ಒಟ್ಟು 8009 ಕಡೆಗಳಲ್ಲಿ , 129 ದಾಸರು , 4271 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಿದರೇನು ಏನು ನೋಡಿದರೇನುದಾನವಾಂತಕ ನಿನ್ನನರಿಯದ ಪಾಪಿ ಪನಾನಾದೇಶವ ತಿರುಗಿ ಯಾತ್ರೆ ಮಾಡಿದರೇನುನಾನಾತೀರ್ಥವ ಮುಳುಗಿ ಸ್ನಾನ ಮಾಡಿದರೇನುನಾನಾಕ್ಷೇತ್ರದಿನಿಂದುದಾನ ಮಾಡಿದರೇನುದೀನರಕ್ಷಕ ನಿನ್ನ ಒಲುಮಿಲ್ಲದವರು 1ನಾನಾಗುಹೆಗಳ ಪೊಕ್ಕು ತಪವ ಮಾಡಿದರೇನುಮೌನದಿಂ ಕುರಿತು ಬಲುಜಪ ಮಾಡಿದರೇನುನಾನಾಶಾಸ್ತ್ರವ ಅರ್ಥಮಾಡಿದರೇನುಜಾನಕೀಶನೆ ನಿನ್ನ ದಯವಿಲ್ಲದವರು 2ನಾನಾಗುಡಿಗಳ ಪೊಕ್ಕು ಪ್ರತಿಮೆ ನೋಡಿದರೇನುನಾನಾಸತ್ಯರ ಮುಖವನಿತ್ಯನೋಡಿದರೇನುಧ್ಯಾನಿಕರಸುಲಭ ಶ್ರೀರಾಮ ನಿನ್ನಡಿಕುಸುಮಕಾಣದಧಮರು ಈ ಜಗದೊಳಗೆ ಪುಟ್ಟಿ 3
--------------
ರಾಮದಾಸರು
ಏನು ರಂಗ ದೂರ ನೋಡುವೆಪ್ರಾಣನಾಥ ದೂರ ನೋಡುವೆ ಪ.ಒಳ್ಳೆ ನಾರಿಯರೊಳು ಮನವಿಟ್ಟು ನೀನನ್ನಸಲ್ಲದವಳ ಕೈಯವಿಡಿದ್ಯೇಕೆ ಮೊದಲಿಗೆ 1ಏಸುಮನೆಯ ಹೊಕ್ಕು ದಣಿದೆ ಕಾಣದೆ ಕೃಷ್ಣಆಸು ಮನೆಯೊಳು ನೀನಿದ್ದು ಕಾಣಿಸಿಕೊಳ್ಳೆ 2ನಿನ್ನವಳೆನಿಸಿದ ಬಳಿಕ ಮಾತಾಡದೆಅನ್ಯಾಶ್ರಯ ನನಗಿದ್ದರೆ ಹೇಳು ನನ್ನಾಣೆ 3ನೀ ಪರಿಹರಿಸಲಾರದ ತಪ್ಪೆನ್ನಲ್ಲುಂಟೇನೊಈ ಪರಿಗಾಳ ಬಳಲಿಸಿ ಸುಮ್ಮನೆ 4ದೂರ ನೋಡಿದರೆ ನೀನೋಡುನಾ ಬಿಡೆನೆಂಬೆದೂರ ಸಾರಿ ನಿನ್ನ ಪೋಗಲಾರೆ ಪ್ರಸನ್ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು
ಏನುಚೋದ್ಯಶ್ರೀನಿಧೆಹರಿಮಾನಿನಿಶ್ರೀದೇವಿ ಭೂದೇವಿರಮಣಪಸೃಷ್ಟಿಕರ್ತನೆಂದು ಪೇಳ್ವರು ಪಾಂಡವರ ಮನೆಯಬಿಟ್ಟಿ ಬಂಡಿಬೋವನೆಂಬೋರು ಪಾಂಚಾಲಿಗೆ ಒದಗಿದಕಷ್ಟಕಳೆದÀು ಪೊರೆದನೆಂಬೊರೊಕೆಟ್ಟದಾನವರ ಅಟ್ಟುಳಿಯ ಕಳೆದುದುಷ್ಟಕಂಸನವಧೆಯ ಸ್ಪಷ್ಟ ಪೇಳುತಿಹರೊ 1ಗಜನ ಸಲಹಿ ಪೊರೆದನೆಂಬೊರೊ ನೆಗಳೆಯನು ಸೀಳಿತ್ರಿಜಗದೊಡೆಯ ಶ್ರೀಶನೆಂಬೊರೊ ಪ್ರಹ್ಲಾದ ಧೃವಗೆನಿಜಸೌಭಾಗ್ಯ ಇತ್ತೆ ಎಂಬೊರೊವಿಜಯಸಾರಥಿಯ ವಿಶ್ವರೂಪ ತೋರಿಸುಜನರನ್ನು ಪೊರೆದ ನಿಜವ ಪೇಳುತಿಹರು 2ವತ್ಸಾಸುರನ ಮಡುಹಿದೆಂಬೊರೊ ಅಡವಿಯಲಿ ಕಾಡ-ಕಿಚ್ಚನುಂಗಿ ಬೆಳೆದಿ ಎಂಬೊರೊ ತಾಯಿಗೆ ಬಾಯೋಳಹೆಚ್ಚಿನ್ವಿಷಯ ತೋರ್ದಿ ಎಂಬೊರೊಕಚ್ಚ ಬಂದ ಘಣಿಯ ಮೆಟ್ಟಿ ತುಳಿದು ಜಲವಸ್ವಚ್ಛಗೈದನೆಂದಾಶ್ಚರ್ಯ ಪೇಳುತಿಹರೊ 3ಕರಡಿ ಮಗಳು ಮಡದಿಯೆಂಬೊರೊ ಪುಷ್ಪವನು ತರಲುತೆರಳಿ ಯುದ್ಧ ಮಾಡ್ದನೆಂಬೊರೊ ದೇವೇಂದ್ರನ ಗೆಲಲುತರುಣಿ ಸಮರಗೈದಳೆಂಬೊರೊಮುರಳಿನಾದದಿಂದ ತರುಣಿಯರ ಮನವಮರುಳುಗೈದನೆಂದು ಪರಿಪರಿ ಪೇಳುವರೊ 4ಕೆಟ್ಟದ್ವಿಜನ ಪೊರೆದಿ ಎಂಬೊರೋ ವನವನವ ಚರಿಸಿಸುಟ್ಟ ದಾಸಗೊಲಿದೆ ಎಂಬೊರೋ ಒಪ್ಪಿಡಿಯ ಗ್ರಾಸವಕೊಟ್ಟದ್ವಿಜನ ಪೊರೆದಿಯೆಂಬೊರೊಅಟ್ಟಹಾಸದಿ ತಂದ ರುಕ್ಮಿಣಿಯ ತನ್ನಪಟ್ಟದರಸಿಯೆಂದು ಸ್ಪಷ್ಟ ಪೇಳುತಿಹರೊ 5ಶಿಲೆಯ ಸತಿಯಗೈದನೆಂಬರೊ ಅಡವಿಗಳ ಚರಿಸಿಬಲುಕಪಿಗಳ ಕೂಡ್ದನೆಂಬೊರೊ ಭಯ ಭಕ್ತಿಗೆ ಮೆಚ್ಚಿಫಲದ ಎಂಜಲ ಸವಿದನೆಂಬೊರೊ ಮೆಚ್ಚಿಸುಲಭದಿಂದ ದೈತ್ಯಕುಲವನೆಲ್ಲ ಸವರಿಛಲದ ದಶಶಿರನ ವಧೆಯ ಪೇಳುತಿಹರೊ 6ಪುಟ್ಟಬ್ರಹ್ಮಚಾರಿ ಎಂಬೋರೊ ಬಲಿರಾಜನ ಬೇಡಿಕೊಟ್ಟದಾನ ಕೊಂಡನೆಂಬೋರೊ ಈರಡಿಯನಳೆದುಮೆಟ್ಟಿ ಸಿರವ ತುಳಿದನೆಂಬೋರೊಎಷ್ಟು ಪೇಳಲಿ ನಿನ್ನ ಶ್ರೇಷ್ಠಗುಣಗಳನ್ನುದಿಟ್ಟ ಕಮಲನಾಭ ವಿಠ್ಠಲ ಸರ್ವೇಶ 7
--------------
ನಿಡಗುರುಕಿ ಜೀವೂಬಾಯಿ
ಏನೆಂತೊಲಿದೆ ಇಂತವರಂತೆ ಕೆಡುಬುದ್ಧಿ - ಎನ್ನೊಳಿಲ್ಲಗುಣ |ಹೀನರಲ್ಲದ ದೀನ ಜನರ ಪಾಲಿಪ ಬುದ್ಧಿ ನಿನ್ನೊಳಿಲ್ಲ ಪತರಳ ಪ್ರಹ್ಲಾದನಂದದಿ ನಿನ್ನಯರೂಪ ಕೆಡಿಸಲಿಲ್ಲನರನಂತೆ ತನ್ನ ಬಂಡಿಯ ಬೋವನ ಮಾಡಿ ಹೊಡಿಸಲಿಲ್ಲ ||ಸುರನದೀಸುತನಂತೆ ಪಣೆಯೊಳು ಬಾಣವ ಸಿಡಿಸಲಿಲ್ಲದೊರೆ ಅಂಬರೀಷನಂದದಿ ಈರೈದು ಜನ್ಮವ ಪಡಿಸಲಿಲ್ಲ 1ನಾರದನಂತೆ ಕಂಡವರ ಕೊಂಡೆಯವ ನಾ ಪೇಳಲಿಲ್ಲ |ಪರಾಶರನಂತೆ ನದಿಯೊಳಂಬಿಗ ಹೆಣ್ಣ ಕೊಡಲಿಲ್ಲ ||ಆ ರುಕುಮಾಂಗದನಂತೆ ಸುತನ ಕೊಲ್ಲಲು ಧೃಢಮಾಡಲಿಲ್ಲಮಾರುತನಂತೆ ನೀನುಣುತಿದ್ದ ಎಡೆಯ ಕೊಂಡೋಡಲಿಲ್ಲ 2ವಿದುರನಂತೆ ನನ್ನ ಸದನವ ಮುರಿದು ನಾ ಕುಣಿಯಲಿಲ್ಲಮದಕರಿಯಂತೆ ಮಕರಿಯ ಬಾಯೊಳು ಸಿಕ್ಕಿ ಒದರಲಿಲ್ಲ ||ಹೆದರದೆ ಬಲಿಯಂತೆ ಭೂಮಿಯ ಧಾರೆಯನೆರೆಯಲಿಲ್ಲಸದರ ಮಾತುಗಳಾಡಿ ಶಿಶುಪಾಲನಂತೆ ನಾ ಜರೆಯಲಿಲ್ಲ3ಸನಕಾದಿ ಮುನಿಯಂತೆಅನುದಿನ ಮನದೊಳು ಸ್ಮರಿಸಲಿಲ್ಲಇನಸುತ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲ ||ಬಿನುಗು ಬೇಡತಿಯಂತೆ ಸವಿದುಂಡ ಹಣ್ಣ ನಾ ತಿನಿಸಲಿಲ್ಲಘನ ಅಜಾಮಿಳನಂತೆ ಸುತನ ನಾರಗನೆಂದು ಕರೆಯಲಿಲ್ಲ4ವರ ಶೌನಕನಂತೆನಿತ್ಯ ಸೂತನ ಕಥೆ ಕೇಳಲಿಲ್ಲಪಿರಿದು ತುಂಬುರುನಂತೆ ನಾಟ್ಯ - ಸಂಗೀತವ ಪೇಳಲಿಲ್ಲ ||ಉರಗಾಧಿಪತಿಯಂತೆ ಉದರದೊಳಿಟ್ಟು ನಾ ತೂಗಲಿಲ್ಲಪಿರಿದು ಕುಚೇಲನ ತೆರನಂತೆ ಅವಲಕ್ಕಿ ಈಯಲಿಲ್ಲ 5ಭೃಗುಮುನಿಯಂತೆ ಗರ್ವದಿ ನಿನ್ನ ಎದೆಯನು ಒದೆಯಲಿಲ್ಲಅಗಣಿತ ಮಹಿಮ ನೀನಹುದೆಂದು ಧ್ರುವನಂತೆ ಪೊಗಳಲಿಲ್ಲ ||ಖಗರಾಜನಂತೆ ನಿನ್ನನು ಪೊತ್ತು ಗಗನದಿ ತಿರುಗಲಿಲ್ಲಅಗಜೆಯರಸನಂತೆ ಮಸಣದಿ ರಾಮನ ಸ್ಮರಿಸಲಿಲ್ಲ 6ಅವಹಿತದಲಿ ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲಯುವತಿ ದ್ರೌಪದಿಯಂತೆ ಪತ್ರಶಾಕವನುಣಬಡಿಸಲಿಲ್ಲ ||ತವೆ ಪುಂಡಲೀಕನಂದದಿ ಇಟ್ಟಿಗೆಯ ಮೇಲೆ ನಿಲಿಸಲಿಲ್ಲ ದೇವಇವರಂತೆಪುರಂದರ ವಿಠಲ ನಿನ್ನಯ ಕೃಪೆಯೆನ್ನೊಳಿಲ್ಲ7ಅಂಕಿತದಲ್ಲೂ ಇವೆ.)
--------------
ಪುರಂದರದಾಸರು
ಏನೊ ರಂಗ ನಿನ್ನ ವನಿತೆಯೊಳಪರಾಧಧ್ಯಾನಿಸಲು ದೊರಕೊಂಬುದೆನೀನಗಲಬೇಡ ತರಳೆಗಭಯವ ಕೊಟ್ಟುಮೌನದಲಿ ನಡೆಯೊ ಮನೆಗೆ ಬೇಗ ಪ.ಸ್ಮರನ ದಾಳಿಗೆ ಕಂದಿ ಕುಂದಿ ಬಳ್ಕಡಿಯಿಡುತವಿರಹಾಗ್ನಿಗನ್ನತೊರೆದು ಸ್ಮರಿಸುವಳುನಿರುತ ನಿನ್ನಯ ಗುಣಾವಳಿಗಳನುಕರಿಸೋತರಳೆಯ ಕೂಡೊ ಕೋಪ ಬೇಡೊ ನೋಡೊ 1ಪರಮಪುರುಷ ನೀ ಅವಳ ಜರಿದ ಕಾರಣಸೋಮಕಿರಣ ವಿಷಸಮ ಝಳದಪರಿತೋರಿ ಬಳಲುವಳು ಸಖಿಭೃಂಗ ಕಳಕಕೆತರಳೆ ಕೂಡೊ ಕೋಪ ಬೇಡೊ ನೋಡೊ 2ನಲ್ಲ ನಿನ್ನ ಸಂಗ ಬಯಕೆಗೆ ಕಣ್ಣ ತೇಲಿಸುವಳಲ್ಲೊ ತೊದಲ್ಲು ನುಡಿವಳಲ್ಲೊಮೆಲ್ಲನೆದೆ ನೋಡಿ ಸುಯಿಗರೆವಳು ಖಗಾಂಕಜನಬಿಲ್ಲಿಗೆಬಲಿಕೊಡಲಿ ಬಾರೊ ತೋರೊ3ಪಯನಿಧಿ ಒಡೆಯನ್ಯಾಕೆ ಬಾರನೆಂದವಳು ತನ್ನಯ ಸುದತಿಯರ ಬೈವಳುನಯನಧsರವಿರಸಿ ಕಂಬನಿದುಂಬುವಳು ಗಡಪ್ರಿಯಳರಸೆಜಾರವಿರಸಹರಿಸೊ4ನಿನ್ನ ನಂಬಿದಳಿಗಿಂತಾಗುತಿರೆ ಸುಮ್ಮನಿಹೆಎನ್ನ ಹೇಯ ಬಾರದೆನಲುಉನ್ನತ ಹಯವನೇರಿ ಬಂದವಳ ನೆರೆದ ಪ್ರಸನ್ನ ವೆಂಕಟನಾಯಕರಸಿಕ5
--------------
ಪ್ರಸನ್ನವೆಂಕಟದಾಸರು
ಏಳಯ್ಯ ಬೆಳಗಾಯಿತು ಪ.ಬೆಳಗಾಯಿತೇಳಯ್ಯ ಬಿಸಿಲು ಮೈದೋರುತಿದೆಸುಳಿದೋರೈ ನಿನ್ನ ಹಾರಯ್ಸಿ ನಿಂದಿಹರುತಳುವ ಮಾಡದಿರಯ್ಯ ಸ್ವಾಮಿ ತಿರುಮಲೆರಾಯಸೆಳೆಮಂಚದಿಂದಲೇಳು ಅಪವೇದವನು ತರಲೇಳು ಮಂದರವ ಹೊರಲೇಳುಛೇದಿಸುತ ಅಸುರರನು ಭೂಮಿಯ ತರಲೇಳುಕಾದಿ ಹಿರಣ್ಯನ ಕರುಳ ಕೊರಳೊಳಗೆ ಧರಿಸೇಳು ಕಾದುಬಲಿಬಾಗಿಲೊಳಗೆ ||ಭೇದದಲಿ ಭೂಮಿಯ ತ್ರಿಪಾದದಿಂದಳೆಯೇಳುಛೇಧಿಸುತ ಕ್ಷತ್ರಿಯರ ಕೊಡಲಿಯಿಂ ಕಡಿಯೇಳುಸಾಧಿಸುತ ಶರಧಿಯಲಿ ಸೇತುವೆಯ ಕಟ್ಟೇಳುನಂದಗೋಪನ ಉದರದಿ 1ಪುರಮೂರ ಗೆಲಬೇಕು ಅರಿವೆಯನು ಕಳೆದೇಳುದುರುಳರನು ಕೊಲಬೇಕು ತುರಗವಾಹನನಾಗುಪರಿಪರಿಯ ಕೆಲಸಗಳ ಮಾಡಲುದ್ಯೋಗಿಸದೆ ಮರೆತುನಿದ್ರೆಯಗೈವರೆ||ಉರಿಗೈಯನಟ್ಟಿದರೆ ಹರನೋಡಿ ಬಂದಿಹನುಗಿರಿಜೆ ವರವನು ಬೇಡಬೇಕೆಂದು ನಿಂದಿಹಳುಸುರಪಾರಿಜಾತವನು ಕೊಂಡುಸುರರಾಜಬಂದಿರುವನೇಳಯ್ಯ ಹರಿಯೆ 2ಆಲದೆಲೆಯಿಂದೇಳು ಮಾಲಕುಮಿ ಬಂದಿಹಳುಹಾಲುಗಡಲಿಂದೇಳು ಶ್ರೀದೇವಿನಿಂದಿಹಳುಕಾಲಹೆಡೆಯಿಂದೇಳು ಭೂದೇವಿ ಬಂದಿಹಳು ಸಾಲಮಂಚಿಗಳಿಂದಲಿ ||ಕ್ಷಿತಿನಾಥ ನೀನೇಳು ಸತ್ಯಭಾಮೆ ಬಂದಿಹಳುಮತಿವಂತ ನೀನೇಳು ಜಾಂಬವತಿ ಬಂದಿಹಳುಗತಿವಂತ ನೀನೇಳು ಶ್ರೀತುಳಸಿ ಬಂದಿಹಳು ಏಕಾಂತ ಸೇವೆಯಮಾಡಲು 3ಅಂಬುರುಹದಿಂದ ಜನಿಸಿದ ಬ್ರಹ್ಮ ಬಂದಿಹನುಗಂಭೀರ ಗಾಯನದ ನಾರದನು ನಿಂದಿಹನುರಂಭೆ ಮೇನಕೆ ಮೊದಲು ನರ್ತನಕೆಐದಿಹರು ಶಂಬರಾರಿಪಿತನೆ ಏಳು||ರಾಜಸೂಯವಕೊಳಲು ವಾಯುಸುತ ಬಂದಿಹನುತೇಜಿಯಾಟಕೆ ಅರ್ಜುನನು ಕರೆದು ಬಂದಿಹನುಸಾಜಧರ್ಮಜ ಅಗ್ರಪೂಜೆ ಮಾಡುವೆನೆಂದು ಹೂಜೆಯನುಪಿಡಿದುಕೊಂಡು 4ದೇವ ನಿನ್ನಂಘ್ರಿಯನು ಪೂಜೆ ಮಾಡುವೆನೆಂದುಕಾವೇರಿ ಕೃಷ್ಣೆ ಗೌತಮಿ ಗಂಗೆ ಮಲಪಹರಿಸಾವಧಾನದಿ ಯಮುನೆ ತುಂಗಾ ಸರಸ್ವತೀಭೀಮರಥಿ ನೇತ್ರಾವತಿ ||ದುರಿತ ಬಂಧನವನ್ನು ಪರಿಹರಿಸಿದೆಯೊ ಸ್ವಾಮಿದುರಿತ ದುಷ್ಕರ್ಮವನು ದೇವ ಎಂದರೆ ಸುಡುವೆದುರಿತ ತಾಪಕೆ ಚಂದ್ರ ನೀನೆನಿಸಿಕೊಂಡೆಯೊಶ್ರೀ ಪುರಂದರವಿಠಲನೆ 5
--------------
ಪುರಂದರದಾಸರು
ಏಳಯ್ಯ ಶ್ರೀಹರಿ ಬೆಳಗಾಯಿತು ಪ.ಏಳು ದೇವಕಿತನಯ ನಂದನಕಂದಏಳು ಗೋವರ್ಧನ ಗೋವಳರಾಯ ||ಏಳುಮಂದರಧರ ಗೋವಿಂದ ಫಣಿಶಾಯಿಏಳಯ್ಯ ನಲಿದು ಉಪ್ಪವಡಿಸಯ್ಯ 1ಕ್ಷಿರಸಾಗರವಾಸ ಬೆಳಗಾಯಿತು ಏಳುಮೂರುಲೋಕದರಸು ಒಡೆಯ ಲಕ್ಷ್ಮೀಪತಿ ||ವಾರಿಜನಾಭನೆ ದೇವ ದೇವೇಶನೆಈರೇಳು ಲೋಕಕಾಧಾರ ಶ್ರೀ ಹರಿಯೇ 2ಸುರರುದೇವತೆಗಳು ಅವಧಾನ ಎನುತಿರೆಸುರವನಿತೆಯರೆಲ್ಲ ಆರತಿ ಪಿಡಿದರೆ ||ನೆರೆದು ಊರ್ವಶಿ ಭರದಿ ನಾಟ್ಯವಾಡಲುಕರುಣಿಸೊ ಪುರಂದರವಿಠಲ ನೀನೇಳೋ 3
--------------
ಪುರಂದರದಾಸರು
ಏಳಿ ಮೊಸರ ಕಡೆಯಿರೇಳಿ-ಗೋ-|ಪಾಲ ಚೂಡಾಮಣಿ ಏಳದ ಮುನ್ನ ಪಇಂದುಮುಖಿಯರೆದ್ದು ಮುಖವನೆ ತೊಳೆದು ಶ್ರೀ-|ಗಂಧ-ಕಸ್ತೂರಿ-ಕುಂಕುಮಗಳಿಟ್ಟು ||ಚಂದ್ರಗಾವಿಯ ಸೀರೆಯ ನೀರಿವಿಟ್ಟು ಮು-|ಕುಂದನ ಪಾಡುತ ಚದುರೆಯರೆಲ್ಲ 1ಹೊಂಗೊಡ ಬೆಳಗಿಟ್ಟು ಪೊಸಮೊಸರನೆತುಂಬಿ|ರಂಗನೀಲದ ಕಡೆಗೋಲನಿಟ್ಟು ||ಶೃಂಗಾರವಾದ ರೇಶಿಮೆಯ ನೇಣನೆ ಹಿಡಿದು |ರಂಗನ ಪಾಡುತ ಚದುರೆಯರೆಲ್ಲ 2ಬಡನಡು ಬಳುಕುತ ಕುಚಗಳಲ್ಲಾಡುತ |ಕಡಗ-ಕಂಕಣ ಝಣಝಣರೆನ್ನುತ ||ಮುಡಿದ ಮಲ್ಲಿಗೆ ಹೂವು ಎಡಬಲಕುದುರೆ ಪಾ-|ಲ್ಗಡಲೊಡೆಯನ ಪಾಡುತ ಚದುರೆಯರು 3ಹುಸಿನಿದ್ದೆಯಲಿ ಶ್ರೀಕೃಷ್ಣನು ಮಲಗಿರೆ |ಹಸಿದು ಆಕಳಿಸಿ ಬಾಯಾರುತಲಿ ||ಮುಸುಕಿನೊಳಿದ್ದು ಬೆಣ್ಣೆಯ ಬೇಡುತಲಿರೆ |ಶಶಿವದನನಿಗೆ ಬೆಣ್ಣೆಯ ನೀಡಲೋಸುಗ 4ಏಣಾಂಕಮುಖಿಯರು ಹೊಸ ಬೆಣ್ಣೆಯನು ತೆಗೆದು |ಪ್ರಾಣಪದಕ ಕೃಷ್ಣನಿಗೆ ಕೊಡಲು ||ಚಾಣೂರ ಮಲ್ಲನ ಗೆಲಿದು ಬಾರೆನುತಲಿ ||ಜಾಣ ಪುರಂದರವಿಠಲನಪ್ಪಲುಗೋಪಿ5ದೃಷ್ಟಿಯು ತಾಗೀತೆಂದಿಟ್ಟು ಅಂಗಾರವ |ತಟ್ಟೆಯೊಳಾರತಿಗಳ ಬೆಳಗಿ ||ಥಟ್ಟನೆ ಉಪ್ಪು-ಬೇವುಗಳನಿವಾಳಿಸಿ|ತೊಟ್ಟಿಲೊಳಿಟ್ಟು ಮುದ್ದಾಡುವಳೊ 6ನಮ್ಮಪ್ಪ ರಂಗಯ್ಯ ಅಳಬೇಡವೊ ದೊಡ್ಡ |ಗುಮ್ಮ ಬಂದಿದೆ ಸುಮ್ಮನಿರು ಎನುತ ||ಅಮ್ಮಿಯನೀಯುತ ಅಮರರನಾಳ್ದನ |ರಮ್ಮಿಸಿ ರಮ್ಮಿಸಿ ಮುದ್ದಾಡುವಳೊ 7ಏಸೊ ಬೊಮ್ಮಾಂಡವ ರೋಮದೊಳಿರಿಸಿದ |ವಾಸುದೇವನನೆತ್ತಿ ಕೊಂಬುವಳೊ ||ನಾಶರಹಿತನಾಯುಷ್ಯ ಹೆಚ್ಚಲೆಂದು |ರಾಶಿದೈವಕೆ ತಾ ಬೇಡಿಕೊಂಬುವಳೊ 8ಮಾಧವಬಾ ಮದುಸೂದನ ಬಾ ಬ್ರ-|ಹ್ಮಾದಿವಂದಿತಹರಿಬಾ ಯೆನುತ ||ಆದಿ ಮೂರುತಿ ಶ್ರೀ ಪುರಂದರವಿಠಲನ |ಆದರದಲಿ ಮುದ್ದಾಡುವಳೊ 9
--------------
ಪುರಂದರದಾಸರು
ಏಳು ಶ್ರೀ ಗುರುರಾಯ ಬೆಳಗಾಯಿತಿಂದುಧೂಳಿ ದರುಶನ ಕೊಡಿರಿ ಈ ವೇಳೆ ಶಿಷ್ಯರಿಗೆ ಪ.ಏಳುಗುರುರಾಘವೇಂದ್ರ ಏಳು ದಯಾಗುಣಸಾಂದ್ರಏಳು ವೈಷ್ಣವ ಕುಮುದಚಂದ್ರ ಶ್ರೀ ರಾಘವೇಂದ್ರ ಅ.ಪ.ಅಶನವಸನಗಳಿಲ್ಲವೆಂಬವ್ಯಸನಗಳಿಲ್ಲಮುಸುಕ್ಹಾಕಿ ಮೋಸದಲೆ ಮೋಹಿಸಿದೆನೆಲ್ಲಅಸುರಾರಿಯ ಸ್ಮರಿಸದೆ ಪಶುವಿನೊಲು ಈ ದೇಹವಸುಮತಿಯೊಳು ಬಹಳ್ಹಸಗೆಟ್ಟಿತಲ್ಲ 1ನಾನು ನನ್ನದು ಎಂದು ಹೀನಮನಸಿಗೆ ತಂದುಏನು ಮಾಡುವಕರ್ಮನಾನೆ ಅಹುದೆಂದುಸ್ವಾಮಿ ಕರ್ತೃತ್ವವನು ತಿಳಿಯಲಿಲ್ಲ ನಾನೊಂದುನೀನೆ ಉದ್ಧರಿಸಯ್ಯ ದೀನ ದಯಾಸಿಂಧು 2ಅನ್ಯರ ಕೈಯಲ್ಲಿ ನಿನ್ನವರನಿರಿಸುವುದುಅನ್ಯಾಯವಾಯ್ತುಪಾವನ್ನಗುರುರಾಯಎನ್ನ ಮಾತಲ್ಲವಿದು ನಿನ್ನ ಮಾತೇ ಸರಿಮನ್ನಿಸಿ ಆಗು ಪ್ರಸನ್ನ ಗುರುರಾಯ 3ವೇದ ಶಾಸ್ತ್ತ್ರಗಳನ್ನು ಓದಿ ಪೇಳ್ದವನಲ್ಲಭೇದಾಭೇದವನು ತಿಳಿಯಲಿಲ್ಲಸಾಧು ಸಜ್ಜನರ ಸಹವಾಸ ಮೊದಲಿಲ್ಲಹಿಂದಾಗಿಮಾನಮಾರಿಸಿದಿ ಉಳಿಸಲಿಲ್ಲ4ಆಸೆಗೊಳಗಾದೆನೊ ಹೇಸಿ ಮನುಜನು ನಾನುಕ್ಲೇಶಭವಸಾಗರದೊಳೀಸುತಿಹೆನೊಏಸುಜನ್ಮದಿ ಎನ್ನಘಾಸಿಮಾಡಿದೆ ಮುನ್ನದಾಸನಾಗುವೆ ತೋರೊ ಪ್ರಸನ್ನವೆಂಕಟನ 5
--------------
ಪ್ರಸನ್ನವೆಂಕಟದಾಸರು
ಒಂದು ದಿನ ರುಕ್ಮಿಣಿಯ ಮಂದಿರಕೆ ಶ್ರೀಕೃಷ್ಣಅಂದ ಮಾತನುಕೇಳಿನೊಂದು ರುಕ್ಮಿಣಿ ತಾನುಅಷ್ಟ ಲಕ್ಷ್ಮಿಯರೊಳು ಅಧಿಕಳು ನೀನೆಂದುಎಷ್ಟು ಜನ್ಮದಿ ತಪವಗೈದೆನೊ ನಾ ಕಾಣೆ
--------------
ಗೋಪಾಲದಾಸರು
ಒಂದೇ ನಾಮವು ಸಾಲದೆ - ಶ್ರೀಹರಿಯೆಂಬಒಂದೇ ನಾಮವು ಸಾಲದೆ ಪಒಂದೇ ನಾಮವು ಭವಬಂಧನ ಬಿಡಿಸುವು |ದೆಂದು ವೇದಂಗಳಾನಂದದಿ ಸ್ತುತಿಸುವ ಅ.ಪಉಭಯರಾಯರು ಸೇರಿ ಮುದದಿ ಲೆತ್ತವನಾಡಿ |ಸಭೆಯೊಳು ಧರ್ಮಜ ಸತಿಯ ಸೋಲೆ ||ನಭಕೆ ಕೈಯೆತ್ತಿ ದ್ರೌಪದಿ ಕೃಷ್ಣಾ ಎನ್ನಲು |ಇಭರಾಜಗ ಮನೆಗಕ್ಷಯವಸ್ತ್ರವನಿತ್ತ 1ಹಿಂದೊಬ್ಬ ಋಷಿಪುತ್ರನಂದು ದಾಸಿಯ ಕೂಡೆ |ಸಂದೇಹವಿಲ್ಲದೆ ಹಲವುಕಾಲ||ದಂದುಗದೊಳು ಸಿಲುಕಿ ನಿಂದಂತ್ಯ ಕಾಲದಿ |ಕಂದನಾರಗನೆಂದು ಕರೆಯಲಭಯವಿತ್ತ 2ಕಾಶಿಯ ಪುರದೊಳು ಈಶ ಭಕುತಿಯಿಂದ |ಸಾಸಿರನಾಮದ ರಾಮನೆಂಬ ||ಶ್ರೀಶನನಾಮದ ಉಪದೇಶ ಸತಿಗಿತ್ತ |ವಾಸುದೇವಶ್ರೀಪುರಂದರ ವಿಠಲನ 3
--------------
ಪುರಂದರದಾಸರು
ಒಲ್ಲೆನೆಂದರಾಗುವುದೆ ಅಲ್ಲಿ ಪಡೆದು ಬಂದುದನುಎಲ್ಲವನುಂಡು ತೀರಿಸಬೇಕು ಹರಿಯೆಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತಂದೆತಾಯಿ ಬಸಿರಿಂದ ಬಂದ ದಿನ ಮೊದಲಾಗಿಒಂದಿಷ್ಟು ಸುಖವನೆ ಕಾಣೆ ನಾ ಹರಿಯೆಬಂದುದನೆಲ್ಲವನುಂಡು ತೀರಿಸದೆ ಭ್ರಮೆಗೊಂಡ ಮೇಲೇನುಂಟು ಹಗೆಯ ಜೀವನವೆ1ಎಮ್ಮರ್ಥ ಎಮ್ಮ ಮನೆ ಎಮ್ಮ ಮಕ್ಕಳು ಎಂಬಹೆಮ್ಮೆ ನಿನಗೇತಕೊ ವ್ಯರ್ಥ ಜೀವನವೆಬ್ರಹ್ಮ ಪಣೆಯೊಳು ಬರೆದ ವಿಧಿಯು ತಪ್ಪುವುದುಂಟೆಸುಮ್ಮನೆ ಇರು ಕಂಡ್ಯ ಹಗೆಯ ಜೀವನವೆ2ಅಂತರಂಗದಲೊಂದು ಅರ್ಥ ದೇಹದಲೊಂದುಚಿಂತೆಯಾತಕೆ ನಿನಗೆ ಪಂಚರೆದುರುಕಂತುಪಿತ ಕಾಗಿನೆಲೆಯಾದಿಕೇಶವರಾಯಅಂತರಂಗದಿ ನೆಲೆಗೊಳುವ ತನಕ3
--------------
ಕನಕದಾಸ
ಒಳಿತು ಈಶಕುನ ಫಲವಿಂದು ನಮಗೆ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಲಜನಾಭನ ಸಂಗ ದೊರಕುವುದೆ ರಮಣಿ ಪ.ವಾಮಗರುಡನನೋಡು ವಾಯಸದ ಬಲವನ್ನುಕೋಮಲಾಂಗಿಯರೈದು ಪೂರ್ಣಕುಂಭ ||ಸಾಮಾನ್ಯವೇಗೌಳಿ ಬಲಕಾಗಿ ನುಡಿಯುತಿದೆಪ್ರೇಮದಲಿ ಮಧುರ ವಚನವ ಕೇಳು ರಮಣಿ 1ಮೊಳಗುತಿವೆಭೇರಿದುಂದುಭಿ ಘಂಟೆ ವಾದ್ಯಗಳುಫಲ ಪುಷ್ಪ ದಧಿಗಳಿದಿರಾಗುತಿದೆಕೊ ||ಚೆಲುವ ಭಾರದ್ವಾಜ ಪಕ್ಷಿ ಬಲವಾಗುತಿದೆಬಲುಹಂಗಎಡವಾಗುತಿದೆನೋಡುಕೆಳದಿ2ನೋಡು ದ್ವಯ ಬ್ರಾಹ್ಮಣರು ಇದಿರಾಗಿ ಬರುವುದನುಕೂಡಿದುವು ಮನದ ಸಂಕಲ್ಪವೆಲ್ಲ ||ಬೇಡಿದ ವರಗಳೀವ ಪುರಂದರವಿಠಲನನೋಡಿ ಸಂತೋಷದಲಿ ನೆನೆವೆನೆಲೆ ರಮಣಿ 3
--------------
ಪುರಂದರದಾಸರು
ಒಳ್ಳೆವೀರನೆಂಬೊ ಮಾತು ಸುಳ್ಳು ಕೃಷ್ಣರಾಯಮೈಗಳ್ಳನೆಂದು ಕರೆಯೋರಲ್ಲೊ ಅಜರ್ಂುನರಾಯ ಪ.ವೀರಮಾಗಧಯುದ್ಧಕ್ಕೆ ಬಾರೆಂದು ಕರೆಯಲು ಅಂಜಿನೀರೊಳಗೆ ಹೋಗಿ ಅಡಗಿದೆಯಲ್ಲೊ ಶ್ರೀಕೃಷ್ಣರಾಯ 1ಯುದ್ಧ ಮಾಡುವೆನೆಂದು ಸನ್ನದ್ದನಾಗಿ ಬಂದು ಅಂಜಿಗುದ್ದುಹೊಕ್ಕೆಯಲ್ಲೊ ನೀನು ಅರ್ಜುನರಾಯ2ಜರಿಯ ಸುತನು ಯುದ್ದದಲ್ಲಿ ಕರಿಯೆ ಅಂಜಿಕೊಂಡು ನೀನುಗಿರಿಯಮರೆಯಲ್ಲಡಗಿದೆಲ್ಲೊ ಶ್ರೀ ಕೃಷ್ಣರಾಯ 3ಬಿಂಕದಿಂದ ಬಾಣ ಧರಿಸಿ ಶಂಕಿಸದೆ ಅಂಜಿ ಬಂದುಮಂಕು ಮನುಜರಂತೆ ನಿಂತ್ಯೊ ಅರ್ಜುನರಾಯ 4ದೊರೆಯು ಮಾಗದ ಯುದ್ದಕ್ಕೆ ಬಾರÉಂದು ಕರೆದರೆ ಅಂಜಿವರಾಹನಾಗಿ ಓಡಿದೆಲ್ಲೊ ಶ್ರೀ ಕೃಷ್ಣರಾಯ 5ಪೊಡವಿರಾಯರೆಲ್ಲ ಒಂದಾಗಿ ಬಿಡದೆ ಯುದ್ಧಮಾಡೆನೆಂಬೊಬಡಿವಾರವು ಎಷ್ಟು ನಿನಗೆ ಅರ್ಜುನರಾಯ 6ಬಿಲ್ಲು ಧರಿಸಿ ಮಾಗಧನು ಬಿಲ್ಲಿಗೆ ಬಾ ಎಂದು ಕರಿಯೆಹಲ್ಲು ತೆರೆದು ಹೆದರಿಕೊಂಡ್ಯೊ ಶ್ರೀಕೃಷ್ಣರಾಯ 7ಸಿಟ್ಟಿನಿಂದಕರ್ಣಬಾಣ ಬಿಟ್ಟನಯ್ಯ ನಿನ್ನ ಮ್ಯಾಲೆಕೊಟ್ಟಿಯಲ್ಲೊ ಮುಕುಟವನ್ನು ಅರ್ಜುನರಾಯ 8ಹಲವುರಾಯರೆಲ್ಲ ನಿನ್ನ ನೆಲಿಯುಗಾಣದಂತೆÀ ಮಾಡೆಬಲಿಯ ಹೋಗಿ ಬೇಡಿದೆಲ್ಲೊ ಶ್ರೀ ಕೃಷ್ಣರಾಯ 9ಕರ್ಣನ ಬಾಣವು ನಿನ್ನಹರಣಮಾಡಲೆಂದು ಬರಲುಮರಣ ತಪ್ಪಿಸಿದೆನಲ್ಲೊ ನಾನು ಅರ್ಜುನರಾಯ 10ನಡವಕಟ್ಟಿ ವೈರಿಗಳ ಹೊಡೆಯಲಿಕ್ಕೆ ಅರಿವೊ ಕೃಷ್ಣಕಡಿಯಲಿಕ್ಕೆ ಜಾಣನಯ್ಯ ಶ್ರೀ ಕೃಷ್ಣರಾಯ 11ಎಷ್ಟು ಗರ್ವದಿಂದ ದ್ವಿಜಗೆಕೊಟ್ಟೊ ಭಾಷೆ ಶಪಥ ಮಾಡಿನಷ್ಟವಾಯಿತಲ್ಲೊ ವಚನ ಅರ್ಜುನರಾಯ 12ಎಲ್ಲ ವ್ಯಾಪ್ತಿ ಎಂಬೊ ಮಾತು ಎಲ್ಲಿದೆಯೊ ಈಗನಿನ್ನವಲ್ಲಭೆಯ ಒಯ್ದನ್ಹ್ಯಾಂಗೊ ಶ್ರೀಕೃಷ್ಣರಾಯ 13ಧೀರಾಧೀರರೆಲ್ಲ ಕೂಡಿ ವೀರನೆಂದು ಪೊಗಳಲುನಾರಿಯ ಸೀರೆಯ ಹ್ಯಾಂಗ ಸೆಳಿದಾನಯ್ಯ ಅರ್ಜುನರಾಯ 14ಶಂಭರಾರಿ ಪಿತನೆ ನಿನ್ನಜಂಬವೆಷ್ಟು ಕದ್ದುಕೊಂಡುತಿಂಬೋದಕ್ಕೆ ಜಾಣನಯ್ಯ ಶ್ರೀಕೃಷ್ಣರಾಯ 15ಎಷ್ಟುಗರುವ ನಿಮ್ಮೆಲ್ಲರ ಅಷ್ಟಗುಣವ ನಾನ ಬಲ್ಲೆಹೊಟ್ಟೆಬಾಕ ಭೀಮನಯ್ಯ ಅರ್ಜುನರಾಯ 16ಬತ್ತಲೆಂದು ನಗಲು ಜನರು ಮತ್ತೆನಾಚಿ ಕುದುರೆಯನ್ನುಹತ್ತಿಕೊಂಡು ಓಡಿದೆಲ್ಲೊ ಶ್ರೀ ಕೃಷ್ಣರಾಯ 17ವ್ಯರ್ಥಕೈಪ ಧರಿಸಿ ಕನ್ಯೆ ಎತ್ತಿಕೊಂಡು ಒಯ್ದಮ್ಯಾಲೆಹತ್ತು ಜನರು ನಕ್ಕರಲ್ಲೊ ಅರ್ಜುನರಾಯ 18ಕೃಷ್ಣಾರ್ಜುನರ ಈ ಸಂವಾದ ಸಂತುಷ್ಟನಾಗಿ ರಮಿ ಅರಸುಇಷ್ಟಾರ್ಥವ ಕೊಡಲಿ ನಮಗೆ ಶ್ರೀ ಕೃಷ್ಣರಾಯ 19
--------------
ಗಲಗಲಿಅವ್ವನವರು
ಓಡಿ ಬಾರಯ್ಯ ವೈಕುಂಠಪತಿ ನಿನ್ನನೋಡುವೆ ಮನದಣಿಯೆ ಪನೋಡಿ ಮುದ್ದಾಡಿ ಮಾತಾಡಿ ಸಂತೋಷದಿಪಾಡಿ ಪೊಗಳುವೆನುಪರಮಪುರುಷಹರಿಅ.ಪಕೆಂದಾವರೆಯಂತೆ ಪಾದಂಗಳೆರಡುಅಂದುಗೆಕಿರಿಗೆಜ್ಜೆ ಘಲುಘಲುರೆನುತ ||ಚೆಂದದಿ ಪೀತಾಂಬರವಲೆದಾಡುತಕುಂದಣದುಡುದಾರ ಝಣ ಝಣ ಝಣಕುತ 1ಕೋಟಿ ಸೂರ್ಯ ಪ್ರಕಾಶಗಳಿಂದಲಿ ಲ-ಲಾಟದಲ್ಲಿ ಇಟ್ಟ ಕಸ್ತುರಿ ತಿಲಕ ||ಕೂಟದ ಗೋಪಾಂಗನೆಯರ ಕೂಡೆಆಟ ಸಾಕು ಬಾರೋ ಅರವಿಂದ ನಯನ 2ಕಿರುತುರುಬಿನ ಮೇಲೆ ಒಲೆವುತಿರುತಿರೆಮುರುಗು ಮಲ್ಲಿಗೆ ಜಾಜಿ ಶ್ರೀತುಳಸೀ ||ಕರದಲಿ ಪಿಡಿದಾ ಪೊಂಗೊಳಲೂದುತತಿರಿತಿಂದು ಬಾಹೋ ಸಡಗರ ಸಾಕೋ 3ಎಣ್ಣೂರಿಗತಿರಸ ಸದಮಲ ದೋಸೆ ಬೆಣ್ಣೆಅಣ್ಣಯ್ಯ ನಿನಗೆ ಕೊಡುವೆನೋ ಬಾರೋ ||ಕಣ್ಣಮುಚ್ಚಿ ಗೋಪಾಂಗನೆಯರ ಕೂಡಿ |ಬೆಣ್ಣೆಯ ಮೆಲುವುದು ಉಚಿತವೆ ಸಾಕೋ 4ಮಂಗಳಾತ್ಮಕ ಮೋಹನಾಕಾರನೆಸಂಗೀತಲೋಲಸದ್ಗುಣ ಶೀಲ ||ಮಂಗಳೆ ಲಕುಮಿಯ ಸಹಿತವಾಗಿ ಬಂದುಕಂಗಳ ಮುಂದಾಡೊಪುರಂದರವಿಠಲ5
--------------
ಪುರಂದರದಾಸರು