ಒಟ್ಟು 9384 ಕಡೆಗಳಲ್ಲಿ , 131 ದಾಸರು , 5285 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರುದ್ರಾ ವೀರಭದ್ರ ಅದ್ರಿನಂದನೆ ರಮಣಾ ಪ ರೌದ್ರ ಮೂರುತಿ ದಯಾಸಮುದ್ರ ಎನ್ನನು ಕಾಣೊ ಅ. ಪ. ಮುಪ್ಪುರವ ಗೆದ್ದ ಮುಕ್ಕಣ್ಣ ಮನ್ಮಥ ವೈರಿ ಸರ್ಪಭೂಷಣ ಮೃತ್ಯು ನಿವಾರಣ ವಾಕು 1 ಸದ್ಯೋಜಾತ ಭೂತನಾಥ ಭಕುತರದಾತ ಖದ್ಯೋತ ಲಾವಣ್ಯ ಸುರಜ್ಯೇಷ್ಠನ ಮಧ್ಯವಾಸನ ಛೇದ ಶ್ರೀ ವಿಷ್ಣುವಿನ ಪಾದ ಹೃದ್ಯದೊಳಗಿಟ್ಟ ಜಟಾ ಜೂಟ ಬಲು ಧಿಟ್ಟ2 ಮನೋನಿಯಾಮಕ ಗುರುವೆ ದೈನ್ಯದಿಂದಲಿ ಕರೆವೆ ಜನಿಸಿ ಕಾಡುವ ರೋಗ ಕಳೆಯೊ ಬೇಗ ಅನುಪಮ ವಿಜಯವಿಠ್ಠಲನ ನಾಮಾಮೃತವ ಎನಗುಣಿಸುವುದೋ ಸಾಂಬು ಮರುತ ಪ್ರತಿಬಿಂಬ 3
--------------
ವಿಜಯದಾಸ
ರೂಪ ತೋರಿಸೊ ರಂಗ ನಿಜರೂಪ ತೋರಿಸೋ ಪ ರೂಪ ತೋರಿಸೋ ರತಿಪತಿ ಜನಕ ಗೋಪ ಮನೆಗೆ ಬರುವ ತನಕ ಅ.ಪ ಕೇವಲ ಕಲ್ಪದ್ರುಮನಹುದೆಂದು ಭಾವಿಸುವೆನೋ ನೀನಿಂದು 1 ಅಣು ಮಹಧ್ಭಟಿನಾಘಟಿತ ಚತುರನೆ ಪ್ರಾಣತ ಕಾಮದನು ನೀನೇ 2 ಶ್ರೀದವಿಠಲ ಶರಣು ಎನೆ ಕೇಳೋ ಪಾದಕ್ಕೆರಗುವೆ ಕೃಪಾಳೋ 3
--------------
ಶ್ರೀದವಿಠಲರು
ರೂಪನ ಗುಡಿನಿ¯ಯಾ ವೇಂಟಕರಾಯಾ ರೂಪನ ಗುಡಿ ನಿಲಯಾ ವ್ಯಾಪಕ ಜಗತ್ರಯ ಕಾಪಾಡುವ ಭಾರತರ್ಕನು ದಾಸರ ಪ ದಂಡಿ ದಾನವಮರ್ದನ ಸಕಲಜಗ ಉ- ದ್ದಂಡ ರಕ್ಷಕ ಪಾವನಾ ಚಂಡ ಪ್ರ- ಚಂಡ ಮಾರ್ತಾಂಡ----ದ್ಭವ ಕುಂಡಲಿ ಶಯನ ಕೋದಂಡ ಪಾಣಿ ಹರಿ 1 ಗಂಗಾಜನಕ ದೇವಾ ಸಕಲಮೋಹ- ನಾಂಗನಾ ಪಡೆದನಾ ಶೃಂಗಾರದಲಿ ಕುಜ ರಂಗ ಮಂಟಪದಲಿ ಮಂಗ ಳಾಂಗಿಯ ಬಿಡದೆ ಮಡಗಿಸಿ ಇರುವಂಥಾ 2 ಮಂದರಾದ್ರಿಯ ಧರಿಸಿ ಸುಜನರಿಗೆ ಆ- ನಂದದಿ ಸುಧೆಯನುಣಿಸಿ ಅಂದು ಭಕ್ತರ ಆನಂದದಿ ಸಲುಹಿದ ತಂದೆ 'ಹೊನ್ನ ವಿಠ್ಠಲ’ ದಯಮಾಡಿ ಸಲಹಯ್ಯಾ 3
--------------
ಹೆನ್ನೆರಂಗದಾಸರು
ರೋಗವನು ಪರಿಹರಿಸೊ ಗುರು ರಾಘವೇಂದ್ರಾ ಪ ಕರಮುಗಿದು ಬಿನ್ನೈಪೆ ಧೀರ ಯೋಗೇಂದ್ರ ಪಾಲಾ ಅ.ಪ. ಅರಿಯದಾ ತರಳ ತನ್ನ ನಿಜಮತಿಯಿಂದ ದೂಷಿಸಲಿಲ್ಲ ಪರರ ಮಾತನು ಕೇಳಿ ದೂಷಿಸಿದನಲ್ಲದೇ 1 ಏನ ಪೇಳಲಿ ಗುರುವೆ ನಿನ್ನ ಸಮಕರುಣಿಗಳು ಇನ್ನುಂಟೆ ಜಗದೊಳು ಕೇಳಿದ ಕಾರಣದಿ ಬಂದು ಬಿನ್ನೈಸಿದೆ 2 ಬಾಲಕನು ಪರಿಪರಿಯಿಂದ ಪೀಡಿತನಾಗಿ ಬೆಂಡುಬೆಂಡಾದಾತಂದೆವರದಗೋಪಾಲವಿಠ್ಠಲ ಪ್ರೀಯಾ 3
--------------
ತಂದೆವರದಗೋಪಾಲವಿಠಲರು
ಲಕುಮಿ ರಮಣನು ಹೆಜ್ಜೆನಿಕ್ಕಲುಕಿಂಕಿಣಿ ಕಿಂಕಿಣಿ ಎಂದಿವೆ ಟೊಂಕದ ಗೆಜ್ಜೆ ಪ. ಲೆಕ್ಕವಿಲ್ಲದ ಹಗ್ಗ ತಂದುಚಕ್ಕನೆ ಕಟ್ಟೋಳು ಬಂದುಚಿಕ್ಕಟೊಂಕಲಿಂತೆಂದುಅಕ್ಕಜ ಬಟ್ಟಳಾಕೆ ಬಂದು1 ಧಿಟ್ಟನು ವರಳೆಳದು ತಂದುಥಟ್ಟನೆ ಮರ ಮುರಿದು ಬಂದುಸ್ಪಷ್ಟವಾದರೊ ಸೂರ್ಯರೆಂದುಕೊಟ್ಟ ಕೃಷ್ಣ ಅಭಯವೆಂದು2 ತೊಡೆಯ ನೇರುವಳೆ ಬಂದುನಡವ ವರ್ಣಿಸೆವೆÉಂದುನುಡಿಯಲಾರೆವಿತಂಡನುಡಿದಳುರಮೆ ಬಂದು 3
--------------
ಗಲಗಲಿಅವ್ವನವರು
ಲಕುಮಿ ಸಾಮ್ರಾಜ್ಯ ಶರಧಿಗಮೃತಾಂಶು ನೇತ್ರ ಪ ಸೂತ್ರ ಅ.ಪ. ನಿತ್ಯ ಕಲ್ಯಾಣ ಸಾಗರನೆ ಶಶ್ವದೇಕ ಸಿಂಧು ಕೊಡು ಭಕ್ತಿಪಾಕ ಭಕ್ತವತ್ಸಲನೆ ಕೃಪಾಪೂರ್ಣಾವಲೋಕ ದುರಿತ ತಿಮಿರಾರ್ಕ 1 ನಿರುತ ಪರಿಪೂರ್ಣ ಸೌಲಭ್ಯ ಸುಗುಣವನಧಿ ನಿತ್ಯ ಸ್ವಾನಂದ ಪೂರ್ಣ ಮೋದಿ ಕರೆವ ಭಕ್ತರಾತುರಕೆ ಬರುವನವಸರದಿ ಗರೆವ ಸರ್ವಾರ್ಥ ಸಲಹಿ ಶರಣರನು ಛಲದಿ 2 ವಿಮಲ ಲಾವಣ್ಯ ಶೃಂಗಾರ ಸಿಂಧುಕಾಯ ಅಮಿತ ಉತ್ತಮ ಜಯೇಶವಿಠಲರಾಯ ಕಮಲಭವ ವಾಯು ರುದ್ರಾದಿ ದೇವ ಧÉ್ಯೀಯ ಅಮೃತ ಸೌಭಾಗ್ಯ ಸ್ವೀಯ 3
--------------
ಜಯೇಶವಿಠಲ
ಲಕುಮಿವಲ್ಲಭ ಹರಿಯ ಮಂದಿರದಿಂದ ಬಕುಳೆ ಬಂದ ಪರಿಯ ನಗುತ ಸದ್ಯುಕುತಿಯಿಂದಲಿ ಪೇಳ್ದಳು ಪ. ಯಾರು ಬಲ್ಲರಿವನ ಸಂಸ್ಥಿತಿಯನ್ನು ನೀರೆ ನೀ ಪೇಳ್ವದನ ದಾರಿಯ ಪೇಳೆ ಜಾಣೆ 1 ಕ್ಷೀರಾಂಬುಧಿವಾಸನ ಸಕಲಗುಣ ವಾರುಧಿ ವರದೇಶನ ಸಾರಿ ಸಾರಿಗೆ ಸರ್ವ ಸುರಮುನೀಶ್ವರರೆಲ್ಲ ಸೇರಿ ಬಾಳುವರೀತನ 2 ಮಾತಿಗೆ ದೊರೆಯನಂತೆ ಮನೋಗತಿ ನೀತಿಯು ನಡೆಯದಂತೆ ಜಾತಿ ಗೋತ್ರ ಬಂಧು ಜನರಿಲ್ಲದವನಿಗಿನ್ಯಾತಕೆ ಪರಿಣಯವು 3 ಭೂತೇಂದ್ರಿಯ ಮನವು ಬಲಿಷ್ಠ ಮಹಾತತ್ವ ಹಂಕೃತಿಯು ಶ್ರೀ ತರುಣಿಯ ಗುಣ ತ್ರಯಮುಖ ತತ್ವ ಸಂಘಾತವೀತನಿರಲು 4 ಮನೆಯ ಕಟ್ಟಿದನೆಂಬೊರು ನಿಜವಾಗಿ ಪೇಳು 5 ಸಕಲ ಜಗನ್ನಿವಾಸ ಸಾಂಗೋಪಾಂಗ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 6 ಮನೆವಾರ್ತೆಗಳ ಬಿಟ್ಟು ಸಂಚರಿಸುವ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 7 ದಾಸರ ಪಾಲಿಪುದು ಎಂದೆಂದಿಗು ಶ್ರೀಶನ ಮಹಬಿರುದು ದೋಷದೂರನಾದರಿಂದ ಮೌನಿ ಮನೋವಾಸನಾಗಿಹ ನೆರದು 8 ಕುಲಹೀನನಾಗಿ ಕಲ್ಪಾಂತದೊಳಿರುವಗೆ ಲಲನೆಯ ನಿಪ್ಪುದೆಂತೆ 9 ಸುಧೆಯನು ತಾನೆ ತಂದ ಮುದವ ತೋರಿದ ಮುಕುಂದ 10 ಹೊಡದಾಡಿ ಬರುವನಂತೆ ಕೊಡುವದೆಂತೆ 11 ಮಗುವಿನ ಮಾತ ಕೇಳಿ ತಕ್ಷಣ ನರಮೃಗನಾಗಿ ಕೋಪತಾಳಿ ಬಗೆದು ಬಲಿಷ್ಠ ದೈತ್ಯನು ಸುಲಭದಿ ಬೇಗ ತೆಗೆದನು ಕರುಳನಂತೆ 12 ಸಿರಿಯನಾಳುವನಾದರೆ ದೈತ್ಯರ ಮುಂದೆ ತರಿವುದು ಸರಿಯೆ ನೀರೆ ಮರುಳು ಮಾತುಗಳಾಡಲ್ಯಾತಕೆ ಸುಮ್ಮನೆ ಥರವಲ್ಲ ಹಿಂದೆ ಸಾರೆ 13 ಕೃತ್ರಿಮ ದ್ವಿಜನಿವನು ಭೂಭಾರಕ ಕ್ಷತ್ರ ಸಮೂಹವನು ಶಸ್ತ್ರ ಪಿಡಿದು ಬುಡ ಕತ್ತ್ರಿಸಿ ಮಡುಗಳ ನೆತ್ರದಿ ರಚಿಸಿದನು 14 ದಾನವರನು ಗೆಲಲು ಚಪಲ ಬುದ್ಧಿ ವಾನರರನು ಒಲಿಸಿ ಪೇಳ್ವ ಹೀನವಾರ್ತೆಗಳೇನಿದು 15 ಧರೆಯ ಭಾರವನಿಳುಹಿ ಸಕಲ ಸುರವರ ಮುನಿಗಳ ಸಲಹಿ ತೆರವ ತೋರಿದ ಕೃಷ್ಣನು 16 ಜೈನರ ಸಭೆಯೊಳಗೆ ಮೈಯೊಳು ವಸ್ತ್ರಹೀನನಾಗಿರುವ ಬಗೆ ನಾನರಿಯೆನೆ ಬಹು ಮಾನ ಬಿಟ್ಟವನಿಗೆ ಏನೆಂದು ಮಗಳೀವನೆ 17 ಕೊಲುವನು ಖಡ್ಗದಲಿ ನಿಖಿಳ ಕುಲವನುದ್ಧರಿಸುವನು 18 ಏನೆಂದರು ಮನದಿ ನಿರ್ಣಯ ತೋರದೇನು ಮಾಡಲಿ ಕೆಳದಿ ಮಾನಿನಿ ಶಿರೋಮಣಿಯೆ 19 ದೋಷ ಲೇಶಹೀನನು ಸಕಲಗುಣ ಭೂಷಿತ ಶ್ರೀವರನು ಶೇಷ ಗಿರೀಶನೆನಲು ತನ್ನ ಮಗಳೀವ ಭಾಷೆಕೊಟ್ಟಳು ಧರಣಿ 20
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷುಮೀನಾರಾಯಣ ಜಯಲಕ್ಷುಮೀ ನಾರಾಯಣ ಲಕ್ಷುಮೀನಾರಾಯಣ ಜಯ ಲಕ್ಷುಮೀ ನಾರಾಯಣ ಪ. ಪಾದ ದಾನವ ಗರ್ವಹರಣ ಗದಾದಿ ಧಾರಣ ಪರ್ವತಾರಿ ವರ ಪ್ರದ 1 ನಂಬಿಕೊಂಡಿಹೆ ನಿನ್ನ ದಿವ್ಯ ಪದಾಂಬುಜಗಳನು ಸರ್ವಕಾಲದಿ ಮನದೊಳಗಿಂಬುಗೊಳು ಕಮಲಾಂಬಕ 2 ಆರು ಸಂಖ್ಯೆಯ ಕಳ್ಳರೆನ್ನನು ಗಾರುಮಾಡುವರಾದರಿಂದತಿ ಧೀರ ನಿನ್ನ ಪದಾರವಿಂದಕೆ ದೂರುವೆನು ರಘುವೀರನೆ 3 ದುರ್ಮತಿಗಳಾದಸುರಹರಣಕೆ ಭರ್ಮಗರ್ಭನು ಬಂದು ಸ್ತುತಿಸಲು ಧರ್ಮಸಂಸ್ಥಾಪಿಸುತ ಬಹು ಶುಭಕರ್ಮ ತೋರುವ ಕರುಣಿಯೆ 4 ಸಪ್ತ ಋಷಿಗಳ ಕೂಡಿಕೊಂಡತಿ ಭಕ್ತಿಯಿಂದಲಿ ನಿನ್ನ ಭಜಿಸಿದ ಸತ್ಯವ್ರತನಿಗೆ ಸಕಲ ಶ್ರುತಿಗಳ ತತ್ವ ತಿಳಿಸಿದ ಮತ್ಸ್ಯನೆ 5 ಮುಳುಗಿಕೊಂಡಿಹ ಅಮಿತಗುರು ಮಂದರವ ಧರಿಸುತ ಅಮೃತರಸ ತೆಗೆದಿತ್ತನೆ 6 ದೈತ್ಯನ ತರಿದು ಬಿಸುಟು ವಿ- ಜನಿತ ಪವಿತ್ರ ಯಜ್ಞ ವರಾಹನೆ 7 ಘಡುಘಡಿಸಿ ಕಂಬದೊಳು ಬಂದ ಸಿಡಿಲಿನಂತಿಹ ನಖದಿ ದೈತ್ಯನ ಒಡಲ ಬಗೆದನು ಕೋಪದಿಂದ 8 ದಾನಕೊಂಡನಾನೆವನದಿ ದಾನವಾಹೃತ ಧರೆಯ ಕಸ್ಯಪಸೂನುಗಳಿಗೊಲಿದಿತ್ತನೆ 9 ದುಷ್ಟಭೂಭುಜಭಾರದಿಂದತಿ ಕಷ್ಟಪಡುತಿಹ ಧರೆಯ ಕರುಣಾ ನೃಪರ ಕಡಿದ 10 ನೀರಜಾವದನಾರವಿಂದ ಮಹಾ ರಸಾಸ್ವಾದನ ಪದ ಕಪಿವೀರನಿಗೆ ಸ್ವಾರಾಜ್ಯ ನೀಡಿದ ಮಾರುತಿಗೆ ದಯ ಮಾಡಿದ 11 ಬಾಲ ಲೀಲೆಯ ತೋರಿ ಗೋಪಕ ಬಾಲೆಯರ ಕೂಡಾಡಿದೆ ಖೂಳಕಂಸನ ಕೆಡಹಿ ದಾನವಮೂಲ ಕಿತ್ತು ಬಿಸಾಡಿದೆ 12 ಜೈನರನು ಮೋಹಿಸುವೆನೆಂದನುಮಾನವಿಲ್ಲದೆ ನಗ್ನನಾಗಿ ಹೀನ ಬುದ್ಧಿಯ ತಿಳಿಸಿ ತ್ರಿಪುರವ ಹಾನಿಗೈಸಿದ ಬೌದ್ಧನೆ 13 ಸುಧೆಯನು ಕರೆದು ಶಿರದಲಿ ತುಂಗ ವಿಷಯ ತರಂಗ ತಪ್ಪಿಸು ಅಂಗಭಂಗವ ಶಿಂಗನೆ 14 ಮಿಂಚಿನೊಡ್ಡಿದ ಮೇಷನಂದದಿ ಪಂಚವರ್ಣದ ತುರಗವೇರಿ ಸಂಚರಿಸಿ ಮ್ಲೇಂಛರನು ಕೊಲ್ಲಿಸಿ ಲಾಂಛಜೀವನ ವರದನೆ 15 ಮಂದಿರದಿ ನೀ ಬಂದು ರಕ್ಷಿಪೆ ಎಂದು ಸಕಲಾನಂದಗೊಂಡಿಹೆ ಇಂದಿರೇಶನೆ ಎಂದಿಗೂ ಈ ಅಂದದಿಂದಲಿನಿಂದ ಸಲಹು 16 ಕೇಶವಾದಿ ದ್ವಿದಶರೂಪವು ಮಾಸಗಳಿಧಿಷ್ಠಾನನಿಗೆ ಪ- ರೇಶ ಕಡೆಯಲಿರುವ ಕಾರ್ತಿಕವಾಸ ದಾಮೋದರ ಹರನೆ 17 ಬಳಲಿ ಕರ್ಮವ ಮಾಡಲಾರೆ ನಳಿನಜಾರ್ಜಿತ ನಿನ್ನ ಪಾದದ ನೆಳಲನಂಬಿ ಸುಮ್ಮನಿರುವೆ 18 ಅಖಿಳದೋಷ ನಿವಾರಣಾದ್ಭುತ ಸಕಲಸದ್ಗುಣಧಾರಣಾ ಕುಂಡಲ ಧಾರಿ ವೆಂಕಟಶಿಖರ ವರ ಸುಖಕಾರಣಾ 19
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀ ದೇವಿ ಇಂದಿರೆ ನಾ ನಿನ್ನ ವಂದಿಸಿ ಬೇಡುವೆ ಬಂದು ನೀ ಪಾಲಿಸೇ ಚಂದಿರವದನೆ ಪ ಸಿಂಧು ಕುಮಾರಿಯೆ ಎಂದಿಗೂ ನಿನ್ನ ಪದ ದ್ವಂದ್ವವ ಸೇವಿಪೆನೆಂದು ನಾ ಬೇಡುವೆ ಅ.ಪ ದೇವಿ ನಿನ್ನಂಘ್ರಿಯ ಸೇವಿಸಿ ಪದ್ಮಭವ ಭಾವಿ ಫಣೇಶ ಸುರಾಧಿಪರೆಲ್ಲರು ಈ ವಿಧವಾದನುಭಾವವ ಪೊಂದಿರಲು ಈ ವಿಷಯಕೆ ಶ್ರುತಿ ಸಾವಿರವಿರುವುದೆ 1 ಪನ್ನಗವೇಣಿಯೆ ನಿನ್ನನೆ ನಂಬಿರಲು ಸಣ್ಣ ಮನುಜರ ವರ್ಣಿಪುದೇಕೆಲೆ ಎನ್ನಪರಾಧವ ಮನ್ನಿಸಿ ಕೃಪೆಯನು ಎನ್ನೊಳು ತೋರಲು ಧನ್ಯ ನಾನಾಗುವೆ 2 ತಾಮರಸಾಕ್ಷಿಯೆ ನಾಮಗಿರೀಶ ಶ್ರೀ ಸ್ವಾಮಿ ನೃಸಿಂಹನ ಕಾಮಿನೀಮಣಿಯೇ ಕೋಮಲಗಾತ್ರಯೆ ಶ್ರೀ ಮಹಾಲಕ್ಷ್ಮಿ ಎನ್ನ ಸಹೋದರಿ 3
--------------
ವಿದ್ಯಾರತ್ನಾಕರತೀರ್ಥರು
ಲಕ್ಷ್ಮೀ ದೇವಿ ಕಾದಿರುವಳು ರುಕ್ಮಿಣಿ ಕೃಷ್ಣ ಬರುವನೆಂದು ಪ. ಕರವ ಪಿಡಿವನೆಂದು ಅ.ಪ. ವಿಪ್ರನ್ನ ಕಳುಹಿರುವೆನು ಕ್ಷಿಪ್ರದೊಳು ಗುಡಿಯೊಳಿಹೆನು ಅಪ್ರಮೇಯ ನಿನ್ನಡಿಗಳನ್ನು ಸುಪ್ರಕಾಶ ನಂಬಿರುವೆನೆಂದು 1 ಶಿಶುಪಾಲನೊಲ್ಲೆನೆಂದು ವಸುಧೀಶ ನೀನೆ ಗತಿಯೆಂದು ಹಸುಳೇಯ ಸಲಹು ಎಂದು ಬೆಸಸಿಹೆನು ಪತ್ರವೆಂದು 2 ರಥವೇರಿ ಬರುತಲಿಹನೊ ಪಥದೊಳು ಕಾದಿರುವನೊ ರತಿಪತೀ ಪಿತನ ಪದವ ಅತಿಶಯದಲಿ ಕಾಣುವ ತವಕದಿ 3 ಶಂಕಾತುರಂಗಳಿಂದ ಶಂಕರೀಯಪೂಜೆಗೈದು ಕಿಂಕಿಣಿಯ ನಾದದಿಂದ ಶಂಕರಾದಿವಂದ್ಯ ಬರುವ ಪಥದಿ ಬಂದು 4 ಬಂದಾನೋ ಬಾರನೋ ಎನುತಾ ಇಂದಿರೆಯ ಅರಸನ್ಹೊರತು ಪೊಂದಲಾರೆನನ್ಯರನೆನುತ ಸುಂದರೀಮಣಿ ಕೃಷ್ಣನಾಗಮ ನೋಡುತ 5 ದ್ವಾರಕಿಯಾ ನಾಥ ಬಂದು ಪಾರುಗಾಣಿಸುವನೆಂದು ಚಾರುಕರದೊಳೆತ್ತಿ ಎನ್ನ ದ್ವಾರಕೆಗೊಯ್ವ ಶ್ರೀ ಶ್ರೀನಿವಾಸನೆಂದು 6
--------------
ಸರಸ್ವತಿ ಬಾಯಿ
ಲಕ್ಷ್ಮೀ ದೇವಿಯ ಗಂಡ ಹರಧನುರ್ಭಂಗಾ ರುಕ್ಮಾಂಗ ಧನಪಾಲಾ ಕರುಣಾಂತರಂಗಾ ಪ ಪೂಜಿಸಿದವರಿಗಭೀಷ್ಟವ ಕೊಡುವಾ ಪೂಜಿಪ ದಾಸರ ಕಷ್ಟವ ತರಿವಾ ಸಜ್ಜನರಿರುವಲ್ಲಿ ನಿರುತನಾಗಿರುವಾ 1 ಸ್ಮಾರನನ್ನು ಪಡೆದ ಮನೋಹರ ಮೂರ್ತಿ ಶರಣು ಬಂದವರಿಗೆ ವರ ಚಕ್ರವರ್ತಿ ಧರೆಯಲ್ಲಿ ಪೊಗಳುವೆ ಶ್ರೀಹರಿ ಕೀರ್ತಿ ಅರಿಯದ ದಾಸಗೆ ಸುಖಗಳ ಭರತೀ 2 ಪನ್ನಗಶಯನ ಶ್ರೀದಾಸರ ಪೋಷಾ ಸನ್ನುತ ಕಾವ ಶ್ರೀ ದೂರ್ವಾಪೂರೇಶಾ ಮನ್ನಿಸಿ ರಕ್ಷಿಸೊ ಭಜಕರ ಪೋಷಾ ಚನ್ನಿಗ ಕೇಶವದಾಸನಧೀಶಾ3
--------------
ಕರ್ಕಿ ಕೇಶವದಾಸ
ಲಕ್ಷ್ಮೀ ನಾರಾಯಣ ವಿಠಲ | ಪೊರೆಯ ಬೇಕಿವಳಾ ಪ ವಾಹನ ದೇವ | ಲಕ್ಷುಮಿಯ ರಮಣಾ ಅ.ಪ. ಸೃಷ್ಟಿ ಸ್ಥಿತಿ ಸಂಹಾರ | ಅಷ್ಟಕ್ಕು ಕಾರಣನೆಕಷ್ಟಗಳ ಪರಿಹರಿಸಿ | ಕಾಪಾಡೊ ಹರಿಯೇ |ಶಿಷ್ಟ ಸದಾಚಾರ | ನಿಷ್ಠೆಯಲಿ ಗೈಯ್ಯುವಳುಶಿಷ್ಟೇಷ್ಟ ಹರಿಯೆ ಸದ | ಭೀಷ್ಟಗಳಗರೆಯೋ 1 ವಿೂಸಲೆಂದೆನಿಸಿರುವ | ದಾಸತ್ವದಾಕಾಂಕ್ಷೆಸಾಸಿರಕ್ಕೋರ್ವರಿಗೆ | ಲೇಸು ಪುಟ್ಟವುದೋಈ ಸಮಯದಲ್ಲೀಕೆ | ಆಶಿಸುತ್ತಿಹಳಯ್ಯಕೇಶವನೆ ಒಲಿದಿವಳ | ದಾಸ್ಯ ಸ್ವೀಕರಿಸೋ 2 ಶುದ್ಧ ತರತಮ ಜ್ಞಾನ | ಮಧ್ವೇಶನಲಿ ಭಕುತಿಇದ್ವದಕೆ ತೃಪ್ತಿಯಿಂ | ಬದ್ಧ ವೈರಾಗ್ಯಾಸಿದ್ಧಿಸುತ ಸಾಧನದಿ | ಬದ್ಧ ಕಂಕಣಳೆನಿಸೊಅದ್ವಿತೀಯನೆ ಹರಿಯೆ | ಮಧ್ವಾಂತರಾತ್ಮಾ 3 ಮುಪ್ಪುರದ ವೈರಿನುತ | ಸರ್ಪಶಯನನೆ ದೇವಾಸ್ವಪ್ನ ಸೂಚನೆಯಂತೆ | ಗೋಪ್ಯದಂಕಿತವಾಸುಪ್ತೀಶ ಇತ್ತಿಹೆನೊ | ಒಪ್ಪಿ ಕೈಪಿಡಿ ಇವಳಗುಪ್ತ ಮಹಿಮನೆ ದೇವ | ಆಪ್ರಕಟ ಹರಿಯೇ 4 ಶರ್ವಾದಿ ದಿವಿಜೇಡ್ಯ ಶಾರ್ವರೀಕರ ಪಾಲದುರ್ವಾದಿ ತಿಮಿರಕ್ಕೆ ಮಾರ್ತಾಂಡ ರೂಪೀದರ್ವಿ ಜೀವಿಯ ಕಾವ | ನಿರ್ವಹಣೆ ನಿನ್ನದೋಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಮನೋಹರ ವಿಠಲ | ರಕ್ಷಿಸೋ ಹರಿಯೇ ಪ ಲಕ್ಷಿಸದಲೇ ಇವಳ | ಲಕ್ಷಾಪರಾಧಾ ಅ.ಪ. ತೈಜಸ ಮೂರ್ತಿದರುಶನವ ತಾನಿತ್ತು | ಹರುಷ ಪಡೆಸಿಹನೋಹರಿದಾಸ್ಯಕೇ ಮಾರ್ಗ | ವರಸೂಚಿ ಎಂಬಂತೆಪರಮ ಸಿದ್ಧತೆ ತೋರ್ದೆ | ವರಸತೀ ಮಣಿಗೇ 1 ಕಾರುಣಿಕ ನೆಂ | ದರಿತು ಬೇಡುವೆ ಹರಿಯೆಸರುವ ಕಾರ್ಯದಿ ನಿನ್ನ | ಸ್ಮರಣೆ ಸುಖವೀಯೋ 2 ಎರಡು ಮೂರ್ಭೇಧಗಳ | ಅರಿವನೀಕೆಗೆ ಇತ್ತುಎರಡು ನಾಲ್ಕರ ವರ್ಗ | ದೂರಗೈಸೋಮರುತಾಂತರಾತ್ಮ ನಿ | ನ್ಹೊರತು ಕಾಯುವರಾರೊಎರಡೇಳು ಭುವನಗಳ | ಅರಸಿಯೂ ಕಾಣೇ 3 ವಿಶ್ವ ಕರ್ಮ | ಸತ್ಶ್ರವಣ ಕೊಡುತಾ 4 ಭೂವಿ ಬುಧ ಹೆದ್ದೈವ | ಮಾವಿನೋದಿಯೆ ಹರಿಯೆನೀವೊಲಿಯ ದಿನ್ನಿಲ್ಲ | ಮಾವ ಕಂಸಾರೀದೇವ ದೇವೇಶ ಗುರು | ಗೋವಿಂದ ವಿಠ್ಠಲ್ಲಭಾವದೊಳು ಮೈದೋರಿ | ಕಾವುದೀಕೆಯನೂ 5
--------------
ಗುರುಗೋವಿಂದವಿಠಲರು
ಲಕ್ಷ್ಮೀದೇವಿ ಅಂಜಿಸುವುದ್ಯಾಕಮ್ಮ ಕಂಜೋದ್ಭವ ನಮ್ಮ ನೀ ಅಂಜಿಸಿದರೆ ಲೋಕ ಅಂಜದಿರುವುದೆ ಪ ಕುಂಜರಗಮನೆ ನಾವಂಜನದೇವಿ ಸಂಜಾತನಾದ ಪ್ರಭಂಜನನಣುಗರು ಪಾದ ಕಂಜಕ್ಕೆ ವಿಮುಖ ಸಂಜಿಲಿ ಚಲಿಸುವ ಪುಂಜರು ಕಡಿಮೆ 1 ನಿನ್ನನೆ ನಂಬಿ ನಾವಿನ್ನು ಸಂಸೃತಿಯ ಬನ್ನವೆ ಕಳಕೊಂಡು ಚನ್ನಾಗಿ ಜಗದಿ ಧನ್ಯರಾದೇವೆಂದು ಮನ್ನಾದಿ ಬಯಸೆ ಅನ್ಯಾರಂದದಲಿ ನೀ ನಮ್ಮನ್ನ ನೋಡುವರೆ2 ಸಿರಿ ನಾರಸಿಂಹನ್ನ ವರ ಭಕ್ತಿಯಲಿ ನೀನು ಕರವಶ ಮಾಡಿಪ್ಪೆ ಪರವೇನೆ ನಿನಗೆ ಪರಮೇಷ್ಠಿ ಮೊದಲಾದಮರರ ನೀ ಪೊರೆವೆ ಸಿರಿ ವಾಸುದೇವವಿಠಲನ್ನ ತೋರಮ್ಮ 3
--------------
ವ್ಯಾಸತತ್ವಜ್ಞದಾಸರು
ಲಕ್ಷ್ಮೀದೇವಿ ಅಂಬೋರುಹೇಕ್ಷಣೆ ಅಂಬಾಲತೇ ಜಗ ದಂಬಾ ಪೊರೆಯೆ ಸತತ ಗಂಭೀರ ಗಜಗಮನೆ ಪ ನಂಬಿದೆ ನಿನ್ನ ಪದಾಂಬುಜಯುಗಳವ ಕಂಬು ಕಂಧರಿ ಕನಕಾಂಬರ ಧಾರಿಣಿ ಬೆಂಬಲವೀಯೆ ವಿಳಂಬವ ಮಾಡದೆ ಅ.ಪ `ಯಂಕಾಮಯೇ'ತ್ಯಾದಿ ಶೃತಿಗಳೆಲ್ಲಾ ಪಂಕಜಭವಮುಖ ಸುಮನಸರು ಕಿಂಕರರೆನ್ನುತ ಪೊಗಳುತಿರೆ ಶಂಕೆಯುಂಟೆ ನಿನ್ನ ಮಹಿಮೆಗಳಲ್ಲಿ ಶ ಶಾಂಕ ಸೋದರಿ ಆತಂಕವ ಬಿಡಿಸೆ 1 ನೀರಜಾತಗಣ ಕೃತ ನಿಲಯೇ ಮಾರಜನಕ ಹರಿ ಪ್ರಿಯ ಜಾಯೆ ಕೋರುವೆ ನಿನ್ನಯ ಪರಮದಯೆ ಸಾರಸಾಕ್ಷಿ ಸರಿಯಾರು ನಿನಗೆ ಕರು ಣಾರಸಮಯೆ ಸುವಿಶಾರದೆ ಜನನಿ 2 ಕನ್ಯೆ ನಿಖಿಲ ಸುರನರರೊಳಗೆ ಮಾನ್ಯೆ ನಿನ್ನ ಪೋಲುವರನ್ಯರುಂಟೆ ನಿನ್ನ ದಾಸನಾದ ಎನ್ನ ಮನೋರಥ ವನ್ನು ತಿಳಿಸೆ ಪ್ರಸನ್ನ ಶ್ರೀ ಹರಿಯಲಿ 3
--------------
ವಿದ್ಯಾಪ್ರಸನ್ನತೀರ್ಥರು