ಒಟ್ಟು 1017 ಕಡೆಗಳಲ್ಲಿ , 68 ದಾಸರು , 626 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿರದುದಾರದು ಗೋವಿಂದ ಅರಿತು ನೋಡಯ್ಯ ಶ್ರೀ ಹರಿ ಮುಕುಂದ ಧ್ರುವ ಪತಿಯ ಕಣ್ಣಿನ ಮುಂದೆಳಿಯಲು ಸತಿಯ ಗತಿಗೊತ್ತಿಹ್ಯದು ದಾರಿಗೆ ಕೊರತಿಯ (ತೆಯು?) 1 ಒಡಿಯನ ಮುಂದೆ ಬಂಟಗಾಗಿರೆ ಕುಂದು ಒಡನೆ ಬೀಳುದು ತೊಡಕಾರಿಗೆ ಬಂದು 2 ನಿನ್ನವನೆನಿಸಿ ಮಹಿಪತಿಗೆ ಪೂರ್ಣ ಇನ್ನರಹುವರೆ ಎನ್ನವಗುಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬೆಂಕಿಗಿರುವೆಗಳ ಕಾಟುಂಟೇ ಹರಿ ಭವ ಭಯಮುಂಟೆ ಪ ಪಂಕಜಸಖನಿಗೆ ಕತ್ತಲಂಜಿಕೆಯುಂಟೆ ಪಂಕಜಾಕ್ಷನ ಧ್ಯಾನಕ್ಕೆಣೆಯುಂಟೆ ಅ.ಪ ವಜ್ರಾಯುಧಕೆ ಗಿರಿ ಉಳಿಯಲುಂಟೆ ಗಂಗೆ ಮಜ್ಜನದಿಂ ಮೈಲಿಗೆಯಿರುಲುಂಟೆ ಸಜ್ಜನರಿಂಗೂಡಿ ನಿರ್ಜರೇಶನ ಭಜ ನ್ಹೆಜ್ಜೆಜ್ಜ್ಹಿಗಿರೆ ಜನ್ಮ ಬರಲುಂಟೆ 1 ಮೌನಧಾರಿಗೆ ಅಭಿಮಾನ ಉಂಟೆ ನಿಜ ಧ್ಯಾನಿಕರಿಗೆ ಹೀನ ಬವಣೆಯುಂಟೆ ಜ್ಞಾನದೊಳೊಡಗೂಡಿ ಗಾನಲೋಲನ ಪಾದ ಆನಂದಕರಿಗಿಹ್ಯಸ್ಮರಣುಂಟೆ 2 ತಾಮಸ್ಹೋಗಲು ಕ್ಷೇಮ ಬೇರುಂಟೆ ದು ಷ್ಕಾಮಿ ತಳೆಯಲು ಮುಕ್ತಿದೂರುಂಟೆ ಭೂಮಿಗಧಿಕ ನಮ್ಮ ಸ್ವಾಮಿ ಶ್ರೀರಾಮನ ಪ್ರೇಮಪಡೆದ ಮೇಲೆ ಬಂಧ ಉಂಟೆ 3
--------------
ರಾಮದಾಸರು
ಬೆಜ್ಜರವಿಡಿಯಲು ಗುರುಭಕ್ತಿಗೆ ತಾ ಹೆಜ್ಜೆಜ್ಜಿಗೆ ನಿಧಾನ ಸಜ್ಜನರನುದಿನ ಕೊಡುವರು ಸುಖ ಸಾಮ್ರಾಜ್ಯದ ಸುಸನ್ಮಾನ ಧ್ರುವ ಅಂಜಿಕೆಂಬುದು ಅಂಜನ ಕಣ್ಣಿಗೆ ಕಂಜನಾಭನ ಖೂನ ರಂಜಕವೆಂಬುದು ಇದೇ ಭಕ್ತರಿಗೆ ನಿಜತತ್ವದ ಸಾಧನ ರಂಜನೆದೋಲು ಒಣ ಭಂಜನೆ ತಾ ಪ್ರಾಂಜಳಾಗುರು ಙÁ್ಞನ ನಿರಂಜನ ಸೇವೆಯ ಮಾಡುದೆ ಪೂರ್ಣ 1 ಭಕ್ತಿಗೆ ಸಲಿಗಿ ಕೆಲಸಕೆ ಬಾರದು ಯುಕ್ತಿವಂತರು ನೋಡಿ ಶಕ್ತನಾದರೆ ಬಾಗಿರಬೇಕು ಅಹಂ ಭ್ರಮ ಈ ಡ್ಯಾಡಿ ಯುಕ್ತಿಗಿದೊಂದೇ ಕೀಲು ದೃಢ ಭಕ್ತಾಶ್ರಯ ಮಾಡಿ ಭೋಕ್ತಭಾವದ ಸದ್ಗುರುರಾಯ ತಾ ಬಾಹನು ಕೈ ಗೂಡಿ 2 ಅಂಜಂಜಿ ನಡೆದಮ್ಯಾಲೆ ಮಹಿಪತಿ ನಿಶ್ಯಂಕ ನೀನಾಗೊ ಅಂಜುವ ಭವಭಯ ನೀಗೊ ಗುಂಜಾಗಿಹ ಕರ್ಮದ ಬಾಧಿಯೊಳು ಸಿಲಕುವದೆಲ್ಲ ಸೋಂಗೊ ರಂಜಿಸುತಿ ಹ್ಯ ಸದ್ಗುರು ಪಾದಕೆ ನೀ ವಾಜಿಲಿ ಶರಣ್ಹೋಗೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬೆಳಗಿನೊಳು ಬೆಳಗಾಯಿತು ನೋಡಿ ಥಳಥಳಿಸುತ ಮನದೊಳಗೆ ಝಳಿಸುತಿಹದು ಜಗದೊಳಗೆ ಧ್ರುವ ಬೆಳಗಾಯಿತು ಎನ್ನೊಳಗೆ ಸುಳಿವು ದೋರಿದ ಸದ್ಗುರು ಕೃಪೆಯ ಹೇಳಲಿನ್ನೇನದರ ಖೂನ ತಿಳಿದೇನೆಂದರೆ ಎಳೆಯು ಸಿಲುಕದು ಬಲು ಸೂಕ್ಷ್ಮ ಸುಜ್ಞಾನ ಹೇಳಿ ಕಿತ್ಯಾಡುವ ಮರುಳರಿಗೆ ತಿಳಿಯದಿದರನುಸಂಧಾನ ಕಳೆಯದ ಕಲ್ಪನೆ ಅನುಮಾನಿಗಳಿಗೆ ತಿಳಿಯುವುದೆ ಸದ್ಗತಿ ಸಾಧನ 1 ಬೆಳಗಿ ಬೆಳಗು ಬೆರೆದವನೆ ತಾ ಕುಲಕೋಟಿಗಳು ಧನ್ಯ ಮಳೆಮಿಂಚಿನ ಕಳೆಕಾಂತಿಗಳಿಡುತದೋರಿದ ಸದ್ಗುರು ಪುಣ್ಯ ಗುಹ್ಯ ತಾರ್ಕಣ್ಯ ಬೆಳಗು ಬೈಗಿಲ್ಲದ ಬೆಳಗಿನ ಪ್ರಭೆ ತಿಳಿದವನೆ ಮೂಲೋಕದೊಳಗೆ ಮಾನ್ಯ 2 ಬೆಳಗಿನೊಳು ಬೆರಗಾದನು ಮಹಿಪತಿ ಅತಿ ಆಶ್ಚರ್ಯವ ನೋಡಿ ತೊಳಲಿ ಬಳಲುವ ನಿದ್ರೆಯಗಳೆದನು ತಾ ಈ ಡ್ಯಾಡಿ ನಿಜ ಒಡಮೂಡಿ ಭವ ಪಾದವ ಕೂಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬೇಗನೆ ದಯಮಾಡೊ ಸಾಗರ ನಿಲಯ ನಾಗಶಯನ ನೀನು ಹ್ಯಾಗೆ ಮಹ ಕರುಣಾಳು ಪ ಭಕ್ತರ ದುರ್ಭವ ಕತ್ತರಿಸದೆ ಇಡೀ ಭಕ್ತರ ಬೆಂಬಲೆಂಬೋಕ್ತಿ ಸತ್ಯವೇನು 1 ಪಾದ ನುತಿಸಲು ಕಾಯದಾದಿ ನುತ ಪೋಷನೆಂಬ ಮಹ ಸ್ಮøತಿವಾಕ್ಯ ಸರಿಯೇನೋ 2 ಶ್ರೀಶ ಶ್ರೀರಾಮ ನಿನ್ನದಾಸರ ನೊರೆದಿಹಿ ದಾಸರ ಪ್ರಾಣನೆಂಬುವಾಚ ಲೇಸೇನೆಲೋ 3
--------------
ರಾಮದಾಸರು
ಬೇಡಿದವರಿಗೆ ದೊರೆವುದೇನೆಲೊ ಸಜ್ಜನರ ಸಂಗ ಬೇಡಿದವರಿಗೆ ದೊರೆವುದೇನೆಲೊ ಪ ಬೇಡಿದವರಿಗೆ ದೊರೆವುದೇನೆಲೊ ಗಾಢಮಹಿಮನ ಭಕ್ತರಾವಾಸ ಸುಕೃತ ಫಲವು ಕೂಡಿಬಂದ ಕೋವಿದರಿಗಲ್ಲದೆ ಅ.ಪ ದೃಢಕರಡಿಯಿಟ್ಟ ಭುವನವೆ ಕ್ಷೇತ್ರ ದೃಢಕ ಜನರಡಿಯೇ ಸುಯಾತ್ರಾ ಸಿದ್ಧ್ದಾಂತ ಮಾತಿದು ದೃಢಕರಾಡಿದ ಮಾತೆ ನಿಜಮಂತ್ರ ಇದೆ ಮೂಲಶಾಸ್ತ್ರ ದೃಢಕರು ನಿಂತ ಸ್ಥಳವೆ ಬದರಿ ದೃಢಕರು ಕೂತಸ್ಥಾನ ಮಧುರೆ ದೃಢಕರೊಟನಾಟ ಲಭ್ಯವೆಂದರೆ ಪಡೆದ ಪುಣ್ಯ ಮಹಭಾಗ್ಯಗಲ್ಲದೆ 1 ಭಕ್ತ ಜನಮಿಂದದೆ ತೀರ್ಥವು ನಿಖಿಲರರಿವುದೆ ಭಕ್ತ ಜನರುಂಡಸ್ಥಳ ಸಿರಿಯಾವಾಸವು ದೊರೆಯದಾರಿಗೆ ಭಕ್ತ ದರ್ಶನ ಪರಮ ಮಂಗಲವೋ ಶುಭಕೆ ಶುಭಕರವು ಭಕ್ತಜನರಿಹ್ಯ ಸಭೆಯೆ ಹರಿಸಭೆ ಭಕ್ತರೊಪ್ಪಿಗೆ ಹರಿಯ ಒಪ್ಪಿಗೆ ಮೃತ್ಯುದೂರ ಮಾಳ್ಪ ಸರ್ವೋತ್ತಮನ ಭಕ್ತರ ಪ್ರೇಮದೊಲುಮೆ 2 ದಾಸರ್ವಾಸವೆ ಕಾಶಿಕೇಂದ್ರವು ಸತ್ಯ ಸತ್ಯವಿದು ದಾಸರಿರುವುದೆ ಪರಮ ವೈಕುಂಠವು ಮತ್ರ್ಯರರಿವುದೆ ದಾಸಗಿತ್ತದ್ದು ಹರಿಗೆ ಅರ್ಪಣವು ಪರಮ ಸುಖಕರವು ದಾಸರೊರ್ಣವು ತೀರದಾರಿಗೆ ಶ್ರೀಶ ಶ್ರೀರಾಮನಡಿಯಕಮಲ ದಾಸರಿಜನರಡಿ ಪಿಡಿದು ಸುಸಹ ವಾಸದಿರುವುದೆ ಮುಕ್ತಿಸಂಪದ3
--------------
ರಾಮದಾಸರು
ಬೇಡುವರೋ ಬೇಡುಣುತಿಹ್ಯರೋ ಬೇಡಿ ಬೇಡದಂತೆ ನಾಡೊಳ್ಹರಿದಾಸರು ಪ ಕೊಟ್ಟರೆ ಶ್ಲಾಘನೆ ಮಾಡರೊ ಕೊಡದಿದ್ದರೆ ಸಿಟ್ಟಿಗೆ ಬಾರರೊ ಕೊಟ್ಟಕೊಡವದರೆಲ್ಲ ಅಷ್ಟೆಯೆಂದೆನ್ನುತ ಸೃಷ್ಟಿಗೀಶನ ಘಟ್ಟ ತಿಳಿದಿಹ್ಯರೂ 1 ಸಂಚಿತದಿಂ ಜನ್ಮ ತಾಳಿಹ್ಯರೂ ವಿ ರಂಚಿಪಿತಗೆ ಭಾರಹೊರಿಸಿಹ್ಯರೊ ಹಂಚಿಕಿಯಿಂದ ನಿರ್ವಂಚಿತರಾಗಿ ಬಂದ ಸಂಚಿತಾದಡಾಗಮ ಗೆಲಿಯುವರೊ 2 ಕಾಮಿತಗಳೆಲ್ಲ ಕಡೆದಿಹ್ಯರು ಈ ಭೂಮಿಸುಖಕೆ ಮನಮೋಹಿಸರೊ ನೇಮದಿಂದ ಮಹ ಕ್ಷೇಮವಾರಿಧಿ ಸ್ವಾಮಿ ಶ್ರೀರಾಮ ಪಾದಕ್ಹೊಂದಿಹ್ಯರೊ 3
--------------
ರಾಮದಾಸರು
ಬ್ಯಾಗ ಬರುವೇನೆಂದು ಸಾಗಿ ಮಧುರೆಗೆ ಹೋದ ಹ್ಯಾಗೆ ಮಾಡುವೊಣುದ್ಧವ ಭಾಗವತಪ್ರಿಯಗಿನ್ನು ಬಾಗಿ ನಮಿಸುತ ನಾವು ಉದ್ಧವ ಪ ಗೋಕುಲವಾಸ ಬಿಟ್ಟ್ಯಾಕೆ ತೆರಳಿದ ಸ್ವಾಮಿ ಈ ಕಾರ್ಯವನು ತಿಳುಹಿಸೊ ಶ್ರೀಕರ ಕಮಲಾರ್ಚಿತ ಚರಣಧ್ವಜವಜ್ರ- ರೇಖಪಾದವ ಚಲಿಸಿದ ಪಾಕಶಾಸನಪ್ರಿಯನು ಪರಮ ನಿರ್ದಯ ಮಾಡಿ ಉದ್ಧವ 1 ಯಂತ್ರಮಾಯದಲಿ ಶ್ರೀಕಾಂತನೊಲಿಸುವುದಕ್ಕೆ ಮಂತ್ರವನು ಮಾಡರಿಯೆವೊ ಅಂತರಂಗದಲಿ ಅನಂತಗುಣ ಸ್ತುತಿಸಲೇ- ಕಾಂತ ಭಕ್ತರಲ್ಲವೊ ನಿಂತು ನಿತ್ಯಾನಂದಮೂರ್ತಿಯ ನೋಡದಲೆ ಉದ್ಧವ 2 ಅತಿಕ್ರೂರನೆನಿಸುವಕ್ರೂರ ಬಂದು ನಮಗ- ಹಿತಮಾಡಿ ಪೋದನಲ್ಲೊ ಮತಿಹೀನರಾಗ್ಹರಿಯ ರಥವ ನಿಲಿಸದಲೆ ಮುಂ- ದೆತನ (ಯತ್ನ ?) ಮರಿಯದೆ ನಿಂತೆವೊ ಪೃಥಿವಿ ಒಳಗಿಂಥ ಗೋಪಿಕಾಸ್ತ್ರೀಯರೆಂದು ಭಾಳಪ- ಉದ್ಧವ 3 ಸಕ್ಕರೆಯಂಥ ಸವಿಮಾತನಾಡುತ ನಮಗೆ ದಕ್ಕಿದಕ್ಕದಲ್ಹೋದನೊ ಮತ್ತೇನು ಪೇಳೋಣ ಮಂದಭಾಗ್ಯರು ಹರಿಯ ದಕ್ಕಿಸಿಕೊಳ್ಳದ್ಹೋದೆವೊ ಸಿಕ್ಕರೆ ಧನವು ಶತಸಾವಿರ ಕೊಪ್ಪರಿಗೆ ಅಷ್ಟ- ಉದ್ಧವ 4 ಮಡದಿಯರು ಕೇಳಿಗೆ ಮಧುರಾಪಟ್ಟಣದಂಥ ಚೆದುರೆಯರು ನಾವಲ್ಲವೊ ಮದನನಾಟಕೆ ಮದಗಜಗಮನೇರಿಗಿನ್ನು ಮುದದಿ ಮರುಳಾಗಿಪ್ಪನೊ ವಿಧಿ ಬರೆದನೇನೆಂದರೀ ನಮ್ಮ ಪಣೆಯಲ್ಲಿ ಉದ್ಧವ 5 ಮಲ್ಲರನೆ ಮಡುಹಿದ್ದ ಮಾವನ್ವೈರಿಯು ನಮ್ಮ ಕೊಲ್ಲಿ ಪೋದಂತಾಯಿತೊ ಸಲ್ಲ ನಡತೆಯ ಸೊಟ್ಟಕುಬ್ಜೆಗೆ ಕಡೆಯು ನಾ- ವಲ್ಲವೆಂದವಗೆ ಪೇಳೊ ನಿಲ್ಲದ್ಹೋಗ್ಹಿಂದಕೆ ಸುಳ್ಳಲ್ಲೊಂದು ಬೆರೆಸದಲೆ ಉದ್ಧವ 6 ಕಲ್ಲಾಗದೀವಿಧಿಯ ಕಾಮನಪಿತನಗಲಿ ಸೊಲ್ಲು ಸೊಲ್ಲಿಗೆ ಬಳಲ್ದೆವೊ ಮಲ್ಲಿಗ್ವೊಣಗಿದ ದಾರದಂತೆ ಗೋವ್ರಜಮೂಲೆ- ಯಲ್ಲಿ ನಾವಿರಲಾರೆವೊ ಎಲ್ಲಿ ಬಂದೊದಗಿತೀ ಬಿಲ್ಲ ್ಹಬ್ಬನಮಗೆ ಭೀ- ಉದ್ಧವ 7
--------------
ಹರಪನಹಳ್ಳಿಭೀಮವ್ವ
ಬ್ರಹ್ಮವದು ಹ್ಯಾಗಿದೆಬ್ರಹ್ಮ ಕೇಳ್ವನ ಹಾಗಿದೆಬ್ರಹ್ಮವದು ಹೀಗೆಂದು ತೋರಲಿಕೆ ಶಕ್ಯವೇ ಪ ಬ್ರಹ್ಮವದು ಶೂದ್ರನೇಬ್ರಹ್ಮವದು ಭದ್ರನೇಬ್ರಹ್ಮವದು ರುದ್ರನೆಂದು ತೋರಿಸಲು ಶಕ್ಯವೇ 1 ಬ್ರಹ್ಮವದು ಯಂತ್ರವೇಬ್ರಹ್ಮವದು ತಂತ್ರವೇಬ್ರಹ್ಮವದು ಮಂತ್ರವೆಂದು ತೋರಿಸಲು ಶಕ್ಯವೇ 2 ಬ್ರಹ್ಮವದು ರೊಟ್ಟಿಯೇಬ್ರಹ್ಮವದು ಪುಟ್ಟಿಯೇಬ್ರಹ್ಮವದು ಹೊಟ್ಟೆಯೆಂದು ತೋರಿಸಲು ಶಕ್ಯವೇ 3 ಬ್ರಹ್ಮವದು ಜೋಳಿಗೆಬ್ರಹ್ಮವದು ಮಾಳಿಗೆಬ್ರಹ್ಮವದು ಹೋಳಿಗೆ ಎಂದು ತೋರಿಸಲು ಶಕ್ಯವೇ 4 ಹೇಗಿದೆಂದು ಕೇಳ್ವಡೆಹೀಗೆದೆಂದು ಪೇಳ್ವಡೆಹೇಗೆ ಹೀಗೆ ಎಂಬುದಕ್ಕೆ ಚಿದಾನಂದನ ನೋಡಿದೆ 5
--------------
ಚಿದಾನಂದ ಅವಧೂತರು
ಭಕ್ತಿಗೆ ಮೂರು ಗುಣಗಳು ಬೇಕು ಯುಕ್ತಿವಂತರು ಕೇಳಿ ಮುಕ್ತಿಶೀಲವು ತಿಳಿದು ನಿಜವಿರಕ್ತತನದಲಿ ಬಾಳಿ ಧ್ರುವ ಪ್ರೇಮ ಪ್ರೀತಿ ರತಿ ನೇಮದಲಿ ಶ್ರೀಸ್ವಾಮಿ ಚರಣದಲಿಡಬೇಕು ಸೌಮ್ಯ ಸಮಾಧಾನದಲಿ ತಾನಮೃತವನು ಹಿಡಿಯಬೇಕು ನಿರ್ಮಳದಲಿ ನಡಿಬೇಕು ಪಡೆದು ಸಮದೃಷ್ಟಿಗುಡಬೇಕು 1 ನಿತ್ಯ ವಿವೇಕವು ತಿಳಿದು ಪಥ್ಯದಲಿ ನಡಿಯಬೇಕು ಚಿತ್ತವೃತ್ತಿ ಸವೃತ್ತಿಯ ಮಾಡಿ ಸತ್ಯದಲಿ ನುಡಿಯಬೆಕು ಉತ್ತಮೋತ್ತಮ ವಸ್ತುದ ನಿಜಸುಖ ಹೃತ್ಕಮಲದಲಿಡಬೇಕು ಭಕ್ತಿಗೆ ಭಾವನೆ ಬಲಗೊಂಡು ವೈರಾಗ್ಯದ ಸುಖ ತೊಡಬೇಕು 2 ಸೋಹ್ಯ ಸೋನ್ನಿಯ ಸೂತ್ರವ ತಿಳಿದು ಸ್ಥಾಯಿಕನಾಗಿರಬೇಕು ಧ್ಯೇಯಧ್ಯಾತಧ್ಯಾನವ ತಿಳಿದು ಮಾಯದ ಮೊನೆ ಮುರಿಬೇಕು ನ್ಯಾಯ ನೀತಿಯ ನೆಲೆನಿಭವನು ಉಪಾಯದಲಿ ಅರಿಯಬೇಕು ಪಾಯಕನಾಗನುದಿನ ಮಹಿಪತಿ ಗುರುಪಾದದಿ ಸ್ಥಿರವಿರಬೇಕು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಗವಂತನ ಸಂಕೀರ್ತನೆ ಇಂಥಾವಗ್ಹ್ಯಾಂಗೆ ಮನಸೋತೆ ಬಲು ಪಂಥವಾಡಿದ ಜಗನ್ಮಾತೆ ಪ. ಆವಾಗ ನಾರುವ ಮೈಯ್ಯ ಬಿಚ್ಚಿ ತೋರಿ ನಲಿಯುವ ಕಾಲು ಕೈಯ್ಯ ಕೋರೆಯ ಮಸೆಯುತ ಕೊಸರಿಕೊಂಡಸುರನ ಕರುಳನು ಬಗೆದಂಥ ಅದ್ಭುತ ಮಹಿಮಗೆ 1 ಬಡಬ್ರಾಹ್ಮಣನಾಗಿ ತಿರಿದ ತನ್ನ ಹಡೆದ ತಾಯಿಯ ಶಿರವರಿದ ಮಡದಿಗಾಗಿ ದೊಡ್ಡಡವಿಯೊಳ್ಮನೆ ಕಟ್ಟಿ ಬಿಡದೆ ಸ್ತ್ರೀಯರ ಗೋಕುಲದಲ್ಲಿ ಮೆರೆದ 2 ಬತ್ತಲೆ ನಿಂತಿದ್ದನೀಗ ತೇಜಿ ಹತ್ತಿ ಮೆರೆವದೊಂದು ಯೋಗ ಉತ್ತಮ ಹೆಳವನಕಟ್ಟೆ ಶ್ರೀರಂಗ ಭಕ್ತವತ್ಸಲ ಸ್ವಾಮಿ ದೇವಕೃಪಾಂಗ 3
--------------
ಹೆಳವನಕಟ್ಟೆ ಗಿರಿಯಮ್ಮ
ಭಜಿಸಬಾರದೆ ಮನವೆ ಭಜಿಸಬಾರದೆ ಭಜಿಸಲಿಕ್ಕೆ ಭಾವದಿಂದ ನಿಜವಾ ಗೊಲಿವ ಹರಿ ಮುಕುಂದ ಧ್ರುವ ನಿಜವಬಿಟ್ಟು ದಣವದ್ಯಾಕೆ ತ್ರಿಜಗಪತಿಗೊಂದಿಸದೆ ತಾನು ಭಜನ ಮುಖ್ಯವೆಂದು ಸುಜನರೆಲ್ಲ ಪೇಳುತಿರಲಿಕ್ಕಾಗಿ 1 ಪ್ರೀತಿಯಿಂದರ್ಜುನ ನೋಡಿ ಗೀತೆಯಲ್ಲಿ ಶ್ರೀಕೃಷ್ಣತಾನು ನೀತಿಹಿತವ ಭಕ್ತಿಯೋಗದಲ್ಲಿ ಸಾರತಿರಲಿಕ್ಕಾಗಿ 2 ಪ್ರಕಟಭಾವಕೊಲಿದ ನೋಡಿ ಅಖಿಲದೊಳು ಸುಲಭದಿಂದ ಭಕುತಿ ಸುಖವನಿತ್ತು ಸಲಹುತಿಹ್ಯ ಮಹಿಪತಿಸ್ವಾಮಿಗಿನ್ನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಜಿಸಿ ನೋಡಿರೋ ಭಾವಭೋಕ್ತನ ಅಜಸುರೊಂದ್ಯ ಸುಜನಪಾಲ ತ್ರಿಜಗದಾತ್ಮನ ಧ್ರುವ ಭಾವಕ ಸುಲಭ ಜೀವದ ನೆಲೆನಿಭ ಕಾವಕರುಣ ದೇವನೀತ ಪ್ರಾಣವಲ್ಲಭ 1 ರಾಜಿಸುತಿಹ್ಯನು ತೇಜೋಮಯದಲಿ ಭಜಕ ಪ್ರಿಯನಾಗಿ ಒಲಿವ ನಿಜಸುಮನದಲಿ 2 ಡಂಭಭಕುತಿಗೆ ಇಂಬದೋರನು ನಂಬಿನಡೆವ ಭಕ್ತಜನರ ಮನೆಯೊಳಿಹ್ಯನು 3 ಭಕುತಿ ಭಾವಕ ನೆಲಿಯುಗೊಂಬನು ಮಕುಟಮಣಿ ಸುಭಾನುಕೋಟಿ ಪ್ರಕಟ ಹೊಳೆವನು 4 ಒಂದು ಮನದಲಿ ಹೊಂದಿ ಸುಖಿಸಿರ್ಯೊ ಎಂದೆಂದು ಬಿಡದೆ ಸಲಹುತಿಹ್ಯ ಮಹಿಪತಿ ಸ್ವಾಮಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಯ ನಿವಾರಣವು ಶ್ರೀಗುರು ದಿವ್ಯನಾಮ ನಿಮ್ಮ ನಾಮ ಧ್ರುವ ಕ್ಲೇಶಪಾಶವು ಕತ್ತರಿಸಿ ದೋಷನಾಶವನು ಗೈಸಿ ಪೋಷಿಸುವ ಕೇಶವ ನಿಮ್ಮ ನಾಮ 1 ನರಕ ಘೋರದ ಘಟವೆಂಬ ನರಜನ್ಮದುರ್ಘಟ ತಾರಿಸುವ ನಾರಾಯಣ ನಿಮ್ಮ ನಾಮ 2 ಮದಮತ್ಸರವ ಜರಿಸಿ ಭೇದಾಭೇದವು ಹರಿಸಿ ಮಾಧವ ನಿಮ್ಮ ನಾಮ 3 ಭವ ಹಿಂಗಿಸುವ ಗೋವಿಂದ ನಿಮ್ಮ ನಾಮ 4 ಇಷ್ಟಾರ್ಥಗಳ ಕೊಟ್ಟು ಕಷ್ಟಾರ್ಥ ಪರಿಹರಿಸಿ ದೃಷ್ಟಾಂತದಲಿ ಹೊರೆವ ವಿಷ್ಣು ನಿಮ್ಮ ನಾಮ 5 ಮೊದಲು ಮೂವಿಧಿಯಗಳು ಜರಿಸಿ ಸದಮಲ ಪುಣ್ಯ ಪದವೀವ ಮಧುಸೂದನ ನಿಮ್ಮ ನಾಮ 6 ತ್ರಿವಿಧಾಧ್ಯಾತ್ಮ ಸ್ಥಿತಿಗತಿಯ ಈವ ಶಾಸ್ತ್ರಗಳನರಿಸಿ ಭಾವಭಕ್ತೀವ ತ್ರಿವಿಕ್ರಮ ನಿಮ್ಮ ನಾಮ 7 ವರ್ಮಧರ್ಮವನರಿಸಿ ಕರ್ಮಪಾಶವ ಹರಿಸಿ ಜನ್ಮ ತಾರಿಸುವ ವಾಮನ ನಿಮ್ಮ ನಾಮ 8 ಶ್ರೀಕರವನಿತ್ತು ಸಿರಿಸಕಲ ಸೌಭಾಗ್ಯದಲಿ ಸೃಷ್ಟಿಯೊಳು ಹೊರೆವ ಶ್ರೀಧರ ನಿಮ್ಮ ನಾಮ 9 ಹರಿಸಿ ಸಂದೇಹ ಸಂಕಲ್ಪ ಬಾಧೆಯಗಳು ಹರುಷ ಗತಿನೀವ ಹೃಷೀಕೇಶ ನಿಮ್ಮ ನಾಮ 10 ಪಾತಕ ಹರಿಸಿ ಪದ್ಮನಾಭ ನಿಮ್ಮ ನಾಮ 11 ದುರಿತ ವಿಧ್ವಂಸನಿಯ ಮಾಡಿ ಧರೆಯೊಳು ದ್ಧರಿಸುವ ದಾಮೋದರ ನಿಮ್ಮ ನಾಮ 12 ಸಕಲ ಪದವಿತ್ತ ಸುಖಸಾಧನವ ತೋರುತಿಹ್ಯ ಅಖಿಳದೊಳು ಸಂಕುರುಷಣ ನಿಮ್ಮ ನಾಮ 13 ವಾಸನೆಯು ಪೂರಿಸುತ ಭಾಷೆ ಪಾಲಿಸುತಿಹ ಲೇಸಾಗಿ ಶ್ರೀವಾಸುದೇವ ನಿಮ್ಮ ನಾಮ 14 ಪ್ರಾಣಪ್ರಿಯವಾಗಿ ಪ್ರಸನ್ನವಾಗುವ ಪೂರ್ಣ ಪ್ರತ್ಯಕ್ಷವಿದು ಪ್ರದ್ಯುಮ್ನ ನಿಮ್ಮ ನಾಮ 15 ಅನುಮಾನ ಪರಿಹರಿಸಿ ಅನುಭವಾಮೃತ ಸುರಿಸಿ ಅನಿರುದ್ಧ ನಿಮ್ಮ ನಾಮ 16 ಪೂರ್ವಕರ್ಮವ ಹರಿಸಿ ಪೂರ್ಣಕಳೆಯೊಳು ಬೆರೆಸಿ ಪುಣ್ಯಪದವೀವ ಪುರುಷೋತ್ತಮ ನಿಮ್ಮ ನಾಮ 17 ಅಧ್ಯಾತ್ಮ ಸುಖವರಿಸಿ ಸಿದ್ಧಾಂತವನು ತೋರಿ ಅಧ್ಯಕ್ಷವಾಗುವಾಧೋಕ್ಷಜ ನಿಮ್ಮ ನಾಮ 18 ನರಜನ್ಮವನು ಹರಿಸಿ ಹರಿಭಕ್ತಿಯೊಳು ಬೆರೆಸಿ ಅರುವು ಕುರ್ಹುವ್ಹಿಡಿದ ನರಸಿಂಹ ನಿಮ್ಮ ನಾಮ 19 ಅರ್ಚನೆಯು ಪ್ರಾರ್ಥನೆಯು ಪರಮಪೂಜೆಯನರಿಸಿ ಅಚ್ಯುತ ನಿಮ್ಮ ನಾಮ 20 ಜನನ ಮರಣವನಳಿಸಿ ತನುಮದೊಳು ಬೆರಿಸಿ ಜನುಮ ಹರಿಸುವ ಜನಾರ್ದನ ನಿಮ್ಮ ನಾಮ21 ಉಪಮೆಯ ರಹಿತ ವಸ್ತುವುಪಾಯದಲಿ ತೋರಿ ಕೃಪೆಯಿಂದ ಹೊರೆವ ಉಪೇಂದ್ರ ನಿಮ್ಮ ನಾಮ22 ಹರಿಸಿ ಅಹಂಭಾವ ಅರಿಸಿ ಅನುಭವ ಪೂರ್ಣ ಸುರಿಸುವ ಸುಖ ಶ್ರೀಹರಿ ನಿಮ್ಮ ನಾಮ 23 ಕರಕಮಲವಿಟ್ಟು ಶಿರದಲಿ ಸದ್ಗೈಸುತಿಹ ಕರುಣಾಳು ಮೂರುತಿ ಶ್ರೀಕೃಷ್ಣ ನಿಮ್ಮ ನಾಮ 24 ಸಾರ ಸಂಧ್ಯಾಯನದಿ ಮಹಿಪತಿಯ ಹೊರೆವ ಶ್ರೀಗುರು ನಿಮ್ಮ ನಾಮ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭವ ಎತ್ತಲಾರೆ ಚಿತ್ತಜಪಿತನೆ ನಿತ್ಯ ಮುಕ್ತಿಸುಖವ ನೀಡೊ ಪ ಮರ್ತು ಇಂದಿನತನಕ ನಿಮ್ಮ ನಿತ್ಯನಿರ್ಮಲಪಾದ ಎಂ ಬತ್ತುನಾಲ್ಕುಲಕ್ಷ ಜನುಮ ಗುರ್ತಿಲ್ಲದೆ ತಾಳಿದ್ದೆ ಸಾಕೊ 1 ಉತ್ತಮಸಂಗ ಮರೆದು ಮದೋ ನ್ಮತ್ತನಾಗಿ ಚರಿಸಿ ಮತ್ತೆ ಕತ್ತೆಯಂತೆ ಇಹ್ಯಕೆ ಪರಕೆ ಸುತ್ತಿ ಸುತ್ತಿ ಬೇಸತ್ತದ್ದೆ ಸಾಕೊ 2 ಚಿತ್ತಭ್ರಾಂತನಾಗಿ ಸತತ ಸತ್ಯಮಾರ್ಗದಪ್ಪಿ ಕೆಡುವ ಭಕ್ತನ ತಪ್ಪುಕ್ಷಮಿಸಿ ಕರುಣ ದೆತ್ತಿ ಸಲಹೊ ಸಿರಿಯರಾಮ 3
--------------
ರಾಮದಾಸರು