ಒಟ್ಟು 693 ಕಡೆಗಳಲ್ಲಿ , 86 ದಾಸರು , 546 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗರುಕ್ಮಿಣಿ ಸತ್ಯಭಾಮೆಗೆ ಬಂಗಾರದ ಪ ಮಂಟಪದೊಳು ಸತಿಯರೆಂಟುಮಂದಿಯು ಕೂಡಿ ಒಂಟಿಮುತ್ತೊ ್ಹಳೆವೊ ವೈಕುಂಠಪತಿಗೆ ಬ್ಯಾಗ 1 ವಾರಿಜಾಕ್ಷಿಯರ್ಹದಿನಾರುಸಾವಿರ ಮಂದಿ ಮಾರನಯ್ಯನ ಮುದ್ದು ಮಕ್ಕಳ ಸಹಿತಾಗಿ 2 ಎಡಬಲ ತೊಡೆಯಲ್ಲಿ ಮಡದಿ ರುಕ್ಮಿಣಿ ಭಾಮೆ ನಡುವೆ ಭೀಮೇಶಕೃಷ್ಣ ನಗುತ ಕುಳಿತನಾಗ 3
--------------
ಹರಪನಹಳ್ಳಿಭೀಮವ್ವ
ರಘುನಂದನ ಬಾರೈ ಹಸೆಗೆ ನಿಗಮಾಗಮಾ ವಳಿಸನ್ನುತ ಪ ಶ್ರೀ ಜಾನಕಿ ಸಹಿತ ಅ.ಪ. ವೈರಿ ಕುಲಭಂಜನ ಪರಮೇಶವರ ಚಾಪಖಂಡನ ಕರುಣಾಕರ ಖರದೂಷಣಾದಿ ಹರನಾಶ್ರಿತ ವರ ಲೋಕಪಾಲ 1 ನವನೀರದಾಭ ನವಸುಂದರ ನವಮೀ ಸಂಜಾತ 2 ಶರಣಾಗತ ಭರಣಾಧೃತ ವರ ರಾಮಚಂದ್ರ 3
--------------
ಬೇಟೆರಾಯ ದೀಕ್ಷಿತರು
ರಘುರಾಮಗೆ ಬೆಳೆಗಿರೆ ಬೇಗ ಆರತಿ ಪ. ಪಶುಪತಿ ಮಿತ್ರಗೆ ಋಷಿಗಳ್ಯಾಗವ ಕಾಯ್ದವಗೆ ಶಶಿಮುಖಿ ಅಹಲ್ಯೆ ಶಾಪವ ಕಳೆದ ಅತುಳ ಮಹಿಮ ಶ್ರೀಹರಿಗೆ 1 ಶಿವನ ಧನುವ ಮುರಿದವನಿಜೆಯಳ ತಂದು ಜವದಿ ಪರಶುರಾಮನಿಗೆ ತವಕದಿ ಗರ್ವವ ಮುರಿದವನೀಶಗೆ ಕಮಲಾಕ್ಷಿಯರೀಗ ಬೇಗಾ 2 ಅನುಜನವಡಗೂಡಿ ವನಿತೆ ಸಹಿತಲೀ ತನುಜನಗೂಡಿದನುಜನ ಮುರಿದ ಘನದ ಶ್ರೀ ಶ್ರೀನಿವಾಸನಿಗೆ 3
--------------
ಸರಸ್ವತಿ ಬಾಯಿ
ರಜತ ಪೀಠದ ಯಾತ್ರೆ ರಜೋತಮ ಗುಣವುಳ್ಳ | ಪ್ರಜರಿಗೆ ದೊರಕುವದೆ | ತ್ರಿಜಗದೊಳಗೆ ಮುಂದೆ | ಅಜನಾಗಿ ಬಪ್ಪಗೆ | ಭಜನೆ ಮಾಡುವಂಥ ಸುಜನರಿಗಲ್ಲದೆ ಪ ಮಂದಾಕಿನಿ ಮಿಕ್ಕಾದ ನದಿಗಳಲ್ಲಿಗೆ ಪೋಗೆ | ಮಿಂದು ನಾನಾ ಕ್ಷೇತ್ರವ ಬಂದೂ ಬಿಡದೆ ತಿರುಗಿ ವೇದ ಶಾಸ್ತ್ರಗಳು | ಚಂದದಿ ಓದಿಕೊಂಡು | ಕುಂದದೆ ವ್ರತ ಯಾಗ ಯೋಗ ಮಾಡಲೇನು | ಬಿಂದು ಮಾತ್ರ ಫಲವಿಲ್ಲ | ಸುರರು ಒಂದಾಗಿ ಒಂದಿನ | ಅಂದು ಪೀಯೂಷವ ಕರೆಯೆ ಉಂಡವರಾರು 1 ಮಾನವ | ನಾಡೊಳು ಉಡುಪಿ ಯಾತ್ರೆ ಮಾಡಿದರವಗೇನು ಲೇಶ ಸತ್ಕರ್ಮವು | ಕೂಡದು ಕೂಡದಯ್ಯಾ | ಬಿಡಾಲನಂದದಿ ತಿರುಗಿದಂತಾಗುವದು | ಕೇಡಿಗೆ ಗುರಿಯಾಗುವಾ | ಜೋಡು ಇಲ್ಲಿಗೆ ಬಂದು ತಿರುಗಿ ಪೋದರೆಯೇನು | ಆಡಲೇನದಕೆ ತಿಲಾಂಶ ಸುಖವುಂಟೆ 2 ತಮೋ ಯೋಗ್ಯ ಉಡುಪಿನ ಯಾತ್ರೆ ಮಾಡಲು | ಅಮಿತ ಬಲವಂತನಾಗಿ ಪುಟ್ಟಿ ಆಕ್ರಮಿಸಿ ಪುಣ್ಯವನೆ ಕೆಡಿಸಿ ತಮಕೆ ಸಾಧನವಾದ ಸುಖಬಟ್ಟು ಬಹುಕಾಲ | ರಮಣಿ ಮಕ್ಕಳು ಸಹಿತದಿ | ನಿತ್ಯ | ತಮಸಿನೊಳಗೆ ವಾಸಫಲ ವ್ಯರ್ಥವಾಗದು 3 ರಾಜಸ ಗುಣದಲ್ಲಿ ಈ ಯಾತ್ರೆ ಮಾಡಲು | ಭೂಷಣವನೆ ಯಿಟ್ಟು | ವಾಜಿ ಗಜವಾಗಿ ಸೌಖ್ಯ ಈ ಜಗದೊಳು ಒಟ್ಟು ಪೋಗೋದಲ್ಲದೆ ವಿ | ರಾಜಿಸುವದು ಬಲ್ಲದೇ | ರಾಜಮಂದಿರಕೆ ನವರತ್ನ ತೆತ್ತಿಸಿದಂತೆ | ಈ ಜನದ ಸುಖದ ಫಲ ವ್ಯರ್ಥವಾಗುವದು4 ಮುಕ್ತಿಯೋಗ್ಯನು ಬಂದು ಯಾತ್ರೆಯ ಮಾಡಲು | ಮುಕ್ತಿ ಉತ್ತಮ ಕುಲದಲ್ಲಿ | ವ್ಯಕ್ತನಾಗೀ | ದಿವ್ಯ ಮನದಲ್ಲಿ ವಿರುಕುತಿ | ಭಕ್ತಿಜ್ಞಾನದಲಿ ಬಾಳಿ | ಶಕ್ತನೆಂದೆನೆ ಸತತ ಶ್ರೀಮದಾರ್ಯರ | ಭಕ್ತಿಲಿ ಲೋಲಾಡುತ | ಭಕ್ತವತ್ಸಲ ವಿಜಯವಿಠ್ಠಲ ಕೃಷ್ಣಸಾರ | ಭೋಕ್ತನಲ್ಲಿಪ್ಪನು ಫಲ ವ್ಯರ್ಥವಾಗದು 5
--------------
ವಿಜಯದಾಸ
ರಾಜ ರಾಜರ ಗಂಡ ರಾಜಗೋಪಾಲ ಪ. ಅರ್ಥಿಲೆ ಏರಿ ಕುಳಿತ ಮತ್ತೆ ಗೋಪಾಲ 1 ಬಂದ ಜನರ ಸಹಿತ ತಂದೆ ಗೋಪಾಲ 2 ವಿಪ್ರರಿಂದಲೆ ಕುಳಿತ ಅಪ್ಪ ಗೋಪಾಲ3 ಬೆಳಕು ತುಂಬಿಸಿ ತಾನು ಕುಳಿತ ಗೋಪಾಲ 4 ಅರ್ಥಿಲೆ ಏರಿ ಕುಳಿತ ಮತ್ತೆ ಗೋಪಾಲ5 ಮೂರ್ತಿ ಗೋಪಾಲ 6 ಬಂದ ಜನಕೆ ಆನಂದವ ಪಡಿಸುತ ಚಂದ್ರನಂತಲೆ ಕುಳಿತ ಬಂದು ರಾಮೇಶ 7
--------------
ಗಲಗಲಿಅವ್ವನವರು
ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ
ರಾಮ ಜಾನಕೀರಮಣ ರಾಜೀವದಳನಯನ ಧಾಮ ನಿಧಿವಂಶ ಸೋಮನಿಗೆ ಪ ಪದುಮಶಾಲೆಯೊಳಗೆ ಪದುಮಗದ್ದುಗೆ ಹಾಕಿ ಪದುಮನಾಭನು ಬಂದು ಕುಳಿತನು ಪದುನುನಾಭನು ಬಂದು ಕುಳಿತನು ಎಡದಲ್ಲಿ ಪದುಮಾಕ್ಷಿ ಪದುಮ ಸಾಧನೆ ಲಕುಮಿ ಒಪ್ಪಿದಳು. 1 ವಾರುಣಿ ಗಿರಿಜೆ ಮೀನಕೇತನ ರಾಣಿ ಇಂದ್ರಾಣಿ ಮಿಕ್ಕಾನಲಿದಾಡುತಲಿ ಮೀನಕೇತನ ರಾಣಿ ಇಂದ್ರಾಣಿ ನಕ್ಕು ನಲಿದಾಡುತಲಿ ಆನಂದದಿ ಬಂದು ಕುಳಿತರು ತಮ್ಮ ಠಾಣೆಗೆ 2 ಚಿನ್ನದ ತಳಿಗೇಲಿ ಎಣ್ಣೆ ಅರಿಶಿಣ ಗಂಧ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಹೆಣ್ಣುಗಳ ಮಧ್ಯೆ ಇಳಿಸಿದರು3 ತಂದೆ ತಾತನ ಬಳಿಯ ಮಂದಾಕಿನಿ ವಾಗ್ವಿಯ- ರೊಂದಾಗಿ ಒಡಗೂಡಿ ರಂಗಯ್ಯನ ಕೈಗೆ ಒಂದಾಗಿ ಒಡಗೂಡಿ ರಂಗಯ್ಯನ ಕೈಯೊಳಗೆ ತಂದು ಅರಿಶಿಣ ಎಣ್ಣೆ ಗಂಧವಿತ್ತು4 ತಡಮಾಡಲಾಗದು ಕಡಲಶಯನ ನಿಮ್ಮ ಮಡದಿಯಂಗಕ್ಕೆ ತೊಡೆವುದೆನಲು ಮಡದಿಯಂಗಕ್ಕೆ ತೊಡೆವುದು ಎನಲಾಗಿ ಕಡು ಹರುಷದಿ ಸತಿಯಳ ನೋಡಿದನು 5 ಎನ್ನರಸಿ ಹೊನ್ನರಸಿ ಪ್ರಾಣದರಸಿ ಪಟ್ಟದರಸಿ | ಕನ್ಯೆ ಶಿರೋಮಣಿ ಪಾವನ ದೇಹಿ || ಕನ್ಯೆ ಶಿರೋಮಣಿ ಪಾವನ ದೇಹಳೆ ನಿನ್ನ | ಕನ್ನಡಿ ಮುಖವ ತೋರರಿಷಿಣವ ನಾ ಹಚ್ಚುವೆ 6 ತಂದೆ ನಂದನರಿಗೆ ಬಂಧು ಬಳಗ ಸುತ್ತ | ಹೊಂದಿದ ಜನರಿಗೆ ಹಲವರಿಗೆ || ಹೊಂದಿದ ಜನರಿಗೆ ಹಲವರಿಗೆ ಕದನ | ತಂದು ಹಾಕುವಳೆಂದು ಹಚ್ಚಿದನು 7 ತೂಗಿಸಿಕೊಂಬುವಳೆ ದೌತ್ಯಕ್ಕೆ ಸಲ್ಲುವಳೆ | ಬಾಗಿಲ ಕಾಯಿಸುವಳೆ ಬಲ್ಲಿದರ || ಬಾಗಿಲಕಾಯಿಸುವಳೆ ಬಲ್ಲಿದರನು ಬಿಡದೆ | ಸಾಗರನ ಮಗಳು ಎಂದು ತೊಡೆದನು 8 ಇಂದಿರಾದೇವಿ ಬಾ ಮಂದಿರಾಂಬುಜ ರಾಮ | ಸುಂದರ ಶ್ರೀವಾರಿ ಮಂಗಳಗಾತ್ರೆ || ಸುಂದರ ಶ್ರೀನಾರಿ ಮಂಗಳಗಾತ್ರೆ ಯೆಂದು | ಅಂಗಜ ಜನಕನು ನಗುತಲಿದ್ದ 9 ರಮಣಿಯ ದೇಹಕ್ಕೆ ಕಮಲನಾಭನು ಎದ್ದು | ವಿಮಲಕಸ್ತೂರಿ ಗಂಧವರಿಷಿಣ ಎಣ್ಣೆ || ವಿಮಲ ಕಸ್ತೂರಿ ಗಂಧವರಿಷಿಣ ಎಣ್ಣೆಯ | ಕ್ರಮದಿಂದ ಲೇಪಿಸಿ ಊಟಣಿಸಾರಿ 10 ಸಾಕಾರಗುಣವಂತಿ ತ್ರಿಲೋಕದ ಜನನಿ | ನಾಕಜವಂದಿತಳೆ ನಾಗಗಮನೆ || ನಾಕಜವಂದಿತಳೆ ನಾಗಗಮನೆ ಏಳೂ | ಶ್ರೀಕಾಂತನ ಸೇವೆಯ ಮಾಡೆಂದರು 11 ಅಂದ ಮಾತನು ಕೇಳಿ ಗಂಧ ಅರಷಿಣ ಕೊಂಡು | ನಿಂದು ಸಮ್ಮುಖದಲ್ಲಿ ರಂಗನ ನೋಡಿ | ನಿಂದು ಸಮ್ಮುಖದಲ್ಲಿ ರಂಗನ ನೋಡಿ ಹಿಗ್ಗಿ | ಚಂದ್ರವದನೆ ಪತಿಗೆ ಹಚ್ಚಿದಳು 12 ಗೋವಳರ ಎಂಜಲು ಆವಾಗ ತಿಂದವನೆ | ಮಾವನ್ನ ಕೊಂದವನೆ ಮಾಯಾಕಾರ || ಮಾವನ್ನ ಕೊಂದವನೆ ಮಾಯಾಕಾರನೆ ನಿನ್ನ | ಸೇವೆಗೆ ಶಕ್ತಳೆನುತ ಹಚ್ಚಿದಳು 13 ಬೆಣ್ಣೆ ಮೊಸರು ಕದ್ದು ಹೆಣ್ಣುಗಳ ಕೆಡಿಸಿ | ಮುನ್ನೆ ತೊತ್ತಿನ ಮಗನ ಮನಿಯ ಉಂಡ || ಮುನ್ನೆ ತೊತ್ತಿನ ಮಗನ ಮನಿಯಲುಂಡ ಹಿಂದೆ | ಹೆಣ್ಣಾಗಿ ಇದ್ದವನೆಂದು ಹಚ್ಚಿದಳು 14 ಎನ್ನರಸ ಚೆನ್ನರಸ ಪ್ರಾಣದರಸ ಪಟ್ಟಣದರಸ | ಭಿನ್ನವಖಿಳ ಜೀವಕ್ಕೆನ್ನ ಒಡೆಯ || ಭಿನ್ನವಖಿಳ ಜೀವಕ್ಕೆನ್ನ ಒಡೆಯ ಸಲಹಿಂದು | ಚೆನ್ನಾಗಿ ಅರಿಷಿಣ ಗಂಧ ಹಚ್ಚಿದಳು 15 ನಿತ್ಯ ಕಲ್ಯಾಣ ಪುರುಷೋತ್ತಮ ಸರ್ವೇಶ | ಸತ್ಯಸಂಕಲ್ಪ ಸಿದ್ಧ ಅಪ್ರಮೇಯಾ || ಸತ್ಯಸಂಕಲ್ಪ ಸಿದ್ಧ ಅಪ್ರಮೇಯನೆಂದು | ಮಿತ್ರೆ ಸರ್ವಾಂಗಕ್ಕೆ ಹಚ್ಚಿದಳು 16 ದೇವಿ ದೇವೇಶಗೆ ಈ ಉರುಟಣೆಯಿಲ್ಲ | ಆವಾವ ಬಗೆ ಎಲ್ಲ ತೋರಿಸುತ್ತ || ಆವಾವ ಬಗೆ ಎಲ್ಲ ತೋರಿ ವಧು-ವರಗಳಿಗೆ | ಹೂವು ಬಾಸಿಂಗವ ರಚಿಸಿದರು17 ಅಸುರ ವಿರೋಧಿ ವಸುದೇವನಂದನ | ಪಶುಪತಿ ರಕ್ಷಕ ಪರಮ ಪುರುಷ || ಪಶುಪತಿ ರಕ್ಷಕ ಪರಮ ಪುರುಷ ಎಂದು | ಹಸನಾಗಿ ಲೇಪಿಸಿ ಇತ್ತ ಜನರ 18 ಶೃಂಗಾರವಂತೇರು ರಂಗ ಶ್ರೀಲಕುಮಿಗೆ | ಮಂಗಳಾರತಿ ಎತ್ತಿ ಹರಸಿದರು || ಮಂಗಳಾರತಿ ಎತ್ತಿ ಹರಸಿ ದೇವರಮನೆಗೆ | ಅಂಗನೆಯಳ ಸಹಿತ ನಡೆಯೆಂದರಾಗ 17 ಎತ್ತಿಕೊಂಡನು ರಂಗ ಚಿತ್ತದ ವಲ್ಲಭೆಯ | ಮತ್ತೆ ಸುಗಂಧಿಯರು ಹೊಸ್ತಿಲೊಳಗೆ || ಮತ್ತೆ ಸುಗಂಧಿಯರು ಹೊಸ್ತಿಲೊಳಗೆ ನಿಂದು | ಪತ್ನಿಯ ಹೆಸರು ಪೇಳೆಂದರು ಆಗ 20 ಬೇಗ ಮಾರ್ಗವ ಸಾರಿ ತೂಗಲಾರನು ಇವಳ | ಸಾಗಿ ಪೋಗುವನೆಂದು ಪೇಳುತಿರಲು || ಸಾಗಿ ಪೋಗುವನೆಂದು ಪೇಳುತಿರಲು ಸ್ತ್ರೀ ಕೂಟ | ತೂಗವದೆಂತು ನಾಳೆ ನುಡಿಯೆಂದರು 21 ನಕ್ಕು ಸಂತೋಷದಲಿ ರುಕ್ಮಿಣಿ ಎಂದನು | ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ || ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ ಎನಲು | ಚಕ್ರಪಾಣಿ ಎಂದು ಪೇಳಿದಳು ಲಕುಮಿ 22 ಗಂಡ ಹೆಂಡತಿ ಪೋಗಿ ದಂಡ ಪ್ರಣಾಮಮಾಡಿ | ಮಂಡಲದ ಚರಿತೆ ತೋರಿದರು ಆಗ || ಮಂಡಲದ ಚರಿತೆ ತೋರಿ ವಧು-ವರಗಳಿಗೆ | ಕಂಡವರಿಗೆ ಮದುವೆಯೆನಿಸಿದರು 23 ದಂಪತಿಗಳು ಒಲಿದು ಇಂಪಾಗಿ ಉರುಟಣಿ | ಸೊಂಪಾಗಿ ಮಾಡಿದರು ಅನೇಕವಾಗಿ || ಸಂಪತ್ತು ಕೊಡುವನು ವಿಜಯವಿಠ್ಠಲರಾಯಾ 24
--------------
ವಿಜಯದಾಸ
ರಾಮ ಬಂದನೇನೆ | ಶ್ರೀ ರಘು ರಾಮ ಬಂದನೇನೆ|| ಪ್ರೇಮಿಕ ಜನರನು ಪೊರೆಯಲಾಗಿ|ಶ್ರೀರಘು ಪ ಜಾನಕಿ ಸಹಿತ ಲಕ್ಷಣರೊಡಗೂಡಿ | ಸ್ವಾನಂದದಿ ದಿಗ್ವಿಜಯಮಾಡಿ | 1 ಈರೇಳು ವರುಷಕೆ ಬರುವೆನೆಂದು ಮುನ್ನ | ಸಾರಿದ ನುಡಿ ಸತ್ಯಮಾಡಿ ದೋರಲು 2 ಹಾರೈಸಿ ನೋಡಲು ಕಣ್ಣಿಗೆ ಹಬ್ಬ | ದೋರಲು ಮೋಹದ ಮುದ್ದು ಮೊಗದಾ3 ಅವಧಿಯ ಮೀರಲು ಅಸುವ ತೊರೆವೆಸಿಂದು | ತವಕದಿ ಭರತನ ಪಾಲಿಸಲಿಕ್ಕೆ 4 ಸಾಕೇತ ಪುರಪತಿ ಸಾಮ್ರಾಜ್ಯಲೋಲನಾಗಿ | ಸಾಕುವ ಜಗಂಗುರು ಮಹೀಪತಿ ಪ್ರಭು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಮನ ನೋಡ ಬನ್ನಿರೆ ಭಾಮೆಯರೆಲ್ಲ ಪ ರಾಮನ ನೀವು ನೋಡ ಬನ್ನಿರೆ ಕಾಮಿತಾರ್ಥವಬೇಡಿಸುಖಿಸಿರೆ ಸ್ವಾಮಿ ನೀನೆ ಗತಿ ಎಂದರೆ ಕಾಮಿತಾರ್ಥವನೀವ ದೊರೆಯನ ಅ.ಪ ಧೂರ್ತ ರಾವಣನ Wಟ್ಟಿಸಿ ಖ್ಯಾತಿಯಿಂದಲಿ ರಥವನೇರಿ ಸೀತೆಸಹಿತ ಬರುವನಂತೆ 1 ಅಯೋಧಾü್ಯಪುರದಿ ನಿಂದು ಮರೆವ ಸಿಂಹಾಸನವನೇರುತ ಹರುಷದಲಿ ತಾ ಕೂಡುವನಂತೆ 2 ಮಾನನಿಧಿ ಪ್ರಾಣನಾಥವಿಠಲ ಸಾನುರಾಗದಿ ಭಜಿಸುವರಸುರ ಧೇನುವಂದದಿ ಸಲಹುವನು ಮಾನಿನಿಯರು ಮನ್ನಿಸುತ ಬೇಗ 3
--------------
ಬಾಗೇಪಲ್ಲಿ ಶೇಷದಾಸರು
ರಾಮನ ನೋಡಿದೆ ರಘುಕುಲ ತಿಲಕನ ಕಾಯ ಕೌಸಲ್ಯ ತನಯನ ಪ ತಾಮಸ ದೈತ್ಯರ ಲೀಲೆಯಲಿ ಕೊಂದು ಭೂಮಿ ಭಾರವನಿಳುಹಿದ ನಿಸ್ಸೀಮನಅ.ಪ. ತಾಟಕಾದಿಗಳ ಘೋರಾಟವಿಯಲಿ ಪಾಟುಪಡಿಸಿದ ಹಾಟಕಾಂಬರನ ತೋಟಿಗೊದಗಿದ ಮಾರೀಚಾದಿಗಳ ಆಟನಾಡಿಸಿದ ನೀಟುಗಾರ 1 ಹಲವು ಕಾಲದಿ ಶಿಲೆಯಾಗಿರ್ದ ಲಲನೆ ಅಹಲ್ಯೆಯ ಶಾಪವ ಹರಿಸಿ ಕಲುಷವ ಕಳೆಯುತ ಕುಲಸತಿ ಮಾಡಿದ ನಳಿನ ನಯನನ 2 ಹರನ ಧನುವನು ಸ್ಮರನ ಧನುವಿನಂತೆ ತ್ವರದಿ ಮುರಿದು ನಿಂದ ಸುಕುಮಾರನ ಧರಣಿಪ ಜನಕನ ಭಕ್ತಿಗೆ ಒಲಿದು ಧರಣಿಜೆಯ ವರಿಸಿ ಹರುಷವಿತ್ತನ 3 ತಾತನ ಭಾಷೆಯ ಪ್ರೀತಿಯಿಂ ಸಲಿಸೆ ಸೀತೆ ಸಹಿತ ಭ್ರಾತ ಲಕ್ಷ್ಮಣವೆರಸಿ ಆತುರದಿಂದಲಿ ಅರಣ್ಯವನೈದಿ ಕೌತುಕ ತೋರುತ ಚರಿಸಿದವನ4 ಖರದೂಷಣ ತ್ರಿಶಿರಾದಿ ರಕ್ಕಸರ ಅರೆಕ್ಷಣದಲಿ ತರಿದು ಬಿಸುಟವನ ಹಿರಣ್ಯಮೃಗವ ಬೆನ್ನಟ್ಟಿ ಕೆಡಹುತ ವರ ಜಟಾಯು ಶಬರಿಗೆ ಒಲಿದವನ 5 ವಾತಸುತನ ಕಂಡಾತನ ಪದುಳಿಸಿ ತರಣಿ ಸುತಗೆ ಅಭಯವನಿತ್ತ ಜಾತವೇದನೆದುರಲಿ ಸಖ್ಯವ ಮಾಡಿ ಘಾತಕ ವಾಲಿಯ ನಿಗ್ರಹಿಸಿದನ 6 ಕೋತಿ ಕರಡಿಗಳ ಹಿಂಡನು ಕೂಡಿಸಿ ಸೇತುವೆಗಟ್ಟಿಸಿ ಜಲಧಿಯ ದಾಟಿ ಪಾತಕಿ ರಾವಣನÀ ಶಿರಗಳ ಕಡಿದು ಸೀತೆಯ ಸೆರೆಯನು ಬಿಡಿಸಿದಾತನ 7 ಮೊರೆಯನು ಪೊಕ್ಕಾ ವರ ಭೀಷಣನ ಕರುಣದಿ ಕರೆದು ಕರವನು ಪಿಡಿದು ಧರೆಯಿದು ಸ್ಥಿರವಾಗಿರುವ ಪರಿಯಂತ ದೊರೆತನ ಮಾಡೆಂದ್ಹರಸಿದಾತನ 8 ಅಕ್ಕರೆಯಿಂದಲಿ ಅರ್ಚಿಸುವರಿಗೆ ತಕ್ಕಂತೆ ವರಂಗಳ ನೀಡುತಲಿ ಮಿಕ್ಕು ರಾಜಿಸುತಿಹ ಪಂಪಾಪುರದ ಚಕ್ರತೀರ್ಥದಿ ನೆಲೆಸಿಹನ 9 ಕಂತುವೈರಿ ವಿರುಪಾಕ್ಷಗೆ ತಾರಕ ಮಂತ್ರ ನಾಮಕನಾಗಿರುತಿರ್ಪನ ಯಂತ್ರೋದ್ಧಾರನಾಗಿರುವ ಹನುಮನ ಮಂತ್ರಿಯ ಮಾಡಿಕೊಂಡು ರಾಜಿಪನ 10 ದುಷ್ಟ ರಕ್ಕಸ ದಮನವ ಮಾಡಿ ಶಿಷ್ಟ ಜನರುಗಳಿಷ್ಟವ ಸಲಿಸುತ ಶ್ರಿಷ್ಟಿಗೊಡೆಯನೆನಿಸಿ ಮೆರೆಯುತಲಿರುವ ದಿಟ್ಟ ಶ್ರೀ ರಂಗೇಶವಿಠಲನ 11
--------------
ರಂಗೇಶವಿಠಲದಾಸರು
ರಾಮನ ನೋಡಿರೈ ಮಂಗಳ ನಾಮನ ಪಾಡಿರೈ ಪ ಪೂಜಿತನ ಸೀತಾನ್ವಿತನ ಅ.ಪ ದಶರಥ ಗೃಹದಿ ಸುಜನರ ಸಲುಹಿ ಬೆಸಗೊಳಲಂದು ಸೀತಾವರನಾ 1 ಚಿಂತಿಸು ರಾಮನ ಶುಭಲಕ್ಷಣಗಳನೇಕ ಕರ್ಮವಿಪಾಕ ದೊಳಗೀ ವಿಷಯಾ- ಖರೆಯ ಯತಿಕುಲವರ್ಯ ಚರಣ ಸುಜನೋದ್ಧರಣ 2 ಕುಂದಣ ಮಣಿಮಯದ ಕಿರೀಟ ಯುಕ್ತಲಲಾಟ ಚಿನ್ಮಯಗಾತ್ರದಿ ಮಿನುಗುವ ರತ್ನಾಭರಣ ಜಿತರವಿ ಕಿರಣ ಹರಣ ಕರುಣಾಪೂರ್ಣ ರಿಪುಕುಲಮಥನಾ 3 ಶುಭಕಾಯಾಕವಿಜನಗೇಯಾ ಹೇಮ ಕೊಳುವ ಮನದೊಳು ಪೊಳೆವ ವೇದಾ ಮನಕತಿಮೋದಾ ಮುನಿ ಸಂಶೇವÀ್ಯ 4 ಶುಭಚರಿಯ ಬಹು ಆ ಮಂದಿರದಿ ಪಾರಾ- ಸುನಾದ ಕೇಳಲು ಮೋದ ಪೊಕ್ಕರು ಗೃಹದಿ 5 ಪೊಂದಿರೆ ಮುದವ ಪುಡಕಿದರಾಗೆ ಬಾಲವ ಹೀಗೆ ಕುಂಡಲಿಶಯನ ಶ್ರೀರಾಮನೆ ದರ್ಶನವಿತ್ತ ಲಕ್ಷ್ಮಣಸಹಿತ6 ಧರೆಯೊಳು ಬಹುಯತಿಕರ ಪೂಜಿತ ಪದಪದುಮಸ- ಧಾಮ ನಿರುತ ಶೇವಿಸುವ ಧರೆಸುರ ನಿಕರಕೆ ಕೊಡುವ ಬೇಡಿದ ವರವ ಶರಣು ಜನಕೆ ಸುರ ತರುವೆನಿಸಿದ ಸುರಪ್ರಿಯ ಕಾರ್ಪರನಿಲಯ ತರು ಪಿಪ್ಪಲಗತ ಶಿರಿನಾರಸಿಂಹನೆ ಈತ ಶ್ರೀರಘುನಾಥಾ7
--------------
ಕಾರ್ಪರ ನರಹರಿದಾಸರು
ರಾಮನಾಮದಿ ಪಾಮರರಿಗೆ ಪ್ರೇಮ ಪುಟ್ಟುವುದೆ ಪ. ಭೃತ್ಯ ನ್ಯಾಯವರಿಯದ ಕಾಮಿಗಿದರೊಳು ನೇಮ ಬಪ್ಪುದೆ ಅ.ಪ. ದಾಶರಥಿ ಎನಿಸಿ ಜಗದೊಳು ಶ್ರೀಶನವತರಿಸೆ ಕೌಶಿಕನ ಮಖ ಘಾಸಿಗೈಯ್ಯುವ ದೋಷಿಗಳ ತಾ ನಾಶಗೈಸಿದ 1 ಶಿಲೆಯ ಪೆಣ್ಗೈದು ಲಲನೆ ಸೀತೆಯ ಒಲುಮೆಯಿಂ ವರಿಸಿ ಕುಲವನಳಿದನ ಛಲವ ಭಂಗಿಸಿ ಲಲನೆ ಸಹಿತದಿ ನೆಲಸೆ ಪುರದಲಿ 2 ಅನುಜ ಸ ಹಿತ ವನಕೆ ಬರೆ ಖ್ಯಾತಿ ರಾವಣನಾ ತಳೋದರಿ ಪ್ರೀತಿಸಲು ವಿಘಾತಿಗೈಸಿದ 3 ಮಾಯಾಮೃಗ ಕಂಡು ಪ್ರಿಯ ನೀಡೆನೆ ಸಾಯಕವನೆಸೆಯೆ ಕಾಯ ಬಿಡುತಿರೆ ಹೇಯ ರಾವಣ ಪ್ರಿಯಳನುಯ್ಯೆ ನೋಯ್ದ ಮನದಲಿ 4 ಬೆಟ್ಟವನೆ ಕಂಡು ಕುಟ್ಟಿ ವಾಲಿಯ ಪಟ್ಟ ಕಪಿಗಿತ್ತು ಶ್ರೇಷ್ಠ ಹನುಮಗೆ ಕೊಟ್ಟು ಉಂಗುರ ಪಟ್ಟದರಸಿಗೆ ಮುಟ್ಟಿಸೆಂದ 5 ಕೇಳಿ ಶ್ರೀ ವಾರ್ತೆ ತಾಳೀ ಹರುಷವ ಬೀಳು ಕೊಂಡಲ್ಲಿಂ ತಾಳೆ ಕೋಪವ ಕೇಳಿ ವನಧಿ ಸೀಳು ಆಗಲು ಶಿಲೆಯ ಬಿಗಿದ 6 ದುಷ್ಟ ರಾವಣನ ಕುಟ್ಟಿ ಶಿರವನು ಪಟ್ಟದರಸಿ ಕೂಡಿ ಶ್ರೇಷ್ಠ ಭರತಗೆ ಕೊಟ್ಟು ದಶರ್Àನ ಪಟ್ಟವಾಳಿದ ದಿಟ್ಟಯೋಧ್ಯೆದಿ 7 ರಾಮ ರಾಮನೆಂಬಾ ಹನುಮಗೆ ಪ್ರೇಮದಿಂದೊಲಿದು ಧಾಮ ಅಜಪದ ನೇಮಿಸಿ ಮುಂದೆ ಸೋಮನೆನಿಸಿದ ಭಾನು ವಂಶಕೆ8 ಬೆಟ್ಟದೊಡೆಯನ ಇಷ್ಟು ಮಹಿಮೆಯ ಮುಟ್ಟಿಮನ ಭಜಿಸಿ ದಿಟ್ಟ ಗೋಪಾಲಕೃಷ್ಣವಿಠ್ಠಲ ಶ್ರೇಷ್ಠನೆನ್ನುವ ಶ್ರೇಷ್ಠಗಲ್ಲದೆ 9
--------------
ಅಂಬಾಬಾಯಿ
ರಾಮಾ ನಿನ್ನಯ ದಿವ್ಯ ನಾಮಾ ನೆನೆವೆನು ರಾಮಾ ನಿನ್ನಯ ದಿವ್ಯ ನಾಮಾ ಪ್ರೇಮವ ಕೊಟ್ಟನ್ನಾ ನೇಮದೊಳಿರಿಸೊ ನೀ ಕರುಣದಿ ಪ ಚಿತ್ತ ಶುದ್ಧವ ಮಾಡಿ ಮತ್ತೆ ನಿನ್ನಯ ಪಾದ ನಿತ್ಯದಿ ನೆನೆವಂತೆ ಭಕ್ತಿಯೊಳಿರಿಸೊ ನೀ ಎನ್ನನು 1 ದಶರಥನುದರದಿ ಶಿಶುವಾಗಿ ಜನಿಸಿದೆ ಹೊಸ ಆಭರಣವಿಟ್ಟು ಕುಶಲಮಾತೆಯನು ನೋಡುವ 2 ಛಂದದಿಂದಲಿ ಆನಂದದೊಳಿಹ ರಾಮಾ ಚಂದ್ರನ ಮೊಗ ಅತಿ ಸುಂದರವಾಗಿರುವವನೇ 3 ಬಿಲ್ಲ ಬಾಣವಪಿಡಿದು ಎಲ್ಲಾ ದೈತ್ಯರ ಕೊಂದು ಅಲ್ಲೇ ಕೌಶಿಕಯಾಗ ಎಲ್ಲ ಸಲಹಿದೆ ಧೀರನೇ 4 ವಿಥುಳಾಪುರದಿ ಬಂದು ಅತುಳ ಧನುವ ಮುರಿದು ಸತಿ ಸೀತಾ ಸಹಗೂಡಿ ಪಿತನಾ ಪಟ್ಟಣವನು ಸೇರಿದೆ 5 ಮಾತೆಯ ವರ ಕೇಳಿ ನೀತಿಯಿಂದಲಿ ಅನು ಜಾತನ ಒಡಗೂಡಿ ಖ್ಯಾತಿಯಿಂದಲಿ ಪೋದಂತಹ 6 ಸರಯು ತೀರದಿ ಬಂದು ಪುರದ ಜನರ ಬಿಟ್ಟು ಭರದಿ ನಾವೆಯನೇರಿ ತ್ವರಿತದಿಂ ದಾಟಿ ನೀ ಪೋದೆ 7 ಭಕ್ತಿಯಿಂದಲಿ ಆ ಸಕ್ತ ಭರತನ ಕಂಡು ಯುಕ್ತಿಯಿಂದಲಿ ತೇಜೋಯುಕ್ತಪಾದುಕವನು ಕೊಟ್ಟೆನೀ 8 ಪುಸಿಯತಿಯಾಗಿ ಶೀತೆಯ ಅಸುರ ಕೊಂಡೊಯ್ದನೆಂದು ವ್ಯಸನದಿಂದಲಿ ಪೋಗಿ ಪಕ್ಷಿಯುದ್ಧರಿಸಿದೆ ಘಮ್ಮನೆ 9 ಶಾಂತಮೂರುತಿ ಹನುಮಂತರೆಲ್ಲರು ಕೂಡಿ ಅಂತರದಲಿ ಸೇತು ನಿಂತು ನೋಡುವೆ ನೀ ಛಂದದಿ 10 ಶರಣ ಬಂದ್ವಿಭೀಷಣನ ಕರುಣದಿಂದಲಿ ಕಾಯ್ದೆ ಸ್ಥಿರದಾಪಟ್ಟವಗಟ್ಟಿ ಹರುಷದೋಳ್ ನಿಲಿಸಿದೆ ಅವನನು 11 ವಾನರರೊಡಗೊಂಡು ಸೇನೆ ಸಹಿತಲೇ ದಶಾ ನನ ರಾವಣನಕೊಂದು ಮಾನಿನೀ ಸಹಿತನೀ ಬಂದಿಹೆ 12 ಪುಷ್ಪಕವನೆ ಏರಿ ಅಕಸ್ಮಾತದಲಿ ಬಂದು ಆಕ್ಷಣದಲಿ ಭರತ ರಕ್ಷಣ ಮಾಡಿದ ದೇವನೇ 13 ಪಟ್ಟಣದಲಿ ಮಾಹಾ ಪಟ್ಟವನೇರಿಸಿ ಶಿಷ್ಟ ಅಯೋಧ್ಯೆಯ ಪಟ್ಟಣವಾಳಿದೆ ರಾಮನೆ 14 ಬ್ರಹ್ಮಮೂರುತಿ ರಾಮಾಗಮನ ಚರಣದಿ ಸುಮ್ಮಾನದಲಿ ಶಾಂತಿ ತನ್ಮಯಗೊಳಿಸಾನಂದದಿ 15
--------------
ಶಾಂತಿಬಾಯಿ
ರಾಯ ಹರಿಯ ಪ್ರಿಯ ಕೃಷ್ಣರಾಯದಾರಿ ನೋಡುವನು ತೊರೆಯದಿ ಅಪ್ಪಣೆಯ ಬೇಡಿ ಎರಗಿ ನಿಂತಳು ಪ. ಹರಿಯ ಬದಿಯಲಿ ಹೋಗಿ ನೀನು ಪರಮ ಪ್ರೇಮದಿಂದಲೈವರು ಬರುವರು ಈ ಕ್ಷಣದಲಿ ಎಂದು ಎರಗಿ ಹೇಳಮ್ಮ1 ಚಿತ್ತಜನೈಯನ ನೋಡಿ ಚಿತ್ತಹರುಷ ಬಡಿಸೆವಮ್ಮವೃತ್ತಾಂತವ ಹೋಗಿ ಹೇಳೆ ಕೀರ್ತಿವಂತಗೆ2 ಮಿತ್ರೆ ದ್ರೌಪತಿಯು ದೂತೆಗೆ ತೃಪ್ತಿಪಡಿಸಿ ಭೋಜನಾದಿಮುತ್ತು ರತ್ನದ ವಸ್ತ ವಸ್ತ್ರಗಳೆ ಕೊಟ್ಟಳು 3 ಅಂಬುಜಾಕ್ಷೆ ದ್ರೌಪತಿಯುತಾಂಬೂಲ ಅಡಿಕೆ ಕೊಟ್ಟುಸಂಭ್ರಮದಿ ಆನೆ ಅಂಬಾರಿ ಕೊಟ್ಟಳು 4 ಕುಂತಿದೇವಿ ಮೊದಲಾದವರುಕಾಂತೆಯರ ಪರಿವಾರ ಸಹಿತ ಕಂತುನೈಯನ ಕರೆಯ ಬರಲು ನಿಂತಾರಂತ್ಹೇಳೆ 5 ಪಂಚ ಪಾಂಡವರ ಮಡದಿ ಪಾಂಚಾಲಿ ದೇವಿಯುತಾನು ಕೆಂಚೆಯರಿಂದ ಕೂಡಿಮುಂಚೆ ಬಾಹೋರಂತ್ಹೇಳೆ6 ಪನ್ನಂಗ ಶಯನನ ನೋಡದೆ ಅನ್ನ ಸೊಗಸವಮ್ಮ ನಮಗೆ ಚನ್ನರಂಗಯ್ಯನ ಮುಂದೆ ಇನ್ನು ನೀ ಹೇಳೆ 7 ಮುದ್ದು ರಂಗನಮುಖವ ನೋಡದೆ ನಿದ್ರೆ ಬಾರದಮ್ಮ ನಮಗೆ ಹದ್ದು ವಾಹನನ ಮುಂದೆ ಸುದ್ದಿ ನೀ ಹೇಳೆ 8 ವೀತ ದೋಷ ರಾಮೇಶನ ಪ್ರೀತಿ ಇರಲಿ ಅಂತೆ ಹೇಳಮ್ಮಆತನ ಕಾಣದೆ ಒಂದು ಮಾತು ಸೊಗಸದು 9
--------------
ಗಲಗಲಿಅವ್ವನವರು
ರುದ್ರಕುಮಾರನ ಚರಣಕ್ವಂದನೆ ಮಾಡಿ ವಿದ್ಯಾಭಿಮಾನಿ ವಾಣಿಯ ಸು - ಪದ್ಮ ಪಾದಗಳಿಗೆ ಎರಗಿ ನಾ ಪೇಳುವೆ ಶುದ್ಧವಾಗಿ ಕೊಡು ಮತಿಯ 1 ಶ್ರಾವಣಮಾಸ ಶುಕ್ಕುರುವಾರ ಶುಭಮೂರ್ತೆ (ಮುಹೂರ್ತೆ?) ಕಾಲದಿ ಕಮಲಾಕ್ಷಿಯನು ಆಲಯದೊಳಗಿಟ್ಟಾದರದಿಂದ ಪೂಜಿಸೆ ಬೇಡಿದಭೀಷ್ಟ ನೀಡುವಳು 2 ಇರುತಿರಲೊಂದು ಪಟ್ಟಣದಲ್ಲಿ ರಾಜನು ತನಯರಿಲ್ಲದ ಕಾರಣವು ವಿವಹದುತ್ಸವಕೆಂದು ತೆರಳೋ ಪತಿಯ ಕಂಡು ತೆಗೆದಿಟ್ಟಳಾತನಾಯುಧವ 3 ಪಟ್ಟದ ಕತ್ತಿಯ ಬಿಟ್ಟು ಬಂದೆನೆಂದು ಅಟ್ಟಿಹ ತನ್ನ ದೂತರನು ನೆಟ್ಟನೆರಡು ಕಾಲು ಚಾಚಿ ಕುಳ್ಳಿರಲಾಗ ತಟ್ಟನೆ ದಾಟಿ ನಡೆದನು 4 ಮೂರು ತಿಂಗಳು ಗರ್ಭಸಾಕ್ಯಾ (ವಾಸಕ್ಕಾ?)ಗಿ ಬಂದಿತು ನೀನೀಗ ದಾಟಿ ಪೋಗುವರೆ ಕೇಳಿ ಸಂಭ್ರಮದಿಂದ ಹೇಳೆ ರಾಜಗೆ ಬಂದು ತಾಳಿದ ಪರಮ ಹರುಷವನು 5 ಸದ್ದು ಮಾಡದೆ ಸೂಲಗಿತ್ತಿ ಕರೆಸಿ ತಾ- ನಿದ್ದ ವಾರ್ತೆಗಳ ಹೇಳಿದಳು ಮುತ್ತಿಲು ತುಂಬ್ಹೊನ್ನು ಕೊಡುವೆ 6 ಹುಡುಕುತ ಬಂದಳು ಕಡೆಯ ಬಜಾರಕ್ಕೆ ಬಡವ ಬ್ರಾಹ್ಮಣನ ಮಂದಿರದಿ ಮಡದಿಗೆ ಮೂರು ತಿಂಗಳು ಗರ್ಭವಾಗಿದೆ ಕÀಡೆಹಾಯ್ಸಲೆನ್ನ ಕರೆಸೆಂದ್ಲು 7 ಮೂರು ತಿಂಗಳ ರಾಜನರಸಿಗೆ ಮೊಗ್ಗೆಯು ಏಳು ತಿಂಗಳು ಹೂವ ಮುಡಿಸಿ ಎಂಟು ತಿಂಗಳಿಗೆ ಶ್ರೀಮಂತದುತ್ಸವ ಮಾಡಿ ಬಂತಾಗ ನವಮಾಸಗಳು 8 ವಿಪ್ರನ ಮಡದಿಗೆ ಒತ್ತಿ ಬಂದವು ಬ್ಯಾನೆ ಕಟ್ಟಿ ಕಣ್ಣುಗಳ ನಿಚ್ಚಣಿಕೆ ಹತ್ತಿ ಇಳಿದು ಹಡೆದಳ ಗಂಡುಕುಮಾರನ ಎತ್ತಿಕೊಂಡೊಯ್ದಳಾಕ್ಷಣವೆ 9 ಕಲ್ಲು ಗುಂಡನೆ ಹಡೆದಿಯೆ ನೀನೆಂಬಂಥ ಸೊಲ್ಲು ಕೇಳುತಲೆ ತಲ್ಲಣಿಸಿ ಎಲ್ಲಿದ್ದರೆನ್ನ ಕುಮಾರನು ಸುಖಬಾಳಲೆಂ- ದಲ್ಲಿ ನೇಮವ ನಡೆಸಿದಳು 10 ಜಾತಕ ಬರೆಸಿ ಸಕ್ಕರೆ ಸಗಟದಿಂದ್ಹಂಚಿ ದಕ್ಷಿಣೆ ತಾಂಬೂಲ ಸಹಿತ ಬ್ರಾಂಬರಿಗೆಲ್ಲ ಇಟ್ಟು ಭೋಜನವ ಮಾಡಿಸಿದ 11 ನಾಮಕರಣ ಜಾವಳ ಜುಟ್ಟು ಉಪÀನಯನ ಪ್ರೇಮದಿಂದ್ವಿದ್ಯವ ಕಲಿಸಿ ಸೋಮನಂದದಿ ಹೊರಗ್ಹೊರಟು ತ- ಮ್ಮಮ್ಮನ ನೋಡಿ ಮೋಹಿಸಿದÀನಾಕ್ಷಣದಿ 12 ಕತ್ತಲೊಳಗೆ ಬರುತಿರಲು ಬಾಗಿಲ ಮುಂದೆ ಕಟ್ಟಿದ ಗೋವು ಕಾಣದಲೆ ವತ್ಸದ ಕಾಲು ತುಳಿಯಲಾಗ ಅದು ಬಾಯಿ ಬಿಟ್ಟೊದರಿತು ಭಯದಿಂದ 13 ಅಮ್ಮ ನೀ ಬಾರೆ ತಮ್ಮಮ್ಮನರಿಯದವ ನಮ್ಮನು ಬಲ್ಲನೆ ಒಮ್ಮ್ಯಲ್ಲದೆರಡುಬಾರ್ಯಾಲಿಸ್ಯದರ ಮಾತು ತಮ್ಮಿ ್ಹರಿಯರನು ಕೇಳಿದನು 14 ಮಂದಾಕಿನಿಯ ಸ್ನಾನವ ಮಾಡಿ ಬಂದರೆ ಸಂದೇಹ ಪರಿಹಾರವಾಗುವುದು ಹಾ- ಗೆಂದು ಹೇಳಿದ ಹಿರಿಯರ ವಾಕ್ಯವ ಕೇಳಿ ಗಂಗಾಯಾತ್ರೆಗೆ ತೆರಳಿದನು 15 ನಡೆದು ಬಂದನು ನಡುಮಾರ್ಗದಿ ಪಟ್ಟಣ ಹಡೆದ ಮನೆಯ ಬಾಗಿಲಲ್ಲಿ ಕೊಡಬೇಕು ನಮಗಿಷ್ಟು ಸ್ಥಳಗಳೆಂದೆನುತಲಿ ನುಡಿದು ಪವಡಿಸಿದ ತಾನಲ್ಲಿ 16 ಹೊರಗಿಂದ ಶೆಟವಿ ಬಂದಳು ಮಹಾಲಕ್ಷುಮಿ ಒಳಗಿಂದ ಬಂದಳು ಎನ್ನ ವರಪುತ್ರ ಇವನ ದಾಟಲು ನಿನ್ನ ಶಿರವು ಸಿಡಿದು ಸಾ(ಸಹ?)ಸ್ರೊ ್ಹೀಳಾಗೋದೆನಲು17 ಅದು ಕೇಳಿ ಶೆಟವಿ ತಾ ತಿರುಗಿ ಪೋಗುತಲಿರೆ ಬದಿಯಲ್ಲಿ ಬದುಕಿದ್ದ ಶಿಶುವು ಇದು ನಿನ್ನ ಪುಣ್ಯದಿಂದುಳಿದಿತೆಂದೆನುತಿರೆ ಅಧಿಕ ಸಂತೋಷವಾಗಿ ಹೊರಟು 18 ಭಾಗೀರಥಿಯ ಸ್ನಾನವಮಾಡಿ ತಾನು ಪ್ರ- ಯಾಗಕೆ ನಡೆತರಲು ಬ್ಯಾಗ ಮಾಡಿದ ದಾನಧರ್ಮಕಾರ್ಯಗಳ ತಾ- ನಾಗ ಕಂಡನು ಚತುರ್ಹಸ್ತ 19 ನಾಲ್ಕು ಹಸ್ತಗಳ ಕಂಡಕಾರಣೇನೆಂದು ವ್ಯಾ- ಕುಲದಿಂದ ಕೇಳಿದನು ಸಾಕಿದವರು ಹಡೆದವರುಂಟು ನಿನಗೆಂದ್ವಿ- ವೇಕಬುದ್ಧಿ ಅವರು ಹೇಳಿದರು 20 ಗೊತ್ತಿಲೆ ಬಂದನು ಪಟ್ಟಣದೊಳಗೊಂಡು ಹೆತ್ತರಂದಿನದ (?) ಮಂದಿರದಿ ಹೊಸ್ತಿಲೊಳಗೆ ಅಡ್ಡಮಲಗಿದ್ದ ಕಾಲಕ್ಕೆ ಮತ್ತಾಗ ಬಂದಳು ಶೆಟವಿ 21 ಚೊಚ್ಚಿಲ ಮಗನ ದಾಟಲು ನಿನ್ನ ಶಿರವು ಬಿಚ್ಚಿ ಸಾಸ್ರೊ ್ಹೀಳಾಗೋದೆನಲು ಲಕ್ಷ್ಮಿ ಮಾತಿಗೆ ತಿರುಗಿದಳೆನ್ನ ತುತ್ತಿಗೆ ಮಿತ್ರ್ಯಾದ ಪಾಪಿ ಎಂದೆನುತ 22 ಸತ್ಯವಂತನೆ ನಿನ್ನ ಪುಣ್ಯದಿಂದಿಬ್ಬರು ಪುತ್ರರು ಉಳುದÀರಂತಿಹರು
--------------
ಹರಪನಹಳ್ಳಿಭೀಮವ್ವ