ಒಟ್ಟು 5542 ಕಡೆಗಳಲ್ಲಿ , 129 ದಾಸರು , 3523 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನಿತೆಂದು ಶಾಸ್ತ್ರ ಪೇಳುವವು ಪ ಪುನಹ ಪುನಹ ಭಗವತ್ಪ್ರಾಪ್ತಿ ಬೇಕೆಂಬುವರಿಗೆ ಅ.ಪ. ಅನುಬಂಧಿಗಳಲಿ ಮಮತೆಯನೆ ಬಿಡು ವಿಷಯ ವಾ ಸನೆಯನೀಡಾಡು ಸುಜ್ಞಾನ ಭಕ್ತಿಯ ಬೇಡು ಮನದಲ್ಲಿ ಹರಿಯ ಮೂರ್ತಿಯನೆ ನೆರೆ ನೋಡು ಸುಜ್ಞ ರನು ಕೊಂಡಾಡು ಅಜ್ಞಾನಿಗಳ ಸಹವಾಸ ಸುಡು ವನಜನಾಭನ ಪೂಜೆ ಮಾಡು ಪ್ರತಿ ಕ್ಷಣ ಬಿಡದೆ ಭಗವದ್ಗುಣಗಳ ಕೊಂಡಾಡು 1 ಪರಮಾಣು ಮೊದಲ್ಗೊಂಡು ವ್ಯಕ್ತ ತತ್ತ್ವದೊಳ ಹೊರಗೆ ವ್ಯಾಪಕನಾಗಿ ತದ್ರೂಪ ನಾಮದಿಂ ಕರೆಸುತಲಿ ತದ್ವಿಕಾರಗಳಿಲ್ಲದಲೆ ಸೃಷ್ಟಿ ಪರಿಪಾಲನೆ ಲಯಗಳನೆ ಮಾಡಿ ಮೋದಿಸುತಾ ಪರಮಾತ್ಮನೊಬ್ಬನಿಹನೆಂದು ಹರಿಗೆ ಮರೆಯದಲೆ ಮಹಿಮೆಗಳ ಪೊಗುಳುತಿರು ಮನುಜಾ 2 ಹರಿಭಕ್ತರಿದ್ದೆಡೆಗೆ ಹರಿದು ಹೋಗಲಿ ಬೇಕು ತಿರಿಯ ಕ್ಪುಂಡ್ರಗಳ ನಿಂದಿಸಬೇಕು ಹರಿಯ ನಾಮತ್ರಯಾಂಕಿತರಿಗೆರಗಲು ಬೇಕು ಗುರು ಹಿರಿಯರ ವಗುಣಗಳೆಣಿಸದಿರ ಬೇಕು ಮ ತ್ಸರವ ಬಿಡಬೇಕು ಭಕ್ತರಲಿ ಹೀಗೆ ಒರೆದೊರೆದು ಪೇಳುವರು ಬುಧರು ನಿತ್ಯದಲಿ 3 ನಿತ್ಯ ನೈಮಿತ್ತಿಕ ಸುಕರ್ಮ ಮಾಡಲು ಬೇಕು ಕೃತ್ಯವಲ್ಲದೆ ಲೋಕವಾರ್ತೆಗಳ ಬಿಡಬೇಕು ಚಿತ್ತದಲಿ ಹರಿಪಾದ ಚಿಂತಿಸುತಲಿರಬೇಕು ವಿತ್ತದೇಹಾಗಾರ ಭಗವಂತನದೆಂದು ದೇ ಪರಿಯಂತ ಮಾಳ್ಪ ಕರ್ಮ ಸತ್ಯಸಂಕಲ್ಪಕಿವು ಪೂಜೆ ಎನಬೇಕು 4 ಸೀತೋಷ್ಣ ಸುಖ ದುಃಖ ಮಾನಾಪಮಾನ ಜಯ ಭೀತಿ ನಿರ್ಭೀತಿ ಅಪಜಯ ಜ್ವರಾಪಸ್ಮಾರ ಭೂತ ಬಾಲ ಗ್ರಹ ಮೃಗಸರ್ಪ ನೃಪ ಚೋರ ಯಾತನೆಗೆ ಭಯಪಡದೆ ಸರ್ವತ್ರದಲಿ ಜಗ ನ್ನಾಥವಿಠ್ಠಲನ ಸ್ಮರಿಸುತಿರು ಮಹಾ ಪಾತಕವ ಪರಿಹರಿಸಿ ಪೊರೆವ ದಯದಿಂದಾ 5
--------------
ಜಗನ್ನಾಥದಾಸರು
ಇನ್ನೇನು ಕೇಳುತಿ ಛೀ ಹುಚ್ಚ ಮರುಳೆ ಪ ಆರನು ಕಟ್ಟಿನ್ನು ಆರನು ಬಿಟ್ಟಿನ್ನು | ಆರಕ ಆರಿಟ್ಟು ಆರಳಿದು | ಆರು ಚಕ್ರವ ಮೀರಿರುವ | ಮೂರು ಗುಣಕೆ ದೂರಿರುವವನ 1 ಅನುದಿನ | ಸಾಧು ಪುರುಷರ ಸಂಗದಲಿ |ಭೇದವ ಬಿಟ್ಟು ನಾದವನಾಲಿಸಿ | ಬೋಧದೊಳಗೆ ಲಯಗೊಂಡ ಮಹಾತ್ಮನ2 ನಿತ್ಯ ಪೂಜಿಸಿ ಶಾಂತಿ ಪೊಂದಿದವನ3
--------------
ಭಾವತರಕರು
ಇನ್ಯಾತಕನುಮಾನವಯ್ಯಾ ಪ ಅನ್ಯಥಾ ಗತಿ ಕಾಣೆ ನಿನ್ನ ಚರಣಗಳಾಣೆ ಅ.ಪ. ನಾಶರಹಿತನೆ ನಮಗೆ ಏಸೇಸು ಕಲ್ಪಕ್ಕು ವಾಸ ಏಕತ್ರದಲ್ಲಿ ನೀ ಸಾಕ್ಷಿಯಾಗಿದ್ದು ದಾಸನಾದವಗಪ್ರ- ಯಾಸದಿ ಫಲಗಳುಣಿಸಿ ಲೇಶ ಘನಮಾಡಿ ಸಂತೋಷಪಡುವಾ ನಿನ್ನ ದ್ವೇಷಿ ನಾನಲ್ಲವಯ್ಯ ದೇಶಕಾಲಾದಿಗಳಿಗೀಶ ನೀನೆಂದರಿದು ದಾಸನಾಗಿರುವೆನೆಂದಾಶೆ ಪುಟ್ಟಿದ ಬಳಿಕ 1 ನಿತ್ಯ ತೃಪ್ತನೆ ನಿನ್ನ ಕೃತ್ಯಕೇನೆಂಬೆನೋ ಸತ್ಯಸಂಕಲ್ಪ ಹರಿಯೇ ಮೃತ್ಯುಮಾರಿಗಳೆನಗೆ ಹತ್ತಿಕೊಂಡದರಿಂದ ಸತ್ತುಪುಟ್ಟುವೆಯಿನ್ನು ದತ್ತಕರ್ತೃತ್ವ ಬೆನ್ಹತ್ತಿಕೊಂಡದರಲ್ಲಿ ಅತ್ಯಪರಾಧಿಯಂದತ್ತ ಮೊಗದಿರುಗದಿರು ಭೃತ್ಯವತ್ಸಲನೆಂದಗತ್ಯ ಮನಸೋತ ಬಳಿಕ 2 ವೇದವೇದ್ಯ ಸ್ವಗತ ಭೇದವರ್ಜಿತ ಪೂರ್ಣ ಮಾಧವ ಮಹಿದಾಸ ಆದಿನಾರಾಯಣ ವಿನೋದ ವಿಷ್ವಕ್ಸೇನ ಶ್ರೀದವಿಠಲಾ ನಿನ್ನ ಕ್ರೋಧ ವರರೂಪ- ವಾದ ವಾರ್ತೆಯು ಕೇಳಿ ಧೈರ್ಯಬಿಡದಾ ಬಳಿಕಿನ್ನು 3
--------------
ಶ್ರೀದವಿಠಲರು
ಇವನಾ ನೆಲೆಗಾಣೆ ನಮ್ಮಯ್ಯಾ ಸಣ್ಣವನೇ ಪ ಒರಳವನೆಳೆದೊಯ್ದು ಮರಗಳ ಕೆಡೆಹಿಡಿದ| ಭರದಿ ಪೂತನಿಯಸುವ ಹೀರಿದಾ ನಮ್ಮಯ್ಯಾ 1 ಬೇರಳಲಿ ಗಿರಿಯೆತ್ತಿ ತುರುಗಳ ಕಾಯ್ದಾ| ತೆರೆದು ಬಾಯೊಳು ಜಗವ ತೋರಿದ ನಮ್ಮಾಯ್ಯಾ 2 ವೇಣುನಾದ ಮಾಡಿ ತೃಣಪಶು ಮೊದಲಾದ| ಏಣಾಕ್ಷಿಯರ ಮನವಾ ಭ್ರಮಿಸಿದಾ ನಮ್ಮಯ್ಯಾ 3 ಕಾಳಿ ಮಡುವ ಹೊಕ್ಕು ಕಾಳಿಂಗನೆಳೆತಂದಾ| ಲೀಲೆ ತೋರಲು ಹರಿ ಉದಿಸಿದ ನಮ್ಮಯ್ಯಾ 4 ಗುರುಮಹಿಪತಿ ಸ್ವಾಮಿ ಸುರುತರು ಎನಗಾದಾ| ನರನೆಂಬವರ ಬಾಮಾ ಬಿಗಿಸಿದ ನಮ್ಮಯ್ಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇವರರುವರ ಹಿಡಿದು ಬಂಧಿಸಿ ನೀವು ಬೇಗ ಪ ಬಿಮ್ಮನೆ ಬಿಗಿದು ಕಾಮನ ಕಟ್ಟೆ ಅವನ ತಮ್ಮನ ಹಿಡಿದು ತಲೆಯ ಕುಟ್ಟಿ ಸುಮ್ಮನೆ ಲೋಭನ ಕೈ ಕೆಟ್ಟಿ ಗುಮ್ಮಿ ಜಮ್ಮನೆ ಮೋಹನ ದವಡೆಗೆ ತಟ್ಟಿ 1 ದಂಡಿಸಿರೈ ಮದವೆಂಬುವನ ತಲೆಯ ಚಂಡ ಹಾರಿಸಿ ಮತ್ತೆ ತುಡಿಗೆ ಮತ್ಸರನ ಬಿಡದೆ ಹೆಂಡಿರು ಮಕ್ಕಳಸೆರೆಯೊಳಗಿಕ್ಕಿ 2 ಅರಿಗಳನರುವರ ಜಯಿಸಿ ಸದ್ಗುರುವಿನ ಕರುಣ ಕಟಾಕ್ಷವ ಧರಿಸಿ ಪರಮಾತ್ಮ ಪರಿಪೂರ್ಣನೆನಿಸಿ ಹರಿಸೂನು ಕೋಣೆ ಲಕ್ಷ್ಮೀಶನ ಸ್ಮರಿಸಿ 3
--------------
ಕವಿ ಪರಮದೇವದಾಸರು
ಇಷ್ಟು ದಯವುಳ್ಳವನ ಯಾಕೆ ಬರಬೇಡೆಂದಿಇಷ್ಟು ನಿರ್ದಯಳೆ ನೀನು ಪ. ಇನ್ನೆಲ್ಲಿ ಪೋಗಲೆ ರತಿಯಿಲ್ಲದಿದ್ದರೆ ನಿನಗೆ ಪೂಮಾಲೆ ತಾ ಎನೆಸಣ್ಣ ಕಮಲದೆಲೆಯ ಬಣ್ಣದ ಗಿಣಿ ಬರೆದುವ ಸಣ್ಣ ಸೀರೆಯ ಕೊಡುವೆನೆಕಣ್ಣಿಗೆ ಪ್ರಿಯವಾದ ಕಮಲಮಯ ಕುಪ್ಪಸವ ಕರೆದು ಕೈಯಲಿ ಕೊಡುವೆÀನೆಬಿನ್ನಣದಿಂದಲಿ ಬಗೆಬಗೆಯಲಿ ನಿನಗೆ ಬಾಯಮುದ್ದನುವ ಕೊಡುವೆನೆ ಸಖಿಯೆ1 ತಳಿರು ಸುಳಿಗರೆವÀ ರುಮಾಲೆತÀಲೆಯಲ್ಲಿ ಸುತ್ತಿ ಬಾಹನ ಥಳಥಳಿಪ ನ-ವಿಲುಗರಿ ಮುತ್ತಿನ ತುರಾಯವ ಸಿಕ್ಕಿ ತರುಣಿ ನಿಲ್ಲಲಿ ಬಾಹೆನೆ ಸಖಿಯೆ 2 ಉರುಟಾಣೆ ಮುತ್ತುಗಳುಚಿತವಾಗಿವೆ ನಿನ್ನ ಉರುಟು ಕುಚಗಳ ಪಿಡಿವೆನೆಮುದದಿಂದ ನಿನ್ನ ಮುಖ ಕಿರುಬೆವರನೆಒರೆÀಸಿ ಕಸ್ತೂರಿತಿಲಕವನಿಡುವೆನೆಸಿರಿಯರಸ ಹಯವದನ ರಂಗನ ಚರಣವನು ನೆರೆನಂಬಿ ಭಜಿಸು ಸಖಿಯೆ ಸಖಿಯೆ3
--------------
ವಾದಿರಾಜ
ಇಷ್ಟು ಮಾಡಿ ಕೈ ಬಿಟ್ಟು ಕೂಡ್ರುವದು ಶಿಷ್ಟರ ನಡತೆಲ್ಲೆಲ್ಲೂ ಗುರುವೇ ಬಲು ಕಷ್ಟದೊಳಗೆ ನಾ ಮುಳುಗಿರುವೆ ನೀ ಕೊಟ್ಟ ಅಭಯದಿಂ ಬದುಕಿರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣುಸಾರಥಿಯ ಪ್ರೀಯ ಮಗುವೆ ಬಾ ಬಾ ಗುರುವೆ ಪ ಇತ್ತರು ಸರಿಯಿಲ್ಲ ಈ ಮಾತು ಹೊರಗೆ ಪೇಳುವವಲ್ಲಾ ನಾ ನಿದ್ದೆ ಪೂರ್ವದಲಿ ಅತಿ ಖುಲ್ಲಾ ಶಿಲೆಯನು ಸುಂದರ ಮೂರ್ತಿಗೈದತೆರ ಬಲು ವಿಧದಲಿ ಸಲಹಿದಿಯಲ್ಲ ಹರಿಬಲ್ಲಾ ಜ್ಞಾನವಿತ್ತಿ ಹರಿಪಾದದಲ್ಲಿ ಅಭಿಮಾನವಿತ್ತಿ ಸುಖವೆಲ್ಲಾ ಬಲುಹೇಯವೆಂದು ತಿಳಿಸಿದಿಯಲ್ಲಾ ಮೇಲ್ವರದಿ ರಂಗನೊಲಿಯುವ ಸೊಲ್ಲಾ ಅಸನ ವಸನಗಳು ಕೊಟ್ಟು ಕೊನೆಗೆ ತುಚ್ಛಿಸುವ ನಿನ್ನ ಗುಣ ತಿಳಿಯಲಿಲ್ಲಾ ಇದು ಥsÀರವಲ್ಲಾ ನಿನ್ನ ಪಾದವೇ ಸಡಗರ ಸಿರಿ ಮೇಲೆ ಸುರಪುರಿ ಜ್ಞಾನನಿಧಿ ಥsÉರಿ ಕಾಶಿ ಗಯಾ ಮಧುರಿ ಹರಿ ಓಂ ಓಂ ಓಂ ನಿನ್ನ ನಾಮ ದುರಿತವೆಂಬೊ ಕರಿ ಕುಲಕೆ ಘನ ಹರಿ ಪರಿ ತಿಳಿದೆನೆಲೊಧೊರಿ ಹರಿ ಓಂ ಓಂ ಓಂ ಇನ್ನಾದರು ಕೋಪವತ್ವರಿ ಕರುಣಿ ಕಣ್ತೆರಿ ಸುತಗೆ ಸುಖಗರಿ ತೋರೋ ನಿನ್ನ ಮಾರಿ ಹರಿ ಓಂ ಓಂ ಓಂ ಎನ್ನಯ ಬಿsÀಷ್ಟಗಳನ್ನು ನೀಡದಿರೆ ನಿನ್ನ ವಿಮಲ ಕೀರ್ತಿಗೆ ಗುರುವೆ ಕುಂದನ್ನು ಬಿಡದೆ ತಿಳಿ ನಾ ತರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣು ಸಾರಥಿಯ ಪ್ರಿಯ ಮಗುವೆ ಬಾ ಬಾ ಗುರುವೆ 1 ಪಂಥವೇ ಹೇ ಮಹಾಕಾಂತ ಪ್ರಿಯ ನಿನ್ನ ಸಂತತಿಯೊಳು ಸೂರಿಗಳೊಡೆಯ ನೀನೆಂತು ಪೊಂದಿದೈ ನಿರ್ಭಿಡಿಯಾ ಇದು ಸಂತರು ಕೇಳಿದರಾಶ್ಚರ್ಯ ವಂತರು ಆಗರೆ ಸಾಕು ಮುಂದೆಯನ್ನಂತರಂಗವೇ ತವನಿಲಯ ಆಗಲಿ ಜೀಯಾ ಕಂದನ ಕಾಯುವದಂತು ಸಹಜ ಸಿರಿ ಹಿಂದಕೆ ಪಾಂಡವನೆಂಭಿರಿಯಾ ಆ ಗಂಧರ್ವನ ಮಗನಾದ ಗಯಾ ತಾ ಬಂದು ಹೋಗಲವನನು ಮೊರೆಯ ಸಿಂಧು ಜಪನ ಸಹ ಲಕ್ಷಿಸದಲೆ ತ್ವರ ತಂದು ಕೊಟ್ಟನವನಿಗೆ ವಿಜಯಾ ಮೇಲ್ಹರಿಯದಯಾ ಇದು ಅಲ್ಲದೆ ಬಹು ಭಕ್ತರು ಜ್ಞಾನಯುಕ್ತರು ಸುಧಿಯ ಭೋಕ್ತರು ನೆನೆದವರ ದು:ಖ ಬಿಡಿಸಿದರು ಸುಧೆಯ ಬಡಿಸಿದರು ಹರಿ ಓಂ ಓಂ ಓಂ ಬಲು ಹಿತದಿ ಶುಭವ ಕೋರಿದರು ತಾಪ ಹೀರಿದರು ವಾಕ್ಯ ಸಾರಿದರು ಹರಿಯ ತೋರಿದರು ಹರಿ ಓಂ ಓಂ ಓಂ ನೀನಾದರೂ ಬಹಳರ ಪೊರದಿ ಈ ಹೀನ ಓರ್ವ ನಿನ್ನಗೆಯರವೆ ಮರಿಯಬ್ಯಾಡ ಕರುಣೆ ಕರವ ಮುಗಿವೆ ಸಿಟ್ಟು ಮಾತ್ರ ನೀನಾಗ ಬೇಡ2 ಪರ ಖರೆ ಗುರುವಿಲ್ಲದ ಗತಿಯನ್ನು ಧರೆತ್ರಯದಿ ತೋರು ತುಸು ನೋಡೋಣ ಗಿರಿಧರಿಯ ಬಿಟ್ಟು ನಿಲ್ಲುವುದೇನು ಗುರುವೆ ತ್ರಿಟಿಯ ಬಿಟ್ಟೊರುಷವಾಗುತದೆ ಹಿರಿಯರಿ ಪೇಳ ವದಿನ್ನೇನು ಹೇ | ಸುರಧೇನು ಗುರುವೆ ಸುಖದ ಖಣಿ ಗುರುತನುಮಣಿ ಮಣಿ ತಿಳಿದೆ ನಾ ಮನದಾಗೆ ಪರಕಿಸಿದೆನ್ನನು ಪೊರೆಯೆ ಯನುತ ಬಾ ಯ್ತೆರೆಯುತ ಮಣಿಸುವೆ ಶಿರನಿನಗೆ ಮೂಜಗದಾಗೆ | ನಿನ್ನಿಂದ ಎನಗೆ ಸದ್ಬುದ್ಧಿ ಯೋಗದಾಸಿದ್ಧಿ ಕಾರ್ಯದಾಸಿದ್ಧಿ ಸ್ವರ್ಗದಾಸಿದ್ಧಿ ಹರಿ ಓಂ ಓಂ ಓಂ ನಿನ್ನಿಂದ ಪಡೆದ ವಿಜ್ಞಾನ ಹರಿಯರಾ ಖೂನಾ ಲೋಕದೊಳು ಮಾನ ಮುಕ್ತಿ ಸೋಪಾನ ಹರಿ ಓಂ ಓಂ ಓಂ ನೀನೇವೆ ಯನಗೆ ಆಭರಣ ಝಗಝಗಿಪ ವಸನ ಶ್ರೀಹರಿಯ ಚರಣ ವಿರಜಾನದಿ ಸ್ನಾನ ಹರಿ ಓಂ ಓಂ ಓಂ ನಿನ್ನೊಮ್ಮೆ ನೆನಸೆ ಪವಮಾನ ಕಾಯ್ವ ಪ್ರತಿದಿನ ಇದಕೆ ಅನುಮಾನ ಇಲ್ಲ ಏನೇನ ಹರಿ ಓಂ ಓಂ ಓಂ ಗಡ ಕೇಳ್ವಡೆಯನೆ ಕಡೆ ನುಡಿಯನ್ನದು ಭಿಡೆಯ ಇಡದೆ ನಾನುಡಿವೆ ಎನ್ನ ಮರೆತರೆ ಮಂಗನು ನೀ ನಿಜವೆ 3
--------------
ಅಸ್ಕಿಹಾಳ ಗೋವಿಂದ
ಇಷ್ಟು ಸುಳ್ಳೆಂಬೋದು ತಿಳಿಯಲಿಲ್ಲ | ಕಷ್ಟವಿದರೊಳಗು ಎಳ್ಳಷ್ಟು ಸುಖವಿಲ್ಲ ಪ ಮಡದಿ ಮಕ್ಕಳು ಮನೆಮಾರೆಲ್ಲ ಸುಳ್ಳು | ಹಡೆದ ತಾಯಿ ತಂದೆ ಮೊದಲೇ ಸುಳ್ಳು | ಒಡ ಹುಟ್ಟಿದ ಅಣ್ಣ-ತಮ್ಮಂದಿರು ಸುಳ್ಳು |ಒಡವೆ ವಸ್ತುಗಳೆಲ್ಲ ಕಡೆ ತನಕ ಸುಳ್ಳು 1 ಆನೆ ಕುದುರೆ ಸೇನೆ ದೌಲತು ಸುಳ್ಳು | ನಾನು ನೀನೆಂಬ ಅಜ್ಞಾನವೇ ಸುಳ್ಳು | ಮೌನ ಹಿಡಿವುದು ಸುಳ್ಳು | ಸ್ವಾನುಭವಕೆಲ್ಲ ಸುಳ್ಳು 2 ಕೊಟ್ಟು ಕೊಂಡೋದು ಸುಳ್ಳು | ಕೆಟ್ಟದೊಳ್ಳೇದೆಂಬುವದು ಸುಳ್ಳು | ಧಿಟ್ಟ ಭವತಾರಕನ ಮುಟ್ಟಿ ಪೂಜಿಸಿನ್ನು | ಬಟ್ಟ ಬಯಲಾಗಿ ತಾ ಘಟ್ಟ್ಯಾದನು 3
--------------
ಭಾವತರಕರು
ಇಹವಸ್ತುವೊಂದೇ ಜಗದೊಳಗೆ ಇಹವಸ್ತುವೊಂದೇಸೋಹಂ ಸೋಹಂ ಸೋಹಂ ಸೋಹಂಸೋಹಂ ಸೋಹಂ ಸೋಹಂ ಎಂದೇ ಪ ಸಂಗ ದೂರೆನಿಸಿ ಸಂಗವೆ ತಾನೆನಿಸಿಮಂಗಳ ಮಂಗಳ ಮಂಗಳ ಮಂಗಳಮಂಗಳ ಮಂಗಳ ಮಂಗಳವೆಂದೇ 1 ಜ್ಞಾನವೆ ತಾನಾಗಿ ಅಜ್ಞಾನಕೆ ತಾದೂರಾಗಿತಾನೇ ತಾನೇ ತಾನೇ ತಾನೇತಾನೇ ತಾನೇ ತಾನೇ ಎಂದು2 ವರ್ಣಂಗಳು ಆರು ಮೀರುವರ ಚಿದಾನಂದ ಗುರುಪೂರಣ ಪೂರಣ ಪೂರಣ ಪೂರಣಪೂರಣ ಪೂರಣ ಪೂರಣವೆಂದು 3
--------------
ಚಿದಾನಂದ ಅವಧೂತರು
ಈ ಉಪಾಯವು ತೋರಿ ಕೊಡುವೆನು ಪ ಉದಯದಲಿ ಎದ್ದೀಗ ಊರ ವಾರ್ತಿಯ ಬಿಟ್ಟು ಮುದದಿಂದ ವೃಂದಾವನ ಸೇವಿಸಿ ವದನದಲಿ ಶ್ರೀ ಹರಿಯನಾಮ ಗುಣಕಥೆಗಳನು ಪದೋಪದಿಗೆ ಪಾಡಿ ಕೊಂಡಾಡು ನಲಿದಾಡು 1 ಆಮೇಲೆ ದೇವರೆಡೆ ರಂಗವಾಲಿಯನಿಕ್ಕಿ ಕಾಮುಕನಾಗದಲೆ ಸ್ನಾನ ಸಂಧ್ಯಾ ನೇಮ ನಿತ್ಯವ ಮುಗಿಸಿ ದೇವತಾ ಪೂಜೆಗೈದು ಪ್ರೇಮದಿಂದಲಿ ದಾನ ಕರದಲ್ಲಿ ಮಾಡೊ 2 ಮಂಗಳ ಮೂರುತಿಯ ಅಂತರಂಗದಿ ನಿಲಿಸಿ ಶೃಂಗಾರದುಡಿಗೆ ಇಡಿಗಿಯನು ತೊಡಿಸಿ ಮಂಗಳಾರುತಿ ಬೆಳಗಿ ಮನದಲ್ಲಿ ನಲಿನಲಿದು ಕಂಗಳಿಂದಲಿ ನೋಡು ಹರಿಯ ಕೂಡಾಡು 3 ಮೂಲ ಗುಣ ಅವತಾರ ಮಹಿಮೆ ಮಹ ಉನ್ನತ ಲೀಲೆ ವಿನೋದ ಅತಿ ಆಶ್ಚರ್ಯವ ವ್ಯಾಳವ್ಯಾಳೆಗೆ ಪೋಗಿ ಉತ್ತಮ ಜ್ಞಾನಿಗಳಿಂದ ಕೇಳು ಕರ್ಣದಲಿ ಪರಮ ಹರುಷದಲೆ4 ಹರಿಚರಣಕ್ಕೇರಿಸಿದ ಶಿರಿ ತುಲಸಿ ಚಂಪಕ ವರ ಜಾಜಿ ಮಲ್ಲೆ ಮಲ್ಲಿಗೆ ಕ್ಯಾದಿಗೆ ಪರಿಪರಿ ಗಂಧ ಚಂದನ ದಿವ್ಯ ಪರಿಮಳ ಸರಕು ನಾಶಿಕದಲ್ಲಿ ಕೊಳ್ಳು ಸುಖ ಬಾಳು 5 ಅಶಿವರುಣ ಮಧ್ಯ ತ್ರಿವೇಣಿ ವಿಷ್ಣುಪಾದ ಎಸೆÀವ ಕುರುಕ್ಷೇತ್ರ ಅಯೋಧ್ಯ ಮಾಯಾ ವೃಷಭ ಗಿರಿ ಶ್ರೀರಂಗ ಕಂಚಿ ಮೊದಲಾಗ್ಯುಳ್ಳ ಹೆಸರಾದ ಪುಣ್ಯನಿಧಿ ಮಟ್ಟು ದುರಿತವ ಕುಟ್ಟು 6 ಬೇಸರದಲೀಪರಿಚರಿಸಿದರೆ ಜನನಾದಿ ನಾಶನವÀ ಮಾಡಿ ನಾರದವರದನು ದಾಸ ಪುರಂದರಗೆ ವೊಲಿದಂತೆ ವಿಜಯವಿಠ್ಠ ಲೇಶ ವೆಂಕಟ ನಿನಗೆ ಪರಮ ಪದವೀಯನೀವ 7
--------------
ವಿಜಯದಾಸ
ಈ ಧರಣಿಯೊಳ್ ಹದಿನಾರು ಸಾವಿರ ಮಂದಿ ಆಳುತ ದ್ವಾರಕೆಯಲ್ಲಿ ವಿನೋದದಿ ಕುಳಿತಿದ್ದ ಹರಿಯು 1 ಅಂಬುಜೋದ್ಭವನ ಅಂಕದಲುದಿಸಿದ ಸುತ ಚೆಂದ ಚೆಂದ ವೀಣೆ ಪಿಡಿದು ಕಂದರ್ಪಪಿತ (ನಲ್ಲಿಗೆ) ನಲಿನಲಿದಾಡುತ ಬಂದ ನಾರಂದ ಹರುಷದಲಿ2 ಬಂದ ನಾರಂದನ ಕಂಡು ಕಮಲನಾಭ ಚೆಂದದಿಂದಲಿ ಅಘ್ರ್ಯ ಪಾದಪೂಜೆಯ ಮಾಡಿ ನಾ- ರಂದಗೆ ಎರಗಿದನಾಗ3 ದೇವಾಧಿದೇವನೆ ದೇವಲೋಕದಿ ಸುತ್ತಿ ಈ ಪಾರಿಜಾತವ ತಂದೆ ದೇವಿ ರುಕ್ಮಿಣಿಗೀಗ ಮುಡಿಸೆಂದು ನಾರಂದ ಸ್ವಾಮಿಯ ಚರಣಕ್ಕರ್ಪಿಸಿದ 4 ತಕ್ಷಣದಿ ಜಗನ್ಮಾತೆ ಮಾಲಕ್ಷುಮಿ ಸಾಕ್ಷಾತ ಶ್ರೀನಾರಾಯಣನು ವಕ್ಷಸ್ಥಳದಲಿ ಹೊಂದಿರುವ ರುಕ್ಮಿಣಿಯನು ಸ್ತೋತ್ರ ಮಾಡಿದನು ನಾರದನು 5 ಕಡಲಶಯನ ಕಡೆಗಣ್ಣ ನೋಟಗಳಿಂದ ಕಡುಮುದ್ದು ಸುರಿವೊ ರುಕ್ಮಿಣಿಯ ಬಡನಡುವಿನ ಭಾಮಿನಿರನ್ನೆ ಬಾರೆಂದು ತೊಡೆಯ ಮ್ಯಾಲಿಟ್ಟ ಶ್ರೀಕೃಷ್ಣ 6 ದುಂಡುಮಲ್ಲಿಗೆ ಗೊಂಡ್ಯ ಚೌರಿ ರಾಗಟೆ ಜಡೆ- ಅಂಗನೆ ರುಗ್ಮಿಯಾಲಿಂಗನೆ ಮಾಡುತ ರಂಗ ತಾ ಮುಡಿಸಿದ ಸತಿಗೆ 7 ಸರಿಸವತೇರ ಬಿಟ್ಟು ಸುರಪಾರಿಜಾತವ ಗರುವಿಕೆಯಿಂದ ನೀ ಮುಡಿದೆ ಹರದಿ ಸತ್ಯಭಾಮೆ ಕೇಳಿ ಮುನಿದರಿನ್ನು ಅರಿಯೆನು ನಾ ಇದಕೆ ಉಪಾಯ 8 ಗಾಡಿಕಾರನು ಕೃಷ್ಣ ಆಡುವೊ ಮಾತನು ಕೇಳಿ ರುಕ್ಮಿಣಿ ನಗುತಿರಲು ಓಡುತ ಬಂದು ನಾರದ ಸತ್ಯಭಾಮೆ- ಗಲ್ಲದ ವಾರ್ತೆಗಳರುಹಿದನು 9 ಅಲ್ಲಿಂದ ದೇವಲೋಕವ ಸುತ್ತಿ ತಂದೇನೆ ಚೆಲ್ವೆನಗೆ ತಕ್ಕ ಕುಸುಮ ಗೊಲ್ಲ ಕೃಷ್ಣನ ಕೈಯಲ್ಲಿ ಕೊಟ್ಟರೆ ತನ್ನ ನಲ್ಲೆ ರುಕ್ಮಿಣಿಗೆ ಮುಡಿಸಿದನು 10 ಕೇಳುತ ಭಾಮೆ ತಲ್ಲಣಿಸಿ ಕೋಪಗಳಿಂದ ಹೇಮಮಾಣಿಕ್ಯದ್ವಜ್ರಾಭರಣ ಹಾರ ಪದಕ ಕಠಾಣಿಮುತ್ತನೆ ಚೆಲ್ಲಿ ಭೂಮಿಲಿ ಬಿದ್ದೊ ್ಹರಳಿದಳು 11 ಮಲ್ಲಿಗೆ ದವನ ಕ್ಯಾದಿಗೆ ಶಾವಂತಿಗೆ ಬಿಟ್ಟು ಒಲ್ಲೆನೆಂದೊರೆಸಿ ಕಸ್ತೂರಿಯ ವಲ್ಲಭನೊಲ್ಲದೀ ಸೊಗಸ್ಯಾತಕೆನುತಲಿ ಗಲ್ಲದ್ವಿಳ್ಯವನುಗುಳಿದಳು 12 ಸರ್ಪನಂದದಿ ಉಸುರ್ಹಾಕುತ ಭಾಮೆ ತಾ ನೇತ್ರದಿ ಜಲವ ಸುರಿಸುತಲಿ ಸರ್ಪಶಯನನೊಲ್ಲದೀ ದೇಹವ್ಯಾಕೆಂದು ಪಟ್ಟೆ ಮಂಚದಲೊರಗಿದಳು 13 ನಿಂತು ನೋಡುತ ಸತ್ಯಭಾಮೆ ಮಾಡುವೊದು ಇ- ನ್ನೆಂತು ಮಾಡಲಿಯಿದಕೆಂದು ಅಂತರಂಗದಲಿ ಯೋಚನೆ ಮಾಡಿ ನಾರಂದ ಶ್ರೀ- ಕಾಂತನ ಮನೆಮಾರ್ಗ ಹಿಡಿದ 14 ತಿರುಗಿ ಬಂದ್ಹರಿಯ ಮುಂದರುಹಿದ ನಾರಂದ ತೊರೆವೋಳು ತನ್ನ ಪ್ರಾಣವನು ಮರುಗುತ ಸೊರಗಿ ಬಿದ್ದಿರುವೊ ಭಾಮೆಯ ನೋಡಿ ಕರುಣವಿಲ್ಲೇನೊ ಶ್ರೀ ಕೃಷ್ಣ 15 ಮುನಿಯ ಮಾತನು ಕೇಳಿ ಮುಗುಳು ನಗೆಯ ನಕ್ಕು ಪರಿ ಬವಣೆಗೆ ಒಳಗಾದೆ ಧರೆಯ ಒಳಗೆ ಇಬ್ಬರ್ಹೆಂಡರಾಳುವೋರಿನ್ನು ಪರಮ ಮೂರ್ಖರು ಅವರೆಂದ 16 ಹೊದ್ದ ಪೀತಾಂಬರ ಅಲೆಯುತ ಶ್ರೀಕೃಷ್ಣ ಹದ್ದನೇರದೆ ನಡೆಯುತಲಿ ಮುದ್ದು ರುಕ್ಮಿಣಿಯ ಮುಂದಕೆ ಕರೆದ್ಹೇಳದೆ ಎದ್ದು ಬಂದನು ಭಾಮೆಮನೆಗೆ 17 ಅರ್ಕನಂತ್ಹೊಳೆಯುತ ಹೊಕ್ಕ ತನ್ನರಮನೆ ಕಕ್ಕಬಿಕ್ಕ್ಯಾಗಿ ನೋಡುತಲಿ ದಿಕ್ಕು ದಿಕ್ಕಿಗೆ ಬಿದ್ದಾಭರಣವಾರಿಸಿ ರತ್ನ ದೆಕ್ಕಿಲೇ(?) ಬಂದು ತಾ ಕುಳಿತ 18 ಮಿಂಚು ಸೂರ್ಯಗೆ ಮಿಗಿಲಾಗಿದ್ದ ಮುಖ ಬಾಡಿ ಸಂಪಿಗೆ ಸರವ ಈಡ್ಯಾಡಿ ಚಿಂತೆಮಾಡುವರೆ ಚಿನ್ನದ ಗೊಂಬೆ ಏಳೆಂದು ಮಂಚದ ಮ್ಯಾಲೆ ತಾ ಕುಳಿತ 19 ಬೆವರಿದ್ದ ಮುಖವ ಮುಂಜೆರಗಿಲಿಂದೊರೆಸುತ ಹ- ರವಿದ ಹಾರ ಹಾಕುತಲಿ ಪರಮ ಪ್ರೀತಿಲಿ ತನ್ನ ಕರಗಳಿಂದ್ಹಿಡಿದೆತ್ತೆ- ನ್ನರಗಿಳಿ ಏಳೆಂದೆಬ್ಬಿಸಿದ 20 ಸಿಟ್ಟಿಲಿಂದೆದ್ದು ಶ್ರೀ ಕೃಷ್ಣನ ಒಳೆಯಿಕ್ಕೆ ಬಿಟ್ಟವರಾರು ಈಗೆನುತ ದೃಷ್ಟಿ ತೆಗೆದು ಕೋಟಿಸೂರ್ಯ ಪ್ರಕಾಶನ ಇ- ಕ್ಕದ್ಹಾಗೆವೆಯ ನೋಡಿದಳು 21 ಇಷ್ಟು ಕ್ರೋಧಗಳ್ಯಾತಕೀ ಚಾಡಿ ನಾರಂದ ಹಚ್ಚಿ ಹೋದನೆ ಕದನವನು <ಈಔಓಖಿ size=
--------------
ಹರಪನಹಳ್ಳಿಭೀಮವ್ವ
ಈ ಧರೆಯೊಳಗಿಂಥಾ ಸೊಬಗ ಕಾಣೆನೋ ಪ ಕಂತುಪಿತ ತನ್ನ ಕಾಂತೇಯರೊಡಗೂಡಿ | ನಿಂತು ಮಜ್ಜನಗೊಂಡು ಸಂತಸವಾಂತಪರಿಅ.ಪ ನಂದಾವ್ರಜದಿ ಇಂದ್ರನೂ | ಕುಪಿತನಾಗಿ | ಅಂಧವೃಷ್ಟಿಯ ಕರೆಯಲು | ಸಿಂಧೂಶಯನ ಗಿರಿಯ | ಮಂದಹಾಸದಿ ನೆಗಹಿ | ಸುಂದರ ಗೋವ್ಗಳನೆ | ಚೆಂದಾದಿಂದಲೆ ಪೊರೆಯೆ | ಅಂದು ತೋರಿದುಪಕೃತಿಯ ನೆನೆದು ಗೋ | ವೃಂದಗಳೈ | ತಂದಿಂದಿರೆಯರಸಗೆ | ಮಿಂದು ಮಧುರಕ್ಷೀರಧಾರೆಯ ಕರೆಯಲು | ನಂದಕುವರಾನಂದವ ಬೀರಿದ 1 ಕಿರಿಯರೊಡನೆ ಕೂಡುತ | ಗೋಪಾಲನು | ಮುರಲಿನಾದವ ಗೈಯುತ | ಹರಿಣಾಕ್ಷಿಯರಮನೆ | ಹರುಷದಿಂದಲೇ ಪೊಕ್ಕು | ಪರಿಪರಿ ಲೀಲೆಯಿಂ | ಬೆರಗು ಮಾಡುತಲಿರೆ | ವರ ಧದಿಘೃತ ಭಾಂಡಗಳನೊಡೆದು | ಯದುವರನಾಲೈಸುತ ಬರುವರ ಸುಳಿವನು | ಸರಸದಿ ಕಂಡಾಕ್ಷಣದಿಂದೋಡಲು | ಸುರಿದುದು ಶಿರದಲಿ ದಧೀಘೃತಧಾರೆಯು 2 ಕರುಣಾಸಾಗರ ಹರಿಯು | ಮೋಹದಿ ವರ | ಭೈಷ್ಮಿಭಾಮೇರ ಕೂಡುತಾ | ಭರದಿ ಕುಣಿಯಲವರ ಶಿರದಿ ಮುಡಿದ ಸುರಗೀ | ಅರಳುಮಲ್ಲಿಗೆಯೊಳು | ಸೆರೆಬಿದ್ದ ಮಧುಪಗಳ | ನೆರೆದು ಝೇಂಕರಿಸುತ | ಹರುಷದಿ ಸುರಿಸಲು ಸುರ ಸಂದೋಹವು | ಪರಿ 3 ಅಂಗಳದೊಳು ಆಡುತ | ಮಂಗಳಮೂರ್ತಿ | ಸಂಗಡಿಗರ ಸೇರುತಾ | ಮುಂಗುರುಳ್ಗಳ ಮೇಲೆ | ಕೆಂದೂಳಿಯನೇ ಧರಿಸಿ | ಗೋಪಿ ರಂಗನ್ನಪ್ಪಿದಳು ಮುದದೀ || ಅಂಗನೆ ರುಕ್ಮಿಣಿ ಭಂಗಿಯ ನೋಡಲು | ಅಂಗಜ ಪಿತನನು | ಪಿಂಗದೆ ಬೇಡಲು | ಮಂಗಳಾಂಗಿ ಮನದಿಷ್ಟವ ಸಲಿಸಲು | ಸಿಂಗರಗೊಂಡನು | ಸಕ್ಕರೆ ಸುರಿಸುತೆ 4 ಸುರನದೀ ಜನಕ ತಾನೂ | ಕುಂಜವನದಿ | ಸರಸಿಜಾಕ್ಷೇರ ಕೂಡುತ | ಸರಸವಾಡುತಲಿರೇ | ಪರಮ ಸಂತೋಷದಿ | ತರುಲತೆಗಳು ಹರಿಯ ಚರಣ ಸೇವೆಯಗೈಯ್ದು | ಕದಳಿಗಳುದುರಿಸೆ | ಗಳಿತ ಫಲಂಗಳು | ಸರಸಿಜನಾಭನು ಕರುಣಿಸಿ ಭಕುತರ | ಶಿರಿಯಾಳಪುರದೊಳು ಮೆರೆದನು ವಿಭವದಿ 5 ವ್ಯಾಸರಾಜರ ಪೀಠದೀ | ರಂಜಿಪ ಲಕ್ಷ್ಮೀಶತೀರ್ಥರಿಂ ಸೇವಿಪ ಭವ | ಪರಿಪರಿ ನರಳುವ ದಾಸರ ಸಲಹಲಿನ್ನು | ಸಾಸಿರ ಶಂಖದಿ ಪೂಜೆಯಗೊಳುತಿರೆ | ದೇಶದೇಶದ ಜನರಾಲಿಸಿ ಬರುತಿರೆ | ಶ್ರೀಶಕೇಶವ ತನ್ನ ಮಹಿಮೆಯ ತೋರಿದ 6
--------------
ಶ್ರೀಶ ಕೇಶವದಾಸರು
ಈ ಪರಿಯ ಸೊಬಗು ಇನ್ನಾವ ಗುರುಗಳಿಗುಂಟುಈ ಪರಿಮಳಾರ್ಯ ಗುರುರಾಜಗಲ್ಲದೆ ಪಅರ್ಜುನಪ್ರಿಯ ಸೇವಕನು ಶಂಕುಕರ್ಣನು ಮೊದಲುಅಜನ ಶಾಪವ ತಾಳಿ ದೈತ್ಯರೊಳು ಜನಿಸಿಈ ಜಗದಿ ಸರ್ವತ್ರ ಹರಿಯ ವ್ಯಾಪ್ತಿಯ ತೋರಿನಿಜ ಭಕ್ತನೆನಿಸಿದನು ಪ್ರಹ್ಲಾದನಾಗಿ 1ದ್ವಾಪರಾಂತ್ಯದಿ ಇವನ ಬಾ'್ಲೀಕನೆಂದೆನಿಸಿಶಾಪಫಲ ಪರಿಹಾರವಾಗಬೇಕಾಗಿ'ಪರೀತ ಬುದ್ಧಿುಂ ಯುದ್ಧವನು ಮಾಡಿ ತಾ-ನಪೇಕ್ಷಿಸಿದ ಭೀಮನಿಂ ಮರಣವನ್ನು 2ಕಲಿಯುಗದಿ ಭೀಮಸೇನ ಮಧ್ವ ಮುನಿಯಾಗಿಅವತರಿಸಿ ತತ್ವಮತ ಸ್ಥಾಪಿಸಿದನುಬಾ'್ಲೀಕ ಬಾಲಯತಿ ವ್ಯಾಸಮುನಿಯಾಗಿಕರುಣಿಸಿದನು ಕೃಷ್ಣ ಸದ್ಗ್ರಂಥಗಳ ರಚಿಸಿ 3ವ್ಯಾಸರಾಯರ ಮುಂದೆ ಅವತರಿಸಿ ಗುರುವರ್ಯಶ್ರೀರಾಘವೇಂದ್ರನೆಂದೆನಿಸುತಮಧ್ವಮತ ದುಗ್ಧಾಬ್ಧಿ ಚಂದ್ರಮನು ತಾನಾಗಿಕಲಿಯುಗದ ಕಲ್ಪತರು ಎಂದೆನಿಸಿದ 4ಅಜನಪ್ರಿಯ ಅಜನ ತಾತನ ಭಕ್ತಅಜಪದಕೆ ಅರ್ಹನೆ ಇವನಂತ (?) ಅಜನ ತಾತನ ಕುಣಿಸಿ ಅಜಕರಾರ್ಚಿತಪೂಜಿಸಿದ ಭೂಪತಿ'ಠ್ಠಲನ ದಾಸ *5
--------------
ಭೂಪತಿ ವಿಠಲರು
ಈ ಭಾಗ್ಯ ನೋಡ ಒಯ್ಯಾರಿನಮ್ಮ ಸೌಭಾಗ್ಯ ಶ್ರೀ ಕೃಷ್ಣ ಕೈ ಸೇರಶೌರಿ ಪ. ಅರಳು ಅರಳು ಮೊದಲಾಗಿ ಏ ನಾರಿಸಕ್ಕರೆಯ ತಂದಿಟ್ಟು ಮಾರುವವರು ಕಡೆಯಿಲ್ಲ 1 ಕುಂಕುಮ ಅರಿಷಿಣ ಅಲಂಕಾರ ದ್ರವ್ಯವಅಂಕ ಅಂಕಣಕ ನೆರವ್ಯಾವ ಏನಾರಿ ಅಂಕ ಅಂಕಣಕ ನೆರವ್ಯಾವ ಬೆಲೆ ಮಾಡೊಕಂಕಣದ ಕೈಯ ಕೆಲದೆಯರು ಕಡೆಯಲ್ಲಾ ಏ ನಾರಿ 2 ಬುಕಿಟ್ಟು ಪÀರಿಮಳ ದ್ರವ್ಯ ಪೊಟ್ಟಣ ಕಟ್ಟಿತರಹತರಹ ಏ ನಾರಿಪೊಟ್ಟಣವ ಕಟ್ಟಿ ತರಹತರದ ದ್ರವ್ಯವ ಕೊಟ್ಟು ಕೊಂಬುವರು ಕಡೆಯಿಲ್ಲ ಏ ನಾರಿ3 ಸೋಜಿಗವಾಗಿದ್ದ ಜಾಜಿ ಮಲ್ಲಿಗೆ ಹೂ ಸೂಜಿ ಮಲ್ಲಿಗೆ ಸರಗಳು ಸೂಜಿ ಮಲ್ಲಿಗೆ ಸರಗಳ ರಂಗನ ಪೂಜೆಗೊಯ್ವೊ ಪುರುಷರು ಏ ನಾರಿ4 ನಾಲ್ಕು ದಿಕ್ಕಿಗೆ ದಿವ್ಯ ಆಕಳ ಹಿಂಡುಗಳು ಸಾಕುವ ಎರಳೆ ಎಳಿಗಾವು ಏ ನಾರಿಸಾಕುವ ಎರಳೆ ಎಳಿಗಾವು ಹೂಂಕರಿಸಿ ಬಾಹೋ ಚಲ್ವಿಕೆಯ ಏ ನಾರಿ 5 ಎತ್ತೆತ್ತ ನೋಡಿದರೂ ಮುತ್ತಿನ ಪಲ್ಲಕ್ಕಿಉತ್ತಮ ರಥವ ಹಿಡಿದೇಜಿ ಏ ನಾರಿಉತ್ತಮ ರಥವ ಹಿಡಿದೇಜಿ ಮ್ಯಾಲಿನ್ನು ಹತ್ತಿ ಬಾಹುವರು ಕಡೆಯಿಲ್ಲ ಏ ನಾರಿ6 ಬಾಜಾರದೊಳಗಿನ್ನು ರಾಜಸಿಂಹಾಸನ ರಾಜ ರಾಮೇಶ ಕುಳಿತಲ್ಲಿಯೆ ಏ ನಾರಿ ರಾಜ ರಾಮೇಶ ಕುಳಿತು ಪೂಜೆಗೊಂಬೊಮೂರ್ಜಗವು ಮುದದಿಂದ ಏ ನಾರಿ7
--------------
ಗಲಗಲಿಅವ್ವನವರು
ಈ ಭಾಗ್ಯವೆ ನಿನ್ನದೊ ವರ ಭೋಗಿಶಯನಾ ಪ ಸೌಭಾಗ್ಯವೇ ನಿನ್ನ ಮಹಿಮೆ ತಿಳಿಯುವ ಯೋಗಅ.ಪ ನೀನಿಲ್ಲದಾಸ್ಥಾನ ಈ ನಳಿನಜಾಂಡದೊಳಿಲ್ಲ ನೀನೆಲ್ಲವನು ಬಲ್ಲೆ ನಿನ್ನತಿಳಿಯಗೊಡದೆ ಹೀನಮಾನವ ನಾನು ನಿನ್ನನವರತ ಮರೆತರು ನೀ ಎನ್ನ ಮರೆಯದಲೆ ಎನ್ನೊಳಗೆ ಇಹೆ ಎಂಬ 1 ನಿಲ್ಲಿಸಲು ನಿಲ್ಲುವೆನು ಮಲಗಿಸಲು ಮಲಗುವೆನು ತಿಳಿಸಿದರೆ ನಾ ತಿಳಿವೆ ತಿಳುವಳಿಕೆ ನೀನೆ ತಿಳಿಯಗೊಡಿಸೋಎನ್ನಕ್ರಿಯೆಗಳನು ದೇಹದ ನೆಳಲಂತೆ ನಿನಗೆ ನಾನಿಹೆನಯ್ಯ ದೇವಾ 2 ಈ ಜಗತ್ತಿನೊಳಗೆಲ್ಲ ಪೂಜ್ಯಪೂಜಕ ಪೂಜ್ಯ ಪೂಜೋಪಕರಣದೊಳು ನೀನೆ ನಿಂತು ಮೂರ್ಜಗತ್ಪತಿಯೆ ನಿನ್ನನರ್ಚಿಸುವ ಭಜಕರಿಗೆ ನೈಜಸುಖ ವ್ಯಕ್ತಿಯನು ಮಾಡುತಲಿ ಪೊರೆವೇ 3 ನೀರು ತೃಣವನು ಕೊಡಲು ಹರುಷದಿಂದಲಿ ಗೋವು ಕ್ಷೀರವನು ಕರೆದು ಜನರ ಪೊರೆವಂತೆ ಸೂರಿಗಳು ಮಾಳ್ವ ಅಪರಾಧಗಳೆಣಿಸದಲೆ ಕರುಣದಿಂದಲಿ ಅವರ ಪೊರೆವ ಶ್ರೀಹರಿಯೆ4 ಪನ್ನಗಾಚಲನಿಲಯ ನೀನೆ ಎನ್ನೊಳಗಿರಲು ಬನ್ನಪಡಲ್ಯಾತಕೆ ಚಿನ್ಮಯರೂಪ ಎನ್ನಂಥಜೀವರಿನ್ನೆಷ್ಟೋ ಬ್ರಹ್ಮಾಂಡದೊಳು ಘನ್ನಭಕುತಿಯನೀಡೋ ಶ್ರೀಉರಗಾದ್ರಿವಾಸವಿಠಲ 5
--------------
ಉರಗಾದ್ರಿವಾಸವಿಠಲದಾಸರು