ಒಟ್ಟು 2139 ಕಡೆಗಳಲ್ಲಿ , 112 ದಾಸರು , 1669 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಪಾಳೊ ಗುರುವರ ಶ್ರೀಪವಮಾನ ಭವಹಾರಿ ಸ್ಮರಹರನುತ ದೀನಜನಮಂದಾರ ಅ.ಪ ಕಾವಕರುಣಿ ಜೀವವರೇಣ್ಯ ವಿನುತ ಜಯಶೀಲಾ ವಿಧಿ ದುರಿತೌಷ ಹಾರಿ 1 ಆದಿಪುರದಿ ಮೆರೆವನಾಥಾ ಸದಯ ಭಕ್ತ ಜನಕೆ ಶುಭದಾತ ಬುಧರಾರಿ ಸಜಾತ ಭ್ರಾತಾ ಸದಯ ಧರ್ಮಾನು ಜಾತಾ 2 ಪ್ರೇಮಶರಧಿ ವಾನರೇಶಾ ಅಮಿತ ಸತ್ವಯತಿ ಮಹಿಮಯತಿರಾಜಾ ರೋರೋಮ ವ್ಯೋಮಕೇಶಾ ಶಾಮಸುಂದರನ ಮೋಹದ ದಾಸಾ 3
--------------
ಶಾಮಸುಂದರ ವಿಠಲ
ಕೃಷ್ಣ ಎಂಥಾದೊ ನಿನ್ನ ಕರುಣ ಶಿಷ್ಯ ಜನರುದ್ದೇಶಬಂದ್ಯೊ ನೀ ಕರುಣ ದುಷ್ಟಜನರ ಮಾಡಿದ್ಯೊ ನೀ ಮರ್ದನಿ ದೃಷ್ಟಿಸಿ ಮಾಡುವೆ ಸಾಧು ಸಂರಕ್ಷಣೆ 1 ಹುಟ್ಟಿ ವಸುದೇವನಲ್ಲಿ ಬಂದು ಹೊಳೆದ್ಯೊ ದಿಟ್ಟತನದಲಿ ನಂದಗೋಕುಲದಿ ಬೆಳೆದ್ಯೊ ಮೆಟ್ಟಿ ವಿಷದ ಹಾವಿನ ಹೆಡೆಯ ತುಳಿದ್ಯೊ ಕುಟ್ಟಿ ಕಂಸಾಸುರನ ಪ್ರಾಣವೆಳೆದ್ಯೊ 2 ಮೊಲಿಯನುಂಡು ಕೊಂಡಿ ಪೂತನಿ ಪ್ರಾಣ ಕಾಲಿಲೊದ್ದು ಕೊಂದ್ಯೋ ಶಕಟಾಸುರನ ಬಾಲತನದಲಿ ಕೆಡಹಿದ್ಯೊ ಮಾವನ ನೆಲೆಯು ತಿಳಿಯದು ಇನ್ನೊಬ್ಬರಿಗೆ ಪೂರ್ಣ 3 ತುರುಗಳ ಕಾಯ್ದ್ಯೊ ನೀ ಗೋವಿಂದ ಬೆರಳೆಲೆತ್ತಿದ್ಯೊ ಹಿರಿಯ ಮುಕುಂದ ಮರುಳು ಮಾಡಿದ್ಯೊ ಗೋಪಿಕೇರ ವೃಂದ ಹರುಷಗೈಸಿದೆ ಅನೇಕ ಪರಿಯಿಂದ 4 ಹಾಲು ಬೆಣ್ಣೆ ಕದ್ದು ತಿಂಬು ನಿನ್ನಾಟ ಬಾಲಗೋಪಾಲರ ಕೂಡಿ ನಿನ್ನೂಟ ಚಲುವ ನಾರೇರ ನೋಡುವ ನಿನ್ನೋಟ ಒಲಿದು ಕುಬ್ಜಿಯ ಬೆನ್ನ ಮಾಡಿದ್ಯೊ ನೀಟ 5 ಗುರುಮಗನ ತಂದುಕೊಟ್ಯೋ ನೀ ಪ್ರಾಣ ಸುರಬ್ರಹ್ಮಾದಿಗಳರಿಯರು ನಿನ್ನ ತ್ರಾಣ ಶರಣಾಗತರ ವಜ್ರಪಂಜರು ಪೂರ್ಣ ವರಮುನಿಗಳಿಗಾಗಿಹೆ ನೀ ನಿಧಾನ 6 ಒಲಿದು ಪಾಂಡವರಿ ಗಾದಿ ಸಹಕಾರಿ ಬಲವ ಮುರಿದ್ಯೊ ನೀ ಕೌರವರ ಸಂಹಾರಿ ಪರಿ ಅಟ ನಿನ್ನದೊ ಶ್ರೀ ಹರಿ ಪರಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಷ್ಣ ರುಕ್ಮಿಣಿ ವಿವಾಹದೈದು ದಿನದಲ್ಲಿ ಅರ್ಥಿ(ಯಿಂ)ಂದೋಕುಳಿಯನಾಡಿ ಕುಂಕುಮ ಗಂಧ ಬುಕ್ಕಿ ್ಹಟ್ಟಲೂ(ಲುರು?) ಟಣಿಯ ಮಾಡಿ ಆರತಿನೆತ್ತಿ ಮುತ್ತೈದೇರು ಪಾಡಿ ವೀಳ್ಯಗಳ ನೀಡಿ ಸರ್ಪಶಯನನು ತನ್ನ ಸತಿಯ ಎತ್ತಿ ಬರುವೋ ಕಾಲದಲ್ಲಿ ಚಿಕ್ಕ ಸುಭದ್ರೆ ತಾ ಬಾಗಿಲು ಕಟ್ಟಿ ತಾ ನಗುತ ನುಡಿದಳು 1 ಪಟ್ಟದರಸಿಕೂಡ ಮತ್ತೆಲ್ಲಿ ಪಯಣ ಈ ವಾರ್ತೆ ಹೇಳುವುದೆನಗೆ ಕೇಳುವೆ ಕೊಟ್ಟು ಎನಮನ ಕಾಮಿತಾರ್ಥವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 2 ನಾರಿಮಣಿಯೆ ನವರತ್ನದ ಹೆರಳು ಬಂ- ಗಾರ ರಾಗಟೆಯು ಗೊಂಡ್ಯ ಕಂಕಣ ವಂಕಿ ದ್ವಾರಾ ಹರಡಿಯು ಚೆಂದ ಒಪ್ಪುವ ಗೆಜ್ಜೆ ನಾಗಮುರಿಗೆಯು ಕಾಲ ಪೈಜಣ ಗೆಜ್ಜೆ ರುಳಿ ವೈಡೂರ್ಯದ್ವೊಡ್ಯಾಣವನೆ ಮಾಣಿಕ್ಯದ್ವಾಲೆ ಮೋಹನ್ಮಾಲೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 3 ಪಚ್ಚಮಾಣಿಕದ ಗೊಂಡ್ಯಗಳು ಬಾಜುಬಂದು ರತ್ನಹ್ಹೆರಳುಬಂಗಾರ ಕಂಕಣವಂಕಿ ಹಸ್ತಕಡಗವು ದ್ವಾರ್ಯ ಪುತ್ಥಳಿ ಏಕಾವಳಿಯ ಸರ ಚಿಂತಾಕು ಸರಿಗೆ ತೆತ್ತಿಸಿಯರಚಂದ್ರರಾಗಟೆÉ ಮತ್ತೆ ಎನಗಮ್ಮಯ್ಯಕೊಡುವಳು ಅರ್ಥಿಯಿಂದೀಗೆನ್ನ- ಮನೋರಥ ದಂiÀiಮಾಡಣ್ಣಯ್ಯ ಶ್ರೀಕೃಷ್ಣಯ್ಯ 4 ಹರದಿ ನಿನಗೆ ಹವಳದ ಕಾಲ್ವಜ್ರದ ಮಂಚ ಜರದ ಸುಪ್ಪತ್ತಿಗೆಯು ಹಾಸಿಕೆ ಲೋಡು ವರಪೀಠ ವಸನಂಗಳು ಚ- ಪ್ಪರ ಮಂಚಕ್ಕೊಲೆವೋ ಮುತ್ತಿನ ಗೊಂಚಲು ರವಿಪೋ- ಲ್ವ ರಥವು ಕರಿತುರಗ ಕರೆವೆಮ್ಮೆ ಗೋವ್ಗಳು ತರತರದ ಛತ್ತರಿಗೆ ಚಾಮರ ಜರತಾರಂಚಿನ ಸೀರೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 5 ಪನ್ನಂಗಶಯನ ಕೇಳೆನ್ನ ಗಲ್ಲದಲೊಪ್ಪೋ ಸಣ್ಣ ಮುತ್ತಿನ ಗೊಂಚಲು ದ್ರಾಕ್ಷಿಯ ಬಳ್ಳಿ ಹೊನ್ನಾ ್ವಲೆ ಸರಪಳಿಯು ಹೊಸ ಪ್ರೀತಿಯಲಿನ್ನು ನಾ ಬೇಡಿದ್ದು ಕೊಡುವನು ಮನ್ಮಥನ ಪಿತ ಎನ್ನ ಮನೋರಥ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 6 ಮುದ್ದು ಸುಭದ್ರ ಮೇಲಾದ ಜೊತೆಯ ಮುತ್ತು ವÀಜ್ರ ಕೆಂಪನು ಕೆತ್ತಿಸಿ ಕೊಡುವೆನೀಗ ತಿದ್ದಿ ಮಾಡಿದ ಮೂಗುತಿ ಪಾರ್ಥನ ರಥಕಿದ್ದು ಆಗುವೆ ಸಾರಥಿ ನಡೆಸುವೆನು ಕೀರ್ತಿ ಉಗ್ರಸೇನಗೆ ಹೇಳಿ ಇದರೊಳ- ಗರ್ಧ ರಾಜ್ಯವ ಕೊಡಿಸಿ ನಾ ನಿನ್ನುದ್ದ ಹಣ ಬಿಡು ತಂಗಿ ಕೋಮಲಾಂಗಿ 7 ಅಚ್ಚುತ ಬಲರಾಮರೆಂಬೊ ಎನಗೆ ಜೋಡು ಹೆಚ್ಚಿನ ಭುಜಗಳಿನ್ನು ಯಶೋದ ದೇವಕ್ಕಿ ರೋಹಿಣೀದೇವೇರು ಇರಲು ತಂದೆ ಶ್ರೇಷ್ಠನಾದ್ವಸುದೇವನು ನೀ ಕೊಡುವುದೇನು ಮುತ್ಯನಾಗಿದ್ದುಗ್ರಸೇನನು ಮತ್ತೆ ನಾ ಬೇಡಿದರೆ ಈ ಕ್ಷಣ ಕೊಟ್ಟು ಬಿಡನೇ- ನಧರ್À ರಾಜ್ಯವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 8 ಎಷ್ಟು ಹೇಳಿದರು ಸನ್ಮತವಿಲ್ಲೆ ಸುಭದ್ರೆ ಮತ್ತೇನು ಕೊಡಲೆ ನಾನು ಮನಕೆ ಬೇಕಾದಿಷ್ಟವ ಬೇಡೆ ನೀನು ಭಾರ ಎಷ್ಟು ತಡೆಯಲಾರೆನೆ ನೀನು ಕೈಬಿಟ್ಟು ಬಿಡುವೆನು ಬೆಟ್ಟವನು ಕಿರು ಬೆಟ್ಟಿಲಿಂದೆ ಎತ್ತಿನಿಂತಿದ್ದೇಳು ದಿವಸ ಕದವ ಬಿಡು ತಂಗಿ ಕೋಮಲಾಂಗಿ 9 ಪಕ್ಷಿವಾಹನ ನಿನ್ನ ಚೊಚ್ಚಲಮಗಳ ಎನ್ನಚ್ಛದ ಅಭಿಮನ್ಯುಗೆ ಮಾಡುವುದು ಅ- ಪೇಕ್ಷವಾಗೇದೆ ಎನಗೆ ಬೇಡುವೆನು ನಿಶ್ಚಯ ಮಾಡಿ ಜನರೊಳಗೆ ಕೊಡು ಕೀರ್ತಿ ನಿನಗೆ ಪಟ್ಟದರಸಿಯ ಸಹಿತ ನೀ ಒಡಂಬಟ್ಟು ಎನಗ್ವಚನವನೆ ಪಾಲಿಸು ಕಟ್ಟಿದ್ಹಾದಿಯ ಬಿಟ್ಟು ಪೋಗುವೆ ದಯಮಾಡಣ್ಣಯ್ಯ ನೀ ಕೃಷ್ಣಯ್ಯ 10 ತರವಲ್ಲೆ ರುಕ್ಮಣಿ ಬೀಗತನವ ಭಾಳ ಪರಿ- ಯಾಲೋಚನೆ ಮಾಡು ರುಕುಮನ ಗಡ್ಡ ಶಿರ ಪಟ್ಟಿ ಪನ್ನಿ ನೋಡು ದೊರೆ ಶಿಶುಪಾಲ ವರನವಸ್ಥೆಯ ಕೊಂಡಾಡು ಧೈರ್ಯವನೆ ಮಾಡು ಬರೆದು ಓಲೆಯ ಕಳಿಸಿ ಎನ್ನ ಕರೆಸಿ ಬೆನ್ನ ್ಹತ್ತೋಡಿಬಂದ ಬಿರುದನರಿಯೇ ನ್ವರ ಶುಭಾಂಗಿನಿ ಕದವ ಬಿಡು ತಂಗಿ ಕೋಮಲಾಂಗಿ 11 ಕೃಷ್ಣ ಸುಭದ್ರೆ ಮಾತುಗಳ ರುಕ್ಮಿಣಿ ಕೇಳಿ ಮತ್ಯಾತಕೆನ್ನ ದೂರು ಯತಿಗಳ ಬೆನ್ನ ್ಹತ್ತಿ ಹೋದವರು ದಾರು ಕೃತ್ಯವ ನಡೆಸಿದರೆನ್ನ ನಾದಿನೇರು ಚಿತ್ರಾಂಗಿಯೇರು ಹಸ್ತಿನಾವತಿ ಅರಸು ಧರ್ಮರು ಹೆಚ್ಚಿನ್ಹಿರಿ ಯಣ್ಣಯ್ಯ ಭೀಮನು ಪಾರ್ಥಸುತ ಎನ್ನ ಸೋದರಳಿಯಗೆ ಕೊಟ್ಟೇನು ತೌರುಮನಿಗ್ಹೆಣ್ಣು 12 ರಂಗ ಸುಭದ್ರೆ ಮಾತಿಗೆ ಬಪ್ಪಿ ್ವ್ವಳ್ಯವ ಕೊಟ್ಟು ಚಂದ್ರಗಾವಿಯ ಕುಪ್ಪಸ ಜರದ ಪೀ- ತಾಂಬ್ರದುಡುಗೊರೆ ಕೊಡುತ ಮುತ್ತಿನ ಹಾರ ತಂದು ಕೊರಳಿಗೆ ಹಾಕುತ ರುಕ್ಮಿಣಿಯ ಸಹಿತ ಬಂದ ಭೀಮೇಶ ಕೃಷ್ಣ ಪಾರ್ಥನ ರಂಭೆ ಕನ್ಯವಗೆದ್ದಳೆನುತಲಿ ಸಂಭ್ರಮದಿ ದೇವೇಂದ್ರ ಬ್ಯಾಗನೆ ಚೆಂದದÀಲ್ಹೂಮಳೆಯ ಕರೆದರು 13
--------------
ಹರಪನಹಳ್ಳಿಭೀಮವ್ವ
ಕೇಳಕ್ಕಯ್ಯ ನಾ ಮಾಡಿದ ಮದುವೆ ಮನಸಿಗೆ ಬರುತ್ತದೆಕೇಳಕ್ಕಯ್ಯ ನಾ ಮಾಡಿದ ಮದುವೆ ಮನಸ್ಸಿಗೆ ಬರುತ್ತದೆ ಪ ಮುಂಡಕೆ ದಂಡೆಯ ಮಾಡಿಸಿದೆ ಮುಸುಕಲಿ ಸೋಭಾನ ಮಾಡಿದೆಮುಂಡಕೆ ರುಂಡವ ಕೂಡಿಸಿದೆ ಮಂಗಳಾರತಿ ಬೆಳಗಿಸಿದೆ 1 ಕೋತಿಯು ಅಲ್ಲಿ ಕುಣಿಯುತ್ತಿತ್ತು ಕೋಣವು ಮದ್ದಲೆ ಬಾರಿಸುತ್ತಿತ್ತುಕೋತಿಯ ಕಾಲನೆ ಮುರಿದೆ ಕೋಣನ ಮದ್ದಲೆ ಮುರಿದೆ2 ಹಾರುವವನನು ಕಟ್ಟಿ ಹಾಕಿಸಿದೆ ಹಾದಿಲಿ ದೀಪವ ಹಿಡಿಸಿದೆಮೂರು ಮನೆಯ ಮೇಲಟ್ಟದಲ್ಲಿ ಮೆರವಣಿಗೆಯನೆ ಮಾಡಿಸಿದೆ3 ಒಳ್ಳೆ ಬೀಗರ ಬೆಳ್ಳಿ ತಳಿಗೆಯಲ್ಲಿ ಎಲ್ಲರ ಒತ್ತೊತ್ತಾಗಿ ಕೂರಿಸಿದೆಬೆಲ್ಲದ ಪರಮಾನ್ನವನೆ ಉಣಿಸಿದೆ ಬೆಳ್ಳನೆ ಉಡುಗೊರೆ ಹೊದಿಸಿದೆ 4 ಗುಡ್ಡ ಮೂರ ಕೊನೆಯಲಿದ್ದ ಅಡ್ಡಗಲದೆ ದೇವರ ಮನೆಗೊಯ್ದುದೊಡ್ಡ ಚಿದಾನಂದ ಗುರುವಿಗೆ ನಾ ಅಡ್ಡಗೆಡವಿ ಮದುವೆ ಮಾಡಿಸಿದೆ5
--------------
ಚಿದಾನಂದ ಅವಧೂತರು
ಕೇಳಿದ್ಯಾ ಈ ಕೌತುಕ ಕೇಳಿದ್ಯಾ ಕೇಳಿದ್ಯಾ ಕೌತುಕವನ್ನು ಈಗ ಪ ಪೇಳುವೆ ನಾ ನಿಮಗಿನ್ನು ಆಹಾ ಜಾರ ಚೋರ ಕೃಷ್ಣ ಅ.ಪ. ಕರೆಯೆ ಬಂದಿಹನೊಬ್ಬ ಚೋರಾ ತನ್ನ ಕಿರಿಯಯ್ಯನಂತೆ ಅಕ್ರೂರಾ ಊರ ಹೊರ ಹೊಳಿಯಲಿ ಬಟ್ಟ ತೇರಾ ಆಹಾ ಹಿರಿಯನೆಂದು ಕಾಲಿಗೊರಗೋರಾ ರಾಮಕೃಷ್ಣರ ಭರದಿ ಅಪ್ಪಿಕೊಂಡು ಮರುಳು ಮಾಡಿದ ಸುದ್ದೀ 1 ಸೋದರಮಾವನ ಮನೆಯೋಳ್ ಬೆಳ - U್ಫದ ನಾಳಿನ ದಿನದೋಳ್ ಕೃಷ್ಣ ಪೋದರೆ ನೆರೆದ ಜನರೋಳ್ ಆಹಾ ಕಾದುವ ಮಲ್ಲರ ಮೇಲ್ಹಾರ ಬಿಲ್ಹಬ್ಬ ಸಾಧಿಸಿ ಸಮಯಕ್ಕೆ ಹೋದೆವೆಂಬ ಅರ್ತಿ 2 ಹುಟ್ಟಿದ ಸ್ಥಳವಂತೆ ಮಧುರೀ ಕಂಸ - ನಟ್ಟುಳಿಗಾಗಿ ತಾ ಬೆದರೀ ಇ - ಲ್ಲಿಟ್ಟಳಾತನ ತಂಗಿ ಚದುರೀ ತೋರಿ ಕೊಟ್ಟರೆ ತನ್ನನು ಬೆದರೀ ಆಹಾ ಇಷ್ಟು ಸ್ನೇಹವು ಶ್ರೀದವಿಠಲ ಮಾವನ ಭೆಟ್ಟಿಗಾಗಿ ಒಡಂಬಟ್ಟು ಹೋಗುವನಂತೆ 3
--------------
ಶ್ರೀದವಿಠಲರು
ಕೇಳಿರೋ ಕೇಳಿರೋ ಆನಂದ ನುಡಿಗಳ | ಜಾಳಿಲಿ ದೋಷವ ಹರಿನಾಮ ನೆನೆಯುತ | ಕೇಳಿ ಕೇಳಿ ಕೇಳಿ ಕೇಳಿ ಪ ಯುಗದಂತಿಲಿ ಸರ್ವ ಮತವೆಲ್ಲ ಕೆಡಲಾಗಿ | ಜಗದೋದ್ಧಾರ ಜಗದೀಶ ಬರು ತಾನೆ 1 ಸ್ವ ಶಕ್ತಿ ಕುದುರೆಯ ನೇರಿ ರಾವುತನಾಗಿ | ಅಸಮ ಪೊನ್ನೀಟೆಯ ಹಿಡಕೊಂಡು ಬರುತಾನೆ2 ನಾಕು ವೇದಗಳೆಂಬಾ ಕುದುರೆಯ ಕಾಲವು | ಬೇಕಾದ ಅವಯವ ಆರು ಶಾಸ್ತ್ರಗಳಿವೆ3 ಮೂರು ಪೌರಾಣ ಶೃಂಗಾರಾಭರಣವು | ಶರಣವತ್ಸಲನೆಂಬ ಕಡಿವಾಣ ಕುದುರೆಗೆ4 ಬೋಧ ಹಕ್ಕರಿಕೆಯು | ಭಾವಿಸೆ ಭೂ ಭಾಗವೆಂಬುದು ಪಾವುಡವು5 ಈ ಪರಿಯಿಂದಲಿ ಭೋರ್ಗರೆವುತ ಬರೆ | ತಾಪವಡಗಿ ಸುಖ ತಂಗಾಳಿ ಬಂದೀತು 6 ತಾಯಿಯ ಧ್ವನಿ ಕೇಳಿ ಮಕ್ಕಳು ಬಹುಪರಿ | ಬಾಯ ದೆರವುತಲಿ ಜನಜಡಿ ಬಹುದು7 ಅವರಿ-ಗಭಯ ಕೊಟ್ಟು ಅಧರ್ಮವೇ ಕಿತ್ತಿ ಯವನರ ಹಂತಿಯ ಕಟ್ಟಿ ತಾ ತುಳಿಸುವ 8 ಹೊಟ್ಟವ ಹಾರಿಸಿ ಘಟ್ಟಿ ತಾ ಉಳಹುವ | ಸೃಷ್ಟಿಲಿ ಧರ್ಮ ಸಂ-ಸ್ಥಾಪನೆ ಮಾಡುವಾ 9 ಮೊದಲಂತೆ ಜಗವನು ಸುಖದಲಿ ಇಡುವನು | ಮುದದಿಂದ ಸಾರಿದ ಗುರುವರ ಮಹಿಪತಿ 10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳು ಕಲ್ಮಷಹಾರಿ ಕರುಣಾವಾರುಧಿ ಶೌರಿ ತಾಳು ಕ್ಷಮೆಯ ಕೃಪೆದೋರಿ ಕೇಳು ಸಂಸೃತಿ ದುಃಖ ತಾಳಲಾರೆನು ಮಾತ ನಾಲಿಸು ಮಲ್ಲಕಂಸಾರಿ ಪ. ಮೂರೊಂದು ಎಂಬತ್ತು ಲಕ್ಷ ಯೋನಿಗಳನ್ನು ಸಾರಿ ಕಡೆಗೆ ಮಾನುಷ್ಯವನು ಸೇರಿದೆನಿದಿರಲಿ ಷಡ್ವೈರಿ ಗಣವೆನ್ನ ಗಾರು ಮಾಡುವುದನೇನೆಂಬೆ 1 ದೂರಾಪುರದ ಕಾಮ ವಾರುಧಿವಳಗೀಸ ಲಾರದೆ ಬಾಯಬಿಟ್ಟೊರವೆ ಕ್ಷೀರಾಬ್ಧಿಶಯನ ಥಟ್ಟನೆ ಬಂದು ಸಲಹೊ ಮು- ರಾರಿ ನೀನ್ಯಾಕೆನ್ನ ಮರೆವೆ 2 ಬುದ್ಧಿ ಬರುವ ಮೊದಲಿದ್ದ ಪರಿಯು ಮಣ್ಣ ಮುದ್ದೆಯಂತಾಯ್ತನಂತರದಿ ಹದ್ದಿನಂದದಿ ಹಂಗಿನನ್ನವ ಕಾಯುತ್ತ ಇದ್ದೆನು ಪರರ ಮಂದಿರದಿ 3 ಮಧ್ಯವಯಸ್ಸಿನೊಳ್ ಮದನನ ¨ಲೆಯೊಳು ಬಿದ್ದು ಹೊರಳಿ ಬಹು ಬಳಲಿ ಮಧ್ವವಲ್ಲಭ ನಿನ್ನ ಮರೆತೆನು ಮುಂದಾದ- ರುದ್ಧರಿಸೆನ್ನ ಬೇಗದಲಿ 4 ನೇಮವ್ರತಗಳನೊಂದಾದರು ಮಾಡದೆ ಕಾಮಲಾಲಸನಾದೆ ಬರಿದೆ ವ್ಯಾಮೋಹ ಕಡಲಿಗೆ ಕೊನೆಗಾಣೆ ಕಾರುಣ್ಯ ಧಾಮನ ಬಿಡೆ ನಿನ್ನ ಸ್ಮರಣೆ 5 ಸಾಮಜೋದ್ಧಾರ ಸಕಲಸುರವೈರಿ ನಿ- ರ್ನಾಮವತಾರ ಭೂಧಾರ ನಿತ್ಯ ಸವಿದು ಬಾಳುವ ಮುಖ್ಯ ಕಾಮಿತಾರ್ಥವ ನೀಡು ವರದಾ 6 ಸುರಮುನಿ ಪಿತೃಋಣ ಭರವ ನೀಗುವ ಮೂರು ಕಾಲ ಕಳೆದೆ ವರ ದೇವಾಲಯ ಕೂಪಾ ರಾಮಯಜ್ಞಾದಿ ಸ- ತ್ಕರಗಳ ವಾರ್ತೆಯ ತೊರೆದೆ 7 ಗುರು ಹಿರಿಯರ ಸೇವೆ ಮರೆತು ಮನಸಿನಲ್ಲಿ ಸರಿಯಲ್ಲ ಎನಗೆಂದು ತಿಳಿದೆ ಮರಿಯಾದೆ ಗೆಟ್ಟು ಮಾಯಾತಂತು ಬಂಧದೊ- ಳಿರುವೆ ಈ ಪರಿಯಿನ್ನು ಥರವೆ 8 ಲೋಕನಾಯಕ ನಿನ್ನ ಸ್ಮರಣೆ ಒಂದಿದ್ದರೆ ಸಾಕೆಂಬ ಶ್ರುತಿ ಪುರಾಣಗಳು ವಾಕಾನುವಾಕುಗಳು ಸುರಿದ ಸರ್ವಜ್ಞ ಶ್ರೀಕರ ಪಾದದ ಮತವ 9 ಸ್ವೀಕರಿಸುತ ನಿನ್ನ ಸೇವೆ ಮಾಡಲು ಬ್ಯಾರಿ- ನ್ಯಾಕಿನ್ನು ಡಾಂಭಿಕರ ವ್ಯಾಕುಲವ ಬಿಡಿಸಿ ವೆಂಕಟನಾಥ ಕರುಣಿಸ ಬೇಕು ಶ್ರೀವರ ನಿನ್ನ ಪಥವಾ 10
--------------
ತುಪಾಕಿ ವೆಂಕಟರಮಣಾಚಾರ್ಯ
ಕೇಳೊ ಗೋವಿಂದ ಹೇಳಿದರಂತು ಬಲು ಚಂದ ಇಂದಿರೇಶನ ಗುಣ ಚಂದಿಲ್ಲಚಾರವಿಲ್ಲ ಅಂದರೆಭಾಳ ಬಲುಕೋಪ ಕೇಳೊ ಗೋವಿಂದ ಪ ಭೇರಿ ಬಾರಿಸಿ ಕೇಳುತ ಭೂರಿಜನರ ಕೂಡಿಭೋರೆಂಬೊ ಕಾಳಿ ಹಿಡಿಸುತ ಭೋರೆಂಬೊ ಕಾಳಿ ಹಿಡಿಸುತ ಖಳರ ಸಂಹಾರ ಮಾಡಿದ ಮಧುರೆಯಲಿ ಕೇಳೊ 1 ಹೊರಗಿಂದ ಬಂದಳು ತಿರುಗಲ ತಿಪ್ಪಿಯು ಹೆರವರಿಗುಪಕಾರಿ ಮನೆಗೆ ಮಾರಿ ಹೆರವರಿಗುಪಕಾರಿ ಮನೆಗೆ ಮಾರಿ ಮಕ್ಕಳ ಕೊರಳ ಹಿಚುಕಿ ಕೊಂದಳು2 ತಲೆಹೊೈಕ ಹಿರಿಯವ ಚಿಕ್ಕವ ಚಂಚಲ ಬಹು ಚಾಡಿಕೋರ ಇನ್ನೊಬ್ಬಬಹು ಚಾಡಿಕೋರ ಇನ್ನೊಬ್ಬ ಎನುತಲಿಫಲ್ಗುಣ ನಗುತ ನುಡಿದನು 3 ಸುರತರು ತರುವಾಗ ಇಂದ್ರ ಬಂದಿದ್ದ ಜಗಳಕ್ಕೆÀಇಂದ್ರ ಬಂದಿದ್ದ ಜಗಳಕ್ಕೆ ಆಗನಮ್ಮಕ್ಕನಿಂದ ಮಾನ ಉಳಿದೀತೊ4 ಒಗೆತನ 5 ಬಲು ಪತಿವ್ರತೆಯೆಂದು ಜನರೆಲ್ಲ ಹೊಗಳೋರು ತಲೆಯಲ್ಲಿ ಹೊತ್ತ ಮಹಾದೇವತಲೆಯಲ್ಲಿ ಹೊತ್ತ ಮಹಾದೇವ ಇಂಥವಳ ಬಲುಗುಣವಂತೆ ಎನಬಹುದೆ 6 ಒಗೆತನ ಕೇಳೊ ಗೋವಿಂದ7
--------------
ಗಲಗಲಿಅವ್ವನವರು
ಕೇಳೋನಂದ ಇದು ಏನು ಚೆಂದ ಹಾಲಿನ್ಹರವಿಯ ಒಡೆದೋಡಿ ಬಂದು ಬಾಲರನು ಕೂಡ್ಯಾಡಿ ಗೋವಿಂದ ಬವಣೆಬಡಿಸುವ ಬಲುಬಗೆಯಿಂದ ಪ ಕಣ್ಣ ತೆರೆದು ಉದಕದೊಳಾಡುವನು ಸಣ್ಣ ಮೋರೆಯ ಮಾಡಿ ಬಗ್ಗುವನು ಮಣ್ಣಕೆದರುತ ಕ್ರೋಡಾಗಿ ತಾನು ಚಿನ್ನಸುರ ಎಲ್ಲೆ ಕರುಳ್ಹಾರ್ಹಾಕುವನು 1 ತಿರುಕನಂದದಿ ಬೇಡಿಕೊಂಬುವನೊ ಗುರುತದಾರದರಿಯ ತಾಯ್ಹಂತಕನು ದೊರೆತನವ ಬಿಟ್ಟಡವಿಲಿರುವವನು ಶರತಮಾಡಿ ಮಾತುಳನ ಕೊಲ್ಲುವನು 2 ಬËದ್ಧರೂಪದಿ ಲಜ್ಜೆಗೆಡಿಸುವನು ಎದ್ದು ತುರುಗನೇರ್ಯೋಡಿ ಪೋಗುವನು ಕದ್ದು ಬೆಣ್ಣೆಯ ಮೆಲ್ಲುವ ತಾನು ಮುದ್ದು ಭೀಮೇಶಕೃಷ್ಣ ಎಲ್ಲಿಹನು 3
--------------
ಹರಪನಹಳ್ಳಿಭೀಮವ್ವ
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು
ಕೊಳಲನೂದುವ ನಮ್ಮ ಚಲುವ ಕೃಷ್ಣಯ್ಯ ನಳಿನಾಕ್ಷಿಯರ ಮಧ್ಯೆ ಪೊಳೆವ ರಂಗಯ್ಯ ಪ. ಕರದ್ವಯದಲಿ ಶಂಖ ಚಕ್ರಪಿಡಿದಿಹ ಕಿರುನಗೆ ನಗುತ ಸುಲಿಪಲ್ಲಿನ ಚಲುವ ಸ್ವರಗಳ ಪಿಡಿಯುತ ವೇಣು ನುಡಿಸುವ ಸರಸಿಜನಾಭ ಹೃನ್ಮಂದಿರದಿ ಮೆರೆವ 1 ಜಗವ ಮೋಹಿಸುವಂಥ ನಗೆಯ ಮೊಗ ಚೆಲುವ ಹೆಗಲು ಎಡದಲ್ಲಿ ಗಲ್ಲ ತಗುಲಿಸಿ ಇರುವ ಸತಿ ಹೆಗಲಲಿ ಇಡುವ ನಗಧರ ನರ್ತನವಾಡಿ ಮುದವೀವ 2 ಕಾಲಕಡಗ ಗೆಜ್ಜೆ ಪಾಡಗರುಳಿಯು ಮೇಲೆ ಪೀತಾಂಬರ ಜರಿಯ ವೈಭವವು ಸಾಲ ಮುತ್ತಿನಹಾರ ಪದಕದ್ವಜ್ರಗಳು ಓಲಾಡುವ ನೀಲಾಂಬರ ಹೊದ್ದಿಹ ಒಲಪು 3 ಕಂಠ ಕೌಸ್ತುಭಮಣಿ ಅಧರದ ಕೆಂಪು ಕರ್ಣ ಕದಪು ಕನ್ನಡಿಯು ಬಂಟರಾದವರನ್ನು ಪೊರೆಯುವ ದೃಷ್ಟಿ ವೈ - ನಾಸಿಕ ಫಣೆಯ ತಿಲುಕವು 4 ಶ್ರೀಪತಿ ಮುಂಗುರುಳು ಶಿರದಲ್ಲಿ ಮಕುಟ ಪಾಪವ ದಹಿಸುವ ಪಾವನ ವೇಣು ಆಪಾದ ಮೌಳಿಯ ರೂಪದ ಚಲುವ ಗೋಪಾಲಕೃಷ್ಣವಿಠ್ಠಲ ಎನ್ನ ಕಾವ 5
--------------
ಅಂಬಾಬಾಯಿ
ಕೊಳಲೇನು ಪುಣ್ಯವ ಮಾಡಿ ರಂಗನ ಬಳಿಗೆ ಬಂದಿತೇ ಪ ನಳಿನ ನೇತ್ರೆಯರ ಮನಸು ಎಲ್ಲಾ ಸೆಳೆದು ಪೋದೀತೇ ಅ.ಪ. ವನಜನಾಭನು ಯಮುನೆಯಲ್ಲಿ ಕೊಳಲನೂದುವಮನಸು ನಿಲ್ಲದ ನಡೀರೆ ಪೋಗೋಣ ಕೇಳಿ ನಾದವ 1 ಇಂದು ಗೋವುಗಳ 2 ಎಂಥ ರಾಗ ಮಾಡುವೋನು ಕಂತುಪಿತನುಅಂತರಂಗಕೆ ಸುಖವನಿತ್ತು ಭ್ರಾಂತಿಗೊಳಿಸುವ 3 ಕುಂಡಲ ಹಾರಪದಕ ಧರಿಸಿ ಕುಳಿತಿಹಸರಸಿಜಾಕ್ಷಿಯರೆ ನೋಳ್ಪ ಜನಕೆ ಹರುಷ ಕೊಡುತಿಹ 4 ಸಿರಿಯು ಬಂದು ಮುರಳಿಯಾಗಿ ಮರುಳು ಮಾಡುವನೆಪರರಿಗಿಂಥ ಸುಖವುಂಟೆಂದು ಭ್ರಾಂತಿಗೊಳಿಸುವನೆ ] 5 ಇಂದು ನಮ್ಮೊಳು ಸರಸವಾಡುವನೆ 6
--------------
ಇಂದಿರೇಶರು
ಕೋರಬೇಡ ದುರ್ವಿಷಯಸುಖಗಳನು ಕೋತಿಮನವೆ ನೀನು ||ಪ|| ಯಾರಿದ್ದರೇನು ನಿನ್ನ ಯೋಗ್ಯತೆಯ ಮೀರಿನಡಯಲಸಾಧ್ಯ ಶತಕಲ್ಪಕು ಅ.ಪ ಕಷ್ಟ ಒದಗಲಿ ನಿಷ್ಠುರ ನುಡಿಯಲಿ ಕೆಟ್ಟವನಿವನೆನಲಿ ಇಷ್ಟ ಬಂಧುಗಳು ಶತ್ರುಗಳಾಗಲಿ ಇಲ್ಲದೆ ನಿಂದಿಸಲಿ ಹೊಟ್ಟೆತುಂಬ ಆಹಾರವಿಲ್ಲದಿರಲಿ ಹುಚ್ಚನೆಂದು ಬೈಯಲಿ ಸಂಕಲ್ಪವು 1 ಬನ್ನ ಅನ್ಯರಂತೆ ತಾನಿರಬೇಕೆಂದಾಯಾಸ ಹೊಂದಬೇಡ ತತ್ವನಂಬಬೇಡ | ಮೂಢಾ 2 ಪರಿಪರಿ ಸಂಕಟ ಬಂದರೂ ನೊಂದು ಪರರ ದೂಷಿಸಬೇಡ ಸ್ಥಿರವೀ ಶರೀರವೆಂದು ನಂಬಿ ಛೀ ಎನಿಸಿಕೊಳ್ಳಬೇಡ ತಿಳಿಯಲೊ ಮೂಢಾ 3
--------------
ಗುರುರಾಮವಿಠಲ
ಕೋಲ ಕೋಲೆನ್ನ ಕೋಲ ಕೋಲ ಕೋಲೆನ್ನ ಕೋಲಕೋಲೆಂದು ಪಾಡುವರೆಷ್ಟು ಕೇಳ ವಯ್ಯಾರಿ ಪ. ಚಿತ್ರ ವಿಚಿತ್ರದ ಮುತ್ತು ಮಾಣಿಕ ಎಸವೋಛತ್ರÀ ಹಿಡಿದವರೆಷ್ಟ ಕೇಳ ವೈಯಾರಿ 1 ಶ್ವೇತ ಛತ್ರವುಕೋಟಿ ಪ್ರೀತಿಲಿ ಹಿಡಿದವರೆಷ್ಟ ಕೇಳವಯ್ಯಾರಿ2 ಸೂರ್ಯ ಪಾನವುಕೋಟಿಸಾರೆ ಹಿಡಿದವರೆಷ್ಟ ಕೇಳ ವಯ್ಯಾರಿ3 ಎಡಬಲ ಚಾಮರ ಹಿಡಿಕೆ ನವರತ್ನ ಹೊಳೆವ ಹಿಡಿದು ಬೀಸುವರವರೆಷ್ಟ ಕೇಳ ವಯ್ಯಾರಿ 4 ರತ್ನ ಮಾಣಿಕ ಬಿಗಿದ ಬೀಸಣಿಕೆಯ ಹಿಡಿದುಚೆನ್ನಾಗಿ ಬೀಸುವವರೆಷ್ಟ ಕೇಳ ವಯ್ಯಾರಿ 5 ಚಲುವ ರಂಗನ ಮುಂದೆ ನಲಿಯುತ ನವಿಲಗÀರಿಯಸುಳಿಸುವವರೆಷ್ಟ ಕೇಳ ವಯ್ಯಾರಿ 6 ಅಚ್ಚ ಜರತಾರಿ ವಸ್ತ್ರ ಜತ್ತಾಗಿ ನಿರಿ ಹೊಯ್ದುಬಿಚ್ಚಿಹಾರಿಸುವರೆಷ್ಟ ಕೇಳ ವೈಯ್ಯಾರಿ 7 ಫುಲ್ಲನಾಭನ ಮುಂದೆ ಮಲ್ಲ ಮುಷ್ಠಿಕರುತಮ್ಮೆಲ್ಲವಿದ್ಯೆಯನು ತೋರಿಸುವರೆಷ್ಟ ಕೇಳ ವೈಯಾರಿ 8 ಬಂದಿಗಳು ರಾಮೇಶನ ಒಂದೊಂದು ಗುಣ ರಚಿಸಿಚಂದಾಗಿ ಹೊಗಳುವರೆಷ್ಟ ಕೇಳ ವೈಯ್ಯಾರಿ9
--------------
ಗಲಗಲಿಅವ್ವನವರು
ಕೋಲ ಕೋಲೆನ್ನ ಕೋಲ ಕೋಲೆನ್ನ ಕೋಲ ಕೋಲ ಶ್ರೀ ಹರಿಯ ನೆನದೇವ ಕೋಲ ಪ. ನಾರಿಯರಿಬ್ಬರಿಗೆ ಹರಿಯು ಕರೆದು ಮಾತಾಡದ್ಹಾಂಗೆ ನೀರೊಳಗೆ ಹೋಗಿ ಅಡಗಿದ ಕೋಲನೀರೊಳಗೆ ಹೋಗಿ ಅಡಗಿದ ರುಕ್ಮಿಣಿಪೋರತನವೆಂದು ಬಿಡಬೇಕು ಕೋಲ 1 ಕೃಷ್ಣ ನಮ್ಮರಮನೆ ಬಿಟ್ಹೋಗ ಬಾರದೆಂದು ಬೆಟ್ಟವ ಮ್ಯಾಲೆ ಹೊರೆಸಿದ ಕೋಲ ಬೆಟ್ಟವ ಮ್ಯಾಲೆ ಹೊರೆಸಿದ ಸತ್ಯಭಾಮೆಗಟ್ಟಿ ಎದೆಯವಳು ಹೌದು ಹೌದು ಕೋಲ 2 ನೀರಜನಯ್ಯಗೆರಡುಕ್ವಾರಿ ಚಿನ್ಹವ ಮಾಡಿ ಮಾರಿಯ ಗುರುತು ಮರೆಸಿದಿ ಕೋಲ ಮಾರಿಯ ಗುರುತು ಮರೆಸಿದಿ ನೀಲಾದೇವಿಧೈರ್ಯ ವಿನ್ನೆಷ್ಟು ಧಮಕೆಷ್ಟು ಕೋಲ 3 ಹರದೆಯರಿಬ್ಬರು ಹರಿಯ ಕರೆದು ಮಾತಾಡದ್ಹಾಂಗೆ ಉರಿಮಾರಿಮಾಡಿ ನಿಲ್ಲಿಸಿದಿ ಕೋಲಉರಿಮಾರಿ ಮಾಡಿನಿಲ್ಲಿಸಿದಿಭದ್ರಾದೇವಿಸರಿಯವರು ನೋಡಿ ನಗುತಾರೆ ಕೋಲ 4 ಕರ ಕರಿಯೆಂದು ಬಿಡಬೇಕು ಕೋಲ 5 ಮಡದಿಯರಿಬ್ಬರು ಹರಿಯ ಕರೆದು ಮಾತಾಡದ್ಹಾಂಗೆ ಕೊಡಲಿಯ ಕೊಟ್ಟು ಬಡವನೆ ಕೋಲ ಕೊಡಲಿಯ ಕೊಟ್ಟು ಬಡವನೆ ಮಾಡಿದ ಕಿಡಿಗೇಡಿತನವ ಬಿಡು ಕಾಳಿ ಕೋಲ 6 ನಲ್ಲೆಯರಿಬ್ಬರು ಹರಿಯ ಎಲ್ಲೆಲ್ಲೂ ಬಿಡದ್ಹಾಂಗೆ ಬಿಲ್ಲನೆ ಕೊಟ್ಟು ನಿಲ್ಲಿಸಿದಿಬಿಲ್ಲನೆ ಕೊಟ್ಟು ನಿಲ್ಲಿಸಿದಿ ಲಕ್ಷಣಾಕಲ್ಲೆದೆಯವಳು ಹೌದ ಹೌದ ಕೋಲ 7 ಒಳ್ಳೆಗುಣಪೂರ್ಣಗೆ ಕಳ್ಳನಂತೆ ಹೆಸರಿಟ್ಟಿಸುಳ್ಳು ನೋಡಿದರೆ ವಿಪರೀತ ಕೋಲ ಸುಳ್ಳು ನೋಡಿದರೆ ವಿಪರೀತ ಜಾಂಬವಂತಿಕೊಳ್ಳಿಯ ಗುಮ್ಮಗುರುವೇನ ಕೋಲ 8 ಮುದ್ದು ಹದಿನಾರು ಸಾವಿರ ಬುದ್ದಿವಂತರ ಕೂಡಿಹದ್ದೆರ್ದಬೌದ್ಧ ಎನುತಲೆ ಕೋಲ ಹದ್ದೆರ್ದಬೌದ್ಧ ಎನುತಲೆ ಬೆನ್ನ ಹತ್ತಲು ಇದ್ದಜನರೆಲ್ಲ ನಗುತಾರೆ ಕೋಲ 9 ನೂರು ಮಂದಿ ಹರಿಯ ದಾರಿಯ ಕಟ್ಟಲು ಹಾರಿದ ಕೃಷ್ಣ ಕುದರಿಯ ಕೋಲ ಹಾರಿದ ಕೃಷ್ಣ ಕುದುರೆ ಏರಿಕೊಂಡುಮಾರಿ ತೋರದಲೆ ಬರಲಿಲ್ಲ ಕೋಲ10 ಚಲ್ವ ರಾಮೇಶ ಎಲ್ಲ ಲಲನೆಯರಿಗೆ ಅಂಜಿಕೊಂಡುಬಲಿಯ ಮನೆ ಮುಂದೆ ಕುಳಿತಾನೆ ಕೋಲ ಬಲಿಯ ಮನೆ ಮುಂದೆ ಕುಳಿತಾನೆ ರುಕ್ಮಿಣಿಕಲಹವ ಬಿಟ್ಟು ಕರೆತಾರೆ ಕೋಲ 11
--------------
ಗಲಗಲಿಅವ್ವನವರು