ಒಟ್ಟು 428 ಕಡೆಗಳಲ್ಲಿ , 82 ದಾಸರು , 363 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿದಿನ ಇಂಥ ಹರಿದಿನ ಪ.ಹರಿದಿನದ ಮಹಿಮೆ ಹೊಗಳಲಗಾಧಪರಮಭಾಗವತರಾಚರಣೆಗಾಹ್ಲಾದÀದುರಿತದುಷ್ಕøತ ಪರ್ವತಕೆ ವಜ್ರವಾದಮರುತ ಸದ್ವ್ವ್ರತಕೆಲ್ಲ ಶಿರೋರತ್ನವಾದ ಅ.ಪ.ಭಕ್ತಿಗೆ ಮೊದಲು ವಿರಕ್ತಿ ಬೀಜವೆಂಬಸಕಲ ತಪದೊಳೆಲ್ಲ ಮೇಲೆನಿಸಿಕೊಂಬಮಖಕೋಟಿಗಧಿಕ ಫಲಸ್ಥಿರ ಸ್ತಂಭಮುಕ್ತಿ ಸೋಪಾನ ನಿಧಾನತ್ವವೆಂಬ 1ತ್ವಕ್ ಚರ್ಮ ಅಸ್ತಿ ಮಜ್ಜ ಮಾಂಸರುಧಿರಯುಕ್ತ ಸಪ್ತ ಧಾತುಗಳಿಹ ಶರೀರನಖಕೇಶ ಕಫ ಸ್ವೇದ ಮಲ ಮೂತ್ರಾಗರ ಈನಿಖಿಳಪಾವನ ಮಾಡುವ ನಿರಾಹಾರ2ವರವಿಪ್ರಕ್ಷತ್ರಿಯ ವೈಶ್ಯ ಶೂದ್ರ ಜನರುತರಳಯೌವನ ವೃದ್ಧ ನಾರಿಯರುಕಿರಾತಪುಲತ್ಸ್ಯಾಂದ್ರ ಹೂಣ ಜಾತಿಯವರುಹರಿವ್ರತ ಮಾತ್ರದಿ ಮುಕ್ತಿಯೈದುವರು 3ದ್ವಿಜಗೋವಧ ನೃಪರನು ಕೊಂದ ಪಾಪನಿಜಗುರು ಸತಿಯರ ಸಂಗದ ಪಾಪಅಜಲಪಾನದ ದಿನದುಂಡ ಮಹಾಪಾಪನಿಜನಾಶ ಮೋಕ್ಷ ಪ್ರಾಪ್ತಿಯು ಸತ್ಯಾಲಾಪ 4ಯಾಮಿನಿಯಲಿ ಅನಿಮಿಷದ ಜಾಗರವುಶ್ರೀ ಮದ್ಭಾಗವತ ಶ್ರವಣ ಗೀತಾಪಠಣಪ್ರೇಮವಾರಿಧಿಲಿ ಮುಳುಗಿ ಸಂಕೀರ್ತನೆಯುಧಾಮತ್ರಯದ ಸುಖಕಿದೇ ಕಾರಣವು 5ಅರ್ಧಕೋಟಿ ತೀರ್ಥಸ್ನಾನವೆಲ್ಲ ಅಜಸ್ರಪ್ರಯಾಗ ಕಾಶಿವಾಸವೆಲ್ಲ ಸಹಸ್ರ ಕೋಟಿ ಭೂಪ್ರದಕ್ಷಿಣೆಯೆಲ್ಲಸುಶ್ರದ್ಧೆ ಸಹ ಜಾಗರಕೆ ಸರಿಯಲ್ಲ 6ಪಂಚಮಹಾ ಪಾಪ ಪ್ರಪಾಪವವಗೆವಂಚಕ ಪಿಶುನ ಜನರ ಪಾಪವವಗೆಮಿಂಚುವ ಕ್ಷೇತ್ರವಳಿ ಪಾಪವವಗೆಪಂಚಕವ್ರತ ಪೆತ್ತ ವ್ರತ ಉಲ್ಲಂಘಿಪಗೆ 7ಸರ್ಪಶಯನಗೆ ನೀರಾಜನವೆತ್ತಿ ನೋಡಿಉಪವಾಸದಿ ಭಗವಜ್ಜನ ನೃತ್ಯವಾಡಿಚಪ್ಪಾಳಿಕ್ಕುತ ದಂಡಿಗೆ ಮುಟ್ಟಿ ಪಾಡಿತಪ್ಪೆ ನಾಯಿ ನರಕ ಫಲ ಕೈಗೂಡಿ 8ಶ್ರುತಿಪಂಚರಾತ್ರಾಗಮವು ಸಾರುತಿವೆಯತಿ ಮಧ್ವರಾಯರುಕುತಿ ಪೇಳುತಿವೆಕ್ರತುಪ್ರಸನ್ವೆಂಕಟ ಕೃಷ್ಣ ಮತವೆಕ್ಷಿತಿಪತಿ ಸುರರತಿಶಯದ ಸದ್ವ್ವ್ರತವೆ 9
--------------
ಪ್ರಸನ್ನವೆಂಕಟದಾಸರು
ಹರಿಯೆ ನೀನಲ್ಲದಾರ ಕಾಣೆ ಕಾಯ್ವರಮರೆ ಹೊಕ್ಕವರ ಭಯ ಪರಿಹಾರವನು ಮಾಡಿ ಪಶಿವಭಕ್ತಾಗ್ರಣಿ ಬಾಹ್ರ್ಯದ್ರಥ ಗಂಜಾಲೆಮಜಾ ನಿ- |ನ್ನವನಿಂದಳಿಸಿದೆ, ಬಾಣನ ಬಾಗಿಲೂ ||ಭವಕಾಯ್ದಿರಲು ನೀ ತೋಳ್ಗಳನು ಛೇದಿಸುವಾಗ |ಲವಮಾತ್ರ ಪ್ರತಿಕೂಲನಾಗಲಿಲ್ಲ ಶಂಕರನು 1ಹರಿಯೆಂದುದಕೆ ತಾಳದಲೆ ಬಾಧಿಸುತಲಿರೆ |ತರಳನ ಮೊರೆಕೇಳಿಕಂಭದಿಂದ ||ಉರಿಯುಗುಳುತ ಬಂದು ಖಳನುದರವ ಬಗೆದು |ಶರಣ ಪಾಲಕನೆಂಬ ಬಿರುದು ದಕ್ಕಿಸಿಕೊಂಡೆ 2ಸ್ಥಾಣುವಿನವರಬಲದಿಂದಮರರ ಕಾಡೆ |ದಾನವಾನ್ವಯ ಕೊಂದೆ ಭಸ್ಮಾಸು- ||ರನು ಪಾಣಿಯ ತಲೆಯೊಳಿಡುವೆನೆಂಬೊ ಭರದಿ ಬರಲು |ಪ್ರಾಣೇಶ ವಿಠಲ ನೀ ಶಂಕರನನುಳುಹಿದಿ 3
--------------
ಪ್ರಾಣೇಶದಾಸರು
ಹೆಣ್ಣ ನಿಚ್ಛಿಸುವರೆ ಮೂಢ - ಇದನುಕಣ್ಣು - ಮೈ ಮನಗಳಿಂಗಳಿಂ ಸೋಂಕಲು ಬೇಡ ಪ.ತಾಯಾಗಿ ಮೊದಲು ಪಡೆದಿಹುದು - ಮತ್ತೆಬಾಯಯೆಂದನಿಸಿ ಕಾಮದಿ ಕೆಡಹುವುದುಕಾಯದಿ ಜನಿಸುತ ಬಹುದು - ಇಂತುಮಾಯೆಯು ನಿನ್ನ ಬಹು ವಿಧದಿ ಕಾಡುವುದು 1ಹಿತ ಶತ್ರುವಾಗಿ ಹೊಂದುವುದು - ನಿಮಿಷರತಿಗೊಟ್ಟುನಿತ್ಯ ಮುಕ್ತಿಯ ಸೆಳೆಯುವುದುಕ್ಷಿತಿಯ ಪೂಜ್ಯತೆ ಕೆಡಿಸುವುದು - ಮುಂದೆಶತಜನ್ಮಗಳಿಗೆ ಹೊಣೆಯಾಗಿ ನಿಲ್ಲುವುದು2ಬಗೆಯದು ತನುವೆಲುವುನರ - ಖಂಡ - ಅದರೊಳಗೆ ವಾಯುರಂದ್ರ ಕಿಸುಕುಳದ ಉದ್ಧಂಡಭಗವೆಂಬುದು ಮೂತ್ರದಭಾಂಡ - ಆದನೊಗಡಿಸದೆ ನಿಜಸುಖವಿಲ್ಲಕಂಡೆಯ3ವಶನಾದ ವಾಲಿಯ ಕೊಲಿಸಿಹುದು - ಹೀಗೆಹೆಸರು ಮಾತ್ರದಿ ದಶಶಿರನಳಿದಿಹುದುಶಶಿಯಂಗದಲಿ ಕ್ಷಯವಿಹುದು - ಹೀಗೆಹೆಸರು ಪಡೆದ ಕೀಚಕನನಳಿದಿಹುದು 4ಪಶುಪತಿಯ ದೆಸೆಗೆಡಿಸಿಹುದು - ಹೀಗೆವಸುಧೆಯೊಳ ಜೀವರ ಹಸಗೆಡಿಸಿಹುದುವಸುಧೇಶನ ನಾಮ ಮರೆಸುವುದು - ನಮ್ಮಅಸಮ ಪುರಂದರವಿಠಲನ ತೊರೆಸುವುದು 5
--------------
ಪುರಂದರದಾಸರು