ಒಟ್ಟು 39871 ಕಡೆಗಳಲ್ಲಿ , 136 ದಾಸರು , 11580 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ದಶಾವತಾರ ಸ್ತೋತ್ರ ನಾರಾಯಣ ಗೋವಿಂದ | ಹರಿ |ನಾರಾಯಣ ಗೋವಿಂದ |ಪಾರಾಶರ ಸುತನಂದ | ಹರಿ |ನಾರಾಯಣ ಗೋವಿಂದ ಪ ವೇದವ ಕದ್ದೊಯ್ಯಲು ಆತಮನಾ |ಬಾಧಿಸಿ ನಿಗಮವ ತಂದ 1 ದಿವಿಜರು ಚ್ಯುತಬಲರಾಗಿರಲಮೃತವ |ದಿವಿಜರಿಗುಣಿಸಿದ ನಂದಾ 2 ಖಳನು ಭೂಮಿಯ ಕದ್ದೊಯ್ಯಲುತಾ |ಪೊಳೆವ ಕೋರಿಯಲಿ ತಂದಾ 3 ತರುಳನ ಪರಿಪರಿ ಬಾಧಿಸುತಿರಲಾ |ದುರುಳ ದೈತ್ಯನ ಕೊಂದ 4 ಬಲಿಯಪರಾಧವ ನೊಂದೆಣಿಸದೆ ತಾ |ವರಿದು ಬಾಗಿಲಲಿ ನಿಂದ 5 ಕ್ಷತ್ರಿಯ ಬಲವನೆಲ್ಲ ಸವರಿ ನಿ |(ಶ್ಚ) ಕ್ಷತ್ರರ ಮಾಡಿದ ನಂದಾ 6 ವರಮುನಿ ಶಾಪದಿ ಶಿಲೆಯಾಗಿರಲು |ದ್ಧರಿಸಿದ ಪರಮಾನಂದಾ 7 ಮಡದಿ ಗೋಪಿಯರ ಒಡನಾಡಿದ |ಪಾಲ್ಗಡಲ ಶಯನ ಮುಕ್ಕುಂದಾ 8 ತ್ರಿಪುರದ ಸ್ತ್ರೀಯರ ವೃತಗೆಡಿಸಿದ | ವಟು |ವಪು ಮೃಡಮುಖ ಸುರವಂದ್ಯಾ 9 ಪುರುಷೋತ್ತಮ ಯವನರ ಸಂಹರಿಸಿ |ತುರಗವನೇರಿ ನಿಂದಾ 10 ಶ್ರೀಶ ಪ್ರಾಣೇಶ ವಿಠಲ ಈ ಸರ್ವರ |ಪೋಷಕ ನಾನಹುದೆಂದಾ 11
--------------
ಶ್ರೀಶಪ್ರಾಣೇಶವಿಠಲರು
ದಶಾವತಾರಗಳು ಕರುಣದಿ ಪಾಲಿಸೆನ್ನ ಶ್ರೀ ಹಯ ವದನ ಪ ಕರುಣದಿ ಪಾಲಿಸೊ ಕರಿವರದನೆ ನಿನ್ನ ಚರಣ ಕಮಲಗಳಿಗೆರಗಿ ಬೇಡಿಕೊಂಬೆ ಅ.ಪ ಅಗಣಿತ ಮಹಿಮನೆ ನಗಪಾಣಿ ಶ್ರೀಶನೆ ವಾಹನ ನಿಗಮ ಗೋಚರನದ ಮೃಗರೂಪ ಮೂರ್ಜಗದೊಡೆಯನೆ ನಿನ್ನ ಮೀಗೆ ಹರುಷದಿಂದ ಪೊಗಳುವ ಸುಖವಿತ್ತು ಹಗಲಿರುಳೆನ್ನದೆ ಅಘು ಕಳೆದು ಕಾಯೊ ಗಗನಾಳಕ ವಂದಿತ ತ್ವರಿತದಿ ಕರ ಮುಗಿದು ಬೇಡುವೆ ಸಂತತ ಮರಿಯದೆಪೊರೆ ಪ ನ್ನಗ ಶಾಯಿ ಶ್ರೀ ಭೂನಾಥ ನಿನ್ನಯ ಪಾದ ಯುಗ ಸೇವೆ ನೀಡಯ್ಯ ನಗವೈರಿ ಮಗ ಸೂತ 1 ಕ್ಷಿತಿಜೆರಮಣ ದ್ರೌಪದಿ ರಕ್ಷಕನೆ ನಿನ್ನ ಸುರ ಸನ್ನುತ ಪತಿತೋದ್ಧಾರಕಮನ್ ಪತಿ ಪಾದ್ಯನೆ ಸಂ ಪಾದ ಶತಪತ್ರ ನಂಬಿದೆ ಹಿತದಿ ಎನ್ನಯ ದುರ್ಮತಿ ಕಳೆದು ಕಾಯೊ ಶತ ಮಖಾನುಜ ಗೋವಿಂದ ಬಾಗುವೆ ಶಿರ ದಿತಿಜಾರಿ ನಿತ್ಯಾನಂದ ಮಾತುಳ ವೈರಿ ವಿತತ ಮಹಿಮ ಮುಕುಂದ ನಿನ್ನನುದಿನ ಕೃತಿ ಪತಿ ಭರದಿಂದ 2 ಇಂದಿರಾಧವ ಶಾಮಸುಂದರ ವಿಠಲನೆ ಮಂದರ ಗಿರಿ ಪೊತ್ತು ಮಂದಜಾಸನಪಿತ ಮಾಧವ ಸುರ ವಿನುತ ದಯಾಸಿಂಧು ದಿನ ಬಂಧು ಪಾದ ಪೊಂದಿದೆ ಸಂತತ ಕಂದನೆಂದರಿದೆನ್ನ ಕುಂದು ಎಣಿಸದೆ ದಯ ದಿಂದ ಪಾಲಿಸು ಹೇದೇವ ನಂಬಿದೆ ದಶ ಕಂಧರಾಂತಕ ರಾಘವ ಬೇಡುವೆ ದಶ ಶ್ಯಂದನ ಸುತ ವರವ ಪಾಲಿಸಿ ಕಾಯೊ ಕಂದರ್ಪ ಪಿತ ಕುಂತಿನಂದನರ ಭಾವಾ 3
--------------
ಶಾಮಸುಂದರ ವಿಠಲ
ದಶಾವತಾರದ ನಿಂದಾಸ್ತುತಿಗಳು ವರನ ಚಂದಮದೇನ ವರ್ಣಿಸುವೆನೆಲೆ ಸಖಿಯೆ ಪರಮಸುಂದರಗಾತ್ರನಿರವ ಕೇಳೆ ಬಿಚ್ಚಿರುವ ಕಣ್ಗಳಂ ಮುಚ್ಚಲಾರದ ವರಗೆ ಪಚ್ಚಕರ್ಪೂರದಾ ಕಪ್ಪಿದೇಕೆ ಕೊಳೆತುನಾರುತಲಿಹಗೆ ಲಲಿತವಸ್ತ್ರಗಳೇಕೆ ಹೊಲಸು ಮಯ್ಯಿಗೆ ಗಂಧ ಬಳಿಯಲೇಕೆ ಜಲಧಿಯಲಿ ವಾಸಿಪಗೆ ಪÀಲವಿಧದ ತೊಡವುಗಳೆ ನೆಲೆಯಿಲ್ಲದಾತಂಗೆ ಲಲನೆ ಸುತರೆ ಅಜ್ಞಾತಪಾದಕ್ಕೆ ಗೆಜೆ ಗೊಲಸೆ ವಿಜ್ಞಾನಮಯಗೆ ವಿವಿಧ ಸಿಂಗರವೆ ಯಜ್ಞಭೋಕ್ತಗೆ ಮತ್ತೆ ಭಕ್ಷ್ಯದೆಡೆಯೆ
--------------
ನಂಜನಗೂಡು ತಿರುಮಲಾಂಬಾ
ದಾತ ತ್ರೈಲೋಕ್ಯಕೀತ ಧ್ರುವ ದೂರ ಸಗುಣ ಸಹಕಾರ ಧೀರ ಪರಮಉದಾರ ದುರಿತ ಸಂಹಾರ ಪರಾತ್ಪರ ಪರಾಕಾರ 1 ಈಶ ಭವಭಯನಾಶ ಶೇಷಶಯನ ಸರ್ವೇಶ ದೋಷಹರ ಕರುಣೀಶ ಕ್ಲೇಶನಾಶ ದೇವೇಶ 2 ಮಾತಾ ವಿಶ್ವನಿರ್ಮಿತ ಪಿತಾಮಹನ ಪಿತ ಈತ ಮಹಿಪತಿ ಹಿತ ನಾಥಾ ಭಕ್ತಪುನೀತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾತ ನೀನೆ ಸ್ವಾಮಿ ಶ್ರೀಗುರುನಾಥ ವರ್ಮ ತೋರಿಕೊಡುವ ನಿಮ್ಮ ಧರ್ಮಗುಣ ಪ್ರಖ್ಯಾತ ಧ್ರುವ ಧರೆಯೊಳು ಸರಿಯಗಾಣೆ ಗುರುಧರ್ಮದಿಂದಧಿಕ ಕರುಣಿಸಿ ಆನಂದದಿಂದ ತೋರುತಿಹ್ಯ ಬ್ರಹ್ಮಸುಖ ವರಮುನಿಗಳ ಪ್ರಿಯ ಶರಣಜನಪಾಲಕ ಪರಮ ಸುಪಥದೋರಿ ಹೊರೆವ ಪೂರ್ಣತಾರಕ 1 ಬಡವನಾಧಾರಿ ನೀನು ಒಡಿಯನಹುದೊ ನಿಶ್ಚಯ ಕೊಡುವ ಭಕ್ತಿ ಮುಕ್ತಿದಾತ ದೃಢಭಕ್ತರಾಶ್ರಯ ಒಡಲ ಹೊಕ್ಕಿಹೆ ನಿಮ್ಮ ಕಡೆಯಗಾಣಿಸೊ ನಮ್ಮಯ್ಯ ಪಿಡಿದು ನೀ ಎನ್ನ ಕೈಯ ಕೊಡು ತೋರಿ ನಿಮ್ಮ ಸೊಹ್ಯ 2 ಪೊಡವಿಯೊಳು ಕ್ಷಮೆ ಎನಗೆ ಕೊಡು ಕರುಣಾಕಟಾಕ್ಷ ನೋಡಿ ನಿಮ್ಮ ದಯದಿಂದ ನೀಡೊ ನಿಜ ಸುಭಿಕ್ಷ ಬಿಡದೆ ಎಂದೆಂದು ನೀನು ಮಾಡೊ ಸಂರಕ್ಷ ಮೂಢ ಮಹಿಪತಿಗಿನ್ನು ಪೂರಿಸೊ ಮನದಪೇಕ್ಷ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾತ ಅಂಬುಜಾಸನ ತಾತ ಕುಂಭಿಣಿಯೊಳು ಪುಟ್ಟಿ ಜನನಿಯ ಮೊಲೆ ಪಾಲು ಉಂಬೋದು ಬಿಡಿಸೊ ಜನನವ ಕೆಡಿಸೊ ಪ ರಸಿಕೆ ಮುಹಕದಲಿ ನಿಶಿದಿನದಲಿ ಹೊರಳಿ ಅಸುರುಸುರೆನುತಲಿ ಹಸಗೇಡಿಯಾದೆನೊ ಪರಿ ನೊಂದು 1 ಹಲವು ಲಂಪಟದೊಳು ಹಲುಬಿ ಹಕ್ಕಲನಾದೆ ಬಲೆಯೊಳಗಿದ್ದ ಎರಳೆಯಂತೆ ಮಿಡುಕುತ ಮಲಮೂತ್ರದೊಳು ಬಳಲಿದೆ ಕೇಳೊ 2 ಎಳ್ಳನಿತು ಸತ್ಕರ್ಮವುಳ್ಳದ್ದು ಚರಿಸಿದೆ ಬಲಿಷ್ಠ ನಾನೆಂದು ಬಲು ದುರ್ಮತಿಯಿಂದ ಎಲ್ಲರ ಜರಿದೆ ಧರ್ಮವ ಮರೆದೆ 3 ಚಾರುವಾಕರಗೂಡಿ ಮೂರೆ ವಿಕಾರದಲ್ಲಿ ನೀರೇರ ಒಡಗೂಡಿ ನೀತಿ ನಿರ್ಣಯ ತೊರೆದು ಬಟ್ಟೆ 4 ಎಲ್ಲಿರಲು ನಿನ್ನವನೋ ಅಲ್ಲವೆಂದೆನಿಸದೆ ಬಲ್ಲಿದರೊಡಿಯ ವಿಜಯವಿಠ್ಠಲ ನಿ ನ್ನಲ್ಲಿ ಸೇರಿಸಿ ಎನ್ನ ಪೊರೆಯೋ ಪ್ರಸನ್ನಾ 5
--------------
ವಿಜಯದಾಸ
ದಾತ ನೀನಿರಲಾತರ ಬಡತನವೊ ದಾತ ನೀನಿರಲಾತರ ಬಡತನವೊ ಪ ಸೋತು ಮನವನು ವಿಷಯಗಳಲಿ ಬಲು ವಾತ ಕುಮಾರರ ನೀತಿಗಳರಿಯುತ ಧಾತಪಿತನ ಗುಣ ಜಾತಗಳಲಿ ಅತಿ ಪ್ರೀತಿ ಪಡೆಯುವರ ಅ.ಪ ತಾನು ತನ್ನವರೆನ್ನುವ ಮೋಹದಲಿ ಅನುದಿನದಲಿ ಮುಳುಗಿಹ ಮಾನವರಿಗೆ ಧನಾರ್ಜನೆಯು ಕ್ಲೇಶ ಜಾನಕೀಶನೆ ನೀನಲ್ಲದೆ ಎನ ಗೇನು ರುಚಿಸದು ಎಂದರಿಯುತ ನಿನ್ನ ಜ್ಞಾನ ಪಡೆಯಲು ಸತತ ಶ್ರವಣ ಮನನಾದಿಗಳ ಸುಖವರಿತ ಸುಜನರಿಗೆ 1 ಪಾಡುಪಡುತಲಿ ಧನವ ಬಹಳ ಗಳಿಸಿ ನೋಡುತಲದ ಹಿಗ್ಗುತ ಗೂಢತನದಲಿ ದಿನದಿನ ನೇವರಿಸಿ ಕಾಡುವಾ ನರನಂತೆ ಜೀವನ ಮಾಡುವುದು ಕಡು ಬಡತನವಲ್ಲವೆ ತೋಡಿ ಗಿರಿಯನು ಇಲಿಮರಿಗಳ ಹಿಡಿ ದಾಡುವಂತಹ ಮೂಢ ನಾನಲ್ಲವೊ 2 ನಿನ್ನ ಗಾನವೆ ವಿವಿಧ ಸುರಸ ಪಾನ ಅವಿಚಾಲಿತ ಮನದಲಿ ನಿನ್ನ ಧ್ಯಾನವೆ ನವಮಣಿ ಸೋಪಾನ ನಿನ್ನ ಪೂಜೆಯ ಮಂದಿರವೆ ಎನ ಗುನ್ನತದ ಉಪ್ಪರಿಗೆಯ ವಾಸವು ನಿನ್ನ ಸೇವೆಯ ಸುಖತಮ ಭೋಗಗ ಳೆನ್ನುವರಿಗೆ ಪ್ರಸನ್ನನಾಗುವ 3
--------------
ವಿದ್ಯಾಪ್ರಸನ್ನತೀರ್ಥರು
ದಾತ ಸನ್ಮುನಿಗಣ - ನಾಥ ಕಾಮಿತ ಕಲ್ಪವೃಕ್ಷಾ - ಕಲ್ಪವೃಕ್ಷಾ ಆಶ್ರಿತಜನದಕ್ಷಾ ಪ ಧಾತ ಮುಖ ಸುರಮುನಿಯ ಸಂತತಿ ಪ್ರೀತಿ ಪೂರ್ವಕದಿಪ್ಪ ಕಾರಣ ಜೋತಿ ವೃಂದಾವನದಿ ತಾ ನಿ - ರ್ಭೀತ ಮಹಿಮೆಯ ತೋರ್ಪಜಗದಿ ಅ.ಪ ಬಿಕ್ಷುನಾಯಕ ಸರ್ವಾಪೇಕ್ಷದಾಯಕನೆಂಬ ಬಿರಿದು ನೆಂಬ ಬಿರಿದು ಪೊತ್ತಿಹ ಪಾಪ ತÀರಿದು ಪಾದ ಪದುಮವ ವಕ್ಷೋಮಂದಿರದೊಳಗೆ ತಾನಪ - ರೋಕ್ಷಕರಿಸೀ ಸರ್ವಜನರಾ - ಪೇಕ್ಷ ಪೂರ್ತಿಸಿ ಮೆರೆವ ಗುರುವರ 1 ಕ - ಮಂಡುಲಧರ ಹಂಸರೂಪಾ ಅಮಿತ ಪ್ರತಾಪ ಕರ ಮಾ - ತ್ರಿಜಗ - ಸುಜನ ಮನ್ಮನೋ - ಪುಂಡರೀಕ ನಿವಾಸ ನಿರ್ಮಲ 2 ಕಿಟಜ ಸರಿದ್ವರ - ತಟವಾಸ ಗುರುಜಗನ್ನಾಥ ಜಗನ್ನಾಥ ವಿಠಲ ಗುಣಗಾಥ ತಟನಿ ಲಹರೀ ಮಧ್ಯ ತನ ಹೃ ತ್ಪುಟ ಸುನಾವಿಯ ಮಾಡಿ ಸಂತತ ಅಟನಗೈಯುತ ಜಗದಿರಾಜಿಪ ಚಟುಲ ವಿಕ್ರಮ ಕರುಣಸಾಗರ 3
--------------
ಗುರುಜಗನ್ನಾಥದಾಸರು
ದಾತನೀತ ಯತಿನಾಥ ನಿಜಪದ ದೂತಜನರ ಪೊರೆವಾ ಪ ಧಾತನಾಂಡದೊಳತಿ ಖ್ಯಾತನಾಗಿ ಶಿರಿ ನಾಥ ನೊಲಿಸಿ ಮೆರೆವಾ ನೀತಮನದಿ ತನ ಮಾತು ಮೀರಿದಿಹ - ಗೀತೆರದಿ ತಾನೆ ಒಲಿವಾ ತಾತನೆ ಮನೋಗತ ಭೀತಿಯ ಬಿಡಿಸೆನೆ ಪ್ರೀತಿ ಮನದಿ ತಾ ಬರುವಾ ಅ.ಪ ರಾಮ ಕೃಷ್ಣ ನರಹರ್ಯಂಘ್ರಿಯ ಪ್ರೇಮಮನದಿ ಭಜಿಪಾ ನೇಮದಿ ತನ್ನನು ಕಾಮಿಪ ಜನರಿಗೆ ಕಾಮಿತ ಫಲರೂಪಾ ಈ ಮಹಾ ಮಹಿಮೆಯ ನೇಮದಿ ತೋರುವ ಭೂವಿ ಸುರರ ಭೂಪಾ ತಾಮಸ ಮತಿ ನಿರ್ಧೂಮ ಗೈಸುವ ಧೂಮಕೇತುನೆನಿಪಾ 1 ಮಂದ ಜನರಿಗೆ ಎಂದಿಗಲಭ್ಯನ - ಪೊಂದಿದ ಜನರಾ ಕುಂದೆÀಣಿಸದೆ ತಾ ನಂದ ಕೊಡವೊ ಮಹಾರಾಯಾ ವಂದಿಪ ಜನರಘ - ವೃಂದವ ದರುಶನ - ದಿಂದ ತರಿವೊ ಜೀಯಾ ಸುಂದರತರ ವೃಂದಾವನ ನಿಜ ಮಂದಿರ ಗತ ಧ್ಯೇಯಾ 2 ದಾತಗುರು ಜಗನ್ನಾಥ ವಿಠಲನತಿ ಪ್ರೀತಿಯಿಂದ ಭಜಿಪಾ ದೂತ ಜನರು ಬಲು ಆತುರದಲಿ ಕರಿಯೆ ಪ್ರೀತ ಮನದಿ ತಾ ಬಪ್ಪ ಮಾತೆಯತೆರ ನಿಜ ದೂತರÀ ಮನಸಿನ ಮಾತು ನಡೆಸುವ ನೀಭೂಪಾ ಈತಗೆ ಸರಿಯತಿನಾಥ ಕಾಣೆನೊ ಭೂತಳೇಶರಧಿಪಾ 3
--------------
ಗುರುಜಗನ್ನಾಥದಾಸರು
ದಾನಧರ್ಮವ ಮಾಡಿ ಸುಖಯಾಗು ಮನವೆ ಪ ಹೀನ ವೃತ್ತಿಯಲಿ ನೀ ಕೆಡಬೇಡ ಮನವೆ ಅ ಎಕ್ಕನಾತಿ ಯಲ್ಲಮ್ಮ ಮಾರಿ ದುರ್ಗಿ ಚೌಡಿಯಅಕ್ಕರಿಂದಲಿ ಪೂಜೆ ಮಾಡಲೇಕೆಗಕ್ಕನೆಯೆ ಯಮನ ದೂತರೆಳೆದೊಯ್ಯುವಾಗಶಕ್ತೇರು ಬಿಡಿಸಿಕೊಂಡಾರೇನೊ ಮರುಳೆ 1 ಸಂಭ್ರಮದಲಿ ಒಂದ್ಹೊತ್ತು ನೇಮದೊಳಗಿದ್ದುತಂಬಿಟ್ಟಿನಾ ದೀಪ ಹೊರಲೇತಕೆಕೊಂಬು ಹೋತು ಕುರಿ ಕೋಣಗಳನ್ನು ಬಲಿಗೊಂಬದೊಂಬಿ ದೈವಗಳ ಭಜಿಸದಿರು ಮನವೆ2 ಚಿಗುರೆಲೆ ಬೇವಿನ ಸೊಪ್ಪುಗಳ ನಾರಸೀರೆಬಗೆಬಗೆಯಿಂದ ಶೃಂಗಾರ ಮಾಡಿನೆಗೆನೆಗೆದಾಡುತ ಕುಣಿಯುತಿರೆ ನಿನಗಿನ್ನುಮಿಗಿಲಾದ ಮುಕ್ತಿಯುಂಟೇ ಹುಚ್ಚು ಮನವೆ 3 ದಾನಧರ್ಮ ಪರೋಪಕಾರವ ಮಾಡುದೀನನಾಗಿ ನೀ ಕೆಡಬೇಡವೊಜ್ಞಾನವಿಲ್ಲದೆ ಹೀನ ದೈವವ ಭಜಿಸಿದರೆಏನುಂಟು ನಿನಗಿನ್ನು ಎಲೆ ಹುಚ್ಚು ಮನವೆ 4 ನರಲೋಕದಲಿ ಯಮನ ಬಾಧೆಯನು ಕಳೆಯಲುವರ ಪುಣ್ಯ ಕಥೆಗಳನು ಕೇಳುತಲಿಸಿರಿ ಕಾಗಿನೆಲೆಯಾದಿ ಕೇಶವನ ನೆರೆ ನಂಬಿಸ್ಥಿರ ಪದವಿಯನು ಪಡೆ ಹುಚ್ಚು ಮನವೆ5
--------------
ಕನಕದಾಸ
ದಾನವಕುಲ ದಮನಾ ಕೇಶವ ದೀನಪಾಲ ಗಾನಲೋಲ ಶ್ರೀಜನಾರ್ದನ ಪ ವಾನರಪತಿಸದನಾ ಸನಕಾದಿ ಸೇವಿತ [ದೀನ] ಶರಣ್ಯ ಸಾರಸಾಕ್ಷ ಲೋಕ ಮೋಹನ ಅ.ಪ ಶ್ರೀ ರಮಣೀ ಸೇವಿತ ಚರಣಾಬ್ಜ ವಾರಿಧಿ ಶಯನಾ ನಾರದನುತ ಚರಣಾ | ಸುರರಾಜ ಪೂಜಿತ ನೀರಜಾಕ್ಷ ಮಾಂಗಿರೀಶ ವಾರಿಜಾಸನಾ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಾನವಗಿರಿಕುಲಿಶಾ ನರಸಾರಥಿ ದಶರಥ ಸುಕುಮಾರ ಪ ಕುಂಭಿನಿಜಾರಮಣ ನಂಬಿದೆ ನಾನಿನ್ನ 1 ಕಮಠ ವರಾಹ ನರಹರಿ ವಾ- ಮನ ಭಾರ್ಗವ ರಾಮ ಭಂಜನ ಜಿನಸುತ ಕಲ್ಕಿಯೆ ದೀನ ಜನ ಪ್ರೇಮಾ 2 ತಿರುಪತಿಯಲಿ ನೆಲಸಿರುವೆ ಭಕ್ತಸುರ- ತರುವೆ ವೆಂಕಟೇಶ ಗುರುರಾಮವಿಠಲ ಕೋರಿದ ವರಗಳ ಕೊಡುವ ಶ್ರೀನಿವಾಸ 3
--------------
ಗುರುರಾಮವಿಠಲ
ದಾನವಿಲ್ಲ ಧರ್ಮವಿಲ್ಲ ಜ್ಞಾನವಿಲ್ಲಏನು ಹೇಳಿದರೇನು ವಿಷಯಮೆಚ್ಚಿದವಗೆ ಪ. ಕಂಡಕಂಡವರ ಅನ್ನಕೆ ಸಿಲುಕಿ ಅನುಗಾಲಭಂಡತನದಲಿ ಕಾಲವ ಕಳೆಯುತತಂಡ ತಂಡದಿ ಬಾಹ ಔತಣಕೆ ಮೈಯ್ಯುಬ್ಬಿಉಂಡು ಎನಗಿಂದಧಿಕ ಯೋಗ್ಯನಿಲ್ಲವೆಂದು 1 ಪರ್ವಕಾಲ ಪಿತೃದಿವ್ಸ ಗುರುಗÀಳ ಪುಣ್ಯದಿನಸರ್ವಕರ್ಮವ ತ್ಯಜಿಸಿ ಅತಿಥಿಗೀಯದೆಪರರ ಅನ್ನವ ಬಿಡದೆ ಉತ್ಸಾಹದಲಿ ಪೋಗಿನಲಿನಲಿದುಂಡು ಸ್ತೋತ್ರವ ಮಾಡಿ ದಿನಕಳೆವೆ 2 ಅನ್ಯರೊಡವೆಯು ತನಗೆ ಬಂದರೆ ಸಂತೋಷತನ್ನೊಡವೆ ಒಬ್ಬರಿಗೆ ಕೊಡಲು ಕ್ಲೇಶಉನ್ಮತ್ತನಾಗಿ ಉದರವ ಪೊರೆವ ಈ ದೋಷಮನ್ನಿಸಿ ದಯಮಾಡಿ ಸಲಹೋ ಹಯವದನ3
--------------
ವಾದಿರಾಜ
ದಾನಿ ಸದ್ಗುರು ಕೊಟ್ಟಾ ಸ್ವಾನಂದ ಸುಖವಾ ಪ ಕರದು ಘನದಯ ಮಳೆಗರದಾ | ಕ್ಷರವ ನುಡಿದು ಯನ್ನ ಕಿವಿಯೊಳುಸುರಿದಾ 1 ನಯನ ವೆರಡರಲಿ ಮುದ್ರಿಯನಿಲಿಸಿ | ಮಯ ಪ್ರಭೆ ಕುರುಹನು ದೋರಿದ ಸುಳಿಸಿ2 ಬೋಧ ವೆಚ್ಚರಿಸಿ | ದನು ಗುರು ಮಹಿಪತಿ ಕಂದನುದ್ಧರಿಸಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು