ಒಟ್ಟು 2545 ಕಡೆಗಳಲ್ಲಿ , 113 ದಾಸರು , 1936 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದು ಪ್ರಕಾರವೆ ಸ್ವಾಮಿ ಮಂದಿಯ ರಕ್ಷಿಸುವುದು ನಿಂದವರ ದೇಹದಲ್ಲಿ ಹಿಂದೆಮುಂದಭಯವನಿತ್ತು ಪ. ಅಪಾರ ಮಹಿಮ ನೀನು ಒಪ್ಪುವ ಹಯಾಸ್ಯನಾಗಿ ಎಪ್ಪತ್ತೆರಡು ಸಾವಿರ ಇಪ್ಪ ನಾಡಿಗಳೊಳಿದ್ದು 1 ಮುಖ ನಾಸ ನೇತ್ರ ಶ್ರೋತ್ರ ತ್ವಕ್ ನಖೇಂದ್ರಿಯ ತದ್ಗೋಳಕ ಸಕಲರೂಪಗಳಲ್ಲಿ ನೀನೆ ಆಧಾರವಾಗಿದ್ದು 2 ಶ್ವಾಸೋಚ್ಛ್ವಾಸ ಚೇಷ್ಟವಿಚÀಕ್ಷಣ ಹಾಸವಿಲಾಸ ಭೂಷಣ ಗ್ರಾಸಾವಾಸಂಗಳಿಗೆ ನಿವಾಸವಾಗಿ ಪ್ರೇರಿಸುವೆ 3 ಅನಂತ ರೂಪಗಳಲ್ಲಿ ನೀನೆ ಆಧಾರವಾಗಿದ್ದು 4 ಪ್ರಾಣೋಪಾನ ರೂಪಿನಿಂದ ವ್ಯಾನೋದಾನರೂಪನಾಗಿ ವ್ಯಾನೋದಾನ ರೂಪಿನಿಂದ ಉದಾನ ಸಮಾನನಾಗಿದ್ದು 5 ಪೂಜಾ ವ್ಯಾಖ್ಯಾನ ಕೀರ್ತನ ಭೋಜನ ಮಜ್ಜನಸುಖ ಭಾಜನೆಗಳಲ್ಲಿದ್ದು ಪೂಜ್ಯನಾಗಿ ಪ್ರೇರಿಸುವ 6 ವಿಶ್ವ ತೇಜಸ್ಸು ಪ್ರಾಜ್ಞಾ ತುರ್ಯಾ ಅವಸ್ಥಾತ್ರಯಂಗಳೆಲ್ಲ ಕೊಡುವೆ ಜಾಗ್ರತ್ಸ್ವಪ್ನ ಸುಷುಪ್ತಿಯಲ್ಲಿ ವಿಶ್ವಪ್ರೇರಕನಾಗಿದ್ದು 7 ಆತ್ಮರೂಪ ಆದ್ಯ ಅನಂತ ಅಂತರಾತ್ಮ ರೂಪನಾಗಿ ಜ್ಞಾ- ನಾತ್ಮ ರೂಪಿನಿಂದ ಪರಮಾತ್ಮರೂಪನಾಗಿ 8 ಅನಿರುದ್ಧ ಸಂಕರ್ಷಣ ಪ್ರದ್ಯುಮ್ನ ಘನ ವಾಸುದೇವ ನೆನೆವರ ಪಾಪ ಪರಿಹರಿಸುವ ನರಹರಿ 9 ನೀನು ನಿನ್ನ ದಾಸರಿಗಾಗಿ ಮನುಷ್ಯಮುಖದಿಂದ ತತ್ವ ತನುಗಳಿಂದ ಕುಡುವ ಅವರವರ ದೇಹ್ಯದೊಳಿದ್ದು 10 ಸರ್ವರೊಳಗೆ ನೀನಿದ್ದು ಅವರವರ ವಿಭಾಗದ ಕರ್ಮ ಪರೀಕ್ಷಿಸಿ ಪ್ರೇರಿಸುವ ವರ ಶ್ರೀಹಯವದನ 11
--------------
ವಾದಿರಾಜ
ಒಂದೆ ಮಾತನು ಕೇಳು ಒಂದೆ ನುಡಿಯ ಕೇಳು ಒಂದಿಪೆ ನಿನ್ನ ನಾನಿಂದು ಮಂದರಧರ ಚಂದದಿ ನೀತೆನಗಿಷ್ಟವರಾ ಪ ದುರಿತ ತನ್ಮಯವಾಗಿ ಇರುತಿರ್ಪ ಭವದೊಳು ಕಂಟಕ ಹೋರಿ ಹೋರಿಯು ಹರಿನಾಮ ಮಂತ್ರವ ಮರೆಯದೆ ಜಪಿಸಲು ಉರಿದರ ತಕ್ಷಣದೊಳು ಗಮಿಸುವವು 1 ಭವ ಬಾಧೆಗೆ ಶಿಲ್ಕಿ ತಾ ಶೋಧಿಸುತಿರೆ ನರ ಬಾದ್ಯವನು ಆದಿಮುನಿಯು ರಾಮ ಬೋಧನೆ ಪೇಳಲು ಬೂದಿಗೈದವಘರಾಶಿಗಳು 2 ಸುರಗಣನಾಯಕ ನರಸಿಂಹವಿಠಲ ಪೊಗಲಳವೆ ನಿನ್ನ ವರಲೀಲೆಯು ಮರೆಯದೆ ಪಿಡಿದಿಹೆ ನಿನ್ನಂಘ್ರಿಕಮಲವ ನಿರುತದಿ ನೀಡೋ ನೀ ಸೇವೆಯನು3
--------------
ನರಸಿಂಹವಿಠಲರು
ಒಂದೇ ಮತ ಹರಿಯ ಮತ ಒಂದೇ ಭಾವ ಸಿರಿಯರಸನ ಭಾವ ಸಲಹಿದ ನರಹರಿ ಒಂದೇ ಮನದಂಬರೀಷನ ಕಾಯ್ದ ಹರಿ ಒಂದೇ ಮನದಿ ಧ್ರುವನ ಕಾಯ್ದ ಹರಿ ಒಂದೇ ಗಳಿಗೆಯಲಿ ತನ್ನುಂಗುಟದಿ ಸೋಕಿಸೆ ಕಲ್ಲಾಗಿದ್ದಹಲ್ಲೆಯ ಪೆಣ್ ಮಾಡಿದ ತಂದೆಯಂದದಿ ಭಕ್ತರ ಹಿಂದೆ ಕಾದಿದ್ದು ಕರುಣಾಸಿಂಧು ಭಕ್ತರ ಬಂಧು ಸುಂದರಿ ಸಿಂಧುಸುತೆಯರಸನ ನಿತ್ಯ ನೆನಯಿರಿ ಹರಿ ಭಕ್ತರು 1 ಸಾರ ನಾಲ್ಕು ಯುಗದಾಧಾರ ನಾಲ್ಕು ಮುಖದಲಿ ನೆಲಸಿ ಸೃಷ್ಟಿಕಾರ್ಯವ ನಡೆಸಿ ನಾಲ್ಕು ಮುಖ ಬೊಮ್ಮನಲಿ ನಾನಿಲ್ಲವೆನಿಸಿ ನಾಲ್ಕು ಯುಗದಲಿ ಜನಿಸಿದ ರಕ್ಕಸರಿಗೆ ತಿಳಿಸಿ ನಾಲ್ಕು ಲೋಕದಿ ಮೆರೆದ ನಾಕಚಾರ ವಂದ್ಯ ನಾಲ್ಕು ಹಸ್ತದಿ ನಾಲ್ಕು ವೇದತಂದಾ ಮೂರ್ತಿ ನಾಲ್ಕು ವೇದದ ಸಾರದಮೃತ ಭಕ್ತರಿಗಿತ್ತು ಹದಿನಾಲ್ಕು ಲೋಕಕೆ ನಾನೇ ಕರ್ತನೆಂದರಿಸಿ ನಾಲ್ಕು ವಿಧದಲಿ ಕಾವ ಶ್ರೀ ಶ್ರೀನಿವಾಸನ ಭಕ್ತರಾದರೆ ಈ ಕಲಿಯುಗದಿ ನಾಲ್ಕು ಜನರು ಮೆಚ್ಚುವರು ನಿಮ್ಮ ಹರಿ ಭಕ್ತರೆ ಕೇಳಿ2 ನಿನ್ನ ಸಹವಾಸ ಸೈ ನಿನ್ನ ಒಡನಾಟ ಸೈ ನಿನ್ನ ರೂಪ ಚತುರ ಬುದ್ಧಿ ಎನ್ನ ಸೈ ಎನ್ನಲಾಪರೆ ನಿನ್ನ ಕೈ ಚಳಕವಿಲ್ಲದಲೆ ಜೈಸುವದೆಂತೀ ಕಲಿಕಾಲದಿ ಸ್ವಾಮಿ ಜೈಲುವಾಸದಿ ಕೂತು ನಿನ್ನ ಕಲ್ಯಾಣವ ಕಟ್ಟಿದರೊ ನಿನ್ನ ಭಕ್ತರು ಜೈ ಕರುಣಾಕರ ನಿನ್ನ ಭಕ್ತರ ಮಹಿಮೆ ನಾ ಪೊಗಳುವದೆಂತೊ ಜೈ ಎನಿಸಿಕೊಳ್ಳಲು ನಿನ್ನೊಲುಮೆ ಕಾರಣವಲ್ಲವೆ ಜೈವೆಂಕಟ ಶ್ರೀಶಾ ಶ್ರೀ ಶ್ರೀನಿವಾಸ ನಿನ್ನ ಭಕ್ತರಿಗೆ ಜಯ ಅಪಜಯವೆಲ್ಲಿ ನಿನ್ನ ಭಕ್ತರಿಗೆ ಎಂದೆಂದಿಗೂ ಜೈ ಹರಿಭಕ್ತರ ನೆನೆಯಿರಿ ಹರಿಭಕ್ತರು 3 ಯನ್ನ ಯತ್ನವೇನಿಲ್ಲಿದರೋಳು ಪನ್ನಗಾದ್ರಿ ನಿವಾಸನಲ್ಲದೇ ಯನ್ನ ಯತ್ನ ಸಲ್ಲುವುದೇ ಎನ್ನ ಮನಸಿಲಿ ಬಂದು ನಿಂದು ತಾನೇ ನುಡಿಸಿದನಿಂದು ಚೆನ್ನಗಿರಿಯರಸ ಭಕ್ತ ಜನ ಬಂಧು ಬಂದು ನಿಂದು ಎನ್ನ ಮನದಭಿಲಾಷೆ ಸಲಿಸೆ ದೀನ ವತ್ಸಲನು ಎನ್ನ ಕರದಲಿ ಬರೆಸಿ ನಲಿದಾಡಿದ ತನ್ನ ವಾಣಿಯನಿತ್ತು ಎನ್ನ ಕುಲದೈವ ಶ್ರೀ ಶ್ರೀನಿವಾಸನ ಕೃಪೆ ಎನ್ನ ಮೇಲೆಂತುಟೊ ಕಾಣೆ ಇನ್ನು ಈ ವಾಣಿ ಹರಿಯದೆಂದು ನುಡಿವುದು ಹರಿಭಗವದ್ಭಕ್ತರು 4 ಪಾಮರರಿಗೆ ಕಲ್ಪತರು ಪಾಮರರಿಗೆ ಜಗದ್ಗುರು ವರವ ತೋರಿ ಪಾಮರರ ಪುನೀತರನು ಮಾಡೆ ಹರಿ ಪಾಮರೆಂದು ಲೆಕ್ಕಿಸದೇ ತಾವಲಿದು ನುಡಿಸಿದ ಪತಿತ ಪಾವನ್ನ ಶ್ರೀ ಶ್ರೀನಿವಾಸನದೇ ಈ ಉಕ್ತಿಯಲ್ಲರ ನೃತ್ರವಿಲ್ಲೆಂದು ತಿಳಿದು ಪಾಮರರನ್ನುದ್ಧರಿಸಲು ಹರಿಭಕ್ತರು ಪಠಿಸುವುದು ಈ ನುಡಿಯ 5 ಜತೆ ಶರಣು ಭಕ್ತರ ಪಾಲ ಶರಣು ಶ್ರೀಲೋಲಾ ಶರಣು ನಿನಗೆ ಸದಾ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಒಬ್ಬರ ಮಾತ್ಯಾಕೆ ನಾಲಗೆ ನೀನು ಉಬ್ಬದೆ ಸುಮ್ಮನಿರು ನಾಲಗೆ ಪ ಮಬ್ಬಿನಿಂದ ನೀ ಒಬ್ಬರ ಮಾತಾಡಿ ಕೊಬ್ಬನಿಂ ಕೆಡಬೇಡ ನಾಲಗೆ ಅ.ಪ ಮಂದಿ ಮಾತಾಡಲು ನಾಲಗೆ ನಿನಗೆ ಬಂದ ಭಾಗ್ಯವೇನು ನಾಲಗೆ ಒಂದು ಅರಿಯದೆ ಮನಬಂದಂತೆ ಮಾತಾಡಿ ಅಂದಗೆಡಲಿ ಬ್ಯಾಡ ನಾಲಗೆ 1 ನಿಂದೆಯಾಡಬೇಡ ನಾಲಗೆ ನೀನು ಕುಂದುವಡೆಯ ಬೇಡ ನಾಲಗೆ ಒಂದಿನ್ಹೋಗ್ವುದು ನಿನಗೆಂದಿಗೆ ತಪ್ಪದು ಮುಂದಿನ ಸುಖ ನೋಡು ನಾಲಗೆ 2 ಸತ್ಯ ತಪ್ಪಬೇಡ ನಾಲಗೆ ನೀನ ಸತ್ಯ ನುಡಿಯ ಬೇಡ ನಾಲಗೆ ಮೃತ್ಯುಗೀಡಾಗ ಬ್ಯಾಡ ನಾಲಗೆ 3 ಸುಳ್ಳನಾಡಬೇಡ ನಾಲಗೆ ಸದಾ ಒಳ್ಳೆ ಮಾತಾಡು ಕಂಡ್ಯ ನಾಲಗೆ ಸುಳ್ಳು ಈ ಜಗಕೆ ಮಳ್ಳನಾಗಿ ಯಮ ಕೊಳ್ಳಕೆ ಬೀಳ ಬ್ಯಾಡ ನಾಲಗೆ 4 ಹಾಳುಗೋಜ್ಯಾಕೆ ಕಂಡ್ಯ ನಾಲಗೆ ಕಾಲ ಹೇಳಿ ಬರದು ನಿನಗೆ ನಾಲಗೆ ಶೀಲಮನಸಿನಿಂದ ಪಾಲ ಶ್ರೀರಾಮಪಾದ ಕಾಲತ್ರಂiÀiದಿ ನೆನೆ ನಾಲಗೆ 5
--------------
ರಾಮದಾಸರು
ಒಯ್ಯೆ ಬಾಹ ಉಳಿಯೆ ಹೋಹ ನಲ್ಲನ ತಾಹ ಉಯ್ಯಾಲೆ ಉತ್ಸಾಹ ನಮ್ಮಪ್ಪನಿವ ತಾಯಿ ತಮ್ಮ ಪ. ಚಿನ್ನದ ಸರಪಣಿಯ ಚೆಲುವ ಪೊನ್ನಮಣಿಯ ರÀನ್ನದ ನೇಣ ತುದಿಯ ರಮಣಿಯರೆಲ್ಲರರ್ಥಿಯ1 ಈ ಮೈಯಲ್ಲಿ ಮಲಗಿಪ್ಪ ಈ ಮಹಾಲಕ್ಷ್ಮಿಯ ನೋಳ್ಪ ಸನ್ಮೋದನೆನಿಪ ಶೇಷಶಯನನ ವಟತಲ್ಪ 2 ಇಂದಿರೆ ಇಷ್ಟವನೀವ ಇಂದಿರೆಗಿವನು ಧವ ಎಂದೆಂದು ಭಕ್ತರ ಕಾವ ಎಸೆÉವ ಮಂಚದ ದೇವ 3 ಬಾರಯ್ಯ ಭಕ್ತರಬಂಧು ಬಾರಯ್ಯ ಕರುಣಾಸಿಂಧು ಇಂದು ಬಾರಯ್ಯ ಮುಕುಂದನೆಂದು 4 ಕುಂಜರ ಕೂಗಲು ಬಂದೆ ಕೂಡೆ ಮಕರಿಯ ಕೊಂದೆ ಕಂಜಾಕ್ಷ ಕಾಮನ ತಂದೆ ಕಾಯೆಂದು ಪಾಡಲು ಬಂದೆ 5 ಕಾಕರ ಗಂಟಲಗಾಣ ಕಾಮಿಸದೆನ್ನಯ ಮನ ಏಕೋದೇವನೆಂಬ ಜಾಣ ಏರಿದ ಮಣಿಯ ನೇಣ 6 ಅಖಿಳ ಸುರರ ತಾತ ರುಕುಮಿಣಿ ಪ್ರಾಣನಾಥ ರೂಢಿಗತಿಯ ಪ್ರತಿ ಈತ 7 ಮಾಯದ ದೈತ್ಯರ ಕೊಂದು ಮಲಗಬೇಕೆಂದು ಬಂದು ಹಯಗ್ರೀವರಾಯ ನಿಂದು ಹರುಷವ ತಾಳ್ದನೆಂದು 8 ಮುಂದೆ ದೇವಾಂಗನೆಯರು ಮುಖಸುತ್ತ ಮುಕ್ತಿಸುರ ವೃಂದದ ಮಧ್ಯದೊಳರವಿಂದಾಕ್ಷಿ ಪೊಳವುತ್ತಿರೆ 9 ಒಪ್ಪುವ ತಾಳಗಳೊಪ್ಪೆ ಒರಗಿಪ್ಪ ದೇವನುತ 10 ಮಾನ್ಯ ಶ್ರೀ ಹಯವದನ್ನ ಮನದ ಮಧುಸೂದನ್ನ ಎನುತ ತೂಗುವ ಜನ ಎಂದೆಂದು ಭಕ್ತಮೋದನ11
--------------
ವಾದಿರಾಜ
ಒಲ್ಲೆನವ್ವಾ ಲಕುಮಿಯ ನಲ್ಲ ಬಾರದಿದ್ದರೆತನುಹೊರೆಯನೊಲ್ಲೆನವ್ವಾ ಪ ಭಾರ ಹುವ್ವಿನಭಾರ ಸೈರಿಸಲಾರೆನೆಮಾರನಯ್ಯನು ಬಾರದಿದ್ದರೆಮಾರನಂಬಿಗೆ ಗುರಿಯ ಮಾಡಿ 1 ಎಲ್ಲ ದೇವರ ವಲ್ಲಭನೆಂದುಒಲಿದ ಮನ ನಿಲ್ಲದೆನಿಲ್ಲದೆ ರಂಗ ಪೋದ ಮಧುರೆಗೆಬಿಲ್ಲ ಹಬ್ಬದ ನೆವನ ಮಾಡಿ 2 ಮಂದಾನಿಲನ ಸಹಿಸಲಾಗದುನೊಂದೆ ಶುಕಪಿಕ ರವಗಳಿಂದಚಂದ್ರಕಿರಣದಿ ಬೆಂದೆ ಇನ್ನೀವೃಂದಾವನವೇಕನನಗಲಿ 3 ಮುನ್ನ ಆಡಿದ ಮಾತ ಮರೆತುಎನ್ನ ಮನದೊಳಗೀಡಾಡಿವನ್ನಜಾಕ್ಷನು ಬಾರ ಪುರದವನ್ನಿತೆಯರನು ಮೆಚ್ಚಿ ಪೋದ 4 ಪೊಂಗೊಳಲ ಧ್ವನಿಗೆ ಸಿಲುಕಿಭಂಗಗೆಟ್ಟೆನಂಗಜನಿಂದಲಿಪೆಂಗಳಿಗುಚಿತವಲ್ಲ ಇದುರಂಗವಿಠಲನ ತೋರದಿದ್ದಡೆ 5
--------------
ಶ್ರೀಪಾದರಾಜರು
ಒಲ್ಲೆನೀ ಕವಚ ಕುಂಡಲಗಳನ್ನು ಒಲ್ಲೆ ನಾನು ಕಿರೀಟ ಪಾದುಕೆಗಳನ್ನು ಪ ಹಗಲು ಹಾದರಗಿತ್ತಿಯಂತಿಪ್ಪ ಮನುಜನಿಗೆ ಸೊಗಸುವುದು ಸೊಗಸದೆಂಬರುಹಿಲ್ಲದೇ ಜಗದುದರ ನಿನ್ನಿಂದ ಶೋಭಿಸುವನಘ್ರ್ಯದ ವ ಸ್ತುಗಳ ಎನಗೀಯಲೇತಕೆ ಮೆಚ್ಚಿದೆಯೋ ದೇವ 1 ನೋಡಲೆವೆ ಸೀವುದಿದನಿಟ್ಟು ಕೈಕೊಂಡ ಪ್ರಾಣ ಗೂಡಿನೊಳಗಿಹುದೇ ಅಕಟಕಟ ಹರಿಯೇ ಬೇಡವೀ ಮಾಯ ಕೃಪೆಯಿಂದ ಸದ್ಭಕುತಿಯ ಜೋಡ ತೊಡಿಸಿದನೊಲ್ಲೆ ಕಾಡಬೇಡವೋ ದೇವ 2 ಶಿರಕೆ ಕರ್ಣಕೆ ಚರಣಗಳಿಗೆ ಕಥೆಯನ್ನು ಪೇ ಳ್ದೆರಗುವುದನೊಲಿದು ಕುಣಿದಾಡುವುದನು ಕುಂಡಲ ಕಿರೀಟಗಳನು ವರ ಪಾದುಕೆಗಳ ನಾನೊಲ್ಲೆ ಹರಿಯೇ 3 ನಿನ್ನ ದಾಸಾನುದಾಸ ದಾಸರ ಗುಣಾರ್ಣವದೊ ಳೆನ್ನೊಳೆಳ್ಳನಿತುಂಟೆ ಅಕಟಕಟ ಹರಿಯೇ ಬನ್ನಬಡಿಸಲು ಬೇಡ ದಕ್ಕದೀಯುಡುಗೊರೆಯು ಚುನ್ನವಾಡುವರು ಧಾತ್ರಿಯ ಮನುಜರೆಲೆ ದೇವ 4 ಇದನು ಕೊಡಬೇಕಾದಡೆಯು ಮುಕ್ತ್ಯಾಂಗನೆಯ ಮದುವೆಯನು ಮಾಡಿ ಯಾಬಳಿಕನಿತ ವೊದವಿಸುವುದುಚಿತ ಒಪ್ಪಂದವಾಗಿಹುದು ಚದುರ ವೈಕುಂಠ ವೇಲಾಪುರಾಧೀಶ 5
--------------
ಬೇಲೂರು ವೈಕುಂಠದಾಸರು
ಓ ಎನ್ನಬಾರದೇ ಹರಿಯೆ | ಶ್ರೀಯರಸನೇ ನೀನೇ ಗತಿಯೆಂದು ಅನ್ಯ ಉ| ಪಾಯವನರಿಯದ ಬಾಲಕ ಕರೆದರೆ ಪ ಹಾಲವ ಬೇಡುವ ಮೊರೆಯಿಡಲುಪಮನ್ಯು ಆ | ಬಾಲಗ ಧ್ವನಿ ದೋರಿದಂತೆ | ಚಾಲವರಿದು ಸರೋವರದಲಿ ಕರೆದ ಶುಂ| ಡಾಲಗೆ ಧ್ವನಿ ದೋರದಂತೆ | ವ್ಯಾಳ್ಯೆಕ್ಕ ಒದಗೆಂದು ರಾತ್ರಿಲಿ ಕರೆದ ಪಾಂ| ಚಾಲಿಗೆ ಧ್ವನಿ ದೋರಿದಂತೆ | ಕಾಲಕಾಲಕ ಬಂದು ಮೊರೆಯಿಡೆ ಸುರಮುನಿ | ಜಾಲಕ ಮೈದೋರಿ ಧ್ವನಿ ದೋರಿದಂತೀಗ 1 ಆವಾಗ ಧ್ವನಿದೋರಿದಂತೆ | ಗೋವ ಮೇಯಿಸಿ ತೆರಳಲು ಗೊಲ್ಲರೊದರುವ ಭಾವಕ ಧ್ವನಿದೋರಿದಂತೆ | ದೇವ ನೀಮರಿಯಾಗೆ ಹುಂಕರಿಸ್ಸೊದರಲು | ಆವಿಗೆ ಧನಿ ದೋರಿದಂತೆ | ಕಾವನೈಯ್ಯನೆ ನಿನ್ನ ನೆನೆದ ಗೊಲ್ಲತೆರಾ | ಜೀವನ ಹಿತವಾಗಿ ಧನಿದೋರಿದಂತೀಗ 2 ಬಂದೂಳಗಕ ನಿನ್ನ ಪಾಂಡವರೊದಲು | ನಿಂದು ನೀ ಧನಿದೋರಿದಂತೆ | ಇಂದಾದಾ ಕಲಿಯುಗದ ದಾಸರ ಮಾತಿಗೆ | ಬಂದು ನೀ ಧನಿ ದೋರಿದಂತೆ | ಕಂದನಳುವ ಧ್ವನಿ ಕೇಳುತ ಜನನಿ ಅ | ನಂದದಿ ಧನಿದೋರುವಂತೆ | ತಂದೆ ಮಹಿಪತಿ - ನಂದನ ಪ್ರಭು ಗೋ | ವಿಂದ ಮುಕುಂದೆನ್ನ ಸಲಹೆಂಬ ಮೂಢನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಓಂ ನಮೋ ನಾರಾಯಣಾಯ ತೇ ನಮೋ ನಮೋ ನಮೋ ಪ ಓಂ ನಮೋ ಓಂಕಾರಾದಿ ನೀ ಘನ್ನ ಮಹಿಮ ಅಷ್ಟಾಕ್ಷರಾತ್ಮಕನೆ ಅ.ಪ ಪ್ರಣವ ಪ್ರತಿಪಾದ್ಯ ನೀ ಅಷ್ಟಾಕ್ಷರದೊಳು ವಿಶ್ವತÉೈಜಸ ಪ್ರಾಜ್ಞ ತುರ್ಯಾತ್ಮ ಅಂತರಾತ್ಮ ಪರಮಾತ್ಮ ಜ್ಞಾನಾತ್ಮ ವರ್ಣಾತ್ಮಕ ನೀ ಓಂಕಾರದೊಳು ಅಉ ಮನಾದಬಿಂದು ಘೋಷ ಶಾಂತ ಅತಿಶಾಂತದೊಳು ಪ್ರತಿಪಾದ್ಯಮೂರುತಿ ಹರೆ1 ಪ್ರಣವದೊಳು ಆದಿವರ್ಣದಿಂದಭಿವ್ಮಕ್ತಿ ಕಾಲಗಳ್‍ವ್ಯಕ್ತವೊ ಪ್ರಾಣ ಲಕುಮಿಯಭಿಮಾನಿಗಳನಂತ ವೇದಗಳಿಂ ವಿಶ್ವಮೂರುತೀ ಹರೆ2 ವಯ್ಯ ಕವರ್ಗ ವರ್ಗವೈದು ಪಂಚಭೂತಗಳಂ ವರ್ಣದೊಳಭಿಮಾನಿಗಳ್ ಭೂತಕ ಗಣಪ ಪ್ರಹವವಾಯು ತೈಜಸ ಮೂರುತೇ3 ಪ್ರತಿಪಾದ್ಯನೆ ಮಕಾರ ವಾಚ್ಯ ಶ್ರೀ ಪ್ರಾಜ್ಞ ನಿನ್ನಿಂದಭಿ- ವ್ಯಕ್ತಿ ಚವರ್ಗ ಪಂಚಕ ಜ್ಞಾನೇಂದ್ರಿಯ ವೈದು ಸೂರ್ಯ ಪ್ರಾಣ ದಿಗ್ದೇ- ವತೆಗಳಿಹರು ಪ್ರತಿಗಾಣಿನೊ ಶ್ರೀ ಪ್ರಾಜ್ಞಮೂರುತಿ ಹರೆ4 ನಾದವಾಚ್ಯಪ್ರತಿಪಾದ್ಯ ತುರ್ಯನೆ ಅಭಿವ್ಯಕ್ತ ಪಂಚವರ್ಣ ಟವರ್ಗ ಕರ್ಮೇಂದ್ರಿಯಗಳ್ ಶ್ರೀ ತುರ್ಯ ಮೂರುತೆ 5 ಬಿಂದುವಾಚ್ಯ ಪ್ರತಿಪಾದ್ಯ ನೀನಾತ್ಮ ಬಿಂದುವಿಂದ ತವರ್ಗ ಪೊಂದಿಕೊಂಡಿಹುದು ತನ್ಮಾತ್ರಪಂಚಕ ಪಂಚವಾಯುಗಳಿಹರಯ್ಯ ಬಂಧ ಮೋಚಕ ನೀ ಕಾರಣ ಹರೆ 6 ಘೋಷದಿಂದಲಭಿವ್ಯಕ್ತಿ ಪಂಚಮನೋ ವೃತ್ತಿಗಳದರಭಿಮಾನಿ ಓಷಧೀಧರ ಖಗಪ ಶೇಷೇಂದ್ರ ಕಾಮರು ಪಕಾರ ಪಂಚವರ್ಣ ದೋಷರಹಿತ ಮನೋಧಾಮದಿ ನೀ ದೊರೆ 7 ಕಾರಾದಿ ಸಪ್ತವರ್ಣ ಸಪ್ತಧಾತುಗಳಲ್ಲಿ ಪರಿ ಅರಿಯೆನೊ ಹರಿಯೆ 8 ಅತಿ ಶಾಂತದೊಳು ಪ್ರತಿಪಾದ್ಯನಾಗಿಹೆ ಜ್ಞಾನಾತ್ಮ ಹಕಾರಾದಿ ತ್ರೈವರ್ಣ ಅದರಿಂದ ಗುಣಕ್ರಿಯವೊ ತತುಕ್ರಿಯ ಜಾಗೃತ ಸ್ವಪ್ನ ಸುಷುಪ್ತಿ ವಿಶ್ವಾದಿರೂಪದಿಂದ ಉರಗಾದ್ರಿವಾಸವಿಠಲ ಮೂರುತೇ 9
--------------
ಉರಗಾದ್ರಿವಾಸವಿಠಲದಾಸರು
ಓಡಿ ಓಡಿ ಬಾ ಅಂಕದೊಳಾಡೋ ಕೂಸೇ ಬಾ ಪ ನೋಡುವೆ ನಿನ್ನ ರಾಮರ ಮುಖದಿ ಕೂಡಿ ಕರುಣಿಯೆ ಬಾ ಅ.ಪ. ಚೆಂಡು ಕೊಡುವೆನು ಬಾ ಗೋಲಿಗುಂಡು ಕೊಡುವೆನು ಬಾದುಂಡು ಕರದೊಳ್ ಗುಂಡು ಬಿಂದುಲಿ ಉಂಗುರನೀಡುವೆ ಬಾ 1 ಬೆಣ್ಣೆ ಕೊಡುವೆನು ಬಾ ಬಾಳೆಹಣ್ಣು ಕೊಡುವೆನು ಬಾಸಣ್ಣ ಸಣ್ಣ ಹೆಜ್ಜೆನಿಕ್ಕುತ ಮನ್ಮಥಪಿತನೆ ಬಾ 2 ನಾರಿವತ್ಸೆ ಬಾ ಮುತ್ತಿನ ಹಾರ ಹಾಕುವೆ ಬಾಪಾರಿಜಾತ ಮುಡಿಸಿದ ರುಕ್ಮಿಣಿಧೀರ ಕೃಷ್ಣನೆ ಬಾ 3 ಮುರಳೀಧರನೆ ಬಾ ಮುಂಗುರಗಳ ಭೂಷಿತ ಬಾಪರಿಪರಿವಸ್ತ್ರವನಿಟ್ಟು ನೋಡುವೆ ಮರಳಿ ಮರಳಿ ಬಾ 4 ನಂದನ ಕಂದನೆ ಬಾ ಮನಕಾನಂದಪಡಿಸುತ ಬಾನಿಂದಿರಲಾರೆ ನಿನ್ನನು ನೋಡದೆ ಇಂದಿರೇಶನೆ ಬಾ 5
--------------
ಇಂದಿರೇಶರು
ಓಡಿಬಾರೊ ರಂಗನಾಥ ಪ್ರಿಯಾ ಪ ನೋಡೀ ಕೂಡೀ ಆಡೀ ಪಾಡುವೆ ಅ.ಪ ಮಾಡಬಾರದೆಲ್ಲ ಮಾಡಿ ಬಂದೆ ಬಂದೆ [ಓಡಿಬಂದು] ನಿಂದೆ ಕಂದಾ ತಂದೆಯೆ 1 ಏತಕೆನ್ನ ಮೇಲೆ ಇಷ್ಟು ಕೋಪ ಕೋಪಾ [ಆರ್ತರ] ಪಾಲಿಸ ಭೂಪಾ ಶ್ರೀಶನೆ2 ಗುರುವು ತುಲಸಿರಾಮ ದಾಸಪ್ರೇಮಾ ಪ್ರೇಮಾ [ವರ] ಕಾಮೀ ನಾಮ ಶ್ಯಾಮನೆ 3
--------------
ಚನ್ನಪಟ್ಟಣದ ಅಹೋಬಲದಾಸರು
ಓದು ಬೇಡ ನಿನಗೆ ಶಾಸ್ತ್ರ ಬೇಡ ಸುಶೀಲಬುದ್ಧಿಲಿ ದೃಷ್ಟಿ ನಿಲಿಸಿದರೆ ಸಾಕೋ ಪ ವೇದ ಎನ್ನಲಿ ಬೇಡ ಯಮುನೆಧುಮುಕಲಿ ಬೇಡ ಕಪ್ಪೆಯಂತೆ ನೀರಲಿ ಮುಳಗಬೇಡ ಬಾಯಿ ಬಿಗಿಯಲಿ ಬೇಡ ಮೂಗ ಹಿಡಿಯಲಿಬೇಡ ಆ ಜಾಗದಲಿ ದೃಷ್ಟಿ ನಿಲಿಸಿದರೆ ಸಾಕೋ 1 ಆಯಾಸ ಬಡಬೇಡ ಅಡವಿ ಸೇರಲಿ ಬೇಡಕಾವಿ ಕಮಂಡಲ ಧರಿಸಬೇಡಜಪವ ಎಣಿಸಲಿ ಬೇಡ ಉಪವಾಸವಿರಬೇಡಕಾಳಷ್ಟು ದೃಷ್ಟಿ ನಿಲಿಸಿದರೆ ಸಾಕೊ 2 ಎರಡೂ ಕಣ್ಣಿನಿಂದ ನೋಡಿ ನಿಂತಿರಲಾಗಿಶರೀರ ಬಯಲಾದರೂ ಅಳಿವು ತಪ್ಪುದುಅರಿವಿಗೇ ಅರಿವಾಗಿ ಅರಿವಿಗೆ ಕುರುಹಾಗಿಗುರು ಚಿದಾನಂದನ ಗುರುತು ಇಲ್ಲೆನ್ನಬೇಡ 3
--------------
ಚಿದಾನಂದ ಅವಧೂತರು
ಕಂ||ಇಂದುವಿನ ವಾರದರ್ಚನೆಸಂದುದು ನಿನ್ನಡಿಗಳಿಂಗೆ ಗ್ರಹಗತಿ ಸೂಚಿಸೆಹಿಂದಣ ಕರ್ಮದ ಫಲವನುಸಂದೇಹವು ಬಿಡದು ಬಿಡಿಸು ವೆಂಕಟರಮಣನೆದುರಿತವನು ಪರಿಹರಿಸು ಸ್ಥಿರಭಕ್ತಿುರಿಸುತಿರುಪತಿಯ ಸ್ಥಿರವಾಸ ಶ್ರೀ ವೆಂಕಟೇಶ ಪಭಯವಾಗುತಿದೆ ದೇವ ಭಯಬಡಿಸುತಿರೆ ಕರ್ಮಭಯವಿಲ್ಲದಿರುವದೆಂತುಭಯನಿವಾರಕನಾಮ ಭಯತಿಮಿರ ರವಿಯಹುದುಭಯ ಹೋಗಿ ಸ್ಥಿರವಾಗಿ ಮನ ನಿಲ್ಲದಿಹುದು 1ಪರಮ ಯೋಗ್ಯನಿಗೊಂದು ಪಿರಿದಾದ ದುಃಖವಿದೆಪರಿಹರಿಸದಾವ ವಿಧದಿಕರಗಿ ಕಂದುತಲಿರಲು ಬಿರಿಸು ಕರ್ಮದ ಗತಿಯುನರಹರಿಯೆ ಮಹಿಮೆಯನು ನೆರೆ ತೋರಿಸೀಗ 2ಭಜನೆಯನು ಮಾಡಿದರೆ ಭಜನೆ ಕಾಮನೆಯಾಗಿನಿಜ ದೊರಕದೆಂಬ ಭಯವುಭಜಿಸಿ ಪಾಪವ ಕಳೆಯೆ ಭಜನೆಯದಕಾಗುವುದುಭಜನೆ ದೇಹದಿ ನಿಂದು ಭವ ತಾನು ನಿಲ್ಲುವುದು 3ಕರ್ಮಕೀ ಪರಿ ಬಲವು ಧರ್ಮವಾಗಿರೆ ಬಲಿತುಕರ್ಮವೇ ಬೆಳೆಯುತಿಹುದುಮರ್ಮವರಿತರು ಬಿಡದು ಹೆಮ್ಮೆಯದು ಬಲ್ಲವಿಕೆಧರ್ಮ ಬರುವದು ನಿನಗೆ ಕರ್ಮವಿದ ಕಡೆಗೊಳಿಸು 4ಇಚ್ಛೆುಂದಿದ ಸೃಜಿಪೆ ುಚ್ಛೆುಂ ಪರಿಹರಿಪೆಇಚ್ಛೆಯೇ ತೋರುತಿಹುದುಇಚ್ಛೈಸಿ ನಿನ್ನಡಿಯನಚ್ಯುತನೆ ಭಜಿಪರಿಗೆ 5ತುಚ್ಛವಾದೀ ಕರ್ಮ ಬಿಚ್ಚದಿಹುದೇನುಗರ್ವ ಬರುವದು ಜನಕೆ ಸರ್ವಗತನೆನಿಸಿದರೆನಿರ್ವಹಿಪೆನೆನಲು ಹೀಗೆಸರ್ವೇಶ ನೀನೊಲಿದು ಸರ್ವದೋಷವ ಕಳೆಯೆಗರ್ವವೆಡೆಗೊಳ್ಳದೈ ಪೂರ್ವದವನೆನಿಸು 6ಸೂತ್ರವನು ನಿರ್ಮಿಸಿದೆ ಸೂತ್ರ ನಿನ್ನಾಧೀನಸೂತ್ರಕ್ಕೆ ಶಕ್ತಿಯೆಂತುಯಾತಕೀ ಕರ್ಮಗತರನು ಮಾಡಿ ಜನರುಗಳ ಪಾತಕರು ಹೊರಗೆಂದು ಯಾತನೆಯ ಮಾಳ್ಪೆ 7ಮೃಷೆಯೆಂದ ಮಾತ್ರದಲಿ ಮೃಷೆಯಾಗದೀ ದುಃಖವಿಷಮವೇ ಬಳಲಿಸುವದುವಿಷವು ಮೊದಲಾಗಿ ತದ್ವಿಷಮ ಕರ್ಮದಿ ಹರವುವಿಷಮವಿದು ನಿನ್ನ ನಿಜದಲಿ ತೊಲಗದೆಂತು 8ಕರುಣಾಕರನೆ ನೀನು ಗುರುಮುಖದಿ ಕರ್ಮಗಳಬರಸೆಳೆದು ಬಯಲಮಾಡೆಮರೆವೆಯಾವರಣವಿರಬೇಕೆ ತಿರುಪತಿವಾಸವರದ ಶ್ರೀ ವಾಸುದೇವಾರ್ಯ ವೆಂಕಟರಮಣ 9ಓಂ ಪಾರ್ಥಸಾರಥಯೇ ನಮಃ
--------------
ತಿಮ್ಮಪ್ಪದಾಸರು
ಕಂಗಳಿಗೆ ಹಬ್ಬವಾಯಿತಯ್ಯಮಂಗಳಾತ್ಮಕ ಪುರಂದರದಾಸರನು ಕಂಡು ಪ ಸಕಲ ತೀರ್ಥಕ್ಷೇತ್ರ ಯಾತ್ರೆ ಮಾಡಿದ ಫಲವುಸಕಲ ಸತ್ಕರ್ಮ ಸಾಧಿಸಿದ ಫಲವುಭಕುತಿಯಿಂ ಭಾಗೀರಥೀ ಮಜ್ಜನದ ಫಲವುರುಕುಮಿಣಿ ಪತಿಯ ಪದ ಭಕುತರನು ಕಂಡು 1 ಇವರ ನರರೆಂದವರು ನರಕದಲಿ ಬೀಳುವರುಕವಿಜನರು ಒಪ್ಪಿ ಕೈಹೊಡೆದು ಹೇಳಿರಲುಅವನಿಯೊಳಗತಿ ದುರ್ಲಭವು ನಂದಗೋಪನ್ನಕುವರನಿದ್ದೆಡೆಯ ವೈಕುಂಠವೆಂಬುವರ ಕಂಡು 2 ಧನ್ಯನಾದೆನು ನಾನು ಮನುಜನ್ಮದಿ ಪುಟ್ಟಿಮಾನ್ಯನಾದೆನು ಇನ್ನು ಈ ಜಗದೊಳಗೆಪನ್ನಂಗಶಯನ ಶ್ರೀಕೃಷ್ಣನ ದಾಸರನುಚೆನ್ನಾಗಿ ಸ್ಮರಿಸಿ ಪಾವನ್ನನಾದೆನಿಂದು 3
--------------
ವ್ಯಾಸರಾಯರು
ಕಂಗಳಿದ್ಯಾತಕೊ ಕಾವೇರಿ ರಂಗನ ನೋಡದ ಪ. ರಂಗನ ಶ್ರೀಪಾದಂಗಳ ನೋಡದ ಅ.ಪ ಎಂದಿಗಾದರೊಮ್ಮೆ ಜನರುಬಂದು ಭೂಮಿಯಲ್ಲಿ ನಿಂದುಚಂದ್ರ ಪುಷ್ಕರಣಿ ಸ್ನಾನವ ಮಾಡಿ ಆ-ನಂದದಿಂದಲಿ ರಂಗನ ನೋಡದ 1 ಹರಿ ಪಾದೋದಕ ಸಮ ಕಾವೇರಿವಿರಜಾನದಿಯ ಸ್ನಾನವ ಮಾಡಿಪರಮ ವೈಕುಂಠ ರಂಗಮಂದಿರಪರವಾಸುದೇವನ ನೋಡದ 2 ಹಾರ ಹೀರ ವೈಜಯಂತಿತೋರ ಮುತ್ತಿನ ಹಾರ ಧರಿಸಿತೇರನೇರಿ ಬೀದಿಲಿಮೆರೆವ ರಂಗವಿಠಲನ್ನ ನೋಡದ 3
--------------
ಶ್ರೀಪಾದರಾಜರು