ಒಟ್ಟು 908 ಕಡೆಗಳಲ್ಲಿ , 97 ದಾಸರು , 731 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದನು ರಘುವೀರ ರಣಧೀರ ಪ ತಡೆ ಭರತನೆ ಮುಂದಡಿಯಿಡಬೇಡ ದುಡುಕಿ ಬೀಳದಿರು ಬಡಜನ ಮುಖಕೆ 1 ಸೀತಾನಾಥನ ದೂತನಾದೆನ್ನ ಮಾತನು ಕೇಳು ಆತುರಪಡದೆ 2 ಭ್ರಾತನ ನೋಡಲು ಕಾತರನಾಗಿ ವಾತವೇಗದೊಳು ಆತನು ಬರುತಿಹ 3 ಅದೊ ನೋಡದೊ ನೋಡದರ ದೆಶೆಯಲಿ ವಿದುಶತಕಿಲ್ಲದಗದಿರದದ್ಯುತಿಯ 4 ಅದೊ ಪುಷ್ಪಕವು ಅದರ ಪ್ರಭೆ ನೋಡು ಅದರಿರವ ನೋಡು ಒದಗಿ ಬರುತಿದೆ 5 ಧಾಮ ಮಧ್ಯೆ ನಿ ಸ್ಸೀಮ ನಿಮ್ಮಣ್ಣ ರಾಮನ ನೋಡು 6 ವಾಮದಿ ಸೀತಾಭಾಮೆ ಕುಳ್ಳಿಹಳು ಪ್ರೇಮದಿ ಲಕ್ಷ್ಮಣ ಚಾಮರ ಬೀಸುವ 7 ಬಲದಿ ಸುಗ್ರೀವ ನೆಲೆಸಿಹ ನೋಡು ಕೆಲದಿ ವಿಭೀಷಣ ನಲಿಯುತ ನಿಂತಿಹ8 ಅಂಗದ ತನ್ನಯ ಜಂಘೆಲಿ ದೇವನ ಮಂಗಳ ಚರಣವ ಹಿಂಗದೆ ಸೇವಿಪ 9 ವೃದ್ಧ ಜಾಂಬವ ಗದ್ದುಗೆ ಮುಂದಿಹ ಯುದ್ಧ ಪ್ರವೀಣರು ಸಿದ್ಧರಾಗಿಹರು 10 ಉಳಿದ ಕಪಿ ದನುಜ ದಳಗಳು ಹಿಂದೆ ಕಲಕಲ ಮಾಡುತ ಉಲಿಯುತಲಿಹವು 11 ಅರರೆ ವಿಮಾನವು ತಿರುಗಿತು ನೋಡು ಧರಣಿಗೆರಗುತಿದೆ ಭರದೊಳು ನೋಡು 12 ಭಳಿರೇ ರಾಮನು ಇಳಿದನು ನೋಡು ಕಳವಳವೆಲ್ಲವ ಕಳೆಯುತ ನೋಡು 13 ಬಂದನು ಅದಕೊ ಬಂದೇ ಬಂದನು ಇಂದುಮುಖಿಯ ತಾ ಹಿಂದಿಟ್ಟುಕೊಂಡು14 ಮುಂದೆ ಬರುವ ಕಪಿಯನು ಉಳಿದು ಸುಂದರ ಮುಖವು ಕುಂದಿದೆ ನೋಡು 15 ನಡೆದು ಬರುತಿಹ ಮಡದಿಯೊಡಗೂಡಿ ತಡಮಾಡದಿರು ಪೊಡಮಡು ಪೋಗು 16 ಇಂತು ನುಡಿದು ಧೀಮಂತನಾದ ಹನು- ಮಂತ ಚಿಗಿದು ಖಗನಂತೆ ಬಂದಿಳಿದ17 ವಾತಸುತನ ಸವಿಮಾತಲಿ ಭರತನು ಪ್ರೀತಿಲಿ ತಿರುಗಿದನಾತುರದಿಂದ 18 ನೋಡುತ ರಾಮನ ಓಡುತ ಬಂದೀ ಡಾಡಿದ ತನುವ ಬಾಡಿದ ಮುಖದಿ 19 ಅನುಜನ ನೋಡಿ ದನುಜಾರಿಯಾಗ ಮನ ಮರುಗಿದ ಬಲು ಕನಿಕರದಿಂದ 20 ರಂಗೇಶವಿಠಲ ಕಂಗಳ ಜಲದೊಳು ಮಂಗಳಯುತನಾಲಿಂಗನಗೈದ 21
--------------
ರಂಗೇಶವಿಠಲದಾಸರು
ಬಂದಳು ಭಾಗ್ಯನಿಧಿ ಶ್ರೀವರನಿಧಿ ಬಂದಳು ಭಾಗ್ಯನಿಧಿ ಪ. ಅರಿಶಿಣ ಕುಂಕುಮ ಪರಿಮಳ ಗಂಧವು ನಿನಗರ್ಪಿಸುವೆನು ತಾಯೆ ಶ್ರೀವರನಿಧಿ 1 ಜಾಜಿ ಮಲ್ಲಿಗೆ ರೋಜಾ ಸಂಪಿಗೆ ಸೋಜಿಗಮಾಗಿಹ ಸುರಗಿ ಅರ್ಪಿಸುವೆನು 2 ಜರಿಯ ಪೀತಾಂಬರ ಝಗಝಗಿಸುತಲಿ ಜಗದೊಡೆಯನ ರಮಣಿ ಶ್ರೀ ವರಲಕ್ಷ್ಮಿ 3 ಕದಳಿ ಖರ್ಜೂರವೂ ಬದಳಿ ದಾಳಿಂಬವು ಮುದದಿ ತೆಂಗಿನಕಾಯಿ ಫಲವ ಅರ್ಪಿಸುವೆನು 4 ಶುಕ್ರವಾರದಿ ಭಕ್ತರ ಮನೆಯೊಳು ನಿತ್ಯ ಪೂಜೆಯಗೊಳ್ವ ಶ್ರೀ ವರನಿಧಿ 5 ಶ್ರೀ ಶ್ರೀನಿವಾಸನ ಪ್ರೀತಿಯ ಲಕ್ಷ್ಮಿ ನೀ ಕರುಣದಿ ಸಲಹೆ ಶ್ರೀ ವರಲಕ್ಷ್ಮಿ 6
--------------
ಸರಸ್ವತಿ ಬಾಯಿ
ಬಂದು ನಿಲ್ಲೆಲೊ ಮನಮಂದಿರದೊಳು ಹರಿ ಇಂದುವದನ ಆನಂದದಿಂದ ಪ. ಮುಂದಗಮನೆರ ಅಂದದಿ ಕೂಡ್ಯರ- ವಿಂದ ಮಧ್ಯದಿ ಬಹು ಸುಂದರ ವೆಂಕಟ ಅ.ಪ. ಗಜವ ಪಾಲಿಸಿದಂಥ ಭುಜಗಶಯನ ಹರೆ ತ್ರಿಜಗದೊಳಗೆ ದಿಗ್ವಿಜಯ ಮೂರುತಿ ಗೋ- ವ್ರಜವ ಪಾಲಿಸಿ ಭೂಭುಜರ ಪೊರೆದೆ ಅಂ- ಬುಜನೇತ್ರ ಅಜಪಿತ ಭಜಿಸಲಾಪೆನೆ ನಿನ್ನ ಭುಜಗ ಭೂಷಣವಂದ್ಯ ರಜ ತಮೊ ಸತ್ವದಿ ತ್ರಿಜಗವ ಸೃಷ್ಟಿಪೆ ಕುಜನರ ಶಿಕ್ಷಿಪೆ ರಜ ತಮೊ ದೂರನೆ ಸುಜನರ ಪೊರೆಯುವ ಋಜುಗಣವಂದಿತ 1 ವ್ಯಾಪ್ತಾ ಜಗದಿ ನಿರ್ಲಿಪ್ತ ಗುಣಗಳಿಂದ ಆಪ್ತ ಜೀವಕೆ ಸುಷುಪ್ತಿ ಕಾಲದಿ ನೀ ಗುಪ್ತನಾಗಿ ಪೊರೆವ ಶಕ್ತನಹುದೊ ತ್ರಿ- ಸಪ್ತ ಇಂದ್ರಿಯಗಳ ತೃಪ್ತಿಗೊಳಿಸು ನಿನ್ನೊಳ್ ಸಪ್ತ ಋಷಿಗಳಿಂದ ಗುಪ್ತರ್ಚನೆಗೊಂಬೆ ಸಪ್ತಜಿಹ್ವನೊಳು ವ್ಯಾಪ್ತನಾಗಿ ಸುರರ ತೃಪ್ತಿಪಡಿಸುವ ವ್ಯಾಪ್ತ ಮೂರುತಿಯೆ ಸಪ್ತ ಸಪ್ತ ಭುವನೇಶ ಪ್ರಕಾಶ 2 ವೇದಸುತಗೆ ಇತ್ತು ಆದರದಿ ಸುಧೆ ಮೋದದಿ ಸುರರಿಗುಣಿಸಿ ಭೂದೇವಿಯನು ಕಾಯ್ದೆ ಬಾಧಿಸೆ ಖಳ ಸುತನ ಭೇದಿಸಿ ಕಂಭ ಬಂದೆ ಪಾದದಿ ಗಂಗೆ ಪೆತ್ತು ಬಾಧೆ ಕ್ಷತ್ರಿಯರಿಗಿತ್ತೆ ಆದರದಲಿ ಸುಗ್ರೀವನ ಪೊರೆದೆ ಯಾದವ ವಂಶ ಮಹೋದಧಿ ಚಂದ್ರ ಸಾಧಿಸಿ ತ್ರಿಪುರರ ಛೇಧಿಸಿ ಕಲಿಮುಖ- ರಾದ ದುಷ್ಟರ ಸೀಳಿ ಬಾಧೆಯ ಬಿಡಿಸಿದೆ 3 ಪದ್ಮನಾಭನ ತೋರೊ ಪದ್ಮಸಂಭವ ಜನಕ ಪದ್ಮನಾಭನೆ ಹೃತ್ಪದ್ಮ ಮಧ್ಯದಿ ವಾಸ ಪದ್ಮ ಬಾಂಧವ ತೇಜ ಪದ್ಮ ನಯನಕರ ಪದ್ಮದಿಂದಲಿ ನೀ ಪದ್ಮಾವತಿಯ ಕೂಡ್ದೆ ಪದ್ಮವೈರಿಯ ಕೋಟಿ ಮುದ್ದು ಮುಖದ ತೇಜ ಪದ್ಮ ಉದರ ಷಟ್ಪದ್ಮದಿ ವಾಸ ಪದ್ಮ ಸರೋವರ ತೀರವಾಸ ಹೃ ತ್ಪದ್ಮ ಮಧ್ಯದಿ ಭೂಪದ್ಮಿನಿ ಸಹಿತ 4 ಆಪಾರ ಮಹಿಮನೆ ಗೋಪಾಲಕೃಷ್ಣವಿಠ್ಠಲ ಭೂಪರೈವರ ಕಾಯ್ದೆ ದ್ರೌಪದಿ ಮಾನದೊಡೆಯ ನೀ ಪ್ರೀತಿಯಿಂದ ಪೋಗಿ ತಾಪವ ಬಿಡಿಸಿದೆ ವ್ಯಾಪಕನೊ ಜಗಸ್ಥಾಪಕನೊ ಬಹು ರೂಪಕನೊ ದುಷ್ಟತಾಪಕನೊ ಹರಿ ಪಾಪ ಹರಿಸಿ ಕರ್ಮಲೇಪನ ಮಾಡದೆ ಪರಿ ಪರಿಯಿಂದ ಕಾಪಾಡೊ ಭಕ್ತರ5
--------------
ಅಂಬಾಬಾಯಿ
ಬಂದೆ ರಂಗಯ್ಯ ನಿನ್ನಬಳಿಗೆ ಪ ನೊಂದು ಮನ ಬೇಡುವೆ ನಿನ್ನ ಶ್ರೀಪಾದಂಗಳಿಗೆ ಅ.ಪ Àಕ್ತಜನರು ಬಂದು ಕಾಡುವರೆಂತೆಂದು ಯುಕ್ತಿಯಿಂದಿಲ್ಲಿ ಬಂದು ಸಪ್ತಬೆಟ್ಟದ ಮಧ್ಯದೊಳ್ ವಿ ರಕ್ತಿಯ ಕೈಕೊಂಡು ನಿಂತಿರೆ ಭಕ್ತರ ಪಾಡೇನು ಪೇಳೆಲೊ 1 ಶ್ವೇತಾದ್ರಿಯಲಿ ಭಕ್ತವ್ರಾತ ಪಾಲಿಸಿದಂಥಾ ಪ್ರೀತಿವಚನ ಕೇಳಿ ಭೂತನಾಥನ ಭಯವ ಬಿಡಿಸಿ ಖ್ಯಾತಿಯನು ಪಡೆದಂಥ ವಾರ್ತೆಯ ರೀತಿಯನು ನಾ ಕೇಳಿ ಬಂದೆನೊ ಮಾತುಳಾಂತಕ ಮಾರಮಣ ಹರೇ 2 ಪಾದ ಧ್ಯಾನ ಮಾಡುವರ ಸಂಗವಿತ್ತು ಸಾನುರಾಗದಿ ಸಲಹೊ ಎನ್ನನು ದೀನನಾದ ಗಜೇಂದ್ರನ ಬಹು ಮಾನದಿಂದಲಿ ಕಾಯ್ದ ಪ್ರಭುವೆಂದು ಬಂದೇ 3
--------------
ಬಾಗೇಪಲ್ಲಿ ಶೇಷದಾಸರು
ಬನ್ನಿ ಮಹಂಕಾಳಿ ಜಯವ ನೀಡಮ್ಮ ಮನ್ನಿಸಿ ಬಾಲಗೆ ಪ ನಿನ್ನ ನಂಬಿಕೊಂಡು ಕೆನ್ನೆಯೋಳ್ಮುಡಿವರ ಬನ್ನ ಕಳೆದು ಜಯವನ್ನು ಕೊಟ್ಟು ನೀ ಭಿನ್ನವಿಲ್ಲದೆ ಮನ್ನಿಸಿ ಸಲಹು ಪನ್ನಂಗವೇಣಿಯೆ ಉನ್ನತ ಕರುಣಿ 1 ಪರಮ ಪವಿತ್ರಳೆಂದು ಪರಮ ಪ್ರೀತಿಯಿಂದ ಹರನು ಬಿಡದೆ ನಿನ್ನ ಶಿರದಿ ಧರಿಸಿಕೊಂಬ ಪರಮಮಹಿಮ ನಿನ್ನನರಿನು ಪೇಳುವೆನಾ ತರಳನ ಮೊರೆ ಕೇಳೆ ಕರುಣಿ ಶುಭಕರಿ2 ನೇಮದಿ ಭಜಿಪೆ ನಿಸ್ಸೀಮೆ ನಿರಾಮಯೆ ಕ್ಷೇಮಶರಧಿ ತ್ರಿಭೂಮಿಜಯಂಕಾರಿ ಈ ಮಹಭವನಿಧಿ ಕ್ಷೇಮದಿ ಗೆಲಿಸು ಶ್ರೀ ರಾಮನಾಮ ಪ್ರಿಯೆ ಕೋಮಲಹೃದಯೆ 3
--------------
ರಾಮದಾಸರು
ಬನ್ನಿರಿ ದಾಸರೇ ಪೋಗುವಾ ನಮ್ಮ ಚನ್ನಕೇಶವನೆಂಬ ಹರಿಮಂದಿರಕೇ ಪ ಬನ್ನಿರಿ ಪೋಗುವಾ ಗುಡಿಯೊಳು ತಿನ್ನುವಾ ಚನ್ನಗೆ ಅರ್ಪಿಸಿ ತಂದ ಪಕ್ವಗಳ ಅ.ಪ. ನಾ ತಂದಿರುವೆನು ಪರಮಾನ್ನವನ್ನು ತಾತನ ನಾಮಕ್ಕೆ ಬೆರಿಸಿ ಮಾಡಿದೆನು ನೀತಿಯೊಳಾಭಕ್ತಿ ಮಧುಕ್ಷೀರವನ್ನು ಸತ್ಯದಿ ಕೂಡಿಸಿ ಸೇವಿಸುವಾ 1 ಪರಹಿತವೆನ್ನುವ ಸಕ್ಕರೆ ತಂದು ನಾ ಬೆರಿಸುವೆ ಧರ್ಮಗಳೆಂಬ ಪಾಯಸಕೇ ಹರಿಯ ಕೀರ್ತನೆಗಳ ಅಮೃತವ ಸೇರಿಸಿ ಪರಮಾನ್ನವೀ ರೀತಿ ಮಾಡಿರುವೆನಯ್ಯ 2 ಹರಿಭಕ್ತಿಯೆಂಬುವ ತಂಡುಲವನೆ ತಂದು ಹರಿಯ ಸ್ಮರಣೆಯೆಂಬ ವುದಕದಿ ತೊಳೆದು ಹರಿಯ ಭಜನೆಯೆಂಬ ಬೆಂಕಿಯ ಮೇಲಿಟ್ಟು ಸರಸದಿ ನಾ ಪಾಕವ ಮಾಡಿರುವೆ 3 ಸನ್ನುತ ದೂರ್ವಾಪಟ್ಟಣದಿ ನಿತ್ತಿರುವಂಥ ಪನ್ನಗಶಯನ ಶ್ರೀ ಹರಿಯ ನೆನೆಯುತ್ತ ಉನ್ನತ ಸೇವೆಯಿಂದಾತನ ಮೆಚ್ಚಿಸಿ ತಿನ್ನುವಾ ಕೇಶವ ನೀಯುವ ವರವಾ 4
--------------
ಕರ್ಕಿ ಕೇಶವದಾಸ
ಬನ್ನಿರೈಯ್ಯ ಬನ್ನಿರೈಯ್ಯ ಬನ್ನಿರೈಯ್ಯ ಬನ್ನಿರಿ ಪ ಚಿನ್ನ ಕೃಷ್ಣನ ಚೆನ್ನಾಗಿ ನೆನೆದು ಪ್ರಸನ್ನ ಮಾಡಿರಿ ಅ.ಪ. ಸತಿಯು ಸುತರು ಗತಿಯು ಎಂದು ಕೆಡಲು ಬೇಡಿರಿ ಮಿತಿಯು ಇಲ್ಲ ಮೇರೆಯು ಇಲ್ಲ ಫಲವು ಇಲ್ಲ ಕೇಳಿರಿ ಮತಿಯ ಹರಿಯ ಅಡಿಯಲ್ಲಿಟ್ಟು ಪ್ರೀತಿಮಾಡಿರಿ ಗತಿಯನೀಡಿ ತ್ವರಿತದಿಂದ ಪೊರೆವ ನಿಮ್ಮ ನೊಡಿರಿ 1 ಇಂದು ಕಾಲ ಕಳೆಯ ಬೇಡಿರಿ ಶುಭ ಇಂದೆ ನೆನೆಯಿರಿ ಬಂದು ಯಮನ ಭಟರು ಕರೆದರೆ ಏನು ಮಾಡೋರಿ ಮುಂದೆ ಇಂಥ ಜನ್ಮಬಹುದೆ ಬಂಧ ನೂಕಿರಿ2 ಆಶಪಾಶ ಮೋಸ ಬಲುಕ್ಲೇಶ ತಿಳಿಯಿರಿ ಹೇಸಿಕೆ ಸಂಸಾರವನು ಘಾಸಿಕೆ ನೋಡಿರಿ ವಾಸವೇಶ ಜಯಮುನೀಂದ್ರ ವಾಯುಸ್ಥ ಕೃಷ್ಣ ವಿಠಲನ ದಾಸನಾಗಿ ಗೆಜ್ಜೆಕಟ್ಟಿ ನಿರಾಶೆಯಿಂದ ಭಜಿಸಿರಿ 3
--------------
ಕೃಷ್ಣವಿಠಲದಾಸರು
ಬರಬೇಕು ಬರಬೇಕು ಸಕಲ ಸಜ್ಜನಭಕ್ತರುಗುರುಸಾರ್ವಭೌಮರ ಆರಾಧನೆಗೆ ಗಲಗಲಿಗೆ ಪಪಂಚರಾತ್ರೋತ್ಸವವು ವೈಭವದಿ ನಡೆಯುವದುಚಂಚ'ುತ ಸುಪ್ರಸಾದವು ಇರುವದುವಂಚಿಸದೆ ಸೇವೆಯನು ಮಾಡಿದರೆ ಗುರುರಾಯವಾಂಛಿತಾರ್ಥವನಿತ್ತು ಸಂತೋಷಪಡಿಸುವನು 1ನಿತ್ಯ ಅಷ್ಟೋತ್ತರ ಅಲಂಕಾರ ಮಹಾಪೂಜೆಕ್ಷೇತ್ರ ಭೋಜನ ಕೀರ್ತನೆ ಪುರಾಣನೃತ್ಯಗೀತಗಳಿಂದ ಪಲ್ಲಕ್ಕಿ ಸೇವೆಯುಉತ್ತರಾರಾಧನೆಗೆ ರಥೋತ್ಸವದ ವೈಭವವು 2ಸಹಸ್ರಕುಂಭಾಭಿಷೇಕೋತ್ಸವವು ಕೊನೆಯದಿನಸತ್ಯನಾರಾಯಣನ ಮಹಾಪೂಜೆಯುಪವಮಾನಹೋಮ ಸಂಭಾವನಾ 'ತರಣೆಮುಕ್ತಾಯವಾಗುವದು ಪಂಚರಾತ್ರೋತ್ಸವವು 3ಕೃಷ್ಣವೇಣಿಯ ಪುಣ್ಯಕ್ಷೇತ್ರ'ದು ಗಲಗಲಿಯುಪ್ರಲ್ಹಾದವರದ ಶ್ರೀನರಹರಿಯ ಕ್ಷೇತ್ರವುಶ್ರೀವೆಂಕಟೇಶ'ಠ್ಠಲ ದತ್ತ, ಎಲ್ಲಮ್ಮ 'ೀರಮಾರುತಿ ಪರ್ವತೇಶ್ವರನ ಕ್ಷೇತ್ರ4ಗಾಲವ ಮರ್'ಗಳು ತಪವಗೈದಿಹ ಕ್ಷೇತ್ರಎಲ್ಲದರಲ್ಲಿಯೂ ಮುಂದಿರುವ ಕ್ಷೇತ್ರದೇವ ಭಕ್ತರ ಕ್ಷೇತ್ರ ದೇಶಭಕ್ತರ ಕ್ಷೇತ್ರಭೂಪತಿ'ಠ್ಠಲನ ಪ್ರೀತಿಯ ಕ್ಷೇತ್ರ5
--------------
ಭೂಪತಿ ವಿಠಲರು
ಬರಿದೆ ಆಯುಷ್ಯ ಸಲುವದು ನೋಡಿಕೊಳ್ಳೀ ಪ ದುರಿತ ಹರಿ ಸ್ಮರಣೆಯನ್ನು ಮರೆಯದೆ ಜಪಿಸಿ ಕೊಳ್ಳೀ ಅ.ಪ ಭಕ್ತರನು ಕರುಣದಿಂದೆತ್ತಿ ಸಲಹುವನೂ 1 ಭವ ಬಂಧು ಶ್ರೀ ಪರಮಾತ್ಮನನ್ನು ನೆನನೆನದೂ 2 ಪ್ರೀತಿಯೊಳು ಕಾಯ್ವ ಜಗದ್ಗುರು ಕೃಪೆಯ ಪಡೆದೂ 3
--------------
ಸದಾನಂದರು
ಬಾಗಿಲ ತೆಗೆಯವ್ವಾ ಲಕ್ಷ್ಮೀದೇವಿ ಬಾಗಿಲ ತೆಗೆಯವ್ವಾ ಪ ಬಾಗಿಲ ತೆಗೆಯವ್ವಾ ಸಾಗಿ ಬಂದಿಹನಯ್ಯಾ ಭೋಗಿ ಭೂಷಣ ಪ್ರಿಯ ಕೇಶವನ ದಾಸಾ ಅ.ಪ. ಸಂಸಾರ ಜಾಲದಲೀ ಸಿಲುಕಿ ಬೆಂದೇ ಸಂಸಾರ ಮಾಯದಲೀ ಹಿಂಸೆ ಮಾಡಿದವಯ್ಯಾ ಐದಾರುರಿಪುಗಳು ಸಂಶಯ ಪಡದೆ ಬಂದೇ ಶರಣೆಂದೇ 1 ಭವದೊಳುರಳಿ ಬಿದ್ದೆನೋ ಪ್ರಾಣಾಂತಕ ಸವೆದು ಕರಗಿ ಬೆಂದೆನೋ ಯುವತಿಯರೊಡಗೂಢಿ ಇಹವೆನ್ನೆ ನೆರೆನಂಬಿ ವಿವಿಧ ಕಷ್ಟವ ಪೊಂದಿ ಬಂದೇ ಶರಣೆಂದೇ 2 ಹಲವು ಜನ್ಮಗಳಿಂದ ನೋಡಲು ಬಂದೆ ಹಲವು ರೀತಿಗಳಿಂದ ನಳಿನ ನಾಭನ ದಿವ್ಯ ರೂಪವ ನೋಡುವೆ ನಳಿನಾಕ್ಷಿ ತಾಯ ಕೇಶವನ ಸೇರುವನು 3
--------------
ಕರ್ಕಿ ಕೇಶವದಾಸ
ಬಾರಪ್ಪ ನೀ ಬಾರಪ್ಪಾ ಭಾರತಿರಮಣಾ ಮುಖ್ಯಪ್ರಾಣಾಗೋ'ನದಿನ್ನಿ ಹಣ್ಣಮಪ್ಪಾ ನೀ ಗಾಲವ ಕ್ಷೇತ್ರಕೆ ಬಾರಪ್ಪಾ ಪಗಾಲವಕ್ಷೇತ್ರಕ್ಕೆ ಬಾರಪ್ಪಾ ನೀ ಹೋಳಿಗೆತುಪ್ಪಾ ಹೊಡೆಯಪ್ಪಾಕೃಷ್ಣವೇಣಿಯ ತಟದ ಶಿಲೆಯೊಳು ಒಡಮೂಡುತ ನೀ ಇದ್ದೆಪ್ಪಾ1ಶಿಷ್ಟರಾದ ಶ್ರೀ ಉಮರ್ಜಿ ಆಚಾರ್ಯರ ನಿಷ್ಠೆಗೆ ಒಲಿದು ಬಂದೆಪ್ಪಾಶರಧಿಗೆ ಜಿಗಿದು ಸೀತಾದೇ'ಗೆ ರಾಮಮುದ್ರಿಕೆಯ ಕೊಟ್ಟೆಪ್ಪಾದುರುಳ ರಾವಣನ ಲಂಕಾಪಟ್ಟಣ ಸುಟ್ಟ ಕಪಿವರನು ನೀನಪ್ಪಾದುಷ್ಟ ಕೌರವನ ತೊಡೆಯ ಒಡೆದು ಗದೆಪಿಡಿದ ಭೀಮ ನೀ ಹೌದಪ್ಪಾ 2ದುಃಶಾಸನನ ಕರುಳ ಬಗೆದು ನರಸಿಂಹನ ಪ್ರೀತಿ ಪಡೆದೆಪ್ಪಾಹರಿಯದ್ವೇಗಳ ದುರ್ಮತಗಳನು ಮುರಿದು ಮಧ್ವಯತಿ ಆದೆಪ್ಪಾರಾಶಿ ರಾಶಿ ಸದಗ್ರಂಥ ರಚಿಸಿ ನೀ ವ್ಯಾಸರ ಸನ್ನಿಧಿ ಪಡೆದೆಪ್ಪಾಕೃಷ್ಣವೇಣಿತಟ ನರಾಹರಿ ಇರುವನು ರಾಯರು ಇರುವರು ಬಾರಪ್ಪಾ 3ಎಲ್ಲಿ ನರಹರಿ ಎಲ್ಲಿ ರಾಯರು ಅಲ್ಲಿ ನೀ ಇರಬೇಕಪ್ಪಾಪಾಪಿಷ್ಠರ ಗತಿಭಯಂಕರನು ನೀಪುಣೈವಂತರಿಗೆ ಸುಲಭಪ್ಪಾಭೂಪತಿ'ಠ್ಠಲನ ಭಕ್ತರ ಪೊರೆಯಲು ನೀ ಗಾಲವ ಕ್ಷೇತ್ರಕೆ ಬಾರಪ್ಪಾ 4ರುದ್ರದೇವರು
--------------
ಭೂಪತಿ ವಿಠಲರು
ಬಾರಯ್ಯ ಬಾ ಬಾ ಬುಧಜನಗೇಯಾ | ಹೇ ಗುರರಾಯಾಸಾರಿ ಬರುವ ಭಕುತರೊಡೆಯ | ಕಾಯಯ್ಯ ಜೀಯಾ ಪ ವಾರಿಜನಾಭನ ವಾರಿಧಿಮಥನನವೈರದಿ ಭಜಿಸಿದ ಪುರಟ ಕಶ್ಯಪನ |ವರ ಉದರೋದ್ಭವ ಹರಿ ಪ್ರಿಯ ಭಕುತನೆಶರಣರ ಪೊರೆಯಲು ತ್ವರ್ಯದಿ ಬಾರೋ ಅ.ಪ. ದಿತಿಸುತ ದೊರೆಯೇ | ಬಾಹ್ಲೀಕ ದೊರೆಯೇ |ಚತುರ ಚಂದ್ರಿಕೆ ಗುರು ಮಂತ್ರಾಲಯ ಗುರುವೇ | ದೊರೆಬಲು ಮೊರೆಯೇ |ವ್ಯಥೆಯಾಕೆನ್ನುತ | ಹಸ್ತವ ಚಾಚುತಹುತ ವಹ ನೊಳು ಬಲಾ | ಜತನಾಗಿರಿಸಿಹ ರತುನವ ಹಾರವ | ಪ್ರೀತಿಲಿ ಕೊಡುತಅತಿಶಯ ತೋರಿದ | ಯತಿ ರಾಘವೇಂದ್ರ 1 ಸುಧೀಂದ್ರರ ಕರಜ ಮಂತ್ರಾಲಯ ನಿಲಯ | ಬಲು ಮಂತ್ರಗಳೊಡೆಯಾ |ಬಧಿರ ಮೂಕರ ಅಂಧರ ಹೊರೆಯಾ | ಪರಿಹರಿಸುವ ದೊರೆಯಾ |ಮಧ್ವಾಂತರ್ಗತ ಮಧು ಕೈಟ ಭಾರಿಯಸಿದ್ಧಾಂತದ ಸವಿ ಹೃದ್ಗತ ಮಾಡಿದ |ವಿದ್ವನ್ಮಣಿಗಳ ಸದ್ವøಂದದ ಖಣಿಸದ್ವಿದ್ಯದ ಸವಿ ಮೋದದಿ ಉಣಿಸಲು 2 ಮನ್ರೋವಿನ ಮನ ತಿಳಿಯುತಲಿನ್ನೂ | ಮುನಿವರ ತಾನೂ |ಸಾನುರಾಗದಿ ತನುವ ತೋರಿದನೂ | ಘನ ಕರುಣಿಯು ತಾನೂ |ಜ್ಞಾನಿಗಮ್ಯ ಗುರುಗೋವಿಂದ ವಿಠಲನಧ್ಯಾನಿಸೆ ಪೊಗುತಲಿ ವೃಂದಾವನವ |ಆನತ ಜನ ಮನದಿಷ್ಟವ ಸಲಿಸುತಮೌನಿವರೇಣ್ಯನೆ ತುಂಗೆಯ ತೀರಗ 3
--------------
ಗುರುಗೋವಿಂದವಿಠಲರು
ಬಾರೆ ನೀ ಹಂಸಗಮನೆ ಮಾರನ ಪೀಠಕ್ಕೆ ಸಾರಿ ಕರೆವೆ ಲಕ್ಷ್ಮೀದೇವಿಯೇ ಪ. ಕಮಲ ಪುಷ್ಪದೊಳು ನೆಲಸಿದ ಲಕ್ಷ್ಮಿಯೆ ಕಮಲದ ಹಾಸಿಗೆ ಕಾಮಜನಕನ ಸಹಿತ 1 ಮುತ್ತು ಮಾಣಿಕ್ಯವು ಕೆತ್ತಿದ ಹಾಸಿಗೆ ಮುತ್ತೈದೆರೆಲ್ಲರೂ ಮುದದಿಂದ ಕರೆಯುವೊರು 2 ಶ್ರೀ ಲಕ್ಷ್ಮೀದೇವಿಯೆ ಶ್ರೀ ಕೃಷ್ಣನರಸಿಯೆ ಶ್ರೀನಿವಾಸನ ಕೂಡಿ ಪ್ರೀತಿಯಿಂದ ಸರಸನಯನೆ 3
--------------
ಸರಸ್ವತಿ ಬಾಯಿ
ಬಾರೈ ಬಾರೈ ಗುರು ಸಾರ್ವಭೌಮನೇ ಪ. ಉಟ್ಟವಸನವು ತೊಟ್ಟ ಆವಿಗೆ ಇಟ್ಟ ದ್ವಾದಶ ಊಧ್ರ್ವ ಪುಂಡ್ರವು ದಿಟ್ಟತನದಿ ಇಟ್ಟು ಕೊರಳೊಳು ಮಣಿ ಮನೋಭೀಷ್ಠವ ಸಲಿಸುತ 1 ದಂಡಕ ಮಂಡಲ ಕೈಯಲಿ ಪಿಡಿದು ಕಂಡ ಕಂಡದ ಪೂಜೆಗೊಂಬುವ ಕೊಂಡ ಜನರ ಪರಿಪಾಲಿಸುತಲಿ ಕಂಡ ಕಂಡವರ ಕಾಯುವ ಕರುಣೆ2 ಭೂತ ಪ್ರೇತ ಭಯ ನಾಶಗೊಳಿಸಿ ಭೀತಿಯ ಬಿಡಿಸಿ ಮಂತ್ರಾಲಯದಿ ಖ್ಯಾತಿವಂತ ರುಕ್ಮಿಣೀಶವಿಠಲನ ಕರುಣದಿ ಪ್ರೀತಿಪ ಜನರ ಮನೋಭೀಷ್ಠವೊಲಿದ 3
--------------
ಗುಂಡಮ್ಮ
ಬಾರೈಯ್ಯಾ ಬಾರೈಯ್ಯಾ ಚಕೋರ ಶಶಾಂಕಾ ಪ ಕ್ಲೇಶ ಕಳೆದು ತವ ದಾಸ ಜನರ ಸಹವಾಸವ ನೀಡಲು 1 ಹನುಮ ಭೀಮ ಮುದ | ಮುನಿವರ ಹರಿಪದ ಅನುದಿನ ಗರೆಯಲು 2 ವಾತಜ ನಿನ್ನಯ ದೂತರು ನಾವೈ ಪಾತಕ ಭೀತಿಯ | ಪ್ರೀತಿಲಿ ಬಿಡಿಸಲು 3 ಭಾವ ಭಕ್ತಿಯಲಿ | ಸೇವಿಪರಿಗೆ ಸುಖ | ದೇವಗುರು | ಛಾವಣಿ ನಿಲಯಾ 4 ತಂದೆ ನೀನೊಲಿದರೆ | ನಂದಜ ಶಾಮ ಸುಂದರ ಸಲಹುವನೆಂದು ಪ್ರಾರ್ಥಿಪೆವು 5
--------------
ಶಾಮಸುಂದರ ವಿಠಲ