ಒಟ್ಟು 1007 ಕಡೆಗಳಲ್ಲಿ , 98 ದಾಸರು , 873 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಕಜ ಮಧುಪ ನಮೋ ಪ ಮೋದ ಮೋದ ಬೋಧ ಶಾಸ್ತ್ರದುರ್ವಾದಿಗಳ್ ಜೈಸಿದ ಯತಿಯೆ ನಮೋ 1 ಯೋಗಿ ನಮೋ 2 ಭೂಸುರ ಋಣ ಕ್ಲೇಶಾಪಹ ನಮೊ ನಮೊಮೂಷಕ ಬಹು ಭಯ ನಾಶ ನಮೋ ||ಕಾಶಿ ಬದರಿ ರಾಮೇಶ್ವರ ಕ್ಷೇತ್ರ ಪ್ರವಾಸಿಸಿ ಸತ್ಕಥೆ ಕರ್ತೃ ನಮೋ ||ಲೇಶ ಮಣ್ಣು ತಾ ಕೊಡುತಲಿ ವಿಪ್ರಗೆದೋಷವ ಕಳೆದಗೆ ನಮೊ ನಮೋ ||ಮೀಸಲ ಮನದಿ ನಿಷೇವಿಸೆ ಸಂಸೃತಿಶೋಷಿಪ ಶ್ರೀ ಲಾತವ್ಯ ನಮೋ 3 ಎರ್ಡು ಭುಜದಿ ಹಯವದನನ ಚರಣವಬಿಡದೆ ಧರಿಸುವಗೆ ನಮೊ ನಮೋ ||ಮೃಡನುತ ನಾ ಹರಿಘ್ಹರಿ ವಾಣದಿಕಡಲೆ ಪೂರ್ಣ ಬಿಡದೀವಗೆ ನಮೋ ||ನಡುಮನೆ ದ್ವಿಜಸುತ ನಿಲಿಸ್ಯರ್ಚಿಸಿದಾಉಡುಪಿನ ಕೃಷ್ಣಾರ್ಚಕಗೆ ನಮೊ ||ಸಡಗರದಲಿ ಪರ್ಯಾಯಗಳನು ಮಾರ್ಪಡಿಸಿರುವಾತಗೆ ನಮೋ ನಮೋ 4 ಪತಿ ವಿಜಯವ ತಾಬರೆದು ಪೂಣೆಯಲಿ ಮೆರೆದಗೆ ನಮೋ ||ಎರಡೆರಡೊಂದು ವೃಂದಾವನ ಸ್ವಾದಿಲಿಸುರನದಿ ತಟ ನಿಲಿಸಿದವಗೆ ನಮೋ ||ಎರಡೊಂದು ವಿಕ್ರಮನುತ್ಸವ ಗೈಸಿದಗುರು ಗೋವಿಂದ ವಿಠಲಾರ್ಚಕಗೆ ನಮೋ 5
--------------
ಗುರುಗೋವಿಂದವಿಠಲರು
ಪಡಕೋ ನೀನ್ಹಿಡಕೋ ರಂಗ ಶಾಯಿನಾಮವ ಕಡಕೋ ನೀ ದುಡಕೋ ನಿಖಿಲೇಶನ ಪ್ರೇಮ ಪ ಜನಮೆಚ್ಚಿ ವಂದಿಸಲು ನಿನಗೆ ಬಂದದ್ದೇನೋ ಜನದೂಷಿಸಳಿದರೆ ನಿನಗೆ ಕುಂದೇನೋ ಮನಮೆಚ್ಚಿ ನಡೆದು ಬಿಡದನುದಿನದಿ ಗಳಿಸುವಿ ನೀ ಚಿನುಮಯ ಮನುಮುನಿವಿನಮಿತರ ಧ್ಯಾನ 1 ಅಹುದೆಂದು ಇಹ್ಯದವರು ಭವಬಂಧ ತೊಲಗಿಪರೆ ಸಹಿಸದೆ ಅಲ್ಲೆಂದು ಭವಕೆ ನೂಕುವರೆ ಕುಹುಕಿಗಳ ಎದೆಮೆಟ್ಟೆ ಸಹಿಸಿಬಂದ ನಿಂದೆಗಳ ಪಡಿ ದೃಢದಿ ಅಹಿಶಾಯೆ ಅಡಿಭಕ್ತಿ 2 ದೂಷಣ ಭೂಷಣನುಮೇಷ ಸಮಭಾವಿಸಿ ನಾಶನೆನಿಸುವ ಜಗದ ವಾಸನೆಯ ಕಡಿದು ದಾಸಜನರೊಡೆಯ ಮಮಶ್ರೀಶ ಶ್ರೀರಾಮನಡಿ ಧ್ಯಾಸದೊಳಗಿಟ್ಟುಪಡಿ ಲೇಸೆನಿಪ ಮುಕ್ತಿ 3
--------------
ರಾಮದಾಸರು
ಪತಿ ವಿಠಲ | ಶ್ರೀನಿವಾಸ ಪ ದೀನ ಜನ ಮಂದಾರ | ನೀನಿವನ ಸಲಹೋ ಅ.ಪ. ಮೋದ ಉಣಿಸಿವಗೇ 1 ಪ್ರಾಚೀನ ಕರ್ಮಾಂಧ | ಕೂಪದಲಿ ಬಿದ್ದಿಹೆನೊಖೇಚರೊತ್ತಮ ಪ್ರಾಣ | ಮತದಿ ಬಂದಿಹನೋವಾಚಿಸುತ ಇವನಲ್ಲಿ | ನಿಚೋಚ್ಚ ತರತಮನಮೋಚಿಸೋ ದುಷ್ಕರ್ಮ | ಕೀಚಕಾರಿ ಪ್ರಿಯಾ 2 ದಾಸ ದೀಕ್ಷೆಯಲಿ ಮನ | ದಾಶಿ ಬಲು ಇಟ್ಟಿಹೆನೊಶ್ರೀಶ ತ್ಯೆಜಸನೀನೆ | ಲೇಸು ಸತ್ಪಂಥಾ |ಸೂಸಿ ತೋರಿಹೆ ಹರಿಯೇ | ಹೇ ಸದಾಶಿವ ವಂದ್ಯಕ್ಲೇಶ ನಾಶನ ಕಾಯೊ | ವಾಸವಾನುಜನೇ 3 ತೈಜಸನೆ ನೀ ತೋರ್ದ | ತೇಜರೂಪೋಪಾಸಾಮಾಜದಲೆ ಪೇಳಿರುವೆ | ವಾಜಿವದನಾ |ಸೋಜಿಗದ ತರಳನಿಗೆ | ಓಜಸ್ಯ ಪಾಲಿಸುತರಾಜಿಸೋ ಇವನಲ್ಲಿ | ಮೂಜಗತ್ಪತಿಯೇ 4 ಸರ್ವಾಂತರಾತ್ಮ ತವ | ದಿವ್ಯ ಸಂಸ್ಕøತಿಯನ್ನಸರ್ವತ್ರ ಸರ್ವದಾ | ಓವಿ ಪಾಲಿಪುದೋ |ದುರ್ವಿ ಭಾವ್ಯನೆ ಗುರೂ | ಗೋವಿಂದ ವಿಠಲಯ್ಯದರ್ವಿ ಜೀವಿಯ ಕಾಯೊ | ಬಿನ್ನವಿಪೆ ಹರಿಯೇ 5
--------------
ಗುರುಗೋವಿಂದವಿಠಲರು
ಪತಿತಪಾವನ ಪರಮದಯಾಳು ಶ್ರೀನಾಥ ಅತಿಶಯಾನಂದಾತ್ಮ ಸದ್ಗುರು ಭಕ್ತಹೃತ್ಕಮಲಾಂಕಿತ ಧ್ರುವ ನಿತ್ಯಾನಂದ ನಿಜಗುಣ ನಿರ್ಗುಣರೂಪ ಶ್ರೀದೇವ ಉತ್ತಮೋತ್ತಮ ಸತ್ಯಶಾಶ್ವತ ಭಕ್ತಜನ ಉದ್ಧಾರಕ ಯತಿಜನಾಶ್ರಯಾನಂತಮಹಿಮ ಕೃಪಾಲ ಅತೀತ ತ್ರಿಗುಣ ಸತತ ಸುಪಥದಾಯಕ 1 ಅಚ್ಯುತಾನಂತ ಮುಚುಕುಂದವರದ ಮುಕುಂದ ನಿಶ್ಚಯಾನಂದೈಕ್ಯ ನಿರ್ಗುಣ ನಿಶ್ಚಲಾತ್ಮ ಕನುಪಮ ಸಚ್ಚಿದಾನಂದ ಸದ್ಗುಣ ಸಾಂದ್ರ ಸರ್ವಾತ್ಮ ಮಚ್ಛ ಕೂರ್ಮಾನಂತರೂಪ ಭಕ್ತವತ್ಸಲ ಶ್ರೀಧರ 2 ಅಚ್ಯುತ ಪಕ್ಷಪಾಂಡವ ಪಕ್ಷಿವಾಹನ ರಕ್ಷರಕ್ಷ ಜನಾರ್ದನ ಮೋಕ್ಷದಾಯಕ ಕರಿರಾಜವರದ ಕೇಶವಾಲಕ್ಷ ನಿಜ ಸು- ಬಿಕ್ಷ ಮಹಿಪತಿಗಿತ್ತು ಕಾಯೋ ಲಕ್ಷ್ಮೀಪತೆ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪನ್ನಂಗಶಯನ ನಿನ್ನ ನಾ ಬಿಡೆನಯ್ಯ ಪ ನಿನ್ನ ಬಿಡುವೆನೆಂತು ಎನ್ನ ಮನಸಿನ ಡೊಂಕನ್ನು ಚೆನ್ನಾಗಿ ತಿದ್ದಿ ಮನ್ನಿಸಿ ಸಲಹುವನಕ ಅ.ಪ ಕಾಲಿಲ್ಲದವನಾಗಿ ತಲೆಯುದರದಡಗಿಸಿ ಜಲದಿ ಮುಳುಗಲು ನಿನ್ನ ಬಲವ ಪಡೆಯದೆ ಬಿಡೆ 1 ನೆಲವನಗೆದು ಬೇರು ಮೆಲುತ ಚರಿಸಲು ಮತ್ತೆ ಹಲ್ಲುಕಿಸಿದು ಗರ್ಜಿಸಲು ಬಿಡೆನೊಲಿಸದೆ 2 ತಿರುಕನೀನಾದರು ಕರದಿ ಕೊಡಲಿಪಿಡಿದು ಶಿರ ತರಿವೆನೆನೆ ನಿನ್ನ ಚರಣಕಾಣದೆ ಬಿಡೆನು 3 ವನವಾಸಿಯಾದರು ಘನಚೋರನಾದರು ವನತೇರೊಳ್ಬತ್ತಲೆ ಕುಣಿದರು ಬಿಡೆ ನಿನ್ನ 4 ಭವಭಯನಾಶನ ದಯಾಕರ ಶ್ರೀರಾಮ ಹಯವೇರೋಡಲು ನಿನ್ನ ಸಹಾಯ ಪಡೆಯದೆ ಬಿಡೆ 5
--------------
ರಾಮದಾಸರು
ಪನ್ನಗಾಶಯನ ಹರಿ ವೆಂಕಟರಮಣ ಪ ವರ ಧ್ರುವನ ಪೊರೆದಂತೆ ಪ್ರಹ್ಲಾದಗೊಲಿದಂತೆ ಕರಿಯ ಸಲಹಿದಂತೆ ಕರುಣವಿರಲಂತೆ 1 ತರಳೆ ದ್ರೌಪದಿಯ ಅಭಿಮಾನ ಕಾಯ್ದಂತೆ ಧುರದೊಳು ನರನ ಶಿರವ ಉಳುಹಿದಂತೆ 2 ಶೇಷಾದ್ರಿವಾಸ ಜಗದೀಶ ಲಕ್ಷ್ಮೀಶ ಕ್ಲೇಶಪಾಶ ವಿನಾಶ ಜನಪೋಷ ವೇಂಕಟೇಶ 3 ಪರಮ ಮಂಗಳಮೂರ್ತಿ ಪಾವನ ಕೀರ್ತಿ ಧರೆಯ ರಕ್ಷಿಪ ಅರ್ತಿ ದಯವಾಗು ಪೂರ್ತಿ 4 ಮಕರ ಕುಂಡಲಧರ ಮಕುಟ ಕೇಯೂರ ಸಕಲಾಭರಣ ಹಾರ ಸ್ವಾಮಿ ಉದಾರ 5 ತಾಳಲಾರೆನು ನಾನು ಬಹಳ ದಾರಿದ್ರ್ಯ ಕೇಳುವರಿಲ್ಲ ಬಹು ಭವಭಯ ಕ್ಷುದ್ರ 6 ನೋಡಬೇಡೆನ್ನವಗುಣವ ದಮ್ಮಯ್ಯ ಬೇಡಿದಿಷ್ಟವನಿತ್ತು ಒಡಗೂಡಿ ಸಲಹಯ್ಯ 7 ಭಕ್ತಜನ ಸಂಸಾರಿ ಬಹುದುರಿತ ಹಾರಿ ಮುಕ್ತಿದಾಯಕ ದಾರಿ ಮುಂದೆ ನೀ ತೋರಿ8 ವರಾಹತಿಮ್ಮಪ್ಪ ಒಲವಾಗೆನ್ನಪ್ಪ ಸಾರಿದವರ ತಪ್ಪ ಸಲಹೊ ನೀನಪ್ಪ 9
--------------
ವರಹತಿಮ್ಮಪ್ಪ
ಪಂಪಾಪುರಾಧಿಪ ಶ್ರೀ ವಿರೂಪಾಕ್ಷ ನೀ ಪಾಲಿಪುದೆಮ್ಮನು ಪ ಶ್ವೇತ ಭಾಪುರೆ ಸುರಕುಲ ದೀಪ ಸದಾಶಿವ ಪಾದ ಸಮೀಪದ ಸೇವಕ ಅ.ಪ. ಹರಿಪಾದೋದಕ ಶಿರದಲಿ ಧರಿಸಿದ ಹರಿಕಥಾಮೃತ ಮಳೆಗರೆವೆ ನೀ ಕರುಣಿ ಸಂಕರುಷಣನ ಚರಣಾಬ್ಜ ಧೂಳಿ ಶ- ರೀರ ಲೇಪನದಿಂದ ವರ ತೇಜಯುತನೆ ಮುರಹರಗೆರಗದ ನರನಿಗೆ ನರಕವು ಸ್ಥಿರವೆಂದು ಸುರವರ ಭೇರಿ ಭೋರಿಡುತಿರೆ ನಿರುತ ಅವನ ಪದ ಮೆರೆಯದೆ ಮನಗೊಂಡೆ ಶರಣು ಅಮರನುತ ಗುರು ಶಿರೋಮಣಿಯೆ1 ದೇಶಕ್ಕೆ ದಕ್ಷಿಣ ಕಾಳಿಯೆನಿಸುವ ವಿ- ಶೇಷ ಸ್ಥಳದೊಳು ವಾಸವಾಗಿ ಅ- ದೋಷನಾಶನ ಸಂತೋಷದಿ ಗಿರಿಜೆಗೆ ಶ್ರೀಶನ ಮಂತ್ರೋಪದೇಶವ ಮಾಡಿದೆ ದಾಶರಥಿಯ ನಿಜದಾಸರೆನಿಸುವರ ಪೋಷಿಪೆ ಶಿವ ಪರಮೇಶ ಕೃಪಾಳೊ 2 ಕಂದುಗೊರಳ ಜೀಯ ಸಿಂಧೂರ ಮೊಗನಯ್ಯ ಕಂದರ್ಪಹರ ಭಕ್ತಬಾಂಧವ ಕಾಯೊ ಇಂದಿರೆರಮಣ ಗೋವಿಂದನ ಪಾದಾರ- ವಿಂದ ಭೃಂಗನೆ ಭವದಿಂದ ಕಡೆಗೆ ಮಾಡೊ ನಂದಿವಾಹನ ಎನ್ನ ಹಿಂದಣ ಕಲುಷಿತ ವೃಂದಗಳೋಡಿಸುವ ಇಂದುಧರ ಅರ- ಸಿರಿ ವಿಜಯವಿಠ್ಠಲನಕುಂದದೆ ಭಜಿಪ ಆನಂದವ ಕರುಣಿಸು 3
--------------
ವಿಜಯದಾಸ
ಪರಮ ಕರುಣಾಕರನೆ ಕರಪಿಡಿದು ಸಲಹೆನ್ನ ವರ ತಂದೆ ಮುದ್ದುಮೋಹನರೊಡೆಯನೆ ಪ. ಸಿರಿಯರಸ ಶ್ರೀ ಶ್ರೀನಿವಾಸ ಶ್ರೀ ಕೃಷ್ಣಹರೆ ಪರಮದಯಾಳು ದೇವ | ದೇವಅ.ಪ. ನಿರುತ ನೀ ಸ್ವಪ್ನದಲ್ಲಿ ಪರಿಪರಿಯ ರೂಪದಲಿ ತ್ವರಿತದಲಿ ತೋರಿ ಕಾಯ್ದೆ ಪರಮಪಾವನಮೂರ್ತಿ ಗುರು ಅಂತರ್ಯಾಮಿಯೆ ಕರಕರೆಯ ಬಿಡಿಸಿ ಸಲಹೊ | ದೇವ 1 ವಿಶ್ವತೈಜಸ ಪ್ರಾಜ್ಞ ತುರಿಯ ರೂಪಗಳಿಂದ ನೀ ಸ್ವಪ್ನಗಳನೆ ತೋರ್ವೆ ವಿಶ್ವೇಶ ಎನ್ನೊಳಗೆ ಸಾಕ್ಷಿಯಾಗಿರುತ್ತಿರ್ದು ವಿಶ್ವಮಯ ಚೇಷ್ಟೆ ಮಾಳ್ಪೆ | ದೇವ 2 ಈ ಶರೀರದೊಳಗೆ ಶ್ರೀ ತೈಜಸನೆ ನೀನು ವಾಸವಾಗಿರುತಲಿರ್ದು ನಾಶರಹಿತನೆ ಮೋಹಪಾಶದಲಿ ಸಿಲುಕಿಸಿ ಮೋಸಪಡಿಸುವರೆ ಎನ್ನ | ದೇವ 3 ಬಿಡಿಸೊ ದುರ್ವಿಷಯಗಳ ತಡವಾಕೊ ಹರಿ ಇನ್ನು ಒಡಲಿಗೊಡೆಯನೆ ಶ್ರೀಹರಿ ಕೊಡು ನಿನ್ನ ಪದಸೇವೆ ನುಡಿಸು ನಿನ್ನಯ ನಾಮ ಪಡಿಸು ಸುಖ ಅನವರತದಿ | ದೇವ 4 ಸ್ವಪ್ನ ವ್ಯಾಪಾರದಲಿ ಅಪ್ರತಿಮಮಹಿಮೆಗಳ ಕ್ಷಿಪ್ರದಿಂದಲಿ ತೋರಿದೆ ಸಪ್ತಫಣಿಮಂಡಿತನೆ ಒಪ್ಪದಿಂದಲಿ ಎನ್ನ ತಪ್ಪನೆಣಿಸದಲೆ ಕಾಯೋ | ದೇವ 5 ನೀತ ಗುರುಗಳ ದ್ವಾರ ಪ್ರೀತನಾದ ಹರಿಯೆ ಪಾತಕವÀ ಕಳದೆ ಸ್ವಾಮಿ ವಾತಜನಕನೆÀ ನಿನ್ನ ಖ್ಯಾತಿ ಪೊಗಳಲು ಅಳವೆ ಪ್ರೀತನಾಗಿದ್ದು ಸಲಹೊ | ದೇವ 6 ಶ್ರೀಪತಿಯೆ ಪರಮಪಾವನಮೂರ್ತಿ ವಿಖ್ಯಾತ ನೀ ಪ್ರೀತಿಲೀಲೆ ತೋರ್ದೆ ಕಾಪಾಡಿದೆಯೊ ಎನ್ನ ಶ್ರೀ ಗುರುಗಳೊಳಗಿರ್ದು ಗೋಪಾಲಕೃಷ್ಣವಿಠ್ಠಲ ದೇವ 7
--------------
ಅಂಬಾಬಾಯಿ
ಪರಮ ಕೃಪಾನಿಧೆ ಗೋಪಾಲದೇವ ಪ ಪರಿಪಾಲಿಸೋ ಎನ್ನ ಶ್ರೀಲೋಲ ಹರಿ ಅ.ಪ. ಪತಿತಪಾವನಾಶ್ರಿತ ಜನ ಪಾಲನ ಗತಿ ನೀನಲ್ಲದೆ ಕಾಣೆ ನಾ1 ಮಾನಾಭಿಮಾನ ನಿನ್ನಾಧೀನ ದೀನ ಜನಾವನ ನಿನ್ನವ ನಾ 2 ಅಜಭವಾರ್ಚಿತ ಆನಂದಾಚ್ಯುತ ನಿಜಪಥ ತೋರಿಸೊ ಶ್ರೀಕಾಂತ 3
--------------
ಲಕ್ಷ್ಮೀನಾರಯಣರಾಯರು
ಪರಮ ದಯಾಕರನೇ ಗೌರೀಸುತನೇ ಪರಿಪರಿಯಿಂದಲಿ ಪಾಲಿಸು ಯೆನ್ನನು ಪ ಸಿದ್ಧಿವಿನಾಯಕ ವಿದ್ಯಾಪ್ರದಾಯಕ ಸದ್ಬುದ್ಧಿಯ ಕೊಡು ಮೋದಕಪ್ರಿಯನೆ1 ಮೂಷಕವಾಹನ ದೋಷರಹಿತನೇ ಅಸುರನಾಶ ಸರ್ಪಾಕಟಿಸೂತ್ರನೇ 2 ಜಾನಕೀರಮಣ ಶ್ರೀ ಹನುಮೇಶವಿಠಲನ ಅನುದಿನ 3
--------------
ಹನುಮೇಶವಿಠಲ
ಪರಮ ಪುರುಷನ ಮೊದಲು ನಮಿಸುತಚರವವೈದಿದ ದೈವತಂಗಳಿಗೆರಗುವೆನು ಕ್ರಮದಿಂದ ಕೂಡುತಧರಣಿ ತಳದಲ್ಲಿ 1 ದರ್ಭ ಮುಖ ವಿಸ್ತರದಿ ಹಾಕುತಪದ್ಮ ಮೊದಲಾಸನದಿ ಪ್ರಾಂಗ್ಮುಖಇದ್ದರಗ್ರ್ಯಾಳ ಸಮ್ಮುಖ ಶ್ರದ್ಧೆ ಮಾಡುವುದು 2 ಕೂರ್ಮ ಆಸನಈಸು ಚಿಂತಿಸಬೇಕು ಎಂಬೋಭಾಷೆ ರಾಜಿಪುದು 3 ಧಾರುಣಿ ಮಂತ್ರದಲಿ ಕೂಡುತನಾರಸಿಂಹ ಸುದರ್ಶನಾಸ್ತ್ರದಿಆರು ದಿಕ್ ದಿಗ್ಬಂಧನಾಡಿಯಸೂರಿ ಮಾಡುವುದು 4 ನಾಗಭೂಷಾಜ್ಞೆಯಲಿ ಭೂತಗಳ್‍ಹೋಗಲೆಂಬುವ ಮಂತ್ರ ಪಠಿಸುತಯೋಗಿಗಳ ಪ್ರಾರ್ಥಿಸುತ ಸಂತತಯಾಗ ಮಾಡುವದು 5 ಹರಿಯ ಗುರುಗಳ ನಮನಗೋಸುಗಕರವ ಮನವನು ಶೋಧಿಸೂವುದುಎರಡು ಬೀಜಾಕ್ಷರದಿ ನಾಂಕುಎರಡು ಸ್ಥಾನದಲಿ 6 ಬ್ರಹ್ಮಹತ್ಯಾ ಮಂತ್ರದಿಂದಲಿತಮ್ಮ ವಾಮಾಂಗವನೆ ಮುಟ್ಟುತಅಧರ್ಮ ಪುರುಷನ ಚಿಂತಿಸುವುದುಕರ್ಮ ಕರ್ತೃಕನು 7 ಶೋಕ್ಷ ನಾಭಿಲಿ ಪಾಪ ಪುರುಷನನಾಶ ಹೃದಯದಿ ಭಸ್ಮ ತ್ಯಜಿಸುತಲೇಸು ವರುಣದಿ ಸುಧೆಯ ವೃಷ್ಟಿಲಿಸೂಸುವುದು ತನುವ 8 ಹೀಗೆ ನಿತ್ಯದಿ ಕಾಮಿನೀಯರುಬಾಗಿ ಪತಿಯಲೆ ಕಾರ್ಯ ಮಾಡುತನಾಗಶಯನ ನಕ್ಷರದ ತತ್ಸುಖಭೋಗ ಬಯಸುವುದು9 ನಾರಿಯರು ಗುರು ಮಂತ್ರದೀಪರಿಪೂರ್ವದಲೆ ಮಾಡುತ ಕೃಷ್ಣನಆರು ವರ್ಣವ ಪಠಿಸುತಲೆ ಗೃಹಕಾರ್ಯ ಮಾಡುವುದು 10 ರಾಮ ಮೊದಲಾದನ್ಯ ಮಂತ್ರಗಳ್‍ಕಾಮಿನೀಯರು ಜಪಿಸುತಲೆ ನಿಜಕಾಮದಿಂದಲೆ ಯೋಗ್ಯತಾವನುನೇಮದಿಂದಿರಲು 11 ತಾರತಮ್ಯವು ಪಂಚಭೇದವುಭೂರಿ ಭಕುತಿಲಿ ಭಜಿಸಿ ಕೃಷ್ಣನಆರು ವರ್ಣವು ಪಠಿಸುತಲೆ ತನ್ನು -ದ್ಧಾರ ಮಾಡುವನು12 ವಾಸು ಮಾಡುತಲೆನ್ನ ಮನದೊಳುಆಶು ಭೇದಕ ಸ್ತ್ರೀಜನಂಗಳಿಗೀಶ ಮಾಡಿದ ಇದನ ಇಂದಿ-ರೇಶಗರ್ಪಿಸುವೆ 13
--------------
ಇಂದಿರೇಶರು
ಪರಮ ಮಂಗಳ ಮೂರುತಿ ದಿವ್ಯಕೀರುತಿ | ಧರೆಯೊಳಗಿದೆ ವಾರುಕಿ ಪ ಕರವ ಪಿಡಿದು ಎನ್ನ | ಕರವ ಮಸ್ತಕ ಬಾಗಿಪೆ 1 ಪಾದ ಲಾಘವ ಮರೆಯಲ್ಲಿ | ಶ್ಲಾಘನ ಮಾಡಿದ ಮಾಘಧರನ ಪ್ರಿಯ 2 ನಿರುತ ಮಂತ್ರಾಲಯ ಪುರವಾಸಾ ಅಘನಾಶಾ| ಸಿರಿ ವಿಜಯವಿಠ್ಠಲನ ಚರಣ ಭಜಿಪ ಗುರುವೆ 3
--------------
ವಿಜಯದಾಸ
ಪರಮಾನಂದ ಕರುಣಾಸಿಂಧು ವರವ ನೀಡಲು ಭಕುತಬಂಧು ಪ ಪರಮಚರಿತ ದುರಿತರಹಿತ ಪೊರೆಯೊ ಪ್ರಥಮಜನರ ಪ್ರೀತ ಸ್ಮರಿಪೆ ನಿರುತ ಸುರಗಣನುತ ಮೊರೆಯೊ ಕೇಳೆಲೊ ವರಪ್ರದಾತ 1 ಉರಗಭೂಷ ಭಜಕಪೋಷ ದುರಿತನಾಶ ಸುಜನವಾಸ ವರಮಹೇಶ ತ್ರಿ ಜಗದೀಶ ಪೊರೆ ಪ್ರಕಾಶ ತ್ರಿಪುರನಾಶ 2 ನಿಗಮವಿನುತ ಭಗವದ್ಭಕ್ತ ಸುಗುಣವಿಖ್ಯಾತ ಜಗನ್ನಾಥ ಜಗಜೀವಿತ ಶ್ರೀರಾಮ ಪ್ರೀತ ಈಗೆನ್ನಂತರಂಗ ಪಾಲಿಸೊ 3
--------------
ರಾಮದಾಸರು
ಪರಲೋಕವಿಲ್ಲೆಂಬೊ ಪರಮ ಪಾಪಿಗಳಿಗೆ ನರಲೋಕವೇ ನರಕವಣ್ಣ ಪ ಪರಲೋಕವಿಹುದೆಂದು ಗುರುಕರುಣವನು ಪಡೆದ ಕುರುಬನದ ಅರಿತನಣ್ಣ ಅ.ಪ ಈಶ ಜಡ ಜೀವರೆಂಬುವ ಭಿನ್ನ ತತ್ವಗಳು ಈಶನೊಬ್ಬನೆ ಕರ್ತನಣ್ಣ ಸಾಸಿರದಿ ಆಸೆ ಭಂಗಗಳ ಪೊಂದುತಲಿರಲು ಮೀಸೆಯನೇತಕೆ ತಿರುವಬೇಕಣ್ಣ 1 ಹರಿಯು ಪರನಲ್ಲದಿದ್ದರೆ ಸರ್ವಭುವನಗಳು ಹರಿಯಧೀನದಲಿರುವುದೇಕೆ ಹರಿಯಧೀನಲಿಲ್ಲದಿದ್ದರೀ ಜಗದೊಳಗೆ ಕೊರತೆಯೇತಕೆ ಮಂದಿಗಳಿಗೆ 2 ದೇವದತ್ತನು ಧನಿಕ ಪ್ರೇತದತ್ತನು ಬಡವ ಯಾವ ಕಾರಣ ವಿಷಮಗತಿಗೆ ಸಾವು ನೋವುಗಳ ಪ್ರತಿಕ್ಷಣಗಳಲಿ ನೋಡಿ ದೊರೆ ಭಾವವಿರುವುದು ನ್ಯಾಯವೇ 3 ಈಶನಿಲ್ಲೆಂಬುವರು ಹೇಸಲಾರರು ಪಾಪ ರಾಶಿ ರಾಶಿಯ ಗಳಿಸಲು ಆಶೆಬಡುಕರ ಜಗವ ನಾಶಮಾಡಲು ರಾಜ ಶಾಸನಕೆ ಬುಡವೆಲ್ಲಿಯಣ್ಣ 4 ಇಂದು ಇದನು ಪಡೆಯುವೆ ಮುಂದೆ ಅಧಿಕ ಧನವನು ಗಳಿಸುವೆ ಸದೆ ಬಡಿಯುವೆನು ಪರರನೆಂಬ ನುಡಿ ತಮಗುಣದ ಬೆದೆಯಲಿರುವನು ನುಡಿವನು 5 ಎಲ್ಲಿಂದ ಬಂದೆ ಹೋಗುವುದೆಲ್ಲಿಗೆಂಬುದನು ಬಲ್ಲವಗೆ ಮುಕುತಿ ಇಲ್ಲೇ ಒಳ್ಳೆ ಮನವನು ಪಡೆದು ಬಲ್ಲವರ ಸೇವೆಯಿಂ ದೆಲ್ಲವನು ತಿಳಿಯಲಳವಣ್ಣ 6 ಕಾಯವಾಚಾಮನಸದಿ ತಪವಗೈಯುತ ಶುದ್ಧ ಭಾವವನು ಗಳಿಸಿರಣ್ಣ ದೇವಗುರು ಪ್ರಾಜ್ಞ ಪೂಜನ ಲಾಭವಿದು ವಿನಯ ಭಾವಕೆ ಪ್ರಸನ್ನರಿವರು 7
--------------
ವಿದ್ಯಾಪ್ರಸನ್ನತೀರ್ಥರು
ಪವಮಾನವಿಠಲ | ಕಾಪಾಡೊ ಇವನಾ ಪ ಭುವಿ ಭವ್ಯ ಮರುತಮತ | ದೀಕ್ಷೆಯುಳ್ಳವನಾ ಅ.ಪ. ಭಾವಿಮಾರುತರ ದಿವ್ಯ | ಪಾದಗಳನಾಶ್ರಯಿಸಿದೇವ ಗುಹ್ಯವು ಎಂಬ | ಆಖ್ಯಾನ ಪಠಿಸೀಭಾವಭಕ್ತಿಯಲಿಂದ | ಪೂರಿತನು ತಾನಾಗಿಧಾವಿಸಿ ಬಂದಿಹನೊ | ಎನ್ನ ಬಳಿಗಾಗಿ1 ಗುರುವನುಗ್ರಹ ಪಡೆದು | ಗುರುದತ್ತ ಅಂಕಿತವನೆರವಿನಾ ಸಾಧನವ | ವಿರಚಿಸಲು ಮಾರ್ಗಅರಿಯದಲೆ ಪ್ರಾರ್ಥಿಸುವ | ಕರುಣಪಯೋನಿಧಿಯೇಪೊರೆಯ ಬೇಕಿವನ ಪರಿಯ | ಮರುತಾಂತರಾತ್ಮ 2 ತರತಮಜ್ಞಾನವನು | ಹರಿಗುರು ಸದ್ಭಕ್ತಿಪರಿಪರಿಯಲಿಂ ವೃದ್ಧಿ | ಗೈಸಿವಗೆ ಹರಿಯೇಗುರು ಕರುಣ ಕವಚದಿಂ | ಹರಿಯ ಸರ್ವೊತ್ತಮತೆಅರಿವಾಗಲಿವಗೆಂದು | ಪ್ರಾರ್ಥಿಸುವೆ ಹರಿಯೆ 3 ಮೂರ್ತಿ | ಕೃತಿರಮಣ ದೇವ 4 ಮಧ್ವ ರಮಣನೆ ದೇವ | ಹೃದ್ಯ ಹರಿ ನಿನಕಾಂಬಹೃದ್ಯ ಸಾಧನ ಗೈಸಿ | ಉದ್ದರಿಸೊ ಇದನಾಶುದ್ಧ ಮೂರುತಿ ಗುರು | ಗೋವಿಂದ ವಿಠಲನೆಬುದ್ಧಿಯಲಿ ನೀನಿಂತು | ಶುದ್ಧ ಮತಿ ಈಯೋ 5
--------------
ಗುರುಗೋವಿಂದವಿಠಲರು