ಒಟ್ಟು 1345 ಕಡೆಗಳಲ್ಲಿ , 99 ದಾಸರು , 1083 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧೇನಿಸೂ ಶ್ರೀಹರಿಯ ಮಹಿಮೆ ನೀ ಧೇನಿಸೊ ಪ ಧೇನಿಸು ಶ್ರೀಹರಿಯ ಲೀಲಾ ಸೃಷ್ಟಿ ಮಾನಸದಲಿ ನೆನೆಯೋ ಪರಿಯಾ ||ಆಹಾ|| ತಾನೆ ತನ್ನಯ ಲೀಲಾಜಾಲತನದಿ ತನ್ನ ಆನಂದದೊಳಿಪ್ಪ ಶ್ರೀ ಮುಕುಂದ ನನ್ನ ಅ.ಪ ಮೂಲ ನಾರಾಯಣ ದೇವ ತಾನು ಆಲದೆಲೆಯೊಳು ಲೀಲಾ ತೋರಿ ಬಾಲತನದಿ ತಾ ನಲಿವಾ ಅನೇಕ ಕಾಲ ಪರ್ಯಂತರದಿ ಸರ್ವ ||ಆಹಾ|| ಎಲ್ಲ ಜಗವ ತನ್ನ ಒಡಲೊಳಡಗಿಸಿ ಲೋಲನಾಗಿ ಬಾಲಕ್ರೀಡೆಯಾಡುವಪರಿಯಾ 1 ಇಂತು ಶಯನಗೈದ ಹರಿಯ ಅ- ನಂತ ವೇದಗಳಿಂದ ತ್ವರಿಯಾ ದುರ್ಗ ಸಂತಸದಿಂದ ಸಂಸ್ತುತಿಯ ಮಾಡೆ ಕಂತುಪಿತÀನು ತಾನೆಚ್ಚರಿಯ ||ಆಹಾ|| ಅಂತೆ ತÉೂೀರ್ದ ವಾಸುದೇವಾದಿ ಚತುರಾ- ಸಿರಿ ರೂಪಗಳ ಸಹಿತ 2 ಸಕಲ ರೂಪಗಳ ತನ್ನೊಳೈಕ್ಯಾ ಮಾಡಿ ಸಕಲ ಲಕುಮಿ ರೂಪಗಳಲಿ ಐಕ್ಯಾ ಇಟ್ಟು ಸಕಲ ಮರುತರ್ಗೆ ತನುಮುಖ್ಯಾ ಇತ್ತು ಸಕಲ ಕ್ರೀಡೆಯೊಳು ಸೌಖ್ಯಾ ||ಆಹಾ|| ಲಕುಮಿಯ ಸ್ತುತಿಗೆ ಒಲಿದು ತಾನೇತ- ನ್ನ ಕಡೆಗಣ್ಣಿಂದ ಪಂಚಜೀವರ ನೋಡಿದಾ 3 ಶುದ್ಧಸೃಷ್ಟಿಯೆಂಬುದೊಂದು ಪರಾ- ಧೀನ ವಿಶೇಷವು ಎಂದು ಮತ್ತೆ ಒಂದು ಮಿಶ್ರ ಸೃಷ್ಟಿಯೆಂದು-ಒಂದು ಕೇವಲ ಸೃಷ್ಟಿಯೆಂದೂ ||ಆಹಾ|| ತಮಾಂಧಕಾರವ ಪ್ರಾಶಿಸಿದ ವಿವರಾ 4 ತನ್ನೊಳೈಕ್ಯವಾಗಿದ್ದ ಮಹ ತಾನೆ ಪ್ರಕಟನಾಗಿ ನಿಂದ ಆಗ ಉನ್ನಂತ ಚತುರ ನಾಮದಿಂದ ||ಆಹಾ|| ಜನುಮ ಸ್ಥಿತಿ ಮೃತಿ ಮೋಕ್ಷದನಾಗಿರ್ಪ ಅನಿರುದ್ಧಾದಿ ಚತುರಮೂರ್ತಿಗಳ ವ್ಯಾಪಾರ5 ಪುರುಷನಾಮಕ ಪರಮಾತ್ಮ ತಾ ತರವರಿತು ಘನಮಾಡ್ದ ಮಹಿಮಾ ಸೃಷ್ಟಿ ತರತರ ಮಾಡ್ದ ಮಾಹಾತ್ಮ ||ಆಹಾ|| ಪ್ರಾಕೃತ ವೈಕೃತ ದೇವತೆ ಸುಮಾನ ಈ ಮೂರುವಿಧ ಸೃಷ್ಟಿಯಾನೆಸಗಿದ ಪರಿಯ ನೀ 6 ಮಹದಹಂಕಾರ ತತ್ವ ಪಂಚ ಮಹಭೂತಗಳು ಮನಸ್ತತ್ವ ಇನ್ನು ಮಹದಶೇಂದ್ರಯಗಳ ತತ್ವ ಮತ್ತೆ ಮಹತಾಮಿಶ್ರಾಂಧ ತಾಮಸ ತತ್ವ ||ಆಹಾ|| ಇಹುದು ಈ ಪರಿಯಲ್ಲಿ ಪ್ರಾಕೃತ ಸೃಷ್ಟಿಯು ಮುಹುರ್ಮುಹು ಇದನೆ ಆಲಿಸಿ ನಿನ್ನೊಳು 7 ವೈಕೃತದೋಳು ಸಕಲ ವೃಕ್ಷಾ ತಿರ್ಯಕ್ ಸಕಲ ಪ್ರಾಣಿಗಳ್ ಮನುಜ ಕಕ್ಷಾ ಎಲ್ಲ ವಿಕೃತ ಸೃಷ್ಟಿಯ ಮಾಡ್ದ ಅಧ್ಯಕ್ಷಾ ಇನ್ನು ಸುರಸಮಾನ ಸೃಷ್ಟಿಯ ಅಪೇಕ್ಷಾ ||ಆಹಾ|| ಸಕಲ ಸುರಾಸುರಪ್ಸರ ಗಂಧರ್ವರು ಪಿತೃಗಳು ಯಕ್ಷರಾಕ್ಷಸರ ಪರಿಯವರಾ 8 ಪುನ್ನಾಮ ವಿರಂಚಿ ಬ್ರಹ್ಮಾನು ಅಂದು ಘನ್ನವಾಸುದೇವ ತಾನು ಸೃಷ್ಟಿ ಯನ್ನ ಪ್ರಕಟಮಾಡಿದನು ಮುಂದೆ ಅನಿಲದೇವನು ಸಂಕರುಷಣನ ||ಆಹಾ|| ಅನಿಲನೆ ಸೂತ್ರನಾಮಕವಾಯುವಾಗಿಹ ಭಾವೀ ಬ್ರಹ್ಮನೀತನೆ ನಿತ್ಯಗುರುವೆಂದು 9 ಪ್ರದ್ಯುಮ್ನನಿಂದ ಸರಸ್ವತಿ ಇನ್ನು ಶ್ರಧ್ದಾನಾಮಕಳು ಭಾರತಿ ಸೃಷ್ಟಿ- ಯಾದ ವಿವರ ತಿಳಿಯೊ ಪೂರ್ತೀ ಇದೇ ಪ್ರದ್ಯುಮ್ನನ ಸೃಷ್ಟಿಯ ಕೀರ್ತಿ ||ಆಹಾ|| ಶ್ರದ್ಧಾದೇವಿಯೊಳು ಸೂತ್ರನ ವೀರ್ಯದಿಂ- ದುದ್ಭವಿಸಿದ ಜೀವ ಕಾಲನಾಮಕನು 10 ಈರ ಬ್ರಹ್ಮರಸೃಷ್ಟಿ ಚರಿತ್ರೆ ಚಿತ್ರ ಗಾತ್ರ ತರವೆಲ್ಲ ವಿಚಿತ್ರ ||ಆಹಾ|| ವಿರಂಚಿ ಬ್ರಹ್ಮ ಸರಸ್ವತಿಯಿಂದ ವೈ- ಕಾರಿಕ ರುದ್ರ ಶೇಷಗರುಡರ ನೀ 11 ಸೂತ್ರ ಶ್ರದ್ಧಾ ದೇವೇರಿಂದ ಪವಿ ತ್ರತೈಜಸ ರುದ್ರ ಬಂದಾ ಪ- ಪುತ್ರರಾಗಿಹರತಿ ಚೆಂದಾ ||ಆಹಾ|| ಪುತ್ರನಾದ ತಾಮಸ ರುದ್ರ ಶೇಷಗೆ12 ಪ್ರದ್ಯುಮ್ನ ಸೂಕ್ಷಶರೀರ ಕೊಟ್ಟು ಉದ್ಧಾರ ಮಾಡಿದ ಜೀವರ ಅನಿ ರುದ್ಧನ ಕೈಲಿ ಕೂಡಲವರಾ ಅನಿ ರುಧ್ದನು ಮಾಡ್ದ ವಿಸ್ತಾರಾ ||ಆಹಾ|| ತದಪೇಕ್ಷ ಮೂಲಪ್ರಕೃತಿಯಿಂದ ಗುಣತ್ರಿ- ವಿಧ ಕೊಂಡು ಮಹತ್ತತ್ವ ನಿರ್ಮಿಸಿದಾ 13 ಮಹತ್ತತ್ವದಿಂದಹಂಕಾರ ತತÀ್ತ ್ವ ಮಹದಹಂಕಾರವು ಮೂರುತರ ಇದ- ರೊಳು ಬ್ರಹ್ಮವೈಕಾರಿಕ ಶರೀರವಾಗಿ ಪರಿ ಈ ರೂಪ ವಿವರಾ ||ಆಹಾ|| ಅಹುದು ತೈಜಸದಿಂದ ಶೇಷನ ದೇಹವು ತಾಮಸದಿಂದಲಿ ರುದ್ರ ತಾನಾದನು 14 ಎರಡನೆಯ ಸಾರಿ ಪ್ರದ್ಯುಮ್ನ ಅರ್ಧ ನಾರೀ ರೂಪನಾಗಿ ಇನ್ನು ಎಡದಿ ಸ್ರೀರೂಪ ಜೀವರುಗಳನ್ನು ಬಲದಿ ಪುರುಷ ಜೀವರೆಲ್ಲರನ್ನು ||ಆಹಾ|| ಧರಿಸಿ ಅವರ ದೇಹಗಳನಿತ್ತು ಅ ನಿರುದ್ಧನ ಕೈಯೊಳಿತ್ತ ಪರಿಯನ್ನು 15 ಅದರಂತೆ ಅನಿರುಧ್ದದೇವ ತಾ ನದಕಿಂತ ಸ್ಥೂಲದೇಹವ ಮೂಲ ಪ್ರಕೃತಿಯಿಂದ ಗುಣವಾ ಕೊಂಡು ಅದುಭುತ ಮಹತ್ತತ್ವತೋರ್ವ ||ಆಹಾ|| ಅದುಭುತ ಮಹತ್ತತ್ವದಿಂದಹಂಕಾರ ಉದಿಸಿದ ಪರಿಯನು ಮುದದಿಂದಲಿ ಅರಿತು 16 ಪರಮ ಕರುಣೆಯಲೀ ರುದ್ರನು ಅರ್ಧ ನಾರೀರೂಪ ತಾಳಿ ಇನ್ನೂ ಎಡದಿ ಸುರರಸ್ತ್ರೀಗಳನ್ನು ಬಲದೀ ಸುರಪುರಷರನ್ನೂ ||ಆಹಾ|| ಭರದಿ ಪುಟ್ಟಿಸಿ ಪ್ರದ್ಯುಮ್ನನ ಕೈಲಿತ್ತ ಪರಿಪರಿ ಸೃಷ್ಟಿಯ ಕ್ರಮವರಿತು ನೀನೀಗ 17 ಅನಿರುಧ್ದ ದೇವನು ಜೀವರ ಸ್ಥೂಲ ತನುವ ಕೊಟ್ಟು ಪಾಲಿಪ ತದಭಿ- ಮಾನಿ ಶ್ರೀ ಭೂ ದುರ್ಗಾ ಮಾಡಿ ತಾನೆಲ್ಲರ ಸತತ ಪೊರೆವಾ ||ಆಹಾ|| ಮಹತ್ತತ್ತಾ ್ವಭಿಮಾನಿಗಳೆನಿಸಿದ ದೇವನ18 ಅಹಂಕಾರ ತತ್ತಾ ್ವಭಿಮಾನಿ ಅದಕೆ ಅಹಿಗರುಡರು ಅಭಿಮಾನಿ ಇನ್ನು ಅನಿರುದ್ಧಾದಿ ರೂಪತ್ರಯವು ಇದಕೆ ಇನ್ನು ನಿಯಾಮಕನು ಎನ್ನು ||ಆಹಾ|| ಮಹತ್ತತ್ವಾ ನಿಯಾಮಕ ವಾಸುದೇವನಿಂದ- ನವರತ ಈ ಸೂಕ್ಷ್ಮಪ್ರಮೇಯ ಗ್ರಹಿಸಿ ನೀನು 19 ಮನಸ್ತತ್ವಾಭಿಮಾನಿ ಸುರರಾ ಸೃಷ್ಟಿ ಯನ್ನೆ ವೈಕಾರಿಕದಿಂದಲವರಾ ಮಾಡಿ ಘನ್ನ ತೈಜಸದಿಂದಲಿಂದ್ರಿಯ ತತ್ಪವೆ- ಲ್ಲನೆಸಗಿದಂಥ ವಿವರಾ ||ಆಹಾ|| ಉನ್ನಂತ ತನ್ಮಾತ್ರ ಭೂತಪಂಚಕಗಳ ತಾಮಸದಿಂದಲಿ ಉದಿಸಿದ ಪರಿಯನು 20 ಯುಕ್ತಸ್ಥಾನಾದಿಗಳನ್ನು ಕೊಡೆ ಉತ್ತಮೋತ್ತಮನನ್ನು ತಾವು ಸುತ್ತಿ ಸ್ತುತಿಸಲು ಇನ್ನೂ ||ಆಹಾ|| ತತ್ವದೇವತೆಗಳ ಭಕ್ತಿಗೆ ಒಲಿದು ತತ್ವರೆಲ್ಲರ ತೋರೆ ರೂಪದಿ ಧರಿಸಿಟ್ಟನು21 ರಜಸುವರ್ಣಾತ್ಮಕವಾದ ಘನ ನಿಜ ಐವತ್ತು ಕೋಟಿ ಗಾವುದ ಉಳ್ಳ ಅಜಾಂಡವನ್ನು ತಾ ತೋರ್ದ ತನ್ನ ನಿಜಪತ್ನಿ ಉದರದಿ ಮಾಡ್ದ ||ಆಹಾ|| ಸೃಜಿಸಿ ಬ್ರಹ್ಮಾಂಡದಿ ತತ್ವಗಳೊಡಗೂಡಿ ನಿಜವಾಗಿ ತಾನೊಳ ಪೊಕ್ಕ ವಿರಾಟನ್ನ 22 ಪಾತಾಳಾದಿ ಸಪ್ತಲೋಕ ಕಡೆ ಪರಿಯಂತ ರೂಪ ತಾ ತಾಳಿದ ಆದ್ಯಂತ ಇಂತು ನಿರತನು ಸಚ್ಚಿದಾನಂದ ||ಆಹಾ|| ಇಂತು ವಿರಾಟ ತನ್ನಂತರದೊಳು ತತ್ವರೆಲ್ಲರ ತತ್‍ಸ್ಥಳದೊಳಿಟ್ಟು ಪೊರೆದನ್ನ23 ಸಕಲ ಉದಕ ಶುಷ್ಕದಿಂದ ಇರಲು ತಕ್ಕ ಮುಕ್ತಾಮುಕ್ತರ ಭೇದದಿಂದ ತಕ್ಕ ಸ್ಥಾನವೆ ಕಲ್ಪಿಸಿದ ಚೆಂದಾ ||ಆಹಾ|| ಅಕಳಂಕ ಪುನ್ನಾಮಕನು ಧಾಮತ್ರಯ ಮೊದಲಾದ ನರಕ ಪಂಚಕಗಳ ಮಾಡಿದ 24 ಉದಕ ಶೋಷಣೆಯನ್ನು ಮಾಡಿ ಇನ್ನುಮ- ಹದಹಂಕಾರವ ಕೂಡಿ ಭೂತ ಪಂಚಕವ ಮಿಳನ ಮಾಡಿ ಆಗ ಹದಿನಾಲ್ಕೂದಳಾತ್ಮಕ ಪದ್ಮತೋರಿ ||ಆಹಾ|| ಅದುಭುತ ಪದುಮದಿ ಉದಿಸಿದ ಬ್ರಹ್ಮನು ಚತುರ ನಾಲ್ಕುದಿಕ್ಕು ಮುದದಿಂದ ನೋಡಿದ 25 ಪದುಮದಲಿ ಚತುರಾಸ್ಯನಾಗಿ ಅದು ಭುತÀ ಮಹಿಮೆ ನೋಡುತ ತಾನೆ ಮುದದಿಂದ ಮೊಗತಿರುಗಿಸುತಾ ಅದ ಅದುಭುತ ಶಬ್ದಕೇಳುತ್ತಾ ||ಆಹಾ|| ತದಪೇಕ್ಷ ತಪವನಾಚರಿಸಿ ನಾಳದಿ ಬಂದು ಪದುಮನಾಭನು ತಾನು ಮುದದಿಂದ ನೋಡಿದ 26 ಪರಮಪುರುಷ ಉಕ್ತಿ ಲಾಲಿಸಿ ಮೆಚ್ಚಿ ವರವ ಕೊಟ್ಟು ಪಾಲಿಸಿ ಸೃಷ್ಟಿ ನಿರುತ ಮಾಡಲು ತಾ ಬೆಸಸೀ ತಾನು ಅವನಂತರದೊಳು ನೆಲೆಸೀ ||ಆಹಾ|| ಹೊರಗೂ ಒಳಗೂ ನಿಂತು ಸೃಷ್ಟಿಲೀಲೆಯ ತೋರ್ವ ಉರಗಾದ್ರಿವಾಸವಿಠಲ ವೇಂಕಟೇಶನ್ನ 27
--------------
ಉರಗಾದ್ರಿವಾಸವಿಠಲದಾಸರು
ಧ್ಯಾನವ ಕೊಡು ಹರಿಯೆ | ನಿರಂತರ ಧ್ಯಾನವ ಕೊಡು ಹರಿಯೆ ಪ ನೀನೆ ಗತಿಯೆಂದಾನುಪೂರ್ವಕ ಧ್ಯಾನ ಮಾಳ್ವರ ಜನ್ಮಕರ್ಮಗ ಳೇನು ನೋಡದೆ ಪೊರೆವೆ ನಿನ್ನ ಸುನಾಮವೆ ಸುರಧೇನುವೆಂದು ಅ.ಪ. ನಿನ್ನ ನಾಮವ ನೆನೆದು | ಅಜಾಮಿಳನು ಧನ್ಯನು ತಾನಾದನು ಈ ಭುವನದಿ ತನ್ನ ದೇಹಾತುರದೊಳನ್ಯರ ಬನ್ನ ಬಿಡಿಸುತಲಿದ್ದ ಖಳನು ನಿನ್ನ ನಾಮಸ್ಮರಣೆ ಮಾತ್ರದಿ ಘನ್ನ ಮುನಿಪತಿ ಎನ್ನಿಸಿದನು 1 ದುರುಳ ದುಶ್ಯಾಸನನು | ಸಭೆಯೊಳಗಂದು ತರಳೆ ದ್ರೌಪದಿದೇವಿಯ ಸೆರಗನ್ನು ಸೆಳೆಯೆ ಮುರಹರನೆ ಹಾ ಕೃಷ್ಣ ದ್ವಾರಕಾ- ಪುರನಿಲಯ ಪರಮಾತ್ಮ ಭಕ್ತರ ಸುರತರುವೆ ಎಲ್ಲಿರುವೆ ಏತಕೆ ಮರೆವೆ ಎನ್ನುತ ಮೊರೆಯೆ ಪೊರೆದೆಯೊ 2 ನರಕ ಕೂಪದೊಳು ಬಿದ್ದು | ಏಳುತ್ತ ಮುಳುಗುತ ಪರಿಪರಿ ಭಾಷೆಯಲಿ ಮುಂದೋರದೆ ಹೊರಳುತ್ಹೊರಳುತ ಮರುಕಗೊಳುತ ಹರಿಹರಿ ನಾರಾಯಣೆನ್ನಲು ಸುರಲೋಕವನ್ನಿತ್ತು ಸಲಹಿದೆ ವರದ ಲಕ್ಷ್ಮೀಕಾಂತ ಶಾಶ್ವತ 3
--------------
ಲಕ್ಷ್ಮೀನಾರಯಣರಾಯರು
ಧ್ಯಾನವನು ಮಾಡಿ ತ್ರಿವೇಣಿ ಕ್ಷೇತ್ರವ ಬಿಡದೆ | ಙÁ್ಞನಭಕ್ತಿ ವೈರಾಗ್ಯ ನಾನಾ ಸತ್ಕರ್ಮ ನಿ | ಸಿರಿ | ಪ್ರಾಣೇಶ ಕುಣಿಯುವನಯ್ಯಾ ಅಯ್ಯಯ್ಯಾ ಪ ಹರಿವೀರ ದ್ರುಪದನುದ್ಧರಿಸಿವಾಗಲು ತನ್ನ | ಶರೀರದಿಂದಲಿ ಅಷ್ಟಕೇತ್ರಗಳ ಪುಟ್ಟಿಸಿ | ವರದೇಶ ವೈಕುಂಠದಲ್ಲಿಟ್ಟನು ಸಪ್ತ | ಪಿರಿಸಹಿತ ತೀರ್ಥರಾಜಾ || ಮೆರೆವದಿದೆ ಪುಂ ಕ್ಷೇತ್ರ ಉಳಿದವೇಳು ಸ್ತ್ರೀ | ಇರುತಿಪ್ಪವಲ್ಲಿ ಮಿಗಿಲಿದಾದಕೆ ಅತಿಶಯವೊ | ಧರಣಿಯೊಳಗಿದಿ ಕಾಲಾಂತರಕೆ ಹರಿತಂದ ವಟ | ತರು ಸಹವಾಗಿ ಅಯ್ಯಾ ಅಯ್ಯಾ ಅಯ್ಯಾ 1 ತರಣಿಸುತೆ ಮಾನಸೋತ್ತರ ಶೈಲದಲಿ ಕುಳಿತು | ವರರಾಜ ತೀರ್ಥ ಮಾಧವನ ಸಾರುವೆನೆಂದು | ಭರದಿಂದ ತಪವು ಮಾಡೆ ಸರಸಿಜೋದ್ಭವನೊಲಿದು | ವರವಿತ್ತ ಮುಂದೆ ನೀನು ಧರೆಯೊಳು ಕಾಳಿಂ || ದ ರಾಯಗೆ ಕುವರಿ ಎನಿಸಿ ಮಹಾಸರತಿಯಾಗಿ ಪೋಗಿ | ಸಿರಿ ಮಾಧವನ ಚರಣ | ನೆರೆ ಮೆರೆದಳೈಯ್ಯಾ ಅಯ್ಯಾ ಅಯ್ಯಾ ಅಯ್ಯಾ 2 ತುರುಗಮ ನೆವದಿಂದ ಅರವತ್ತು ಸಾವಿರ ಸ | ಗರನ ಕುಲದವರು ಕಪಿಲಾಖ್ಯಾ ಹರಿ ಮುನಿಯಿಂದ | ಉರಿದು ಪೋಗೆನಲಾಗಿ ಭಗೀರಥ ಭೂಪತಿ ಉಗ್ರ | ಧುರಧಿ ತಪವನ್ನೆ ಮಾಡೇ | ಹರಿ ನಿರೂಪವ ತಾಳಿ ಗಿರಿಗಹ್ವರವನೊಡದು | ಸಿರಿ | ಚರಣದೆಡೆಯಲ್ಲಿ ನಿಂದು ಯಮುನೆ ವಡಗೊಡಿ ಬಾ | ಮರವಾದವಳಂದು ಅಯ್ಯ ಅಯ್ಯಾ ಅಯ್ಯಾ3 ಸರಸ್ವತಿಯ ಬೆರೆದು ತ್ರಿವೇಣಿ ಸಂಗಮವೆಂದು | ಕರಿಸಿಕೊಂಡಿತು ವಿಕರ ಸೋಮೇಶ್ವರನ ತನಕ | ಪರಮೇಷ್ಠಿಯಿಲ್ಲಿಗೈತಂದು ಬೊಮ್ಮಾಂಡವನು | ಸರಿ ಮಾಡಿ ತೊಲಗಲಾಗೀ || ಸುರರು ಶಿರದೂಗುತಿರೆ | ವರರಾಜತೀರ್ಥ ಮಹಾಭಾರವಾಗಲು ಇದಕೆ | ಸರಿ ಮಿಗಿಲು ಇಲ್ಲೆನುತ ಪೊಗಳಿ ಕರದರು ಮಹ | ವರದ ಪ್ರಯಾಗವೆಂದಯ್ಯಾ ಅಯ್ಯಾ ಅಯ್ಯಾ 4 ಪುರವೈರಿ ನಟಣೆ ಪೂ ತುಲಸಿ ಸುರಪತಿ ವೈಶ್ವಾ | ನರನು ತಿಲ ಹೋಮ ಯಮರಾಯಕಿಂಚಿತು ದಾನ | ನಿಋರುತಿತ ಪೈತೃಕಕರ್ಮ ವರುಣ ಜಲದಾನಸ್ತುತಿ | ಮರುತ ಭೂತನು ಕುಬೇರ || ಅರಗಳಿಗೆ ವಸತಿ ಈ ವಟನಿಕಟ್ಟಿಯಲಿಯಿದ್ದು | ಪರಿಪರಿಯಿಂದಲಿ ಒಲಿಸಿ ಮಾಧವನಿಂದ | ಪುರಷಾರ್ಥ ಪಡೆದು ಸುಖಿಸಿದರು ಸಮಸ್ತ ಬಗೆ | ಅರಿತು ಕೊಂಡಾಡಿ ಜನರೈಯ್ಯ ಅಯ್ಯಾ ಅಯ್ಯಾ5 ಎರಡೊಂದು ಮೂರು ಕುಲದ ಮಧ್ಯ ನಿಂದು | ಕರ್ತಾರಿಯೊಳಗೆ ಮಿಂದು ಸತ್ಕರ್ಮವನೆಸಗಿ ಭೂ | ಸುರರ ಮೆಚ್ಚಿಸಿ ಮನದಿ ಪಾಪಗಳ ಉಚ್ಚರಿಸಿ | ಕರಣ ನಿರ್ಮಲಿನರಾಗಿ | ವಿಪ್ರ ಚಂಡಾಲ || ಪರಿಯಂತ ವಪನವೆ ಮುಖ್ಯವೆಂದು ತಿಳಿದು | ಚರಿಸಿದರೆ ಅನಂತ ಜನ್ಮಕ್ಕೆ ಮಹಾಸೌಖ್ಯ | ಬರಿದೆ ಆಗದು ಕಾಣಿರೈಯ್ಯ ಅಯ್ಯ ಅಯ್ಯಾ6 ಧರೆಯ ಮೇಲೆ ಬಿದ್ದ ಶಿಶುಗಳ ತಂದು ಮುಂಡಣವ | ಉರುತರ ಬುದ್ದಿಯಿಂದ ಮಾಡಿಸಲಿ ಬೇಕು ವಿ | ಸ್ತರಿಸುವೆನಯ್ಯಾ ಯೌವನ ವಾರ್ಧಿಕರಿಗೆ ನಿಜ | ವರನಾರಿಯರಿಗೆ ವೇಣಿ ಸರಿ ಎನ್ನಿ ಸಾತ್ವೀಕ || ಪುರಾಣದಲಿ ಪೇಳಿದ ಎರಡು ಭುಜದಲಿ ತಪ್ತ ಚಕ್ರ | ವಿರಹಿತರಾಗಿ ಬರಲು ಷಣ್ಮುತ ಜನಕ ಗತಿಯಿಲ್ಲ ಮತಿಯಿಲ್ಲ | ಸ್ಥಿರವಾಕ್ಯ ಲಾಲಿಪುದು ಅಯ್ಯಾ ಅಯ್ಯಾ ಅಯ್ಯಾ 7 ಎರಡೈದು ತುರಗ ಕೃತು ಮೊದಲಾದ ತೀರ್ಥಗಳು | ಪರಿಪರಿ ದೇವ ಮುನಿಗಳು ನಾಮದಲಿ ಉಂಟು | ಪರಮಭಕುತಿಯಿಂದ ಮಜ್ಜನಾದಿಯ ಮಾಡೆ | ಪರಲೋಕ ಕರತಳದೊಳು || ಇರುತಿಪ್ಪದು ನಿತ್ಯಾ ಪ್ರಯಾಗರಾಜನ | ಸ್ಮರಣೆ ಮಾಡಿದ ಮನುಜನು ಆವಾವಲ್ಲ್ಯಾದರು ಇರಲು | ಮಾಧವ ವೊಳಗೆ ಮೊಳೆವ | ದರುಶನವ ಕೊಡುತಲಯ್ಯ ಅಯ್ಯಾ ಅಯ್ಯಾ 8 ಅರುಣೋದಯಲೆದ್ದು ಶುದ್ಧಾತ್ಮರಾಗಿ | ಪರಿಪರನೆಂಬೊ ಙÁ್ಞನದಲಿ ಹಾಡಿಪಾಡಿದವರ | ದುರಿತ ರಾಸಿಗಳ ದಹಿಸಿ ನಿಂ | ದಿರದೆ ಸಂತರ ಕೊಡಿಸಿ || ಮೊರೆವುತಿಪ್ಪುದು ಗಡಾ ಸಿದ್ದಾರ್ಥ ಕ್ಷೇತ್ರವಿದು | ನೆರೆನಂಬಿ ಮಾನವನು ಮಾನಸದಲಿ ಭಜಿಸಿ | ಸಿರಿ ವಿಜಯವಿಠ್ಠಲ ಕರುಣವುಳ್ಳವನಿಗೆ | ದೊರಕುವದು ದೊರಕುವದಯ್ಯಾ ಅಯ್ಯಾ ಅಯ್ಯಾ 9
--------------
ವಿಜಯದಾಸ
ಧ್ಯಾನವನು ಮಾಡು ಬಿಂಬ ಮೂರುತಿಯಪ ಆನಂದದಲಿ ಕುಳಿತು ಅಂತರಂಗದಲಿ ಅ.ಪ ಸದಾಚಾರನಾಗಿ ದ್ವಾದಶಗುರುಗಳಿಗೆರಗಿ ಮುದದಿಂದ ಮೂಲಮಂತ್ರವನು ಜಪಿಸಿ ಸದಮಲ ಭಕುತಿಯಲಿ ದೇಹಸ್ಥಿತಿಯನೆ ತಿಳಿದು ಪದಮಾಸನವ ಹಾಕಿ ಪರಮ ವಿಶ್ವಾಸದಲಿ1 ಅಂಗವನು ಚಲಿಸದೆ ಚೆನ್ನಾಗಿ ದೃಢವಾಗಿ ಕಂಗಳನೆ ಮುಚ್ಚಿ ಇಂದ್ರಿಯಗಳನೆ ತೆರೆದು ಮಂಗಳ ಶೋಭಿತ ಅಖಂಡ ಧ್ಯಾನದಂತ ರಂಗದೊಳಗೆ ನಿಲಿಸಿ ಎಲ್ಲವನು ಕಾಣೊ 2 ಭಗವದ್ರೂಪಗಳೆಲ್ಲ ಒಂದು ಬಾರಿ ಸ್ಮರಿಸಿ ಮಗುಳೆ ಪರಮ ಗುರುವಿನ ಮೂರ್ತಿಗೆ ತೆಗೆದು ಆಹ್ವಾನಮಾಡಿ ಅಲ್ಲಿಂದ ಹರುಷದಿ ಸ್ವಗುರು ಬಿಂಬಮೂರ್ತಿಯಲಿ ಐಕ್ಯವನೆ ಮಾಡು3 ತಿರುಗಿ ಮೆಟ್ಟಿಕೆ ಮೂರು ವೇಗದಿಂದಲಿ ನಿನ್ನ ಲ್ಲಿರುವ ಮೂರ್ತಿಯಲ್ಲಿ ಚಿಂತನೆಯ ಮಾಡೊ ಭರದಿಂದ ಎಲ್ಲವನು ತಂದು ಹೃದಯದಲ್ಲಿ ಸ್ಥಿರವಾಗಿ ಇಪ್ಪ ಮೂರುತಿಯೊಡನೆ ಕಲೆಸು 4 ಆತನೆ ಬಿಂಬ ಮೂರುತಿಯೆಂದು ತಿಳಿದುಕೊ ಆ ತರುವಾಯ ನಾಡಿಗಳ ಗ್ರಹಿಸಿ ಆ ತೈಜಸನ ತಂದು ವಿಶ್ವಮೂರ್ತಿಯಲ್ಲಿ ಪ್ರೀತಿಯುಳ್ಳವನಾಗಿ ಪತಿಕರಿಸು ಮರುಳೆ 5 ಜ್ಞಾನ ಪ್ರಕಾಶದಲಿ ಇದ್ದು ನಿನ್ನ ಹೃದಯ ಕಮಲ ಮಧ್ಯ ಮೂರ್ತಿ ನಿಲ್ಲಿಸಿ ಬಾಹ್ಯದಲಿ ಏನೇನು ಪೂಜೆಯನು ಉಳ್ಳದನು ಮಾಡೊ6 ಗುಣ ನಾಲ್ಕರಿಂದಲಿ ಉಪಾಸನವನೆ ಮಾಡು ಕ್ಷಣ ಕ್ಷಣಕೆ ಹರಿಪಾದವನು ನೋಡುತ ಅಣುರೇಣು ಚೇತನಾಚೇತನಕೆ ನೇಮಕ ಫಣಿಶಯನನಲ್ಲದೆ ಮತ್ತೊಬ್ಬರಿಲ್ಲವೆಂದು 7 ಮಮತೆಯನು ತೊರೆದು ಮೇಲೊಂದಪೇಕ್ಷಿಸದೆ ಸಮ ವಿಷಮ ತಿಳಿದೊಂದೆ ಭಕುತಿಯಲ್ಲಿ ಸ-ಮಾಧಿಗೊಳಗಾಗಿ ದಿವ್ಯ ದೃಷ್ಟಿಲಿ ಸರ್ವ ಕ್ರಮ ಅನುಕ್ರಮದಿಂದ ಭರಿತಭಾವುಕನಾಗೊ 8 ಪರಿ ಧೇನಿಸಲು ದೇವ ಕರುಣನ ಮಾಡೆ ಪಾಪ ಸಂಚಿತವು ಪ್ರಾರಬ್ಧ ನಾಶ ಅಪರೋಕ್ಷಿತನಾಗಿ ತನ್ನ ಯೋಗ್ಯತದಷ್ಟು ಗೋಪಾಲ ವಿಜಯವಿಠ್ಠಲನೊಲಿವನಾಗ9
--------------
ವಿಜಯದಾಸ
ನಡೆಯ ಬೇಕೆಲ್ಲೋರಂಗಾ ವಳಮನಿಗೆ | ತಡವಾಯಿತು ಬಂದು ಸಭೆಯೊಳಗೆ ಪ ಭಕುತರು ತಾಳ ಮೃದಂಗ ವೀಣೆಗಳಿಂದ | ನಿಗಮಗೋಚರ ನಿಮ್ಮಚರಿತವನು | ಬಗಿ ಬಗಿಯಲಿ ಪಾಡುವದಕೆ ಮರುಳಾಗಿ | ನಗಧರನಿಂತೀ ಸಕಲ ಮರೆದು 1 ಹೊನ್ನು ಮಯದ ತೂಗು ತೊಟ್ಟಿಲ ವಂಬರ | ಬಣ್ಣಬಣ್ಣದ ಪುಷ್ಪವಹಾಸಿ | ರನ್ನ ದೀಪದ ಎಡಬಲಲಿಂದಿರೆದೇವಿ | ನಿನ್ನ ಮಾರ್ಗವ ನೋಡುತಿಹಳಯ್ಯಾ | 2 ಬಂದ ಭಾಗವತರಿಗೆಲ್ಲ ಬೇಡಿದ್ದು ಕೊಟ್ಟು | ಮಂದ ಹಾಸದ ಉಚಿತದಿ ಕಳುಹಿ | ಸಾರಥಿ | ಛಂದದಿ ಬಿನ್ನಹ ಅವಧರಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂದ ವೃಜ ಮಧುರಿ ದ್ವಾರಕೀಯೊಳಾಡಿದ ಕೂಸೆಎಂದು ಬಾಹುವಿ ಇಲ್ಲಿಗೆ ಪ ಮಧುರೆಯಲಿ ನೀಪುಟ್ಟಿ ಪಿತೃಗಳ ರಕ್ಷಿಸಿದಿಹಿತದಿಂದ ಯಾದವರ ತಲೆಯ ಕಾಯ್ದಿಮೃತವಾದ ಮಗುವನು ಗುರುಸತಿಯ ಮಾತಿಗೆ ಕೊಟ್ಟೆಪ್ರತಿಗಾಣೆನೊ ನಿನ್ನ ಬಲಕೆ ಛಲಕೆ 1 ವೈರಿ ಬಾಧೆಯ ಬಿಡಿಸಿಭೂರಿ ಸುಖವಿತ್ತು ಪೊರೆದಿ ಭರದಿ 2 ಸರಯು ತೀರದಿ ಅಯೋಧ್ಯಾ ಪುರದೊಳಗೆ ಕಾಂಚನದಪರಮ ಪೀಠದಿ ಕುಳಿತು ಸೀತೆಯೊಡನೆಹರಳು ಕೆತ್ತಿದ ನಾನಾ ಭೂಷಣಂಗಳನಿಟ್ಟುಮರುಳು ಮಾಡುವಿ ನಮ್ಮನೂ ನೀನು 3 ನಂದ ಗೋಕುಲದಿ ರವಿ ನಂದನೀಯ ತೀರದಲ್ಲಿಚಂದದಿಂದಲಿ ನಿಂತು ಕೊಳಲನೂದಿಮಂದಗಮನಿಯರ ಮನಸು ಮರುಳು ಮಾಡುತ ಸುಖವು ದ್ವಂದ್ವಲೋಕದಿ ಕೊಟ್ಟಿ ಭೆಟ್ಟಿ 4 ಸಿರಿ ಸಂಪತ್ತು ಬಲ್ಲೆಇಂದಿರೇಶನೆ ಎನ್ನ ಚಿತ್ತ ಮಂದಿರದೊಳು ನಿನ್ನಸುಂದರಾನನ ತೋರೋ ಬಾರೋ5
--------------
ಇಂದಿರೇಶರು
ನಂದಗೋಪನ ಕಂದ ನಾನುವೃಂದಾರಕೇಂದ್ರ ಖಳಕುಲ ಮರ್ದನಪ. ಎಂದೆಂದು ಎನ್ನ ನಂಬಿದ ಭಕುತರಿಗೆ ಸುತ್ತಿಂದಬಂದ ಕ್ಲೇಶಗಳನ್ನೆಲ್ಲ ಖಂಡಿಸಿತಂದೆ ಮಕ್ಕಳ ಪೊರೆವಂತೆ ಪಾಲಿಸುತಿಹೆಕಂದರ್ಪನಾಣೆ ಇದು ಎನಗೆ ಬಿರುದು 1 ಅಂದಂದು ಅವರು ಬೇಡಿದ ಇಷ್ಟಂಗಳನಿತ್ತೆಸಂದೇಹವಿಲ್ಲ ಸಂತತ ಸಲಹುವೆಮಂದಜನರೊಡನಾಡಿ ಮರುಳುಗೊಳದಿರು ಮನುಜ ಚೆಂದದಿಂದೆನ್ನ ಪೂಜೆಯನು ಮಾಡು 2 ಇಂದ್ರ ಗರ್ವಿಸಲವಗೆ ಸಾಂದ್ರ ಸುರತರುವ ಆನಂದನವನವನು ಪೊಕ್ಕು ಕಿತ್ತುತರಲುಒಂದಾಗಿ ರಣಕೆ ಬಂದು ನಿಂದಮರರನು ಕರುಣದಲಿಅಂದು ಪಾಲಿಸಿದೆ ಭಕ್ತರ ಬಂಧುವೆನಿಸಿ 3 ಇಂದುಮುಖಿ ಸಭೆಯಲ್ಲಿ ಕರೆಯಲಾಕ್ಷಣದೊಳಗೆಬಂದವಳ ಅಭಿಮಾನವನು ಕಾಯ್ದೆಇಂದುಧರ ಭಸ್ಮನುಪದ್ರದಲಿ ಬಳಲುತಿರೆಬಂದೊದಗಿ ಶಿವನÀ ಕಾಯಿದವನರಿಯಾ4 ಅಂಧಂತಮವ ದಾಟಿ ಅನಂತಾಸನಕೆ ಪೋಗಿಒಂದು ನಿಮಿಷದೊಳಗೆ ದ್ವಿಜನ ಸುತನ ತಂದೆಸಿಂಧುವಿನೊಳಗೆ ದೈತ್ಯನ ಕೊಂದು ಸಾಂದೀಪ -ನಂದನನÀ ಯಮನಪುರದಿಂದ ತಂದೆ 5 ನೃಪರ ಬಹುಬಲ ಜರಾ -ಸಂಧನ ಗಧೆಯ ಗಾಯದಿ ಕೊಲಿಸಿಅಂದವನ ದೆಸೆಯಿಂದ ನೊಂದ ನೃಪರನು ಬಿಡಿಸಿಕುಂದದುಡುಗೊರೆಯ ನಾ ಕೊಡಿಸಿ ಮೆರೆದೆ6 ಹಿಂದಾಗಜೇಂದ್ರನಿಗೊದಗಿದವನಾರು ಪಿತನಿಂದನೊಂದ ಪ್ರಹ್ಲಾದನ್ನ ಕಾಯ್ದವರದಾರುಮಂದರಗಿರಿಯನೆತ್ತಿ ಸುರರಿಗಮೃತ ಉಣಿ-ಸಿಂದಿರೆಯನಾಳ್ದ ಹಯವದನನರಿಯಾ7
--------------
ವಾದಿರಾಜ
ನಂದಪುತ್ರನ ಆಜ್ಞೆಯಿಂದಲುದ್ಧವ ಬ್ಯಾಗ ಬಂದು ಗೋಕುಲ ಹೊಕ್ಕಾನಂದದಿಂದಲಿ 1 ಬಾಲನ್ವಾರ್ತೆಯ ಕೇಳೆಶೋದ ಗೋಪನು ಕೊಂ- ಡಾಡಿ ಗುಣಗಳ ಮನಕೆ ತಾಳಿದರ್ಹರುಷವ 2 ತಾಪ ಬಿಡದಲೆ ಅಗಲಿ ಶ್ರೀಪತಿ ಕಾಣದೆ ಸಂತಾಪದಿಂದಿರೆ 3 ಸತಿಯರೆಲ್ಲರು ಗೋಪಿಸುತನ ಪಾಡುತ ದಧಿಯ ಮಥಿಸಿ ಕದವನೆ ತೆಗೆಯೆ ರಥವ ಕಂಡರು 4 ದಾವ ಕಾರಣ ನಮ್ಮ ಭಾವಭಕ್ತಿಗೆ ಸ್ವಾಮಿ ತಾನೆ ಬಂದಾನೋ ತನ್ನಕ್ರೂರನ ಕಳಿಸ್ಯಾನೊ 5 ಭದ್ರೆರೆಲ್ಲರೂ ಕೂಡಿ ಎದ್ದು ಬರುತಿರೆ ಮಧ್ಯಮಾರ್ಗದಿ ಅಲ್ಲುದ್ಧವನ ಕಂಡರು 6 ಕಾಂತೇರೆಲ್ಲರು ಕೂಡೇಕಾಂತ ಸ್ಥಳದಲ್ಲಿ ನಿಂತು ಕಂತುನಯ್ಯನು ಲಕ್ಷ್ಮೀಕಾಂತ ಕ್ಷೇಮವೆ 7 ಇಂದಿರೇಶನ ಬಿಟ್ಟಗಲಿ ವ್ರಜದೊಳು ಕಾಲ ಹಿಂದೆ ಕಳೆವೋದ್ಹ್ಯಾಗಿನ್ನ ್ಹಗಲು ಇರುಳನೆ 8 ಮುಂದೆ ಕಾಣದೆ ನೇತ್ರ ಅಂಧಕರಂದದಿ ಮು- ಕ್ಕುಂದನಿಂದಲಿ ರಹಿತರೆಂದಿಗಾದೆವೊ 9 ತೊಡಿಗೆ ಬಂಗಾರ ಶಿರದಿ ಮುಡಿವೊ ಮಲ್ಲಿಗೆ ದೇಹ- ಕ್ಕುಡಿಗೆ ಭಾರವೊ ಬಿಟ್ಟು ಪೊಡವಿಗೊಡೆಯನ 10 ಉದ್ಧವ ನಾವು ಜಾಳು ಸ್ತ್ರೀಯರು ಒಲ್ಲದೆ ಕಾಳಿಮರ್ದನ ಕಾಲಲೊದ್ದು ಪೋದನು 11 ಜಾರಸ್ತ್ರೀಯರುಯೆಂದು ನಗದಿರುದ್ಧವ ಬಿಗಿದ ಮೋಹಪಾಶದಿ ಈ ವಿಚಾರ ಮಾಡಿದ 12 ಬಲೆಯಗಾರಗೆ ಸಿಕ್ಕು ಬಳಲಿದಾಕ್ಷಣ ಅದರ ಕೊ- ರಳ ಕೊಯ್ಯದೆ ಅವಗೆ ಕರುಣ ಬರುವುದೆ 13 ಎಷ್ಟು ಹೇಳಲೊ ಅವನ ಗಟ್ಟಿಯೆದೆಗಳ ಒಲ್ಲದೆ ಬಿಟ್ಟು ನಮ್ಮನು ಮಧುರಾಪಟ್ಟಣ ಸೇರಿದ 14 ಭ್ರಮರಕುಂತಳೆ ಒಂದು ಭ್ರಮರಕಾಣುತ ಬ್ಯಾಡ ಕಮಲನಾಭನ ವಾರ್ತೆ ಕಿವಿಗೆ ಸೊಗಸದು 15 ಮದನಮೋಹನ ಹೋಗಿ ಮಧುರಾಪುರಿಯಲಿ ಅಲ್ಲಿ ಚÉದುರೆರಿಂದಲಿ ಅವಗೆ ಸೊಗಸು ಸಮ್ಮತ 16 ಕ್ರೂರನೆನ್ನದೆ ಇವಗಕ್ರೂರನೆನುತಲಿ ದಾರ್ಹೆಸರಿಟ್ಟರೋ ನಮಗೆ ತೋರಿಸೊ ಅವರನು 17 ಯಾತಕ್ಹೇಳುವಿ ಅವನ ವಾರ್ತೆ ಸೊಗಸದು ಹರಿಯು ಪ್ರೀತಿ ವಿಷಯನು ನಮಗೆ ಘಾತಕನೆನಿಸಿದ 18 ಜಲನ ಭೇದಿಸಿ ಹಯನ ಕೊಂದು ವೇದವ ಹ್ಯಾಗೆ ಹರಣ ಮಾಡಿದ 19 ಕ್ಷೀರ ಮಥನವ ಮಾಡಿ ಸ್ತ್ರೀಯರೂಪದಿಂದಸುರರ ಮೋಹಿಸಿದ್ವಂಚನೆ ನಮಗೆ ಪೂರ್ಣ ತಿಳಿಸಿದ 20 ಭೂಮಿ ಬಗಿದನು ತನ್ನ ಕ್ವಾರೆಯಿಂದಲಿ ನಮ್ಮನ್ನು ಸೀಳಿ ಪೋದರೆ ಇನ್ನೀ ಘೋರ ತಪ್ಪುವುದು21 ಕಂದ ಕರೆಯಲು ಕಂಬದಿ ಬಂದು ಸಲಹಿದನೆಂದು ನಂಬಿ ಕೆಟ್ಟೆವೊ ಇನ್ನಿವನ ಹಂಬಲ ಸಾಕಯ್ಯ 22 ಕೊಟ್ಟ ದಾನವ ಬಲಿಯ ಕಟ್ಟಿ ಪಾಶದಿಂದವನ ಮೆಟ್ಟಿದ ಪಾತಾಳಕಿಂಥಾಕೃತ್ಯಮರುಂಟೇನೊ 23 ಕೊಡಲಿ ಕೈಯ್ಯೊಳು ಪಿಡಿದು ಹಡೆದ ಮಾತೆಯ ಶಿರವ ಕಡಿದ ಪುರುಷಗೆ ನಮ್ಮೊಳು ಕರುಣ ಬರುವುದೆ 24 ಬಂದ ಸತಿಯಳ ಮೋರೆ ಅಂಗ ಕೆಡಿಸಿದ ತ- ನ್ನಂಗನೆ ಕಾಣದೆ ತಿರುಗಲೆಮಗೆ ಸನ್ಮತ 25 ಪತಿಯ ಸುತರನೆ ಬಿಟ್ಟೆವಶನ ವಸನವ ಅಗಲಿದ್ವಸುನಂದನಗೆ ನಮ್ಮೆಲ್ಲರುಸುರು ಮುಟ್ಟಲ್ಯೊ 26 ಬೌದ್ಧರೂಪದಿ ಸ್ತ್ರೀಯರ ಲಜ್ಜೆಗೆಡಿಸಿದನೆಂಬೊ ಸುದ್ದಿ ಬಲ್ಲೆವೊ ನಾವಿಲ್ಲಿದ್ದವರುದ್ಧವ 27 ಕಲಿಯ ಮನಸಿರೆ ಇವಗೆ ಕಲ್ಕ್ಯನೆಂಬೋರೊ ಕತ್ತಿ ಪಿಡಿದ ಪುರುಷಗೆ ನಮ್ಮೊಳು ಕರುಣ ಬರುವುದೆ 28 ಬ್ಯಾಡವೆನುತಲಿ ಅವಗೆ ಬೇಡಿಕೊಂಡೆವೊ ಗಾಡಿಕಾರನು ನಮ್ಮ ನೋಡದ್ಹೋದನು 29 ನಮ್ಮ ವಚನವ ಹೋಗಿ ಮನ್ನಿಸುದ್ಧವ ಪನ್ನಂಗಶಯನನ ಪಾದಕ್ಕಿನ್ನು ನಮಿಸೆವೊ 30 ಬಿಟ್ಹ್ಯಾಗಿರುವೊಣೋ ಭೀಮೇಶಕೃಷ್ಣನ ನಮ್ಮ ದೃಷ್ಟಿಗೆ ತೋರಿಸೊ ಮುಕ್ತಿ ಕೊಡುವೊ ದಾತನ31
--------------
ಹರಪನಹಳ್ಳಿಭೀಮವ್ವ
ನದಿಗಳು ಭಾಗೀರಥ್ಯಾದಿ ನದಿಗಳ ತಾರತಮ್ಯ ನಿಜ ಭಾಗವತ ತಿಲಕ ನಿಮಿರಾಜಗೊಲಿದು ವಸಿಷ್ಠ ರಾಗದಲಿ ಕೇಳಿ ಜನರಯ್ಯಾ ಪ ಒಂದು ದಿನ ಗೋದಾವರಿಯ ತಟದಿ ನಿಮಿರಾಜ ಸಂದು ಯಜ್ಞವ ಮಾಡುತಿರಲಾಗ ಪರಮೇಷ್ಠಿ ನಂದನೆನಿಪ ವಶಿಷ್ಠ ಮಹಮುನಿ ನಡೆತಂದ ಮೇಧಾಗಾರಕೆ ಬಂದ ಯತಿವರನ ಮಣಿಪೀಠದಲಿ ಕುಳ್ಳಿರಿಸಿ ಸುಂದರಾಧಿಪ ಬೆಸಸಿದಾ 1 ವ್ರತಿಪತಿ ವಶಿಷ್ಠ ವೈಷ್ಣವಕುಲ ಶಿರೋರತುನ ಶ್ರುತಿಶಾಸ್ತ್ರ ಸರ್ವಜ್ಞ ಗಂಗಾದಿ ಪುಣ್ಯತೀ ಮತ್ಪಿತನೆನುತ ಪದಕೆರಗುವಾ ಕ್ಷಿತಿಪನೋಕ್ತಿಯ ಕೇಳುತಾನಂದ ಶರಧಿಯೊಳು ಗತನಾಗಿ ರೋಮ ಲಕ್ಷಣ ಕಳೇವರದಿ ಪುಳ ನೃಪತಿಗಿಂತೆಂದನು 2 ಕೇಳು ಜನನಾಥ ಮಹಭಾಗ ನಿನ್ನಯ ಪ್ರಶ್ನ ದೇಳಿಗೆಗೆ ಎನ್ನ ಸಂತೋಷ ಕಲ್ಪತರು ತ ಶಿಷ್ಯರೊಳು ಮೌಳಿಮಣಿ ನೀನಹುದು ನಿಖಿಳ ನದಿಗೊಳಿಪ್ಪ ಶ್ರೀಲೋಲನ ಸುಮೂರ್ತಿಗಳು ತಾರÀತಮ್ಯ ಸುವಿ ಮಾನವ ಇದನಾಲಿಪುದು ನೀನೆಂದನು 3 ಹರಿಪಾದನಖದ ಸಂಸ್ಪರ್ಶ ಮಾತ್ರದಿಂದಲಿ ಸುರತರಂಗಿಣಿ ಶ್ರೇಷ್ಠಳೆನಿಸುವಳು ನದಿಗಳೊಳು ದೊರೆಮೆನಿಪನಾ ತೀರ್ಥಕೆ ಸರಿತಾಗಗಣ್ಯ ಗೋದಾವರಿ ನಳಿನಿಗಿಂ ಕೊರತೆಯೆನಿಪಳೈ ವತ್ತು ಗುಣದಲಿ ಶಂಖ ಚರಣ ಸುಗದಾಬ್ಜ ಶೋಭಿತ ವೀರನಾರಾಯಣ- ರಸೆನಿಪನಾ ಸಲಿಲಕೆ 4 ಹರಜಟೋದ್ಭವ ಕುಶಾವರ್ತಿಗೆ ಸಹಸ್ರಗುಣ ಚಾರು ಕಂ ಬುರಲಿ ವಾರುಚಿ ಧನುರ್ಧಾರಿ ಯಮನಂದನಲಿ ವಿಹರಿಸುತಿಹನಾಜಲದೊಳು ತುರುಗಾಯ್ದ ದೇವನಂಗಜ ನದಿಗೆ ಈರೈದು ವಾಗ್ದೇವಿ ಶರಧಿಯೊಳು ಪು ಗೋದ ರಂಗನಾಥನೆನಿಪ 5 ಆ ಯಮಳನದಿಗಳಿಗೆರಡು ಗುಣಾಧಮ ಸರಯು ತೋಯಾಧಿಪತಿ ರಾಮ ಸರಯು ನೀರೆಂದು ಗುಣ ವಿಹಾಯ ಸಮಮಣಿತನಯಳೆ ಸ್ಥಾಯಕೆ ಚತುರ್ಬಾಹು ವಿಷ್ಣು ಕಾವೇರಿಗೆ ನಾಯಕ ವರಾಹದೇವಾ6 ಸಿಂಧು ಭವನಾಶಿಗೀರ್ವರು ಸಮರು ಕ್ಷೀರಾಬ್ಧಿ ಮಂದಿರ ನೃಸಿಂಹರಲ್ಲಿಹರು ಭವನಾಶನಿಗೆ ತಂದೆಯೆನಿಪ ತ್ರಿವಿಕ್ರಮ ಒಂದೆನಿಸುವುವು ನಾಲ್ಕು ನದಿಗಳು ಗುಣಗಳಿಂದ ಮುಂದಿಹ ಪದದಿ ಪೇಳ್ವೆ ಪೆಸರು ಹರಿರೂಪ ನೆಲ ತಮ್ಮಿಂದೀರಗಿಂತೆಂದನೂ 7 ವಾಜಿವದನು ಮಂಝರಾನದಿಯೊಳಿಹನು ನವ ರಾಜೀವನಯನ ಶ್ರೀಧರ ಭೀಮರಥಿಯೊಳಿಹ ವಿರಾಜಿಪ ಮಲಾಪಹಾರಿ ಭಾಜನದೊಳಿಪ್ಪ ದುಷ್ಟ ಜನರನು ಮರ್ದಿಸುವ ಶ್ರೀ ಜನಾರ್ದನ ನಾಲ್ಕು ನದಿಗಳು ದ್ವಿಗುಣದಿಂದಾ ನಿತ್ಯ ನೈಜಭಕ್ತಿ ಜ್ಞಾನದಿ 8 ಭೀಮರಥಿ ಸಮ ಪಿನಾಕಿನಿಯೊಳಗೆ ಕೇಶವನು ಭೂಮಿಯೊಳು ಪೃಥಕು ಪೃಥಕು ಸುಖ ಜ್ಞಾನದಿ ಶ್ರೀ ಮನೋರಮ ಕೇಶವಾದಿ ರೂಪಗಳಿಂದ ಸ್ವಾಮಿಯೆನಿಸುವನಲ್ಲ ಸ್ನಾನಾದಿ ಸತ್ಕರ್ಮ ಮೋಕ್ಷ ಗಳೀವನೊ 9 ಈ ನದಿಗಳೆರಡು ಗುಣ ಪುಷ್ಕರಣಿನಿಚಯ ನ್ಯೂನವೆನಿಪವು ಮುಕ್ತಿ ದತ್ತಾತ್ರಯನು ಕೃಷ್ಣ ಮಾನಸ ಸರೋವರದೊಳು ಜ್ಞಾನಾತ್ಮ ವಾಮನನ ಶ್ರೀ ಭೂ ಸಹಿತ ಪ್ರಸ ನ್ನಾನನಾಬ್ಜದಿದರೆ ಜಘನಸ್ಥಿತಾಭಯ ಸು ಧೇನಿಪುದು ಎಂದಾ 10 ದೇವಖಾತಗಳು ಶತಗುಣಕಡಿಮೆ ಮಾನಸ ಸ ರೋವರಕೆ ಇತರ ಪುಷ್ಕರಣಿಗಳಿಗಲ್ಪಗುಣ ಪಾವನವಗೈವ ಕ್ಷುದ್ರಾ ಪ್ರಾವಹಿಗಳೀರೈದು ಗುಣದಿ ಕಡಿಮೆ ಲಕ್ಷ್ಮೀ ದೇವಿಪತಿ ನಾರಾಯಣನ ಚಿಂತಿಸೆಂದು ನೃಪ ಭವನೋವ ಪರಿಹರಿಪುದೆಂದು 11 ಈ ಸಲಿಲತೀರ್ಥಂಗಳೆರಡು ಗುಣದಿ ತಟಾಕ ಶೇಷಪರ್ಯಂಕ ಅಚ್ಯುತನಿಹನು ಸಜ್ಜನರ ವಾಸವಾಗಿಹನು ಚಕ್ರಿ ಘೋಷಗೈವ ಧರಾಂತಕೂಪಗಳೊಳಿರುತಿಹ ನಾ ಕೇಶನದಿಗಳ ತಾರÀತಮ್ಯ ರೂಪಗಳನುಪ ಪಾಸನಗೈವುದೆದೆಂದು 12 ಈ ತೆರದಿ ನಿಮಿರಾಜಗೋಸುಗ ವಶಿಷ್ಠಮುನಿ ತಾ ತಿಳಿದ ಕಥಾತಿಶಯ ಪರಮ ವಿಬುಧರು ಧ ಪ್ರೀತಿಯಿಂದಾಚರಿಸಲು ಶೀತಾಂಶು ಕಮಲಾಪ್ತರುಳ್ಳನಕ ಸುರಪತಿ ನಿ ಕೇತನದಿ ವಿವಿಧ ಭೋಗಗಳಿತ್ತು ಶ್ರೀ ಜಗ ಸಂಪ್ರೀತಿಯಿಂದನುರಾಗದೀ 13
--------------
ಜಗನ್ನಾಥದಾಸರು
ನಂದಿಯನೇರಿ ಬರುತಿಹ ಸುಂದರನ್ಯಾರೆ ಪೇಳಮ್ಮಯ್ಯ ಪ. ಚಂದ್ರಚೂಡ ಗಂಗಾಧರ ಶಂಕರ ಸುಂದರ ಗೌರೀರಮಣ ಕಣಮ್ಮಾ ಅ.ಪ. ಕರದಿ ತ್ರಿಶೂಲ ಧರಿಸಿದನಾರೆ ಪೇಳಮ್ಮಯ್ಯ ವರ ಡಮರುಕಪಾಲ ಪಿಡಿದಿಹನಾರೆ ಪೇಳಮ್ಮಯ್ಯಾ ಕರುಣವ ತೋರುತ ಸಕಲರ ಮನ ಮಂದಿರದಲಿ ಪೊಳೆಯುವ ಗಿರಿಜಾ ರಮಣ ಕಣಮ್ಮ 1 ಗಜ ಚರ್ಮಾಂಬರ ಧರಿಸಿಹನಾರೆ ಪೇಳಮ್ಮಯ್ಯ ತ್ರಿಜUನ್ಮೂರುತಿ ನೊಸಲಿಗೆ ಭಸ್ಮವ ಧರಿಸಿಹನಾರೆ ಪೇಳಮ್ಮಯ್ಯ ಋಜುಗುಣದೊಡೆಯಗೆ ರಜತಾದ್ರಿನಿಲಯ ನಿಜ ಪಾರ್ವತೀರಮಣ ಕಣಮ್ಮಾ 2 ಶೇಷನಾಭರಣವ ಧರಿಶಿಹನಾರೆ ಪೇಳಮ್ಮಯ್ಯ ಸೋಸೀಲಿ ಮೂಗಣ್ಣವನಾರೆ ಪೇಳಮ್ಮಯ್ಯ ವಾಸುಕಿಶಯನ ಶ್ರೀ ಶ್ರೀನಿವಾಸನ ವಾಸ ಶಂಭೋ ಶಂಕರನು ಕಣಮ್ಮಾ 3
--------------
ಸರಸ್ವತಿ ಬಾಯಿ
ನಂದಿವಾಹನಾ ಪಾಲೀಸೊ ನೀ | ಕಂದ ನೆಂದನಾ ಪ ಕಂದು ಗೊರಳ ಮೌ | ಳೆಂದು ಶಿಖರ ಅಮರೇಂದ್ರ ಮುಖರು ಸುರ | ವೃಂದ ವ್ಯಂದ್ಯ ಪದಅ.ಪ. ನಂದ - ನಂದನಾ - ಪ್ರಿಯ ಸಖ | ಮಂದಜಾಸನಾಕಂದ ನೆನಿಸಿ ದುರ್ | ವೃಂದ ತ್ಯಜಿಸಿ ತವತಂದೆ ಯಾಜ್ಞೆಯಲಿ | ನಿಂದು ಸರಿದ ಹರ 1 ದಿತಿಸುತ | ಸ್ತೋಮ - ಪ್ರೀಯನೇ ||ಶಾಮ ಸುಂದರ ಹರಿ | ಪ್ರೇಮಾನ್ವಿತ ಸುತಕಾಮಾರಿಯೆ ಹರ | ಸಾಮಜವಾಸಾ 2 ಸೇವ್ಯ ನಂಘ್ರಿ ದಶದಿವ್ಯ ಕಲ್ಪ ತಪ | ಗೈಯ್ಯೆ ಶಯ್ಯನಾದೆ 3 ಯೋಗಿ ರೂಪ ಭವರೋಗ ವೈದ್ಯ ಹೃ | ದ್ರೋಗ ಕಳೆಯೊ ಶಿವ4 ಗೌರಿ ಮನೊ - ಹರಾ - ಕೈಲಾಸವಾಸ | ಕೈರಾತಾ ಕೃತಿಧರಾ ||ಗಿರಿ ಇಂದ್ರ ಕೀಲದಿ | ಘೋರ ತಪಸಿ ನರಸಾರೆ ನಿನ್ನ ಪದ | ಶೂರ ಪಡೆದ ಶರ 5 ಶುಕ | ಲಿಂಗಾಕಾರನೇ ||ತುಂಗ ಮಹಿಮ ನಿ | ಸ್ಸಂಗ ಹರಿಯ ದ್ವಿತಿಯಂಗ ಡಮರು ಶೂ | ಲಿಂಗಳ ಪಿಡಿದಿಹ 6 ತೈಜಸ - ತಾಮಸ | ಸಾಕಾರಿ - ಓಜಸಾ ||ನೀ ಕುಶಾಸ್ತ್ರದಲಿ | ಭೀಕರರನು ಅವಿವೇಕರ ಮಾಡ್ದೆ | ಪಿ | ನಾಕಿ ಧರ ಹರ 7 ರುಂಡ - ಮಾಲನೇ - ಮುನಿಜ ಮೃ | ಕಂಡ - ಪಾಲನೇ ||ಅಂಡಜ ಮಹ ಬ್ರ | ಹ್ಮಾಂಡ ದೊಡೆಯ ಪದಪುಂಡರೀಕದೊಳು | ಬಂಡುಣಿ ಎನಿಸಿಹೆ 8 ಶಂಭೊ - ಶಂಕರ - ಧೂರ್ಜಟೆಯೆ | ಅಂಚೆ - ಮನೋಹರಾ ||ಕಂಬು ಪಾಣಿ ಪದ | ಹಂಬಲಿಸುವೆ ಹೃದಯಾಂಬರದೊಳು ಎನ | ಬಿಂಬನ ತೋರಿಸು 9 ಸೋಮರ್ಕಾನಲ - ಈಕ್ಷಣಾ | ಭೀಮ - ಕೈಕಪಾಲ ||ಭೀಮ ಭವಾಟವಿ | ಧೂಮಕೇತು ಸಿರಿರಾಮ ಪದಾಶ್ರಿತ | ವೈಮನ ಕಳೆಯೊ 10 ಭಾವ - ಜಾರಿಯೇ - ಮುರುಹರ | ರಾವಣಾದಿ - ಪ್ರಿಯಾ ||ಸಾವಧಾನದೊಳು | ಭಾವ ಶುದ್ಧಿಸುತತೋರ್ವುವೆನಗೆ ಗುರು | ಗೋವಿಂದ ವಿಠಲನ 11
--------------
ಗುರುಗೋವಿಂದವಿಠಲರು
ನನಗಾವ ಬಲವಿಲ್ಲ ನಿರುಪಮನೆ ಹೇಳೈಯ ವನಜ ಸಂಭವ ಜನಕ ತವ ಚರಣ ವಲ್ಲದಲೆ ಪ ಮಣಿದು ಬೇಡುವೆನೈಯ ಪ್ರಣತಾರ್ಥಿ ಹರಕೃಷ್ಣ ಜನುಮಗಳ ಹರಿಸುತಲಿ ಭವಬಂಧ ಬಿಡಿಸೈಯಅ.ಪ ನರರ ನಂಬಿದೆ ನೈಯ ಸಿರಿಯುರಿಗೆ ಬಾಯ್ಬಿಟ್ಟೆ ಅರಿಯದೆಲೆ ತವ ಮಹಿಮೆ ಬರಿದೆ ಬಳಲಿದೆಭವದಿ ಧೊರೆ ತನವು ಸವಿಯಹುದೆ ತವ ಸವಿಯ ಕಂಡವಗೆ ಜರಿಯ ದಲೆ ಬಡವನನು ಕರೆದು ಪಾಲಿಸು ತಂದೆ 1 ಹಣ ವನಿತೆ ಭೂ ವಿಷಯ ಉಂಡುಂಡು ಬೆಂಡಾದೆ ತನುಜ ಕರಣಗಳಿನ್ನು ಶತ್ರುಗಳ ಸಮವಿಹವು ಗುಣ, ಪೂರ್ಣ ಬಿಂಬನನು ನೆನೆಯ ಗೊಡದಲೆ ನಿತ್ಯ ಇನಸುತನ ಪುರದೆಡೆಗೆ ಸೆಳೆಯುತಿಹವೋ ಸ್ವಾಮಿ 2 ಸುರರು ಸುರರಿಗಾಶ್ರಯ ನೀರ ಮರುತಗಾಶ್ರಯ ಸಿರಿಯು ಸಿರಿರಮಣನೀನಿರಲು ಚರಣ ಸೇವಕ ನೆನ್ನ ನರರಿಗೊಡ್ಡುವರೇನೊ ಸರ್ವೇಶ ಅಕ್ಷರನೆ ಮೊರೆ ಹೊಕ್ಕೆ ಸಲಹೈಯ 3 ದೇವ ದೇವರ ದೇವ ದೇವತ್ವ ನೀಡುವನೆ ಕಾವ ಜೀವರ ನಿಚಯ ಸಾರ್ವಭೌಮನು ನೀನು ನೀವಲಿದು ಪೊರೆಯದಿರೆ ಆಗುವುದೆ ಸುಖಮುಕ್ತಿ ನಾವಿಕನು ನೀನೆಂದು ನಂಬಿದೆನು ಕೈಪಿಡಿಯೊ 4 ಅಗಲಿ ಬದುಕಿರಲಾರೆ ಗೋಪ ಪುರುಷನೆ ನಿನ್ನ ಸುಗಮ ಮಾಡಿಸು ಪಥವ ಸರ್ವಜ್ಞ ತವಪುರಕೆ ನಗವೈರಿ ಜಯತೀರ್ಥ ವಾಯು ವಂತರದಿರ್ಪನಗೆ ಮೊಗದ ಶ್ರೀಕಾಂತ ಕೃಷ್ಣವಿಠಲನೆ ಬೇಗ 5
--------------
ಕೃಷ್ಣವಿಠಲದಾಸರು
ನಂಬದಿರು ಈ ದೇಹ ನರಲೋಕವೆಂಬುದು ಸುಖವೆಂದು ಮಾಯಾ ಪ್ರಪಂಚವನು ಅನುಗಾಲಾ ನಂಬು ನಮ್ಮಂಬುಜಾಂಬಕನ ಪಾದಾಂಬುಜವ ನಂಬಿದರೆ ಮುಕ್ತಿಯಲಿ ಇಂಬುಂಟು ಮರುಳೆ ಪ ತಂದೆ ತಾಯಿ ತಮ್ಮ ಸುಖಕೆ ಏಕಾಂತದಲಿ ಒಂದು ದಿನಲಿರಲಾಗಲವರರೇತಸು ಬಿಂದುವಿನಲಿ ಉತ್ಪತ್ಯವಾಗಿ ಬೆರೆದಾಗ ದು ರ್ಗಂಧದೊಳು ಬಂದು ನಿಂದೂ ಬಂಧನದೊಳಗೆ ಸಿಲುಕಿ ಒಂದೆಂಟು ತಿಂಗಳು ಪೊಂದಿ ಯಾತನೆಬಟ್ಟು ಮಲಮೂತ್ರ ಹೇಸಿಕೆಯಿಂದ ಕುದಿದು ಬಿಂದು ಕೆಳಗೆ ಹೊರಳಿದಿರು ಮರುಳೆ 1 ತಾಮಸವ ಕವಿದು ಕಾವಳಗೊಂಡ ಕತ್ತಲೆಯ ಸೀಮೆಯೊಳಗೆ ಸಿಲ್ಕಿ ಬಾಲತ್ವತನದಲ್ಲಿ ನೀ ಮಂದನಾಗಿ ಮರುಳಾಟಕ್ಕೆ ಮನವು ಉಬ್ಬಿ ಮುಂಜಿಯನು ಕಟ್ಟಿ ಬಂಧುಬಳಗ ಪ್ರೇಮದಿಂದಲಿ ನೆರೆದು ಮೋಹದಲಿ ಒಬ್ಬ ಕೋಮಲೆಯ ಜತೆಮಾಡಲು ನೋಡಿ ಹಿಗ್ಗುತ್ತಾ ಛೀಮಾರಿಯಾಗಿ ತಿರುಗಲಿ ಬೇಡ ಮರುಳೆ 2 ಮದ ಮತ್ಸರ ಲೋಭ ಮೋಹ ಕಾಮಾದಿಯಲಿ ಮದನ ಬಲಿಗೆ ಬಿದ್ದು ಅಹಂಮತಿ ಪಂಕದಾ ಹುದಲಿನೊಳಗೆ ಮುಣುಗಿ ಮುಂಗಾಣದಲೆ ತನು ರೂಹ ತುಂಬಿ ಕಾಲವನು ಕಳೆದು ಮಕ್ಕಳ ಪಡೆದು ತುದಿಮೊದಲು ಧರ್ಮವನು ಮರೆದು ಮಮತೆಯಲ್ಲಿ ಸದರೆಂದಿಲ್ಲದಾ ದುಷ್ಕರ್ಮಗಳು ಮಾಡಿ ಮುದದಿಂದ ನರಕದೊಳು ಬೀಳುವಾ ಹುರುಳೆ 3 ಇದ್ದಾಗ ನೆಂಟರಿಷ್ಟರು ಬಂದು ಚೆನ್ನಾಗಿ ಹೊದ್ದಿಕೊಂಡು ನಿನ್ನ ಕೊಂಡಾಡಿ ನೂರಾರು ಸುದ್ದಿಯನು ಪೇಳಿ ನಡುಮನೆಯೊಳಗೆ ಇದ್ದು ನಿನ್ನಯ ಬದುಕು ಉದ್ದಿನ ಕಾಳಿನಷ್ಟು ಉಳಿಯಲೀಸದೆ ನಿತ್ಯಾ ಬದ್ಧವಿಲ್ಲದಲೆ ಕರಗಾತಿಂದು ಬಡತನಾ ಸಿದ್ಧನಾಗಲು ತಿಂದವರು ಹರದೋಡಿ ಎದ್ದು ಪೋಗಲು ಕೆಟ್ಟಬಾಯಿದೆರವಾ ಮರುಳೆ 4 ಬಿಡು ಬಿಡು ಅಕಟ ಸಂಸಾರ ಸಾಗರದ ಮಡುವಿನೊಳಗೆ ಬಿದ್ದು ಕಾಲ್ಗೆಡೆದು ಪೋಗದೆ ಹಿಡಿ ಹಿಡಿ ಪರಮ ಭಾಗವತರ ಸಂಗತಿಯ ಸರ್ವಜ್ಞತೀರ್ಥರ ಮತದ ಕರುಣವನು ಪಡೆಯಲು ಅಧಿಕಾರನಾಗಿ ಸಿರಿದೇವಿಯ ವೊಡಿಯ ವಿಜಯವಿಠ್ಠಲನಂಘ್ರಿ ನೆರೆ ನಂಬಿ ತಡಿಯದಲೆ ಸದ್ಗತಿಗೆ ಸೇರುವದು ಮರುಳೆ5
--------------
ವಿಜಯದಾಸ
ನಂಬಿ ಭಜಿಸಿರೋ _ ಜನರೆಲ್ಲರೂ _ ನಂಬಿ ಭಜಿಸಿರೊ ಪ ಅಂಬುಜಾಕ್ಷ ಪ್ರಿಯಾ _ ನಮ್ಮ ಜಯರಾಯರಾ ಅ.ಪ ಕ್ಲೇಶ ಯಾತಕೇ ಕಾಸು ಕಳಕೊಂಡು _ ಅತಿಘಾಸಿ ಯಾತಕೇ ಶ್ರೀಶನಂಘ್ರಿ ಭಜಕರಾದ _ ವಾಸವಾವೇಶರಿವರ ಪಾದ ಆಶೆಯಿಂದ ಭಜಿಸಲೂ _ ವಾಸುದೇವನೊಲಿವನು 1 ನೇಮ ಯಾತಕೇ _ ನಿಷ್ಠೆ ಯಾತಕೇ ಹೋಮ ಯಾತಕೇ _ ಕಷ್ಟಯಾತಕೇ ಪ್ರೇಮದಿಂದಲೀ _ ಇವರ ಭಜಿಸಲೂ ತಾಮಸಗುಣ _ ತಾನೇ ಓಡೋದು 2 ಮಧ್ವಶಾಸ್ತ್ರದ _ ಚಂದ್ರರಿವರು ಅದ್ವೈತವಾದವ _ ಗೆದ್ದಸಿಂಹರು ಮಧ್ವರಾಯರಾ _ ಮುದ್ದುಮೊಮ್ಮಗ ಸಿದ್ಧಸೇವ್ಯರು _ ಸುಧೆಯ ಕರ್ತರು 3 ಇವರ ಧ್ಯಾನವೂ _ ಜ್ಞಾನದಾಯಕಾ ಇವರ ಪೂಜೆಯೂ _ ಪಾಪನಾಶನ ಇವರ ಸ್ಮರಣೆ _ ಕಲಿವಿ ಭಂಜನೆ ಇವರ ಸೇವೆಯು _ ಮುಕ್ತಿಸೋಪಾನ 4 ಶ್ರೀಕಳತ್ರನಾ _ ಆಜ್ಞೆಯಿಂದಲಿ ನಾಕದಿಂದಲೀ _ ಇಲ್ಲಿ ಬಂದರು ಏಕಮನದಿ _ ಶರಣು ಹೋಗಲು ಪಾಪನಾಶನ _ ಪುಣ್ಯವೆಗ್ಗಳಾ 5 ಮಳಖೇಡದೀ _ ನೆಲಸಿ ಇಪ್ಪರೂ ನಳಿನನಾಭನ _ ಒಲಿಸುತನುದಿನಾ ನಲಿಸಿ ಮನದೊಳು _ ಒಲಿಸುವಾತನೆ ಶೀಲವಂತನು _ ಧನ್ಯ ಮಾನ್ಯನು6 ನರನ ವೇಷದಿ _ ಸುರರ ಒಡೆಯನೊ ಹರಿಯ ಕರುಣದಿ _ ಮೆರೆಯುತಿರ್ಪರು ಶರಣಜನರ _ ದುರಿತರಾಶಿಯ ತರಿದು ಶೀಘ್ರದಿ _ ಪೊರೆಯುತಿಪ್ಪರು7 ಎತ್ತಿನ್ವೇಷದಿ _ ವಾತದೇವನ ಪ್ರೀತಿ ಪಡೆದು _ ಖ್ಯಾತಿಆದರು ಮತ್ತೆ ಯತಿಯಾಗಿ _ ಕೀರ್ತಿಯಿಂದಲಿ ಬಿತ್ತರಿಸಿದರು, ತತ್ತ್ವಶಾಸ್ತ್ರವ 8 ಕಾಗಿನೀನದೀ _ ತೀರವಾಸರು ವಿಗತರಾಗರು _ ನಿತ್ಯತೃಪ್ತರು ಜಾಗರೂಕದಿ _ ಪೊಗಳಿ ಪಾಡಲು ನಿಗಮವೇದ್ಯನು _ ಬೇಗ ಪೊರೆಯುವ 9 ಶೇಷಾವೇಷದಿ _ ವಾಸಿಸುವರು ಶೇಷಶಯನನ _ ದಾಸರೀವರು ಬೆಸರಿಲ್ಲದೆ _ ಆಸೆ ತೊರೆದು ದಾಸನೆನ್ನಲು _ ಪೋಷಿಸೂವರು 10 ಕೆರೆಯ ಏರಿಯು _ ಬಿರಿದು ಪೋಗಲು ಮೊರೆಯ ಇಟ್ಟರು _ ಇವರ ಅಡಿಗೆ ಭರದಿ ಕರುಣದಿ ಹರಿಯ ಸ್ತುತಿಸಿ ಕರದಿ ಮುಟ್ಟಲು _ ಏರಿ ನಿಂತಿತು 11 ಯರಗೋಳದ _ ಗುಹೆಯ ಒಳಗೆ ಮರುತದೇವನ _ ಕರುಣದಿಂದಲಿ ಪರಿಪರಿಯಲಿ _ ಬರೆದು ಟೀಕೆಯ ಕರೆದು ಸುರಿದರು _ ತತ್ತ್ವಕ್ಷೀರವ 12 ಇವರ ನಾಮವು _ ವಿಜಯ ಸೂಚಕ ಇವರ ಕೀರ್ತನೆ _ ಭವಕೆ ಔಷಧ ಇವರ ಕರುಣದಿ _ ಅನಿಲನೊಲಿವನು ಇವರ ಶಿಷ್ಯರೇ _ ಅವನಿಶ್ರೇಷ್ಠರು 13 ಸರ್ವಕ್ಷೇತ್ರದ _ ಯಾತ್ರೆಯಾ ಫಲ ಸರ್ವದಾನವ _ ಮಾಡಿದ ಫಲ ಇವರ ಪಾದವ _ ನಂಬಿ ಭಜಿಸಲು ತವಕದಿಂದಲಿ _ ತಾನೇ ಬರುವುದು 14 ಜಯತೀರ್ಥರ _ ಹೃದಯವಾಸಿಯು ವಾಯುಹೃದಯಗ _ ಕೃಷ್ಣವಿಠ್ಠಲನು ದಯದಿ ನುಡಿಸಿದಾ _ ಪರಿಯು ಪೇಳಿದೆ ಜೀಯ ಕೃಷ್ಣನೆ _ ಸಾಕ್ಷಿ ಇದಕ್ಕೆ15
--------------
ಕೃಷ್ಣವಿಠಲದಾಸರು
ನಂಬಿಗೆಯೆ ಕಾರಣವು ತಿಳಿಯೊ ಇದ ನುಂಬದೇ ಹಸಿವಲ್ಲೊ ಚೀ ಮಂಕುಮರುಳೇ ಪ ಜಂಭವÀನರಡಿದ ವಿಶ್ವಂಭರನು ಮೂಢಾ 1 ಅಲ್ಲವೆಂದೆನಿಸದೆ ನಿಲ್ಲು ಗುರುಪಾದ ಬಲ್ಲ ಬೆಡಗಿನ ಬೆಳಕು ಅಲ್ಲಿ ಕಾಣುವೆ 2 ಅರಮನೆಯೊಳಿರುತಿಹ ವುರುಗನನು ತೋರಿದಾ ಪರಮಗುರು ಶ್ರೀ ತುಳಶಿರಾಮದಾಸನನು ಯೀತ 3
--------------
ಚನ್ನಪಟ್ಟಣದ ಅಹೋಬಲದಾಸರು