ಒಟ್ಟು 2381 ಕಡೆಗಳಲ್ಲಿ , 115 ದಾಸರು , 1703 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು ಪ ಜಲಜನಾಭನ ಕೃಪೆಯ ಪಡೆದವರು ಕೇಳಿ ಅ ಸತ್ಯಧರ್ಮಗಳೆಲ್ಲ ಎತ್ತ ಪೋದವೊ ಕಾಣೆಉತ್ತಮರ ಜೀವನಕೆ ದಾರಿಯಿಲ್ಲನಿತ್ಯದಲಿ ಕಳವು ವ್ಯಭಿಚಾರವುಳ್ಳವರೆಲ್ಲಅರ್ಥ ಸಂಪನ್ನರಾಗನುಭವಿಸುತಿಹರು1 ಅತ್ತೆಯೇ ಸೊಸೆಯಾಗಿ ಸೊಸೆಯು ಅತ್ತೆಯು ಆಗಿಪುತ್ರ ಪಿತನಾಗಿ ಪಿತ ಪುತ್ರನಾಗಿಮತ್ತೆ ಗಂಡನಿಗೆ ಹೆಂಡತಿಯೆ ಗಂಡಳು ಆಗಿವರ್ತಿಸುವರಯ್ಯ ತಮಗೆದುರಿಲ್ಲವೆಂದು 2 ವೈರಿ ಸಿರಿ ಮದದಿ ಸೊಕ್ಕಿದರುಕಾವರಾರೈ ಸಾಧು ಸಜ್ಜನರನೀಗ3 ವೇದ ವಿಪ್ರರು ತಮ್ಮ ವೃತ್ತಿ ಸ್ವಾಸ್ಥ್ಯವ ಕಳೆದುಆಧಾರವಿಲ್ಲದೆ ತಿರಿದು ತಿಂಬುವರುಕಾದುವ ಶೂರರಿಗೆ ಕಾಸು ಕೊಡುವವರಿಲ್ಲಮೇದಿನಿಗೆ ಬೀಳ್ವ ಮಳೆ ಖಂಡಮಂಡಲವು 4 ಅನ್ನವಸ್ತ್ರಗಳಿಂದ ಚೆನ್ನಾಗಿ ಬಾಳುವರಭಿನ್ನ ತಂತ್ರವ ಮಾಡಿ ಕೆಡಿಸುತಿಹರುಗನ್ನಗತಕವ ಮಾಳ್ಪ ಗ್ರಾಮಣ್ಯಗಳ ಕಲಿತುಕುನ್ನಿಗಳು ಹೆಚ್ಚಿದರು ಕ್ರೂರ ಫಣಿಯಂತೆ 5 ಆಳಿದೊಡೆಯಂಗೆರಡು ಬಗೆಯುವಾತಗೆ ಒಳ್ಳೆಮಾಳಿಗೆಯ ಮನೆ ತುರುವು ಧನಧಾನ್ಯವುವೇಳೆವೇಳೆಗೆ ಬರುವ ಹೆಂಡತಿಯ ಲೆಕ್ಕಿಸದೆಸೂಳೆಯನು ನೆಚ್ಚಿ ಕಾಲವ ಕಳೆವರಯ್ಯ6 ಸೇರಿ ದ್ರೋಹವ ಮಾಳ್ಪ ಕ್ರೂರಕರ್ಮಿಗಳ ಮತಪೂರೈಸಿ ಕೊಡುವರರಸುಗಳೆಲ್ಲರುಧಾರಿಣಿಯ ಭಾರವನು ತಾಳಲಾರದೆ ದೇವಿಶ್ರೀರಾಮ ರಾಮೆಂದು ಶಿರವ ತೂಗುವಳು7 ಪತಿ ನೀನೆ ಗತಿಯೆನಲುಮುತ್ತೈದೆಗುಡುವುದಕೆ ವಸ್ತ್ರವಿಲ್ಲಮತ್ತೆ ವ್ಯಭಿಚಾರಿಣಿಗೆ ತೊಡಿಗೆ ಬಂಗಾರಗಳುವರ್ತನೆಯಿದೇನಯ್ಯ ಕಲಿಯುಗದ ಮಹಿಮೆ 8 ಪತಿವ್ರತೆಯರೆಂಬುವರು ಶತಸಹಸ್ರಕೊಬ್ಬರುಮಿತಿಮೀರಿ ಇಹರಯ್ಯ ಇತರ ಜನರುಮತಿಗೆಟ್ಟು ಮನಸೋತು ಅನ್ಯ ಪುರುಷರ ಕೂಡಿಗತಿಗೆಟ್ಟು ಹೋಗುವರು ಮೂರು ತೊರೆದು 9 ಹರಿಹರರ ಪೂಜೆಗಳು ಹಗರಣಗಳಾದವುಉರಿ ಮಾರಿ ಚಾಮುಂಡಿ ಶಕ್ತಿಗಳಿಗೆಕುರಿ ಕೋಣ ನೈವೇದ್ಯ ಧೂಪದೀಪಗಳಿಂದಪರಮ ಭಕ್ತಿಯ ಸಲಿಸಿ ಪೂಜಿಸುವರಯ್ಯ10 ನಡೆವ ಕಾರ್ಯಗಳೆಲ್ಲ ನುಡಿಯಲೆನ್ನಳವಲ್ಲಒಡೆಯ ನೀನೇ ಬಲ್ಲೆ ಕಲಿಯುಗದ ಮಹಿಮೆತಡವ ಮಾಡಲಿ ಬೇಡ ತಾಳಲಾರದು ಲೋಕಮೃಡನ ವೈರಿಯ ಪೆತ್ತ ಆದಿಕೇಶವನೆ11
--------------
ಕನಕದಾಸ
ಕಲ್ಲಿನಿಂದ ಸರ್ವ ಫಲ ಬಾಹುದೊ | ಪ ಕೈವಲ್ಯ ತೋರುವುದೊ ಅ.ಪ ಕಲ್ಲು ಕಡೆಯುತ್ತಿರಲು ಅಮೃತವೆ ಪುಟ್ಟಿತು | ಕಲ್ಲು ಎತ್ತಲು ಮಳೆಯೊಳೆಲ್ಲವರು ಉಳಿದರು | ಕಲ್ಲು ಹರಿಪಾದವನು ಸೋಕೆ ಹೆಣ್ಣಾಯಿತು | ಕಲ್ಲು ಲಂಕೆಗೆ ಮಾರ್ಗ ಚೆನ್ನಾಗಿ ಶೋಭಿಸಿತು1 ಕಲ್ಲಿನೊಳಗೆ ದೇವನೊಡಮೂಡಿ ಕಾಣಿಸುವ | ಮೂರ್ತಿ ಮಂತಾಹುದು | ಕಲ್ಲು ದೇವರ ಗುಡಿಗೆ ಗರುಡ ಗಂಬವು ಆಯ್ತು | ಕಲ್ಲು ಕೋಟ್ಯಾನು ಕೋಟಿಗೆಲ್ಲ ಬೆಲೆಯಾಯ್ತು2 ಕಲ್ಲೆಂದುಪೇಕ್ಷಿಸದೆ ಕಾಲಕಾಲದಿ ನಿಮ್ಮ | ಕಲ್ಲು ಮನಸನು ಬಿಟ್ಟು ಪೂಜೆಮಾಡಿ | ಸಿರಿ ವಿಜಯವಿಠ್ಠಲ ಒಳ್ಳೆ | ಕಲ್ಲು ಪದವಿಯ ಕೊಟ್ಟು ಸತತ ಪಾಲಿಪನೊ 3
--------------
ವಿಜಯದಾಸ
ಕಂಸಾರಿ ಪ. ಶೌರಿ ಸುರ ನರವಂದಿತ ಚರಣವ ಕೋರಿ ಪರಿಪರಿ ಬೇಡುವೆ ನಿನ್ನೆಡೆ ಸಾರಿ ಅರಿಯದ ಕಂದನ ಪೊರೆ ದಯೆತೋರಿ ಅರಿಯೆನದಾರನು ಮರೆಯೆನು ನಿನ್ನನು ಕರುಣಾಕರನೆಂಬೀ ಬಿರುದುಳಿಸಿನ್ನು 1 ಮನ್ಮಥಪಿತ ಬಾ ಸುಂದರಕಾಯ ಮನ್ನಿಸು ಎನ್ನಪರಾಧವ ಜೀಯ ಚಿನ್ಮಯರೂಪನೆ ಚೆನ್ನಿಗರಾಯ ಅನ್ಯರ ನೆರೆಯೆನು ನೀ ಕೇಳಯ್ಯ ಎನ್ನೊಳಗೀಪರಿ ಛಲವೇಕಯ್ಯ ಇನ್ನಾದರು ಕೈಪಿಡಿ ದಮ್ಮಯ್ಯ 2 ಮಂದರಗಿರಿಧರ ಗೋವಿಂದನೆ ಬಾ ನಂದಕುಮಾರನೆ ತಡೆಯದೆ ನೀ ಬಾ ನಂದಿನಿಗೊಲಿದಾನಂದವ ಕೊಡು ಬಾ ವೃಂದಾವನ ವಿಹಾರನೇ ಬಾ ಬಾ ಇಂದಿರೆಯರಸನೆ ಶೇಷಗಿರೀಶನೆ ಇಂದೆನಗೊಲಿದೈ ತಂದೆಯೆ ಭಳಿರೆನೆ 3
--------------
ನಂಜನಗೂಡು ತಿರುಮಲಾಂಬಾ
ಕಾಖಂಡಕಿ ಪ್ರಸನ್ನ ವೆಂಕಟದಾಸರು ಸಿರಿ ಪ್ರಸನ್ನವೆಂಕಟನ್ನನಿರುತ ಸ್ಮರಿಪ ಕಾಖಂಡಿಕಿ ವೆಂಕಪ್ಪನವರ ಚರಣವನೆ ನೆನೆವನೆ ಧನ್ಯಾಮಾನ್ಯ ಪ ಮರುತ ಮತಾಬ್ಧಿ ಮರಕತ ಭೂಸುರಜನ್ಮ ಧರನಾಗಿಭೂಮಿಯೊಳುದಿಸಲುತರುಳತ್ವ ಕಳೆದು ತರುಣತನ ಬರಲಿನ್ನು ಅರಿವ ಕಾಣದೆ ಇರುತಿರಲುಹರಿನಾಮಾವಳಿಗಳು ಬರೆದು ಓದುವ ಭಾಗ್ಯ ಅರಿವೆನೆಂದರೆ ಬಾರದಿರಲುತೊರೆದು ಮನೆಯವರ ಗಿರಿಯಾತ್ರೆ ಮಾಳ್ಪರನನುಸರಿಸಿ ತೆರಳಿಬರುತಿರಲು 1 ವರಾಹ ಮೂರ್ತಿಯನೆ ಕಂಡಾಲಸವ ಮಾಡದಲೆಚೆನ್ನಾಗಿಝಷಕೇತು ಜನಕನ ಪುಟ್ಟಿಸಿದ ಕಾರಣವೇನು ಉಸಿರೆಂದು ಚರಣಕ್ಕೆಬಾಗಿ 2 ವಂದಿಸಿದ ಕ್ಷಣ ಸ್ವಪ್ನದಿ ಪ್ರಸನ್ನವೆಂಕಟನೆಂದು ಬರೆಯೆ ನಾಲಿಗೆಲಿನಂದದಿಂದೆಚ್ಚೆತ್ತು ಜ್ಞಾನವುದಿಸೆ ಮುಕುಂದನ ಕಂಡು ಎದೆಯಲಿಚಂದ ಚಂದದಿ ಪೊಗಳುತ್ತ ಕಂಗಳಿಂದಾ ನಂದಬಾಷ್ಪ ಸುರಿಸುತಲಿಇಂದು ಧನ್ಯನಾದೆನೆಂದು ತೋಷಾಬ್ಧಿಯ ಹೊಂದಿ ಹರಿಯಾಜ್ಞೆಯಲಿತೆರಳಿ 3 ಭಾಗವತ ಪೂರ್ವಾರ್ಧಕನ್ನಡದಿಮತಿಪೂರ್ವಕ ರಚಿಸುತಾನಂದವು ತುಳುಕು ತಿಹುದು ಕವಿತೆಯಲಿನುತಿಸಿ ದುರ್ಮತ ನಿರಾಕರಿಸಿ ಬಾಳಿ ಬಲು ಕುಲ ತತಿ ಶುದ್ಧಮಾಳ್ಪರು ಹರಿಪುರವಹೊಂದಿ 4 ಕಲಿಕಾಲದಿ ನರಹರಿ ನಾಮ ಸ್ಮರಣೆಯು ಮುಖದಿಂದ ಬರುವುದು ಅತ್ಯಸಾಧ್ಯಲಲಿತಕವನದಿ ತುತಿಸೆ ರಮಾಪತಿವಿಠಲನು ಒಲಿವನು ಇದು ಸತ್ಯಹಲವು ಮಾತೇಕಿವರು ಸುರರೇ ಸರಿ ನರರಲ್ಲ ಇದು ಸಿದ್ಧವೇ ಸಿದ್ಧಛಲದಿ ಮನುಜನೆಂಬಧಮನು ಹರಿಯಾಜ್ಞೆಯಲಿ ಬಲು ಬಲು ನರಕದೊಳು ಬೇಳುವುದುರಾದ್ಧ 5
--------------
ರಮಾಪತಿವಿಠಲರು
ಕಾಣಬಹುದಕೆ ಕನ್ನಡಿಯಾಕೆ ಭಿನ್ನವಿಲ್ಲದೆ ನೋಡಿ ತನ್ನೊಳು ಘನಬ್ರಹ್ಮವಿರಲಿಕ್ಕೆ ಅನುಮಾನವು ಬ್ಯಾಡಿಧ್ರುವ ಕುಂಭಿನಿಯೊಳು ಘನಹೊಳೆಯುತ ತುಂಬಿತುಳುಕುತಲ್ಯಾದೆ ಉಂಬವರಿಗಿದಿರಿಡುತ ಬಿಂಬಿಸುತಲ್ಯಾದೆ ಹಂಬಲಿಸಿದರೆ ತನ್ನೊಳಗೆ ತಾ ಗುಂಭಗುರುತವಾಗ್ಯಾದೆ ಇಂಬು ತಾನೆ ಆಗ್ಯಾದೆ 1 ಹೇಳುವ ಮಾತಿನ ಮಾತಿಲ್ಲ ಕೇಳಿರಯ್ಯಾ ಚೆನ್ನಾಗಿ ಒಳ ಹೊರಗಿದು ಭಾಸುತಿ ಹ್ಯ ದೆಲ್ಲಾ ಸುಳವು ಬಲ್ಲಾತ ಯೋಗಿ ಕಳೆಕಾಂತಿಗಳ ಅನುಭವವೆಲ್ಲಾನು ತಿಳಿಯಬಲ್ಲವ ಭೋಗಿ ಹೊಳೆವುತಿಹ್ಯದು ಸರ್ವಮಯವೆಲ್ಲಾ ಮೊಳೆಮಿಂಚು ತಾನಾಗಿ 2 ಇಲ್ಲೆವೆ ಎರಡು ಹಾದಿಯ ಕಟ್ಟಿಗುಲ್ಲುಮಾಡದೆ ನೋಡಿ ಗೋಲ್ಹಾಟ ಮಂಡಲವನು ದಾಟಿ ಅಲ್ಲಿಯೆ ಮಹಿಪತಿ ನೋಡಿ ಅಲ್ಲಿಯೆ ಮನ ತಾಂ ಮನಿಕಟ್ಟಿ ಫÀುಲ್ಲನಾಭನ ಕೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಣೆ ಲೋಕದೊಳಗೆ ಮುಖ್ಯ ಪ ಪ್ರಾಣೋಪಾನ ವ್ಯಾನೋದಾನ ಸಮಾನನೆನಿಪ ಮುಖ್ಯ ಅ.ಪ. ವಾಸವ ಕುಲಿಶದಿ ಘಾತಿಸೆ ಜೀವರ ಶ್ವಾಸ ನಿರೋಧಿಸಿದೆ ಆ ಸಮಯದಿ ಕಮಲಾಸನ ಪೇಳಲು ನೀ ಸಲಹಿದೆ ಜಗವಾ ಮುಖ್ಯ1 ಅಂಗದ ಪ್ರಮುಖ ಪ್ಲವಂಗರು ರಾಮನ ಅಂಗನೆಯನು ಪುಡುಕೆ ತಿಂಗಳು ಮೀರಲು ಕಂಗೆಡೆ ಕಪಿಗಳ ಜಂಗುಳಿ ಪಾಲಿಸಿದೆ ಮುಖ್ಯ 2 ನೀಲ ಸು ಗ್ರೀವ ಮುಖ್ಯರ ಬಿಗಿಯೆ ಸಾವಿರದೈವತ್ತು ಗಾವುದದಲ್ಲಿಹ ಸಂ ಜೀವನ ಜವದಿ ತಂದೆ ಮುಖ್ಯ 3 ಪರಿಸರ ನೀನಿರೆ ಹರಿತಾನಿಪ್ಪನು ಇರದಿರೆ ತಾನಿರನು ಕರಣ ನಿಯಾಮಕ ಸುರರಗುರುವೆ ನೀ ಕರುಣಿಸೆ ಕರುಣಿಸುವಾ 4 ಭೂತೇಂದ್ರಿಯದಧಿನಾಥ ನಿಯಾಮಕ ಆ ತೈಜಸಹರನಾ ತಾತನೆನಿಪ ಜಗನ್ನಾಥ ವಿಠಲನ ಪ್ರೀತಿ ಪಾತ್ರನಾದ ಮುಖ್ಯ 5
--------------
ಜಗನ್ನಾಥದಾಸರು
ಕಾಣೆವಾವಿದನು ಕಾಣೆವಾವಿದನಾವ ಶಾಸ್ತ್ರದಲಿ ವಿದುಗಳ ಪ್ರಮಾಣ ವಚನದಲಿ ಮೂರನೆಯ ಪಥದಾಪಜಾಣಿಲಾತ್ಮನ ಸಮಾಧಿಯಲನುಭವಿಸಿ ಸುಖವಕಾಣದೆ ಬರಿದೆ ಮುಕುತರಾವೆಂಬ ಪರಿಯಾ ಅ.ಪತಾನೆ ಚೇತನವಂತೆ ತನಗೆ ಕರ್ಮಗಳಂತೆತಾನೆ ಸುಖಮಯನಂತೆ ತಾಪವನಂತೆತಾನೆ ಬೋಮವದಂತೆ ಹಾನಿವೃದ್ಧಿಗಳಂತೆತಾನೆ ನಿರ್ಲೇಪಸ್ತುತಿನಿಂದೆ ತನಗಂತೊ 1ಬೋಧೆಯು ತಾನಂತೆ ಸಾಧನವು ಬೇಕಂತೆಭೇದವಿಲ್ಲವದಂತೆ ಭೀತಿ ತನಗಂತೆನಾದ ಬಿಂದುಗಳನರಿದಿಪ್ಪಗತಿಯಂತೆಪಾದಾಭಿಮಾನ ಚಿಂತೆಯು ಪೋಗದಂತೆ 2ಕಾಯ ಕರುಣಾಭಿಮಾನಗಳಿಲ್ಲ ತನಗಂತೆಮಾಯೆ ಬಾಧಿಪುದಂತೆ ಮನಸಿನೊಳಗೆಈಯಹಂಕಾರವಿಲ್ಲದ ಬೊಮ್ಮಪದವಂತೆಹೇಯವಿದುಪಾದೇಯವೆನಿಪ ಭ್ರಮೆಯಂತೆ 3ಈಶ ತಾನಂತೆ ತನ್ನಾಶೆಗಳು ಬಿಡವಂತೆಕೋಶ ಸಾಕ್ಷಿಕನಂತೆ ಕೋಪ ತನಗಂತೆಪಾಶವಿಲ್ಲವದಂತೆ ಪಾಡುಪಂಥಗಳಂತೆಈ ಸಕಲ ತಾನಂತೆ ಇನ್ನು ವಿಧಿಯಂತೆ 4ಚೇತನವೆ ತಾನಂತೆ ಚಿತ್ತನಿಲ್ಲದುದಂತೆಪಾತಕಗಳಿಲ್ಲವಂತೆ ಪರಪೀಡೆಯಂತೆಜಾತಿಸೂತಕವೆಂಬ ಜಂಜಡಗಳಿಲ್ಲವಂತೆಮಾತಿನ ರಿಪು ಮತ್ಸರಗಳು ಬಿಡವಂತೆ 5ವಿಶ್ವಾತ್ಮತಾನೆಂಬ ವಿಶ್ವಾಸವುಂಟಂತೆವಿಶ್ವತ್ರೈಜಸರ ನಿಜವರಿಯನಂತೆನಶ್ವರದ ಭೋಗಂಗಳೆಂಬ ನಂಬಿಗೆಯಂತೆವಿಶ್ವಾದಿಗಳ ರೀತಿಯಲ್ಲಿ ಪಗೆಯಂತೆ 6ಅಂಡಪಿಂಡಗಳೈಕ್ಯವೆಂಬ ಬುದ್ಧಿಗಳಂತೆಚಂಡಾಲನಿವನೀತ ಮೇಲೆಂಬುದಂತೆಪಂಡಿತನು ಪ್ರವುಢ ತಾನೆಂಬ ಭಾಷೆಗಳಂತೆಕುಂಡಲಿಯ ಹೆಳವ ಕೇಳ್ದಡೆ ಕುದಿವನಂತೆ7ಚಿನ್ಮಯಾತ್ಮಕನು ತಾನೆಂಬ ಚಿಂತೆಗಳಂತೆತನ್ನವರು ತಾನೆಂಬ ಭ್ರಮೆಪೊಗದಂತೆಸನ್ಮುದ್ರೆಯಂತೆ ಸತ್ಯಾಸತ್ಯವೆರಡಂತೆತನ್ಮಯತೆಯಂತೆ ಲಕ್ಷಣೆಯರಿಯನಂತೆ 8ಗುರುಭಕುತಿಯಂತೆ ವರಕರುಣವಿಲ್ಲವದಂತೆಗುರುಶರಣನಂತವರನುಗೇಳನಂತೆಪರಮಪದ ತಾನಂತೆ ಪಿರಿದು ಸಂಶಯವಂತೆವರ ಮುಕ್ತಿಯಂತೆ ವಾಸನೆಯು ಬಿಡದಂತೆ 9ಈ ಪರಿಯ ಸಂಭಾವನೆಗಳ ಪರಿಹರಿಸಿ ಶ್ರೀಗೋಪಾಲಾರ್ಯ ಜನರಿಗೆ ದಯದಲಿತಾಪಂಗಳನು ಸವರಿ ದಾಟಿಸಯ್ಯಾ ಚಿತ್ಪ್ರತಾಪದಿಂ ನಿಜಪಾದ ಬೋಧೆಯನು ಕೊಟ್ಟು10
--------------
ಗೋಪಾಲಾರ್ಯರು
ಕಾಂತೆ ದ್ರೌಪತಾದೇವಿಗೆಂತು ಮರುಳಾದಿರಿಭ್ರಾಂತಿ ಹಿಡಿತೇನೊ ಏ ಹೀನ ಎಂಥ ನ್ಯಾಯವಯ್ಯಈ ಮಾತಿಗಿನ್ನೆಂತು ನಕುಲರಾಯ ಪ. ಹೆಣ್ಣು ಮಕ್ಕಳು ಹೊಳೆವೋದುತಪ್ತ ಸುಣ್ಣದಂತೆ ತಿಳಿವೋದುಸಣ್ಣವರೆನೀವು ಅಣ್ಣನ ಮಡದಿಗೆ ಕಣ್ಣು ಹಾಕುವರೇನೊ ಏ ಹೀನಾ 1 ಜಾತಿ ಮಾಣಿಕ ಮಾಲೆ ಕೊಡಲು ತಂದು ಕೋತಿ ರಾಜನ ಕೈಲಿಚಾತುರ್ಯದ್ವಸ್ತವು ನೀತಿಲೆ ಹಿಡಕೊಂಡುಆತುರ ಮಾಡಿದಂತೆ ನಿಮ್ಮಂತೆ2 ನಕುಲರಾಯನೆ ಕೇಳೊಸುಂದರಿಯಲ್ಲೆ ಕಕುಲಾತÉ ಭಾಳೊಸುಖಚಂದ್ರವದನಳೆ ಸಕಲರು ಬೆರೆಯಲು ನಕಲಿ ಆಯಿತು ಕಾಣೊನಿನ್ನಾಣೆ 3 ಅದ್ಬುತ ಮಹಿಮಳೊ ಧರ್ಮರಾಯಗೆಮುದದಿಕೊಟ್ಟರು ಕೇಳೊಅದ ತಾಳಲಾರದೆ ಇದು ನಿಮಗೈವರುಸುದತಿಯ ಬೆರೆಯುವರೇನೊ ಏ ಹೀನ4 ಪತಿ ನಗುವನು ಭಾಳೆ ಏ ತಾಳೊ 5
--------------
ಗಲಗಲಿಅವ್ವನವರು
ಕಾಪಾಡೆಲೆ ಸಕಲಾಪಧ್ಹಾರಿಣಿ ಕೊಲ್ಲಾಪುರಗತ ಕಮಲೆ ಪ. ಪರಿ ಹರಿಯ ದಯಾಪಾತ್ರಳೆ ಶುಭನೂಪುರಾದಿ ಸುಕಲಾಪೆ ಶೋಭಿತೆ ಭ್ರೂ-ಚಾಪ ಚಲನದಿಂದ ಪವಮಾನನಿ-ಗೆ ಪದದೇ ಭವತಾಪಗಳಳಿದು ಅ.ಪ. ಇಂದೀವರವರಮಂದಿರನಂದಿನಿ ಚಂದ್ರಜಯಿಪ ವದನೆಬೃಂದಾರಕ ಮುನಿವಂದಿತ ಪದಯುಗೆ ಕುಂದಕುಟ್ಮಲರದನೆ ಮದನೆ ಮುಕುಂದ ಹೃದಯಸದನೆಇಂದ್ರನೀಲನಭ ಸುಂದರತನು ಗುಣ-ಸಾಂದ್ರ ಇಂದುಮುಖಿ ಮಂದರಧರಗೋ-ವಿಂದ ಬಂಧುನುತೆ ಬೃಂದಾವನಪತಿನಂದನಂದನನಾನಂದಿನಿ ವಂದಿತೆ 1 ಕನ್ಯಾಮಣಿ ಜಗನ್ಮಾನ್ಯಾಮೃತ ಪಾವನ್ನಾಧರ ಬಿಂಬೆಘನ ಕಲಶ ಕುಚವನ್ನು ಧರಿಪ ಕಟಿಸಣ್ಣ ಘನನಿತಂಬೆ ಅಂಬೆ ಚಿನ್ನಪುತ್ಥಳಿ ಬೊಂಬೆಅನ್ನವಸನ ಧನಧಾನ್ಯಕಾಗಿ ಪರ-ರನ್ನ ಯಾಚಿಸಿ ಬಲು ಖಿನ್ನನಾಗುತಲಿನಿನ್ನನು ಮರೆದೆನು ಎನ್ನವಗುಣಗ-ಳನ್ನು ಎಣಿಸದಿರು ಮನ್ನಿಸು ಬಿನ್ನಪ 2 ಕಪೋಲ ಶೋಭಿತ ಕೀಲಾಲಜಾತಪಾಣಿಕೇಳಿಲಿ ಯಮುನಾಕೂಲದಿ ಹರಿ ದು-ಕೂಲಚೋರನ ರಾಣಿ ಜಾಣೆ ಶುಶ್ರೋಣೆ ಜಗತ್ರಾಣೆಕಾಳಕೂಟಸಮ ಕೀಳು ವಿಷಯದಲಿಬೀಳುವುದೆನ್ನ ಮನ ಕೀಳಿಸಿ ಶ್ರೀಗೋ-ಪಾಲವಿಠಲನನುಗಾಲ ಸೇವಿಪಂತೆಶೀಲವೀಯೆಯೆಂದು ಕೇಳುವೆ ಲಾಲಿಸೆ 3
--------------
ಗೋಪಾಲದಾಸರು
ಕಾಮಹರ ಒಬ್ಬ ತಾನೆ ಬಲ್ಲಾ | ರಾಮ ರಾಮ ಸೀತಾರಾಮ ರಾಮನಲ್ಲದಿಲ್ಲವೆಂದು ಪ ಕೈಯಲಿ ಕಿನ್ನರಿ ಧರಿಸಿ ಸಿರಿಮೊಗದಿಂದ | ಕೈಲಾಸಗಿರಿಯಲ್ಲಿ ಪಾರ್ವತಿ ಕೂಡ ಜಗ ದಯ್ಯನಯ್ಯ ಜಗದೊಡಿಯ ರಾಮನಲ್ಲದಿಲ್ಲೆಂದು 1 ಫಣಿಯಾಭರಣವು ಪೆಡೆಯೆತ್ತಿ ಇರಲು | ಮಣಿ ರುಂಡಮಾಲೆ ತೂಗಾಡಲು | ಕುಣಿದು ಕಣಕಾಲಿಂದ ಥಕ್ ಥಕ್ ಥೈ ರು ಪತಿ ಸರ್ವೋತ್ತಮ ರಾಮನಲ್ಲದಿಲ್ಲವೆಂದು 2 ಕಾಳಕೂಟದ ವಿಷಬಿಂದು ಮಾತುರನುಂಗೆ | ತಾಳಲಾರದೆ ತಳಮಳವಗೊಂಡು | ಕಾಳಿಮರ್ದನ ಕಮಲಾಯತಾಕ್ಷ ಎನ್ನ | ಪಾಲಿಸಿದ ಪರಮಾತ್ಮ ರಾಮನಲ್ಲದಿಲ್ಲವೆಂದು3 ಗಜಮುಖ ತಾಳವ ಪಿಡಿದು ತಥೈ ಎನ್ನಿ | ಅಜಸುತ ರಿಪು ಮದ್ದಳಿಯೆ ಮುಟ್ಟಿ | ಗಜ ಚರ್ಮಾಂಬರ ಗಾಯನವ ಮಾಡುತ-ತ್ರಿ | ಜಗಾಧಿಪತಿ | ವಿಷ್ಣು ರಾಮನಲ್ಲದಿಲ್ಲವೆಂದು 4 ಆರು ಮುಖದವ ಶಂಖವನ್ನು ಊದೆ | ಭೈರವ ನಾಗಸ್ವರವ ನುಡಿಸೆ | ಚಾರು ಪ್ರಥಮ ಭೂತ ತಲೆ ಚಪ್ಪಳಿಡೇ| ಧಾರಣಿಧರ ಸೀತಾರಾಮನಲ್ಲದಿಲ್ಲವೆಂದು 5 ಗೋರಾಜ ಸರಿಗಮಪದನಿಸ ಎಂದು ನಲಿಯೇ | ಉರಗಾದಿ ಮೂಷಕಾದಿ ಚಿಗಿದಾಡಲು | ವಾರಣದ ಗಂಗೆ ಸಿರದಲಿ ತುಳುಕಲು | ನಾರಾಯಣ ಪರದೈವ ರಾಮನಲ್ಲದಿಲ್ಲವೆಂದು 6 ತುಂಬುರನಾರಂದ ತಂದನ್ನಾತಾ ಎನ್ನೆ | ಅಂಬರದಿಂದ ಪೂಮಳೆಗೆರೆಯೆ | ಅಂಬುಜಪತಿ ಶಿರಿ ವಿಜಯವಿಠ್ಠಲ ವಿ ಶ್ವಂಭರಜಾಂಡಕರ್ತು ರಾಮನಲ್ಲದಿಲ್ಲವೆಂದು 7
--------------
ವಿಜಯದಾಸ
ಕಾಮಾರಿ ಕಾಮಿಪೆ ಕಾಮನ ಪಿತನಾ | ಕಮನೀಯ ರೂಪನ ಪ ಉಮೆಯರಸನೆ ಮಮ ವಿಷಯ ಸ್ತೋಮವನೀ ಮಾಣಿಪುದಲೊ ಹೇ ಮಹದೇವ ಅ.ಪ. ಗೌರೀ ವರ ತವ ಸುಂದರ ಚರಣಾ | ಸ್ಮರಿಸುವೆ ಪ್ರತಿದಿನಾವೈರಾಗ್ಯ ಹರಿಭಕ್ತಿ ಜ್ಞಾನಾ | ಹರಬೇಡುವೆ ನಿನ್ನಾ |ಮಾರಹರನೆ ಮುರವೈರಿಯ ಪ್ರೀಯನೆಶೌರಿಯ ತೋರಿಸೊ ಹೃದ್ವಾರಿಜದಲಿ 1 ಫಣಿ ಪದ ಯೋಗ್ಯನೆಫಣಿಯ ಶಯ್ಯನ ಕಾಣಿಸೊ ಬೇಗನೆ 2 ತೈಜಸ ಗಜ ಚರ್ಮಾಂಬರನೇ | ಶಿಖಿವಾಹನ ಪಿತನೇ |ಶ್ರೀಕರ ಗುರು ಗೋವಿಂದ ವಿಠಲನಸಖ ಸ್ವೀಕ5ನ್ನನು ಓಕರಿಸದ 3
--------------
ಗುರುಗೋವಿಂದವಿಠಲರು
ಕಾಮಿನಿಯರು ನೆರದೊಂದಾಗಿಪ್ರೇಮದಿ ಧವಳಾರವ ಪಾಡಲುಶ್ರೀ ಮಹಾಲಕ್ಷ್ಮಿ ಜಯವೆಂದುಜಯವೆಂದುಶ್ರೀಕೃಷ್ಣರಾಯಗೆಹೇಮದಾರತಿಯ ಬೆಳಗಿರೆ 1 ಸಿಂಧುರಗಮನೆಯರತಿ ಹರುಷದಲಿಚಂದದಿ ನಲಿದಾಡುತ ಪಾಡುತಇಂದಿರಾರಮಣ ಜಯವೆಂದುಜಯವೆಂದುಶ್ರೀ ಮಹಾಲಕ್ಷ್ಮಿಗೆಕುಂದಣದಾರತಿಯ ಬೆಳಗಿರೆ 2 ಕರದ ಕಂಕಣ ಝಣಝಣರೆನಲುಗುರುತು ಚವಲುಗಾಡಲು ಮುತ್ತಿನಕೊರಳಹಾರಗಳು ಹೊಳೆಯಲುಹೊಳೆಯಲುಶ್ರೀಕೃಷ್ಣರಾಯಗೆಕುರುಜಿನಾರತಿಯ ಬೆಳಗಿರಿ3 ಹಾರಪದಕ ಕಂಕಣದವರು ವೈ-ಯ್ಯಾರದ ಹೊಸ ಹರೆಯದಂಗನೆಯರುರಾರಾಜಿಪ ಚಂದ್ರಮುಖಿಯರುಮುಖಿಯರುಶ್ರೀ ಮಹಾಲಕ್ಷ್ಮಿಗೆಕುರುಜಿನಾರತಿಯ ಬೆಳಗಿರೆ 4 ಕಸ್ತೂರಿ ತಿಲಕದ ಸೊಬಗಿಯರು ಸು-ವೃತ್ತಸ್ತನತಟದ ಜವ್ವನೆಯರುಆರ್ತಿಯಿಂ ಪಾಡಿ ಪೊಗಳುತಪೊಗಳುತಶ್ರೀ ಕೃಷ್ಣರಾಯಗೆಮುತ್ತಿನಾರತಿಯ ಬೆಳಗಿರೆ5 ಬೆರಳುಂಗುರ ಥಳ ಥಳಥಳಿಸಿಸಿರಿಮೊಗದೊಳು ಕಿರಿಬೆಮರೊಗೆಯಲುಹರುಷದಿ ಪಾಡಿ ಪೊಗಳುತಪೊಗಳುತಲಿಶ್ರೀ ಮಹಾಲಕ್ಷ್ಮಿಗೇಸರಸಿಜದಾರರತಿಯ ಬೆಳಗಿರೆ 6 ಕನ್ನಡಿಗದಪಿನ ಚದುರೆಯರು ಚೊಕ್ಕಚಿನ್ನದ ಸರಪಣಿಯಿಟ್ಟಂಗನೆಯರುಚೆನ್ನಾಗಿ ಪಾಡಿ ಪೊಗಳುತಪೊಗಳುತಕೆಳದಿಯ ಶ್ರೀ ಕೃಷ್ಣಗೆರನ್ನದಾರತಿಯ ಬೆಳಗಿರೆ 7
--------------
ಕೆಳದಿ ವೆಂಕಣ್ಣ ಕವಿ
ಕಾಯ ಪ ದಾನವಾರಣ್ಯಪಾವಕ ವೀತಶೋಕ ಅ.ಪ. ಆನತೇಷ್ಟ ಪ್ರದಾಯಕ ನಮಿಸುವೆನು ಸದಾ ಮೈನಾಕಿಧರ ಬಿಂಬ ಸುರಮುನಿಕದಂಬ ಧ್ಯಾನಗಮ್ಯನೆ ಭಕ್ತರಾಪತ್ತು ಕಳೆ ಶಕ್ತಾ ನೀನೆ ಗತಿಯೆಂಬೆ ಮುನಿಮನ ವನಜ ತುಂಬೆ 1 ಶ್ರವಣ ಮಂಗಳನಾಮಧೇಯ ನಿರ್ಜಿತಕಾಮ ಸವನ ದ್ವಿತಿಯರೂಪ ವಿಗತಕೋಪ ಸ್ವವಶ ಸ್ವಾತಂತ್ರ್ಯ ವಿಖನಸ ಪೂಜ್ಯವಜ್ರನಖ ಪವಿ ದಂಷ್ಟ್ರದರ್ಶ ಭಾರ್ಗವಿರಮಣಗಶನಾ 2 ಆದಿದೇವಾನಂತ ಮಹಿಮನೇ ನಿಶ್ಚಿಂತಾ ಕಾದುಕೋ ನಿನ್ನವರ ವಿಬುಧ ಪ್ರವರಾ ಮೋದಮಯ ಶ್ರೀ ಜಗನ್ನಾಥವಿಠಲರೇಯ ವೈದಿಕವ ನುಡಿಸು ಲೌಕಿಕ ಮಾರ್ಗವ ಬಿಡಿಸು 3
--------------
ಜಗನ್ನಾಥದಾಸರು
ಕಾಯ ಪ ಗತಿ ನೀನೆ ಎನಗೆ ಸಂತತ ಪರಂಧಾಮಾ ಅ ಕೃಪಣ ವತ್ಸಲನೆ ಎಮ್ಮಪರಾಧಗಳ ನೋಡಿ ಕುಪಿತನಾಗುವರೇನೋ ಸುಫಲದಾಯೀ ನೃಪಗನಿರುದ್ಧ ಬಿನ್ನಪವ ಮಾಡುವೆ ನಿನಗೆ ಚಪಲ ಚಿತ್ತರಾದ ಕಾಶ್ಯಪಿಸುರರನ ಕಾಯೋ 1 ಮಾನ್ಯಮಾನದನೆ ಬ್ರಹ್ಮಣ್ಯದೇವ ನೀನೆಂದು ಉನ್ನತ ಶ್ರುತಿಗಳು ಬಣ್ಣಿಸುವುವು ಸನ್ನುತ ಮಹಿಮನೆ ನಿನ್ನ ಪೊಂದಿದವರ ಬನ್ನ ಬಡಿಸುವುದು ನಿನಗಿನ್ನು ಧರ್ಮವು ಅಲ್ಲ 2 ಹಲವು ಮಾತುಗಳಾಡಿ ಫಲವೇನು ಬ್ರಾಹ್ಮಣರ ಕುಲಕೆ ಮಂಗಳವೀಯೋ ಕಲುಷದೂರ ಸುಲಭ ದೇವೇಶ ನಿನ್ನುಳಿದು ಕಾವರ ಕಾಣೆ ಬಲಿಯ ಬಾಗಿಲ ಕಾಯ್ದ ಜಗನ್ನಾಥ ವಿಠಲಾ 3
--------------
ಜಗನ್ನಾಥದಾಸರು
ಕಾಯ ಬಲು ಹೇಯವೊ | ಸಾಕು ಸಾಕು ಸಂಸಾರ ನೆಚ್ಚದಿರು ಎಚ್ಚರಿಕೆ ಪ ಊಧ್ರ್ವಾಧೋ ಭಾಗದಿಂದ ಕೂಡಿದಾ ರಕ್ತಶುಕ್ಲ | ಅರ್ಧರ್ಧ ಪ್ರವೇಸಿಯಾಗಿ | ವರ್ಧನಾಗಿ ಮಾಂಸ ಪಿಂಡಿಕೆಯಲಿ ಬೆಳೆದು | ಅರ್ಧವದೊಳಗೆ ಬಳುಲುವುದೇನೊ ಮಹಾ ಕಠೀಣಾ 1 ಸನ್ನಿರೋಧವಾದ ಪ್ರಾದೇಶದಲಿ ನೀನು | ಬನ್ನ ಬಡುವದು ಜನಕೆ ಅರಿಯನಲ್ಲಾ | ಮುನ್ನೆ ಇಂದ್ರನಿಗಾಗಿ ವರವಿತ್ತ ಸಂಪತ್ತು | ಇನ್ನು ನಿನ್ನ ಸುತ್ತ ಬಂದದೆ ತಿಳಿದುಕೋ 2 ವಾತ ಶೈತ್ಯಜ್ವರ ಕೆಮ್ಮು | ಸಪುತ ಧಾತುಗಳಿಂದ ಬರುವ ರೋಗ | ಕ್ಲೇಶ ಮೋಹಗಳೊಡನೆ | ಮಾಯಾ 3 ಕಾಮ ಮದ ಗರ್ವದಲಿ ಪುಂಜನಾಗಿ ದುರಳ ನಿ | ಜ ಮಗಳ ಕೂಡ ಬೆರದಾಡಿ ಬೆರೆದು | ರೋಮರೋಮ ವಿಷಯ ಪೂರ್ತಿಯಾಗಿ ಚರಿಸಿ | ಪಾಮರನಾಗಿ ಬಳಲದಿರು ಬಹು ಜೋಕೆ 4 ಸತಿ ಸುತರು ಮಿಕ್ಕಾದ ಬಂಧುಗಳು ನೆರೆನೆರೆದು | ಪ್ರತಿದಿವಸದಲಿ ಅಟ್ಟುವುದು ನೋಡು| ಮತಿ ಚಂಚಲವಾಗಿ ಸತ್ಕರ್ಮ ವೃತ್ತಿಗೆ | ಪ್ರತಿಕೂಲವಾಗುವದು ಪ್ರೀತಿಯಾಗದು ಮುಂದೆ 5 ಎಂತು ನೋಡಲು ವಿಷಯ ಅನುಭವಿಸಿದರು ಅದರ | ಅಂತು ಕಂಡವರಾರು ವಲ್ಲೆನೆಂದು | ಭ್ರಾಂತಿಯಿಂದಲಿ ತಿರುಗಿ ಬಯಲಾಗೋದಲ್ಲದೆ | ಚಿಂತೆ ಇಷ್ಟಷ್ಟು ಏನೆಂದು ಪೇಳಲಿ 6 ಯಲೋ ಮನವೆ ಸಾರಿ ಪೇಳಿದೆನು ಚನ್ನಾಗಿ ನೀ | ನೆಲೆ ಮಾಡಿಕೋ ಜ್ಞಾನ ಭಕುತಿ ವಿತ್ತಾ | ಸುಲಭ ದೇವರ ದೇವ ವಿಜಯವಿಠ್ಠಲರೇಯ | ಕೆಲಕಾಲ ನೆನೆದು ಸುಖಿಯಾಗು ಸುಜನರಾ ಕೇಳು 7
--------------
ವಿಜಯದಾಸ