ಒಟ್ಟು 7546 ಕಡೆಗಳಲ್ಲಿ , 133 ದಾಸರು , 4390 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿ ಹರಿ ಗೋವಿಂದ ಯನಬಾರದೇ ಪ್ರಾಣಿ ಪ ಹರಿ ಹರಿ ಗೋವಿಂದಯನಲು ಭಕುತಿಯಲಿ | ಹರಿಸುವ ಪಾಪೌಘವನು ಸಾರಂಗ ಪಾಣೀ 1 ವೃತ ತಪ ಸಾಧನದಿಂದಲೀ ನಿಲುಕದ ನಿಜಗತಿಯಾ| ಕ್ಷೀತಿಯೋಳು ಸುಲಭದಿ ಕೊಡುವನು ದೀನಾಭಿಮಾನಿ 2 ತಂದೆ ಮಹಿಪತಿ ಕಂದಗ ಸಾರಿದ ಯಚ್ಚರ ನೀ | ಛಂದದಿ ಇಹಪರ ನೀವದು ಯದುರಾಜ ಸ್ಮರಣೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಹರಿ ತವಕೃಪೆ ಕರುಣಿಸು ದೀನನೋಳ್ ಚರಣದಾಸನ ಮೊರೆ ಆಲಿಸು ದಯದಿಂದ ಪ ಸಂಸಾರ ನಿಧಿ ಭಯ ಧ್ವಂಸಗಾರನು ನೀ ಕಂಸಾರಿ ಭಕುತರ ಹಿಂಸಿಸದೆ ಕಾಯ್ವ 1 ಆಧಾರ ನೀನೆ ಭವಭಾದೆ ನಿವಾರಕ ಪಾದದಾಸರ ಅಭಿಮಾನದ ದೇವ ನೀ 2 ಪಾಮರನಾದೆ ಶ್ರೀರಾಮ ಮರೆದು ನಿನ್ನ ಪ್ರೇಮದಿಂ ಸಲಹೆನ್ನ ಕ್ಷೇಮವ ಪಾಲಿಸಿ 3
--------------
ರಾಮದಾಸರು
ಹರಿ ಹರಿಯೆಂದು ನೆನೆಯೋ ಮರಿಯದೆ ಮನುಜ ಧ್ರುವ ನಡೆಯುತ ನುಡಿಯುತ ನಡೆ ನುಡಿಯೊಳಗೆ ಪೊಡವಿಧರನ ಮಹಿಮೆಯ ಕೊಂಡಾಡುತ ಇಡವುತ ತೊಡವುತ ಮುಡವುತ ಮನದೊಳು ಬಿಡದೆ ಸ್ಮರಸೊ ನೀ ಅಡಿ ಗಡಿಗೊಮ್ಮೆ 1 ಉಣುತ ಉಡುತನ್ನೋದಕ ಕೊಳುತ ವನಿತಯರೊಡಗೂಡಿ ಘನಸುಖ ಪಡೆಯುತ ಅನಭದಿಂದಾನಂದದಿ ನೆನೆಯೋ ತನುಮನದೊಳು ನೀ ಕ್ಷಣಕ್ಷಣಕೊಮ್ಮೆ 2 ಏಳುತ ಕೂಡುತ ಮಲಗುತ ನೆನೆಯೋ ಹಲವು ಪರಿಲಿ ಶ್ರೀ ಹರಿ ಸರ್ವೋತ್ತಮ ನೆಲೆಗೊಂಡಿರೋ ಮಹಿಪತಿ ನಿಜನಾಮವ ಸಲಹುತ ಸ್ವಾಮಿ ಶ್ರೀಗುರು ಶ್ರೀಪತಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು
ಹರಿಕಥಾಮೃತಸಾರದ ಫಲಶ್ರುತಿ ಶ್ರೀ ಮದಶ್ವಗ್ರೀವನೊಲುಮೆಗೆ ಧಾಮರೆನಿಪ ಶ್ರೀ ವಾದಿರಾಜರುಪ್ರೇಮದಲ್ಲಿ ಜಗನ್ನಾಥದಾಸರ ಸ್ವಪ್ನದಲಿ ಬಂದುಶ್ರೀ ಮನೋರಮನರಿಪ ತತ್ವ ಸು ಸೌಮನದ ಮಾಲಿಕೆಯನಿತ್ತು-ದ್ದಾಮ ಗ್ರಂಥವ ರಚಿಸಿರೆನುತಲಿ ನುಡಿದ ಕಾರಣದೀ ಪ ಭಾಗವತ ಗಾರುಡ ಭವಿಷ್ಯೋತ್ತರ ಪುರಾಣಚಾರು ವಿಷ್ಣು ರಹಸ್ಯ ಪಂಚರಾತ್ರಾಗಮ ವಾಯುಸಾರ ಗುರವೃತ್ಪ್ರವೃತ್ತವು ಈರ ಸಂಹಿತಾದಿತ್ಯವಾಗ್ನೇಯಪಾರ ರಸಗಳ ತೋರ್ಪ ಶ್ರೀ ಗುರು ಮಧ್ವ ಶಾಸ್ತ್ರದಲೀ 1 ಸಾರ ಕ್ರೋಢೀಕರಿಸಿ ದೀನೋ-ದ್ಧಾರಗೋಸುಗ ಹರಿಕಥಾಮೃತ ಸಾರವನು ರಚಿಸೀಸ್ಥೈರ್ಯ ಮಾನಸದಿಂದ ಭಾವೀ ಭಾರತೀಪತಿ ವಾದಿರಾಜರಭೂರಿ ತೋಷಕೊಪ್ಪಿಸುತಲಾಪಾರ ಮುದ ಪಡೆದೂ 2 ಸಾಸಿರಾರ್ಥಗಳೊಂದು ಪದಕವಕಾಶವಿರುವೋ ಶ್ರೀದ ವಿಷ್ಣುಸಾಸಿರದ ನಾಮವನು ಯೋಚಿಸಿ ಇಹರು ಗ್ರಂಥದಲೀಈಸು ರಹಸ್ಯವನರಿತು ಪಠಪಗೆ ಏಸು ದೂರವೊ ಮುಕ್ತಿಬರಿದಾ-ಯಾಸ ಬಟ್ಟುದರಿಂದ ಫಲವೇನಿಲ್ಲವೀ ಜಗದೀ 3 ಹ ಯೆನಲು ಹರಿಯೊಲಿಯುವನು ತಾ ರಿ ಯೆನಲು ರಿಕ್ತತ್ವ ಹರಿಸುವಕ ಯೆನಲು ಕತ್ತಲೆಯೆಂಬಾಜ್ಞಾನವನು ಪರಿಹರಿಪಾಥಾ ಯೆನಲು ಸ್ಥಾಪಿಸುವ ಜ್ಞಾನ ಮೃಯೆನಲು ಮೃತಿಜನಿಯ ಬಿಡಿಸುವತ ಯೆನಲು ಹರಿ ತನ್ನ ಮೂರ್ತಿಯ ತೋರುವನು ನಿತ್ಯಾ 4 ಸಾ ಯೆನಲು ಸಾಧಿಸುವ ಮುಕ್ತೀ ರ ಯೆನಲು ರತಿಯಿತ್ತು ರಮಿಪನುಕಾಯ ವಾಙ್ಮನದೆಂಟು ಅಕ್ಕರ ನುಡಿದರದರೊಳಗೇಶ್ರೀಯರಸು ವಿಶ್ವಾದಿ ಅಷ್ಟೈಶ್ವರ್ಯ ರೂಪದಿ ನಿಂತು ತಾ ಪರ-ಕೀಯನೆನಿಸದೆ ಇವನ ಮನದೊಳು ರಾಜಿಪನು ಬಿಡದೇ 5 ಅನಿರುದ್ಧ ಧರ್ಮವು ದೊರಕಿಸುವ ಪರಮ್ಹರುಷದಲ್ಲಿ ಸ-ತ್ವರ ಕಥಾಯೆನೆ ಕೃತಿರಮಣನರ್ಥಗಳ ಹನಿಗರೆವಾವರ ಅಮೃತಯೆನಲಾಗ ಶ್ರೀ ಸಂಕರುಷಣನು ಕಾಮವನು ಯೋಜಿಪಸರಸ ಸಾರೆನೆ ವಾಸುದೇವನು ಮೋಕ್ಷ ಕೊಡುತಿಪ್ಪಾ 6 ನಿತ್ಯ 7 ಚಾರುತರದೀ ಹರಿಕಥಾಮೃತ ಸಾರಕೃತ ಋಷಿ ಭಾರದ್ವಾಜರುಸಾರ ಹೃದಯದಿ ನಿಂತು ಸಕಲ ಸು ಶಾಸ್ತ್ರದಾಲೋಕಾಸಾರಿ ಸಾರಿಗೆ ಮಾಡಿ ಮಾಡಿಸಿ ಸೂರೆಗೊಟ್ಟಾನಂದ ಚಿನ್ಮಯಪಾರವಾರಾಶಯನ ಶ್ರೀ ಕಮಲಾಪತಿ ವಿಠಲಾ 8
--------------
ಕಮಲಪತಿವಿಠ್ಠಲರು
ಹರಿದಾಸನವನೇ ನೋಡಿ| ಬರೇ ವೇಷ ದೋರಲ ಬೇಡಿ ಪ ಒಂದರ ಘಳಗೆಯ ಕುಂದದಿ ಕಳೆಯಾ|ಮು| ಕುಂದನ ನಾಮವ ಛಂದದಲಿಹ 1 ಅನ್ಯರ ದೂಷಿಸಿ ತನ್ನನೇ ಹೊಗಳನು| ಸಣ್ಣ ದೊಟ್ಟದರಲಿ ಘನ್ನರಿತಿಹ 2 ಹುಲ್ಲ ಮನುಜರಿಗೆ ಹಲ್ಲವದೆರಿಯದೆ| ಫುಲ್ಲನಾಭನಪದದಲಿಹ ಮನ 3 ಮುಂದಿನ ಹಾನಿಯು ಇಂದಿವೆ ತೋರಲಿ| ಮುಂದಿಟ್ಟಟಡಿಯನು ಹಿಂದಕೆಳೆಯ 4 ನುಡಿವದು ಸಲಭ ನಡೆವುದು ದುರ್ಲಭ| ನಡೆನುಡಿಯಲಿ ಸಮಧೃಡಗಂಡಿಹ 5 ಹಂಗವಳಿದು ಸತ್ಸಂಗದಿ ಶ್ರವಣದಿ| ಕಂಗಳ ಸಿರಿಸುಖ ಮಂಗಳಲಿಹ 6 ತಂದೆ ಮಹಿಪತಿ ನಂದನ ಪ್ರಭುದಯ| ದಿಂದ ಭವಾಲಯ ಸಂದ ಜರಿದ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿದಾಸರ ಸ್ತುತಿ ಆನಂದ ಸಾಗರದ ಸೌಖ್ಯವೇಂ ನುತಿಪೆ ಪ. ಆನಂದ ಶ್ರೀ ಗುರುಗಳತಿ ಕೃಪೆಯೊಳಿತ್ತ ಅ.ಪ. ಗಾನಲೋಲನ ಮಹಿಮೆ ಜ್ಞಾನ ಬೋಧನೆಯಿಂದ ನಾನಾಪ್ರಕಾರದಿಂ ವರ್ಣಿಸುತಲಿ ಮಾನಿನಿಯ ಮನದ ಶೋಕಾಗ್ನಿ ಶಾಂತಿಯಗೈಸಿ ಮಾನಸದಿ ನಲಿವಂತೆ ಮಮತೆಯೊಳು ಪೊರೆದ 1 ರಾಮಚಂದ್ರನ ಮಹಿಮೆ ನೇಮದಿಂದಲಿ ಪಠಿಸೆ ಸೋಮಕಳೆ ಪೌರ್ಣಿಮ ಸ್ಥಿರವಾರದಿ ಕಾಮಧೇನುವು ಎನುತ ಕರೆದು ಮುದವಿತ್ತು 2 ಕಲುಷ ಲಿಂಗದ ಕಳೆಯ ಕಳೆದು ಚಂದ್ರನೊಳಿಟ್ಟು ಅ- ನಿಲ ಭಾರತಿಯರ ವ್ಯಾಪಾರ ತಿಳಿಸಿ ಜಲಜಾಕ್ಷ ಗೋಪಾಲಕೃಷ್ಣವಿಠ್ಠಲ ಮನದಿ ನೆಲಸಿ ಮುಕ್ತಿಯ ಕೊಡುವ ಮಾರ್ಗ ತೋರಿದರು3
--------------
ಅಂಬಾಬಾಯಿ
ಹರಿದಾಸರಿಗೆ ಕಿಂಚಿತ್ತಳಿವಿಲ್ಲ ಮನವೆ ಹರಿಯನ್ನು ನೆರೆನಂಬು ಸರಿಯಾರು ನಿನಗೆ ಪ ದುರಿತ ಕೋಟ್ಯಾಚರಿಸಿ ನರಕಿಯಾದಜಮಿಳಗೆ ಮರಣಕಾಲದಿ ಸಂಸ್ಮರಣ ಮಾತ್ರದಿ ನರಕದ ಭಯತಪ್ಪಿ ಸ್ಥಿರಮುಕ್ತಿಪದವಾಯ್ತು ಅರಿದು ನೀ ಗಟ್ಟ್ಯಾಗಿ ಸ್ಮರಿಸು ಮಾಧವನ 1 ಹರಿಸರ್ವೋತ್ತಮನೆಂಬ ತರಳನಿಗೆ ಹಿರಣ್ಯ ಹರಿಯೆಲ್ಲಿ ತೋರದಿರೆ ಶಿರಹಾರಿಸಿಕಪೆನೆನಲು ನರಹರಿಯ ರೂಪದಿಂ ಭರದಿ ಕಂಬದಿ ಬಂದು ಹಿರಣ್ಯಕನ ಶಿರತರಿದು ಪೊರೆದ ಪ್ರಹ್ಲಾದನ 2 ಲಲನೆ ದ್ರೌಪದಿ ಲಕ್ಷ್ಮೀನಿಲಯನ ದಯದಿಂದ ಉಳಿದಳು ಮಾನದಿಂ ಖುಲ್ಲನ ಸಭೆಯಲಿ ಅನುದಿನ ಚಲಿಸದೆ ಮನವಂ ತಿಳಿದು ನೀ ಭಜಿಸೆಲೊ ಸುಲಭ ಶ್ರೀರಾಮ 3
--------------
ರಾಮದಾಸರು
ಹರಿನಾಮದರಗಿಳಿಯು ದೊರಕಿತಿಂದು ವರ ಹಿರಿಯರಾ ಕರುಣದಿಂದೆನಗೆ ಪ. ಸಾರ ಹಾದಿಯಲಿ ವರದ ಮಾಧವನೆಂಬ ಸಾಧಿಸಿ ಕಂಸನ ಗೆದ್ದ ಗೋವಿಂದ 1 ದುಷ್ಟರನು ಶಿಕ್ಷಿಪ ವಿಷ್ಣುವಿನ ನಾಮವು ಕಷ್ಟವನು ಪರಿಹರಿಪ ಮಧುಸೂಧನ ಇಷ್ಟ ಮೂರುತಿ ತ್ರಿವಿಕ್ರಮನ ನಾಮವು ಉತ್ಕøಷ್ಟ ವಾಮನನೆಂಬ ಕಠ್ಠಾಣಿ ಮುತ್ತಿನ 2 ಭವ ಚಂದಿರಾನನನಾದ ದಾಮೋದರನಾ 3 ವಾಸುದೇವ ಎಂಬ ಸಂಕಟವ ಪರಿಹರಿಪ ಪ್ರದ್ಯುಮ್ನನೆಂಬುವನ ಎನ್ನ ಸಂಕುಚಿತ ಮಂಕನಳಿವ ಅನಿರುದ್ಧನ 4 ಪರಮ ಪದವಿಯನಿತ್ತು ಪೊರೆವ ಪುರುಷೋತ್ತಮನ ಪರರ ಬೇಡಿ ಸದ್ವಸ್ತು ಅಧೋಕ್ಷಜನಾ ವರ ಜ್ಞಾನಿಗಳ ಮಾನಸ ನಾರಸಿಂಹನ ಪರಮಪುರುಷನೆಂಬ ಅಚ್ಚುತನ್ನಾ 5 ಮುದ್ದು ಮುಖದೊಳು ತಿಲಕ ತಿದ್ದಿದ ಜನಾರ್ಧನನ ಹದ್ದುವಾಹನನಾದ ಉಪೇಂದ್ರನ ಮುದ್ದು ರಮೆಯರಸ ಶ್ರೀ ಶ್ರೀನಿವಾಸನೆಂಬುವನ 6
--------------
ಸರಸ್ವತಿ ಬಾಯಿ
ಹರಿನಾಮಾಮೃತವನು ಸುರಿದು ಪರಿಪಕ್ವರಾಗಿ ಜರೆಮರಣೆಂದೆಂಬ ಉರುಲನು ಗೆಲ್ಲಿರೊ ಪ ತರಳತನದಿ ಸುರಿದು ಪರಮ ಪ್ರಹ್ಲಾದನು ಪರಮಕಂಟಕ ಗೆಲಿದು ವರಮೋಕ್ಷಕೈದಿದ ನಿರುತದಿಂ ವಿಭೀಷಣ ಸುರಿದು ಈ ಅಮೃತ ಸ್ಥಿರಪಟ್ಟವೇರಿದ್ದು ಅರಿವಿಟ್ಟು ನೋಡಿ 1 ಅಮೃತ ಕರಿ ತನ್ನ ಭಾವದಿ ಪರಮಾಪತ್ತು ಗೆಲಿದದ್ದರಿದು ಸ್ಮøತಿಯಿಂದ ಅಮೃತ ನರನು ಧರೆಯನೆಲ್ಲ ತಿರುಗುತ ಪರತರಧುರವ ಜೈಸಿದರಿದು 2 ಸೇವಿಸಿಅಮೃತ ಪಾವನೆನಿಸಿ ಯುವತಿ ಕೇವಲಮಾನದಿಂ ಬುವಿಯೊಳ್ಬಾಳಿದಳು ದೇವ ಶ್ರೀರಾಮನ ಪಾವನ ನಾಮಾಮೃತ ಭಾವದೊಳ್ಸವಿಯುತ ಕೇವಲರೆನಿಸಿರೊ 3
--------------
ರಾಮದಾಸರು
ಹರಿನಾರಾಯಣ ಎನ್ನಿರೊ ಸಜ್ಜನರು ಶ್ರೀ- ಹರಿಕೃಷ್ಣ ಶರಣೆನ್ನಿರೊ ಪ ಪರಿಪರಿ ದುರಿತಗಳಳಿದು ಪೋಗುವದೆಂದು ನಿರುತವು ವೇದಪುರಾಣ ಪೇಳುವದು ಶ್ರೀ ಅ.ಪ ಹರಿ ಎಂದ ಮಾತ್ರದಲಿ ಹತ್ತಿದ ಪಾಪ ಪರಿಹಾರಾಗುವುದು ಕೇಳಿ ಹರಿದಾಸರೊಡನೆ ಕೂಡಿ ಸತ್ಸಂಗದಿ ಹರಿ ಕೀರ್ತನೆಯನು ಪಾಡಿ ಹರಿಯ ಮಹಿಮೆಯ ಸ್ಮರಿಸುತಲಿ ಹಗ ಲಿರುಳು ಚಿಂತನೆ ಮಾಳ್ಪ ಸುಜನರ ಪರಮ ಕರುಣಾ ಸಾಗರನು ತನ್ನ- ವರೊಳಿರಿಸುತ ಪೊರೆವ ಸಂತತ 1 ಕರಿರಾಜ ಕಷ್ಟದಲಿ ಮೊರೆ ಇಡೆ ಕೇಳಿ ತ್ವರದಿ ಓಡಿ ಬರಲಿಲ್ಲವೆ ಹರಿ ನೀ ರಕ್ಷಕನೆನ್ನಲು ಪಾಂಚಾಲಿಗ- ಕ್ಷಯ ವಸ್ತ್ರವೆನಲಿಲ್ಲವೆ ತರುಳರೀರ್ವರ ಪೊರೆದು ರಕ್ಷಿಸಿ ಕರೆಯೆ ನಾರಗನೆಂದ ದ್ವಿಜನಿಗೆ ನರಕ ಬಾಧೆಯ ಬಿಡಿಸಿ ಸಲಹಿದ ಹರಿಗೆ ಸಮರು ಅಧಿಕರಿಲ್ಲ ಶ್ರೀ 2 ಬಡಬ್ರಾಹ್ಮಣನ ಸತಿಯು ನಯಭಯದಿಂದ ಒಡೆಯರ್ಯಾರಿಲ್ಲೆನಲೂ ಪೊಡವೀಶ ಶ್ರೀಪತಿಯು ಪರಮಾಪ್ತನೆನಲು ಹಿಡಿಯಗ್ರಾಸವ ಕೊಡಲು ನಡೆದು ದ್ವಾರಕ ದೊಡೆಯನಿಗೆ ಒ- ಪ್ಪಿಡಿಯ ಗ್ರಾಸವ ಕೊಡಲು ಭುಂಜಿಸಿ ಕೆಡದ ಸೌಭಾಗ್ಯವನೆ ನೀಡಿದ ಬಿಡದೆ ಕಮಲಾನಾಭ ವಿಠ್ಠಲನ 3
--------------
ನಿಡಗುರುಕಿ ಜೀವೂಬಾಯಿ
ಹರಿನಿನ್ನ ಕರುಣವಿರಾಲಾವ ಭಯವು ಸ್ಮರಣಿ ಮಾತ್ರದಿ ಸಕಲದುರಿತಗಳ ಪರಿಹರಿಪ ಪ ಸಣ್ಣ ವಯದಲಿ ಶ್ರೀ ಜಗನ್ನಾಥದಾಸಾರ್ಯ ಬನ್ನ ಬಡುತಿರೆ ವ್ಯಾಧಿ ಪೀಡೆಯಿಂದ ಘನ್ನ ಕರುಣಾಭ್ದಿ ಶ್ರೀ ಗೋಪಾಲದಾಸರಾ - ಬಿನ್ನಪವನಾಲಿಸಿ ರೋಗಮೋಚನ ಗೈದ 1 ದಾಸಕುಲರತ್ನ ಪ್ರಾಣೇಶ ದಾಸಾರ್ಯರ ಆಸುವಂಶದ ತರುಳ ರೋಗದಿಂದಾ ಯಾಸ ಬಡುವದು ಕೇಳಿ, ಆಶೆಯನೆ ತೊರೆದಿಹನು ನೀ ಸಲಹ ಬೇಕಯ್ಯಾ ಕರುಣದಿಂದಲಿ ನೋಡಿ 2 ವರದೇಂದ್ರ ಗುರುವರರ ಸುರುಚಿರಾಲಯದಲ್ಲಿ ಇರಳ್ಹಗಲು ನಿಮ್ಮ ನಾಮ ಸ್ಮರಿಸುವಂಥ ಪರಿ ಪೀಡಿಸುವದುಚಿತವೇನೊ ಶ್ರೀ ಹರಿ ವಿಚಾರಿಸಿ ನೀನೆಸಿದಯದಿಂದ ನೋಡೊ 3 ವಾಸವಾದ್ಯಮರನುತ ವಾಸುದೇವನೆ ನೀನು ಈ ಸಮಯದೊಳಗಿವನ ಕರುಣದಿಂದ ಪೋಷಿಸಲು ನಿನ್ನ ಪೊಂದಿರುವ ಸದ್ಭಕ್ತರ ದಾಸನೆಂದೆನಿಸಿ ಜೀವಿಸಲಿಯನವರತ 4 ನಿನ್ನನೇ ನಂಬಿರುವೆ ನಿನ್ನನೇ ಪ್ರಾರ್ಥಿಸುವೆ ಧನ್ವಂತ್ರಿ ನೀನೆನ್ನ ಮೊರೆಯಾಲಿಸೊ ಬನ್ನ ಬಡಿಸಲು ಸಲ್ಲ ಇನ್ನು ನೀ ಕರುಣಿಪುದು ವರದೇಶವಿಠಲ 5
--------------
ವರದೇಶವಿಠಲ
ಹರಿಪಾದ ಮರೆಹೊಕ್ಕು ಪರಿಭವವ ಗೆಲಿರೋ ಪರಮ ಪರತರ ಕರುಣಶರಧಿ ಸಿರಿವರಗೆ ಪ ಕುಲವನು ಗಣಿಸದೆ ಎಳೆಬಾಲನೆಂದಪ್ಪಿ ಬಲು ಉಗ್ರರೂಪದಿಂ ಬಲವಾಗಿ ಕಾಯ್ದ ಖಳನನುಜನೆಂಬುದನು ತಿಲಮಾತ್ರ ತಿಳಿಯದೆ ಒಲಿದು ಸ್ಥಿರಪಟ್ಟವನು ಸುಲಭದಿಂ ಕೊಟ್ಟ 1 ಬಡತನವ ಕಡೆಮಾಡಿ ಸಡಗರದಿ ಕಾಯ್ದ ಕಡುಮುಕ್ತಿಸಂಪದ ತಡೆಯದಲೆ ಕೊಟ್ಟ 2 ತರುಣಿ ದ್ರೌಪದಿಮಾನ ಪೊರೆದಿಂಬುಗೊಟ್ಟ ಕರುಣಾಳು ಶ್ರೀರಾಮ ಜರಹೇವ ಇಲ್ಲದಲೆ ಚರಣದಾಸರ ಮನೆಯ ತುರಗ ತಿರುವಿದನು 3
--------------
ರಾಮದಾಸರು
ಹರಿಪಾದವ ನಂಬಿರೋ | ಮನುಜರೆಲ್ಲ | ಹರಿಯಲ್ತೆ ಹರಿಗರ್ವ ಹರಿಸಿ ಗೋಕುಲದೀ | ವಿ | ಹರಿಸಿ ಹರಿಜಳಲ್ಲಿ ಹರಿಮೆಟ್ಟಿನಲಿವಂಥ ಪ ಸೋಮಜ ಭವನ ಪದಾ | ಸೇವೆಗೆ ಮೆಚ್ಚಿ | ಸೋಮ ಪುತ್ರಗೆ ನೀಡಿದಾ | ಸೋಮನಾ ಭಂಡಾರಿಯನೆ ಮಾಡಿ ದಯದಿಂದ | ಸೋಮಜಾನನಾ ಪೂರ್ಣ ಸೋಮಚಕೋರವಾ 1 ಕಮಲಾರಿ ಧರ ಸೇವ್ಯನು | ಶಂಖ ಚಕ್ರ | ಕಮಲಾಗದಾಧರನು | ಕಮಲಾಂಘ್ರೀಯನಖ ಕಮಲದಿ ಜನಿಸಿದಾ | ಕಮಲದಿ ಮೂಜಗ ಕಮಲಗತಿಯ ನೀವ 2 ಗೋಪೆಸರನ ಪಿತನ | ಉದ್ಧರಿಸಲು | ಗೋಪಾದ ತ್ರಯ ಕೃತನ | ಗೋಪಾದಿವಿನುತ ಮಹಿಪತಿಸುತ ಪ್ರಭು | ಗೋಪಕೋಟಿ ತೇಜ ಗೋಪಾಲ ನೆನಿಸುವ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಮಣಿವರ್ಣ ವಿಠ್ಠಲಾ ನಿನ್ನವನೊ ಪರಮ ಪ್ರೀತಿಯಿಂದ ಪಾಲಿಸ ಬಾರಯ್ಯ ಪ ಪಂಕಜ ದಳ ಕೂಡಿತು ನೋಡು ಮುದರಿಕೊಂಡವು ಕುಮುದವೆಂಬೊ ಕಣ್ಣು ಪದುಮನಾಭನೆ ನಿನ್ನ ನಖವೆಂಬೊ ರವಿ ವದನವೆಂಬೊ ಚಂದ್ರÀಮಾ ಉದಿಸಲಿ 1 ಬಿರಿದಾಗಿ ಕಿವಿ ಎಂಬೊ ಮನೆ ಇಪ್ಪವು ಸ್ಪರಿಶ ಮಾಡುವೆನೆಂದು ಕಲಿ ಸುಳಿದಾ ಕರ್ಣ ಮಂದಿರವೆ ತುಂಬಲಿ ಕಲಿ ಅಡಗಿ ಪೋಪಾ 2 ನಾಸಾ ದುರ್ವಾಸನೆಗೆ ಇಚ್ಛೆ ಮಾಡಿತು ಹೇಸಿಗೆ ರಸಗಳಿಗೆ ಜಿವ್ವೆ ಪೋಗುದದು ಪೂಸಿದಾ ಗಂಧ ದಿವ್ಯವಾಸನೆ ಬರಲಿ ಲೇಸು ನಿನ್ನ ನಾಮರಸ ಸುರಿಸುವಂತೆ ಮಾಡು3 ನೀನಲ್ಲದೆ ತುಲಾ ಕಾವೇರಿಯೊಳಗೆ ಸ್ನಾನ ಜಪ ತಪಗಳು ಮಾಡುವದೇಕೆ ಸಿರಿ ಪ್ರಾಣರಿಗೆ ಪ್ರಾಣನಾದ ಬಲು ಮೋಹನಾ 4 ಈ ಕ್ರೋಧನಾಬ್ಧ್ದ ಆಶ್ವಿಜ ನಿನ್ನ ಪಕ್ಷದ ಏಕಾದಶಿ ರಾತ್ರಿಯೊಳು ಬಾ ಹೃದಯದೊಳಗೆ ಯಾಕೆ ಕೂಡದಯ್ಯ ಜೀಯಾ ಪೇಳೊ ಎನ್ನೊಡಿಯ ಲೋಕ ಚರಿಸುವದೇನು ನಿನ್ನ ಪೋಗಾಡಿ 5 ಧವಳಗಂಗಿಯೊಳಂದು ಬಿದ್ದು ಬಂದಾಗ ಕವಿ ವಾದಿರಾಜಗೊಲಿದು ಬರಲಿಲ್ಲವೇ ಅವರ ದಾಸಾನುದಾಸನು ಸತತ ನಾನು ತವಕದಿಂದಲಿ ಬಾರೊ ಭಕ್ತವತ್ಸಲಾ6 ಅರ್ಚಿಸಬಲ್ಲನೆ ದೇವ ನಿನ್ನನುದಿನಾ ಗಚ್ಚರಿತವಂದಲ್ಲವೆ ಮತ್ತಾವದರಿಯೆ ಅಚ್ಯುತದಾಸರ ಪ್ರೀಯ ವಿಜಯವಿಠ್ಠಲ ಬೆಚ್ಚಿಸಿದೋಪಾದಿಯಲ್ಲಿ ಪೊಂದಿ ಬಾರಯ್ಯ 7
--------------
ವಿಜಯದಾಸ