ಒಟ್ಟು 513 ಕಡೆಗಳಲ್ಲಿ , 63 ದಾಸರು , 406 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿರುಪತಿಯ ಶ್ರೀವೆಂಕಟೇಶಗೋವಿಂದಹರಿಗೋವಿಂದಪರತರ ಪರಮಾನಂದ ಪಮಂದರಗಿರಿಧÀರ ಸುಂದರಮೂರುತಿನಂದನಕಂದ ಗೋವಿಂದ ಮುಕ್ಕುಂದ ಅ.ಪದುರಿತರಾಶಿ ನಾಶ ಗೋವಿಂದಪರಮಪದವಿಗೀಶ ಗೋವಿಂದಸುರಮುನಿಸೇವಿತ ಹರಅಜವಿನಮಿತಪರಮಚರಿತ ಸಿರಿಗೋವಿಂದ 1ಹುಟ್ಟುಸಾವಿಲ್ಲದ ಗೋವಿಂದತಟ್ಟು ಮುಟ್ಟಿಲ್ಲದ ಗೋವಿಂದಸೃಷ್ಟಿ ತನ್ನಾಧೀನದಿಟ್ಟು ಆಳುವ ದಿಟಸೃಷ್ಟಿಗೆ ಸಿಲುಕದ ಗೋವಿಂದ 2ಆದಿಅಂತಿಲ್ಲದ ಗೋವಿಂದನಾದಕಲೆಯಿಲ್ಲದ ಗೋವಿಂದಸಾರಿ ಪೊಗಳುವ ವೇದಕೆ ಕಾಣದಆದಿಅನಾದಿ ಬ್ರಹ್ಮ ಗೋವಿಂದ 3ಮುಚ್ಚಲು ಮಾಜದ ಗೋವಿಂದಬಿಚ್ಚಲು ಕಾಣದ ಗೋವಿಂದಅಚ್ಚುತಾನಂತೆಂದು ಬಚ್ಚಿಟ್ಟ್ಹೊಗಳುವರಸಚ್ಚಿತ್ತದ್ಹೊಳೆಯುವ ಗೋವಿಂದ 4ನಶ್ವರವಿಲ್ಲದ ಗೋವಿಂದಶಾಶ್ವತ ಮಹಿಮೆಯ ಗೋವಿಂದವಿಶ್ವವಿಶ್ವರಕ್ಷ ವಿಶ್ವನಾಟಕ ಮಹವಿಶ್ವವಿಶ್ವಾಕರ ಗೋವಿಂದ5ಅಸಮ ಲೀಲಾಜಾಲ ಗೋವಿಂದಅಸುರಕುಲದಕಾಲಗೋವಿಂದದಶವಿಧವತಾರದಿ ವಸುಧೆಯ ಭಾರವಕುಶಲದಿಂದಿಳುಹಿದ ಗೋವಿಂದ 6ತಿಳಿಯಲು ತಿಳಿಯದ ಗೋವಿಂದತಿಳಿವಿಗೆ ಸುಲಭದ ಗೋವಿಂದಬೆಳಕುಕತ್ತಲೆದೆಸೆಸುಳಿವಿಲ್ಲದಸ್ಥಾನದ್ಹೊಳೆಯುವ ಅಕಳಂಕ ಗೋವಿಂದ 7ಭೂಷಣ ಮಣಿಮಾಲ ಗೋವಿಂದಶ್ರೀಶ ಶ್ರೀನಿವಾಸ ಗೋವಿಂದವಾಸುಕಿಶಯನ ಶೇಷಾರಿಗಮನಸಾಸಿರನಾಮದ ಗೋವಿಂದ 8ನಾಮರೂಪಿಲ್ಲದ ಗೋವಿಂದನೇಮನಿತ್ಯಿಲ್ಲದ ಗೋವಿಂದಶಾಮಸುಂದರ ಮುಕ್ತಿ ಸೋಮಭೀಮಸುಖದ್ಧಾಮ ಶ್ರೀರಾಮ ನಿಜಗೋವಿಂದ 9
--------------
ರಾಮದಾಸರು
ದಾಟುವೆನೆಂದರೆ ದಾಟು ಹೊಳೆಯುಕೈಟಭಾಂತಕ ಭಟರಿಗೆ ಭವಜಲವು ಪ.ಪೂರ್ವಯಾಮದಿ ಹರಿಗುಣಕರ್ಮನಾಮನಿರ್ವಚನದಿ ಕೀರ್ತನೆ ಮಾಡುವ ಮಹಿಮಉರ್ವಿಯ ಮೇಲಿದ್ದು ಒಲಿಸಿಕೊಂಡನು ಸುರಸಾರ್ವಭೌಮನ ಸೀತಾರಾಮನ 1ಜಲದಲಿ ಮಿಂದೂಧ್ರ್ವ ತಿಲಕಿಟ್ಟು ನಲಿದುತುಲಸಿಕುಸುಮಗಂಧ ಅಗ್ರದ ಜಲದಿನಳಿನೇಶನಂಘ್ರಿಗರ್ಪಿಸಿ ಸಹಸ್ರನಾಮಾವಳಿಯಿಂದ ಧೂಪದೀಪಾರತಿ ಬೆಳಗಿ 2ಪರಮಾನು ಯೋಗಾವಾಹನೆ ವಿಸರ್ಜನೆಯುಸ್ಮರಣೆ ವಂದನೆ ಪ್ರದಕ್ಷಿಣೆ ನರ್ತನವುವರಗೀತಪಠಣೆ ಭಾಗವತಾ ಶ್ರವಣವುತ್ವರಿಯದಿ ಭೂತಕೃಪೆಯಲ್ಲಿ ಮನವು 3ಗುರುಪಾದಪದ್ಮದಿ ಬಲಿದು ವಿಶ್ವಾಸಗುರುಕೃಪೆಯಿಲ್ಲದ ಪುಣ್ಯ ನಿಶ್ಯೇಷಗುರುಬೆನ್ನಟ್ಟಿದ ಕರಿಗಡ್ಡಹಾಸ ಹಾಸಗುರುಗಳ ಮರೆದು ಕಳೆಯನೊಂದುಶ್ವಾಸ4ಈಪರಿಹರಿಪುರ ದಾರಿಯ ತೊಲಗಿಕಾಪುರುಷರುಭವಮಡುವಲಿ ಮುಳುಗಿಆಪತ್ತು ಪಡುವರ ನೋಡಿ ಬೆರಗಾಗಿಶ್ರೀ ಪ್ರಸನ್ವೆಂಕಟಪತಿ ನಕ್ಕನಾಗಿ 5
--------------
ಪ್ರಸನ್ನವೆಂಕಟದಾಸರು
ದಾರಿ ಯಾವುದಯ್ಯ ವೈಕುಂಠಕೆದಾರಿ ತೋರಿಸಯ್ಯಾ ಪದಾರಿ ಯಾವುದಯ್ಯಾ ದಾರಿ ತೋರಿಸು ಆಧಾರ ಮೂರುತಿ ನಿನ್ನಪಾದಸೇರುವುದಕ್ಕೆಅ.ಪಬಲುಭವದನುಭವದಿ ಕತ್ತಲೆಯೊಳುಬಲು ಅಂಜುತೆ ನಡುಗಿ ||ಬಳಲುತ ತಿರುಗಿದೆ ದಾರಿಯ ಕಾಣದೆಹೊಳೆಯುವ ದಾರಿಯ ತೋರೊ ನಾರಾಯಣ 1ಪಾಪವ ಪೂರ್ವದಲಿ ಮಾಡಿದುದಕೆಲೇಪವಾಗಿರೆಕರ್ಮಈ ಪರಿಯಿಂದಲಿ ನಿನ್ನ ನೆನೆಸಿಕೊಂಬೆಶ್ರೀಪತಿ ಸಲಹೆನ್ನ ಭೂಪ ನಾರಾಯಣ 2ಇನ್ನು ನಾ ಜನಿಸಲಾರೆ ಭೂಮಿಯ ಮೇಲೆನಿನ್ನ ದಾಸನಾದೆನೊ||ಪನ್ನಗಶಯನ ಶ್ರೀಪುರಂದರವಿಠಲಇನ್ನು ಪುಟ್ಟಿಸದಿರೊ ಎನ್ನ ನಾರಾಯಣ 3
--------------
ಪುರಂದರದಾಸರು
ದಾರಿಯ ತೋರೊ ಮುಕುಂದ - ಹರಿ-|ನಾರಾಯಣ ಗೋವಿಂದ ಪಬಂದೆನು ಬಹುಜ್ಮನದಲಿ -ನಾ-|ಬಂಧನದೊಳು ಸಿಲುಕುತಲಿ ||ಮುಂದಿನದಾವುದು ಪಯಣ -ತೋರೊ-|ಇಂದುನೀ ಇಂದಿರೆರಮಣ1ಗತಿಯಿಲ್ಲದವರಿಗೆ ನೀನೆ -ಸದ್-|ಗತಿಯೆಂದು ಸ್ತುತಿಮಾಡಿದೆನೊ ||ಗತಿಯೆಂದು ನಂಬಿದೆ ನಿನ್ನ |ಸತುವ ತೋರು ನರಹರಿಯೆ ಗೋವಿಂದ 2ಮಡವಿನೊಳಗೆ ಧಮುಕಿದೆನೆ -ಇನ್ನು-ಕಡಹಾಯಿಸುವರ ನಾ ಕಾಣೆ ||ಹಡೆದ ತಾಯಿ - ತಂದೆ ನೀನೆ -ಕೈ-|ಹಿಡಿದು ಸಲಹೊ ಎನ್ನೊಡೆಯ ಮುರಾರಿ 3ಮಿಕ್ಕಿ ಬರುವ ಹೊಳೆಯೊಳಗೆ -ನಾನು-|ಸಿಕ್ಕಿದೆ ನಡುನೀರೊಳಗೆ ||ಕಕ್ಕುಲಾತಿನಿನಗಿರದೆ |ಭಕ್ತವತ್ಸಲ ನೀ ದಯಮಾಡೋ 4ಕುಕ್ಷಿಯೊಳಗೆ ಇಂಬಿಟ್ಟು -ಎನ್ನ-|ರಕ್ಷಿಸಿ ಸಲಹಬೇಕು ||ಅಕ್ಷಯಅನಂತ ಮಹಿಮನೆ - ನೀನು |ಪಕ್ಷಿವಾಹನನೆಪುರಂದರವಿಠಲ5
--------------
ಪುರಂದರದಾಸರು
ದೂರಹವು ದೂರಹವು ದುರಿತಗಳೆಲ್ಲಕ್ರೂರ ಸ್ತಂಭಿನಿ ಬಗಳೆ ಸ್ಮರಣೆ ಮಾತ್ರದಲಿಪಕಳ್ಳರಡಕಟ್ಟಿದಲ್ಲಿ ಕಾರಾಗೃಹದಲ್ಲಿಗುಲ್ಲಾದ ಸ್ಥಳದಲ್ಲಿಘನಗಾಳಿಯಲ್ಲಿಎಲ್ಲ ರೋಗಗಳಲ್ಲಿ ಚಿಂತೆಗಳು ಮುತ್ತಿದಲ್ಲಿಬಲ್ಲ ಬಗಳೆಯ ಸ್ಮರಣೆ ನಾಲಗೆಗೆ ಬರಲು1ಮಾರಿದುರ್ಗಿಯಲ್ಲಿ ಮಹಾಗ್ರಹವು ಹಿಡಿದಲ್ಲಿಮಾರಣವು ಮುಟ್ಟಿದಲ್ಲಿ ಮಹಾಕಾರ್ಯದಲ್ಲಿಊರು ಮುತ್ತಿದಲ್ಲಿ ವಸ್ತು ಹೋಗಿದ್ದಲ್ಲಿಕಾರಣ ಬಗಳೆ ಸ್ಮರಣೆ ನಾಲಗೆಗೆ ಬರಲು2ಮಳೆಯೊಳು ಸಿಕ್ಕಿದಲ್ಲಿ ಸಾಯ್ವಸಮಯದಲ್ಲಿಹೊಳೆಯೊಳು ಮುಳುಗಿದಲ್ಲಿ ಹೊಲ ಬೆಳೆಯದಲ್ಲಿ ಬ-ಹಳದಾರಿದ್ರ್ಯದಲ್ಲಿ ಬೇಗೆ ಸುತ್ತಡಸಿದಲ್ಲಿಬಲು ಚಿದಾನಂದ ಬಗಳೆ ಸ್ಮರಣೆ ನಾಲಗೆಗೆ ಬರಲು3
--------------
ಚಿದಾನಂದ ಅವಧೂತರು
ದ್ವಂದ್ವವೆ ವಸಂತದ ಹಬ್ಬದ್ವಂದ್ವವೆ ಇಹಪರದಲ್ಲಿ ಹಬ್ಬ ಪ.ದ್ವಂದ್ವಾಮೃತ ಕ್ಷೇಮಅಭಯವಸಂತದ್ವಂದ್ವ ಜೀವೇಶರ ತಿಳಿದವ ಶಾಂತದ್ವಂದ್ವದ ನಡೆನುಡಿ ಬಲ್ಲವ ಸಂತದ್ವಂದ್ವವರಿಯದನ ಗತಿಯೆ ವಸಂತ 1ದ್ವಂದ್ವ ಶೀತೋಷ್ಣ ಸಮಾನವ ಕಂಡುದ್ವಂದ್ವ ನಿಂದಾಸ್ತುತಿ ಸರಿಯಿಟ್ಟುಕೊಂಡುದ್ವಂದ್ವವಮಾನವಹಿಡಿದರೆ ಭಂಡುದ್ವಂದ್ವ ಪಕ್ಷಿಗಳ ಬಗೆಯ ಕೇಳಿಕೊಂಡು 2ಫಾಲ್ಗುಣ ಪೌರ್ಣಿಮೆ ಬಂದಿತಿಳೆಗೆಬಾಲಕರೆಲ್ಲ ನೆರೆವುದೊಂದು ‌ಘಳಿಗೆಹೋಳಿಯನಾಡುವ ಸಂಭ್ರಮದೊಳಗೆಕಾಳಗಬೇಡಿರೊ ನಿಮ್ಮ ನಿಮ್ಮೊಳಗೆ3ಅಜೆÕೈಕ್ಯ ಪ್ರತಿಪದ ಹಿಂದಾದರಿಂದಸುಜ್ಞಾನ ದ್ವಿತಿಯಕ್ಕೆ ತೋರುವ ಚಂದ್ರಒಗ್ಗೂಡಿ ಗೆಳೆಯರೊಮ್ಮತದಿಂದಲಗ್ಗೆಕಾರರು ಮುಂದೆ ನಡೆವುದೆ ಚಂದ 4ಭಕ್ತೆಂಬೊ ಪುರದಲ್ಲಿ ಒಂಬತ್ತು ಬೀದಿ ವಿರಕ್ತಿರಂಹಸ ಬ್ರಹ್ಮದ್ಹಾದಿಯ ಐದಿವ್ಯಕ್ತವಾಗುವ ವಸ್ತು ಓದಿಕೆ ಓದಿರಿಕ್ತದ ನುಡಿಗಳು ತಮಸಿನ ಹಾದಿ 5ದಿನಪತಿ ಅಡಗಿರೆ ಮಲಗದೆ ಎದ್ದುಮನೆಯವರನು ಎಚ್ಚರಿಸಬ್ಯಾಡಿ ಸದ್ದುನೆನೆವ ವಿಷಯಗೋಡೆ ಏರುತ್ತ ಬಿದ್ದುಮನೆ ಮನೋವಾರ್ತೆಯ ಕುರುಳನೆ ಕದ್ದು 6ಹಾರುವರ ಕೇರಿಯ ಹೊಗಬ್ಯಾಡಿಕೇಳಿಬೇರೂರವರ ಬಿಟ್ಟು ಬಿಡಿ ದೂರದಲ್ಲಿದೂರುವರೊಡನಾಟ ದುರ್ದೆಶೆಫಲವು ವಸ್ತುದೋರುವ ಮನೆಯೇವೆ ಸರಸ ವೆಗ್ಗಳವು 7ಧೂಳಿ ನೀರುರಿಗಾಳಿ ಬಯಲೊಳಗಾಡಿಮ್ಯಾಲೆ ಮೂರುರಿಯೊಳು ಮತಿಗುಂದಬ್ಯಾಡಿಹಾಳು ತುರುಕರ ಕೇರಿಯೊಳು ನಿಷ್ಫಲವುಜಾಲಗಾರರ ಕೇರಿ ಹೊಕ್ಕರೆ ಫಲವು 8ಹಿಂಚಾದ ಹಿರಿಯರ ಮಾತಲೆ ನಡೆದುವಂಚಕ ಮೂವರ ಸಂಗವ ಕಡಿದುಮಿಂಚುವ ಮಾನ್ಯರ ಪ್ರೀತಿಯ ಪಡೆದುಸಂಚಿತಪ್ರಾರಬ್ಧಾಗಾಮಿಯ ಒಡೆದು9ಮುಚ್ಚಿದ ಕದವೆರಡನು ಮುರಿಹೊಯ್ದುಇಚ್ಛೆ ಮೂರೆಂಬ ನಾಯಿಗಳಜಿಹ್ವೆಕೊಯ್ದುಬೆಚ್ಚದೆ ಮನೆ ಮೆಲ್ಲನೆ ಹೊಗಿರಣ್ಣಸಚ್ಚಿದ ಗೋರಸ ಸೂರ್ಯಾಡಿರಣ್ಣ 10ಏಕಾಧಿಪತಿಯಾಜÕ ಅಭಯವು ಬೇಕುನಾಕು ಝಾವಿನ ರಾತ್ರಿ ನಲವಿರಬೇಕುಪೋಕಕಳ್ಳಾರ್ವರ ಮೆಟ್ಟ್ಯಾಳಬೇಕುಭೂಕಾಂತಗೆ ಸೇವೆಯೊಪ್ಪಿಸಬೇಕು 11ರಮಣನೊಲ್ಲದ ಆರ್ವರ ಸಂಗವಿಡಿದುರಮಿಸುವ ಬುದ್ಧಿಜಾರಿಯ ಗಟ್ಟಿವಿಡಿದುಅಮಿತ ವೈರಾಗ್ಯಹಗ್ಗದಿ ಕೈಯಕಟ್ಟಿಶ್ರೀರಮಣನಂಘ್ರಿಗೆ ಒಪ್ಪಿಸಲು ಕಾರ್ಯ ಗಟ್ಟಿ 12ಎಲ್ಲೆಲ್ಲ್ಯಜ್ಞಾನಾಹಿ ವಿಷಯ ತೇಳುಗಳುಎಲ್ಲೆಲ್ಲಿ ನಿರ್ಜಲಸೃತಿಯ ಬಾವಿಗಳುಎಲ್ಲೆಲ್ಲಿನಿರಯಕಮ್ಮರಿ ಮಿಟ್ಟೆಗಳುಎಲ್ಲ ತಪ್ಪಿಸಿ ಜ್ಞಾನ ಬೆಳದಿಂಗಳೊಳು 13ವ್ಯಾಳ್ಯವರಿತು ತತ್ವಸಂಧಿಯ ಒಲಿದುಸೂಳಿ ಮದೆಂಟರ ಕೈಸೆರೆವಿಡಿದುಕಾಲಾಖ್ಯ ತಳವಾರನಾಳಿಗೆ ಕೊಟ್ಟುಮ್ಯಾಳದ ಗೆಳೆಯರು ಸಂತೋಷಪಟ್ಟು 14ಎಂಬತ್ತು ನಾಲ್ಕು ಲಕ್ಷಾಗಾರ ಹೊಗುತಡೊಂಬಿಯಿಲ್ಲದೆ ಬಂದ ಬನ್ನವಬಡುತಕುಂಭಿಣಿಸುರ ಕುಲ ಭೂಮಿಗೆ ಬಂದುದಂಭ ಮಾಡದಲೆ ಕುರುಳ ಒಯ್ಯಿರೆಂದು 15ರಾಗ ಮತ್ಸರಗೂಡಿದರ ಕುರುಳನೊಟ್ಟಿಭೂಗಗನ ಹೊಗುವ ಕಾಮವಕಟ್ಟಿಯೋಗವಾಗಿರುವ ಹುಬ್ಬಿನ ಕ್ಷೇತ್ರದಲಿಮ್ಯಾಗ ವಿಜ್ಞಾನಗ್ನಿ ಹಾಕಬೇಕಲ್ಲಿ 16ಲೋಭ ಹೋಳಿಕೆಯ ಹೋಳಿಗೆ ತುಪ್ಪ ಸವಿದುಲಾಭಕ್ಕೆ ಕುಣಿಯಲು ವೇತ್ರರು ಹೊಯ್ದುಶೋಭನ ರಸ ಬೊಬ್ಬೆಯ ಸಾಧುಹಿಂಡುತ್ರಿಭುವನಪತಿಕಾಮನಯ್ಯನ ದಂಡು17ಸ್ವರ್ಧುನಿಜನಕನ ಗುಣಗಣಕೀರ್ತಿಊಧ್ರ್ವಸ್ವರದಿ ಹಾಡಿ ಹೊಗಳುವಅರ್ಥಿನಿರ್ಧೂಮಜ್ವಾಲೆಯ ಬೆಳಗಲಿ ಸುತ್ತಿದುರ್ದೇಹಿಗಳ ಕಿವಿಧಾರೆಯ ಕಿತ್ತಿ 18ಅವಿದ್ಯ ಕಾಮ್ಯಕರ್ಮದ ಹೋಳಿ ಸುಟ್ಟುಹ್ಯಾವಿನ ಮೈಯ ಬೂದಿಯ ಮಾಡಿಬಿಟ್ಟುಕೋವಿದರ ಚಾತುರ್ಯಕೆ ಒಡಂಬಟ್ಟು ಚಿದ್ಭಾವ ಮಂದಿರದ ಬ್ರಹ್ಮಕೆ ಲಕ್ಷ್ಯವಿಟ್ಟು 19ಹಂಗಿಲೆ ಬೆಳೆದ ವೃಕ್ಷದ ಮೂಲ ಮುರಿದೂಧ್ರ್ವಾಂಗಕ್ಕೆ ಸುತ್ತುವ ಜಾಣರ ಬಿರಿದುರಂಗು ಮುತ್ತಿನ ಮೂಗುತಿ ಹೆಣ್ಣವಿಡಿದುಶೃಂಗಾರ ಚೇಷ್ಟೆಯ ಮಾಡಿರೊಜಡಿದು20ಬೆಳಗಿನ ಝಾವದಿ ಬೂದಿ ಚಲ್ಲ್ಯಾಡಿಗೆಳೆಯರು ನೆರೆವುದೊಂದೆ ತಾಣ ನೋಡಿಜಲಜಾಕ್ಷನುದ್ಯಮದಂಗಡಿಯಲ್ಲಿನಲಿವ ಸ್ವಾನಂದದೂಟವ ಬೇಡಿಕೊಳ್ಳಿ 21ತಿರುತಿರುಗಿ ಬಂದು ದಣಿದು ನೀವಿಂದುಹರಿಯ ಮೈ ಬೆವರಿನ ಹೊಳೆಯಲ್ಲಿ ಮಿಂದುಥರ ಥರದ್ಹದಿನಾರು ವರ್ಣಗಳಿಂದತರುಣ ತರಣಿಯಂತೆ ಹೊಳೆವುದು ಚಂದ 22ಆನಂದಮಯವಾಸುದೇವನ ಕಂಡುಆನಂದಪುರದಿ ಭಕ್ತಿಯ ನೆರೆಗೊಂಡುಆನಂದ ತೀರ್ಥಗುರು ಕೃಪೆಯಿಂದಸ್ವಾನಂದದೋಕುಳಿಯಾಡುವ ಚಂದ 23ಈ ವಿಧ ಅಧ್ಯಾತ್ಮ ಹೋಳಿಯ ಭೇದಭಾವುಕ ಜನರಿಗೆ ಪರಮಾಹ್ಲಾದದೇವ ಋಷಿಕುಲದೈವ ಮುಕುಂದಕಾವನು ಕರುಣಾಬ್ಧಿಕೇಳಿಗೋವಿಂದ24ವೇದನ ತಂದ ಹಯಾಸ್ಯನ ಹೋಳಿಭೂಧರಧರಿಸಿದಮರ ಕಾರ್ಯಕೇಳಿಮೇದಿನ ತರಲಡ್ಡಾದವನೊಮ್ಮೆ ಹೋಳಿ ಪ್ರಹ್ಲಾದನಿಷ್ಠೆಗೆಹರಿಉದಿಸಿದಕೇಳಿ25ನಾನೆಂಬೊ ದಾನವೇಂದ್ರನ ಮದ ಹೋಳಿಹೀನರಿಗಾಗಿ ಕೊಡಲಿ ಹೊತ್ತಕೇಳಿಜಾನಕಿ ತಂದ ದಶಾಸ್ಯನ ಹೋಳಿಮಾನಿನಿಯರಾಳ್ದ ವಿಡಂಬನಕೇಳಿ26ಸನ್ಮಾರ್ಗ ಬಿಟ್ಟ ಖಳರ ಮತಿ ಹೋಳಿಉನ್ಮತ್ತಕಲಿಯನರಸಿ ಕೊಂದಕೇಳಿಚಿನ್ಮಯಮೂರ್ತಿ ಭೂಭಾರವ ಹೋಳಿಜನ್ಮಿಸಿಬಹುದೆಲ್ಲ ಮೋಹನಕೇಳಿ27ಅನಂತದುರಿತರಾಶಿಗಳನ್ನು ಹೋಳಿಆನಂದ ಸುಖವೀವ ನೆನೆದರೆಕೇಳಿಅನಂತ ಅನವದ್ಯಗುಣ ಪರಿಪೂರ್ಣಅನಂತಾದ್ಭುತಕರ್ಮದೀನ ದಯಾರ್ಣ28ಈಪರಿವಿಜ್ಞಾನವಸಂತದಾಟಚೌಪದಿ ರತ್ನಮಾಲಿಕೆ ಮಾಡಿ ಪಾಠಶ್ರೀಪ್ರಸನ್ವೆಂಕಟ ಕಿಟಿರೂಪಿ ಕೃಷ್ಣತಾ ಪರಿಪಾಲಿಪ ಪುರುಷವರಿಷ್ಠ 29
--------------
ಪ್ರಸನ್ನವೆಂಕಟದಾಸರು
ಧ್ವಜದತಿಮ್ಮಪ್ಪ ಪಲ್ಲಕಿಯೇರಿ ತನ್ನಯ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನಿಜಗಿರಿಯಾತ್ರೆಗೈದಿದ ಹರುಷವಕೇಳಿಪ.ಬಲದಲಬುಜಭವ ಭವಾದಿಗಳೆಡದಲಿ |ಉಲಿವ ವೇದ - ಉಪನಿಷದುಗಳು ||ಸಲುಗೆಯಲಿ ಸನಕಾದಿಗಳು ಸೇವಿಸೆ ಮುನ್ನ |ಹಲವು ಋಷಿ - ಮುನಿನಿಕರ ಹಿಂದೆ ಬರುತಿರಲು 1ಛತ್ರವ ಶಚಿ ಚಾಮರವ ಢಾಳಿಸೆ ಇಂದ್ರ |ಚಿತ್ತಜಾತನು ವ್ಯಜನವ ಬೀಸಲು ||ಹೊತ್ತು ಮಾರುತಿ ಹಡಪ ಹೊಳೆವೆಲೆಗಳ ಕೊಡಲು |ಹಸ್ತದ ಕಾಳಂಜಿ ಹರಿಣಾಂಕನು ಬರೆ 2ವರುಣನು ಸ್ವಾದುಜಲವ ಪಿಡಿದು ಬರೆ |ತರುಣಿ ತನಗೆ ಆಧಾರದಂತಿರಲು ||ಸುರರು ಸುಮನಗಳಿಂದ ಸರ್ವರು ತಮತಮ್ಮ |ಪರಿಪರಿ ಆಯುಧಗೊಂಡು ಬಳಸಿಬರೆ 3ಮಂದರ ಮಧ್ಯಮತಾರಕ ಮೋಹನ |ದಿಂದ ಗಂಧರ್ವರು ಗಾನಮಾಡೆ ||ತೋಂಧಿಮಿಧಿಮಿಕೆಂದು ತಾಳಮೇಳದೆ ನಾ - |ರಂದ ಪಾಡಲು ಆಡುತಾಡುತ ಬರುತಿರೆ 4ಲೋಕನಾಯಕ ಲೋಕೈಕ ರಕ್ಷಾಮಣಿ |ಸಾಕಾರರೂಪ ಸದ್ಗುಣಭರಿತ ||ವೆಂಕಟೇಶ ವ್ಯಾಸಮುನಿವರದನಾದ ಕರು - |ಣಾಕರ ಪುರಂದರವಿಠಲನು ಗರುಡ 5
--------------
ಪುರಂದರದಾಸರು
ನಲಿದಾಡೆ ಎನ್ನ ನಾಲಿಗೆ ಮೇಲೆ - ಸರಸ್ವತಿ ದೇವಿ ಪಕುಣಿದಾಡೆ ಎನ್ನ ನಾಲಗೆ ಮೇಲೆ ಅ.ಪಸಲಿಲಜೋದ್ಬವನವದನನಿಲಯಳೇಇಳೆಯೊಳಪ್ರತಿಮ ಗುಣಾಂಬುಧಿ ತಾಯೆ ಅ.ಪಘಿಲುಘಿಲು ಘಿಲ್ಲು ಗೆಜ್ಜೆಯ ನಾದ | ಭಳಿ ಭಳಿರೆಂಬಂದುಗೆ |ಹೊಳೆವ ಬೆರಳುಂಗುರ ಕಿಣಿಕಿಣಿನಾದ | ಎಳೆಯ ಮಾವಿನ |ತಳಿರ ಪೋಲುವ ದಿವ್ಯಪಾದ| ಚೆಲ್ವಪೆಂಡೆಯ ಭೇದ ||ನಲಿವಯುಗಳಜಂಘೆ| ಜಲಗುಳ್ಳೆಯಂತೆಜಾನು|ಥಳಥಳಿಸುವ ತೊಡೆ ಹೊಳೆವ ಸುಗುಣಿಯೆ 1ದಿನಕರಕೋಟಿ ತೇಜದಿ ಹೊಳೆವ ಅನುಪಮವಾದ |ಕನಕವಸನದಿಂದಲಿ ಎಸೆವ | ಘನವಾದ ಜಘನಗ-ಗನದಂದದಿ ಕಟಿಯಲ್ಲಿ ಮೆರೆವ | ಮಣಿದಾಮವಿಭವ ||ತನು ಜಠರವುಜಾಹ್ನವಿಸುಳಿನಾಭಿಯು |ಘನಸ್ತನಯುಗಳ ಚಂದನಲೇಪಿತಳೆ 2ದುಂಡಮುತ್ತಿನ ಕೊರಳ ಹಾರ | ಉದ್ದಂಡಮಣಿ ಪ್ರ-|ಚಂಡ ಮಿಣಿಮಿಣಿಸುವ ಹೊನ್ನಿನ ಹಾರ | ಕರಿರಾಜಪೋತನ |ಸೊಂಡಿಲಿನಂತೆ ಭುಜದಭಾರನಡೆವ ಒಯ್ಯಾರ ||ಮಂಡಿತವಾದ ಕಂಕಣ ತೋಳ್ಬಳೆಗಳು |ದುಂಡು ಹವಳ ಕೈಕಟ್ಟುಳ್ಳವಳೆ 3ನಸುನಗು ಮುಖವು ನಾಸಾಭರಣ | ಎಸೆವಕಪೋಲ|ಹೊಸಕುಂಡಲಚಳಿತುಂಬುಳ್ಳ ಶ್ರವಣ | ಬಿಸಜದಳದಂತೆ |ಎಸೆವ ಕರ್ಣಾಂತವಾದ ನಯನ | ತಿಲಕದ ಹಸನ ||ಶಶಿಸೂರ್ಯರ ಆಭರಣ ಸುಶೋಭಿತೆ |ಕುಸುಮಮುಡಿದ ಮೂರ್ಧಜವುಳ್ಳವಳೇ4ಸಿಂಗಾರದ ಜಡೆಬಂಗಾರ | ಹೊಂಗೇದಗೆ ಮುಡಿದ |ಬಂಗಾರದ ಹೆರಳಿನ ರಾಗುಟಿವರ | ಭೃಂಗಾದ ಸ್ವರ |ಹಿಂಗದೆ ಭಕ್ತರ ಸಲಹುವಭಾರ| ಕಂಗಳ ಮನೋಹರ ||ರಂಗಪುರಂದರವಿಟ್ಠಲರಾಯನ |ಮಂಗಳ ಮೂರ್ತಿಯ ತೋರೆ ಶುಭಾಂಗಿ 5
--------------
ಪುರಂದರದಾಸರು
ನಾರಾಯಣ ಪಂಜರನಾರಾಯಣಾಯ ನಮೊ ನಾರಾಯಣಾಯ ನಮೊನಾರಾಯಣಾಯ ನಮೊ ನಾರಾಯಣನಾರದರ ಮುಖದಿಂದ ನರಕಸ್ಥರೆಬ್ಬಿಸಿದೆನಾರಾಯಣಾಯ ನಮೊ ನಾರಾಯಣ ಪ.ಮತ್ತಕರಿಯವಸಾನಕಂಜಿ ಹರಿಯೆ ನೀ ಕಾಯ್ದೆ *ಭಕ್ತ ಪ್ರಹ್ಲಾದನೇಕಾಂಗ ನಿಷ್ಠೆಗೆ ಒಲಿದೆ 1ಪೃಥುವಿಗಳ್ಳನನಿರಿದು ಸತಿಯನುದ್ಧರಿಸಿದೆಪೃಥುಚಕ್ರವರ್ತಿಗೆ ಪ್ರತ್ಯಕ್ಷನಾಗ್ಯೊಲಿದೆ2ಶೂಲಿಯನು ಬೆಂಬತ್ತಿ ಸುಡುವೆನೆಂಬನ ಸುಟ್ಟೆಶೀಲವಿಡಿದಂಬರೀಷನ ಮತವ ಗೆಲಿಸಿದೆಯೊ 3ಮಕರರೂಪದಿ ಸತ್ಯವ್ರತಗೆ ತತ್ವವನೊರೆದೆಮುಖದಿಶ್ರುತಿಪಿಡಿತಂದು ವಾರಿಜಾಸನಗಿತ್ತೆ4ಪುರುಹೂತಗಖಿಳ ಪರಮಾರ್ಥವನು ಅರುಹಿದೆಸುರಪನ್ನ ಭಯವಟ್ಟಿ ಧ್ರುವಗೆ ಧ್ರುವಪದವಿತ್ತ್ತ್ತೆ 5ಮಹಾಪಾಪನಿರತ ಅಜಾಮಿಳನಿಷ್ಟ ಕರಿಸಿದೆಮಹಿದಾಸನಾಗಿ ತಾಯಿಗೆ ತತ್ವವನು ಪೇಳ್ದೆ 6ಮುನಿ ಕಾಲಲೊದೆಯೆ ಎದ್ದು ಕರುಣಿಸಿದೆ ಕರುಣಾನಿಧಿಮುನಿವೆಂಗಳರೆಯಾಗೆ ಪದಸೋಂಕಿಸ್ಯೆತ್ತಿದೆಯೊ 7ಮಖವ ರಕ್ಷಿಸಿ ರಾಜಋಷಿಗಭೀಷ್ಟೆಯನಿತ್ತೆಮಕರಧ್ವಜಾರಿ ಧನು ಮುರಿದವನಿಜೇಶ8ಶುಭಕಪೀಶಗೆ ಅಭಯವರವಿತ್ತು ಕೈಪಿಡಿದೆಶುಭಕಂಠನಂಜಿಕೆಯ ಹನುಮ ಹೇಳಲು ಕಳೆದೆ 9ಶರಣು ಹೊಕ್ಕಿರೆ ವಿಭೀಷಣಗರಸುತನ ಕೊಟ್ಟೆಶರದಿ ರಾವಣನರಿದು ಸುರರ ಸಂಕಟ ಹರಿದೆ 10ಅನುಜನಗ್ನಿಗೆÉ ಧುಮುಕಲವಧಿ ಮೀರದೆ ಪೊರೆದೆಅನಿಮಿಷರ ನಿಕರಕತಿ ಆಹ್ಲಾದ ಬೆಳೆಯಿಸಿದೆ 11ಉರಿನುಂಗಿ ಗಿರಿನೆಗಹಿ ವ್ರಜವ ಪಾಲನೆ ಮಾಡ್ಡೆಉರಗನೆಳೆತಂದವನ ರಾಣಿಯರ ಸ್ತುತಿಗೊಲಿದೆ 12ಕ್ರತುನಾರಿಯರನ್ನ ಸವಿದುಂಡು ಸುಖವಿತ್ತೆಕ್ರತುಭೋಕ್ತø ಕ್ರತುಗಾತ್ರ ಕ್ರತುಪಾಲ ಕ್ರತುಶೀಲ13ಗೋಪ ಸ್ತ್ರೀಯರ ಕುಚದಿ ನ್ಯಸ್ತ ಚರಣಾಬ್ಜಯುಗಗೋಪೀ ಜನಜಾರನವನೀತದಧಿಚೋರ14ವಂಶಗಾಯನ ಪ್ರಿಯ ವಿಧುಕುಲೋದ್ಭವ ಕೃಷ್ಣವಂಶವರ್ಧಕಸುಜನವಂಶಮರ್ದಕ ಕುಜನ15ಅಕ್ರೂರವಂದ್ಯಕಂಸಾರಿಕುಬ್ಜಾರಮಣಆಕ್ರಂದಿಸಿದ ತಂದೆ ತಾಯಿಯರ ಭಯವಳಿದೆ 16ಅದಿತಿ ಕುಂಡಲದಾತ ಭಗದತ್ತವರದನೆಅಧಿಪತಿಗಳಧಿಪತಿಯೆ ಭೈಷ್ಮಿ ಸತ್ಯಾರಮಣ 17ಶಂಭುವಂದಿತಪಾದ ಸಾಂದೀಪೋದ್ಧವ ಪ್ರಿಯಶಂಬರಾರಿಯ ಜನಕ ಯಜÕಪೂಜಾಗ್ರಣಿಯೆ 18ಪಾಂಡವರ ಪ್ರಾಣ ದ್ರೌಪದಿ ಮಾನರಕ್ಷಕನೆಪೌಂಡ್ರಕಶೃಗಾಲಕೌರವ ಭೂಮಿ ಭಾರಹರ19ಅಭಿಮನ್ಯುನಾತ್ಮಜನ ಬಸುರೊಳಗೆ ಸಲಹಿದೆಯೊಅಭಯದಲಿ ಪಾಂಡವರ ಸಂತತಿಯ ಬೆಳೆಸಿದೆಯೊ 20ಗರುಡ ಗಂಧರ್ವಕಿನ್ನರಗೀತ ಸಂಪ್ರೀತಗರುವೆ ಲಕುಮಿಯ ಕೂಡ ಕ್ರೀಡಾದ್ರಿಯಲ್ಲಿರುವೆ 21ಶಂಖ ಚಕ್ರ ಗದಾಬ್ಜ ಶ್ರೀವತ್ಸ ಶೋಭಿತನೆಸಂಖ್ಯೆರಹಿತಾಭರಣ ಭೂಷಣಾವ್ಯಾಕೃತನೆ 22ಮೀನ ಕಶ್ಯಪ ಪೋತ್ರಿ ನೃಹರಿ ವಾಮನ ಭಾರ್ಗ್ವಮಾನವಪ ಕೃಷ್ಣಬುದ್ಧಕಲ್ಕಿ ಕಪಿಲಾತ್ರೇಯ23ಸ್ವಾಮಿ ತೀರ್ಥಾಂಬು ಅಂತರ್ಗಂಗಾಭಿಷಿಕ್ತಸ್ವಾಮಿ ಭೂವರಾಹ ವೈಕುಂಠನಾಥ ವಿಶ್ವೇಶ 24ಷಟ್ಕೋಟಿ ತೀರ್ಥಯುತಚರಣ ಶ್ರೀಭೂರಮಣಷಟ್ಕಮಲನಿಲಯ ಚಿನ್ಮಯ ಚಿದ್ಗುಣಾರ್ಣವನೆ 25ಭಕ್ತಾಭಿಮಾನಿ ಭವದೂರ ಭಕ್ತರ ಪ್ರಭುವೆಭಕ್ತವತ್ಸಲ ಕೃಪಾಂಬುಧಿಪರಾತ್ಪರಕೃಷ್ಣ26ವಸುಧೆವೈಕುಂಠ ಮಂದಿರವಾಸ ಶ್ರೀನಿವಾಸವಸುಪ್ರೀತ ವಸುಕರ್ತ ವಸುದಾತ ವಸುಪೂರ್ಣ 27ಆದಿನಾಥÀಪ್ರಮೇಯಾದಿ ಪುರುಷೋತ್ತಮನೆಆದಿಮಧ್ಯಾಂತ ರಹಿತಾದ್ಯಮೂರುತಿ ವಿಷ್ಣು 28ಬದುಕಿಪ್ಯಾದರೆ ನಿನ್ನ ಹೊಗಳಿಕೆಲಿ ಬದುಕಿಸೈಬುಧರ ಸಂಗತಿ ಕೊಟ್ಟು ಮನ್ನಿಸೆನ್ನನು ತಂದೆ 29ಕಿವಿಯಲ್ಲಿ ಮುಖದಲ್ಲಿ ನಾಮಾಮೃತವÀ ತುಂಬುಕವಲಾಗದೆ ಮನೋಳಿ ಮಿಗೆ ಪದಾಬ್ಜವ ತೋರು 30ಭವಭವದಿ ತೊಳತೊಳಲಿ ಬಳಬಳಲಿ ಬಲುದಣಿದೆಭವವಿರಿಂಚ್ಯಾದಿ ಕರಿಗಭಯದನೆ ನೀ ಸಲಹು31ನೀ ತಾಯಿ ನೀ ತಂದೆ ನೀ ಬಂಧು ನೀ ಬಳಗನೀತಿಗಳನರಿಯೆ ನಿನ್ನಯ ನಾಮವೆ ಗತಿಯು 32ತನು ನೆಚ್ಚಿಕಿಲ್ಲ ಚಿತ್ತದ ಗತಿಯು ನೀಟಿಲ್ಲತನಯತರುಣಿ ಕೊನೆಯ ಸಂಗತಿಗೆ ಆರಿಲ್ಲ33ದೋಷಗಳನರಸದೆನ್ನನು ಸಾಕು ಸಾಕಯ್ಯದಾಸಪಾಲಕ ದೇವ ಡಿಂಗರರ ಸಂಜೀವ 34ನಿನ್ನ ಮೂರುತಿ ನೋಡಿ ನೋಡಿ ನೋಡಿ ನೋಡಿನಿನ್ನ ಬಿಂಬವನೆಂದು ಕಂಡು ಕೊಂಡಾಡುವೆನೊ 35ನಿನ್ನ ಮೈ ಬೆಮರ್ಹೊಳೆಯಲ್ಲೆನ್ನ ಮುಳುಗಿಸಿನಿನ್ನವ ನಾ ನಿನ್ನವರ ಕೈಲಿ ಕೊಡು ಗಡಗಡ 36ವಾರಿಯಲಿ ಸ್ಥಳದಲ್ಲಿ ಅಡವಿಲೆಲ್ಲೆಲ್ಲಿ ಕಾಯೊವಾರಾಹ ವಾಮನ ನೃಸಿಂಹ ಕೇಶವ ಸ್ವಾಮಿ 37ಸತ್ಕುಲೋದ್ಭವನಾದೆ ಸನ್ಮಾರ್ಗರಿಯಲಿಲ್ಲಸತ್ಕರ್ಮಗಳಿಗೆ ಬಹಿಷ್ಕøತನಾಗಿ ಬಾಳುತಿಹೆ 38ಒಂದು ಜಾವದ ತಪ್ಪನೆಂದೆಂದಿಗುಣಲಾರೆವಂದಿಸುವೆ ಸಾಷ್ಟಾಂಗತ್ರಾಹಿತ್ರಾಹಿಪಾಹಿತ್ರಾಹಿ39ಮಧ್ವೇಶ ಮಧ್ವಪ್ರಿಯ ಮಧ್ವಮತ ಪ್ರತಿಪಾಲಮಧ್ವಗುರು ಸ್ತುತ್ಯ ಮಧ್ವಾರ್ಚಿತ ಪದಾಬ್ಜಹರಿ40ಏನರಿಯೆನೇನರಿಯೆ ನೀನೆ ನೀಗೆಲೆಲೆಎನ್ನಘವ್ರಜ ಪ್ರಸನ್ನವೆಂಕಟ ಕೃಷ್ಣ 41
--------------
ಪ್ರಸನ್ನವೆಂಕಟದಾಸರು
ನಿನ್ನ ಕೃಪೆಯಿರೆ ಬಲುಸುಖ ಈ ಸಂಸಾರನಿನ್ನ ಕೃಪೆಯಗಲಿದರೆ ಘನಗೋಳು ಹರಿಯೆ ಪಅಲ್ಲ ಅಹುದಾಗುವುದು ಸುಳ್ಳೆ ಖರೆಯಾಗುವುದುಎಲ್ಲಸಿರಿ ಒದಗುವುದು ಒಲ್ಲೆನಲು ಬಿಡದೆಪುಲ್ಲನಾಭನ ಒಲುಮೆವುಳ್ಳ ಮಾನವರಿಗೆಕಲ್ಲಿನೊಳು ಜಲಪುಟ್ಟಿ ಹೊಳೆಯಾಗಿ ಹರಿಯುವುದು 1ಹೀನನಾದರು ಬಹುಮಾನ ಸಿಗುವುದು ಗೊಡ್ಡುಧೇನುಗಳೆಲ್ಲ ಬಿಡದೆ ಹೈನಗರೆಯುವುವುದೀನನಾಥನು ಒಲಿಯೆ ನಾನಾ ಸಿರಿಸೌಭಾಗ್ಯತಾನೆ ಬರುವುದು ತೆಂಗಿನೊಳುದಕದಂತೆ 2ವಿಷವೆ ಅಮೃತವಹುದು ಕಸವೆ ಕರ್ಪುರವಹುದುವಿಷಮ ವಿಷಯದ ಎಡರು ಹಸನಹುದು ನಿಖಿಲವಸುದೆಗಧಿಕ ನಮ್ಮ ಬಿಸಜಾಕ್ಷ ಶ್ರೀರಾಮನೊಶವಾದ ಬಳಿಕ ನಿಜ ಅಸಮ ಮುಕ್ತಿಹುದು 3
--------------
ರಾಮದಾಸರು
ನಿನ್ನನು ನಂಬಿದೆನು ನಾ ಸುಂದರ ಗೋವಿಂದನೇ | ಪನ್ನಗಾಶಯನಗೋಪಿಕಂದನೇ | ಮುಕುಂದನೆದುಷ್ಟರ ಶಿಕ್ಷಿಪಘೋರಕಾಲನೆ | ರಣಶೂರನೆ |ಶಿಷ್ಟರ ರಕ್ಷಿಪ ಭಕ್ತಪಾಲನೆ ಗುಣಶೀಲನೇ ಪಹೊಳೆವ ಮತ್ಸ್ಯಾವತಾರನೆನ್ನಿಸಿಇಳೆಯ ಭಾರವ ಕಳೆದನೆ ||ಜಲದಿವಾಸವಮಾಡಿಕೊಂಡು |ಜಲದಿನಾಲ್ದೆಸೆ ನಲಿದನೆ 1ಧರೆಯ ಬೆನ್ನಲಿ ಪೊತ್ತು ನೆಲಸಿದಕೂರ್ಮನೆ |ಸ್ಮøತಿಧರ್ಮನೇ ||ಶರದ ಸೇತುವೆ ಧರಿಸಿ ನಿಂದಾ |ಮರ್ಮವರಿತೇ | ಸುಶರ್ಮನೆ 2ರಸತಳದಿ ಕೆಸರೊಳಗೆ ಹೊರಳುವಹಂದಿಯೇ | ಭೂಮಿ ತಂದಿಯೇ ||ಬಸುರ ಬಗಿದಾ ಹೇಮನೇತ್ರನಕೊಂದೆಯೇ ಮಮ ತಂದೆಯೇ 3ಕಂಬದಲಿ ಮೈದೋರಿ ತರಳನ |ಪೊರೆದನೇ ನರಸಿಂಹನೇಕುಂಭಿನಿಯ ಬಾಧಿಸಲು ದುರುಳನ |ಕರುಳನೇ ಹರಿದೆಳದನೇ 4ಭೂಮಿಯಲಿ ಮೂರಡಿಯದಾನವ ಕೊಟ್ಟಾನೇಬಲಿಕೆಟ್ಟಾನೇವಾಮನನು ಎರಡಡಿಯ ತೀರಿಸಿ |ಮೆಟ್ಟುತಲಿವರಕೊಟ್ಟನೇ 5ಕೊರಳ ಕುತ್ತಿಯೆ ಮಾಲೆಮಾಡುತ್ತಾಹೆತ್ತವಳ ಕತ್ತರಿಸಿದೆ ||ಧರಣಿಪರ ಶಿರವದೆಭಾರ್ಗವ|ಸತ್ಯ ಭೂಮಿಯ ಸುತ್ತಿದೆ6ವನದಿ ರಾಮನ ಸತಿಯರಾವಣ ಕದ್ದನೇ ವಿಷ ಮೆದ್ದನೇ ||ವನದಿ ಕಪಿಗಳ ಕೂಡಿ ದೈತ್ಯರಕೊಂದನೆ ಸೀತೆಯ ತಂದನೇ 7ಸರಸಿಯಲಿ ಮೊರೆಯಿಡುವ ಗಜವ |ಕಾಯ್ದನೇ ಯಾದವನೇ ||ಧುರದಿ ಕಾಳಿಯ ಶಿರದಿ ನಲಿದ |ದೇವನೇ ಮಾಧವನೇ 8ಬತ್ತಲೆಯ ಬೌದ್ಧಾವತಾರನೆ |ಮೃತ್ಯು ತೆಕ್ಕಲ ಹೊಕ್ಕನೇ ||ಸತ್ಯ ಧರ್ಮವನರಿಯದಧರ್ಮರ |ಸೊಕ್ಕ ಮುರಿವನೆ ಪಕ್ಕನೆ 9, 10ಕಲಿಯುಗದ ಕಡುಪಾಪಿ ನರರನು |ಕಡುಗದಿಂದಲಿ ಕಡಿದನೇ ||ಕಾಲಭೈರವನಂತೆ ಕಲ್ಕ್ಯನು |ಕಿಡಿಯನುಗುಳುತ ಸುಡುವನೇ 11ದಾಸಜನರನು ಪೊರೆವಶ್ರೀನಿವಾಸನೇ | ಜಗದೀಶನೇ |ಶೇಷಶಯನನೆಂದೆನಿಪ |ಗೋವಿಂದನೇ | ಗುಣವೃಂದನೇ 12
--------------
ಗೋವಿಂದದಾಸ
ನೆಲೆಸೆನ್ನ ಹೃದಯ ಮಂದಿರದಿ - ಶ್ರೀ ಹರಿಯೆ ನೀ |ಸಲಿಸೆಮ್ಮ ಮನದಿಷ್ಟಅನುದಿನ ದಯದಿಪಸಿರಿಮಿಂಚಿ ಮರುತ್ಯುಪರ್ಣ ಪು - |ರಾರಿವಂದಿತಚರಣಸರಸಿಜ ||ಪರಮಭಕ್ತ ಪ್ರಹ್ಲಾದ ನಾರದ |ವರಪರಾಶರ ಮುಖಸುಸನ್ನುತ ಅ.ಪನಾರುವಿ ಭಾರವ ಪೊರುವಿ - ಬಲು - |ಬೇರುಗಳನೆ ಕಿತ್ತು ಮೇಲುವಿ -ಕರಿ - |ವೈರಿ ರೂಪಗೊಂಡ ಗರುವಿ - ಬ್ರಹ್ಮ - |ಚಾರಿ ಖಳರ ಕತ್ತರಿಸುವಿ |ವೀರದಶರಥಸುತ ಸುರಾರ್ಚಿತ |ಜಾರತನದಲಿ ವ್ರತವ ಕೆಡಿಸುತ |ತೋರಿ ಮೆರೆವನೆತರಳ ಬಲು ಗಂ - |ಭೀರ ಕುದುರೆಯನೇರಿ ಮೆರೆವನೆ 1ಅನಿಮಿಷ ಮಂದರೋದ್ಧರಣ - ನೀನಾ - |ವನಗಪಂಚಾನನವದನ - ವಾ - |ಮನ ದಾನವರ ಕೊಯ್ವಕದನ - ಹೀನ - |ದನುಜರಾವಣ ಸಂಹರಣ ||ಧೇನುಕಾಸುರ ಶಕಟಮರ್ದನ |ಜಾÕನದಾನ ವಿಡಂಬನಾನಕ |ಭಾನುಮಸ್ತಕ ನೀಲವರಕರ |ದೀನಜನಸಂತ್ರಾಣ ನಿಪುಣನೆ 2ಮಚ್ಛಕಚ್ಛಪ ಸ್ವಚ್ಛಕಿರನೆ - ಬಲು - |ಅಚ್ಚ ಶಿಶುಮೊರೆ ಕೇಳಿದವನೆ ||ಸ್ವೇಚ್ಛೆಯವಟು ಪರಶುಕರನೆ - ರಾಮ - |ವತ್ಸಾಸುರನ ವಧಿಸಿದವನೆ ||ತುಚ್ಛ ಜನರಿಗೆ ಕಪಟಕಾರಣ |ಹೆಚ್ಚಿನಶ್ವದ ಮೇಲೆ ಹೊಳೆವನೆ |ಮೆಚ್ಚಿಪುರಂದರ ವಿಠಲನಪರ - |ಮಾಚ್ಯುತದ ಪದವೀವ ದೇವನೆ 3
--------------
ಪುರಂದರದಾಸರು
ಪರಿಪರಿಯಲಿ ವರ್ಣಿಸುವೆ ಕಳಾನಿಧಿಯಾನರಜನರು ಅರಿತವನ ಸ್ಮರಿಸಿರಯ್ಯಾ ಪಕಾಲುಗಳು ಹದಿನೆಂಟು ತೋಳುಗಳುಹತ್ತು ಕಣ್ಣಾಲಿಗಳು ಇಪ್ಪತ್ತ ಒಂದುಸಾಲಾಗಿ ರಂಜಿಸುವ ಶಿರಸಂಗಳೀರೈದುಮೇಲಾದ ಫಣಿಂಗಳಾರ ಹನ್ನೆರಡುನೀಳವಾಗಿಯೆ ಹೊಳೆವ ಕೋರೆದಾಡೆಗಳೆರಡುಗಾಳಿಯನು ಭೇದಿಸುವ ಬಾಲ ನಾಲ್ಕುಪೇಳಲೇನಿದನು ಕೇಳ್ ನಾಲಿಗೆಗಳ್ಹನ್ನೊಂದುಮೂರ್ಲೋಕದೊಡೆಯನ ಪೀಠದಲಿರಂಜಿಸುವ ದೇಹವೇಳು 1ಧರಣಿಯೊಳಗಿನ ಪರಿವಾರದವರಿಗೆಲ್ಲಪರಸ್ಪರನೆ ವೈರತ್ವ ಬೆಳೆಸಿಕೊಂಡಿಹುದೂಉರಗಮೂಷಕನಿಂಗೆ ಕರಿಮುಖಗೆ ಕೇಸರಿಗೆಗಿರಿಜೆ ಭಾಗೀರಥಿಗೆ ಉರಿನಯನ ಚಂದ್ರನಿಗೆಎತ್ತು ವ್ಯಾಘ್ರನ ತೊಗಲಗೆ ಮರೆಯ ಹೊಕ್ಕರೆ ಕಾಯ್ವನರಕೇಸರಿಯ ತೆರದಿ ಕರುಣಾಳು ಭಕ್ತವತ್ಸಲ ದೇವನಾ 2ಬಲಿದಾಗ್ನಿಸಖಸರ್ವ ನಿಳಯದೀವಿಗೆವೈರಿಹಲವು ನಾಸಿಕದ ಸಂಚಾರಿಯಾ ಹಾರದಲಿಬೆಳೆದ ದೇಹದ ಮೇಲೆ ಮಲಗಿ ನಿದ್ರೆಯಗೈವನಳಿನನಿಳಯಳ ರಮಣ ಜಲಜಾಕ್ಷಗೋವಿಂದನನುಜೆಯರಸ ಹಲವುಮಾತೇನು ಕೇಳ್ ತಲೆ ಮೇಲೊಂದುಕೊಂಬಿನ ಋಷಿಯ ಪಿತನ ಚರಣಕೆಕೆೈಂiÀ್ಯು ಮುಗಿದು ತಲೆಬಾಗಿ 3
--------------
ಗೋವಿಂದದಾಸ
ಪವಡಿಸು ಪರಮಾತ್ಮನೆ ಸ್ವಾಮಿಭವರೋಗ ವೈದ್ಯನೆ ಭಕ್ತರ ಪ್ರಿಯನೆ ಪಕುಂದಣದಿ ರಚಿಸಿದ ಸೆಜ್ಜೆಯ ಮನೆಯಲಿಇಂದ್ರನೀಲ ಮಣಿವiಂಟಪದಿ ||ಚಂದ್ರಕಾಂತಿಯ ಠಾಣದೀವಿಗೆ ಹೊಳೆಯಲುಸಿಂಧುಶಯನ ಆನಂದದಿಂದಲಿ 1ತೂಗುಮಂಚದಿ ಹಂಸತೂಲದ ಹಾಸಿಗೆನಾಗಸಂಪಿಗೆಯ ಹೂವಿನ ಒರಗು ||ಸಾಗರಸುತೆಯ ಸಮ್ಮೇಳದಲಿ ನಿಜಭೋಗವ ಪಡುತ ಓಲಾಡುತಿರು 2ಸದ್ದಡಗಿತು ಗಡಿಯಾರ ಸಾರಿತು ಬೇಗಮುದ್ರೆಗಳಾಗಿವೆ ಬಾಗಿಲಿಗೆ ||ತಿದ್ದಿದಧವಳ ಶಂಖಗಳ ನಾದದಿಂದಪದ್ಮನಾಭ ಶ್ರೀ ಪುರಂದರವಿಠಲ3
--------------
ಪುರಂದರದಾಸರು
ಪವಡಿಸು ಪರಮಾತ್ಮಾ ಶ್ರೀ ಶ್ರೀಶಾಪವಡಿಸು ಪರಮಾತ್ಮಾ ಪಪರಮಭಕ್ತರನು ಪೊರೆಯುವ ದೇವನೆಅ.ಪರನ್ನಮಂಟಪದೊಳು ಕನ್ನಡಿಯಂದದಿಸ್ವರ್ಣವರ್ಣದಲಿಹ ಪನ್ನಂಗ ಕಾದಿಹ 1ಸುತ್ತಲು ತುಂಬುರರು ನಾರದರು ಸ್ತೋತ್ರವ ಮಾಡಿಅತ್ಯಂತ ಹರುಷದಿ ಚಿತ್ತೈಸೆಂದೆನುವರು 2ಥಳಥಳಿಸುವ ದಿವ್ಯತಾರೆಗಳಂದದಿಲಲನೆಶ್ರೀ ಭೂದೇವಿಯರು ಸೇವಿಪರು ನಿನ್ನ3ವೇದವ ಕದ್ದನ ಭೇದಿಸಿ ಅಜನಿಗೆವೇದವ ತಂದಿತ್ತು ಆದರಿಸಿದ ದೇವ 4ಮುಳುಗಿದ ಗಿರಿಯನು ಧರಿಸಿ ಬೆನ್ನಲಿ ಬೇಗಸುರರಿಗೆ ಅಮೃತವ ಕುಡಿಸಿದಮಾಧವ5ಸುರಮುನಿಗಳಿಗೆಲ್ಲಾ ಅಭಯವ ನೀಡುತವರಹರೂಪತಾಳಿ ಬಳಲಿ ದಣಿದು ಬಂದಿ6ಕಂದನಿಗಾಗಿ ದೊಡ್ಡ ಕಂಬದಿಂದುದಿಸಿ ಖಳನಕೊಂದು ಕರುಳ ವನಮಾಲೆ ಧರಿಸಿ ದಣಿದಿ 7ಮೂರಡಿ ಭೂಮಿಯ ಬೇಡಿ ಬಲೀಂದ್ರನದೂಡಿ ಪಾತಾಳಕೆ ಬಹಳ ಬಳಲಿ ಬಂದಿ 8ಭೂಮಿ ಪಾಲಕರನ್ನು ಸೋಲಿಸಿಬಾರಿಬಾರಿವಾರಿಜಾಕ್ಷ ಶ್ರೀರಾಮರಿಗೊಲಿದೆಯೊ 9ಸೇತುವೆಯನ್ನುಕಟ್ಟಿದೂರ್ತರಾವಣನ ಕುಲವಘಾತಿಸಿ ಕೊಂದ ರಘುನಾಥನೆ ಬಳಲಿದೆ 10ವಸುದೇವ ಕಂದನೆ ಶಿಶುರೂಪಿನಿಂದಲಿಅಸುರೆ ಪೂತಣಿ ಅಸುಹೀರಿ ಬಳಲಿ ಬಂದಿ 11ತಿದ್ದಿ ತ್ರಿಪುರಾಸುರರ ಮರ್ದಿಸಿ ಸುಜನರಿಗೆಮುದ್ದು ತೋರಿದ ಸುಪ್ರಸಿದ್ಧ ಮೂರುತಿ ಬೇಗ 12ಕರದಿ ಖಡ್ಗವ ಧರಿಸಿ ಸಿರದಿ ಕಿರೀಟ ಹೊಳೆಯೆಇಳೆಯ ಮನುಜರಿಗೆಲ್ಲ ಸುಲಭನಂದದಿ ತೋರ್ಪಿ 13ಮಂಗಳಚರಿತ ವಿಹಂಗವಾಹನ ಸುರಗಂಗೆಯಪಿತ ಸಾಧುಸಂಗವಂದಿತ ದೇವ 14ಗರುಡಗಮನ ಕೃಷ್ಣ ಉರಗನ್ಹಾಸಿಗೆಯೊಳುಸಿರಿದೇವಿ ಸಹವರ ಕಮಲನಾಭ ವಿಠ್ಠಲ 15
--------------
ನಿಡಗುರುಕಿ ಜೀವೂಬಾಯಿ