ಒಟ್ಟು 972 ಕಡೆಗಳಲ್ಲಿ , 94 ದಾಸರು , 780 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಸನ್ನ ಶ್ರೀ ನರಸಿಂಹ (ಪ್ರಹ್ಲಾದ ಚರಿತೆ)] ಪ್ರಥಮ ಅಧ್ಯಾಯ - ಹಿರಣ್ಯಕಶಿಪು ಪೂರ್ವ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ತೋಯಸ್ಥ ಪತ್ರಸ್ಥ ತೋಯಜಾಲಯಾ ಸ್ತುತ್ಯ ಅಂಡ ಸ್ರಷ್ಟಾ ಸರ್ವಸ್ಥ ಅಚ್ಯುತಾನಂತ ಗೋವಿಂದ ನೀ ಸಜ್ಜನರ ಭಯ ನಿವಾರಣ ಮಾಳ್ಪಿ ತೋರಿ ಆಗಾಗ 1 ಪ್ರಳಯ ಜಲಚರ ಶೈಲಧರ ಧರೋದ್ಧರ ನಮೋ ಬಾಲಕಗೆ ಒಲಿದು ಬಲಿಯಲಿ ದಾನ ಕೇಳಿ ಖಳ ಕುಪಾಲರ ಸದೆದು ಜಲಧಿಯ ಬಂಧಿಸಿದ ಲಲನೇರ ರಂಜಿತ ಶಿಶು ಶಂಭಳದಿ ತೋರ್ವಿ 2 ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೇ ತಡೆದರು ದ್ವಾರಪಾಲಕರು 3 ಜಯವಿಜಯರೆಂಬ ಆ ದ್ವಾರಪಾಲಕರಿಗೆ0 ಮಾಯೇಶ ಹರಿ ಪ್ರಿಯತರರು ಮುನಿವರರು ಈಯಲು ಶಾಪವ ಆ ವಿಷ್ಣು ಪಾರ್ಶದರು0 ದೈತ್ಯಜನ್ಮವ ಹೊಂದಿದರು ಪತನವಾಗಿ 4 ಸುತಪೋನಿಧಿ ಕಶ್ಯಪ ತೇಜೋಲ್ಬಣದಿಂ ದಿತಿದೇವಿ ಜಠರದಲಿ ವಿಷ್ಣು ಪಾರ್ಶದರು ಪತಿತ ಆ ಜಯ ವಿಜಯರು ಪ್ರವೇಶಿಸಿದರು ದಿತಿ ಹಡೆದಳು ಗಂಡು ಮಕ್ಕಳೀರ್ವರನು 5 ದಿತಿದೇವಿ ಅಗ್ರಸುತ ಹಿರಣ್ಯಕಶಿಪು ಜಯ ದಿತಿ ಅವರಸುತ ವಿಜಯನೇ ಹಿರಣ್ಯಾಕ್ಷ ಉಪಟಳ ಕೊಟ್ಟನು ಈ ಧರೆಯ ಅಬ್ಧಿಯ ಕೆಳಗೆ ಅಡಗಿಸಿದ 6 ಸುರಸುಜನ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಹಿರಣ್ಯಾಕ್ಷನ ಕೊಂದು ಧರೆಯ ಲೀಲೆಯಿಂದ ಮೇಲೆತ್ತಿತಂದಿ ವರಾಹ ಹರಿ ನೀನು 7 ಜಯ ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 -ಇತಿ ಪ್ರಥಮಾಧ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಕಶಿಪು ವರ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಮೂರ್ಜಗದ ದೊರೆ ಹರೇ ನೀ ತನ್ನ ತಮ್ಮನ ಭಂಜಿಸಿದೆ ಎಂದು ಕಡುಕೋಪಗೊಂಡು ದುರ್ಜನ ದಾನವ ವಂದಿತ ಹಿರಣ್ಯಕನು ರಜಸ್ತಮೋಚ್ಛದಿ ದ್ವೇಷ ಮಾಡಿದನು ನಿನ್ನಲ್ಲಿ 1 ಶೂಲದಿಂ ಅಚ್ಯುತನ ಕುತ್ತಿಗೆ ಕತ್ತರಿಸಿ ಗಳರುಧಿರ ತರ್ಪಣ ಕೊಡುವೆ ಎನ್ನುತ್ತ ಖಳ ದೈತ್ಯ ಪ್ರಮುಖರಿಗೆ ಹೇಳಿದನು ವೈಷ್ಣವ ಸ್ಥಳ ದ್ವಿಜ ಗೋ ಭಕ್ತರನ್ನ ತರಿ ಎಂದ 2 ಗರ್ಜಿಸುತ ದೈತ್ಯರು ಪುರ ಗ್ರಾಮ ಆಶ್ರಮ ವ್ರಜಕ್ಷೇತ್ರ ದಹಿಸÀಲು ಹಿರಣ್ಯಕಶಿಪು ಅಜೇಯಾಜರಾಮರತ್ವವ ಅಪ್ರತಿ ಮುಖ್ಯ ರಾಜತ್ವ ಹೊಂದಲು ತಪಸ್ಸು ಮಾಡಿದನು 3 ಊಧ್ರ್ವದಲಿ ಬಾಹುಗಳ ನಭದಲಿ ದೃಷ್ಟಿಯು ಪಾದಾಂಗುಷ್ಟ ಮಾತ್ರದಿ ನಿಂತು ತಪವ ಗೈದನು ಆ ತಪೋಧೂಮಾಗ್ನಿ ಪೀಡಿತ ತ್ರಿದಿವರು ಮೊರೆ ಇಟ್ಟರು ಬ್ರಹ್ಮನಲ್ಲಿ 4 ಪದುಮಭವ ಭೃಗು ದಕ್ಷಾದಿಗಳೊಡೆಯೈದು ದೈತ್ಯೇಶ್ವರ ಹಿರಣ್ಯಕನ ಆಶ್ರಮವ ಭದ್ರಂತೇ ತಪಸಿದ್ಧಿ ಆಯಿತು ವಶೀಕೃತನಾದ ಉತ್ತಿಷ್ಠೋತ್ತಿಷ್ಠ ವರ ಕೊಡುವೆನು ಎಂದ 5 ಬ್ರಹ್ಮನ್ನ ನೋಡಿ ಹಿರಣ್ಯಕನು ಸನ್ನಮಿಸಿ - ಬ್ರಹಾಂತರ್ಗತ ಹರಿ ವಿವಕ್ಷಿತ ಗುಣಗಳ ಬ್ರಹ್ಮ ಹರುಷದಿಂದಲಿ ಸಮ್ಯಕ್ ಕೀರ್ತನೆ ಮಾಡಿ ಆ ಹಂಸವಾಹನನ ವರಗಳ ಬೇಡಿದನು 6 ಸರೋರುಹಾಸನ ಸೃಷ್ಟ ಸರ್ವಭೂತಂಗಳು ಮೃಗ ಪ್ರಾಣ ಉಳ್ಳವು ಇಲ್ಲದವು ಹೊರ ಒಳಗೆ ಭೂಮ್ಯಾಂಬರ ದಿವಾ ರಾತ್ರಿಯು ಸುರಾಸುರ ಮೃತ್ಯು ಮಾ ಭೂನ್ಮ್‍ಮ ಎಂದ 7 ಏಕಪಥ್ಯವು ಅಪ್ರತಿ ಶಕ್ತಿಮತ್ಯವವು ಲೋಕಪಾಲಕರಂತೆ ಬಲವು ಮಹಿಮೆಗಳು ಯೋಗಿ ತಪಸ್ವಿಗಳಂತೆ ಸಿದ್ಧಿಗಳು ಸರ್ವವು ಬೇಕು ತನಗೆಂದು ವರ ಬೇಡಿದ ಬ್ರಹ್ಮನ್ನ 8 ಶತಧೃತಿಯು ಈ ದುರ್ಲಭ ವರಗಳನ್ನಿತ್ತು ತಾ ತೆರಳಿದನು ದೈತ್ಯನಿಂ ಪೂಜೆಗೊಂಡು ಭ್ರಾತೃವಧ ಅನುಸ್ಮರಿಸಿ ಹರಿದ್ವೇಷ ಬೆಳಸಿದನು ಲಬ್ಧವರ ದೈತ್ಯೇಶ ಇನ್ನೂ ಹೆಚ್ಚಾಗಿ 9 ನರಸುರಾಸುರ ಋಷಿ ಗರುಡೋರಗ ಸಿದ್ಧ ಚಾರಣ ವಿದ್ಯಾಧರ ಯಕ್ಷ ಗಂಧರ್ವ ಪಿತೃ ಪ್ರೇತ ಭೂತಪತಿ ರಾಕ್ಷಸ ಪಿಶಾಚೇಶ ಸರ್ವರನು ಜೈಸಿ ತನ್ನವಶ ಮಾಡಿಕೊಂಡ 10 ಮೂರ್ಲೋಕಂಗಳಲ್ಲಿ ದಶದಿಕ್ಕುಗಳಲ್ಲಿ ಈ ಹಿರಣ್ಯಕಶಿಪು ತನ್ನ ಜಯಭೇರಿ ಹೊಡೆದ ಸರ್ವಲೋಕಪಾಲರ ತೇಜಃಸ್ಥಾನಗಳ ಅಪ - ಹರಿಸಿ ತ್ರಿವಿಷ್ಟಪ ಭೋಗದಲಿ ಮನಸ್ಸಿಟ್ಟ 11 ಅಜಿತೇಂದ್ರಿಯ ಹೇಯ ಭೋಗರತ ಅಹಂಕಾರಿ ಮೂರ್ಜಗಾರಿಯು ಧರ್ಮ ಆಚಾರ ದ್ವೇಷಿ ನಿರ್ಜರರು ಅವನಿಂದ ಹಿಂಸೆ ತಾಳದೆ ವಿಷ್ಣೋ ತ್ರಿಜಗದೀಶನೇ ಮೊರೆ ಹೊಕ್ಕರು ನಿನ್ನಲ್ಲಿ 12 ಅಚ್ಯುತ ಈಶ್ವರ ನಿನ್ನ ಭದ್ರವಾಣಿ ಅಭಯ ಹೊಂದಿ ಸುರವರರು ನಿರೀಕ್ಷಿಸಿದರು ಪ್ರಶಾಂತ ಮಹಾತ್ಮಾ ನಿರ್ವೈರ ಪ್ರಹ್ಲಾದ ಹುಟ್ಟುವ ಕಾಲವನು 13 ಜಯತು ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 13 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ - ತೃತೀಯ ಅಧ್ಯಾಯ - ಬಾಲಕ ಪ್ರಹ್ಲಾದ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಯುಕ್ತ ಕಾಲದಿ ಹೇಮಕಶಿಪುಗೆ ಐದು ಮಕ್ಕಳು ಹುಟ್ಟಿದರು ನಾಲ್ವರು ಗಂಡು ಮಕ್ಕಳು ನಾಲ್ವರಲ್ಲಿ ಪ್ರವರ ಪ್ರಹ್ಲಾದನು ಅಕಳಂಕ ಗುಣಶ್ರೇಷ್ಠ ಮಹದುಪಾಸಕನು 1 ಸತ್ಯಸಂಧನು ಶೀಲಸಂಪನ್ನ ಬ್ರಹ್ಮಣ್ಯ ಜಿತೇಂದ್ರಿಯ ಸಮದರ್ಶಿ ಆರ್ಯರ ವಿಧೇಯ ಸ್ನಿಗ್ಧರಿಗೆ ಭ್ರಾತೃವತ್ ಯಥಾದೇವೋ ತಥಾಗುರೋ ಭೂತಪ್ರಿಯ ಸುಹೃತ್ತಮ ದೀನವತ್ಸಲನು 2 ವಿಧ್ಯಾರ್ಥಿ ರೂಪಾದಿಗಳ ಗರ್ವ ಇವಗಿಲ್ಲ ಶ್ರುತ ದೃಷ್ಟ ವಿಷಯದಲಿ ಗುಣಗ್ರಾಹಿಯು ಶಾಂತನು ದಾಂತನು ಸಾಧುಗಳಲಿ ಪ್ರಿಯ ಸದಾ ಸ್ವಭಾವದಿ ಶ್ರೀ ವಿಷ್ಣುಭಕ್ತಿ 3 ವಾಸುದೇವ ನಿನ್ನಲ್ಲೇ ಸರ್ವದಾ ಮನವನು ನೆಲಸಿ ಈ ಬಾಲ ಸರ್ವ ನಡೆನುಡಿ ಊಟ ಶಯನ ಪರ್ಯಟನ ಸರ್ವಾವಸ್ಥೆಯಲೂ ನಿನ್ನ ಸ್ಮರಿಸುವನು 4 ಅಂಬುಜೋದ್ಭವ ತ್ರ್ಯಿಂಬಕ ಮುಖ್ಯವಿನುತ ನಿನ್ನ ಅಂಬುಜಾಂಘ್ರಿಗಳನ್ನ ಧ್ಯಾನಿಪ ಈ ಬಾಲಕನ ಅಂಬಕದಿ ಸುಜ್ಞಾನ ಭಕ್ತಿ ಪುಳಕಾಂಬುವು ತುಂಬಿ ತುಳುಕಾಡುವುದು ಕಂಡಿಹರು ಅಂದು 5 ಒಮ್ಮೆ ನಗುವನು ಒಮ್ಮೆ ರೋದಿಸುವನು ಒಮ್ಮೆ ಸುಮ್ಮನಿರುವ ಹರಿ ಪ್ರೇಮಾನಂದದಲಿ ಅಮ್ಮಮ್ಮ ಭಕ್ತಿಯಲಿ ಕೂಗಿ ಕುಣಿವನು ಮಹಾನ್ ರಮೆಯರಸ ನಿನ್ನ ದಾಸಾಗ್ರಣಿಯು ಪ್ರಹ್ಲಾದ 6 ಮಹಾತ್ಮನು ಮಹಾಭಾಗ ಮಹಾಭಾಗವತನು ಮಹಾಕಾರುಣಿಕ ಪ್ರಹ್ಲಾದಗೆರಗುವೆನು ಅಹರ್ನಿಶಿ ಧೃತಿಸ್ಥ ಹರಿ ನಿನ್ನಲ್ಲಿ ಭಕ್ತಿ ಇಹಪರದಿ ಸೌಭಾಗ್ಯ ಎಮಗೀಯಲೆಂದು 7 ಜಯ ಗುಣಾರ್ಣವ ಭೂಮನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 - ಇತಿ ತೃತಿಯಾ ಅಧ್ಯಾಯ ಸಂಪೂರ್ಣಂ - ಚತುರ್ಥ ಅಧ್ಯಾಯ ಪ್ರಹ್ಲಾದರ ವಿಧ್ಯಾಭ್ಯಾಸ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ದೈತ್ಯರಾಜನು ಪ್ರಿಯಪುತ್ರ ಪ್ರಹ್ಲಾದನಿಗೆ ವಿದ್ಯೆಕಲಿಸಲು ಶಂಡಾಮರ್ಕರು ಎಂಬ ಬೋಧಕರ ಏರ್ಪಾಡು ಮಾಡಿಸಲು ಆ ಮಹಾನ್ ಇತರ ಬಾಲಕರೊಡೆ ಕೂಡಿ ಓದಿದನು 1 ವಿದ್ಯೆ ಕಲಿಯುವಾಗ ಇತರ ಬಾಲರ ಮೀರಿ ಪ್ರತಿಭೆ ತೋರಿಸಿದನು ಬಾಲಪ್ರಹ್ಲಾದ ಕೇಳ್ದ ಕಲಿತದೆÀ್ದಲ್ಲಿ ಸಾಧು ಹೇಳೆಂದು 2 ಸಂಸಾರಿ ಜೀವರುಗಳು ಸದಾ ಐಹಿಕ ನಿಸ್ಸಾರ ವಿಷಯಂಗಳಲ್ಲಿ ಮುಳುಗಿ ತಮಃಸಿಲಿ ಬೀಳದಿರೆ ಸಾಧು ಜನಸಂಗ ಶ್ರೀಶ ಹರಿ ಸರ್ವವಂದ್ಯನ ಆಶ್ರಯಿಪುದು 3 ಹೀಗೆ ಪ್ರಹ್ಲಾದ ಪೇಳಲು ಹಿರಣ್ಯಕ ಕೇಳಿ ಪರ ಬೋಧಿತನಾಗಿಹನೆಂದು ನೆನೆದು ಶುಕ್ರ ಸುತರು ತಮ್ಮ ಮನೆಯಲ್ಲೇ ಇಟ್ಟುಕೊಂಡು ತಕ್ಕ ವಿಧದಲಿ ಬುದ್ಧಿ ತಿದ್ದಿಸುವುದು ಎಂದ 4 ಗುರುಗಳು ಮನೆಯಲ್ಲಿ ಒಳ್ಳೆಮಾತಿಂದಲಿ ಪರಕೃತವೋ ಸ್ವತಃ ಕೃತವೋ ಈ ಹರಿಪಕ್ಷಬುದ್ದಿ ಅನೃತವಾಡದೆ ಸತ್ಯ ಪೇಳೆಂದು ಕೇಳಿದರು ಭಾಗವತ ಪ್ರಹ್ಲಾದ ಬಾಲನ್ನ 5 ಸತ್ತಾ ಪ್ರವೃತ್ತಿ ಪ್ರತೀತ್ಯಾದಿಪ್ರದ ಸರ್ವ - ಚಕ್ರಧರ ವಿಷ್ಣು ವಿಧಿ ಶಿವಾದೀಡ್ಯನಲಿ ರತತಾನು ಕಾಂತವು ಅಯಸ್ಸನ್ನು ಸೆಳೆವಂತೆ ಎಂದು 6
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಚೀನ ಕರ್ಮವಿದು ಬಿಡಲರಿಯದುಯೋಚನೆಯ ಮಾಡಿ ಬಳಲುವುದೇಕೆ ಮನುಜ ಪ ಕೌಪೀನ ಬಿಡಿಸಲಿಲ್ಲ ಹರಿಯು 1 ಲೋಕಾದಿಲೋಕಗಳ ಚರಿಸುವ ರವಿರಥಕೆಏಕಗಾಲಿಯು ಏಳುಕುದುರೆಗಳ ಕಟ್ಟಿಲೋಕಲೋಕಗಳನೆಲ್ಲ ಚರಿಸುವ ಅರುಣನಿಗೆಬೇಕೆಂದು ಚರಣಗಳ ಕೊಡಲಿಲ್ಲ ಹರಿಯು 2 ಸಾಸಿರ ನಾಮದ ಒಡೆಯಾದಿಕೇಶವನಬೇಸರಿಸದೆ ಹೆಗಲ ಮೇಲಿರಿಸಿಕೊಂಡುಆಕಾಶ ಮಾರ್ಗದಲಿ ಚರಿಸುವ ಗರುಡನಿಗೆನಾಸಿಕದ ಕೊನೆಡೊಂಕು ತಿದ್ದಲಿಲ್ಲ ಹರಿಯು 3
--------------
ಕನಕದಾಸ
ಬಂದ ಶ್ರೀ ಹರಿ ಬಂದ ಪ ಬಂದ ಬಂದ ಮುಚುಕುಂದ ಪರದ ಅರ- ವಿಂದನಯನ ಗೋವಿಂದ ಪರಾತ್ವರ ಕಂದನೆನ್ನ ಮನ ಮಂದಿರಕೀಗಲೆ ನಂದವ ನೀಡುತ ಇಂದಿರೆಸಹಿತದಿ ಅ.ಪ. ಪೊತ್ತವ ಬಂದ ಅಜಿತನುಬಂದ ಚಾರುವರಾಹನು ಭೂಸಹಬಂದ ಪೋರನ ಸಲಹಿದ ಘೋರನು ಬಂದ ಭಾರ್ಗವ ಬಂದ ಕೌರವವಂಶಕುಠಾರನು ಬಂದ ಕಲ್ಕಿಯು ಬಂದ 1 ಉಸುರಲು ಹಯಮುಖಬಂದ ದತ್ತನುಬಂದ ನೀಡಲು ಯಜ್ಞನುಬಂದ ಸಾಧುಹರಿನಾರಾಯಣ ಬಂದ ಶಿಂಶುಮಾರನು ಬಂದ ಧನ್ವಂತ್ರಿಯು ಬಂದ 2 ಶ್ರೀ ವಿಷ್ಣುವು ಬಂದ ಉಲ್ಲಾಸದಿ ಬಂದ ಸಂತೋಷನು ಬಂದ ತೈಜಸ ಕರುಣದಿ ಬಂದ ಮುಕ್ತೇಶನು ಬಂದ ಪರಾದ್ಯನಂತನು ಬಂದ 3 ಜಗನೂಕೂವ ಬಂದ ಪುರುಹೂತ ವಿನುತ ಸಕಲಾರ್ತಿಹರ ತಾ ಬಂದ ವೈರಾಜ್ಯನು ಬಂದ ಶೃತಿ- ನೀಕ ಸುವಂದಿತನಿರುಪಮ ಬಂದ ವಾಕುಮನಕೆ ಸಾಕಲ್ಯಸಿಗದ ಪುಣ್ಯ- ವಿವರ್ಜಿತ ಭಗಲೋಕೈಕ ವಂದ್ಯ ನಿಜಭಕ್ತಗಣ ಜಯಪರಾಕುನುಡಿಯುತಿರೆ ಮೆಲ್ಲ ಮೆಲ್ಲಗೆ4 ಸರ್ವಸಾಕ್ಷಿಗಭೀರ ಪರಾಕು ಸ್ವತಂತ್ರನೆ ಪರಾಕು ಸರ್ವರಪಾಲಿಪ ಸರ್ವರ ರಕ್ಷಿಪ ಸರ್ವಚರಾಚರಭಿನ್ನ ಪರಾಕು ಪ್ರತಿಪಾದ್ಯಪರಾರು ಸರ್ವಕಾಲದಲಿ ಸರ್ವದೇಶದೊಳು ಸರ್ವದೆಶೆಯೊಳು ಸಮನೆ ಪರಾಕು ಪರಾಕು 5 ನಿತ್ಯಾನಿತ್ಯಜಗಜ್ಜನಕ ಸರ್ವೋತ್ತಮ ಸತ್ಯಸಂಕಲ್ಪ ಪರಾಕು ನಿಖಿಳಪ್ರದಾಯಕ ಪರಾಕು ಭೃತ್ಯಾನುಗ್ರಹ ಕಾರಕಶೀಲ ಸದಾಪ್ತತಮ ವಿಶ್ವಾತ್ಮನೆಪರಾಕು ನಿತೈಶ್ಪರ್ಯ ಕೀತ್ರ್ಯಾತ್ಮಕ ಸರ್ವಾತತ ಬಲವಿಖ್ಯಾತಪರಾಕು ನೀತ ಜ್ಞಾನಾನಂದ ಪರಿಪೂರ್ಣನಿತ್ಯತೃಪ್ತ ಮಹಾಂತ ಪರಾಕು ಪರಾಕು 6 ಪರಾಕು ರೂಪಾತ್ಮ ಪರಾಕು ಪುರುಷ ಸೂಕ್ತ ಸುಗೇಯ ಪ್ರಖ್ಯಾತ ಮಹಾಮಹಿಮ ಪರಾಕು ನಾಮಕ ಪರಾಕು ಸುನಾಮ ಓಂಕಾರಾಧಿಪ ಪರಾಕು ವಿಭೂತಿ ಪರಾಕು 7 ಪ್ರೇಮ ಚೊಕ್ಕ ಸೃಷ್ಟಿಗೈವನಿತ್ಯಸುನೇಮ ಕರುಣಾಮಣಿ ಶ್ರೀಕಾಮ ಅಕ್ಕರೆಯಲಿ ಜಗಕಾವ ನಿಸ್ಸೀಮ ಮುಕ್ಕಣ್ಣ ವಿಧಿಸಿರಿ ಸಾರ್ವಭೌಮ ವಿನುತ ಗುಣಲಲಾಮ ಸುನಾಮ ಮೇಘಶ್ಯಾಮ 8 ಸುಂದರ ಬಂದ ಸೃಷ್ಠಿಸ್ಥಿತಿಲಯಗೈವ ಮು- ವೃಂದಕಳೆದು ನಿಜ- ಸುಧಾರ್ಣವ ಬೃಹತೀನಾಮಗ ಮಂದಸ್ಮಿತ ವದನವ ತೊರುವ ಈತನು ಸ್ಯಂದನವೇರಿಹ ಜಯಮುನಿಹೃದಯಗ ಮಧ್ವರಮಾವರ ಶ್ರೀಕೃಷ್ಣವಿಠಲನು ಭವ ಪರಿವಾರದ ಕೂಡಿಯೆ ಬಂದಾ 9
--------------
ಕೃಷ್ಣವಿಠಲದಾಸರು
ಬಂದನಿಂದು ರಾಘವೇಂದ್ರನು ಆನಂದದಿಂದಲಿ ಬಂದನಿಂದು ರಾಘವೇಂದ್ರನು ಪ. ಕಂದರಾದ ಭಕ್ತ ಜನರ ಚಂದದಿಂದ ಪೊರೆವೆನೆಂದು ಅ.ಪ. ಪರಿಪರಿಯ ವೈಭವವನು ಪಡಲಿಬೇಕೆಂದು ಕರದು ತರಲು ಕರಕರಿಯ ಕರದು ಮನವ ನೋಡಬೇಕೆಂದು 1 ಕರುಣಾನಿಧಿ ಎಂದೆನಿಸಿ ನಿನಗೆ ಥರವೆ ಇದು ಎಂದು ಪರಿಪರಿಯಲಿ ಸ್ತುತಿಸುತಿರಲು ಸ್ಥಿರವಾರದಿ ಹರುಷ ತೋರಲು 2 ಬಂದ ಬುಧರಿಂದ ಪೂಜೆನಂದಗೈಸ ಬೇ ಕೆಂದು ತುಂಗಜಲವ ತರುತಿರÉ ಬಂದ ಮಾಯದಿಂದ ಹರಿಯು 3 ದ್ವಿಜರ ಹಸ್ತಜಲವ ಶ್ರೀನಿವಾಸ ಬೇಡಲು ದ್ವಿಜರು ಕೊಡಲು ಗುರುಗಳನ್ನು ಪೂಜೆಗೈದೆನೆಂದು ನುಡಿದ 4 ಈ ತೆರದ ಕೌತುಕವ ಶ್ರೀನಾಥ ತೋರುತ ಆ ತಕ್ಷಣದಿ ಮಾಯವಾಗೆ ರೀತಿಯಿಂದ ಪೂಜೆಗೈಯ್ಯಲು 5 ಮಂತ್ರಾಲಯದ ಮಂದಿರನಿಗೆ ಪಂಚಾ ಮೃತದಿಂದ ಸಂತೋಷದಲಿ ಪೂಜೆ ಗೈದು ಪಂಚಮೃಷ್ಟಾನ್ನ ಬಡಿಸೆ6 ಶ್ರೀನಿವಾಸ ಸಹಿತ ಶ್ರೀ ರಾಘವೇಂದ್ರರು ಸಾನುರಾಗದಿ ಸೇವೆಕೊಂಡು ನಾನಾ ವಿಧದ ಹರುಷಪಡಿಸೆ 7 ಎನ್ನ ಮನಕೆ ಹರುಷಕೊಡಲು ನಿನ್ನ ಭಜಿಸುವೆ ನಿನ್ನ ಮನಕೆ ಬಾರದಿರ್ದೊಡೆ ಮುನ್ನೆ ಪೋಗಿ ಬಾರೆಂದೆನಲು 8 ತುಂಗಮಹಿಮ ರಾಘವೇಂದ್ರರ ಮಂಗಳದ ಪುತ್ರ ಕಂಗಳೀಗೆ ತೋರಿ ಅಂತ ರಂಗದಲ್ಲಿ ಹರುಷವಿತ್ತು 9 ಶ್ರೀ ಗುರುಗಳ ಕರುಣದಿಂದ ರಾಘವೇಂದ್ರನು ಭಾಗವತರ ಪೊರೆವೆನೆಂದು ಯೋಗಿ ಶೇಷಾಂಶ ಸಹಿತ 10 ಇಂತು ರಾಘವೇಂದ್ರ ಗುರು ತಾ ಶಾಂತನಾಗುತ ಶಾಂತ ಗೋಪಾಲಕೃಷ್ಣವಿಠ್ಠಲನ ಅಂತರಂಗದಿ ತೋರ್ವೆನೆಂದು 11
--------------
ಅಂಬಾಬಾಯಿ
ಬಂದು ನಿಂದಾ | ಕಣ್ಣ ಮುಂದೆ | ಬಂದು ನಿಂದಾ ಪ ಬಂದು ನಿಂದಾ ಭಾಗವತರ ಪ್ರಿಯಾ | ಮೂರ್ತಿ ಅಪ ಕುಟಿಲ ಕುಂತಲ ದೇವ | ವಟು ವೇಷದಿಂದಲಿ || ನಟನೆ ಮಾಡುತ ದಿವ್ಯ | ಪಟುತರದಲಿ ತಾನು 1 ಮುರಳಿನೂದುತ್ತ | ಮರುಳುಗೊಳಿಸಿ ಜನರ || ಕೊರಳ ಪದಕಹಾರ | ಧರಿಸಿ ತಾ ನಲಿಯುತ 2 ಸುಜನರ ಪೊರೆಯುವ | ಕುಜನರ ತರಿಯುವ | ಸಾರಥಿ ದಿವ್ಯ | ವಿಜಯವಿಠಲರೇಯಾ 3
--------------
ವಿಜಯದಾಸ
ಬಂದು ನಿಲ್ಲೋ ಶ್ರೀಹರೇ-ಬಂದುನಿಲ್ಲೊ ಪ ಇಂದು ಹಿಂದು ನೀನೆಂದಿಗು ತಂದೆ ಗೋ- ವಿಂದ ಅನಿಮಿತ್ತಬಂಧು ಕಣ್ಣಮುಂದೆ ಅ.ಪ ಸ್ವಾಂಶದಿಂದ ಅಭಿವ್ಯಕ್ತಿಯಾದೆ ಪಂ- ಚಾಂಶತೋರಿ ಸರಸ ಜನನ ಮಾಡಿದೆ ಸ್ವಾಂಶನಾಗಿ ಅವತರಿಸಿ ಮೆರೆವ ಸ- ರ್ವಾಂಶದಿಂದಿಹ ತ್ರಿಂಶ ರೂಪನೇ 1 ಸ್ವಗತಭೇದವಿವರ್ಜಿತನೆನಿಸಿ ತ್ರಿಗುಣಮಯದಿ ಬ್ರಹ್ಮಾಂಡ ನಿರ್ಮಿಸಿ ಅಗಣಿತಮಹಿಮಾಧಾರನಾಗಿ ನಿಂದು ಮಿಗೆ ಶೋಭಿಸುವ ವಿರಾಟಮೂರುತಿಯೆ2 ಕಾರಣನೆನಿಸಿದ ಕರ್ಮನಿವೃತ್ತಿಗೆ ಸಾರವಾದ ಜ್ಞಾನಯೋಗ ಮಾರ್ಗವ ನಾರದಾದಿ ಮಹಾಮುನಿಗಳಿಗರುಹಿದ ನರನಾರಾಯಣ ಬದರಿ ಆಶ್ರಯನೇ 3 ಹಂಸಕಪಿಲ ದತ್ತಾತ್ರೇಯ ರೂಪನೆ ಹಂಸರಹಸ್ಯಗಳೆಲ್ಲವ ಪೇಳಿ ಸಂಶಯ ಬಿಡಿಸಿದೆ-ಜೀವಪರಮಾತ್ಮರ ಅಂಶಗಳರುಹಿದ ಹಂಸಮೂರುತಿಯೆ4 ಅಜಪಿತ ನೀ ಗಜರಾಜನ ಸಲಹಿದೆ ಭಜಿಸಿದ ವಾಲಖಿಲ್ಯರ ಕಾಯ್ದೆ ಅಜಹತ್ಯವು ವೃತ್ರವಧೆಯಿಂದ ಕಾಯ್ವ ಬಿ- ಡೌಜನ ಸಲಹಿದ ಗಜರಾಜ ವರದಾ5 ಪುರುಹೂತನ ಅಹಂಕಾರ ಖಂಡಿಸಿ ಕಿರುಬೆರಳಲಿ ಗೋವರ್ಧನಗಿರಿ ಎತ್ತಿ ಪರಿಪಾಲಿಸಿ ಗೋಬೃಂದವನೆಲ್ಲವ ಸುರರಿಂದ ಪೊಗಳಿಸಿಕೊಂಡೆ ಗೋವಿಂದ6 ಬುಧರರಿಯುಲು ಆ ವೇದ ವಿಭಾಗಿಸೆ ಉದಯಿಸಿ ಮುದದಿಂದ ಬದರಿಯ ಸದನದಿ ಬೋಧಿಸುತ್ತಲಿಹ ಬಾದರಾಯಣನೇ7 ಅಖಿಳಾಂಡಕೋಟಿಬ್ರಹ್ಮಾಂಡನಾಯಕ ವಿಕುಂಠಳೆಂಬೊ ಉದರದಿ ಜನಿಸಿ ಲಕುಮಿರೂಪಿಯಾದ ಸುಂದರಿಯ ಕೂಡ ಭೂ- ವೈಕುಂಠ ನಿರ್ಮಿಸಿದ ವೈಕುಂಠಮೂರುತಿಯೆ 8 ಸತ್ಯವ್ರತನೆಂಬೊ ಮನುವಿನುದ್ಧರಿಸಿ ಉತ್ತಮ ಔಷಧಿಗಳೆಲ್ಲವ ಸಲಹಿದೆ ದೈತ್ಯನಾದ ಉನ್ಮತ್ತನ ಕೊಂದು ಶ್ರುತಿಯ ತಂದಿತ್ತ ಮತ್ಸ್ಯಮೂರುತಿಯೆ 9 ಸುರಭಿನೆವನದಿ ಶರಧಿಮಥಿಸೆ ತಾ ಭರದಿ ಬೆನ್ನೊಳು ಧರಿಸಿಹೆ ಮಂದರ ಗಿರಿಧರನೆನಿಸಿದೆ ಕಮಠರೂಪನೆ 10 ಪ್ರಳಯ ಜಲಧಿಯೊಳು ಇಳೆಯನು ಕದ್ದಾ ಖಳಹಿರಣ್ಯನಾ ಶಿರವ ಚೆಂಡಾಡಿ ಜಲಧಿಯ ಶೋಧಿಸಿ ಇಳೆಯನು ತಂದು ಜಲಜಸಂಭವಗಿತ್ತ ಕ್ರೋಢರೂಪನೆ 11 ದುರುಳತನದಿ ತನ್ನ ತರಳನ ಬಾಧಿಪ ಹಿರಣ್ಯಕಶಿಪುವಿನ ಉದರವ ಬಗೆದು ಶರಣನಿಗಭಯವ ಕರುಣಿಸಿ ತೋರಿದ ಸರ್ವವ್ಯಾಪ್ತನೆಂದರುಹಿದ ನರಹರಿಯೇ12 ಬಲಿಯಿಂದಪಹೃತವಾದ ಸಾಮ್ರಾಜ್ಯವ ಸುಲಭದಿಂದಲಿ ಪುರಂದರಗಿತ್ತು ಸಲಹಿದೆ ಒಲಿದು ಬಲಿಯ ಭಕ್ತಿಗೆ ನೀ ಬಾ- ಗಿಲ ಕಾಯ್ದ ವಟು ವಾಮನನೆ 13 ದುರುಳತನದಿ ಆ ಹೈಹಯರೆಂಬ ನರಪರದುರ್ಮದ ಮರ್ದಿಸಲೋಸುಗ ನೃಪರ ಶಿರವನೆಲ್ಲ ತರಿದು ನಿಗ್ರಹಿಸಿದ ಭಾರ್ಗವ ಮೂರ್ತೇ 14 ಶರಧಿ ಬಂಧಿಸಿ ಸೇತುಕಟ್ಟಿ ಕಪಿ- ವೀರರೊಡನೆ ಆ ರಾವಣನಡಗಿಸಿ ಭೂ ಭಾರವನಿಳುಹಿಸಿ ಭೂಮಿಜೆಯನು ತಂದ ಅ- ಸುರ ಮರ್ದನ ದಾಶರಥಿ ರಾಘವ 15 ವಸುಮತಿಭಾರವನಿಳುಹಲೋಸುಗ ವಸುದೇವಸುತ ಶ್ರೀಕೃಷ್ಣನೆನುತಲಿ ಶಿಶುಪಾಲಾದಿಗಳಾಂತಕನೆನಿಸಿದ ಶಶಿಮುಖಿರುಕ್ಮಿಣಿ ಸಹಿತ ಶ್ರೀಕೃಷ್ಣ 16 ವೇದ ಕರ್ಮಗಳಿಗನರ್ಹರೆಲ್ಲರು ಸಾದರದಿಂದಲಿ ಅಧಮರೆಸಗುತಿರೆ ವೇದವಿರುದ್ದವಾದಗಳಿಂದಲೇ ಮೋಹವ ತೋರಿದೆ ಬುದ್ಧಸ್ವರೂಪನೆ17 ದುರುಳತನದಿ ಇಳೆಯಾಣ್ಮರುಗಳು ಕ್ರೂರತನದಿ ಪರಪೀಡಕರಾಗಿರೆ ಪರಿಹರಿಸಲು ಭೂಭಾರಕ್ಕಾಗಿ ಅವ- ತರಿಸಿ ಮೆರೆಯುವ ಕಲ್ಕಿರೂಪನೆ 18 ಏಕರೂಪ ಅನೇಕರೂಪನೆ ಏಕಮೇವ ನೀ ಪ್ರಕಟ ಮಾಡುವೆ ಪಿನಾಕಿ ಪ್ರಮುಖರು ಏಕದೇಶದಿ ಸಾಕಲ್ಯವ ತಿಳಿಯರೊ 19 ದೋಷದೂರ ಶೇಷಾಚಲವಾಸ ಪೋಷಿಸೊ ನಿನ್ನಯ ದಾಸಜನರ ಸರ್ವ ದೋಷಕಳೆದು ಮನೋಕಾಶದಲಿ ನಿಲ್ಲೊ ಶೇಷಗಿರೀಶ ಶ್ರೀ ವೆಂಕಟೇಶನೆ 20
--------------
ಉರಗಾದ್ರಿವಾಸವಿಠಲದಾಸರು
ಬರಿದಿದೇಕೆಲೋ ನಿನ್ನಂತರಿರವು ಸಿರಿಯರರಸ ಅರಿಯನೇನೆಲೋ ಪ ಮರೆಯ ಮೋಸದಿ ಕುಕ್ಕಲು ಮೀನ ಹರಿವ ಉದಕದಿ ಬಕನು ಮೌನ ಧರಿಸಿದಂದದಿ ಪರಮಮೌನ ಧರಿಸಿ ಕುಳಿತು ಮರುಳುಗೊಳಿಸಿ ಪರರ ಕೊರಳ ಮುರಿವ ದುರುಳತನದ ಕೃತಿಗೆ ಹರಿಯು ಒಲಿಯುವನೇನು ಮರುಳೆ1 ಕಪಟ ನೀಗದೆ ಹುಚ್ಚು ಬಿಡದೆ ಗುಪಿತ ತಿಳಿಸದೆ ಮುಚ್ಚಿ ಕಣ್ಣು ತಪಸಿಯಂದದಿ ಕುಪಿತ ಮಾನಿಸನಾಗಿ ಕುಳಿತು ತಪಸಿಯಂತೆ ತೋರಿ ಜನರ ಅಪಾಯಮಾಳ್ಪ ಕಪಟವೇಷಕೆ ಸುಫಲ ದೊರೆಯುವುದೇನು ಮರುಳೆ 2 ಉದಯದೇಳುತ ಓಡಿ ಹೋಗಿ ನದಿಯ ಮುಳುಗುತ ತೀಡಿಗಂಧ ಹದದಿ ಬರೆಯುತ ವಿಧವಿಧಮಂತ್ರೊದರಿ ಇತರರ ಸದನ ಮುರಿದು ಸತಿಯ ಸುತರ ಮುದದಿ ಪೊರೆವ ಅಧಮ ವ್ರತಕೆ ಸದಮಲಾಂಗೊಲಿವನೆ ಮರುಳೆ 3 ಕಪಟ ನೀಗದೆ ಜಟೆಯ ಬೆಳಸಿನ್ನು ಚಪಲತನದಿಂ ದುಟ್ಟು ಕೌಪೀನ ನಿಟಿಲದಲ್ಲಿ ಭಸ್ಮಧರಿಸಿ ನಟಿಸಿ ಸಾಧುವರ್ತನದಿಂ ದ್ಹೊಟ್ಟೆ ಹೊರೆವ ಭ್ರಷ್ಟತನಕೆ ಕೆಟ್ಟ ಬವಣಳಿಯುವುದೆ ಮರುಳೆ 4 ತತ್ವದರ್ಥವ ಬೋಧಿಸುತ್ತ ಭೃತ್ಯ ಸಮೂಹವ ಸಂಪಾದಿಸುತ್ತ ನಿತ್ಯಸತ್ಯವ ವಿತ್ತದಾಸೆಗುತ್ತರಿಸುವಸತ್ಯಭ್ರಷ್ಟ ವರ್ತನಕೆ ಮುಕ್ತಿದಾಯಕ ಸಿರಿಯರಾಮ ಮುಕ್ತಿಸುಖ ನೀಡುವನೆ ಮರುಳೆ 5
--------------
ರಾಮದಾಸರು
ಬಲಗೊಳ್ಳಿರೊ ಭಾವ ಭಕ್ತಿಯಿಂದ ನೆಲೆಯಗೊಂಡು ಮೂಲವಿಡಿದು ನಿಜಮೂಲ ಮೂರ್ತಿಯ ಬಲಗೊಳ್ಳಿ 1 ಏರಿ ನೋಡಿ ಅರುಚಕ್ರದಾಟಿ ತೋರುತಿಹ್ಯ ಪೂರ್ಣಾನಂದ ಶ್ರೀ ಗುರುಮೂರ್ತಿಯ ಬಲಗೊಳ್ಳಿ 2 ಸೆರಗವಿಡಿದು ನೋಡಿ ಕರಗಿಮನ ಅರವಿನೊಳು ಬೆರೆದು ಕೂಡಿ ಹರಿ ಪರಬ್ರಹ್ಮನ ಬಲಗೊಳ್ಳಿ 3 ಆಸಿಯನೆ ಜರೆದು ನಿರಾಸಿಯಲ್ಲಿ ಧ್ಯಾಸವಿಡಿದು ಲೇಸಾಗಿ ಕೂಡಿರೊ ವಾಸುದೇವನ ಬಲಗೊಳ್ಳಿ 4 ಮೂರು ಗುಣಕೆ ಮೀರಿ ತೋರಿತಿಹ್ಯ ನಿರ್ಗುಣನ ನೆರೆದು ಕೂಡಿ ನಿಜ ನಿರುಪಮನ ಬಲಗೊಳ್ಳಿ 5 ಸಹಸ್ರದಳಮಂಟಪದೊಳು ಸೋಹ್ಯವರಿತು ಸಾಯಸದಿಂದ ಶ್ರೀಹರಿಯ ಬಲಗೊಳ್ಳಿ 6 ತಾನೆ ತಾನಾಗಿಹ್ಯ ತನುವಿನೊಳು ಆನಂದೋಬ್ರಹ್ಮ- ಙÁ್ಞನದಿಂದ ನೋಡಿ ಙÁ್ಞನಸಾಗರನ ಬಲಗೊಳ್ಳಿ 7 ಮನವಿಡಿದು ಮಾಡಿರೊ ಧ್ಯಾನ ಮೌನ ಅನುದಿನ ಅನುಕೂಲಾಗುವ ಅನಂತ ಗುಣನ ಬಲಗೊಳ್ಳಿ 8 ಕಣ್ದೆರೆದು ನೋಡಿ ತನ್ನೊಳಗೆ ತಾನೆ ತಿಳಿದು ತನುಮನರ್ಪಿಸಿ ಗುರುಮೂರ್ತಿಯ ಬ¯ಗೊಳ್ಳಿ 9 ಗುರು ಕರುಣದೊಲವಿಂದ ಪಡೆದು ಪೂರ್ಣ ಹರಿಯು ಸುಖ ಸೂರ್ಯಾಡಿ ಪರಮ ಅನಂದ ಸುಪಥ 10 ಅರ್ತುಕೂಡಿದ ನೋಡಿ ಅರ್ತಿಯಿಂದ ಮಹಿಪತಿಯ ಬೆರ್ತುಕೂಡಿದ ಮನ ಕರ್ತುಗುರುವಿನ ಬಲಗೊಳ್ಳಿ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಲುಕಷ್ಟ ಬರಗಾಲ ಬಂದಿತಯ್ಯ ವೈರಿ ಜನಕೆ ಬರಬಾರದಯ್ಯ ಪ ಶಿಶುಗಳಿಗೆ ಹಾಲಿಲ್ಲ ಪಶುಗಳಿಗೆ ಮೇವಿಲ್ಲ ಉಸರಲು ಬಾಯಿಲ್ಲ ವೃದ್ಧ ಜನಕೇ ಅಶನ ವಸನಕ್ಕಾಗಿ ವ್ಯಸನ ಪೂರಿತರಾಗಿ ನಿಶಿ ಹಗಲು ಜನರೆಲ್ಲ ಉಸುರು ಹಾಕುತಲಿಹರು 1 ಧÀವಸಧ್ಯಾನ್ಯದ ಬೆಲೆಯು ದಿವಸ ದಿವಸಕೆ ಮಹಾ ಪ್ರವಾಹದಂದದಿ ವೃಧ್ಧಿಯಾಗುತಲಿಹುದು ಅವಸರಕೆ ಬೇಡಿದರೆ ಲವಣದೊರೆಯದು ಮೇಲೆ ಶಿವಶಿವಾಯೆಂದು ಭವಣಿಯನನುಭವಿಸುವರು 2 ಶಾರೆ ಕಾಳು ಭಿಕ್ಷೆಕೆರೆಯುವದಕೆ ಗತಿಯಿಲ್ಲಾ ಶರಗೊಡ್ಡಿ ಕರೆದರೂ ಕೊಂಡರೊಬ್ಬರುಯಿಲ್ಲಾ ಅರೆಹೊಟ್ಟಿಯುಂಡು ಹರಕು ಬಟ್ಟಯನುಟ್ಟ ಮರಮರನೆ ಮನದೊಳಗೆ ಮರುಗುವರು ಬಡಜನರೂ 3 ಜೋಳನವಣಿ ಸಜ್ಜಿ ಕಾಳಿಗೇರಿದ ಬೆಲೆಗೆ ತಾಳಿ ಮನದಲಿ ವ್ಯಥಿಯ ಕೂಲಿ ಜನರು ಕೂಳಿಗಾಗದು ಎಂದು ಬಾಳುವೆಯ ಗೈಯುವಂಥ ಕೂಲಿವಲ್ಲೆವು ಎನುತ ಗೋಳಿಡುತಲಿಹರು 4 ಕಡಲೆ ಕಾಣದ ಹರಿಯು | ಕಡಲೊಳಡಗಿದ ಮೃಡನು ಸೊಡರೆಣ್ಣೆಸಿಗದೆಂದು ಸುಡುಗಾಡು ಸೇರಿದಾ ಅಡಕಿ ಸಕ್ಕರೆ ಗೋಧಿ ಕೊಡುವ ಬೆಲೆಯನು ಕೇಳಿ ಮಿಡುಕಿ ಮನದೊಳು ಕಣ್ಣ ಬಿಡುತಿಹರು ಸುಮನಸರು 5 ಮಳೆರಾಯ ಮುನಿದುದಕೆ ಹೊಲ ಬೆಳೆಯದಿದ್ದುದಕೆ ಬಳುತಿಹವು ಬಡಜನರ ಕಣ್ಣಿಂದ ನೀರು ಜಲಹರಿಸುವದು ನೋಡಿ ನಲಿದಾಡಿ ನಗುತಿಹಳುಕ್ಷಾಮದೇವಿ 6 ಕ್ಷಾಮದೇವಿಗೆ ತನ್ನ | ಧಾಮಸೇರುವಂತೆ ನೀಡಿ ಮಾಡಿ ಸಾಕು ನಮ್ಮ ಸಕಲ ಜನಕೇ | ಕ್ಷೆಮ ಸೌಖ್ಯವಗರೆದು | ಪ್ರೇಮದಲಿ ಪೊರೆ ಕರವ ನಾ | ಮುಗಿದು ಪ್ರಾರ್ಥಿಸುವೆ ಶಾಮಸುಂದರ ಸ್ವಾಮಿ 7
--------------
ಶಾಮಸುಂದರ ವಿಠಲ
ಬಲುದೊಡ್ಡ ಧೊರಿ ದೊರಕಿದೆನಗೊಬ್ಬ ನೋಡಿ ಸಲಹುತಿಹ್ಯ ಸಕಲಾರ್ಥ ಸಾರಾಯ ನೀಡಿ ಧ್ರುವ ದೊರೆಗಳಾದವರಿಗೆಲ್ಲ ಈತನೆ ದೊರೆಯು ಚರಣಸೇವೆಯಲ್ಲಿಹಳು ಅಖಂಡ ಸಿರಿಯು ಸುರಮುನಿಜನರ ಪಾಲಿಸುತಿಹ್ಯ ಪರೋಪರಿಯು ಸರಿಸಿಜೋದ್ಭವನುತಗಿಲ್ಲ ಸರಿಯು 1 ಅನಂತಕೋಟಿ ಬ್ರಹ್ಮಾಂಡ ನಾಯಕನೆಂದು ಅನಂತಸಿದ್ಧಿ ವಾಲ್ಗೈಸುತಿಹವು ಅನಂತಗುಣ ಪರಿಪೂರ್ಣ ಶ್ರೀ ಹರಿಯೆಂದು ಅನಂತಶ್ರುತಿ ಸ್ಮøತಿ ಸಾರುತಿಹ್ಯವು 2 ಅನೆಮೊದಲಿರುವೆÉ ಕಡೆ ಅನುದಿನಾಹಾರವಿತ್ತು ಜನವನವಿಜನದಿ ರಕ್ಷಿಸುತಿಹನು ದೀನ ಮಹಿಪತಿಸ್ವಾಮಿ ಭಾನುಕೋಟಿತೇಜ ತಾನೆ ತಾನಾಗೆನಗೆ ಸಲಹುತಿಹ್ಯನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಹುತೀರ್ಥ ಸಂಗಮದ ಭಾಗವತಗಂಗೆಯಲಿಬಹುಸ್ನಾನ ದೊರಕಿ ಜೀವನ್ಮುಕ್ತನಾದೆ ಪಶುಭ್ರವರ್ಣದ ಗಂಗೆ ತಾನೆ ನಾರದನಾಗೆಅಭ್ರವರ್ಣದ ಯಮುನೆ ವ್ಯಾಸನಾಗೆಇಬ್ಬರೊಂದಾಗಿ ಪ್ರವ'ಸಿ ಬಂದು ದೋಷಗಳದಬ್ಬುತಿಹ ಪುಣ್ಯ ಪ್ರಯಾಗಿಯಾಗಿರುತಿರುವ 1ಪೂರ್ವಪಶ್ಚಿಮವಾಗಿ ದಕ್ಷಿಣೋತ್ತರವಾಗಿಶರ್ವಾಗ್ನಿ ನೈಋತ್ಯವಾಯು ಮುಖದಿಪರ್ವಕಾಲಗಳೆಂದು ಪ್ರವ'ಸುವ ನದಿಯಲ್ಲಸರ್ವವ್ಯಾಪಕವಾಗಿ ತುಂಬಿ ಸೂಸುತಲಿರುವ 2ನಾರಾಯಣಾದ್ರಿಯಲಿ ಪುಟ್ಟ ಬ್ರಹ್ಮಾಂಡವನುಪೂರೈಸಿ ಪರಮಪಾವನ ಗಂಗೆಯೂಸೇರುವರೆ ತನಗೊಂದು ತೀರ್ಥಬೇಕೆಂದೆನುತಧೀರಶುಕ ಕಾವೇರಿಯಲಿ ಕೂಡಿ ನೆಲಸಿರುವ 3ಕಮಲಸಂಭವನೆಂಬ ಗೋದಾವರಿಯದೆನಿಸಿ'ಮಲಮತಿ ಸೂತ ಶೌನಕ ಸಂಗದಿಭ್ರಮನಿವಾರಣ ತುಂಗಭದ್ರೆಯೆಂದೆನಿಸುವದುರಮೆಯ ರಸನೊಲಿದವರಿಗದು ದೊರಕುತಿಹುದು 4ಈ ನದಿಯ ಕೂಡಿರುವ ತೀರ್ಥಗಳನೆಣಿಸುವರೆನಾನೆಂಬ ಕ' ಯಾರು ಶೇಷ ತೊಡಗಿಸ್ವಾನುಭವ ಸಂಸಿದ್ಧ ನಿಜಭಕ್ತರೆಂದೆನಿಪಜ್ಞಾನಿಗಳ ಮ'ಮೆಗಳ ನದಿಗಳೊಡೆ ಬೆರೆದಿರುವ 5ಶೀತಬಾಧೆಯು ಲೇಶಮಾತ್ರ'ದರೊಳಗಿಲ್ಲವಾತಾದಿ ವ್ಯಾಧಿಗಳ ಕೊಡುವುದಲ್ಲನೂತನದ ಕಾಲದೇಶಗಳ ಬಯಕೆಯದಲ್ಲಆತುಕೊಳದಿದ್ದರೂ ಪಾತಕವ ಪರಿಹರಿಪ 6ಉತ್ತಮ ಪರೀಕ್ಷಿತನೇನು ಮೈತ್ರೇಯ 'ದುರರುಸತ್ಯಸಂಧನು ಕಪಿಲ ದೇವಹೂತಿಮತ್ತೆ ಉತ್ತಾನಪಾದನು ಧ್ರುವನು ಪೃಥು ಚಕ್ರವರ್ತಿಯೆಂಬೀ ತೀರ್ಥವ ತರಿಸಿಕೊಂಡಿರುವ 7ಪುಣ್ಯಾತ್ಮ ಪ್ರಾಚೀನ ಬರ್'ಯಾತ್ಮಜರಾದಸನ್ಮನದ ಮ'ಮರವರೀರೈವರುಇನ್ನಿವಳ ಗರ್ಭದಲಿ ಬಂದ ದಕ್ಷನು ತಾನುಕನ್ನೆಯರನರುವತ್ತ ಪಡೆದ ತೀರ್ಥಗಳಿರುವ 8ಅಪರ ಸೂರ್ಯನ ತೆರದ ಪ್ರಿಯವ್ರತನ ಸಂತತಿಯುತಪದಲನುಪಮ ವೃಷಭದೇವನುದಿಸೀಗುಪಿತ ತೇಜೋಮೂರ್ತಿ ಭರತನವತರಿಸಿರಲುಉಪಮಾನ'ಲ್ಲದೀ ತೀರ್ಥಗಳು ಬೆರೆದಿರುವ 9ದ್ವೀಪವೇಳರ ಸುತ್ತ ವ್ಯಾಪಿಸಿದ ವನಧಿಗಳುದೀಪಿಸುವ ಸೂರ್ಯಾದಿ ಚಕ್ರಗತಿಯೂಈ ಪರಿಯ ತೀರ್ಥಗಳು ಭೂ'ು ಸ್ವರ್ಗಾದಿಗಳವ್ಯಾಪಿಸಿಹ ಮ'ಮ ನದಿಗಳು ಒಂದುಕೂಡಿರುವ 10ನದಿಗಳಿಗೆ ನಿಜರೂಪವಾದ ನಾಮದ ಮ'ಮೆಒದಗಿಯಜ'ುಳನಘವನೊದೆದು ನಿಜದೀಹುದುಗಿಸಿದ ವರ್ಣನೆಯ ತಂಪು ಬಹುರುಚಿಕರವುಸದಮಲಾನಂದ ನಿಧಿಯಾಗಿ ಹುದುಗಿರುತಿರುವ 11ವೃತ್ರ ಚಾರಿತ್ರ ನದಿ ಮತ್ತೀತನಾರೆನಲು ಚಿತ್ರಕೇತುವು ಚಕ್ರವರ್ತಿಯಾಗಿಪುತ್ರ ಸಂತತಿುಂದ ಪ್ರಖ್ಯಾತ 'ಮಗಿರಿಯಪುತ್ರಿಶಾಪವು ಬಂದ ಸಿದ್ಧ ನದಿ ಬೆರೆದಿರುವ 12ನರಹರಿಯ ಚರಣಾರ'ಂದ ಮಕರಂದದಲಿಎರಗಿ ತುಂಬಿಯ ತೆರದಿ ಭಜಿಸುತಿರುವನೆರೆ ಭಕ್ತಪ್ರಹ್ಲಾದ ಗಜರಾಜ ಮನುಚರಿತಪರಮ ಪುಣ್ಯೋದಯದ ನದಿಗಳೊಂದಾಗಿರುವ 13ಕ್ಷೀರಸಾಗರ ಮಥನ ಕೂರ್ಮನಾದನು ಹರಿಯುಶ್ರೀರಮಣಿ ಸುಧೆಯುದಿಸಿದತಿ ಮ'ಮೆಯೂಶ್ರೀರಮಣ ವಟುವಾಗಿ ಬಲಿಯ ಸಲ'ದ ಬಗೆಯುಸಾರತರ ನದಿಗಳಿವು ಸೇರಿಕೊಂಡಿಹವಾಗಿ 14ಉಷ್ಣ 'ಮಕರರಂಶಸಂಭವ ಮಹಾತ್ಮರನುವ್ಣೃ ಸಂತತ್ಯುದ್ಧವಾದಿಗಳನೂ'ಷ್ಣುವಾದರು ಗಣಿಸಲಾರನೀ ತೀರ್ಥಗಳುಕೃಷ್ಣಸಾಗರದಲ್ಲಿ ಸೇರಿ ಪೂರೈಸಿರುವ 15ಯದುಕುಲಾಂಬುಧಿಯಲ್ಲಿ ಮದನಪಿತ ತಾ ಜನಿಸಿಮುದದಿಂದ ಗೋಕುಲದಿ ಬೆಳೆದು ನಲಿದುಚದುರಿಂದ ಗೋವು ಗೋವತ್ಸಪರನೊಡಗೂಡಿಸದದು ದೈತ್ಯರ ನಂದಗಾನಂದ'ತ್ತಾ 16ಬಾಲಕರ ಭೋಜನದ ನೆವದಿ ಬ್ರಹ್ಮನಿಗೊಲಿದುಕಾಳೀಯ ಫಣಗಣಾಗ್ರದಿ ನರ್ತಿಸಿಜ್ವಾಲೆಯನು ನೆರೆನುಂಗಿ ಗೋಕುಲದವರ ಸಲ'ಬಾಲಲೀಲೆಯ ಬಹಳ ಪುಣ್ಯತೀರ್ಥಗಳಿರುವ17ಗೋವಕ್ಕಳೊಡಗೂಡಿ ವನಮಧ್ಯದಲಿ ಚರಿಸಿದೇವತಾ ಯಜ್ಞ ಪತ್ನಿಯರಿಗೊಲಿದೂಗೋವರ್ಧನೋದ್ಧರಣ ಗೋಪಾಂಗನಾ ಜನದಭಾವನೆಯ ಪೂರ್ತಿಗೊಳಿಸಿದ ತೀರ್ಥ'ರುವಾ 18ವರಧನು'ನುದಯ ದರ್ಶನನೆವದಿ ಮಧುರೆಯನುನೆರೆಪೊಕ್ಕು ಕುಬ್ಜೆಗತಿಶಯದ ರೂಪಕರೆದಿತ್ತು ಕುಸುಮವನು ಕೊಟ್ಟವನಿಗೊಲಿದಾಗಪಿರಿದಾಗಿ ಕಂಸನಿಗೆ ತಾನೆ ಮುಕ್ತಿಯ ಕೊಟ್ಟು 19ದ್ವಾರಕಾ ನಿರ್ಮಾಣ ದುರುಳ ಜನಸಂಹರಣನಾರಿಯರ ನೆಂಟನೊಡಗೂಡಿ ಬಳಿಕಾಪಾರಿಜಾತವ ಕಂಡು ಈರೆಂಟು ಸಾಸಿರದನೀರೆಯರ ಸಂಸಾರ ಸಂಪತ್ತಿನತಿಶಯದ20ಮಾಸಿದರುವೆಯ ಭಕ್ತನವಲಕ್ಕಿಯನು ಮೆದ್ದುಲೇಸಾದ ಸಂಪತ್ತನೊಳಗೆ ಕೊಟ್ಟೂ'ುೀಸಲಳಿಯದ ಮ'ಮ ಭಕ್ತಜನಸಂಸಾರಿವಾಸುದೇವನ ಮ'ಮೆ ಜಲನಿಧಿಯ ಕೂಡಿರುವ 21ತತ್ವಸಾರವನು ನವಯೋಗಿಗಳು ನಿ'ುಗೊರೆದುಮತ್ತೆ ನಾರದನು ವಸುದೇವನೆಡೆಗೆಚಿತ್ತಜನ ಜನಕನಭಿಮತದಿಂದವತರಿಸಿಚಿತ್ತವನು ವಸ್ತು'ನೊಳೈಕ್ಯವನು ಮಾಡಿಸಿದ 22ವೇದಾಂತ ನಿಧಿಯಾದ ಉದ್ಧವಗೆ ತತ್ವವನುಮಾಧವನೆ ತಾನೊರೆದು ಧರಣಿಯೊಳಗೆವೇದಾಂತ 'ಸ್ತರಕೆ ನಿಲಿಸಿ ನಿಜಪಾದುಕೆಯವೇದವೇದ್ಯನು ಕೊಟ್ಟು ನಿಜಜನಕೆ ನಿಧಿಯಾದ23ಕಾಲಗತಿಗಳನೊರೆದು ಮತ್ತೆ ಭೂಲೋಕವನುಪಾಲಿಸುವ ದೊರೆಗಳಭಿಮತದ ಗತಿಯೂಮೇಲಾಗಿ ಕಲಿಯುಗದ ಗತಿ'ಸ್ತರವನೆಲ್ಲಲೋಲನೃಪಗೊಲ'ಂದ ಪೇಳ್ದ 'ವರಗಳಿರುವ 24ಪರಮಾತ್ಮನೊಡನಾಡಿ ಪರಮ ಪಾವನರಾಗಿಮೆರೆವ ಗೋಪೀ ರತ್ನ ಮಾಲೆಯೊಡನೆನೆರೆಶಿಖಾಮಣಿಯೆನಿಸಿ ತಿರುಪತಿಯ ವೆಂಕಟನುಧರಣಿಯೊಳು ಸಕಲರನು ನೆರೆ ಸಲಹುತಿಹನೂ25
--------------
ತಿಮ್ಮಪ್ಪದಾಸರು
ಬಾರಮ್ಮಾ ಬಾರಮ್ಮಾ ಭಾಗ್ಯದನಿಧಿಯೇ ತೋರಮ್ಮಾ ತೋರಮ್ಮಾ ಕರುಣಾನಿಧಿಯೇ ಪ. ಬಾರಮ್ಮಾ ಮಹಲಕ್ಷ್ಮಿ ತೋರುತ ಕರುಣವ ಬೀರುತ ತವಕದಿ ಸೇರುತ ಪತಿಸಹ ಅ.ಪ. ಶ್ರೀ ರಮಾದೇವಿ ಇನ್ನಾರು ಸಮನಾಗರೇ ಭೂ ರಮೇಶನ ಸೇವೆಗೆ ನಿಲ್ಲಲು ಬಾರಮ್ಮಾ ಭಕ್ತರುದ್ಧಾರ ಮಾಡಲು ಎಲ್ಲಾ ಕಾರಳು ನೀನಾಗಿ ವಾರುಧಿಶಯನಗೆ ಸೇವಿಸಲು ಘೋರತರ ಸಂಸಾರ ಸಾಗರ ಪಾರುಗಾಣಿಪ ಹರಿಯು ನಿನ್ನೊಳು ಸೇರಿಯಿರುತಿಹನೇ ತೋರಿ ಭಕ್ತರಿಗೆ ಚಾರುಕಮಲ ಕರಾರವಿಂದದಿ ಧೀರೆಯೆತ್ತುಪಕಾರ ಮಾಡಲು ವಾರಿಜಾಕ್ಷಿಯೆ ಸಾರುತೀಗಲೆ 1 ಪುಲ್ಲಲೋಚನೆ ನಿನ್ನ ಗಲ್ಲ ಮಿಂಚಿನ ಸೊಬ ಗೆಲ್ಲ ನೋಡುತ ನಿನ್ನ ಒಡನಾಡುವ ಪಲ್ಲವಾಧರೆ ನಿನ್ನ ವಲ್ಲಭ ಹರಿಯಲ್ಲಿ ಎಲ್ಲ ಭಕ್ತರ ಮನಸಲ್ಲ ಅರುಹು ತಾಯೆ ನಿಲ್ಲದೆಲೆ ಕಾನಲ್ಲಿ ಇಹ ಹರಿ ಎಲ್ಲಿ ಭಕ್ತರು ಕರೆ ದಲ್ಲಿ ಬರುತಿಹನೆ ಮಲ್ಲಮರ್ಧನ ಶ್ರೀ ನಲ್ಲ ಕೃಷ್ಣನು ಚೆಲ್ಲಿ ಕರುಣವ ಬಲ್ಲೆ ನಿನಪತಿ ಗುಣಗಳನೆಲ್ಲ ಕಾಯೆ 2 ರಂಗನರ್ಧಾಂಗಿಯೆ ಮಂಗಳ ಮೂರುತಿ ನಿ ನ್ನಂಗಜನಯ್ಯನ ಕಾಣೆ ಕಾಯೆ ಗಂಗಜನಕ ಸಹ ಸರ್ವರಂಗದೊಳಿದ್ದು ನೀ ರಂಗನ ಲೀಲೆಯತಿಸಂಭ್ರಮದಲಿ ನೋಳ್ಪೆ ತುಂಬುರು ನಾರದರು ಪಾಡಲು ರಂಭೆ ಊರ್ವಶಿ ನಾಟ್ಯವಾಡಲು ಸಂಭ್ರಮದಿ ಶ್ರೀ ಶ್ರೀನಿವಾಸನ್ನ ಇಂಬತೋರಿಸೇ ಅಂಬುಜಾಕ್ಷಿಯೇ ಬೆಂಬಿಡದೇ ಎನ್ನ ನಂಬಿರುವೇ ನಿನ್ನ ಕಂಬುಕಂಧರೆ ಕುಂಭಿಣೀಪತಿ ಸಹಿತ ಬೇಗನೆ 3
--------------
ಸರಸ್ವತಿ ಬಾಯಿ
ಬಾರೊ ಹರಿ ಬಾರೊ ದೊರಿ ಬಾಬಾ ಮುರಾರಿ ನೀ ಪ. ನಾರಿಯೇರು ಕರಿಯುವರು ಹೀರಾದ ಪೀಠಕೆ ಬೇಗಾ ಅ.ಪ. ಪದ್ಮಪಾದ ಪೊಳೆಯುತಲಿ ಪದ್ಮಾಕ್ಷಿಯ ಕೂಡುತಲಿ ಪದ್ಮಾದ ಪೀಠಕೆ ಬೇಗ ಶೌರಿ 1 ಪೀತಾಂಬರ ಧರಿಸುತಲಿ ಪೀತ ವಸ್ತ್ರ ವಲಿಯುತಲಿ ಜಾತಿ ಮುತ್ತಿನ್ಹಾರ ಹಾಕಿ ಸೀತಾಪತಿ ಶ್ರೀ ಕೃಷ್ಣನೆ 2 ಚಂದ್ರ ಸದೃಶಾನನ£ É ಇಂದಿರೇಯ ಪೊಂದಿದನೆ ಮಂದರಾದ್ರಿ ಎತ್ತಿದನೇ ಸುಂದರ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಬಾರೋ ಬಾರೋ ಶರಣೆಂಬೆನು ದೇವ ಪ ಪಂಕಜ ವದನದ ಶಂಕರಸುತ ಗುಹ ಬಾರೋ1 ಕಂದರ್ಪಾನ್ವಿತಗುಣ ವೃಂದ ನಿತ್ಯಾನಂದ ಬಾರೋ 2 ದಾಸರ ಭವದಘ ರಾಶಿಯ ತರಿಯುತ್ತಾ ಬಾರೋ 3
--------------
ಬೆಳ್ಳೆ ದಾಸಪ್ಪಯ್ಯ