ಒಟ್ಟು 9847 ಕಡೆಗಳಲ್ಲಿ , 135 ದಾಸರು , 5174 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಂದಕರಮಾದ ಇಂದಿರಾರ್ಯ ತವ ಧ್ಯಾನಾನಂದೆನಗೆ ದಯಪಾಲಿಸು ಪ ನೊಂದೆ ಭವದೊಳು ಬಿದ್ದು ಮಂದನಾಗಿ ತಿಳಿಯದೆ ಅಂದಮಾದ ತವ ಮಹಿಮೆಯ ದೇವ ಅ.ಪ ಕಾಣುವ ಜಗವೆಲ್ಲ ಏನೆಂಬ ನಿಜತವನು ನಾನರಿಯದೊರಲುತಿಹೆನು ನಾನಿಲ್ಲದಮೊದಲು ಏನಿತ್ತು ಎಂಬುದನು ನಾನೆಂತು ತಿಳಿಯುವೆನು ನಾನು ಯಾರೆಂಬ ನಿಜ ಖೂನವರಿಯದೆ ಬಲು ಹೀನತೆಗೆ ಬಂದಿದ್ದೆನು ನೀನೆ ಸ್ವತಂತ್ರಖಿಲ ದೀನಗರಿವಿಕೆ ನೀಡಿ ಜ್ಞಾನದಿಂ ಪೊರೆ ದಯದಿ ಜವದಿ 1 ಎಲ್ಲಿರ್ದೆಮೊದಲು ನಾನೆಲ್ಲಿಂದ ಬಂದೆ ಮ ತ್ತೆಲ್ಲಿಗೆ ಪೋಗುವೆನು ಎಲ್ಲಿರುವೆ ಈಗ ನಾನೆಲ್ಲಿಂದ ನುಡಿಯುವೆನು ಎಲ್ಲಿಗೆ ಕೊಡುವೆನು ಎಲ್ಲನಿಂದಿದರೊಳಗೆ ಇಲ್ಲದ್ದು ಕಲ್ಪಿಸಿ ಎಲ್ಲಿಂದ ಕಾಂಬುವೆನು ಎಲ್ಲಿಟ್ಟಿರುವಿದರ ಸಲ್ಲಲಿತ ಸೂತ್ರವನು ಪುಲ್ಲನಾಭ ದಯಪಾಲಿಸು ತಿಳಿಸು 2 ಆರೊಂದುಗೇಣಿನಾಪಾರ ಸೂತ್ರದಗೊಂಬೆ ಆರಿಂದಲಾಗಿಹ್ಯದು ಸೋರುತಿಹ್ಯ ಒಂಬತ್ತು ದ್ವಾರಹಚ್ಚಲು ಇದರ ಕಾರಣವೇನಿಹ್ಯದು ತೋರುವುವು ಇದರೊಳಗೆ ಮೂರುವಿಧಮಾಗಿ ಆರಸಾಕ್ಷದಕ್ಕಿಹ್ಯದು ತೋರದೇನೇನಿದರ ತಾರತಮ್ಯಜ್ಞಾನ ಸುವಿ ಚಾರ ಎನಗೊಲಿದು ತಿಳುಹು ಸಲಹು 3 ಕಾಲು ಕಯ್ಯಿಗಳಾಡಿ ಬೀಳುವೇಳುವ ಮೂಲ ಕೀಲಿಯೆಲ್ಲಿರುತಿಹ್ಯದು ಜ್ಯಾಲದಂದದಿ ಹರಕು ಚೀಲದೊಳು ತುಂಬಿರುವ ಗಾಳ್ಯೆಂತುನಿಂತಿಹ್ಯದು ಕಾಲಮಹಿಮ ನೀ ಗೈದ ಮೇಲುಯಂತ್ರದಿ ಇಂದ್ರ ಜಾಲವೇ ತುಂಬಿಹ್ಯದು ಕಾಲಚಕ್ರನ ಮಹ ದಾಳಿಯನು ಗೆಲಿಸಿ ತವ ಲೀಲೆಯೊಳೆನ್ನಾಡಿಸು ಪಾಲಿಸು 4 ಬಂಧರೂಪಕಮಾದ ದಂದುಗದ ಭವವು ದಾ ರಿಂದಲುತ್ಪತ್ತಿ ಯಾಯ್ತು ಸತಿ ಸುತರು ಬಂಧಬಳಗ ಎ ಲ್ಲಿಂದ ಬಂದಿವಗೆ ಜೊತೆಗೂಡಿತು ಒಂದಕ್ಕೊಂದರ ಸಂಬಂಧವೇ ಇಲ್ಲಿವಗೆ ಬಂಧ ಮತ್ತೆಲ್ಲೊದಗಿತು ನಿಂದುನೋಡಲು ಸಕಲ ತಂದೆ ಶ್ರೀರಾಮ ನಿನ್ನಿಂದ ಕಂಡು ನಿನ್ನೊಳೈಕ್ಯ ಮಾಯ ಖರೆಯ 5
--------------
ರಾಮದಾಸರು
ಆನಂದಮಯನಾದೆ ನಾನು ದಿವ್ಯ ಜ್ಞಾನಾಮೃತವನುಂಡು ಪೇಳಲಿನ್ನೇನು ಪ ಶರೀರ ಭ್ರಾಂತಿಗಳನೆಲ್ಲ ಕಳೆದು ಕರ್ಮ ದುರಿತ ಸಂಸಾರ ಆಶಾಪಾಶವಳಿದು ನರನೊಳಗೆ ನರನಾಗಿ ಸುಳಿದು ಸರ್ವ ಪರಿಪೂರ್ಣ ಭರಿತ ತಾನೆಂಬುದು ತಿಳಿದು 1 ಗುರುಕಟಾಕ್ಷದ ನೆಲೆ ನೋಡಿ ತಿರುಗಿ ಬರುವ ಹೋಗುವ ಭ್ರಮೆಗಳನೀಡಾಡಿ ಶರಣರ ಸ್ತೋಮದಿ ಕೂಡಿ ಭವ ಶರಧಿಯ ದಾಟಿ ಹಂಸಾತ್ಮಕನೊಳಾಡಿ ಆನಂದ 2 ಗುರುಚರಣಗಳ ಧ್ಯಾನಿಸುತಾ ಒಡನೆ ಎರಕವಾದಂತೆ ಬೇರೂರಿತು ಚಿತ್ತಾ ವರವಿಮಲಾನಂದ ಗುರುದತ್ತಾತ್ತೇಯನ ಕರುಣಾಸಮುದ್ರದೊಳ್ಬೆರೆದು ನಲಿವುತ್ತಾ ಆನಂದ 3
--------------
ಭಟಕಳ ಅಪ್ಪಯ್ಯ
ಆನಂದವಾ ನೋಡು ನೀ ವಿಚಾರಿಸಿ ಏನೊಂದುಮಿಲ್ಲಾಗಿ ತಾನೆ ತಾನಾಗಿಹ ಪ ಅನಿಸಿಕೆ ತೋರಿಕೆ ಅಡಗುತಲಿರುತಿರೆ ತನಿನಿದ್ರೆಯೆನಿಸದ ಘನಪದವಾಗಿಹ ಮನಸಿನಿಂದಾಚೆಗೆ ನಿಜವಾಗಿ ನೆಲಗೊಂಡ 1 ಇದೇ ಬ್ರಹ್ಮಾನಂದವು ನೋಡೈ ಸದಾ ನಿರ್ವಿಕಲ್ಪವಾಗಿರುವಾ ಆ ಸ್ಥಿತಿಯನೆ ಗುರುತಿಸಿ ಅನುಭವಿಸುತದನಾ ಮರಳಿ ಜಾಗರದಲಿ ನೆನೆಸಿ ಆ ಸ್ಥಿತಿಯನು ಮರಣರಹಿತವದು ಅದೇ ಪರಮಾತ್ಮನುಗುರುಶಂಕರನು ಪೇಳ್ದ ಅದೇ ತಾನು ಎನ್ನುತ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಆನಂದವಾಯಿತು ಬ್ರಹ್ಮ ಆನಂದವಾಯಿತುಆನಂದದೊಳು ಆನಂದವೇ ಆಗಿಸ್ವಾನಂದ ಸುಖ ಶರೀರ ವ್ಯಾಪಿಸೆ ಪ ಬಂಧತ್ರಯಾಭ್ಯಾಸದ ಬಂಧವ ಪಿಡಿಯುತನಿಂದು ನಾಸಿಕಗೊನೆ ನಿಟಿಲವ ನೋಡುತಛಂದ ಛಂದದ ಪುಷ್ಟ ಚದುರಲಿ ಕಾಣುತಸುಂದರನಾದ ಕೇಳಿ ಸುಖಿಸುವರ ಕಂಡು 1 ಎಡಬಲ ಹಾದಿಯ ಎಡಬಲಕಿಕ್ಕುತನಡುವಿನ ಮಾರ್ಗವ ನೇರದಿ ಪೊಕ್ಕುನಡೆದು ಸುಷುಮ್ನದ ನಾಳನೆಲೆಯ ನೋಡಿಕುಡಿದಮೃತವ ಸೊಕ್ಕಿ ಕುಳಿತಿಹರ ಕಂಡು 2 ಕುಂಡಲಿ ನಿದ್ರೆಯ ತಿಳಿಪುತಮುದ್ರಿಸಿ ನವಬಾಗಿಲನೆಲ್ಲವ ಮುಚ್ಚುತಭದ್ರ ಮಂಟಪದೊಳು ಭಾಸದಿ ಬೆಳಗಿ ಸ-ಮುದ್ರ ಗುರು ಚಿದಾನಂದ ಬೆರೆದವರ ಕಂಡು3
--------------
ಚಿದಾನಂದ ಅವಧೂತರು
ಆನಂದಾದ್ರಿ ವಾಸ | ವಿಠಲ ಪೊರೆ ಇವನಾ ಪ ಮಾನಮೇಯ ಜ್ಞಾನ | ಸಾನುಕೂಲಿಸಿ ಇವಗೆನೀನಾಗಿ ಪೊರೆಯೊ ಹರಿ | ಕೋನೇರಿವಾಸಾ ಅ.ಪ. ಚಿತ್ರ ಚಾರಿತ್ರ | ಶುಭಗಾತ್ರನೇ ಶತಪತ್ರನೇತ್ರಕರವಾದ ದ್ವಂದ್ವ | ಸೂತ್ರಾಂತರಾತ್ಮ |ಮಿತ್ರನಾನುಗ್ರಹಕೆ | ಪಾತ್ರನ ಸಲಹೊ ಮಾಕಳತ್ರನೇ ನಿನ್ನ ಸುಪ | ವಿತ್ರ ಪದ ನಮಿಪೇ 1 ಕರುಣವೆಂತುಟೊ ನಿನಗೆ | ಶರಣಜನ ವತ್ಸಲನೇಕರೆದೊಯ್ದು ಸ್ವಪ್ನದಲಿ | ಹರ ಗಿರಿಜೆ ತೋರೀ |ಮರಳಿ ಬ್ರಹ್ಮನ ಲೋಕ | ದರುಶನಾನಂದದಲಿಕರೆದೊಯ್ದು ಕರುಣಾಳು | ಸುರಸೇವ್ಯ ಬದರಿಗೆ 2 ದಶಮತಿಗೆ ಬೋಧಿಸುವ | ವ್ಯಾಸದರ್ಶನ ಭಾವಿದಶಮತಿಯ ಸಹವಿರುವ | ವ್ಯಾಸ ಭಕ್ತನ್ನಾ |ಹಸನಾಗಿ ತೋರಿ ನೀ | ವಸುಮತಿಗೆ ಕರೆತಂದುಬೆಸಸಿದೆಯಾ ಫಲದೈವ | ದರ್ಶನಕೆ ಇವನಾ 3 ಬದ್ಧನಾದರು ಇಹದಿ | ಶುದ್ಧ ಸಂಸ್ಕøತನಿಹನುಮಧ್ವಮತ ದಾಸತ್ವ | ಶ್ರದ್ಧೆಯುಳ್ಳವನೇಬುದ್ಧಿಯಲಿ ಎನಗೆ ಉ | ದ್ಬುದ್ಭವನೆ ಮಾಡ್ದ ಪರಿತಿದ್ದಿ ಅಂಕಿತವಿತ್ತು | ಬುದ್ಧಿ ಪೇಳಿಹೆನೋ 4 ಸಂಚಿತ ಕರ್ಮ | ತೀವ್ರದಲಿ ದಹಿಸೇಗೋವುಗಳ ಪಾಲ ಗುರು | ಗೋವಿಂದ ವಿಠ್ಠಲನೆಭಾವದಲಿ ಬಿನ್ನವಿಪೆ | ನೀ ವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ಆನಿ ಬಂತಿದೆಕೋ ಮಹ ಮದ್ದಾನಿ ಬಂತಿದಕೋ| ಸ್ವಾನಂದದಲಿ ಮೆಲ್ಲಮೆಲ್ಲನೆ ಅಡಿಗಳ| ತಾನಿಡುವುತೊಲಿವುತಲಿ ನೋಡಮ್ಮಾ ಪ ಕರಿಯ ಬಣ್ಣದ ಲೊಪ್ಪತಾ | ಕಿರಿಗುದಲು | ಸಿರದಲೀ ಹೊಳೆವುತಾ | ಪೆರೆನೊಸಲೊಳು ಕೇಶರದ ಕಸ್ತೂರಿ ರೇಖೆ | ಕರುಣ ಭಾವದ ಕಂಗಳು ನೋಡಮ್ಮಾ 1 ಝಳ ಝಳಿಪಂಬರದೀ | ಝಣ ಝಣಲೆಂಬಾ | ವಲಿದು ತನ್ನಯನಿಜ ಶರಣರ ಅನುಮತ | ದಲಿ ನಲಿದಾಡುತಲೀ | ನೋಡಮ್ಮಾ 2 ದುಷ್ಟಜನರು ತೊಲಗೀ | ಯನುತ ಮುಂದ | ಶಿಷ್ಟಭಟಿರುವದಗೀ | ಅಟ್ಟಹಾಸದಿ ಬಂದರಿದೇ | ಮಹಿಪತಿ ಜನ | ಇಷ್ಟ ದೈವತ ಎನಿಪಾ ನೋಡಮ್ಮಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆನೆ ಬಂತಿದಕೋ ಮಹಾಮದ್ದಾನೆ ಬಂತಿದಕೋ ಸ್ವಾನಂದದಲಿ ಮೆಲ್ಲಮೆಲ್ಲನೆ ಅಡಿಗಳ ತಾನಿಡು ತೊಲವುತಲಿ ನೋಡಮ್ಮ ಧ್ರುವ ಕರಿಯ ಬಣ್ಣದಲೊಪ್ಪುತ ಕಿರಿಗೂದÀಲು ಶಿರದಲಿ ಹೊಳೆವುತ ಪೆರೆನೊಸಲೊಳು ಕೇಸರದ ಕಸ್ತೂರಿ ರೇಖೆ ಕರುಣ ಭಾವದ ಕಂಗಳು ನೋಡಮ್ಮ 1 ಝಳಝಳಿಪಂಬರದಿ ಫಣ ಫಣವೆಂಬ ಚೆಲುವ ಗಂಟÉಯರವದಿ ಒಲಿದು ತನ್ನಯ ನಿಜ ಶರಣರ ಅನುಮತ ದಲಿ ನಲಿದಾಡುತಲಿ ನೋಡಮ್ಮ 2 ದುಷ್ಟ ಜನರು ತೊಲಗಿ ಎನುತ ಮುಂದೆ ಶಿಷ್ಟ ಜನರು ಒದಗಿ ಅದ್ದಹಾಸದಿ ಬಂದರಿದೆ ಮಹಿಪತಿ ಜನ ಇಷ್ಟದೈವತ ಎನಿಪ ನೋಡಮ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆನೆಂತು ತುತಿಪೆ ನಿನ್ನಾ ಶ್ರೀ ಗುರು ರನ್ನಾ ಆನೆಂತು ತುತಿಪೆ ನಿನ್ನಾ ಪ ಆನೆಂತು ತುತಿಪೆ ಪಂಚಾನನಸುತ ಪವ ಮಾನ ಹನುಮ ಭೀಮ ಆನಂದತೀರ್ಥನೆ ಅ.ಪ. ಸನಕನಂದನ ಸನತಕುಮಾರಾದಿ ಮುನಿಗಳು ಹರಿ ದರುಶನವ ಮಾಡುವೆವೆಂದು ಘನಹರುಷದಿ ಮೋಕ್ಷವನು ಕುರಿತು ಬಂದೊ ಡನೆ ಬಾಗಿಲಲಿ ನಿಲ್ಲೆನಲು ಜಯ ವಿಜಯ ರನ ನೋಡಿ ಎರಡೊಂದು ಜನುಮದಲಿ ಕ್ರೂರ ಸಿರಿ ವನಜಾಕ್ಷರಗೋಸ್ಕರಾ ಅವತರಸಿ ಗುಣಪೂರ್ಣ ಗುರು ಸಮೀರಾ ಸೇವಿಪೆನೆಂದಾ ಕ್ಷಣದಿ ಜನಿಸಿ ವಾನರಾ ರೂಪಿಲಿ ಭುವ ವನದೊಳು ಮೆರೆದೆ ಅಸಮಶೂರಾ ಹರಿಹರಾ 1 ಕೋತಿ ಕಟಕಮಾಡಿ ಜಾತರಹಿತ ಹರಿ ಗೇ ತಲೆಬಾಗಿ ಸುಪ್ರೀತಿಯಿಂದಲಿ ರವಿ ಜಾತನ ಸಲಹಿ ಅತೀ ತೀವ್ರದಿಂದಲಿ ವಾತವೇಗದಿ ವನಧಿಯ ತಡಿಲ್ಲದೆ ದಾಟಿ ಮಾತೆಗುಂಗುರವಿತ್ತ ಶೋಕತರುಗಳ ಭೀತಿ ಬಡದಲೆ ಕಿತ್ತಿ ರೋಮ ಬಳ ವ್ರಾತವೆಲ್ಲವ ನುಗ್ಗೊತ್ತೀ ಲಂಕಾಪುರ ಜಾತವೇದಸಗೆ ಇತ್ತೀ ಹನುಮಶಿರಿ ನಾಥನಿಗೆರಗಿ ಪಡೆದ ಬಹುಕೀರ್ತಿ 2 ದುರುಳ ಕಲ್ಯಾದ್ಯರು ಊರ್ವಿಯೊಳ್ಪುಟ್ಟಿ ಸಂ ಚರಿಸುತ್ತ ಇರಲಾಗಿ ಮರುತದೇವನು ಅವ ತರಿಸಿ ಅವನಿಯೊಳು ದುರಿಯೋಧನುಣಲಿತ್ತ ಗರಳವ ಭುಂಜಿಸಿ ಅರಗಿನ ಸದನದಿ ಪುರೋಚನಾದಿಗಳನ್ನು ಉರುಹಿ ಏಕಚಕ್ರಾ ಪುರದಲ್ಲಿದ್ದ ಬಕಾಸುರನ ಸದೆದು ಭೂಮಿ ಸುರವೇಷವನೆ ಧರಿಸೀ ಪಾಂಚಾಲಿ ಸ್ವಯಂ ವರ ಪತಿಕರಿಸಿ ಮಗಧದೇಶ ದರಸನ ಸಂಹರಿಸೀ ರಾಜಸೂಯಜ್ಞ ಹರಿಗೆ ಅರ್ಪಿಸಿದಿ ಮೆರೆಸೀ 3 ಭಕುತಳಾದ ಇಂದುಮುಖಿ ದ್ರೌಪದಿಗೆ ಸೌಗಂ ಧಿಕವ ತರುವೆನೆಂದು ವೃಕೋದರ ಪೋಗಲು ಅಕುಟಿಲ ಹನುಮಂತನನು ಅವಲೋಕಿಸ್ಯಂ ಜಿಕೆಯಿಂದ ನಿಂದು ಮಾರಕಜನರಿಗೆ ಮೋ ಕುಪಥ ಖಳರನೊರಿಸಿ ನೀ ಸಖಿಗೆ ಪೂವಿತ್ತು ಗುರುಕುಮಾರನಸ್ತ್ರಕ ಳುಕದೆ ಯುದ್ಧವ ಮಾಡಿದೆ ದುಶ್ಯಾಸನ ರಕುತ ವೆರಿಸಿ ಕುಡಿದೆ ಉಭಯಗಳ ರ ಥಿಕರ ಬಲವಕರೆದೆ ಭಯದಲಿ ಉ ದಕದಲಿರ್ದ ದುರ್ಯೋಧನನೂರು ಕಡಿದೆ 4 ಭೀಮ ಭಯಂಕರ ಕಾಮಕೋಟಿ ಚಲ್ವ ಧೀಮಂತಜನ ಮನೋಪ್ರೇಮ ಪಾವನ ಗುಣ ಸ್ತೋಮ ಸರ್ವಾಧಾರ ಭ್ರಾಮಕಜನ ವನ ಧೂಮಕೇತುವೆ ಸರ್ವಾಸೀಮ ಸೌಖ್ಯ ಪೂರ್ಣ ಸಾಮಜ ಹರಿಗುರು ರೋಮ ಕೋಟೇಶ್ವರ ಶ್ರೀಮಾನ್ಯ ಭಕುತಲ ಲಾಮ ಭವ್ಯ ಚರಿತಾ ಸೋಮಕುಲ ಸೋಮ ಸುಖ ಭರಿತಾ ಭಕುತ ಪ್ರೀತಾ ಕಾಯ ಹಿತದಿಂದ ನಿರುತಾ 5 ಮಣಿಮಂತನೆಂಬವನಿಯೊಳು ಪುಟ್ಟಿ ವೇ ನನ ಮತ ಪಿಡಿದು ಜೀವನೆ ಪರಮಾತ್ಮನೆಂ ದೆನುತ ಸ್ಥಾಪಿಸಿ ಪಣೆಗಣ್ಣೆನ್ವರದಿಂದ ಅನಿಮಿಷರೆಲ್ಲರು ವನಜಜಗುಸುರಲು ಮುನಿಗಳು ಸಹ ನಾರಾಯಣನ ಪದಕೆ ದಂಡ ಪ್ರಣಾಮವ ಮಾಡಿ ಸ್ತೋತ್ರವಿನಯದಿ ಗೈಯೆ ಅನಿಲನ ಅವಲೋಕಿಸಿ ಪೇಳಲು ಹರಿ ಮನ ಭಾವವನು ಗ್ರಹಿಸಿ ಮಧ್ಯಗೇಹ ಮನೆಯೊಳಗವತರಿಸಿ ಮೆರೆದೆ ಗುರು ಅನುಗಾಲದಲಿ ನಿನ್ನ ಗುಣಗಳಾಶ್ರೈಸೀ 6 ವಾಸುದೇವನೆಂಬ ಭೂಸುರನಾಮದಿ ಲೇಸಾಗಿ ಚರಿಸಿ ಸಂತೋಷ ಭರಿತರಾಗಿ ಸಂ ನ್ಯಾಸಾಚ್ಯುತ ಪ್ರೇಕ್ಷರಾ ಕರಸರಸಿಜ ದೀ ಸಂತೋಷದಿ ಕೊಂಡು ಆಶÀಂಕರರÀ ಭಾಷ್ಯ ದೂಷಿಸೆ ಗರುಗಳುಲ್ಲಾಸ ಸನ್ಮುಖದಲಿ ವಿ ಶೇಷದಿಂದಲಿ ವಿರಚಿಸುವುದೆನಲು ಉ ಲ್ಲಾಸದಿಂದಲಿ ಕೇಳಿ ಆಕ್ಷಣದಿ ಸಂ ತೋಷ ಮನದಲಿ ತಾಳಿ ಮೋಹಕವ ಪರಿಹ ಆಶೆ ಪೂರೈಸಿದ ಘನನಿನ್ನ ಲೀಲೆ 7 ತರಳತನದಲಿ ಬದರಿಗೈದಿ ಪಾರಾ ಶರ ನಾರಾಯಣನ ಸಂದರುಶನ ಕೊಂಡು ತೀ ವರದಿಂದ ಹರಿತತ್ವ ನಿರ್ಣಯ ಶಾಸ್ತ್ರವ ವಿರಚಿಸುವುದಕಿನ್ನು ವರವ ಪಡೆದು ಬಂದು ದುರುಳ ಭಾಷ್ಯಗಳೆಂಬ ಗರಳ ತರುಗಳ ಮುರಿದಿಕ್ಕಿ ನೀ ಮೂವ ತ್ತೆರಡೈದು ಗ್ರಂಥಗಳ ನಿರ್ಮಿಸಿ ವಿಬು ಧರಿಗೆಲ್ಲ ಪೇಳಿ ವ್ಯಾಳ ಭೂಷಣದೇವ ಪರನೆಂಬ ಯುಕುತಿಜಾಲ ಹರಿದು ಹರಿ ಪರ ಶ್ರೀ ಬೊಮ್ಮಾದ್ಯರೆ ಗುರುಗಳೆಂದೆನಲು 8 ನಮೋ ನಮೋ ಸಮೀರನೆ ನಮೋ ಶ್ರೀ ಮುಖ್ಯಪ್ರಾಣ ನಮೋ ನಮೋ ದಯಾಸಿಂಧು ನಮೋ ಭಕ್ತಜನ ಬಂಧು ನಮೋ ನಮೋ ಗುಣಶೀಲ ನಮೋ ಭಾರತಿಲೋಲ ನಮೋ ನಮೋ ಭವ್ಯಾಂಗ ನಮೋ ಅರಿಗಜಸಿಂಗ ನಮೋ ನಮೋ ಜಗದ್ವ್ಯಾಪ್ತ ನಮಿತಜನರಾಪ್ತ ನಮೋ ನಮೋ ಸುಖತೀರ್ಥ ನಮೋ ಮೂರ್ಲೋಕದ ಕರ್ತ ನಮೋ ಗುರುಕುಲ ತಿಲಕ ಪಾಲಿಸು ಎನ್ನ ತಮಹರದೂರಶೋಕ ಸಜ್ಜನರಿಗೆ ಅಮಿತ ಮೋದದಾಯಕ ಶ್ರೀಭೂ ದುರ್ಗಾ ರಮಣ ಜಗನ್ನಾಥವಿಠಲ ಭಕ್ತಾಧಿಕಾ 9
--------------
ಜಗನ್ನಾಥದಾಸರು
ಆನೆಯ ನೋಡಿರಯ್ಯ ನೀವೆಲ್ಲರುಆನಂದ ಪಡೆಯಿರಯ್ಯ ಪ ತಾನು ತನ್ನವರೆಂಬ ಮಾನವರ ಸಲಹಿದಅ ಪಾಂಡು ಚಕ್ರೇಶನ ಸುತರಿಗೊಲಿದಾನೆಗಂಡುಗಲಿ ಮಾಗಧನ ಒರಸಿದಾನೆಹಿಂಡು ಗೋವಳರೊಳಗೆ ಹಿರಿಯನ ಕಳೆಯದಾನೆಲಂಡರಿಗೆ ಎದೆಗೊಡುವ ಪುಂಡಾನೆ 1 ಬಾಲಕನ ನುಡಿಗೇಳಿ ಖಳನ ಸೀಳಿದಾನೆಪಾಲುಂಡು ವಿದುರನ ಸಲಹಿದಾನೆಲೋಲಾಕ್ಷಿ ಮಾನಭಂಗಕ್ಕೊದಗಿದಾನೆಖೂಳ ಶಿಶುಪಾಲನನು ಸೀಳಿದಾನೆ2 ಅಜಮಿಳನಿಗೆ ನಿಜಪದವಿಯ ಕೊಟ್ಟಾನೆಕುಜನರೆಲ್ಲರನು ಒರಗಿಸಿದಾನೆಅಜಪಿತ ಕಾಗಿನೆಲೆಯಾದಿಕೇಶವಾನೆತ್ರಿಜಗವಲ್ಲಭ ತಾನು ಭಜಕರ ವಶವಾನೆ 3
--------------
ಕನಕದಾಸ
ಆಪೋಶನವ ಹಾಕೆ ಒ(ವೈ?) ಯ್ಯಾರಿ ಲೋಕಸುಂದರಿ ಶ್ರೀಪತಿಯ ಕರದಲ್ಲಿ ಘೃತಧಾರೆ ಲೋ- ಕಂಸಾರಿ ಕೈಯಲ್ಲಿ ತ್ರಿಧಾರೆ ಪ ಕೊಳಲನೂದುತಾಕಳನೆ ಕಾಯುತ್ತ ದಧಿಚೋರನಾಗಿ ಕಳಲಗಡಿಗೆಯನೊಡೆದು ಪೋಗುತ್ತ ಸೆಳೆದು ಗೋಪೇರ ಸೀರೆಗಳ ಮರಕೆ ಕಟ್ಟಿದ್ದ ಕರಕೆ 1 ವಾರಿಜಾಕ್ಷಗೆ ಒಲಿದು ನಲಿಯುತ್ತ ವರ ಮೋಹನಾಂಗಿ ಸಾರಸಮುಖಿ ಸರಸವಾಡುತ್ತ ಮಾರಜನಕನ ಮನವ ಮೋಹಿಸುತ ಮುಖನೋಡಿ ನಗುತ2 ನಂದನಂದನ ನರನ ಸಾರಥಿಯೊ ಭೀಮೇಶಕೃಷ್ಣ ಕೊಂಡಾಪೋಶನ ಕುಳಿತ ಸತಿಜೊತೆಗೆ ಚೆಂದದಿಂದಲಿ ಬೆಳಗಲಾರತಿಯ ಪಾಡಿ ಕೀರುತಿಯ 3
--------------
ಹರಪನಹಳ್ಳಿಭೀಮವ್ವ
ಆರ ಮಗನೆಂದರಿಯೆವೆ ಇವ ನಮ್ಮಕೇರಿಯೊಳು ಸುಳಿದು ಪೋದ ಪ. ನೀಲವರ್ಣನ ಮೈಯ್ಯವ ತುಲಸಿ ವನ-ಮಾಲೆ ಕೊರಳೊಳು ಕೌಸ್ತುಭಬಾಲಪ್ರಾಯದ ಚೆನ್ನಿಗ ಬಂದು ಪೋ-[ಗ]ಲು ಸನ್ನೆಯ ಮಾಡಿದ1 ಚಿಕ್ಕಪ್ರಾಯದ ಚೆನ್ನಿಗ ಯೌವನದಲುಕ್ಕುವ ಕಡುಚೆಲುವನೆಚೊಕ್ಕಟಾದ ಚದುರನೊಬ್ಬ ಕುಚಕೆ ಕೈ-ಯಿಕ್ಕಿ ಕಸ್ತೂರಿ ಪೂಸಿದ 2 ಪೀತಾಂಬರನುಡಿಸಿದ ವಿನಯ ಸವಿ-ಮಾತುಮಾತಿಗೆ ನಗಿಸಿದಪ್ರೀತಿಯಿಂದಲಿ ತನ್ನ ಚೆಂದುಟಿಯ ಅಧರಾ-ಮೃತವನುಣಿಸಿದ3 ಪಾರಿಜಾತವ ಸೂಡಿದ ಕಸ್ತೂರಿಯಗೀರುನಾಮವ ತಿದ್ದಿದದೂರದಲಿ ನಿಂತು ಎನ್ನ ಸೋಗೆಗಣ್ಣಓರೆನೋಟದಿ ನೋಡಿದ4 ಆಗ ಮೊದಲಾಗಿ ತನುವಾ ಮದನಶರತಾಗಿ ಕಟ್ಟುಡುಗಿದಾವೆಬೇಗದಲಿ ಹಯವದನ ಬಂದೆನ್ನಮೋಹದಿಂದಲಿ ಕೂಡಿದ5
--------------
ವಾದಿರಾಜ
ಆರತಿ ಬೆಳಗುವೆ ನಾ ಸದ್ಗುರುವಿಗೆ ಪ ಭಾವದ ಪೊಂಬ್ಹರಿವಾಣ ಭಕುತಿಯಾ ತೀವಿದ್ಯಾರತಿಜ್ಞಾನ ಜ್ಯೋತಿಯಲಿತ್ತಿ1 ಮುಖದಲಿ ನುಡಿಯುತ ನಾಮಾವಳಿಯೂ ಸಕಲರು ಪ್ರೇಮದಿ ಹಾಕಿ ಚಪ್ಪಾಳಿಯಾ2 ನಯನದಿನೋಡಿ ಶರಣವ ಮಾಡೀ ಭಯವನೀಡಾಡಿ ಸ್ತುತಿಗಳ ಪಾಡಿ3 ಇಂದಿನ ದಿನದಾನಂದವು ನಮಗ ಹಿಂದಿನ ಪುಣ್ಣ್ಯಿದಿರಿಟ್ಟಿತು ಈಗ 4 ಒಡಲ್ಹೊಕ್ಕು ಮಹಿಪತಿನಂದನೊಡಿಯನಾ ಪಡೆಯ ಬನ್ನಿರೀಬ್ಯಾಗ ಮುಕುತಿಯ ಸಾಧನಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರತಿಪದ ಆರುತಿಯ ಮಾಡುವೆನೆ ಮಾರಜನನಿಯೆ ಲಕ್ಷ್ಮೀ ಪ ಭಂಗಾರದ ತಾಟಿನೊಳು ಶೃಂಗಾರದಾರುತಿ ಪಿಡಿದುರಂಗನಂಗನೀಯ ಲಕ್ಷ್ಮೀ ಮಂಗಳ ಪದವಪಾಡಿ 1 ಮುತ್ತಿನಾರತಿ ನಿನಗೆ ಎತ್ತಿನಿಂತೆನೆ ತಾಯಿಭಕ್ತಹೃದಯೆ ಇತ್ತಕಡೆ ನೋಡೆ ದೇವಿ 2 ಇಂದಿರೇಶನ ರಾಣಿ ಸುಂದರ ಸರೋಜವದನೆಇಂದುರಂಗ ರಾಮಕೃಷ್ಣರನ್ನು ತೋರಿಸಮ್ಮಾ ರಾಮೆ 3
--------------
ಇಂದಿರೇಶರು
ಆರತಿಯನೆತ್ತಿರೆಲ್ಲ ಆನಂದಗೆಆರತಿಯನೆತ್ತಿರೆಲ್ಲ ಸ್ವಾನಂದಗೆ ಪ ಸದನ ಸದನ ಬಿಟ್ಟಿಹಗೆತೋರುತಿಹ ಬ್ರಹ್ಮರಂಧ್ರ ತುರೀಯ ರೂಪಗೆ 1 ಕಣ್ಣಿನೊಳಗೆ ಕಣ್ಣು ತೆರೆದು ನಿರೀಕ್ಷಿಪಗೆಕಣ್ಣ ಬೊಂಬೆಯೊಳಗೆ ಕುಳಿತು ನೋಡುತಿಹಗೆಭಿನ್ನವಿಲ್ಲದ ಆನಂದ ಸುಖದಿ ರಮಿಸುತಿಹನಿಗೆಹೊನ್ನ ತಗಡಿನಂತೆ ಥಳಥಳಿಸುತಿಹಗೆ 2 ಉಕ್ಕುವ ತೇಜಗಳೆಲ್ಲ ತಾವೊಂದಾಗಿ ಕೂಡಿಮಿರು ಹರಿವ ಬೆಳದಿಂಗಳಂತೆಯಿಹಗೆಲೆಕ್ಕವಿಲ್ಲದಲೆಯುತಿಹ ಸುಖದ ರಾಶಿಗೆಮುಕ್ತಿ ಮೂರುತಿ ಶ್ರೀ ಚಿದಾನಂದ ಗುರುವಿಗೆ 3
--------------
ಚಿದಾನಂದ ಅವಧೂತರು
ಆರತಿಯೆತ್ತಿದರು ಅಪ್ರಮೇಯಗೆ ಪ ಸಾರಸಮುಖಿಯರು ಸಂತೋಷದಿಂದ ಅ.ಪ ತರಳಗೋಸುಗ ಕಂಬ ಬಿರಿದು ಅವತಾರಗೈದು ದುರುಳನುದುರವ ಸೀಳಿ ಕರುಳ ಧರಿಸಿದವಗೆ 1 ದಾದಿ ಕಾರಣ ಪೂರ್ಣ ಭೋದಾಮೃತಮಯಗೆ 2 ಕಾಮುಕರನು ಕೊಂದು ಭೂಮಿ ಭಾರವನಿಳುಹಿ ಸ್ವಾಮಿಯಾಗಿ ಮೆರೆವ ಶ್ರೀ ಮನೋಹರನಿಗೆ 3 ಸ್ವಸ್ತಿಯಾಗಲಿ ಎಂದು ಹಸ್ತಿನಿಯರು | ಹವಳದ 4 ಕಿಂಕರ ಜನಮನ ಸಂಕಟಹರ ನಿಷ್ಕ ಳಂಕ ನೀನೆನ್ನುತ ಶಂಕಿನಿಯರು | ರತ್ನದ 5 ಭೃತ್ಯವತ್ಸಲನೆಂದು ಚಿತ್ತಿನಿಯರು | ಮುತ್ತಿನ 6 ಕುಂದಣ 7 ಸೌಪರ್ಣಿ ವಾರುಣಿ ರ್ವಾಣಿÉ ಸ್ಮರನ ರಾಣಿ ಯಿಂದ್ರಾಣಿ ಮುಖ್ಯರು | ಹುವ್ವಿನ 8 ಪುರಹರ ವೈರಿ ಮುಖ್ಯ ಸುರವಂದ್ಯ ಶರಣ ಶ್ರೀ ಗುರು ರಾಮವಿಠಲಗೆ 9
--------------
ಗುರುರಾಮವಿಠಲ