ಒಟ್ಟು 2483 ಕಡೆಗಳಲ್ಲಿ , 112 ದಾಸರು , 1812 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸಿ ಪಿಡಿಯಾ ಕೈಯ್ಯಾ | ಗುರುರಂಗವೊಲಿದರಾಯ ಪ ನಂಬಿದೆ ನಿನ್ನ ಚರಣ | ಬೆಂಬಿಡದೆ ಕಾಯೋ ಸತತ ಸ್ತಂಭದಲಿ ನೆಲಸಿದಂಥ | ಕುಂಭಿಣಿಪ | ದಾಸವರ್ಯ 1 ದೀನರ್ಗೆ ದಿವಿಜಧೇನು | ನೀನೆಂದು ಕ್ಷೋಣಿ ತಳದಿ ಜ್ಞಾನಿಗಳು ಪೇಳಿದಂಥ ವಾಣಿಯನು ಸತ್ಯಮಾಡೊ 2 ನಿನ್ನ ಸ್ಥಳವು ಪುಣ್ಯಕ್ಷೇತ್ರ | ನಿನ್ನಲ್ಲಿ ಸಕಲ ತೀರ್ಥ ನಿನ್ನ ಕವನ ಮಧ್ವಶಾಸ್ತ್ರ | ನಿನ್ನವನು ನಿಜಕೃತಾರ್ಥ3 ಹರಿದಾಡುವಂಥ ಮನಸು | ಹರಿಯಲ್ಲಿ ಸ್ಥಿರವಗೊಳಿಸೊ ಹರಿನಾಮ ಸುಧೆಯ ಕುಡಿಸೊ | ಹರಿವರನ ಮತವ ಪಿಡಿಸೊ 4 ಮತಿಭ್ರಷ್ಟನಾಗಿ ನಿನ್ನ ಕೃತಿಗಳನು ಪಾಡದ್ಹೋಗಿ ಕ್ಷಿತಿ ಭಾರನಾದೆ ಮುಂದೆ ಗತಿ ತೋರಿ ಸಲಹೊ ತಂದೆ 5 ಹೆತ್ತವರು ಸುತನ ದೋಷ | ಕೃತ್ಯಗಳ ಕ್ಷಮಿಸದಿಹರೆ ಚಿತ್ತೈಸು ಎನ್ನ ಮಾತ | ಉತ್ತಮರ ಸಂಗವಿತ್ತು 6 ತಳೆದೇಳು ಜನುಮಗಳಲಿ | ಇಳೆಯೊಳಗೆ ಚರಿಪ ಸಮಯ ಸುಳಿದಾಡು ಮತ್ತೊಮ್ಮೆ ಘೋರ ಕಲಿಬಾಧೆ ತಪ್ಪಿಸಯ್ಯ 7 ಮಾನವಿಯ ಸ್ಥಾನದಲ್ಲಿ | ನೀನಿರಲು ನಿನ್ನ ಮರೆದು ಮೋದ 8 ಕಂದರ್ಪಜನಕ ಶಾಮಸುಂದರ ಮೂರ್ತಿಹೃದಯ ಮಂದಿರದಿ ತೋರೋದಾತ ವಂದಿಸುಎ ನಿನ್ನ ಪದಕೆ 9
--------------
ಶಾಮಸುಂದರ ವಿಠಲ
ಕರುಣಿಸು ಕಾರುಣ್ಯನಿಧಿಯೇ ನಿನ್ನ ಚರಣವ ನಂಬಿದೆ ಶ್ರೀಪತಿಯೇ ಪ. ಕರುಣಿಸು ವರಗುಣಾಭರಣಸೇವಕ ಭಯ ಹರಣನೆ ಸುವಂದ್ಯಚರಣನೆ ರಘುವರ ಅ.ಪ. ಸುರರು ನಿನ್ನ ಚರಣವೇಗತಿಯೆಂದಿಹರು ಸರಸಿಜೊದ್ಬವೆ ನಿನ್ನ ಉರದಲ್ಲಿ ನೆಲೆಸಿರೆ ಪರಮಮಂಗಳಮೂರ್ತಿ ಪೊರೆಯೆನ್ನ ಕೈಪಿಡಿದೆತ್ತಿ 1 ಅಂಗಜಜನಕನೆ ನಿನ್ನ ಪಾದಂಗಳ ನಂಬಿರುವೆನ್ನಾ ಕಂಗಳಿಗಾನಂದ ಪೊಂಗುವಂದದಿ ಶ್ರೀ ರಂಗನೆ ದಯಾಪಾಂಗನೆ ಮೈದೋರು 2 ವರಶೇಷಗಿರಿವಾಸ ನಿನ್ನ ನಿಜ ಶರಣರ ದಾಸ್ಯದೊಳಿರಿಸೆನ್ನ ಕರವೆತ್ತಿ ಮುಗಿವೆನು ಭರಿಸೆನ್ನ ದೊರೆ ನೀನು ದುರಿತ ಕೋಟಿಗಳನ್ನು ಪರಿಹರಿಸೆಂಬೆನು 3
--------------
ನಂಜನಗೂಡು ತಿರುಮಲಾಂಬಾ
ಕರುಣಿಸೈ ಶ್ರೀ ರಾಮ ಕೌಸಲ್ಯ ಪ್ರೇಮ ಶರಣ ಜನಕನು ಪೊರೆವ ಕಾರುಣ್ಯಧಾಮ ಪ. ದಶರಥಾತ್ಮಜ ಯಜ್ಞ ಕಾಯ್ದು ಸೀತೆಯ ವರಿಸಿ ಕುಶಲದಿಂದಲಿ ಬಂದು ನಗರದಲ್ಲಿರಲೂ ಸತಿ ಅನುಜಸಹ ವನದಿ ನಸುನಗುತ ಚರಿಸಿ ರಕ್ಕಸರ ಸದೆಬಡಿದೆ 1 ಸತಿಯೆ ಕಳೆದಿರೆ ಹನುಮ ಹಿತವಾರ್ತೆ ಬಿನೈಸೆ ಹತಗೈದು ರಾವಣಾದಿಗಳನೆಲ್ಲ ಹಿತದ ರಾಜ್ಯದ ವಿಭೀಷಣ ರವಿಜರಿಗೆ ಇತ್ತು ವ್ರತ ಬಿಡಿಸಿ ಭರತನಿಗೆ ಧರಣಿಯಾಳಿದನೇ 2 ಪಟ್ಟಾಭಿರಾಮ ಮಂಗಳ ನಾಮ ಕೃಪೆಯಿಂದ ಇಷ್ಟಾರ್ಥವೀಯೊ ಸನ್ಮಂಗಳವನೂ ದಿಟ್ಟ ಶ್ರೀ ಹನುಮ ವಂದಿತ ಚರಣ ನಮಿಸುವೆನು ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೇ 3
--------------
ಅಂಬಾಬಾಯಿ
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರ್ಮ ದೊಡ್ಡದೊ ಸ್ವಾಮಿ ನಿನ್ನ ಮಹಿಮೆ ದೊಡ್ಡದೊ ಮುನ್ನಿನ ದೃಷ್ಟಾಂತದಿಂದ ನಿರ್ಣಯಿಸುವ ನಿತ್ಯಾನಂದ ಪ. ಅಡವಿಯಲ್ಲಿ ನಿಂತು ಮೃಗವ ಬಡಿದು ತಿಂಬ ಬ್ಯಾಡ ಕಡೆಗೆ ಗಿಡವ ಕೂಡಿಸೆಂದ ನುಡಿಯ ದೃಢಕೆ ಮೆಚ್ಚಿ ಕಡೆಹಾಯಿಸಿದೆ 1 ಉಗ್ರಭಾವದಿಂದ ತಮ್ಮ ಅಗ್ರಜರನ್ನು ಕೊಲಿಸಿದಂಥ ಸುಗ್ರೀವ ವೈಶ್ರವಣರ ಭಕ್ತಾಗ್ರಣ್ಯರೆಂದು ಕಾಯ್ದೆ 2 ಕರ್ಮ ಬಾಧೆ ಕಳದು ಕರುಣದಿಂದ ಮಾಧವ ನೀ ಸಲಹೊ ಶೇಷ ಭೂಧರೇಂದ್ರ ಶಿಖರವಾಸ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು ಪ ಜಲಜನಾಭನ ಕೃಪೆಯ ಪಡೆದವರು ಕೇಳಿ ಅ ಸತ್ಯಧರ್ಮಗಳೆಲ್ಲ ಎತ್ತ ಪೋದವೊ ಕಾಣೆಉತ್ತಮರ ಜೀವನಕೆ ದಾರಿಯಿಲ್ಲನಿತ್ಯದಲಿ ಕಳವು ವ್ಯಭಿಚಾರವುಳ್ಳವರೆಲ್ಲಅರ್ಥ ಸಂಪನ್ನರಾಗನುಭವಿಸುತಿಹರು1 ಅತ್ತೆಯೇ ಸೊಸೆಯಾಗಿ ಸೊಸೆಯು ಅತ್ತೆಯು ಆಗಿಪುತ್ರ ಪಿತನಾಗಿ ಪಿತ ಪುತ್ರನಾಗಿಮತ್ತೆ ಗಂಡನಿಗೆ ಹೆಂಡತಿಯೆ ಗಂಡಳು ಆಗಿವರ್ತಿಸುವರಯ್ಯ ತಮಗೆದುರಿಲ್ಲವೆಂದು 2 ವೈರಿ ಸಿರಿ ಮದದಿ ಸೊಕ್ಕಿದರುಕಾವರಾರೈ ಸಾಧು ಸಜ್ಜನರನೀಗ3 ವೇದ ವಿಪ್ರರು ತಮ್ಮ ವೃತ್ತಿ ಸ್ವಾಸ್ಥ್ಯವ ಕಳೆದುಆಧಾರವಿಲ್ಲದೆ ತಿರಿದು ತಿಂಬುವರುಕಾದುವ ಶೂರರಿಗೆ ಕಾಸು ಕೊಡುವವರಿಲ್ಲಮೇದಿನಿಗೆ ಬೀಳ್ವ ಮಳೆ ಖಂಡಮಂಡಲವು 4 ಅನ್ನವಸ್ತ್ರಗಳಿಂದ ಚೆನ್ನಾಗಿ ಬಾಳುವರಭಿನ್ನ ತಂತ್ರವ ಮಾಡಿ ಕೆಡಿಸುತಿಹರುಗನ್ನಗತಕವ ಮಾಳ್ಪ ಗ್ರಾಮಣ್ಯಗಳ ಕಲಿತುಕುನ್ನಿಗಳು ಹೆಚ್ಚಿದರು ಕ್ರೂರ ಫಣಿಯಂತೆ 5 ಆಳಿದೊಡೆಯಂಗೆರಡು ಬಗೆಯುವಾತಗೆ ಒಳ್ಳೆಮಾಳಿಗೆಯ ಮನೆ ತುರುವು ಧನಧಾನ್ಯವುವೇಳೆವೇಳೆಗೆ ಬರುವ ಹೆಂಡತಿಯ ಲೆಕ್ಕಿಸದೆಸೂಳೆಯನು ನೆಚ್ಚಿ ಕಾಲವ ಕಳೆವರಯ್ಯ6 ಸೇರಿ ದ್ರೋಹವ ಮಾಳ್ಪ ಕ್ರೂರಕರ್ಮಿಗಳ ಮತಪೂರೈಸಿ ಕೊಡುವರರಸುಗಳೆಲ್ಲರುಧಾರಿಣಿಯ ಭಾರವನು ತಾಳಲಾರದೆ ದೇವಿಶ್ರೀರಾಮ ರಾಮೆಂದು ಶಿರವ ತೂಗುವಳು7 ಪತಿ ನೀನೆ ಗತಿಯೆನಲುಮುತ್ತೈದೆಗುಡುವುದಕೆ ವಸ್ತ್ರವಿಲ್ಲಮತ್ತೆ ವ್ಯಭಿಚಾರಿಣಿಗೆ ತೊಡಿಗೆ ಬಂಗಾರಗಳುವರ್ತನೆಯಿದೇನಯ್ಯ ಕಲಿಯುಗದ ಮಹಿಮೆ 8 ಪತಿವ್ರತೆಯರೆಂಬುವರು ಶತಸಹಸ್ರಕೊಬ್ಬರುಮಿತಿಮೀರಿ ಇಹರಯ್ಯ ಇತರ ಜನರುಮತಿಗೆಟ್ಟು ಮನಸೋತು ಅನ್ಯ ಪುರುಷರ ಕೂಡಿಗತಿಗೆಟ್ಟು ಹೋಗುವರು ಮೂರು ತೊರೆದು 9 ಹರಿಹರರ ಪೂಜೆಗಳು ಹಗರಣಗಳಾದವುಉರಿ ಮಾರಿ ಚಾಮುಂಡಿ ಶಕ್ತಿಗಳಿಗೆಕುರಿ ಕೋಣ ನೈವೇದ್ಯ ಧೂಪದೀಪಗಳಿಂದಪರಮ ಭಕ್ತಿಯ ಸಲಿಸಿ ಪೂಜಿಸುವರಯ್ಯ10 ನಡೆವ ಕಾರ್ಯಗಳೆಲ್ಲ ನುಡಿಯಲೆನ್ನಳವಲ್ಲಒಡೆಯ ನೀನೇ ಬಲ್ಲೆ ಕಲಿಯುಗದ ಮಹಿಮೆತಡವ ಮಾಡಲಿ ಬೇಡ ತಾಳಲಾರದು ಲೋಕಮೃಡನ ವೈರಿಯ ಪೆತ್ತ ಆದಿಕೇಶವನೆ11
--------------
ಕನಕದಾಸ
ಕವಿತಾರಸದ ಸೊಬಗ ಕವಿಗಳೆ ಬಲ್ಲರಲ್ಲದೆಯುವತಿಯರು ಕವಿಯ ಹೃದಯವ ಕಂಡರುಂಟೆ ಪ ಕಾಗೆ ಬಲ್ಲುದೆ ದಿವ್ಯಚೂತಫಲರಸದಿನಿಯಗೂಗೆ ಬಲ್ಲುದೆ ಸೂರ್ಯನುದಯವನ್ನುರೋಗಿ ಬಲ್ಲನೆ ಸುಧಾರಸದ ಸುಸ್ವಾದವನುಭೋಗಿ ಬಲ್ಲನೆ ಯೋಗಮಾರ್ಗ ರೀತಿಯನು 1 ಕಣ್ಣಿಲ್ಲದವಗೆ ಕನ್ನಡಿಯಿದ್ದು ಫಲವೇನುಹೊನ್ನಿದ್ದರೇನು ಲೋಭಿಯ ಕೈಯಲಿಹೆಣ್ಣಿದ್ದರೇನು ಪೌರುಷವಿಲ್ಲದ ನರಗೆಪುಣ್ಯಹೀನಗೆ ಕನಕಶಿಲೆಯಿದ್ದರೇನು 2 ಗಾನರಸಮಾಧುರ್ಯವನು ಬಧಿರಬಲ್ಲನೆಆನೆ ಬಲ್ಲುದೆ ಚಂದನದ ರಸವನುಮಾಣಿಕದ ಮಾಲಿಕೆಯ ಮರ್ಕಟನು ಬಲ್ಲುದೆನೀನೊಬ್ಬ ಬಲ್ಲೆ ಕೆಳದಿ ರಾಮೇಶಲಿಂಗ 3
--------------
ಕೆಳದಿ ವೆಂಕಣ್ಣ ಕವಿ
ಕಾಗಿಣಿ ತೀರದ ಯೋಗಿವರ್ಯ ಗುರುವೇ | ನಿನ್ನಲಿ ಮೊರೆಯಿಡುವೆ ಪ ಭೋಗಿಶಯನ ಗುಣ ಯೋಗದಿಂದ ಭಜಿಪಾ | ಹರಿ ಪದಾಬ್ಜ ಮಧುಪಾ ಅ.ಪ. ಸಿಂಗರವೆನಿಸಿದ ಮಂಗಳವೇಡಿಯಲಿ |ನೀನುದಿಸುತಲಲ್ಲೀಸಿಂಗರಿಸಿಹ ಬಲು ರಂಗ ಕುದುರೆ ನೇರಿ | ರಾವುತರೊಡಸೇರೀ ||ಕಂಗೆಡುತಲಿ ಬಲು ತುಂಗೆ ಕಾಗಿಣೀಯಾ | ಸಾರುತ ತನಹಯಾ ಹಿಂಗದೆ ನದಿಯಲಿ ಮಂಗಳ ಹಯವೇರಿ | ನೀರ್ಗುಡಿದ ಬಾಯಾರಿ 1 ಆಚೆ ತಟದಿ ಅಕ್ಷೋಭ್ಯಮುನಿಪ ನೋಡಿ | ಸ್ವಪ್ನದರ್ಥ ಮಾಡೀಸೂಚಿಸಿದನು ತವ ಶಿಷ್ಯನ ಕೈಯಲ್ಲೀ | ಬಂದ ಸಾದಿ ಅಲ್ಲೀ ||ಯಾಚಿಸಿದನು ಮುನಿ ಪದಕೇ ಬಾಗೀ | ತುರ್ಯಾಶ್ರಮಕಾಗೀಖೇಚರ ವಹನಾಜ್ಞೆಯೆಂದು ತ್ವರ್ಯಾ | ಮಾಡ್ದ ಸಾದಿ ಯತಿಯಾ 2 ತಂದೆ ಬಹು ಕೋಪದಿಂದ ಬಂದೂ | ಯತಿಯ ನಿಂದಿಸ್ಯಂದೂತಂದು ಮಗನ ಏಕಾಂತ ಗೃಹಕೆ ಆಗ | ಸತಿಯನು ಕೂಡಿಸಿ ವೇಗ ||ಅಂದು ಕಂಡು ಸರ್ಪಾಕೃತಿ ಪತಿಯಾ | ಚೀರಿದಳ್ ಬಲ್ಪರಿಯಾತಂದೆ ಕೊಂಡು ಮಗನರ್ಪಿಸಿದನುಯತಿಗೇ | ಕ್ಷಮೆ ಬೇಡಿದನಾಗೇ 3 ತ್ರ್ಯಕ್ಷನಂಶ ಅಕ್ಷೋಭ್ಯ ಮುನಿಪ ಆಗ | ಸನ್ಯಾಸ ವೇಗಭಿಕ್ಷುಕ ಮಧ್ವರ ಗ್ರಂಥ ಪೊತ್ತ ವೃಷಭ | ಎನುತೀತನ ಪ್ರಭಾ ||ಲಕ್ಷಿಸಿವರ ಕರೆದನೂ ನಾಮಾನ್ವರ್ಥ | ಯತಿಯನೆ ಜಯತೀರ್ಥಕುಕ್ಷಿಲಿ ಮೆರೆವರಗೋಳ ಗುಹೆಯು ಅಲ್ಲೀ | ರಚಿಸಿದ ಟೀಕೆಗಳಲ್ಲೀ4 ಮಧ್ವಭಾಷ್ಯಕೇ ರಚಿತ ಟೀಕಾ ಗ್ರಂಥಾ | ನೋಡಿದ ಮುನಿ ಮತ್ತವಿದ್ಯಾರಣ್ಯರ ಗೆದ್ದ ಆರ್ಯ ಧೀರಾ | ಅಕ್ಷೋಭ್ಯರ ಕುವರ ||ಅದ್ವೈತಾದಿಗಳೇಕವಿಂಶ ಪಂಥ | ಗೆಲ್ಲುತ ಸುಧೆ ಗ್ರಂಥಅದ್ವಿತೀಯ ಗುರುಗೋವಿಂದ ವಿಠ್ಠಲಗೇ | ಅರ್ಪಿಸಿದನು ಆಗೇ 5
--------------
ಗುರುಗೋವಿಂದವಿಠಲರು
ಕಾಪಾಡೋ ಸುಬ್ರಹ್ಮಣ್ಯ ಮಹಸ್ವಾಮೀ ಪ ಅನುದಿನ ದಯಾಪರ ದೇವ ನೀನೂ ಮಮತೆಯಿಂದ ಕಾಪಾಡು ಎಂಬೆ ನಾನು ಸುಬ್ರಹ್ಮಣ್ಯ 1 ಉರಗ ಬೇಡ್ವೆ ನಿನ್ನ ಸುಬ್ರಹ್ಮಣ್ಯ2 ಚಿತ್ತಜ ಕುಮಾರಾ ಸುಬ್ರಹ್ಮಣ್ಯ3
--------------
ಬೆಳ್ಳೆ ದಾಸಪ್ಪಯ್ಯ
ಕಾಮಪಿತ ಪದಸರಸಿರುಹ ಭೃಂಗ ಭಂಗ ಪ ದಾಕ್ಷಾಯಿಣೀಪತೇ ಬಾಗಿ ವಿಜ್ಞಾಪಿಸುವೆ ದಾಕ್ಷಿಣ್ಯ ಲವಲೇಶವಿಲ್ಲವೊ ನನಗೆ ಸಾಕ್ಷಿಯೇಸು ಕೊಡಲಿದಕೆ ಬ್ರಹ್ಮನ ಶಿರ ತರಿದೆ ಸಾಕ್ಷಾತು ಪಿತನೆಂಬುದ ನೀ ಲಕ್ಷ್ಯವಿಡದೆ 1 ಸ್ಮರ ನಿನ್ನ ಕಿರಿತಂದೆ ಅಕ್ಷಿತೆರದೀಕ್ಷಿಸವನ ಬಿಡದೆ ದಹಿಸಿನಿಂದೆ ದಕ್ಷ ನಿನಗೇನಾಗಬೇಕು ತಿಳಿದು ನೋಡೊ ತಕ್ಷಣದಲವನನೆತ್ತಿ ಹರಿಗಡಿದೆ ನೀನು 2 ಪಾಪಯೇಸು ಮಾಡಿದರೆಯು ಭಯವೇನು ನಿನಗೆ ಶ್ರೀಪತಿ ರಂಗೇಶವಿಠಲಗೆ ಸರ್ವವರ್ಪಿಸಿ ತಾಪತ್ರಯ ದೂರ ವಿರಾಗಿಯಾಗಿ ಮನಸ್ಸು ನಿ- ಪರಿ ಮನಸ ಕೊಡು ಗುರುವೆ 3
--------------
ರಂಗೇಶವಿಠಲದಾಸರು
ಕಾಯ ಪ ದಾನವಾರಣ್ಯಪಾವಕ ವೀತಶೋಕ ಅ.ಪ. ಆನತೇಷ್ಟ ಪ್ರದಾಯಕ ನಮಿಸುವೆನು ಸದಾ ಮೈನಾಕಿಧರ ಬಿಂಬ ಸುರಮುನಿಕದಂಬ ಧ್ಯಾನಗಮ್ಯನೆ ಭಕ್ತರಾಪತ್ತು ಕಳೆ ಶಕ್ತಾ ನೀನೆ ಗತಿಯೆಂಬೆ ಮುನಿಮನ ವನಜ ತುಂಬೆ 1 ಶ್ರವಣ ಮಂಗಳನಾಮಧೇಯ ನಿರ್ಜಿತಕಾಮ ಸವನ ದ್ವಿತಿಯರೂಪ ವಿಗತಕೋಪ ಸ್ವವಶ ಸ್ವಾತಂತ್ರ್ಯ ವಿಖನಸ ಪೂಜ್ಯವಜ್ರನಖ ಪವಿ ದಂಷ್ಟ್ರದರ್ಶ ಭಾರ್ಗವಿರಮಣಗಶನಾ 2 ಆದಿದೇವಾನಂತ ಮಹಿಮನೇ ನಿಶ್ಚಿಂತಾ ಕಾದುಕೋ ನಿನ್ನವರ ವಿಬುಧ ಪ್ರವರಾ ಮೋದಮಯ ಶ್ರೀ ಜಗನ್ನಾಥವಿಠಲರೇಯ ವೈದಿಕವ ನುಡಿಸು ಲೌಕಿಕ ಮಾರ್ಗವ ಬಿಡಿಸು 3
--------------
ಜಗನ್ನಾಥದಾಸರು
ಕಾಯ ಪ ಗತಿ ನೀನೆ ಎನಗೆ ಸಂತತ ಪರಂಧಾಮಾ ಅ ಕೃಪಣ ವತ್ಸಲನೆ ಎಮ್ಮಪರಾಧಗಳ ನೋಡಿ ಕುಪಿತನಾಗುವರೇನೋ ಸುಫಲದಾಯೀ ನೃಪಗನಿರುದ್ಧ ಬಿನ್ನಪವ ಮಾಡುವೆ ನಿನಗೆ ಚಪಲ ಚಿತ್ತರಾದ ಕಾಶ್ಯಪಿಸುರರನ ಕಾಯೋ 1 ಮಾನ್ಯಮಾನದನೆ ಬ್ರಹ್ಮಣ್ಯದೇವ ನೀನೆಂದು ಉನ್ನತ ಶ್ರುತಿಗಳು ಬಣ್ಣಿಸುವುವು ಸನ್ನುತ ಮಹಿಮನೆ ನಿನ್ನ ಪೊಂದಿದವರ ಬನ್ನ ಬಡಿಸುವುದು ನಿನಗಿನ್ನು ಧರ್ಮವು ಅಲ್ಲ 2 ಹಲವು ಮಾತುಗಳಾಡಿ ಫಲವೇನು ಬ್ರಾಹ್ಮಣರ ಕುಲಕೆ ಮಂಗಳವೀಯೋ ಕಲುಷದೂರ ಸುಲಭ ದೇವೇಶ ನಿನ್ನುಳಿದು ಕಾವರ ಕಾಣೆ ಬಲಿಯ ಬಾಗಿಲ ಕಾಯ್ದ ಜಗನ್ನಾಥ ವಿಠಲಾ 3
--------------
ಜಗನ್ನಾಥದಾಸರು
ಕಾಯ ಬೇಕಿವಳಭಯ ಕೃತು ಭಯನಾಶ | ದಯದೋರೊ ಶ್ರೀಶ ಪ ವಾದೀಭ ಮೃಗರಾಜ | ವಾದಿರಾಜರ ದಯದಿಸಾಧನಕೆ ಹೆದ್ದಾರಿ | ನೀ ದಯದಿ ತೋರೀಮೋದ ತೀರ್ಥರ ಸಮಯ | ಧ್ಹಾದಿಯಲಿ ನಡೆವಂತೆಹೇ ದಯಾಂಬುಧಿ ಚೆನ್ನ | ಆದರಿಸೋ ಘನ್ನ 1 ಚಂದ್ರ ಸಮ ಸಂಕಾಶ | ಸಂಧಿಸಲು ಸ್ವಪ್ನದಲಿಇಂದು ಭಾಗ ನಿವಾಸ | ಸಂದರ್ಶನಿತ್ತೂ ಕಂದಿದ್ದ ಕನ್ಯೆಗೇ | ನಂದ ದಾಯಕನಾಗಿಸುಂದರನೆ ನರರೂಪಿ | ಸಂಧಿಸಿದೆ ಭಾಗ್ಯ 2 ಚಂದ್ರ ವದನೆಯು ಲಕುಮಿ | ಮಂದಿರಕೆ ಬರುತಲ್ಲೆನಿಂದಿರಲು ಸೌಭಾಗ್ಯ | ಸಂಧಿಸದೆ ಇಹುದೇಇಂದಿರಾರಾಧವಪದ | ಮಂದಸ್ಮಿತಾನನನೆಮಂದಿಯೊಳಗೀ ಶಿಶುವ | ಛಂದಾಗಿ ಸಲಹೋ 3 ಹರಿಗುರು ಸದ್ಭಕ್ತಿ | ಪರತತ್ವ ಸುಜ್ಞಾನ ಕರುಣಿಸುತ್ತ ಸಂತೈಸು | ಸುರ ವರೇಣ್ಯಾ |ಮರುತಾಂತರಾತ್ಮ ನಿ | ನ್ಹೊರತು ಅನ್ಯರ ಕಾಣೆಪರಿ ಹರಿಸೊ ಪ್ರಾಚೀನ | ಕರ್ಮಾಂಧ ಕೂಪಾ 4 ಭಾವಜ್ಞ ನೀನಾಗಿ | ಭಾವದೊಳು ಮೈದೋರೊಗೋವಿದಾಂ ಪತಿಯೆ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಕಾಯೊ ಕರುಣಾಕರನೆ ನೀಯನ್ನಾ ಕಾಯೋ ಆನಾಥರಕ್ಷಕ ದಯಾಸಿಂಧೂ ಪ. ಕಾಯೊಯನ್ನನು ಕರವಿಡಿದು ಕೃಪೆಯಿಂದ ನೀಯನ್ನಾ ಕಾಯೊದೇವರದೇವ ಶ್ರೀ ವೆಂಕಟೇಶ್ವರನೆ ಕಾಯೊ ಅ.ಪ. ನೀನಲ್ಲದೆ ಅನ್ಯತ್ರ ತಾಯಿ ತಂದೆಗಳಿಲ್ಲಾ ನೀನಲ್ಲದೆ ಬಂಧುಬಳಗವೆನಗಿಲ್ಲಾ ನೀ ಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 1 ತರುಳ ಕರಿಯಲು ಕಂಭದಿ ಬಂದು ಹಿರಣ್ಯಾಕ್ಷಕನ ಕರುಳ ತೆಗದು ವನಮಾಲೆ ಹಾಕಿ ನಿಂದೀ ನರಮೃಗರೂಪಿನಲಿ ಪ್ರಹ್ಲಾದಗೆ ವರವಿತ್ತೆ ನೀಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 2 ಜಲದೊಳಗೆ ನೆಗಳೆಯು ಹಿಡಿದು ಎಳೆಯುತ್ತಿರೆ ಬಹುಬಾಧೆಬಡಿಸೆ ನಿಮ್ಮ ನೆನೆಯಲು ನಿಲ್ಲದೆ ಬಂದೊದಗಿನೆಗಳೆಯನು ಶೀಳ್ದು ಕರಿರಾಜಗೊಲಿದು ರಕ್ಷಿಸಿದೊ ಶ್ರೀ ವೆಂಕಟೇಶ್ವರನೆ 3 ದುರುಳದುಶ್ಯಾಸ ದ್ರೌಪತಿ ಸೀರೆಯನು ಸೆಳೆಯೆ ಹರಿಣಾಕ್ಷಿ ಸಭೆಯೊಳಗೆ ಕೃಷ್ಣಾಯೆಂದುವದರೆ ಪರಿಪರಿ ವಸ್ತ್ರವನು ಕೊಟ್ಟೆ ಅಭಿಮಾನವನು ಕಾಯ್ದೊ ದೇವರದೇವ ಶ್ರೀ ವೆಂಕಟೇಶ್ವರನೆ 4 ಶಂಖಚಕ್ರಧರ ನಿನ್ನ ಚರಣವನು ನಂಬಿದೆ ಪಕ್ಷಿವಾಹನಸ್ವಾಮಿ ಕರುಣಾನಿಧೆ ಹೆಳವನಕಟ್ಟೆಯೊಳು ನಿಂದು ಭಕ್ತರನ್ನೆಲ್ಲಾ ಕಾಯ್ದ ದೇವರದೇವ ಶ್ರೀ ವೆಂಕಟೇಶ್ವರನೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಕಾಯೊ ಕರುಣಾನಂದ ಶ್ರೀಗುರು ಕೃಪಾನಿಧೆ ಕಾಯೊ ಕರುಣಿಸಿ ಎನ್ನ ಪೂರ್ಣ ನೀ ಕಾಯೊ ಪರಮದಯಾನಿಧೆ ಧ್ರುವ ತೊಡಿಸಿ ಕರುಣಾನಂದ ಕವಚವ ಇಡಿಸೊ ಭಗುತಿ ವೈರಾಗ್ಯವ ದೃಢಗೊಳಿಸುವ ಙÁ್ಞನಪೂರ್ಣ ನೀ ಕಡಿಸೊ ಕಾಮಕ್ರೋಧವ ನಡೆಸಿ ನಿತ್ಯವಿವೇಕ ಪಥದಲಿ ಕೂಡಿಸೊ ನಿಜಸುಬೋಧವ ಬಿಡಿಸೊ ಭವಭವ ಮೂಲದಿಂದಲಿ ಬಡಿಸೊ ಹರುಷಾನಂದವ 1 ಬಟ್ಟೆ ಕೊಟ್ಟು ಕಾಯೊ ಸತ್ಸಂಗವ ಮುಟ್ಟಿಮುದ್ರಿಸೊದೃಷ್ಟಾಂತವ ಸಟೆಯ ಮಾಡೊ ಅವಿದ್ಯವ ನಿಷ್ಠತನ ನೆಲೆಗೊಳಿಸಿ ಕಾಯೊ ನೀ ಇಟ್ಟು ಶಿರದಲಿ ಅಭಯವ 2 ಭಿನ್ನವಿಲ್ಲದೆ ನೋಡಿ ಎನ್ನನು ಧನ್ಯಗೈಸೊ ನೀ ಪ್ರಾಣವ ಕಣ್ದೆರಿಸಿ ಅಣುರೇಣುದಲಿ ಪೂರ್ಣಖೂನದೋರೊ ಸಾಕ್ಷಾತವ ಎನ್ನೊಳಗೆ ನಿಜಾನಂದ ಸುಖದೋರಿ ಪುಣ್ಯಗೈಸೊ ನೀ ಜೀವನ ಚಿಣ್ಣಕಿಂಕರ ದಾಸ ಮಹಿಪತಿ ರಕ್ಷಿಸೊ ಸಂತತವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು