ಒಟ್ಟು 1248 ಕಡೆಗಳಲ್ಲಿ , 95 ದಾಸರು , 856 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿತ್ಯ ಶುಭಮಂಗಳಂ ಪ. ಹೃದಯವೆಂಬೀ ದಿವ್ಯ ಪದ್ಮಪೀಠದ ಮೇಲೆ ಪದ್ಮಾಕ್ಷಿ ಪದ್ಮೆಯನು ಕುಳ್ಳಿರಿಸಿ ಸದಮಲ ಭಾವದಿಂ ಮಧುಕೈಟಭಾಂತಕನ ಹೃದಯೇಶ್ವರಿಯ ಸೇವೆಗೈವೆ 1 ಜ್ಞಾನವೆಂಬುವ ದಿವ್ಯ ಜ್ಯೋತಿಯಂ ಮುಂದಿರಿಸಿ ಧ್ಯಾನವೆಂಬುವ ನಿಲುವುಗನ್ನಡಿಯ ನಿಲಿಸಿ ದಾನÀವಾಂತಕ ರಾಮಚಂದ್ರಮನ ಧ್ಯಾನಿಸುತ ಜಾನಕಿಯ ಬಲಗೊಂಬೆ ಭರದಿ 2 ನೇಮನಿಷ್ಠೆಯ ಶುದ್ಧ ಹೇಮಕಲಶದಿ ಮತ್ತೆ ಭಕ್ತಿರಸದ ಪನ್ನೀರ ತುಂಬಿ ನಾಮಸಂಕೀರ್ತನೆಯ ನಾರಿಕೇಳವ ಬೆರಸಿ ಶ್ರೀನಾರಿಗಭಿಷೇಕವ ಗೈವೆ 3 ಚಿತ್ತಶುದ್ಧಿಯ ಶುಭ್ರವಸ್ತ್ರದಿ ನೇವರಿಸಿ ಸತ್ವಗುಣದ ಪೀತಾಂಬರವನುಡಿಸಿ ಕಂಚುಕ ತೊಡಿಸಿ ಚಿತ್ತಜನ ಜನನಿಯರ ನೋಡಿ ನಲಿವೆ 4 ಅಂತಃಕರಣ ಶುದ್ಧಿಯ ಅರಿಸಿನವನು ಪೂಸಿ ಶಾಂತಗುಣದ ತಿಲಕ ತಿದ್ದಿ ನಂದಮಲ್ಲಿಗೆಯ ದಂಡೆಯನು ಮುಡಿಸುತ್ತ ಇಂದ್ರಿಯ ನಿಗ್ರಹದ ಗಂಧ ಹಚ್ಚುವೆನು 5 ಪಂಚಭೂತಾತ್ಮಕದ ಛತ್ರಿಯನು ಪಿಡಿದೆತ್ತಿ ಪಂಚನಾದಗಳೆಂಬ ವಾದ್ಯಗಳ ನುಡಿಸಿ ಪಂಚೇಂದ್ರಿಯಂಗಳೇ ಪಂಚಭಕ್ಷ್ಯಗಳಾಗಿನಿ ರ್ವಂಚನೆಯಿಂದಾರೋಗಿಸೆಂಬೆ 6 ರೇಚಕವೆಂಬ ವ್ಯಜನದಿಂ ಬೀಸಿ ತಾರಕ ಚಾಮರವ ಪಿಡಿದು ಕುಂಭಕವೆಂಬ ಪನ್ನೀರಿನಿಂ ತೋಯ್ಸಿ ತಾರಕ ಬ್ರಹ್ಮನರಸಿಯಂ ಸೇವಿಸುವೆ 7 ಭೋಗಭಾಗ್ಯವನೀವ ಭಾಗ್ಯಲಕ್ಷ್ಮಿಗೆ ವೈರಾಗ್ಯದ ತಟ್ಟೆಯನು ಪಿಡಿದು ಭಾವದೀವಿಗೆಯ ಕರ್ಪೂರದಾರಿತಯೆತ್ತಿ ಬಾಗಿವಂದಿಪೆ ತಾಯೆ ಕರುಣಿಸೆಂದು 8 ವರದಾತೆ ಭೂಜಾತೆ ಸುವಿನೀತೆ ಸುವ್ರತೆ ವರಶೇಷಗಿರಿವಾಸದಯಿತೆ ಮಹಿತೇ ಸೆರಗೊಡ್ಡಿ ಬೇಡುವೆನು ಕರಪಿಡಿದು ಸಲಹೆಂದು ನೆರೆನಂಬಿ ನೆನೆನೆನೆದು ನಲಿವೆನಿಂದು 9
--------------
ನಂಜನಗೂಡು ತಿರುಮಲಾಂಬಾ
ನಿಧಿಯು ದೊರಕಿತು ಎನಗೆ ನಿಧಿಯು ದೊರಕಿತು. ವಿಧಿ ಭವಾದಿ ದೇವರೆಲ್ಲ ಒದಗಿ ಮಾನದಿಂದ ಕಾಯ್ವ ಪ. ನಿತ್ಯ ಮಂಗಳೆಯನು ತನ್ನುರ ಸ್ಥಳದಲಿ ಧರಿಸಿರುವದು ಎತ್ತ ನೋಡಲಲ್ಲಿ ನಲಿವ ಭೃತ್ಯಪೂರ್ಣಾರ್ಥ ಕೊಡುವ 1 ಕಷ್ಟ ಕಲುಷವೆಂಬ ದೊಡ್ಡ ಬೆಟ್ಟವೆಲ್ಲ ಭೇದಿಸುವುದು ಇಷ್ಟ ಲಾಭ ಪುಷ್ಪ ಜ್ಞಾನ ದೃಷ್ಟಿಸಹಿತ ಕೊಟ್ಟು ಕಾವ 2 ಹಲವು ಭವದ ತಾಪವನ್ನು ಕಳೆದು ಕೃಪಾರಸವ ಸೂಸಿ ಮಧ್ಯಪೊಳೆವಪೂರ್ವ 3 ಸೋತು ಸಕಲ ಜನರ ಮುಂದನಾಥನಾಗೆ ಕರುಣಿ ಜಗ- ನ್ನಾಥದಾಸರೊಲಿದು ಪರಮ ಪ್ರೀತಿಯಿಂದ ತೋರಿದಂಥ 4 ಇಹ ಪರತ್ರ ಸುಖವನೀವ ಮಹದುಪಾಸ್ಯ ಪಾದಪದ್ಮ ವಹಿಸಿದವರ ಸಕಲಭಾಗ್ಯ ನಿವಹಿ ವೆಂಕಟೇಶನೆಂಬ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಿನಗೆ ನೀನೆ ಕೃಷ್ಣ ದಯಮಾಡಿ ಸಲಹಯ್ಯಎನಗೊಂದು ಸಾಧನ ಲೇಸುಕಾಣಬಾರದು ಪ. ಸ್ನಾನಮಾಡಿಯೆ ನಿನ್ನ ಸಂಪಾದಿಸೇನೆಂದರೆಸ್ನಾನಮಾಡದೇ ಕಪ್ಪೆ ಸರ್ವಕಾಲದಲಿಧ್ಯಾನ ಮಾಡಿಯೇ ನಿನ್ನ ಸಂಪಾದಿಸೇನೆಂದರೆಧ್ಯಾನ ಮಾಡದೇ ಬಕಪಕ್ಷಿಯು ಸರ್ವದಾ 1 ಜಪವ ಮಾಡಿಯೆ ನಿನ್ನ ಕೃಪೆಗೊಳಗಾಗುವೆನೆನೆಜಪದಲ್ಲಿ ಮನಸ್ಸೆನ್ನಾಧೀನವಿಲ್ಲಉಪವಾಸವೇ ಉಚಿತ ಸಾಧನವೆಂಬೆನೆಉಪವಾಸವೇ ಇರದೆ ಉರಗನು ತಾ ಸರ್ವದಾ 2 ಸನ್ನ್ಯಾಸ ಸುಖಸಾಧನವು ಎಂತೆಂಬೆನೆಸನ್ನ್ಯಾಸಿಯಾಗಿರನೆ ರಾವಣನುಕನ್ಯಾದಾನವೆ ಮುಖ್ಯ ಸಾಧನವೆಂಬೆನೆಕನ್ಯಾದಾನವ ಕೊಡನೆ ಕಂಸಗೆ ಜರಾಸಂಧ 3 ದುರುಳ ದುರ್ಯೋಧನ 4 ಬಂಧುತ್ವವೇ ಗತಿ ಸಾಧವವೆಂಬೆನೆಬಂಧುತ್ವವಿರದೆ ಶಿಶುಪಾಲನಿಗೆಒಂದರಿಂದುಚಿತ ಕಾಣೆ ಹಯವದನರಾಯನೆಎಂದೆಂದಿಗೂ ದಾಸನೆಂದೆನಿಸೊ5
--------------
ವಾದಿರಾಜ
ನಿನ್ನ ಧ್ಯಾನವ ಕೊಡು ಎನ್ನ ಧನ್ಯನ ಮಾಡು ಚೆನ್ನ ಶ್ರೀ ಶೇಷಾದ್ರಿ ಸನ್ನಿವಾಸಾ ಪ ಭೀಷಣವಾಗಿಹ ಭವಸಾಗರದೊಳು ನಾಶಗೊಳಿಪುವರು ನೆಗಳಿಗಳು ಬೀಸುವವನುದಿನ ಮೂರು ಘಾಳಿಗಳು ಈ ಸಂಖ್ಹ್ಯಾಂಗ ಕೈಪಿಡಿಯೋ ಕೃಪಾಳು1 ಭವವೆಂಬ ಕಿಚ್ಚನ್ನ ಸಹಿಸುವ ಪರಿಯೇನೋ ಯುವತೀ ವಿಷಯ ಸುಖಲುಬ್ಧನಾಗಿಹೆನೋ ಹವ್ಯವಾಹನನೆನ್ನನಾಡು ಮಾಡಿದೆಯೇನೋ ಪವನನೈಯಾತ್ವತ್ಪದಾಪದ್ಮ ಭೃಂಗನೋ2 ಪರಿಪರಿ ದುರಿತಂಗಳಿಂದ ಮನದೆಡೆಯೊಳು ಹರಿಸೇವಾರ್ಚನೆಗಳಿಗೆ ಅನುವಿಲ್ಲವು ಪರಮ ಭಾಗವತರ ಜರೆವ ಖಳ ಜನರಾ ನೆರೆಯಿರದಂತೆ ಮಾಡೊ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ನಿನ್ನ ನಂಬಿದವರಿಗೆ ಇನ್ನು ಕೊರತೆಗಳುಂಟೆ ಪನ್ನಗಾದ್ರಿನಿವಾಸ ಶ್ರೀ ವೆಂಕಟೇಶ ಪ. ಬನ್ನ ಬಡಿಸದೆ ಎನ್ನ ಧ್ಯಾನವನ್ನು ಮರೆವರು ಭಕ್ತರಂದು ಬನ್ನ ಬಿಡಿಸಿ ಪೊರೆವೆ ಕರುಣದಿ ಅ.ಪ. ಅಧಿಕ ಸಂಸಾರದಿ ಪದೆಪದೆಗೆ ತೊಡರುಗಳ ಬದಿಗನಾಗಿದ್ದವರಿಗೆ ಕೊಟ್ಟು ಸದಮಲಾನಂದ ಪರೀಕ್ಷಿಸುವೆ ತವಕದಿ ಚದುರಿಸುತ ಮನವನ್ನು ಅದುಭುತನೆ ನಸುನಗುತ ನೀನೋಡುತ್ತ ಹೆದರಿ ಬೆದರಿ ನಿನ್ನ ಧ್ಯಾನಕ್ಕೊದಗಲಿ ಮನವೆಂಬೆಯಲ್ಲದೆ ಮಧುರವಾಣಿಯ ತೋರಿ ಸಲಹಲು ವದಗಿ ಕಾಯುವೆ ಭಕ್ತರನ್ನು (ಚದುರ ನಿನಗೆಣೆಗಾಣೆ ಜಗದೊಳು) 1 ಜಾಣರೊಳತಿ ಜಾಣತನ ತೋರುತ್ತ ಕಾಣಿಸಿ ಕಾಣದಂತಿರುತ ಭಕ್ತರೊಳು ಗಾಣಕೆ ಸಿಲ್ಕಿದ ಎಳ್ಳು ಸಚ್ಛದೆಣ್ಣೆ ಮಾಣದೆ ಬರುವ ತೆರ ತೋರುವೆ ಜನಕೆ ಕಾಣದಿಹ ಕಾಮಕ್ರೋಧದ್ಹಿಂಡಿಯ ಮಾಣದೆ ಬೇರ್ಪಡಿಪೆಯಲ್ಲದೆ ಇದು ಕಾಣ್ವರು ನಿನ್ನ ಚರಣದಂಘ್ರಿಯ ಕಾಣುತಲೆ ಸ್ತುತಿಮಾಡಿ ಹಿಗ್ಗುತಲಿಹರು 2 ದಿಟ್ಟಮೂರುತಿ ಕೇಳೊ ಕೊಟ್ಟರೊಳ್ಳಿತು ಕಷ್ಟ ಉತ್ಕøಷ್ಟವಾಗಲಿ ಹರಿಯೆ ಎನ್ನ ದೊರೆಯೆ ಕಟ್ಟಕಡೆ ನಿನ ಧ್ಯಾನ ಕೊಟ್ಟು ಕಾಯುವ ಭಾರ ಘಟ್ಟಿ ಕಂಕಣ ಕಟ್ಟಿ ನಿಂತಿಹೆ ಶ್ರೀ ಶ್ರೀನಿವಾಸ ಎನ್ನ ದುಷ್ಟತನವೆಲ್ಲ ಕುಟ್ಟಿ ಕೆಡಹುವೆ ಕಟ್ಟಕಡೆಗೆ ನಿನ್ನ ಪಾದಾಂಗುಷ್ಠ ಸೇರಲಿಯೆಂದಾ ಭಕ್ತರ ಬೆಟ್ಟದೊಡೆಯನೆ ಸಲಹುತಿರುವೆ ಉತ್ಕøಷ್ಟ ಮೂರುತಿ ಭಕ್ತರಿಷ್ಟದಾಯಕ 3
--------------
ಸರಸ್ವತಿ ಬಾಯಿ
ನಿನ್ನ ನಂಬಿದೆ ಶಾರದೇ | ಭಕ್ತಿಗೆ ಮತಿ- | ಯನ್ನು ಪಾಲಿಸ ಬಾರದೇ ಪ ನಿನ್ನ ನಂಬಿದೆ ನಾನು | ಎನ್ನ ಜಿಹ್ವೆಯೊಳ್ ನೀನು | ಖಿನ್ನತ್ವಗೊಳ್ಳದೆ | ಸನ್ನುತೆ ನೆಲಸವ್ವ ಅ.ಪ ಜಡಮತಿಯನು ತ್ಯಜಿಸಿ | ನೀ ದಯದಿಂದ | ದೃಢಮತಿಯನು ಪಾಲಿಸಿ || ಕಡಲ ಶಯನ ಸೊಸೆ | ಪೊಡವಿಗಧಿಕವಾದ | ಮೃಡನ ಸ್ಮರಿಪ ಜ್ಞಾನ | ತಡೆಯದೆ ಕರುಣಿಸು 1 ತ್ವತ್ಸಂಗವನು ಪಾಲಿಸಿ | ನೀ ದಯದಿಂದ | ದುಸ್ಸಂಗವನು ಛೇದಿಸಿ || ಸತ್ಸಂಗವೆನಗಿತ್ತು | ಮತ್ಸಂಗ ನೀನಾಂತು | ತ್ವತ್ಸುಗುಣ ನುಡಿಗಳ | ಹೃತ್ಸರೋಜದೊಳಿರಿಸೆ 2 ಸನುಮತ ಪಥಗಾಣಿಸಿ | ಕಏತೆಗಳ | ಮನದಲ್ಲಿ ಸ್ಥಿರಗೊಳಿಸಿ || ಜನನ ಮರಣವೆಂಬ | (ವನ) ದೊಳಗೆನ್ನನು | ವಿನಯದಿ (ಂದಲಿ) ಪಾರ | ಗಾಣಿಸೆ ಶಾರದೆ 3 ದಾಸನೆಂದೆನಿಸೆಯೆನ್ನ | ಕೀತಿ9ಗಹಿತ | ದೋಷವ ತ್ಯಜಿಸೆ ಮುನ್ನ || ಕ್ಲೇಶಗೈವರ ಮನ | ಲೇಸಿನೊಳ್ ವಂಚಿಸಿ | ವಾಸವ ಕರುಣಿಸೆ 4 ಚಿನುಮಯಾತ್ಮಕನಿರುವ | ವೈಕುಂಠದ | ಘನತರ (ಸತ್) ಪದವಿಯ || ಪತಿ | ಪಿತ ಶ್ರೀನಿವಾಸನ | (ಅನುಯಾಯಿ) ಸೇವೆಗ | ಳೆನಗಿತ್ತು ಪಾಲಿಸೆ 5
--------------
ಸದಾನಂದರು
ನಿನ್ನ ನಾಮವೆ ಘನವಆಗಿದೆ ನೆನೆವರಕಾವ ಕರುಣಿಯೆಂದು ಪ ಪಾದ ಯುಗವನಾ ಕಾಣಬಲ್ಲನೆ ಕೇಳಿ ಗರುಢಾ ರೂಢ ನಾಗಿ ಬಂದು ಗಜವ ಕಾಯ್ದವನೆಂದು 1 ಸಂಗದಿಂದಲಿ ಯಿರುತಿರಲು ಬಂದು ಯಮನ ದೂತರೆಳೆಯೆ ಭಯದಿ ತನ್ನ ನಂದನ ಕರೆದರೊಂದು ನಾಮವೆ ಕಾದುದೆಂದು 2 ದುರುಳ ಕಶ್ಯಪುಸುತನ ಭಾಧಿಸೆ ಮೊರೆಯಿಡಲದನುಕೇಳಿ ಭರದಿ ಕಂಬದಿ ಬಂದು ನರಹರಿಯಾಗಿ ನಿಂದು ಕರದೊಳವನ ಕೊಂದು ತರಳನ ಕಾಯ್ದೆಯೆಂದು 3 ಅಂಬುಧಿಶಯನ ನಿನ್ನ ರುಕ್ಮಾಂಗದ ಮೃತ್ಯವೆಂಬುದೆಲ್ಲವಗೆದ್ದು ಕುಂಭಿನಿಯೊಳು ಪೆಸರೊಡೆದರೆಂಬುದ ಕೇಳಿ 4 ಓಲಗದೊಳು ಶಾಲೆಯ ಸುಲಿಯೆ ದ್ರುಪದ ಭೀಮನಕೋಣೆ ಲಕ್ಷ್ಮೀ ಲೋಲ ಸೀರೆಯ ಸೆರಗ ಬೆಳೆಸಿದ ನಾಮವೆಂದು 5
--------------
ಕವಿ ಪರಮದೇವದಾಸರು
ನಿನ್ನ ನೀ ತಿಳಿಯೋ ಮೂಢ ಭೇದಿಸಿ ಗೂಢ ಧನ್ಯಗೈಸುವ ಪ್ರೌಢ ಸದ್ಗುರು ದೃಢ ಧ್ರುವ ಬಂದು ಬಂದು ಹೋಪಾದೇನ ಸಾಧಿಸಿದಲ್ಲದೆ ಖೂನ ಸಂಧಿಸಿ ಬೀಳುವುದು ಹೀನ ಜನ್ಮಕೆ ನಾನಾ ಹೊಂದು ಮನವೆ ನೀ ಪೂರ್ಣ ಸದ್ಗತಿ ಸುಖ ಸಾಧನ ಎಂದೆಂದಿಗಾದ ನಿಧಾನ ಸಾಂದ್ರ ಸದ್ಘನ 1 ಮುತ್ತಿನಂಥ ಸುಜನ್ಮ ವ್ಯರ್ಥಗಳೆವುದಧರ್ಮ ಹತ್ತಿಲ್ಯಾದಾನಂದೋ ಬ್ರಹ್ಮ ತಿಳಿಯೋ ನೀವರ್ಮ ಚೆನ್ನೊಬ್ಬಳೆ ಮಾಡೊಮ್ಮ ಕಿತ್ತಿಬಿಸ್ಯಾಡೊ ದುಷ್ಕರ್ಮ ಎತ್ತ ನೋಡಲು ಸಂಭ್ರಮ ಸದ್ಗುರು ಧರ್ಮ 2 ತನ್ನ ತಿಳಿದು ನೋಡೊ ಭಿನ್ನ ಭೇದವೆಂಬುದೀಡ್ಯಾಡೊ ಸನ್ಮತ ಸುಖ ಸೂರ್ಯಾಡೊ ಅನುಮಾನ ಬಿಡೊ ನಿನ್ನೊಳೂ ಮಹಿಪತಿ ನೋಡೊ ಅನುಭವನೇ ಕೊಂಡಾಡೊ ಉನ್ಮತವಾಗಿ ನೀ ಕೂಡೊ ಘನ ಬೆರೆದಾಡೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನ ಪ್ರೇಮದ ಭೋಗ ಇನ್ನಿಲ್ಲದ ಮನುಜ ಘನ್ನ ಭೂ ಭಾರನವ ಭವನಮಿತ್ರ ಪ ಬನ್ನಬಟ್ಟೆನೊ ಬಹಳ ಬಲುಹೀನ ವೃತ್ತಿಯಲಿ ಮಾನ್ಯರಲಿ ತಲೆಯೆತ್ತಿ ಇರುವಂತೆ ಎಂದಿಡುವಿ ಅ.ಪ. ಏನು ಕೊಟ್ಟರು ಕೊಡು ದಾನವಂತಕ ಎನ್ನ ಜ್ಞಾನದಲಿ ನೀನಿತ್ಯ ನೆಲಸಿ ನಲಿಯೊ ಧೇನುವತ್ಸದ ತೆರದಿ ನೀನೆನಗೆ ಹಿತತೋರು ನಾನೊಲ್ಲೆ ಸುರಲೋಕ ನಿನ್ನೊಲಿಮೆ ಇಲ್ಲದಿರೆ 1 ಮರುವೆಂಬ ಮಾರಿಯನು ಪರಿಹರಿಸು ಪರಿಪೂರ್ಣ ಸುರಿ ನಿನ್ನ ಕರುಣರಸ ಪ್ರಾಣನಾಥ ಸರ್ವೇಶ ನೀನೆಂದು ಪರತಂತ್ರ ನಾ ಸತತ ಶರಣನ್ನ ದಣಿಸುವದು ಘನವೇನೊ ಹರಿಯೆ 2 ಕೋಟಿಕಾಲ ನರಕವಾಸಿಯಾದರು ಎನಗೆ ನೀಟುಗತಿ ದೊರೆವುದೇ ನೀನೊಲಿಯದಿರಲು ಸಾಟಿಯಿಲ್ಲದ ದೈವ ಜಯೇಶವಿಠಲ ನಾಟಿ ಹಿರಿಯರ ಕರುಣ ನೀನಾಗಿ ಕೃಪೆಮಾಡು 3
--------------
ಜಯೇಶವಿಠಲ
ನಿನ್ನ ಮಹಿಮೆಗಿಂಥವರು ಹೊಣೆಯೆ ? ಪ ಚಿನ್ಮಯನೆ ಸಕಲಭುವನಾಧಾರವೆಂಬುದನುಬಣ್ಣಿಸಲು ಎನ್ನಳವೆ ಪನ್ನಗೇಂದ್ರನು ಹೊಣೆಯೆ ? ಅ ವಿಧಿ ಕೌಸ್ತುಭ ರತ್ನವರ ಪೀತ ವಸನ ಕ್ಷೀರಾಬ್ಧಿ ಹೊಣೆಯೊಶರಣರಿಚ್ಛೆಯಲಿ ನೀನಿದ್ದುದಕೆ ದ್ರೌಪದಿಯುಕರಿರಾಜ ಶಂಭು ಅಂಬರೀಷ ಹೊಣೆಯೊಕರುಣಿಯು ಉದಾರಿ ನೀನೆಂಬುದಕೆ ಧ್ರುವರಾಯಮರುತಸುತ ಸಾಂಧೀಪ ಹೊಣೆಯೊ ಕೃಷ್ಣ 1 ಸುಲಭ ಭಕುತರ ಕಾಯ್ವನೆಂಬುದಕ್ಕೆಲೊ ದೇವಫಲುಗುಣನು ವಿದುರ ಅಕ್ರೂರ ಹೊಣೆಯೊಛಲದಂಕನೆಂಬುದಕೆ ಬಾಣನು ಹಿರಣ್ಯಕನುಜಲಧಿ ದಶಮುಖ ಕಾರ್ತವೀರ್ಯ ಹೊಣೆಯೊಒಲಿಸಿ ನಿನ್ನನು ತುತಿಸಿ ಮುಕುತಿಯನು ಪಡೆದುದಕೆಸಲೆ ಶ್ರುತಿಯು ಗಿರಿಜೆ ಅಜಮಿಳನು ಹೊಣೆಯೊನಳಿನಾಕ್ಷ ಸತ್ತ್ವಗುಣ ನಿನಗೆ ಉಂಟೆಂಬುದಕೆಸಲಿಲಜೋದ್ಭವ ಭೃಗುಮುನೀಂದ್ರ ಹೊಣೆಯೊ 2 ವಾತ ಸತ್ತ್ವಗುಣ ಹೊಣೆಯೊಶ್ರೀಕಾಂತ ನೀನಿತ್ತ ವರವು ಸ್ಥಿರವೆಂಬುದಕೆನಾಕೇಶಜಿತನ ಪಿತನನುಜ ಹೊಣೆಯೊಲೋಕದೊಳು ಕಾಗಿನೆಲೆಯಾದಿಕೇಶವ ಭಕ್ತಸಾಕಾರನೆಂಬುದಕೆ ಸಕಲ ಭುವನವೆ ಹೊಣೆಯೊ 3
--------------
ಕನಕದಾಸ
ನಿನ್ನ ಮಾತ ಕೇಳಿ ಗಾಳಿ ನಿಲ್ಲಬೇಕೆ ಶೀತವನ್ನು ಸಹಿಸು ನೀನು ಮಾಯಾಬಲೆಗೆ ಸಿಲುಕೆ ಪಮುನ್ನ ಕಾಯವೆತ್ತಬೇಡವೆಂದಡದಕೆ ನೀನುಧನ್ಯನಾಗದೀಗ ಋತುಧರ್ಮಕಳುಕೆ ಅ.ಪಬಲೆಯ ಬೀಸಬೇಡವೆಂದು ಪಕ್ಷಿ ಪೇಳಲು ಕೇಳಿಬಲೆಯ ಬೀಸುದಿಪ್ಪುದೆಂತು ಪಕ್ಷಿ ಸಿಕ್ಕಲುಅಳುಕಿ ಸಾದು ಬಲೆಯ ಬಾಧೆ ಬಲಿಗನಾಗಲು ಹಾಗೆಛಳಿಯು ನಿನ್ನ ಬಾಧಿಸದು ಪರಮನಾಗಲು1ಬಲಿಗನಂತು ಪಕ್ಷಿ ಭಕ್ಷಣೆಯ ಮಾಳ್ಪನು ಹಾಗೆನಳಿನನಾಭ ತಾನು ವಿಷಯಾಸಕ್ತನೊ ಯೇನುಸಿಲುಕದಿಪ್ಪನೊಂದರೊಳಗೆಂಬುದಿದೇನು ಎಂದುಬಲಿಯವಾಗೆ ಶಂಕೆ ಮನವೆ ನಿನಗೆ ಪೇಳ್ವೆನು 2ಇಲ್ಲವಾದ ಜಗª ಮಾಯೆುಂದ ನಿರ್ಮಿಸಿ ತಾನುಅಲ್ಲಿ ಪೊಕ್ಕು ಉಳ್ಳದೆಂಬಹಾಗೆ ನಟಿಸಿನಿಲ್ಲಲೀಸದಿದನು ಮತ್ತೆ ಕ್ಷಣದೊಳಳಿಸಿ ಕೂಡೆನಿಲ್ಲುವನು ನಿಜದಿ ನಿರ್ವಿಕಾರಿಯೆನಿಸೀ 3ತಾನು ಸುಖಿಸುವಂತೆ ಎನ್ನ ಸುಖಿಸಬಾರದೆ ಲೋಕದೀನಬಂಧುವೆಂಬ ನುಡಿಯ ಹೋಗಲಾಡದೆಮಾನವರ ತನ್ನ ಹಾಗೆ ಕಾಣಬಾರದೆ ಎಂದುನೀನು ಕೇಳೆ ಪೇಳ್ವೆ ನಿನ್ನ ಮಾತ ಮೀರದೆ 4ಆನಂದರೂಪಗೆ ದುಃಖ ತೋರಿಸುವದೆ ಆತನೀನೆಂದೊಮ್ಮೆ ತಿಳಿಯೆ ನಿನಗೆ ದುಃಖ ಮರೆಯದೆಭಾನುವಿನ ಮುಂದೆ ತಮವು ನಿಲ್ಲಬಲ್ಲುದೆ ಜೀವನಾನೆಂಬುದರಿಂದ ಸುಖವು ಮರೆಸಿಕೊಂಡಿದೆ 5ವೇದದಲ್ಲಿ ಪೇಳಿದಂತೆ ಋಗಳೆಲ್ಲರೂ ತಾವುವೇದವೇದ್ಯಬ್ರಹ್ಮವೆಂದು ಸುಖವ ಕಂಡರೂಆದಿಮಧ್ಯತುದಿಗಳಲ್ಲಿ ಬ್ರಹ್ಮವೆಂಬರು ಅದಸಾದರದಿ ಸಾಧಿಸಲು ಸುಖವ ಕಾಂಬರು 6ಅರಿವು ಮರವೆ ಎರಡು ಬಳಿಕ ಕರಣಧರ್ಮವೂ ತಾವುಕರಣಸಾಕ್ಷಿಯಾದ ನಿಜವನರಿಯಲರಿಯವುಕುರುಹನಿಟ್ಟು ನೋಡಲರಿವಿನೊಳಗೆ ಬೆರೆವವೂ ಕೂಡೆತಿರುಪತೀಶ ವೆಂಕಟೇಶನೊಳಗೆ ಬೆರೆವವೂ7ಕಂ||ತನು ತಾ ಜೀವನ ನುಡಿಗೇಳ್ದನುವಾಗಿ ಮೇಲೆ ಮುಕ್ತಿಮಾರ್ಗಕ್ಕೆತನದಿಅನುಕೂಲನಪ್ಪೆನು ನಾ ನಿನ್ನನು ಮೀರೆನೆನುತ್ತ ಪೇಳುತ ತನುವಾದಿಪುದು
--------------
ತಿಮ್ಮಪ್ಪದಾಸರು
ನಿನ್ನ ಮಾತಿಗೆ ಮೆಚ್ಚುವನಾವಾವಾ ಪರಾಕು ಎಲೊ ಎಚ್ಚರಿಕೆ ಪ ಎಂತಾಗುವದೆಂದು ನುಡಿಯದಿರಿ ಕಂತುವಿನ ಪಿತ ನಿನಗೆ ನಮೊ ನಮೊ ಬಿನ್ನೈಪೆ ಸಂತು ಧ್ರುವರಾಯನು ಸಂತತ ಇದಕೆ ಸಾಕ್ಷಿ 1 ಒಂದೆ ರೂಪದಲಿ ಪೂಜೆಯಗೊಂಬೆ ಎನಗೆ ಮ ತ್ತೊಂದು ರೂಪಕೆ ಶಕ್ತಿ ಇಲ್ಲೆನ್ನದಿರು ಸಂದೇಹ ಎನಗಿಲ್ಲ ಎಲ್ಲಿದ್ದರು ದೇವ ನಂದನಂದನ ಇದಕೆ ರಾಯ ಬ್ರಾಹ್ಮಣ ಸಾಕ್ಷಿ 2 ಬದಿಯಲಿದ್ದರೆ ಇಷ್ಟೆ ಮುಂದೆ ಬರುವ ಆಪತ್ತು ಒದಗಿ ಕಳೆವೋಪಾಯ ಕಡಿಮೆನ್ನದಿರೊ ಮುದದಿಂದ ನಿನ್ನಂಘ್ರಿಗೆರಗುವೆನು ಗತಿಪ್ರದಾ ಕದನದೊಳು ಬದುಕಿ ನರಧ್ವಜನೆ ಸಾಕ್ಷಿ3 ಆಪತ್ತು ಕಳೆವೆ ಬೇಡಿದ ಭೋಜನ ಕೊಡುವೆ ಈ ಪರಾಕ್ರಮ ನಿನಗಲ್ಲೆನ್ನದಿರು ಶ್ರೀಪತಿ ನಿನ್ನ ಲೀಲೆಗೆ ಬೆರಗಾಗುವೆನೊ ತಾಪಸರ ಮಧ್ಯದಲಿ ದುರ್ವಾಸಮುನಿ ಸಾಕ್ಷಿ 4 ನಾನಾ ಭಕ್ತರು ಇನಿತು ಸಾಕ್ಷಿಯಾಗಿರಲಿಕ್ಕೆ ಏನು ಸೋಜಿಗವೆಂಬೊ ಸೋಗು ಯಾಕೆ ಸಿರಿ ವಿಜಯವಿಠ್ಠಲರೇಯಾ ನಾನು ಬೇಡುವದೇನು ಸರ್ವಪ್ರೇರಕೆ ಪ್ರೀಯಾ5
--------------
ವಿಜಯದಾಸ
ನಿನ್ನನೆ ನಂಬಿದೆ ನೀರಜನಯನ ನಿನ್ನ್ಹೊರತು ಎನಗನ್ಯ ಗತಿಯಿಲ್ಲ ಹರಿಯೆ ಪ ನಿನ್ನ ಪಾದವೆ ಎನಗೆ ಮಾತಾಪಿತೃಯೆಂಬೆ ನಿನ್ನ ಪಾದವೆ ಎನಗೆ ಬಂಧುಬಳಗವೆಂಬೆ ನಿನ್ನ ಪಾದವೆ ಎನಗೆ ಸಕಲಸಂಪದವೆಂಬೆ ನಿನ್ನ ಪಾದವೆ ಎನಗೆ ನಿಖಿಲಬಲವೆಂಬೆ 1 ನಿನ್ನ ಕರುಣವೆ ಎನಗೆ ಭವತರಿವ ಶಸ್ತ್ರೆಂಬೆ ನಿನ್ನ ಕರುಣವೆ ಎನಗೆ ಸ್ಥಿರಸುಖವುಯೆಂಬೆ ನಿನ್ನ ಕರುಣವೆ ಎನಗೆ ರಕ್ಷಿಸುವ ದೊರೆಯೆಂಬೆ ನಿನ್ನ ಕರುಣವೆ ಎನಗೆ ಪರಮ ತೃಪ್ತ್ಯೆಂಬೆ 2 ನಿನ್ನ ನಾಮವೆ ಎನಗೆ ಅಮೃತವೆಂಬೆ ನಿನ್ನ ನಾಮವೆ ಎನ್ನ ಭವರೋಗಕ್ಕ್ವೈದ್ಯೆಂಬೆ ನಿನ್ನನಾಮ ಸ್ಥಿರಕೊಟ್ಟು ಪ್ರೇಮದಿಂ ಸಲಹು ಶ್ರೀರಾಮ ನೀನೆ ಎನಗೆ ಪರದೈವಯೆಂಬೆ 3
--------------
ರಾಮದಾಸರು
ನಿನ್ನೊಳಗೆ ನೀ ತಿಳಿದುನೋಡು ನಿರ್ಮಲನಾಗಿ ಪ ನಿನ್ನೊಳಗೆ ನೀ ತಿಳಿದುನೋಡು ಚೆನ್ನಾಗಿ ಗುರುಭಕ್ತಿಯ ಮಾಡು ಭಿನ್ನಪದಾರ್ಥಗಳನ್ನು ಬಯಸದೆ ಅನನ್ಯಭಾವದಿ ನಿಜವನ್ನು ನಿತ್ಯಾತ್ಮನ ನರದೇಹದಿಂದಧಿಕವಿಲ್ಲಾ ಸ್ಥಿರವಾಗಿ ನಿಂದಿರುವುದಲ್ಲಾ ಬರಿದೆ ಕೆಡಿಸುವುದು ಸಲ್ಲಾ ಗುರುತಿಗೆ ಬೆರೆಸಲು ಬಲ್ಲಾ ಗುರುನಾಥನಿಂದುಪದೇಶವಾ ಕೈಕೊಂಡು ಇ ತರ ಪರಿಕರಂಗಳ ಆಶಾಪಾಶವಾ ವರ್ಜಿಸಿ ನಿನ್ನ ದುರಿತ ದುಃಖ ವಿನಾಶವಾಮಾಡಲು ಭವ ಶರಧಿಯ ದಾಟುವಾ ಆಯಾಸವಾ ನಿಲ್ಲುವದಿನ್ನು ಕುರಿತುಮನದಲಿ ತಿಳಿದುನೋಡು ಕಾಂಡುವ ಆರು ಅರಿಗಳ ವಿಚ್ಛೇಧನ ಮಾಡು ಅವಿದ್ಯೆಯನ್ನು ಶರಗು ಹಿಡಿದು ಹೊರಗೆ ದೂಡು ಹಮ್ಮಿನಹಲ್ಲು ಮುರಿದು ನಿನ್ನೊಳಗೆ ಕೂಡು ಹರಿಚರಣದೊಳಾಡು ಗುರುಮಂತ್ರವನುಚ್ಚರಿಸಿ ಕರ್ಪೂರವನು ಜಗದೊಳಿರುವುದೆಲ್ಲ ನಶ್ವರಸಂತೆ ನೋಡೆ ಬರುವದೆಲ್ಲ ಬಯಲಿನ ಭ್ರಾಂತಿ ಅರಿತಮಹಾತ್ಮರ ಚರಣನರಸಿಜಕೆ ಎರಗಿ ತತ್ವಾನಂದ ಭರಿತನೆಂದೆನಿಸುವ ನಿನ್ನೊಳಗೆ1 ವಾದಿಸಿ ಶುದ್ಧತತ್ವದ ಹಾದಿಯ ಬಲ್ಲವರಾದ ಸಾದು ಸತ್ಪುರುಷರಪಾದ ಕೊಡಿ ಶ್ರೀ ಗುರುಪ್ರಸಾದ ಸಾಧಿಸಿ ಸವಿಯನು ಬೇಡಿಕೊ ಬ್ರಹ್ಮಾನಂದದ ಬೋಧೆಯಿಂದ ನೀ ಲೋಲಾಡಿಕೊ ನಿತ್ಯನಿರ್ಮಲವಾದ ವಸ್ತು ನೀ ದೃಢಮಾಡಿಕೊ ಅಂತರಾತ್ಮನ ಶೋಧಿಸಿ ಸಜ್ಜಾಗಿ ನೋಡಿಕೊ ಅಷ್ಟರಮೇಲೆ ಹಾ ಧನ್ಯಧನ್ಯನೆನಿಸಿ ಮೆರೆವ ವರ್ಣಾಶ್ರಮದ ಭೇದವಳಿದು ಮಾಯೆಯ ಜರಿವೆ ನಿತ್ಯಾನಂದವಿನೋದಕೆ ಮಹಾತ್ಮರನು ಕರಿವೆ ನೋಡಲು ದ್ವೈತವಾದ ಮಿಥ್ಯವೆಂಬುದನರಿವೆ ಮಧ್ಯಾಂತ ಶ್ರೀ ಗುರುದೇವಾ ಬಹುಆದರವಿಡಿದು ಶಿಷ್ಯರಕಾವಾ ಸಂಪಾದಿಸಿಕೊಡುವಾ ಮುಕ್ತಿಯಠಾವಾ ನಿತ್ಯಾರಾಧಕರಿಗೆ ಸದ್ಗತಿಗಳನೀವಾ ತ್ರಿಮೂರ್ತಿಗಳಾದರೆಂತೆಂಬುದ ನಿನ್ನೊಳಗೆ 2 ನಿತ್ಯನಿರ್ಮಲದೊಳಗಾಡಿ ಪ್ರತ್ಯುಗಾತುಮನ ನೋಡಿ ಇತ್ತಣದ ಹಂಬಲವ ಬಿಡಬೇಕು ತನುಮನಧನ ಜೊತ್ತಾಗಿ ಶ್ರೀ ಗುರುವಿಗೆ ಕೊಡಬೇಕು ಕರುಣದವಜ್ರ ಕೆತ್ತಿದ ಕವಚವನು ತೊಡಬೇಕು ಬಿಡಬೇಕು ಇಂತಾಗಿ ಬಿಡದೆ ಮತ್ತಿ ತಾತ್ವರ್ಥವ ತಿಳಿದು ಕಾಣುಕಾಣದರೊಳು ಪ್ರತ್ಯಕ್ಷ ಹೊಳದಾಡುವ ಚಿದ್ಭಾನು ಪ್ರಕಾಶವನ್ನು ಅತ್ಯಧಿಕತೆಯಿಂದಲೀವನು ಜ್ಞಾನಿಗಳೊಳು ವಿಸ್ತಾರ ವಸ್ತು ವಿಚಾರವನು ಮಾಡಿ ನೋಡಿದರೆ ಕತ್ತಲೆ ಬೆಳಕೆರಡಿಲ್ಲದು ಸ್ವಯದಲಿ ಎತ್ತನೋಡಿದರು ಪ್ರಜ್ವಲಿಸುವುದು ತಾಂ ಉತ್ತಮಾನಂದದಿ ಸಲಿಸುವುದು ಗುರು ಭಕ್ತರ ನಿಜದಲಿ ನಿಲಿಸುವದು ಸುತ್ತು ಮುತ್ತು ಸುಳಿದು ತಾನೆ ಬಯಸುವದು ನೆತ್ತಿಯೊಳಗೆ ಹೊಳೆಯುತ್ತಿಹ ಜ್ಯೋತಿಯು ಎತ್ತಿತೋರಿತು ವಿಮಲಾನಂದ ಬ್ರಹ್ಮನ ನಿನ್ನೊಳಗೆ 3
--------------
ಭಟಕಳ ಅಪ್ಪಯ್ಯ
ನಿನ್ನೊಳು ನೋಡಾನಂದವ ಎನ್ನ ಮನವೆ ಚೆನ್ನಾಗಿ ಚಿನ್ಮಯವ ಇನ್ನೊಂದಿಹವೆಂಬನ್ಯ ಪಥವಳಿದು ಉನ್ಮನಿಯೊಳು ಘನಸುಖ ಅನುಭವಿಸುತ ಧ್ರುವ ಕಂಗಳ ಕೊನೆಯ ಮೆಟ್ಟಿ ಮುಂಗಡಿಯಲಿಹ ಮಂಗಳಾತ್ಮಕನ ನೋಡಿ ಲಂಘಿಸಿ ಮೂಲಸ್ಥಾನವ ತುಂಗ ವಿಕ್ರಮನ ಸಂಗ ಸುಖವನರಿದು ಅನುದಿನ ಇಂಗಿತವಾಗಿ ನೀ ಗಂಗೆಯೊಳು ಜಲ ಬೆರೆದಾ ಸುಸಂಗದಿ 1 ನಾನು ನಾನೆಂಬದಳಿದು ನಿನ್ನೊಳು ನೀನೆ ಏನೆಂದು ತಿಳಿದು ನೋಡು ಆನಂದೋ ಬ್ರಹ್ಮದಾಟವು ತಾನೆ ತಾನಾಗಿ ತನುವಿನೊಳು ತೋರುವದು ಘನಗುರುವಚನಾನುಭವದಲಿ ಸೇವಿಸಿ ಸ್ವಾನುಭವದ ಸುಖದಲಿ ಲೋಲ್ಯಾಡುತ 2 ಮರೆದು ಮಾಯದ ಮಾಟವ ಅರಿತು ನೋಡು ಬೆರೆದು ದಾಂಟಿ ತ್ರಿಕೂಟವ ತೋರುವ ದಿವ್ಯಭಾವವ ತಾರಕಗುರು ಸಾರುವ ಕರುಣ ನೋಟವ ಅರವಿನೊಳಿರು ಮಹಿಪತಿ ಗುರುಪಾದದಿ ಪರಮಾನಂದದಿ ಸುಖ ಸೂರ್ಯಾಡುತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು