ಒಟ್ಟು 8036 ಕಡೆಗಳಲ್ಲಿ , 131 ದಾಸರು , 4635 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಿ ಬಂತಿದೆಕೋ ಮಹ ಮದ್ದಾನಿ ಬಂತಿದಕೋ| ಸ್ವಾನಂದದಲಿ ಮೆಲ್ಲಮೆಲ್ಲನೆ ಅಡಿಗಳ| ತಾನಿಡುವುತೊಲಿವುತಲಿ ನೋಡಮ್ಮಾ ಪ ಕರಿಯ ಬಣ್ಣದ ಲೊಪ್ಪತಾ | ಕಿರಿಗುದಲು | ಸಿರದಲೀ ಹೊಳೆವುತಾ | ಪೆರೆನೊಸಲೊಳು ಕೇಶರದ ಕಸ್ತೂರಿ ರೇಖೆ | ಕರುಣ ಭಾವದ ಕಂಗಳು ನೋಡಮ್ಮಾ 1 ಝಳ ಝಳಿಪಂಬರದೀ | ಝಣ ಝಣಲೆಂಬಾ | ವಲಿದು ತನ್ನಯನಿಜ ಶರಣರ ಅನುಮತ | ದಲಿ ನಲಿದಾಡುತಲೀ | ನೋಡಮ್ಮಾ 2 ದುಷ್ಟಜನರು ತೊಲಗೀ | ಯನುತ ಮುಂದ | ಶಿಷ್ಟಭಟಿರುವದಗೀ | ಅಟ್ಟಹಾಸದಿ ಬಂದರಿದೇ | ಮಹಿಪತಿ ಜನ | ಇಷ್ಟ ದೈವತ ಎನಿಪಾ ನೋಡಮ್ಮಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆನೆ ಬಂತಿದಕೋ ಮಹಾಮದ್ದಾನೆ ಬಂತಿದಕೋ ಸ್ವಾನಂದದಲಿ ಮೆಲ್ಲಮೆಲ್ಲನೆ ಅಡಿಗಳ ತಾನಿಡು ತೊಲವುತಲಿ ನೋಡಮ್ಮ ಧ್ರುವ ಕರಿಯ ಬಣ್ಣದಲೊಪ್ಪುತ ಕಿರಿಗೂದÀಲು ಶಿರದಲಿ ಹೊಳೆವುತ ಪೆರೆನೊಸಲೊಳು ಕೇಸರದ ಕಸ್ತೂರಿ ರೇಖೆ ಕರುಣ ಭಾವದ ಕಂಗಳು ನೋಡಮ್ಮ 1 ಝಳಝಳಿಪಂಬರದಿ ಫಣ ಫಣವೆಂಬ ಚೆಲುವ ಗಂಟÉಯರವದಿ ಒಲಿದು ತನ್ನಯ ನಿಜ ಶರಣರ ಅನುಮತ ದಲಿ ನಲಿದಾಡುತಲಿ ನೋಡಮ್ಮ 2 ದುಷ್ಟ ಜನರು ತೊಲಗಿ ಎನುತ ಮುಂದೆ ಶಿಷ್ಟ ಜನರು ಒದಗಿ ಅದ್ದಹಾಸದಿ ಬಂದರಿದೆ ಮಹಿಪತಿ ಜನ ಇಷ್ಟದೈವತ ಎನಿಪ ನೋಡಮ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆನೆ ಬಂದಿತಮ್ಮಾ ಮರಿ ಆನೆ ಬಂದಿತಮ್ಮಾ ಪ ವೆಂಕಟರಮಣನೆಂಬಾನೆ ಅ.ಪ. ಸಿರಿಯಿಲ್ಲದರಿಲಾರೆನೆಂದಾತುರದಲಿ ಧರೆಗಿಳಿದಾನೇ ವಲ್ಮೀಕ ದೊಳು ಅಡಗ್ಯಾನೇ1 ಯೋಚನೆ ಮಾಡ್ಯಾನೇ2 ಬೇಟೆನಾಡಲು ಹೊರಟ್ಯಾನೆ ದಿಟ್ಟಕುದುರೆಯನೇರ್ಯಾನೇ ಒಂದನು ಕಂಡ್ಯಾನೇ 3 ಪದ್ಮಾವತಿಯಳ ಕಂಡಾನೇ4 ಹಿಂದೆ ಸರಿದಾನೇ 5 ಬಕುಳೆ ಮಾತೆಯ ಕರೆದಾನೇ ಸಕಲವೃತ್ತಾಂತವ ತಿಳಿಸ್ಯಾನೇ ಬೇಗದಿ ಹೋಗಿ ಬಾರೆಂದಾನೇ ಮೌನದಿಂದಲಿ ಮಲಗ್ಯಾನೇ6 ಮಾತೆ ಬರುವುದ ಕಂಡಾನೇ | ಮುದ್ದದಿಂದಲಿ ಎದ್ದುಕುಳಿತಾನೇ ಮಂದಹಾಸದಿಂದ ನಲಿದಾನೇ7 ಬಂಧುಗಳೆಲ್ಲರ ಕರಿಸ್ಯಾನೇ ಮುಂದೆ ಮಾಡಿಕೊಂಡು ನಡೆಸ್ಯಾನೇ ಮದು ಮಗನಾಗಿ ನಿಂತಾನೆ | ಪದುಮಾವತಿ ಕೈ ಪಿಡಿದಾನೇ 8 ಜಯ ಜಯವೆಂದರು ಸುರಬ್ರಹ್ಮಾದಿಗಳು ವಾಣಿ-ಪಾರ್ವತಿಯರು ಜಯ ಜಯ ವೆಂದರುಗಗನದಿ ಅಮರರು ಮದುಮಳ ಮೇಲೆ ಪೂಮಳೆಗರೆದರು 9 ಪನ್ನಗ ಶಯನಗೆ ಮಂಗಳವೆನ್ನಿರೆ ಪರಮ ಕಲ್ಯಾಣಗೆ ಮಂಗಳವೆನ್ನಿರೆ ಶ್ರೀ ವೇಂಕಟ ವಿಠಲಗೆ ಮಂಗಳಾ ಜಯಮಂಗಳಾ10
--------------
ರಾಧಾಬಾಯಿ
ಆನೆ ಬಂದಿತಮ್ಮಾ ಮರಿಯಾನೆ ಬಂದಿತಮ್ಮಾ ಪ ಸ್ಮರಿಸಿರಿ ಸ್ಮರಿಸಿರಿ ಸರ್ವರ ರಕ್ಷಿಸುವ ಮುಖ್ಯ ಪ್ರಾಣನೆಂಬಾನೆಅ.ಪ ವಾಯು ಸುಪುತ್ರ ನೆಂದೆನಿಸ್ಯಾನೇ ವಾರಿಧಿಯನ್ನೇದಾಟ್ಯಾನೇ ಶಶಿಮುಖಿ ಸೀತೆಯ ಕಂಡಾನೇ ದಶಕಂಠನಗರ್ವ ಮುರಿದಾನೆ 1 ಪಂಚಪಾಂಡವರ ಮಧ್ಯಾನೆ ಪ್ರಚಂಡ ಪರಾಕ್ರಮಿ ಎನಿಸ್ಯಾನೇ ವಂಚಿಸಿ ಕೀಚಕನ ಕೊಂದಾನೆ ಪಾಂಚಾಲಿಗೆ ಪ್ರಿಯನಾದನೆ 2 ಮಧ್ವಮತವ ಉದ್ಧರಿಸ್ಯಾನೇ ವೆಂಕಟ ವಿಠಲನೆಂಬಾನೆ 3
--------------
ರಾಧಾಬಾಯಿ
ಆನೆ ಬಂದಿದೆ ಇದಿಗೊ ಮದ್ದಾನೆ ಪ ಜ್ಞಾನಿಗಳೊಳಾಡುವ ಮದ್ದಾನೆ ಅ ದೇವಕಿಯೊಳು ಪುಟ್ಟಿದಾನೆ - ವಸುದೇವನ ಪೆಸರೊಳೈತಂದ ಮದ್ದಾನೆಶ್ರೀ ವಾಸುದೇವನೆಂಬಾನೆ - ಗೋಪಿದೇವಿಯ ಗೃಹದೊಳಾಡುವ ಪುಟ್ಟಾನೆ 1 ನೀಲವರ್ಣದ ನಿಜದಾನೆ - ಸ್ವರ್ಣಮಾಲೆಗಳಿಟ್ಟು ಮೆರೆವ ಚಲುವಾನೆಶ್ರೀಲೋಲನೆನಿಪ ಪಟ್ಟದಾನೆ - ದುಷ್ಟಕಾಲಿಂಗನ ಪೆಡೆಯ ಮೆಟ್ಟಿ ತುಳಿದಾನೆ 2 ಬಾಲೇಂದು ಮುಖದ ಮರಿಯಾನೆ - ಕದ್ದುಪಾಲನ್ನು ಕುಡಿದ ಮರಿಯಾನೆಕೈಲಿ ಗಿರಿಯನೆತ್ತಿದಾನೆಕಾಳ್ಕಿಚ್ಚನ್ನು ನುಂಗಿದ ಪಟ್ಟದಾನೆ 3 ಧೇನುಕಾಸುರನ ಕೊಂದಾನೆತನಗೆ ಜೋಡಿಲ್ಲದಿಹ ನಿಜದಾನೆಮಾನವರಿಗೆಲ್ಲ ಸಿಲ್ಕದಾನೆಶೌನಕಾದಿಗಳೊಂದಿಗಿಪ್ಪಾನೆ 4 ಮಲ್ಲರೊಡನೆ ಗೆಲಿದಾನೆ - ಕಡುಖುಲ್ಲ ಕಂಸನ ಕೆಡಹಿದಾನೆ - ವಿದ್ಯೆ ಸಾಂದೀಪರಲಿ ಕಲಿತ ಮರಿಯಾನೆಸಲೆ ಭಕ್ತರ ಕಾವ ಪುಟ್ಟಾನೆ 5 ತರಳೆ ರುಕ್ಮಿಣಿಯ ತಂದಾನೆ - ಬಹುಕರುಣದಿಂ ಪಾಂಡವರ ಪೊರೆದಾನೆವರ ವೇಲಾಪುರದೊಳಿಪ್ಪಾನೆಸಿರಿಯಾದಿಕೇಶವನೆಂಬ ಮದ್ದಾನೆ 6
--------------
ಕನಕದಾಸ
ಆನೆಂತು ವರ್ಣಿಸಲಿ ಆ ದಿವ್ಯ ಮೂರುತಿಯನ ಪ ಆನಂದಮಯ ನಮ್ಮ ಆನಂದಕಂದನನು ಅ.ಪ. ಪಾದ ಆ ಜಾನು ಆ ನಡುವು ಆ ನಾಭಿ ಆ ವಕ್ಷ ಆ ಬಾಹು ಆ ಮುಖದ ಭಾವ ಆ ನೇತ್ರ ಆ ನಿಲುವು ಆ ಮಂದಹಾಸಗಳ ಆದ್ಯಂತ ಬಣ್ಣಿಸಲು ಆದಿಶೇಷಗೆ ವಶವೆ 1 ಆವನಿಗೆ ಸಮರÀಧಿಕರಿಲ್ಲವಾತಗಿನ್ನು ಆವಸಾಮ್ಯವ ಕೊಟ್ಟು ಬಣ್ಣಿಸುವೆನು ಆವನೀ ಜಗಕ್ಕೆಲ್ಲ ಆಧಾರವಾಗಿಹನೊ ಆವನಂಘ್ರಿಗಳ ಮುನಿಗಳಾವಾಗ ಚಿಂತಿಪರೊ 2 ಆವ ಮಂಗಳ ಮೂರ್ತಿಯಾ ಲಕ್ಷಣಗಳೆಲ್ಲ ಆವ ಶಾಸ್ತ್ರದೊಳುಂಟು ಅವನಿಯೊಳಗೆ ವಾಸುದೇವ ತಾನಾವಾಗಲೆಲ್ಲರೊಳು ಆವಾಸವಾಗಿಹನು ಆ ಕರಿಗಿರೀಶನು 3
--------------
ವರಾವಾಣಿರಾಮರಾಯದಾಸರು
ಆಪನ್ನ ಆರ್ತ ಜನರ ಕಾವ ನೀನೆ ಹರಿ ಎಂಬರು ಆಪತ್ತು ಬಂದರೂ ನಿನ್ನನೇ ನೆನೆವರು ಸಂಪತ್ತು ಬಂದರೂೀ ನೀ ನಿತ್ತೆ ಎಂಬರು ನಿನ್ನಾಪ್ತರು ಕೃಷ್ಣಾ ಎಂದೊದರುವರು ಅನ್ಯ ದೇವರ ನೆನೆಯರೊ ನಿನ್ನವರು ನಿನ್ನರೂಹ ಆ ಕರುಣಾ ಆ ಆಭರಣ ಆ ನಿನ್ನ ನಿಜರೂಪ ಆ ಪರಮ ಪುರುಷ ನಿನ ಕಂಡು ನಲಿವರು ನಿನ್ನಾಧೀನ ನಾನೆಂಬರು ನಿನ್ನ ಭಕ್ತರು ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಆಪೋಶನವ ಹಾಕೆ ಒ(ವೈ?) ಯ್ಯಾರಿ ಲೋಕಸುಂದರಿ ಶ್ರೀಪತಿಯ ಕರದಲ್ಲಿ ಘೃತಧಾರೆ ಲೋ- ಕಂಸಾರಿ ಕೈಯಲ್ಲಿ ತ್ರಿಧಾರೆ ಪ ಕೊಳಲನೂದುತಾಕಳನೆ ಕಾಯುತ್ತ ದಧಿಚೋರನಾಗಿ ಕಳಲಗಡಿಗೆಯನೊಡೆದು ಪೋಗುತ್ತ ಸೆಳೆದು ಗೋಪೇರ ಸೀರೆಗಳ ಮರಕೆ ಕಟ್ಟಿದ್ದ ಕರಕೆ 1 ವಾರಿಜಾಕ್ಷಗೆ ಒಲಿದು ನಲಿಯುತ್ತ ವರ ಮೋಹನಾಂಗಿ ಸಾರಸಮುಖಿ ಸರಸವಾಡುತ್ತ ಮಾರಜನಕನ ಮನವ ಮೋಹಿಸುತ ಮುಖನೋಡಿ ನಗುತ2 ನಂದನಂದನ ನರನ ಸಾರಥಿಯೊ ಭೀಮೇಶಕೃಷ್ಣ ಕೊಂಡಾಪೋಶನ ಕುಳಿತ ಸತಿಜೊತೆಗೆ ಚೆಂದದಿಂದಲಿ ಬೆಳಗಲಾರತಿಯ ಪಾಡಿ ಕೀರುತಿಯ 3
--------------
ಹರಪನಹಳ್ಳಿಭೀಮವ್ವ
ಆಭರಣಗಳರ್ಪಿಸುವೆನು ಶೋಭನ ಚರಿತಾ ಪ ಮಹಾಭಾಗ್ಯಪ್ರದೆ ನಿನ್ನರಸಿ ಯುಗುಣಭರಿತಾ ಅ.ಪ ಪದನೂಪುರಗಳು ಘಂಟೆ ನಿನದದುಡಿದಾರಾ ಪರಿಯಂತ ವಿಧವಿಧಕರ ಕಂಕಣ ಹತ್ತು ಬೆರಳಿಗುಂಗೂರಾ ಕೌಸ್ತುಭ ಶ್ರೀ ವತ್ಸದ ಶೃಂಗಾರಾ 1 ಕುಂಡಲ ಕರ್ಣದಲ್ಲಿ ತುಳಸಿಯ ವನಮಾಲೆ ಶೋಭಿಪುದು ಕಂಠದಲೀ ಥಳಥಳಿಪುದು ರವಿಯಂತೆ ಕಿರೀಟಶಿರದಲ್ಲಿ ಬೆಳಗುವ ತೇಜೋಮಯ ಗಾನಾವದು ಕೊಡಲಿ 2 ಸ್ಮರ ಶತ ಸುಂದರ ವಿಗ್ರಹ ಕರುಣಾಕರನೇ ಸರಸಿಜಭವ ಜನಕ ಪರಾತ್ಪರ ಮಾಧವನೆ ಶರದಿಂದುನಿಭಾನನ ಸರ್ವತ್ಪ್ರಕಾಶನೇ ಗುರುರಾಮ ವಿಠಲ ಹರಿ ಸರ್ವೋತ್ತಮನೇ 3
--------------
ಗುರುರಾಮವಿಠಲ
ಆರ ನಂಬುಗೆ ಜಗದೆನಗಿಲ್ಲ ಹರಿಯೆ ಕಾರುಣ್ಯನಿಧಿ ನೀನೆ ಗತಿಯೆನಗೆ ಪೊರೆಯೈ ಪ ತಿಂಡಿಗ್ಹಾಕುವತನಕ ಹೆಂಡತಿಯು ನುಡಿಯುವಳು ಗಂಡನೇ ಗತಿಯೆಂದು ಮಂಡೆಯನು ಬಾಗಿ ತಿಂಡಿತಪ್ಪಿದ ಕ್ಷಣದಿ ಕಂಡಕಂಡತೆ ಕೂಗಿ ಬಂಡುಮಾಡುವಳಿಹ್ಯದಿ ಷಂಡನೆಂದಭವ 1 ಬಂಧುಬಾಂಧವರೆಲ್ಲ ಸಂದುಬಿಡಿದಡಿಗಡಿಗೆ ವಂದಿಸಿ ನುಡಿಯುವರು ತಿಂದುಡುವನತಕ ಸಂಧಿಸಲು ಬಡತನವು ವಂದಿಸಿದವರೆ ಮನ ಬಂದಂತೆ ನಿಂದಿಪರು ಕುಂದ್ಹೊರಿಸಿ ದೇವ 2 ಭೂಮಿಯ ಜನರೆಲ್ಲ ಕ್ಷೇಮ ನೀ ಕೊಟ್ಟಿರಲು ತಾಮಸವ ಬಿಟ್ಟು ಬಲು ಪ್ರೇಮ ಬಳಸುವರು ಸ್ವಾಮಿ ಶ್ರೀರಾಮ ನಿಮ್ಮ ಪ್ರೇಮ ತುಸು ತಪ್ಪಿದರೆ ಭೂಮಿಯೊಳಗಿನ ಕೇಡು ನಾ ಸ್ಮರಿಸಲಾರೆ 3
--------------
ರಾಮದಾಸರು
ಆರಗೊಡವೆ ನಮಗಿನ್ಯಾಕೊ ಹರಿ ಅ ಪಾರ ಮಹಿಮನ ದಯವೊಂದೆ ಸಾಕೊ ಪ ಮಾರಿಗೀರಾಗಲಿ ದೂರಿ ಸಕಲರೆನ್ನ ಸಾರಸಾಕ್ಷನ ಬಲವೊಂದೆ ಬೇಕೊ ಅ.ಪ ಜಗಜನ ಕಂಡಂತೆ ಬೊಗಳಲಿ ಬೊಗಳಿ ಬೊಗಳಿ ನಮ್ಮ ಶಪ್ಪರಿಯಲಿ ನಿಗಮಾಗಮನುತ ಜಗಜೀವೇಶನ ಸೊಗಸಿನ ಕೃಪೆಯೊಂದೆ ನಮಗಿರಲಿ 1 ದುರುಳ ಕೃತ್ತಿಮನೆಂದು ಜರಿಯಲಿ ಜರಿಜರಿದು ಮರೆದ್ಹೋಗಲಿ ಚರಣದಂತಿ ಪರಮ ಪಾವನಂಘ್ರಿ ಕರುಣಾಮೃತವೊಂದೆ ನಮಗಿರಲಿ 2 ಕ್ಷೇಮ ತುಸು ಕಾಣದಳಿದ್ಹೋಗಲಿ ಕಾಮಜನಕ ನಮ್ಮ ಸ್ವಾಮಿ ಶ್ರೀರಾಮನ ನಾಮಧ್ಯಾನವೊಂದೇ ನಮಗಿರಲಿ 3
--------------
ರಾಮದಾಸರು
ಆರತಿ ಗುರುರಾಯಾ :ಸ್ವಾನಂದ ಚಂದ್ರೋದಯಾ ದೋರಲು ಭವತಾಪಾ :ಹೋಯಿತು ನಿಶ್ಚಯಾ ಪ ಚಿತ್ತಚಕೋರಕಿಂದು :ಬೋಧಾಮೃತವನುಣಿಸೀ ಮತ್ತಹೃದಯನೈದಿಲಿಗೆ :ಸುಖವಿತ್ತೆ ಕರುಣಿಸಿ 1 ಜ್ಞಾನಚಂದ್ರ ಕಾಂತಿಯಲ್ಲಿ :ರಾಮರಸವಿಸೀ ತಾನೇಪದ ರೂಪದಿಂದಾ :ನೆಲಿಸಿತು ಧನ್ಯಗೈಸಿ 2 ಶರಧಿ :ಹೊರಚೆಲ್ಲಿ ತೈಯಿಂದು ತಂದೆ ಮಹಿಪತಿ ಸ್ವಾಮಿ :ಕಂದನುದ್ಧರಿಸೆಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರತಿ ಬೆಳಗಿರೆ ಶಾರದೆಗೆ | ಗುಣ ವಾರಿಧಿ ಕರುಣಾ ನೀರಧಿಗೆ ಪ ನತ ಗೀ- ಜಾಣೆಗೆ ತ್ರಿಭುವನ ತ್ರಾಣೆಗೆ ಜಪಸರ ಧಾ- ಶುಭ ರೂಪಿಣಿಗೆ 1 ಶಾರದ ಚಂದ್ರನ ಕಿರಣನ ಪೋಲುವ ಚಾರು ಶುಕ್ಲಾಂಬರದಿಂದಲಿ ಪೊಳೆವ ಹಾರ ಮಕುಟ ಪದ ನೂಪುರ ಕಂಕಣ ಅಘ ಹಾರಿಣಿಗೆ 2 ಸಕಲಾಗಮಗಳನಾಂತಿಹ ಗಣಿಗೆ ನಿಖಿಲ ಕಲೆಗಳನು ಕಾದಿಹ ಫಣಿಗೆ ಭಕುತರ ಪಾಲಿನ ಚಿಂತಾಮಣಿಗೆ ಶ್ರೀಕಾಂತನಾತ್ಮಜನರಗಿಣಿಗೆ 3
--------------
ಲಕ್ಷ್ಮೀನಾರಯಣರಾಯರು
ಆರತಿಯ ಬೆಳಗಬನ್ನಿರೆ ಆರತಿಯ ಬೆಳಗಬನ್ನಿರೆ ಪಾರ್ವತಿದೇವಿಯರಿಗೆ ಕೀರುತಿ ಕೊಂಡಾಡುತಲಿ ಪರ್ವತರಾಜನ ಮಗಳಿಗೆ ಆರತಿಯ ಬೆಳಗಬನ್ನಿರೆ ಪ ವಾಲೆ ಕಠಾಣಿ ಚಿಂತಾಕು ಮ್ಯಾಲೆ ಸರಿಗೆ ಸರ ಮುತ್ತುಗಳು ಕಾಲಗೆಜ್ಜೆಸರಪಳಿನಿಟ್ಟ ಫಾಲಾಕ್ಷನ ಮಡದಿಗೆ 1 ರಂಗುಮಾಣಿಕ್ಯದ ಹೆರಳು ಬಂಗಾರದಾಭರಣವಿಟ್ಟು ದುಂಡುಮಲ್ಲಿಗೆ ಮುಡಿದು ಕುಳಿತ ಮಂಗಳಾದೇವಿಯರಿಗೆ 2 ದುಂಡುಮುತ್ತಿನ ಮುಕುರ್ಯವು ಚಂದ್ರ ಬಾಳ್ಯಬುಗುಡಿನಿಟ್ಟು ದುಂಡು ಹರಡಿ ಕಂಕಣಕಮಲ ದ್ವಾರ್ಯನಿಟ್ಟ ವಾರಿಜಾಕ್ಷಿಗೆ 3 ಜಾತಿಮಾಣಿಕ್ಯದ ವಂಕಿ ನೂತನಾದ ನಾಗಮುರಿಗೆ ಪ್ರೀತಿಯಲಿ ಪೀತಾಂಬ್ರನುಟ್ಟು ಜ್ಯೋತಿಯಂತೆ ಹೊಳೆವೊ ಗೌರಿಗೆ 4 ನೀಲವರ್ಣ ಭೀಮೇಶಕೃಷ್ಣ ಧ್ಯಾನಮಾಡುತ ಕೃಷ್ಣನ ನೀಲಕಂಠನ ಸಹಿತ ಕುಳಿತ್ವಿಶಾಲನೇತ್ರೆ ಪಾರ್ವತಿಗೆ5
--------------
ಹರಪನಹಳ್ಳಿಭೀಮವ್ವ
ಆರತಿಯನು ನಾನು ಬೆಳಗುವೆ ನಮ್ಮಪ್ರೇರಿಪ ಪ್ರಭುವ ಪಡೆವೆನೆಂಬ ಪವಿಷಯಂಗಳಾರತಿ ವಿಸ್ತರಿಸಲು ಬಹುವಿಷಮಮಾರ್ಗವ ಕಾಬ ವೊಡಲಿತ್ತವುವಿಷವಾುತಾ ಸುಖ ವಿವಿಧ ಭೋಗಂಗಳುಮೃಷೆಯೆಂದು ಹರಿಯನ್ನೆ ಮಚ್ಚಿಕೊಂಬ 1ಲೋಕಂಗಳೈದಲು ಲೋಪವಾದವುಯೆಲ್ಲಸಾಕಾುತವರಲ್ಲಿ ಸಂಚರಿಸಿಈ ಕುಹಕವ ನಂಬಲೆಲ್ಲವು ಬಹು ದುಃಖಶ್ರೀಕಾಂತನ ಕೂಡಿ ಸುಖವಿರುವ 2ಹದಿನಾಲ್ಕು ಕರಣದ ಹವಣಿನಾರತಿಯಲ್ಲಿಹುದುಗಿಸಿ ಜ್ಞಾನದ ಹೊಸ ದೀಪವಹೃದಯಕಮಲದಲ್ಲಿ ಹೊಂದಿಹ ತಿರುಪತಿಸದನ ವೆಂಕಟಗೆತ್ತಿ ಸುಖಿಯಾಗುವ 3ಓಂ ಶಿಶುಪಾಲ ಶಿರಶ್ಛೇತ್ರೇ ನಮಃ
--------------
ತಿಮ್ಮಪ್ಪದಾಸರು