ಒಟ್ಟು 7318 ಕಡೆಗಳಲ್ಲಿ , 132 ದಾಸರು , 4469 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಲವು ಚಿಂತೆ ಮರೆವುತಿದೆ ಹರಿ ನೆನೆದರೆ ನಮ್ಮ ಕುಲವೆ ಉದ್ಧಾರವಾಗುವ ಕಾಲವೊ ಪ ಕೊಲೆ ಅನೃತ ಕಳವು(ದಶಬಾರ ಪಟ್ಟಾರ) [?] ಸಲೆ ಬಯಸಿ ಸರ್ವರಲಿ ನೆನೆವುತಿದ್ದೆ ಒಲಿದು ವೈಕುಂಠಪತಿ ಒಮ್ಮೆ ನೆನೆದರೆ ಮನಕೆ ಬಲು ಹರುಷವಾಗುವ ಭಾಗ್ಯವೆಲ್ಯೊದಗಿತೊ 1 ಸತ್ಕರ್ಮಗಳ ಲೇಶ ಸ್ವಪ್ನದಲಿ ತಿಳಿಯದು ಮತ್ತತನದಲಿ ನಡೆದ ಮೂರ್ಖನಿಗೆ ಎತ್ತಲಿಂದೊದಗಿತೊ ಎನಗೆ ತಿಳಿಯದು ದೇವ ಉತ್ತಮನ ನೆನೆನೆನೆದು ಉಬ್ಬೇರುತಿಹದೊ 2 ಬಂದ ಕಾರ್ಯವ ಬಿಟ್ಟು ಮಂದಮತಿತನದಿಂದ ಬೆಂದ ದುರ್ವಿಷಯದಲಿ ಬಳಲುತಿದ್ದೆ ತಂದೆ ಕದರುಂಡಲುಗಿ ಹನುಮಯ್ಯನಾ ಪಾದ ಹೊಂದಿದಾ ನೆವದಿಂದ ಹೊಸ ಪರಿಯ ಕಂಡೆ 3
--------------
ಕದರುಂಡಲಗಿ ಹನುಮಯ್ಯ
ಹಸಗೀಡಾಗದಿರು ಮನವೆ ವಿಷಯವಾಸನೆ ಕೂಡ ಧ್ರುವ ಸತ್ಯವೆಂದೆನಬ್ಯಾಡ ದೃಶ್ಯ ಮಿಥ್ಯಾಮಾಯದ ಮೋಡ ನಿತ್ಯವಾಗಿಹದ ಸತ್ಯ ಸುಪಥ ಕೂಡೊ 1 ಹೊನ್ನು ಹೆಣ್ಣಿನ ಕೂಡ ನೀ ದಣ್ಣನೆ ದಣಿಬ್ಯಾಡ ಸುಣ್ಣ ಸಾರಿಸಿ ಮ್ಯಾಲೆ ಬಣ್ಣದೋರುವದಕ್ಕೆ ಕಣ್ಣಗೆಟ್ಟಿರಬ್ಯಾಡ ಮಣ್ಣೆÀಂದರಿಯದೆ ಕಣ್ಣಗೆಟ್ಟಿರಬ್ಯಾಡ 2 ಗುಹ್ಯಗೂಢವ ತಿಳಿಯೊ ನಾ ದೇಹವೆಂಬುದನಳಿಯೊ ತಿಳಿದು ನೋಡೊ ಶ್ರೀ ಹರಿಯ ಮಹಿಮೆ ಸೋಹ್ಯ ತಿಳಿದು ನೋಡೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಸೆಗೀಗ ಬಾರೆ ಸಖಿಯೆ ಶಶಿಬಿಂಬಪೋಲ್ವ ಮುಖಿಯೆ ಪ ಸೊಗಸಾದ ಕಂಚುಕವ ತೋಟ್ಟು | ಮೃಗಮದದ ಕಸ್ತೂರಿ ಬಿಟ್ಟು ಮೃಗನಯನೆ ಫಣಿಯೊಳಿಟ್ಟು 1 ರಮಣೇರು ಕೂಡಿ ನಿನ್ನ ಘಮ‌ಘಮಿಸು ಕರೆಯುತಿಹರೇ | ಪ್ರಮದಾಮಣಿಯ ಶಿರದಿ ಸುಮಗಳ ಮುಡಿದು ಮುದದೀ 2 ಸಿರಿಯರಸ ಕಮಲನಯನ ವರಶಾಮಸುಂದರನಾ | ಸ್ಮರಿಸುತ್ತ ಮನದಿ ಲಲನೆ ತಿರಸ್ಕರಿಸದೆ ಹಂಸಗಮನೆ 3
--------------
ಶಾಮಸುಂದರ ವಿಠಲ
ಹಸೆಗೆ ಬಾರಯ್ಯ ಹದಿನಾಲ್ಕು ಲೋಕದೊಡೆಯ ಪ ಕುಸುಮಾಸ್ತ್ರನೈಯ್ಯ ಕೋರಿ ಪ್ರಾರ್ಥಿಪೆ ಜೀಯಾ ಅ.ಪ ಪಕ್ಷಿಗಮನ ದುಷ್ಟ ರಾಕ್ಷಾಸಾಂತಕ ನೀನು- ಪೇಕ್ಷೆಮಾಡದೆ ನಿರಪೇಕ್ಷ ಸೌಖ್ಯವೀಯಲು 1 ಪದುಮೆಯೊಡನೆ ಹೃದಯಪದುಮ ಪೀಠದಿ ಕುಳಿತು ಸದಮಲ ಜ್ಞಾನ ವದಗಿಸುವದಕೀಗ 2 ಪ್ರೇಮಾದಿ ಸುಜನರಿಗೆ ಕಾಮಿತ ಫಲವೀವ ಸ್ವಾಮಿ ನೀನೆ ಶ್ರೀಗುರುರಾಮ ವಿಠಲ ವಲಿದು 3
--------------
ಗುರುರಾಮವಿಠಲ
ಹಾದಿಯ ಕೊಡುಹರಿ ಪರಗತಿಯಾ ಸಾಧಿಸಿ ಬಂದೇ ಕೇಳಿ ಕೀರುತಿಯಾ ಪ ಕ್ಷಿತಿಯೊಳು ಭರತ-ಖಂಡದ ದೇಶದ ಪತಿತರ ತಾಂಡೆಯದ ನಾಯಕನು ಮತಿ ಹೀನ ಕಾಮಕ್ರೋಧರಾಗಿಹ ಪುಂಡರು ಪಥ ನಡೆಗುಡಿಸರು ಅತಿಬಲರು 1 ಆದಿಲಿ ಅಜಮಿಳಾ ತಾಂಡ್ಯ ಹೋದ ಬಳಿಕಾ ಹಾದಿ ಮುಗ್ಗಿತಿ ಕಡೆ ಬಹುದಿನದೀ | ಸಾದರಲೆನಗನಿ ಅಭಯವ ಕೊಟ್ಟರ | ಭೇದಿಸಿ ಜನರನು ನೆರಹುವೆನು 2 ಏನಾರೆ ಗೋಣಿಗೆ ಭಾವದ ಲಹರೆ ಕÉೂಂಡು ಮಾನು ಭಾವರ ಪ್ಯಾಟಿ ಹೋಗಿಸುವುದು ಘನಗುರು ಮಹಿಪತಿ ನಂದನ ಸಾರಥೀ ದೀನ ವತ್ಸಲನೆಂಬ ಬಿರುದಹುದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಾನಿಯಾದ ಮೇಲೆ ಏನು ಬೆಂಬಲವಾದರಿನ್ನೇನಿನ್ನೇನು ಮಾನಹೋದ ಮೇಲೆ ದಿನವೆಷ್ಟು ಬಾಳಿದರಿನ್ನೇನಿನ್ನೇನು ಪ ಆಪತ್ತಿಗಿಲ್ಲದ ಆಪ್ತರೆಷ್ಟಿದ್ದರು ಇನ್ನೇನಿನ್ನೇನು ತಾ ಪರರಾಳದವಗ್ಹಣವು ಎಷ್ಟಿರ್ದರಿನ್ನೇನಿನ್ನೇನು ಕೋಪಿಷ್ಠನಾದವ ತಪವೆಷ್ಟು ಗೈಯಲು ಇನ್ನೇನಿನ್ನೇನು ಪಾಪಕ್ಕಂಜದನೀಗಧಿಕಾರರ್ವಿರಿನ್ನೇನಿನ್ನೇನು 1 ವನಿತೆಯ ಸೇರದ ಗಂಡ ಮನೆಯೊಳಿರ್ದರಿನ್ನೇನಿನ್ನೇನು ಒಣಗಲು ಪೈರಿಗೆ ಬಾರದ ಮಳೆ ತಾನಿನ್ನೇನಿನ್ನೇನು ಬನ್ನಬಡುವರ ಕÀಂಡು ಗಹಗಹಿಸಿ ನಕ್ಕರಿನ್ನೇನಿನ್ನೇನು ಮನ್ನಣಿಲ್ಲದ ಸಭೆ ಮಾನ್ಯರು ಪೊಕ್ಕರಿನ್ನೇನಿನ್ನೇನು 2 ಅವಮಾನ ಸಮಯಕ್ಕೆ ಒದಗದ ಗೆಳತನವಿನ್ನೇನಿನ್ನೇನು ಧವ ಸತ್ತ ಯುವತಿಯ ಕುರುಳು ಮಾರಿದರಿನ್ನೇನಿನ್ನೇನು ದಯದಾಕ್ಷಿಣ್ಯಲ್ಲದ ಅರಸನಾಳಿಕಿದ್ದರಿನ್ನೇನಿನ್ನೇನು ದಿವಮಣಿ ತನ್ನಯ ಕಿರಣಂಗಳ್ತೋರದಿರಲಿನ್ನೇನಿನ್ನೇನು 3 ಸತಿ ರೂಪಸ್ಥಳಾದರಿನ್ನೇನಿನ್ನೇನು ರೋಗ ಕಳೆಯದ ವೈದ್ಯರಾನಂಗರಿದ್ದರಿನ್ನೇನಿನ್ನೇನು ಆಗಿಬಾರದವರ ಬಾಗಿಲ ಕಾಯ್ದರಿನ್ನೇನಿನ್ನೇನು ಭೋಗಿವಿಷಕೆ ಗರುಡಮಂತ್ರನುವಾಗಲು ಇನ್ನೇನಿನ್ನೇನು 4 ಪ್ರೇಮದವರೆ ತನ್ನೊಳ್ ತಾಮಸರಾದಿರಿನ್ನೇನಿನ್ನೇನು ನೇಮಿಸಿದ್ಯೆಲ್ಲವು ಇದಿರಾಗಿ ಕೂತಮೇಲಿನ್ನೇನಿನ್ನೇನು ಕಾಮಧೇನುವೆ ಮನದಿ ಕಾಮಿತವೀಯದಿರೆ ಇನ್ನೇನಿನ್ನೇನು ಸ್ವಾಮಿ ಶ್ರೀರಾಮನ ಪ್ರೇಮ ಪಡೆಯದ ನರ ಇನ್ನೇನಿನ್ನೇನು 5
--------------
ರಾಮದಾಸರು
ಹಾಲು ಮಾರಲು ಪೋದೇವಮ್ಮ ಗೋಕುಲದೊಳ- ಗ್ಹಾಲು ಮಾರಲು ಪೋದೆವಮ್ಮ ಹಾಲು ಮಾರುವ ಧ್ವನಿ ಆಲಿಸಿ ಕೇಳುತ ಬಾಲಕೃಷ್ಣ ಬಹು ಲೀಲೆ ಮಾಡುತ ಬಂದಪ ಹಸಿರು ಜರದ ಸೀರೆಯನುಟ್ಟು ಕುಸುರಿಕಂಕಣ ಎಸೆವೊ ಹವಳದ ಹಿಂಬಳೆ ಕಟ್ಟು ಮೊಸರಿನ ಕುಂಭ ಕÀುಸುಮ ಮಲ್ಲಿಗೆಯ ಮುಡಿಯಲ್ಲಿಟ್ಟು ಶಶಿವದನೆಯರೆಲ್ಲ ಚೆಂದದಿ ಬರುತಿರೆ ಕುಸುಮನಾಭ ಮುಸುಗೆಳೆದು ಮೊಸರು ಸುರಿದ1 ಬಣ್ಣ ಬಣ್ಣದ ಸೀರೆಯನುಟ್ಟು ಮುತ್ತಿನ ಬಟ್ಟು ಹೊಳೆವೊ ಕಸ್ತೂರಿ ತಿಲಕವನಿಟ್ಟು ಹಾಲಿನಕುಂಭ ಸಣ್ಣಮಲ್ಲಿಗೆ ಮುಡಿಯಲಿಟ್ಟು ಚೆನ್ನಾರ ಚೆಲುವೇರು ಚೆಂದದಿ ಬರುತಿರೆ ಕಣ್ಣು ಸನ್ನೆಮಾಡಿ ಕರೆದು ಮುದ್ದಿಡುವ 2 ಮುಂದೆ ಮುಂದಾಗಿ ಹೋಗುತಿರಲು ಹಿಂದ್ಹಾಲಿನ್ಹರವಿ- ಗೊಂದೊಂದ್ಹರಳು ಮೀಟುತಿರಲು ಧಾರೆಗೆ ಬಾಯಾ- ನಂದದಿಂದೊಡ್ಡಿ ಕುಡಿಯುತಿರಲು ಸÀಂದಣಿಯೊಳು ನಾವು ಒಂದರಿಯದಲೆ ಬಂದಿಳುಹಲು ಬರೀ ಗಡಿಗೆ ಕಾಣಮ್ಮ 3 ಕಡಗೋಲಿಂದೊಡೆದÀು ಗಡಿಗೆಯನು ಬಡವರ ಬೆಣ್ಣೆ ಒಡಲಿಗೆ ಕದ್ದು ತಿಂಬುವುದೇನು ಕಂಡರೆನಗಂಡ ಬಡಿದÀರಿನ್ನೇನು ಮಾಡುವೆ ನೀನು ಗಡಿಬಿಡಿ ಮಾಡುತ ಕತ್ತಲ ಮನೆಯೊಳು ತÀುಡುಗನಂತೆ ತಿರುಗಾಡುವ ತಾನು 4 ಸಿಟ್ಟು ಮಾಡುವುದ್ಯಾತಕಮ್ಮ ಶ್ರೀ ರಮಣನ ಬಿಟ್ಟು ಬಾಹುವುದೆ ಲೇಸಮ್ಮ ಭೀಮೇಶಕೃಷ್ಣನ ಕಟ್ಟಿ ಹಾಕುವುದೆ ಲೇಸಮ್ಮ ಪಟ್ಟುಮಾಡಿ ಪರಹೆಂಗಳೇರೊಳು ಕ- ಣ್ಣಿಟ್ಟ ಮ್ಯಾಲೆ ಒಂದಿಷ್ಟಾದರು ಬಿಡ5
--------------
ಹರಪನಹಳ್ಳಿಭೀಮವ್ವ
ಹಿಡಿ ಸಾಧು ಸಂತರಾ ಸಂಗೆನ್ನ ಮನವೆ | ಹಿಡಿ ಸಾಧು ಸಂತರ ಸಂಗಾ | ಪೊಡವಿಲಿ ಭವಭಯ ಬಿಡಿಸಿ ಮುಕುಂದನ | ಅಡಿಗಳ ತೋರಿಸಿ ಕಾವುದು ಹಿಡಿಹಿಡಿ ಪ ಐದು ವರುಷ ಮಗನೈದಿದ ತಪದಲಿ | ಸಾಧು ಸಂಗನೇ ಹೊರೆಯಿತು | ಸಾಧಿಸಿ ಗರ್ಭದಲಿರೆ ಸಾಧು ಸಂಗ | ಪ್ರ | ಲ್ಹಾದನ ಯಚ್ಚರಿಸಿತು | ಹಾದಿಯೊಳಗ ರಾಹುಗಳ ರಾಯಾಗಾಗಲು | ಸಾಧು ಸಂಗುದ್ಧರಿಸಿತು | ಮೇದಿನಿಪತಿ ಪರೀಕ್ಷಿತಗೇಳು ದಿನದಲ್ಲಿ | ಬೋಧಿಸಿ ಸದ್ಗತಿ ದೋರಿತು ಹಿಡಿಹಿಡಿ 1 ವನಜಭವನ ಲೋಕದಲಿ ಸಾಧು ಸಂಗವು | ಸನಕಾದಿಕರ ಹೊರೆಯಿತು | ವನದಲಿ ಯದುರಾಯಗಾಗಲು ಸತ್ಸಂಗ | ಅನುಭವ ಸುಖ ದೊರೆಯಿತು | ವಿನಯದಿ ಸತ್ಸಂಗ ದೇಹೂತಿ ಮೊದಲಾದ | ಮುನಿಜನರುದ್ಧರಿಸಿತು | ರಣದಲ್ಲಿ ಅರ್ಜುನಗಾಗಲು ಸತ್ಸಂಗ | ಅನುಮಾನ ನೀಗಿಸಿ ಕಾಯಿತು ಹಿಡಿಹಿಡಿ 2 ಅಂದಿಗೆಂದಿಗೆ ಸಿದ್ಧ ಸಾಧಕರೆಲ್ಲಾ | ನಂದನ ಸುಖ ಬಿಡಿಸಿತು | ಹಿಂದಿನ ಕಥೆಗಳಿರತಿರಲಿನ್ನು ಸತ್ಸಂಗ | ಇಂದೆನ್ನ ಧನ್ಯಗೈಸಿತು | ಪಾದ ಪದುಮಸಂಗ | ನಂದನುದ್ಧರಿಸಿತು | ಯಂದೆಂದಿಗಗಲದೆ ಮುಕ್ತಿಗೆ ಹೊಣೆಯಾಗಿ | ಕುಂದದಾ ಸುಖಕೈಯ್ಯ ಗೊಟ್ಟಿತು ಹಿಡಿಹಿಡಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿಡಿಯಬೇಕು ಶ್ರೀ ಕೃಷ್ಣನ ತುಡುಗತನವ ಧ್ರುವ ಕಡಿಯಗುಡದೆ ವೈವನು ಕೆನಿಮೊಸರ ತುಡುಗತನವನು ಮಾಡುವ ಬಲು ಹೆಸರ ಅಡಗಿಹ ಠಾವನೆ ತಾನುಸರ ಮಾಡಿ ತಾ ಕುಸರ 1 ಬಿಡಬಾರದು ಕಣ್ಣಿಲೆ ಕಟ್ಟಿ ಬಿಡಿಸಿಕೊಂಬುವ ಇವ ಬಲು ಜಗಜೆಟ್ಟಿ ಅಡಗಿಸಿಕೊಬೇಕು ಘಟ್ಟಿವಿಡಿದು ಮನಮುಟ್ಟಿ 2 ಸಾಧಿಸಿ ಸದ್ಗುರುದಯ ಕರುಣದಲಿ ಭೇದಿಸಿ ಹಿಡಿಯೊ ಮಹಿಪತಿ ಸುಮನದಲಿ ಒದಗಿಟ್ಟುಕೊ ನೀ ಹೃದಯದಲಿ ಇದೇ ನೋಡನುದಿನಲಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಿಡಿಯೊರಂಗಯ್ಯ ಉಡುಗೊರೆಕೊಡುವೆವೊ ಕೃಷ್ಣಯ್ಯಭಿಡೆ ಬ್ಯಾಡೊ ಬೆತ್ತಲಿದ್ದಿಇದೇನು ಸಡಗರ ರಂಗಯ್ಯ ಪ. ನೀಲ ದೊಡ್ಯಾಣನಿಟ್ಟುಮ್ಯಾಲೆ ಉಂಗುರವು ಮೊದಲಾಗಿಮ್ಯಾಲೆ ಉಂಗುರವು ಮೊದಲಾಗಿ ತಂದೆವಬಾಲ ಕೃಷ್ಣಯ್ಯನ ಜನಕಗೆ ಉಡುಗೊರೆ 1 ಶೌರಿ ಕೃಷ್ಣಯ್ಯನ ಜನನಿಗೆಶೌರಿ ಕೃಷ್ಣಯ್ಯನ ಜನನಿ ದೇವಕಿಗೆಕುವರಿಯರು ಕೊಟ್ಟ ಉಡುಗೊರೆ2 ಹಲವು ಸೂರ್ಯರ ಬೆಳಕು ಗೆಲವೊ ಪಿತಾಂಬರ ಬೆಲೆಯಿಲ್ಲದಂಥ ಮುಕುಟವುಬೆಲೆಯಿಲ್ಲದಂಥ ಮುಕುಟ ಮುತ್ತಿನ ಹಾರ ಬಲರಾಮನಿಗೆ ಉಡುಗೊರೆ3 ಬಿಳಿ ಬಣ್ಣದ ಸೀರೆರನ್ನ ಮಾಣಿಕದಾಭರಣಹೊನ್ನೋಲೆ ಕೊಪ್ಪು ನಡುವಿಟ್ಟುಹೊನ್ನೋಲೆ ಕೊಪ್ಪು ನಡುವಿಟ್ಟು ತಂದೆವ ಕನ್ನೆ ರೇವತಿಗೆ ಉಡುಗೊರೆ 4 ಸಕಲಾತಿ ಸೀರೆ ದೋರೆ ಕಂಕಣ ಸರಿಗೆ ಹಾರ ಪದಕಗಳ ನಡುವಿಟ್ಟುಹಾರ ಪದಕಗಳ ನಡುವಿಟ್ಟು ರಾಮೇಶನನೂರು ಮಂದಿಗೆ ಉಡುಗೊರೆ 5
--------------
ಗಲಗಲಿಅವ್ವನವರು
ಹಿತದಿ ಜೀವಿಸು ಬಾಲೆ ಪತಿಯ ಪ ಸೇವಾನುಕೂಲೆ ಕ್ಷಿತಿಯೊಳಗೆ ಪತಿವ್ರತಾ ಧರ್ಮನಿರತಳೆನಿಸಿ ಬಹುಸುತರ ಪಡೆದು ಅ.ಪ ರತಿಪತಿಪಿತನಿಗೆ ಪ್ರತಿಮೆಗಳೆನಿಸುವ ಅತಿಥಿಗಳ ಸಂತತ ಸುಶೇವಾ- ರತಳು ಬಹು ಗುಣವತಿಯಳೆನಿಸುವ 1 ಗುರುಜನರಿಗೆ ಸದಾ ಶಿರಬಾಗಿ ನಡೆಯುತ ಹರುಷದಲಿ ಹರನರಸಿಯಳ ಪದ ಸರಸಿಜದಿ ಮನವಿರಿಸಿ ಪೂಜಿಸಿ 2 ಶರಣು ಜನಕೆ ಸುರತರುವೆನಿಪ ಕಾರ್ಪರ ಸಿರಿಮನೋಹರ ನರಹರಿಯ ಶುಭ ಚರಣಯುಗಲವ ಸ್ಮರಿಸುತನುದಿನ 3
--------------
ಕಾರ್ಪರ ನರಹರಿದಾಸರು
ಹಿತವಾವುದದೆ ಪಥದಿ ಸತತದೆನ್ನಿರಿಸೊ ಮತಿಹೀನನ್ಹಿತದ ಪಥವರಿಯೆ ಹರಿಯೆ ಪ ಅರಿವಿಗರಿವು ನೀನು ಮರೆಯಮಾನವ ನಾನು ಹರಿದಾಸರರಸ ನೀ ಚರಣದಾಸನು ನಾನು ದುರಿತ ಪರಿಹರ ನೀನು ದುರಿತಕಾರಿಯು ನಾನು ದುರಿತ ಪರಿಹರಿಸೆನ್ನ ಪೊರೆಯೊ ಸಿರಿದೊರೆಯೆ 1 ಜೀವಜೀವೇಶ ನೀ ಜೀವನಾಧಾರ ನೀ ಪಾವನೇಶ್ವರ ನೀ ಭಾವಿ ಭಕ್ತನು ನಾ ಭವರೋಗದ್ವೈದ್ಯ ನೀ ಭವದ ರೋಗಿಯು ನಾನು ಭವರೋಗ ಪರಿಹರಿಸಿ ಪಾವನನೆನಿಸಭವ 2 ನಾಶರಹಿತನು ನೀನು ನಾಶಕಾರಿಯು ನಾನು ನಾಶನದಿಂದುಳಿಸೆನ್ನ ಪೋಷಿಸಲಿ ಬೇಕೊ ಅನುದಿನ ಮೀಸಲಮನದಿಂದ ಶ್ರೀಶ ಶ್ರೀರಾಮ ನಿಮ್ಮ ದಾಸನೈ ನಾನು 3
--------------
ರಾಮದಾಸರು
ಹಿಂದಕೆ ತಿರುಗಿ ನೋಡು ಮನವೆ ಹೊಂದಿಕಿ ಹೊಲಬು ನಿನ್ನ ಸದ್ಗುರುವಿನ ಶ್ರೀಚರಣ ಧ್ರುವ ಹೊಲಬು ಮರೆದ್ಯೊ ಎಂದೆಂದಿಗೆ ಆಗಲದ ಸದ್ವಸ್ತು ಸಂಧಿಸಿಹುದು ಜರೆದ್ಯೊ ಕುಂದಿ ಕುಂದಿ ಕಳೆವ ವಿಷಯಕೆ ಸಂಧಿಸಿ ಬಾಯ್ದೆರದ್ಯೊ ಬಂದು ಬಂದು ಭವಪಾಶಕೆ ಸಿಲ್ಕಿ ಬೆಂದು ಒಡಲನೆ ಹೊರೆದ್ಯೊ 1 ತಿರುಗಿ ನೋಡಲು ತನ್ನೊಳಗೆ ತಾ ತೋರುತ ಅದೆ ಕೌತುಕ ಏರಿ ನೋಡಲು ಆರುಚಕ್ರ ಸುರಿಯುತಿದೆ ಸವಿಸುಖ ಪರಿಪರಿ ಭಾಸುತಿಯಹುದು ಪರಬ್ರಹ್ಮದ ಗತಿ ಹರುಷಾನೇಕ ಸದ್ಗುರುಮುಖ 2 ಸೆರಗವಿಡಿದು ಸಾರುವ ಶ್ರುತಿಯ ತಿರುಗಿನೋಡು ನಿನ್ನೊಳಗೆ ಮರಳಿ ಹುಟ್ಟಿ ಬಾರನೀ ಜನ್ಮಕೆ ಸ್ಥಿರಹೊಂದುವಿ ಗತಿಯೊಳಗೆ ಘನ ಬೆಳಗೆ ಘನ ತನ್ನೊಳಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಿರಿಯ ಅತ್ತಿಗೆಯರ ಗರವು ಕಂಡೆವೆಮೇರುಗಿರಿಗಿಂತ ಕೋಟಿ ಅಧಿಕವೆ ಸಖಿಯೆನಾ ಹ್ಯಾಂಗೆಸುಮ್ಮನಿರಲಿ ಪ. ಓಡಿ ಬಂದವಳು ಒಳಗೆ ಸೇರಿಮಾತಾಡಳು ನೋಡಳು ನಮ್ಮ ಅಣ್ಣನ ಮಡದಿಯುನೋಡಳು ನಮ್ಮ ಅಣ್ಣನು ಮಡದಿಗೆಮಾಡಿದ ಮೋಹ ತಲೆಗೇರಿ1 ಹೆಣ್ಣು ರುಕ್ಮಿಣಿ ತಮ್ಮ ಅಣ್ಣನವಂಚಿಸಿಓಡಿ ಬಂದು ಕಣ್ಣಿಲೆನೋಡಿ ಕರೆಯಳುಕಣ್ಣಿಲೆ ನೋಡಿ ಕರೆಯಳು ಇವಳು ನಮ್ಮಅಣ್ಣನ ಬಲವ ಹಿಡಕೊಂಡು2 ಇಂದು ರುಕ್ಮಿಣಿ ತಿಳಿದು ಬಂದಳು ಭಾಳೆ ವಿನಯದಿಬಂದಳು ಭಾಳೆ ವಿನಯದಿ ದ್ರೌಪತಿಯಆಲಿಂಗನವÀ ಮಾಡಿ ಕರೆದಳು 3 ಬಾರವ್ವ ಸುಭದ್ರೆ ಏರವ್ವ ಸೋಪಾನ ತೋರವ್ವ ನಿನ್ನ ವಚನವತೋರವ್ವ ನಿನ್ನ ವಚನವ ಎನುತಲಿ ದ್ವಾರದಿ ಕೈಯ್ಯ ಹಿಡಕೊಂಡು4 ಬಂದ ಬೀಗಿತ್ತಿಯರು ಚಂದದಿಂದ ಇದುರುಗೊಂಡು ಮಂದಹಾಸದಲೆ ನುಡಿಸುತಮಂದ ಹಾಸದಲೆ ನುಡಿಸುತ ರುಕ್ಮಿಣಿ ಬಂದವರು ಯಾರು ಮನೆಯೊಳು 5 ಸೊಂಡಿಲನಗರದ ಪಾಂಡು ಭೂಪನ ಸೊಸೆಗಂಡುಗಲಿ ಪಾರ್ಥನ ಆರ್ಧಾಂಗಿಗಂಡುಗಲಿ ಪಾರ್ಥನ ಆರ್ಧಾಂಗಿ ಸುಭದ್ರಾಮುಯ್ಯವ ಕೈಕೊಂಡು ಬ್ಯಾಗ ತಿರುಗಿಸು 6 ಹರದಿ ರುಕ್ಮಿಣಿ ದೇವಿ ಸೆರಗ ಹಿಡಿದು ದ್ರೌಪದಿಯದೊರೆಗಳ ಹೆಸರು ನಮಗ್ಹೇಳೆ ದೊರೆಗಳ ಹೆಸರು ನಮಗ್ಹೇಳೆ ರಾಮೇಶನ ಪರಮಭಕ್ತರಿಗೆ ನುಡಿದಳು 7
--------------
ಗಲಗಲಿಅವ್ವನವರು
ಹೀಗಾಗಲಿಲ್ಲ ಸುಖವು ಸಕಲರಿಗ್ಯಾಗುವದು ಪ ಮೃಗದ ನಾಭಿಯೊಳಗ ಕಸ್ತೂರಿಡದಕಿಂದ | ಉಗಮ ಪಶುನರಜಿವ್ಹದಲಹುದು 1 ಎರಡು ಕಾರಣದಿಂದ ಸಮ್ಮತವೆಲ್ಲರಿಗೆ | ಮೃಗ ಘಾತವ ನಿಲುವದು 2 ಮಹಿಪತಿ ಸುತ ಪ್ರಭು ದಾಸರಾ ಕೀರ್ತಿ ಚಂದ್ರಾ | ರಾಹು ಕಗ್ಗತ್ತಲೆಯಾ ಕುಂದುವದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು