ಒಟ್ಟು 7928 ಕಡೆಗಳಲ್ಲಿ , 135 ದಾಸರು , 4955 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀವಿನಾಯಕ ಪಿನಾಕಿ ಸುತ ಜಗ ದೇಕನಾಥನ ನಾಭಿಮಂದಿರ ಲೇಖಕಾಗ್ರಣಿ ವಿಷ್ಣುಕೀರ್ತನ ಮಾನಿ ಸಾಧಕನೆ ಪರಾಕು ನುಡಿಯುವೆ ನೂಕಿ ವಿಘ್ನವ ಸಾಕು ನಮ್ಮನು ನೋಕನೀಯನ ಭಜಿಸಲನುವಾಗೆಂದು ಬೇಡುವೆನು 1 ಕಾಣೆ ನಿನಗೆಣೆ ಮೂರುಲೋಕದಿ ಮಾನ್ಯನಾಗಿಹೆ ಸರ್ವರಿಂದಲು ಶ್ರೀನಿಧಿಯ ದಯದಿಂದ ಪ್ರಾಣಾವೇಶಸಂಯುತನೆ ಧ್ಯಾನ ಮಾಡುವೆ ವಿಶ್ವತೈಜಸ ನನ್ನು ಮಹದಾಕಾಶಮಾನಿಯೆ ಆನತಾಮರಧೇನು ಸಿದ್ಧಿವಿನಾಯಕನೆ ನಮಿಪೆ 2 ದೈತ್ಯಗಣಗಳಿಗಿತ್ತು ವರವು ನ್ಮತ್ತರನು ಮಾಡುತಲಿ ಶ್ರೀಪುರು ಷೋತ್ತಮನ ಸೇವಿಸುವೆ ವಿದ್ಯಾಧೀಶ ಸುಖಭೋಕ್ತ ಮಾತರಿಶ್ವನ ದಾಸರಿಗೆ ಹರಿ ಭಕ್ತಿ ವಿಷಯ ವಿರಕ್ತಿ ನೀಡುವೆ ಶಕ್ತಿ ನೀ ನಾಲ್ಕೆರಡು ಕಲ್ಪದಿ ಸಾಧಿಸಿರೆ ಪದವಿ 3 ವಕ್ರ ತುಂಡನೆ ನೀಗಿಸೆನ್ನಯ ವಕ್ರಬುದ್ಧಿ ವಿವೇಕನೀಡುತ ದಕ್ಕಿಸೈ ಶಾಸ್ತ್ರಾರ್ಥ ಚಯನವ ಚಾರುವಟು ಗಣಪ ರಕ್ತಗಂಧಪ್ರೀಯ ಸೋಮನ ಸೊಕ್ಕು ಮುರಿದೆಯೊ ಭೂಪ ಭಕ್ತಿಯ ಉಕ್ಕಿ ಸೈ ಹರಿಯಲ್ಲಿ ತವಕದಿ ಮಂಗಳಪ್ರದನೆ 4 ರಂಗ ಮಂದಿರ ದಕ್ಷಿಣಸ್ಥವಿ ಹಂಗಗಮನನ ರಾಣಿ ರುಕ್ಮಿಣಿ ಯಂಗದಲಿ ಪುಟ್ಟುತಲಿ ದಿತಿಜಾಂತಕನೆನಿಸಿಕೊಂಡು ಗಂಗೆಪಿತನನು ಸೇವಿಸಿದೆ ಮಾ ತಂಗಮುಖ ಮಹಕಾಯ ನಾರೀ ಸಂಗವರ್ಜಿತ ಬೀರು ಕರುಣಾಪಾಂಗ ದೃಷ್ಟಿಯನು 5 ಮೊದಲು ಪೊಜೆಯ ನಿನಗೆ ವಿಹಿತವು ವಿಧಿ ಭವಾದ್ಯರ ಪೊರೆವ ವಿಶ್ವನು ಮುದದಿ ನೀಡಿಹ ವರವ ಸಿದ್ಧಿಯ ಕೊಡುವೆ ಭಕ್ತರಿಗೆ ಮದದಿ ಬಿಡುವರಿಗೆಲ್ಲ ಖೇದವೆ ಒದಗಿ ಬರ್ಪುದು ಬಾಗಿ ಭಜಿಸುವೆ ಸದಯನಾಗುತ ವಿಷ್ಣು ಭಕ್ತರ ಸಂಗ ನೀಡೆನಗೆ 6 ವ್ಯಾಪ್ತ ದರ್ಶಿಯೆ ವಂದಿಸುವೆ ಪರ ಮಾಪ್ತ ಹರಿ ಭಕ್ತರಿಗೆ ನೀನಿಹೆ ಸೂಕ್ತ ಸಾಧನೆ ಗೈಸು ಖೇಶನೆ ಸೋಮಪಾನಾರ್ಹ ಆರ್ತನಿಹೆ ಬಹುಮೂಢ ಖರೆವೇ ದೋಕ್ತಮರ್ಮವ ಭಾಸಗೈಸಿ ಕೃ ತಾರ್ಥನೆನಿಸೈ ಮೃದ್ಭವ ವಿರೂಪಾಕ್ಷ ತತ್ವೇಶ 7 ಬರೆದೆ ಭಾರತ ವೇದವ್ಯಾಸರ ಕರುಣದಿಂದಲಿ ಭಕ್ತಿಯೋಗಿಯೆ ಶರಣು ಶೇಷಶತಸ್ಥರಿಗೆ ಗುರುವಿರ್ಪೆ ಹೇರಂಭ ದುರಳ ಗಣಗಳ ಕಾಟತಪ್ಪಿಸಿ ಹರಿಗೆ ಸಮ್ಮತವಿಲ್ಲ ದೆಡೆಯಲಿ ಮರುಳುಗೊಲ್ಲದ ಮನವು ನನಗಿರಲೆಂದು ಹರಸೆಂಬೆ 8 ಜಯಜಯತು ವಿಶ್ವಂಭರ ಪ್ರೀಯ ಜಯಜಯವು ಮೈನಾಕಿತನಯಗೆ ಜಯಜಯವು ಶ್ರೀಕೃಷ್ಣವಿಠ್ಠಲನ ದಾಸವರ್ಯನಿಗೆ ಜಯಜಯವು ಸದ್ವಿದ್ಯೆಕೋಶಗೆ ಮೀನಾಂಕ ಭ್ರಾತೃವೆ ಜಯಜಯವು ವಿಘ್ನೇಶ ಮಂಗಳಮೂರ್ತಿ ಗಣಪನಿಗೆ 9
--------------
ಕೃಷ್ಣವಿಠಲದಾಸರು
ಶ್ರೀಶ ಕರುಣಾಭೂಷ ಶ್ರೀನಿವಾಸ ರಕ್ಷಿಸು ವೀಶಗಮನ ಪ. ತಂದೆ ತಾಯಿ ಸಹಜ ಮುಖ್ಯ ಬಂಧ ಬಳಗವೆಲ್ಲವು ನೀ- ಇಂದು ನಂಬಿದೆ ಇಂದಿರೇಶ ತನ್ನ ಮನಕೆ ಬಂದ ತೆರವ ಮಾಳ್ಪ ಭವ- ಸಿಂಧು ಪೊತ್ತ ನಿನ್ನ ದಾಸನೆಂದು ತಿಳಿದಾನಂದಗೊಳಿಸು 1 ನಿಗಮವೇದ್ಯ ನಿನ್ನೊಳಿರುವ ಅಘಟಿತಘಟನ ಶಕ್ತಿ ಬಗೆಯ ತೋರಿ ಪೊರೆವಿ ಎನ್ನ ಮಗುವಿನಂದದಿ ಅಗಣಿತಾನಂದ ಚಿದಾತ್ಮ ಜಗದಿ ನಿನ್ನ ಪೋಲ್ವ ಕರುಣಾ ಳುಗಳನೆಲ್ಯೂ ಕಾಣೆ ಶಕ್ರಾದಿಗಳು ಸೇರುವರು ನಿನ್ನನೆ 2 ಸರಸಿಜಾಕ್ಷ ಪಾದಪದ್ಮ ಸ್ಮರಣೆ ಮಾತ್ರದಿಂದ ಸರ್ವ ಪುರುಷಾರ್ಥಂಗಳೆಲ್ಲ ಸೇರಿ ಬರುವುದೆಂಬುದಾ ಅರಿಯದಂಥ ಮೂಢರೆಲ್ಲ ಬರಿದೆ ಬಯಲು ಭ್ರಾಂತಿಗೊಳಿಸುವ ಉರಗ ಶಿಖರವಾಸ ನೀನೆ ದೊರೆಯೆಂದು ನಾನೊರೆವೆ ಶ್ರೀಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಶ ಕೊಳಲನೂದಿದನಂದು ಶ್ರೀಧರನಿಂದು ವಾಸವ ವಂದಿತ ವಾತಜ ಸೇವಿತ ವಾಸುಕಿಶಯನನು ವಾರೆ ಸುನೋಟದಿ ಪ ಬೆರಳ ಸಂದಿಲಿ ಮುರಳಿ ಪಿಡಿದು, ಮುರಾರಿ ತಾನು ಹರುಷದಿಂದಲಿ ಸ್ವರವ ನುಡಿದು, ವಾರಿಜನೇತ್ರ ಅರಳು ಮಲ್ಲಿಗೆ ಸರಗಳ ಮುಡಿದು ಕೌಸ್ತುಭ ಮರುಳು ಮಾಡುತ ಮಡದಿಯೆಲ್ಲರ 1 ಗೌರಿ ಗಾಂಧಾರಿ ಗೌಳಪಂತು ಗೌರೀಶ ಭೂಷಣ ಶೌರೀ ಸಾರಂಗ ಮೋಹನವಿಂತು ಸಾವೇರಿ ಸುರುಟಿ ಭೈರವಿ ಬ್ಯಾಗಡೆ ಊದುತ ನಿಂತು ಮಾರಜನಕ ತಾನಾನಂದದಿಂದಲಿ ವೀರ ಶ್ರೀ ಕೃಷ್ಣನು ವಿಧವಿಧ ರಾಗದಿ2 ನಾರದ ತುಂಬುರ ನಾಟ್ಯವನಾಡೆ, ನಳಿನನಾಭನ ಭಾರತಿಪತಿ ತಾ ಕೊಂಡಾಡೆ ವರಗುರು ವಂದಿತ ವಿಜಯವಿಠ್ಠಲರೇಯಹರುಷವ ಪಡಿಸುತ ವನಿತೆಯರೆಲ್ಲರ 3
--------------
ವಿಜಯದಾಸ
ಶ್ರೀಶ ನೀನಹುದೋ ಶೇಷಾಚಲವಾಸ ನೀನಹುದೊ ಪ. ಶೇಷಶಯನ ಸುರೇಶವಂದಿತಶೇಷಜನರನು ಪಾಲಿಸಿ ಬಡ್ಡಿಕಾಸು ಸೇರಿಸಿ ಗಂಟುಕಟ್ಟುವಕ್ಯಾಸಕ್ಕಿ ತಿಮ್ಮಪ್ಪ ನೀನೆ ಅ.ಪ. ತÀಂದೆ ನೀನಹುದೊ ಕರುಣಾಸಿಂಧು ನೀನಹುದೊಅಂದುದ್ರುಪದನ ನಂದನೆಯ ಎಳೆತಂದು ಘಾಸಿಯ ಮಾಡುತಿರÀಲುಮುಂದೆ ಬಂದು ಅಕ್ಷಯವೆಂದು ಸಲಹಿದಮಂದಹಾಸ ಮುಕುಂದನು ನೀನೆ 1 ಧೀರ ನೀನಹುದೊ ಜಗದೋದ್ಧಾರ ನೀನಹುದೊಬಾರಿ ಬಾರಿಗೆ ನಿನ್ನಪಾದ ಸುವಾರಿಜಂಗಳಸೇರಿದ ಭಕ್ತರ ಘೋರ ದುರಿತವದೂರಗೈಸುವ ಮಾರಜನಕ ಅ-ಪಾರ ಮಹಿಮನೆ 2 ಧನ್ಯ ನೀನಹುದೊ ಸುರಮುನಿಮಾನ್ಯ ನೀನಹುದೊಪನ್ನಗಾರಿವಾಹನ್ನ ಧರೆಯೊಳುಇನ್ನು ನಿನಗೆದುರ್ಯಾರ ಕಾಣೆನೊ ಪ್ರ-ಸನ್ನನಾಗೆಲೊ ಬಿನ್ನಹ ಕೇಳು ಪ್ರ-ಪನ್ನವತ್ಸಲ ಶ್ರೀ ಹಯವದನ 3
--------------
ವಾದಿರಾಜ
ಶ್ರೀಶ ವೇದವ್ಯಾಸನಾದನು ಪ ಶ್ರೀಶ ವೇದವ್ಯಾಸನಾಗಲು ಸಾಸಿರ ನಯನ ಸಾಸಿರ ವದನ ಕರ ಮಿಕ್ಕ ಸುರರೆಲ್ಲ ತು- ತಿಸಿ ಹಿಗ್ಗುತ ಹಾರೈಸಲಂದು ಅ.ಪ. ದರ್ಪಕ ಜನಕ ಸರ್ಪತಲ್ಪನಾಗಿ ತಪ್ಪದನುಗಾಲ ಇಪ್ಪ ವಾರಿಧೀಲಿ ಕಂದರ್ಪ ಹರನೈಯ ಸುಪರ್ಣರಥನಾಗಿ ಒಪ್ಪಿಕೊಂಡು ಇಪ್ಪತ್ತು ಲಕ್ಷಗಲಿಪ್ಪ ಯೋಜನದ ಅಪ್ಪನ ಅರಮನೆ ದರ್ಪಣದಂತೆ ತಾ ರಪ್ಪಥ ಮೀರಿದಂತಿಪ್ಪದು ನೋಡಿ ಸಾ- ಮೀಪಕ್ಕೆ ವಾಣೀಶ ಬಪ್ಪ ಬೇಗಾ 1 ಬಂದು ಬೆನ್ನೈಸಿದ ಮಂದಮತಿ ಕಲಿ- ಯಿಂದ ಪುಣ್ಯಮೆಲ್ಲ ಹಿಂದಾಯಿತೆನೆ ಮು ಕುಂದ ಭಕ್ತನಿಗೆ ಒಂದೆ ಮಾತಿನಲಾ- ನಂದ ಬಡಿಸಿ ಪೋಗೆಂದು ಪೇಳೆ ಅಂದು ಸುಯೋಜನಗಂಧಿ ಗರ್ಭದಲ್ಲಿ ನಿಂದವತರಿಸುತ ಪೊಂದಿದ ಅಜ್ಞಾನ ಅಂಧಕಾರವೆಲ್ಲ ಹಿಂದು ಮಾಡಿ ಸುರ- ಸಂದಣಿ ಪಾಲಿಸಿ ನಿಂದ ದೇವ 2 ಕೆಂಜೆಡೆವೊಪ್ಪ ಕೃಷ್ಣಾಜಿನ ಹಾಸಿಕೆ ಕಂಜಾಪ್ತನಂದನದಿ ರಂಜಿಸುವ ಕಾಯ ಮಂಜುಳ ಸುಜ್ಞಾನ ಪುಂಜನು ವಜ್ಜರ- ನಿತ್ಯ ಅಂಜಿದಗೆ ಸಂಜೆಯ ತೋರಿ ಧನಂಜಯ ಶಿಷ್ಯ ನೀ- ಗಂಜದಂತೆ ಕರಕಂಜವ ತಿರುಹಿ ನಿರಂಜನ ಪೇಳಿದ ಕುಂಜರ ವೈರಿಯ ಭಂಜನನು 3 ಗಂಗಾತೀರದಲಿ ಶೃಂಗಾರ ಉಪವ- ನಂಗಳದರೊಳು ಶಿಂಗಗೋಮಾಯು ಭು ಮೂಷಕ ಮಾತಂಗ ಸಾರಮೇಯ ಕೊಂಗಹಂಗ ಸರ್ವಾಂಗ ರೋಮ ಶರಭ ವಿಹಂಗ ಶಾರ್ದೂಲ ಸಾ- ರಂಗ ಕುರಂಗ ಕುಳಿಂಗ ಪಾಳಿಂಗ ಪ್ಲ ವಂಗ ತುರಂಗ ಪತಂಗ ಭೃಂಗಾದಿ ತು- ರಂಗವು ತುಂಬಿರೆ ಮಂಗಳಾಂಗ 4 ಬದರಿ ಬೇಲವು ಕಾದರಿ ಕಾಮರಿ ಮಧುಮದಾವಳಿ ಅದುಭುತ ತೆಂಗು ಕದಳಿ ತಪಸಿ ಮದಕದಂಬ ಚೂ- ತದಾರು ದ್ರಾಕ್ಷಿಯು ಮೃದು ಜಂಬೀರವು ಬಿದಿರು ಖರ್ಜೂರ ಮೋದದಿ ದಾಳಿಂಬ ತುದಿ ಮೊದಲು ಫ ಲದ ನಾನಾವೃಕ್ಷ ಪದಲತೆಯ ಪೊದೆಯು ಫಲ್ಲಸೈ ಇದೆ ಆರು ಋತು ಸದಾನಂದ 5 ವನದ ನಡುವೆ ಮುನಿಗಳೊಡೆಯ ಕಾನನ ಸುತ್ತಲು ಆ- ನನ ತೂಗುತ್ತ ಧ್ವನಿಯೆತ್ತಿ ಬಲು- ಗಾನ ಪಾಡಿದವು ಗುಣದಲ್ಲಿ ಕುಣಿದು ಖಗಾದಿ ಗಣಾನಂದದಿಂದಿರೆ ವನನಿಕರ ಮೆಲ್ಲನೆ ಮಣಿದು ನೆ- ಲನ ಮುಟ್ಟುತಿರೆ ಅನಿಮಿಷರು ನೋ ಡನಿತಚ್ಚರಿಯನು ಪೇಳೆ 6 ಮೌನಿ ನಾರದನು ವೀಣೆ ಕೆಳಗಿಟ್ಟು ಮೌನವಾದನು ಬ್ರಹ್ಮಾಣಿ ತಲೆದೂಗಿ ಗೀರ್ವಾಣ ಗಂಧರ್ವರು ಗಾನ ಮರೆದು ಇದೇನೆನುತ ಮೇನಕೆ ಊರ್ವಸಿ ಜಾಣೀರು ತಮ್ಮಯ ವಾಣಿ ತಗ್ಗಿಸಿ ನರ್ತನೆಯ ನಿಲ್ಲಿಸಿ ದೀನರಾದರು ನಿಧಾನಿಸಿ ಈಕ್ಷಿಸಿ ಎಣಿಸುತ್ತಿದ್ದರು ಶ್ರೀನಾಥನ 7 ನಮೋ ನಮೋಯೆಂದು ಹಸ್ತ- ಕಮಲ ಮುಗಿದು ನಮಗೆ ನಿಮ್ಮಯ ಅಮಲಗುಣ ನಿಗಮದಿಂದೆಣಿಸೆ ಕ್ರಮಗಾಣೆವು ಉತ್ತಮ ದೇವ ಕೂರ್ಮ ಖಗಮೃಗ ಸಮವೆನಿಸಿ ಅ- ಚಮತ್ಕಾರದಲ್ಲಿ ನಾಮಸುಧೆಯಿತ್ತ ರಮೆಯರಸ ಆಗಮನತ8 ಇದನು ಪಠಿಸೆ ಸದಾ ಭಾಗ್ಯವಕ್ಕು ಮದವಳಿ ದಘವುದದಿ ಬತ್ತೋದು ಸಾಧನದಲ್ಲಿಯೆ ಮದುವೆ ಮುಂಜಿ ಬಿಡದಲ್ಲಾಗೋದು ಶುಭದಲ್ಲಿ ಪದೆಪದೆಗೆ ಸಂಪದವಿಗೆ ಜ್ಞಾನ- ನಿಧಿ ಪೆಚ್ಚುವುದು ಹೃದಯ ನಿರ್ಮಲ ಬದರಿನಿವಾಸ ವಿಜಯವಿಠ್ಠಲ ಬದಿಯಲ್ಲೆ ಬಂದೊದಗುವ 9
--------------
ವಿಜಯದಾಸ
ಶ್ರೀಶನ ಚರಣದಾಸನಾಗಿರ್ದರೆ ಆಶಾಪಾಶ ನೀಗಿರಬೇಕು ಪ ಈಶನರಿತ ಗುರು ಶಿಷ್ಯನಾಗಿರ್ದರೆ ದೂಷಣ ಭೂಷಣ್ಹೋಗಿರಬೇಕು ಅ.ಪ ಹರಿಸರ್ಮಣಾಮೃತ ಸುರಿವನಾಗಿರ್ದರೆ ಧರೆಯ ಭೋಗ ಮೀರಿರಬೇಕು ಪರತತ್ತ್ವದ ಮೂಲರಿತವನಾದರೆ ಮರವೆ ಮಾಯ ಹಾರಿರಬೇಕು 1 ವೇದ ವೇದಾಂತವ ಸಾಧಕನಾದರೆ ವಾದ ವಾಂಛಲ್ಯವ ತೊಡೆದಿರಬೇಕು ಬೋಧ ಪಡೆದು ನಿಜ ಸಾಧುವಾದರೆ ನಾದಶಬ್ದವಡಗಿರಬೇಕು 2 ಮಾನಸಪೂಜೆಯ ಖೂನ ಬಲ್ಲ್ಯಾದರೆ ತಾನು ತನ್ನನು ಅರಿತಿರಬೇಕು ಧ್ಯಾನವಿಡಿದು ನಿಜಜ್ಞಾನಿಯಾದರೆ ಮಾನಭಿಮಾನಕ್ಹೊರತಿರಬೇಕು 3 ಬೋಗದ್ವಾಸನ್ಹಿಂಗಿ ಭಾಗವತನಾದರೆ ಕೂಗಿನ ನೆಲೆ ತಿಳಿದಿರಬೇಕು ಯೋಗ ಬಲಿಸಿ ಮಹಯೋಗಿಯಾದರೆ ರಾಗರಹಿತನಾಗಿರಬೇಕು 4 ಲಿಂಗವ ಧರಿಸಿ ಜಂಗಮನಾದರೆ ಸಂಗರಹಿತನಾಗಿರಬೇಕು ಅಂಗ ಮೂರು ನೀಗಿ ಲಿಂಗ ತಾನಾದರೆ ಲಿಂಗಾಂಗ ಸಮರಸ ತೋರಬೇಕು 5 ಸತ್ಯವರಿತು ಸತ್ಪುರುಷನಾದರೆ ಸತ್ತಂತೆ ಜಗದೊಳಿರಬೇಕು ಮೃತ್ಯುಗೆಲಿದು ಪರಮಾರ್ಥಿಕನಾದರೆ ಮತ್ರ್ಯರ ಗುಣ ಮರ್ತಿರಬೇಕು 6 ಘೋರ ಭವಾಂಬುಧಿ ಪಾರುಗಂಡಿರ್ದರೆ ಪಾರ ಹಾರೈಕೆ ಅಳೆದಿರಬೇಕು ಸಾರಮೋಕ್ಷ ತನ್ನ ಸೇರಬೇಕಾದರೆ ಧೀರ ಶ್ರೀರಾಮನೊಲಿಸಿರಬೇಕು 7
--------------
ರಾಮದಾಸರು
ಶ್ರೀಶನ ಸತಿಯರ ಹಾಸ್ಯವ ಮಾಡುತ ಸೋಸಿಲೆ ಕೋಲಹೊಯ್ದೇವ ಕೋಲ ಪ. ಧಿಟ್ಟೆ ನಾನೆಂಬೋದು ಸೃಷ್ಟಿಕರ್ತನೆ ಬಲ್ಲಗಟ್ಯಾಗಿ ನಿನ್ನ ಗುಣಗಳಗಟ್ಯಾಗಿ ನಿನ್ನ ಗುಣಗಳ ವರ್ಣಿಸಲು ಸಿಟ್ಟು ಬಂದಿತು ಸಭೆಯೊಳು1 ಗಂಡನ ಬಳಗವ ಕಂಡರೆ ನಿನಗಾಗದುಲೆಂಡರ ಮನೆಗೆ ನಡೆದ್ಹೋಗಿಲೆಂಡರ ಮನೆಗೆ ನಡೆದ್ಹೋಗಿ ಸೇರಿದ್ದುಪಂಡಿತರು ಕಂಡು ನಗುತಾರೆ 2 ಘಟ್ಯದೆಗಾರಳು ಪೆಟ್ಟಿಗಂಜುವಳಲ್ಲಎಷ್ಟು ಧೈರ್ಯವೆ ಎಲೆನಾರಿಎಷ್ಟು ಧೈರ್ಯವೆ ಎಲೆನಾರಿ ನಿನ್ನ ಕೂಡಕೃಷ್ಣ ಕಡಿ ಬೀಳೋ ತೆರನಂತೆ 3 ಮುದದಿಂದಲೆ ದ್ವಾರಕಾಸದನದೊಳಗ್ಹೋಗಿಕದನವ ಹೂಡಿ ಕೆಡಿಸುವೆಕದನವ ಹೂಡಿ ಕೆಡಿಸುವೆ ನಿನ್ನಗುಣಕೆಮದನನಯ್ಯನೆಂತು ಮನಸೋತ4 ಹಲವು ರಾಯರ ಗೆದ್ದ ಬಲುಧೀರರೆಲ್ಲನಿನ್ನ ಬಲೆಯೊಳು ಬಿದ್ದು ಬಳಲೋರುಬಲೆಯೊಳು ಬಿದ್ದು ಬಳಲೋರು ಇದ ಕಂಡುಬಲರಾಮ ತಾನು ನಗುತಾನ5 ಸುರರು ಜರಿದು ನಾರಿಹರಿಯು ಗುಣಪೂರ್ಣ ನೆನುತಲೆಹರಿಯು ಗುಣಪೂರ್ಣ ನೆನುತಲೆ ಮಲ್ಲಿಗೆಸರವ ಹಾಕಿದಿಯೆ ಕೊರಳಿಗೆ 6 ಕೇಳೆ ರುಕ್ಮಿಣಿ ನಿನ್ನ ಭಾಳ ಚಾಪಲ್ಯ ನೋಡಿಹೇಳ ಕೇಳದಲೆ ಹಿರಿಯರಹೇಳ ಕೇಳದಲೆ ಹಿರಿಯರ ಕೃಷ್ಣಯ್ಯಭೋಳೆ ತನದಿಂದ ಮದುವ್ಯಾದ 7 ಗಂಡನ ಎದುರಿಗೆ ಗಂಡುಗಚ್ಚಿಯ ಕಟ್ಟಿಗಂಡಸಿನಂತೆ ಧನುವೆತ್ತಿಗಂಡಸಿನಂತೆ ಧನುವೆತ್ತಿ ಕಾದಿದಬಂಡುಗಾರತಿಯೆನಿನ ತಂಗಿ8 ಅಕ್ಕ ತಂಗಿಯರ ಶೌರ್ಯ ಶಕ್ಯವೆ ವರ್ಣಿಸಲುನಕ್ಕು ನಾರಿ ಸರಿಯವರುನಕ್ಕು ನಾರಿ ಸರಿಯವರು ರಾಮೇಶಗೆತಕ್ಕವರೇನೆ ಮಡದಿಯರು ಕೋಲ9
--------------
ಗಲಗಲಿಅವ್ವನವರು
ಶ್ರೀಶಪದ ಕಮಲಕ್ಕೆ ಮಧುಪ | ನಿನ್ನದಾಸನೆಂದೆನಿಸುವುದು ಧನಪ | ಸಖ ಮ-ಹೇಶನ ಸುತ ಪೇಳ್ವೆ ಭಿನ್ನಪ | ನೀ ಪ್ರ-ಕಾಶಿಪುದು ಮನವಿ ವಿಘ್ನಪ 1 ಪತಿ ಕರುಣಿ ಶುಭಗಾತ್ರ | ಗ್ರಂಥಲೇಸೆನಿಸಿ ಲಿಖಿಸಿದೆ ಪವಿತ್ರ | ಮೂರ್ತಿಪಾಶಾಂಕುಶ ಪಾಣಿ ಸುಚರಿತ್ರ 2 ಸ್ವಾಂತ | ದಲ್ಲಿಅಭಯ ನೀ ತಿಳಿಸು ನಿಶ್ಚಿಂತ 3 ವಿಘ್ನಪನೆ ದುರ್ವಿಷಯದಲ್ಲಿ | ಬಹಳಮಗ್ನವಿಹ ಮನವ ಹರಿಯಲ್ಲಿ | ನಿರತಲಗ್ನ ಮಾಡಿಸು ತ್ವರ್ಯದಲ್ಲಿ | ಇನ್ನೂ ವಿಘ್ನಗಳಿಗಂಜಿಕೆಯು ಎಲ್ಲಿ ? | 4 ಧನಪ ವಿಶ್ವಕ್ಸೇನ ಯಮಳ | ಆ ಅ-ಶ್ವಿನೀಗಳ್ಗೆ ಸಮ ಕರಿಗೊರಳ | ಪುತ್ರನನುಜನೇ ಶೇಷ ಶತಗರುಗಳ | ರಲ್ಲಿಗುಣೋತ್ತಮನೆ ಕಾಯೊ ನಮ್ಮಗಳ | 5 ಬವರ | ದಲ್ಲಿಗೌರಿಪತಿ ವರದಿ ಉದ್ಧಟರ | ಆದಕ್ರೂರಿ ಜನ ಸಂಹಾರಿ ಶೂರ | 6 ಸೂತ್ರ ಅಪರೂಪ | ಖಳರದರ್ಪ ಭಂಜನನೆ ಶುಭರೂಪ | 7 ಶ್ರೀಶನತಿ ನಿರ್ಮಲವು ಎನಿಪ | ನಾಭಿದೇಶಗತನಾಗಿಹನೆ ಗಣಪ | ರಕ್ತವಾಸೆರಡು ಶೋಭಿತನೆ ಸುರಪ | ಮಿತ್ರಮೂಷಕಾ ವರವಹನ ರೂಪ | 8 ಶಂಕರಾತ್ಮಜ ದೈತ್ಯ ಜನಕೆ | ಅತಿ ಭ-ಯಂಕರ ಗತಿಯ ನೀಡಲ್ಕೇ | ನೀನುಸಂಕಟ ಚತುರ್ಥಿಗ ಎನೆಲ್ಕೆ | ಹಾಗೆಮಂಕು ಜನಾವೃತವು ಮೋಹಕ್ಕೆ 9 ಸಿದ್ಧಿ ವಿಧ್ಯಾಧರರು ಎಂಬ | ಗಣಾರಾಧ್ಯ ಪದಕಮಲ ನಿನದೆಂಬ | ಜನಕೆಸಿದ್ಧಿದಾಯಕ ವೇಗ ಎಂಬ | ಮಹಿಮಬುದ್ಧಿ ವಿದ್ಯೆಗಳ ಕೊಡು ತುಂಬ 10 ಭಕ್ತವರ ಭವ್ಯಾತ್ಮ ಪರಮ | ಶಾಸ್ತ್ರಸಕ್ತವಾಗಲಿ ಮನವು ಅಧಮ | ವಿಷಯಸಕ್ತಿರಹಿತನ ಮಾಡಿ ಪರಮ | ಶುದ್ಧಭಕ್ತನೆಂದೆನಿಸು ನಿಸ್ಸೀಮ | 11 ಶಕ್ರ ಪೂಜಿಸುತ ಗುರು ನಿನ್ನ ವೈರಿಶುಕ್ರ ಶಿಷ್ಯರ ಕೊಂದ ನಿನ್ನ | ಆ ಉ-ರುಕ್ರಮ ರಾಮ ಪೂಜಿಸೆನ್ನ | ತೋರ್ದವಕ್ರ ತುಂಡನೆ ಕರುಣವನ್ನ 12 ಕೌರವನು ಭಜಿಸದಲೆ ನಿನ್ನ | ಆಸಮೀರನ ಗದೆಯಲಿಂದಿನ್ನ | ಹತನುತಾರಕಾಂತಕನನುಜ ಯೆನ್ನೆ | ಧರ್ಮಪ್ರೇರಕನೆ ಸಂತೈಸು ಎನ್ನ 13 ಮೂಕರನ ವಾಗ್ಮಿಗಳ ಗೈವ | ಗುರು ಕೃ-ಪಾಕರನೆ ಕಾಮಗಳ ಕೊಡುವ | ಪರಮಲೇಖಕನೆ ಮನ್ಮನದಲಿರುವ | ಬಹುವ್ಯಾಕುಲವ ಪರಿಹರಿಸು ದೇವ | 14 ಸತ್ತೆ ವೃತ್ತಿಯು ಮತ್ತೆ ಪ್ರಮಿತಿ | ಜಗಕೆಇತ್ತು ತಾ ಸೃಷ್ಟ್ಯಷ್ಟಕತ್ರ್ರೀ | ಎನಿಪಚಿತ್ತಜ ಪಿತನ ದಿವ್ಯ ಸ್ಮøತಿ | ಇತ್ತುನಿತ್ಯ ನೀ ಪಾಲಿಪುದು ಸದ್ಗತಿ 15 ಪಂಚವಕ್ತ್ರನ ತನಯ ಕೇಳೊ | ಎನಗೆಪಂಚಭೇದದ ಜ್ಞಾನ ಪೇಳೊ | ಹರಿಯುವಾಂಛಿತ ಪ್ರದನ ದಿಟ ಆಳೊ | ಭವದಿವಂಚಿಸದೆ ಕಾಯೊ ಕೃಪಾಳೊ | 16 ಏನು ಬೇಡುವುದಿಲ್ಲ ನಿನ್ನ | ದುಷ್ಟಯೋನಿಗಳು ಬರಲಂಜೆ ಘನ್ನ | ಲಕುಮಿಪ್ರಾಣಪತಿ ತತ್ವರಿಂದಿನ್ನ | ಕಾರ್ಯತಾನೆಂಬ ಮತಿಯ ಕೊಡು ಮುನ್ನ 17 ಭಕ್ತ ಜನ ಕಲ್ಪ ತರುವೆನಿಪ | ಉಮೆಯಪುತ್ರ ಮಮ ಮಮತೆಯನು ಹರಿಪ | ದಾಯಹತ್ತಿಹುದು ನಿನ್ನಲ್ಲಿ ಗಣಪ | ಕಳೆಯೊಎತ್ತಿ ಕೈ ಮುಗಿವೆ ಭವರೂಪ 18 ಜಯ ಜಯವು ಎಂಬೆ ವಿಘ್ನೇಶ | ತಾಪತ್ರಯಗಳಿನು ನೀನೇ ವಿನಾಶ | ಗೈದುಭಯ ಶೋಕರಹಿತ ವಿದ್ಯೇಶ | ಜನ್ಮಾಮಯ ಮೃತಿ ಹರಿಸೊ ನಭಕೀಶ | 19 ನಮಿಸುವೆನೊ ಹೇರೊಡಲ ನಿನ್ನ | ಕರುಣಿಕಮಲಾಕ್ಷ ಹರಿನಾಮವನ್ನ | ನಿರುತವಿಮಲ ಮನದಿ ನುಡಿವಂತೆ ಎನ್ನ | ಮಾಡಿಕಮಲೇಶ ಪದ ತೋರೊ ಘನ್ನ20 ಎರಡು ನವ ಮೂರು ಪದಗಳನ್ನ | ಗೌರಿತರಳನಲಿ ಇರುವಂಥ ಪ್ರಾಣ | ಪತಿಯುಗುರು ಗೋವಿಂದ ವಿಠ್ಠಲನಾ | ಪದದಿಇರಿಸುವರ ಹರಿ ಪೊರೆವ ಅವರನ 21
--------------
ಗುರುಗೋವಿಂದವಿಠಲರು
ಶ್ರೀಶಾ ಹೃಷಿಕೇಶ ಕೇಶವ ವಸುಧಾಧೀಶ ಪ ಭವ ಸನ್ನುತ ಶೇಷಾಚಲ ಸನ್ನಿವಾಸ ಶಾಶ್ವತಾ ಪರಿಪಾಹಿ ಹರೇ ಅ.ಪ. ದುರಿತ ವಿಭಂಜನ ವಾಮನ ವರ ಸಂಕರ್ಷಣ ಧರಣೀ- ಧರ ಶ್ರೀಧರ ದೋಷದೂರ ಪರತರ ಪರಮೇಶ ಅಮಿತ ಸಮ ನರನಾರಾಯಣ ಸುರಗಣ ಪರಿಪಾಲ ಗಾನಲೋಲ ವರದ ಸುಖಾಸ್ಪದ ವಿಜಯದ 1 ಮಾಧವ ಮುರಹರ ಶರಣಾಗತ ಜನರಕ್ಷಕ ಭವ ಮೋಚಕ ನಿರುಪಮ ಗುಣಭರಿತ ಅರುಣಾಂಭೋರುಹಲೋಚನ ಸುರಗಂಗೋದಿತ ಚರಣ ಕರಿರಾಜವರದಾಚ್ಯುತ ಸ್ವರತಾ ಸ್ವತಂತ್ರ ಸುಚರಿತ 2 ಮಂದರ ಗಿರಿಧಾರಕ ಜಯ ಕಾಂಚನನಯನಾಂತಕ ಜಯ ಮನುಜ ಮೃಗೇಂದ್ರ ಜಯ ವೈರೋಚನಿ ದರ್ಪಹರ ಜಯ ಭೂಮಿ ಭುಜದಲ್ಲಣ ಜಯರಾಮ ಕೃಷ್ಣ ನಿಪುಣ ಕಲ್ಕಿ ಹಾ ಶ್ರೀಕಾಂತ ಜಯಜಯ 3
--------------
ಲಕ್ಷ್ಮೀನಾರಯಣರಾಯರು
ಶ್ರೀಹರಿ ಕೀರ್ತನೆ ಅಗಲದಿರೋ ಮನ ಮಂದೀರದಿಂದ ಲೆನ್ನ ಎಂದೆಂದಿಗೂ ಕೃಷ್ಣ ಪ ಅಗಲದಿರೋ ಬ್ರಹ್ಮಾದಿ ವಂದಿತ ಪರಿ ಪೂರ್ಣ ಏಕನೆ ವಿಶ್ವ ಸಗುಣ ನಿರ್ಗುಣ ನಿರಜ ನಿಸ್ಸೀಮ ಅ.ಪ. ಕಷ್ಟವಿಲ್ಲದೆ ಸಕಲ- ಚೇಷ್ಟೆಯ ನಡಿಸುವೆ ಕೊಟ್ಟು ದೇಹಾದಿಗಳ- ಬಿಟ್ಟೇ ಜೀವರ ಭವದಿ ಗಿಟ್ಟೀಸೆ ತಮ್ಮ ತಮ್ಮ- ಪಟ್ಟಾ ಮುಕ್ತಿಯ ಬೇಗ ಒಟ್ಟಿನಿಂದಲಿ ಜೀವ ಜಗವಂದಿಷ್ಟು ಚಲಿಸದು ಬಿಟ್ಟು ನಿನ್ನನು ಗುಟ್ಟು ತಿಳಿಯದೆ ಭವದಿ ಕಂ- ಗೆಟ್ಟು ಬಳಲಿದೆ ಭಕ್ತಬಾಂಧವ ನಷ್ಟಕಷ್ಟಗಳಿಲ್ಲದಾ ಸಂತುಷಷ್ಟ ನೀಡುವ ಪ್ರಭುವೆ ಕರುಣಾ- ದೃಷ್ಟಿ ಬೀರುತ ಭಕ್ತಿ ಭಾಗ್ಯವ ಪುಷ್ಟಿಗೈಸುತಲೆನಗೆ ಸಂತತ 1 ಶ್ರೀಶಾನೊಬ್ಬನೆ ಸರ್ವ ತಂತ್ರ ಸ್ವತಂತ್ರನು ನಾಶರಹಿತನಿಗೆಲ್ಲಾ ದಾಸರೆ ಸರಿಸತತಾ ವಾಸುದೇವನು ಜೀವ ಜಗದಿಂ ವಿಲಕ್ಷಣನು ಈಸುಜ್ಞಾನವನೀಯೋ ಜನ್ಮಜನ್ಮಾಂತರಕು ದೋಷದೂರ ವಿಶೇಷ ಮಹಿಮ ಪೂರ್ಣ ವಿಶ್ವಗ ಶಶ್ವದೇಕ ವಿ- ಲಾಸ ಮಿಷಣಾಭರಣ ಭೂಷಿತ ಸಾಮಸರ್ವಾಧಾರ ನಿರುಪಮ ಓಸು ಶಬ್ದಗಳಿಂದ ವಾಚ್ಯನೆ- ನಾಶಗೈಸುತ ಕರ್ಮತ್ರಯಗಳ ಹೃದಯಗುಹೆಯಲಿ 2 ನಿತ್ಯನಿಗಮಾತೀತ-ನೀನೆ ಸತ್ಯರ ಸತ್ಯ ನಿತ್ಯತೃಪ್ತನು ಸ್ವರತ-ಮುಕ್ತೇಶ ಚಿನ್ಮಯನೂ ನಿತ್ಯಜೀವಗೆ ನೀನಿರ್ನಿಮಿತ್ತ ಬಂಧು ಸತತ ನಿತ್ಯಸ್ತೋತ್ರವನು ನುಡಿಸು-ಮೃತ್ಯೋಮೃತ್ಯುವೆ ದೇವಾ ಧಾಮ ವಿಶ್ವೋ ತ್ಪತ್ತಿ ಸ್ಥಿತಿಲಯ ಕರ್ತ ಪರಿಪರಿ ಜೀವ ಸತ್ತಾದಿ ಭಾಸಕ ನಾಥ ಮುಕ್ತಾಮುಕ್ತ ವಂದಿತ - ಭೂತಿ ಭೂರಿದನಾಂತಾತ್ಮ ಖ್ಯಾತ ಸರ್ವೋತ್ತಮ ಪರತ:ಪರಾಕ್ಷರ ವಿಷ್ಣುಸರ್ವಜ್ಞ 3 ಅಂಬುಜಾಕ್ಷನು ನೀನೇ-ಉಂಬುವೆ ಸರ್ವಸಾರ ತುಂಬಿರುವೆ ಒಳಹೊರಗೆ-ಬೆಂಬಲನು ಜಗಕೆಲ್ಲ ಬಿಂಬ ನೀ ಚಲಿಸೆ ಪ್ರತಿ ಬಿಂಬಾ ನಾ ಚಲಿಸುವೆ ನಂಬಿದೆ ಸಲಹಯ್ಯ-ಕಂಬುಚಕ್ರಾಂಕಿತನೆ ಕುಂಭಿಣೀಪತಿ ಕೃಷ್ಣಕೈಬಿಡೆ ಗೊಂಬೆ ಸರಿನಾಲ್ಲವೇನೈ ಡಿಂಬದೊಳಗಿನ ವೈರಿವೃಂದವು ಹಂಬಲಿಸಲೆಡೆಗೊಡವುಭವ ದೊಂಬಿ ಅಡಗಿಸು ದಕ್ಷಣಾಕ್ಷಿಗ-ಸ್ಥಂಭರೂಪಿಯೆ ಶರಣುಶರಣು ಎನಿಸೈ ನೀಡಿ ವಿಜ್ಞಾನ 4 ಮಂದರೋದ್ಧರ ಗೋವಿಂದ ನಿನ್ನಯ ಮಹಿಮೆ ಇಂದಿರೆಗಾಗದು ಸಾಕಲ್ಯ ತಿಳಿಯೆಸಿದ್ಧವಿದೂ ಛಂದಾ ಛ್ಚಾದಿತ ಗಾತ್ರ-ಬಂಧ ಮೋಕ್ಷಪ್ರದನೆ ಎಂದು ಕಾಂಬೆನೋ ನಿನ್ನ-ಮಂದನಾನಿಹೆ ಜಗದೀ ಸದ್ಮ ಪೂರ್ಣಾನಂದ ನಿನ್ನಯ ನಾಮ ವೃಂದದಿ ಬಂಧಿಸಿಹೆ ಜಗವೆಲ್ಲ ವಿಷ್ಣುವೆ-ಛಂದಬೃಹತೀಪತಿಯೆ ನೀನೈ ನಾಡಿ ಮೆರೆಯುವ ಇಂದಿರಾಪತಿ ಕೃಷ್ಣವಿಠಲನೆ-ನಿಂದು ತೋರುತ ನಿನ್ನ ರೂಪವ 5
--------------
ಕೃಷ್ಣವಿಠಲದಾಸರು
ಶ್ರೀಹರಿ ಕೃಪೆಮಾಡಯ್ಯ ಪ ನಿನ್ನಡಿಗಳನೆಂದಿಗೂ ಬಿಡೆನಯ್ಯ ಅ.ಪ. ನೀಗತಿಯೆನುತಿಹೆನಯ್ಯ ತೋರಿಪುದೆನಗಯ್ಯ 1 ನಿನ್ನ ಪದವನಂಬಿ-ನಿನ್ನವನೆನಿಸಿದ-ಯೆನ್ನನು ಪೇಕ್ಷಿಪರೇನಯ್ಯ ಸನ್ನುತ ನಿನ್ನದು ಮನ್ನಿಸಿ ಕೇಳುವ ಬಿನ್ನಪವಿನಿತೆ ಕೇಳಯ್ಯ 2 ಎಲ್ಲರ ಹೃದಯದೊಳಲ್ಲಿ ನೆಲಸಿರುವ ಪುಲ್ಲನಯನನೀ ಪೇಳಯ್ಯ ಕಲ್ಲುಮನದಿನೀ ನೊಲ್ಲದೊಡೀ ಜಗ-ದಲ್ಲಿ ಪೋಪುದಿನ್ನೆಲ್ಲಯ್ಯ3 ಪತಿಯಗಲಿದ ಪತಿವ್ರತೆಗೆ ಇತರರಲಿ ರತಿ ಸಂಜನಿಸುವದೇನಯ್ಯ ನುತಿಪುದು ಪುಶಿಯೇನಯ್ಯ 4 ನಿಗಮವು ಪೊಗಳುತಲಿಹುದಯ್ಯ ಸೊಗಯಿಸುನಿನ್ನೊಳುಯನಗಯ್ಯ 5 ಸೃಷ್ಠಿನಾಥಪದ ವಿಷ್ಟರ ಭಕ್ತಿಯ ಕೊಟ್ಟರಭೀಷ್ಟವು ಯನಗಯ್ಯ ಇಷ್ಟರಮೇಲಿನ್ನು ಲಕ್ಷಕೊಟ್ಟರೂಯನಗಿಷ್ಟವಿಲ್ಲಶ್ರೀ ಕೃಷ್ಣಯ್ಯ 6 ದಯೆಯಿರಿಸಯ್ಯ ಚರಣ ಶರಣನಿಗೆ ಕರುಣಿಸದಿರ್ದರೆ ಕರುಣಿಗಳರಸರಿನ್ನಾರಯ್ಯ 7
--------------
ಸರಗೂರು ವೆಂಕಟವರದಾರ್ಯರು
ಶ್ರೀಹರಿ ನಿನ್ನನ್ನೆ ಪಡೆವುದು ಭಾಗ್ಯ ಬಾಹಿರನೆನಿಸದೆ ಸೇರಿಸು ಯೋಗ್ಯ ಪ ಹೃದಯಾರವಿಂದದೆ ದೇವಿಯರುಸಹಿತ ಸದಯ ಸನ್ನಿಧಿ ಮಾಡು ಅದು ನನಗೆ ವಿಹಿತ 1 ಭಾಗವತ ಕೈಕಂರ್ಯ ಹಗಲಿರುಳು ಇರಲಿ ನಿತ್ಯ ಸಿದ್ಧಿಸಲಿ 2 ಇಡುದೇವ ಪದಕಮಲ ನನ್ನ ತಲೆಮೇಲೆ ಅನುದಿನ ಲೀಲೆ 3 ಕೊನೆಗಾಲದಲಿ ಬಂದು ನೆನೆವಂತೆ ನೀಡೈ ಮನಕೆ ಮಂಗಳರೂಪ ಧ್ಯಾನ ದಯಮಾಡೈ 4 ಅವತಾರಫಲಗಳ ಸ್ಮರಣೆ ಬರುತಿರಲಿ ಭವವೆಲ್ಲ ಕರಣಗಳು ನಿನ್ನ ಸೇವಿಸಲಿ 5 ದಾಸನ್ನ ಚರಣಾಂಬುಜದÀಡಿಯಿರಿಸು ಶ್ರೀಶನೆ ಪ್ರೇಮದ ಸವಿಯನುಣಬಡಿಸು 6 ಎಲ್ಲವು ನಿನ್ನದೆ ನನ್ನದೇನಿಲ್ಲ ಬಲ್ಲವನೆ ನೀನಾಗಿ ಮುಕ್ತಿಕೊಡು ನಲ್ಲ 7 ಹಿಂದೇಳು ಮುಂದೇಳು ತಲೆಮಾರಿನವರು ತಂದೆ ನಿನ್ನಂಘ್ರಿ ಶೇಷಾಂಕಮುದ್ರಿತರು 8 ಕುಲಧನವೆ ನೀನಮ್ಮಕುಲಕೋಟಿಯನ್ನ ಒಲಿದು ಕಾಪಾಡಯ್ಯ ಕರುಣಿ ಪ್ರಸನ್ನ 9 ಹೆಜ್ಜಾಜಿ ಕೇಶವ ಇದು ನಮ್ಮ ಮೋಕ್ಷ ಅರ್ಜುನಸಾರಥಿ ಕಾಣು ಪ್ರತ್ಯಕ್ಷ10
--------------
ಶಾಮಶರ್ಮರು
ಶ್ರೀಹರಿ ಸಂಕೀರ್ತನೆ ಪತಿತ ಪಾವನ ಗೋವಿಂದ ನಮ್ಮ ಪದುಮದಳಾಕ್ಷ ಸದಾನಂದ ಪ ಸತಿಪತಿ ನುತ ಸಾರ್ವಭೌಮ ಸು ವೃತಾ ಚರಣ ಘನ ರಾಜಿತ ಸುಂದರ ಅ.ಪ ಧೀರನಮೋ ಸುವಿಚಾರ ನಮೋ ಯದುವೀರ ನಮೋ ರಜದೂರ ನಮೊ ಮಾರನಮೋ ಗಂಭೀರ ನಮೊ ಭವಹಾರ ನಮೋ ದಧಿ ಚೋರ ನಮೊ 1 ಜನನ ಮರಣ ಜರ ರಹಿತ ನಮೋ ಪಾವನ ಪದ ಪಂಕೇರುಹ ನಯನ ನಮೋ ಮನ ವಚನಕೆ ಸಿಗದ ನಿಮಿಷ ಪತಿ ನಿನ್ನನೆ ಬೇಡುವೆ ಪೊರೆಯೆನುತ ಕರಮುಗಿದು 2 ಶೌರಿ ಶುಭ ನಾಮ ಭಕ್ತ ಜನ ಹಿತಕಾರಿ ಸುತ್ರಾಮ ಅನುಜ ನಿ ಸ್ಸೀಮ ಮಹಿಮ ಶಿರಿಧಾಮ ಅನಘ ನಮೊ 3 ಅನ್ಯನೆ ನಾ ನಿನ್ನಗೆ ದೇವ ಸಾಮಾನ್ಯನೆ ಅಭಿಮನ್ಯುನ ಮಾವಾ ಇನ್ನೆನೆನ್ನದೆ ನಿನ್ನಿಂ ಲಭಿಸಿದ ನುಣ್ಣುವ ಯನ್ನನು ಮನ್ನಿಸದಿರುವರೆ 4 ಹಿರಿಯರ ದಯವಿರುವುದು ಸರೆ ನೀ ಪೊರೆವಿ ಬಿಡದೆ ಯಂಬೋದು ಖರೆ ಸ್ವರಸ್ವರ ಘಸಿದಾಲ್ಪರಿದ ಮೇಲೆ ಸುಧೆ ಗರಿವರ ತೆರ ಚರಿಪುದು ಧರವೆ 5 ದಾಸರ ಪೊರೆಯಲು ದಾಶರಥೇ ಅಮಿತ ಮತೆ ಶ್ರೀಶಾನಿಮಿತ್ಯ ಬಂಧುಯೆನಿಸಿ ಉದಾಸಿಸೆ ಆಗಮ ರಾಶಿಗೆ ಶೋಭವೆ 6 ಘಾಸಿಗೊಳಿಸುವರೆ ಸೈಸೈಸೈ ನೀ ನೀಶನಾದದಕೆ ಫಲವೇನೈ ಪೋಷಕ ನೀನೆಂದಾಸಿಸಿದವರನು ನೀ ಸಲಹದೆ ಬರೆ ಸೋಸಿಲಿ ಮೆರೆವರೆ 7 ಧೃವನ ಪೊರೆದ ಬಲುವೇನಾಯ್ತೈ ಉದ್ಧವಗೆ ವಲಿದ ದಯ ಏಲ್ಹೊಯತೈ ಬವರದೊಳಗೆ ಪಾಂಡವರ ಕಾಯ್ದ ಮತಿ ಸವಿಯುತೆ ಪವನಪಸವಿದ ಸತತ ಸುಖ 8 ಘನ್ನ ಕರುಣಿ ನೀ ನಹುದೇನೊ ಆಪನ್ನ ರಾಪ್ತ ನೀ ನಿಜವೇನೋ ಸೊನ್ನೊಡಲಾಂಡಗ ನೀನಾದರೆ ಗತ ಮನ್ಯುನಾಗಿ ಜವ ನಿನ್ನನೆ ತೋರಿಸು 9 ತಂದಿನ ಪಾಲಿಸಿ ಮಗನನ್ನು ಬೇಕೆಂದು ಕೊಂದ ಕೃಷ್ಣನೆ ನೀನು ತಂದು ತೋರೊತವ ಸುಂದರ ಪದಯುಗ10 ಕಂದುಗೊರಳನುತ ಪೊರೆಯೆಂದು ಬಲು ವಂದಿಸಿದರು ತ್ವರ ನೀ ಬಂದು ಕಂದನ ಕರದ್ಯಾಕೆಂದು ಕೇಳ್ದದಕೆ ನೊಂದು ಬಿಡಿ ನುಡಿ ಗಳೆಂದೆನು ಕ್ಷಮಿಸೈ 11 ಬಲು ಮಂದಿನ ಸಲಹಿದಿ ನೀನು ಅವರೊಳಗೆ ಓರ್ವನಾನಲ್ಲೇನೊ ನೆಲೆಗಾಣದೆ ತವ ಜಲಜ ಪಾದ ಹಂಬಲಿಸುವರರ್ಥವ ಸಲಿಸದೆ ಬಿಡುವರೆ 12 ಬೇಡಿಕೊಂಬುವದೊಂದೆ ಬಲ್ಲೆ ಅದುಕೂಡಾ ತಿಳಿದು ನೋಡಲು ಸುಳ್ಳೆ ಬೇಡಿ ಬೇಡಿಸುವಿ ಮಾಡಿ ಮಾಡಿಸುವಿ ರೂಢಿಪತಿ ನೀನಾಡಿದ ನಾಡುವೆ 13 ನಾಗಶಯನ ನೀ ಬದುಕಿರಲು ಎನಗಾಗ ಬೇಕೆ ಕಲಬಾಧೆಗಳು ಸಾಗರಾಂಬರಪ ಸುತನಿಗೆ ಪುರ ಜನ ಬಾಗದೆ ಅಣಕಿಸಿಧಾಂಗಲ್ಲವೆ ಇದು 14 ಕರೆದರೆ ಬರುವೆನು ನಿನ್ನಡಿಗೆ ಧಿ ಕ್ಕರಿಸಲು ಮರುಗುವೆ ಮನದಾಗೆ ನಿರ್ವಿಣ್ಯನು ಪರತಂತ್ರನು ನಾನಿ ನ್ನೆರಳಲ್ಲವೆ ಮದ್ಗುರುವರ ವರದಾ 15 ಕಲ್ಲಿನ ರೂಪದಿ ಪೂಜಿಯನು ಗೊಳ್ಳುವ ಬಗೆ ನಾನೊಲ್ಲೆ ನಿನ್ನ ಶಿರಿ ನಲ್ಲೆ ಸಹಿತ ಬಂದು ನಿಲ್ಲೊ ಅರ್ಚಿಸುವೆ 16 ಕಣ್ಣಲಿ ತವದರ್ಶನ ಅಮೃತ ಭವ ತ್ರಾತಾ ಘನ ಕರುಣಿ ಬಾರೆನೆ ಬರುವೆನು ಎಂದೆನ್ನುವ ಬುಧ ನುಡಿ ನನ್ನಿಯೆನ್ನುವೆನು 17 ಭಿಡೆಯ ಬಾರದೆ ಬಲು ಘನ್ನಾ ನಾನುಡಿಯು ವಡ್ಡಿ ಬೇಡಿದರನ್ನ ಕೊಡಗೈಯವನಿಗೆ ಲೋಭವು ಎಲ್ಲಂದಡರಿತು ನುಡಿ ನುಡಿ ಕಡಲಜಳೊಡೆಯನೆ18 ನ್ಯಾಯಕೆ ಅಧಿಪ ನೀನೆ ಜೀಯಾ ಅನ್ಯಾಯಕೆ ಪೇಳುವರಾರೈಯ್ಯ ಮಾಯವೆಂಬೊ ಘನ ಘಾಯವುಎನ್ನನು ನೋಯಿಸುತಿದೆ ಜವಮಾಯಿ ಸುಭೀಷಿಜನೆ 19 ವರುಣಗೆ ವಾರಿಯು ನೀನಯ್ಯ ದಿನ ಕರನಿಗೆ ಮಿತ್ರನು ನೀನಯ್ಯ ಸುರಪಗೆ ಇಂದ್ರನು ಉರಗಕೆ ಶೇಷನು ಸರ್ವವು ನೀನೆಂದರಿತೆನು ಕರುಣಿಸು 20 ಹನುಮಗೆ ಪ್ರಾಣ ಮೂರೊಂದು ಆನನನಿಗೆ ವೇಧನು ನೀನಂದು ಮನಸಿಗೆ ನೀ ಮನ ಜೀವಕೆ ಜೀವನ ಎನುತ ಅರಿದು ನಮೊ ಎನ್ನುವೆ ಕರಮುಗಿದು 21 ಮೂಗಣ್ಣಗೆ ರುದ್ರನು ನೀನೆಧರೆ ಆಗಸ ಸಾಗರ ಧಾರಕನೆ ಶ್ರೀ ಗುರು ರಘುಪತಿ ರಾಗ ಪಾತ್ರ ಭವ ನೀಗದೆ ಬಿಡುವರೆ 22 ಪದುಮನಾಭ ನಿನ್ನನು ಕುರಿತು ನಾ ನೊದರುವ ನುಡಿಗಳು ಚಿತ್ರವತು ವಿಧಿಪತ್ರವನಾಂತು ನಿನ್ನ ಪಾದ ವದಗಿಸದಲೆ ಬರೆ ಪದವೆನಿಸಿದವೆ 23 ಸ್ತವನಕೆ ವಲಿಯದೆ ಇರೆ ನಮನ ಗೈಯುವೆ ಇಕೊ ನೋಡೆ ದಾಸ್ಯತನಾ ಅವನಿಪ ಸರ್ವಕೆ ವಲಿಯದೆ ಇರೆ ಬೈಯುವೆ ಬಡಿಯುವೆ ಸಿಕ್ಕರೆ ಸೆರೆ ಪಿಡಿಯುವೆ 24 ಚೋರನೆ ನೀ ನಡಗಿದೆಯಾಕೆ ಸ್ಮøತಿ ದೂರನೆ ಎನ್ನನು ಮರಿವದೇಕೆ ಆರು ನಿನಗೆ ವೈಯಾರವು ಈ ಪರಿ ಕಾರುಣ್ಯದಿ ಕಲಿಸಿದರೋ ಕರಿವರದಾ 25 ಮರೆದಿಯ ನೀ ಕನಿಕರ ಬಡುವ ಸ್ಥಿತಿ ನೀ ಜರದರೆ ನಮಗಿನ್ನೇನು ಗತಿ ಪರಿಪರಿ ವರಲು ವರಲಿ ದಯಮಾಡದೆ ಇರವದು ನಿನ್ನಗೆ ಮರಿಯಾದಿಯೆ ಹರಿ 26 ರೂಪ ತೋರಲೆನ್ನುವಿಯಾ ಆಹದೆ ಪೇಳಲೊ ಹೇ ವಿಗತಾಗಭಯ ಪಾಪಬಾರದೆ ಈ ಪರಿಯನ್ನನು ನೀ ಪಿಡಿಸೆ ಗತತಾಪ ಶ್ರೀಪ ಹರಿ 27 ಸುರತನು ಸಾಕದೆ ಬಿಟ್ಟವಗೆ ತನ್ನ ಸತಿಯಳ ಖತಿಯೊಳಗಿಟ್ಟವಗೆ ಕ್ಷಿತಿಯರು ಏನೆನ್ನುವರು ಮನದೊಳಗೆ ಪತಿ ಯೋಚಿಸಿ ಹಿತಗೈಯನ್ನೊಳು 28 ಶಿರಿಗೋವಿಂದ ವಿಠಲ ಪಾಹಿ ಗುರುವರ ರಘುಪತಿನುತ ಪದ ಪಾಹಿ ಬರೆ ಮಾತಲ್ಲವೊ ತ್ವರ ತವ ಪಾದ ಸಿರಿ ಸುರರಾಣೆ 29
--------------
ಅಸ್ಕಿಹಾಳ ಗೋವಿಂದ
ಶ್ರೀಹರಿ ಸಂಕೀರ್ತನೆಗಳು ಅಪ್ರಮೇಯ ಎನ್ನ ಪಾಲಿಸೈ ಅಪ್ಪ ನಿನ್ನ ಪದವ ನಂಬಿರ್ಪೆ ಪಾಲಿಸೈ ಪ ಸರ್ಪಶಯನ ಕಂದರ್ಪಜನಕ ಕೃಪೆಯ ತೋರಿಸೀಗ ಎನ್ನ ತಪ್ಪುಗಳನು ಒಪ್ಪಿಸಿರುವೆ ಒಪ್ಪಿಕೊಂಡು ಮನ್ನಿಸೆನ್ನ ಅ.ಪ ಕರಿಯ ಬಾಧೆಯನ್ನು ಹರಿಸಿದೆ ತರುಣಿಗಂದು ಕರುಣದಿಂದ ವರವ ನೀಡಿದೆ ಕರೆಯೆ ಕಂಬದಿಂದ ಬಂದು ದುರುಳ ದೈತ್ಯನನ್ನು ಕೊಂದು ತರಳನನ್ನು ಪೊರೆದೆಯೆಂದು ಶರಣು ಹೊಕ್ಕೆ ದೀನಬಂಧು 1 ರಾಜೇಂದ್ರ ಪುರವರಾಧಿಪ ರಾಜ ರಾಜ ಮಾಜದೆನ್ನ ಮೊರೆಯ ಕೇಳುತ ಸುಜನಪಾಲ ನಿನ್ನ ಪದವ ಭಜನೆಗೈವೆ ವಿಮಲಮತಿಯ ಭುಜಗಶಯನ ಕರುಣಿಸೆಂದೆ ಭಜಕ ರಕ್ಷಕ ರಾಘವೇಂದ್ರ 2
--------------
ನಂಜನಗೂಡು ತಿರುಮಲಾಂಬಾ
ಶ್ರೀಹರಿ ಸ್ತವನ ಅರ್ಜುನಗಾನಂದಾ ಮಾಡಿದ ಗೋವಿಂದಾ ಪ ರಥದಿ ಮಂಡಿಸಿ ಚತುರತನದಲಿಂದಾ ಚತುರ ಹಸ್ತದಿಂ ವಾಜಿಯಂ ಪಿಡಿದು ರಥಕನ ಬೆನ್ಹಿಂದಿಟ್ಟುಕೊಂಡು ಸಾ- ರಥಿಯು ತಾನೆ ಅಶ್ವವ ನಡಿಸುತಲಿ ರತಿಪತಿಪಿತನತಿಚಮತ್ಕಾರದಿಂ ಪೃಥಿವಿಯ ಮೇಲೆ ನರನಟನ ತೋರುತಲಿ ಪತಿತ ಪಾವನನು ಫಲ್ಗುಣ ಸಖನು ನುತಿಸಿದವರ ನೆರೆ ಪಾಲಿಸುತಿಹನು ಅತುಳ ಶಂಖದಿಂ ಭೌಂ ಭೌಂ ಎನಿಸುತ ರಥದ ಗಾಲಿ ಛಿಟ್ ಛಿಟ್ ಛಿಟಿಲೆನುತ ಕುದುರೆ ಖುರಪುಟಧ್ವನಿ ಫಳ್ ಫಳ್ ಫಳ್ಳೆ ಗೋವಿಂದನು ರಭಸದಿ ಭಕ್ತನೂಳಿಗಾ1 ಮಂದಜಭವ ಮುಖ್ಯಾಮರ ವೃಂದವು ನಂದತನುಜನಾರಂದಲೀಲೆಯಂ ಛಂದದಿ ನೋಡುತ ನಭೋಮಾರ್ಗದೊಳ್ ಬಂದು ಕುಸುಮಗಳ ವೃಷ್ಟಿಯ ಸುರಿದು ಸಿಂಧುಶಯನ ನಾಮಾಮೃತ ಸುರಿದು ಬೃಂದಾರಕ ನಿಕರವು ಕೈಯೆತ್ತಿ ಇಂದುಕಲಾಧಿಪ ಪ್ರಾರ್ಥನೆ ಸೈ ಸೈ ಎಂದು ದೇವದುಂದುಭಿ ಧೋಂ ಧೋಂ ಕಂಸಾ- ಳದರವ ಖಿಣಿಖಿಣಿ ಖಿಣಿ ಭೇರಿ ನಾದ ಖಡ್ ಖಡ್ ಖಡಲ್ ಭಾರಿ ತಾ- ಹತಜಂತರಿಧೂಂ ನರ್ತನಗೈವುತ ತೆರಳುತ 2 ಮಂಗಳ ರವದಿಂ ಜಯಜಯ ಎನಿಸುತ ಮಂಗಳಾಂಗಿ ರುಕ್ಮಿಣಿ ವಲ್ಲಭನು ರಂಗಿನಿಂದ ರಥವಿಳಿದು ಗೆಳೆಯನ ಮುಂಗೈಯನೆ ಪಿಡಿದು ಅಂಗಜನಯ್ಯ ರಂಗುಮಣಿಯ ಉಂಗುರದಿ ಒಪ್ಪುತಲಿ ಭಂಗಾರಕೆ ಮಿಗಿಲೆನಿಪ ದುಕೂಲದಿ ಶೃಂಗರದಲ್ಲಿ ಉತ್ತುಂಗ ಪರಾಕ್ರಮ ಅಂಗಳದೋಳ್ ನಲಿದಾಡುತ ರಂಗನು ತಿಂಗಳ ಕುಲದೀಪನ್ನ ನೋಡುತಲಿ ರಂಗ ಕದರುಂಡಲಗೀಶನ ಒಡೆಯನು ತಾ 3
--------------
ಕದರುಂಡಲಗೀಶರು