ಒಟ್ಟು 12527 ಕಡೆಗಳಲ್ಲಿ , 133 ದಾಸರು , 6731 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರುದಂಶ ಮಧ್ವಮುನಿರನ್ನ ನಿನಗೆಸರಿಗಾಣೆ ಜಗದೊಳಗೆ ಸರ್ವರೊಳು ಪೂರ್ಣ ಪ. ಹಿಂದೆ[ರಾಮರು] ಮುಂದೆ ಬಂಟನಾಗಿ ನೀ ನಿಂದೆಚಂದ್ರದ್ರೋಣದ ಗಿರಿಯ ತಂದೆ ದನುಜರ ಕೊಂದೆ[ಎಂದೆಂದಿಗಳಿವಿಲ್ಲದ]ಬ್ರಹ್ಮ ಪದವಿಗೆ ಸಂದೆಇಂದ್ರಾದಿ ಸುರರುಗಳ ತಂದೆ ಸ್ವಾಮಿಇಂದೆಲ್ಲರಿಗೆ ನೀನು ಗುರುವೆನಿಸಿ ನಿಂದೆ 1 ಕೌರವ ಬಲವ ತರಿದೆ ಕೀಚಕನ ಕುಲವ ಮುರಿದೆಒರ್ವನೆ ಬೇಸರದೆ ಷಡ್ರಥಿಕರನು ಗೆಲಿದೆಉರ್ವಿಯೊಳು ಭುಜಬಲದಿ ಭೀಮನೆನಿಸಿ ಮೆರೆದೆ ಹರಿಯ ಕಿಂಕರರ ಪೊರೆದು ಈಗಸರ್ವವನು ತೊರೆದು ಶಾಸ್ತ್ರಾಮೃತವಗರೆದೆ 2 ದುರುಳವಾದಿಗಳೆನಿಪ ಘನತಾಮಸಕೆ ದಿನಪಸಿರಿಯರಸ ಹಯವದನಪದಕಂಜಯುಗಮಧುಪಗುರುಮಧ್ವಮುನಿಪ ನಿರ್ಲೇಪ ಶುದ್ಧಸ್ಥಾಪ ವರ-ವಿದ್ಯಾಪ್ರತಾಪ ಭಾಪುರೆಪರಮಪಾವನರೂಪ ಭಳಿರೆ ಪ್ರತಾಪ 3
--------------
ವಾದಿರಾಜ
ಮರುಳು ಮನುಜ ಹರಿಯ ಧ್ಯಾನಿಸೋ ಸ್ಥಿರವಿಲ್ಲವೀದೇಹ ಪ ಬರಿದೆ ಹೊನ್ನು ಮಣ್ಣಿಗಾಗಿ ಇರುಳು ಹಗಲು ವ್ಯರ್ಥವಾಗಿ ಕರೆಕರೆಯನು ಪಡುವೆಯಲ್ಲೊ ಅ.ಪ ತಂದೆ ತಾಯಿ ಸತಿಯು ಸುತರು ಬಂಧು ಬಳಗಗಳಾರಿದ್ದರು ಕರ್ಮ ತಪ್ಪಿಪರಾರು ಸಂದೇಹವಿಲ್ಲೆಂದು ತಿಳಿದು 1 ಜನರು ನಿನ್ನ ಸೇರುತಿಹರು ಕೊನೆಗೆ ಯಾರು ದಿಕ್ಕು ಕಾಣೆ ಮನೆಯಬಿಟ್ಟು ಹೋಗುವಾಗ 2 ಗುರುರಾಮವಿಠಲನಂಘ್ರಿ ಸ್ಮರಿಸಿ ಸ್ಮರಿಸಿ ಹರುಷ ಪೊಂದಿ ಪಾಪಿಯೆನ್ನಿಸಿಕೊಳ್ಳಬೇಡವೊ 3
--------------
ಗುರುರಾಮವಿಠಲ
ಮರುಳುತನವಿದ್ಯಾಕೆ ಮನವೆ ಮಂದಭಾವದಿ ಶ್ರೀ- ಧರೆಯರಸ ಸ್ವೇಚ್ಛೆಯಿಂದ ಪೊರೆವ ತಾನೆ ಕರುಣದಿ ಪ. ಕಾಲ ನಾನಾ ಫಲಗಳನ್ನು ತೋರ್ಪುದು ಶ್ರೀ ಲಲನೆಯರ ಸನಿಚ್ಛೆಯಿಂದ 1 ಛಳಿಯು ಬಿಸಿಲು ಮಳೆಯು ಗಾಳಿ ಸುಳಿವದ್ಯಾರ ಕೃತ್ಯವೆಂದು ತಿಳಿದು ನೋಡಲಿನ್ನು ವ್ಯರ್ಥ ಫಲವಗೊಳ್ಳುತಳಲದಿರು 2 ಸತ್ಯ ಸಂಕಲ್ಪಾನುಸಾರ ಭೃತ್ಯವರದ ಕರುಣದಿಂದ- ಲಿತ್ತುದೆ ಸಾಕೆಂದು ತಿಳಿವದುತ್ತಮ ಸಾಂಗತ್ಯ ಬಯಸು 3 ಹಸಿದ ವೇಳೆಯಲ್ಲಿ ತಾಯಿ ಬಿಸಿಯ ಹಾಲ ತಣಿಸಿ ತನ್ನ ಶಿಶುವಿಗೀವ ತೆರದಿ ಭಕ್ತವಶನ ಮೇಲೆ ಭಾರವಿರಿಸು 4 ನೆನೆವ ಜನರ ಮನದೊಳಿರುವ ವನಜನಾಭ ವೆಂಕಟೇಶ ವಿನಯದಿಂದ ಕಾವನೆಂಬ ಘನವ ತಿಳಿದು ಪಾಡಿ ಪೊಗಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಮರುಳೆ ಸುಖ ನೀನೆನು ಪಡೆದಿ ನರಜನುಮ ತಾಳಿ ಇಹ್ಯದಿ ಪ ಪರಿಪರಿ ಜನುಮ ತಾಳಿ ಪರಮ ಬಂಧದೊಳೊರಲ ಉರುಳಿ ವರಮುಕ್ತಿ ದೊರೆವ ಕೀಲಿ ಸ್ಮರಿಸಿ ಬಂದಿ ಹರಿಯ ಬಳಲಿ 1 ಅರಿಯದೆ ಮತ್ತು ಭವಮಾಲೆ ಕೊರಳಿಗ್ಹಾಕಿಕೊಂಡಿ ದುರುಳ ಮರೆಯಮೋಸ ಕಾಂಬೋದೆಲ್ಲ ಹರಿದು ಪೋಗ್ವುದು ಸ್ಥಿರವಲ್ಲ 2 ಸಮಯ ಮಿಂಚಿಪೋದ ಬಳಿಕ ಕ್ರಮದಿ ಮತ್ತೆ ಸಿಗುವುದೆ ಮೂರ್ಖ ವಿಮಲ ಶ್ರೀರಾಮ ಪಾದಕಮಲ ನಮಿಸಿ ಪಡಕೊ ಮುಕ್ತಿಮಾಲಾ 3
--------------
ರಾಮದಾಸರು
ಮರೆತರತಾಮರ ವಲ್ಲದು ನೋಡಲು | ಅರತರತಾ ಅರವಲ್ಲದು ನಿಜದೊಳು | ಅರಹು ಮರಹು ಎರಡನೇ ಮೀರಿಹ | ಘನದರುವೇ ತಾನಾಗಿ | ಕುರುವಿನೊಳಿರುವಾಗಿಹ ಸ್ವಾನಂದದಿ | ತೆರವಿಲ್ಲದೆ ಸೆಲೆತುಂಬಿ ತುಳುಕುತಿಹ | ಪರವೆಂದೆನಿಸಿದ ಶರಣ ರಕ್ಷಕ | ಗುರು ಮಹಿಪತಿ ಜಯ ಜಯತು
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮರೆತು ಇರುವರೆ ಸರ್ವಜ್ಞನೆನಿಸಿ ಪ ಮರೆತು ಇರುವರೇನೋ ಕರುಣಾ ವಾರಿಧಿ ನರಹರಿಯೆ ಬಾಲನ ದುರುಳತನಗಳೆಣಿಸಿದೊಡೆ ನೀ ಕರೆದು ಮುಂದಕೆ ಪೊರೆವರ್ಯಾರು 1 ಕಲ್ಲು ಕೊಟ್ಟ ಬಿಲ್ಲಿಲಿಟ್ಟ ಕ್ಷುಲ್ಲಕ ಮಾತಾಡಿ ಬಿಟ್ಟ ಕಳ್ಳ ಸುಳ್ಳ ಜಾರನೆಂದ ಗೊಲ್ಲತಿಯರನೆಲ್ಲ ಪೊರೆದಿ 2 ತರಳ ನಿನ್ನ ಪೂಜಿಸಲಾರದೆ ಕರವ ಶಿರದಿ ಇರಿಸೆ ಕೂತು ಕರದಿ ಗುಂಜವಿರಿಸಿ ಸಿರಿಯ ಮರೆತು ಇರುವವರಂತೆ 3 ವರ ಸುಮೌನೀಗಣಕೆ ಬಲ ನಾ ನರಿಯಿರೆಂದು ಬೀರಿ ಚರಣ ಚರಣದರ ಮನೆಯೊಳಿರಿಸಿ ಪೊರೆವಿ ತರಳನ ನೀ ಜರಿವರೇನೊ 4 ಧರಣಿಯೊಳಗೆ ಇರುವ ಕ್ಷೇತ್ರದಿ ವರ ಸುಕ್ಷೇತ್ರವಿದೆಂದು ಅರುಹಿ ಬರುವ ಸಜ್ಜನರನು ಪೊರೆವಿ ಭಾರ ನಾನೊಬ್ಬನೇ ಪೇಳೋ 5 ಶ್ರೀ ನರಹರಿಯೆ ಇನಿತು ಜ್ಞಾನ ಶೂನ್ಯನ ಮಾಡಿ ನಿನ್ನ ಕಾಣಿಸುವರೊಡನೆ ಮಾಧವ 6
--------------
ಪ್ರದ್ಯುಮ್ನತೀರ್ಥರು
ಮರೆತು ಹೋದೆನೊ ದೇವ ರಂಗಯ್ಯ ರಂಗ ಸಿರಿದೇವಿ ರಮಣನೆ ಪರನೆಂದು ತಿಳಿಯದೆ ಪ ನೀರೊಳು ಮುಳುಗುತ್ತ ಮೀನಮತ್ಸ್ಯನು ಎಂದು ವೇದವ ತಂದಿತ್ತೆ ದೇವೇಶನೆ ವಾರಿಧಿಶಯನನೆ ವಾರಿಜಾಕ್ಷನು ಎಂದು ಸಾರಸಾಕ್ಷನ ಗುಣ ಸ್ಮರಿಸದೇ ಮನದಲಿ 1 ಬೆಟ್ಟ ಬೆನ್ನಿಲಿ ಪೊತ್ತು ಪೊಕ್ಕು ನೀರೊಳು ಬೇಗ ಭಕ್ತರನುದ್ಧರಿಸಿದ ದೇವನ ಪೃಥ್ವಿಯ ಕೋರೆಯಿಂದೆತ್ತಿ ಅಸುರನ ಕೊಂದ ಸಿಸ್ತು ತೋರಿದ ಪರವಸ್ತುವ ಸ್ಮರಿಸದೆ 2 ಘುಡು ಘುಡಿಸುತ ಬಂದು ಒಡಲ ಸೀಳಲು ಖಳನ ಅಡವಿ ಮೃಗವು ಎಂದು ಬೆರಗಾದೆನೊ ಹುಡುಗನಂದದಿ ಪೋಗಿ ಪೊಡವಿಪಾಲಕನ ಬೇಡಿ ಕೊಡಲಿಯ ಪಿಡಿಯುತ್ತ ತಾಯತರಿದನ ಸ್ಮರಿಸದೆ 3 ನಾರಿಯನರಸುತ ವನವ ಚರಿಸಿದಿ ನಾರಿಚೋರನ ಕೊಂದೆ ವಾನರ ಸಹಿತ ನವನೀತ ಚೋರನೆ ಮನೆಮನೆಗಳ ಪೊಕ್ಕು ಗಾರು ಮಾಡಿದ ಕೃಷ್ಣ ಹರಿಯೆಂದು ಸ್ಮರಿಸದೆ 4 ಬೆತ್ತಲೆ ನಿಂತರು ಉತ್ತಮ ನೆನಿಸಿದಿ ಸತ್ಯಮೂರುತಿ ಪುರುಷೋತ್ತಮನೆ ಕತ್ತಿ ಕಯ್ಯಲಿ ಪಿಡಿದು ಮತ್ತೆರಾವುತನಾಗಿ ಸುತ್ತಿ ಸುತ್ತಿದ ಸರ್ವೋತ್ತಮನರಿಯದೆ 5 ಭಕ್ತವತ್ಸಲಸ್ವಾಮಿ ಭಯನಿವಾರಣನೆಂದು ಭೃತ್ಯರು ನೃತ್ಯದಿ ಕುಣಿಯುವರೊ ಸತ್ಯ ಸಂಕಲ್ಪನೆ ಸತ್ಯಭಾಮೆಯ ಪ್ರಿಯ ಭಕ್ತರೊಡೆಯ ಪರವಸ್ತುವ ಸ್ಮರಿಸದೆ6 ಕರುಣವಾರಿಧಿಯೆಂದು ಸ್ಮರಿಸುವ ಭಕುತರ ಪರಿ ಅಘಗಳು ಪರಿಹಾರವೊ ಪತಿ ಕಮಲನಾಭ ವಿಠ್ಠಲ ಸ್ಮರಿಸದೆ ಅಪರಾಧ ಸಲಹೆಂದು ಸ್ಮರಿಸದೆ 7
--------------
ನಿಡಗುರುಕಿ ಜೀವೂಬಾಯಿ
ಮರೆಯದ ಭಾವಗೋಚರವಾುತಯ್ಯಾಕರುಣಿ ವೆಂಕಟದಾಸವರ್ಯ ಸದ್ಗುರುವೆ ಪಸನ್ನಿಕರ್ಷವನಾದರಣ ಹೇತು ಮಾನವರಿಗೆನ್ನುತಾನಂದ ರಸರುಚಿ ದೋರಿಸಿನಿನ್ನನೆ ತೊಳಲಿ ಬಳಲುತ ನಿನ್ನೊಳೆರಗುವಂತುನ್ನತರ ಮಾಡಲಂತರ್ಧಾನವಡೆವೆ 1ಗೋಪಿನಾರಿಯರಿಗಾನಂದ ರೂಪವ ತೋರಿತಾಪಬಡುವಂತಗಲಿ ುದ್ಧವರ ಮುಖದಿಸೋಪಾಯವಚನದಿಂ ತಿಳು'ದರ್ಥವ ನೆನೆಯಲೀ ಪರಿಯ ತೋರಿತೆನಗೆಲೆ ದಯಾನಿಧಿಯೆ 2ನೆರೆಧನ್ಯರಾದೆವಾ'ಲ್ಲ ಸಂದೇಹ ಗುರುವರ ವಾಸುದೇವಾರ್ಯ ಚಿಕನಾಗಪುರದೀಪರತತ್ವವರುಪಿ ವೆಂಕಟದಾಸ ವೇಷದಿಂಮರಳಿ ನಿಜದೊಳು ನಿಂದೆ ಕರುಣಾಸಮುದ್ರಾ 3
--------------
ತಿಮ್ಮಪ್ಪದಾಸರು
ಮರೆಯದಿರು ಮರೆಯದಿರು ಹರಿಯನು ಪಾಪಿ ಪ ಮರೆಯದಿರೆ ನೀ ಮೈಕುಂಠಕೆ ಪೋಪಿಅ.ಪ. ಮೂರು ದಿನ ಬಾಳ್ವ ಸಂಸಾರವ ನೋಡಿ ಬಾರಿ ಹರುಷಿಸದಿರು ನೀನೆಲೊ ಖೋಡಿ 1 ಮತಿವಂತನಾದರೆ ಹರಿಪುರಕೆ ಪೋದಿ ಸತಿಸುತರ ನಂಬೆ ನಿನ ಬಾಯಲಿ ಬೂದಿ 2 ಸಿರಿಯ ನಂಬಿದ ದುರ್ಯೋಧನ ಬಿದ್ದ ಹರಿಯ ನಂಬಿದ ಭೀಮಸೇನನು ಗೆದ್ದ 3 ಆನೆ ಕುದುರೆ ರಥ ಭಂಡಾರವು ನಿಂದೆ ಪ್ರಾಣ ಹೋಗುವಾಗವು ಬಾರವು ಹಿಂದೆ 4 ರಂಗೇಶವಿಠಲನ ನಂಬಿದವ ಜಾಣ ಅಂಗನೆಯರ ನಂಬಿದ ಮನುಜನೆ ಕೋಣ 5
--------------
ರಂಗೇಶವಿಠಲದಾಸರು
ಮರೆಯದಿರು ಹರಿಯಮರೆವರೆ ಮೂರು ಲೋಕದ ದೊರಿಯ ಪ ಮದಗಜ ಹರಿಯೆಂದು ಕರೆಯಲುಒದಗಿ ಆಕ್ಷಣ ಬಂದುಮುದದಿ ನಕ್ರನ ಕೊಂದು ಸಲ-ಹಿದ ಸದ್ಭಕ್ತರ ಬಂಧುಹದುಳ ಪ್ರಹ್ಲಾದನ ಹೆದರಿಸಿದಸುರನಉದರವ ಬಗೆದಂಥದುಭುತ ಮಹಿಮನ1 ನಾರಿಯು ತನ್ನ ಕರೆದ ಮಾತ್ರದಿಸೀರೆಯ ಮಳೆಗರೆದಕ್ರೂರ ಖಳನ ತರಿದು ಆ ಪಾಂಡವರಆರಣ್ಯದಿ ಪೊರೆದಗಾರಾದಜಮಿಳ ನಾರಗ ಎನಲುಪಾರಗಾಣಿಸಿದಪಾರ ಗುಣನಿಧಿಯ 2 ದುರಿತ ಭವ ಪಾಶಾ - ಅವಗೆಂದೆಂದಿಗಿಲ್ಲ ಕ್ಷೇಶಾತಂದೆ ಕದರುಂಡಲಗಿ ಹನುಮಯ್ಯನೊಡೆಯಚಂದಾದಿಕೇಶವನ ನೆನೆದವರೆಂದಿಗು ಧನ್ಯರು3
--------------
ಕನಕದಾಸ
ಮರೆಯದಿರೆಲೊ ಮನುಜಾ ಮಾಧವನನ್ನು ಮರೆಯದಿರೆಲೋ ಶುದ್ಧ ಮರುಳೆ ಮಾತನು ಕೇಳು ಪರಿಪರಿಯಲಿ ನಮ್ಮ ಪೊರೆವ ಕಾರುಣಿಕನ ಪ. ತನ್ನ ಸೇವೆಗೆ ಸಾಧನವಾಗಿಹ ದೇಹ- ವನ್ನು ಪಾಲಿಸಿದವನ ಯಿನ್ನು ನೀ ತಿಳಿಯದೆ ಅನ್ಯ ದೈವಗಳನ್ನು ಮನ್ನಿಸಿ ಮನದಣಿದನ್ನ ನಾಯಕನನ್ನು 1 ಹಸ್ತ ಪಾದಾದಿಗಳ ಕೊಟ್ಟದರಿಂದ ವಿಸ್ತರಿಸಿರುವಾನಂದ ತೋರುವ ಸುರ ಮಸ್ತಕ ಮಣಿಯನು ಮರೆತು ಮೂಢರ ಸೇರಿ ಬಸ್ತಕನಂತೆ ನಿರಸ್ತನಾಗದೆಯೆಂದು 2 ಮನೆಯಲಿ ನಿಲಿಸಿರುವ ವಾಕ್ಕಾಯಕರ್ಮ ಮನದಲಿ ತುಂಬಿರುವ ನಮ್ಮಯ ಸರ್ವ ವನು ತನಮನ ತಾನೆ ನೆನೆದು ಪಾಲನೆ ಗೈವ ವನಜನಯನ ಲಕ್ಷ್ಮಿಯಿನಿಯನ ಮಹಿಮೆಯ 3 ದುರಿತರಾಶಿಯನರದು ದುರ್ ಹೃದಯರ ತರಿದು ಕಾಲಿಂದಲೊದೆದು ಸಿರಿ ಸಹಿತವಾಗಿ ನಮ್ಮಲ್ಲಿರುವನ ಸರ್ವಾಮಯ ಹರ ಪದದಲ್ಲಿ ಭಾರವಿರಿಸು ವಿಚಾರಿಸು 4 ಬಿಡು ಬಿಡು ಭ್ರಾಂತಿಯನು ಮುರಾಂತಕನ- ಲ್ಲಿಡು ನಿನ್ನ ಚಿಂತೆಯನು ಕಡಿವನು ವೈರಿಗಳ ಕೊಡುವನು ಶುಭಗಳ ಒಡೆಯ ವೆಂಕಟಪತಿ ತಡಿಯ ತೋರುವನೆಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಮರೆಯದೆ ಶ್ರೀಹರಿಯಮನದಲಿ ಸ್ಮರಿಸೊ ಗುರುಹಿರಿಯರ ಅನುಗ್ರಹವನು ಗಳಿಸೊ ಪ ಇಂದಿರೆ ರಮಣನ ಅನುದಿನ ಮಂದರ ಧರನಾ 1 ಬಗೆ ಬಗೆಯಲಿ ಶ್ರೀ ಭಗವಂತನ ಪಾದ ಯುಗವನು ನೆರೆನಂಬಿಯಿ-----ಎಂದೆಂದೂ 2 ಪರಿಪರಿ ನವವಿಧ ಭಕ್ತಿಯು ಸಾಧಿಸಿ ಪರ ಬ್ರಹ್ಮ ಪರಮಾನಂದನ 3 ಶರಧಿಶಯನನ ಶಾಂತ ನಿಧಾನನ ಅರವಿಂದ ನಯನನ ಹರಿಗೋವಿಂದನಾ 4 ದಿನಕರ ಕೋಟಿತೇಜ ವಿಲಾಸನ ಮಾನವ ರಕ್ಷಕನಾ 5 ಚಿತ್ತವು ಚಲಿಸದೆ ಚಿನ್ಮಯ ರೂಪನ ನಿತ್ಯಾನಂದನ ನಿಗಮಗೋಚರನಾ 6 ಭಾವಜನಯ್ಯನ ----- ಭಾವನಕೊಲಿದ ಜನ ಹೃದಯದಿ ಕುಣಿದಾಡುವ ನಾ7 ಜ್ಞಾನಾನಂದನ ಜ್ಞಾನಿಗಳರಸನ ಧೇನು ಪಾಲಕ ಜಗದೀಶನ ಮುಕುಂದನ 8 ಮಾಧವ ಮುನಿ ಗೋವಂದ್ಯನ ಶರಣರ ಪೊರೆವಾ ಬಿರುದಿರುವ ದೇವನಾ 9 ಇನಕುಲ ಭೂಷಣನ ವಿಶ್ವಲೋಕೇಶನ ದನುಜಾಂತಕ ಶ್ರೀ ದಾಮೋದರನಾ 10 ಪಾಂಡವ ಪಕ್ಷಕನ ಪರಮಾಣು ರೂಪ ಬ್ರಹ್ಮಾಂಡನಾಯಕ ಕೋದಂಡಧರನ ಇಂದೂ 11 ವಾರಿಧಿ ಬಂಧನ ವೈದೇಹಿ ತಂದನ ಮೀರಿದ ರಕ್ಕಸರ ಮದಿಸಿದವನಾ 12 ಪನ್ನಗ ಶಯನ `ಹೆನ್ನ ವಿಠ್ಠಲನ ' ಉನ್ನತ ಚರಿತನ ಇನ್ನು ಹರುಷದಲಿ 13
--------------
ಹೆನ್ನೆರಂಗದಾಸರು
ಮರೆಯದೆ ಸಲಹೆನ್ನನು ಯಾದವಗಿರಿ- ದೊರೆ ಮಂಗರಾಯ ನೀನು ಸರ್ವಜೀವೋತ್ತಮನೆ ನಿನ್ನನು ಮರೆಯಹೊಕ್ಕೆನು ಮಾರುತಾತ್ಮಜ ಕರೆದು ಭಕÀುತರಿಗ್ವರವ ನೀಡುವೊ ಭಾರತೀಶ ಪ ಸೀತಾವಲ್ಲಭ ರಾಮರ ಪಾದಾಂಬುಜ ದೂತನೆಂದೆನಿಸಿದೆಯೊ ಮಾತೆಗಿಟ್ಟ ಮುದ್ರಿಕೆಯನು ಘಾತಕ ರಾವಣನ ಪುರಕೆ ಕಾರ್ತೀಕದುತ್ಸವ ಮಾಡಿ ಮಂಗ- ಳಾರ್ತಿ ಬೆಳಗಿದೆ ಬಾಲದಿಂದ 1 ಬಕ ಹಿಡಿಂಬಕ ಕೀಚಕ ಕಿಮ್ಮೀರ ಮಾಗಧ ಮುಖ್ಯ ಪ್ರಮುಖರನು ಸಕಲ ಅನುಜರ ಸಹಿತ ದುರ್ಯೋಧನನ ಪ್ರಾಣವ ಸೆಳೆದÀು ಬ್ಯಾಗನೆ ನಕುಲ ಧರ್ಮಜನಾ ಸಾದೇವ ದ್ರೌಪದಿಗೆ ಸುಖ ಸಂತೋಷ ನೀಡಿದೆ 2 ಮಧ್ಯಗೇಹರಲ್ಲಿ ಜನಿಸಿ ಸುಜನರಿಗೆ ಶುದ್ಧಶಾಸ್ತ್ರವ ಬೋಧಿಸಿ ಗೆದÀ್ದು ಮಾಯಾವಾದಿಗಳ ವಾದಪ್ರ- ಸಿದ್ಧನೆನಿಸಿದೆ ಮಧ್ವಮುನಿ ಮುದ್ದು ಭೀಮೇಶಕೃಷ್ಣನ ಪ್ರ- ಸಿದ್ಧಿ ಮಾಡಿದೆ ಪರಮ ಗುರುವೆ 3
--------------
ಹರಪನಹಳ್ಳಿಭೀಮವ್ವ
ಮರೆಯದೆ ಸಲಹೊ ಮಾರುತೀಶ ಎನ್ನ ಶರಣೆಂಬೆನು ನಿನ್ನ ಪ ಶರಣಾಗತರನು ಬಿಡದೆ ಪೊರೆವ ಫನ್ನ- ಗಿರಿ ಅಂಜನೆತನಯಅ.ಪ ವನನದಿಗಿರಿಗುಹೆಗಳಲಿ ನಿನ್ನ ರೂಪ ತೋರುವುದೈ ಭೂಪ ಶರಧಿ ಲಂಘಿಸಿ ರಾವಣನಿಗೆ ತಾಪ ಪುಟ್ಟಿಸಿದೆಯೊ ರಘುಪ- ನಡಿಗಳ ಬಿಡದೆ ಸೇವಿಸುವರ ಪಾಪ ಮಾಡುವಿ ನಿರ್ಲೇಪ ಸಡಗರದಲಿ ನಿನ್ನೊಡೆಯನ ತೋರಪ್ಪ ಘನಗಿರಿ ಹನುಮಪ್ಪ 1 ಊರಿನಲಿ ಊರ್ಹೊರಗು ನಿನ್ನ ಮೂರ್ತಿ ಎಷ್ಟ್ಹೇಳಲಿ ಕೀರ್ತಿ ಪಾಡುತ ಪೊಗಳ್ವರು ನಿನ್ನಯ ಸತ್ಕೀರ್ತಿ ವರ್ಣಿಸುವುದೆ ಅರ್ಥಿ ಪಾಮರನೊಮ್ಮೆ ಪಾಡಲು ನಿನ್ನ ವಾರ್ತೆ ಪರಿಹಾರವೋ ಭೀತಿ ನಾಡೊಳು ನಿನ್ನ ಭಜಿಸುವವರ ಸಂಗ ನೀಡು ಕೃಪಾಪಾಂಗ2 ಕಡಲ ಶಯನನ ಅಡಿಗಳ ಸೇವಿಸುತ ಕಡುಹರುಷವ ಪಡುತ ಬಿಡದೆ ನಿನ್ನಯ ಸೇವಕರಿವರೆನುತ ಶ್ರೀಶಗೆ ಪೇಳುತ್ತ ಕೊಡಿಸುವಿ ಮುಕ್ತಿಯ ಧೃಡಭಕ್ತರಿಗೆ ಸತತ ರಾಮರ ಸ್ಮರಿಸುತ್ತ ಕಮಲನಾಭ ವಿಠ್ಠಲನನು ಸೇವಿಸುತಭಕ್ತರ ಸಲಹುತ್ತ3
--------------
ನಿಡಗುರುಕಿ ಜೀವೂಬಾಯಿ
ಮರೆಯಬಾರದು ನಮ್ಮ ಮುರವೈರಿಯ ಕರುಣಾಕರ ಸಿರಿವರನಾದ ದೊರೆಯ ಪ. ಪರಿಕಿಸುವನು ನಾನಾ ತರದಿಂದಲಿ ಜರಿವನು ಮತ್ತೆ ನೇವರಿಸುವನು ಸುರ ನರೋರಗ ಪಕ್ಷಿಯಿರೆ ತರು ಮೊದಲಾಗಿ ಪೊರೆವ ಮೆರೆವ ಕರೆದಲ್ಲಿ ಬರುವ 1 ಬಡತನದಲಿ ಭಾಗ್ಯಕಾಲದಲಿ ಕಡು ಕಷ್ಟದಲಿ ಸೌಖ್ಯ ವೇಳೆಯಲಿ ಅಡವಿಯಲಾದರು ಅರಮನೆಯಲ್ಯಾದ- ರೊಡೆಯ ಸಲಹನೆ ಮೀರನು ಭಿಡೆಯ 2 ಸರ್ವ ಸ್ವತಂತ್ರ ಶ್ರೀ ರಮಣೀಶ ನಿರ್ವಹಿಸುವನು ನಂಬುವರಾಶಾ ಭರ್ವಸವಿಡು ಶೇಷ ಪರ್ವತೇಶ್ವರನಲಿ ನೀರ್ವಾಣೇಶ ಸರ್ವರೊಳಿರುವ 3
--------------
ತುಪಾಕಿ ವೆಂಕಟರಮಣಾಚಾರ್ಯ