ಒಟ್ಟು 1019 ಕಡೆಗಳಲ್ಲಿ , 86 ದಾಸರು , 930 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನಾ ನಿಮ್ಮ ದಾಸನಯ್ಯಾ ಸೀತಾರಾಮಾ ಪ ನಾನು ನಿಮ್ಮಯದಾಸನಹುದೊ ನೀನು ಯೀಜಗದೀಶನಹುದೊ ಭಾನು ಕೋಟಿ ಪ್ರಕಾಶನೇ ಸಂಗೀತ ಗಾನ ವಿನೋದರಂಗಾ 1 ಮತಿಹೀನ ನಾನಾದೆನೈ ಶಾಶ್ವತನಾ ಸ ದ್ಗತಿಯ ನೋಡದೆ ಹೋದೆನೈ ಹಿತವ ಪಾಲಿಸಬೇಕೊ ವೋ ಶ್ರೀ ಪತಿತಪಾವನ ರಂಗನಾಯಕ ಸತಿ ಶಿರೋಮಣಿ ಪರಮಸೀತಾ ಪತಿಯೆ ನಾನಿನ್ನ ಸುತನು ಕಾಣೈ 2 ಕಂದಯ್ಯಗಾರುಗತಿ ನಿನ್ನಯ ಚಲ್ವ ಚಂದಗಾದವೆ ಶೃತೀ ಹಿಂದೆ ಮಾಡಿದ ಕೊಲೆಗಳಂ ಬೆನ್ನ ಮುಂದೆ ಬಾರದಂತದ ಹರಿಯೋ ಇಂದಿರೇಶ ಮುಕುಂದ ಪರಮಾ ನಂದ ತುಲಸೀರಾಮ ದೇಶಿಕಾ 3
--------------
ಚನ್ನಪಟ್ಟಣದ ಅಹೋಬಲದಾಸರು
ನಾಕೇಶ ವಿನುತೆ | ರ ತ್ನಾಕರನ ತಾಯೆ ಪ ಗೋಕುಲದೊಳಿದ್ದು | ಆಕಳ ಕಾಯ್ದಗೆ ಲೋಕಪಾವನೆ ಸಿರಿಯೆ ಅ.ಪ ನೀರೊಳಗೆ ಇದ್ದು ನಗಭಾರ ಬೆನ್ನಲಿಪೊತ್ತು ಬೇರು ಮೆಲ್ಲುವನಿಗೆ | ಚೀರಿ ಕಂಭದಿ ಬಂದು | ಘೋರ ರೂಪದಿ ಬಲಿ ದ್ವಾರ ಕಾಯ್ದವಗೆ | ವೀರ ನೆನಿಸಿ ಪೆತ್ತ | ನಾರಿಯ ಶಿರವ ಸಂ ಹಾರಮಾಡಿದವಗೆ | ಭೂರುಹಚರ ಪರಿವಾರ ದೊಳಗಿದ್ದು ದಧಿ ಚೋರನೆನಿಸಿದವಗೆ 1 ಸಂದೇಹವಿಲ್ಲದೆ ವಸನ ತ್ಯಜಿಸುತ ಬಂದು ನಿಂದವನಿಗೆ | ಇಂದಿರಾಧವ ನಿನ್ನ ಹಿಂದೆ ಬಂದವನ ಅಂದು ಕೊಂಡವನಿಗೆ | ಕುಂದರದನೆ ನಿನ್ನ ಪೊಂದದೆ ಛಂದದಿ ಕಂದರ ಪಡೆದವಗೆ 2 ಜಾತಿಯನರಿಯದೆ ಶಬರಿಯ ಎಂಜಲ ಪ್ರೀತಿಲಿ ಉಂಡವಗೆ ಶ್ವೇತವಾಹನಜಗೆ ತಾ ಸೂತನೆಂದೆನಿಸುತ ಖ್ಯಾತಿ ಪಡೆದವಗೆ ನೀತಿ ಇಲ್ಲದೆಯ ಮಾತೆಯ ಅನುಜನ ಘಾತಿಸಿದಾತನಿಗೆ || ವಾತಾಶನವರ ತಲ್ಪದೊಳು ಮಲಗಿದ ಶಾಮಸುಂದರ ಧೊರೆಗೆ 3
--------------
ಶಾಮಸುಂದರ ವಿಠಲ
ನಾಗಶಯನನು ನಿನಗಾಗಿಯೆ ಬಂದಿಹೆÉ ಬಾಗಿಲ ತೆಗೆಯೆ ಭಾಮೆ ನೀ ಬಾಗಿಲ ತೆಗೆಯೆ ಭಾಮೆ ಪ. ಕೂಗುವ ನೀನ್ಯಾರೊ ಈಗ ಹೊತ್ತಲ್ಲ ಕೂಗಬೇಡ ಪೋಗೋ ನೀ ಕೂಗಬೇಡ ಪೋಗೋಅ.ಪ. ನಿಗಮ ಚೋರನ ಗೆದ್ದ ನೀರಜಾಕ್ಷನೆ ಭಾಮೆ ನಾ ನೀರಜಾಕ್ಷನೆ ಭಾಮೆ ನಾರುವ ಮೈಯನ್ನು ಎನ್ನಲ್ಲಿ ತೋರದೆ ಸಾರು ಸಾರು ನೀ ದೂರ ರಂಗ ಸಾರು ಸಾರು ನೀ ದೂರ 1 ಮಂದರ ಗಿರಿಯನು ಬೆನ್ನಲಿ ಪೊತ್ತ ಇಂದಿರೆಯರಸನೆ ಭಾಮೆ ನಾ- ನಿಂದಿರೆಯರಸನೆ ಭಾಮೆ ಇಂದು ನಿನಗೆ ತಕ್ಕ ಭಾರಗಳಿಲ್ಲವು ಸಿಂಧುವಿನೊಳು ನೀ ಪೋಗೈ ಕೃಷ್ಣ ಸಿಂಧುವಿನೊಳು ನೀ ಪೋಗೈ 2 ಧರಣಿಗೆ ಸುಖವನು ತೋರಿದ ಸೂಕರ ಪರಮಪುರುಷನೆ ಭಾಮೆ ನಾ ಪರಮ ಪುರುಷನೆ ಭಾಮೆ ವರಾಹರೂಪದ ನಿನ್ನ ಗುರುಗುರು ಶಬ್ದವ ಅರಿವಳಲ್ಲವೊ ನೀ ಪೋಗೈ ರಂಗ ಅರಿವಳಲ್ಲವೊ ನೀ ಪೋಗೈ 3 ಬಾಲನ ತಾಪವ ಕೋಪದಿ ತರಿದ ನಾರಸಿಂಹನೆ ಭಾಮೆ ನಾ ನಾರÀಸಿಂಹನೆ ಭಾಮೆ ಜ್ವಾಲೆಯ ವದನ ಕ್ರೂರ ಕಾರ್ಯಂಗಳ ಕೇಳಿ ಅಂಜುವಳಲ್ಲ ಪೋಗೈ ರಂಗ ಕೇಳಿ ಅಂಜುವಳಲ್ಲ ಪೋಗೈ 4 ವಾಸವನನುಜನೆ ವಾಮನರೂಪನೆ ನಾಶರಹಿತನೆ ಭಾಮೆ ನಾ ನಾಶರಹಿತನೆ ಭಾಮೆ ಕೂಸಿನ ರೂಪದಿ ಮೋಸವ ಮಾಡಿದಗೆ ದಾಸಿ[ಯೊ]ಬ್ಬಳು ಬೇಕೇ ರಂಗ ದಾಸಿ[ಯೊ]ಬ್ಬಳು ಬೇಕೇ 5 ತಾತನ ಮಾತಿಗೆ ತಾಯಿಯನಳಿದ ಖ್ಯಾತ ಭಾರ್ಗವನೆ ಭಾಮೆ ನಾ ಖ್ಯಾತ ಭಾರ್ಗವನೆ ಭಾಮೆ ಮಾತೆಯನಳಿದ ಘಾತಕ ನಿನಗೆ ದೂತಿಯೊಬ್ಬಳು ಬೇಕೇ ರಂಗ ದೂತಿಯೊಬ್ಬಳು ಬೇಕೇ 6 ದಶರಥನಂದನ ದಶಮುಖಭಂಜನ ಪಶುಪತಿವಂದ್ಯನೆ ಭಾಮೆ ನಾ ಪಶುಪತಿ ವಂದ್ಯನೆ ಭಾಮೆ ಹಸನಾದ ಏಕಪತ್ನೀವ್ರತದವಗೆ ಸುದತಿಯೊಬ್ಬಳು ಬೇಕೇ ರಂಗ ಸುದತಿಯೊಬ್ಬಳು ಬೇಕೇ 7 ಹದಿನಾರು ಸಾಸಿರ ನೂರೆಂಟು ಸುದತೇರ ಬದಿಯಲಿಟ್ಟವನೆ ಭಾಮೆ ನಾ ಬದಿಯಲಿಟ್ಟವನೆ ಭಾಮೆ ಹದನಕ್ಕೆ ಬಾರದ ಮಾರ್ಗಂಗಳ್ಯಾತಕ್ಕೆ ವದನ ಮುಚ್ಚಿಕೊಂಡು ಪೋಗೈ 8 ಬೌದ್ಧರಕುಲದಲ್ಲಿ ಹುಟ್ಟಿ ಅವರಂತೆ ಮುಗ್ಧರ ಮಾಡಿದೆ ಭಾಮೆ ನಾ ಮುಗ್ಧರ ಮಾಡಿದೆ ಭಾಮೆ ಶುದ್ಧಗುಣಗಳೆಲ್ಲ ಇದ್ದಲ್ಲಿಗೆಪೇಳೆ ವೃದ್ಧಳು ನಾನಲ್ಲ ಪೋಗೈ ರಂಗ ವೃದ್ಧಳು ನಾನಲ್ಲ ಪೋಗೈ 9 ವರ ತುರಗವನೇರಿ ಧರೆಯೆಲ್ಲ ಚರಿಸಿದ ದೊರೆವರ ನಾನೆ ಭಾಮೆ ಚರಿಸಿದ ದೊರೆವರ ನಾನೆ ತÀುರಗದ ಚಾಕರಿಯೊ[ಳಗಿರುವವನಿಗೆ] ತರುಣಿಯ ಭೋಗವು ಬೇಕೇ ರಂಗ ತರುಣಿಯ ಭೋಗವು ಬೇಕೇ 10 ಸರುವ ಪ್ರಾಣಿಗಳ ಉದರದೊಳಿಂಬಿಟ್ಟು ಶರಧಿಯೊಳ್ಮಲಗಿದವ ಭಾಮೆ ನಾ ಶರಧಿಯೊಳ್ಮಲಗಿದವ ಭಾಮೆ ದೊರೆ ಹಯವದನ ಚರಣಕ್ಕೆರಗುತ ತೆರೆದಳು ಬಾಗಿಲ ಭಾಮೆ ಆಗ ತೆರೆದಳು ಬಾಗಿಲ ಭಾಮೆ 11
--------------
ವಾದಿರಾಜ
ನಾರದ ಇಲ್ಲೆ ಬಂದಿಹ ಮುನಿ ಇಲ್ಲೇ ಬಂದಿಹಾಎಲ್ಲ ಲೋಕ ತಿರುಗಿ ಇಲ್ಲೆ ಬಂದಿಹಾ ಪ ಫುಲ್ಲನಾಭನ ಭಕ್ತರಲ್ಲಿ ಮಾಣಿಕ್ಯವೇಅ.ಪ. ಕರದಿ ವೀಣೆಯನ್ನು ಧರಿಸಿ ಶಿಷ್ಯರಿಂದಸುರಮುನಿಯು ಕೇಳಿ ಭರದಿ ಜಾಗರಕ್ಕೆ 1 ಹರಿಯ ದಿನದಿ ನಿನ್ನ ಚರಿತಾಮೃತವ ಪಾಡೆಹರಿಯ ನಿಲಯದಿ ಗಾನ ಭರದಿ ಮಾಡುತಲೆ 2 ನಂದ ಬಾಲಕನ ತಂದುತೋರುವನೇಇಂದು ನಿನ್ನ ತುತಿಪೆ ಇಂದಿರೇಶ ದಾಸಾ 3
--------------
ಇಂದಿರೇಶರು
ನಾರಾಯಣ ಕೃಷ್ಣನಂದ ಮುಕುಂದಾ ಪ ನಿನ್ನೆತ್ತಿ ಆಡಿಸಲು ನಂದ ಯಶೋದೆಯಲ್ಲಾ ನಿನ್ನೆಂತು ಸೇವಿಸುವೆ ಪೇಳು ಇಂದಿರೆರಮಣಾ1 ನಿನ್ನ ಸಹಪಾರಿ ಸುಧಾಮನಾನಲ್ಲಾ ನಿನ್ನೆಂತು ಸೇವಿಸಲೊ ಯದುಕುಲೋತ್ತಮನೇ2 ಅಗರು ಚಂದನ ಪರಿಮಳದ್ರವ್ಯಗಳನೆ ತಂದು ಅರ್ಪಿಸಲು ಕುಬುಜೆಯಲ್ಲಾ ಆದರದಿ ಪಾಲ ನೀಡೆ ವಿದುರನಲ್ಲಾ ಅನಂತ ಗುಣಪೂರ್ಣನೇ ಶ್ರೀ ಹರಿ3 ಗೋವುಪಾಲನು ತಂದು | ನಿನಗ ಭಿಷೇಕ ಮಾಡುವೆನೆ ವಿಧ ವಿಧ ಪುಷ್ಪಗಳ ತಂದು ಅರ್ಚಿಸಲು ಪೊಕ್ಕಳೊಳು ಪುಷ್ಪವನೆಪಡೆದಿರುವೆ ಹರಿಯೆ 4 ಕರಿರಾಜ ನಿನ್ನ ಕರೆಯೆ ಕರುಣದಿಂದ ಬಂದೆ ಪ್ರಹ್ಲಾದಗೋಲಿದು ಕಂಬದಲಿ ನಿಂತೇ ದ್ರೌಪದೀ ದೇವಿಗಕ್ಷಯಾಂಬರ ವಿತ್ತೆ ಅಂತೆ ಎನ್ನಪಾಲಿಸೊ ಲಕ್ಷ್ಮೀಕಾಂತನೇ 5 ಪರಿಪಯಲಿಭಕ್ತರ ಪಾಲಿಸಿದೆಯೊ ದೇವಾ ಪರಮ ದಯಾಳುವೆಂದೆನಿಸಿಕೊಂಡೇ ಪರಮ ಪುರುಷನು ನೀನು ಪಾಮರನು ನಾನಹುದೊ ದಾರಿ ಕಾಣದೆ ಇರುವೆ ದಯೆತೋರು ಮುರಾರಿ6 ಭಕ್ತವತ್ಸಲ ನೀನೆ ಭಯನಿವಾರಣ ನೀನೇ ಭಾಗವತಜನಪ್ರಿಯ ನೀನೆ ಸರ್ವರಕ್ಷಕ ನೀನೆ ಶ್ರೀ ವೇಂಕಟವಿಠಲಾ 7
--------------
ರಾಧಾಬಾಯಿ
ನಾರಾಯಣತೇ - ನಮೋ ನಮೋ ತಾರಕ ಪದಯುಗ - ನಮೋ ನಮೋ ಪ ಪಾರಾಶರತೇ ನಮೋ ನಮೋ ಗುಣ ವಾರಿಧಿ ಸುಖಮಯ - ನಮೋ ನಮೋ ಅ.ಪ ಇಂದಿರೆ ಮನುಕುಮುದೇಂದು ಪರಾವರ ನಂದಗುಣಾರ್ಣವ ನಮೋ ನಮೋ ಸಿಂಧುಶಯನ ಅರವಿಂದ ಸುನಾಭ ಮಹೇಂದ್ರ ವಿನಾಂತನೆ ನಮೋ ನಮೋ1 ಸುಂದರ ವೀ ಜಗ _ ತಂದೆ ಮಹಾಬಲ ಕುಂದು ವಿದೂರನೆ ನಮೋ ನಮೋ ಮಂದಜ ಭವಮನ ಸ್ಪಂದನ ಕರುಣಿಯೆ ನಮೋ ನಮೋ2 ಸುಂದರ ತಮ ಅರವಿಂದ ಸುಲೋಚನ ಕಂಧರ ಪಾಣಿಯ ನಮೋ ನಮೋ ನಂದನ ಕಂದ ಮುಕುಂದ ಜನಾರ್ಧನ ಛಂದಸು ವೇದ್ಯನೆ ನಮೋ ನಮೋ 3 ನಾಶರಹಿತ ಸ್ವತಂತ್ರಗುಣಾತ್ಮಕ ವಾಸುದೇವತೇ ನಮೋ ನಮೋ ಭೇಶಕಾಂತಿ ಮುಕ್ತೇಶ ಪರಾಮೃತ ವಿಶ್ವಜೂತಿ ಬಲ ನಮೋ ನಮೋ 4 ಶೇಷಶಯನ ವಾರಾಸಿಗೇಹ ಮಾಯೇಶ ಸನಾತನ ನಮೋನಮೋ ಓಸು ಜಾಡಾಜಡ ರಾಸಿ ಬಿಂಬಗುಣ ಭಾಸಕ ನಾಯಕ ನಮೋ ನಮೋ 5 ದೇವ ದೇವ ಜಗ ಪಾವನ ಚರಿತ ವಿಭಾವರಿ ಚರಹರ ನಮೋ ನಮೋ ಜೀವರ ಜೀವ ವಿಭಾವ ಸುನಾಯಕ ಭಾವುಕ ಜನಪ್ರಿಯ ನಮೋ ನಮೋ 6 ಅಂಡಜವಾಹನ ಪುಂಡರೀಕನುತ ಪಾಂಡುರಂಗತೇ ನಮೋ ನಮೋ ತೊಂಡವತ್ಸಲಾಖಂಡ ವಿಜಯ ಕೋದಂಡಪಾಣಿ ತೇ ನಮೋ ನಮೋ 7 ಭವ ಸಂಕಟ ನಾಶಕ ಶಂಕರ ಮಹಿಮನೆ ನಮೋ ನಮೋ ಸುಂಕ ಸುಲಿವ ಬಿರುದಾಂಕಿತ ಕುಟಿಲಾ ಟಂಕರಹಿತ ತೇ ನಮೊ ನಮೋ 8 ಪರಮೇಷ್ಠಿ ಜನಕ “ಶ್ರೀ ಕೃಷ್ಣವಿಠಲ” ವಿಭು ನಮೋ ನಮೋ ಅಷ್ಟಕರ್ತ ಶಿಪಿವಿಷ್ಠಸುನಾಮಕ ಧಿಟ್ಟ ನೃಸಿಂಹನೆ ನಮೋ ನಮೋ 9
--------------
ಕೃಷ್ಣವಿಠಲದಾಸರು
ನಾರಾಯಣನ ನೆನೆ ವರ್ಣಿಸು ಮನ್ನಿಸುಆರಾಧನೆಗಳ ಮಾಡುತ ಪಾಡುತನೀರಾಜನದಿಂದಲರ್ಚಿಸಿ ಮೆಚ್ಚಿಸಿ ವೇದಪಾರಾಯಣಪ್ರಿಯನÀ ಪ. ಅವನ ಶ್ರವಣ ಮನನ ನಿಧಿಧ್ಯಾಸನಶ್ರೀವಿಷ್ಣುವಿನ ಭಕ್ತಿಮಹಾಪ್ರಸಾದಂಗಳುಕೈವಲ್ಯ ಪದಕಿಕ್ಕಿದ ನಿಚ್ಚಣಿಕೆ ಎಂದು ಭಾವಜ್ಞರು ಪೇಳ್ವರೊಜೀವನ ಜವನಬಾಧೆಯ ತಪ್ಪಿಸಿಪಾವನ ವೈಕುಂಠಪುರದೊಳಗೆಂದೆಂದುಆವಾಸವನು ಮಾಡಿ ಸುಖಿಸಬೇಕಾದರೆ ಸೇವಿಸು ವೈಷ್ಣವರ 1 ಲೋಕದಿ ವರಂ ವರಯ ಭದ್ರಂತೆಋತೆ ಕೈವಲ್ಯಮಾತ್ಮನಃಏಕಮೇವೇಶ್ವÀರಸ್ತ ಸಾದ್ಭಗವಾನ್ ವಿಷ್ಣುರವ್ಯಯ ಎಂಬಾಈ ಕಲಿಯುಗದಲಿ ಬೇಕಾದ ಪುರಾಣಾದಿವಾಕುವಿವೇಕವ ಮನದಿ ವಿಚಾರಿಸಿಸ್ವೀಕರಿಸು ವೈಷ್ಣವ ಮತವ ಜೀವ ನಿರಾಕರಿಸನ್ಯಮತವ 2 ದ್ವಾರಾವತಿಯ ಗೋಪಿಚಂದನದಿಂದಶ್ರೀರÀಮಣನ ವರ ನಾಮವ ನೆನೆ-ದೆರಡಾರೂಧ್ರ್ವ ಪುಂಡ್ರಗಳ ಧರಿಸೆಂದೆಂದು ವೀರವೈಷ್ಣವಗುರುವಸೇರಿ ಸಂತಪ್ತ ಸುದರುಶನ ಶಂಖಧಾರಣವನು ಭುಜಯುಗದಲಿ ಮಾಡಿಮುರಾರಿಯ ಮಂತ್ರಗಳವರಿಂದ ಕೇಳುತ ಓರಂತೆ ಜಪಿಸುತ್ತಿರು 3 ಹರಿ ನಿರ್ಮಾಲ್ಯವ ಶಿರದಿ ಧರಿಸುತಿರುಹರಿ ನೈವೇದ್ಯವನೆ ಭುಂಜಿಸುತಿರುಇರುಳು ಹಗಲು ಹರಿಸ್ಮರಣೆಯ ಬಿಡದಿರು ದುರುಳರ ಕೂಡದಿರೊಹರಿಪದ ತೀರ್ಥದ ನೇಮವಬಿಡದಿರುಹರಿಪರದೇವತೆ ಎಂದರುಪುತಲಿರುಗುರುಮುಖದಿಂದ ಸಚ್ಛಾಸ್ತ್ರ ಪುರಾಣವ ನಿರುತದಿ ಕೇಳು 4 ತುಷ್ಟನಹನು ಎಳ್ಳಷ್ಟು ಮುಂದಿಟ್ಟರೆಅಷ್ಟಿಷ್ಟೆನ್ನದೆ ಸಕಲೇಷ್ಟಂಗಳಕೊಟ್ಟುಕಾಯ್ವನು ಶಕ್ರನಿಗೆ ತ್ರಿವಿಷ್ಟಪಪಟ್ಟವ ಕಟ್ಟಿದವದುಷ್ಟರನೊಲ್ಲ ವಿಶಿಷ್ಟರಿಗೊಲಿವ ಅ-ನಿಷ್ಟವ ತರಿದೊಟ್ಟುವ ಜಗಜಟ್ಟಿ ಅರಿಷ್ಟಮುಷ್ಟಿಕಾದ್ಯರÀ ಹುಡಿಗುಟ್ಟಿದ ವಿಠಲ ಬಹು ದಿಟ್ಟ 5 ಕಂದ ಬಾಯೆಂದರೆ ನಂದನಿಗೊಲಿದಿಹಕುಂದುಕೊರತೆ ಬಂದರೆ ನೊಂದುಕೊಳನುಇಂದಿರೆಯರಸ ಮುಕುಂದ ಮುಕುತಿಯ ನಂದನವನೀವ ದೇವಸಂದೇಹವಿಲ್ಲದೆ ಒಂದೆಮನದಿ ಸ-ನಂದನಾದಿಗಳು ಭಜಿಸಲು ಒಲಿವ ಉ-ಪೇಂದ್ರನ ಶುಭಗುಣಸಾಂದ್ರನ ಯದುಕುಲಚಂದ್ರನ ವಂದಿಸಿರೊ 6 ಓಡುವ ಅಡಗುವ ದೇವರೆ ಬಲ್ಲರುಬಾಡುವ ಬೇಡುವ ಮುನಿಗಳೆ ಬಲ್ಲರುನೋಡುವ ಕೂಡುವ ಮುಕುತರೆ ಬಲ್ಲರೊಡನಾಡುವ ರಮೆ ಬಲ್ಲಳುಊಡುವ ಪಾಡುವ ಯಶೋದೆ ಬಲ್ಲಳುಕಾಡುವ ಖಳರ ಮರ್ದಿಸಿ ಹುಡಿಗುಟ್ಟಿದನಾಡೊಳು ಕೇಡುಗಳೆವ [ಕೃಷ್ಣನಿಗೀಡೆಂದಾಡದಿರು] 7 ಆವನ ಪಕ್ಷವದಕೆದುರಿಲ್ಲಆವನ ಕುಕ್ಷಿಯೊಳಕ್ಕು ಜಗತ್ರಯಆವನು ಶಿಕ್ಷಿಪ ರಕ್ಷಿಪನು ಮತ್ತಾವನು ಪಾವನನುಆವನ ಶಿಕ್ಷೆಯ ಮಿಕ್ಕವರಿಲ್ಲ ಕೇ-ಳಾವನುಪೇಕ್ಷೆ ಕುಲಕ್ಷಯವೆನಿಪುದುಆವನುರುಕ್ರಮ ವಿಕ್ರಮನೆನಿಸಿದ ದೇವನಿಗಾವನೆಣೆ 8 ಪತಿ ಆವನ ಚರಣಸೇವಕನಾದಸುರರೊಳಗೀ ಹಯವದನಗಿನ್ನಾರನು ಸರಿಯೆಂದುಸುರುವೆನೊ 9
--------------
ವಾದಿರಾಜ
ನಾರಾಯಣಾ ಹರಿನಾರಾಯಣಾ ಕೃಷ್ಣಾ ನಾರಾಯಣಾ ಸ್ವಾಮಿ ನಾರಾಯಣಾ 1 ಅಚ್ಯುತಾನಂತ ಗೋವಿಂದ ಪರಬ್ರಹ್ಮ ಸಚ್ಚಿದಾನಂದ ಶ್ರೀ ನಾರಾಯಣಾ 2 ಭಕ್ತವತ್ಸಲ ದೇವಾ ಪಂಡವಾಪಕ್ಷಕಾ ಮುಕ್ತಿ ದಾಯಕ ಶ್ರೀ ನಾರಾಯಣಾ 3 ನಂದನಂದನ ಆನಂದ ಶಂಕರ ಪ್ರೀಯಾ ವಂದಿತಾ ಮುನಿಜನರ ನಾರಾಯಣ 4 ಇಂದಿರಾರಮಣ ಮುಕುಂದ ಮುರಹರಿ ಮಂದರಧರ ಹರಿನಾರಾಯಣ 5 ದ್ರೌಪದಿ ರಕ್ಷಕಾ ದಾನವಾ ಶಿಕ್ಷಕಾ ಕವಿಜನ ಪೋಷಕ ನಾರಾಯಣಾ 6 ರಾವಣ ಮರ್ದನಾ ಆಜೀವಲೋಚನಾ ಯದುಕುಲಾಬ್ದಿ ಚಂದ್ರ ನಾರಾಯಣಾ 7 ಅಕ್ರೂರವರದಾ ನಿಜಾನಂದ ಮೂರುತಿ ಚಕ್ರಧರ ಹರಿ ನಾರಾಯಣಾ 8 ಭವ ನಾಯಕ ವಿಷ್ಣು ನಾರಾಯಣಾ 9 ಗಂಗಜನಕ ದೇವೋತ್ತುಂಗ ಮಹಾನುಭಾವ ಶೃಂಗಾರ ಮೂರುತಿ ನಾರಾಯಣಾ 10 ಅಂಬುಜಾದಳ ನೇತ್ರಾ ಅಜಮಿಳಾರಕ್ಷಕ ಪತಿ ನಾರಾಯಣ 11 ಪಕ್ಷಿವಾಹನ ಜಗದೃಕ್ಷಾ ಸುಲಕ್ಷಣಾ ಲಕ್ಷ್ಮೀರಮಣ ಶ್ರೀ ನಾರಾಯಣಾ 12 ಕಮಲಸಂಭವಪಿತಾ ಕರುಣಪಯೋನಿಧಿ ಅಮಿತ ಪರಾಕ್ರಮ ನಾರಾಯಣಾ 13 ಮೂರ್ತಿ ಪೂಜಿತ ಸರ್ವತ್ರಾ ಪೂತನ ಸಂಹಾರ ನಾರಾಯಣಾ 14 ದಿನಕರಾ ಕುಲದೀಪಾ ದೀನ ದಯಾಪರ ಅನಿಮಿತ್ತ ಬಂಧು ದೇವಾ ನಾರಾಯಣಾ 15 ಕಾಲಿಯಾ ಮರ್ದನಾ ಗಂಗಾಧರಾರ್ಚಿತ ಕಲ್ಮಷರಹಿತ ಶ್ರೀನಾರಾಯಣಾ 16 ಪಾಲಿತಾ ಸುರಮುನಿ ಪಾಪವಿನಾಶನಾ ವಾಲಿ ಸಂಹಾರಕಾ ನಾರಾಯಣ 17 ದಶರಥನಂದನ ಧರಣಿರಕ್ಷಕಾ ಲವ ಕುಶಪಿತಾ ಶ್ರೀಹರಿನಾರಾಯಣಾ 18 ವೇದಗೋಚರ ನಿಗಮಾಗಮ ವೇದ್ಯ ಸು- ನಾದ ವಿನೋದ ಶ್ರೀನಾರಾಯಣ 19 ಕೋಟಿದರ್ಪಕ ರೂಪಲಾವಣ್ಯ ಭಕ್ತ ಸಂಕಟ ಪರಿಹಾರ ನಾರಾಯಣಾ 20 ವಾರಿಧಿ ಬಂಧನಾ ವನಚರ ಪಾಲನಾ ವೈಕುಂಠ ಶ್ರೀನಾರಾಯಣಾ 21 ಗಜರಾಜ ವರದಾ ಕಾಮಿತಫಲದಾಯಕಾ ಅಜಭವ ಪೂಜಿತಾ ನಾರಾಯಣಾ 22 ಸಾಧುಜನ ಪ್ರಿಯಾ ಸಾಮಗಾನವೇಣು ನಾದ ಲೋಲ ಕೃಷ್ಣ ನಾರಾಯಣಾ 23 ಯಾದವ ಕುಲದೀಪಾ ಯಶೋದಾನಂದನಾ ಯಜ್ಞರಕ್ಷಕಾ ಹರಿನಾರಾಯಣಾ 24 ಕೇಶವಾ ಮಾಧವಾ ಕೃಷ್ಣ ದಾಮೋದರಾ ವಾಸುದೇವ ಹರಿನಾರಾಯಣ 25 ಸುಂದರ ವಿಗ್ರಹಾಸುಗುಣ ವಿಲಾಸ ಆನಂದ ನಿಲಯಾ ಹರಿನಾರಾಯಣಾ 26 ವ್ಯಾಸಾಂಬರೀಷ ವಾಲ್ಮೀಕ ನಾರದಾ ಪಾರಾಶರ ವಂದಿತ ನಾರಾಯಣ 27 ದೋಷದೂರಾ ನಿರ್ದೋಷಾ ಪರಮಪುರಷ ಪೋಷಿತ ಜಗತ್ರಯ ನಾರಾಯಣಾ 28 ಮಕರಕುಂಡಲಧರಾ ಮಹಿಮಾ ಚರಾಚರಾ ಸಕಲಂತರ್ಯಾಮಿ ನಾರಾಯಣ 29 ಲೋಕನಾಯಕಾ ವಿಲಾಸ ಮೂರುತಿ ತ್ರೀಲೋಕ ವಂದ್ಯ ಹರಿನಾರಾಯಣಾ 30 ವಿಶ್ವವ್ಯಾಪಕಾ ಘನ ವಿಶ್ವರೂಪಾ ಮಹಾ ವಿಶ್ವೇಶ್ವರಾ ಹರಿನಾರಾಯಣಾ 31 ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ದೇವ ಸಕಲ ಕರ್ತ ನೀನೆ ನಾರಾಯಣಾ 32 ಆಪನ್ನ `ಹೆನ್ನೆ ವಿಠ್ಠಲ ' ನಾರಾಯಣಾ 33
--------------
ಹೆನ್ನೆರಂಗದಾಸರು
ನಾಳಿಗಿಲ್ಲವೆಂದು ವ್ಯರ್ಥ ಬಳಲ ಬೇಡಿರೋ |ಕಾಲ ಬೆಳಗು ನೆಚ್ಚಿ ಕೇಡು | ತಿಳಿದು ನೋಡಿರೋ ಪ ಅಂದಿಗಿದ್ದವರಿಗೆ ಸಾವು | ಇಂದಿಗಿದ್ದವರಿಗೆ ಸಾವು |ಇಂದಿರೇಶನ ಭಕುತರೆಂದೆಂದಿಗೆ ಸಾಯರೋ 1 ಆರಿಗಾರು ಕೊಡುವರಲ್ಲ | ಮೋರೆ ನೋಡಿ ನಗುವರಲ್ಲ |ಹರಿಗೆ ನಂಬಿದವರೇ ಪರಮ ಧೀರ ಧೂರ್ತರೋ 2 ಹೆತ್ತ ತಾಯಿ ಗರ್ಭದಲ್ಲಿ | ಹತ್ತು ತಿಂಗಳನ್ನಪಾನ- |ವಿತ್ತ ರುಕ್ಮಭೂಷಗೇತಕ್ಕೆ ಮರೆತಿರೋ 3
--------------
ರುಕ್ಮಾಂಗದರು
ನಿಗಮನುಳುಹಿಸಿ ನಗನೆಗದಿಹಗೆ ಜಗದೋದ್ದಾರ ಸುಭಗತ ಪ್ರಿಯಗೆ ಸುಗಮ ಧರಿ ಮೂರಡಿಯ ಮಾಡಿ ಸುಗೊಡಲ ಪಿಡಿದಿಹಗೆ ಬಗೆದು ಜಲಿಧಿಲಿ ಸೇತು ಗಟ್ಟಿದ ಖಗವಾಹನ ಯದುಕುಲ ಲಲಾಮಗೆ ಜಗಮೋಹಿಸುವ ಬೌದ್ಯಕಲ್ಕಿಗೆ ಶರಣು ಸುಶರಣು 1 ಸಿರಿಯನಾಳುವ ದೊರಿಯೆ ನಿನ್ನ ಮರೆಯ ಹೊಕ್ಕಿಹ ಚರಣಕಮಲ ಸರಿಯ ಬಂದ್ಹಾಂಗೆನ್ನ ಹೊರವದು ನಿನ್ನ ದಯ ಘನವು ಬಿರುದು ನಿನ್ನದು ಸಾರುತಿಹುದು ಕರಿಯ ವರದಾನಂದ ಮೂರುತಿ ಸುರಿಸಿ ಕರುಣಾಮೃತವುಗರೆವುದು ತರಳ ಮಹಿಪತಿಗೆ 2 ಮೂರ್ತಿ ಸದ್ಗುರು ನೆನೆವರನುದಿನ ಸಾರ್ಥ ಸದ್ಗುರು ಜನವನದೊಳನುಕೂಲ ಸದ್ಗುರು ತಾನು ತಾಂ ಎನಗೆ ಸಾರ ನೀಡುತ ತನುಮನದೊಳನುವಾಗಿ ಸಲಹುವ ದೀನಮಹಿಪತಿ ಸ್ವಾಮಿ ಭಾನುಕೋಟಿ ತೇಜನಿಗೆ 3 ಶರಣಜನಾರಾಭರಣವಾಗಿಹ ಮೂರ್ತಿ ಸದ್ಗುರು ತರಣೋಪಾಯದ ಸಾರಸುಖವಿರುವ ನಿಜದಾತ ಪರಮಪಾವನ ಗೈಸುತಿಹ ವರ ಶಿರೋಮಣಿ ಭಕ್ತವತ್ಸಲ ಚರಣ ಸ್ಮರಣಿಲೆ ಪೊರೆವದನುದಿನ ತರಳ ಮಹಿಪತಿಗೆ 4 ನೋಡದೆನ್ನವಗುಣದ ದೋಷವ ಮಾಡುವದು ಸದ್ಗುರು ದಯ ಘನ ನೀಡುವುದು ನಿಜ ಸಾರಸುಖವನು ಕರುಣದೊಲವಿಂದ ಬೇಡುವÀದು ನಿನ್ನಲ್ಲಿ ಪೂರಣ ಪ್ರೌಢ ಘನಗುರುಸಾರ್ವಭೌಮನೆ ಮೂಢ ಮಹಿಪತಿ ರಕ್ಷಿಸನುದಿನ ಸರ್ವಕಾಲದಲಿ 5 ಸ್ವಾಮಿ ಸದ್ಗುರು ಸಾರ್ವಭೌಮನೆ ಕಾಮ ಪೂರಿತ ಕಂಜನಾಭನೆ ಸಾಮ ಗಾಯನ ಪ್ರಿಯ ಸಲವ್ಹೆನ್ನಯ ಶ್ರೀ ನಿಧಿಯೆ ಮಾಮನೋಹರ ಮನ್ನಿಸೆನ್ನ ನೀ ನೇಮದಿಂದಲಿ ಹೊರೆವದನುದಿನ ಕಾಮಧೇನಾಗಿಹ ಕರುಣದಿ ದೀನಮಹಿಪತಿಗೆ 6 ಕುಂದ ನೋಡದೆ ಬಂದು ಸಲಹೆನ್ನಯ್ಯ ಪೂರ್ಣನೆ ಇಂದಿರಾವಲ್ಲಭನೆ ತಂದಿ ತಾಯಿ ನೀ ಎನಗೆ ಬಂಧು ಬಳಗೆಂದೆಂದು ನಿನ್ನನೆ ಹೊಂದಿ ಕೊಂಡಾಡುವ ಮೂಢ ನಾ ಬಂದ ಜನ್ಮವು ಚಂದಮಾಡು ನೀ ಕಂದ ಮಹಿಪತಿಗೆ 7 ದೀನಬಂದು ದಯಾಬ್ಧಿ ಸದ್ಗುರು ಭಾನುಕೋಟಿ ತೇಜಪೂರ್ಣನೆ ನ್ಯೂನ ನೋಡದೆ ಪಾಲಿಸೆನ್ನ ನೀ ಘನಕರುಣದಲಿ ನೀನೆ ತಾಯಿತಂದೆಗೆ ನೀನೆ ಬಂಧುಬಳಗ ಪೂರಣ ನೀನೆ ನೀನಾಗ್ಹೊರೆವದನುದಿನ ದೀನಮಹಿಪತಿಗೆ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿಜ ಭಕ್ತಿ ತೋರಿದನು ಜಗಕೆ ಕೃಷ್ಣ್ಣಾ ವಿಜಯನಾ ಸತಿಯರಿಬ್ಬರ ನೆವದಿ ಮುದದೀ ಪ. ಹಸ್ತಿವರದನು ತಂಗಿಯರ ನೋಡಬೇಕೆಂದು ಹಸ್ತಿನಾಪುರಕೆ ಬಂದ್ಹರುಷದಿಂದ ಚಿತ್ತ ನಿರ್ಮಲದಿ ಪಾಂಡವರು ಪೂಜೆಸೆ ನಲಿದು ಭಕ್ತಿ ಭಾವಕೆ ಮೆಚ್ಚಿ ದ್ರೌಪತಿಗೆ ವಲಿದೂ 1 ಅಣ್ಣನೆಂಬುವ ಭಾವದಲಿ ಸುಭದ್ರೆಯು ಇರಲು ಘನ್ನ ಮಹಿಮನು ಎಂದು ದ್ರೌಪತಿಯು ತಿಳಿದೂ ಸ್ವರ್ಣಗರ್ಭನ ಪಿತನು ಈರೇಳು ಜಗದೊಡೆಯ ಎನ್ನ ಭಾಗದ ದೈವ ಸಲಹೆಂದು ನುತಿಸೇ 2 ಅಂತರಂಗದ ಭಕ್ತಿ ಆನಂದಮಯ ತಿಳಿದು ಕಂತುಪಿತ ಕರಗಿದಾ ಮಮತೆ ಪ್ರೇಮದಲಿ ಶಾಂತಚಿತ್ತಳೆ ತಂಗಿ ದ್ರೌಪತಿಯೆ ಬಾರೆನುತ ಇಂತು ನುಡಿನುಡಿಗೆ ಆಡಲು ಕರುಣೆಯಿಂದ 3 ಕೇಳಿ ಇದನು ಸುಭದ್ರೆ ತಾಳಲಾರದೆ ಅಜ್ಞ ಬಾಲೆ ನಿಜ ತಂಗಿ ನಾನಿರಲು ಐವರಿಗೆ ಲೋಲೆಯಾದವಳೆ ಬಲು ಮೇಲಾದವಳೆ ಎಂದು ಬಾಲಚಂದ್ರನ ಪೋಲ್ವ ಮುಖ ಬಾಡಿಸಿರಿಲೂ 4 ಕಂಡು ಕಮಲಾಕಾಂತ ವಡಹುಟ್ಟಿದಳ ಬೆಂಡಾದ ತೆರವ ಪೇಳೆನಲು ಖತಿಯಿಂದಾ ಪುಂಡರೀಕಾಕ್ಷ ಎನ್ನುಳಿದು ನಿಜ ಭಾವದಲಿ ಕಂಡವರ ಸುತೆ ನಿನಗೆ ಮಿಗಿಲಾದಳೆನಲೂ 5 ಸಚ್ಚಿದಾನಂದ ವಿಗ್ರಹ ನಗುತ ನೆನೆದನೊಂ ದಚ್ಚರಿಯ ಕೌತುಕವ ತೋರ್ವೆನೆಂದೂ ಅಚ್ಛಿದ್ರ ಅಕ್ಲೇಶ ಆನಂದಮಯ ತಾನು ಕ್ಲೇಶ ಪಡುತ ವರಲಿದನೂ 6 ಬಾರಮ್ಮಾ ತಂಗಿ ಸುಭದ್ರೆ ಬೆರಳಲಿ ರಕ್ತ ಸೋರುತಿದೆ ಬೇಗೊಂದು ಚಿಂದಿ ತಾರೆ ತಾರೆನಲು ಗಡಬಡಿಸಿ ಮನೆಯಲ್ಲ ಹುಡುಕತಲಿ ಬಟ್ಟೆ ಕಂಗೆಡುತಾ 7 ಎತ್ತ ನೋಡಿದರತ್ತ ಪಟ್ಟೆ ಪೀತಾಂಬರವು ಕಂಚುಕ ಮಕುಟ ಮೆರೆಯೇ ಚಿತ್ರದಾ ವಸನ ಅರಮನೆಯಲ್ಲಿ ತುಂಬಿರಲು ಮತ್ತದರ ಮಮತೆ ಅಣ್ಣನಿಗೆ ಅಧಿಕವಾಗೆ 8 ಬರಲಿಲ್ಲ ಸುಭದ್ರೆ ಬಾರಮ್ಮ ದೌಪದಿಯೆ ವರ ತಂಗಿ ಬೇಗ ಕೊಡೆ ಹರಕು ಬಟ್ಟೆ ಸುರಿಯುತಿದೆ ರಕ್ತ ಬೆರಳಿಂದ ನೋಡೆಂದನಲು ಕಿರುನಗೆಯ ನಗುತ ಶರಗ್ಹರಿದು ಕಟ್ಟಿದಳೂ 9 ಬಂದಳಾ ವೇಳೆಯಲಿ ಸುಂದರಾಂಗಿ ಸುಭದ್ರೆ ನಿಂದು ನೋಡಿದಳೂ ದ್ರೌಪತಿಯ ಕೃತಿಯಾ ಮಂದಗಮನೆಯು ನಾಚಿ ಮೊಗವ ತಗ್ಗಿಸಿ ನಿಲಲು ಇಂದಿರೇಶನು ಇದರ ವಿವರ ತೋರಿದನು 10 ಬೆರಗಾದ ಪರಿತೋರಿ ಸಿರಿಕೃಷ್ಣ ಕೇಳಿದನು ಜರತಾರಿ ಸೆರಗ್ಹರಿದು ಕಿರುನಗೆಯ ನಕ್ಕಾ ಪರಿ ಏನೆ ಎಲೆ ತಂಗಿ ನರಳುವೋ ಎನ ನೋಡಿ ಪರಿಹಾಸ್ಯವಾಯಿತೆ ನಿನಗೆ ಎಂತೆಂದಾ 11 ಅಣ್ಣಯ್ಯ ನಿನಗೆ ಮಿಗಿಲಾಯಿತೇ ಈ ಶೆರಗು ಎನ್ನ ಅಭಿಮಾನ ಕಾಯುವ ದೈವ ನೀನೂ ಘನ್ನ ಮಹಿಮಾಂಗ ನಿನಗಿನ್ನು ಕ್ಲೇಶಗಳುಂಟೆ ನಿನ್ನ ಲೀಲೆಗೆ ಹರುಷ ಉಕ್ಕಿತೆಂದನಲೂ 12 ಹೇ ನಾರಿ ನಾನನಾಥರಿಗೆ ನಾಥನು ಮುಂದೆ ನೀನಿತ್ತ ವಸನ ಅಕ್ಷಯವಾಗಲೆಂದು ಶ್ರೀನಾಥ ದ್ರೌಪದಿ ಸುಭದ್ರೆಯ ಮನ್ನಿಸಿ ಮೆರೆದಜ್ಞಾನಿ ಜನಪ್ರಿಯನು ಗೋಪಾಲಕೃಷ್ಣವಿಠಲಾ13
--------------
ಅಂಬಾಬಾಯಿ
ನಿತ್ಯ ಇಂದಿರಾಧವನೊಲಿಮೆ | ಸಂಧಿಸುವುದೂ ಪ ಪರಮ ಪ್ರಿಯ ಗುರುವರ್ಯ ನರಸಿಪುರ ದಾಸರಪರಮ ಮಂಗಳ ನಾಮ ಸುಸ್ತವನದೀ ||ಉರುತರದ ಸಂಚಿತವು ಮಿಂಚಿನಂದದಿ ಕರೆಗುಗರುವ ವೇತಕೊ ಮನುಜ ಭಜಿಸೊ ನಿತ್ಯಾ 1 ಪಥ ದೊರಕಿತೆನಗೆ2 ಶ್ರೀದಾಸಗುರುತಿಲಕ | ಮೋದತೀರ್ಥರ ಪ್ರೀಯಭೇದಾಗಮಜ್ಞಾನಿ ಪ್ರಾಜ್ಞ ಮೌಳೀ ||ಆದರಿಸಿ ಉದ್ಧರಿಸು | ಮೋದಮಯ ರತ್ನನೇವಾದಿಗಜ ಪಂಚಾಸ್ಯ | ಬುಧಜನರ ಪ್ರೀಯಾ 3 ಜ್ಞಾನ ಪ್ರಕಾಶನೇ | ಜ್ಞಾನ ಮಾರ್ಗವ ತೋರ್ವಪೂರ್ಣೇಂದು ಮತ್ತುದಯ | ಘನಗುಣಜ್ಞಾ ||ಮೌನಿವರ ಕರುಣಿಸಿ | ನಿನ್ನಕಾಂಬುವ ಹದನನೀನೆ ತಿಳಿಸಲಿ ಬೇಕು | ಆ ನಮಿಪೆ ನಿನ್ನ 4 ಮುದ್ದು ಮೋಹನ ದಾಸ ಪದಕಮಲ ಭೃಂಗನೇಸಿದ್ಧಜನ ಸನ್ಮೌಳಿ | ತಿದ್ದಿ ಮನ್ಮನವಾಮಧ್ವಾಂತರಾತ್ಮಗುರು | ಗೋವಿಂದ ವಿಠಲನಮದ್ಗುರುವೆ ಮನ್ನನದಿ | ಸಿದ್ಧಿಸೋ ಜೀಯಾ 5
--------------
ಗುರುಗೋವಿಂದವಿಠಲರು
ನಿತ್ಯ ಕರ್ಮೇಂದ್ರಿಯ ಸೇವಿತನಿಗೆಮಂಗಳಂ ಉಡುಪಿನ ಶ್ರೀಕೃಷ್ಣನಿಗೆಪ. ನಂದನ ಕಂದನಿಗೆ ವೃಂದಾರಕೇಂದ್ರನಿಗೆಮಂದರ ಗಿರಿಧರಗೆ ಇಂದಿರಾಕಾಂತನಿಗೆನಂದ ಸುರವ್ರಾತನಿಗೆ ನಂದ ತೀ-ರ್ಥೇಂದ್ರ ಗೋವಿಂದ ಹರಿಗೆ1 ಮಕರ ಕುಂಡಲಧರ ರುಕುಮಿಣಿ ರಮಣನಿಗೆಅಕಳಂಕ ಮಹಿಮಗೆ ಅಕುಟಿಲನಿಗೆಶುಕವಾಹನನ ಪಿತಗೆ ಭಕುತವತ್ಸಲಗೆ ಅ-ಧಿಕ ಕೋಟಿರವಿತೇಜ ಮಕುಟ ದಿಟ್ಟನಿಗೆ 2 ಸರಸ ಮಂದಹಾಸನಿಗೆ ನರಹರಿ ರೂಪನಿಗೆವರ ಕೌಸ್ತುಭಹಾರ ಧರಿಸಿದವಗೆಕರುಣದಿ ಗೋಪಿಯರ ಧುರದಿ ರಕ್ಷಿಪನಿಗೆಸಿರಿಮುದ್ದು ಹಯವದನ ಮುರಹರನಿಗೆ 3
--------------
ವಾದಿರಾಜ
ನಿತ್ಯ ಶುಭಮಂಗಳಂ ಪ. ಮಂಗಳಂ ಶ್ರೀ ಭೂಮಿದೇವಿಯ ರಮಣಗೆ ಮಂಗಳಂ ಸದ್ಗುಣಗಣಪೂರ್ಣಗೆ ಮಂಗಳಂ ನಿರ್ದೋಷ ನಿಗಮತತಿ ವೇದ್ಯನಿಗೆ ಮಂಗಳಂ ಶ್ರೀ ವೇಂಕಟಾಧೀಶಗೆ 1 ವಂದಾರು ಸುರವೃಂದ ರುಚಿರಮಣಿಮಯ ಮಕುಟ ಸಂದೋಹ ಸಂಘಟಿತಪದಪೀಠಗೆ ಇಂದಿರಾಕರಕಮಲರಂಜಿತ ಧ್ವಜವಜ್ರ ಸಂದಿಪ್ಪ ಪಾದಾದಿ ಶುಭರೇಖಗೆ 2 ದಿವ್ಯನಖಮಣಿರಾಗರಂಜಿತಾಂಗುಲಿ ರಮ್ಯ ಭವ್ಯ ಮಂಗಳದಾಯಿ ಭಯಹಾರಿಗೆ ನವ್ಯ ಜಲರುಹಭಾಸ ಮುನಿಜನಾರ್ಚಿತ ಪುಣ್ಯ ಸೇವ್ಯ ಗಂಗಾಜನಕ ಶ್ರೀಚರಣಗೆ 3 ವರಕನಕವನಯುತ ಉರುನಿತಂಬದ್ವಯಗೆ ಸರಸಕೇಳೀವಾಸಸಜ್ಜಘನಕೆ ಸ್ಥಿರರತ್ನ ಮೇಖಲಾ ಸುಕಲಾಪ ಭೃತ್ಕಟಿಗೆ ಹೃ- ತ್ಸರಸಿಜಾಸನಜನಿತ ಶುಭನಾಭಿಗೆ 4 ಭುವನ ಪೂರಿತ ವಳಿತ್ರಯರಾಜದುದರಗೆ ವಿವಿಧ ಕುಸುಮಾಕಲಿತ ಸುಮಮಾಲಿಗೆ ಕೌಸ್ತುಭ ಶ್ರೀವತ್ಸ ನವಹಾರಕೃತ ರಮಾಶ್ರಿತ ವಕ್ಷಕೆ 5 ದೈತ್ಯಜನತಿಮಿರಹರ ವರದೀಪ್ತಿ ಚಕ್ರಕೆ ಶತ್ರುಭೀಷಣ ಘನಧ್ವನಿ ಶಂಖಕೆ ಗೋತ್ರÀಪತಿ(ತಿಯ?) ಸಮಬಲ ಪ್ರೋದ್ಭಾಸಿ ಸದ್ಗದೆಗೆ ಶ್ರಿತಜನ ಭಯಹಾರಿ ವರಪದ್ಮಕ್ಕೆ 6 ಕಂದರ ವದನಕೆ ನಾಸಿಕ ಕಾಲ ಸನ್ಮುಖಕಮಲಕೆ ಅರುವಾರಿಜನೇತ್ರ ಶೋಭನ ಭ್ರೂಯುಗಳ ವರ ಫಾಲತಿಲಕ ಕುಂತಳರಾಯಗೆ 7 ಕಮನೀಯ ಕರ್ಣಯುಗ ರಕ್ತಕುಂಡಲ ಲಲಿತ ವಿಮಲದರ್ಪಣ ಭಾಸ ಗಂಡಯುಗಕೆ ಸುಮಮಾಲಿಕಾಸ್ಥಿತಿತ ವೃತ್ತಕೇಶ ಸಂತತಿಗೆ ರಮಣೀಯ ಗುಣರಚಿತ ವರ ಮಕುಟಕೆ 8 ಉದಯಗಿರಿನಿಕರ ವಿಸ್ಫುರಿತ ಶುಭಗಾತ್ರಕೆ ಮದನಮದಗಜಶೀಲ ಲಾವಣ್ಯಕೆ ಸದಭೀಷ್ಟÀದಯ ಪೂರ್ಣಪ್ರಜ್ಞಮುನಿಸೇವ್ಯ ಪದ ಹಯವದನ ವೆಂಕಟರಮಣಗೆ 9
--------------
ವಾದಿರಾಜ