ಒಟ್ಟು 460 ಕಡೆಗಳಲ್ಲಿ , 78 ದಾಸರು , 402 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಕ್ಕೋಟ ದ್ವಾದಶಿಯ ದಿವಸ(ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ)ವ್ರತತಿಯಧಿಪನಂತೆ ನೀರೆ ತೋರ್ಪಅತಿಶಯಾಗಮ ಬಗೆ ಬ್ಯಾರೆ ರತ್ನದ್ಯುತಿಯಾಭರಣವ ಶೃಂಗಾರ ಆಹಾಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ-ಗತಿಸ್ಮøತಿತತಿಗಳ ಮತಿಗಗೋಚರನಂತೆ1ಲೋಲಲೋಚನನ ನಾಟಕ ಸತ್ಕಥನವಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿಬಾಲಾರ್ಕಸದೃಶನೀತನು ಇರ್ಪನಲ್ಲಿನೀಲನಿಭಾಂಗನು ನೆನೆವರ ಪಾಪವಘೋಲುಘಡಿಸಲೆಂದೆನುತಲಿಭಾರ್ಗವಕೋಲಿಂದೆಸಗಿದ ಧರಣಿಗೆ ಬಂದು ಸ-ಲೀಲೆಗಳೆಸಗುವ ಜಾಲವಿದೆಲ್ಲ 2ಸರಸಿಜಗಂಧಿ ಕೇಳ್ ದಿಟದಿ ತನ್ನಅರಮನೆಯಿಂದ ಸದ್ವಿಧದಿ ಈರ್ವ-ರರಸಿಯರ್ ಸಹಿತ ಮಿನಿಯದಿ ಅತಿಭರದಿಂದ ಸೂರ್ಯನುದಯದಿ ಆಹಾಉರುತರ ಹೇಮಪಲ್ಲಂಕಿಯೊಳಡರಿತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ 3ಬದ್ಧನೀ ಪೇಳ್ದ ಮನದ ಶಂಕಾವ್ರಾತತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳುಶುದ್ಧ ದ್ವಾದಶಿಸೂರ್ಯಉದಯ ಕಾಲದೊಳುಭದ್ರಭವನವನು ಪೊರಟು ವಿನೋದದಿಅದ್ರಿಧರನು ಸಜ್ಜನರೊಡಗೂಡಿ ಉ-ಪದ್ರಿತ ಪಾಪವ ಛಿದ್ರಿಪ ಸ್ನಾನಕೆರೌದ್ರಿತ ರಾಮಸಮುದ್ರದ ಬಳಿಗೆ 4ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿಪರಮಮಹಿಮೆನೆಂದ ಮೇರೆಗೆ ಘನ-ತರ ಸ್ನಾನವೇನಿದು ಕಡೆಗೆ ವೃತದಿರವೋ ಉತ್ಸವವೋ ಪೇಳೆನಗೆ ಆಹಾತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈಪರಿಗಳ ಸಾಂಗದಿಂದರುಹಬೇಕೆನಗಿನ್ನು 5ಸಕಲಾಂತರ್ಯಾತ್ಮನೀತನು ಸತ್ಯಶೀಲೆ-ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿಭಕುತವತ್ಸಲನು ಉತ್ಸವಿಸುವನಲ್ಲಿವಿಕಳಹೃದಯ ನರನಿಕರಕಸಾಧ್ಯವೆಂದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿಅಖಿಳೋತ್ಸವ ಮಸ್ತಕಕಿದುವೆಗ್ಗಳಮುಕುಟೋತ್ಸವವೆಂದೆನುತಲಿ ರಚಿಸುವ 6ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನವೊಲವಿಂದ ಗೈದ ಮೇಲಿವನು ತನ್ನರಮಣಿಯರ್ಸಹಿತಂದಣವನು ಏರಿನಿಲುನಿಲುತ್ಯಾಕೆ ಬರುವನು ಆಹಾಪೊಳಲೊಳಗಿಹ ಜನನಿಳಯದ ದ್ವಾರದಿಕಳಕಳವೇನಿದ ತಿಳುಪೆನಗೀ ಹದ 7ಮಿಂದು ತೋಷದಿ ಅಂದಣವನ್ನೇರಿ ತಾನುಇಂದೀ ಪುರದೊಳಿರ್ಪ ಜನರ ದೋಷಗಳಕುಂದಿಸಲೆಂದವರವರ ದ್ವಾರದೊಳುನಿಂದಿರುತಲ್ಲಿಯದಲ್ಲಿ ಆರತಿಗಳಚಂದದಿ ಕೊಳುತೊಲವಿಂದಕಾಣಿಕೆಜನ-ವೃಂದದಿ ಕೊಡುತಾನಂದ ಸೌಭಾಗ್ಯವಒಂದಕನಂತವ ಹೊಂದಿಸಿ ಕೊಡುವ 8ರಂಭೆ : ಸರಸಿಜಾನನೆ ಮತ್ತೇನಿದನು ತನ್ನಅರಮನೆಯಲ್ಲಿ ಭೂದ್ವಿಜನರನು ಸರ್ವಪುರಜನ ಸಹಿತೊಳಗಿವನು ನಾನಾತರದಿ ಮೆರೆವ ಭೋಜನವನು ಆಹಾ-ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ-ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9ಗಂಗಾಜನಕತನ್ನ ಗೃಹದಿ ವಿಪ್ರರನುಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿಸಂಗಾತದಲಿ ಆರೋಗಣೆ ಗೈದು ಮೆರೆಸಿಅಂಗಣದಲಿ ರಾತ್ರೆಯಲಿ ವಿನೋದದಿಕಂಗೊಳಿಸುವ ಉರಿದರಳ ಸಮೂಹಕೆರಂಗಪೂಜೆಯನುತ್ತಂಗವಿಸುವ ನಿಗ-ಮಂಗಳೊಡೆಯನು ವಿಹಂಗಮಾರೂಢ 10ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ-ಕುಮುದಾಪ್ತ ಠಾವಿನ ವೋಲು ಬಂದುಆದರಿಸಲಿದರ ಮಧ್ಯದೊಳು ತನ್ನರಮಣಿಯರ್ ಸಹಿತ ತೋಷದೊಳು ಆಹಾವಿಮಲವನ್ನೇರಿನ್ನೆಲ್ಲಿಗೈದುವನೆಂಬಾ-ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆಚಾರುಈ ಹೂವಿನ ತೇರನೇರುತಲಿಕೇರಿ ಕೇರಿಯೊಳಾರತಿಗೊಳ್ಳುತಲಿಭೋರಿಡುತಿಹ ವಾದ್ಯಧ್ವನಿ ಘನತರಭೇರಿಮೃದಂಗಾದ್ಯಖಿಳ ವಿನೋದದಿಸ್ವಾರಿಗೆ ತೆರಳುವ ಕ್ರೂರ ನರರ ಆ-ಘೋರಪಾಪ ಜರ್ಝರಿಸಲೆಂದು12ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನಅರಮನೆಯಿದಿರು ರಥವನು ತಾನುಭರದೊಳಗಿಳಿದಂದಣವನು ಏರಿಮೆರೆವಾಲಯದ ಸುತ್ತುಗಳನು ಆಹಾತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ-ಭರಿತ ಗಾಯನಭೇರಿಧ್ವನಿಗಳೇನಿದ ಪೇಳೆ13ದುಷ್ಟಮರ್ದನ ರಥವಿಳಿವುತ್ತಲಾಗೇಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆಅಷ್ಟಾವಧಾನವ ರಚಿಸುತ್ತ ಕಡೆಗೆಶ್ರೇಷ್ಠನು ರತ್ನಾಸನದಿ ಗ್ರಹದಿಪರಮೇಷ್ಟಜನಕೆ ಸಂತೋಷಾನಂದದಿಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತಇಷ್ಟವನೀವ ಯಥೇಷ್ಟ ದಯಾಬ್ಧ 14ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನುಹರಿಏಕರೂಪನೆನ್ನುತಲಿ ಲಕ್ಷ್ಮೀಕರವೆನಿಸುವ ಕಾರ್ಕಳದಲಿ ಭಾಗ್ಯೋ-ದಯ ದೇವಾಲಯದ ಮಧ್ಯದಲಿ ಆಹಾತ್ವರಿತದಿ ನುತಿಸಿರೊಗುರುನಾರಸಿಂಹ ಶ್ರೀ-ಕರವೆಂಕಟೇಶನ ಚರಣಕಮಲಗಳ15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮುಳುಗಿದನುಯೋಗಿಮುಳುಗಿದನುಒಳ್ಳೆ ಬಲಹುಳ್ಳ ನಾದ ಸಮುದ್ರ ಮಧ್ಯದಿಯೋಗಿಪಸತಿಮೂವರ ಸಮನಿಸಲಾರದೆಪಿತರೀರ್ವರ ಕರಕರೆಯನುನೀಗಿಸುತರೈವರೆನಿಪರು ಮಾತು ಕೇಳದಿರೆಮತಿಯೇನು ಹೇಳಲಿ ಎಲ್ಲ ಸಂಗವ ಬಿಟ್ಟು1ಜೇಷ್ಟರಾರುವರ ಕಾಟವ ತಾಳದೆದುಷ್ಟನಾದಿನಿಯ ನಾಲ್ವರ ತೊರೆದುಅಷ್ಟಮಾತುಳರಪ್ರಯೋಜಕವೆಂದುಕಷ್ಟರಿವರು ಎಂದು ಮನವ ಭೀತಿಯ ಬಿಟ್ಟು2ಇಂತು ಎಲ್ಲವ ಬಿಟ್ಟು ಚಿಂತಕ ತಾನಾಗಿಭ್ರಾಂತು ಎಳ್ಳಿನಿತು ಒಬ್ಬರೊಳಿಲ್ಲದೆಚಿಂತಕನು ಚಿದಾನಂದ ಮೂರುತಿಯನುಅಂತು ಬಲಿದು ಎನ್ನ ದೇಹ ಮರೆವಗಿಳಿ3
--------------
ಚಿದಾನಂದ ಅವಧೂತರು
ಯಮ ತನ್ನ ಪುರದಿ ಸಾರಿದನು ನಮ್ಮಕಮಲನಾಭನ ದಾಸರ ಮುಟ್ಟದಿರಿ ಎಂದು ಪ.ಭುಜದಲೊಪ್ಪುವ ಶಂಖ ಚಕ್ರ ಮುದ್ರಾಂಕಿತನಿಜ ದ್ವಾದಶನಾಮ ಧರಿಸಿಪ್ಪರ ||ತ್ರಿಜಗವಂದಿತಳಾದ ತುಳಸೀ ಮಾಲಿಕೆಯುಳ್ಳಸುಜನರ ಕೆಣಕದೆ ಸುಮ್ಮನೆ ಬನ್ನಿರೊ ಎಂದು 1ತಾಳದಂಡಿಗೆ ಗೀತವಾದ್ಯ ಸಮ್ಮೇಳದಿಊಳಿಗವನು ಮಾಳ್ಪ ಹರಿದಾಸರ ||ಕೇಳಿದೊಡನೆ ಕರವೆತ್ತಿ ಮುಗಿದು ಯಮನಾಳುಗಳೆಂದು ಹೇಳದೆ ಬನ್ನಿರೊ ಎಂದು 2ಹೆಮ್ಮೆಯ ಸಿಡಿಯೇರಿ ಬೇವಿನುಡುಗೆಯುಟ್ಟುಚಿಮ್ಮುತ ಚೀರುತ ಬೊಬ್ಬೆಯಿಟ್ಟುಕರ್ಮಕೆ ಗುರಿಯಾಗಿ ಪ್ರಾಣಹಿಂಸೆಯ ಮಾಳ್ಪಬ್ರಹ್ಮೇತಿಕಾರನೆಳತನ್ನಿರೋ ಎಂದು 3ಮಾತಾಪಿತರ ದುರ್ಮತಿಯಿಂದ ಬೈವರಪಾತಕಿಗಳ ಪರದ್ರೋಹಿಗಳನೀತಿಯಿಲ್ಲದೆ ವಿಮೋಹಿಸಿದವರ ಬಾಯೊಳುಒತ್ತಿ ಸೀಸವ ಕಾಸಿ ಹೊಯ್ದು ಕೊಲ್ಲಿರಿ ಎಂದು 4ನರರ ಹಾಡಿ ಪಾಡಿ ನರರ ಕೊಂಡಾಡುವನರಕಿಗಳ ಕೀಳುನಾಯ್ಗಳ ಮನ್ನಿಸುವದುರುಳ ಜಾÕನಿಜನರನೆಳೆತಂದು ಬಾಯೊಳುಅರಗನೆ ಕಾಯಿಸಿ ಹೊಯ್ದು ಕೊಲ್ಲಿರಿ ಎಂದು 5ಕೇಶವಹರಿ ಎಂಬ ದಾಸರ ಹೃದಯದಿವಾಸವಾಗಿಹಸಿರಿ ತಿರುಮಲೇಶದಾಸರ ದಾಸರ ದಾಸನೆನಿಪಹರಿದಾಸರನ್ನು ಕೆಣಕದೆ ಬನ್ನಿರೋ ಎಂದು 6ಅನ್ಯಮಂತ್ರವ ಬಿಟ್ಟು ದೈವಮಂತ್ರವ ಭಜಿಸಿಪನ್ನಗಶಯನನೆ ಗತಿಯೆನ್ನುತತನ್ನ ಭಕ್ತರ ಕಾಯ್ವ ಪುರಂದರವಿಠಲನಉನ್ನತದಲಿ ನಮಸ್ಕರಿಸಿ ಬನ್ನಿರೊ ಎಂದು 7
--------------
ಪುರಂದರದಾಸರು
ಯಾಕೆ ಕೈ ಬಿಡುವೆ ದೇವಾ |ತ್ರಿಜಗವನು ಸಾಕುವ ನೀನಭವ ||ಏಕೋ ಮೂರುತಿ ಶ್ರೀ ವೆಂಕಟಪತಿನಿನಗೆ ನಾ ಬೇಕಾದವನಲ್ಲವೆ ಸ್ವಾಮಿಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಬಾಲನ ಪತಿಕರಿಸಿ ಹಿರಣ್ಯಕನ | ಸೀಳಿ ರಕ್ಷಿಸಿದಂತೆ |ಶ್ರೀ ಲೋಲಾ ಗತಿಯೆಂಬೆ ||ಬ್ರಹ್ಮಸುತನಿಗೆಪಾಲನಮುದ್ರೆಯನಿತ್ತೆ ಸ್ವಾಮಿ |ಸಭೆಯೊಳು ದ್ರೌಪದಿ ಸ್ತುತಿಸೆ ನಿನ್ನ | ಅಭಿಮಾನ ಕಾಯ್ದೆ |ಗಂಡಇಭನಕ್ರನೊಳ .....................................ಧ್ರುವ ಅಂಬರೀಷಅಂಗದವಿಭೀಷಣ |ಪವನಜರುಕ್ಮಾಂಗದ |ಅವರಪಾಲಿಸಿದಂತೆ ರಕ್ಷಿಸು ಬಿಡದೆ ಎನ್ನ ||ಭವಹರಾ ಶ್ರೀ ಶಂಕರನಾತ್ಮಸಖಾ ||
--------------
ಜಕ್ಕಪ್ಪಯ್ಯನವರು
ರಂಗ ಕೊಳಲನೂದಲಾಗ |ಮಂಗಳಮಯವಾಯ್ತುಧರೆ-ಜ -ಪನಂಗಳು ಚೈತನ್ಯ ಮರೆದು |ರಂಗಧ್ಯಾನಪರರಾದರು ಅ.ಪಬಾಡಿದ ಮಾಮರಗಳು ಗೊನೆಯೊಡೆದವು |ತೀಡುತ ಮಾರುತ ಮಂದಗತಿಗೊಯ್ಯೆ ||ಬಾಡಿದ ಬರಲು ಫಲದ ಗೊಂಚಲು |ಪಾಡಲೊಲ್ಲವಳಿಕುಲಗಳು ||ಹೇಡಿಗೊಂಡವು ಜಕ್ಕವಕ್ಕಿ ಗಿಳಿ ಮಾ-|ತಾಡದೆ ಕಳೆಗುಂದಿದವು ಕೋಗಿಲೆ ||ಓಡಾಟ ವೈರಾಟ ಬಿಟ್ಟು ಖಗಮೃಗ |ಗಾಢ ನಿದ್ರಾವಶವಾದವು 1ಕೆಳಗಿನುದಕ ಉಬ್ಬೇರಿ ಬಂದುವು |ತುಳುಕಿ ಚೆಲ್ಲಾಡಿ ನಿಂದಳು ಯಮುನೆ ||ಮಳೆಯ ಮೋಡೊಡ್ಡಿ ಮೇಘಾಳಿ ಧಾರಿಟ್ಟುವು |ಕಲುಕರಗಿ ಕರಗಿ ನೀರಾದುವು ||ನಳಿನಚಂಪಕನಾಗಪುನ್ನಾಗಪಾ-|ಟಲ ಸೇವಂತಿಗೆ ಕುಂದ-ಮೊಲ್ಲೆ ಮಲ್ಲಿಗೆ ಬ-||ಕುಲ ಮಾಲತಿ ಜಾಜಿ ಪರಿಮಳಗೂಡಿ |ನೀಲಾಂಗನಂಘ್ರಿಗೆ ನೆರೆದುವು 2ಕೆಚ್ಚಲು ಬಿಗಿದು ತೊರೆದ ಮೊಲೆಯೊಳು |ವತ್ಸದೊಡಲಾಸೆಜರಿದುಎಳೆಹಲ್ಲ||ಕಚ್ಚದಲ್ಲಿಗಲ್ಲಿ ನಿಂದುವು ತಮ್ಮಯ |ಪುಚ್ಚವ ನೆಗಹಿ ನೀಂಟಿಸಿ ||ಅಚ್ಯುತನಾಕೃತಿ ನೋಡಲು ಸುರರಿಗೆ |ಅಚ್ಚರಿಯಾಯಿತು ಆವು ಕಂಡಾನಂದ ||ಪೆಚ್ಚಿ ಮುಕುಂದನ ಲೀಲಾವಿನೋದಕೆ |ಮೆಚ್ಚಿ ಕುಸುಮವ ಸುರಿದರು 3ಮುದ್ದು ಮೋಹನನ ಮಂಜುಳ ಸಂಗೀತ |ಸದ್ದನಾಲಿಸಿ ಗೋಪಾಂಗನೆಯರೆಲ್ಲ ||ಬುದ್ಧಿ ಸೂರಾಡಿ ತಮ್ಮಾಲಯವನೆ ಬಿಟ್ಟು |ಎದ್ದು ಪರವಶರಾದರು ||ಸಿದ್ದ ಮುನಿಜನರಿದ್ದ ಸಮಾಧಿಯಿಂ-|ದೆದ್ದೆದ್ದು ಕುಣಿದೆದ್ದರು ಎದುರಾಗಿ ||ಗದ್ದುಗೆಯರಸನ ಒಲಿಸಿಕೊಂಡರು |ಗೆದ್ದರು ಭವದ ಸಮುದ್ರವನು 4ಶ್ರೀಮನೋಹರ ಗೋಪಾಲ ಮೂರುತಿ |ಆ ಮಧು ಕುಂಜ ವನದಿ ತ್ರಿಭಂಗಿಯಲಿ ||ಹೇಮಾಂಬರವುಟ್ಟು ಗೀರುಗಂಧ ಕಸ್ತೂರಿ |ನಾಮ ಮುಕುಟದ ಬೆಳಕಿನಲಿ ||ದಾಮವನಮಾಲೆ ಶ್ರೀವತ್ಸಕೌಸ್ತುಭ|ಸ್ವಾಮಿ ಪುರಂದರವಿಠಲರಾಯನ |ರಾಮಶ್ರಿ-ಗುಂಡಶ್ರಿ ಮೇಘರಂಜನೆ ಪಾಡಿ |ಸಾಮಗಾನಪ್ರಿಯ ನಮೊ ಎಂದರು 5
--------------
ಪುರಂದರದಾಸರು
ರಂಗ ನೀ ಎನ್ನೊಡೆಯನಾಗಿ ಅಮಂಗಳಾತ್ಮರ ಮನೆಗೆ ಹೋಗ್ಯೆನ್ನಿಂಗಿತವನುಸುರಿದರೆ ಕುಂದಿನ್ನಾರಿಗೆಲೆ ತಂದೆ ಪ.ಹಂಚಿನೆದುರಲಿ ಹಲ್ಲು ತೆರೆದರೆಮಿಂಚುಕನ್ನಡಿಯಾಗಬಲ್ಲದೆವಂಚಕರ ಅನುಸರಿಸಿ ಒಡಲಾಸೆಯಲಿ ಬಳಲಿದರೆಕಿಂಚಿದಭಿಮಾನಿಲ್ಲೆ ನಿನಗೆ ಪ್ರಪಂಚ ಸೂತ್ರಿ ಮುರಾರಿ ಎನ್ನಯಸಂಚಿತಾರಬ್ಧಾಗಮವ ನೂಕುವರು ದಾರುಂಟೈ 1ಅರಸು ಮುಟ್ಟಿದ ನಾರಿ ಮಾನ್ಯಳುಪರಸುಹೊಂದಿದ ಲೋಹ ಪ್ರಿಯಪರಮಪುರುಷ ನಿನ್ನವನೆನಿಸಿ ಕ್ಷುದ್ರರ ವಶವ ಮಾಡುವರೆಅರಿದುದಾವುದಘಟಿತಘಟಕನೆಶಿರಿವಿರಿಂಚಿ ಶಿವೇಂದ್ರರೊಡೆಯನೆಪರಮಪಾತಕಿಯಾದರೇನ್ಮ್ಮುದ್ರಾಂಕಿತನು ಕಾಣೈ ರಂಗ2ಮಧ್ವರಗಣನೆ ನಿನ್ನ ಶರಣರುಒದ್ದು ಭವಸಾಗರವ ದಾಟಿದರುದ್ಧಟರು ನಾಕೇಳಿಕಕುಲತೆಯಿಂದ ಮೊರೆ ಹೋಗುವೆಅದ್ದು ವಿಷದೊಳಗೆ ಸುಧೆಯೊಳುಅದ್ದು ನಿನ್ನ ನಂಬಿದವನು ನಾಶುದ್ಧ ಭಟಜನಪಾಲ ಪ್ರಸನ್ವೆಂಕಟಾದ್ರೀಶ 3
--------------
ಪ್ರಸನ್ನವೆಂಕಟದಾಸರು
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು
ರಾಘವನಾಡಿದ ಮಾತಿಗಾಂಜನೇಯ ಬಿನ್ನವಿಸುವದು |ಈಗ ಪೇಳುವೆ ಸಜ್ಜನರಾಲಿಸುವದು ಪಆ ರವಿನಂದನನು ತಾ ಮೇರೆ ಮಾಡಿ ಅಟ್ಟಿದನು |ವಾನರರುಗಳನು ತಿಂಗಳು ಮೀರಿತಿಂದಿಗೆ ||ಮಾರುತಿ ಕೇಳೀ ಮಾತು ಇನ್ನಾರ ಕಾಣೆ ಬಲ್ಲಿದರ |ನಾರಿಯೆಲ್ಲಿಹಳೋ ವಾರ್ತೆ ತಾರೋ ನೀ ಪೋಗಿ 1ಸ್ವಾಮಿ ಪಾಲಿಸೊ ಅಪ್ಪಣೆ ನಾ ಮುಂಚೆ ಪೋಗುವೆ |ತಡವ ಮಾಡದೆ ಎಲ್ಲೀಗೆನ್ನ ಭೂಮಿಜಾ ರಮಣ ||ಈ ಮುದ್ರೆ ಕೊಂಡು ಪೋಗೋ ಶಾಮಲಾಪತಿ ದಿಕ್ಕಿಗೆ |ಸಮುದ್ರ ದಾಟಿ ವೇಗಪಾವಮಾನಿಕೇಳೋ 2ಭೂತಲಾಕಾಶ ಲೋಕಾದಿ ಪಾತಾಳದೊಳಗಿರಲಿ |ನಾ ತರುವೇನು ವಾರ್ತೆ ಜಗನ್ನಾಥಪರಾಕು||ಹೇತರಳತ್ರಿಲೋಕ ವಿಖ್ಯಾತನಾಗಿಹ ರಾವಣ |ಪಾತಕಕೊಂಡು ಪೋಗಿಹ ಸೀತೆಯ ಕೇಳು 3ಬುದ್ಧಿದೇವ ನೀ ಕೊಟ್ಟಂಥ ಬುದ್ಧಿಯಿಂದಲೇ ಅವನ |ಗುದ್ದಿ ಸರ್ವ ಬಲವನ್ನೂ ಒದ್ದು ಬರುವೆನೊ ||ಮುದ್ದು ಕಂದ ರಕ್ಕಸರವಧ್ಯರೋವರಪಡೆದು |ರುದ್ರನಿಂದ ಮಾಡದಿರೊ ಗದ್ದಲ ಕೇಳೋ 4ತಂದೆ ರಾಮಾ ನಿನ್ನ ದಯೆಯಿಂದ ಈಡಲ್ಲವೊ ಯನಗೆ |ನಂದಿಧ್ವಜಾ ಈ ರಕ್ಕಸರೊಂದು ತೃಣವೋ ||ಕಂದ ಈ ವೇಳೆಯೊಳೇನು ಬಂದುದನು ಭೋಗಿಸಿ ನಾನು |ಕೊಂದು ಹಾಕುವ ದಿನವೂ ಮುಂದುಂಟು ಕೇಳೋ5ದೇವಿಯ ನೋಡಿ ಬರುವಾಗ ತಾವಂತು ಕೆಣಕಲು ದಾ- |ನವರು ಸುಮ್ಮನಿರಲೇನು ದೇವದೇವೇಶ ||ಕೋವಿದಾಗ್ರೇಶನೆ ನೀನು ಸಾವಿರಾಳಿಗೆ ಒಬ್ಬನೇ |ಆ ವಿಚಾರ ಮನಕೆ ತರುವದೇ ಕೇಳೋ 6ಹೇಳಿದ ಮಾತು ಕಟ್ಟಿದ ಕೂಳು ನಿಲ್ಲವೊ | ಆ ವನ-ದೊಳೇನಹದೊ ಬಲ್ಲೆನೇ ಪ್ರಾಣೇಶ ವಿಠಲಾ ||ಬಾಲಕ ಹನುಮಂತ ನಿನ್ನೊಳಗೆನ್ನಾ ರಾಣಿಯಲ್ಲಿ- |ಹಳೋ ನೋಡಿ ಬರುವುದಕಾಲಸ್ಯ ಕೇಳೋ 7
--------------
ಪ್ರಾಣೇಶದಾಸರು
ರಾಮನ ನೋಡಿರೈ ರಘುಕುಲಸೋಮನ ಪಾಡಿರೈ ಪ.ಜೀಮೂತಶ್ಯಾಮಲಕಾಯ ಜನಕಜಾಮಾತಸೀತಾಕಾಂತಅ.ಪ.ಕೋಟಿದಿವಾಕರನಿಭ ಮಕುಟದ ಮಸ್ತಕದ ಮುದ್ದಿನ ಮುಖದನೀಟಹ ಪಣೆಯಲಿಮೃಗಮದಪುಂಡ್ರತಿಲಕದ ನೀಲಾಳಕದಮಾಟಕ ಮದನನ ಬಿಲ್ಲ ಹಳಿವ ಹುಬ್ಬುಗಳ ಇತ್ತಂಡಗಳನೋಟದಿ ದಯಾರಸ ಸೂಸುವ ಕಮಲದಳಗಳ ಸಮನಯನಗಳ 1ಎಸೆವ ಸುನಾಸಿಕ ಜ್ವಲಿತಕುಂಡಲಸ್ಮಿತವದನ ಶಶಿಸಮರದನಹೊಸ ತುಲಸಿಯ ಮಂಜರಿ ವನಮಾಲಾಧರನ ಸತ್ಕಂಧರನಮಿಸುನಿಯವೈಜಯಂತಿತ್ರಿಸರವು ದಿವ್ಯಪದಕಗಳ ಝಳ ಝಳಪುಗಳಲಸತ್ ಶ್ರೀವತ್ಸ ವಕ್ಷದಿ ಕುಂಕುಮ ಚಂದನದ ಗುಣಗಣಘನದ 2ಮರಕತಸ್ತಂಭಗಳಿಗೆ ಪೋಲ್ವೆಡೆಬಾಹುಗಳ ಅಂಗದಯುಗಳಕರವಲಯಾಂಗುಲಿಮುದ್ರಿಕೆ ಧೃತಕೋದಂಡ ದಂಡಕದಂಡಸಿರಿಜಠರತ್ರಿವಳಿಗಂಭೀರನಾಭ ನಿರ್ಜರನಾಭವರಪಿಂಗಳ ಕೌಶೇಯಾಂಬರಕಟಿಸೂತ್ರಶ್ರೀ ಬ್ರಹ್ಮಸೂತ್ರ3ಬಟ್ಟದೊಡೆಜಾನುಘಟ್ಟಿದಂತೋಪಮ ಜಂಘ ಸಂವೃತ ಜಂಘಾಕುಟಿಲ ನೀ ರಾಕ್ಷಸದಲ್ಲಣ ಪೆಂಡೆಯದ ಚೆಲುವಾ ಜನಜನಿಗೊಲಿವಕಠಿಣತರ ಪದತಳದೆಡೆ ಧ್ವಜಾಂಕುಶಾಂಬುಜ ಹೃತ್ಕಲುಷಾನಿಟಿಲನಯನ ವಿಧಿಸುರ ಋಷಿವಂದಿತಚರಣನೂಪುರಾಭರಣ4ಸುಖಮುನಿ ಮುಖ್ಯಮುನಿ ಪೂಜಿತ ವಿಗ್ರಹ ವಾರಾಪಾರವಿಹಾರನಿಖಿಲ ಗುಣಾರ್ಣವ ನಿತ್ಯದಯಾರ್ಣವ ರಾಜ ರಾಜಾಧಿರಾಜಸಕಲ ಸಂಯಮಿಕುಲಮೌಳಿರತುನ ಸತ್ಯಪೂರ್ಣ
--------------
ಪ್ರಸನ್ನವೆಂಕಟದಾಸರು
ಲಾಲಿಪಂಪಾಂಬಿಕೆಲಾಲಿಭ್ರಮರಾಂಬಿಕೆಲಾಲಿಬಗಳಾಂಬಿಕೆಲಾಲಿಲಾಲಿಎಂದು ಪಾಡಿರಿ ಸಾಧು ಸಜ್ಜನರೆಲ್ಲದೇವಿ ತಾನೇ ಎಂದುಲಾಲಿಪಅದ್ವಯಾಗಮ ದ್ಯುತಿಗೋಚರ ಅನಾದಿಅಚಲಾನಂದವೇಲಾಲಿಶುದ್ಧ ಸಮ್ಯಕ್ ಜ್ಯೋತಿರ್ಮಯ ಸ್ವರೂಪಸುಚರಿತ್ರ ನಿಶ್ಚಲಲಾಲಿಚಿದ್ಬಯಲಿನೊಳು ಹೃದಯ ತೊಟ್ಟಿಲೊಳುಭಾವಹಾಸಿಗೆಯಲ್ಲಿ ಪವಡಿಸಿಹೆಲಾಲಿಸಿದ್ಧರಿ ಮಲಗಿನ್ನು ಜೋಗುಳ ಪಾಡುವೆಶ್ರೀ ಮಹಾಲಕ್ಷ್ಮಿಯೇಲಾಲಿ1ನಿತ್ಯನಿರ್ಗುಣ ನಿಷ್ಕಲಂಕ ನಿರ್ವಿಕಲ್ಪನಿಜನಿತ್ಯ ನಿರ್ಮಳೆಲಾಲಿಸತ್ಯ ವಸ್ತುವೆ ಸನಾಥ ವಿಶೋತ್ಪತ್ತಿಸರ್ವಪರಬ್ರಹ್ಮರೂಪಲಾಲಿಪ್ರತ್ಯಗಾತ್ಮಳೆ ಪೂರ್ಣಪರಮ ಪರತರವಂದ್ಯೆಪಾವನ ಚಾರಿತ್ರೆಲಾಲಿಕರ್ತೃನೀ ಅನಂತ ಬ್ರಹ್ಮಾಂಡಾದಿಗಳಿಗೆಕರುಣಾ ಸಮುದ್ರವೇಲಾಲಿ2ಪೃಥ್ವಿಅಪ್ಪುತೇಜವಾಯುರಾಕಾಶಕ್ಕೆಪೃಥಕಾಗಿ ಹೊಳೆದಿಹಳೆಲಾಲಿಸತ್ವರಜತಮಸು ಮೂರರೊಳಗೆ ನೀಸಾಕ್ಷಿರೂಪದಲಿರುವೆಲಾಲಿವೇದ ವೇದಾಂಗಗಳ ವಾಗ್ರೂಪಿನಲ್ಲಿನೆಲೆಸಿ ರಂಜಿಪಳೆಲಾಲಿತತ್ವವಿಂಶತಿ ಪಂಚಶರೀರಗಳೊಳಗೆ ನೀತೊಳ ತೊಳಗಿ ಬೆಳಗುತಿಹೆಲಾಲಿ3ಜಾಗೃತ ಸ್ವಪ್ನ ಸುಷುಪ್ತಿ ಮೂರವಸ್ಥೆಜನಿತದಿ ಕಾಣಿಸಿಲಾಲಿಪ್ರಾಜÕತೈಜಸವಿಶ್ವಮೂರು ಮೂರುತಿಯಾಗಿಪರಿಣಮಿಸಿ ತೋರುವೆಲಾಲಿಶೀಘ್ರದಲಿ ಸದ್ಭಾವ ಸಚ್ಛಿಷ್ಯರಾದರ್ಗೆಸ್ವಾನಂದ ಸುಖವೀವೆಲಾಲಿರೌದ್ರದಲಿ ಭುಗುಭುಗು ಭುಗಿಲೆಂಬ ಕಳೆಗಳುಅತ್ಯುಗ್ರದಿ ಝಂಗಿಸುವೆಲಾಲಿ4ವಿದ್ಯಾವಿದ್ಯವ ತೋರಿ ದೃಶ್ಯಾದೃಶ್ಯಕೆ ಮೀರಿಅದೃಶ್ಯರೂಪ ಶ್ರೀ ಲಕ್ಷ್ಮೀಲಾಲಿಸಿದ್ಧಿಗಳೆಂಬುವ ಛೇದಿಪ ಹರಿಹರಸರಸಿಜೋದ್ಭವ ಮಾತೆಲಾಲಿಸಿದ್ಧ ಪರ್ವತವಾಸ ಸಾಹಸ್ರದಳ ಮಧ್ಯೆಶ್ರೀ ಬಗಳಾಮುಖಿಲಾಲಿಸದ್ಗುರು ಚಿದಾನಂದಅವಧೂತಬಗಳಾಂಬ ಸಗುಣನಿರ್ಗುಣಮೂರ್ತಿಲಾಲಿ5
--------------
ಚಿದಾನಂದ ಅವಧೂತರು
ವನಿತೆ ನೀ ತೋರಿಸೆ ಹನುಮನ ಬೇಗ |ತನು-ಮನ-ಧನವನು ನಿನಗೀವೆನೀಗ ಪಆತುರದಿಂದಲಿ ಉದಧಿಹಾರಿದವನ |ಪ್ರೀತಿಯಲಿ ರಾಮನ ಮುದ್ರೆಯಿತ್ತವನ ||ಘಾತಕರನ್ನು ಮುರಿದಟ್ಟಿದವನ -ಸತಿ|ಸೀತೆಯಪತಿರಘುನಾಥಗರ್ಪಿಸಿದನ1ಪಾಂಡುನಂದನನಿಗೆ ಅನುಜನಾಗಿಹನ |ಪುಂಢರೀಕಾಕ್ಷನ ಚರಣಸೇವಿಪನ ||ಪುಂಡ ಕೌರವ ಶಿರವ ಚೆಂಡನಾಡಿದವನ 2ಎರಡು ಮೂರಾರೊಂದು ಕುಮತ ಖಂಡಿಸಿದನ |ಭರದಿ ಮಧ್ವಮತ ಉದ್ಧರಿಸಿದನ ||ಧರೆಯೊಳಧಿಕ ಶ್ರೀಹರಿಯ ಭಜಕನ |ವರದ ಶ್ರೀಪುರಂದರವಿಠಲರಾಯನ3
--------------
ಪುರಂದರದಾಸರು
ವೀರಭದ್ರೇಶ್ವರನೆ ಪಾಲಿಸು ನಮಸ್ಕಾರವ ಗೈಯುವೆನೆ ಪಫೋರ ಶರೀರನೆ ಧೀರನೆ ಶೂರನೆಕ್ರೂರ ಖಡುಗಧಾರಿತುರಗಸವಾರಿಯೆ ಅ.ಪರುದ್ರ ರೌದ್ರಾವತಾರ ಚಿತೆಯೊಳಂದುಉದ್ಭವಿಸಿದ ವೀರ-ಭದ್ರ ಶರೀರ ಕೆರಳ್ದ ಲೋಚನಾಕಾರಊಧ್ರ್ವ ದೇಶಾನ್ವಿತ ಸಮುದ್ರ ಸಾಹಸಿಯೆ 1ಮಣಿಮಯ ಭೂಷಣನೇ ತೋರುವೆಘೋರಘಣಿ ಘಣಿ ನಾದವನೇಕುಣಿಯುವ ಕೂಗುವ ಭೂತಗಣದಸಂದಣಿಸೇರಿತ್ರಿನಯನಾಜೆÕಯ ತಾಳ್ದು ಧರಣಿಗೆ ನಡೆತಂದ 2ದಕ್ಷಾಧ್ವರ ಹರನೇ ಕ್ರೋಧದಿ ಕ್ರೂರದಕ್ಷನ ಮುರಿದವನೇಸೃಷ್ಟಿ ಪಾಲಕ ಭಗನಕ್ಷಿಯ ಕೀಳಿಸಿದುಷ್ಟ ಪೊಷನದಂತ .... ಸೃಷ್ಟಿಗುರುಳಿಸಿದಾ 3ಪಾದೇಮಠದ ಪುರದೀ ನೆಲಸಿದೆ ಬಂದುಸಾಧು ಜನರ ಪೊರೆದೆಆದಿಮೂರುತಿ ಗೋವಿಂದನ ದಾಸನಆಧರಿಸೈ ಕರುಣೋದಯ ಮೂರುತಿ 4
--------------
ಗೋವಿಂದದಾಸ
ವೆಂಕಟೇಶನ ಮಹಿಮೆಯ ಹೊಗಳುವಕಿಂಕರಧನ್ಯನಯ್ಯಪ.ಇಳೆಯ ಭಕ್ತರ ನೋಡಿದ ವೈಕುಂಠದಿಂದಿಳಿದು ಶ್ರೀಸಹಿತ ಬಂದಸಲೆ ಸುವರ್ಣಮುಖರಿಯ ತೀರವಒಲಿದು ನಿಂತನು ತಿಮ್ಮ್ಮಯ್ಯ 1ಭೂವರಾಹ ಸ್ವಾಮಿಯ ಸನ್ನಿದಶ್ರೀವತ್ಸಲಾಂಛನಿಹಶ್ರೀವಿಮಾನಸಹಿತ ದೇವಾಧಿದೇವ ತಾನಿಲ್ಲಿ ನಿಂತ 2ಸ್ವಾಮಿ ಪುಷ್ಕರಿಣಿಯೆಂಬ ತೀರ್ಥದನಾಮದ ಮಹಿಮೇನೆಂಬೆಆ ಮಹಾ ದುಷ್ಕøತವು ಸ್ನಾನದನೇಮದಲ್ಲೋಡುವುದು 3ರಾಜಾಧಿರಾಜನಿತ್ಯಉಪಚಾರಪೂಜೆ ಲೋಕಾರ್ಥದೊಳು ತಾಮೂಜಗಕಾನಂದವವರಕರುಣಾಜಲಧಿ ಕೊಡುವ 4ನಿತ್ಯಸ್ವಾರಿಗೈದುವಸುರಋಷಿಮೊತ್ತದಿ ಚರಿಪದೇವಮತ್ತೆ ಆ ಲಕ್ಷ್ಮಿಯ ಕೂಡ ಮುನಿವದೊಂದರ್ತಿಯ ಬುಧರು ನೋಡಿ 5ನುಡಿವ ಸಾವಿರ ಪೇರ್ಗಂಟೆ ಉಬ್ಬುಬ್ಬಿಹೊಡೆವರ್ಯೊಡೆ ಜಾಗಟೆಬಡಿವ ಕರಡೆ ಭೇರಿಯು ಮುಂದೆ ಉಗ್ಗಡಿಪ ಸಾಮಗಾನವು 6ಚಿತ್ರವರ್ಣದ ಸತ್ತಿಗೆ ಸಾಲ್ಗಳುಸುತ್ತಲು ಕೈ ದೀವಿಗೆಉತ್ತಮ ವಾಹನವೇರಿ ವಿಶ್ವದಕರ್ತಬಂದನು ಉದಾರಿ7ಉದಯ ತೋಮಾಲೆ ಸೇವೆ ಪುಳುಕಾಪುಮೊದಲಾದ ದಿವ್ಯಸೇವೆಒದಗಿದವಸರಂಗಳು ನೈವೇದ್ಯಮೃದುಭಕ್ಷ್ಯವರಪೊಂಗಲು8ಅತಿರಸ ಮನೋಹರವುದಧ್ಯನ್ನಅತಿರುಚಿ ಅನ್ನವಾಲವುಕ್ಷಿತಿಯ ಮೇಲಿಹ ಭಕ್ತರು ಶ್ರೀಲಕ್ಷ್ಮೀಪತಿಗೆ ಅರ್ಪಿಸುತಿಹರು 9ಹೂವಿನಂಗಿಯ ತೊಡುವಮೃಗಮದಲಾವಣ್ಯ ತಿಲಕಿಡುವಕಾವನಂತರ ತೇಜವ ಗೆಲ್ಲುವಸಾವಿರ ಹೆಸರ ದೇವ 10ತಪ್ಪದೆ ನುಡಿವಂದನು ಮುಡಿಪಿನಕಪ್ಪವೆಣಿಸಿ ಕೊಂಬನುಚಪ್ಪನ್ನ ದೇಶಸ್ತರು ಬಂದು ಸಮರ್ಪಣೆ ಮಾಡುವರು 11ಕೊಟ್ಟ ವಾಕ್ಯಕೆ ತಪ್ಪನು ವರಭಯವಿಟ್ಟು ಸಾಕುತಲಿಪ್ಪನುಇಷ್ಟಾರ್ಥದಾತನಯ್ಯ ವಿಶ್ವದಶಿಷ್ಟರೊಡೆಯ ತಿಮ್ಮಯ್ಯ 12ಕಿರೀಟ ಕುಂಡಲವಿಟ್ಟನು ತಿಮ್ಮಯ್ಯಕರುಣ ನೋಟದ ಚೆಲ್ವನುಅರಿಶಂಖವನು ಧರಿಸಿದ ಹಾರಕೇಯೂರ ಕೌಸ್ತುಭದಲೊಪ್ಪಿದ 13ತೋಳಬಂದಿಯು ಕಂಕಣಮುದ್ರಿಕೆಕೀಲುಕಡಗಒಡ್ಯಾಣನೀಲಮಾಣಿಕ ಪಚ್ಚದ ಮುತ್ತಿನಮಾಲೆಗಳಿಂದೊಪ್ಪಿದ 14ಮಣಿಮಯ ಕವಚ ತೊಟ್ಟ ಗಳದಲಿಮಿನುಗುವಾಭರಣವಿಟ್ಟಕನಕಪೀತಾಂಬರವು ಕಟಿಯಲ್ಲಿಅಣುಗಂಟೆಗಳೆಸೆದವು 15ರನ್ನದಂದುಗೆಯನಿಟ್ಟಿಹ ಪಾದಕೆಪೊನ್ನಹಾವುಗೆಮೆಟ್ಟಿಹಘನ್ನ ದೈತ್ಯರ ಸೋಲಿಪ ಬಿರುದಿನಉನ್ನತ ತೊಡರಿನಪ್ಪ 16ದಿನಕೆ ಸಾವಿರ ಪವಾಡ ತೋರುವಜನಕೆ ಪ್ರತ್ಯಕ್ಷ ನೋಡಘನಶಾಮ ತಿರುವೆಂಗಳ ಮೂರ್ತಿಯಮನದಣಿಯೆ ಹೊಗಳಿರೆಲ್ಲ 17ಭೂವೈಕುಂಠವಿದೆಂದು ಸಾರಿದಭಾವಿಕ ಭಕ್ತ ಬಂಧುಶ್ರೀ ವಾಯುಜಾತ ವಂದ್ಯ ಶ್ರೀನಿವಾಸಗೋವಿಂದ ನಿತ್ಯಾನಂದ 18ಸೇವಕಜನರಪ್ರಿಯಅರುಣರಾಜೀವಲೋಚನ ತಿಮ್ಮಯ್ಯದೇವಶಿಖಾಮಣಿಯು ಬ್ರಹ್ಮಾದಿದೇವರಿಗೆ ದೊರೆಯು 19ಕಶ್ಚಿಜ್ಜೀವನೆನ್ನದೆ ನನ್ನನುನಿಶ್ಚಯದಲಿ ಹೊರೆವನುಆಶ್ಚರ್ಯಚರಿತ ನೋಡಿ ಶರಣರವತ್ಸಲನ ಕೊಂಡಾಡಿ 20ಆರಾಶ್ರಯಿಲ್ಲೆನಗೆ ದ್ರಾವಿಡವೀರನೆ ಗತಿಯೆನಗೆಭೂರಿಪ್ರಸನ್ವೆಂಕಟಪತಿ ಸುಖತೀರಥವರದ ನಮೊ 21
--------------
ಪ್ರಸನ್ನವೆಂಕಟದಾಸರು
ಶರಣು ಭಾರತೀ ತಾಯೆ |ಕರವಬಿಡದಲೆ ಕಾಯೆ ||ಮರುತದೇವನ ರಮಣಿ | ಸುರ ನದಿಯ ಭಗಿನಿ ಪಪ್ರದ್ಯುಮ್ನ ದೇವಸುತೆ | ರುದ್ರಾದಿ ಸುರ ವಿನುತೆ ||ಭದ್ರ ವಿಗ್ರಹೆ ದಯಾ ಸ | ಮುದ್ರೆ ಕುಲಿಶೆ ||ಅದ್ರಿಯೋಪಮ ದೋಷ | ಕಿದ್ದ ದುರ್ಮತಿಕ್ಲೇಶ||ವೊದ್ದು ನಿನ್ನವನೆನ್ನು | ಬುದ್ಧಿ ಕೊಡು ಇನ್ನೂ 1ನೀರಜಾಂಬಕೆ ಯನಗೆ | ತೋರು ಸಾಧನ ಕುನಗೆ |ಜಾರಿಸು ಭಕುತಿಯನ್ನು | ತೋರು ಕರುಣಾ ||ವಾರಿಧಿಹರಿಯಪಾದ| ಆರಾಧಿಸಲುಮೋದ|ವಾರವಾರಕೆ ಈಯೇ |ವಾರಣಗಮನೆಯೇ 2ಪ್ರಾಣೇಶ ವಿಠಲನ | ಧ್ಯಾನದೊಳಗಿರಿಸು ಮನ |ವಾಣೀ ಪದವೈದುವಳೇ |ಮಾನನಿನ್ನದೆಲೆ ||ಹೀನ ವಿಷಯಗಳೊಲ್ಲೆ | ನೀನೇ ಸ್ವಾಂತದಿ ನಿಲ್ಲೆ |ಕ್ಷೋಣಿಯೊಳಗತಿ ಮಾನೀ | ಜ್ಞಾನೀ ಅಹಿವೇಣೀ 3
--------------
ಪ್ರಾಣೇಶದಾಸರು
ಶೋಭಾನವೇ ಬಗಳಾಮುಖಿ ದೇವಿಗೆಶೋಭಾನವೇ ಸದ್ಗುರುನಾಥಗೆ ಶೋಭಾನವೆನ್ನಿ ಶುಭವೆನ್ನಿಪಸುತ್ತಿದ ಸರಿಗೆಯು ಒತ್ತಿದ ಚಿಂತಾಕೆತ್ತಿದ ರಾಗಟೆ ಹತ್ತಿದ ಚವುರಿಮತ್ತೆ ತುರುಬಿಗೆ ಪಂಚಕ ಮುಡಿದಿಹಮುಡಿದೀ ಬಗಳಾಮುಖಿಗೆ ರತ್ನದಾರತಿಯ ಬೆಳಗಿರೇ1ಶ್ರವಣ ಮನನ ನಿಧಿಧ್ಯಾಸನ ಸಾಧಿಸಿಭವಭವಗಳ ತರಿದೆಲ್ಲವ ಛೇದಿಸಿಶಿವಸಾಕ್ಷಾತ್ತಾಗಿ ಬೆಳಗುತ ಬೆಳಗುತ ಸದ್ಗುರುನಾಥಗೆಪವಳದಾರತಿಯೆ ಬೆಳಗಿರೆ2ವಾಲೆಬಳೆಗಳು ತಾಳಿಯು ಮೂಗುತಿಸಾಲಿನ ಅಡ್ಡಿಕೆ ತಾಯಿತ ಸರಪಳಿಮೇಲು ಪದಕವೆ ಮೆರೆದಿಹ ಮೆರೆದಿಹ ಬಗಳಾಮುಖಿಗೆಲೋಲದಾರತಿ ಬೆಳಗಿರೆ3ಬಾಲೋನ್ಮತ್ತ ಪಿಶಾಚಾಂಧರ ಬದಿರ ಲಕ್ಷಣಮೂಕಾವಸ್ಥೆಯ ತಾ ತಾಳಿ ಅರವಸ್ಥೆಯ ಧರಿಸಿಧರಿಸಿಹ ಸದ್ಗುರುನಾಥಗೆತೈಲದಾರತಿಯ ಬೆಳಗಿರೆ4ಹೊಸ ಮಿಂಟಿಕೆ ಪಿಲ್ಲೆ ಸವಂದಿಗೆಜಸವುಂಗರ ಮೀನೆಸೆದಿಹಮುದ್ರಿಕೆಮಿಸುನಿಯೊಡ್ಯಾಣವು ತೊಳಗುವ ತೊಳಗುವ ಬಗಳಾಮುಖಿಗೆಶೀಲದಾರತಿಯ ಬೆಳಗಿರೆ5ಧಗಧಗಿಸುವ ಪೀತಾಂಬರದುಡುಗೆಯಝಗ ಝಗಿಸುವ ಮಹಾಸ್ವರ್ಣದ ಕಂಚುಕಿನಿಗಮವೆಡಬಲದಲ್ಲಿ ಹೊಗಳುವ ಹೊಗಳುವ ಬಗಳಾಮುಖಿಗೆಸುಗಮದಾರತಿಯ ಬೆಳಗಿರೆ6ಝಗ ಝಗಿಸುವ ಪ್ರಭೆ ದೃಷ್ಟಿಸಿ ಶ್ರವಣದಿಮೊಗೆ ಮೊಗೆದು ದಶನಾದವ ಸೇವಿಸಿಬಗೆ ಬಗೆ ಆನಂದದಿ ಸುಖಿಸುವ ಸುಖಿಸುವ ಸದ್ಗುರುನಾಥಗೆಸುಗಮದಾರತಿಯ ಬೆಳಗಿರೆ7ಸಪ್ತಾವರಣ ಭಸ್ಮವ ಮಾಡಿಸಪ್ತಭೂಮಿಕೆ ಪಾವಟಿಗೆಯನೇರಿಗುಪ್ತ ಪ್ರಭಾತೀತವಾಗಿ ತೊಳಗುವ ತೊಳಗುವ ಸದ್ಗುರುನಾಥಗೆತೃಪ್ತದಾರತಿಯ ಬೆಳಗಿರೆ8ಕಂಕಣ ಹರಡಿಯ ಹಸ್ತದ ಕೈಯ್ಯಲಿಅಂಕುರಪಟ್ಟಿಯು ಪರಿಘವು ಶರಧನುಅಂಕೆಯಿಲ್ಲದಾಯುಧ ಪಿಡಿದಿಹ ಪಿಡಿದಿಹ ಬಗಳಾಮುಖಿಗೆಪಂಕಜದಾರತಿಯ ಬೆಳಗಿರೆ9ಸಾರಿಯೆ ತ್ವಂ ಪದ ತತ್ವಮಸಿ ಪದಮೀರಿಯೆ ಸಗುಣ ನಿರ್ಗುಣ ರೂಪವ ತೋರಿಚರಿಸುವಚರಿಸುವ ಸದ್ಗುರುನಾಥಗೆ ಸಾರದಾರತಿಯ ಬೆಳಿಗಿರೆ10ಪಿಡಿದೆಡಗೈಯಲಿ ವೈರಿಯ ಜಿಹ್ವೆಯ ಕೆಡುಹುತ ತುಳಿದೆಹೊಡೆಯುತ ಖಡುಗದಿ ಕೊಡುತ ಬೇಡಿದವರಿಗೆ ಅಭಯವಅಭಯವೀವ ಬಗಳಾಮುಖಿಗೆ ಸಡಗರದಾರತಿಯ ಬೆಳಗಿರೆ11ಸಾಧನ ನಾಲ್ಕನು ಸಾಧಿಪ ಸಚ್ಛಿಷ್ಯರಿಗೆಅಭಯವ ನೀಡುತ ಭಕ್ತಿರಿಗಾಧಾರವಾಗಿ ಕರುಣಿಪಕರುಣಿಪ ಸದ್ಗುರುನಾಥಗೆ ಸಾಧುಗಳಾರತಿ ಬೆಳಗಿರೆ12ಚಿದಾನಂದ ಪರಬ್ರಹ್ಮವು ತಾನೇಮದಮುಖನು ಸಂಹರಿಸಲೋಸುಗಸದನಬ್ರಹ್ಮ ರಂಧ್ರದಿ ಸ್ಥಾನವಾಯ್ತುಸ್ಥಾನವಾಯ್ತು ಬಗಳಾಮುಖಿಗೆ ಸುಧೆಯ ಆರತಿ ಬೆಳಗಿರೆ13ಸಿದ್ದ ಪರ್ವತವಾಗಿಹ ಪ್ರ-ಸಿದ್ಧ ಬಗಳಾಮುಖಿಯೆಂದೆಣಿಸುವಸಿದ್ಧ ಚಿದಾನಂದಾವಧೂತಅವಧೂತಸದ್ಗುರುನಾಥಗೆಸಿದ್ಧದಾರತಿಯ ಬೆಳಗಿರೆ14
--------------
ಚಿದಾನಂದ ಅವಧೂತರು