ಒಟ್ಟು 1890 ಕಡೆಗಳಲ್ಲಿ , 106 ದಾಸರು , 1489 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚರಣಕಮಲವನು ನೆನೆವೆ ನಾ ನಿನ್ನ ಪ. ಚರಣಕಮಲವನು ನೆನೆವೆ ನಾ ದುರಿತರಾಶಿಗಳ ಸಂಹರಿಪನ ಅ.ಪ. ಶ್ರುತಿಯನುದ್ಧರಿಸಿದುದಾರನ ಸಿಂಧು- ಮಥನಕೊದಗಿದ ಗಂಭೀರನ ಕ್ಷಿತಿಯನೆತ್ತಿದ ಬಲುಧೀರನ ಶಿಶು ಸ್ತುತಿಸೆ ಕಂಬದಿ ಬಂದ ವೀರನ 1 ಇಂದ್ರನ ಧಾರೆಯ ನಿಲಿಸಿದನ್ನ ತನ್ನ ತÀಂದೆಯ ಮಾತು ಸಲಿಸಿದನ್ನ ಕಂದರದಶನ ಸೋಲಿಸಿದನ್ನ ವ್ರಜ- ದಿಂದುಮುಖಿಯರ ಪಾಲಿಸಿದನ್ನ 2 ವಧುಗಳ ವ್ರತವ ಖಂಡಿಸಿದನ್ನ ದುಷ್ಟ ರುದಿಸಲು ತುದಿಯ ತುಂಡಿಸಿದನ್ನ ಇದಿರಾದ ಖಳರ ಖಂಡಿಸಿದನ್ನ ಹಯ ವದನಪೆಸರ ಕೊಂಡುದಿಸಿದನ್ನ 3
--------------
ವಾದಿರಾಜ
ಚರಣದಾಸರ ಸದುಹೃದಯ ನಿವಾಸನೆ ಸಿರಿರಾಮ ಪರಮ ಪಾವನೆ ವರಜಾಹ್ನವೀ ಜನಕನೆ ಸಿರಿರಾಮ ಪ ಶರಣಜನರ ಮೇಲ್ನುಡಿಯೋಳ್ಸಂಚಾರನೆ ಸಿರಿರಾಮ ನೆರೆನಂಬಿ ಭಜಿಪರ ಭವಮಲಹರಣನೆ ಸಿರಿರಾಮ ಕರುಣದೊದೆದು ಯುವತಿಕುಲವನುದ್ಧರಿಸದನೆ ಸಿರಿರಾಮ ವರದ ವಾಸುಕಿಶಾಯಿ ಜಗದೇಕ ಬಂಧುವೇ ಸಿರಿರಾಮ 1 ಧುರಧೀರವಾಲಿಯ ಗರುವನಿವಾರನೆ ಸಿರಿರಾಮ ಮರೆಬಿದ್ದ ಸುಗ್ರೀವನ ದು:ಖಪರಿಹಾರನೆ ಸಿರಿರಾಮ ಪರಮಭಕ್ತ್ಹನುಮಗೆ ಕರವಶನಾದನೆ ಸಿರಿರಾಮ ಶರಣುಬಂದಸುರಗೆ ಸ್ಥಿರಪಟ್ಟವಿತ್ತನೆ ಸಿರಿರಾಮ 2 ಶರಧಿಮಥನಮಾಡಿ ಸುರರ ರಕ್ಷಸಿದನೆ ಸಿರಿರಾಮ ಹರನಕೊರಳ ಉರಿ ಕರುಣದ್ಹಾರಿಸಿದನೆ ಸಿರಿರಾಮ ವರಗಿರಿನಂದನೆಮನ ಸೂರೆಗೈದನೆ ಸಿರಿರಾಮ ಸರುವದೇವರದೇವ ಅದ್ಭುತಮಹಿಮನೆ ಸಿರಿರಾಮ 3 ಕರಿಯ ರಕ್ಷಣೆಗಾಗಿ ಕಾಸಾರಕ್ಕಿಳಿದನೆ ಸಿರಿರಾಮ ತರುಣಿಮೈಗಾವಗೆ ಚರನಾಗಿ ನಿಂತನೆ ಸಿರಿರಾಮ ಚರಣದಾಸರಮನೆ ತುರಗವ ಕಾಯ್ದನೆ ಸಿರಿರಾಮ ಪರಮಭಾಗವತರನರೆಲವ ಬಿಟ್ಟಿರನೆ ಸಿರಿರಾಮ 4 ಅನುಪಮ ವೇದಗಳಗಣಿತಕ್ಕೆ ಮೀರಿದನೆ ಸಿರಿರಾಮ ಸನಕಸನಂದಾದಿ ಮನುಮುನಿ ವಿನಮಿತನೆ ಸಿರಿರಾಮ ವನರುಹ ಬ್ರಹ್ಮಾಂಡ ಬಲುದರದಿಟ್ಟಾಳ್ವನೆ ಸಿರಿರಾಮ ಮನಮುಟ್ಟಿ ಭಜಿಪರ ಘನಮುಕ್ತಿ ಸಾಧ್ಯನೆ ಸಿರಿರಾಮ 5
--------------
ರಾಮದಾಸರು
ಚರ್ಯನಾಮುಗಿವೆನು ಕೈಯ್ಯಾ ಪ ಮಂತ್ರಸದನ ಪದ ಚಿಂತಕ ಶ್ರೀ ರಘು ಕಾಂತಕರಜ ರಘು ದಾಂತ ಯತೀಂದ್ರರ ಅ.ಪ ಅಂತರಂಗದಿ ಸಂತತ ಶ್ರೀಹರಿಯ ಚಿಂತಿಸುತಲಿ ಭೂಮಿಯ ಕಾಂತ ದಂಷ್ಟ್ರದಿ ಸಂಜನಿಸಿದ ನದಿಯ ಸಂಗಮ ಶುಭನಿಲಯ ವಿಶ್ರಾಂತ ಸುಮಹಿಮರ 1 ಪತಿ ಲಕ್ಷ್ಮಣರ ಪಾದಾಂಬುಜ ಮಧುಪರ ಮೋದಾಶ್ರು ಸುರಿಸುತ ಪೂಜಿಸಿದವರ ಪುಲಕೀತ ವಿಗ್ರಹರ ವಾದಿವಾರಣ ಮೃಗಾಧಿಪರೆನಿಸುತ ಮೋದತೀರ್ಥ ಸುಮ ತೋದಧಿ ಚಂದಿರ 2 ಇಳಿಯೊಳು ಚರಿಸುತ ಬುಧ ಜನರನ್ನು ಚಲಿಸುತ ಛಾತ್ರರನು ತಿಳಿಸೀ ಸಚ್ಛಾಸ್ತ್ರವ ಮರ್ಮಗಳನ್ನು ಉದ್ಧರಿಸ್ಯವರನ್ನು ಯಳಮೇಲಾರ್ಯರ ಒಲುಮೆ ಪಡೆದು ಭವ ಕಲುಷ ವಿದೂರರ 3 ದಾಸರ ಶುಭಚರಿಯ ಸ್ತುತಿಸಿ ಶೇವಿಸಿ ಪಡೆದರು ಗುರುಕೃಪೆಯ ನೋಳ್ಪರಿಗಾಶ್ಚರ್ಯ ನತ ಜನರಘ ಪರ್ವತ ಪವಿ ಸನ್ನಿಭ ಕ್ಷಿತಿ ಸುರತತಿ ಸೇವಿತ ಪದ ಪದ್ಮರ 4 ಜಾಣ ಮಾನವರನ ಸಾನುರಾಗದಿ ಧ್ಯಾನಿಸಲಿವರನ್ನ ಕಾಮಿತ ಗರಿವರನ ಶ್ರೀನಿಧಿ ಕಾರ್ಪರ ಸ್ಥಾನಗ ನರಪಂಚನನನೊಲಿಸಿದ ಮೌನಿವರೇಣ್ಯರ 5
--------------
ಕಾರ್ಪರ ನರಹರಿದಾಸರು
ಚಾರು ನವರತುನ ಮಣಿ ಮಂಟಪಕೆ ಪ ನೀರಜಾಕ್ಷ ಆ ರುಕುಮಣಿ ಭಾ ಮೆಯರೊಡಗೂಡಿ ಅ.ಪ ಹೇಮದ ತಂಬಿಗೆ ಬಿಂದಿಗೆಗಳಲಿ ನೇಮದಿ ಉದಕವ ತುಂಬಿಹರೊ ಕೋಮಲ ತುಳಸೀ ಮಲ್ಲಿಗೆ ಸಂಪಿಗೆ ಪೂಮಳೆಗರೆಯಲು ತಂದಿಹರೊ ಸ್ವಾಮಿ ನಿನಗೆ ಪರಿಮಳ ದ್ರವ್ಯಗಳನು ಪ್ರೇಮದಿಂದಲರ್ಪಿಸಲಿಹರೊ ಚಾಮರ ಸೇವೆಯ ಅರ್ಪಿಸುವರು ಹರಿ ನಾಮ ಹಾಡಿ ಸ್ವಾಗತ ಬಯಸುವರೊ 1 ಮೇಳದ ಮಂಗಳವಾದನ ಒಂದೆಡೆ ಕಹಳೆ ಶಂಖ ದುಂದುಬಿ ಧ್ವನಿಯು ತಾಳ ತಂಬೂರಿ ಮೃದಂಗದ ಶೃತಿಗಳ ಮೇಳನದಲಿ ದಾಸರ ಗಾನ ಶೀಲರಿವರು ಸುಸ್ಸರದಲಿ ವೇದವ ಪೇಳಲು ಕಾಲಕೆ ಕಾದಿಹರೊ ಬಾಲರು ಸಂಭ್ರಮದಲಿ ಝಾಂಗಟೆ ಕೈ ತಾಳಗಳನು ಕರದಲಿ ಪಿಡಿದಿಹರೊ 2 ಲಾಡು ಜಿಲೇಬಿಯ ರಾಶಿಗಳನು ಹೊಸ ಗೂಡೆಗಳಲಿ ತುಂಬಿಟ್ಟಿಹರೊ ನೋಡಲೆ ದಣಿಸುವ ತೆರದಲಿ ಚತುರರು ಮಾಡಿದರೋ ಪಕ್ವಾನ್ನಗಳ ಜೋಡಿಸಿ ಕರಗಳ ಕಾದಿರುವರೋ ಬಲು ನಾಡುನಾಡುಗಳ ಮಂದಿಗಳು ಈಡೇರಿಸುವದು ಭಕುತ ಮನೋರಥ ರೂಢಿಯು ನಿನ್ನದು ಶರಣ ಪ್ರಸನ್ನನೆ 3
--------------
ವಿದ್ಯಾಪ್ರಸನ್ನತೀರ್ಥರು
ಚಾರು ಹಸ್ತಾಯ 1ಹೃದಯಶೋಭಿತ ಮಹಾ ಕೌಸ್ತುಭಾಭರಣಾಯವಿಧಿಜನಕ ನಾಭಿಪಂಕಜ ಭಾಸುರಾಯಸದಮಲಾಯತ ಕಾಂಚಿದಾಮಯುತ ವಸನಾಯಬುಧಜನಮನೋವೇದ್ಯ ಪಾದಪದ್ಮಾಯ 2ಲಕ್ಷ್ಮೀಕಳತ್ರಾಯ ಸೂಕ್ಷ್ಮಸ್ವರೂಪಾಯಕುಕ್ಷಿಗತಭುವನ ಪರಿಪಾಲಕಾಯಪಕ್ಷೀಂದ್ರಕಂಧರಾರೂಢಾಯ ದುಷ್ಟಜನಶಿಕ್ಷಾಸಮರ್ಥಾಯ ಸಾಕ್ಷಿ ಚೈತನ್ಯಾಯ 3ವಿಶ್ವಸ್ವರೂಪಾಯ ವಿಶ್ವತರು ಮೂಲಾಯವಿಶ್ವಗುಣ ಸಂಹಾರಕಾರಣಾಯವಿಶ್ವನಾಟಕಸೂತ್ರಧಾರಾಯ ನಿತ್ಯಾಯವಿಶ್ವಕೃತ ಸುಕೃತದುಷ್ಕøತ ಲೇಪರಹಿತಾಯ 4ಧರಣಿಕಮಲಾಲಯಾಶ್ರಿತ ದಿವ್ಯ ಪಾಶ್ರ್ವಾಯಸುರಮುನಿ ಸ್ತುತಿ ಘೋಷಪೂರಿತಾಯಪರಮಪಾವನಪುಣ್ಯ ಶೇಷಾದ್ರಿನಿಲಯಾಯಸ್ಮರಜನಕ ಸುರಶಿಖಾಮಣಿ ವೆಂಕಟೇಶಾಯ 5ಓಂ ಅನಘಾಯ ನಮಃಕಂ||ಗಣಪತಿ ನಿನ್ನಾಗ್ನೇಯದಲಿನ ತಾ ನೈರುತ್ಯದೆಶೆಯೊಳಂಬಿಕೆಮರುತನೊಳನುಪಮ ಶಂಕರನೀಶಾನ್ಯನೋಳರ್ಚಿತರಾರೈಯ್ಯ ತಿರುಪತಿಯೊಡೆಯಾನೀನೇ ಗಣಪತಿ ಸೂರ್ಯನುನೀನೇ ಶಿವ ನಿನ್ನ ಶಕ್ತಿ ದೇವಿಯು ನಾನೂನೀನಾಗಿ ನಿನ್ನ ಭಜಿಸಿದೆನೀ ನಿರ್ಣಯ ನಿನ್ನ ವಚನ ವೆಂಕಟರಮಣಾ
--------------
ತಿಮ್ಮಪ್ಪದಾಸರು
ಚಿಂತಯಾಮಿ | ರಘುರಾಮಂ | ಸುತ ಕೌಸಲ್ಯೋದರಜಂ |ಸಂತತ ಶರಣರ ಕೃಪಾ | ಪಾಂಗವೀಕ್ಷಾ ಹಸಿತಂ ಪ ಸರಿ ಗ ಸರೀ | ಮಪ ಧಪ ಧಾ | ರಿಸ ನಿಧ ನಿಧ | ಪಮ ಗರಿ ಸದದ್ರುತ - ಸರಿಮಾ ಗರಿ | ಮಪ ದಾಪಮ | ಪಧಸಾ ನಿಧ | ನಿಧ ಪದಪಧ ||ಗರಿ ಸಧ | ``ರಿ ಸ ಧಾ ಸ | ಧಾ ಗ ರಿ ನಿಧಮ | ಗರಿಸಧ | ರವಿ ಕುಲಾನ್ವಯತಿಲಕಂ | ಋಷಿ ವಿಶ್ವಾಮಿತ್ರ ಕೃತಹವನ ಹೋಮ, ಬಾಧಾಗ್ರಸ್ತ | ವಿಮೋಚನ, ಶೀಲಂಅವನಿಜೆ ವೈವಾ, ಹಕ್ಕಾನೀತಂ | ಲಕ್ಷ್ಮಣ ಸಹ, ವಿಧಿಲಾಗ5ನಂ |ಶಿವಧನುವಂ, ಮುರಿದು ರಾಜ | ರುಗಳ ಗರ್ವಹರ | ಶ್ರೀರಾಮಂ 1 ಮಗ ಸಾ ನಿóದ | ನಿóಸಾ ರಿಗಮ | ನಿಧ ಮಾಗರಿ | ಗಮ ಪಗರಿಸದ್ರುತ - ನಿಧನಿಸ ರಿಗಮ ಧನಿಪಧ | ನಿಸ ನಿಧ ನಿಸರಿಗ ಮಗಸನಿ ||ಗರಿಸಧ, ರಿಸ ಧಾ, ಸ ಧಾಆ, ಗರಿ || ನಿದಮ | ಗರಿಸಧ || ರಾಗ - ಧನ್ಯಾಸಿ : ಅನುಜ ಸತಿಸಹ | ವನವಾಸಂ |ನಿಶಿಚರ ಹನನ | ಶೂರ್ಪನಖಿ | ನಾಸಛೇದಂ | ಚರಿತಂ 2 ರಾಗ :ಧಾನಿಸಿ :ನಿಸ ಗಾಮ ಪ | ಗಮ ಪಾನಿಸ | ರಿಸ ರಿನಿ ಸಪ | ಧಪಗಾರಿಸನೀ ಸ ಗ ಮಪ ಗಾ ಮಪನಿಸ | ಪಾ ನಿಸ ಗರಿ ಸನಿಧಪ ನಿಸಗರಿಸಧಾ, ಆರಿಸ ಧಾಸ, ಧಾ, ಗರಿ ನಿಧಮ ಗರಿಸದ || ರಾಗ - ಪರ | ಮಾನುಗ್ರಹ ಶೀಲಂ ರಾಮಂ 3 ಗಾ ಪ ಗರಿ, ಗರಿ ಸಧಸರಿ | ಗಾಪ ದಸದಪ ಗರಿ ಸರಿಗಪಗಗ, ರಿಸ | ರಿಗ, ರಿರಿಸ ಧ | ಸರಿಗರಿ ನಪಗಪ ಧಪಧಸ |ಗರಿಸಧಾ, ಆರಿಸ ಧಾ, ಸದಾ, ಗರಿನಿಧಮ, ಗರಿಸದ || ರಾಗ ಪೂರ್ವಕಲ್ಯಾಣಿ : ಲೇಸು ಕಪಿಗಳ ನಿಚಯ | ಸೀತಾಕೃತಿ ಹುಡುಕುತ |ಆ ಸಮೀರನು | ವಾರಿಧಿಯನು | ಹಾರಿ ಲಂಕೆಯ ಪುರದಲ್ಲಿಅಣುರೂಪದಿ ಹುಡುಕುತ | ಸೀತಾಕೃತಿಯ | ಕಂಡನುದೇಶ ಪುಚ್ಛಾಗ್ನಿಯಲಿ | ದಹಿಸಿ ಸೀತೆ | ವಾರ್ತೆ ಪೇಳಿದನು 4 ಗಾಮಗರಿಸ | ಧ ಸರಿ ಗಮ | ಪಾ ಧಪಸ | ನಿಧಪ ಮಗರಿ |ಗಮಪ ಮಾಪಗಾ | ಮರೀಗ | ಸಾರಿಗಆಮ ಪಧ ಪಸಾ ನಿ |ಗರಿಸಧಾ, ಆಸಧಾ ಸಧಾ ಗರಿ ನಿಧ ಮ ಗರಿಸಧ || ರಾಗ :ಮುಖಾರಿ : ಸತಿ ಪರಿವಾರ ಪುಷ್ಪಕವಿ | ಸ್ವಪುರ ಖೊರಟ 5 ಪಾ ಮಗರಿ | ಸಾ ನಿಧ ಸರಿ | ಮಾಗರಿಸ | ರಿಮ ಪದ ನಿಧ ಸಾ ಸನಿ ಧಪ ಪಾ | ಮಗರಿಸ | ನಿಧಸರಿ ಮಪನಿಧ ಮಪಧಸ ||ಗರಿಸಧಾ ಆರಿಸ ಧಾಅಸ | ಧಾಅ ಗರಿ ನಿಧಮ ಗರಿಸಧ || ರಾಗ ಮಧ್ಯಮಾವತಿ : ಸುರರು ಭಾರ ಕಳೆದ5ುರು ಗೋವಿಂದ ವಿಠಲ 6 ರೀ ಮರಿ ಮಪ | ನೀ ಪಮ ಪನಿ ಸಾ ರಿಸನಿ | ಪಪ ಮಮರಿ ಸ || ರೀಪಮ ರಿಸನಿಪ ರಿಮಪಾ || ರಾಗ :ಪೂರ್ವಕಲ್ಯಾಣಿ || ಧಪ ಸಾ ನಿಧಪಮ | ಮಪಗರಿರಾಗ :ಮೋಹನ || ಸರಿಮಾ ಗರಿ ಸರಿಗಾ | ಪಗರಿ ಸರಿ ಪದಸ ರಾಗ :ಮುಖಾರಿ | ರೀ ಸದಾ ಪದಪ ಗಾರಿ ಸರಾಗ :ನಾಟಿಕುರಂಜಿ || ನಿಸ ಮಗ ಧನಿ ಪಧನಿಸ ರಾಗ : ಸಾವೇರಿ || ಗರಿ ಸದಾ ರಿಸ ಧಾ ಸ | ಧಾ ಗ ರಿ ನಿದಮ ಗರಿಸದ
--------------
ಗುರುಗೋವಿಂದವಿಠಲರು
ಚಿಂತಿಪೆನೊಂದೊಂದು ನಾನಿಂತು ಬೇಡುವೆನು ಪ ನರಜನ್ಮಕೆ ಬರುವುದು ತಾ ದುರ್ಲಭವು ವರಕುಲ ದುರ್ಮಿಳವು ದೊರೆವುದೆ ಭಾಗ್ಯವು ಧರೆಯೊಳು ಬಂದೀ ಗುರುಕುಲದೊಳು ಪುಟ್ಟಿ ಗುರುವರಪೂಜ್ಯ ಪರಾತ್ಮನ ಪೂಜಿಪೆ 1 ನಿಜರೂಪ ತೋರಿದಿ ಪ್ರಲ್ಹಾದನಿಗೆ ಗಜವರನೆನಹೀಗೆ ವಿಜಯನ ರಾಣಿಗೆ ದ್ರುಪದಾತ್ಮಜೆಗೆ ಭಜಕರ ನಿಚಯಕ್ಕೆ ಕುಜಪ್ರದ ಮೂರ್ತಿಗೆ ಅಜರಾಮರಿಗೆ ನಿಜಪದ ತೋರೆಂದು ಭಜಿಸಿ ಬೇಡುವೆನು 2 ಗಂಗೋದಕದೊಳು ಮೀಯಲು ಪಾವನವು ಮಂಗಲ ತುಲನೇಯು ಸಿಂಗಾರದೊಳಧಿಕಾಚ್ಯುತ ಭೂಷಣೆಯು ನಿನ್ನಾದೇ ವರವು ಬಂಧುರದೇಹವ ತಾಳಿದೆನಗೆ ನೀ ಸಂಗಸುಖವನೀಯೋ ನರಸಿಂಹವಿಠಲ3
--------------
ನರಸಿಂಹವಿಠಲರು
ಚಿಂತಿಸುತಿರು ಮನವೇ ಸಿರಿಕಾಂತನಂಘ್ರಿಯ ಚಿಂತಿಸು ಮನವೆ ನಿರಂತರ ಶ್ರೀಮದ ನಂತಗಿರಿಯಲಿ ನಿಂತು ಭಜಕರ ಚಿಂತಿತಪ್ರದ ನಂತಶಯನನ ಅ.ಪ ಶಾಂತ್ಯಾದಿ ಗುಣಭರಿತ ಮಹಂತ ಮುನಿ ಮಾ ರ್ಕಾಂಡೇಯಗೊಲಿದು ಸತತ ಪರ್ವತದಿ ಲಕ್ಷ್ಮೀ ಕಾಂತನೆಸುರ ಸಹಿತ ಸನ್ನಿಹಿತನೆನುತ ಕಂತುಹರನುತ ನಂತ ಮಹಿಮನ ಸಂತಸದಿ ಸಂತುತಿಸುತಲಿ ತ- ದಿನಕರಾನಂತ ದೇವನ 1 ನಾರ ಶಿಂಹನದರ್ಶನ ಕೊಳ್ಳುತಿರೆ ಮುನಿ ಬಲ ದ್ವಾರದಿಂದಲಿ ಪ್ರತಿದಿನ ವಿರುತಿರೆ ಪ್ರಥಮ ದ್ವಾದಶಿಯೊಳು ಸಾಧನ ತಕ್ಷಣ ಪ್ರಸನ್ನ ಸೂರ್ಯಸುತನ ಉದಯದಲಿ ಭಾಗೀರಥಿಯು ಪು ಷ್ಕರಣಿಯೊಳು ಬರೆ ಪಾರಿಜಾತದ ಭೂರುಹಂಗಳ ಚಾರುರೂಪವ ತೋರಿದಾತನ 2 ನೀರಜಾಸನ ವಂದಿತ ಬಂಗಾರಮಕುಟ ಕೇಯೂರ ಕಂಕಣ ಭೂಷಿತ ಚಕ್ರಾದಿ ಚಿನ್ಹಿತ ಚಾರುಶಿಲೆಯೊಳು ಸನ್ನಿಹಿತ ಭಜಕರನು ಪೊರೆಯುತ ವಾರವಾರಕೆ ಭಕುತಜನ ಪರಿವಾರದಿಂ ಸೇವೆಯನು ಕೊಳ್ಳುತ ಧಾರುಣಿಯೊಳು ಮೆರೆವ ಕಾರ್ಪರ ನಾರಶಿಂಹಾತ್ಮಕ ಸ್ವರೂಪನ3
--------------
ಕಾರ್ಪರ ನರಹರಿದಾಸರು
ಚಿಂತಿಸೋ ಭಾರತವ ನೀ ಚಿಂತಿಸೊ ಪ. ಚಿಂತಿಸೊ ಭಾರತ ಮಹಿಮಾ | ಸಿರಿಕಾಂತನೆ ಉತ್ತಮೋತ್ತಮಾ | ಆಹಪಂಕ್ತಿಪಂಕ್ತಿಯೊಳಂತೆ | ಚಿಂತಿತ ಫಲದನಸಂಗ್ತಿ ಪೇಳುವ ಶ್ರುತಿ | ಅರ್ಥ ಭೋಧಿಪುದೆಂದು ಅ.ಪ. ಕಾಳಗ ಸರ್ವ | ಧೀಶನ ಮಹಿಮೆಯ 1 ಅಧಿಭೂತ ಅಧ್ಯಾತ್ಮ ಉಂಟು | ಮತ್ತೆಅಧಿದೈವವೆಂಬುದು ಉಂಟು | ಕೇಳುವಿದಿತವಾಗುವುದಲ್ಲ ಗಂಟು | ಗುರುಮುದದಿಂದ ಬಿಡಿಸಲೀ | ಗಂಟು | ಆಹಅದುಭುತಾರ್ಥಗಳೆಲ್ಲ | ವಿದಿತವಾಗುತ ಹರಿಹೃದಯಾಂತರಂಗನ | ನಿಧಿಧ್ಯಾಸನಕ್ಕವಕಾಶ 2 ಮೂರ್ಬಗೆ ಭಾಷೆಗಳಲ್ಲಿ | ಉಕ್ತಸಾರ ಪ್ರಮೆಯಂಗಳಲ್ಲಿ | ಹರಿ ಉ-ದಾರ ಗುಣಂಗಳು ಅಲ್ಲಿ | ಉಕ್ತಮೀರದೆ ಸ್ಪಷ್ಟತ್ವದಲ್ಲಿ | ಆಹನೇರವಾಗಿಯೆ ಪೇಳ್ದ | ಕಾರಣ ಕರೆವರುಮೂರರೊಳ ಗೊಂದು | ಸಾರಸಮಾಧ್ಯೆಂದು 3 ದರ್ಶನಾಂತರ ಸಿದ್ಧವಾದ | ವೈಷ್ಣ್ವದರ್ಶನ ಪ್ರತ್ಯುಕ್ತವಾದ | ಶೈವದರ್ಶನಾದಿ ಸಿದ್ಧವಾದ | ವಸ್ತುದರ್ಶಿತ ಶಿವನರ್ಚಿಸೀದ | ಆಹ ವಿ-ಮರ್ಶನ ಯೋಗ್ಯ ಸ | ದೃರ್ಶನ ದಿಂದಲಿದರ್ಶನ ಭಾಷೆ ದಿ | ಗ್ದರ್ಶನ ವಿದು ತಿಳಿ 4 ಶೂಲಾಟ್ಟ ಜನಪದವೆಂಬ | ಶಿವಶೂಲವು ಚತುಷ್ಪಥವೆಂಬ | ಕೇಶಶೂಲಿಗಳ್ಪ್ರಮದೇರು ಎಂಬ | ಯುಗಕಲಿಯೊಳಗಿಹರು ಎಂಬೆಂಬ | ಆಹಮೇಲಾದ ಗೂಢಾರ್ಥ | ಜಾಲಗಳೆಲ್ಲವುಓಲೈಸು ಗುಹ್ಯದ | ಭಾಷೆ ಎಂದೆನುತಲಿ 5 ಪರ ಪಾಂಡವಾದಿಗಳ್ಪೆಸರೆಂದು 6 ಸ್ವರವರ್ಣ ವಾಕ್ಯ ಭಾರತ | ಗ್ರಂಥಸರ್ವವು ಮುಖ್ಯ ಪ್ರವೃತ್ತ | ಹರಿಸರ್ವೋತ್ತಮನೆಂಬ ತತ್ವ | ಪೇಳೆಸಿರಿ ವೇದವ್ಯಾಸ ವಿರಚಿತ | ಆಹಪರಮ ಭಕ್ತರು ಪೃಥೆ | ವರ ಉದರೋದ್ಭವಧರ್ಮಾದ್ಯರ ಚರಿತೆ | ಅರುಹುವುದೆನುತಲಿ 7 ಗುಣಗಳು ಭಕ್ತ್ಯಾದಿ ದಶವು | ಇನ್ನುಕರ್ಣದಿಂ ಕೇಳ್ವುದೆಲ್ಲವು | ಹಾಗೆಗುಣಗಳು ಶೀಲ ವಿನಿಯಾವು | ಮತ್ತೆಗುಣಸುವುದು ಮೂರು ವೇದವು | ಆಹಮನು ಪದ ವಾಚ್ಯಗ | ಳೆನಿಸುವುದೀ ಪಂಚಗುಣಧರ್ಮ ವಾಚ್ಯರು | ಪಾಂಡವರೆನಿಪರು 8 ಅಭಿಮಾನಿ ಧರ್ಮಕ್ಕೆ ಎಂದು | ಮನುಅಭಿಧನು ಧರ್ಮಜನೆಂದು | ಇನ್ನುಅಭಿಮಾನಿ ಭಕ್ತ್ಯಾದಿಗೆಂದು | ಭೀಮನಭಿಧನಾಗಿಹನವ ಎಂದು | ಆಹಅಭಿಧನರ್ಜುನ ಶ್ರುತ | ಕಭಿಮಾನ ಎನುತಲಿಶುಭ ಶೀಲ ವಿನಯಕ್ಕೆ | ಅಭಿಮಾನಿಯಮಳರು 9 ಪರಿ ಪತಿ ಪರಿ ಜ್ಞಾನುಳ್ಳ | ಆ ಪೃಥೆ ಸುತರೆಲ್ಲನೀ ಪರಿಭಾವಿಸು | ಆಸ್ತೀಕರೆನುತಲಿ 10 ದ್ರುಪದಜೆ ಧರ್ಮಾದಿ ಐದು | ಜನಸುಪುಣ್ಯ ಶ್ಲೋಕರ ಕಥೆ ಇದು | ಇನ್ನುಉಪರಿಚರಾಭಿಧನೆಂದು | ವಿಷ್ಣುಸುಪ್ರತಿಪಾಧ್ಯನು ಎಂದು | ಆಹಇಪ್ಪರಿ ಮಹಿಮೆಯು | ಪೇತವು ಭಾರತಸುಪ್ರತಿಷ್ಠಿತವಿದು | ಅಬ್ಜಜಾಂಡದಲೆಂದು11 ಭಕ್ತಿವೈರಾಗ್ಯವು ಜ್ಞಾನಾ | ಮತ್ತೆಧೃತಿಯು ಸುಮೇಧಾ ಸುಪ್ರಜ್ಞಾ | ಇನ್ನುಸ್ಥಿತಿ ಬಲಯೋಗವು ಪ್ರಾಣಾ | ಭೀಮಹತ್ತು ಗುಣಾತ್ಮಕ ಮಾನಾ | ಆಹಉತ್ತಮ ಗುಣಿಪರ | ನಾತ್ಮನಾ ಅದರಿಂದತತ್ತನು ಎನಿಸೀಹ | ಪೃಥ್ವಿಪ ಭೀಮನು 12 ಮೂರ್ತಿ ಮೂರ್ತಿ | ಆಹಕರೆಸಿಹ ಶಕುನಿಯು | ಮೂರುತಿ ನಾಸ್ತಿಕ್ಯಸರ್ವದೋಷಾತ್ಮಕ | ರೆನಿಪರಂಧಜರೆಲ್ಲಾ 13 ಹರವನಾತರನು ಎಂದು | ದ್ರೌಣಿಕರೆಸುವನಹಂಕಾರನೆಂದು | ಇನ್ನುಕರಣಗಳ್ಪ್ರಾಣಾದಿ ಎಂದು | ಮತ್ತೆವರ ಸೈನ್ಯ ಪಾಪಗಳೆಂದು | ಆಹಅರಿವುದರ ಪುಣ್ಯ | ಪರವೆಂದು ಪಾಂಡವರಇರುತಿಹ ವಿಷ್ಣುವು | ಅವರ ನಿಯೋಜಕ 14 ಸರ್ವವು ಅಧ್ಯಾತ್ಮನಿಷ್ಟ | ಗ್ರಂಥದುರ್ವಿಜ್ಞೇಯ ಸರ್ವರ್ಗೆ ಎನುತ | ವ್ಯಾಸಸರ್ವಜ್ಞ ತಾನೆಲ್ಲ ಜ್ಞಾತ | ನಿಹಪೂರ್ವ ಮಾರುತ ಹರಿದೂತ | ಆಹಅರಿವ ಗುರು ಗೋವಿಂದ | ವಿಠಲಾನುಗ್ರಹದಿಂದಮರುತಾನುಗ್ರಹದಿಂದ | ಅರಿವರು ಇತರರು 15
--------------
ಗುರುಗೋವಿಂದವಿಠಲರು
ಚಿಂತೆ ಬಿಡಲಿಲ್ಲಾ ಎನ್ನಂತ ತಿಳಿಯಲಿಲ್ಲಾ ಪಾದ ಕಾಣದೇ ವ್ಯರ್ಥ ಸತ್ತೆನಲ್ಲಾ ಪ ನೀರಮೇಲಣಗುಳ್ಳೆ ಸಂಸಾರವೆಂಬುವ ಬಳ್ಳಿ ತೋರಿ ಯಡಗೋದಿಲ್ಲ ಆಧಾರ ಗತಿಗೆ ಅಲ್ಲಿ ನೀರಜದೆನೆ ನೀರಿನ ಸಂಗ ಪರಿ ಇರುತಿಹೆ 1 ಹೆಣ್ಣು ಹೊನ್ನು ಮಣ್ಣು ಜೀವ ಭವ ಪೆಣ್ಣು ಫಣಿಗಣ್ಣಗೆ ಬಿಡದಿನ್ನು ಬೆಣ್ಣೆ ಜಲವ ಉಣ್ಣದ ಪರಿ ಕುನ್ನಿ ವಿಷಯಗಣ್ಣಿಸದಿಹೇ 2 ಶುಭಗುಣಗಣ ಹೃದಯ ಎನಗಭಯವೀಯೋ ಸದಯಾ ಪ್ರಭು ನರಸಿಂಹ ವಿಠಲಯ್ಯಾ ನಿನ- ಗಭಿನಮಿಸುವೆನಯ್ಯಾ ಸುಭಗ ನಿನ್ನ ಪಿಡಿದೆನಯ್ಯಾ ಶುಭಕರ ಸಿರಿಮೊಗ ತೋರಯ್ಯಾ 3
--------------
ನರಸಿಂಹವಿಠಲರು
ಚೈತ್ರದುತ್ಸವ ಗೀತೆ ಚೈತ್ರಮಾಸದ ಕೃಷ್ಣಪಕ್ಷ ಷಷ್ಠಿಯಲಿ ಕಟ್ಟಿ[ದರು] ಕಂಕಣವನು ಸೃಷ್ಟಿಗೀಶ್ವರಗೆ ಪ. ಮೊದಲು ದಿವÀಸದಿ ಧ್ವಜಪಟವನೇರಿಸಿ ಸುರರು 1 ಯಾಗಶಾಲೆಯ ಪೊಕ್ಕು ಯಾತ್ರದಾನವ ಬೇಡಿ ಸೂತ್ರ ಧರಿಸಿದರು 2 ಸರ್ಪಮೊದಲಾದ ಅಲ್ಲಿರ್ಪ ವಾಹನವೇರಿ ಕಂ ದರ್ಪನಪಿತ ಬಂದ ಚಮತ್ಕಾರದಿಂದ 3 ಬೆಂಡಿನ ಚಪ್ಪರ ಬೆಳ್ಳಿಕುದುರೆಯನೇರಿ ಪುಂಡರೀಕಾಕ್ಷ 4 ರೇವತಿ ನಕ್ಷತ್ರದಲಿ ಏರಿ ರಥವನ್ನು [ತಾ] ವೈಯ್ಯಾರದಿಂದಲೆ ಬಂದ ವಾರಿಜನಾಭ 5 ಗೋವಿಂದ ಗೋವಿಂದಯೆಂದು ಪ್ರಜೆಗಳು [ತಾವಾ]ನಂದದಿಂದ ನೋಡಿ ಪಾಡುತ್ತ 6 ಗೋವುಗಾಣಿಕೆಯನ್ನು ಗೋಪಾಲರು ತಂದು ನೀ ಲಾವರ್ಣನಿಗಿತ್ತರು ನೇಮದಿಂ ಪೂಜೆಯ 7 ಧ್ವಜಮಂಟಪದಲ್ಲಿ ಹರಿಭಜನೆಗಳ ಮಾಡು[ತ್ತಿರೆ] ಭುಜಗಶಯನನು ವರವಿತ್ತು ಕಳುಹಿದನು 8 ಸಪ್ತಾವರಣವ ಸುತ್ತಿ ತೀರ್ಥವನಿತ್ತು ಅರ್ಥಿಯಿಂದಲೆ ಬಂದ ಭಕ್ತವತ್ಸಲನು 9 ಬೊಂಬೆ ಅಂದಣವೇರಿ[ದ] ಅಂಬುಜನಾಭ ಕುಂಭಿಣಿಗಧಿಕವೆಂತೆಂಬ ಶ್ರೀರಂಗ 10 ಚಿತ್ರರಥ[ದ] ವಿಚಿತ್ರಮೂರುತಿಯ ನೋಡಿ ಪ ವಿತ್ರರಾದರು ಧಾತ್ರಿ[ಯ] ಉತ್ತಮರೆಲ್ಲ 11 ಬಂದ ಪ್ರಜೆಗಳು ಎಲ್ಲ ಆನಂದದಿ ಪೋಗೆ ಬಂದು ಆಸ್ಥಾನದಿ ನಿಂದ ಶ್ರೀರಂಗ 12 ಸೃಷ್ಟಿಯಲಿ ಪುಟ್ಟಿದ ದುಷ್ಟಪ್ರಾಣಿಗಳ [ನೆಲ್ಲ] ಶ್ರೇಷ್ಠ ಮಾಡಲಿ [ನಮ್ಮ] ವೆಂಕಟರಂಗ 13
--------------
ಯದುಗಿರಿಯಮ್ಮ
ಜಗದಯ್ಯಾ ಜಗದಯ್ಯಾ ಜಗತ್ರಾಣ ಜಗಜೀವನ ಪಾವನ ಪ ಸಾವು ಹುಟ್ಟುಯೆಂಬ ಹೇಯಕುಣಿಯೊಳು ಬಿದ್ದು ನೋಯಲಾರದೆ ಬಲು ಬಾಯಬಿಡುತ ನಿಮ್ಮ ಪಾವನ ಪಾದಕ್ಕೆ ಮರೆಯಬಿದ್ದೆನಯ್ಯ ಸೇವಕಜನರಯ್ಯಾ ಕಾಯೋ ಎನ್ನಾರ್ಯ 1 ಪರಿಭವಶರಧೆಂಬ ಉರಿವಕಿಚ್ಚಿನೊಳು ಪರಿಪರಿಮರುಗುತ ಕರುಣಾಂಬುಧಿ ನಿನ್ನ ಅರಿವಿಟ್ಟರಿದೆ ವರ ಪರಮ ಬಿರುದುಗಳು ಶರಣಾಗತರ ಪ್ರಿಯಕರ ಪಿಡಿದೆತ್ತಯ್ಯ 2 ವಿಷಯಲಂಪಟವೆಂಬ ವ್ಯಸನಕೂಪದಿ ಬಿದ್ದು ಬಸವಳಿದನುಪಮ ದೆಸೆಗೆಟ್ಟೆ ಕುಸುಮಾಕ್ಷ ಶಿಶುವಿನ ತವಪಾದ ಅಸಮದಾಸಜನ ರೊಶದಿ ಇಟ್ಟು ಪೊರೆ ಕುಶಲಮತಿಯ ನೀಡಿ3 ಭವಭವದಲಿ ಬೇಡುವೆನಭವನೆ ಬಾಗಿ ದಯಪಾಲಿಸಿ ಸ್ಥಿರಜ್ಞಾನಸುಪದವ ಭವಗುಣಹಿಂಗಿಸಿ ದಿವನಿಶೆನ್ನುವುದಕೆ ಸವಿನಾಮವಿತ್ತು ಕಾಯೋ ಭವರೋಗವೈದ್ಯನೆ 4 ಮೂರರಿಂ ಗೆಲುವಿತ್ತು ಮೂರರಿಂದಾಂಟಿಸಿ ಮೂರರ ಮೋಹನಿವಾರಿಸು ದೇವ ಮೂರು ನಿನಗರ್ಪಿಸಿ ಸಾರಿಬೇಡುವೆ ನೀಡ ಪಾರಮೋಕ್ಷಪದ ಧೀರ ಶ್ರೀರಾಮಯ್ಯ 5
--------------
ರಾಮದಾಸರು
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ಜಗದ್ಗುರೋ ರಾಮ ತ್ರಾಹಿ ಶ್ರೀ ರಾಮಚಂದ್ರಜಗದ್ಗುರೋ ರಾಮ ತ್ರಾಹಿ ಪದಶರಥನಂದನ ದನುಜ ವಿಮರ್ದನಪಶುಪತಿನುತ ಗುಣ ರವಿನಯನ 1ಕೌಸಲ್ಯಾತ್ಮಜ ಕಮನೀಯಾನನಕೋಮಲ ಕುವಲಯ ದಳ ವರ್ಣ 2ವನಚರ ಪೋಷಕ ಸೇತು ವಿಧಾಯಕಘನ ಧನುಃಶರಧರ ಧೃತಲೋಕ 3ಜಯಜಯ ರಾಘವ ಜಾನಕೀವಲ್ಲಭಭಯಗಣ ನಾಶನ ಭಾನು ನಿಭ 4ದಶಮುಖ ನಂದನ ಮಾನ ವಿಭಂಜನಬಿಸಜಜ ಪೂಜಿತ ಪದನಳಿನ 5ಮುನಿಮಖಪಾಲಕ ತಾಟಕೀಶಿಕ್ಷಕಮುನಿಸತಿದಾಯಕ ಮುನಿತಿಲಕ 6ತರಣಿ ಕುಲೋದ್ಭವ ತಿರುಪತಿ ಗಿರಿವರಸ್ಥಿರಸ್ಥಿತ ವೆಂಕಟ ಸುಖಸಾರ 7ಓಂ ಮ್ಟುಕಾಸುರ ಚಾಣೂರ ಮಲ್ಲಯುದ್ಧವಿಶಾರದಾಯ ನಮಃಕಂ||ಸ್ಥಿರವಾರದರ್ಚನೆಯು ಸುಸ್ಥಿರ ಸಂಪದ್ಭಕ್ತಿ ವಿಜ್ಞಾನಪ್ರದವೆಂದೇಸ್ಥಿರಚಿತ್ತನಾಗಿ ಮಾಡ್ದೆನುಸ್ಥಿರವಾಗಿರು ಮನದಿ ನೀನೆ ವೆಂಕಟರಮಣಾ
--------------
ತಿಮ್ಮಪ್ಪದಾಸರು
ಜಗನ್ನಾಥದಾಸರು ರಕ್ಷಿಸೋ-ಗುರುವರ-ರಕ್ಷಿಸೋ ಪ ಈಕ್ಷಿಸೊ ಕರುಣ ಕಟಾಕ್ಷದಲಿನ್ನ ಶಿಕ್ಷಿಸು ಮಧ್ವಾಗಮವ ಮುನ್ನ ಉಕ್ಕಿಸು ಭಕ್ತಿ ವಿರಕ್ತಿ ಚೆನ್ನ | ಆಹ ಲಕ್ಷ್ಮೀಕಾಂತನ ಅಪರೋಕ್ಷದಲಿ ಕಂಡು ಪ್ರ- ತ್ಯಕ್ಷ ಔತಣ ಉಂಡ ದಕ್ಷ ಶ್ರೀ ಜಗನಾಥ ವಿಠಲನ ದೂತ ಅ.ಪ. ನರಸಿಂಹದಾಸರ ಕುವರಾ-ಧರಿಸಿದೆ ಶ್ರೀನಿವಾಸನಪೆಸರ ವರಕವಿತಾ ಹುಟ್ಟಿನ ಸಾರ-ಮೆರೆಯಿತು ಕೀರ್ತಿ ಅಪಾರ \ಆಹ ವರದೇಂದ್ರನ್ನ ಅಶುಕವಿತಿಯಲಿಪೊಗಳಿ ವರಶಿಷ್ಯನಾಗುತ ಮೂರೊಂದು ಶಾಸ್ತ್ರದಿ ಕಡುಹುಲಿ ಎನಿಸಿದೆ 1 ನ್ಯಾಯಶಾಸ್ತ್ರದಿ ಜಗಜ್ಜಟ್ಟೀ-ವೇದಾಂತರಸಗಳ ಭಟ್ಟಿ ಮಾಯಾವಶಿರ ಮೆಟ್ಟಿ-ಅಹಂಕಾರ ಶಿರದಲಿಟ್ಟಿ ಆಹ ಶ್ರೇಷ್ಠವಿಜಯದಾಸರು ಮನೆ ಮುಟ್ಟಿ ಕರೆದರು ನಿನ್ನ ಬಹು ಬಹು ಕಂಗೆಟ್ಟೀ ಬತ 2 ಹೋಯಿತು ಕಳೆಮುಖದಿಂದ ಕಚ್ಚಿತು ಭರದಿಂದ ಆಹ ಭರದಿ ಹರಿಯ ಕರುಣ ಜರುಗಿ ಪೋದುದಕಂಡು ಕೊರಗಿ ಕೊರಗುತ ಕ್ಷೇತ್ರ ತಿರುಗುತ ಕೊನೆಗೆ ಗುರು ರಾಘವೇಂದ್ರರ ಪುರವ ಸೇರುತ ಬಹಳ ಕಾಯ ದೆರಗಿ ಸೇವೆಯಗೈದೆ 3 ಕರುಣಾಮಯನು ಸ್ವಪ್ನದಿ ಗುರುವು- ಗುರು ದ್ರೋಹ ಕಾರಣ ವರುಹಿ ಸುರಿಸಿ ಆಶೀರ್ವಾದವ ಶಿರದಿ- ತೆರಳೆಂದ ವಿಜಯದಾಸರ ಬಳಿ ಆಹ ತೆರೆದು ಕಂಗಳು ಒಡನೆ ತರಿದು ಮದಮಾತ್ಸರ್ಯ ಕರೆದು ಕುಡಿಯುತ ಶಿಷ್ಯ- ವರನು ಎನಿಸುತ ಚರಣಸಾರುವ ಬಿಡದೆ ಗೋಪಾಲದಾಸರ 4 ಸ್ವಗುರುಭಾವವತಿಳಿದು ತನ್ನಾಯುವನೆ ಇತ್ತ ಆಹ ಕೊಂಡು ಆಯುರ್ದಾನ ತೊಂಡನೆಂದಡಿಗೆರಗಿ ಕೊಂಡು ಶ್ರೀಹರಿದಾಸ ಗಂಡುದೀಕ್ಷೆಯ ಒಡನೆ ತಾಂಡವಾಡುತ ಪೋಗಿ ಪಾಂಡುರಂಗನ ಪುರದಿ ಮಂಡೆ ಮುಳುಗಿಸೆ ನದಿಲಿ ಕಂಡೆ ಅಂಕಿತ ಶಿರದಿ 5 ಪಂಡಿತನಾನೆಂಬ ಹೆಮ್ಮೆ ಬರಿ-ಪುಂಡತನವಲ್ಲದೆ ಹರಿಯ ನಿಜ ನಿನ್ನ ಚರಿತೆ ಆಹ ತಂಡತಂಡದ ಕವನ ದಂಡೆ ಹಾರಲು ಹರಿಗೆ ಕೊಂಡು ಔಡಣ ನಡಿಸೆ ಉಂಡು ಸಂತಸದಿಂದ ತುಂಡುಗೈಯುವ ಭವವ ಕಂಡೆ ನಾಕವ ಭುವಿಲಿ 6 ದೇಶದೇಶಗಳ ಸಂಚರಿಸಿ-ಹೇಸಿ ಮತಗಳ ನಿರಾಕರಿಸಿ ಪೊರೆದೆ ಹರೆಸಿ ಆಹ ಭಾಷಾದ್ವಯ ಯೋಜನೆ ಮೀಸಲು ನಿನಗೆಂಬೆ ವ್ಯಾಸ ರಾಜಾದಿಗಳ ಆಶೆಯಂದದದಿ ತತ್ವ- ರಾಶಿ ತುಂಬುತ ಗ್ರಂಥರಾಜ ರಚಿಸುತ ಜಗಕೆ ತೋಷ ತಂದಿತ್ತಿಯೊ ದಾಸಜನರುಲ್ಲಾಸ 7 ಶ್ರೀಮದ್ಧರಿಕಥಾಮೃತಸಾರ-ನೇಮ ದಿಂದೋದುವನೆ ಧೀರ ತಾಮಸರಿಗಿದು ಬಹಳದೂರ- ನೀಮಾಡಿದೆ ಮಹೋಪಕಾರ ಆಹ ಕಾಮವರ್ಜಿತವಾಗಿ ಪ್ರೇಮದಿ ನರಹರಿಯ ಭಾಮಸಹ ಸಂತತ ನೇಮದಿಂ ಧ್ಯಾನಿಸುತ ನಿತ್ಯ ಸಕಲೇಂದ್ರಿಯ ವ್ಯಾಪಾರ ಧೂಮಕೇತುವು ಎನಿಸುತ ನಮ್ಮಘಕಾನನಕೆ 8 ಪ್ರಾಣೇಶ ಕರ್ಜಗಿ ದಾಸಾರ್ಯರವೃಂದ- ನೀನಾಗಿ ಪೂರೆದಂತೆ ಘನ ಅಭಿಮಾನದಿಂದ ದೀನರೆಮ್ಮಯವೃಂದ ಕಾಯೆಂಬೆ ಮುದದಿಂದ- ತಾಣ ನಿಮ್ಮದೆ ನಮಗೆ ದಾಸಪಂಥ ಸ್ತಂಭ ಆಹ ಕೃಷ್ಣಾಗ್ರಜ ಶಲ್ಯ ಸಹ್ಲಾದ ಮತ್ತಾ ಪುರಂದರ ದಾಸಾತ್ಮಜನೀನಂತೆ ದೀನಜನೋದ್ಧಾರಗೈಯ್ಯೆ ಮುಂದೇಳುಬಾರಿ ಜನ್ಮಯೆತ್ತು ವಿಯಂತೆ ಶರಣು ಕರುಣಾಮಯ 9 ಕನ್ನಡಕೆ ಮುಳ್ಳು ಕುವರ ನೀಮುದ್ದು ಆಹ ಶರ್ಕರಾಕ್ಷಸಗೋಸ್ಥ ಅನುಸಂಧಾನ ಕ್ರಮ ಸು ನೀಕವಡಗಿಸಿ ಕವನ ಕಡಲೊಳು ಸಾಕಿಹೆ ಹರಿ ಭಕ್ತಸಂಘವ ಹಿರಿಯ ದಾಸರ ಪಥವನನುಸರಿಸಿ ಶಕ್ತನಾವನು ಗುಣಿಸೆ ನಿನ್ನುಪಕಾರ ಜಗಕೆ 10 ಸಣ್ಣವನು ನಾ ನಿನ್ನು ಗುರುವೇ-ನಿನ್ನವ ಸತ್ಯ ಮನ್ಮನ ಪ್ರಭುವೆ ಮನ್ನಿಸಪರಾಧ ಕಲ್ಪ ಧ್ರುಮವೆ-ಚಿಣ್ಣರ ಸಲಹೆ ಪಿತಗೆ ಶ್ರಮವೆ ಆಹ ಘನ್ನ ಜಯತೀರ್ಥ ವಾಯ್ವಂತರ್ಗತ ಶ್ರೀ ಕೃಷ್ಣವಿಠಲ ತದ್ವನನೆಂದು ಭಜಿಸುವ ಭಾಗ್ಯ ಜನ್ಮಜನ್ಮಂತರ ಕೊಟ್ಟು ಕಾಪಾಡುವಂಥ ನಿನ್ನಭಯಕರವೆನ್ನ ಶಿರದಲಿಡುವಲಿ ಸತತ 11
--------------
ಕೃಷ್ಣವಿಠಲದಾಸರು