ಒಟ್ಟು 528 ಕಡೆಗಳಲ್ಲಿ , 78 ದಾಸರು , 463 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಜ್ಞಾನ ಸಮುದ್ರ ಮಧ್ವಮುನಿರಾಯ || ನಿವಾರಿಸಿದ | ಮಧ್ವ ಮುನಿರಾಯಾ ಪ ಸಂಕರನಾದಾ | ಮಧ್ವರಾಯಾ || ಗುಣಗಳಲ್ಲ ಕೆಡಿಸಿದಾ | ಮಧ್ವರಾಯಾ 1 ಹರಿಯಿಲ್ಲ ಗುರುವಿಲ್ಲ ಹರನು ಪುಸಿ ಎಂದು || ಮಧ್ವ | ಅವ | ಪರದೈವ ತಾನೆ ಎಂದು ಧರೆಯೊಳು ತಿರುಗಿದ | ಮಧ್ವ 2 ಮಿಥ್ಯ ಅಹಂ ಬ್ರಹ್ಮ ಜಗಕೆಂದ | ಮಧ್ವ || ಅವ | ಸತಿ ಒಂದೆ ಎಂದು ಮಧ್ವ 3 ಜಾತಿಧರ್ಮವೆಲ್ಲ ತೊರೆದು | ಜಾತಿ ಸಂಕರವಾಗೆ ಮಧ್ವ || ಮಿಥ್ಯ ಪಾತಕವೆ ತುಂಬಿತು | ಮಧ್ವರಾಯ 4 ಪೇಳಲು | ಮಧ್ವ ||ಬೊಮ್ಮ | ಪರಿಹರ ಕಾಣದೆ ಹರಿಗೆ ಬಿನ್ನೈಸಿದ | ಮಧ್ವ5 ಜಯ ತನಯನ್ನ ಕರೆದು | ದಯದಿಂದ ಪೇಳಲು | ಮಧ್ವ || ವೇಗ | ಪ್ರಿಯದಲ್ಲಿ ಬಂದು ಮಧ್ಯಗೇಹನಲ್ಲಿ ಅವತರಿಸಿದ | ಮಧ್ವ 6 ಮುಖ್ಯ ಶಿಷ್ಯ ತಿಪ್ಪಣ್ಣ ಅವಧಾನಿ ಸೋತು ವೈಷ್ಣವನಾಗೆ | ಮಧ್ವ || ಸಂಕರ ಮೂಲಿಯ ಪೊಕ್ಕ | ಮಧ್ವ 7 ಶುಂಠ ಮಿಕ್ಕ ರಕ್ಕಸರ ಗಂಟಲ ಮುರಿದುವಟ್ಟಿ | ಮಧ್ವ || ಉಂಟು ಮಾಡಿದನು ವೈಕುಂಠ ಪತಿದೇವವೆಂದು | ಮಧ್ವ8 ಮರುತ ಮತ ಉಧ್ಧರಿಸಿ | ಗುರುಕುಲ ತಿಲಕನಾದ | ಮಧ್ವ ||ಶಿರಿ ವಿಜಯವಿಠ್ಠಲನ್ನ ಚರಣಾಬ್ಜ ಭೃಂಗನಾದ ಮಧ್ವ 9
--------------
ವಿಜಯದಾಸ
ಸುಮ್ಮನೆ ದೂರುವರೇ ಅಮ್ಮಯ್ಯ ಎನ್ನ ಸುಮ್ಮನೆ ದೂರುವರೇ ಪ ತಮ್ಮಯ ಸರಸಕೆ ಸಮ್ಮತಿ ಕೊಡದಿರೆ ಕಣ್ಮಣಿಯರುಗಳೆಲ್ಲಾ ಅ.ಪ ಕ್ಷೀರಚೋರನೆಂಬೋರೇ ಅಮ್ಮಯ್ಯ ಇವರ ಕೋರಿಕೆ ನಡೆಸದಿರೆ ಕ್ಷೀರ ಸಾಗರಶಾಯಿ ನಾರಾಯಣ ನಾನೆ ಕ್ಷೀರಕೆ ಬಡತನವೇ ಅಮ್ಮಯ್ಯ 1 ತುಂಟನೆಂಬೋರೆ ಎನ್ನ ಅಮ್ಮಯ್ಯ ಇವರ ತಂಟೆ ಏತಕೆ ಎನಗೆ ತುಂಟತನದಿ ಪಾಪ ಗಂಟು ಹೋಯಿತೆ ವೈ ಕುಂಠಪತಿಯೇ ಸಾಕ್ಷಿ ಅಮ್ಮಯ್ಯ 2 ಮಾಯಗಾರನೆಂಬೋರೆ ಅಮ್ಮಯ್ಯ ಎನ್ನ ತೋಯಜಾಕ್ಷಿಯರೆಲ್ಲ ಮಾಯಕೆ ಸಿಲುಕದೆ ಮಾಯೆಗೊಡೆಯನಾಗೆ ಜಾಯಮಾನವಲ್ಲವೇ ಅಮ್ಮಯ್ಯ 3 ಯಾರಿಂದೆನಗೇನೆ ಅಮ್ಮಯ್ಯ ಎನ್ನ ಜಾರನೆಂಬೋರೆ ಎಲ್ಲಾ ಯಾರು ಒಪ್ಪುವರೇ ಕುಮಾರನಲ್ಲವೆ ನಾನು ಮಾರಜನಕ ನಾನೆ ಅಮ್ಮಯ್ಯ 4 ಎನ್ನ ಮಾತನು ಕೇಳೆ ಅಮ್ಮಯ್ಯ ಈಗ ಕನ್ನೆಯರಿಗೆ ಪೇಳೆ ಇನ್ನಾದರು ಇವರು ಅನ್ಯಾಯವ ಬಿಟ್ಟು ಎನ್ನನು ಪೊಗಳಿದರೆ ಅಮ್ಮಯ್ಯ ಪ್ರಸನ್ನನಾಗುವೆನೆಂದು 5
--------------
ವಿದ್ಯಾಪ್ರಸನ್ನತೀರ್ಥರು
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಭೂರಮಣಗೆ ಸುವ್ವಿ ಸುವ್ವಿ ಎಂದು ಪಾಡಿ ಸಜ್ಜನರೆಲ್ಲ ಕೇಳಿ ಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ವರ ವಾಣಿರಮಣಗೆ ಶರಣೆಂಬೆ ಸುವ್ವಿ ವರ ವಾಣಿರಮಣಗೆ ಶರಣೆಂದು ಪೇಳಿದ ಗುರುವಾದಿರಾಜೇಂದ್ರನ ಕೃತಿಯೆಂದು ಸುವ್ವಿ 1 ¥ಕ್ಕಿವಾಹನ್ನ ಜಗಕ್ಕೆ ಮೋಹನ್ನ ರಕ್ಕಸದಾಹನ್ನನಿವ ಸುವ್ವಿ ರಕ್ಕಸದಾಹನ್ನನಿವ ತನ್ನ ಮರೆ- ಹೊಕ್ಕರ ಕಾಯ್ವ ಪ್ರಸನ್ನನಿವ ಸುವ್ವಿ 2 ಯಶೋದೆಯ ಕಂದ ತನ್ನ ವಿಷವನುಣ್ಣೆಂದ ಕರ್ಕಶದ ಪೂತನಿಯ ಶಿಶುವಾಗಿ ಸುವ್ವಿ ಕರ್ಕಶದ ಪೂತನಿಯ ಶಿಶುವಾಗಿ ಕೊಂದ ನಮ್ಮ ಎಸೆವ ಗೋವಿಂದ ಪಾಲಿಸ ಬಂದ ಸುವ್ವಿ 3 ಶಕಟಾಸುರನ್ನ ಮೆಟ್ಟಿ ಕೊಂದ ಬಲು ವಿಕಟ ದೈತ್ಯನ್ನ ಕೊರಲೆತ್ತಿ ಸುವ್ವಿ ವಿಕಟದೈತ್ಯನ್ನ ಕೊರಲೆತ್ತಿ ಕೊಂದು ಸರ್ಪನ ಮ- ಸ್ತಕದಮೇಲೆ ನಲಿವುತ ನಿಂದ ಸುವ್ವಿ4 ಕರುಗಳ ಕಣ್ಣಿಯ ಬಿಡುವಾಗ ನಾರಿಯರೆಲ್ಲರು ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುವ್ವಿ ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುರಿದು ಅವರ್ಬರಲು ಬೆಣ್ಣೆಯ ಕೊಂಡೋಡುವ ಸುವ್ವಿ 5 ಮತ್ತಿಯ ಮರಗಳ ಕಿತ್ತುವಾಗ ಅಲ್ಲಿ ಭೃತ್ಯರಿಗೊಲಿದು ವರವಿತ್ತ ಸುವ್ವಿ ಭೃತ್ಯರಿಗೊಲಿದು ವರವಿತ್ತ ತನ್ನ ಮಿತ್ರಜನಕಾಗಿ ಗಿರಿಯೆತ್ತಿದನೆ ಸುವ್ವಿ 6 ವೃಂದಾವನದಿ ನಿಂದು ಚಂದದಿ ನಲಿವಾಗ ತನ್ನ [ಕೊಂದಪೆ]ನೆಂದು ಬಂದ ಬಕನ ಸುವ್ವಿ [ಕೊಂದಪೆ]ನೆಂದು ಬಂದ ಬಕನ ಸೀಳಿ ಪುಲ್ಲಂದದಿ ಕೊಂದು ಬಿಸುಟಾನೆ ಸುವ್ವಿ 7 ಕಲ್ಪತರುವಂತೆ ನಮ್ಮ ತನ್ನಧರಿಂದ ಕೊಳಲನೂದುವ ಚೆಲುವಗೆ ಸುವ್ವಿ ಕೊಳಲನೂದುವ ಚೆಲುವ ಗಾನಲೋಲ ಗೋ- ಪಾಲಕೃಷ್ಣನಿಗೆ ಶರಣೆಂಬೆ ಸುವ್ವಿ 8 ರಂಗ ರಾಸಕ್ರೀಡೆಯೆಂಬ ಶೃಂಗಾರರಸ ಬಸಿವ ಮಂಗಳ ವಿಲಾಸವನು [ರಚಿಸಿದ]ಸುವ್ವಿ ಮಂಗಳ ವಿಲಾಸವನು ರಚಿಸಿದಾತನ ಕಂಡು ದೇ ವಾಂಗನೆಯರೆಲ್ಲರು ತನುವ ಮರೆತರು ಸುವ್ವಿ 9 ಮಧುರೆಗೆ ಪೋಗಿ ಮಲ್ಲರಸುವ ನೀಗಿ ಮದಾಂಧ ಮಾವನ್ನ ಮಡುಹಿದ ಸುವ್ವಿ ಮದಾಂಧ ಮಾವನ್ನ ಮಡುಹಿದ ಶ್ರೀಕೃಷ್ಣ ಮುದದಿ ತನ್ನವರ ಮುದ್ದಿಸಿದ ಸುವ್ವಿ 10 ಧರ್ಮವ ಬಿಡಬೇಡ ದುಷ್ಕರ್ಮ ಮಾಡಬೇಡ ದುರ್ಮನವ ಬಿಡದೆ ಹರಿಯಲಿಡು ಸುವ್ವಿ ದುರ್ಮನವ ಬಿಡದೆ ಹರಿಯಲಿಡು ಮನವ ಕಾಮಿನಿಯೊಳಾಡಿ ಕೆಡಬೇಡ ಸುವ್ವಿ 11 ದುರುಳರ ನೋಡಿ ದೂರಕ್ಕೋಡು ಹರಿ- ಶರಣಡಿಗೆ ಪೊಡಮಡು ಸುವ್ವಿ ಶರಣರಡಿಗೆ ಪೊಡಮಡು ಶ್ರೀಕೃಷ್ಣನ ಸು- ಚರಿತವ ಪಾಡುವರೊಳಗಾಡು ಸುವ್ವಿ 12 ಏರಲರಿಯದವ ಮರನೇರಿ ಬಿದ್ದು ಸಾವಂತೆ ನೀರ ಮೀನುಗಳು ಕರಗುವಂತೆ ಸುವ್ವಿ ನೀರ ಮೀನುಗಳು ಕರಗುವಂತೆ ಮನುಜ ನೀ ಬಾರದ ಭಾಗ್ಯಕ್ಕೆ ಹೋರಬೇಡ ಸುವ್ವಿ 13 ಹಿಂದೆ ಪುಣ್ಯದ ಬೀಜವ ಕುಂದದೆ ಬಿತ್ತಿದರೆ ಇಂದು[ಬಾಹದೈಶ್ವರ್ಯ ಮುಂದಿಪ್ಪೋದು] ಸುವ್ವಿ ಇಂದು [ಬಾಹದೈಶ್ವರ್ಯ ಮುಂದಿಪ್ಪೋದು] ಬರಿದೆ ನೀ ನೊಂದು ವಿಧಿಯ ಬೈದರೆ ಎಂದೆಂದು ಕೆಡುವೆ ಸುವ್ವಿ 14 ದುರುಳ ಕೀಚಕ ಕೆಟ್ಟ ಪರಧನಕೆ ಮರುಳಾಗಿ ಕುರುರಾಯ ಸುವ್ವಿ ಪರಧನಕೆ ಮರುಳಾಗಿ ಕುರುರಾಯ ಕೆಟ್ಟನೆಂದು ಒರೆವ ಭಾರತವ ನಿರುತ ಕೇಳು ಸುವ್ವಿ 15 ವಾದಿಯೂ ಹರಿಯಾದ ಪ್ರತಿವಾದಿಯೂ ಹರಿಯಾದ ಭೇದವಿಲ್ಲವೆಂಬ ಮತದಲ್ಲಿ ಸುವ್ವಿ ಭೇದವಿಲ್ಲವೆಂಬ ಮತದಲ್ಲಿ ತಾನೊಬ್ಬನೇ ಕಾದಿ ಗೆದ್ದಾನೆಂತು ಬಿದ್ದಾನೆಂತು ಸುವ್ವಿ 16 ಎಲ್ಲ ಒಂದಾಂದರೆ ಶಾಲ್ಯಾನ್ನನುಂಬುವರು ಪುಲ್ಲನ್ಯಾಕೆ ಮೆದ್ದು ಬದುಕರು ಸುವ್ವಿ ಪುಲ್ಲನ್ಯಾಕೆ ಮೆದ್ದು ಬದುಕರು ಸ್ಥಳಚರರು ಜಲದೊಳು ಚರಿಸೆ ಅಳುವದ್ಯಾಕೆ ಸುವ್ವಿ 17 ವರ್ತಿಯ ಸಂಸಾರ ವ್ಯವಹಾರಕ್ಕೀಗ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಸುವ್ವಿ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಭೇದ ಸತ್ಯವಾದರೈಕ್ಯ ಎತ್ತಿಹೋದು ಸುವ್ವಿ 18 ಅತ್ತೆ ಸೊಸೆಯರಿದ್ದಾಗ ಮನೆಯೊಳು ಮತ್ಸರವು ಕತ್ತೆನಾಯಿಗಳಂತೇಕೆ ಬೆರಸರು ಸುವ್ವಿ ಕತ್ತೆನಾಯಿಗಳಂತೇಕೆ ಬೆರಸರು ಅದರಿಂದ ಪ್ರತ್ಯೇಕ ಜೀವರ ಇರವು ಸುವ್ವಿ 19 ಮಿಥ್ಯಾ ಭೇದಾದರೆ ಅದು ಶುಕ್ತಿರೂಪದಂತೆ ತ- ನ್ನರ್ಥವ ತಾ ಕಾಣಲರಿಯನು ಸುವ್ವಿ ತ- ನ್ನರ್ಥವ ತಾ ಕಾಣಲರಿಯನು ಅದರಿಂದ ನಾ- ವೆತ್ತಿದ ದೂಷಣೆಗೆ ಉತ್ತರವಿಲ್ಲ ಸುವ್ವಿ 20 ಬೊಮ್ಮ ಮಿಥ್ಯವಲ್ಲವೋ ನಿನ್ನ ಮಿಥ್ಯ ಶಶಶೃಂಗ ಸತ್ಯವಲ್ಲ ಸುವ್ವಿ ಮಿಥ್ಯಶ ಶಶೃಂಗ ಸತ್ಯವಲ್ಲ ಶೃಂಗ್ಯೆರಡು ಜ- ಗತ್ತಿನೊಳು ಕೂಡವು ಕುಯುಕ್ತಿಯ ನಿನಗಾವ ಕಲಿಸಿದ ಸುವ್ವಿ 21 ಸತ್ತ ಪೆಣನುಂಟು ಸಾಯದ ವಸ್ತುಂಟು ಸತ್ತು ಸಾಯದ ಮತ್ರ್ಯರಿಲ್ಲ ಸುವ್ವಿ ಸತ್ತು ಸಾಯದ ಮತ್ರ್ಯರಿಲ್ಲ ಮತ್ರ್ಯನಾಗಿ ನಿನ್ನ [ಮಿಥ್ಯಾವಾದ]ವೆಂತು ನಿತ್ಯವಹುದು ಸುವ್ವಿ 22 ಸತ್ಯವೆಂದರುಂಟು ಮಿಥ್ಯವೆಂದರಿಲ್ಲ ಎಂ- ಬರ್ಥ ತಾ ಕೂಡಲರಿಯದು ಸುವ್ವಿ ಎಂ- ಬರ್ಥ ತಾ ಕೂಡಲರಿಯದು ಅದರಿಂದ ಅರ್ಥವಪೇಳೆ ಮಿಥ್ಯಕೆ ನಾಮಾಂತರ ಸುವ್ವಿ23 ಭರ್ತೃಯಿಲ್ಲದವಳ ಮುತ್ತೈದೆಯೆಂಬಂತೆ ನಿನ್ನ ಮಿಥ್ಯಜಗಕಿಟ್ಟ ಸತ್ಯನಾಮ ಸುವ್ವಿ ಮಿಥ್ಯಜಗಕಿಟ್ಟ ಸತ್ಯನಾಮ ನಿನ್ನ ಯುಕ್ತಿಶೂನ್ಯನೆಂದು ಸುತ್ತ ನಗುತಿಪ್ಪುದು ಸುವ್ವಿ 24 ಇಲ್ಲ ಜಗವೆಂಬುದನು ಈಗ ಕಂಡದ ಕಾರಣ ಇಲ್ಲವಾತನ ವಾದಕ್ಕೆ ಪೊಗಳಲರಿಯದು ಸುವ್ವಿ ಇಲ್ಲವಾತನ ವಾದಕ್ಕೆ ಪೊಗಳಲರಿಯದ ಹೊಲೆಯನ [ಎಲ್ಲರರಿಯದಿದ್ದರೆ] ಹೊಲೆಜಾತಿ ಹೋಕ ಸುವ್ವಿ 25 ಗಿರಿಯ ಪಿರಿಯ ಗುಹೆಯೊಳು ದಳ್ಳುರಿಯ ಬೇಗೆಗೆ ಬೆಂದ ಕರಿಯನರಿಯದ ಕಾರಣ ಮರನ ಮುರಿವುದೆ ಸುವ್ವಿ ಕರಿಯನರಿಯದ ಕಾರಣ ಮರನ ಮುರಿವುದೆ ವಾದಿಯೀ ಪರಿಯಲಿ ನಿನ್ನ ಮಿಥ್ಯದಿ ಕಾರ್ಯವಾಗದು ಸುವ್ವಿ 26 ಹಳೆಯ ಮಲವೆಲ್ಲವು ಮಲವೆ ಅಲ್ಲದೆ ಮತ್ತೆ ಜಲಜಾಕ್ಷಿಯರ ಸಂಗಕ್ಕೆ ಪರಿಮಳವೀವುದೆ ಸುವ್ವಿ ಜಲಜಾಕ್ಷಿ ್ಷಯರ ಸಂಗಕ್ಕೆ ಪರಿಮಳವೀವುದೆ ಶೂಲದಿ ಸತ್ತ[ಪೆಣನು] ಸುಳಿವುತಿಪ್ಪುದೆ ಸುವ್ವಿ 27 ನಾಸ್ತಿಯೆಂಬ ವಸ್ತುವ ನಾಸ್ತಿಯೆಂದರಿಯದೆ ಆಸ್ತಿಯೆಂದು ಕಂಡರೆ ಅತಿಮೂರ್ಖ ಸುವ್ವಿ ಆಸ್ತಿಯೆಂದು ಕಂಡರೆ ಅತಿಮೂರ್ಖ ಅಕಟಕಟ ಜ- ಗತ್ತಿನ ಮಹಂತರ ಉನ್ಮತ್ತರ ಮಾಡಿದ ಸುವ್ವಿ 28 ಏಕಾಕಿ ನ ರಮತೆಯೆಂಬ ವೇದವಾಕ್ಯ ವಿ- ವೇಕಿಗಳೆಲ್ಲ ಬಲ್ಲರು ಸುವ್ವಿ ವಿ- ವೇಕಿಗಳೆಲ್ಲ ಬಲ್ಲರು ಅದರಿಂದ ನಿನ್ನ ಮುಕ್ತಿ ಏಕಾಕಿಯಾದರೆ ಶೋಕಕ್ಕೊಳಗಾದೆ ಸುವ್ವಿ 29 ಲೋಕದೊಳು ಹಾಳೂರ ಹಂದಿಯ ಬೇಸರದೆ ನೋಡೊ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ಸುವ್ವಿ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ನಮ್ಮ ಶ್ರೀ ವೈಕುಂಠದ ವಾಸನೆ ಲೇಸು ಸುವ್ವಿ 30 ಅಲ್ಲಿ ಸಹಬ್ರಹ್ಮಣಾ ಸರ್ವಕ ಮಂಗಳೆಂಬಾರಂತೆ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ಸುವ್ವಿ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ನೀ ಕೇಳು ಎಲ್ಲ ಮತ್ರ್ಯರಲ್ಲಿ ಹರಿಯನುವ್ರತರಂತೆ ಸುವ್ವಿ 31 ಅಲ್ಲಿ ನರ ನಾರಿಯರು ಚಿನುಮಯ ಚೆಲುವರಂತೆ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಸುವ್ವಿ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಅವರ ಶ್ರೀ- ವಲ್ಲಭ ಲಾಲಿಸಿ ಪಾಲಿಸುವನಚಿಂತೆ ಸುವ್ವಿ 32 ನಗರ ಕೃಷ್ಣಗೆ ಘನೋದಕದ ಮೇಲೆ ಮಿಂಚುತಿಪ್ಪುದು ಸುವ್ವಿ ಘನೋದಕದ ಮೇಲೆ ಮಿಂಚುತಿಪ್ಪುದು ಅಲ್ಲಿ ಮನೆ ಮನೆಯಲಿ ಮುಕ್ತರ ಸಂದಣಿ ಸುವ್ವಿ34 ಇಂತು ಹಯವದನ ನಿಶ್ಚಿಂತ ಜಗತ್ಕಾಂತ ಸಂತರನು ಸದಾ ಸಲಹುವ ಸುವ್ವಿ ಸಂತರನು ಸದಾ ಸಲಹುವ ಮಾರಾಂತರ ಕೃ- ತಾಂತನ ಬಳಿಗೆ ಕಳುಹುವ ಸುವ್ವಿ 35
--------------
ವಾದಿರಾಜ
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಶ್ರೀರಮಣನೆನೆಸಿದ ವಿನೋದಿ ಹರಿ ಸರ್ವೋತ್ತಮಗೆ ಸುವ್ವಿಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ಪರಮೇಷ್ಠಿ ಗುರುಗಳಿಗೆ ಶರಣೆಂಬೆ ಸುವ್ವಿ ಪರಮೇಷ್ಠಿ ಗುರುಗಳಿಗೆ ಹರಿ ಪರನೆಂದು ಪೇಳ್ವ ಶ್ರೀಮದಾನಂದತೀರ್ಥರಿಗೆ ಸಾಸೀರ ಶರಣೆಂಬೆ 1 ವಾಸುದೇವ ಪರ ಸಂಕರ್ಷಣ ಅತಿಕ್ರೂರಸಂಹಾರಕಾರ ಸುವ್ವಿ ಸಂಕರ್ಷಣ ಅತಿಕ್ರೂರಸಂಹಾರಕಾರ ಪ್ರದ್ಯುಮ್ನ ಬೊಮ್ಮ ಕುಮಾರನಂತೆ ಸುವ್ವಿ 2 ಸೂಕರ ನರಹರಿ ಕಾಯ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣ ಸುವ್ವಿ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣನಾದ ಬೌದ್ಧ ಕಲ್ಕಿ ರೂಪ ಪ್ರಸಿದ್ಧವಂತೆ ಸುವ್ವಿ3 ಮುಖ್ಯಪ್ರಾಣ ಆವಲ್ಲಿ ನಾರಾಯಣ ಇವರಿಬ್ಬರ ಗುಣವನರಿಯದವನೆ ಸುವ್ವಿ ಇವರಿಬ್ಬರ ಗುಣವ ಅರಿಯದವನೆ ಗೌಣನೆಂಬರ್ಥದಲಿ ಬ್ರಹ್ಮಸೂತ್ರ [ದಂಬಂತೆ] ಸುವ್ವಿ4 ಆತ್ಮನು ಅತಂತ್ರ ಪರಮಾತ್ಮನು ಸ್ವತಂತ್ರ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ಸುವ್ವಿ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ವಾದಿ ಜ್ಞಾನಾನಂದಕ ಹರಿಗೆ ಸಮರಿಲ್ಲ ಸುವ್ವಿ 5 ಜಡದಲ್ಲಿ ಜೀವಾತ್ಮ ಜಡ ಜೀವರÀಲಿ ಪರಮಾತ್ಮ ಕ್ರೀಡೆಯಿಂದ ಏಕಾತ್ಮ ಬಿಡದಿಹ ಸುವ್ವಿ ಕ್ರೀಡೆಯಿಂದ ಏಕಾತ್ಮ ಬಿಡದಿಹುದು ವಾದಿ ದ್ವಾಸುಪರ್ಣ ವೆಂಬೋ ಶ್ರುತಿ ಲೇಸು ಲೇಸು ಸುವ್ವಿ 6 ಜಡ ಹರಿಗಳ ಭೇದ ಜೀವ ಜೀವಕೆ ಭೇದ ಜೀವೇಶ್ವರಗೆ ಭೇದ ಶರೀರ ಭೇದ ಸುವ್ವಿ ಜಡ ಜೀವರಿಗೆ ಭೇದ ಶರೀರ ಭೇದ [ವೆನ್ನಿ] ಜಡಜೀವ ಭೇದ ಪಂಚಭೇದಗಳು ಸುವ್ವಿ 7 ಪಂಚಭೇದಗಳೆಂಬ ಪ್ರಪಂಚದಲಿ ಸಕಲ ವೈಕುಂಠದೊಳಗಿನ ವಿವರ ಒಂದುಂಟು ಕೇಳು ಸುವ್ವಿ ವೈಕುಂಠÀದೊಳಗಿನ ವಿವರ ಒಂದುಂಟು ಕೇಳು ವಾದಿ ಸಾಕು ಸಾಕು ನಾಲ್ಕುವಿಧ ಮುಕ್ತಿಯುಂಟಲ್ಲಿ ಸುವ್ವಿ 8 ಶ್ರವಣಕೀರ್ತನ ಹರಿಸ್ಮರಣೆ ಸೇವನ ಪೂಜನ ವಂದನ ಹರಿದಾಸ್ಯ ಸಖ್ಯಮಾತ್ಮನಿವೇದನೆ ಸುವ್ವಿ [ಹರಿದಾಸ್ಯ ಸಖ್ಯಮಾತ್ಮ ನಿವೇದನೆಗಳು ತಮ್ಮ] ಅರ್ಥ ಕೂಡೊಂಬತ್ತುಭಕ್ತಿ ಸತ್ಯ ಉಂಟು ಸುವ್ವಿ 9 ಜೀವೇಶ[ನೊಂದು] ಹರಿನಿರ್ಗುಣನೆಂದು ಅಪೂರ್ಣ ಗುಣನೆಂದು ಬ್ರಹ್ಮಾದಿಗಳೊಂದು ಸುವ್ವಿ ಬ್ರಹ್ಮಾದಿಗಳೊಂದು ಸಮರಧಿಕಾರ ಅವತಾರ ಎಲ್ಲ ಒಂದೆ ಎಂಬುವಗೆ ಸುವ್ವಿ 10 ಅವತಾರವೆಲ್ಲ ಅಂಶವತಾರವೆಂದ ಹರಿಭಕ್ತರಲ್ಲಿ ಕೋಪ ಸುವ್ಯಕ್ತವಾಯಿತು ಸುವ್ವಿ ಕೋಪ ಸುವ್ಯಕ್ತವಾಯಿತು ವಾದಿ ಹರಿಭಕ್ತರೊಡನೆ ಕೋಪಂಗಳು ವ್ಯರ್ಥವಾಯಿತು ಸುವ್ವಿ 11 ಪಂಚಮಹಾಭೂತ ದೇಹ ಸಂಚಯರೆಲ್ಲ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಸುವ್ವಿ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಮುಕ್ತರ ದೇಹವೆಲ್ಲ ಸುಖದ ಸಂದೋಹವಂತೆ ಸುವ್ವಿ 12 ಶರೀರದಲ್ಲಿ ಎಪ್ಪತ್ತೆರಡು ಸಾವಿರ ನಾಡಿಗಳಲ್ಲಿ ಪಿರಿಯವಾದವು[ನೂರೊಂದು] ಐದು ಸುವ್ವಿ ಪಿರಿಯವಾದವು[ನೂರೊಂದು] ಐದು ಮೂರು ಒಂದು ಈ ಪರಿಯಾಗಿ ಇಪ್ಪುವಂತೆ ಸುವ್ವಿ 13 ಇಳಾನಾಡಿ ಸಾವಿರ ಸೀಳುಮಾಡಿ ಅದರೊಳು ಸೀಳುಮಾಡಿದರೇಳು ವಿರಳನಂತೆ ಸುವ್ವಿ ಸೀಳುಮಾಡಿದರೇಳು ವಿರಳನಂತೆ ನಾಡಿಯಲ್ಲಿ ರಕ್ತವರ್ಣನಾಗಿ ನಾರಾಯಣನಿಹ್ಯ ಸುವ್ವಿ 14 ಒಂದುನಾಡೀ ಪೆಸರು ಸುಷುಮ್ನನಾಡಿಯೆಂಬರು ಅದರಂತರ ಕಡೆಯಲಿ ರಂಧ್ರವಂತೆ ಸುವ್ವಿ ಅದರಂತರ ಕಡೆಯಲಿ ರಂಧ್ರÀ್ರವಂತೆ ನಾಡಿಯಲಿ ಕಮಲ ಮಧ್ಯದಲಿ ತಾ ವಿಮಲನಂತೆ ಸುವ್ವಿ 15 ನಾಡಿ ಮೂಲದೊಳು ನಾಲ್ಕುದಳದ ಕಮಲವುಂಟು [ನೀಲ]ವರ್ಣದಿಂದ ಸಂಪೂರ್ಣನಂತೆ ಸುವ್ವಿ [ನೀಲ]ವರ್ಣದಿಂದ ಸಂಪೂರ್ಣ[ನೀಲವರ್ಣ ಅನಿರುದ್ಧ] ನಲ್ಲಿ ತಾ ವಾಸನಂತೆ ಸುವ್ವಿ 16 ಪೊಕ್ಕುಳಲಿ ಆರುದಳ ಇಕ್ಕ್ಕು ರೀತಿಯಿಂದಲೇಳು [ಬಿಂಕನಾದ] ಸಂಕರ್ಷಣ ಮುಖ್ಯನಂತೆ ಸುವ್ವಿ [ಬಿಂಕನಾದ ಸಂಕರ್ಷಣ] ಮುಖ್ಯನಂತೆ ಜೀವಗೆ ಪಿಂಗಳ ವರ್ಣನಾಗಿ ಹಿಂಗದಿಹ ಸುವ್ವಿ 17 ಇಡಾನಾಡಿ [ಉದೀಚಿ] ಪಿಂಗಳ ದಕ್ಷಿಣದಲಿ ಪ್ರತೀಚಿ [ವಜ್ರಿಕೋ ಪೂರ್ವಾ ಅಂತೆ] ಸುವ್ವಿ ಪ್ರತೀಚಿ ವಜ್ರಿಕೋದೀಚಿ ಬ್ರಹ್ಮನಾಡಿ ಸುತ್ತಾ ಪಂಚನಾಡಿಗಳ ಪಂಚರೂಪಗಳೆ ಸುವ್ವಿ 18 ಎಂಟುದಳ ಕೆಂಪು ಉಂಟು ಹೃದಯ ಕಮಲದಲಿ ವೈಕುಂಠಪತಿ ಚತುರನ ಮಂಟಪವೆ ಸುವ್ವಿ ವೈಕುಂಠಪತಿ ಚತುರನ ಮಂಟಪದ ಮಧ್ಯದಲಿ ವಾಯು ಜೀವರಿಗೆ ಸಹಾಯನಂತೆ ಸುವ್ವಿ 19 ಕೂದಲ ಕೊನೆಯ ಹತ್ತು ಸಾವಿರ ವಿಧವನೆಮಾಡಿ ಜೀವ ಪರಿಮಾಣ ಒಂದೆ ಕಂಡ್ಯ ಸುವ್ವಿ ಜೀವ ಪರಿಮಾಣ ಒಂದೆ ಕಂಡ್ಯ ಚತುರನ ಅಂಗುಷ್ಟದÀಷ್ಟು ಜೀವ [ಅಂಶನಂತೆ] ಸುವ್ವಿ 20 ಸ್ಥೂಲಾಂಗುಷ್ಠ ಪರಿಮಾಣ ಪ್ರಾಜ್ಞನಾದ ನಾರಾಯಣ ಹೃದಯಕಮಲದ ಒಳಗೆ ವಿಮಲನಂತೆ ಸುವ್ವಿ ಹೃದಯಕಮಲದ ಒಳಗೆ ವಿಮಲನಂತೆ [ಜೀವಂಗಾ ರೂಪದಲಿ] ಹರಿ ತಾ ರಕ್ಷಿಪನಂತೆ ಸುವ್ವಿ 21 ಹೃದಯಾಕಾಶದಲಿ ಪ್ರಾದೇಶ ಪರಿಮಾಣ ಆದಿ ಪುರುಷನಿಹ್ಯ ಈ ವಿಧವಾಗಿ ಸುವ್ವಿ ಆದಿ ಪುರುಷನಿಹ್ಯ ಈ ವಿಧವಾಗಿ ಜೀವಗೆ ಗೃಹದೋಪಾದಿಯಲಿ ಹರಿ ರಕ್ಷಕನಂತೆ ಸುವ್ವಿ 22 ಕಂಠದೇಶದಲಿ ಉಂಟು ತೈಜಸಮೂರ್ತಿ ಕರ ಹತ್ತೊಂಬತ್ತು ಶಿರಗಳು ಸುವ್ವಿ ಕರ ಹತ್ತೊಂಬತ್ತು ಶಿರಗಳು ಮಧ್ಯದಲ್ಲಿ ಕರಿಮುಖ ಹಸ್ತಿಯಾಗಿಪ್ಪನಂತೆ ಸುವ್ವಿ 23 ಕಿರುನಾಲಗೆಯಲ್ಲಿ ಎರಡುದಳ ಕಮಲ ಅರವಿಂದ ಪದ್ಮದಲಿ ನಾರಾಯಣನಿಹ್ಯ ಸುವ್ವಿ ಅರವಿಂದ ಪದ್ಮದಲಿ ನಾರಾಯಣನಿಹ್ಯ ಹರಿಯು ರೂಪವೆಲ್ಲವಾಗಿ ಇಪ್ಪನಂತೆ ಸುವ್ವಿ 24 ದÀಕ್ಷಿಣಾಕ್ಷಿಯಲಿ ಲಕ್ಷಣ ವಿಶ್ವಮೂರ್ತಿ ಶಿಕ್ಷಕನಾಗಿ ಜೀವರ ವಂಶರಕ್ಷಕನಂತೆ ಸುವ್ವಿ ಜೀವರ ವಂಶರಕ್ಷಕನನ್ನೆ [ಜಾಗರವ ಕಾಣಿಸೋನಷ್ಟೆ] ವಾಣಿ ನಿಪುಣನಂತೆ ಸುವ್ವಿ 25 ಈ ದೇವರು ಪ್ರಾಜ್ಞನಾದ ಹರಿಯ ಕೂಡಿ ನಿದಾನಿಸಲು ಜೀವಂಗೆ ಸುಖತೇಜಸವು ಸುವ್ವಿ ನಿದಾನಿಸಲು ಜೀವಂಗೆ ಸುಖತೇಜಸವು ಅನೇಕಾಗಿ ತೈಜಸನಲ್ಲಿ ಸ್ವಪ್ನಭಾಗ್ಯ ಸುವ್ವಿ 26 ಹುಬ್ಬುಗಳ ಮಧ್ಯದಲಿ ಶುಭ್ರ ನಾಲ್ಕುದಳ ಕಮಲ ಅನಿರುದ್ಧ ನೀಲಾಭ್ರವರ್ಣ ಸುವ್ವಿ ಅನಿರುದ್ಧ ನೀಲಾಭ್ರವರ್ಣನಾಗಿ ಹರಿ ಅಲ್ಲಿ ಅದೃಶ್ಯವಾಗಿರುವನಂತೆ ಸುವ್ವಿ 27 ಶಿರದಲ್ಲಿ ಶುಭ್ರ ಹನ್ನೆರಡುದಳ ಕಮಲ ಅರುಣವರ್ಣನಾದ ನಾರಾಯಣನಿಹ್ಯ ಸುವ್ವಿ ಅರುಣವರ್ಣನಾದ ನಾರಾಯಣನಿಹ್ಯ ಹರಿಯು ಈ ಪರಿಯಲಿ ತಿಳಿದವರಧಿಕರಂತೆ ಸುವ್ವಿ 28 ಬ್ರಹ್ಮಹತ್ಯ ಶಿರಸ್ಕಂಚ ಸ್ವರ್ಣಸ್ತೇಯ ಭುಜದ್ವಯಂ ಸುರಾಪಾನ ಹೃದಾಯುಕ್ತಂ ಗುರುತಲ್ಪ ಸುವ್ವಿ ಸುರಾಪಾನ ಹೃದಾಯುಕ್ತಂ ಗುರುತಲ್ಪ ಕಟಿದ್ವಯಂ ಪಾದ ಪಾಪರೂಪಗಳೆ ಸುವ್ವಿ29 ಪಾತಕ ಪ್ರತ್ಯಂಗಗಳು ಉಪಪಾತಕ ರೋಮಂಗಳು ಪಾಪಪುರುಷ ರಕ್ತನೇತ್ರ ನೀಲಪುರುಷ ಸುವ್ವಿ ಪಾಪಪುರುಷ ರಕ್ತನೇತ್ರ ನೀಲಪುರುಷನಾಗಿ ವಾಸ ವಾಮಕುಕ್ಷಿಯಲಿ ನ್ಯಾಸವಂತೆ ಸುವ್ವಿ 30 ಪುರುಷ ಷೋಡಶನಾದ ಷಟ್ಕೋಣದಲ್ಲಿ ಪ್ರದ್ಯುಮ್ನನಿಹ್ಯ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ಸುವ್ವಿ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ದೇಹ ಪವಿತ್ರ [ವಾಸುದೇವರಲ್ಲಿ ಸುವ್ವಿ]31 ಹನ್ನೆರಡಂಗುಲಮೇಲೆ ಹನ್ನೆರಡುದಳ ಕಮಲ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ಸುವ್ವಿ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ತುರಿಯ ಸಿತದಳದಲ್ಲಿ ನಿಧಾನಿಸಲು ಸುವ್ವಿ 32 ಮುಖ್ಯಪ್ರಾಣನೆಂಬೊ ಗುರುವು ಹರಿಗೆ ಸಖ್ಯನಾದ ಬಂದ ದುಃಖ ಪರಿಹರಿಸಿ ಸುಖಬಡಿಸುವ ಸುವ್ವಿ ಬಂದ ದುಃಖ ಪರಿಹರಿಸಿ ಸುಖಬಡಿಸುವ ಮಾರುತನು ಹನುಮ ಭೀಮಸೇನ ರೂಪಗಳು ಸುವ್ವಿ 33 ಮೂರನೆ ಅವತಾರ ಆನಂದತೀರ್ಥರು ವೀರವೈಷ್ಣವರಿಗೆ ಆದಿಗುರುಗಳು ಸುವ್ವಿ ಪಾದ ನೆನೆದರೆ ಘೋರ ಸಂಸಾರವನು ನೀಗಿಸುವನು ಸುವ್ವಿ 34 ಘೋರ ಸಂಸಾರವನು ನೀಗಿಸುವ ಹಯವದನ ತನ್ನ ಪಾದದ ಸಮೀಪದಲಿಟ್ಟು ಸಲಹುವ ಸುವ್ವಿ ಪಾದದ ಸಮೀಪದಲಿಟ್ಟು ಸಲಹುವ ಹಯವದನ ಖೇದಗಳ ಬಿಡಿಸಿ ರಕ್ಷಿಸುವ ಸುವ್ವಿ 35
--------------
ವಾದಿರಾಜ
ಸೋದಾಕ್ಷೇತ್ರವೆ ದಿವ್ಯ ಕ್ಷೇತ್ರ ಬಂದ ಜನರಿಗಿಷ್ಟವನೀವ ಕ್ಷೇತ್ರ ವೀರಶೈವರ ಗೆದ್ದ ಕ್ಷೇತ್ರ ಪ ಒಂದು ಭಾಗದಿ ರೂಪ್ಯಪೀಠ ಮ- ತ್ತೊಂದು ಭಾಗದಿ ಸೋದಾಕ್ಷೇತ್ರ ಕುಂದು ಎಳ್ಳಷ್ಟಿಲ್ಲದೆ ತೋರ್ಪು ದೆಂದು ಹರಿಭಕ್ತರಾದರಿಸುವರು 1 ವೈಕುಂಠನಂತಾಸನಗಳು ಚೆಂದವೇನೆಂದು ಪೇಳಲಿ ಮನವೆ 2 ರಾಜೇಶ ಹಯಮುಖ ಚರಣ ಕಂಜ ಮಧುಪನಂತಿರುವ ಶ್ರೀಭಾವಿ- ಕಂಜಜಾತನ ಪದಕರುಹ ವಾದಿರಾಜರಾಯರ ದಿವ್ಯ ಕ್ಷೇತ್ರ 3
--------------
ವಿಶ್ವೇಂದ್ರತೀರ್ಥ
ಹಡಪ ಕಾಳಾಂಜಿ ಚಾಮರ ಛತ್ರ ವ್ಯಜನ ಪಾ ವಡಗಾಡಿ ವಸಡುಗ ಪಾವುಗೆ ಸುವರ್ಣದರ್ಪಣವಾ ಪ ಪಿಡಿದ ನಾರಿಯರು ಯಡಬಲದ ಕೈದೀವಿಗೆಯ ಕೊಡುತ ಕೈಲಾಗಿನವರಡಿಗಳೆಚ್ಚರಿಕೇ ಅ.ಪ ವೀಣೆ ದಂಡಿಗೆ ತಾಳ ಮೇಳ ಸನಕಾದಿ ಸುರ ನಾರಿಯರು ಗೀತ ಪ್ರಬಂಧ ನರ್ತನದ ಪು ರಾಣ ಕೋವಿದರು ಪಾಠಕನಿಕರ ಸಹಿತ ಗೀ ರ್ವಾಣರೈದಿರಲು ಅವಧಾನವೆಚ್ಚರಿಕೇ 1 ಗಂಧ ಪರಿಮಳ ಪುಷ್ಪ ತಾಂಬೂಲ ಫಲಗಳನು ತಂದು ಉಡುಗೊರೆಯ ಕಾಣೆಕೆಯಿಟ್ಟು ಜಯವೆನುತ ನಂದ ಮುಕುಂದ ಗೋವಿಂದ ಕೇಶವಯೆನುತ ವಂದನೆಗಳನೆ ಮಾಡಿ ನಿಂದರೆಚ್ಚರಿಕೇ 2 ಭಾಗವತ ಜನರು ಬಿರುದಾವಳಿಯ ಪೊಗಳೆ ಮುನಿ ಯೋಗಿಗಳು ತತ್ವ ಪ್ರಬಂಧದಧ್ಯಾಪಕರು ಮೇಘವಾಹನ ಪೂಮಳೆಗರೆಯೆ ಸಕಲ ವಿನಿ ಯೋಗದವರನು ಕಳುಹುವಾಗಲೆಚ್ಚರಿಕೇ3 ಸರಸಿಜೋದ್ಭವನು ದಿಕ್ಪಾಲನಾರದ ಧ್ರುವನು ಗರುಡ ಗಂಧರ್ವ ವಿದ್ಯಾಧರರು ಅನಿಲಜನು ಪರಮ ಭಕ್ತಿಯಲಿ ಊಳಿಗಕೆ ಬಂದೈದಾರೆ ಧರೆಗಧಿಕ ವೈಕುಂಠ ಚನ್ನ ಕೇಶವ ಚಿತ್ತೈಸೋ 4
--------------
ಬೇಲೂರು ವೈಕುಂಠದಾಸರು
ಹನುಮ ವರದ ವಿಠಲ | ಪೊರೆಯ ಬೇಕಿವಳಾ ಪ ಗುಣಪೂರ್ಣ ಶ್ರೀ ಹರಿಯ | ದಾಸ್ಯಕಾಂಕ್ಷಿಪಳಾ ಅ.ಪ. ವಿನಯ ಸದ್ಗುಣ ಭರಿತೆ | ಸುಜನಾಳಿಸೇವೇಷ್ಟೆಅನಿಲಮತ ಸದ್ಭೋದೆ | ಗಾನಂದ ಜಾತೇಅನಲಾಕ್ಷಾ ಸಖ ಹರಿಯ | ಗಾನಕಲೆ ಚತುರೆ ಎಂದೆನಿಸಿರುವ ಈ ಕನ್ಯೆ | ಮಣಿಯ ನೀ ಪೊರೆಯೋ 1 ಪಾದ | ವೈಕುಂಠ ರಮಣ 2 ಸಲ್ಲಲಿತ ಸನ್ಮಾರ್ಗ | ದಲ್ಲಿ ವಿಹರಿಸುವಂಥವಲ್ಲಭನ ದೊರಕಿಸುತ | ನಲ್ಮೆಯಿಂದಿವಳಾಸಲ್ಲಿಸೊ ಮನದಾಶೆ | ಮಲ್ಲಮರ್ಧನ ಕೃಷ್ಣಾಚೆಲ್ವ ಹಯಮುಖಹರಿಯೆ | ಪ್ರಾರ್ಥಿಸುವೆ ದೇವಾ 3 ಪತಿ ಗೊಡೆಯಾಶೌದ್ದೋದನೀಯ ಮತ | ಪ್ರಧ್ವಂಸಗೈದವನೆಬುದ್ದಾವತಾರಿ ಹರಿ | ಉದ್ದರಿಸೊ ಇವಳಾ 4 ಜೀವ ಅಸ್ವಾತಂತ್ರ್ಯ | ಭಾವದಲಿ ನಿಲ್ಪಪರಿದೇವ ನೀ ಗೈಯುತ್ತ | ಭಾವುಕಳ ಪೊರೆಯೊ
--------------
ಗುರುಗೋವಿಂದವಿಠಲರು
ಹರಿದಾಸರು ದಾಸೋತ್ತಮ ನೀನೆ ಶ್ರೀ ವೈಕುಂಠ-ದಾಸೋತ್ತಮ ನೀನೆ ಪ. ಮಕ್ಕಳುಗಳಿಗೆ ಮೊಮ್ಮಕ್ಕಳುಗಳಿಗೆ ದೇ-ವಕ್ಕಳಿಗೆ ಮನುಮುನಿಗಳಿಗೆಸಿಕ್ಕದ ಪರಬೊಮ್ಮನ ಕೂಸುಮಾಡಿ ತಂ-ದಿಕ್ಕಿ ತೊಡೆಯಮ್ಯಾಲೆ ಆಡಿಸಿ ಮುದ್ದ್ದಿಸುತಿ[ಹ]1 ಅಪರೋಕ್ಷ ಜ್ಞಾನಿಯಾ[ದೆ] 2 ಹರಿಸರ್ವೋತ್ತಮ ಹಯವದನ ಮೂರುತಿ ವೇಲಾ-ಪುರದರಸಗೆ ಪ್ರತಿಬಿಂಬನಾದವರ ವೈಕುಂಠ ದಾಸೋತ್ತಮ ಎನಗೆ ಹರಿಯತೋರಿಸಿ ಪರಮ ಧನ್ಯನಮಾಡಿದ 3
--------------
ವಾದಿರಾಜ
ಹರಿಯೆ ಸ್ವತಂತ್ರ ಚತುರದಶ ಭುವನಕೆ | ಪರಮೇಷ್ಠಿ ಶಿವಾದ್ಯರಾತಗೆ ದಾಸರೆನ್ನು ಪ ಹರಿಹರರ ಒಂದೇ ಸ್ಥಾನದಲಿ ಕಾಣುವೆನೆಂದು | ಪರಮ ಭಕುತಿಯಿಂದ ಕ್ರೋಧಮುನಿಪ || ಧರಣಿಯೆಲ್ಲ ತಿರುಗಿ ಶುಕ್ಲವತೀ ತೀರಕೆ ಬರಲು | ವಸಂತ ಕಾಲದಂತೆ ಪೊಳಿಯೇ1 ತಪಸಿ ತಪವನೆ ಮಾಡುತಿರಲು ಖರಾಟಖಳ | ಉಪಹತಿ ಕೊಡುತಿಪ್ಪ ವರಬಲದಿ || ವಿಪುಳದೊಳಗಿವಗೆಲ್ಲಿ ಎದುರಾರು ಇಲ್ಲದಿರೆ | ಸುಪರ್ಣಾದಿ ಮೊರೆ ಇಡಲು ಬೊಮ್ಮಗೆ2 ಪರಮೇಷ್ಠಿ ಹರಿಯ ಬಳಿಗೆ ಬಂದು | ಖಳನ ಕೋಲಾಹಲವ ಬಿನ್ನೈಸಲು || ಪುಲಿತೊಗಲಾಂಬರನ ಸಹಿತ ಸರ್ವೋತ್ತಮನ | ಒಲಿಮೆಯಿಂದ ಬಂದು ಸುಳಿದರಾಗಂದು 3 ದಾನವನ ಕೊಂದು ದೇವತೆಗಳ ಸುಖಬಡಿಸಿ | ಜ್ಞಾನಕ್ರೋಢಮುನಿ ಮನಕೆ ಪೊಳೆದು || ಆನಂದದಿಂದಲಿ ನಿಂದು ಮೆರೆದ ಲೀಲೆ | ಏನೆಂಬೆನಯ್ಯ ಹರಿಹರ ವಿಚಿತ್ರಾ 4 ಪ್ರವಿಷ್ಠ ಕೇ| ಶವನು ತಾನೆ ಕಾಣೊ ಸ್ವಾತಂತ್ರನು || ಇವರು ಶಂಕರನಾರಾಯಣನೆಂಬೊ ಪೆಸರಿನಲಿ | ಅವನಿಯೊಳು ಪ್ರಖ್ಯಾತರಾಗಿ ನಿಂದಿಹರೋ 5 ಎರಡು ಮೂರುತಿಗಳು ನೋಳ್ಪರಿಗೆ | ಶ್ರೀ ನಾರಾಯಣಗೆ ಈಶ ಸಮನೇ 6 ಚಕ್ರ ಶಂಖ ಗದೆ ಪದುಮ ಹರಿಗೆ ನೋಡು | ಮುಕ್ಕಣ್ಣಗೆ ಡಮರುಗ ತ್ರಿಶೂಲವು || ಮುಖ್ಯ ದೇವತಿ ಹರಿ ಅವಾಂತರ ಶಿವನು | ಶಕ್ರಾದ್ಯರೊಲಿದು ಭೇದವನು ಪೇಳುವರು 7 ಸತ್ಯಂ ವದವೆಂಬ ಶ್ರುತಿವರದು ಪೇಳುತಿದೆ | ಭೃತ್ಯ ರುದ್ರನು ಕಾಣೊ ಲಕುಮಿವರಗೆ || ಸತ್ಯದಲಿ ಸಿದ್ಧವಯ್ಯ ಎಂದು ತಿಳಿದು | ಸ್ತೌತ್ಯ ಮಾಡಿದವಗೆ ವೈಕುಂಠ ಪದವಿ 8 ಕ್ರೋಢ ಪರ್ವತವಿದೆ ತೀರ್ಥ ಪಾವನಕರ | ನಾಡೊಳಗೆ ಕ್ಷೇತ್ರ ಉತ್ತಮ ಮಾನವಾ || ಪಾಡಿದರೆ ವಿಜಯವಿಠ್ಠಲರೇಯ ಒಲಿದು |ಕೂಡಾಡುವನು ದೃಢ ಭಕುತಿಯಿತ್ತು ಅನುದಿನಾ 9
--------------
ವಿಜಯದಾಸ
ಹಲವು ಚಿಂತೆ ಮರೆವುತಿದೆ ಹರಿ ನೆನೆದರೆ ನಮ್ಮ ಕುಲವೆ ಉದ್ಧಾರವಾಗುವ ಕಾಲವೊ ಪ ಕೊಲೆ ಅನೃತ ಕಳವು(ದಶಬಾರ ಪಟ್ಟಾರ) [?] ಸಲೆ ಬಯಸಿ ಸರ್ವರಲಿ ನೆನೆವುತಿದ್ದೆ ಒಲಿದು ವೈಕುಂಠಪತಿ ಒಮ್ಮೆ ನೆನೆದರೆ ಮನಕೆ ಬಲು ಹರುಷವಾಗುವ ಭಾಗ್ಯವೆಲ್ಯೊದಗಿತೊ 1 ಸತ್ಕರ್ಮಗಳ ಲೇಶ ಸ್ವಪ್ನದಲಿ ತಿಳಿಯದು ಮತ್ತತನದಲಿ ನಡೆದ ಮೂರ್ಖನಿಗೆ ಎತ್ತಲಿಂದೊದಗಿತೊ ಎನಗೆ ತಿಳಿಯದು ದೇವ ಉತ್ತಮನ ನೆನೆನೆನೆದು ಉಬ್ಬೇರುತಿಹದೊ 2 ಬಂದ ಕಾರ್ಯವ ಬಿಟ್ಟು ಮಂದಮತಿತನದಿಂದ ಬೆಂದ ದುರ್ವಿಷಯದಲಿ ಬಳಲುತಿದ್ದೆ ತಂದೆ ಕದರುಂಡಲುಗಿ ಹನುಮಯ್ಯನಾ ಪಾದ ಹೊಂದಿದಾ ನೆವದಿಂದ ಹೊಸ ಪರಿಯ ಕಂಡೆ 3
--------------
ಕದರುಂಡಲಗಿ ಹನುಮಯ್ಯ
ಹೆದರಿಕೆ ಬರುತದೆಲೋ ಪದುಮಾಕ್ಷ ನಿನ್ನ ಮುಂದೆ ಹೇಳಿಕೊಳ್ಳಲು ಎನಗೆ ಪ ಹೆದರಿಕೆ ಬರುತಿದೆ ಜಗದ ಜನರು ನಿನಗೆ ವಿಧವಿಧದಾಡುವ ಸುದ್ದಿಯ ಪೇಳಲು ಅ.ಪ ಹಳಿವರು ಹೆಳವನೆಂದು ಅಂಜದೆ ನಿನಗೆ ತಲೆಯಿಲ್ಲದವನೆನುವರು ಇಲ್ಲದೆ ಹೊಟ್ಟಿಗೆ ಹುಲ್ಲುಮೆದ್ದವನೆಂದು ಹಲವು ಬಗೆಯಲಿ ಹೀಯಾಳಿಪುದ್ಹೇಳಲು 1 ದೃಢದಿ ಭಕುತಜನರು ಬೇಡಿದ ವರವು ಕೊಡಬೇಕಾಗುವುದೆನುತ ಓಡಿ ಹಾವಿನಮೇಲೆ ಪವಡಿಸಿದ ಮಹ ಕಡುಲೋಭಿಯೆಂದೆಂಬ ನುಡಿನಿನ್ನೊಳ್ಪೇಳಲು 2 ಒದೆಸಿಕೊಂಡ್ವೊಯ್ಕುಂಠದಿ ಶೇಷಾಚಲದಿ ಸದನಗೈದನುಯೆಂಬರು ಇದು ಅಲ್ಲದತಿ ವಿಧವಿಧ ಲೋಕ ಸುಲಿದರ್ಥ ನಿಧಿಗಳಿಸಿದ ಚಿನಿವಾರೆಂಬದ್ಹೇಳಲು 3 ಕುದುರೆಮಾವುತನೆಂಬರು ಎಲವೋ ರಂಗ ಕದನಗಡಕನೆನುವರು ಹದಿನಾರು ಸಾವಿರ ಸುದತಿಯರೊಶನಾದ ಸುಧೆಗಳಜಾರನೆಂಬ ವಿಧಿಯನ್ನು ಪೇಳಲು 4 ವಿಪಿನವಾಸಿಕನೆನುವರು ನಿಷ್ಕರುಣದಿ ನೀ ಕಪಿವರನ ತರಿದೆನುವರು ಕಪಟ ತಿಳಿಯುವರಾರು ಅಪರೂಪಮಹಿಮನೆ ಕೃಪಾನಿಧಿ ಶ್ರೀರಾಮ 5
--------------
ರಾಮದಾಸರು
ಹೊತ್ತಾಗಿ ಹೊರಟಿಹೆನು ವೈಕುಂಠಕೆ ಮುಟ್ಟಬೇಕು ನಾನು ಪ ಹೊತ್ತಾಗಿ ಹೊರಟಿಹೆ ಹೊತ್ತುಗಳೆದು ವ್ಯರ್ಥ ವತ್ತರದಿಂ ಪೋಗಿ ಹೊತ್ತೆ ಮುಟ್ಟಬೇಕು ಅ.ಪ ಊರುದೂರಾದಿನ್ನು ಕೇಳದೆ ಅರುಮಾತನಾನು ಊರಜನರ ಮಾತು ಮೀರಿ ಆತುರದಿಂದ ಪಾರವಾರಿಲ್ಲದ ವಾರಿಧಿಯನೀಸಿ 1 ದಾರಿ ಅರಿಯೆ ನಾನು ಬಲ್ಲವರು ತೋರಿರೆ ಮಾರ್ಗವನು ಸಾರಮೋಕ್ಷಕ್ಕಾಧಾರನ ಪಟ್ಟಣ ಸಾರಸೌಖ್ಯ ತಲೆಸೇರಿ ಸಕಲ ಮೀರಿ 2 ಆ ಮಹ ಸುಕೃತಗೂಡಿ ನಾಮಾಮೃತಮಂ ನೇಮದಿ ಸವಿಯುತ ಸ್ವಾಮಿ ಶ್ರೀರಾಮನ ಪ್ರೇಮಯಾನವೇರಿ 3
--------------
ರಾಮದಾಸರು
ಹೊಳೆವೊ ಮಂದಿರವ ಪ. ರಂಗಗೆ ರಚಿಸಿದ ಶೃಂಗಾರದ ವೈಕುಂಠ ಮಂಗಳಾದೇವಿಯರು ಇಳಿಯಲಿ1 ವೀತದೋಷಗೆ ದಿವ್ಯ ಸೇತು ದ್ವೀಪವ ರಚಿಸಿ ಪ್ರೀತಿ ಮಡದಿಯರು ಇಳಿಯಲಿ2 ರನ್ನಮಾಣಿಕದ ಅರಮನೆ ಪನ್ನಿಯರು ಬಂದು ಇಳಿಯಲಿ 3 ಪಟ್ಟೆ ಮುತ್ತುಗಳ ಬಿಗಿದು ಇಟ್ಟಾವ ಕನ್ನಡಿ ಧಿಟ್ಟ ತೋರೋದೆ ಜನಕೆಲ್ಲ ಅಷ್ಟು ಮಡದಿಯರು ಇಳಿಯಲಿ 4 ಹಸಿರು ಪಚ್ಚವ ಬಿಗಿದ ಕುಸುರಾದ ಗಿಳಿಬೋದು ದೇವಕಿ ವಸುದೇವ ಬಂದು ಇಳಿಯಲಿ5 ಜತ್ತು ತೋರುವುದು ಜನಕೆಲ್ಲ ಜತ್ತು ತೋರುವುದು ಜನಕೆಲ್ಲ ಸರಸ್ವತಿ ಮತ್ತೆ ಚತುರ್ಮುಖನು ಇಳಿಯಲಿ 6 ಎದ್ದು ತೋರುವುದು ಜನಕೆಲ್ಲ ಎದ್ದು ತೋರುವುದು ಜನಕೆಲ್ಲ ಪಾರ್ವತಿ ರುದ್ರಾದಿಗಳೆಲ್ಲ ಇಳಿಯಲಿ 7 ಕುಂದಣ ರತ್ನಗಳಿಂದ ಹೊಂದಿ ಕಟ್ಟಿದರಮನೆ ಅಂಬರಕೆ ಮ್ಯಾಲೆ ತುಳುಕುವ ಶಚಿದೇವಿ ಇಂದ್ರಾದಿಗಳೆಲ್ಲ ಇಳಿಯಲಿ 8 ರೇವತಿ ಬಲರಾಮರು ಬಂದು ಇಳಿಯಲಿ9 ಒಂಭತ್ತು ಬಗೆ ರತ್ನ ತಂಬಿ ರಚಿಸಿದ ಮನೆ ಅಂಬರಕೆ ಮೇಲೆ ತುಳುಕುವ ಅಂಬರಕೆ ಮೇಲೆ ತುಳುಕುವರತಿದೇವಿಸಾಂಬ ಪ್ರದ್ಯುಮ್ನರು ಇಳಿಯಲಿ10 ಚಂದ ತೋರುವುದು ಜನಕೆಲ್ಲ ಚಂದ ತೋರುವುದು ಜನಕೆಲ್ಲಭಾನು ಮಾನು ಬಂದ ಜನರೆಲ್ಲ ಇಳಿಯಲಿ 11
--------------
ಗಲಗಲಿಅವ್ವನವರು
ಹೋಗಿ ಗುಡಿಯೊಳಗುಂಡು ಬೇಗ ಬಾರೋಭೋಗಿ ವರ ಕಾಲಿಂಗ ನಾಗ ಮರ್ದನನೇ ಪ ಸರಸಿಜಾಸನ ಬ್ರಹ್ಮ ಸರಸತಿಯ ಒಡಗೂಡಿಸಿರಿ ರಮಣ ವೈಕುಂಠ ಗಿರಿವಾಸನೆಸುರ ನದಿಯ ಜಲದಿಂದ ಎರಡು ತುಳಸಿ ಗಂಧಪರಮ ಕುಸುಮಗಳಿಂದ ಪರಿಚರಿಸುತಲಿಹರು 1 ತರಣಿ ಸಹ ಬಂದಿಹನುಸುರರ ತರುಣಿಯರೆಲ್ಲ ನೆರಹಿಕೊಂಡಿಹರು2 ಸುಂದರಾಂಗಿಯು ಬಕುಲೆ ಮಿಂದು ಪಾಕವ ಮಾಡಿತಂದಿಹಳು ಕ್ಷಿರಾಬ್ಧಿ ನಂದನೆಯುಇಂದಿರೇಶಗೆ ಕಾಮಿತೊಂದೊಂದೆ ಬಡಿಸುವಳುನಂದ ಸುಕುಮಾರ ಗೋವಿಂದ ಗಜವರದಾ 3
--------------
ಇಂದಿರೇಶರು
(ಅನಂತೇಶ್ವರ ದೇವರನ್ನು ನೆನೆದು)ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇಲೋಕೋತ್ತಮಾನಂತೇಶ್ವರ ದೇವಾಲಯದಿ ಪ.ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆಝಡಿದು ಬರುತಿಹುದು ಭೋರ್ಗುಡಿಪ ತೆರೆಯಝಡಿವ ನಾದಕೆ ಒಡಂಬಡದೇಕಾಂತದಿ ಬಂದುಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳುಭಾರವನು ಪೊತ್ತು ಬಹಳಾಲಸ್ಯವೋಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ-ಬೇಡಿದೆನು ಎಂಬ ನಾಚಿಕೆಯ ಮನವೋಖೋಡಿನೃಪತಿಯರ ಹೋಗಾಡಿಸುತ ಕಾಡಿನೊಳುಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯಕಾಲದೊಳು ಗೈವಂತಮೇಲುಕಾರಿಯದಕಾಲೋಚಿತವ ಮನದೊಳಾಲೋಚಿಸುತ್ತಹಿಯಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4ಯುಗಯುಗದೊಳವತಿರಿಸ ಜಗದ ಭಾರವನಿಳುಹಿಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ-ಗಲಭೆಯುಂಟೆಂದಲ್ಲಿ ನಿ¯ದೆ ಈಗಲಲನೆಯಳ ಕೂಡೆ ಸರಸಗಳನಾಡಲು ತನಗೆಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6ಸೇರಿರ್ದ ಶರಣ ಸಂಸಾರಿ ನೀನೆಂದುಶ್ರುತಿಸಾರುವುದು ಕರುಣವನು ತೋರೆನ್ನ ದೊರೆಯೇದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ-ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ