ಒಟ್ಟು 1647 ಕಡೆಗಳಲ್ಲಿ , 109 ದಾಸರು , 1238 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯಜನನೀ ಶಾರದೆ ಜನನಮೃತಿಭಯಭಿದೆ ಪ. ನಯವಿದೆ ತ್ರಿಜಗನ್ಮಯೆ ವೀಣಾವಿನೋದೆ ಅ.ಪ. ಭಕ್ತಿಜ್ಞಾನ ಮಾನದೆ ಭಗವತ್ಪ್ರಾಪ್ತ ಪ್ರಸಾದೆ ಮುಕ್ತಿಶಕ್ತಿಪ್ರದೆ ನಿಜ ಭೃತ್ಯವತ್ಸಲೆ ಪ್ರಬುದ್ಧೆ 1 ವೇದಾರ್ಥತತ್ವಪ್ರಬೋಧೆ ಆದಿತೇಯಾನತಪದೆ ಶ್ರೀಧರೆ ಸದಾನಂದೆ ಸಾಧು ಸೌಭಾಗ್ಯನಿಧೆ 2 ಅನಘ ಲಕ್ಷುಮಿನಾರಾಯಣನ ಭಕ್ತ ಪ್ರಹ್ಲಾದ ಸನಕನುತೆ ಸನ್ನುತೆ ಘನಪಾಪಾಪಹ್ನುತೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯತು ಸೀತಾರಾಮ ರಾಮ ಚರ- ಣಾರವಿಂದದ ಭಕ್ತಿ ದೃಢವಾಗಿ ಕೊಡು ಜಯ ರಾಮ ರಾಮ ಕ್ರೂರಕಾಮಾದಿಗಳ್ಸೂರೆಗೊಂಬರು ಸೀತಾರಾಮ ರಾಮ ರಾವ- ಣಾರಿ ನೀನಲ್ಲದೆ ಯಾರಿಲ್ಲ ಗತಿ ಜಯ ರಾಮ ರಾಮ 1 ಬುದ್ಧಿ ಜ್ಞಾನ ಶಕ್ತಿ ಸಿದ್ಧಿದಾಯಕ ಸೀತಾರಾಮ ರಾಮ ಗುಣ- ವೃದ್ಧಿಕಾರಣ ಭಕ್ತಿಶ್ರದ್ಧೆಯ ಕೊಡು ಜಯ ರಾಮ ರಾಮ ಬಿದ್ದೆನಜ್ಞಾನಸಮುದ್ರಮಧ್ಯದಿ ಸೀತಾರಾಮ ರಾಮ ಎನ್ನ- ನುದ್ಧರಿಸುವರೆ ಪ್ರಸಿದ್ಧ ನೀನೆ ಜಯ ರಾಮ ರಾಮ 2 ನಿನ್ನ ನಾಮವೆ ಪ್ರಸನ್ನ ಪಾವನ ಸೀತಾರಾಮ ರಾಮ ಸ- ರ್ವೋನ್ನತ ಮಹಿಮವರೇಣ್ಯ ಶಾಶ್ವತ ಜಯ ರಾಮ ರಾಮ ನಿನ್ನಾಧೀನವು ನಿಖಿಲ ಜಗವು ಸೀತಾರಾಮ ರಾಮ ಪರಿ- ಪೂರ್ಣಾತ್ಪೂರ್ಣವರೇಣ್ಯ ಶಾಶ್ವತ ಜಯ ರಾಮ ರಾಮ 3 ಸ್ವಾಂತರಂಗಭಕ್ತಿಚಿಂತಾಮಣಿ ಸೀತಾರಾಮ ರಾಮ ಆತ್ಮ- ತಂತ್ರನಿಯಂತ್ರ ಸರ್ವಾಂತರಾತ್ಮಕ ಜಯ ರಾಮ ರಾಮ ಭ್ರಾಂತಿ ತ್ಯಜಿಸುವುದಕೆಂತುಪಾಯವು ಸೀತಾರಾಮ ರಾಮ ಏ- ಕಾಂತಸ್ಮರಣೆಯ ನಿರಂತರ ಕೊಡು ಜಯ ರಾಮ ರಾಮ 4 ಸೀತಾರಾಮ ರಾಮ ದುಷ್ಟ- ರಕ್ಕಸಾಳಿಯ ಸೊಕ್ಕಡಗಿತು ಜಯ ರಾಮ ರಾಮ ಕರ್ಕಶಕಲಿಕಾಲ ಮಿಕ್ಕಿ ಬಂದುದು ಸೀತಾರಾಮ ರಾಮ ಮನ- ಸೊಕ್ಕಿ ಮೋಹದ ಬಲೆಗೆ ಸಿಕ್ಕಿಬಿದ್ದುದು ಜಯ ರಾಮ ರಾಮ 5 ದಾಸಜನರ ಹೃದಯಸ್ಥಿತ ಸೀತಾರಾಮ ರಾಮ ಶ್ರೀನಿ- ವಾಸ ನಿನ್ನವರಭಿಲಾಷೆಯ ಕೊಡು ಜಯ ರಾಮ ರಾಮ ಸೀತಾರಾಮ ರಾಮ ಸಾಧು- ವಾಸಸಂತೋ ಪ್ರಕಾಶವ ಕೊಡು ಜಯ ರಾಮ ರಾಮ 6 ಜ್ಞಾನವಜ್ಞಾನವು ಭಾನುತಿಮಿರ ಸೀತಾರಾಮ ರಾಮ ಸತ್ಯ- ಜ್ಞಾನ ಭಕ್ತಿಭಾಗ್ಯ ನೀನಿತ್ತು ಪೊರೆ ಜಯ ರಾಮ ರಾಮ ಹೀನರೈವರು ಸ್ವಾಧೀನಗೊಂಬರು ಸೀತಾರಾಮ ರಾಮ ಪವ- ಮಾನವಾಹನ ನಿನ್ನ ಧ್ಯಾನವ ಕೊಡು ಜಯ ರಾಮ ರಾಮ 7 ಚಿತ್ತಕೆ ನಿಲವಿಲ್ಲ ಚಿಂತೆ ಹಲವು ಸೀತಾರಾಮ ರಾಮ ತವ ಭೃತ್ಯನಾಗಿರುವ ಸದ್ಭಕ್ತಿಯ ಕೊಡು ಜಯ ರಾಮ ರಾಮ ಸೀತಾರಾಮ ರಾಮ ಪರ- ವಸ್ತುತ್ವದೇಕಾಸಕ್ತಿಯ ಕೊಡು ಜಯ ರಾಮ ರಾಮ 8 ಆಧಿವ್ಯಾಧಿ ಭವಾಂಬೋಧಿಕುಂಭಜ ಸೀತಾರಾಮ ರಾಮ ತವ ಪಾದಾಂಭೋಜಪ್ರಸಾದಪಾಲಿಸು ಜಯ ರಾಮ ರಾಮ ಸಾಧುಸಂಗಸುಖಬೋಧೆಯ ಕೊಡು ಸೀತಾರಾಮ ರಾಮ ಕಲಿ- ಬಾಧೆ ಪರಿಹರಿಪ ಹಾದಿ ತೋರಿಸು ಜಯ ರಾಮ ರಾಮ 9 ಧ್ಯಾನವಿರಲಿ ಎನ್ನ ಮಾನಸದಲಿ ಸೀತಾರಾಮ ರಾಮ ವಿಷ ಯಾನುಭವದಿ ಬಲು ಹಾನಿಯಾದೆನು ಜಯ ರಾಮ ರಾಮ ದೀನಜನರ ಕಾಮದೇನು ರಘುವರ ಸೀತಾರಾಮ ರಾಮ ಖಲ- ದಾನವಾರಣ್ಯಕೃಶಾನು ಮಾನದ ಜಯ ರಾಮ ರಾಮ 10 ದುಷ್ಟರ ಸಂಗದಿಂದೆಷ್ಟೊ ನೊಂದೆನು ಸೀತಾರಾಮ ರಾಮ ಸುವಿ- ಶಿಷ್ಟರ ಸಂಗವ ಕೊಟ್ಟು ಸಲಹೊ ಜಯ ರಾಮ ರಾಮ ಭ್ರಷ್ಟ ಪ್ರಕೃತಿಯನ್ನು ಕುಟ್ಟಿ ಕಳಚು ಸೀತಾರಾಮ ರಾಮ ಪರ- ಮೇಷ್ಟ್ಯಾದಿ ಸುಮನಸರಿಷ್ಟದಾಯಕ ಜಯ ರಾಮ ರಾಮ 11 ತನ್ನ ಕೇಡು ತಾನರಿಯದಾದೆ ಸೀತಾರಾಮ ರಾಮ ಸುಪ್ರ- ಸನ್ನ ನಿನ್ನ ಸ್ಮರಣೆಯನಿತ್ತು ಪೊರೆ ಜಯ ರಾಮ ರಾಮ ಹಣ್ಣೆಂದು ದೀಪವ ತಿನ್ನ ಪೋದೆನು ಸೀತಾರಾಮ ರಾಮ ಹೆಣ್ಣು ಹೊನ್ನಿಗಾಗಿ ಪರವನ್ನು ಮರೆತೆ ಜಯ ರಾಮ ರಾಮ 12 ನಿತ್ಯ ನಿನ್ನ ದಾಸ್ಯವಿತ್ತು ರಕ್ಷಿಸು ಸೀತಾರಾಮ ರಾಮ ಯಾವ- ಚ್ಚಿತ್ತ ತವ ಧ್ಯಾನದಿ ತೃಪ್ತಿಯಾಗಲಿ ಜಯ ರಾಮ ರಾಮ ಸತ್ಯಾತ್ಮರ ಸಂಗಸತ್ವ ವರ್ಧಿಸು ಸೀತಾರಾಮ ರಾಮ ಪರ- ಮಾರ್ಥವಿಚಾರ ಸತ್ತತ್ತ್ವವರುಹು ಜಯ ರಾಮ ರಾಮ 13 ಕರ್ತಾಕಾರಯಿತನು ಭರ್ತಾರನು ಸೀತಾರಾಮ ರಾಮ ಪುರು- ಷಾರ್ಥರೂಪ ತವ ಭಕ್ತಿ ಪ್ರಾರ್ಥನೆ ಜಯ ರಾಮ ರಾಮ ಪ್ರತ್ಯಗಾತ್ಮ ಮನೋವೃತ್ತಿಯೊಳಿರು ಸೀತಾರಾಮ ರಾಮ ಸ್ವಾಮಿ- ಭೃತ್ಯನ್ಯಾಯದಿ ನಿಯಮಿಸುತ್ತ ನಡೆಸು ಜಯ ರಾಮ ರಾಮ 14 ಸೀತಾರಾಮ ರಾಮ ವಾಯು- ಸಖಸ್ಪರ್ಧಾತ್ಮಕ ಸಾಧುಪ್ರಕೃತಿಪಾಲಿಸು ಜಯ ರಾಮ ರಾಮ ಸೀತಾರಾಮ ರಾಮ ಬ್ರಹ್ಮಾ- ದ್ಯಖಿಳ ಚೇತನಾತ್ಮಕ ಸರ್ವೋತ್ತಮ ಜಯ ರಾಮ ರಾಮ 15
--------------
ತುಪಾಕಿ ವೆಂಕಟರಮಣಾಚಾರ್ಯ
ಜಯತುಲಸೀರಾಮಾ ಜಗದಭಿರಾಮಾ ಭಯನಗಸುತ್ರಾಮ ಭರತÀಪುರೀಧಾಮ ಪವೆಂಕಟಲಕ್ಷಾಂಬ ಉದರಾಬ್ಧಿ ಸೋಮಕಿಂಕರಾಶ್ರಿತಪ್ರೇಮ ಕ'ಸಾರ್ವಭೌಮ 1ಪತಿತಜನೋದ್ಧರಿತ ಪ್ರಥಮಾಶ್ರಮರತರತಿಪತಿಗುಣಜಿತರಮ್ಯ ಸುಭಾತ 2ವರಸಕಲಾಗಮಶಾಸ್ತ್ರಾರ್ಥ ಪ್ರ'ೀಣನಿರ್ಮಲಧೀಷಣ ನೀರಜಲೋಚನ 3ರಾಮಕೃಷ್ಣೋತ್ಸವ ನೇಮಧುರೀಣಕಾ'ುತಫಲಪ್ರದ ಕರುಣಾಭರಣಾ 4ಅಥಿತಿ ಅಭ್ಯಾಗತ ಆದರಣೇ'ತಬುಧವರಪೂಜಿತ ಭು'ಪ್ರಖ್ಯಾತ 5ನಿರತಾನ್ನದಾನ ನಿಖಿಲಾವಧಾನಪರಮಾರ್ಥಜ್ಞಾನ ಪರಿಬೋಧಮಾನ 6ತಾಮರತುಲಸೀದಾಮ (ಶುಭಾಂಗಾ)ಶ್ರೀರಂಗಸ್ವಾ'ುದಾಸ ಭವತಿ'ುರಪತಂಗಾ 7
--------------
ಮಳಿಗೆ ರಂಗಸ್ವಾಮಿದಾಸರು
ಜಯದೇವ ಜಯದೇವ ಜಯ ಲಂಬೋದರ | ಜಯ ಶಂಭು ಸತಿಗತಿ ಪ್ರಿಯ ಸುಕುಮಾರ ಪ ಜಯತು ಜಯತೆಂಬೆ ನಿನ್ನಯ ಪದವನಾಶ್ರಯಿಸಿ | ಜಯತು ಪಾಲಿಸೋಯೆನ್ನ ಮನದಿಷ್ಟ ಸಲಿಸಿ ಅ.ಪ. ಸುರರ ಪೂಜೆಯಗೊಂಡು ಸಂತುಷ್ಟಿಗೊಳದೆ | ನರರ ಭಕ್ತಿಗೆ ಮೆಚ್ಚಿ ಧರೆಗೆ ನೀನಿಳಿದೆ || ಪರಿಪರಿ ಭಕ್ಷ್ಯ ಪಾಯಸ ಕಜ್ಜಾಯಗಳ| ವರಶುಭ ದಿನ ಚೌತಿಗುಂಬೆ ಲೇಸುಗಳ 1 ತ್ರಿಭುವನದೊಳು ಸರ್ವರಿಂದ ಸೇವೆಯನು | ವಿಭವದಿ ಕೈಗೊಳ್ಳುತ್ತೊರೆದ ಶುಭವನು || ಅಭಯವನಿತ್ತು ರಕ್ಷಿಸುವೆ ಭಕ್ತರನು | ಇಭಮುಖ ಗಣಪ ಪಾಲಿಸೊ ಭಾಗ್ಯಗಳನು 2 ಪಾದ ನೆನೆವೆ ಮನ್ಮನದಿ | ಘನ ದುರಿತವ ದೂರಪಡಿಸು ನೀ ಮುದದಿ || ಚಿನುಮಯ ಮೂರ್ತಿಯ ಪದವ ಧ್ಯಾನಿಸುವ | ಮನಕೆ ಸುಜ್ಞಾನ ಮತಿಯ ಪಾಲಿಸಯ್ಯ 3 ದಾಸರಿಗೊಡೆಯ ಗಣೇಶ್ವರ ನಿನ್ನ | ಲೇಸಿನೊಳ್ ಭಜಿಸಿ ಕೇಳುವೆ ಗುಣರನ್ನ | ದಾಸನೆಂದೆನಿಸಿ ಲೋಕದಿ ರಂಜಿಸೆನ್ನ | ದೋಷವ ತ್ಯಜಿಸನುದಿನ ಸಲಹೆನ್ನ 4 ಸಕಲ ಸುಜ್ಞಾನ ಕವಿತೆಗಳ ಮುದದಿ | ಸಖನಾಗುತೆನ್ನ ನೀ ಪೊರೆಯಯ್ಯ ದಯದಿ || ಭಕುತ ವತ್ಸಲ ಶ್ರೀನಿವಾಸನ ಪ್ರಿಯ ನೀ | ಸುಕುಮಾರ ಕುಡುಮದೊಡೆಯ ಗಜವದನ 5
--------------
ಸದಾನಂದರು
ಜಯದೇವ ಜಯದೇವ ಜಯದೀನದಯಾಳಾ ಜಯಜಯ ಶ್ರೀಗುರು ಮಹಿಪತಿ ಭವತಾರಕ ಲೀಲಾ ಪ ಮರವಿನ ಕತ್ತಲಿಯೊಳಗೆ ಮುಂದುಗಾಣದಲಿರಲಿ ಅರವಿನದೀಪವ ಹೆಚ್ಚಿ ದೋರುತಲೀ ಸ್ಥಿರವನು ಗೊಳ್ಳದ ಚಿತ್ತವ ಭಜನಿಗೆಲಿಸುತಲಿ ಹರಿಸಿದ ವಿದ್ಯದಗೃಂಥಿಯ ಸಂಶಯ ಬಿಡಿಸುತಲಿ 1 ಪರಿಪರಿಯಿಂದಲಿಗರದು ಬೋಧನಾಮೃತನುಡಿಯಾ ಅರಹಿಸಿಯೋಗದ ಮಾರ್ಗವ ಸಾಂಖ್ಯದನಿಲ್ಲ ಕಡಿಯಾ ಕರಣೀಂದ್ರಿಯಗಳ ವಡದಾಸ್ವಾನಂದದಯಡಿಯಾ ಕರುಣಿಸಿ ವಿಶ್ವಂಭರಿತದ ತೋರಿದೆ ಇತ್ಥಡಿಯಾ 2 ನಿನಗುತ್ತೀರ್ಣವಕಾಣದೇ ತನುವಾರತಿ ಮಾಡೀ ಮನವೇದೀಪವು ಸದ್ಭಾವನೆ ಆಜ್ಯನೀಡಿ ಅನುದಿನ ಬೆಳಗುವ ನಂದನುಮಹಿಮೆಯ ಕೊಂಡಾಡಿ ಚಿನುಮಯಸುಖದೊಳು ಬೆರೆದಾಹಂಭ್ರಮ ಈಡಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವಿ ಜಯದೇವಿ ಜಯಭಗವದ್ಗೀತೆ | ಶ್ರಯ ಸುಖದಾಯಕಮಾತೇ ಶೃತಿ ಸ್ಮøತಿ ವಿಖ್ಯಾತೇ ಪ ಮೋಹ ಕಡಲೋಳಗರ್ಜುನ ಮುಳುಗುತ ತೇಲುತಲಿ | ಸೋಹ್ಯವ ಕಾಣದೆತನ್ನೊಳು ತಾನೇ ಮರೆದಿರಲೀ| ಬೋಧ ಪ್ರತಾಪದಲೀ| ಮಹಾ ಸುಜ್ಞಾನದ ತೆಪ್ಪದಿ ದಾಟಿಸಿದವನಿಯಲಿ 1 ಅಂದಿಗಿಂದಿಗೆ ಋಷಿ ಮುನಿ ಸಜ್ಜನ ಮೊದಲಾಗಿ | ಕುಂದದಿ ಪಂಡಿತರೆಲ್ಲರು ಮತಿ ಯುಕ್ತಿಯಲೊದಗಿ | ಸುಂದರ ಟೀಕೆಯ ಮಾಡುತ ಪಾಡುತ ಅನುವಾಗಿ | ಚಂದದಿ ನಿಂತರು ಅನುಭವದಲಿ ವಿಸ್ಮಿತರಾಗಿ 2 ಆವನು ಭಾವದಿ ಪೂಜಿಸಿ ಓದಿಸಿ ಕೇಳುವನು| ಸಾವಿರ ಸಾಧನವೇತಕೆ ಜೀವನ್ಮುಕ್ತವನು | ದೇವಮನುಜರಿಗೆ ತಿಳಿಯದು ಪದಪದ ಮಹಿಮೆಯನು | ಆವಗು ಸ್ಮರಿಸುವ ಮಹೀಪತಿ ನಂದನು ನಿಮ್ಮವನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಲಜಾಕ್ಷ ಯಾಚಿಸುವೆ ಚಲುವ ಚರಣ ತೋರೋ ಸುಲಭದಿ ಹಯವದನ ಪ [ಶಶಿಯೊಲಿರುವದರಿಧರ] ಅಕ್ಷ ಸುಬೋಧ ಪುಸ್ತಕಧರ ವಸುಮತಿ ರಮಣನೆ ನಿನ್ನ ಸಾಸಿರ ನಾಮದಲಿ ಸೋಸಿಲಿ ನಾ ಪ್ರಾರ್ಥಿಸುವೆ 1 ವರವಾದಿ ಜಯದ ವಿಮುಕ್ತಿ ಪ್ರದಾತ ಅನುದಿನ ನಿನ್ನ ಆರೆರಡು ಅ ಕ್ಷರದ ಮಂತ್ರವನೂ ಪ್ರೇಮದಿ ನಾ 2 ಮುಖದೊಳ್ ಸಕಲಾಗಮ ವಿದ್ಯಾ ಸುಘೋಷ ಮಾಡಿ ಆ ಕಮಲಜ ಭವಮುಖರಿಂದ ಅಮೃತದಲಿ [ಸ್ತುತಿಸಿಹ ಅಭಿಷಿಕ್ತನೆ] ನೀನೆನಿಸಿ ನರಹರೆ 3
--------------
ಪ್ರದ್ಯುಮ್ನತೀರ್ಥರು
ಜಲಧಿ | ನಿಮ್ಮ ಮೊರೆಹೊಕ್ಕವರ ಕಾಯ್ದು ಪೊರೆಯುವಿರಿ ದಯದಿ ಪ. ಅರಿಯರು ಜಗದೊಳಗೆ ನರರು ನಿವಿ್ಮೂ ಮಹಿಮೆ ಕರಕರೆಪಡುತಿಹರು ಭವದೊಳಗೆ ಪರಮ ನಮ್ರತೆಯಿಂದ ಚರಣಕೆರಗಲು ಬಂದು ಉರುತರದ ಕಾರುಣ್ಯದಿಂದ ಪೊರೆಯುವಿರಿ 1 ಇಲ್ಲವೊ ಆಸೆ ಆಡಂಬರದ ದ್ರೌವ್ಯದಲಿ ಎಲ್ಲೆಲ್ಲಿ ನೊಡಲು ತತ್ವಬೋಧೆ ಉಲ್ಲಾಸದಿಂದ ಸಜ್ಜನರಿಗರುಹುತ ಮೋದ ಎಲ್ಲೆ ಕಾಣಿಸದಂಥ ಆನಂದವೀವ ಗುರು 2 ತಂದೆ ಮುದ್ದುಮೋಹನವಿಠ್ಠಲನೆಂದೆಂಬ ಬಹು ಚಂದದ ಅಂಕಿತದಿ ಜಗದಿ ಉದಿಸಿ ಮಂದರಿಗೆ ಸುಜ್ಞಾನ ತಂದು ರಕ್ಷಿಸುವಂಥ ಒಂದೊಂದು ಮಹಿಮೆಗಳ ಪೇಳಲೆನ್ನೊಶವೆ 2 ಅನಾದಿಯಿಂದಲಿ ಹೀನ ದೆಸೆಯೊಳಗಿದ್ದು ನಾನಾ ಜನ್ಮದಿ ಬಂದು ಕರ್ಮದಲಿ ತೊಳಲಿ ದೀನತ್ವವೈದುವ ಮಾನವನ ಕರುಣಿಸಿ ಸಾನುರಾಗದಿ ಹರಿಯ ಪದಕೆ ಸೇರಿಸುವಂಥ 3 ಸೃಷ್ಟಿ ಸ್ಥಿತಿ ಲಯಗಳಿಗೆ ಕರ್ತ ಹರಿ ಎಂತೆಂದು ಶ್ರೇಷ್ಠ ಕನಿಷ್ಠದ ಅರ್ಥ ತತ್ವ ತಿಳಿಸಿ ಕಷ್ಟ ಬಿಡಿಸುವ ಜಗತ್ಕರ್ತ ಒಬ್ಬನೆ ಹರಿಯು ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೆನುವ 5
--------------
ಅಂಬಾಬಾಯಿ
ಜಿಜ್ಞಾಸುವಿನ ಲಕ್ಷಣಾ ಕೇಳು ನೀಕ್ಷಣಾ ಪರಮಸುಖಾಕಾಂಕ್ಷಕನಾ ಬಾಳಿನ ವಿಷಯದಿ ಬೇಸರಗೊಳು ತಾ ವಿರತಿಯಿಂದರುವಾ ಬೋಧ ಕೇಳ್ವನಿವಾ ಚಿತ್ತದಿ ಭಕ್ತಿಭಾವನಾ ತಾಳುತ ಸಾಧನಾ ಮಾಡುತಲಿಹನಿವ ಕಾಣಾ ಆತ್ಮಾನಾತ್ಮನಿವೇಕ ವಿಚಾರ ಕೇಳುತ ತನ್ನೊಳಗÉೀ ಮಿಥ್ಯಾರೊಪಿತ ಜೀವಭಾವನನಾ ಜರÉಯುತ ಮನದೊಳಗೇ ಮಾಡುವ ಸುವಿಚಾರಾ ಇವನೆ ಧೀರ ಪರಮಸುಖಕಾಂಕ್ಷಕನಾ ವಿಷಯದಿ ಹರಿಯುವ ಮನವÀನೆಳೆÀದು ಬೋಧದೊಳಗಿರುವಾ ಮೋದ ಹೊಂದುವ ತಾ ಶ್ರೀ ಗುರುಶಂಕರನಾ ಆನಂದರೂಪನಾಬೆರೆತು ನಾ ಸುಖಿಸುವನಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಜೀವವು ತಲ್ಲಣಿಸುವುದು ಪ ದೇವರ ಪೂಜೆಯಿಂದು ಮಾಡೋದಿಲ್ಲ ನೀವೆಲೆಯ ಹಾಕಿ ಕರೆದರೆ ನಾ ಸಿದ್ಧ ಅ.ಪ ಜಣುಗಿ ಜಣುಗಿ ಕಾಲಕಳೆಯುವುದಲ್ಲ 1 ಮುಸುಕನಿಟ್ಟುಕೊಂಡು ಮಲಗಿದ್ದರಿನ್ನು 2 ಕುಟ್ಟಿ ಬೀಸೋರಿಲ್ಲ ಅಟ್ಟುಂಬೋದೆ ಭಾರ ಇಷ್ಟು ನುಡಿದುದಕೆ ಸಿಟ್ಟು ಬಹುಪೂರ 3 ಹತ್ತುಗಂಟೆಯಾಯ್ತು ಹೊತ್ತು ಬಹಳ ಹೋಯ್ತು ಬತ್ತಿ ಹಚ್ಚಿ ಒಲೆಯ ಹೊತ್ತಿಡ ಬಾರದೆ 4 ಬಿಸಜಾಕ್ಷಾಗುರುರಾಮ ವಿಠಲನಾಣೆ ಬ್ಯಾಡ 5
--------------
ಗುರುರಾಮವಿಠಲ
ಜೀವಾ ತಿಳಿ ತಿಳಿ ನಿಜದರಿವಾ ಪ ಶಾಂತಮಯಾ ಆನಂದನಿಕಾಯ ಮನಸಿನ ಮೂಲದಾ ಘನಪದವಾ ಅ.ಪ. ಕಲ್ಪನಾಜಾಲದಾ ನಾಶದ ಸ್ಥಿತಿಯೇ ಪರಮಸೌಖ್ಯದಾ ನಿಧಿಯನು ನೀನೇ ಮನದಲಿ ಯೋಚಿಸಿ ತಿಳಿನಿನ್ನಾ 1 ಜನನಮರಣದಾ ಸಂಕಲೆ ಹರಿಯೋ ಘನವಿವೇಕದಾ ಬಲದಲಿ ತಿಳಿಯೋ ಸನ್ನುತ ಶಂಕರಗುರುಬೋಧಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಜೋ ಜೋ ಎನ್ನಿ ನಿರ್ವಿಕಾರಿಯಜೋ ಎಂದು ತೂಗಿರಿ ಬ್ರಹ್ಮಾಸ್ತ್ರ ದೊರೆಯ ಪ ವಾದಾತೀತಳಿಗೆ ಹೃದಯ ತೊಟ್ಟಿಲ ಮಾಡಿವೇದ ನಾಲಕು ಎಂಬ ನೇಣನೆ ಹೂಡಿಸಾಧನ ಚತುಷ್ಪಯ ಹಾಸಿಗೆ ಹಾಸಿಬೋಧಾನಂದಳನು ಭಾವದಿ ತಂದು ನೋಡಿ 1 ಶುದ್ಧದ ಚವುರಿ ಸಡಿಲಿಸಿ ಮಗ್ಗುಲಲಿ ಶಾಂತರಸ ದೀಪಗಳ ಹಚ್ಚಿಹೊಡೆಯುತಿಹ ಭೇರಿಗಳ ಘಂಟಾರವ ಹೆಚ್ಚೆಎಡೆಬಿಡದೆ ಓಂಕಾರ ಮಂತ್ರ ಘೋಷಣವು ಮುಚ್ಚಿಕಿಡಿ ನಯನೆಯಳನು ನೋಡಿ ಹರುಷ ತುಂಬೇರಿ 2 ಹಿರಿದಾ ಖಡ್ಗದ ಹಲಗೆ ಬಲ ಭಾಗದಲಿಟ್ಟುಶರಶಾಙರ್É ಬತ್ತಳಿಕೆ ಎಡಭಾಗದಲ್ಲಿಟ್ಟು ದುಷ್ಟ ಶತ್ರುಗಳ ಕಾಲದೆಸೆಗಿಟ್ಟುಪರಮಾಮೃತ ಪಾನ ಪಾತ್ರೆ ತುಂಬಿಟ್ಟು 3 ಜೋ ಜೋ ಶತ್ರು ಸ್ತಂಭಿನಿ ಎನ್ನಿರಿ ನರರೆಲ್ಲಜೋ ಜೋ ಗತಿಮತಿ ಸ್ತಂಭಿನಿ ಎನ್ನಿರಿ ಸುರರೆಲ್ಲಜೋ ಜೋ ಜಿಹ್ವಾ ಸ್ತಂಭಿನಿ ಎನ್ನಿರಿ ಹರರೆಲ್ಲಜೋ ಜೋ ಸ್ತಂಭಿನಿ ಎನ್ನಿರಿ ಧರೆಯೆಲ್ಲ 4 ಜೋ ಜೋ ಸುರಗಿರಿ ಧೈರ್ಯದಾಯಿನಿ ಜೋ ಜೋಜೋ ಜೋ ಹರಿ ಸಮ ಭಾಗ್ಯವೀವಳೆ ಜೋ ಜೋಜೋ ಜೋ ಶಿವ ಸಮ ಸತ್ವವೀವಳೆ ಜೋ ಜೋಜೋ ಜೋ ನಂಬಿದ ರಾಜ್ಯವೀವಳೆ ಜೋ ಜೋ 5 ಭಕ್ತರಭಿಮಾನಿ ಭಕ್ತಮಾತೃಕೆ ಜೋ ಜೋಭಕ್ತವತ್ಸಲೆ ಭಕ್ತ ಕರುಣಾಳು ಜೋ ಜೋಭಕ್ತ ಜೀವನಿ ಭಕ್ತ ಬಂಧುವೆ ಜೋ ಜೋಭಕ್ತ ಚಿಂತಾಮಣಿ ಭಾಗ್ಯಳೇ ಜೋ ಜೋ 6 ಯೋಗಾರೂಢಕೆ ಏಕಾಕ್ಷರಿ ಜೋ ಜೋಯೋಗಿ ಹೃದ್ವಾಸಿನಿ ಯೋಗ್ಯಳೇ ಜೋಜೋಯೋಗಿ ಬೃಹತ್ಯಾಗಿ ವಿರಾಗಿ ಜೋಜೋಯೋಗಿಗಳ ಭಂಡಾರಿ ಯೋಗೀಳೆ ಜೋಜೋ 7 ಚಿದಬಿಂದುಗಳೆಂಬ ಮಂತ್ರ ಪುಷ್ಪ ಚೆಲ್ಲಿಚೆದುರೆಯರು ಮಂಗಳಾರತಿ ಬೆಳಗುತಿಲ್ಲಿಸದಮಳೆ ನೀ ಮಲಗು ಯೋಗ ನಿದ್ರೆಯಲಿಚಿದಾನಂದ ತಾನಾದ ಬಗಳಾಂಬೆ ಸುಖದಲಿ 8
--------------
ಚಿದಾನಂದ ಅವಧೂತರು
ಜೋ ಜೋ ಜೋ ಜೋ ಎನ್ನಿ ನಿರ್ವಿಕಾರಗೆಜೋ ಎಂದು ತೂಗಿರಿ ಚಿದಾನಂದ ದೊರೆಗೆ ಪ ಚಿದ್ಬಯಲಿನೊಳು ಹೃದಯ ತೊಟ್ಟಿಲ ಮಾಡಿಬದ್ಧ ವೇದಾಂತದ ನೇಣ ಬಿಗಿದುಸದ್ಭಾವವೆಂಬ ಹಾಸಿಗೆಯ ಹಾಸಿಶುದ್ಧಾತ್ಮನನು ಭಾವದಿ ತಂದು ನೀಡಿ 1 ಅದ್ವೈತವೆಂಬ ಆಭರಣ ತೊಡಿಸಿಸಿದ್ಧ ಭೂಮಿಕೆ ಎಂಬ ಅಡವನಿಡಿಸಿಬುದ್ಧಿ ನಿರ್ಮಳವಾದ ತಲೆದಿಂಬನಿಡಿಸಿನಿದ್ದೆ ಮಾಡೋ ಬ್ರಹ್ಮಾನಂದ ಬೋಧದಲಿ 2 ಚಿತ್ಪ್ರಭೆಯ ದೀಪವನು ಎಡಬಲದಿ ಹಚ್ಚಿಮೊತ್ತವಹ ದಶನಾದ ಭೇರಿಯರವ ಹಚ್ಚಿಮತ್ತೆ ಓಂಕಾರ ಮಂತ್ರ ಘೋಷದಿ ಮುಚ್ಚಿನಿತ್ಯಾತ್ಮನನು ನೋಡಿ ಹರುಷ ತುಂಬುತಲಿ 3 ವಸ್ತು ಸಾಕ್ಷಾತ್ತೆಂಬ ಮುತ್ತೈದೆಯರೆಲ್ಲಸ್ವಸ್ಥ ಚಿತ್ತೆಂಬುದನೆ ಸಿಂಗರಿಸಿಕೊಂಡುನಿಸ್ಸಂಗನಹ ಆತ್ಮ ಶಿಶುವನೊಡತಂದುಸುಸ್ವರದ ನಾದದಲಿ ಜೋಗುಳವ ಪಾಡುತಲಿ 4 ಜೋ ಜೋ ಕಾಮಸ್ತಂಭವ ಎನ್ನಿ ನರರೆಲ್ಲಜೋ ಜೋ ಕ್ರೋಧ ಸ್ತಂಭನ ಎನ್ನಿ ನರರೆಲ್ಲಜೋ ಜೋ ಮೋಹ ಸ್ತಂಭನ ಎನ್ನಿ ನರರೆಲ್ಲಜೋ ಜೋ ವಿಷಯ ಸ್ತಂಭನ ಎನ್ನಿ ನರರೆಲ್ಲ5 ಜೋ ಜೋ ಯಮನಿಯಮಾಸನ ಅರುಹಿದವನೆಜೋ ಜೋ ಜೋ ಜೋ ಖೇಚರ ಮುದ್ರೆ ನಿಲಿಸಿದವನೆಜೋ ಜೋ ಜೋ ಜೋ ಅವಿದ್ಯೆ ಖಂಡಿಸಿದವನೆಜೋ ಜೋ ಜೋ ಜೋ ಜೀವನ್ಮುಕ್ತಿದಾತನೆ 6 ಜೋ ಜೋ ಪರಮಾರೂಢನೆ ಪರಮೇಶಜೋ ಜೋ ಪರಮ ಪರೇಶನೆ ಪಂಡಿತಜೋ ಜೋ ನಿರುತ ವಸ್ತು ವ್ಯಕ್ತ ಅವ್ಯಕ್ತಜೋ ಜೋ ಶರಣ ರಕ್ಷಕ ರಾಜ ಯೋಗೀಂದ್ರ ಜೋ ಜೋ 7 ಸತ್ಯ ಸನಾಥ ವಿಶ್ವೋತ್ಪತ್ತಿ ಜೋ ಜೋಪ್ರತ್ಯಗಾತುಮ ಪರಬ್ರಹ್ಮನೆ ಜೋ ಜೋನಿತ್ಯ ಸಹಜಾನಂದ ಚಿನ್ಮಾತೃ ಜೋ ಜೋಭಕ್ತರ ಭಂಡಾರಿ ಭಾಗ್ಯನೆ ಜೋ ಜೋ 8 ಮಿಹಿರ ಶತಕಳೆಯೆಂಬ ಮಂತ್ರಪುಷ್ಪವ ಚೆಲ್ಲಿಮಹಾ ಬೆಳಕಿನ ಮಂಗಳಾರತಿಯ ಬೆಳಗುತಲ್ಲಿಅಚಲ ಸಮಾಧಿಯೆ ಆದ ಯೋಗನಿದ್ರೆಯಲಿಮಹಾ ಚಿದಾನಂದಾವಧೂತ ಮಲಗಿರು ಸುಖದಲ್ಲಿ 9
--------------
ಚಿದಾನಂದ ಅವಧೂತರು
ಜೋ ಜೋ ಜೋ ಜೋ ಜೋ ಎನ್ನ ಗುರುವೆ ಜೋ ಜೋ ಜೋ ನಿಜ ಕಲ್ಪತರುವೆ ಜೋ ಜೋ ಎಂದು ಜನ್ಮಕ್ಕೆ ಬರುವೆ | ಜೋ ಜೋ ನಿಮ್ಮ ಚರಣದಲ್ಲಿರುವೆ ಜೋ ಜೋ ಪ ಅಷ್ಟ ಸಿದ್ಧಿಗಳೆಲ್ಲ ಬಡ್ಡಿಯ ಕೊರೆಸಿ | ಗಟ್ಟ್ಯಾಗಿ ವೇದದ ಕಾಲವ ನಿಲ್ಲಿಸಿ ಅಷ್ಟತತ್ತ್ವದ ಹುರಿ ಹೆಣಿಕಿಲಿ ಬಿಗಿಸಿ | ತೊಟ್ಟಿಲೊಳರುವಿನ ಹಾಸಿಗೆ ಹಾಸೀ || ಜೋ ಜೋ 1 ಸಾಧನ ನಾಲ್ಕೆಂಬೋ ಹಗ್ಗವ ಹೊಸೆದು | ಬೋಧದ ಗಂಟು ತುದಿಯಲ್ಲಿ ಬಿಗಿದು | ನಾದ ಅನಾಹತ ಗಂಟೆಯ ಹೊಡೆದು | ಆದಿ ಗುರುವಿನ ಮಲಗಲಿ ಕರೆದು || ಜೋ ಜೋ || 2 ಕಾಲಿಗೆ ಯೋಗದ ಪಾಶವ ಕಟ್ಟಿ | ಮೂಲೈದು ಬ್ರಹ್ಮರಂಧ್ರಕ್ಕೆ ಮುಟ್ಟಿ | ಮೇಲಿನ ಜೋತೆಗೆ ಭಾಸದ ಬುಟ್ಟಿ | ಲೀಲೆಯಿಂದಲಿ ನೋಡು ಗುರುವಿನ ದೃಷ್ಟಿ || ಜೋ ಜೋ 3 ಮನಸೀಗೆ ಬಾರದ ಮಾತುಗಳಾಡಿ |ನೆನೆಹಿಗೆ ನಿಲ್ಕದ ನಿತ್ಯನ ಕೂಡಿ | ಕನಸು ಎಚ್ಚರದ ಗಾಢವ ನೋಡಿ |ಉನ್ಮನಿ ಬೆಳಗುವ ಮೂರ್ತಿಯ ಪಾಡಿ || ಜೋ ಜೋ 4 ಭಕ್ತಿ ವಿರಕ್ತಿಗೆ ಸಿಲ್ಕುವನೀತಾ | ಸತ್ಯ ಶರಣ್ಯ ಸದ್ಗುರು ನಾಥಾ | ಕರ್ತೃತ್ವ ಇಟ್ಟನು ಮೌನದಲ್ಲೀತಾ | ವೃತ್ತಿ ವಿರಹಿತ ಗಿರಿ ಪಾಲಿಸು ಗುರುತಾ || ಜೋ ಜೋ 5
--------------
ಭೀಮಾಶಂಕರ
ಜೋ ಜೋ ಜೋ ಜೋ ಜೋ ಕೃಷ್ಣ ಪರಮಾ- ನಂದ ಗೋಪಿಯ ಕಂದ ಮುಕ್ಕುಂದ ಜೋಜೋ ಪ ಪೆಟ್ಟಿಗೆಯೊಳಗಿದ್ದ ಪರಿಪೂರ್ಣ ಕಾಮಾ ಮುಟ್ಟಿ ಭಜಿಸೊ ಮಹಾಯತಿಗಳ ಪ್ರೇಮಾ ತೊಟ್ಟಿಲವೊಳಗೆ ಮಲಗಿದ್ದ ಶ್ರೀರಾಮಾ ಘಟ್ಯಾಗಿ ತೂಗಿರಿ ಯತಿಗಳ ಸ್ತೋಮಾ 1 ಪಠವಳಿನುಟ್ಟು ಬಂದರು ಸುರರಾಗ ಘಟಣಿ ಬಿದ್ದೀತೆಂದು ಮಹಪುಣ್ಯವೀಗ ವಟಪತ್ರ ಕಲ್ಪನ್ನ ತೂಗಿರಿ ಬೇಗ ಶ್ರೀರಾಮಾ ಘಟ್ಯಾಗಿ ತೂಗಿರಿ ಯತಿಗಳ ಪ್ರೇಮಾ2 ಪಾಕಶಾಸನ ಬಂದು ಮಳೆಗಳ ಕರೆಯೆ ಗೋಕುಲವನು ಕಾಯ್ದ ಮಹಿಮೆಯು ಸರಿಯೆ ಲೋಕದೊಳಜಭವರಿಗೆ ದೊಡ್ಡ ಧೊರೆಯೆ ಶ್ರೀಕಾಂತ ಸರ್ವೋತ್ಮ ನೀನೆ ಶ್ರೀಹರಿಯೆ 3 ಆಲದೆಲಿಮ್ಯಾಲೆ ಮಲಗಿರೊ ಕಂದಾ ಮ್ಯಾಲ ಕಲ್ಪವನು ದೃಷ್ಟಿಸಿದ್ಯೋ ನಿನ್ನಿಂದಾ ಬಾಲನ ಪಡದ್ಯೊ ನಾಭಿಕಮಲದಿಂದಾ ಪಾಲಾಬ್ಧಿ ಶ್ರೀರಮಣ ಮುಕ್ಕುಂದಾ 4 ಮಾಮುನಿ ಸತ್ಯಬೋಧರಾಯರಿಂದ ಪ್ರೇಮದಿಂದಲ್ಲೆ ತೂಗಿಸಿಕೊಂಬೊ ಛೆಂದಾ ಸ್ವಾಮಿ ಕದರುಂಡಲಗಿ ಹನುಮಯ್ಯಗಾನಂದ ಪ್ರೇಮದಿಂದಲ್ಲೆ ತೂಗಿದರು ಗೋವಿಂದ 5
--------------
ಕದರುಂಡಲಗಿ ಹನುಮಯ್ಯ