ಒಟ್ಟು 9847 ಕಡೆಗಳಲ್ಲಿ , 135 ದಾಸರು , 5174 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೆಂಕಟೇಶಾಯ ನಮೊ ವಿಜಯವಿಠ್ಠಲನೆ ನಮೊ | ಪಶುಪತಿ ಗುರು ನಮಿತ ಪಾದಾ | ಪಂಕಜವ ಪೊಗುಳವೆನು ಪರಿಪಾಲಿಸೆನ್ನ | ಕಿಂಕರನ ಕಿಂಕರರಿಗೆ ಕಿಂಕರನೆಂದೆನಿಸೊ ಪ ಕಾರ್ಯವಾಕಾರ್ಯವನು ತಿಳಿಯಲೊಲ್ಲದ ಕಾಮಾ | ತೂರ್ಯದಲಿ ಪಾಪಗಳೆ ರಚಿಸಿ | ಬೆಂಬಿಡದದೆ ಬಲು | ಧೈರ್ಯವಂತನು ನೀನಾಗಿ | ಧೈರ್ಯವಾಗಿದ್ದಾಗ ಜಡಜೀವ ಜಂತುಗಳು | ವೀರ್ಯದಲಿ ಪೊಕ್ಕು ದುಃಖಾತಿಶಯದಲಿ | ದುರ್ಯೋನಿ ಮುಖದಿಂದ ಜನನ ಜನಿತನಾದೆ | ಮರ್ಯಾದೆಗಳು ಇಲ್ಲದೆ ಹರಿಯೇ 1 ಕ್ಷಿತಿಯೊಳಗೆ ಬಂದು ಕಾಮ ಕ್ರೋಧ ಸಂಮೋಹ ಶ್ರುತಿ ವಿಭ್ರಮ ಬುಧ್ಧಿನಾಶ ರಾಗದ್ವೇಷ | ಪಥದಲಿ ವಿಷಯೇಂದ್ರಿಗಳು ಆತ್ಮವಶವಾಗಿ ಹಿತದ ಪ್ರಸಾದದಿಂದ | ಗತಿ ಅದರಿಂದ ಈ ಸಂಖ್ಯೆಯಿಂದಲಿ | ಹತವಾಗಿ ಪೋಗಿ ಮರಳೆ ದೇಹವನು | ತೆತ್ತು ಗತಿ ಪುಣ್ಯವಂತನೈದೆ 2 ಇಂದಿಗಾ ಇವನ ಮನೆ ತಂದೆ ತಾಯಿಯ ದಿವಸ | ಇಂದಿಗಾ ಇವನ ಮನೆ ಹತ್ತ ಹತ್ತನೆ ದಿವಸ | ಹವ್ಯ ಕವ್ಯ ಜಾವಳ | ಇಂದಿಗಾ ಮದುವೆ ಮುಂಜಿ | ಇಂದು ನಿಮ್ಮನೆ ಪ್ರಸ್ತವೆಂದು ಕೇಳುತಾ ಪೋಗಿ | ಬಂದವರನನ್ನುಸರಿಸೆ ಬಾಗಿಲಾ ಮುಂದೆ ಕುಳಿತು | ನೊಂದೆ | ಬಂದೆನೊ ಕೊನೆಯಲಿ 3 ಆರಾದರೂ ಬಂದು ಕಾಸು ಕೊಡದಿದ್ದರೆ | ದೂರುವೆನೊ ನೂರಾರು ಕೇರಿ ಕೇರಿಯ ತಿರಗಿ | ಸಾರೆ ಅವರಲ್ಲಿದ್ದ ಅವಗುಣಂಗಳ ಎತ್ತೆ | ಬೀರುವೆನು ಬೀದಿಯೊಳಗೆ | ವಾರಣದಿಂದಲಿ ಕರೆದು ಆವನಾದರು ಬಂದು | ಶಾರೆ ಭತ್ತವ ಕೊಡಲು ಕೊಂಡಾಡುವೆ ಕುಲ ಉ | ಪೋರ ಬುದ್ಧಿಗಳ ಬಿಡದೆ4 ಪರವಣಿ ಪುಣ್ಯಕಾಲಾ ದಿವಸ ಬಂದರೆ ತಿಳಿದು | ಪರಮಾರ್ಥವೆಂದರಿದು ಉತ್ತಮರ ಬಾ ಎಂದು | ಕರೆದು ತುತ್ತನ್ನ ಮೇಲೊಂದು ದಕ್ಷಿಣೆ ಕಾಸು | ಹರುಷದಿಂದಲಿ ಕೊಡದಲೆ ಪರರ ಹಳಿಯುತ್ತ ಏನೇನು | ಇಟ್ಟುಕೊಂಡು ಮನಿಗೆ ಬಂದು | ಪರರರಿಯದಂತೆ ಮಂಚದ ಕೆಳಗೆ ಹೂಳಿ ಈ | ಪರಿಯಿಂದ ದಿನ ಹಾಕಿದೆ5 ತೊತ್ತು ಓರ್ವೆಯಲ್ಲಿ ಈ ಹೊತ್ತು ಪೋಗಾಡಿಸಿದೆ | ಉತ್ತಮರ ಬಳಿಯಲಿ ಕುಳಿತು ಸತ್ಕಥೆಗೆ ಕಿವಿ ಇತ್ತು ಕೇಳದಲೆ ಕೆಲಸಾರೆ ಬೇಸರಿಕೆಯಲಿ | ಅತ್ತಲಿತ್ತಲು ವ್ಯರ್ಥ ಸುತ್ತಿ ಸುಮ್ಮನೆ ಸುದ್ದಿ ಬರಿಗಂಟುಸಟೆ | ಮಾತು ಎತ್ತುವನೊ ಅನ್ನಿಗರನ ನ | ಎಣಿಕೆ ಮಾಡದಲೆ | ಉನ್ಮತ್ತದಲಿ ಕೆಟ್ಟೆನಯ್ಯಾ6 ಪರಿಯಂತ | ವೇದೆನೆ ಬಟ್ಟೆನೊ ದುಷ್ಟ ಹಾದಿಯಲಿ ಸಿಗಬಿದ್ದು | ಈ ದುರಾಚಾರಗಳ ಗಣನೆ ಮಾಡದೆ ಇನ್ನು | ಕಾದುಕೊ ಕಮಲನಾಭಾ | ಹೋದಪರಾಧಗಳ ನೋಡದಲೆ ದಯದಿಂದ | ಆದರಿಸಿ ನಿನ್ನ ದಾಸರ ಸಂಗತಿಯನಿತ್ತು | ಪಾದವನು ಕಾಣಿಸಯ್ಯಾ7
--------------
ವಿಜಯದಾಸ
ವೇಣು ವಿನೋದ ವಿಠಲ | ನೀನೆ ಪೊರೆ ಇವನಾ ಪ ದೈನ್ಯದಲಿ ತವ ದಾಸ್ಯ | ಕಾಂಕ್ಷೆಯಲಿ ಹಯಮೊಗನೆಗಾನ ಮಾಡಲು ನಿನ್ನ | ಪಾಸು ಕೂಲಿಸಿದೇ ಅ.ಪ. ಖಂಡೀ ಭವದ್ ಬಹುಲ | ಡಿಂಡೀರ ಜೃಂಬಣಸುಚಂಡೀ ಕೃತೋ ಎಂಬ | ಶೌಂಡಪದಯತಿಯಿಂಗೊಂಡು ಸುಸ್ವಪ್ನದಲಿ | ದಂಡವತ್ತರಗಿ ಮುದ-ಗೊಂಡು ತವ ಪಾಪಗಳ | ಖಂಡಿಸೀದವನಾ 1 ತೀರ್ಥಾಭಿಷೇಕದಿ ಪು | ನೀತನಾದಗೆ ಭಾವಿವಾತಾತ್ಮ ಮಹಿಮೆಗಳ | ದ್ಯೋತಕ ಸುಗ್ರಂಥಾಪ್ರೀತಿಯಿಂ ಪಡೆದಿಹನೊ | ಮಾತುಳಾಂತಕ ಹರಿಯೆಆತು ಕೈಪಿಡಿ ಇವನ | ಧಾತಾಂಡದೊಡೆಯಾ 2 ಲೌಕೀಕವನ್ನೆಲ್ಲ ವೈಧೀಕವೆಂದೆನಿಸಿ ಈತೋಕನಿಗೆ ಸುಜ್ಞಾನ | ಭಕುತಿ ಸಂಪದನಾನೀ ಕರುಣದಿಂ ಕೊಟ್ಟು | ಪ್ರಾಕ್ಕುಕರ್ಮಾವಳಿಯನೀ ಕಳೆಯೊ ಕರುಣಾಳು | ನಾಕನದಿ ಪಿತನೆ 3 ಬೋಧ ಬೋಧ ಮೂರುತಿಯೇ 4 ಅದ್ವೈತ ಭವ | ನೋವ ಪರಿಹರಿಸಯ್ಯಗೋವಳ ಪ್ರೀಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವೇಣುಗೋಪಾಲನಿಲಯೇ ವೀಣಾವಿನೋದವಲಯೇ ಪ ವಾಣಿ ಗೌರಿನುತೆ ತಾಯೆ | ಪ್ರಾಣತ್ರಾಣದಾತೆ ಸದಯೆ ಅ.ಪ ಬೃಂದಾವನ ವನವಾಸಿನಿ ಮಂದಾಕಿನಿ ಪ್ರಿತಮೋಹಿನಿ ಮಂದಾತ್ಮಜ ಸಹಚಾರಿಣಿ ಬೃಂದಾರಕ ಸುಖವರ್ಧಿನಿ 1 ಇಂದೀವರ ಸುಮಭೂಷಿಣಿ ವಂದೇ ಮಾಂಗಿರೀಶ ತೋಷಿಣಿ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವೇಣುನಾದ ಪ್ರಿಯ ಗೋಪಾಲಕೃಷ್ಣ ಪ. ವೇಣುನಾದ ವಿನೋದ ಮುಕುಂದಗಾನವಿನೋದ ಶೃಂಗಾರ ಗೋಪಾಲ ಅ.ಪ. ವಂದಿತಚರಣ ವಸುಧೆಯಾಭರಣಇಂದಿರಾರಮಣ ಇನಕೋಟಿತೇಜಮಂದರಧರ ಗೋವಿಂದ ಮುಕುಂದಸಿಂಧುಶಯನ ಹರಿ ಕಂದರ್ಪಜನಕ 1 ನವನೀತಚೋರ ನಂದಕುಮಾರಭುವನೈಕವೀರ ಬುದ್ಧಿವಿಸ್ತಾರರವಿಕೋಟಿತೇಜ ರಘುವಂಶರಾಜದಿವಿಜವಂದಿತ ದನುಜಾರಿ ಗೋಪಾಲ2 ಪರಮದಯಾಳು ಪಾವನಮೂರ್ತಿವರ ಕೀರ್ತಿಹಾರ ಶೃಂಗಾರಲೋಲಉರಗೇಂದ್ರಶಯನ ವರ ಹಯವದನಶರಣರಕ್ಷಕ ಪಾಹಿ ಕೋದಂಡರಾಮ 3
--------------
ವಾದಿರಾಜ
ವೇದದ ಮೂಲ ಆದಿ ಅನುಕೂಲ ಸಾಧು ಜನರ ಸದ್ಛನ ಲೋಲ ಧ್ರುವ ಕೀಲ ಬುಧರಕನುಕೂಲ ಇದೇ ನಿಜ ನೋಡಿರೊ ಸಾಧಿಸಿ ಘನಸುಖಗೂಡಿರೊ 1 ಜ್ಞಾನದಾಸರ ಧ್ಯಾನದಂತರ ಖೂನದಾ ವಿವರ ಅನುಭವಾಧಾರ ಕಣ್ಣಾರ ಎನ್ನ ಮನೋಹರ 2 ಗುಹ್ಯ ಗೌಪ್ಯಸ್ಥ ಮಹಾಪ್ರಶಸ್ತ ಈಹ್ಯ ಸೌಭ್ಯಸ್ಥ ಮಹಿಮರ ತಸ್ತ ಸುವಸ್ತ ಶ್ರೀಗುರು ಸಮರ್ಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವೇದವ ತಂದು ವಿಧಿಗೀವಂದೆ ನೀಸಾಧು ಜನರ ಸಲಹಲಿ ಬಂದೆ ಪ. ಮೋದದಿಂದೆಮ್ಮ ಮನದಿ ನಿಂದೆ ನೀಬಾಧಿಪ ದುರಿತತತಿಯ ಕೊಂದೆ ಅ.ಪ. ಸಕಲ ಸುರರಿಗೆ ಶಿರೋರನ್ನ ನೀಅಕಳಂಕಾಶ್ರಿತಜನಮಾನ್ಯನಿಖಿಲ ನಿಗಮನಿಕರದಿ ವಣ್ರ್ಯ ನಿನ್ನಕರುಣಾಕಟಾಕ್ಷದಿ ನೋಡೆನ್ನ 1 ಕೈವಲ್ಯಪದವಿಯ ಕೊಡಬಲ್ಲ ನಿನ್ನಸೇವಿಪ ಸುಜನರಿಗೆಣೆಯಿಲ್ಲಭಾವಜಕೋಟಿಯಿಂದಚೆಲ್ವ ನೀಶ್ರೀವನಿತೆಗೆ ಸಿಲುಕುವನಲ್ಲ 2 ಹಯವದನ ಹೃದಯಸದನಜಯ ಶಶಿವರ್ಣ ಜಗತಿಪೂರ್ಣಭಯಹರ ಭಾಸುರ ಸಿರಿಚರಣ ನಿನ್ನದಯಪಾತ್ರಾನುದ್ಧರಿಸೆನ್ನ 3
--------------
ವಾದಿರಾಜ
ವೇದವನಿದನವಧರಿಸು ಮಂತ್ರಭೇದವಾದರು ಮತ ಬೇರಲ್ಲವೆನಿಸು ಪಆದಿಯೊಳ್ ಋಗ್ವೇದದಲ್ಲಿ ಅಗ್ನಿಯಾದನು ದೇವತೆಯಾ ಯಜ್ಞದಲ್ಲಿಈದೇವ ಋತ್ವಿಕ್ಕಿನಲ್ಲಿ ಹೊಂದಲಾದರಿಸುತಲಾಗ ಹೊಗಳ್ವರೆಂಬಲ್ಲಿ 1ಹೋತೃತ್ವದಲ್ಲಿಯು ನಿಂದು ಸ್ವರ್ಣಧಾತುವು ತಾನಾದ ದಕ್ಷಿಣೆಗೆಂದುಈ ತೆರದಲಿ ದೇವ ಬಂದು ವಿಪ್ರವ್ರಾತಸ್ತೋತ್ರಕೆ ುೀತ ನೋಡಲಾದನೆಂದು 2ಸುರರಿಗೀತನು ಮುಖ್ಯ ಸಖನು ದ್ವಿಜವರರ್ಕೊಟ್ಟಾಹುತಿಯವರ್ಗಿತ್ತು ವ್ಟೃಯನುಬರಿಸುವನೆಂದೀತನನ್ನು ನೀನೆಇರಿಸಿದೆ ತಿರುಪತಿಯಾಳ್ವ ವೆಂಕಟನು 3ಓಂ ಮುಚುಕುಂದಪ್ರಸಾದಕಾಯ ನಮಃ
--------------
ತಿಮ್ಮಪ್ಪದಾಸರು
ವೇದವ್ಯಾಸ ದೇವರ ಸ್ತೋತ್ರ ಏನೋ ಈ ವೇಷ ವೇದವ್ಯಾಸ ಏನೋ ಈ ವೇಷ ಪ ಭಾನುಕೋಟಿ ಪ್ರಕಾಶ ಬದರೀ ನಿವಾಸ ಅ.ಪ. ದ್ರೌಪದಿ ಕರೆಯಲಪಾರ ವಸ್ತ್ರವನಿತ್ತೆಕೌಪೀನ ಧರಿಸಿದ ಕೌತುಕವೇನಯ್ಯ 1 ಮುತ್ತು ಮಾಣಿಕ್ಯ ನವರತ್ನ ಮಕುಟವಿರೆನೆತ್ತಿಲಿ ಕೆಂಜೆಡೆ ಪೊತ್ತುಕೊಂಡಿಪ್ಪುದು 2 ವರ ವೈಕುಂಠವ ಬಿಟ್ಟು ಮೋಹನ ವಿಠ್ಠಲಧರೆಯಾಳು ಬೋರೆಯ ಮರದಡಿಯಲಿರುವುದು 3
--------------
ಮೋಹನದಾಸರು
ವೇದಾಂತಸಾರಂ ಸುದೀರಂ ಪ ಮಾಧವ ರೂಪನೆ ಮಂಗಳ ಜಯ ಹರಿ ಅ.ಪ ಪಾವನ ಪಾದಂ ದೇವಾ ಸಭಾವಂ ಗೋವರ್ಧನಗಿರಿಧರ ಯತಿ [ಜನವಾ]ರಿಜಭೋಜಂ1 ಚಂದ್ರಪುರೀಶಂ ಚಕ್ರಧರೇಶಂ ಇಂದ್ರಸುರಾರ್ಚಿತ ಪದವಿನೋದಂ ನಾದಂ2 ವರದರಾಜಾ ಅಭಯ ವೈಷ್ಣವರೂಪಂ ಪರಮಗುರುವು ತುಲಶೀಮಣಿದೀಪ ಭೂಪಂ3
--------------
ಚನ್ನಪಟ್ಟಣದ ಅಹೋಬಲದಾಸರು
ವೇದಾಬಲು ಸ್ವಾದ ಪ ಸಾದರದಲಿ ಬಿಡದೋದಿ ಪಠಿಸುವಗೆ ಅ.ಪ ಆದಿಯನಾದಿಗಳ ಹಾದಿಯ ತೋರಿ ಸ- ಗುಹ್ಯ ಪ್ರತಿತಾರ್ಥಗಳಿಹ 1 ಘನಸಾಧನೆಗಳಿಗನುಕೂಲಿಸುವುದು 2 ಸ್ವರಿತೋದಾತ್ತನುದಾತ್ತ ಪ್ರಚಯಗಳಿಂ ಗುರುರಾಮವಿಠಲನ ಚರಣನೋಡುವದಕೆ ವೇದಾ 3
--------------
ಗುರುರಾಮವಿಠಲ
ವೈಭವ ನೋಡಿರೈ ಪ ಗುರುವರೇಣ್ಯ ಸತ್ಯ ಪ್ರಮೋದ ತೀರ್ಥರು ಸಂಭ್ರಮದಲಿ ಮೆರೆದು ಬರುವ ವೈಭವ ನೋಡಿರೈ 1 ಪರಮಹಂಸ ಪರಿವ್ರಾಜಕಾದಿ ಸ ದ್ಬಿರುದುಗಳಿಂದಲಿ ಕರೆಸಿಕೊಳ್ಳುವ 2 ಅಂದಣದಲಿ ನಲುವಿಂದ ಪರಾಶರ ಕಂದನ ನಿರಿಶ್ಯಾನಂದ ಬಡುವ 3 ಸುಂದರ ರಾಜಮಹೇಂದ್ರ ಪುರದಿ ಜನ ಸಂದಹಿಯೋಳ್ಬುಧ ವೃಂದ ಬರುವ 4 ಮೋದತೀರ್ಥ ಸುಮತೋದಧಿ ಚಂದ್ರ ಪ್ರ ಮೋದ ತೀರ್ಥರಿವರೆಂದು ನುಡಿವ 5 ಮೇದಿನಿ ಸುರಕೃತ ವೇದ ಘೋಷಣ ಸು- ನಾದ ಭರಿತ ಬಹುವಾದ್ಯ ನಿನದ 6 ಪರವಶದಲಿ ತನುಮರೆದು ಕುಣಿವ7 ಕಂಡೆನು ಪರಮತ ಖಂಡನದಿ ಸುಧೆಯ ಮಂಡನೋತ್ಸವದಿ ಕಂಡುಬರುವ 8 ಚಲುವ ಗುರು ಚರಣ ಜಲಜಕೆ ನಮಿಸುತ ಲಲನೆಯರಾರುತಿ ಬೆಳಗುತಿರುವ 9 ನೇಮದಿ ಎಡಬಲ ಭೂಮಿಸುರರು ಕೈ ಚಾಮರ ಬೀಸುತ ಸಾಮ ಪಠಣ10 ಭಯವ ಪುಟ್ಟಿಸಿ ಹೃದಯದಿ ಮಾಯ್ಗಳ ಜಯ ಘೋಷದಿ ನಿರ್ಭಯದಿ ಬರುವ 11 ಕಾಣೆನು ಸತ್ಯಜ್ಞಾನ ತೀರ್ಥರ ಸ- ಮಾನ ಗುರುಗಳೆಂದಾನಮಿಸುವ 12 ಪಾವನತರ ಗೋದಾವರಿ ಸ್ನಾನದಿ ಶ್ರೀವರನಂಘ್ರಿಯ ಶೇವಿಸುವರ 13 ವಿದ್ವಜ್ಜನನುತ ಮಧ್ವಮುನಿಯ ಮತ ವೃದ್ಧಿಕಾರಿಣಿ ಪ್ರಸಿದ್ಧ ಸಭೆಯ 14 ಸಿರಿ ಕಾರ್ಪರ ನರಸಿಂಹನೆ ಪರನೆಂದರುಹುತ ಮೆರೆವ ಸಭೆಯ 15
--------------
ಕಾರ್ಪರ ನರಹರಿದಾಸರು
ವೈಶಾಖದುತ್ಸವ ಗೀತೆ ವರ್ಣಿಸಲಳವೆ ವೈಶಾಖದುತ್ಸವವಾ ಪ. ವೃಷಭಸೇರಿದ ವೈಶಾಖಮಾಸದ ಶುಕ್ಲ ಪಕ್ಷದ ಷಷ್ಠಿಯಲಿ ಕಂಕಣವ ಕಟ್ಟಿ ಪಟ್ಟದರಸಿ ಯರ್ಸಹಿತ ದಿಟ್ಟತನದಲಿ ಪೊರಟು ಶ್ರೇಷ್ಠವಾದ ಮಧ್ಯಮಂಟಪಕೆ ನಡೆತಂದ 1 ಮುದ್ದುಮೊಖ ಮುಗುಳ್ನಗೆಯು ವಜ್ರದ ಕಿರೀಟವು ತಿದ್ದಿದ ಕಸ್ತೂರಿತಿಲಕ ಹೊಳೆವ ವಜ್ರದ ಪದಕಗಳು ನಾಲ್ಕು ಮೂರನೆ ಧರಿಸಿ ಪ್ರಜ್ವಲಿಸುತ ಬಂದ ಅರ್ಜುನ ಸಾರಥಿಯು 2 ಶಿರದಿ ಪುಷ್ಪವ ಧರಿಸಿ ಪರಮಪುರುಷನು ತಾನು ಕೊರಳಲ್ಲಿ ವೈಜಯಂತಿಮಾಲೆಯನು ಧರಿಸಿ ಕರದಲ್ಲಿ ಪರಿಮಳದ ಗಂಧವನು ಧರಿಸಿ ಪರಮ ಪುರುಷನು ಬರುವ ಪರಿಯನೇನೆಂಬೆ 3 ದಂತದ ಉಯ್ಯಾಲೆಮಂಟಪದಲಿ ನಿಂದು ಕಂತುಪಿತ ಕರ್ಪೂರದಚೂರ್ಣದಲಿ ಮಿಂದು ಅಂತರಂಗದಿ ಭಕ್ತರಿತ್ತ ನೈವೇದ್ಯ ಉಂಡ ಲಕ್ಷ್ಮೀ ಕಾಂತನು ನಡೆತರುವ ಪರಿಯನೇನೆಂಬೆ 4 ಮುಂದೆ ದ್ರಾವಿಡವೇದ ಹಿಂದೆ ವೇದಘೋಷಗಳು ಆ ನಂದದಿಂ ಭಕ್ತರೆಲ್ಲ ಮುಂದೆ ಬರುತಿರಲು ಛಂದದಿಂ ರಂಭೆಯರ ಕೋಲಾಟಗಳ ನೋಡಿ ಇಂದಿರೆಯಿದಿರು ಮಂಟಪಕೆ ನಡೆತಂದ 5 ಸೃಷ್ಟಿಪತಿ ರಂಗನಿಗೆ ದೃಷ್ಟಿ ತಾಕುವುದೆಂದು ಹಿಟ್ಟಿನಾರತಿಯಿಂದ ದೃಷ್ಟಿಯನು ತೆಗೆದು ಶ್ರೇಷ್ಠವಾದ ಕರ್ಪೂರದ ಆರತಿಯನೆತ್ತಲು ಥಟ್ಟನೆ ತಿರುಗಿದನು ಕೃಷ್ಣಮೂರುತಿ ತಾನು 6 ಸಪ್ತದಿನದಲಿ ರಂಗ ರತ್ನಮೌಳಿಯ ಧರಿಸಿ ಮುತ್ತಿನಾ ಹಾರವನು ಹಾಕಿ ರತ್ನದ ಉಡದಾರ ಉಡಗೆಜ್ಜೆಯನು ಧರಿಸಿ ಪತ್ನಿ ಸಹಿತಲೆ ಬಂದು ಭತ್ತವನಳಿಸುವ ಸೊಬಗ 7 ಮುತ್ತಿನ ಕಿರೀಟವಿಟ್ಟು ಮುದದಿ ನಿಲುವಂಗಿ ತೊಟ್ಟು ರತ್ನದಾ ಹಸ್ತದಲಿ ಅಭಯವನು ಕೊಟ್ಟು ಕತ್ತಿ ಈಟಿ ಗುರಾಣಿ ಬತ್ತಳಿಕೆ ಅಳವಟ್ಟು ಹಸ್ತದಲಿ ಕಡಿವಾಣವಿಟ್ಟು ಬರುವ ಸೊಬಗ 8 ಹತ್ತಿ ಹಯವನು ರಂಗ ಒಂಭತ್ತು ದಿನದಲಿ ಮತ್ತೆ ಪುಷ್ಕರಣಿಯ ತೀರ್ಥದಲ್ಲಿ ಮಿಂದು ಅರ್ತಿಯಿಂ ಬಂದ ನೀರಾಳಿಮಂಟಪಕೆ 9 ಮಿಂದು ಮಡಿಯನೆ ವುಟ್ಟು ಛಂದದಿಂದಲೆ ರಂಗ ಬಂದು ಕಂಕಣವನ್ನು ಬಿಚ್ಚಿ ಆ ಘೃತ ಚೂತಫಲಗಳ ಸವಿದು ನಿಂದ ವೆಂಕಟರಂಗ [ಕರುಣಾಂತರಂಗ] 10
--------------
ಯದುಗಿರಿಯಮ್ಮ
ವ್ಯಗ್ರಬುದ್ಧಿಯು ನಿನಗೆ ಶ್ರೀಹರಿಯೆ ಸುಗ್ರಾಸನವು ನನಗೆ ಅಗ್ರದೈವರು ನೀನೇ ಗತಿಯೊ ಉಗ್ರತಪದಲಿ ಭಜಿಸುವಾತ್ಮಗೆ ಉಗ್ರರೂಪವ ತೋರಿ ವಿಧವಿಧಾ- ನುಗ್ರಹಿಪೆ ಅಮೃತಾನ್ನ ಭೋಜನ ಪ ಜನಿಸಲಮೃತ WಟÀವು ಸಿಂಧುವಿನೊಳು ವನಜನಾಭನೆ ವಂಚಿಸಿ ದನುಜ ಕಣಕದು ಇಲ್ಲದಾಗಿ ಅನುಮಿಷರಿಗತ್ಯಂತಮಿಕ್ಕೆ ಘನಹರುಷ ತೋರಿದೆಯು ಸುರರಿಗೆ ನಿನಗೆ ಮೆಲ್ಲಲು ಇರಿಸಲಿಲ್ಲಾ 1 ಧೀರ ದೂರ್ವಾಸ ಮುನಿ ಶಿಷ್ಯರ್ವೆರಸಿ ಹೋರಿದಾಹಾರಕ್ಕಾಗಿ ನೀರಜಾಕ್ಷಿಯು ಘೋರ ಬಂತೆಂದಾ ರಾತ್ರಿಯಲಿ ನೆನೆಯೆ ನಿನ್ನನು ಆ ರಭಸದೊಳು ಬಹುನಿಮಿಷÀದಿ ಸೂರಿ ಮಾಡ್ದೆಯೋ ಇಷ್ಟು ಭೋಜನಾ 2 ಸಖ ಸುದಾಮನು ಕಾಣಲು ಶ್ರೀಹರಿಯೆ ಭಕುತಿ ನೋಡಿ ಮೆಚ್ಚಿದಿ ಮುಕುತಿದಾಯಕ ಪರಮ ಪುರುಷನೆ ಭಕುತಿ ಭೋಜನವಿತ್ತೆನಗೆ ಸದಾ ಪ್ರಕಟ ನರಸಿಂಹವಿಠಲನೆ ಬಲು ನಿಕಟಮನ ಕೊಡು ನಿನ್ನ ಭಜಿಸುವಾ 3
--------------
ನರಸಿಂಹವಿಠಲರು
ವ್ಯರ್ಥ ದೂರುವರೀಶನಾ ವ್ಯರ್ಥದೂರುವರೈಯ್ಯಾ ಮರ್ತು ತಮ್ಮವಗುಣ ಮರ್ತ್ಯಲಾಭಾ ಲಾಭಾ ಕರ್ತ ಮಾಡುವೆನೆಂದು ಪ ಕಣ್ಣು ಕಿವಿ ನಾಲಿಗಿನ್ನು ನಾಶಿಕಕೊಟ್ಟು ಸನ್ನುತ ಹರಿಕಥೆ ಕೇಳು ಯನ್ನಸ್ತುತಿ ಸುನಿರ್ಮಾಲ್ಲ್ಯುನ್ನತ ತುಳಸಿ ವಾಸನಾಘ್ರಾಣಿಸೆಂದು ಮುನ್ನೆಂದನಲ್ಲದೇ ಆನ್ಯದೈವ ನೋಡೆಂದನೇ ಪಿಶುನರ ಅನ್ಯಾಯವ ಕೇಳೆಂದನೇ ಉದರಕಾಗಿ ಮಾನವ ಹೊಗಳೆಂದನೇ ಭೋಗದ ತನ್ನಗೋಸುಗ ದ್ರವ್ಯ ಆಘ್ರಾಣಿಸೆಂದನೆ 1 ಮಂಡಿತ ಸಿರಸದೋರ್ದಂಡ ಕರಚರಣ ಚಂಡ ಮನಗಳಿಂದಾ ಖಂಡ ನಮಿಸಿ ಸೇವೆ ಪುಂಡಲೀಕದ ಪರಿಗಂಡು ನೃತ್ಯಾದಿಯ ಬೋಧ ಮನನ ಪಂಡುಂಡ ಮಾಡೆಂದ ಮಂಡಿ ಬಿಗಿದರೆಂದನೇ ಜನರಿಗು ದ್ವಂದದಿ ಹೊಡಿಯಂದನೇ ಧನಿಕರ ಕಂಡು ಭ್ರಾಂತಿಗೆ ಬಿದ್ದು ಚಿಂತಿಸುಯಂದನೆ 2 ನಿತ್ಯ ವರಿತು ಸತ್ಯಜ್ಞಾನೌಷದ ಉತ್ತಮ ರಸಾಯನ ಅತ್ತಿತ್ತಲಾಗದೇ ಕೊಂಡು ಇತ್ತ ಭವರೋಗ ವಿಪತ್ತದ ಕಳೆಯೆಂದ ಮತ್ತ ಮಹಿಪತಿ ಸುತ ಹೃತ್ತಾಪಹಾರಿ ಕು ಚಿತ್ತ ನೀನಾಗೆಂದನೇ ಸತ್ಸಂಗ ನಿತ್ಯ ಮಾಡಿರೆಂದನೇ ಬರಿದೆನೀ ಮೃತ್ಯು ದೇವತೆ ಬಾಯ ತುತ್ತಾಗುಯಂದನೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವ್ಯರ್ಥ ಹೋರಾಟವಲ್ಲದೆ ಇದು ನಿಜವಲ್ಲಾ ಕರ್ತೃ ಶ್ರೀಹರಿ ಮಾಡಿದರ್ಥವೆ ಸರಿ ಅಲ್ಲದೆ ಪ ಪುರಾಕೃತ ಸಂಚಿತಾರ್ಥ ಪುಣ್ಯ ಪಾಪಗಳಿಂದ ಪರಿ ಅನುಭವ ಬಡುತಾ ಇನ್ನೂ ಇರುವೆಯಲ್ಲದೆ ಘಣಿಯಲಿ ವಿರಂಚಿ ಬರೆದ ಭಂಗ ಬಡುತಲಿಷ್ಟು 1 ಎಂದೆಂದೂ ನಿನ್ನ ಹಿಂದೆ ಒಂದೂ ಬರುವುದಿಲ್ಲ ಮುಂದುಗಾಣದೆ ಇನ್ನು ಮೋಹಕೆ ಸಿಲುಕಿ ನಂದೆಂದು ಪರಿಯಿಂದ ಘಳಿಸಿದ ದ್ರವ್ಯದ ಬಿಂದಿಗೆ ದಾರೋ ನೀದಾರೋ ಪಾಮರ ಮೂಢಾ 2 ನನ್ನ ಹೆಂಡತಿ ಮಕ್ಕಳು ನನ್ನ ಮನೆ ಬಾಗಿಲು ನನ್ನ----ಯು ವೃತ್ತಿ ನನ್ನದೆಂದೂ ನಿತ್ಯ ಒಂದಾಡುವೆ ನೀದಾರೋ ಮೂಢಾ 3 ತಂದೆ ತಾಯಿಯ ಗರ್ಭದಿಂದ ಪುಟ್ಟಿರುವಂದೇ ತಂದೆಲ್ಲೊ ತಾಯೆಲ್ಲೊ ತಾನೆಲ್ಲೊ ಮರುಳೆ ಹಿಂದೆ ಆದವರ ಚರ್ಯವ ವಿವರಿಸಿ ನೋಡಿನೋಡಿ ಕುಂದು ಇಲ್ಲದೆ ಮುಕ್ಕುಂದನ ಸ್ಮರಿಸು ಗಾಢಾ 4 ಮಾಯಾ ಪ್ರಪಂಚದೋಳ್ ಮಗ್ನನಾಗಿ ಇನ್ನು ಕಾಯಾ ಅಸ್ಥಿರವೆಂದು ಕಾಣೋ----- ಶ್ರೀಯರಸ 'ಹೆನ್ನ ವಿಠ್ಠಲ’ರಾಯನ ಕರ್ಮ ಧ್ಯಾನವು ಬಿಟ್ಟು 5
--------------
ಹೆನ್ನೆರಂಗದಾಸರು