೆ ಹೊರಗೊಳಗೆಡಬಲದಲ್ಲಿ | ಮರೆವು ಸ್ಮರಣೆಗಳಲ್ಲಿ ಪರಿಪರಿ ಕ್ರೀಡೆಗಳಲ್ಲಿ ಚರಿಸುವ ಕರ್ಮಗಳಲ್ಲಿ ನೆರೆದಿಹ ಜನವೃಂದದಲಿ ಹಗಲಿರುಳು ಸಂಧಿಯಲಿ ಪರಿಪರಿ ಕಾಲಗಳಲ್ಲಿ ಪರಿಪರಿ ದೇಶಗಳಲ್ಲಿ ನರಹರಿ ದುರ್ಗಾಸಹಿತ ವರ ಮೃತ್ಯುಂಜಯ ವರದ ಸಿರಿಭಾರತಿಪತಿಸಹಿತ ಚರಿಸುತ ಬೆಂಬಿಡದಲೆ ನೀ ನಿರುತದಿ ಕಾಯಲಿಬೇಕೊ ಬರಿದನು ಮಾಡದೆ ಸ್ತುತಿಯ ವರ ಸುದರ್ಶನ ಪಾಂಚಜನ್ಯ ಪದ್ಮವ ಪಿಡಿದ ಪರಮ ಮಂಗಳರೂಪ ದೈತ್ಯರಿಗತಿ ಘೋರ ಗುರುಬಿಂಬನೆ ನೀನೆಂದು ಪರಿಪರಿ ಪ್ರಾರ್ಥಿಪೆನಿನ್ನು ಕೊರಗಿಸದಲೆ ಮನವನ್ನು ಹರಿ ಸೌಭಾಗ್ಯವನಿತ್ತು ಕರೆಕರೆಗೊಳಿಸದೆ ಕಾಯೊ ಕರುಣಾಬ್ಧಿಯೆ ದಾಸರನು ವರಭಾಗ್ಯವು ಆಯಸ್ಸು ಆರೋಗ್ಯಂಗಳೂ ಎಲ್ಲ ನಿರುತವಿರಲಿ ಬೇಕೊ ನಿನ್ನವರಿಗೆ ಸಾಧನಕೆ ಕರುಣಾಕರ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಿಸಿದ ಮಾತ್ರದಿ ಸಕಲ ಭಯ ಪರಿಹಾರಕವೋ 5 ಜತೆ ನಿತ್ಯ ಮಂಗಳ ನಿನ್ನ ಸ್ಮರಿಪರ ಮನದ ಭಯವ ಕಿತ್ತು ಬಿಸುಟು ಸಲಹೋ ಗೋಪಾಲವಿಠ್ಠಲ
--------------
ಅಂಬಾಬಾಯಿ
ಭವ ನೋವಾ ಪ ಹರಿಯೆ ಪರದೈವ ವೆಂ | ಮೊರೆಯುತಿಹ ಬಾಲಕನಪರಿ ಪರೀ ಹಿಂಸಿಸಲು | ಪರಿಚರರಿಗ್ವೊರೆಯೇತರಳ ಪ್ರಹ್ಲಾದವನ | ಕರದೊಯ್ದು ಕಬ್ಬಿಯಲಿಹೊರದೂಡಿ ಪರಿಶಿಲೆಯ | ಶಿರದ ಮೇಲಿಡಲೂ 1 ವರಹ ಲಕ್ಷ್ಮೀನರ | ಹರಿಯ ರೂಪದಲಿಂದಭಾರವಾದ್ ಶಿಲೆಯ ನೊ | ತ್ತರಿಸುತಲಿ ನೀನೂವರ ಭಕ್ತನನು ಕಾಯ್ದೆ | ಸರುವ ವ್ಯಾಪಕ ದೇವಕರುಣಿಸು ಗುಣಾನಂತ | ವರಲಕ್ಷ್ಮಿಕಾಂತ 2 ಪರಿ ಪರಿಯ ಹಿಂಸೆಗಳಿಗೆರವು ಮಾಡುವೆ ಗುರೂ | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು