ಒಟ್ಟು 483 ಕಡೆಗಳಲ್ಲಿ , 78 ದಾಸರು , 393 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ವಿವೇಕವೆಂಬ ಘೌಜದು ಮುತ್ತಲುಉಳಿವು ಅಸುರರಿಗಿಲ್ಲಾಯ್ತುಸವರಿಯೆ ಹೋದರು ದುಷ್ಟರು ನುಣ್ಣಗೆಸಂತೋಷವು ನಗರಕ್ಕಾಯ್ತುಪಭೂತ ದಯನು ಶಾಂತಾತ್ಮ ವಿಚಾರನುಬ್ರಹ್ಮನಿಷ್ಠವಿರತೆನಿಸುವನುಖ್ಯಾತಿಗೆ ಬಂದಿಹ ಹಿರಿಯ ವಜೀರರುಕವಿದರು ತನುಪುರದುರ್ಗವನು1ಧಮಧಮ ನಾದದ ನಗಾರಿ ಬಾರಿಸೆದಿಂಡೆಯರಸುಗಳು ನೆಲಕೊರಗೆಅಮಮ ಅಡರಿಯೆ ದುರ್ಗವ ಕೊಂಡರುಅರೆದರು ದುಷ್ಟರು ಊರೊಳಗೆ2ಕಡಿದರು ಕಾಮನ ಹೊಡೆದರು ಡಂಭನಕೆಡಹಿಯೆ ಕೊಯ್ದರು ಚಂಚಲನಹುಡಿಮಾಡಿದರು ಅಹಂಕಾರ ಕ್ರೋಧರಹುರಿದರು ಖಳರು ಬೀಜವನು3ಆದನು ಪುರಕೆ ವಿವೇಕ ಮಂತ್ರಿಯುಆದನು ವಿರತಿಯು ದಳವಾಯಿಆದನು ಶಾಂತನು ಸಮಸ್ತ ವೃತ್ತಿಗೆಆಯಿತು ನಗರಕೆ ಅದು ಹಾಯಿ4ಜೀವ ರಾಜನು ಹಿಡಿದೆ ಬೋಧಿಸಿಜಡನಾದಸುರ ಪ್ರಕೃತಿ ಎಂದುಜೀವ ಚಿದಾನಂದ ಸ್ವಾಮಿಯೆನೀನೆಂದು ದರಬಾರನೆ ಕಾಯ್ದರಂದು5
--------------
ಚಿದಾನಂದ ಅವಧೂತರು
ವೃದ್ಧಾಚಲ ಶ್ರೀ ಈಶ್ವರ77ಮಂಗಳದಾಯಕ ವೃದ್ಧಾಚಲ ಶಿವ ಪಾರ್ವತಿ ರಮಣಪಾಲಯ ಮಾಂ ಪಭೂರ್ಭುವಃ ಸ್ವಹಃಪತಿಶ್ರೀ ಮುಷ್ಣವರಾಹಮಹಾಬಲ ಪ್ರೋಜ್ವಲ ನರಹರಿ ಪ್ರಿಯ ನಮೋ 1ವಿದ್ಯುದಶಿತ ಶಿತ ಲೋಹಿತ ಶ್ಯಾಮೋವದನತ್ರಿಲೋಚನಮೃತ್ಯುಂಜಯನಮೋ2ಬಾಲ ಬದರಧರ ಶೈಲ ಸುತಾಯುತಮೌಲಿ ಜಟಾ ಸ್ಫಟಕಾಮಲ ಕಾಂತಿಮಾನ್ 3ಇಂದಿರ ರಮಣ ಸ್ವತಂತ್ರ ಸರ್ವೋತ್ತಮಬಿಂದುಮಾಧವತವ ಮಂದಿರೇ ಭಾಸತಿ4ಸರ್ಪಾಭರಣ ತ್ರಿಶೂಲಿ ಧೂರ್ಜಟ ಮಮಪಾಪಂ ದ್ರಾವಯ ಕೃಪಯ ಸಂತತ 5ಶಂಭೋ ಶಕ್ರಾದ್ಯಮರ ಜಗದ್ಗುರೋಸುಪ್ರದರ್ಶಯ ಮಮ ಮನಸಿ ಶ್ರೀ ಯಃ ಪತೇಂ 6ಭಾಗ್ಯ ಸಂವೃದ್ಧಿ ದಾ ವೃದ್ಧಾಂಬಾ ಪತೇಯೋಗಕ್ಷೇಮಂ ವಹ ದಯಾಯಾ ಮಮ 7ದರ್ಶನಾರಭ್ಯ ಮದ್ ಹೃದಯೇ ವಿರಾಜಿಸಿಶ್ರೀಶಭಾರತಿಪತಿಸಹ ತ್ಪಂ ಕೃಪಾಳೋ8ವೃತತಿ ಜಾಸನ ಪಿತ ಪ್ರಸನ್ನ ಶ್ರೀನಿವಾಸಭೂತಿದ ಶಿವ ಪ್ರಿಯ ಶಿವತೇ ನಮೋ ನಮೋ 9
--------------
ಪ್ರಸನ್ನ ಶ್ರೀನಿವಾಸದಾಸರು
ವೆಂಕಟೇಶ ಶ್ರೀ ವೆಂಕಟೇಶ ಪಾಲಿಸುಕಿಂಕರನ ವೆಂಕಟೇಶ ಪ.ಸುವರ್ಣಮುಖರಿಲಿ ಶಿವನುತಪಾದಾಬ್ಜಸುವರ್ಣಗಿರಿ ವೆಂಕಟೇಶನವ್ಯಚಂದನ ಮೃಗನಾಭಿ ಚರ್ಚಿತಗಾತ್ರಅವ್ಯಾಕೃತನೆ ವೆಂಕಟೇಶ 1ಹಲವಪರಾಧಿ ನಾ ಭೂರಿದಯಾಳು ನೀನೆಲೆಗೆ ನಿಲ್ಲಿಸು ವೆಂಕಟೇಶಬಲು ತಮ ತುಂಬಿದ ಭವದಿ ಕರುಣಶಶಿಬೆಳಗು ಬೆಳಗು ವೆಂಕಟೇಶ 2ತಂದೆ ತಾಯಿ ನೀನೆಸಖಸಹೋದರ ನೀನೆಹಿಂದೆ ಮುಂದೆ ನೀ ವೆಂಕಟೇಶಹೊಂದಿದ ಬಂಟನ ಕಂದಾಯ ನಡೆಸಯ್ಯಕುಂದನಾಡದೆ ವೆಂಕಟೇಶ 3ಸಾಕು ನೀ ಸಾಕದಿದ್ದರೆ ಬಿಡು ನಾ ಬಿಡೆಜೋಕೆ ಬಿರುದು ವೆಂಕಟೇಶನೀ ಕೈಯ ಜರಿದರೆಕಾಕುಮಾಡುವರೆನ್ನಪೋಕವೃತ್ತರು ವೆಂಕಟೇಶ4ನಂಬಿದೆ ನಂಬಿದೆ ನಂಬಿದೆ ನಿನ್ನಪಾದದಿಂಬಿನೊಳಿಡು ವೆಂಕಟೇಶಬಿಂಬ ಮೂರುತಿ ಪ್ರಸನ್ವೆಂಕಟೇಶಪ್ರತಿಬಿಂಬಕ್ಕರುಹು ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು
ಶಂಕರ ಶಿವಶಂಕರ ಶಿವಶಂಕರ ಶಿವಶಂಕರಕಿಂಕರೇಷ್ಟಪ್ರಧಾನಶೀಲ ವೃಷಾಂಕ ಮಹಲಿಂಗೇಶ್ವರ ಪ.ವ್ಯೋಮಕೇಶಭವಾಬ್ಧಿತಾರಕ ರಾಮನಾಮೋಪಾಸಕಸಾಮಜಾಜಿನವಸನಮಂಡನ ಸ್ವಾಮಿ ತ್ರಿಜಗನ್ನಾಯಕಭೀಮಬಲ ಸುತ್ರಾಮಮುಖ ಸುರಸ್ತೋಮ ವಿನುತಪದಾಂಬುಜಸೋಮಸೂರ್ಯಾನಲಯನ ನಿಸ್ಸೀಮ ಮಹಿಮ ಮಹಾಭುಜ 1ಭಜಕಜನಸೌಭಾಗ್ಯದಾಯಕ ವಿಜಯಪಾಶುಪತಾಸ್ತ್ರದಭುಜಗಭೂಷಣ ಭುವನಪೋಷಣ ರಜತಗಿರಿಶಿಖರಾಸ್ಪದವೃಜಿನಹಾಮಲ ಸ್ಫಟಿಕಸನ್ನಿಭ ಕುಜನವಿಪಿನದವಾನಲವಿಜಿತಕಾಮ ವಿರಾಗಿಯೋಗಿ ವ್ರಜಕುಟುಂಬ ಮಹಾಬಲ 2ನೀಲಕಂಠ ನಿರಾಮಯಾಭಯಶೂಲಧರ ಸುಮನೋಹರಶೈಲರಾಜಸುತಾಧರಾಮೃತಲೋಲ ಲೋಕಧುರಂಧರಕಾಲಕಾಲ ಕಪಾಲಧರಕರುಣಾಲವಾಲಮಹೇಶ್ವರಪಾಲಿತಾಖಿಳಸಿದ್ಧ ಮುನಿಜನಜಾಲ ಜಾಹ್ನವಿಶೇಖರ 3ಕೃತ್ತಿವಾಸಗಿರೀಶ ಶ್ರುತಿತತ್ತ್ವಾರ್ಥಬೋಧ ಗುಣೋದಯದೈತ್ಯಮೋಹಕ ಶಾಸ್ತ್ರಕೃತ್ಪ್ರಮಥೋತ್ತಮ ವಿರತಾಶ್ರಯಸತ್ಯಸಂಕಲ್ಪಾನುಸಾರ ನಿವೃತ್ತಿಮಾರ್ಗ ಪ್ರವರ್ತಕಮೃತ್ಯುಹರ ಹರಮೃಡನಮೋಸ್ತುನಮೋ&bಜquo;ಸ್ತು ಸುಮನನಿಯಾಮಕ 4ಪಂಡಿತೋತ್ತಮ ಪವನಶಿಷ್ಯ ಮೃಕಂಡುತನಯಭಯಾಪಹಚಂಡಿಕಾಧವ ಶಿವ ದಯಾರ್ಣವಖಂಡಪರಶುಸುರಾರಿಹಚಂಡಭಾನುಶತಪ್ರಕಾಶಾಖಂಡವೈರಾಗ್ಯಾಧಿಪಕುಂಡಲೀಂದ್ರ ಪದಾರ್ಹನಗ ಕೋದಂಡವಿದೃಶ ಮಹಾನ್‍ತಪ 5ಮಂಗಲಪ್ರದ ದಕ್ಷಕೃತಮುಖಭಂಗ ಭಾಗವತೋತ್ತಮಜಂಗಮಸ್ಥಾವರಹೃದಿಸ್ಥ ಶುಭಾಂಗ ಸತ್ಯಪರಾಕ್ರಮಲಿಂಗಮಯ ಜಯಜಯತು ಗಿರಿಜಾಲಿಂಗಿತಾಂಗಸದೋದಿತಸಂಗರಹಿತಾಚ್ಯುತಕಥಾಮೃತ ಭೃಂಗವತ್ಸೇವನರತ 6ಭರ್ಗಭಾರ್ಗವಋಷಿಪ್ರತಿಷ್ಠಿತ ಸ್ವರ್ಗಮೋಕ್ಷ ಫಲಪ್ರದನಿರ್ಗತಾಖಿಲದುರಿತ ಭೂಸುರವರ್ಗಪಾಲನಕೋವಿದದುರ್ಘಟಿತಧುರಧೀರ ಭವಸಂಸರ್ಗದೂರ ಸನಾತನನಿರ್ಗುಣೈಕಧ್ಯಾನಪರ ಸನ್ಮಾರ್ಗಭಕ್ತಿನಿಕೇತನ 7ಚಾರುಪಾವಂಜಾಖ್ಯಕ್ಷೇತ್ರಾಧಾರದಾಂತದಯಾಕರನೀರಜಾಸನತನಯ ಲಕ್ಷ್ಮೀನಾರಾಯಣಕಿಂಕರವಾರಿನಿಧಿಗಂಬೀರ ದೀನೋದ್ಧಾರ ಧಾರ್ಮಿಕಜನಹಿತವಾರಣಾಸ್ಯಕುಮಾರಗುರು ಗೌರೀರಮಣ ಸುದೃಢವ್ರತ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶಂಬರಾರಿಯತಾತಸಲಹೊ ಶ್ರೀನಾಥಶಂಭು ವಿರಂಚೇಶ ಶ್ರೀ ವೆಂಕಟೇಶ ಪ.ದಶರಥಸಂಜಾತ ದಶಶಿರಹರ್ತವಸುಧೆತಸ್ಕರಛೇತ ವಸುಮತಿಪ್ರೀತಬಿಸಜಾಕ್ಷಿಯಾಪತ್ತ ಬಂಧು ಸಮರ್ಥಪಶುಪಾರಿವೃತಶಕ್ತಿಪರಿಹಾರಕರ್ತ1ಪಾರಿಜಾತಕೆ ವಜ್ರಿ ಪರಾಭವಕಾರಿಕ್ರೂರ ಖಳವೈರಿಕುಲದಸಂಹಾರಿಚಾರುಮಹಿಮಶೌರಿಚಿರಾನಂದೋದಾರಿಸಾರಭೃತ್ಯುಪಕಾರಿ ಸುಕಳಜಗಧಾರಿ 2ಸ್ವಾಮಿ ಪುಷ್ಕರವಾಸ ಶ್ರೀ ಶ್ರೀನಿವಾಸಸೋಮಾರ್ಕಸಂಕಾಶ ಸುರಜನಕೋಶಭೂಮಿಭಾರವಿನಾಶ ಬುಧಪರಿತೋಷಪ್ರೇಮಪೂರಿತಹಾಸ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ಶ್ರೀ ಕಂಚಿ ಕಾಮಾಕ್ಷಿ82ಶರಣು ಶರಣು ಶರಣು ಶರಣು ಕಾಮಾಕ್ಷಿಶರಣು ಮೋಹಿನಿಮಾವಾಣಿಶರ್ವಾಣಿಪಹರಿಸಿರಿಸರಸ್ವತಿ ಸಹ ಪ್ರಜ್ವಲಿಸುವೆಗಿರಿಜೆ ಶರಣು ಕಂಚಿನಿಲಯೆ ಸತತಕಾಯೆ ಅ ಪಏಕಾತ್ಮಾನಂದಮಯನಿಖಿಳಗುಣಾರ್ಣವಜಗಜ್ಜನ್ಮಾದಿಗಳಿಗೆ ಮುಖ್ಯ ಕಾರಣೆ ವ್ಯಾಪ್ತೆಅಕಳಂಕ ಪುಂಸ್ತ್ರೀಗಾತ್ರೆ ಚಿನ್ಮಯೆ ವೃಂದಾರಕರಿಗೆಪೀಯೂಷಕರುಣಿಸಿ ಉಣಿಸಿದೆ1ಭಾಮಾ ರುಕ್ಮಿಣಿ ಸೀತಾ ಸೋಮಸೋದರಿ ರಮೆಕಮಲಾಸನಾದಿ ಸುಮನಸವಂದಿತೆ ತ್ರಾತೆಕಮಲನಾಭನ ಸೇವೆ ವನಮಾಲೆ ಚಾಮರಾದ್ಯಮಿತ ರೂಪದಿ ಮಾಳ್ಪ ಮಹಾಲಕ್ಷ್ಮೀ ನಮೋ ನಮೋ 2ಪಕ್ಷಿವಾಹನ ಸಾಕ್ಷಿ ಚೇತಾನಿರ್ಗುಣ ಅಧೋಕ್ಷಜ ಸರ್ವಾಂತರಾತ್ಮನ ತೀವ್ರಪ್ರೇಕ್ಷಿಸೊ ಜ್ಞಾನ ಭಕುತಿ ಮತಿ ಎನಗಿತ್ತುರಕ್ಷಿಸೆ ಸರಸ್ವತಿ ಫಣಿರ ಪಕ್ಷಿಪ ನುತೆ 3ಹೇಮಅಂಕುಶಪಾಶಇಕ್ಷುದಂಡವು ಪುಷ್ಪಕೋಮಲಹಸ್ತ 2 ನಾಲ್ಕಲ್ಲಿ ಶೋಭಿತವುಕಾಮಿತವರಪ್ರದೆ ಕಾತ್ಯಾಯನಿ ಉಮಾಹೈಮವತಿಯೆ ಶಿವೆ ದಯಮಾಡಿ ಪೊರೆಯೆನ್ನ 4ತತ್ರ ತತ್ರ ಸ್ಥಿತೋ ವಿಷ್ಣುಃ ತತ್ ತತ್ ಶಕ್ತಿ ಪ್ರದರ್ಶಯನ್ಸೂತ್ರವು ಮಣಿಗಳೊಳಂತೆ ಧಾರಕಹರಿವೃತತಿಜಪಿತ ವಿಷ್ಣು ಪ್ರಸನ್ನ ಶ್ರೀನಿವಾಸಗತಿಪ್ರಿಯತರೆ ಶಿವೆ ಸತತ ಪಾಲಿಸೆ ಎನ್ನ5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ನರಹರಿ ತೀರ್ಥವಿಜಯ99ಪ್ರಥಮ ಕೀರ್ತನೆಯೋಗಾನಂದ ನರಹರಿ ರಾಮಪ್ರಿಯತಮರುಯೋಗಿವರ ನರಹರಿತೀರ್ಥರಪಾದಯುಗ್ಮವನರುಹದಿ ನಾ ಶರಣಾದೆ ಸಂತತಅಗಲದೇ ಎನ್ನ ಬದಿ ಇದ್ದು ರಕ್ಷಿಪರು ಪಅಶೇಷ ಗುಣಗಣಾಧಾರ ವಿಭು ಶ್ರೀ ರಮಣಹಂಸ ನಾಮಕ ಪರಮಾತ್ಮನಿಗೆ ನಮಿಪೆಹಂಸ ಬೋಧಿತ ವಿಧಿಗೆ ತತ್ ಶಿಷ್ಯ ಸನಕಾದಿವಂಶಜ ಗುರುಗಳು ಸರ್ವರಿಗು ನಮಿಪೆ 1ಅಚ್ಯುತಪ್ರೇಕ್ಷಾಖ್ಯ ಪುರುಷೋತ್ತಮಾರ್ಯಕರತೋಯಜೋತ್ಪನ್ನ ಆನಂದ ತೀರ್ಥರಿಗೆಕಾಯವಾಙÕನದಿಂದ ಶರಣಾದೆ ಸಂತತತೋಯಜಭವಾಂಡದ ಸಜ್ಜನೋದ್ಧಾರ2ಶ್ರೀವರ ವೇದವ್ಯಾಸನವತಾರಕನುಸರಿಸಿಭಾವಿ ಬ್ರಹ್ಮನು ಮುಖ್ಯ ವಾಯುದೇವದೇವೀಜಯಾಸಂಕರ್ಷಣಾತ್ಮಜನು ಈಭುವಿಯಲ್ಲಿ ತೋರಿಹ ಆನಂದ ತೀರ್ಥ 3ಮಾಲೋಲ ಶ್ರೀ ರಾಮಕೃಷ್ಣ ಪ್ರೀತಿಗಾಗಿಯೇಬಲ ಕಾರ್ಯ ಮಾಡಿದ ಹನುಮಂತ ಭೀಮಕಲಿಯುಗದಿ ಈ ಭೀಮ ಅವತಾರ ಮಾಡಿಹನುಕಲಿಮಲಾಪಹ ಜಗದ್ಗುರು ಮಧ್ವನಾಗಿ4ಶ್ರೀ ಮಧ್ವ ಅನಂತ ತೀರ್ಥಕರ ಅಬ್ಜಜರುಪದ್ಮನಾಭನೃಹರಿ ಮಾಧವಾಕ್ಷೋಭ್ಯಈ ಮಹಾ ಗುರುಗಳು ಸರ್ವರಿಗು ಆ ನಮಿಪೆಸುಮನಸಶ್ರೇಷ್ಠರು ಮಹಿಯಲ್ಲಿ ಪುಟ್ಟಿಹರು5ಶ್ರೀ ಮಹಾ ಪುರುಷೋತ್ತಮದಾಸರೆಂದೆನಿಪಶ್ರೀ ಮಧ್ವ ಮುನಿಗಳ ಶಿಷ್ಯ ಸಂತತಿಗೂಸುಮಹಿಮ ಹರಿದಾಸವರ್ಯರು ಸರ್ವರಿಗುಸನ್ಮನದಿ ಆ ನಮಿಪೆ ಸಂತೈಪರೆಮ್ಮ 6ಆ ಸೇತು ಹಿಮಗಿರಿ ಬದರಿಕಾಶ್ರಮಕ್ಷೇತ್ರವಸುಧೆಯ ಸಮಸ್ತಕಡೆ ಪೋಗಿ ಅಲ್ಲಲ್ಲಿದುಸ್ತರ್ಕ ದುರ್ಮತ ಅಟವಿಗಳ ಛೇದಿಸಿದಶಪ್ರಮತಿ ಮಧ್ವಮುನಿ ಒಲಿದರು ಸುಜನರ್ಗೆ 7ಈ ರೀತಿ ದಿಗ್ವಿಜಯ ಮಾರ್ಗದಲಿ ಮಧ್ವರಾಯರ ಸಂಗಡ ವಾದಕ್ಕೆ ನಿಂತು |ಭಾರಿಪಂಡಿತರತ್ನಶೋಭನ ಭಟ್ಟನುಶರಣಾಗಿ ಮಧ್ವರಾಯರ ಶಿಷ್ಯನಾದ 8ಶೋಭನ ಭಟ್ಟಾಖ್ಯ ಈಗುಣಗ್ರಾಹಿಯುಶುಭಪ್ರದೆ ಲೋಕಪಾವನಿವೃದ್ಧ ಗಂಗೆಎಂಬುವ ಗೋದಾವರೀ ತೀರದಲಿ ಮಧ್ವಅಬ್ಜಹಸ್ತದಿಕೊಂಡ ತುರ್ಯಾಶ್ರಮ 9ಸತ್ತತ್ವವಾದದ ಸೊಬಗನ್ನ ಮಧ್ವವದನಾಂಬುಜದಿಂದಕೇಳಿಸುಪವಿತ್ರಪದ್ಮನಾಭತೀರ್ಥಾಖ್ಯ ನಾಮವ ಹೊಂದಿದಮುದದಿಂದ ಈ ಮಹಾತ್ಮನು ಶೋಭನನು 10ಕಳಿಂಗ ರಾಜನ ಮಂತ್ರಿಯ ಕುಮಾರನುಶೀಲತಮ ಹರಿಭಕ್ತಸ್ವಾಮಿ ಶಾಸ್ತ್ರಿಬಾಲ ವಯಸ್ಸಲ್ಲೇವೆ ಸಿರಿತನದಾಮೋಹಾದಿಲೀಲಾವಿನೋದ ಚಟುವಟಿಕೆ ತೊರೆದವನು 11ವಿಧಿಯುಕ್ತ ಉಪನಯನ ಶಾಸ್ತ್ರಾಭ್ಯಾಸವವೇದ ವೇದಾಂತವಿದ್ಯೆಸರ್ವ ಹೊಂದಿಗೋದಾವರಿ ಕ್ಷೇತ್ರ ಎಲ್ಲೆಲ್ಲೂ ಈತನುವಿದ್ವಚ್ಛಿರೋಮಣಿ ಎಂದೆನಿಸಿಕೊಂಡ 12ರಾಮ ಮಹೇಂದ್ರಪುರಪ್ರಾಂತ್ಯಸ್ಥವಾದಿಗಜಸಿಂಹ ಶೋಭನ ಭಟ್ಟನು ಈಗತ್ರಿಜಗದ್ಗುರು ಮಧ್ವರಿಂ ಅನುಗ್ರಹವಕೊಂಡದ್ದುನಿಜ ಹರುಷದಿ ಕೇಳಿದ ಶ್ಯಾಮ ಶಾಸ್ತ್ರಿ 13ಹಿತಕರ ಈಸುದ್ದಿ ಕೇಳಲಿಕ್ಕೇವೆಕಾದಿದ್ದ ಶ್ರೀಮಂತ ಈ ಶ್ಯಾಮ ಶಾಸ್ತ್ರಿಬಂದು ಶ್ರೀಮಧ್ವರಲಿ ಕರಮುಗಿದು ಸನ್ನಮಿಸಿಒದಗಿ ಪಾಲಿಸಿ ಸೇವೆ ಕೊಳ್ಳಬೇಕೆಂದ 14ಉತ್ತಮ ದೇವಾಂಶನು ನಿಜ ಸಹಜ ಭಕ್ತಿಮಾನ್ಸುದೃಢ ಜ್ಞಾನಿಯು ಋಜುಮಾರ್ಗ ಚರಿಪಕ್ಷಿತಿಯಲ್ಲಿ ಜನಿಸಿಹ ವೈರಾಗ್ಯನಿಧಿ ಇವಹೊಂದಿದ ತುರ್ಯಾಶ್ರಮ ಮಧ್ವ ಮುನಿದಯದಿ 15ನರಹರಿ ತೀರ್ಥಾಖ್ಯ ಶುಭತಮನಾಮವಶಾಸ್ತ್ರಿಗೆ ಇತ್ತರು ಆನಂದ ಮುನಿಯುಹರಿಸೇವಾ ಕಾರ್ಯಸಿದ್ಯರ್ಥ ಆದೇಶದಲೆಇರುವುದು ಎಂದರು ಸರ್ವಜÕ ಮುನಿಯು 16ಸಾಮ್ರಾಜ್ಯ ಅಧಿಪತ್ಯ ಕಳಿಂಗ ದೇಶದಲಿಚರಿಸುವ ಕಾಲವು ಬರಲಿಕ್ಕೆ ಇದೆಯುಶ್ರೀರಾಮ ಸೀತಾ ಮೂರ್ತಿಗಳ ಅಲ್ಲಿಂದತರಲಿಕ್ಕೆ ಇರಬೇಕು ಅಲ್ಲಿಯೇ ಎಂದರು 17ಗಜಪತಿ ರಾಜನ ಅರಮನೆಯಲ್ಲಿರಾಜೀವೇಕ್ಷಣ ಮೂಲರಾಮನು ಸೀತಾರಾಜಭಂಡಾರದಲ್ಲಿ ಮಂಜೂಷದಲಿರಾಜಿಸುತ ಇಹರುಮೂರ್ತಿರೂಪದಲಿ18ಕಳಿಂಗದೇಶಾಧಿಪ ಗಜಪತಿಯ ವಂಶದಲಿಬಾಲರಾಜನು ಅವನ ಪ್ರತಿನಿಧಿಯಾಗಿಆಳುವುದು ರಾಜ್ಯವ ಎಂದು ಆಚಾರ್ಯರುಪೇಳಿದರು ನರಹರಿ ತೀರ್ಥ ಆರ್ಯರಿಗೆ 19ಬಾಲರಾಜನು ಯುವಕನಾಗಿ ರಾಜ್ಯವನ್ನುಆಳುವ ಯೋಗ್ಯತೆ ಹೊಂದಿದ ಮೇಲೆಅಲ್ಲಿಂದ ರಾಮ ಸೀತಾ ಮೂರ್ತಿರಾಜನ್ನಕೇಳಿತರಬೇಕು ಎಂದರು ಲೋಕ ಗುರುವು 20ಗೋದಾವರಿ ಕ್ಷೇತ್ರದೇಶ ಸುತ್ತು ಮುತ್ತುಸಾಧುಜನ ಉದ್ಧಾರ ಬೋಧಕ್ಕೆಪದ್ಮನಾಭತೀರ್ಥರ ತತ್ಕಾಲ ನಿಲ್ಲಿರಿಸಿಬಂದರು ಉಡುಪಿಗೆ ಪೂರ್ಣ ಪ್ರಮತಿಗಳು 21ಶ್ರೀ ಮಧ್ವಾಚಾರ್ಯರು ಅರುಹಿದ ಪ್ರಕಾರದಲೇಸಮಯ ಒದಗಿತು ರಾಣಿ ಬಿನ್ನೈಸಿದಳುಸ್ವಾಮಿ ತಾವೇ ರಾಜ್ಯ ಆಳಬೇಕೆಂದಳುಸಮ್ಮತಿಸಿದರು ಶ್ರೀ ನರಹರಿ ಮುನಿಯು 22ಮಂತ್ರಿಪದವಿಪರಂಪರೆ ಪ್ರಾಪ್ತವಾಗಿತಂದೆ ವಹಿಸಿದ್ದರುಅವರಮುಖದಿಂದಹಿಂದೆ ಪೂರ್ವಾಶ್ರಮದಿ ರಾಜ್ಯ ಆಡಳಿತದರೀತಿಯ ಅರಿತವರು ಈ ಹೊಸಯತಿಯು 23ನರಹರಿ ತೀರ್ಥರ ರಾಜ್ಯ ಆಡಳಿತದಲಿಪರಿಪರಿ ರಾಜತಂತ್ರಗಳ ಕೌಶಲ್ಯಸರಿಯಾದ ಧಾರ್ಮಿಕ ರಾಜನೀತಿಯ ದುಷ್ಟಶತ್ರು ನಿಗ್ರಹ ಶಿಷ್ಟಪಾಲನಏನೆಂಬೆ24ದಂಡೆತ್ತಿ ಆಗಾಗ ಬರುತಿದ್ದ ಶಬರಾದಿತುಂಟ ಶತ್ರುಗಳನ್ನ ಜಯಿಸಿ ರಾಜ್ಯವನ್ನಕಂಟಕದುರ್ಮತಿಗಳಿಂದ ಕಾಪಾಡಿದರುಎಂಟು ದಿಕ್ಕಲು ಹಬ್ಬಿತಿವರ ಕೀರ್ತಿ 25ಆಶ್ರಮೋಚಿತನಿತ್ಯಜಪಪೂಜ ಕಾರ್ಯಗಳುಶಿಷ್ಯ ಸಜ್ಜನರಿಗೆ ಉಪದೇಶಾನುಗ್ರಹಲೇಶವೂ ಕೊರತೆ ಇಲ್ಲದೆ ಮುದದಿಈಶನ ಪ್ರೀತಿಗೆ ರಾಜಕಾರ್ಯಗಳ ಮಾಡಿದರು 26ವಾಗೀಶಪಿತ ಶ್ರೀ ಪ್ರಸನ್ನ ಶ್ರೀನಿವಾಸಯೋಗಾನಂದ ನರಹರಿ ಮೂಲ ರಾಮನಿಗೆ ಪ್ರಿಯತಮರು ನರಹರಿ ತೀರ್ಥರಲ್ಲಿಬಾಗಿ ಶರಣಾದೆ ನಾ ಸದಾ ಪೊರೆವರೆನ್ನ 27- ಇತಿ ಶ್ರೀ ಪ್ರಸನ್ನ ನರಹರಿತೀರ್ಥವಿಜಯಪ್ರಥಮೋದ್ಯಾಯಃ -ದ್ವಿತೀಯಕೀರ್ತನೆಯೋಗಾನಂದ ನರಹರಿ ರಾಮಪ್ರಿಯತಮರುಯೋಗಿವರ ನರಹರಿತೀರ್ಥರಪಾದಯುಗ್ಮವನರುಹದಿ ನಾ ಶರಣಾದೆ ಸಂತತಅಗಲದೇ ಎನ್ನ ಬದಿ ಇದ್ದು ರಕ್ಷಿಪರು ಪಶ್ರೀಕೂರ್ಮಕ್ಷೇತ್ರದಲಿ ಕೂರ್ಮೇಶ್ವರಾಲಯದಿಯೋಗಾನಂದ ನರಸಿಂಹಗೆ ಗುಡಿಯಯೋಗಿವರ ನರಹರಿತೀರ್ಥರು ಕಟ್ಟಿಸಿಯೋಗಾನಂದ ನರಸಿಂಹನ ಸ್ಥಾಪಿಸಿದರು 1ಯುಕ್ತ ಕಾಲದಿ ರಾಜನಿಗೆ ರಾಜ್ಯ ಒಪ್ಪಿಸಲುಕೃತಜÕ ಮನದಿಂದ ಆ ಯುವಕರಾಜಇತ್ತನು ಸನ್ನಮಿಸಿ ನರಹರಿತೀರ್ಥರಿಗೆಸೀತಾರಾಮ ವಿಗ್ರಹದ ಮಂಜೂಷ 2ನರಹರಿತೀರ್ಥರು ಶ್ರೀಮದಾಚಾರ್ಯರಲಿನೇರವಾಗಿ ಪೋಗಿ ಸಮರ್ಪಿಸಲು ಆಗಶ್ರೀರಾಮ ಸೀತಾದೇವಿಯ ಮಧ್ವಮುನಿಕ್ಷೀರಾದಿ ಪಂಚಾಮೃತದಿ ಪೂಜಿಸಿದರು 3ಶ್ರೀರಾಮಸೀತಾ ಪ್ರತಿಮೆಗಳೊಳು ಹರಿರಮಾಆರಾಧನಾರ್ಚನೆ ಮೂರು ತಿಂಗಳು ಹದಿ -ನಾರುದಿನ ತಾಮಾಡಿ ಪದ್ಮನಾಭತೀರ್ಥರುತರುವಾಯ ಪೂಜಿಸಲು ಆಜೆÕ ಮಾಡಿದರು 4ಮೂರನೇಬಾರಿ ಬದರಿಗೆ ಆಚಾರ್ಯರುತೆರಳಲು ಪದ್ಮನಾಭರು ತಾವು ಪೂಜೆಚರಿಸಿ ನಿಯಮನದಂತೆ ಆರು ವರ್ಷ ತರುವಾಯನರಹರಿತೀರ್ಥರಿಗೆ ಇತ್ತರು ಮೂರ್ತಿಗಳ 5ಈ ಮೂರ್ತಿಗಳೊಳ್ ಇರುವ ಸೀತಾರಾಮಾರ್ಚನೆಬ್ರಹ್ಮದೇವರು ಮಾಡಿ ಸೂರ್ಯವಂಶಭೂಮಿಪಾಲಕ ಕೈಯಿಂದ ಪೂಜೆಯ ಕೊಂಡುಕ್ರಮದಿ ದಶರಥರಾಜ ಕರಕೆ ಲಭಿಸಿದವು 6ಶ್ರೀ ರಾಮಚಂದ್ರ ಪ್ರಾದುರ್ಭಾವಕು ಮೊದಲೇದಶರಥ ಆರಾಧಿಸಿದ ತರುವಾಯಶ್ರೀ ರಾಮತಾನೇ ಸ್ವಯಂ ಪೂಜೆ ಮಾಡಿದನುಶಿರಿಸೀತ ತಾ ಕೊಂಡಳು ಪೂಜೆಗಾಗಿ 7ರಾಮಚಂದ್ರನು ಸೇವೆ ಸಾಕ್ಷಾತ್ ಮಾಡುವಸೌಮಿತ್ರಿ ಆ ಮೂರ್ತಿಗಳನ್ನು ತಾನುಸಮ್ಮುದದಿ ತನ್ನ ಅರಮನೆಯಲ್ಲಿಟ್ಟುಕೊಂಡುನೇಮದಿ ಪೂಜಿಸುತ್ತಿದ್ದನು ಬಹುಕಾಲ 8ದ್ವಿಜನರ ಶ್ರೇಷ್ಠನು ರಾಮನಲಿ ಬಹುಭಕ್ತಿನಿಜಭಾವದಲಿ ಮಾಳ್ಪಅನುದಿನಅವನುರಾಜೀವೇಕ್ಷಣ ರಾಮನನ್ನು ತಾ ನೋಡದಲೆಭೋಜನ ಮಾಡಲಾರನು ಅಂಥಭಕ್ತ 9ವಿಪ್ರವರ ಅವಾತ ವೃದ್ಧಾಪ್ಯದಲಿಅರಮನೆ ದರ್ಬಾರ ಮಂಟಪಕೆ ಬಂದಶ್ರೀರಾಮಚಂದ್ರನು ರಾಜಕಾರ್ಯೋದ್ದೇಶಹೊರಗೆ ಹೋಗಿದ್ದನು ಏಳುದಿನ ಹೀಗೆ 10ಏಳು ದಿನವೂ ಆ ವಿಪ್ರೋತ್ತಮ ಊಟಕೊಳ್ಳದೇ ದೇಹಬಲ ಬಹು ಬಹುಕುಗ್ಗಿಮೆಲ್ಲನೆ ಎಂಟನೆ ದಿನ ಬಂದುಕುಳಿತಿದ್ದ ಶ್ರೀ ರಾಮಚಂದ್ರ ಸಭೆಯಲ್ಲಿ 11ಕಣ್ಣಿಗೆ ಏಳುದಿನ ಕಾಣದ ಶ್ರೀರಾಮಆನಂದಮಯಶ್ರೀನಿಧಿಯ ಕಂಡಲ್ಲೇಬ್ರಾಹ್ಮಣನು ಆನಂದ್ರೋದೇಕವು ಉಕ್ಕಿಸನ್ನಮಿಸುವಲ್ಲೇಯೇ ಬಿದ್ದನು ಕೆಳಗೆ 12ಏಳುದಿನ ಉಪವಾಸದಿಂದಲೇ ತನುವಿನಬಲಹೀನತೆ ಹೊಂದಿ ಆ ಬ್ರಾಹ್ಮಣ ಬೀಳೆ ಕೆಳಗೆಕನಕಆಸನದಿಂದಲಿ ರಾಮಇಳಿದುಬಂದು ಆಶ್ವಾಸಿಸಿದ ವಿಪ್ರನÀನ್ನ 13ವಿಪ್ರಶ್ರೇಷ್ಠನ ನಿವ್ರ್ಯಾಜ ಭಕ್ತಿಯ ಮೆಚ್ಚಿಕರುಣಾಬ್ಧಿ ಭಕ್ತವತ್ಸಲ ರಾಮಚಂದ್ರಕ್ಷಿಪ್ರದಲೆ ಲಕ್ಷ್ಮಣನ ಕಡೆಯಿಂದ ಪ್ರತಿಮೆಗಳತರಿಸಿಕೊಟ್ಟನು ಆ ದ್ವಿಜಶ್ರೇಷ್ಠನಿಗೆ 14ಅನುದಿನವೃದ್ಧ ದೆಶೆಯಲ್ಲಿ ಬರಬೇಡವುಅನಾಯಾಸದಿ ತನ್ನ ಪ್ರತಿಮೆಯಲ್ಲಿಕಾಣಬಹುದು ಎಂದು ಶ್ರೀರಾಮ ಪೇಳಿದನುಆನಂದದಿಕೊಂಡಬ್ರಾಹ್ಮಣ ಮೂರ್ತಿಗಳ15ಪ್ರತಿನಿತ್ಯ ವಿಧಿಪೂರ್ವಕ ಅರ್ಚಿಸಿದವಿಪ್ರಯುಕ್ತ ಕಾಲದಿ ತನು ಬಿಡುವ ಸಮಯದಲಿವಾಯುಸುತ ಹನುಮನ ಕೈಯಲ್ಲಿ ಅರ್ಪಿಸಿದಸೀತಾರಾಮ ಪ್ರತಿಮೆಗಳ ಭಕ್ತಿಯಲಿ 16ಸಮಸ್ತ ಜೀವರುಮಾಳ್ಪ ಭಕ್ತಿಗೆ ಅಧಿಕಸುಮಹಾಭಕ್ತಿಯ ಮಾಳ್ಪ ಹನುಮಂತಈ ಮೂರ್ತಿಗಳ ತಾಕೊಂಡು ಮುದದಲಿ ಕುಣಿದಸಮ್ಮುದದಿ ಅರ್ಚಿಸಿದ ಸೀತಾರಾಮನ್ನ 17ಸೌಗಂಧಿಕಾಪುಷ್ಪತರಲು ಭೀಮನು ಪೋಗಿಮಾರ್ಗದಲಿ ತನ್ನಯ ಪ್ರಥಮಾವತಾರಸಾಕೇತರಾಮಪ್ರಿಯತಮ ಅಂಜನಾಸುತನಸಂಗಡವಾದಿಸಿದ ಲೋಕರೀತಿಯಲ್ಲಿ 18ನರಾಧಮರ ಮೋಹಿಸುವ ಸಜ್ಜನರ ಮೋದಿಸುವಚರ್ಯಸಂವಾದ ತೋರಿಸಿ ರೂಪದ್ವಯದಿತರುವಾಯು ಹನುಮನು ಭೀಮನಿಗೆ ಕೊಟ್ಟನುಶ್ರೀರಾಮಸೀತಾ ಮೂಲಪ್ರತಿಮೆಗಳ 19ಭೀಮಸೇನನು ಆನಂದದಿ ಅರ್ಚಿಸಿದಸುಮನೋಹರ ರಾಮಸೀತಾದೇವಿಯನ್ನಈ ಮಹಾಹರಿಭಕ್ತ ಪಾಂಡವರ ವಂಶದಿಕ್ಷೇಮಕ ರಾಜನು ಕಡೆಯಾಗಿ ಬಂದ 20ಮೂಲರಾಮಸೀತೆಯ ಮುದದಿಂದ ಪೂಜಿಸಿದಶೀಲಭಾವದಲಿ ಆ ಕ್ಷೇಮಕಾಂತಮೂಲ ವಿಗ್ರಹಗಳು ತರುವಾಯ ಲಭಿಸಿದವುಕಳಿಂಗ ದೇಶಾಧಿಪ ಭಕ್ತನ ಕೈಯಲ್ಲಿ 21ಆಗಿನಕಾಲದಲ್ಲಿಪೀತಾಪುರವಿಜಯನಗರಎಂಬುವ ಪಟ್ಟಣದ ಮತ್ತುಜಗನ್ನಾಥಕ್ಷೇತ್ರ ದಕ್ಷಿಣ ಕಳಿಂಗಾಧಿಪರುಭಕುತಿ ಬೆಳೆಸಿದರು ಶ್ರೀರಾಮನಲ್ಲಿ 22ಆಗಾಗ ಹಸ್ತಿನಾಪುರ ಪೋಗುತಿದ್ದರುಗಂಗಾದಿಸ್ನಾನ ಕ್ಷೇತ್ರಾಟನ ಮಾಡಿಭಕ್ತಿಯಿಂ ಶ್ರೀರಾಮಚರಿತೆ ಕೇಳುವವರಲ್ಲಿವಿಗ್ರಹಗಳು ಲಭಿಸಿದವು ರಾಮನ ಕೃಪದಿ 23ಕಳಿಂಗದೇಶಾಧಿಪ ಗಜಪತಿ ರಾಜನುಬಲುಶ್ರದ್ಧೆ ಭಕ್ತಿಯಲಿ ಆರಾಧಿಸಿಕಾಲದೀರ್ಘದಿ ಸಂತತಿ ಪೂಜಿಸದಲೆಕೀಲುಹಾಕಿ ರಕ್ಷಿಸಿದರು ಬೊಕ್ಕಸದಿ 24ಹಿಂದೆ ತಾ ಭೀಮಾವತಾರದಲಿ ಪೂಜಿಸಿದ್ದುಎಂದು ಆನಂದಮುನಿಇಂದುವಿಗ್ರಹಗಳಹೊಂದಲು ನರಹರಿ ತೀರ್ಥರ ಕಳಿಂಗದಿನಿಂದಿರಿಸಿ ತರಿಸಿಕೊಂಡರು ಮೂರ್ತಿಗಳನು 25ಶ್ರೀಮದಾಚಾರ್ಯರು ಆರ್ಚಿಸಿ ತರುವಾಯಪದ್ಮನಾಭತೀರ್ಥರು ಆರುವರ್ಷಗಳು ಆರಾಧಿಸಿ ನರಹರಿ ತೀರ್ಥರು ಒಂಭತ್ತು ವರ್ಷಗಳುಮುದದಿಂ ಪೂಜಿಸಿದರು ಮೂಲ ರಾಮನ್ನ 26ಒಂಭತ್ತು ವರ್ಷಗಳು ಒಂದು ತಿಂಗಳು ದಿನಇಪ್ಪತ್ತ ಮೂರು ಈಕಾಲಸಂಸ್ಥಾನಶ್ರೀಪನಿಗೆ ಪ್ರಿಯತರದಿ ಆಡಳಿತ ಮಾಡಿಶ್ರೀಪನ್ನ ಧ್ಯಾನಿಸುತ ಹರಿಪುರ ಐದಿದರು 27ಶಾಲಿಶಕ ಹನ್ನೊಂದು ನೂರು ಮೂವತ್ತಾರುಶೀಲತಮ ಶ್ರೀಮುಖ ಪುಷ್ಯ ಕೃಷ್ಣಏಳನೇ ದಿನದಲ್ಲಿ ಹರಿಪುರ ಯೈದಿದರುಮಾಲೋಲ ಪ್ರಿಯತಮ ನರಹರಿ ತೀರ್ಥರು 28ಮತ್ತೊಂದು ಅಂಶದಲಿ ವೃಂದಾವನದಲಿವೃತತಿಜನಾಭ ತೀರ್ಥರ ಸಮೀಪಉತ್ತುಂಗಮಹಿಮ ತುಂಗಾನದಿ ಚಕ್ರತೀರ್ಥದಹತ್ತಿರ ಕುಳಿತಿಹರು ಸ್ಮರಿಸೆ ರಕ್ಷಿಪರು 29ಶ್ರೀರಾಮನರಹರಿ ಶ್ರೀ ಶ್ರೀನಿವಾಸನುನೇರಲ್ಲಿ ಪ್ರಸನ್ನನಾಗಿ ಈಗ ಈ ನುಡಿಗಳ್ಬರೆಸಿಹನು ಸಜ್ಜನರು ಓದಲು ಕೇಳಲುಗುರುಗಳಂತರ್ಯಾಮಿ ವಾಂಛಿತಗಳೀವ 30ಅರಸಿಕರಿಗೂ ಅಧಮ ಮಂದರಿಗು ಈವಿಜಯಬರೆಯಲಿಕು ಕೇಳಲಿಕು ಅವಕಾಶ ಕೊಡದೆಭಾರಿ ಪಂಡಿತರುಗಳೂ ಸಾಮಾನ್ಯ ಸುಜನರೂಸುಶ್ರಮಣ ಮಾಳ್ಪುದು ಹರಿಪ್ರೀತಿಗಾಗಿ 31ವಾಗೀಶಪಿತ ಶ್ರೀ ಪ್ರಸನ್ನ ಶ್ರೀನಿವಾಸಯೋಗಾನಂದ ನರಹರಿ ಮೂಲ ರಾಮನಿಗೆ ಪ್ರಿಯತಮರು ನರಹರಿ ತೀರ್ಥರಲ್ಲಿಬಾಗಿ ಶರಣಾದೆ ನಾ ಸದಾ ಪೊರೆವರೆನ್ನ 32ಶ್ರೀ ನರಹರಿತೀರ್ಥವಿಜಯಸಂಪೂರ್ಣಂ|| ಶ್ರೀ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ನಾಮಗಿರಿ ಅಮ್ಮ63ಶ್ರೀ ನಾಮಗಿರಿ ಅಮ್ಮ ನಿನ್ನ ನಾ ನಂಬಿದೆ ಸಲಹೆನ್ನಶ್ರೀ ನರಸಿಂಹನ ನಿಜಸತಿ ಶುಭಕರಿವನರುಹಜಾಂಡದಜನನಿಭೂಅಂಭ್ರಣಿಅ.ಪಬೊಮ್ಮನ ಪ್ರಳಯದಲಿ ಕಮಲಜ ಆಲದ ಎಲೆಯಾಗಿಸ್ವಾಮಿ ಸ್ವಾಪ್ಯನ ಬಹುನಂದದಿ ಸ್ತುತಿಸಿಸಮಸ್ತಜಗತ್ ಸತ್ಸøಷ್ಟಿಯ ಗೈಸಿದೆ 1ಕ್ಷೀರಾಂಬುಧಿಯಿಂದ ತೋರಿ ನೀ ಸರ್ವಜನರ ಮುಂದೆನಾರಅಜಿತ ಸರ್ವೋತ್ತಮ ಹರಿಗೆ ನೀನಿರಂತರ ನಿಜಸತಿಯೆಂದು ಪ್ರಕಟಿಸಿದೆ 2ಘನಬಾಲಭಕ್ತನಿಗೆ ಒಲಿದ ವೃತಿತಿಜಾಸನ ಪಿತನುಹನುಮವಂದಿತ ಶ್ರೀ ಪ್ರಸನ್ನ ಶ್ರೀನಿವಾಸನರಸಿಂಹನ ಸಹ ಭಕ್ತಜನರ ಪೊರೆವೆ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪಾರ್ವತೀದೇವಿ79ಮಂಗಳಗೌರೀ ಪಾರ್ವತಿ ಅಂಬಾ ಶಿವಾನಮಸ್ತೆ ಪಾಲಯಂ ಮಾಂ ಪಗೌರವರ್ಣಾವರಪೀತಾಂಬರಧರಾವರಅಭಯಕರಾ ಪಾಲಯ ಮಾಂ1ಧ್ಯಾಯಾಮಿತ್ವಮ್ ಮಂಗಳ ಶುಭದಾಭಾಗ್ಯದಾ ಸಂತತಂ ಪಾಲಯ ಮಾಂ 2ವೃತತಿಜಾಸನಪಿತ ಪ್ರಸನ್ನ ಶ್ರೀನಿವಾಸಭಕ್ತೀಂ ದೇಹಿ ಮೇ ಕೃಪಯಾ ಅಂಬಾ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಮಾದೀ ಸಂವತ್ಸರ ಹರಿಸ್ತೋತ್ರ153ಪೂರ್ಣ ಗುಣನಿಧಿಅನಘಸರ್ವೋತ್ತಮ ಜ್ಞÕನ-ಆನಂದ ಮಯ ಕೃಷ್ಣ ವಾಮನ ಸರ್ವೇಶಜನುಮಾದಿ ಕರ್ತಾ ಪ್ರಮಾದೀ ಸಂವತ್ಸರಸುನಾಮನೇ ಅನಿಷ್ಟಹರ ಇಷ್ಟಪ್ರದ ಶರಣು ಪತೇಜಸ್ಸಲಿಲ ಪೃಥಿವಿ ಶ್ರೀವಾಯುರುದ್ರರೊಳುರಾಜರಾಜೇಶ್ವರ ತ್ರಿವೃತ್ ಪ್ರಮಾದೀರಾಜೀವಜಾಂಡ ಕಾರಣ ದೊರೆಯೆ ನೀನಿಂತುಪ್ರಜೆಗಳ ರಕ್ಷಿಸುವಿ ನೀ ಪೂರ್ಣಕಾಮ 1ರಾಜರು ರಾಜ್ಯಾಧಿಕಾರಿಗಳು ಈ ವರುಷರಜಸ್ತಮೋನ್ನಾಹದಿ ಕ್ರೋಧ ಮತ್ಸರದಿಂರಾಜ್ಯ ಜನರ ಪೀಡಿಸದಂತೆ ನೀಮಾಡೋರಾಜೀವೇಷಣವೃಷ್ಟಿಸಸ್ಯವರ್ಧಿಸುವಿ2ಉತ್ತಿಷ್ಠ ಶ್ರೀಕರ ಶ್ರೀಯಃ ಪತೆ ಜಗನ್ನಾಥಪದ್ಮಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಸದಾನಮೋ ಸುಹೃತ್ ತ್ರಿವೃತ್ ಪ್ರಮಾದೀವಾಮನಕೃಷ್ಣಹೇ ಧಯಾನಿಧೇ ಶರಣುಅನಿಮಿತ್ತ ಬಂಧು3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಸನ್ನ ಶ್ರೀನಿವಾಸದಾಸರ ಶ್ರೀಹರಿ ಪ್ರಾದುರ್ಭಾವಗಳುಪ್ರಸನ್ನ ಶ್ರೀ ಮತ್ಸ್ಯಾವತಾರ4ಲೀಲಾವತಾರನೇ ಪ್ರಳಯಾಬ್ದಿ ಸಂಚರನೇಮಾಲೋಲ ಸುಖಚಿತ್ ತನು ಮತ್ಸ್ಯರೂಪಬಾಲಾರ್ಕ ಕೋಟ್ಯಮಿತ ಜ್ಯೋತಿರ್ಮಯ ಸುಂದರನೇಕಾಲಗುಣದೇಶ ಅಪರಿಚ್ಛಿನ್ನ ಪೂರ್ಣ ಸುಗುಣಾರ್ಣವನೇ ಶರಣು ಪಪ್ರಳಯದಲಿ ಭೂರಾದಿ ಲೋಕಂಗಳುಮುಳಗಿರಲು ಹುಯಗ್ರೀವನಾಮ ದಾನವನುಸೆಳೆದು ವೇದಗಳ ತನ್ನೊಳ್ ಅಡಗಿಸಿದ್ದವನಸೀಳ್ದಿ ನೀ ಬಂದು ವೇದೋದ್ಧರನೇ ಮತ್ಸ್ಯ 1ಗೋವಿಪ್ರಸುರ ಸಾಧು ಜನರ ವೇದಂಗಳ-ಕಾವಸರ್ವೇಶ್ವರನೇ ಪುರುಷಾರ್ಥದಾತಸರ್ವರಿಗೂ ಸುಖವೀವುದು ನಿನ್ನ ಸುಚರಿತ್ರೆಶ್ರೀವರನೇ ಮತ್ಸ್ಯರೂಪಿಯೇ ಶರಣು ಶ್ರೀ ಕೃಷ್ಣ 2ಹಂಸ ಐರಾವತ ತಿತ್ತಿರಾ ಶುಕಗಳುಈ ಪಕ್ಷಿಗಳಲ್ಲಿ ತರತಮ ಉಂಟುಸುಸುಖ ಐಶ್ವರ್ಯೋನ್ನಾಹ ಅದರಂತೇವೇಈ ಸುನುಡಿಗಳ ಪಠನ ಮಾಳ್ಪ ಸುಜನರಿಗೆ 3ಗುರುರ್ಗುರ್ರೋಗುರುಮನುಶುಕಮಧ್ವಾಂತಸ್ಥಪರಮಾತ್ಮಹರಿವಿಷ್ಣೋ ಉದ್ದಾಮಸಾಮಅರದೂರಅನಂತೋರು ನಿಜಶಕ್ತಿ ಪರಿಪೂರ್ಣಉರು ಸುಗುಣ ನಿಧಿಯೇ ಶಫರಿರೂಪ ಮಾಂಪಾಹಿ 4ಸರ್ವೋತ್ತಮನು ನಾರಾಯಣನೇ ಎಂದರಿತುದ್ರವಿಡ ದೇಶಾಧಿಪನು ಸತ್ಯವ್ರತರಾಯಸುವಿವೇಕದಿ ನಿನ್ನ ಕುರಿತು ತಪವಚರಿಸಿದನುಭಾವಶುದ್ಧನು ಸಲೀಲಾಶನ ದೃಢವ್ರತನು5ವಿವಸ್ವಾನ್ ಮಗ ಶ್ರಾದ್ಧದೇವನು ಪ್ರಖ್ಯಾತವೈವಸ್ವತಮನುವೇ ಇಂದಿನ ಮನುವುಪೂರ್ವದಲಿ ಈತನೇ ಸತ್ಯವ್ರತ ಸಾಮ್ರಾಟ್0ಅವನಿಗೆ ನಮೋ ಎಂಬೆ ನಿನ್ನವನೆಂದು 6ರಾಜ ಋಷಿ ಈ ಮಹಾನ್ ಕೃತಮಾಲಾ ನದಿಯಲ್ಲಿನಿಜ ಭಕ್ತಿಯಿಂದ ಜಲತರ್ಪಣವ ಚರಿಸೆಅಂಜಲಿಉದಕದಲಿ ಮುದ್ದು ಮರಿ ಮೀನೊಂದುಸರಿಜ್ಜಲ ಸಹಿತದಿ ಬಂದದ್ದು ಕಂಡ 7ಅರಸ ಕರುಣದಲಿ ಅದನು ನದಿಯಲಿ ಬಿಡಲಿರೆಅರುಹಿತು ತನ್ನ ವೃತ್ತಾಂತವ ಆ ಮೀನುಪರಿಪರಿಯಾಗಿ ತನ್ನ ಸಜಾತೀಯರ ಭಯ ತನಗೆ ಎಂದುನೀರು ಪ್ರವಾಹದಲ್ಲಿ ತನ್ನ ಬಿಡಬೇಡವೆಂದು ಪ್ರಾರ್ಥಿಸಿತು ರಾಜನ್ನ 8ನಾರಾಯಣಾದಿ ಸುಮಂತ್ರಿತ ಅಭಿಯಂತ್ರಿತ ತನ್ನಸ್ಫುರತ್ ಕಲಶ ಕಮಂಡಲು ನೀರಲ್ಲಿ ಮೀನು ಮರಿ ಇಟ್ಟುಕೊಂಡುಆಶ್ರಮಕೆ ಕೃತ ಕೃತ್ಯ ಮನದಿ ರಾಜನು ಬಂದಮರುದಿನ ಉದಯದಲಿ ಕಂಡ ಆಶ್ಚರ್ಯವ 9ಕಮಂಡಲ ಕಲಶ ಪೂರಾವು ಏಕ ರಾತ್ರಿಯಲ್ಲೇವೇಆಮತ್ಸ್ಯಮರಿ ಬೆಳೆದಿದ್ದು ಆಶ್ಚರ್ಯ ಕಂಡಕಮಂಡಲು ಸಾಲದೇ ವಿಸ್ತಾರವಾದ ಸ್ಥಳನಿರ್ಮಾಣ ಮಾಡಿ ನೀರು ತುಂಬಿಸಿ ಅದರೊಳ್ ಮೀನನ್ನ ಬಿಟ್ಟ 10ಉದಕತುಂಬಿದ ಕುಂಟೆ ಸರೋವರವನ್ನುಮತ್ಸ್ಯವು ಪೂರ್ಣ ವ್ಯಾಪಿಸಿದ ಆಶ್ಚರ್ಯಅತಿಶಯ ಲೀಲಾ ವಿನೋದವ ಕಂಡ ರಾಜಉದಧಿಯಲಿ ಬಿಡಲು ನಿಶ್ಚಯಿಸಿ ಕ್ರಮಗೊಂಡ 11ಮಹೋದಧಿಯಲ್ಲಿರುವ ಮಕರಾದಿಗಳು ತನ್ನ ನುಂಗುವನೆಂದುಮಹಾರಾಜನಿಗೆ ಆ ಮೀನು ಹೇಳಿ ತಾನುಆದರೂ ರಾಜನು ಅಷ್ಟರಲ್ಲೇ ಉದಧಿಯೊಳು ಬಿಟ್ಟನುಮೀನನ್ನು ಆಗ ದೊಡ್ಡ ಆಶ್ಚರ್ಯವೊಂದನ್ನ ಕಂಡ ಆಮೀನು ಮತ್ತೂ ದೊಡ್ಡದಾಯಿತು 12ಶತಯೋಜನ ಮಹಾವೀರ್ಯ ಜಲಚರಗಳುಯಾವುದೂ ಕಂಡಿಲ್ಲ ಕೇಳಿಲ್ಲ ಜಗದಿಅತಿ ಅದ್ಭುತ ಮಹಾ ಮೀನರೂಪನು ಸಾಕ್ಷಾತ್ಉದಧಿಶಾಯಿ ಶ್ರೀಮನ್ನಾರಾಯಣ ನೀ ಎಂದ 13ಜೀವರುಗಳಿಗೆ ಅನುಗ್ರಹ ಮಾಡಲಿಕ್ಕೇವೇದೇವ ನೀ ಮತ್ಸ್ಯರೂಪ ಪ್ರಕಟಿಸಿರುವಿಕಾವಕಾರುಣಿಯೇ ಪುರುಷಶ್ರೇಷ್ಠ ಸರ್ವೋತ್ತಮನೇಸರ್ವದಾ ನಮೋ ಜಗಜ್ಜ£್ಮ್ಞಧಿಕರ್ತ14ಶ್ರವಣ ಸಂಸ್ತುತಿಸಿ ಮನನ ಧ್ಯಾನಾದಿಗಳು ಮಾಡಿಶ್ರೀವರನೇ ನಿನ್ನ ಮಹಾತ್ಮ್ಯಾ ಜ್ಞಾನಪೂರ್ವಕ ನಿನ್ನಲ್ಲಿ ಸುಸ್ನೇಹರತನಾದವಿವೇಕಿ ಪ್ರಪನ್ನರ ಸಲಹಿಗತಿಈವಿ15ಯಥಾರ್ಥ ಜ್ಞಾನವ ಭಕ್ತಿಮಾನ್ ರಾಜನು ಸ್ತುತಿಸಲುಮುದದಿಂದ ಇನ್ನೂನು ನಿನ್ನವೃತತಿಜೇಕ್ಷಣ ಜಗತ್ಪತಿಯೇ ನೀನು ಆಮತಿವಂತನಿಗೆ ಪೇಳಿದಿ ಅವತಾರಕಾರ್ಯ 16ಏಳುದಿನವಾಗಲು ಭೂರಾದಿ ಲೋಕಗಳುಪ್ರಳಯಜಲದಲ್ಲಿ ಮುಳುಗಿ ಹೋಗುವವುಒಳ್ಳೇ ಓಷಧಿ ಸರ್ವವೀರ್ಯತರ ಬೀಜ -ಗಳಸಪ್ತಋಷಿ ಸಹ ಕಾದಿರು ಎಂದಿ17ಕಾದುಕೊಂಡು ಇರುವಾಗ ವಿಶಾಲ ನೌಕವು ಒಂದುಶ್ರೀದ ನೀ ಕಳುಹಿಸೆ ಜಲದ ಮೇಲ್ ಬರುವದುಅದರಲಿ ಅರೋಹಿಸಬೇಕು ಬೀಜಗಳಸಪ್ತಋಷಿ ಸಹ ರಾಜ ಎಂದು ಬೋಧಿಸಿದಿ 18ಎಲ್ಲೆಲ್ಲೂ ಪ್ರಳಯಜಲತುಂಬಿತುಳಕಾಡುವುದುಲೋಲ್ಯಾಡುವುದು ನೌಕ ಗಾಳಿರಭಸದಲಿಅಲ್ಲಿ ಸಮೀಪಿಸುವ ಮತ್ಸ್ಯರೂಪನ ನಿನ್ನಹೊಳೆವ ಶೃಂಗದಿ ನಾವೆಯನು ಕಟ್ಟು ಎಂದಿ 19ನಾವೆಯನು ಬಂಧಿಸಲುರಜ್ಜುಸರ್ಪವು ಎಂದುಸುವ್ರತ ರಾಜನಿಗೆ ಉಪಾಯ ಪೇಳಿದಸರ್ವಗುಣ ಪರಿಪೂರ್ಣ ನಿರ್ದೋಷ ಪರಬ್ರಹ್ಮವಿಶ್ವವಿಷ್ಣೋ ಸೃಷ್ಟಾ ಪಾತಾ ರಮೇಶ20ಈ ರೀತಿ ಆ ಮಹಾನ್ ಸತ್ಯವ್ರತರಾಜನಿಗೆಹರಿನೀನು ಬೋಧಿಸಿ ಅಂತರ್ಧಾನವು ಆಗೇಆ ರಾಜಋಷಿ ತಾನು ಮತ್ಸ್ಯರೂಪ ಹೈಷಿಕೇಶಸಿರಿವರನೇ ನಿನ್ನನ್ನೇ ಧ್ಯಾನಿಸುತಲಿದ್ದ 21ಯುಕ್ತ ಕಾಲವು ಬಂತು ಉಕ್ಕಿತು ಸಮುದ್ರವುಸುತ್ತು ಮುತ್ತು ಎಲ್ಲೂ ಪೊಕ್ಕಿತು ಭೂಮಿಯಲಿಅತ್ತ ಇತ್ತ ಇಲ್ಲೂ ಸುತ್ತಿ ಸುಳಿವ ನೀರುಭೀತಿಕರ ನೆನೆಯಲಿಕೆ ನೋಡೆ ಮತ್ತೆಷ್ಟೋ 22ಚಂಡಮಾರುತ ಪ್ರಚಂಡ ಮೇಘವುಕರಿಸೊಂಡಲಂತೆ ಹನಿ ಕಂಡಿಲ್ಲ ಇಂಥಾ ಮಳೆಕಂಡು ನಾವೆಯ ರಾಜಕೊಂಡು ಬೀಜಗಳಕರಕೊಂಡು ಋಷಿಗಳ ಏರಿಕೊಂಡನು ಬೇಗ 23ಕೇಶವನೇ ನಿನ್ನ ಧ್ಯಾನಿಸಲು ಆಗಕೌಶೇಯ ಶೃಂಗಿ ಮಹಾಮತ್ಸ್ಯ ನೀ ಬರಲುಈಶ ನಿನ್ನಯ ಶೃಂಗಕ್ಕೆ ನೌಕವಕಟ್ಟಿಸಂಸ್ತುತಿಸಿದನು ಮಧುಸೂಧನನೇ ನಿನ್ನ 24ಶ್ರೀ ಭಾಗವತಾಷ್ಟಮ ತ್ರಯೋವಿಂಶತ್ ಅಧ್ಯಾಯಶುಭತಯವಿಜ್ಞಾನಬೋಧಕವು ಅದರಸೊಬಗರಿತು ಯೋಗ್ಯರು ಪಠಿಸೆ ಪ್ರೇರಿಸು ಸ್ವಾಮಿಸೌಭಾಗ್ಯಪ್ರದ ಶ್ರೀಶ ಮಾಂಪಾಹಿ 25ಏಕಶೃಂಗಧರ ಸ್ವರ್ಣ ಮತ್ಸ್ಯನಿಗೆ ಸರ್ಪದಿಂಲಕ್ಷ ಯೋಜನೆ ಮೇಲಿನ ವಿಸ್ತಾರದಿ ಬಂಧಿಸಿದಸತ್ಯವ್ರತ ರಾಜನು ಸಂತೋಷದಲಿ ಸ್ತುತಿಸಿದಅನಾದಿಅವಿದ್ಯಾಪೀಡಿತ ಜನ ಸಂರಕ್ಷನ್ನ26ಪರಮಹಂಸನ ಮೂಲ ಗುರೋ ಲಕ್ಷ್ಮೀಹಯವದನಮೇರು ಇತರಾ ದೇವಹೂತಿ - ಸುತ ಶರಣುಘೋರಸಂಸಾರ ಬಂಧಮೋಚಕಹರಿಯೇವರಸುಖಪ್ರದ ಸಂರಕ್ಷಕ ಮಾಂಪಾಹಿ27ಶಕ್ರಾದಿ ಜಗತ್ತಿಗೆಗುರುಗಂಗಾಧರನುಗಂಗಾಧರನಿಗೆಗುರುಪ್ರಾಣ ಪದ್ಮಜರುಪಂಕಜಾಸನ ಪ್ರಾಣರಿಗೆಗುರುರಮೇಶನು ಹರಿಯೇಆಗುರುಮೂಲಗುರು ಪರಮಗುರ್ರೋಗುರುವು28ನಿನ್ನ ಅನುಗ್ರಹ ಹೊಂದಿದರು ನೀ ಪರಮಗುರುಎಂದು ತಿಳಿದುಬದ್ಧಜೀವರ ಮೋಕ್ಷ ಪುರುಷಾರ್ಥಅವಿದ್ಯಾsಜ್ಞಾನ ಕಳೆದು ಪುಟವಿಟ್ಟಸ್ವರ್ಣರಜತಪೋಲ್ ಶುಚಿ ಆಗಿಸುವಿ ದಯದಿ 29ಸರ್ವಲೋಕ ಜನರಿಗೆ ಹಿತಕರ ಸುಹೃತ್ ನೀನೇಪ್ರಯೇಶ್ವರ ಆತ್ಮಾಗುರು ಜ್ಞಾನ ಅಭೀಷ್ಟಸಿದ್ಧಿಯುನೀ ಸುಹೃತ್ ಅಂದರೆ ಪ್ರತ್ಯುಪಕಾರ ಶೂನ್ಯನುಇನ್ನೂ ಬಹು ವಿಧದಿ ಪರಮಸಾಧು ಸ್ತುತಿಗೈದಿ 30ಸರ್ವಲೋಕಕೆ ನೀನೇ ಸುಹೃತ್ ಪ್ರಯೇಶ್ವರನುಶರ್ವಅಜಶಕ್ರಾದಿಗಳ ನಿಯಾಮಕನುಸರ್ವಾದಾನಂದಮಯ ಗುಣನಿಧಿ ಆತ್ಮನುಸರ್ವಾಭೀಷ್ಟಪ್ರದ ಜ್ಞಾನಸಿದ್ಧಿದನು 31ದೇವದೇವೋತ್ತಮನೇ ಆದಿಪೂರುಷ ಶ್ರೀಶವಿಶ್ವೇಶ್ವರ ಮತ್ಸ್ಯರೂಪ ಭಗವಂತನೀ ವಿಹಾರವು ಮಾಡಿ ಪ್ರಳಯಾರ್ಣವದಲಿಕವಿವರ್ಯ ರಾಜನಲಿ ಸುಪ್ರೀತನಾದಿ 32ವೇದ ಉದ್ಧರಿಸಿದಿ ಹಿಂದೆ ಅಸುರನ್ನ ಕೊಂದುಯುಕ್ತ ಕಾಲದಿ ಈಗ ಪ್ರಳಯವು ತೀರೆಸಾಧುವರ್ಯನು ಜ್ಞಾನವಿಜ್ಞಾನ ಕೋವಿದನುಸತ್ಯವ್ರತನಿಗೆ ಮನು ಪದವಿಯನು ಇತ್ತಿ 33ಮತ್ಸ್ಯಾವತಾರ ಸಂಕೀರ್ತನೆ ಮಾಳ್ಪರಿಗೆಸಿಧ್ಧಿ ಆಗುವುದು ಸರ್ವೇಷ್ಟ ಸದ್ಗತಿಯುಎಂದು ಪೇಳಿರುವಿ ಶುಕಪದ್ಮಭವಪತಿ ಶ್ರೀಶಸಾತ್ಯವತಿ ಮೀನ ವೇಧಪಿತ ಪ್ರಸನ್ನ ಶ್ರೀನಿವಾಸ 34- ಇತಿ ಶ್ರೀ ಮತ್ಸ್ಯಾವತಾರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವಿಜಯೀಂದ್ರ ತೀರ್ಥರ ಚರಿತೆ110ಪ್ರಥಮ ಕೀರ್ತನೆವಿಜಯೀಂದ್ರ ತೀರ್ಥರ ಪದಯುಗದಿನಿಜಭಕ್ತಿ ಯಿಂ ಶರಣಾದೆ ಸತತಅಬ್ಜಸಂಭವ ಜನಕ ಅಂಬುಜಾಲಯಪತಿರಾಜರಾಜೇಶ್ವರಗೆ ಪ್ರಿಯತಮ ಯತೀಂದ್ರ ಪಹಂಸ ಲಕ್ಷೀಮಶ ನಾಭಿಭವ ಸನಕಾದಿಮಹಂತರ ಸೂರಿಗಳಗುರುಪರಂಪರೆಯಮಹಾ ಪುರುಷೋತ್ತ ಮದಾಸ ಶ್ರೀಮಧ್ವವನದೃಹ ಪಾದಗಳಲ್ಲಿ ನಾ ಶರಾಣು ಶರಣಾದೆ 1ಅರವಿಂದನಾಭ ನರಹರಿ ಮಾಧವತೀರ್ಥಸೂರಿಕುಲ ತಿಲಕ ಅಕ್ಷೋಭ್ಯ ಜಯತೀರ್ಥಪರವಿದ್ಯಾಕುಶಲ ಶ್ರೀ ವಿದ್ಯಾದಿರಾಜರಜಯೀಂದ್ರರ ಚರಣಂಗಳಲಿ ನಾ ಶರಣು 2ಕೋವಿದಶಿರೋಮಣಿ ಕವೀಂದ್ರ ವಾಗೀಶರುಭಾವುಕಾಗ್ರಣಿ ರಾಮಚಂದ್ರ ವಿಭುದೇಂದ್ರದೇವ ಹರಿಪ್ರಿಯ ಜಿತಾಮಿತ್ರ ಯತಿವರರು ರಘುನಂದನದೇವಿ ತುಳಸೀಪತಿಯ ಒಲಿಸಿಕೊಂಡ ಸುರೀಂದ್ರರು 3ಈ ಸರ್ವ ಗುರುಗಳಚರಣಕಮಲಗಳಲ್ಲಿನಾ ಸರ್ವದಾ ಶರಣು ಶರಣೆಂಬೆ ಮುದದಿವ್ಯಾಸಮುನಿ ಪ್ರಿಯಮಿತ್ರ ಶ್ರೀಸುರೇಂದ್ರರಕರಸರಸಿಜದಿಜಾತ ವಿಜಯೀಂದ್ರರಲಿ ಶರಣು ನಾ 4ವಿದ್ಯಾಧಿರಾಜ ಸುತ ರಾಜೀಂದ್ರತೀರ್ಥರಪದ್ಮ ಕರದುದಯ ಜಯಧ್ವಜರಹಸ್ತವೃತತಿಜೋತ್ಪನ್ನ ಪುರುಷೋತ್ತಮ ಮಹಾಮಹಿಮಯತಿಕುವರ ಸೂರಿವತ ಬ್ರಹ್ಮಣ್ಯತೀರ್ಥ 5ಬ್ರಹ್ಮಣ್ಯತೀರ್ಥಾಖ್ಯ ಖಗಕರದಿ ಅರಳಿತುಮಹಿಯಲಿ ಪ್ರಖ್ಯಾತ ವ್ಯಾಸಮುನಿಅಬ್ಜಬಹುಮಂದಿ ಈ ಸುಮನ ಪರಿಮಾಳಾಕರ್ಷಿತರುಬ್ರಹ್ಮವಿದ್ಯಾ ಮಕರಂದದಿ ಮೋದಿಸಿದರು 6ಪೂರ್ವಜನ್ಮದಿ ನಾರದರಿಂದ ಉಪದಿಷ್ಟವ್ಯಾಸರಾಜರು ಶ್ರೀಪಾದರಾಜರಲಿಸರ್ವವಿದ್ಯಾ ಕಲಿತು ವಾದಿಗಜಹರಿ ಆಗಿತತ್ವ ಬೋಧಿಸಿ ಸಜ್ಜನರ ಕಾಯ್ದಿಹರು 7ಋಜುಮಾರ್ಗದಲಿ ಇರುವ ಯತಿವಟು ಗೃಹಸ್ಥರುನಿಜಭಕ್ತಿ ಶ್ರದ್ಧೆಯಿಂದಲಿ ಶ್ರೀವ್ಯಾಸ-ರಾಜರಲಿ ವಿದ್ಯಾಭ್ಯಾಸ ಮಾಡಲು ಆಗಪ್ರಜಾಪೇಕ್ಷೆ ಭಿನೈಸಿದ ವಿಪ್ರಶಿಷ್ಯ 8ಆವಿಪ್ರೋತ್ತಮನಿಗೆ ಪ್ರಜಾ ಅನುಗ್ರಹ ಮಾಡಿಪ್ರವರ ಪುತ್ರನ ತಮ್ಮ ಮಠಕ್ಕೆ ಕೊಡಬೇಕುಅವರಜರು ಸಂತತಿ ಅಭಿವೃದ್ಧಿಗೆ ಇರಲುಈ ವಿಧದಿ ಹೇಳಿದರು ಶ್ರೀ ವ್ಯಾಸಮುನಿಯು 9ಕೊಟ್ಟವರ ತಪ್ಪದೇ ವಿಪ್ರಪತ್ನಿಗೆ ಶಿಶುಹುಟ್ಟುವ ಸಮಯದಲಿ ಗುರುಗಳು ಕೌಶೇಯತಟ್ಟೆಯ ಕಳುಹಿಸಿ ಭೂಸ್ಪರ್ಶ ಇಲ್ಲದÀಲೇಹುಟ್ಟಿದ ಮಗುವನ್ನು ಹಿಡಿಯ ಹೇಳಿದÀರು 10ಶ್ರೀಮಠಕ್ಕೆ ವಿಪ್ರನು ಆ ಬಾಲಕನನ್ನುನೇಮಿಸಿದ ರೀತಿಯಲಿ ಒಪ್ಪಿಸಿ ಅಲ್ಲಿರುಕ್ಮಿಣಿನಾಥ ವಿಠಲನ ಪೆಸರಿಂದವಿಮಲವಟು ವಿದ್ಯಾರ್ಥಿ ಸನ್ಯಾಸಿ ಆದ 11ವಿಟ್ಠಲಾಚಾರ್ಯನು ಶ್ರೀ ವ್ಯಾಸರಾಜರಲಿಶಿಷ್ಠವಿಲ್ಲದೇ ಅಷ್ಟು ಶಾಸ್ತ್ರ ಕಲಿತು ಚತುಃಷಷ್ಟಿ ವಿದ್ಯಾದಲ್ಲಿ ಸಹನಿಪುಣನಾಗಿಅಷ್ಟ ದಿಕ್ಕುಗಳಲ್ಲಿ ಪ್ರಖ್ಯಾತನಾದ 12ಇದರಲ್ಲೇನು ಆಶ್ಚರ್ಯ ಇಲ್ಲ ಸ್ವಾಭಾವಿಕವುದೇವತೆಗಳು ಧರಣಿಯಲ್ಲಿ ಜನಿಸಿದರೂಶಕ್ಯಾತ್ಮನ ಸರ್ವ ಅಣಿಮಾದಿ ಐಶ್ವರ್ಯಇದ್ದು ಸುವ್ಯಕ್ತ ವಾಗುವವು ಗುರುಕೃಪದಿ 13ಈ ವಿಠಲನೇವೇ ವಿಜಯೀಂದ್ರ ನಾಮದಲಿಭುವಿಯಲ್ಲಿ ಬೆಳಗಿದನು ಸುರರಲ್ಲಿ ಶ್ರೇಷ್ಠದೇವತಾ ಕಕ್ಷದವರಾದ ಶ್ರೀವ್ಯಾಸಮುನಿಪ್ರವರ ಸುರಗಣ ವಾದಿರಾಜರ ಸಮೇತ 14ಸರಸಿಜಾಸನಪಿತ &ಟಜquo; ¥ಸÀನ್ನ ಶ್ರೀ ನಿವಾಸನು&ಡಿಜquo;ಬರೆಸಿದ ಶ್ರೀಪ್ರಸನ್ನ ರಾಘವೇಂದ್ರ ವಿಲಾಸತರುವಾಯ ಈ ಪರಮಗುರು ವಿಜಯೀಂದ್ರ ಗುರುಚರಿತೆಹರಿಸಿರಿವಾಯುಗುರುಪ್ರೀತಿಕರ ಶುಭದ15 ಪ-ಇತಿ ಪ್ರಥಮ ಕೀರ್ತನೆ ಸಂಪೂರ್ಣಂ-ದಿತೀಯ ಕೀರ್ತನೆವಿಜಯೀಂದ್ರ ತೀರ್ಥರ ಪದಯುಗದಿನಿಜಭಕ್ತಿಯಿಂದ ಶರಣಾದೆಸತತಅಬ್ಜಸಂಭವ ಜನಕ ಅಂಬುಜಾಲಯಪತಿರಾಜರಾಜೇಶ್ವರಗೆ ಪ್ರಿಯತಮ ಯತೀಂದ್ರ ಪಶ್ರೀಮನೋಹರ ರಂಗನಾಥನ ಸೇವಿಸಲುಶ್ರೀಮಠ ಜರುಗಿತು ರಂಗ ಕ್ಷೇತ್ರಕ್ಕೆಸೋಮಪುಷ್ಕರಿಣಿಯಲಿ ಕಾವೇರಿ ಮಧ್ಯದಲಿಕಾಮಿತಪ್ರದ ಶ್ರೀಶರಂಗ ಇರುತಿಹನು 1ಕಾವೇರಿ ತೀರದಲ್ಲಿ ಶ್ರೀತುಳಸಿವನ ಬೆಳಸೆಆವನಸಮೀಪದಲಿ ವ್ಯಾಸಮುನಿ ಮಠವುದುರ್ವಾದ ಖಂಡನ ಸಿದ್ಧ್ದಾಂತ ಸ್ಥಾಪನದೇವತಾರ್ಚನೆ ಹರಿಕೀರ್ತನೆ ವೈಭವವು 2ಒಂದು ದಿನ ಶ್ರೀ ವ್ಯಾಸರಾಯರು ನೋಡಿದರುತಂದು ಪೂಜೆಗೆ ಇಟ್ಟ ತುಳಸೀದಳಗಳುಇಂದಿರಾಪತಿಗರ್ಪಿತವಾದ ನಿರ್ಮಾಲ್ಯಎಂದು ತಿಳಕೊಂಡರು ವಿಚಾರ ಮಾಡಿದರು 3ತಿಳಿಯ ಬಂತು ಅಂದು ಪ್ರಾತಃಕಾಲದಲಿತುಳಸೀಗೆ ಬಂದುರು ಸುರೇಂದ್ರ ಮಠದವರುತುಳಸಿ ಕೊಡುವುದಿಲ್ಲ ಎನೆ ಪೋದರು ಆ ಬಾಹ್ಮಣರುಪೇಳಿದರುಗುರುಸುರೇಂದ್ರರಿಗೆವೃತ್ತಾಂತ4ಭಾವುಕ ಶಿರೋಮಣಿವಿಜ್ಞಾನಸೂರಿಗಳುತಾವು ಕುಳಿತಲ್ಲೇ ಸುರೇಂದ್ರ ಸ್ವಾಮಿಗಳುಭವಜನಯ್ಯನಿಗೆವನತುಳಸಿ ಪೂರಾವುಭಾವಶುದ್ಧದಿ ಅರ್ಪಿಸಲು ಹರಿಕೊಂಡ 5ಶ್ರೀ ಸುರೇಂದ್ರರ ಈ ಮಹಿಮೆಯ ಶ್ಲಾಘಿಸಿಬೇಗವ್ಯಾಸರಾಯರು ತಾವೇವೆ ಪೋಗಿಕುಶಲ ಸಂಭಾಷಿಸಿ ತಮ್ಮ ಮಠಕ್ಕೆ ಬಂದುಶ್ರೀಶಾರ್ಚನೆ ಚರಿಸಲು ಆಹ್ವಾನ ಮಾಡಿದರು 6ಸೂರಿವರ ರಾಜೇಂದ್ರ ರವೀಂದ್ರರುಎರಡು ಈ ಗುರುಗಳಿಂದಲಿ ಬಂದ ಮಠಗಳುಎರಡು ಸ್ವಾಮಿಗಳು ಶ್ರೀವ್ಯಾಸ ಸುರೇಂದ್ರರಹರಿಪೂಜೆ ವೈಭವವು ವರ್ಣಿಸಲು ಅಶಕ್ಯ 7ಥಳಥಳಿಪ ಬ್ರಹ್ಮವರ್ಚಸ್ಸು ಮುಖಕಾಂತಿಯುಎಲ್ಲ ಶಾಸ್ತ್ರಜ್ಞಾನ ಪ್ರವಚನ ಪಟುತ್ವಶೀಲತ್ವ ಸೌಲಭ್ಯ ಬಾಲ್ಯ ಚಟುವಟಿಕೆಯುಸೆಳೆದವು ಸುರೇಂದ್ರರ ವಿಠಲನ ಬಳಿಗೆ 8ರಮೆಯರಸನ ಪೂಜೆತತ್ವಬೋಧÀವು ಮಾಳ್ಪತಮ್ಮ ಸಂಸ್ಥಾನದ ಉನ್ನತ ಸ್ಥಾನಕ್ಕೆತಮ್ಮ ನಂತರ ವಿಜಯೀಂದ್ರರೇ ಸರಿ ಎಂದುನೇಮಿಸಿದರು ಮನದಿ ಸುರೇಂದ್ರ ಗುರುವು 9ಅಪರೋಕ್ಷದಲು ಈವಿಠಲನ ಯೋಗ್ಯತೆಆ ಪುಣ್ಯ ಶ್ಲೋಕರು ಅರಿತು ತಾವುಅಪೇಕ್ಷಿಸುವಂತ ವಸ್ತು ಬÉೀಕೆಂದರುಶ್ರೀಪನ ಇಚ್ಫೆಯನರಿತು ವ್ಯಾಸರಾಯರಲ್ಲಿ 10ಕೇಳುವ ವಸ್ತು ಬಿಟ್ಟು ಬೇರೆ ಏನೂ ಕೊಡುವೆಕೇಳÉಲಾರೆನು ಬೇರೆ ಕೊಳ್ಳೆನು ಬೇರೆಇಲ್ಲ ವೆಂದರೆ ಊಟ ಮಾಡಿಕೊಡುತ್ತÉೀನೆ ಈಲೀಲಾ ವಿನೋದ ಮಾತುಗಳು ಕ್ರೀಡಾರ್ಥ 11ವಿಮಲ ವಿರಜಾ ಸಮ ಕಾವೇರಿ ಮಧ್ಯದಲಿರಮಾಯುಕ್ ರಂಗನಾಥನು ಹನುಮಸೇವ್ಯರಾಮ ಪೂಜಿಸಿದಂಥ ರಾಮನು ಪಟ್ಟಾಭಿರಾಮ ಶ್ರೀ ಗೋಪಾಲಕೃಷ್ಣನ ಮುಂದೆ 12ಶ್ರೀಶನ ಈ ಬಹುರೂಪ ಸನ್ನಿಧಿಯಲ್ಲಿಭೂಸುರ ವಿದ್ವಾಂಸರ ಸಭೆ ಮಧ್ಯದಲಿವ್ಯಾಸಮುನಿದತ್ತ ವಿಠಲನ ಸುರೇಂದ್ರರುಸುಸ್ವಾಗತದಿಂದ ಸ್ವೀಕಾರ ಮಾಡಿದರು 13ವಿಜಯೀಂದ್ರ ತೀರ್ಥ ಶುಭತಮ ನಾಮವಿತ್ತರುವಿಜಯಶೀಲರಾಗಿ ವಿಜಯೀಂದ್ರರುನಿಜತತ್ವ ಸಿದ್ಧಾಂತ ಸ್ಥಾಪಿಸಿ ದುರ್ಮತದುರ್ಜನ ದುರ್ವಾದ ಚೂರ್ಣ ಮಾಡಿದರು 14ಬ್ರಹ್ಮ ದಶರಥ ರಾಮಚಂದ್ರನು ಅರ್ಚಿಸಿದಭೂಮಾದಿ ಗುಣಗಣಾರ್ಣವ ದಯಾನಿಧಿಯುಕಮಲೆ ಸೀತಾಸೇವ್ಯ ಮೂಲರಾಮನ್ನಸಮ್ಮುದದಿ ಶ್ರೀವಿಜಯೀಂದ್ರರು ಪೂಜಿಸಿದರು 15ಸರಸಿಜಾಸನಪಿತ &ಟಜquo; ಪ್ರಸÀನ್ನ ಶ್ರೀನಿವಾಸ&ಡಿಜquo; ನುಬರೆಸಿದ ಶ್ರೀಪ್ರಸನ್ನ ರಾಘವೇಂದ್ರ ವಿಲಾಸತರುವಾಯ ಈ ಪರಮಗುರು ವಿಜಯೀಂದ್ರ ಗುರುಚರಿತೆಹರಿಸಿರಿವಾಯುಗುರುಪ್ರೀತಿಕರ ಶುಭದ16-ಇತಿದ್ವಿತೀಯಕೀರ್ತನೆ ಸಂಪೂರ್ಣಂ-ವಿಜಯೀಂದ್ರ ತೀರ್ಥರ ಪದಯುಗದಿನಿಜಭಕ್ತಿಯಿಂಶರಣಾದೆ ಸತತಅಬ್ಜಸಂಭವ ಜನಕ ಅಂಬುಜಾಲಯಪತಿರಾಜರಾಜೇಶ್ವರಗೆ ಪ್ರಿಯತಮ ಯತೀಂದ್ರ ಪಧರೆಯೊಳುತ್ತಮ ಕುಂಭಕೋಣಾಖ್ಯ ನಗರದಿಹರಿದ್ವೇಷಿಯ ಗೆದ್ದು ಅವನ ಮಠ ತೋಟಸ್ಪರ್ಧೆ ಫಣವಾದ್ದವ ತಮ್ಮಲ್ಲಿ ಸೇರಿಸಿಕೊಂಡಧೀರ ವಿಜಯೀಂದ್ರರ ಚರಣಕಾನಮಿಪೆ 1ಸಾರಂಗಹಸ್ತವರಾಹಚಕ್ರಪಾಣಿ ರಾಮಮಂಗಳಾಂಬಿಕೆಯುತ ಕುಂಭೇಶ್ವರತುಂಗಮಹಿಮಳು ಕಾವೇರಿ ಸುಧಾಸರಸ್ಸುಈ ಕುಂಭಕೋಣದ ಮಹಿಮೆ ಏನೆಂಬೆ 2ಸಂಕ್ರಂದಸ್ಮರಮೊದಲಾದ ಜಗತ್ತಿಗೆ ಗುರುವಾದಮಂಗಳಾಂಬಿಕೆ ಕುಂಭೇಶ್ವರರ ನೃಹರಿ ಸಾನಿಧ್ಯರಭಂಗವಿಲ್ಲದೆ ಪ್ರತಿದಿನ ಸೇವಿಸುವರುಸುರೇಂದ್ರಮಠ ಗುರುವು ವಿಜಯೀಂದ್ರರು 3ಭಸ್ಮಧರನು ಸರ್ವೊತ್ತ ಮನೆಂದು ವ್ಯರ್ಥದಿದುಸ್ತರ್ಕ ಮಾಡಿದ ಜಗನ್ಮಿಥ್ಯಾವಾದಿಅಪ್ಪಯ್ಯನ ಮತವ ತೃಣದಂತೆ ಮಾಡಿದತತ್ವವಾದ ಅಸಿಯಿಂದ ವಿಜಯೀಂದ್ರ ಜಯಶೀಲ 4ಸ್ವಪಕ್ಷ ಪರಪಕ್ಷ ಸರ್ವವಿದ್ವಾಂಸರುಈ ಪುಣ್ಯಶ್ಲೋಕರ ಮಹಿಮೆ ಕೊಂಡಾಡಿತಪ್ಪದೇ ಆಗಾಗ ಬಂದು ಮರ್ಯಾದೆಅರ್ಪಿಸಿ ಪೋಗುವರು ಕೃತಕೃತ್ಯಮನದಿ 5ಬಾದರಾಯಣಿ ಮಾಧ್ವ ಗ್ರಂಥಗಳನುಸರಿಸಿವೇದ ವಿರುದ್ಧ ಮತ ಖಂಡನ ಗ್ರಂಥಗಳುಚತುರೋತ್ತರ ಶತಮೇಲ್ ತತ್ವ ಬೋಧಕವಾದಗ್ರಂಥಗಳ ರಚಿಸಿದರು ಉತ್ತಮ ರೀತಿಯಲಿ 6ಅಂಬುಶಾಯಿ ಸರ್ವ ಮುಕ್ತಾಮುಕ್ತ ಆಶ್ರಯನುಅಂಭ್ರಣೀಪತಿ ಶ್ರೀಮನ್ನಾರಾಯಣಗಂಭೀರ ಶಬ್ದಾರ್ಥ ನಿರ್ವಚನ ಮಾಡಿಹರುಅಂಬುಜನಾಭ ಒಲಿವ ಪಠಿಸಿದರೆ 7ಮಧ್ವಮತ ಪರಿಮಳ ಸುಗಂಧ ಭುವಿಯಲಿ ಹರಡೇಸುಧಾದಿ ಉದ್ಗ್ರಂಥ ಪ್ರವಚನದಿ ಪಟುವುಸುಧೀಂದ್ರ ಯತಿವರಗೆ ಸಂಸ್ಥಾನ ಕೊಟ್ಟರುಮಧ್ವಮತೋದ್ಧಾರ ವಿಜಯೀಂದ್ರ ಗುರುರಾಟ್ 8ಸದ್ಭಕ್ತಿಯಿಂಶುಚಿ ಅಧಿಕಾರಿ ಇವರ ನರಸಿಂಹಾಷ್ಟಕವಪಠಿಸೆ ಭೂತ ಪ್ರೇತ ಪಿಶಾಚಾದಿಗಳ ಉಚ್ಫಾಟನವುಚೋರ ವ್ಯಾಧಿ ಮಹಜ್ವರ ಭಯಾದಿ ಕಷ್ಟಗಳು ನಿವಾರಣಸಂಧ್ಯಾಕಾಲ ಪಠನದಿ ಸದ್ಭಕ್ತಿಗೆ ಒಲಿದು ಕಾಯ್ವ ಶ್ರೀ ನರಸಿಂಹ 9ಐವತ್ತು ಮೇಲೈದು ವರ್ಷ ಸಂಸ್ಥಾನದಿನಿರ್ವಿಘ್ನ ಪೂಜಾ ಶಿಷ್ಯೋ¥ದೇಶದೇವ ಲಕ್ಷೀಶಗೆ ತಮ್ಮ ಸೇವೆ ಸಮರ್ಪಣೆ ಮಾಡಿಪವಿತ್ರತಮ ಸುಸಮಾಧಿಯನ್ನು ಹೊಂದಿದರು 10ಶಾಲಿವಾಹನಶಕ ಹದಿನೈದು ನೂರು ಹದಿನಾಲ್ಕನೇ ವರ್ಷ ಜೇಷ್ಠಬಹುಳಶೀಲತಮ ಭವದಿತ್ರಯೋದಶಿ ದಿನದಿಮಾಲೋಲ ನಾರಾಯಣಪುರಯೈದಿದರು 11ಮತ್ತೊಂದು ಅಂಶದಲಿ ಕುಳಿತು ವೃಂದಾವನದಿಉತ್ತಮ ಶ್ಲೋಕ ನಾರಾಂiÀiಣನ ಧ್ಯಾನಿಸಿಒಲಿದು ಸೇವಿಸುವರಿಗೆ ಸÀತತ ಔದಾರ್ಯದಲ್ಲಿಇತ್ತು ವರಗಳ ಸದಾ ಸಂರಕ್ಷಿಸುತಿಹರು 12ಮೂಲರಾಮನ ವಿಮಲ ಭಾವದಲಿ ಅರ್ಚಿಸಿಕುಳಿತು ವೃಂದಾವನದಿ ಧ್ಯಾನಿಸುವ ಇವರುಮೂಲ ವೃಂದಾವನ ಮಾತ್ರದಿ ಅಲ್ಲದೇಅಲ್ಲಲ್ಲಿ ಇವರು ಮೃತಿಕೆಯಲ್ಲಿಯೂ ಇಹರು 13ವಿಜಯೀಂದ್ರರಾಯರ ವೃಂದಾವನದಲಿವಿಜಯಸಖ ಸರ್ವ ಜಗಜ್ಜನ್ಮಾದಿಕರ್ತಅಜಭವಾದಿಗಳಿಂದಸೇವ್ಯಶ್ರೀನರಹರಿ ಇಹನುವಿಜಯೀಂದ್ರಗುರುಅಂತರ್ಯಾಮಿವಾಂಛಿತಪ್ರದನು14ಶ್ರೀಶನ ಸಾನಿಧ್ಯ ಪೂರ್ಣ ಇರುವುದರಿಂದಶ್ರೀಶನೊಲಿಮೆ ಪೂರ್ಣಪಾತ್ರ ಇವರಲ್ಲಿಶ್ರೀ ಸುಧೀಂದ್ರಾದಿಗಳು ದೇವವೃಂದದ ಜನರುಭೂಸುರರು ಪ್ರತಿದಿನ ಬಂದು ವಂದಿಪರು 15ವೃಂದಾವನ ದರ್ಶನ ಸೇವೆ ಪಾದೋದಕಕುಂದುಕೊರತೆ ಇರುವ ಧಾರ್ಮಿಕ ಇಷ್ಟದವುಎಂದಿಗೂ ಎನ್ನ ಕುಂದುಗಳ ಎಣಿಸದೆಬಂದು ಪ್ರತಿಕ್ಷಣ ಕಾಯುತಿಹರು ಶರಣು ಶರಣಾದೆ 16ವಿ ಎಂದರೆ ವಿಠಲ ಜ್ಞಾನಮುದವೀವಜ ಎಂದರೆ ಜಯವು ಪುಟ್ಟು ಸಾವಿಲ್ಲಯೀ ಎಂದರೆ ಜ್ಞಾನಕರ್ಮ ಪೂಜಾಫಲವುಇಂದ್ರ ಎಂದರೆ ಐಶ್ಚರ್ಯ ಸುಖವೀವ 17ಸಿಂಧೂರವರದ ಶ್ರೀಕರ ಪುರುಷೋತ್ತಮಬಿಂದುಮಾಧವ ಶ್ರೀಧರ ರಾಮಚಂದ್ರಸೈಂಧವಾಸ್ಯನು ಅಚ್ಯುತಾನಂತ ಗೋವಿಂದಎಂದಿಗೂ ಎಮ್ಮನು ಕಾಯ್ವ ಗುರುಚರಿತೆ ಪಠಿಸೆ 18ಅಂಬರೀಷ ರಕ್ಷಕನು ಅಜಾಮಿಳ ವರದನುಕಂಬದಲಿ ತೋರಿ ಪ್ರಹ್ಲಾದನ್ನ ಕಾಯ್ವವನುಈ ವೃಂದಾವನ ಗುರುಚರಿತೆ ಪಠಿಸುವರಿಗೆಸೌಭಾಗ್ಯವೀವನು ಸುಧಾಮಗೊಲಿದವನು 19ನಾರಾಯಣವಾಸುದೇವ ಸಂಕರುಷಣಪ್ರದ್ಯುಮ್ನ ಅನಿರುದ್ಧ ಲಕ್ಷ್ಮೀ ಸಮೇತವರವಾಯು ಭಾರತೀ ಸುರವೃಂದ ಸಹಿತಇರುತಿಹ ವಿಜಯೀಂದ್ರರಲಿ ಅಭಯವರದ 20ಸೌಂದರ್ಯಸಾರ ಜಗದೇಕವಂದ್ಯನು ಭೈಷ್ಮೀಸತ್ಯಾಸಮೇತವರಅಭಯದ ಅಜಿತಇಂದಿರಾಪತಿ ಕೃಷ್ಣಗರ್ಪಿತ ಈ ಗುರುಚರಿತೆಸುದರ್ಶನ ಕಂಬುಧರ ಅಖಿಲಪ್ರದ ಹರಿಗೆ 21ಸರಸಿಜಾಸನಪಿತ &ಟಜquo; ಪ್ರಸನ್ನ ಶ್ರೀ ನಿವಾಸ &ಡಿಜquo; ನುಬರೆಸಿದ ಶ್ರೀ ಪ್ರಸನ್ನ ರಾಘವೇಂದ್ರ ವಿಲಾಸತರುವಾಯ ಈ ಪರಮಗುರು ವಿಜಯೀಂದ್ರ ಗುರುಚರಿತೆಹರಿಸಿರಿವಾಯುಗುರುಪ್ರೀತಿಕರ ಶುಭದ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವಿಷ್ಣು ತೀರ್ಥವಿಜಯ130ಪ್ರಥಮ ಕೀರ್ತನೆಶ್ರೀ ಹರಿಪಾದಾಬ್ಜರತ ಶ್ರೀ ವಿಷ್ಣು ತೀರ್ಥವನ-ರುಹಅಂಘ್ರಿಯುಗ್ಮದಲಿ, ಶರಣಾದೆ ಸತತಪಮಹಾಕರುಣಿಯು ಪರಮಹಂಸ ಕುಲತಿಲಕರುಅಹರ್ನಿಶಿಒದಗುವರು ಶರಣು ಸುಜನರಿಗೆಅ ಪನಿರ್ದೋಷಗುಣಪೂರ್ಣಶ್ರೀ ರಮಣ ಹಂಸನಿಗೆವಿಧಿಸನಕ ಮೊದಲಾದ ಗುರುಪರಂಪರೆಗೆ,ಯತಿವರ್ಯ ಅಚ್ಚುತ ಪ್ರೇಕ್ಷರಿಗೆ ಆನಂದತೀರ್ಥರ ಪದಾಂಬುಜಗಳಿಗೆ ಆನಮಿಪೆ 1ಪಂಕೇರುಹನಾಭ ನರಹರಿಮಾಧವಅಕ್ಷೋಭ್ಯ ಜಯತೀರ್ಥ ವಿದ್ಯಾಧಿರಾಜವಾಗ್ವಜ್ರ ರಾಜೇಂದ್ರ ಕವಿವರ ಕವೀಂದ್ರವಾಗೀಶರಿಗೆ ನಮೋ ರಾಮಚಂದ್ರರಿಗೆ 2ಶ್ರೀರಾಮ ಪ್ರಿಯ ರಾಮಚಂದ್ರರ ಕರಜರುಸೂರಿಗಳುವಿಭುದೇಂದ್ರ ವಿದ್ಯಾನಿಧಿಗೆಎರಗಿ ವಿದ್ಯಾನಿಧಿಯ ಸುತ ರಘುನಾಥರಿಗುಕರುಣಾಳು ರಘುವರ್ಯರಿಗು ಆನಮಿಪೆ 3ವೇದಾಂತಕೋವಿದರಘೂತ್ತಮ ತೀರ್ಥರಿಗೆವೇದವ್ಯಾಸಾಭಿದ ಯತಿಗಳಿಗೆ ನಮಿಪೆವೇದವ್ಯಾಸ ತೀರ್ಥರ ಕರಕಮಲ ಸಂಜಾತವಿದ್ಯಾಧೀಶರ ಚರಣಕಾ ನಮಿಪೆ 4ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯ -ನಾಥ ಸತ್ಯಾಭಿನವ ಸತ್ಯಪೂರ್ಣರಿಗೆಸತ್ಯವಿಜಯ ಸತ್ಯಪ್ರಿಯ ಸತ್ಯಬೋಧರಿಗೆಸತ್ಯಸಂಧ ಈ ಸರ್ವ ಗುರುಗಳಿಗೆ ನಮಿಪೆ 5ಸತ್ಯವರ ತೀರ್ಥರ ಚರಣಕಾ ನಮಿಸುವೆಸತ್ಯವರ ಕರಕಂಜ ಸಂಜಾತರಾದಸತ್ಯರಮಣ ಪ್ರಿಯ ಶ್ರೀ ವಿಷ್ಣುತೀರ್ಥರವೃತತಿಜಾಂಘ್ರಿಗಳಲ್ಲಿ ಶರಣಾದೆ ಸತತ 6ಶ್ರೀ ತ್ರಿವಿಕ್ರಮಪಾದಅಬ್ಜಜಾಸರಿತವಶಿರದ ಮೇಲ್ ಧರಿಸಿದ ಗಿರಿಜೇಶನಂತೆಹರಿಭಕ್ತಾಗ್ರಣಿ ವೈರಾಗ್ಯ ನಿಧಿಯು ಈಸೂರಿಕುಲತಿಲಕ ಶ್ರೀ ವಿಷ್ಣು ತೀರ್ಥಾರ್ಯ7ಸವಣೂರು ಪ್ರಾಂತದ ಸಿದ್ಧಾಪುರದವರುಮಾಧ್ವದಂಪತಿ ಭಾಗೀರಥಿ ಬಾಳಾಚಾರ್ಯಸೇವಿಸಿದರು ಟೀಕಾಚಾರ್ಯರ ಭಕ್ತಿಯಿಂದೇವಸ್ವಭಾವ ಮಗ ಪುಟ್ಟಬೇಕೆಂದು 8ರಾಘವಾನಂದ ಮುನಿ ಅಕ್ಷೋಭ್ಯ ತೀರ್ಥರಾ -ನುಗ್ರಹ ಸದಾಪೂರ್ಣ ಜಯತೀರ್ಥ ಮುನಿಯುಬಾಗಿ ಬೇಡಿದ ಈ ಸಾಧುದಂಪತಿಗೊಲಿದುಯುಕ್ತ ಕಾಲದಿ ದೊರೆಯಿತು ಪುತ್ರ ಭಾಗ್ಯ 9ಸ್ಪಟಿಕನಿಭ ಅಕಳಂಕ ಕಾಂತಿಯುಕ್ ಮಗನಿಗೆಇಟ್ಟು ಜಯತೀರ್ಥನಾಮವ ಮುಂಜಿ ಮಾಡಿಪಾಠ ಓದುವುದಕ್ಕೆ ಐಜಿ ಆಚಾರ್ಯರಲಿವಟುವ ಕಳುಹಿಸಿದರು ಕೃತಕೃತ್ಯ ತಂದೆ 10ಜಯತೀರ್ಥರನುಗ್ರಹದಿ ಜಯತೀರ್ಥ ವಟುವುವಿದ್ಯಾಭ್ಯಾಸ ಐಜಿ ಆರ್ಯರಲ್ಲಿಗೈಯುವಾಗ ಇತರ ವಿದ್ಯಾರ್ಥಿಗಳಿಗಧಿಕದಿವ್ಯ ಪ್ರತಿಭಾವನ್ನ ತೋರಿಸುತ್ತಿದ್ದ 11ಶ್ರೀದ ಒಲಿದಿಹ ಇವನ ಯೋಗ್ಯತೆ ದೊಡ್ಡದು,ವೈದಿಕ ಸುಪೂರ್ಣ ಬೋಧರ ಶಾಸ್ತ್ರವೆಲ್ಲ,ಓದಿ ಶ್ರೀ ಐಜಿ ವೇಂಕಟರಾಮಾರ್ಯರಲ್ಲಿಉತ್ತಮ ಜ್ಞಾನಿಯು ಆದ ಜಯತೀರ್ಥ 12ಸುರವೃಂದದಲಿ ದೊಡ್ಡ ಸ್ಥಾನದವ ಇವನೆಂದುಹರಿಯೇ ಈ ಜಯತೀರ್ಥನಲಿ ತೋರಿಹನುಗುರುಐಜಿಯರ ಸುತನ ಅಪಮೃತ್ಯು ತರಿದಿಹನುಭಾರಿತರ ಆಶ್ಚರ್ಯ ಇನ್ನೂ ತೋರಿಹನು 13ಬೃಹತಿಸಹಸ್ರಪ್ರಿಯ ಮಹಿದಾಸ ಜಗದೀಶಬ್ರಹ್ಮಪಿತ ಭಕ್ತಪಾಲಕ ಪರಮಹಂಸಮಹಿಶಿರಿಕಾಂತ `ಶ್ರೀ ಪ್ರಸನ್ನ ಶ್ರೀನಿವಾಸ'ಮಹಾಭಕ್ತ ಶ್ರೀ ವಿಷ್ಣು ತೀರ್ಥಾಯಶರಣು 14 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯಪ್ರಿಯ ತೀರ್ಥವಿಜಯ124ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತತಿಜಯುಗ್ಮನಿತ್ಯಸ್ಮರಿಸುವೆ ಎನ್ನ ಹಿತದಿ ಕಾಯುತಿಹರು |ಸತ್ಯಾರುಕ್ಮಿಣೀ ರಮಣ ವ್ಯಾಸ ನರಹರಿಹಯವಕ್ತ್ರಶ್ರೀರಾಮನಿಗೆ ಪ್ರಿಯತರಮಹಂತಪಅಶೇಷಗುಣಗಣಾಧಾರ ವಿಭುನಿರ್ದೋಷಹಂಸ ಶ್ರೀ ಪತಿಯಿಂದುದಿತ ಗುರುಪರಂಪರೆಗೆಬಿಸಜಭವ ಸನಕಾದಿದೂರ್ವಾಸಮೊದಲಾದವಂಶಜರು ಅಚ್ಚುತ ಪ್ರೇಕ್ಷರಿಗೆ ನಮಿಪೆ 1ಪುರುಷೋತ್ತಮ ತೀರ್ಥ ಅಚ್ಚುತ ಪ್ರೇಕ್ಷರಕರಕಮಲ ಜಾತರೂ ಮಹಾಭಾಷ್ಯಕಾರರುವರವಾಯು ಅವತಾರ ಆನಂದ ತೀರ್ಥರಚರಣವನಜದಿ ನಾ ಸರ್ವದಾ ಶರಣು 2ಪದ್ಮನಾಭನರಹರಿಮಾಧವಅಕ್ಷೋಭ್ಯಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತಮೇಧಾ ಪ್ರವೀಣ ಜಯ ತೀರ್ಥಾರ್ಯರಿಗೂವಿದ್ಯಾಧಿರಾಜರಿಗೂ ನಮೋ ನಮೋ ಶರಣು 3ವಿದ್ಯಾಧಿರಾಜರಿಗೆ ಶಿಷ್ಯರು ಈರ್ವರುಮೊದಲನೆಯವರು ರಾಜೇಂದ್ರ ತೀರ್ಥಾರ್ಯನಂತರ ಕವೀಂದ್ರ ತೀರ್ಥಾರ್ಯ ಇವರುಗಳಪಾದಾರವಿಂದಗಳಿಗೆ ನಾ ನಮಿಪೆ 4ವಾಗೀಶತೀರ್ಥರು ಕವೀಂದ್ರ ಹಸ್ತಜರುವಾಗೀಶಕರಜರು ರಾಮಚಂದ್ರಾರ್ಯಈ ಗುರುಗಳಿಗೀರ್ವರು ಶಿಷ್ಯರು ಇಹರುಬಾಗುವೇ ಇವರ್ಗಳಿಗೆ ಸಂತೈಸಲೆಮ್ಮ 5ಮೊದಲನೆಯವರು ವಿಭುದೇಂದ್ರ ತೀರ್ಥಾರ್ಯರುವಿದ್ಯಾನಿಧಿ ತೀರ್ಥಾರ್ಯರು ಅನಂತರವುವಿದ್ಯಾನಿಧಿ ಸುತ ರಘುನಾಥ ತೀರ್ಥರುವಂದಿಸುವೆ ಈ ಸರ್ವಗುರು ವಂಶಕ್ಕೆ 6ರಘುನಾಥ ಕರಕಮಲ ಜಾತ ರಘುವರ್ಯರಿಗೂರಘೂತ್ತಮ ವೇದವ್ಯಾಸ ವಿದ್ಯಾಧೀಶವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥಸತ್ಯಾಭಿನವ ಸತ್ಯಪೂರ್ಣರಿಗೆ ನಮಿಪೆ 7ಸತ್ಯಪೂರ್ಣ ತೀರ್ಥರಿಗೆ ಶಿಷ್ಯರು ಇಬ್ಬರುಸತ್ಯವರ್ಯ ತೀರ್ಥರು ಮೊದಲನೆಯವರುಸತ್ಯವಿಜಯ ತೀರ್ಥರು ಎರಡನೆ ಶಿಷ್ಯರುವಂದನಾದಿ ಮರ್ಯಾದೆ ಮಾಳ್ಪುದು ಜೇಷ್ಠರಿಗೆ 8ಸತ್ಯವರ್ಯ ತೀರ್ಥರೇ ಮುಂದಕ್ಕೆ ಸತ್ಯಪ್ರಿಯರೆಂದು ಕರೆಸಿಕೊಂಡರು ವಿರಾಗಿಕೋವಿದರುಸುಂದರ ದೇಶವು ಗೋದಾವರೀ ಕ್ಷೇತ್ರಕ್ಕೆಸತ್ತತ್ವ ಬೋಧಿಸಲುವಿಜಯಮಾಡಿದರು9ಸತ್ಯ ವಿಜಯರುಗುರುಆಜೆÕಯಿಂ ತಾವೂನೂತತ್ವಬೋಧಸಂಚಾರ ಮಾಡಿದರು ಆಗಸತ್ಯಪೂರ್ಣ ತೀರ್ಥರು ತಾವೇ ಕರ್ನಾಟಕಪ್ರಾಂತ್ಯಕ್ಕೆ ಹೊರಟರು ದಿಗ್ವಿಜಯಕಾಗಿ 10ಸತ್ಯವರ್ಯ ತೀರ್ಥರು ಭಾವಿ ಸತ್ಯಪ್ರೀಯರುಗೋದಾವರೀ ತೀರವಿಜಯಮಾಡುವಾಗಭೂದೇವ ನರದೇವಪುರಿನಗರಪ್ರಮುಖರುಉತ್ಸಾಹದಿ ಭಕ್ತಿ ಮರ್ಯಾದೆ ಮಾಡಿದರು 11ಬಿಸಾಜಿಪಂತ ನಾರಾಯಣ ನರಳೀಪಂತವಿಶ್ವಾಸದಿ ಇಂಥಾ ಪ್ರಮುಖ ಜನರುಈ ಸಂನ್ಯಾಸ ರತ್ನ ಸತ್ಯಪ್ರಿಯ ಆರ್ಯರಿಗೆಸ್ವಾಗತ ಪೂಜೆ ಮಾಡಿದ್ದು ಖ್ಯಾತ 12ಸಜ್ಜನರು ದೊಡ್ಡವರು ನಾಯಕರು ಗುರುಗಳಪೂಜಿಸುವ ಸಮಯ ಬಂದು ಅಲ್ಲಿ ಮೊದಲನೆಬಾಜೀರಾವ್ ಎಂಬಂಥ ಅರಸನು ಅವನೂ ಸಹನಿಜ ಭಕ್ತಿ ಭಾವದಿಂದಲಿ ಪೂಜಿಸಿದ 13ತಾನು ಪೂಜಿಸಿ ಗ್ರಾಮ ದಾನ ಮಾಡಿದ್ದಲ್ಲದೆಘನಮಹಾತ್ಮ ಸ್ವಾಮಿಗಳ ಪೂಜಿಸಿರೆಂದುತ್ನನ ಮುದ್ರೆ ಪತ್ರ ಬೇರೆ ರಾಜರ್ಗೆ ಕಳುಹೆಂದುತನ್ನ ಸಹ ಬಂದಿದ್ದ ಮಂತ್ರಿಗೆ ಹೇಳಿದನು 14ಗೋದಾವರೀ ತೀರ ಸ್ಥಳಗಳಲಿ ಈ ರೀತಿಸತ್ಯಪ್ರಿಯ ಆರ್ಯರು ಸಂಚರಿಸಲಾಗಸತ್ಯ ಪೂರ್ಣ ತೀರ್ಥರು ದಕ್ಷಿಣದಲ್ಲಿಕ್ಷೇತ್ರಾಟನದಿ ಇರುತಿದ್ದರು ಮುದದಿ 15ಸತ್ಯಪೂರ್ಣರಿರುತ್ತಿದ್ದ ಸಂಚಾರ ಸ್ಥಳದಹತ್ತಿರವೆ ಕೊಂಗು ನಾಡುತೋಂಡದೇಶಸತ್ಯವಿಜಯರು ಅಲ್ಲಿ ಸಂಚರಿಸಿ ಬಂದರುಸತ್ಯ ಪೂರ್ಣರುಹರಿಪಾದಸೇರುವಾಗ16ಸತ್ಯವಿಜಯರ ಕೈಗೆ ಸಂಸ್ಥಾನ ಬರಲುಸತ್ಯಭಿನವ ಸತ್ಯಪೂರ್ಣರ ಪದ್ಧತಿಯಂತೆ ಸಂಸ್ಥಾನ ಆಡಳಿತ ಮಾಡುತ್ತಾಮತ್ತೂತೋಂಡದೇಶ ಸಂಚಾರಕ್ಕೆ ಹತ್ತಿದರು17ಎನ್ನ ಎನ್ನಂಥವರ ಅನಂತ ಅಪರಾಧಗಳಘನದಯದಿ ಕ್ಷಮಿಸಿ ಬಹು ಕೃಪದಿ ಪಾಹೀವನರುಹಾಸನಪಿತ ಮಧ್ವಸ್ಥ ಶ್ರೀಪತಿ`ಪ್ರಸನ್ನ ಶ್ರೀನಿವಾಸ' ಪ್ರಿಯ ಸತ್ಯಪ್ರಿಯ ಆರ್ಯ 18 ಪ
--------------
ಪ್ರಸನ್ನ ಶ್ರೀನಿವಾಸದಾಸರು