ಒಟ್ಟು 972 ಕಡೆಗಳಲ್ಲಿ , 100 ದಾಸರು , 803 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೆನ್ನ ಶ್ರೀಲೋಲ ಕೃಪಾಳೋ ಬಾಲಕನುಕ್ತಿಯ ಲಾಲಿಸಿ ಕೇಳೋ ಪ ಕಾರಾಗಾರ ಶರೀರದಯುಗಳ ದಾರಾಪತ್ಯದ ದಾರಿಯನಿಗಳ 1 ಚಿತ್ತವ ಹಾರಿಸುತಿಹರು 2 ಕೊನೆವರು ದುರ್ಮೃಗವನು ಪೋಲುತಲಿ 3 ತಾಪತ್ರಯ ಪರಿತಾಪದ ಬೇಗೆ | ಈ ಪರಿಮೋಚನ ಶ್ರೀಪತಿ ಹೇಗೆ 4 ಶರಣರ ಪೊರೆಯುವ ವರದವಿಠಲನೆ 5
--------------
ಸರಗೂರು ವೆಂಕಟವರದಾರ್ಯರು
ಪಾಲಿಸೊ ಮನ್ಮಾನಸಾ | ಮಂದಿರಶ್ರೀಲೋಲ ಭಕ್ತ ಪೋಷ ಪ ಭಂಜನ ರಾಮ | ಗಾಳಿ ಸುತಗೆ ಪ್ರೇಮ ಅ.ಪ. ದೈತ್ಯ ಜನರು ಬಹಳಾ | ಎನ್ನ ತಮ್ಮಭೃತ್ಯನ ಮಾಡಿ ಜಗಳಾ ||ನಿತ್ಯವಾಡುತಲೆನ್ನ | ಕೃತ್ಯಾಗಳಿಗೆ ದೋಷಎತ್ತಿಸುತಿಹರಯ್ಯ ದೈತ್ಯ ನಿಷೂದನ 1 ಸಂಚೀತಾಗಾಮಿ ನಾಶಾ | ಗೈ ಭವವಂಚೀತನಿಹೆ ಶ್ರೀಶಾ ||ಹೆಂಚು ಹಾಟಕ ಸಮ | ಸಂಚಿಂತನೆಯ ಕೊಟ್ಟುಕೊಂಚ ಮತಿಯ ಕಳೆ | ವಾಂಛಿತಾರ್ಥದ ಹರಿ 2 ಜನ್ಮಾಜನ್ಮವು ಬರಲೀ | ತವಸ್ಮøತಿಕರ್ಮಾಕರ್ಮದೊಳಿರಲೀ ||ಭರ್ಮ ಗರ್ಭನಯ್ಯ | ಸುಮ್ಮನಸರ ಪ್ರೀಯನಿರ್ಮಲ ಭಕ್ತಿಯಿತ್ತು | ಹಮ್ರ್ಯದೊಳಗೆ ತೋರೊ 3 ಸುರರು ಭೋಕ್ತ ಭಂಜನ ಭವ 4 ಭವ ಭವ | ಕಾರುಣ್ಯಾತ್ಮಕ ದೇವ 5
--------------
ಗುರುಗೋವಿಂದವಿಠಲರು
ಪಾಲಿಸೊ ಶ್ರೀನಿವಾಸ ಜಗದೀಶ ಪ ಮೇಲುಗಿರೀಶ ಹೃತ್ಕುಮುದನಿವಾಸ ಸತೀಶ ನೀನೆ ಅವಿನಾಶನೆ ಅನಿಶ ಅ.ಪ ಅನಿಮಿತ್ತ ಬಂಧು ನೀ ನಿನ್ಹೊರತು ಅನ್ಯರುಂಟೇ ಅನಪೇಕ್ಷನು ನೀ ದೀನರಕ್ಷನೆ ನಾನೇನರ್ಪಿಸಬಲ್ಲೆ ನೀ ಬಲ್ಲೆ ಅನುದಿನ ಮನೋವಾಚಕಾಯದಿ ನಾನೆಸಗುವುದು ಬಲ್ಲೆ ಅಲ್ಲಲ್ಲೇ ಘನಮಹಿಮನೆ ಎನ್ನ ಮನದಲ್ಲಿ ಅನುದಿನ ನಿನ್ನ ನೆನೆಯುವುದನೆ ಇತ್ತು ಕೊನೆಗಾಣಿಸು ಇನ್ನು 1 ಸತ್ಯಸಂಕಲ್ಪ ನೀ ನಿತ್ಯನೂತನಪ್ರಭುವೇ ಅತ್ಯಧಿಕದಿ ಭಕ್ತೋತ್ತಮರು ನಿತ್ಯ ಸೇವಿಸುತಿಹರೋ ಅವರ ಭೃತ್ಯನೆನಿಪ ಸಂ- ಪತ್ತನಿತ್ತು ಆಪತ್ತು ಹರಿಸಿ ಭಕ್ತಿಯ ನೀಡಯ್ಯ ಕರ್ಮ ಬೆನ್ಹತ್ತಿ ಹತ್ತಿ ಆಸೆ ಪೊತ್ತು ಕೊನೆಗೆ ನಾ ಉನ್ಮತ್ತನಾದೆ 2 ಪ್ರಣವಸ್ತಗೆ ದೇವಾ ನೀ ಪ್ರಣತ ಕಾಮದ ಕಾವಾ ಪ್ರಣತ ಜನರ ಮುಖ್ಯಪ್ರಾಣಾಂತರ್ಗತ ಫಣಿರಾಜಶಯ್ಯ ಹೇ ಜೀಯ್ಯ ಗುಣಮಣಿ ಶ್ರೀ ವೇಂಕಟೇಶ ಕ- ರುಣಾಕರ ಇನ್ನು ನಿನಗೆಣೆಯ ದೊರೆಯೆ ಮಣಿದು ಬೇಡುವೆ ನಿನ್ನ ದಣಿಸಲಾಗದು ಇನ್ನೂ ಧಣಿಯು ನೀ ಉರಗಾದ್ರಿವಾಸ ವಿಠಲ 3
--------------
ಉರಗಾದ್ರಿವಾಸವಿಠಲದಾಸರು
ಪಾಲಿಸೋ ಗಂಗಾಧರ ಪಾಲಿಸೋ ಪ. ಪಾಲಿಸೊ ಗಂಗಾಧರನೆ | ಮಧ್ಯ ಫಾಲದಿ ನಯನ ಉಳ್ಳವನೆ | ಆಹ ಶ್ರೀಲೋಲನ ಗುಣಜಾಲವ ಸ್ಮರಿಸುತ್ತ ಲೀಲೆಯಿಂ ಭಕ್ತರ ಪಾಲಿಸುತಿಪ್ಪನೆ ಅ.ಪ. ಬ್ರಹ್ಮನ ಭ್ರೂಮಧ್ಯೆ ಜನಿಸಿ | ಬಹು ದುರ್ಮತಿಗಳನೆ ಮೋಹಿಸಿ | ಕು ಧರ್ಮದ ಶಾಸ್ತ್ರವ ರಚಿಸಿ | ಅಂ ಧತಮ್ಮಸಿಗವರ ಕಳಿಸಿ | ಆಹ ನಿರ್ಮಲ ಮನದಲ್ಲಿ ಬೊಮ್ಮನಯ್ಯನ ಭಜಿಸಿ ನಿತ್ಯ ರಮಿಸುತಲಿಪ್ಪನೆ 1 ಕಂಜನಾಭನ ಮೊಮ್ಮಗನೆ | ಖಳರ ಭಂಜಿಸುವಂಥ ಬಲಯುತನೆ | ಮನ ರಂಜನ ರೂಪಾಕೃತನೆ | ಖಳ ಗಂಜಿ ಹರಿಯಿಂದ ರಕ್ಷಿತನೆ | ಆಹ ಅಮೃತ ಮಥಿಸುವಾಗ ನಂಜುದ್ಭವಿಸೆ ಕುಡಿದು ನಂಜುಂಡನೆನಿಸಿದೆ 2 ಕಪಿಲನದಿ ತೀರದಲ್ಲಿ | ಬಹು ತಪಸಿಗಳಿಗೆ ಒಲಿಯುತಲಿ | ಭಕ್ತ ರಪರಿಮಿತ ಬರುತಿಲ್ಲಿ | ನಿತ್ಯ ಜಪಿಸುತ್ತ ನಿನ್ನ ಸ್ತೋತ್ರದಲಿ | ಆಹ ಗುಪಿತದಿಂದ್ಹರಿ ಭಕ್ತರಪವರ್ಗದೊಡೆಯ ನಿನ್ನ ಲ್ಲಿಪ್ಪನೆಂತೆಂದು ಜಪಿಸುತ್ತಲಿಪ್ಪರೊ3 ಗಂಗಾಧರನೆನಿಸಿದನೆ | ಅಂತ ರಂಗದಿ ಹರಿಯ ತೋರುವನೆ | ಉಮೆ ಕಂಗಳಿಗಾನಂದಪ್ರದನೆ | ನಿತ್ಯ ರಂಗನಾಥನ ಪೂಜಿಸುವನೆ | ಆಹ ಜಂಗಮ ಜೀವರ ಮನದಭಿಮಾನಿಯೆ ಲಿಂಗರೂಪದಿ ಜನರ ಕಂಗಳರಂಜನೆ4 ಅಪಾರ ಮಹಿಮನ ಗುಣವ | ಬಹು ರೂಪಗಳನೆ ನೋಡುತಿರುವ | ನಿತ್ಯ ಶ್ರೀಪತಿ ನರಹರಿಯ ನೆನೆವ | ಮುಂದಿ ನಾ ಪದವಿಗೆ ಶೇಷನಾಗ್ವ | ಆಹ ಪರಿ ಪರಿ ಗೋಪಾಲಕೃಷ್ಣವಿಠ್ಠಲನ ಧ್ಯಾನವ ನೀಡೊ5
--------------
ಅಂಬಾಬಾಯಿ
ಪಾವಮಾನಿಯೆ ತವ | ಯಾವ ಮಹಿಮೆಯೊಳೇಕಭಾವ ಪೊಗಳಲು ಆವ | ದೇವತೆಗಳಿಗಳವೇ ಪ ಶ್ರೀವರನಂಘ್ರಿಯ | ಸೇವೆಗೈವಲಿ ಬಹು | ಧಾವಿಸೀ |ಬಹು ಎಚ್ಚರದಿ ಸೇವಿಸೀ ||ನಿರುತ ಭಕ್ತಿಯ | ಭಾವದಲಿ ದುರಿ | ತಾವಳಿ ವಿಭಾವಸುನೀ ವೊಲಿದು ಭೃ | ತ್ಯಾವಳಿಯ ಪಾಲಿಪೆ | ಸಾರ್ವಕಾಲ ಮ-ತ್ತೋರ್ವರಿಲ್ಲವೊ | ದೇವರೊತ್ತಮ | ದೇವ ನೀನೇ ಅ.ಪ. ಸೂರ್ಯ ಮೋಚನ |ಆಶಿಸುತಲಿ ಹಾರಿ | ದೋಷವ ಕಳೆಯಲು | ಯತ್ನೀಸೆ ಆ ಸುಮಹದಾಕಾರ ಶೃಣಗೈದೀವಾಸವನು ನಿನ ಘಾತಿಸಲು ಕುಲಿಶದೀ ಅದಕಂಡು ತವ ಪಿತಶ್ವಾಸಗಳ ಬಲು ಪರಿಯ ರುದ್ಧಿಸಲು | ಮೂರ್ಲೋಕ ತಪಿಸೇಅಸುರರು ವಿಧಿವಿಧದಿ ಮೊರೆ ಇಡಲೂ | ಆಲೈಸ ನಾಲ್ಮೊಗಶ್ವಾಸ ಸತಿಯನು ಸೂಸಿ ಸೂಚಿಸಲೂ | ಅದಕೇಳಿ ಮತ್ತೆಲೇಸುಗೈಯ್ಯಲು ಮನವ ಮಾಡಲೂ ವಾಸವಾದ್ಯರಶ್ವಾಸ ಮಾಡುವ ತೆರನ ಮಾಡೆಯ್ದೊಕ್ಲೇಶನಾಶನ ಶ್ವಾಸಮಾನಿ ಮಹಾ ಕೃಪಾಳೊ 1 ವ್ರಾತ ಮಣಿ ರಘು | ಜಾತಗಿತ್ತೆಯೊ | ಮಾತರಿಶ್ವಾ 2 ಪುಂಡರೀಕಾಕ್ಷ ಉರ ಬಗೆದು ಕರುಳಕೊಂಡು ಕೊರಳಲಿ ಧರಿಸೀ | ನರ ಮೃಗನ ಲೀಲೆಕಂಡು ದ್ವಯೆ ಬಲ ತಪಿಸೀ | ಅರಕ್ಷೌಹಿಣಿ ಮುಂ-ಕೊಂಡು ನೀನೆ ಸಂಹರಿಸೀ | ಕೌರವನ ತೊಡೆಖಂಡಿಸುತವನ ಛೇದಿಸೀ |ಅಂಡಜಾಧಿಪವಹಗೆ ಅರ್ಪಿಸಿ | ನಿಂದೆ ಭೀಮಾ 3 ಅದ್ವೈತ ಸಿದ್ಧಿಲಿಹೇಯ ಬಹಳವ ನೀನೆ ತೋರಿಸೀ | ಬದರಿಯಲಿ ಬಾದರಾಯಣರಿಂದ ಉಪದೇಶೀಸಿ | ಮತ್ತಿಲ್ಲಿ ಬರುತಲಿಧೇಯ ಸಾಧಿಸೆ ಗ್ರಂಥ ಬಹು ರಚಿಸೀ | ಕುಭಾಷ್ಯಗಳ ಬಹುಹೇಯತ್ವವನೆ ಸಾಧಿಸೀ | ವಾದ ಕಥೆಯಲಿಮಾಯಿಗಳ ಬಲುಪರಿಯ ಸೋಲಿಸೀ |ಕಾರ್ಯ ಸರ್ವವ | ರಾಯ ಕೃಷ್ಣಗೆ ಅರ್ಪಿಸಿದೆ ಮಧ್ವಾ 4 ಪರಿ ವ್ಯಾಪ್ತನೆ | ಅಧ್ಯರ್ಥ ರೂಪಿಅಪ್ರಾಪ್ಯ ಅಶಕ್ತಿ ರಹಿತಾನೇ |ವ್ಯಾಪಿಸುತ ಜಗ | ವೀಪರೀಯಲಿ | ಮಾಳ್ಪೆ ಪ್ರಾಣಾ 5 ಮೋಕ್ಷಾಧೀಚ್ಛೆಯ ವರ್ಜ | ಅಚ್ಛಿನ್ನ ಭಕುತಾನೇದಕ್ಷಿಣಾಕ್ಷಿ ಗೋ | ವತ್ಸ ರೂಪಾನೇ ||ಅಕ್ಷಿಯೋಳಿಹ ತ್ರಿದಶಾ | ದ್ಯಕ್ಷರಿಂದಲಿ ಸಂ | ಸೇವ್ಯಾನೇ |ಕಂಠದಲಿ ನೀ ಹಂಸೋಪಾಸಕನೇ |ಶಬ್ದಗಳ ನುಡಿದು ನುಡಿಸುತಿರುವಾನೆ | ಕೂರ್ಮರೂಪಿ ಸಲಕ್ಷಣದಿ ಬ್ರಹ್ಮಾಂಡ ಧಾರಕನೆ | ಸಪುತ ಸ್ಕಂದಗತಇಚ್ಛೆಯಲಿ ಲೋಕಧಾರಕನೆ | ಬೃಹತಿ ಸಾಸಿರವಾಚ್ಯನೆಂದೆನಿಸುತ್ತ ಸ್ತುತ್ಯಾನೆ | ಪತ್ಯಬಿಂಬ ಮುಖ್ಯನೆಈಕ್ಷಿಸುವೆ ಸರ್ವತ್ರ ಹರಿಯನ್ನೆ | ಮುಂದಿನಜ ಅಪರೋಕ್ಷವನು ಪಾಲಿಸೆಂಬೇನೆ ||ಮೋಕ್ಷದನೆ ಕರುಣಾ ಕಟಾಕ್ಷದಿ | ಈಕ್ಷಿಪುದು ಪವನ 6 ಜೇಷ್ಠ ಶ್ರೇಷ್ಠನೆ ಸ | ಮಷ್ಟಿ ರೂಪನೆ ಪವನ |ವ್ಯಷ್ಟಿರೂಪದಿ ಜಗದಿ | ವರೀಷ್ಟನೇ ||ನಿಷ್ಠೇಲಿ ಭಜಿಪರಿ | ಗಿಷ್ಟಾರ್ಥವನೆ | ಸಲಿಸೂವೇ |ಅತಿರೋಹಿತ ವಿಜ್ಞಾನಿ ಎನಿಸಿರುವೆ ||ಸಕಲ ಗುಣಗಣ ಭೋಕ್ತøವೆನಿಸಿರುವೆ | ಸಕಲ ಜ್ಞಾನೋಪದೇಷ್ಟನೆಂದೆನಿಸಿ ಕರೆಸೂವೆ | ಶಿವ ಶೇಷ ಖಗಪರಿನಿಷ್ಟ ಗುರು ನೀನೆ ಎನಿಸಿರುವೆ ಸಜಾತಿ ಗುಣ ಅಯುತವರಿಷ್ಟನು ನೀನು ಆಗಿರುವೆ | ವಿಜಾತ್ಯನಂತ ಗುಣಗರಿಷ್ಟ ರೂಪಿ ಎನಿಸಿರುವೇ | ವೇದಾನುಕ್ತ ಗುಣವಿಶಿಷ್ಟ ರೂಪದಲಿಂದ ಮೆರೆಯುವೇ ||ಇಷ್ಟ ಗುರು ಗೋವಿಂದ ವಿಠ್ಠಲ | ಪ್ರೀತಿ ಪಾತ್ರನು ಆದ ಪ್ರಾಣ 7
--------------
ಗುರುಗೋವಿಂದವಿಠಲರು
ಪುಟ್ಟಿದನು ಜಗದೀಶ | ಜಗಭಾರ ನೀಗಲುವೃಷ್ಣಿಕುಲದಲಿ ಈಶ | ದೇವಕಿಯ ಜಠರದಿಕೊಟ್ಟು ಅವಳಿಗೆ ಹರ್ಷ | ಕರುಣಾಬ್ದಿ ಭೇಶ ಪ ಅಟ್ಟಹಾಸದಿ ದೇವದುಂದುಭಿ | ಶ್ರೇಷ್ಠವಾದ್ಯಗಳೆಲ್ಲ ಮೊಳಗಲುಅಷ್ಟಮಿಯ ದಿನದಲ್ಲಿ ಬಲು ಉ | ತ್ಕøಷ್ಟದಲ್ಲಿರೆ ಗ್ರಹಗಳೆಲ್ಲವು ಅ.ಪ. ಪರಿ ದೇ-ವಕ್ಕಿಯಲಿ ಉದ್ಭವಿಸೀ | ಸಜ್ಜನರ ಹರ್ಷೀಸಿ ||ವಕ್ರಮನದವನಾದ ಕಂಸನು | ಕಕ್ಕಸವ ಬಡಿಸುವನು ಎನುತಲಿನಕ್ರಹರ ಪ್ರಾರ್ಥಿತನು ದೇ | ವಕ್ಕಿ ವಸುದೇವರಿಂದಲಿ 1 ದೇವ ಶಿಶುತನ ತಾಳೀ | ನಗುಮೊಗವ ತೋರಲುದೇವ ವಾಣಿಯ ಕೇಳೀ | ಅನುಸರಿಸಿ ಆದ ವಸುದೇವ ತನಯನ ಕೈಲೀ | ಕೊಂಡಾಗ ಬಂಧನಭಾವ ಕಳಚಿತು ಕೇಳೀ | ಶ್ರೀ ಹರಿಯ ಲೀಲೇ ||ಪ್ರಾವಹಿದ ಸರಿದ್ಯಮುನೆ ವೇಗದಿ | ಭಾವ ತಿಳಿಯುತ ಮಾರ್ಗವೀಯಲುಧೀವರನು ದಾಟುತಲಿ ಶಿಶು ಭಾವದವನನ ಗೋಪಿಗಿತ್ತನು 2 ವಿಭವ ||ತಂದು ಶಿಶು ಸ್ತ್ರೀಯಾಗಿ ಮಲಗಿರೆ | ಬಂದು ಕಂಸನು ಕೈಲಿ ಕೊಳ್ಳುತಕಂದನಸು ಹರಣಕ್ಕೆ ಯತ್ನಿಸೆ | ಬಾಂದಳಕ್ಕದು ಹಾರಿ ಪೇಳಿತು 3 ದುರುಳ ಭಯವನೆ ಪೊಂದಿ ತೆರಳುತತರಳರಸುಗಳ ನೀಗ ತನ್ನಯ | ಪರಿಜನಕೆ ಅಜ್ಞಾಪಿಸಿದ ಕಂಸ 4 ಆರೊಂದನೆಯ ದಿನದಿ | ಗೋಕುಲಕೆ ಬಂದಳುಕ್ರೂರಿ ಪೂಥಣಿ ವಿಷದಿ | ಪೂರಿತದ ಸ್ತನ ಕೊಡೆಹೀರಿ ಅವಳಸು ಭರದಿ | ಮೂರೊಂದು ಮಾಸಕೆಭಾರಿ ಶಕಟನ ಮುದದಿ | ಒದೆದಳಿದೆ ನಿಜಪದದಿ ||ಮಾರಿ ಪೂಥಣಿ ತನುವನಾಶ್ರಿತ | ಊರ್ವಶಿಯ ಶಾಪವನೆ ಕಳೆಯುತಪೋರ ಆಕಳಿಸುತ್ತ ಮಾತೆಗೆ | ತೋರಿದನು ತವ ವಿಶ್ವರೂಪ 5 ಭಂಜನ ||ಪಾನಗೈಯ್ಯುತ ದಾನ ವನ್ಹಿಯೆ | ಹನನ ವಿಷತರುರೂಪಿ ದೈತ್ಯನ ಧೇನುಕಾಸುರ ಮಥನ ಅಂತೆಯೆ | ಹನನ ಬಲದಿಂದಾ ಪ್ರಲಂಬನು6 ಪರಿ ಗೋವರ್ಧನ | ಶಂಖ ಚೂಡನ ಶಿರಮಣಿಯು ಬಲು ಅಪಹರಣ | ಅರಿಷ್ಟಾಸುರ ಹನನ ||ಹನನಗೈಯ್ಯಲು ಕೇಶಿ ಅಸುರನ | ಘನಸುವ್ಯೋಮಾಸುರನ ಅಂತೆಯೆ ಮನದಿ ಯೋಚಿಸಿ ಕಂಸ ಕಳುಹಿದ | ದಾನ ಪತಿಯನು ಹರಿಯ ಬಳಿಗೆ 7 ಬಲ್ಲ ಮಹಿಮೆಯ ಹರಿಯ | ಅಕ್ರೂರ ವಂದಿಸಿಬಿಲ್ಲಹಬ್ಬಕೆ ಕರೆಯ | ತಾನೀಯೆ ಕೃಷ್ಣನುಎಲ್ಲ ತಿಳಿಯುತ ನೆಲೆಯ | ಪರಿವಾರ ಸಹಿತದಿಚೆಲ್ವ ರಥದಲಿ ಗೆಳೆಯ | ಅಕ್ರೂರ ಬಳಿಯ ||ಕುಳ್ಳಿರುತ ಶಿರಿ ಕೃಷ್ಣ ತೆರಳುತ | ಅಲ್ಲಿ ಯಮುನೆಲಿ ಸ್ನಾನ ವ್ಯಾಜದಿ ಚೆಲ್ವತನ ರೂಪಗಳ ತೋರುತ | ಹಲ್ಲೆಗೈದನು ಗೆಳೆಯ ಮನವನು 8 ಬವರ | ಗೈವುದಕೆ ಬರ ಹರಿಹಲ್ಲು ಮುರಿಯುತ ಅದರ | ಸಂಹರಿಸಿ ಬಿಸುಡಲುಮಲ್ಲ ಬರೆ ಚಾಣೂರ | ಹೂಡಿದನು ಸಂಗರ ||ಚೆಲ್ವ ಕೃಷ್ಣನು ತೋರಿ ವಿಧ್ಯೆಯ | ಮಲ್ಲನನು ಸಂಹರಿಸುತಿರಲು ಬಲ್ಲಿದನು ಬಲರಾಮ ಮುಷ್ಟಿಕ | ಮಲ್ಲನನು ಹುಡಿಗೈದು ಬಿಸುಟನು 9 ಜಲಧಿ | ಆವರಿಸಿ ಬರುತಿರೆಹರಿಯ ಬಲ ಸಹ ಭರದಿ | ಸಂಹರಿಸಿ ಅವರನುಕರಿಯ ವೈರಿಯ ತೆರದಿ | ಹಾರುತಲಿ ಮಂಚಿಕೆಲಿರುವ ಕಂಸನ ಶಿರದಿ | ಪದಮೆಟ್ಟಿ ಶಿಖೆ ಪಿಡದಿ ||ಗರುಡನುರಗನ ಪಿಡಿದು ಕೊಲ್ಲುವ | ತೆರದಿ ಕೃಷ್ಣನು ಪಿಡಿದ ಕಂಸನ ಕರದಿ ಖಡ್ಗದಿ ಶಿರವ ನಿಳುಹಲು | ನೆರೆದ ಸುಜನರು ಮೋದಪಟ್ಟರು 10 ಮಂದ ಮೋದ ಪಡಿಸುವ 11
--------------
ಗುರುಗೋವಿಂದವಿಠಲರು
ಪುಣ್ಯ ದೊರಕುವುದು ಅನು ಗಣ್ಯವಾಗಿದ್ದ ಸತಿಯಿದ್ದ ಜನರಿಗೆ ಪ ಬಡತನವಿದ್ದರು ನೆರೆಹೊರೆ ಮನೆಯಲ್ಲಿ ನುಡಿ ಬಿಚ್ಚಿ ಪೇಳದೆ ಸೌಮ್ಯಳಾಗಿ ಬಿಡದೆ ಮಾಡುವ ಗೃಹಕೃತ್ಯಂಗಳು ಜಗ ಅನುದಿನ 1 ವಿಪರೀತ ಕಾಲಗಳಟ್ಟಿದ ಕಾಲಕ್ಕು ಸ್ವಪನಾದಿಯಪ ಕಳವಳಿಸದಲೇ ಪತಿ ಸೇವೆ ಅಫಲದಲ್ಲಿ ಮಾಡಿ ಒಲಿದೊಲಿದಾಡುವ2 ಲಾವಣ್ಯ ಪುರುಷರ ಕಂಡರು ಮನದಲ್ಲಿ ಭಾವಿಸಬೇಕು ಸಹೋದರರು ಎಂದು ವಿಭೂತಿ ರೂಪವ ನಿತ್ಯ 3 ಬಂದು ತಂದರೆ ಸಾವಿರ ಮಾಡಿ ಚಿಂತಿಸಿ ಇಂದಿರೇಶನೆ ಪತಿರೂಪವೆಂದು ಅಂದದದಲಿದ್ದ ವಿಭವಾನುಸಾರ ಆ ನಂದವಾಗಿ ಸಂಸಾರದೊಳಗಿರೆ 4 ಪತಿಯ ಜನಕ ಮಾತೃ ಮಿಗಿಲಾದ ಜನರಿಗೆ ಹಿತವಂತಳಾಗಿ ನುಡಿಸಿಕೊಳುತಾ ಗಾತ್ರ ಸರ್ವದಾ ಪ್ರತಿದಿನ ಸುವಿನುವಳಾ ನಾರಿ ಅಧಿಕಾರಿ 5 ಚಕೋರ ಚಂದ್ರಮನಲ್ಲಿ ಮನಸು ಇಟ್ಟು ಸುಖಬಡುವಂತೆ ನಾನಾ ಪ್ರಕಾರ ಕಕುಲಾತಿಯಿಂದ ಕಾಮುಕಳಾಗದೆ ಮಹಾ ಭಕುತಿಯಿಂದಲಿ ಗುರು ಹಿರಿಯರ ಸಮ್ಮತ 6 ಸಂತಜನರೆಂಬ ಕ್ಷೀರಾಂಬುಧಿ ಮಧ್ಯ ಸಂತತ ಮೀನಿನಂದದಿ ಬೀಳುತಾ ಪತಿ ಧರ್ಮವಹಿಸಿ ಶ್ರೀ ಕಾಂತನ ಗುಣಕಥೆ ಕೇಳಿ ಪೊಗಳಲಾಗಿ 7 ನಾಮ ಮೊದಲು ಮಾಡಿ ಪ್ರಕೃತಿಯ ಪರಿಯಂತ ಪ್ರೇಮದಿಂದಲಿ ಗುಣಗಳ ಗುಣಿಸೀ ಕಾಮಾದಿ ಚತುರ್ವಿಧÀ ಪುರುಷಾರ್ಥ ತನ್ನಯ ಸ್ವಾಮಿಯಲಿಂದಲಿ ಸಂಪಾದಿಸುತಿಪ್ಪಾ 8 ಆವಾವ ಪ್ರಯೋಜನ ಮಾಡಲು ಸರ್ವದ ದೇವದೇವೇಶನಾಧೀನವೆಂದೂ ಭಾವದಲಿ ತಿಳಿದನ್ಯ ಕರ್ಮವ ಬಿಟ್ಟು ಪಾವನ ವಿಜಯವಿಠ್ಠಲನ ಭಕುತಿಯಿಂದಾ 9
--------------
ವಿಜಯದಾಸ
ಪುರುಷರಾದವರೆಲ್ಲ ಪುರುಷರೆನಿಸುವುದೋಪುರುಷರೊಳಗೂ ಪುಣ್ಯಪುರುಷನೇ ಪುರುಷ ಪ ಪರಮ ದಿವ್ಯ ಜ್ಞಾನಪೂತ ಭಸಿತವಿಟ್ಟುಸ್ಥಿರವೆಂಬ ಸಿಂಹ ಪೀಠದಲಿ ಕುಳಿತುನಿರುತ ನಿತ್ಯಾನಂದ ನಿರಾಮಯ ತಾನೆಂದುಭರದಿ ಪೂಜಿಸುತಿರುವನು ಪುರುಷ 1 ಪಥ ಸೇರಿದವನವ ಪುರುಷ2 ಅಂಗ ಕಾಣುವ ವಿಷಯಗಳ ಆತ್ಮಗರ್ಪಿಸುತಸಂಗ ರಹಿತನಾಗಿ ತಾನಾಗಿ ಇರುತಮಂಗಳವು ಎನಿಸಿಯೇ ಮರೆತು ಬಾಹ್ಯವನುವಿಹಂಗಪಥದಿ ನಿಂತಿರುವನವ ಪುರುಷ 3 ಶಾಂತರಸವಂ ಕುಡಿದು ಸರ್ವಕ್ಕೂ ಬೆದರದೆಭ್ರಾಂತು ಎನಿಪ ಬೆಳಗ ತರಿದುಸಂತ ಸಾಲೋಕ್ಯ ಮೊದಲು ಸಾಯುಜ್ಯವನೆಲ್ಲಪಂಥದಿ ಮೀರಿ ಪರಿವನವನೆ ಪುರುಷ 4 ಪರಿ ಪರಿ ಕೇಳುತನಾದ ಸಾಕ್ಷಿಕ ತಾನು ಚಿದಾನಂದ ಗುರುವಾಗಿನಾದದಾನಂದದಲಿ ಮುಳುಗಿರುವನವ ಪುರುಷ 5
--------------
ಚಿದಾನಂದ ಅವಧೂತರು
ಪ್ರಣವ ಪ್ರತಿಪಾದ್ಯ ಪ್ರಹ್ಲಾದವರದಾ ಪ ಪ್ರಣತಕಾಮದನೆ ಪ್ರಾರ್ಥಿಸುವೆ ಪ್ರಭುವೆಂದು ಅ.ಪ. ಸಕಲ ಜೀವ ಜಡಾತ್ಮಕ ಜಗತ್ತಿನೊಳಗಿದ್ದು ಅಕಳಂಕ ನಾಮರೂಪದಲಿ ಕರೆಸಿ ಪ್ರಕಟನಾಗದಲೆ ಮಾಡಿಸಿ ಸರ್ವ ವ್ಯಾಪಾರ ಸುಖ ದುಃಖಗಳಿಗೆ ಗುರಿಮಾಡಿ ಎಮ್ಮನು ನೋಳ್ಪೆ 1 ಏನೆಂಬೆ ನಿನ್ನ ಮಹಿಮೆಗೆ ರಮಾಪತಿ ನಿನ್ನ ಸುರರು ದೀನರುದ್ಧರಿಸುವುದು ದಯದಿಂದ ನಿರುತಾ 2 ಸರ್ವ ಸ್ವತಂತ್ರ ನೀನಾದ ಕಾರಣ ಬ್ರಹ್ಮ ಶರ್ವಾದಿಸುರರು ಪ್ರಾರ್ಥಿಸುತಿಪ್ಪರು ದುರ್ವಿಭಾವ್ಯನೆ ಸುರಗಮೃತ ಪಾನವ ಗೈಸಿ ಗರ್ವಿಸಿದ ದಾನವರ ಗಣವ ಸಂಹರಿಪೆ 3 ಬುಧ್ಯಾದಿ ಇಂದ್ರಿಯಗಳೊಳಗೆ ತತ್ಪತಿಗಳೊಳ ಗಿದ್ದು ಬಹುವಿಧ ಚೇಷ್ಟೆಗಳನೆ ಮಾಡಿ ಬದ್ಧರನ ಮಾಳ್ಪೆ ಭವದೊಳಗೆ ಜೀವರನ ಅನಿ ರುದ್ಧರೆಂದೆನಿಪೆ ಎಲ್ಲರೊಳು ವ್ಯಾಪಕನಾಗಿ 4 ದಾಶರಥಿ ನೀನೆ ಗತಿಯೆಂದು ಮೊರೆಹೊಕ್ಕೆ ವಿ ಭೀಷಣಗೆ ಲಂಕಾಧಿಪತ್ಯವಿತ್ತೇ ವಾಸವಾನುಜ ಜಗನ್ನಾಥ ವಿಠ್ಠಲ ಭಕ್ತ ಪೋಷಕನು ನೀನಹುದು ಕಲ್ಪ ಕಲ್ಪಗಳಲ್ಲಿ 5
--------------
ಜಗನ್ನಾಥದಾಸರು
ಪ್ರಥಮಾಕ್ಷರನೆ ದೇವಾ ಮಹಾನುಭಾವಾ ಪ ಸದ್ಗತಿಗೆ ಕಾರಣ ಸಿದ್ಧ ಮೆನ್ನುತ ಪಥವ ಗೈದು ಪರಂಪರವ ತಾ ಸ್ವತಹನಾಗಿಯು ಪ್ರಜ್ವಲಿಸುತಿಹ 1 ವೇದವೇದಾಂತತಿ ಪರತರ ಪಾದಸೇವೆಯ ಕೊಟ್ಟು ನನಗೆ ನೀ ಬೋಧಿಸೆಂದೆಂತೆನು ಪ್ರಣವಾ 2 ಶಿಕ್ಷೆ ರಕ್ಷೆಗೆ ಅಕ್ಷಗೊಳಿಸಿದ ಮೋಕ್ಷದಾಯಕನೆಂದು ಭಜಿಸಲು ಸೂಕ್ಷ್ಮದ್ವಾರದಿ ಹೊಳೆವ ನಿಜಪದ 3 ವೃಂದ ಮಧ್ಯದೊಳೆಸೆವ ಶುಭಕರ ಚಂದಪಾದವ ತೋರಿ ಕರುಣಿಸೊ ಚಂದ್ರಧರ ಚಾಂಪೇಯವದನನೆ 4 ಅಂಗವಿಲ್ಲದೆ ಪೆಸುಸರುತಾಳಿ ನೀ ಲಿಂಗ ಮುಖವಾಗಿರುವ ಸೊಬಗನೂ ಕಲುಷ ಪ ತಂಗ ವೋಂಕಾರೇಶ್ವರನೇ ವೋಂ 5 ಗುಡಿಯೊಳಿಹ ನಿಷ್ಕಲ ನಿರಂಜನ ಅಡಿಗಳಿಗಡಿಯಾದೆನೀಗಾ 6
--------------
ಚನ್ನಪಟ್ಟಣದ ಅಹೋಬಲದಾಸರು
ಪ್ರಮಾಣ ಕೊಟ್ಟ ತರುವಾಯ ತಪ್ಪುವ ನೀನಲ್ಲ ಪ ಅಸುರ ತಾರಕನು ಸುಮನಸರ ಬಳಲಿಸುತಿರಲು ಬಿಸಿಗಣ್ಣವನ ತಪಸು ಹಾನಿಮಾಡಿ ಶಶಿವದನೆ ಪಾರ್ವತಿಯಲ್ಲಿ ಗರ್ಭವನಿಡಿಸಿ ಹಸುಳೆ ಕೈಯಿಂದ ರಾಕ್ಷಸನ ಕೊಲ್ಲಿಸಿದೆ 1 ಶಂಬರ ದೈತ್ಯಜನ ವರದಿಂದ ಅನಿಮಿಷ-ಕ ದಂಬವನು ಸೋಲಿಸಿ ಮೆರೆವುತಿರಲು ಅಂಬುತನಯುದರದಲ್ಲಿ ಹೊಕ್ಕು ಬೆಳೆದದು ಬಂಡು ಅಂಬರರು ನಲಿಯೆ ವನಶಿರವ ಚಂಡಾಡಿದಾ 2 ಮನಮುಟ್ಟಿ ನಿನ್ನನು ವಂದನೆಮಾಡಿ ನರಗೆ ಮನದ ತಾಪವ ಬಿಡಿಸಿ ಮುಕ್ತಿ ಕೊಡುವಾ ಸಿರಿ ವಿಜಯವಿಠ್ಠಲರೇಯನ ಅನುಸರಿಸಿ ಬಾಳುವಂತೆ ಏಕಚಿತ್ತವನೀವಾ 3
--------------
ವಿಜಯದಾಸ
ಪ್ರಸನ್ನ ಶ್ರೀ ನವಗ್ರಹ ಸ್ತುತಿಗಳು ಶ್ರೀ ಸೂರ್ಯದೇವ ಸ್ತೋತ್ರ 88 ಆ ನಮಿಸುವೆ ಘೃಣಿ ಆದಿತ್ಯ ಸೂರ್ಯ ಸೂರಿ ಪ್ರಾಪ್ಯ ಪ ಅಮಿತ ಸ್ವತೇಜದಿ ಝಗಿ ಝಗಿಸುತಿ ಜಗತ್ ಜನ್ಮಾದಿಕರ್ತ ಚೇಷ್ಟಕ ಸ್ಫೂರ್ತಿದಾತ ಅಮಯ ದೂರ ಸುಗುಣ ಗಣಾರ್ಣವ ದೇವ ಶ್ರೀಮನ್ನಾರಾಯಣ ಧ್ಯೇಯ ಧ್ಯಾನಿಪೆ ನಿನ್ನ 1 ಮಕರ ಕುಂಡಲವಾನ್ ಕಿರೀಟಿಯೆ ಅರಿದರ ಧಾರಿ ಅವ್ಯಯಾನಂದ ಚಿತ್ ಚಾಮೀಕರ ವಪು ಶ್ರೀಯುಕ್ ಪದ್ಮದಿ ಇರುತಿಹಿಯೋ ಅರ್ಕಸ್ಥ 2 ಹಿಂಕಾರ ಪ್ರಸ್ತಾವ ಆದಿ ನಮೋ ನಮೋ ಉದ್ಗೀಥ ಪ್ರತಿಹಾರೋಪದ್ರವ ನಿಧನ ಉತ್ಕøಷ್ಟ ಸಾಮ ಪ್ರತಿಪಾದ್ಯ ನಾರಾಯಣ ಋಕ್ ಸಾಮ ವೇದದಿಂ ಸ್ತುತ್ಯ ವಾಗ್ವಾಯ್ವಿಂದ 3 ಭೂತೇಂದ್ರಿಯ ಕರ್ಣಾದಿಗಳಿಗೆ ದೂರ ದ್ಯುಸ್ಥದಿವಃಪರ ತ್ರಿಪಾದ ಜ್ಯೋತಿರ್ಮಯನು ಹಿತಕರನಿವ ಅರ್ಕನೋಳ್ ಜ್ವಲಿಸಿ ಅರ್ಕಗೆ ಒದಗಿಸಿಹ ತನ್ನ ಸೂರ್ಯನೆಂಬೋ ನಾಮ 4 ಸೂರ್ಯದೇವನೆ ದಯಾವಂತನೆ ನಮೋ ನಮೋ ಕಶ್ಯಪಾತ್ಮಜ ನೀ ಎನ್ ಪಾಪ ಪರಿಹರಿಸೋ ಮಹಾದ್ಯುತಿ ತಮೋಘ್ನನೇ ಜ್ಞಾನಾಯುರ್ದಾತ ನೀ ಶ್ರೀಯಃಪತಿ ನಾರಾಯಣನ್ನೊಲಿಸೋ ಎನಗೆ 5 ಸೂರ್ಯ ನೀ ಅಹರಹ ಎನ್ನಸರ್ವಪೀಡೆಗಳ್ ಕಳೆದು ಬೃಹತಿಸಾಸಿರ ಸ್ವರ ವ್ಯಂಜನಾಕ್ಷರ ವಾಚ್ಯ ಶ್ರೀಹರಿಯ ಭಜಿಸಲು ಶತಾಯುಸ್ ಬಲವೀಯೋ 6 ಶರಣು ಪದ್ಮಜಪಿತ ಪ್ರಸನ್ನ ಶ್ರೀನಿವಾಸ ಸೂರ್ಯ ನಿನ್ನ ಪ್ರೀತಿಪಾತ್ರ ಸೂರ್ಯನೊಳಿದ್ದು ನೀ ಜಗತ್ಸರ್ವ ಕಾಯುತ್ತಿ ಕರುಣದಿ ಎನ್ನನು ಎನ್ನವರನು ಕಾಯೋ 7 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಳಯಜಲದಲಿ ನೀನಾಲದೆಲೆಯ ಮ್ಯಾಲೆ ಹಲವು ಜೀವರು ನಿನ್ನ ಹೃದಯದೊಳಿರಲು ಕೆಲವುದಿನದಿ ಯೋಗನಿದ್ರೆಯೊಳಿರೆ ಒಲವಿಂದ ಸೃಜಿಸುವೆನೆಂದು ನೇಮಿಸುವೆ1 ಪ್ರಕೃತಿಯ ಮೂಲಕಾರಣವನು ಮಾಡಿ ಸಕಲತತ್ವಗಳ ಸಮ್ಮೋಹದಿ ಕೂಡಿ ವಿಕಳಿಸದಂತೆ ತನ್ಮಾತ್ರೆಯ ಕೂಡಿ ಅಖಿಳೇಶ ಮಹತತ್ವಗಳ ನಿರ್ಮಿಸಿದೆ 2 ಮಹತತ್ವದಿಂದಹಂಕಾರವ ಪುಟ್ಟಿಸಿ ಅಹಂಕಾರದಿಂದ ವೈಕಾರಿಕ ಮೊದಲಾದ ತ್ರಿವಿಧತತ್ವಗಳ ನಿರ್ಮಾಣವÀ ಮಾಡ್ದೆ ಮಹಮಹಿಮೆಯ ಮೆರೆದೆ ಜಗವರಿಯೆ 3 ಇಪ್ಪತ್ತುನಾಲ್ಕು ಅಯಿದಾರುತತ್ವಗಳಿಂದ ತÀಪ್ಪದೆ ಬೊಮ್ಮಾಂಡವ ನಿರ್ಮಿಸಿದೆ ಸರ್ಪಶಯನನಾಗಿ ನಾಭಿಕಮಲದಿಂದ ಅಪ್ಪಬ್ರಹ್ಮನ ಪ್ರಸವಿಸಿದೆ ನೀನೆಂದು 4 ಒಂದು ಮೂರುತಿಯಿಂದ ಸೃಷ್ಟಿಯ ಮಾಡಿ ಮತ್ತೊಂದು ಮೂರುತಿಯಿಂದ ಪಾಲನೆ ಮಾಡಿ ಒಂದು ಮೂರುತಿಯಿಂದ ಸಂಹರನೆ ಮಾಡಿ ಒಂದೊಂದು ಮಹಿಮೆಯು ಅನಂತಾದ್ಭುತವು 5 ಒಂದು ರೋಮಕೂಪದಲಿ ಬ್ರಹ್ಮಾಂಡ ಇಂದಿರೆ ಅನಂತಕೋಟಿ ನಾಮಗಳಲ್ಲಿ ಬಂದು ಗೋಕುಲದಲ್ಲಿ ಶಿಶುವಾಗಿ ತೋರಿದೆ ಆ- ಸುರರು 6 ಜನನಮರಣ ಭಯದಿಂದ ದೇವತೆಗಳು ಅನುದಿನ ನಿನ್ನ ಪೂಜೆಯ [ಮಾಡೇವೆನಲು] ಪುನರಾವೃತ್ತಿ ರಹಿತವಾದ ಫಲವೆತ್ತಿ ಮನುಜನಂತೆ ತೋರುವುದೇನುಚಿತವೊ 7 ಒಮ್ಮೆಕಾಣಲು ಸಿರಿರಮ್ಮೆ ಚೆಲುವನ ಒಮ್ಮನದಿಂದ ನೋಡೇನೆಂಬ ಭಯದಿಂದ ರಮ್ಮೆ ಮೊಗವ ತಗ್ಗಿಸಿ ನಾಚಿಸಿದಳೆ 8 ದÀಶದಿಕ್ಕು ನೋಡುತ್ತ ಭಯದಿಂದ ಕಮಲಜ ಶಶಿನಾಳದೊಳಗಿದ್ದ ದಾರಿಯ ಕಾಣದೆ ದಶಶತವರುಷ ನಿಮ್ಮನು ಧ್ಯಾನಿಸುತಿರೆ ವಸುಧೀಶ ನಿಮ್ಮ ನಿಜವ ತೋರಿದಿರಿ 9 ಆಲೋಚನೆಯಿಂದ ಸರ್ವ ವಿಷಯದಿಂದ ಲೀಲೆಯಿಂದ ಪಾಡಿ ಕಮಲಸಂಭವನ ವೋಳು ಮಾಡದಂತೆ ಒಳಿತಾಗಿ ತಲೆವಾಗೆ ಮೂಲ್ಲೋಕವ ಕೃಪೆಯಿಂದ ಪಾಲಿಸಿದೆ 10 ನಂದ ಯಶೋದೆ ವಸುದೇವ ದೇವಕಿಯರು ಸುಕೃತ ಫಲವಾಯಿತೆಂದು ಬಂದ ಬ್ರಾಹ್ಮಣರ ದ್ರವ್ಯದಿ ದಣಿಸಿದರು 11 ಜಾತಕರ್ಮವ ಮಾಡಿ ಮಧುವ ಬಾಯೊಳಗಿಟ್ಟು ಒತ್ತುಮೊರನ ಗೊಟ್ಟಿನಲಿ ಮಲಗಿದ್ದು ಸಾ- ಕ್ಷಾತ್ ಶ್ರೀ ನಾರಾಯಣನ ಅವತಾರವೆಂದು ಮಾತೆಯ ಮೊಲೆವಾಲನುಂಡ ಬೇಗದಲಿ 12 ವಾರುಣಿ ಶ- ಚಿ ರತಿ ಮೊದಲಾದ ಸತಿಯರು ನಾರಾಯಣ ಪರದೇವತೆಯೆಂದು ನಾರಿಯರೆಲ್ಲ ಪಾಡಿದರತಿ ಹರುಷದಲಿ 13 ನಾಮಕರಣ ದಿವಸ ಬ್ರಹ್ಮಾದಿ ಸುರರು ಈ ಮಹಾಶಿಶುವ ನೋಡೇವೆಂಬ ಭರದಿಂದ ಆ ಮಹಾಸ್ತೋಮವೆಲ್ಲ ಕೂಡಿಬರ- ಲೀ ಮಹಾಶಿಶುವ ನೋಡಿದರೆ ಅರ್ಥಿಯಲಿ 14 ವ್ಯಾಸ ಧೌಮ್ಯಾಚಾರ್ಯರೊಲಿದು ಮಂತ್ರಗಳಿಂದ ಸಾಸಿರಕೋಟ್ಯನಂತ ನಾಮಗಳುಳ್ಳ ವಾಸುದೇವ ಕೃಷ್ಣನೆಂಬ ನಾಮಗಳಿಟ್ಟು ಸೂಸಿದರಕ್ಷತೆ ಸುಮೂಹೂರ್ತದಲಿ 15 ಕ್ಷೀರಾಂಬುಧಿಯನ್ನೆ ತೊಟ್ಟಿಲು ಮಾಡಿ ಓರಂತೆ ನಾಲ್ಕುವೇದಗಳ ನೇಣನೆ ಮಾಡಿ ಧೀರಶೇಷನು ಬಂದು ಹಾಸಿಕೆ ಹಾಕಲು ನಾರಿಯರೊಡನೆ ಮಲಗಿದೆಯೊ ಹಯವದನ 16
--------------
ವಾದಿರಾಜ
ಪ್ರಾಣನಾಥನೇ ಬಹು ತ್ರಾಣತಪ್ಪಿದೆ ಎನ್ನ ತ್ರಾಣವಾಗೊಟ್ಟು ಪೊರಿಯೋ ಪ ಕ್ಷೋಣಿತಳದಿ ದುಗ್ಗಾಣಿ ಕಾಣದೀಪರಿ ಕ್ಷೀಣನಾಗಿ ನಾ ಬಂದೆ ಮುಖ್ಯ ಪ್ರಾಣನಾಥನೆ ಅ.ಪ ದೀನಜನಕೆ ಸುರಧೇನುವರನೆನಿಸಿ ದೀನರ ಪೊರೆಯದಿರಲು ಜ್ಞಾನಿಗಳಿದಕನುಮಾನ ಮಾಡದೆ ತಮ್ಮ ಮಾನಸದಲಿ ನಿನ್ನಾ ಧ್ಯಾನಿಸುತಿಹರೈ 1 ವಾಣೀಪತಿಯೆ ಪಂಚಾನನಾದ್ಯಣುರೇಣು ಕೊನೆಯಾಗಿಪ್ಪಾ ಜಗಕೆ ಪ್ರಾಣ ಗುಣ ಧನ ತ್ರಾಣ ಮೊದಲಾದ ಕ್ಷೀಣ ಸಂಪದವ ಕೊಡುವೆ ಮುಖ್ಯ 2 ದಾತಾ ನೆನಿಸಿದೆ ಧಾತಾನಾಂಡಕೆ ಭಾವಿ ವಿ - ಧಾತಾ ನೀನಹುದೈ ಧಾತಾ ಪ್ರಮುಖಸುರನಾಥಾ ಗುರು ಜಗ ನ್ನಾಥಾ ವಿಠಲ ಪ್ರಿಯನೇ ಮುಖ್ಯ 3
--------------
ಗುರುಜಗನ್ನಾಥದಾಸರು