ಒಟ್ಟು 1793 ಕಡೆಗಳಲ್ಲಿ , 78 ದಾಸರು , 1297 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೃತ್ಯವನವಧರಿಸು ನಿರುಪಮ ನೃತ್ಯವನವಧರಿಸು ಪ ನರ್ತನಕರ್ತುವು ನೀನೆಯಾಗಲು ಅ.ಪ ಪ್ರಥಮದಿ ಸ್ವರವುಂ ಹೊರಡಲು ತಾಳವು ಮಿಥುನದಿ ನಾಂದಿಯ ಮಾಡಲು ವಿಧಿಯಿಂ1 ಮರ್ದಳನಾದವು ಮೂಡಲು ಹಾಗೆ ಮಾನಿನಿ ನಿಲಲು 2 ರಂಗವು ರಂಜಿಸಿ ರಾಗಗಳಿಂದಲು ಮಂಗಳನಾಟ್ಯವು ಮುಂಗುಡಿಸಾಗಲು 3 ರಾಗದ ಭೇದಗಳ್ ರೂಢಿಗಳಾಗುತ ಸಾಗಲು ಲಯಗತಿಸಹಿತದಿ ಬೆಳೆದು 4 ಆಡುವ ನೃತ್ಯವರ್ನರ್ಪಿಪೆ ತಿರುಪತಿನಾಡಿನ ವೆಂಕಟನಾಥನೆ ಲಾಲಿಸು 5
--------------
ತಿಮ್ಮಪ್ಪದಾಸರು
ನೆಚ್ಚಬ್ಯಾಡ ನೀರುಗುಳ್ಳೆಗೆ ಸರಿಯಾದ ಕುತ್ಸಿತ ದೇಹವೆಂದಿಗು ಸ್ಥಿರವಲ್ಲ ನ- ಮ್ಮಚ್ಚುತನಾನಂತನ ನೆನವುತ ಅನುಗಾಲ ಸ್ವಚ್ಛನಾಗಲು ಹರಿ ಮೆಚ್ಚುವನು ಪ. ಸ್ವಾತಂತ್ರ್ಯ ಲೇಶವಾದರು ನಿನಗಿಲ್ಲದೆ ಪಾತಕ ಫಲಕಿನ್ನು ಗುರಿಯಾದಿಯಲ್ಲದೆ ಯಾತರ ಸುಖವೆಂದೀ ಸಂಸಾರ ಕೂಪದಿ ಪ್ರೀತಿ ಬಡುವಿ ಪಂಚಬಂಧದಲಿ ವಾತ ಪಿತ್ತ ಶ್ಲೇಷ್ಮ ಪೂಯ ಸೃಕ್ಪೂರಿತ ಘಾತವಾಗುವುದೊಂದು ನಿಮಿಷಾರ್ಧದಲಿ ಜಗ- ನ್ನಾಥ ನಂಬಿದರೆಂದಿಗು ಪದಪಂಕ- ಜಾತಪತ್ರದ ನೆರಳಿರಿಸುವನು 1 ದೇಹವೆ ಸ್ಥಿರವಿಲ್ಲವಾದ ಮೇಲಿದರ ಸ- ನ್ನಾಹವಾಗಿರುವದನೇನೆಂದು ಗ್ರಹಿಸುವಿ ಗೇಹಧನಾಪತ್ಯ ಸ್ನೇಹವೆಲ್ಲವು ವ್ಯರ್ಥ ಮೋಹವಲ್ಲದೆ ನಿಶ್ಚಯವಲ್ಲವು ಐಹಿಕಾಮುಷ್ಮಿಕವೆಂಬ ಸಕಲ ಸುಖ ದೋಹನ ಧೇನು ಸರ್ವೇಶ್ವರ ಹರಿಯ ಸ- ಮಾಹಿತ ಮನದಿಂದ ಭಜಿಸೆ ನಿನ್ನನು ಪಕ್ಷಿ ವಾಹ ಕೈ ಬಿಡದೆ ಕಾಪಾಡುವನು 2 ಒಂದು ದಿವಸ ನೀರೊಳದ್ದದಿದ್ದರೆ ದು- ರ್ಗಂಧ ಭೂಯಿಷ್ಠವು ಸಹಿಸಲಸಾಧ್ಯವು ಹಿಂದಿನ ಕರ್ಮಾನುಬಂಧವು ತಿಳಿಯದು ಮುಂದಿನ ಹೊಂದಿಕೆ ಒಂದಾದರು ಇಂದಿರಾವರ ವೆಂಕಟೇಶನ ಪಾದಾರ- ವಿಂದ ಧ್ಯಾನಗಳೆಂಬದೊಂದೆ ಪರಮಸುಖ ವೆಂದು ತಿಳಿದು ಭಕ್ತಿಯಿಂದ ಭಜಿಸು ನಮ್ಮ ತಂದೆ ಬಿಡದೆ ಕಾವನೆಂದೆಂದಿಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ನೆಲೆಗೊಂಡದೇನು ಮನಮೇಗಚಲಿಸುವೆ ನೀನು ಹಲವು ವಿಷಯದೊಳು ಪಸಿಲುಕಿದ ಬಗೆುಂದ ಹೊಲಬುದಪ್ಪಿತು[ಸಲೆ]ನಿನ್ನ ನಿಜವ ನೀ ಕಾಣು ಅ.ಪಗುರುವಿನಂಘ್ರಿಗೆ ನೀನು ನಮಿಸಿ ನಿನ್ನಮರವೆಯ ಭಾವವ ಕೆಡಿಸಿಕರಣವ ನಿಲುಕಡೆಗೊಳಿಸಿ ಬಹುಕರುಣವ ನಿನ್ನೊಳಗಿರಿಸಿಪರಮಾತ್ಮನಾಗ್ಯನ್ಯ ವಿಷಯಮೊಂದಲಾಶೆಪರಿದು ಭ್ರಾಂತಿಯಲೊಂದಿದ ಸುಖವ ಸೂಸಿ 1ಮನೆಯೊಂದು ನನಗಿಹುದೆಂದು ಅಲ್ಲಿಜನರೆಡೆಗೊಳೆ ದುಃಖ ಬಂದುಅನುಭವಿಪುದು ಯುಕ್ತವೆಂದು ಅದ[ಕನು]ಕೂಲವಾಗಬೇಕೆಂದುಅನುದಿನವನು ಸಂಧಾನದಿ ನಿಂದು ಗುರು ಕೊಟ್ಟಅನುಭವ ಬಯಲಾಗಿ ಭ್ರಮೆಗೆ ನೀ ಸಂದು 2ನೀನೊದು ಕೊಡಹೇಳಿ ಕೇಳಿ ಅಲ್ಲಿಹೀನತೆಯನು ಬಹುತಾಳಿದೀನರು ನೀವೆಂದು ಪೇಳಿ ಅನುಮಾನದ ಬಲು ಬಿರುಗಾಳಿಏನೆಂಬೆ ಬೀಸಲು [ತಾ] ನದರೊಳಗಾಳಿಜ್ಞಾನಹೋುತು ಭೇದ ಬುದ್ಧಿಯ ತಾಳಿ 3ಮಾಯಕವಾಗಿರೆ ಜಗವೂ ಬಹೂಪಾಯಗಳಿಂದ್ರಜಾಲಕವೂಆಯವರಿಯದದರಿರವೂ ತನ್ನತಾಯ ಕಾಣದ ಶಿಶುತನವೂಈಯಶೇಷವು ಸ್ವಪ್ನದನುಭವವಳಿವವುಬಾಯಮಾತಿನಜ್ಞಾನ ಕಪಟ ಸಂಭ್ರಮವೂ 4ಪರಮಾತ್ಮನೊಬ್ಬನಾಗಿಹನೂ ತಾನುಪರಿ ಪರಿ ರೂಪ ತೋರುವನುಅರಿತೆ ಭೇದವನಿದ ನೀನು ಬಹುಜರೆಯುತ ಗುಣದೋಷಗಳನುಗುರುವಾಸುದೇವರೂಪಿಲಿ ನಿನ್ನ ಕರವನುತಿರುಪತಿ ವೆಂಕಟ ಪಿಡಿಯೆ ಭ್ರಾಂತೇನು 5
--------------
ತಿಮ್ಮಪ್ಪದಾಸರು
ನೈವೇದ್ಯವಿದು ಭುಂಜಿಸಲು ಯೋಗ್ಯವಾಗಿದೆಕೈವಲ್ಯದಾಯಕ ನೀನಾರೋಗಣೆ ಮಾಡು ಪಆದಿತ್ಯ ವಸು ರುದ್ರ ಬ್ರಹ್ಮಾದಿ ಸಕಲ ದೇವರ್ಕಳು ಮಂಡಲದೊಳಗಿಹರುಆದಿಯೊಳ್ ಭೂಮಿಯ ಪ್ರೋಕ್ಷಿಸಿ ಮತ್ತಲ್ಲಿಸಾಧಿಸಿ ಮಂಡಲವದು ರಂಜಿಸುತಲಿದೆ 1ಭೋಗ್ಯ ಭೋಕ್ತøಗಳೆಂದು ಬಗೆಯರಡಾಗಿದೆಭೋಗ್ಯವು ಜಗವಿದು ಭೋಕ್ತø ನೀನುಪ್ರಾಜ್ಞ ರೂಪದಿ ಸುಪ್ತಿ ಸುಖಸಾಕ್ಷಿರೂಪನೆಸಾಘ್ರ್ಯಪಾದ್ಯಗಳಿಂದ ಸತ್ಕರಿಸುವೆನೀಗ 2ಜಡಪ್ರಕೃತಿಯೆ ಪಾದವೆಂಟರ ಪೀಠವುಜಡವಿರಹಿತವಾದ ಪ್ರಕೃತಿ ತಾ ಮಣೆಯುದೃಢ ವಿವೇಕವೆ ದಿವ್ಯ ಹರಿವಾಣವದರಲ್ಲಿಒಡಗೂಡುವನುಭವವೆಂಬನ್ನ ಬಡಿಸಿದೆ 3ಇಪ್ಪತ್ತುನಾಲ್ಕು ತತ್ವಂಗಳೆ ಶಾಕಂಗಳೊಪ್ಪುವ ಬಹು ವಿಷಯಗಳೆ ವ್ಯಂಜನವುತಪ್ಪದೆ ಮಾಡುವ ಭಕ್ತಿ ತಾ ರಸವುತುಪ್ಪವು ಜೀವನ ಬೆರಸುವ ಗುಣವು 4ಪರಮನೊಳೈಕ್ಯವಾದನುಭವ ಕ್ಷೀರವುನೆÀರೆ ಪುಟ್ಟಿದಾನಂದ ತಾನೆ ಸಖ್ಖರೆಯುತಿರುಪತಿ ನಿಲಯ ಶ್ರೀ ವೆಂಕಟರಮಣನೆಕರುಣಕಟಾಕ್ಷದಿಂದಾರೋಗಣೆ ಮಾಡು5ಓಂ ನವನೀತವಿಲಿಪ್ತಾಂಗಾಯ ನಮಃ
--------------
ತಿಮ್ಮಪ್ಪದಾಸರು
ನೊಂದು ಸಂಸಾರದೊಳಗೊಂದಿಸುವೆನೋ ಇಂದು ಮಾಧವ ಯಾದವ ಪ ಕರುಣಬಾರದೆ ನಿನಗೆ ಅಕಟಕಟ ಅಕಟಕಟ ಶರಣ ನಾ ನಿನಗಲ್ಲವೇ ಸ್ವಾಮಿ ನಿನ್ನ ಮೊರೆಹೊಕ್ಕೆ ಸರ್ವಾಂತರ್ಯಾಮಿ-ಎನ್ನ ಎರವು ಮಾಡುವರೇನೋ ಪ್ರೇಮಿ-ಇನ್ನು ಪರಿಹರಿಸು ಸಂಚಿತಾಗಾಮಿ-ಇದೇ ಸರಿಯೇನೊ ಜಗದೊಳಗೆ ಭಕುತವತ್ಸಲನೆಂಬ ಬಿರುದು ಪೊಳ್ಳಾಗದೇನೊ ನಿರುತ ಖ್ಯಾತ1 ಸತತ ಸುಖವುಳ್ಳರೆ ಬಾಯ್ದೆರೆದು ಪಲ್ಗಿರಿದು ನುತಿಸಿ ಬೇಡಿಕೊಂಬೆನೇ ನಿನ್ನ- ಮುಂದೆ ಗತಿಯ ಕಾಣದಲೆ ಚಾಲ್ವರಿದೆ ಭೇದ- ಮತಿ ಕೊಡದೆ ನೋಡುವುದು ಬರಿದೆ-ಸರ್ವ ಕ್ಷಿತಿಯೊಳಗೆ ನೀನೆಂದು ಅರಿದೆ-ವರ- ತತುವ ನಿಯ್ಯಾಮಕರ ಬಳಿ ಪಿಡಿದು ನಿನ್ನಂಘ್ರಿ ಶತಪತ್ರ ತೋರಿಸೈಯ್ಯಾ ಜೀಯಾ 2 ಶೃತಿಶಾಸ್ತ್ರ ಪೌರಾಣ ಭಾರತ ರಾಮಾಯಣ ಇತಿಹಾಸ ಪಾಂಚರಾತ್ರ ನಿಗಮ-ನಿನ್ನ ತುತಿಪ ಭಕುತರಿಗೆ ತಲೆಬಾಗಿ-ಕೊಂಡು ಪ್ರತಿದಿವಸದಲಿ ಚೆನ್ನಾಗಿ-ವಲಿದು ಅತಿಶಯವ ಕೊಡುತ ಲೇಸಾಗಿ-ವಿಘ್ನ ತತಿಕಳೆದು ನೀ ಬಂದು ಸಾರೆ ಬೆರಗಾಗುತಿದೆ ಪತಿತಿ ಪಾವನ ಮೋಹನ-ಚೆನ್ನ3 ತಡವ್ಯಾಕೆ ಗುಣಕಾಲ ಕರ್ಮದೇಶಗಳೆಲ್ಲ ವಡೆಯ ಎನ್ನಾಧೀನವೇ ಪೇಳೊ-ದು:ಖ ಬಿಡಿಸುವುದು ನಿನಗುಚಿತವಲ್ಲ-ಪಾಟು ಸಿರಿ ಲಕುಮಿನಲ್ಲ-ಒಂದು ನುಡಿವೆ ನಾನಾಂತರ್ಯ ಸೊಲ್ಲ-ಇಂತು ಕಡೆಮಾಡಿ ನೋಡದಿರು ದಿವಸ ಹಿಂದಾಗುತಿದೆ ಬಡವರಾಧಾರಿ ಕರುಣೀ-ದಾನಿ4 ಧ್ರುವನು ನಭದೊಳು ಇಲ್ಲಿ ರಾವಣಾನುಜ ಅಧೋ ಭುವನದಲಿ ಬಲಿರಾಯನ ನೋಡಿ, ನಾನು ತವಪಾದ ಗತಿಯೆಂದು ಬಂದೆ-ಮಹಾ ಭವಣೆ ಬಟ್ಟೆನೊ ಕೇಳು ಹಿಂದೆ-ಜಗದಿ ತ್ರಿವಿಧ ತಾಪಗಳಿಂದ ನೊಂದೆ-ಈ ಅವಸರಕೆ ಬಂದೊದಗಿ ನಿನ್ನ ನಾಮಾಮೃತದ ಸವಿದೋರೊ ದ್ವಾರಾವತಿಯ-ಜೀಯ 5 ಅಂಧಕೂಪದಲಿ ಬಿದ್ದವನ ನೋಡಿ ನಿನಗೆ ಚ ಕ್ಕಂದವಾಗಿದೆಯೊ ಕಾಣೆ-ನಾನು ಸಂದೇಹ ದ್ವೇಷದವನಲ್ಲ-ಇದು ಎಂದೆಂದಿಗೂ ಪುಸಿಯು ಅಲ್ಲ-ಹೃದಯ- ಮಂದಿರದೊಳು ಬಲ್ಲೆಯೆಲ್ಲ-ಸ್ವಾಮಿ ನೊಂದು ಕೂಗಿದರೆ ಎಳೆಗಂದಿಯೆಂಬಾ ಮಾತು ಇಂದು ಎತ್ತಲಿ ಪೋಯಿತೋ ತಾತ-ನೀತ 6 ಗುಣವಂತ ಬಲವಂತ ಜಯವಂತ ಸಿರಿವಂತ ಘನವಂತ ಧೈರ್ಯವಂತ ಶ್ರೀಕಾಂತ-ಎನ್ನ ಮನದ ದುಮ್ಮಾನವನೆ ಬಿಡಿಸೊ-ನಿನ್ನ ಅನವರತ ನಾಮವನು ನುಡಿಸೊ-ಮಧ್ವ ಮುನಿ ಕರುಣ ಕವಚವನು ತೊಡಿಸೊ-ಇದೇ ಜನುಮ ಜನುಮಕೆ ಬೇಡಿಕೊಂಬೆ-ಶರಣೆಂಬೆ ಪ್ರಣತ ಹೃದಯಾಬ್ಜ ತುಂಬೆ-ಕಾಂಬೆ 7 ಮಾನಸ್ನಾನವನುಂಡು ಮತಿಗೆಟ್ಟ ಪೂರ್ಣ ವಿ ಜ್ಞಾನಮಯನೆ ನಿನ್ನ ಮರೆದೆ-ಕರ್ಮ ಪ್ರಾಣೇಂದ್ರಿಯಂಗಳು ನಿನ್ನ ವಶವೊ-ಇಂಥ ಜಾಣತನ ಬಹಳ ಸಂತಸವೊ-ಹೀಗೆ ಮಾಣದಲೆ ಇಪ್ಪ ಸಾಹಸವೋ ಚನ್ನ ಜ್ಞಾನ ಭಕುತಿ ವಿರಕುತಿ ಕೊಟ್ಟು ನಿನ್ನವರೊಳಾನಂದದಲಿ ನಿಲ್ಲಿಸೈಯ್ಯ ಜೀಯ 8 ಶಂಖ ಚಕ್ರ ವರಾಭಯ ಹಸ್ತದಲಿ ನಿಂದ ವೆಂಕಟಾಚಲ ನಿವಾಸ ಶ್ರೀಶ-ನಿನ್ನ ಕಿಂಕರನ ಕಿಂಕರನೊ ನಾನು-ಅಕ- ಳಂಕ ಮನುಜನ ಮಾಡೊ ನೀನು-ಭವ ಸಂಕಟವ ಕಳೆಯಾ ಸುರಧೇನು-ಬೊಮ್ಮ ವಿನುತ ವಿಜಯವಿಠ್ಠಲ ಹರಿ- ಣಾಂಕ ಸೌವರ್ಣ ಪೂರ್ಣ ಸಂಪೂರ್ಣ 9
--------------
ವಿಜಯದಾಸ
ನೊಂದೆನಯ್ಯ ಭವದೊಳು ಸಿಂಧುಶಯನ ವೆಂಕಟೇಶ ಪ ಒಂದು ದಿನಸುಖವಿಲ್ಲ ಗೋ- ವಿಂದ ಬಹಳ ಕರುಣದಿಂದ ನಿ- ರ್ಬಂಧವನ್ನು ಕಳೆದು ಎನ್ನ ತಂದೆ ನೀನೇ ರಕ್ಷಿಸಯ್ಯ 1 ಕಪಟ ನಾಟಕ ಸೂತ್ರಧಾರಿ ಅಪರಿಮಿತ ಮಹಿಮ ಎನ್ನ ಅಪರಾಧವನು ಕ್ಷಮಿಸಿ ಮುಂದೆ ಕಪಟವಿಲ್ಲದೆ ರಕ್ಷಿಸಯ್ಯ 2 ಕಂದ ಪ್ರಹ್ಲಾದನಂತೆ ತಂದೆ ಮುನಿದಾಡುವ ತೆರದಿ ಗ- ಜೇಂದ್ರನಂತೆ ದೃಢವಿಲ್ಲ ಮಂದಮತಿಯ ರಕ್ಷಿಸಯ್ಯ 3 ನರ ಜನ್ಮದೊಳಗೆ ಪುಟ್ಟಿ ನರಕ ಭಾಜನ ತಾನಾಗಿ ದುರಿತ ಪಂಜರದೊಳಗೆ ನಾನು ಸೆರೆಯ ಬಿದ್ದೆ ರಕ್ಷಿಸಯ್ಯ 4 ಹಗಲು ದೃಷ್ಟಿ ಕಾಣದವಗೆ ಮೊಗವುಗೊಂಡು ರಾತ್ರಿಯೊಳು ಹಗೆಯ ವನದಿ ಸಿಕ್ಕಿದವನ ಅಗಲಿ ಹೋಗದೆ ರಕ್ಷಿಸಯ್ಯ 5 ಸಾವಿರ ಅಪರಾಧವನು ಜೀವಿತಾತ್ಮನೆ ಕ್ಷಮಿಸಿ ಎನ್ನ ಮೂವಿಧಿಯೊಳು ಸಿಲುಕದಂತೆ ಭಾವಿಸಿಯೆ ರಕ್ಷಿಸಯ್ಯ 6 ವರಾಹತಿಮ್ಮಪ್ಪ ಮನದ ಘೋರ ದುಃಖವನ್ನು ಕಳೆದು ಮೀರಿ ಬಂದಾಪತ್ತಿನೊಳು ಕಾರಣಿಕನೆ ರಕ್ಷಿಸಯ್ಯ 7
--------------
ವರಹತಿಮ್ಮಪ್ಪ
ನೋಡಿ ನಿನ್ನನು ಧನ್ಯಳಾದೆನು ಮಾಡಿ ಕೃಪೆಯನು ಮನ್ನಿಸೂಬೇಡಿಕೊಂಬೆನು ಭವವ ಮುಂದಕೆ ನೀಡದಂಘ್ರಿಯೊಳೊಂದಿಸೂ ಪಕೃಷ್ಣ ನಿನ್ನನು ಮುದ್ದನಾಡುತ ಕಷ್ಟವನು ಕಡೆಗಾಂಬೆನೂಇಷ್ಟದೈವವು ನನ್ನ ಜಠರದಿ ಪುಟ್ಟೆ ನಿನ್ನನು ಕಂಡೆನೂದುಷ್ಟಕರ್ಮಗಳೆಲ್ಲವನು ನೆರೆ ನಷ್ಟಗೈಯುವ ದೇವನೂಪುಟ್ಟಮಗುವಾಗಿರಲು ಕೇಶವ ಮುಟ್ಟಿಲಾಲಿಪಳಾದೆನೂ 1ಬಟ್ಟಚೆಲು'ನ ರತ್ನದರಳೆಲೆ ಕಟ್ಟಿ ಬೊಪ್ಪದೊಳೊಲೆಯಲೂಪುಟ್ಟ ಮಾಗಾುಗಳು ಕಿ'ಗಳವಟ್ಟು ಕದಪುಗಳೊಪ್ಪಲೂನಟ್ಟನಡು ಪಣೆಯಲ್ಲಿ ಕತ್ತುರಿಬಟ್ಟು ಬೆಡಗನು ಬೀರಲೂಇಟ್ಟ ಕಪ್ಪಿನ ಕಣ್ಗಳೆಸೆಯಲು ಬಿಟ್ಟಬಾಯಲಿ ಸ'ಯಲು 2ಮುತ್ತು ರತ್ನಗಳನ್ನು ತೆತ್ತಿಸಿ ಸುತ್ತಕಾಂತಿಯ ಬೀರುವಉತ್ತಮದ ಮಕುಟವನು ನಿನ್ನಯ ನೆತ್ತಿಗಿಡುವೆನು ಕೇಶವಮತ್ತು ಕಂಕಣಗಳನು ಕರಗಳಿಗಿತ್ತು ಕಟ್ಟುವೆ ಪವಳವಾಸತ್ಯವಂತನೆ ನೀನು ಶಿಶುತನವೆತ್ತೆ ಪಡೆದೆನು ಭಾಗ್ಯವಾ 3ಸನ್ನುತನೆ ಪದಕಗಳ ಸರಗಳ ನಿನ್ನ ಕೊರಳಿಗೆ ಕಟ್ಟಿಚಿನ್ನ ಮುಕ್ತದಿ ಪೊಳೆವ ಕೌಸ್ತುಭವನ್ನು ಉರಕಳವಡಿಸುವಾರನ್ನ ಮಾಣಿಕದುಡಿಯ ಸೂತ್ರಗಳನ್ನು ಕಟಿಯಲಿ ರಚಿಸುವಾಇನ್ನು ಬಹು'ಧವಾಗಿ ಮನ್ನಿಪುದನ್ನು ವ'ಸಿದೆ ದಾಸ್ಯವಾ 4ಕಟ್ಟಿ ಘಂಟೆಯ ಸರವ ಕಟಿಯಲಿ ಪುಟ್ಟ ಶ್ರೀಮೃದುಪಾದವಾಮುಟ್ಟಿ ಕೈುಂದಂದುಗೆಗಳ ನಾನಿಟ್ಟು ಘಲಿಘಲಿಗುಟ್ಟುವಾಬಟ್ಟಗೆಜ್ಜೆಯ ಸಣ್ಣಸಾಲ್ಗಳ ದಟ್ಟಗೊಳಿಸೀಯೆಂದವಾನೆಟ್ಟದ್ಟೃಯಲೀಕ್ಷಿಸುತ ಹೊರಗಟ್ಟಿಬಿಟ್ಟೆನು ಕ್ಲೇಶವಾ 5ಒಂದು ಸ್ತನವನು ಸ'ಯುತಲೆ ಮತ್ತೊಂದು ಸ್ತನವನು ಕರದಲಿತಂದು ವದನದೊಳಿಟ್ಟು ದಣಿಯುತ ಮಂದಹಾಸದ ಮುಖದಲಿಇಂದಿರೇಶನೆ ನಿನ್ನ ನೋಡುತ ಇಂದು ಸಲ'ದೆ ಕೃಪೆಯಲಿವಂದಿಪರು ನಿನ್ನಡಿಗೆ ಸುರಮುನಿವೃಂದ ಭಾ'ಸಿ ಮನದಲಿ 6ಸಕಲ ಲೋಕಾಧಾರನಾಗಿಯೆ ಸಕಲ ಜೀವರ ಸಾಕ್ಷಿಯೆಪ್ರಕಟವಾಗೆನಗೀಗ ತೋರಿದೆ ಮುಕುತಿದಾಯಕ ಮೂರ್ತಿಯೆಭೃಕುಟಿಯಲಿ ನಿರ್'ುಸಿದ ಮಾಯೆಯ 'ಕರಿಸುವನುಸಾರಿಯೆಚಕಿತಳಿಗೆ ನನಗೊಲಿದೆ ತಿರುಪತಿ ವೆಂಕಟನಡಿಗೆ ಸ್ವಾ'ುಯೆ7
--------------
ತಿಮ್ಮಪ್ಪದಾಸರು
ನೋಡಿದೆ ಮನದಣಿಯೆ ಶ್ರೀನಿವಾಸನ ನೋಡಿದೆ ಮನದಣಿಯೆಪ. ನೋಡಿದೆನು ಶೇಷಾದ್ರಿಯಿಂದೊಡ- ಗೂಡಿ ಭಕ್ತರ ಬೀಡಿನೊಳು ನಲಿ ದಾಡಿ ಮೆರೆವ ಸಗಾಢ ದೈತ್ಯವಿ ಭಾಡ ಶ್ರೀಹರಿ ರೂಢಿಗೊಡೆಯನ ಅ.ಪ. ಶರಣರಪೇಕ್ಷೆಯನು ಕೊಟ್ಟುಳುಹಲು ಕರುಣಾಳು ನಿಜದಿ ತಾನು ಸ್ಥಿರತೆಯೊಳು ಸ್ವಪ್ನದಲಿ ತಾ ಗೋ ಚರಿಸಿ ಭರವಸೆಯಿತ್ತು ವೆಂಕಟ ಗಿರಿಯವೋಲ್ ಸಾನ್ನಿಧ್ಯ ವದನಾಂ- ಬುರುಹದಲಿ ಮೆರೆದಿಹನ ಚರಣವ 1 ಲಲನೆ ಲಕ್ಷ್ಮಿಯು ಬಲದಿ ಶೋಭಿಪ ವಾಮ ದೊಳಗೆ ಗಣಪ ಮುದದಿ ಒಲವಿನಿಂ ಗರುಡಾಂಕ ಮೃದುಪದ ನಳಿನದಾಶ್ರಯದಿಂದ ವಾಯುಜ ಬಳಗ ಚಾತುರ್ದೇವತೆಯರಿಂ- ದೊಳಗೆ ಪೂಜೆಯಗೊಂಬ ದೇವನ 2 ಕುಂಡಿಲಕೊಳದೊಳಿಹ ಪ್ರಾಣೇಶ ಮುಂ- ಕೊಂಡು ಪಟ್ಟಣಕೆ ಬಹ ಕೆಂಡದಂದದೊಳುರಿವ ಶತಮಾ- ರ್ತಾಂಡದೀಪ್ತಾ ಮುಖಂಡ ಭೃತ್ಯನ ಕೊಂಡುಯಿದಿರಲಿ ಮಂಡಿಸಿದನಖಿ ಳಾಂಡಕೋಟಿ ಬ್ರಹ್ಮಾಂಡನಾಥನ 3 ನೀಲಮೇಘಶ್ಯಾಮಲ ಕೌಸ್ತುಭವನ ಮಾಲಕಂಧರಶೋಭನ ವಜ್ರ ಮುತ್ತಿ ಸಾಲ ಸರ ಪೂಮಾಲೆಗಳ ಸುಖ ಲೀಲೆಯಿಂದೊಪ್ಪಿರುವ ಭಕ್ತರ ಕೇಳಿಯಲಿ ನಲಿದಾಡುತಿಹನನು 4 ಕಾಣೆನು ಪ್ರತಿನಿಧಿಯ ನಮ್ಮೊಡೆಯ ಲ- ಕ್ಷ್ಮೀನಾರಾಯಣ ಹರಿಯ ಕಾಣಿಕೆಯ ಕಪ್ಪಗಳ ತರಿಸುತ ಮಾನಿಸುತ ಭಕ್ತಾಭಿಮತವನು ತಾನೆ ಪಾಲಿಸಿ ಮೆರೆವ ಕಾರ್ಕಳ ಶ್ರೀನಿವಾಸ ಮಹಾನುಭಾವನ 5
--------------
ತುಪಾಕಿ ವೆಂಕಟರಮಣಾಚಾರ್ಯ
ನೋಡಿದೆ ವೆಂಕಟರಮಣನ | ದ್ವಾರ ವಾಡ ಗ್ರಾಮದಿ ನಿಂತ ದೇವನ ಪ ರೂಢಿಪ ದಾಸರಿಗೆ ನೀಡಲು ದರುಶನ ಗೂಢ ಪಾದಾದ್ರಿಯಿಂ ಬಂದ ಮಹಾತ್ಮನ ಅ.ಪ ಈತನೆ ವೈಕುಂಟನಾಥನು ನಿಜ | ಶಾತಕುಂಭೋದÀರ ತಾತನು ಮಾತಂಗ ವರದಾತ ಶ್ವೇತವಾಹನ ಸೂತ ಜಾತರಹಿತ ದನುಜಾತ ಕುಲಾಂತಕ 1 ತೋಡ ಜನಕೆ ಸುಖದಾತನ | ಅಂಡಜಾತ ಪ್ರಕಾಂಡ ವರೂಥ ಬ್ರ ಹ್ಮಾಂಡನಾಯಕನಾದ ಪಾಂಡವಪಾಲನ 2 ಇಂದು ಧರಾಮರ ವಂದ್ಯನ ಶಾಮ ಸುಂದರ ವಿಠಲನ ಮುಕುಂದನ ಸಂದರುಶನ ಮಾತ್ರದಿ ಹಿಂದೆ ಮಾಡಿದ ದೋಷ ಇಂದು ಬೆಂದು ಪೋದವು ಘನ 3
--------------
ಶಾಮಸುಂದರ ವಿಠಲ
ನೋಡಿದ್ಯಾ ಶ್ರೀರಾಮನ ನೋಡಿದ್ಯಾ ಪ. ನೋಡಿದ್ಯಾ ನಯನವೆ, ಕೊಂಡಾಡಿದ್ಯಾ ಮನವೆ ಪಾಡಿದ್ಯಾ ವದನವೆ ಬಾಗಿದ್ಯಾ ಶಿರವೇ ಅ.ಪ. ಕುವಲಯ ಶ್ಯಾಮ ಸುಂದರನ ಶ್ರೀ ಭುವಿಜಾತೆಯರಸನ ರಾಘವನ (ವರ) ಪವಮಾನಸುತ ಸಂಸೇನ್ಯನ ಸರ್ವವ್ಯಾಪಕ ಶ್ರೀ ರವಿಕುಲ ತಿಲಕನ ಭುವನಮೋಹನ ವಿಗ್ರಹನಾ 1 ಪಂಕ್ತಿರಥನಂದನನ ವರ ಪಂಕೇರುಹ ಪತ್ರೇಕ್ಷಣನ ವರ ಪಂಕಜಸಖನಿಭ ಭಾಸುರನ ಆಹಾ ಪಂಕಜಾಸನನ ಪೆತ್ತಾತನ ಶಂಕರಪ್ರಿಯ ಕೋದಂಡರಾಮನ 2 ದುಷ್ಟ ತಾಟಕಿಯನು ತಾ ಕೊಂದು ಎಸೆವ ಮಂಗಳಮೂರ್ತಿ ದಶರಥರಾಮನ 3 ದೃಢದಿಯಹಲ್ಯೆಯ ಶಾಪಕಳೆದು ಬಂದು ಪೊಡವಿಜಾತೆಯ ಕೈಪಿಡಿದು ಪಡೆದ ತಾಯ್ತಂದೆಯರ ಒಡಗೂಡಿ ಮೆರೆದಂಥ ಒಡೆಯ ರಾಘವನ 4 ದಾಸರ ದಾಸನೆಂದೆನಿಸಿದಾತನ 5 ಗರುಡವಾಹನ ಮುರಹರನ ವರ ಪರಶುಧರ ಗರ್ವಹರನಾ ಆಹಾ ವರಶೇಷಗಿರಿಯಲ್ಲಿ ಮೆರೆವ ವೆಂಕಟನಾ ಶರಣಾಭರಣ ಶ್ರೀ ನರಹರಿ ರೂಪನ 6
--------------
ನಂಜನಗೂಡು ತಿರುಮಲಾಂಬಾ
ನೋಡಿರಯ್ಯ ಈ ರೂಢಿಯ ಜನರೆಲ್ಲಾ ಮೂಡಲಗಿರಿವಾಸನಾ ವೆಂಕಟೇಶನಾ ಪ ಬೇಡಿದ ವರಗಳ ಭಕ್ತ ಸಮೂಹಕೆ ನೀಡುತಲಿ ಕೊನೆಗೆ ನಿಜಪದವೀವನಾ ಅ.ಪ ಹರಿಬ್ರಹ್ಮರೊಳಾವನುತ್ತಮನೆಂದು ಪರೀಕ್ಷಿಸೆ ಭೃಗುಮುನಿಯು ತೆರಳಿಬಂದು ಅಜಹರನೊಪ್ಪದೆತಾ- ಪರಮಪದಕೆ ಬರಲು ಪರಿ ಸಿರಿಯ ತೊಡೆಯ ಮೇಲೆ ಹರಿಮಲಗಿರೆ ಕಂಡು ಚರಣದಿಂದ ಹೃದಯಕೆ ತಾಡನೆ ಮಾಡಲು ಪರಮ ಭಕುತಿಯಿಂದ ಋಷಿಯ ಪೂಜಿಸಿದ 1 ಸಿರಿಕರವೀರಪುರವನೈದಲು ಧರೆಯೊಳು ವೆಂಕಟಗಿರಿಯ ಸಾರುತ- ಲ್ಲಿರೆ ವಲ್ಮೀಕದಲಿ ಸರಸಿಜಭವ ಶಿವರು ತುರುಕರುವಾಗಿ ಪಾ ಲ್ಗರೆಯೆ ವಲ್ಮೀಕದಲಿ ದೊರೆ ಚೋಳನ ಭೃತ್ಯಗೋವನು ಭಾದಿಸೆ ಶಿರದೊಳಾಂತು ನೃಪಗೆ ಶಾಪವನಿತ್ತ 2 ಮನುಜನೋಲ್ ನಟಿಸುತಲಂಬರರಾಜನ ತನುಜೆಯ ಕೈಪಿಡಿದು ನೆನೆವರಿಗೆ ತಿರುಪತಿಯೆ ವೈಕುಂಠ- ವೆನುತ ಸಾರಿ ಒಲಿದು ಘನಮಹಿಮೆಗಳನು ತೋರಿ ಸಕಲರಿಂ ಗುಣನಿಧಿ ಶ್ರೀಗುರುರಾಮವಿಠಲ ಈ ಘಣಿಗಿರಿಯೊಳಗಿರುತಿಪ್ಪ ತಿಮ್ಮಪ್ಪ 3
--------------
ಗುರುರಾಮವಿಠಲ
ನೋಡುವ ಬನ್ನಿರೆಲ್ಲರು ಲೋಕ ನಾಯಕ ಚೆಲ್ವ ಮೂಡಲ ಗಿರಿವಾಸ ಶ್ರೀವೆಂಕಟೇಶನ ಪ ಭೂಮಿಗೆ ವೈಕುಂಠವೆಂದು ತೋರುತ ನಿಂತ ಸ್ವಾಮಿ ಪುಷ್ಕರಣಿಯ ತೀರದೊಳು ಪ್ರೇಮದಿ ಭಕ್ತರ ಸಲಹಿಕೊಂಬುವನಂತೆ ಕಾಮಿತಾರ್ಥವನಿತ್ತು ಕಳುಹುವನಂತೆ 1 ಬ್ರಹ್ಮಾದಿ ಸುರರಿಂದ ಪೂಜಿಸಿಕೊಂಬನಂತೆ ನಿರ್ಮಲ ರೂಪದಿ ತೋರ್ಪನಂತೆ ಕರ್ಮಬಂಧಗಳನ್ನು ಕಡಿದು ಕೊಡುವನಂತೆ ಹೆಮ್ಮೆಯ ಪತಿಯೆಂದು ತೋರ್ಪನಂತೆ 2 ಆಡಿ ತಪ್ಪುವರಿಗೆ ಕೇಡ ಬಗೆವನಂತೆ ನೋಡಿಯೆ ನಡೆಯಲು ಕೊಡುವನಂತೆ ಮೂಡಿದ ಆದಿತ್ಯ ಶತಕೋಟಿ ತೇಜನಂತೆ ರೂಢಿಗೊಡೆಯ ನಮ್ಮ ವರಾಹತಿಮ್ಮಪ್ಪನಂತೆ 3
--------------
ವರಹತಿಮ್ಮಪ್ಪ
ನೋಡುವರೆ ಬನ್ನಿ ಶೇಷಾಧರ ಕೂರ್ಮನಿಗೆ ಪ. ಇಂದ್ರಾದಿ ಶರದಿಂದ ನೊಂದ ಕಪಿಗಳನ್ನು ತಂದ ಸಂಜೀವನ ಗಿರಿಯಿಂದಲೀ ಮಂದ ಭಾವವ ಕಳದಂದು ಪರ್ವತವನ್ನು ನಿಂದಲ್ಲಿಂದಲೆ ಹಿಂದಕ್ಕೆ ಬಿಸುಟಂಥ1 ವೈಷ್ಣವರಿಗಳೊಳು ಶ್ರೇಷ್ಠನೆನಿಸಿದಂಥ ದುಷ್ಟ ಜರಾಸಂಧ ಕಷ್ಟ ವೃತ್ತಿ ಬಡಿಸಿದಂಥ ಪರಮೇಷ್ಠಿ ಯಾಗವ ಮಾಡಿ ಕೃಷ್ಣಗೆ ಪರಮ ಸಂತುಷ್ಟಿ ಬಡಿಸಿದಂಥ 2 ಮೂರೇಳು ದುರ್ಭಾಷ್ಯ ಖಂಡಿಸಿ ಕೃಷ್ಣನ ದ್ವಾರಕಪುರದಿಂದಿಲ್ಲಿಗೆ ಕರಿಸಿ ಧಾರುಣೀಶ ವೆಂಕಟಾಚಲಪತಿಯೆಂದು ತೋರಿದ ಸಜ್ಜನಾಧಾರ ಯತೀಂದ್ರಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನೋಡುವಾ ಬನ್ನಿರೆ ರಂಗಯ್ಯನ ನೋಡುವಾ ಬನ್ನಿರೇ ಪ. ಬೇಡಿಕೊಳ್ಳುವ ನಾವು ಅ.ಪ. ಕುಂಭಮಾಸದಲಿ ಭಕ್ತರು ಬಿಟ್ಟಾನಂದಮಂಟಪದಿನಿಂದು ಪೂಜೆ ಗೊಂ[ಬ] ಹರುಷದಿ ಮಂದಹಾಸದಿ ಬಂದ ಶ್ರೀರಂಗನ 1 ಹಂಸ ಯಾಳಿ ಸಿಂಹ ಆನೆಯು ಮೊದಲಾದ ಗರುಡ ಹನುಮ ಕಲ್ಪ ವೃಕ್ಷವು ಸರ್ಪವಾಹನವೇರಿ ಅರ್ಥಿಯಿಂದಲೆ ಬರುವ ಶ್ರೀರಂಗನ 2 ಶುದ್ಧದಶಮಿಯಲಿ ರಂಗಯ್ಯ ಮುದ್ದು ಸತಿಯರ ಒಡಗೊಂಡು ಅ ಲ್ಲಿದ್ದ ಮಂಟಪದಲಿ ಹರುಷದೀ ತಾನಿ[ದ್ದ] ಶ್ರೀರಂಗನ 3 ತೆಪ್ಪಮಂಟಪವ ಭಕ್ತರೆಲ್ಲ ವಿಸ್ತಾರದಲಿ ಕಟ್ಟಿ ಪತ್ನಿಸಹಿತಲೆ ತೆಪ್ಪವ ಹತ್ತಿ ಸುತ್ತಿಸುತ್ತಿ ಮೂರುಬಾರಿ ಬರುವ [ಶ್ರೀರಂಗನ] 4 ಮಧ್ಯಮಂಟಪದಿ ತಾನಿದ್ದು ಭಕ್ತರಿತ್ತ [ಸವಿಯಾದ] ಕ್ಷೀರವು ಉದ್ದಿನವಡೆ ಹುಗ್ಗಿ ಮೆದ್ದು ಬರುವ ಶ್ರೀಮುದ್ದುರಂಗನ 5 ಪುಷ್ಪಬಾಣಂಗಳು ಸುತ್ತಿಬಿಡುವ ಚಕ್ರಬಾಣಂಗಳು ನಕ್ಷತ್ರಬಾಣಂಗಳ ಲಕ್ಷ್ಮಿಯೆದುರಲರ್ತಿಯಿಂದಲೆ ನೋಡಿ ನಿಂದ ಶ್ರೀರಂಗನ 6 ತಾ ಕರುಣದಿಂದಲೆ ತೀರ್ಥಸ್ನಾನವನಿತ್ತು ಬರುವ ವೆಂಕಟರಂಗನ 7
--------------
ಯದುಗಿರಿಯಮ್ಮ
ನೋಡೆಲೆ ಸುಮತಿ ಪೆಣ್ಮಣಿಗೊಲಿದ ಗಾಡಿಗಾರ ಚೋರ ರೂಢಿಗೆ ರಂಗ ಪ. ಈಡುಂಟೇ ಶತ ಜೋಡಿಶೆ ಶಿಶುಗಳ ಬೇಡ ಪಂಥ ನಿನ್ನ ಬೇಡಿಕೊಂಬೆನೆ ಕುಮತಿಅ.ಪ. ಅಪ್ರಾಮೇಯನ ಗುಡಿಯೊಳಗಿದನೆ ಸುಪ್ರಕಾಶ ಎನ್ನಪ್ಪಾ ಮುಂಗುರುಳುಗಳೊ ಳೊಪ್ಪುತಲಿಹನೆ ಬೆಡಗಿಂದೊಡನೆ ಅಪ್ಪನ ಬ್ರಹ್ಮಗಂಟುಡಿದಾರ ಉಡುಗೆಜ್ಜೆ ಬೊಮ್ಮ ನಪ್ಪ ಅಂಬೆಗಾಲಿಕ್ಕಿ ನೆಲಸಿಹನೆ ಕಂ ದರ್ಪ ಕೋಟಿ ತೇಜದಿ ಮೆರೆವನ 1 ಅರವಿಂದದಳ ವೆಂಕಟನಿರುವಲ್ಲೆ ತಿರುಮಲ ನಾರಾಯಣ ಚರಿತಾಪ್ರಮೇಯ ಚೆÉನ್ನಪಟ್ಟಣ ತೀರ ಮುಳೂರಲ್ಲೆ ಸರಸ ಸಂಚರಿಸುವ ವರ ಚೈತ್ರದ ರಥ ಅರಿವಿಲ್ಲವೆ ಕಣ್ತೆರೆದು ನೋಳ್ಪರಿಗೆ ದುರಿತ ದೂರ ಕಣಿ ವರಪ್ರದ ದೇವ ಅರಿದವರಿಗೆ ಕಣ್ ತೆರೆವನು ದೇವ ನೋಡೆ 2 ಅಪ್ಪ ಕೃಷ್ಣಗೆ ಬೆಣ್ಣೆ ಹಣ್ಣನುಗೊಡಲು ಇಪ್ಪನೆ ತನಯರನು ಸುತ್ತೇಳು ಲೋಕದಿ ನೋಡಲು ಇಲ್ಲೆಲ್ಲೆಲ್ಲೂ ಶಿಶು ಇಹನಲ್ಲೇ ಅಪ್ಪ ಶ್ರೀ ಶ್ರೀನಿವಾಸ ಒಪ್ಪನೋ ತಪ್ಪನೆಲ್ಲವಪ್ಪಿಪ್ಪನೊ ಕರುಣವ ಸರ್ಪಶಯನ ತಿಮ್ಮಪ್ಪನ ಕರುಣ ಒಪ್ಪ ತೆರದಿ ಸ್ತುತಿ ಮಾಡುವ ಬಾರೆ 3
--------------
ಸರಸ್ವತಿ ಬಾಯಿ