ಒಟ್ಟು 6900 ಕಡೆಗಳಲ್ಲಿ , 126 ದಾಸರು , 4284 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರೇಶ ಭಾಗವತ ಎಂದು ಬರುವನು ಇಲ್ಲೆ ಮಂದಸೂನನುನಮಗೆ ಮುಂದೆ ಗತಿಯೇನುದ್ಧವಾಒಂದು ಕಾರ್ಯವು ಬಾರದಂದಿನಾದಿಈಶ ಸುರಸುಂದರನು ಪೋದನಲ್ಲೋ ಉದ್ಧವಾ ಪ ಪತಿ ಸುತರ ಪರಿಚರಿಸುತಿಹ ನಮ್ಮಮರುಳು ಮಾಡಿದನುದ್ಧವಾ 1 ತೊರೆದು ಮನೆ ಧನಗಳನೆ ಬರಲು ಬಳಿಯಲಿ ಭಾಳತರಲಿ ಮಾಡಿದನುದ್ಧವಾಅರಿಯಲಿಲ್ಲವೊ ನಾವು ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 2 ಮರುಗ ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆತುರುಬಿನೊಳಗಿಟ್ಟುದ್ಧವಾಸರಸ ಸೌಂದರ್ಯಕ್ಕೆ ಮರುಳಾದನಿವನೆಂದುಗರುವ ಮಾಡಿದೆವುದ್ಧವಾಅಂತು ನಮ್ಮನು ಬಿಟ್ಟು ಮರೆಯಾಗಿ ರೋಧಿಸಲುಭರದಿ ಬಂದನುದ್ಧವಾ 3 ಕೋಲು ಕುದುರೆಯನೇರಿ ಬಾಲಕರಕೂಡಿ ತಾ ಕೇಳಿ ಮಾಡಿದನುದ್ಧವಾಲೀಲೆ ಚತುರರ ಸದೃಶ ಬಾಲೆಯರಕೂಡಿ ತಾ ಕೋಲನಾಡಿದನುದ್ಧವಾ4 ದಧಿ ಬೆಣ್ಣೆ ನಮ್ಮಾಲಯದೊಳುತಿಂದು ಭಾಳ ಮೋಹಿಸಿದನುದ್ಧವಾ 5 ಗರಳ ಹರಿಸಿನುದ್ಧವಾಉರಿಯ ನುಂಗುತ ಮುಖದಿ ಬೆರಳೊಂದುಹತ್ತೊಂದು ವರುಷ ಇಲ್ಲಿದ್ದುದ್ಧವಾಅರಿಯಲಿಲ್ಲವೊ ನಾವು ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 6 ಒಂದಿನಾದರೂ ಒಮ್ಮೆ ಮನದಿ ಗೋಕುಲದವರಇಂದು ಸ್ಮರಿಪನೆ ಉದ್ಧವಾಚಂದ್ರ ವದನೇರ ಸ್ನೇಹ ಕೂಡಿ ಪುರದೊಳು ನಮ್ಮನಿಂದು ಮರೆತನೆ ಉದ್ಧವಾ 7 ಬಂದು ಬಳಗವ ಬಿಟ್ಟು ಮಧುರೆಗೆಲ್ಲರುನಿನ್ನ ಹಿಂದೆ ಬರುವೆವೊ ಉದ್ಧವಾಕಂದರ್ಪ ಪಿತನಿವನ ಸ್ಮರಿಸುತಲೆ ದೇಹದಿಪ್ರಾಣವೊಂದೇ ಉಳಿದಿಹುದುದ್ಧವಾ8 ಪರಮ ವೈಕುಂಠನು ಸರತಿಯಲೆ ತೋರಿಸುತಮರುಳು ಮಾಡಿದನುದ್ಧವಾಗಿರಿಗಿರಿ ಝರಿಯೊಳಗೆ ಚರಿಸಿ ಚಿನ್ನದ ಚರಯಗುರುತು ಮಾಡಿದನುದ್ಧವಾಅರಿಯಲಿಲ್ಲವೋ ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 9
--------------
ಇಂದಿರೇಶರು
ಇಂದಿರೇಶನ ಪದದ್ವಂದ್ವಕಮಲ ಭಜಿಪ ಶ್ರೀ ಗುರುವರ ಭೂಪ ಪ. ಬಂದೆನು ನಿಮ್ಮ ಪದ ಸಂದರುಶನಕೀಗ ನೀಗಿರಿ ಭವರೋಗ ಅ.ಪ. ಬಂದವರಯೋಗ್ಯತೆ ಅರಿತಂಕಿತವೀವ | ಕರುಣಾಳುವೆ ದೇವ ನೊಂದೆನೀಗ ಈ ಅಜ್ಞಭವದಿ ಬಿದ್ದು | ಎಂದಿಗೆ ನಾ ಗೆದ್ದು ಇಂದಿರೇಶನ ಹೃತ್ಕಮಲದಲಿ ಕಾಂಬೆ | ಗುರುವೆ ತೋರೆಂಬೆ ಬಂದ ಬಂದ ಕಷ್ಟ ಹಿಂದು ಮಾಡಿ ಪೊರೆದು | ಕೃಪೆಗೈಯ್ಯಲಿ ಬೇಕಿಂದು 1 ಮುಖ ಕಮಲದಿ ಹೊರಡುವ ವಾಕ್ಸರಣಿಗಳು | ಗಂಗಾ ಪ್ರವಾಹಂಗಳು ಅಕಳಂಕದ ತತ್ವಾರ್ಥದಿ ನಾ ಮುಳುಗಿ | ದುರಿತದ ಭವನೀಗಿ ಸುಖ ಸಾರೂಪ್ಯದ ಮುಕುತಿ ಮಾರ್ಗ ಕಂಡೆ | ಭವ ತುಂಡೆ ಭಕುತಿ ಭಾಗ್ಯವ ನಿತ್ಯದಿ ಕರುಣಿಪುದು | ಸುಜ್ಞಾನವ ನೀಡುವುದು 2 ಇಳೆಯೊಳಿಲ್ಲ ಈ ಚರ್ಯೆ ತೋರುವವರು | ಉದ್ಧರಿಪರಿನ್ಯಾರು ಪರಿ ಕರುಣಿಪುದು | ನ್ಯಾಯವೆ ನೂಕುವುದು ಪೊಳಲೊಡೆಯನ ಪರಿಪರಿ ಮಹಿಮಾದಿಗಳ | ರೂಪ ಜಾಲಗಳ ತಿಳಿದಾನಂದಪಡುವ ಗುರುವರೇಣ್ಯ | ಪೊರೆಯ ಬೇಕೀಗೆನ್ನ 3 ಕರಿಗಿರಿ ನರಹರಿ ಪದಕಮಲಗಳನ್ನು | ಹೃದ್ವನಜದೊಳಿನ್ನು ಪರಿಪರಿ ಪೂಜಿಸಿ ಪರಮಾದರದಲ್ಲಿ | ಸಂಕರ್ಷಣನಲ್ಲಿ ಇರಿಸಿಹ ಮನವನು ನರರಿಗೆ ತೋರದಲೆ | ಚರಿಸುವ ಈ ಲೀಲೆ ಅರಿತು ಪೇಳೆ ಈ ಪಾಮರಳಿಗೆ ಅಳವೇ | ಆನಂದದಲಿರುವೆ 4 ತಂದೆ ಮುದ್ದು ಮೋಹನವಿಠಲ ದೇವ | ಹೃದ್ವನಜದಲಿ ಕಾವ ಸುಂದರ ಗೋಪಾಲಕೃಷ್ಣವಿಠ್ಠಲ ನಿಮ್ಮೊಳು | ರಮಿಸುವ ನಿತ್ಯದೊಳು ಮಂದಬುದ್ಧಿಗೆ ಇಂತು ಮತಿಯನಿತ್ತು | ಸಲಹಲಿ ಬೇಕಿಂತು ತಂದೆ ಧರೆಯೊಳು ಮತ್ತೊಬ್ಬರ ಕಾಣೆ | ಕಾಪಾಡಬೇಕೆನ್ನಾಣೆ 5
--------------
ಅಂಬಾಬಾಯಿ
ಇಂದಿರೇಶನು ಮಣಿನಂದಿನೀ ತೀರದಿ ಚೆಂದದಿ ಕೊಳಲೂದುತಿರಲು ಹರಿ ಆ- ನಂದದಿ ಕೊಳಲೂದುತಿರಲು ಅಂಬುಜಾಕ್ಷಿಯರು ಕೇಳತಿ ಮೋಹತನದಿ ಗೋ- ವಿಂದನಿದ್ದಲ್ಲೆ ನಡೆದರು 1 ಕರ ಸಡಿಲ ಬೀಳುತಲಿರೆ ಪರವಶವಾಗಿ ನಾರಿಯರು ದೇಹ ಪರವಶವಾಗಿ ನಾರಿಯರು ಕರುಗಳ ತೊಟ್ಟಿಲೊಳಗೆಯಿಟ್ಟು ಪಾಡುತ ಭರದಿಂದ ತೂಗಿ ನಡೆದರು 2 ಉಕ್ಕುವೊ ಹಾಲಿಗೆ ಉರಿ ಮಾಡಿ ಮತ್ತಿಷ್ಟು ಮಕ್ಕಳ ಕಣ್ಣಿಗೆ ಬಿಗಿದು ಅಳುವೊ ಕೃಷ್ಣನಿದ್ದಲ್ಲೆ ನಡೆದರು 3 ಕುಂಭಿಣಿಪತಿ ನೋಡೋ ಸಂಭ್ರಮದಿಂದಲಿ ಅಂಬರವನೆ ಬಿಟ್ಟು ಕೆಲರು ತಾವು (ಉ) ಟ್ಟಂಬರವನೆ ಬಿಟ್ಟು ಕೆಲರು ಕಂಚುಕ ಕಬರಕ್ಕೆ ಸುತ್ತಿ ನಡೆದರು 4 ಪಂಚಭಕ್ಷ ಪರಮಾನ್ನ ಘೃತವು ಕ್ಷೀರ ಪತಿಸುತರಿಗೆ ಉಣ ಬಡಿಸಿ ತಮ್ಮ ಮತಿಭ್ರಾಂತರಾಗಿ ಮ್ಯಾಲೆಡೆಗಳನಿಕ್ಕದೆ ಸತಿಯರು ಸಾಗಿ ನಡೆದರು 5 ಪಂಚರತ್ನದ ಹಾರಪದಕ ಕಠಾಣಿಯ ಟೊಂಕಕ್ಕೆ ಸುತ್ತಿ ನಾರಿಯರು ಸರವ ಟೊಂಕಕ್ಕೆ ಸುತ್ತಿ ನಾರಿಯರು ಪಂಚಮುಖದ ಪಟ್ಟಿ ಕಂಠದಲ್ಲಿಟ್ಟರು ವೈ- ಕುಂಠಪತಿಯ ನೋಡೋ ಭರದಿ 6 ಕಂಕಣ ಬಳೆ(ಡೋ)ರ್ಯ ಕಾಲಿನಲ್ಲೇರಿಸಿ ಕಿಂಕಿಣಿ ಕಿರುಗೆಜ್ಜೆ ರುಳಿಯು ಕಾಲ ಕಿಂಕಿಣಿ ಕಿರುಗೆಜ್ಜೆ ರುಳಿಯು ಪಂಕಜಾಕ್ಷೇರು ನಳಿತÉೂೀಳಿನಲ್ಲೇರಿಸಿ ಅ- ಲಂಕಾರವಾಗಿ ನಡೆದರು 7 ಮುತ್ತಿನ ಬಟ್ಟರಳಲೆ ಚಂದ್ರರಾಗಟೆ ಕಟ್ಟಿದರೊಂದೊಂದು ಕಿವಿಗೆ ಚೌರಿ ಅರಳು ಮಲ್ಲಿಗೆ ಮಾಲೆ ದಿಕ್ಕಿ ಗೊಂದೊಂದುದುರುತಲಿ 8 ವಾಲೆ ಮೂಗುತಿ ವೈಯಾರದ ಬಾವುಲಿ ಕೂ- ದಲಿಗೊಂದೊಂದು ಸಿಗಿಸಿ ತಮ್ಮ ಕೂ- ದಲಿಗೊಂದೊಂದು ಸಿಗಿಸಿ ಮಾರನಯ್ಯನ ಮೋರೆ ನೋಡಲು ಮದ- ವೇರಿದ ಗಜದಂತೆ ನಡೆದರು 9 ಹಲ್ಲಿಗೆ ಕುಂಕುಮ ಗಲ್ಲಕ್ಕೆ ಕಾಡಿಗೆ ಚೆಲ್ವ ಹಣೆಗೆ ಅರಿಷಿಣವ ತೀಡಿ ಚೆಲ್ವ ಹಣೆಗೆ ಅರಿಷಿಣವ ಫುಲ್ಲಾಕ್ಷದಲ್ಲಿ ಕಸ್ತೂರಿ ತಿಲಕವನ್ನಿಟ್ಟು ಗೊಲ್ಲ ಸತಿಯರು ನಡೆದರು 10 ಭಕ್ತಿಭಾವದಿ ಚಿತ್ತ ಪರವಶವಾಗಿದ್ದ ಮಿತ್ರೆಯರನೆ ನೋಡಿ ನಗುತ ಬರುವೊ ಮಿತ್ರೆಯರನೆ ನೋಡಿ ನಗುತ ಕತ್ತಲೊಳಗೆ ದಿಟ್ಟತನದಿಂದ ಬರುವುದಿ- ದಾಶ್ಚರ್ಯವೆಂದ ಶ್ರೀಕೃಷ್ಣ 11 ಏನು ಕಾರಣ ನೀವು ಬಂದಿರಿ ವನಕಿನ್ನು ಭಾನು ತಾ ಉದಿಸದ ಮುಂದೆ ಅರುಣ ಮಾನದಿಂದಲಿ ಮನೆಗಳಿಗೆ ಹೋಗಿರಿ ಎಂದು ದಾನವಾಂತಕ ಕೃಷ್ಣ ನುಡಿದ 12 ದೇವಾಧಿದೇವ ದೇವಕ್ಕಿ ಸುತನೆ ಕೃಷ್ಣ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಕೇಳೊ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಮಾನವೆಲ್ಲಿಹುದ್ಹೇಳೊ ಮಾವನಾಂತಕನಾದ ಶ್ರೀನಾಥ ರಕ್ಷಿಸೊ ನಮ್ಮ 13 ರಂಗನೆ ನಿನ್ನಂಗಸಂಗವ ಬೇಡುವ ಅಂಗನೇರಿಗೆ ದಯ ಮಾಡೊ ನೀ ಗೋ- ಪಾಂಗನೇರಿಗೆ ದಯ ಮಾಡೊ ಕಂಗಳ ತೆರೆದು ಕಟಾಕ್ಷದಿ ನೋಡುತ ಇಂದೀ ಜಲಕ್ರೀಡೆನಾಡೊ 14 ಭಂಗಾರಾಭರಣದಿ ಕುಂದಣವಿಟ್ಟಂತೆ ಚಂದ್ರ ತಾರದಲ್ಲಿದ್ದಂತೆ ಹರಿ ತಾ ಚಂದ್ರ ತಾರದಲ್ಲಿದ್ದಂತೆ ಮಂದಗಮನೆಯರ ಮಧ್ಯ ಆಡುತ ಗೋಪೀ ಕಂದ ದೃಷ್ಟಿಗೆ ಮರೆಯಾದ 15 ಜಾಜಿ ಮಲ್ಲಿಗೆ ಸಂಪಿಗೆ ಶಾವಂತಿಗೆ ಕಮಲ ಕ್ಯಾದಿಗೆಯೆ ಕಮಲ ಕ್ಯಾದಿಗೆಯೆ ನೀವಿಲ್ಲೆ ಕಂಡಿರ ಯಾದವ ಕೃಷ್ಣನ ತೋರೆ ತೋರೆಂದ್ವೊದರುತಲಿ 16 ಕೆಂದಾವರೆ ಕೆಲದಲ್ಲಿದ್ದ ತಾವರೆ ಕುಂದಕುಸುಮ ಎಳೆ ತುಳಸಿ ತೋರೆ ಕುಂದಕುಸುಮ ಎಳೆ ತುಳಸಿ ಅಂಬುಜನಾಭನಾಲ್ಪರಿದುಡುಕುತಲಿರೆ ಕಂಡರ್ವೊಂದರವಿಂದ ನಖವ 17 ವಂಚಿತಳಾಗಿದ್ದ ವನಿತೆಯ ಮುಖ ನೋಡಿ ಚಂಚಲಾಕ್ಷನ ಸುದ್ದಿ ಕೇಳಿ ತಾವು ಚಂಚಲಾಕ್ಷನ ಸುದ್ದಿ ಕೇಳಿ ಭ್ರಾಂತರಾಗ್ವನದಿ ಶ್ರೀಕಾಂತನ ಸ್ತುತಿಸಲು ನಿಂತ ಮನ್ಮಥನಂತೆ ಬಂದು 18 ಸೂರ್ಯ ಮಧ್ಯ ಮೇಘವು ಪೊಳೆದಂತೆ ಕಾಂತೆಯರನೆ ಕೂಡ್ಯಾಡಿ ಹರಿ ತಾ ಕಾಂತೆಯರನೆ ಕೂಡ್ಯಾಡಿ ಅಂತರಂಗದಿ ನಿಶ್ಚಂಚಲ ಭಕ್ತಿಗೆ ಸಂತೋಷ ಬಡಿಸಿದ ಕೃಷ್ಣ&ಟಿb
--------------
ಹರಪನಹಳ್ಳಿಭೀಮವ್ವ
ಇಂದು ಕಂಡೇ ಪ ಪಾದ ಭಜನೆ ಮಾಡುವದೊಂದೆ ಅ.ಪ. ಪುಟ್ಟಿದಾರಾಭ್ಯ ಬಹುದಿಟ್ಟನಾಗಿಯೆ ಬಾಳು ಅಟ್ಟಿಮೆರೆಯುವ ಬಯಕೆ ವಿಟ್ಟು ಮನದಲಿ ಬಹಳ ಕಷ್ಟಪಟ್ಟೆನು ಘಳಿಸೆ ವಿತ್ತರಾಶಿಯ ವಿಪ್ರ ಶ್ರೇಷ್ಟಧರ್ಮವ ಬಿಟ್ಟು ವ್ಯರ್ಥ ವಿದ್ಯೆಯ ನೋದಿನೋದಿ ಅಷ್ಟಕರ್ತನು ಬಯಕೆ ಬಟ್ಟಬಯಲನು ಗೈದು ಕೊಟ್ಟು ಜ್ಞಾನದ ಕಣ್ಣು ನೆಟ್ಟನೆ ನೊಡೆನಲು ಬಟ್ಟು ಸುಖವನೆ ಮೆಲ್ವ ಜಟ್ಟಿ ಜಗದಲಿ ಕಾಣೆ ಭವ ಸುಖಕೆ 1 ಹೆಂಡತಿಯ ಸುಖವೆಂದೆ ಕೆಂಡಬಡತನ ಸೋಕೆ ಗಂಡು ಬಯಕೆಗಳೆಲ್ಲ ಉಂಡುದಣಿಯಲಿಲ್ಲ ಮಂಡೆ ಚಚ್ಚುತ ನಿತ್ಯ ತುಂಡು ಆದಳು ಅವಳು ಬೆಂಡು ಆದೆನುನಾನು ಹಿಂಡು ಬಳಗಗಳೆಲ್ಲ ಉಂಡು ದಣಿದರು ನಗೆಯ ಹಿಂಡಿ ಪರಜನ ಪ್ರಾಣ ಉಂಡು ಬದುಕಿಹೆ ಸ್ವಾಮಿ ಮುಂಡೆ ಗಿಂತಲು ಹೀನ ಷಂಡನಾಗಿಹೆ ಸ್ವಾಮಿ ಪಾಂಡುರಂಗನೆ ನಿನ್ನ ತೊಂಡನಾದರೆ ಧನ್ಯ 2 ವಿತ್ತ ಗಂಟು ಇಲ್ಲದಮೇಲೆ ಗಂಟುಮೋರೆಯ ನೇಮ ಒಂಟಿಗನೆ ಜೀವನಿಹ ನೆಂಟ ಬಿಂಬನೆ ಒಬ್ಬ ಭಂಟನೆಂದರೆ ಪಿಡಿವ ಶುಂಠ ಬಿಟ್ಟವ ಸತ್ಯ ಕಂಟಕವು ವಿಷಯತತಿ ಕಜ್ಜಿತಿನಸಿನ ತೆರದಿ ಎಷ್ಟು ಸೇವಿಸಲಷ್ಟು ತಂಟೆನೀಡುವವೇನೆ ಕುಂಠವಾದರು ಕರುಣ ಅಂಟಿಮನಸಿಗೆ ಭಾಧೆ ಉಂಟುಮಾಡುವವು ವೈಕುಂಠ ನಾಯಕಕಾಯೊ 3 ಬಾಡಿಗೆಯ ಮನೆಯಂತೆ ಗಾತ್ರವಿದು ಜೀವನಿಗೆ ಹೂಡಿಹನು ಭವಯಾತ್ರೆ ಓಡಿಹೊಹುದು ತಾನೆ ಆಗಿ ಮುಗಿಯಲು ಆಟ ಪ್ರೌಡ ಹರಿಪುರ ದಾರಿ ನೋಡಿಕೊಂಡವ ಜಾಣ ಕೇಡು ಮತ್ತಗೆ ಸಿದ್ಧ ಮಾಡುತಲಿ ವಿಧಿಗಳನು ದೂಡುತಲಿನಿಜೀವ ಕೂಡುತಲಿ ಸಜ್ಜನರ ಹಾಡುತಲಿ ಹರಿಗಾನ ಜೋಡಿಸುತ ಹರಿಭಕ್ತಿ ಬೇಡದಲೆ ಏನೊಂದು ಬಾಡದಿರೆ ದುಃಖ ಬರೆ ನೋಡುವನು ನಿಜ ಸುಖವ 4 ಹೆಂಡತಿಯು ಸುಗುಣಿ ಇರೆ ಗಂಡನಿಹ ದುರ್ಮಾರ್ಗ ಗಂಡ ಮೃದು ತರವೆನ್ನೆ ಹೆಂಡತಿಯು ಕರ್ಕಸಿಯು ಕುಂಡಲಿಯ ಸಿರಿಯೆನ್ನೆ ಮಂಡೆಯಲಿ ಮೆದುಳಿಲ್ಲ ಹೆಂಡ ಕುಡುಕರು ಸುತರು ಉಂಡುಸುಖಿಸೆ ರೋಗ ಮುಂಡೆಯರ ಚಲುವಿಕೆಯು ಶಂಡಸಹ ಸಂಸಾರ ಭಂಡ ಮಕ್ಕಳ ಬಾಳು ಪುಂಡಜನ ಸಹವಾಸ ಕಂಡು ಸಹಿಸದ ನೆಂಟ ಉಂಡು ದೂರುವ ಬಳಗ ದಂಡವಲ್ಲವೆ ಮತ್ತೆ ಕೊಂಡು ಮಾಡುವದೇನು 5 ಭವ ನಿಜಗುಣವೆ ಕ್ಲೇಶದಾಯಕ ವಿರಲು ಲೇಸು ದೊರಕುವದುಂಟೇ ಏಸು ಕಾಲವು ಕಳಿಯೆ ಏಸು ಕಡಿಯಲು ನೀರ ಸೂಸುವುದೆ ನವನೀತ ಹೇಸಿಗೆಯ ದುರ್ಗಂಧ ನಾಶವಾಗುವುದುಂಟೇ ಕ್ಲೇಶ ತೊಲಗದು ಎಂದು ದಾಶರಥಿಯ ಮನಮುಟ್ಟಿ ದಾಸ ನಾಗದ ತನಕ ಭಾಸವಾಗದು ಜ್ಞಾನ ಶ್ರೀಶ ಕಾಣಿಸ ತನ್ನ ದೋಷಿಯಾಗದೆ ಹರಿಗೆ ಮೀಸಲೆನ್ನಿರಿ ಎಲ್ಲ 6 ನಂಬಿ ಮತಿಮತ ತತ್ವ ವಿಷಯ ಹಂಬಲವಳಿದು ಡಿಂಬಗತ ಹರಿ ಬಿಂಬ ಧ್ಯಾನ ಮಾರ್ಗವ ಕಂಡು ಅಂಬುಜಾಕ್ಷ ನಮ್ಮ “ಶ್ರೀ ಕೃಷ್ಣವಿಠಲ”ನ್ನ ತುಂಬಿ ಹೃದಯದದಿ ಸತತ ಪರಮ ಸಂಭ್ರಮದಿಂದ ತಂಬೂರಿ ಮೀಟುತ್ತ ಗೆಜ್ಜೆ ಸಹ ಕುಣಿಕುಣಿದು ಅಂಬಕದಿ ಸುಖ ಬಾಷ್ಪ ಸುರಿಸುತ್ತಹರಿನೆನೆದು ಅಂಬುಜಾಸನ ಸುರಕದಂಬ ಕರುಣವ ಗಳಿಸಿ ಅಂಬೆ ಸಿರಿಪತಿ ಚರಣದಿಂಬು ಬೇಡುವದೊಂದೇ 7
--------------
ಕೃಷ್ಣವಿಠಲದಾಸರು
ಇಂದು ನಿನ್ನಪಾದ ಸನ್ನಿಧಿಯ ಘನ್ನ ದರುಶನದಿಂದಲಿಪ ಮುನ್ನ ದುರಿತಗಳೆಲ್ಲವು ಛಿನ್ನಛಿನ್ನವುಮಾಡಿ ಬನ್ನಬಡಿಸದೆ ಎಮ್ಮ ಸಲಹುವಸ್ವಾಮಿ ಅ.ಪ ಸುಮನಸರೊಡೆಯ ಕಾಲನಾಮಕನಾಗಿಪ್ಪ ಮೋದ ನಾಮ ವತ್ಸರದಿ ವಿಮ¯ ಚೈತ್ರಕೃಷ್ಣಪಕ್ಷದಶಮಿ ಸೌಮ್ಯವಾಸರದಿ ದ್ಯುಮಣಿ ಉದಯಕಾಲದಲಿ ಮಮಕುಲಸ್ವಾಮಿಯೆ ಎನ್ನ ವಂಶಜಾಪ್ತರ ಅಮಿತಶ್ರಮ ಪರಿಹರಿಸಿ ಈಗ ಶ್ರೀಮನೋಹರ ನಿನ್ನ ವಿಶ್ವರೂಪವ ತೋರ್ದೆ ಪ್ರೇಮ ಇಂದಿಗೆ ಆಯಿತೆ ಅಮಿತಜನ ಬಂಧು 1 ನಿನ್ನ ದರುಶನವೆಂದಿಗಂದಿಗಾಗಲಿ ಎಂದು ನಿನ್ನ ಧ್ಯಾನವನೆ ಮಾಡಲು ಸನ್ನುತಾಂಗನೆ ನೀನೆ ಘನ್ನ ಕರುಣವು ಮಾಡಿ ಎನ್ನ ಯತ್ನವು ಇಲ್ಲದೆ ನಿನ್ನ ದರುಶನಕ್ಕಾಗಿ ಅನ್ಯರಿಂದ ಪ್ರೇರಿಸಿ ಎನ್ನಲ್ಲಿ ಮನವು ಪುಟ್ಟಿಸಿದೆ ಪನ್ನಗಾಚಲನಿಲಯ ನಿನ್ನ ಮಹಿಮೆ ಎಂತುಂಟೋ ಎನ್ನನಿಲ್ಲಿಗೆ ತಂದು ಘನ್ನ ದರುಶನವಿತ್ತೆ 2 ಪಂಕಜೋದ್ಭವನಯ್ಯ ಮಂಕುಕವಿಸಿದೆ ಪಯಣ ಶಂಕೆಯ ಪರಿಹರಿಸಿ ಸಂಕಟಹರಿಸಿ ನಿನ್ನ ಕಿಂಕರರೊಳು ಸೇರಿಸಿ ಬಿಂಕದಲಿ ಗಿರಿಯನೇರಿಸಿ ಪಂಕಜನಾಭ ಮುಕುಂದ ಗೋವಿಂದ ಶಂಕರನುತಪೂಜಿತ ಶಂಖತೂರ್ಯಾದಿ ವಾದ್ಯಗಳಿಂದಲಿ ಶ್ರೀ ವೇಂಕಟೇಶ ನಿನ್ನ ನೋಡಿದೆ ಬಿಡದೇ 3
--------------
ಉರಗಾದ್ರಿವಾಸವಿಠಲದಾಸರು
ಇಂದು ಪನ್ನಗಶಯನ ಪ ಚೆನ್ನ ಪಾದಂಗಳಲಿ ಚಿನ್ನದಾ ಕಡಗರುಳಿಹನ್ನೆರಡು ನಿರುಗೆಗಳ ಹೊನ್ನ ಪೀತಾಂಬರಕೆರನ್ನಮಯದೊಡ್ಯಾಣವನ್ನು ಸುತ್ತಿದ ನಡುವುಚನ್ನ ಪದಗಳ ಮುಟ್ಟುವನ್ನಕ್ಕ ವನಮಾಲೆ 1 ನನ್ನೀಯಿಂದೆಸೆವ ಕಂಪನ್ನ ಕೌಸ್ತುಭದೆದೆಯುಕನ್ನಿಕೆಯು ಲಕ್ಷುಮಿಯ ಚಿಹ್ನ ಧರಿಸಿದ ವಕ್ಷಘನ್ನ ಚಕ್ಕರ ಶಂಖ ಸನ್ನೆ ಕೌಮೋದಕಿಯುಕನ್ನೈದಿಲೆಯ ವಿಡಿದ ಇನ್ನಂತು ನಾಲ್ಕೈಯು 2 ಪನ್ನೀರು ಬೆರೆತು ಬಾವನ್ನ ಕಂಪಿನ ಮೈಯುಬೆನ್ನಗಲ ಹೆಗಲು ದುಂಡನ್ನ ತೊಳಗುವ ಕೊರಳುಕನ್ನವುರ ಕುಂಡಲಂಗಳನ್ನು ಧರಿಸಿದ ಕಿವಿಯುಜೊನ್ನ ಪಸರಿಪ ನಗೆಯ ಮನ್ನಿಸುವ ಕೆಂದುಟಿಯು 3 ಮುನ್ನೂರು ಕೋಟಿ ರವಿ ಸನ್ನಿಭದ ಚೆಲ್ವ ಮೊಗಕನ್ನೀಲ ಕಣ್ಣು ಚಂದನ್ನ ಎಳಸಿನ ಮೂಗುಉನ್ನತದ ಹಣೆಮೇಲೆ ಸೊನ್ನಿ ಕತ್ತುರಿ ತಿಲಕಸೊನ್ನ ಮುಕುಟವ ಧರಿಸಲಿನ್ನುಳಿದ ಕರಿಗುರುಳು 4 ಮಾನವ ನಾನು ಇನ್ನೆಂತು ಬಣ್ಣಿಸುವೆನಿನ್ನ ಕೃಪೆಯಿಲ್ಲದಿದನೆನ್ನಲಪ್ಪುದೆ ದೇವಚನ್ನ ಗದುಗಿನ ವೀರನಾರಾಯಣನೆ ಮಣಿವೆ 5
--------------
ವೀರನಾರಾಯಣ
ಇದು ಈಗ ಸಮಯ ಸೀತಾರಾಮ ಪ ಇದು ಈಗ ಸಮಯವು ಪದುಮದಳಾಕ್ಷನೆ ಸದಯದಿ ನಿಂದೆನ್ನ ಒದಗಿ ಕಾಯ್ವ ಶ್ರೀರಾಮ ಅ.ಪ. ಖಾಸವು ತುಂಬೆ ಕಂಠದಿ ಶ್ವಾಸವು ನಿಲ್ಲೆ ಘಾಸಿಯಾಗಲು ಘುರುಘುರುಕೆಂದು ಬÉೂೀರಿಡೆ ಸಾಸಿರ ಚೇಳು ಕಡಿದಂತಾಗುವಾಗ 1 ಕಾಲವು ಸಲ್ಲೆ ಪಂಚೇಂದ್ರಿಯಂಗಳು ಸಡಿಲೆ ಈ ದೇಹದಿ ಲಾಲಾ ಮೂತ್ರವು ಮಲ ಜೋಲಿ ಬೀಳುತಲಿರೆ ಕಾಲನ ದೂತರು ಬಂದು ಬಿಡದೆಳೆಯುತಿರುವಾಗ 2 ನಂದನಾದಿಗಳು ನಿಂದು ಗೋಳಿಡುತಿರೆ ಬಂಧು ಬಳಗಗಳು ಒಂದನು ನೋಡಿದೆ ಕುಂದುತ್ತ ಚಿತ್ತದಿ ನಿಂದಿರಲು ತಂದೆ ಧೇನುಪುರಿನಾಥ ಬಂದೆನ್ನ ಕಾಯೊ ಹೋಗುವಾಗ 3
--------------
ಬೇಟೆರಾಯ ದೀಕ್ಷಿತರು
ಇದು ಏನೆ ಯಶೋದೆ ಇದು ಏನೆ ಯಶೋದೆ ದಧಿಯ ದಾಮೋದರ ಹೆದರಿಕಿಲ್ಲದೆ ಕುಡಿದೋಡಿ ತಾ ಪೋದ ಪ ಕೊಳಲನೂದುತಲೆ ಆಕಳನೆ ಕಾಯುತಲ್ಹೋಗಿ ಕಳಲ ಗಡಿಗೆಸುತ್ತ ಕುಣಿದಾಡುವುದು 1 ವತ್ಸಕಾಯುತ ವನದೊಳಗೆ ಆಡೆಂದರೆ ಕಿಚ್ಚುನುಂಗಿ ಸರ್ಪವ ತುಳಿಯುವುದು 2 ಚೆಂಡನಾಡುತ ತುರುವ್ಹಿಂಡು ಕಾಯೆಂದರೆ ಗಂಡನುಳ್ಳವರ್ಹಿಂದ್ಹಿಂದೆ ತಿರುಗುವುದು 3 ವಛ(ತ್ಸ?) ನಂದದಲಿ ಬಾಯ್ ಹಚ್ಚ ಗೋವಿನ ಕ್ಷೀರ ಅಷ್ಟು ಕುಡಿದನಾಶ್ಚರ್ಯ ನೋಡಮ್ಮ 4 ಇಂದೆನ್ನ ಮನೆಯಲ್ಲೊಂದಿಷ್ಟು ಕ್ಷೀರಗಳಿಲ್ಲ ಗಂಡ(ಅ?) ತಿ ದುಷ್ಟೆನ್ನ ಕೊಲ್ಲುವನಮ್ಮ 5 ಮೌನಗೌರಿಯ ನೋತು ನೀರೊಳಗಿದ್ದೆವೆ ಮಾನಹೀನರ ಮಾಡಿ ಮರವನೇರುವುದು 6 ಬಟ್ಟೆ ನೀಡೆಂದಾಲ್ಪರಿಯಲು ಜೋಡಿಸಿ ನಿಮ್ಹಸ್ತ ಮುಗಿ(ಯಿ) ರೆಂದಾಡುವುದು7 ಬುದ್ಧಿಹೇಳೆಂದರೆ ಮುದ್ದು ಮಾಡುವರೇನೊ ಕದ್ದು ಬಂದರೆ ಕಾಲು ಕಟ್ಟಿ ಹಾಕಮ್ಮ 8 ದಧಿ ಬೆಣ್ಣೆ ಚಂದ್ರನಂತ್ಹೊಕ್ಕು ತಾ ತಿಂದ ನೋಡಮ್ಮ 9 ಕೇರಿ ಮಕ್ಕಳ ನೋಡೊ ಮಹರಾಯ ಬಲರಾಮ ದೊಡ್ಡಮಗನು ಎಲ್ಲೆ ದೊರಕಿದನಮ್ಮ 10 ಮೀಸಲ್ಹಾಕಿದ ಬೆಣ್ಣೆ ನೀ ಸವಿದೀಯೆಂದು ಲೇಸಾಗಿ ಹೇಳೆ ಭೀಮೇಶಕೃಷ್ಣನಿಗೆ11
--------------
ಹರಪನಹಳ್ಳಿಭೀಮವ್ವ
ಇದು ಏನೊ ನಿನ್ನ ಮತೀ ಮತೀ | ಇದರಿಂದಾಗದು ಗತೀ ಗತೀ ಪ ಸತಿ ಸುತರಿಂದಲಿ ಗತಿಯನ್ನು ಪಡೆದ ಕೇಳ ಬಲ್ಲೆಯಾ ಕಥೀ ಕಥೀ1 ಸಂಚಿತ ಪ್ರಾರಬ್ಧ ಕ್ರಿಯಮಾಣಾ | ತೀರಲಿಲ್ಲವೋ ಮಿತೀ ಮಿತೀ | ಪಂಚ ದಶಾಕ್ಷರೀ ಮಂತ್ರವ ಜಪಿಸಲು | ನೀ ಪರಶಿವನೆಂಬುದೋ ಶ್ರುತೀ ಶ್ರುತೀ 2 ಮೂರ್ತಿ ಭವತಾರಕ ದೇವನ | ಪೂಜಿಸಿ ಮಾಡೊ ಸ್ತುತೀ ಸ್ತುತೀ | ಅರಿಯದಿರ್ದರರ್ಚಕರನು ಸೇವಿಸಿ |ಆಗು ನೀ ಭೂಪತೀ ಭೂಪತೀ 3
--------------
ಭಾವತರಕರು
ಇಂದು ಕಂಡೆನಾನು | ಶಂಕರನಾ | ನಿಂದಿಹ ಕೋಟೇಶ್ವರನಾ ಪ ಅವದುಂಬರ ಮುನಿಯಾ | ತಾಪಕೊಲಿದು ತಾವದಗಿದೇ ನಡೆತಂದು 1 ಕೃಷ್ಣ ವೇಣಿಯಾ ಮಧ್ಯಾ ಜಲದೊಳಗ | ವಿಷ್ಣು ಸಹಿತ ಸಲುವನೀಗ 2 ವರ ಶೂರ್ಪಾಲಯದೀ | ತಾಮೆರೆವಾ | ಗುರುಮಹಿಪತಿ ಸುತ ಜೀವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಕಂಡೆನು ಹರಿಯ | ಭವಹಾರಿಯ ಇಂದು ಕಂಡೆನು ಕಂಬದಿಂದಲಿ ಪ ಬಂದು ದೈತ್ಯನ ಕೊಂದು ಕಂದನಿ- ಗಂದು ಒಲಿದಾನಂದ ಸಾಂದ್ರನ ಇಂದಿರಾ ಮಂದಿರನ ವಂದ್ಯನ ಅ.ಪ. ಎಂದಿನಂದದಿ ಬರುತ | ಮನದಲಿ ಶ್ರೀ ಮು- ಕುಂದ ನಾಮವ ನೆನೆಯುತ ಮುಂದು ಮುಂದಕೆ ನಡೆಯುತ | ಆ- ನಂದದಿ ಹೋಗುತಲಿರೆ ಸುಂದರಿ ಶ್ರೀ ತುಲಸಿಗೊಲಿದು ಬೃಂದೆಯನು ಕರವಿಡಿದು ಪೊಳೆದು ಬಂದು ಗಂಡಕಿಯಿಂದ ಭಕ್ತರ ವೃಂದ ಪೊರೆಯಲು ಪಥದಿ ನಿಂದನ1 ಸುಕೃತ | ಬಂದೊದಗಿತೊ ಶ್ರೀಶನೆನಗೆ ದೊರೆತ | ಪ್ರಭಾವದೆ ದುರಿತ | ರಾಶಿಯು ಇನ್ನು ದಾಸರಾಯರ ಕುಲದಿ ಜನಿಸಿದ ಕೂಸೆನುತ ದೇಸಿಗರ ಸೇವೆಗೆ ಮೀಸಲಾಗಿಸಲೋಸುಗೆನ್ನ ಮ- ಹಾಶಯವ ಲೇಸೆನಿಸಿ ಬಂದವ 2 ವಿಕಳ ತತಿಗೆ ಬಾಧಕ | ಈತನ ನಾಮ ಪ್ರಕಟಿಸಲಿನ್ನು ಸುಖ | ಪಾಲಿಸುವನು ಯುಕುತಿಗೆಂದಿಗು ನಿಲುಕ | ಸುಕೃತರಿಂದ ಭಕುತಿ ಸೇವೆಯನೊಂದೆ ಕೊಳ್ಳುವ ಭಕುತಿ ಮುಕುತಿಗಳನ್ನು ಕೊಡುವ ಸಕಲ ಕಾಲದಿ ನಿಂತು ಸಲಹುವ ಲಕುಮಿಕಾಂತನ ಸರ್ವ ಶಕ್ತನ 3
--------------
ಲಕ್ಷ್ಮೀನಾರಯಣರಾಯರು
ಇಂದು ಕಾಯಲಾ ಭಕ್ತವತ್ಸಲಾ ಬಂದು ಒದಗಿ ನಿಂದು ಭಯವ ದೂರ ಮಾಡಲಾ ಧ್ರುವ ಮೊರಿಯು ಕೇಳೆಲಾ ಹರಿಯು ನಿಶ್ಚಲಾ ದುರಿತ ಹರಿಸೆಲಾ 1 ಸುಳವದೋರಲಾ ಹೊಳೆದು ವಿಠ್ಠಲಾ ಖಳರ ಕೈಯ ಸೆಳೆದುಕೊಂಡು ಬಲೆಯ ಬಿಡಿಸೆಲಾ 2 ಬಂಧುಬಳಗ ದೈವ ಕುಲಕೋಟಿ ನೀನೆಲಾ3 ಹಿಂದೆ ಶರಣರ ಬಂದು ಕಾಯ್ದೆಲಾ ಸಂದು ವಿಘ್ನದೊಳು ಬಂದು ರಕ್ಷಿಸಿದೆಲಾ 4 ಅಂದು ಒದಗಿ ನೀ ಬಂದ ಪರಿಯಲಾ ಇಂದು ಅಭಿಮಾನ ಕಾವ ಬಿರುದು ನಿನ್ನದಲ್ಲಾ 5 ದಾತ ನೀನೆಲಾ ಅಣುಗ ನಿನ್ನ ದಾಸನೆಂದು ಪ್ರಾಣನುಳುಹೆಲಾ 6 ಪುಣ್ಯಪ್ರಭೆಯಿಂದಾ ಕಣ್ಣುದೆರಿಯಲಾ ಧನ್ಯಗೈಸಿ ಮಹಿಪತಿ ಮಾತ ಮನ್ನಿಸೆಲಾ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದು ಥರವೇ ಥರವೇ ದೇವಾ ಥರವೇ ನಿನ್ನವರ ವಂಚಿಸಿ ನೀ ಮರೆಯಲ್ಲಿ ಇರುವುದು ಥರವೆ ಪ. ಪರಿಪರಿಯಲಿ ಸ್ತುತಿಗೈಯುತಲಿ ನಿನ್ನ ಪರಮ ಮಂಗಳ ಪಾದಗಾಣದೆ ಮರುಗುತಿರುವಾ ವರ ಭಕುತರಿಗೆ ಕರುಣದೋರದೆ ಇರುವೆ ವೆಂಕಟ ಅ.ಪ. ಅಜಭವಾದಿಗಳು ಸ್ತುತಿಸಿ ಪೂಜಿಸಿದ ಪಾದ ತ್ರಿಜಗವಂದಿತ ಕೃಷ್ಣ ನಿನ್ನಪಾದ ಭಜನೆಯನು ಮಾಡುತ ನಿನ್ನ ತ್ಯಜಿಸದನುದಿನ ಸುಜನರೆಲ್ಲರು ಸ್ತುತಿಸಿ ಪಾಡುತಿರೇ ತ್ರಿಜಗ ಪೂಜಿತನಾಗಿ ಭಕುತರ ಭಜನೆ ನಿನಗರಿವಿಲ್ಲೇ ದೇವನೆ ಸ್ವಜನರನು ಪಾಲಿಸುವ ಬಿರುದನು ತ್ಯಜಿಸುವರೆ ಸಿರಿಯರಸ ವೆಂಕಟ 1 ಮಚ್ಛಕೂರ್ಮವರಾಹನಾಗಿ ದೈತ್ಯರ ಸ್ವಚ್ಛಭಕುತರ ಸಲಹೆ ಸಂಹರಿಸಿ ಅಚ್ಛಪ್ರಲ್ಹಾದನಿಗೊಲಿದ ನರಹರಿಯಾಗಿ ಅಚ್ಛವಾಮನನಾಗಿ ಬಲಿಯತಲೆಯತುಳಿದು ಸ್ವಚ್ಛಗಂಗೆಯ ಇಂಬಿಡದೇ ದುಷ್ಟ ರಾಜರನಳಿದ ಭಾರ್ಗವ ದುಷ್ಟ ತಾಟಕಿ ಸಂಹರಿಸಿದನೆ ಕೃಷ್ಣರೂಪದಿ ಗೋಪೆರಿಗ್ವಲಿದನೆ ಉತ್ಕøಷ್ಟ ಬೌದ್ಧ ಕಲ್ಕಿ ವೆಂಕಟ 2 ಪರಮಪುರುಷ ಬಾ ವರದ ಮೂರುತಿ ಬಾ ಪರಿಪರಿ ಸ್ತುತಿಸಿ ವಂದಿಪೆ ಸಿರಿವರದ ಬಾ ಶರಧಿಶಯನ ನಿನ್ನ ಚರಣ ಸ್ಮರಣೆಯೀಯೆ ಶರಣಾಗತ ರಕ್ಷಾಮಣಿ ಬೇಗ ಬಾ ಸಿರಿಗೆ ಪೇಳದೆ ಬಂದು ಕರಿಯ ಪೊರೆದ ದೊರೆ ಶ್ರೀ ಶ್ರೀನಿವಾಸ ಬಾ ಗರುಡ ಗಮನನೆ ಶರಣಜನರನು ಮರೆಯದಲಿ ನೀ ಕರುಣ ವೆಂಕಟ 3
--------------
ಸರಸ್ವತಿ ಬಾಯಿ
ಇಂದು ಧರಿಯೊಳು ಬ್ರಹ್ಮಾನಂದವನು ತುಂಬಿ ತುಳುಕತಿಹ್ಯಾನಂದಮಯ ಕಾಯದೊಳು ಕೌತುಕವು ನಾದಬಿಂದು ಕಳಿಯಲಿ ಸ್ತುತಿಸಲೆನ್ನಳವಲ್ಲ ಕ್ಷಿತಿಯೊಳು ಘನಮಹಿಮೆ ಅತಿಹರುಷವನು ದೋರುತಿಹ್ಯ ಸದ್ಗತಿ ಸುಖವು ಗುರುದಾಸರು 1 ಓಂಕಾರ ಮೊದಲಾದ ಶ್ರುತಿವೇದ ಘೋಷಗಳು ಧಿಮಿಧಿಮಿಸುವ ಮಹಾಶಬ್ದಗಳು ವಾದ್ಯಗಳು ಕೇಳುವದು ನೀದೃಶ್ಯೆಲಿ ಗರ್ಜಿಸುವ ಭೃಂಗಿಶಂಖನಾದ ಧ್ವನಿಯಗಳು ಭೋರಿಡುವ ಭೇರಿ ಮೃದಂಗ ವೇಣಿಯಗಳು ಚಿಣಿ ಚಿಣಿ ತಂತ್ರ ಮೊದಲಾದ ಸಂಕಾರಗಳು ಕೇಳಿ ಪಾವನವಾದೆನು 2 ಬೆರೆದು ನೋಡಲು ಅಂತರಾತ್ಮದೊಳು ಪ್ರಭೆಯಗಳು ಥಳಥಳಿಸುವಾ ಮಹಾತೇಜಗಳು ಪುಂಜಗಳು ಹೇಳಲಿನ್ನೇನದ ಹೊಳವಗಳು ಸುಳವಗಳು ನೋಡುವದು ಅನಿಮಿಷದಲಿ ರವಿ ಶಶಿ ತಾರೆಗಳು ಸೂಸುತಿಹ್ಯ ಕಿರಣಗಳು ಭಾಸಿಸುವ ನಾನಾವರ್ಣಗಳು ಛಾಯಗಳು ಬೆರಗಾದೆÀನಿಂದ 3 ವರ್ತಿಸುತ್ತಲಿಹ ಪ್ರವೃತ್ತಿ ನಿವೃತ್ತಿಗಳು ಅಂತರಾತ್ಮದ ವಾಯುಸ್ತುತಿಯಗಳು ಗತಿಯಗಳು ತಿಳಿವದೀ ಪ್ರಣಮ್ಯಲಿ ಸೂಸುತಿಹ ಶ್ವಾಸವುಚ್ಛ್ವಾಸನಿಯ ಭಾಸಿಗಳು ಶೋಭಿಸುವ ಜೀವನದ ಮಂತ್ರ ಸರ ಮಾಲೆಗಳು ಪಾವನವಾದೆನು 4 ಕರದ್ವಯಂ ಮುಗಿದು ವರಗುರುಚರಣಕಮಲಕಿ ನ್ನೆರಗಿ ಪರಮಾನಂದ ಹರುಷದಿ ಶಿರಸದಿ ಶ್ರೀಗುರುಮೂರ್ತಿಯ ನೆನೆವೆನು ಸದ್ಭಾವದಿಂದ ಸದ್ಗುರು ಪಾದಮಂಪಿಡಿದು ಸದ್ಬ್ರಹ್ಮರಸದೊಳು ಮುಳುಗಿ ಸದ್ಭಕ್ತಿಯಲಿ ಸದ್ಗತಿ ಸಾಧನವು ಸಾಧಿಸಿಹ್ಯ ಮಹಿಪತಿಯು ] ಶ್ರೀ ಗುರುಕೃಪೆಯಲಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮ ಸಲಹಯ್ಯಾ ಸಿರಿರಮಣಾ| ದುರಿತ ನಿವಾರಿಸು ಪೂರ್ಣ| ಮಂದಮತಿಗಳಾ ನೋಡದೆವೆ ನ್ಯೂನಾ| ಛಂದದಿಂದ ಕೊಡು ನಿನ್ನ ಚರಣ ಧ್ಯಾನಾ ಪ ಹಿಂದ ವ್ಯಾಧನೊಬ್ಬ ಹರಿಣಿ ಹಿಡಿಯಲಿ| ನಿಂತು ಚತುರ್ವಿಧ ಬಲಿಯಾನೊಡ್ಡಿರಲಿ| ಮೃಗ ಮೊರೆಯಿಡಲಿ| ಬಂದು ಕರುಣಿಸಿ ರಕ್ಷಿಸಿದ ಪರಿಲಿ 1 ಬಸಿರೊಳಗಿದ್ದ ಪರೀಕ್ಷಿತಗೆಂದು| ಎಸೆಯಲು ಬಾಣಗಳ ದ್ರೋಣಿ ಮುಳಿದು| ಬಿಸಜಾಕ್ಷ ನಿನ್ನ ಚಕ್ರ ಮರೆವಿಡಿದು| ಪರಿ ಬಂದು 2 ದಿನ ವತ್ಸಲ ದಯಾನಿಧಿ ಎನುವಾ| ಖೂನದೋರಿಸಯ್ಯಾ ಬಿರುದಿನ ಅನುವಾ| ನಿನೇ ತಾಯಿ ತಂದೆ ಬಂಧು ಸಖದೈವ| ಘನಗುರು ಮಹಿಪತಿ ಸುಖ ಜೀವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು