ಒಟ್ಟು 568 ಕಡೆಗಳಲ್ಲಿ , 92 ದಾಸರು , 519 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಪತೀ-ಎನಗೇನು ಗತೀ ನನಗಾಗಲಿ ನಿನ್ನಲಿ ರತೀ ಪ ಚಪಲ ತನದಿ ಬಹು ಕಪಟಭಕುತಿನಟಿಸಿ ಗುಪಿತ ದೋಷಿಯು ಆದೆ ಅ.ಪ. ಬಟ್ಟೆ ನೋಡಲು ಬಹು ಛಂಧ-ಮೇಲೆ ಘಟ್ಟಿ ಬಣ್ಣದ ಕಾವಿ ಶಾಟಿ ಹಾಗೆ ಪಟ್ಟೆಮಡಿಗಳ ಭಾರೀ ಥಳಕೊ-ಬಹಳ ದಟ್ಟ ತುಳಸೀಸರಗಳ ಹೊಳಪೂ ಆಹಾ ಸೃಷ್ಠಿಗೊಡೆಯನೆ ಎನ್ನ ಕೆಟ್ಟ ತನಗಳನ್ನು ಎಷ್ಟೆಂದು ಬಣ್ಣಿಪೆ ನಿಟ್ಟ ನೆನೆಯದೆ ಪರರ ದೃಷ್ಟಿನೋಡುತ ಹಿಗ್ಗಿ ಅಟ್ಟಹಾಸದಿ ಕುಣಿದು ಮಾನವ ನನಗೇ 1 ವೇದ ವಾದಗಳೇನು ಕಾಣೆ-ಶುದ್ಧ ಸಾಧು ಕರ್ಮಗಳೊಂದು ಇಲ್ಲ-ಜನರ ಮೋದಗೋಸುಗವೇನೆ ಎಲ್ಲ_ಕಾಮ ಕ್ರೋಧವ ನಿಬಿಡಿತೇನೇ ಬಿಚ್ಚೆಹೃದಯಾ ಆಹಾ ಮಧ್ವರಾಯರ ಶಾಸ್ತ್ರ ಗ್ರಂಥ ಸಹ ತಿಳಿಯದೆಲೆ ಸಿದ್ಧ ಸಾಧಕನಂತೆ ಸಾಧುಲಿಂಗವ ತೋರಿ ಮುಗ್ಧಗೈಯ್ಯುತ ಮಂದಿ ಮೆದ್ದು ಪಕ್ವಾನ್ನಗಳ ಗೆದ್ದುಕೊಳ್ಳುವೆ ಬಹಳ ದಕ್ಷಿಣೆ ಬಹುಮಾನ 2 ನೇಮನಿಷ್ಠೆಗಳಾಟ ಹೊರಗೆ-ಗೃಹದಿ ಪ್ರೇಮವಿಲಾಸ ಆಟ ಕೂಟಜನ ಸ್ತೋಮರೆಲ್ಲವ ನುಡಿವ ನೀತಿ ಖ್ಯಾತಿ ಕಾಮುಕನಾಗಿ ಚರಿಸಿದೆ ಜಗದೀ ಆಹಾ ಹೇಮದಾಸೆಗೆ ಸೂಳೆ ಪ್ರೇಮವ ತೋರ್ಪಂತೆ ಕಾಮಿತಪ್ರದ ನಿನ್ನ ನಾಮ ಸವಿಯನುಣ್ಣದೆ ತಾಮಸರಿಗೆ ಉಪದೇಶ ನೀಡುತ ಸತ್ಯ- ಭಾಮೆಯರಸ ನಿನಗೆ ದೂರನಾದೆನಲ್ಲಾ 3 ಹಾಡಿಹಾಡುವೆ ಎತ್ತಿ ಸುತ್ತ ಜನರು ನೋಡಿ ಹಿಗ್ಗುತ ಬಾಪು ಬಾಪು ನುಡಿಗೆ ಹಾಡಿನಲ್ಲಿಹ ಸವಿಯುಣ್ಣ ದೇನೆ ಆಡಿ ಆಡಿಪೆ ಶಿರವ ಜ್ಞಾನಿಯಂತೆ ಆಹಾ ಕೇಡು ಚಿಂತಿಸಿ ಪರರ ಸ್ವಾರ್ಥಗೋಸುಗನಿತ್ಯ ಕಾಡಿ ಬೇಡುತ ಜನರ ದೂಡುತಿಹೆ ಸಂಸಾರ ಪ್ರೌಢ ಭಕ್ತರ ಗೋಷ್ಠಿಕೂಡಿ ಭಜಿಸದ ಎನ್ನ ಗಾಢ ಡಂಭಕೆ ಜಗದಿ ಈಡು ಕಾಣಿಸು ಸ್ವಾಮಿ4 ಭಾರಿ ಶಾಲುಗಳನ್ನೆ ಹೊದ್ದು-ನಿತ್ಯ ಕೇರಿಕೇರಿ ಪುರಾಣಗಳನ್ನು ಮೆದ್ದು-ಹಾರಿ ಹಾರುತ ತತ್ವರಾಶಿ ನುಡಿದು-ಊರು ಜ- ನರಮುಂದೆ ಪಾಂಡಿತ್ಯ ತೋರ್ಪೆ ಆಹಾ ತೋರಿ ತೋರುವೆ ಪರಮವೈರಾಗ್ಯ ಭಕ್ತಿಯ ದೂರಿ ದೂಡುವೆ ಪರರ ಹುಳುಕುಗಳನು ಎತ್ತಿ ಪಾರುಗಾಣದ ಕರುಣ ತೋರದಿದ್ದರೆ ಇನ್ನು 5 ಗುಡಿಗೆ ಹೋಗುವೆ ನಾನು-ನಿತ್ಯ ಅಲ್ಲಿ ಬೆಡಗು ಸ್ತ್ರೀಯರ ಹುಡುಕುವುದೇನೆ ಕೃತ್ಯ ದೃಢಭಕುತಿಯನು ಮಾಡಲೊಲ್ಲೆ ಸತ್ಯ-ನ ಮಡದಿ ಮಕ್ಕಳಿಗಿಲ್ಲ ಭೃತ್ಯಾನುಭೃತ್ಯಾ ಆಹಾ ಹುಡುಕೀ ನೋಡಿದಾಗ್ಯೂ ವಿರಕ್ತಿ ಭಕ್ತಿಗಳಿಲ್ಲ ಬಿಡಲು ಪೊರೆಯೆ ಪುರಾಣಶಾಸ್ತ್ರಗಳನ್ನು ನಿತ್ಯ ಎನ್ನ ಅನಾದಿ ನೀ ಕಲಿಸದಿದ್ದರೆ ಈಗ 6 ದೊಡ್ಡ ಪಂಡಿತ ನಾನೆಂಬ ಹೆಮ್ಮೆ-ಶುದ್ಧ ದಡ್ಡನೆಂಬುದ ಬಲ್ಲೆ ಮನದಿ-ಹಾಗೂ ಅಡ್ಡ ಬೀಳೆನು ಭಕ್ತ ಗಣಕೆ ಸುಳ್ಳು ವೊಡ್ಡುತವರನು ಹಳಿದೂ-ಕುದಿದೇ ಮನದೀ ಆಹಾ ದುಡ್ಡುಗೋಸುಗ ಬಹಳ ದೊಡ್ಡ ದಾಸನು ಎನಿಸೀ ಹೆಡ್ಡಮಂದಿಯ ಮುಂದೆ ದೊಡ್ಡ ಭಾಷಣ ಮಾಳ್ವೆ ಗುಡ್ಡದೊಡೆಯನೆ ಭಕ್ತಜಿಡ್ಡುಲೇಶವು ಕಾಣೆ ದೊಡ್ಡ ನಾಮವ ಹಾಕಿ ಸಡ್ಡೆ ಮಾಡದೆ ತಿರಿವ 7 ಕಚ್ಚಿ ಬಿಡದಿಹ ತುಚ್ಛ ಕಲಿಯು-ಬಹಳ ಮೆಚ್ಚಿ ಬಂದಿಹ ನವನು ಬಿಡುವನೇನು ಇಚ್ಛೆ ನನ್ನದು ನಡೆಯದೇ ನೊಂದು ತುಚ್ಛ ವಿಷಯದಿ ಸೆಳೆದು ಸೆಳೆಯುತಿಹನು ಆಹಾ ಇಚ್ಛೆಯಿಂದಲಿ ಜಗವ ಸೃಜಿಸಿ ಪಾಲಿಪಲೀಲೆ ಹಚ್ಚಿಕೊಂಡಿಹ ನಿನಗೆ ನನ್ನ ಪಾಲಿಪುದೇನು ಹೆಚ್ಚು ಕಾರ್ಯವೆ ಜೀಯ ಮುಚ್ಚಿಕೊಂಡಹ ನಿನ್ನ ಸ್ವಚ್ಛ ಬಿಂಬವ ತೊರಿ ಮೆಚ್ಚಿ ಕೊಡದಿರೆ ಜ್ಞಾನ 8 ಶ್ವಾಸಮತದಲಿ ಜನ್ಮ ವಿತ್ತೆ-ವಿಜಯ ದಾಸರ ಪ್ರಿಯ ಮೋಹನ್ನ ಪರಂಪರೆಯ ದಾಸನೆನಿಸಿ ಯೆನ್ನ ಮೆರೆಸಿ ಹೀಗೆ ದೋಷಿಗೈವುದು ಥರವೆ ಶ್ರೀಭಕ್ತಪ್ರಿಯ ಆಹಾ ವಾಸುದೇವನೆ ತುರ್ಯಲೇಸು ದೃಷ್ಟಿಯ ಬೀರೆ ನಾಶವಾಗದೆ ದೋಷ ಭಾಸವಾಗದೆ ಜ್ಞಾನ ಕಾಸುಬೀಡೆನು ಹಿರಿಯ ದಾಸರ ಗುಣ ನೋಡಿ ಲೇಸು ನೀಡೆಂತೆಂಬೆ ಶ್ರೀಕೃಷ್ಣವಿಠಲಾ9
--------------
ಕೃಷ್ಣವಿಠಲದಾಸರು
ಶ್ರೀಪರಿಕಲ್ ನರಸಿಂಹ ಸ್ತೋತ್ರ ನರಸಿಂಹ ಪರಿಕಲ್ ನರಸಿಂಹ | ಗೌರೀಶಾದ್ಯಮರರಿಗೀಶ | ಆಹ | ಅಮಿತ ಪೌರುಷ ಸ್ವಜನತೇಷ್ಟಪ್ರದನೆ ನಮೋ ಅಮಲೂರು ಗುಣಗಣಾರ್ಣವ ಜಯ ಜಯತು ಪ ಸರ್ವೋರು ನಿಜ ಶಕ್ತಿಮಂತ | ಸದಾ ಸರ್ವತ್ರವ್ಯಾಪ್ತ ಅನಂತ | ಜಗತ್ ಸೃಷ್ಟ್ಯಾದಿಗಳಿಗೇ ನೀ ಕರ್ತ | ವಿಷ್ಣು ಸರ್ವತೋಮುಖ ಮೃತ್ಯುಹಂತ || ಆಹ || ಶ್ರೋತವ್ಯಮಂತವ್ಯ ಧ್ಯಾತವ್ಯವಿಭು ನೀನು ವ್ಯಕ್ತನಾದಿಯೋ ಸ್ತಂಭದಲಿ ಭೃತ್ಯಗೋಲಿದು 1 ಮೂಲಾಧಾರಾರಭ್ಯಲೂಧ್ರ್ವ | ವಾಗಿ ತಲೆಯ ಪರ್ಯಂತದಿ ನಿಲುವ | ಬಲು ಸುಲಲಿತಸ್ತಂಭದಂತಿರುವ | ನಾಡಿ ಯಲ್ಲಿ ಉರದೇಶದಿ ಪೊಳೆವ ||ಆಹ|| ಜ್ಯೋತಿರ್ಮಯನೆ ಪಾಪತಿಮಿರಾರ್ಕ ನೀ ಎನ್ನ ಪ್ರತಿಕ್ಷಣ ಪಾಲಿಸೋ ಶ್ರೀಲಕ್ಷ್ಮೀರಮಣ 2 ವಿಧಿ ಭವೇಂದ್ರಾದಿಗಳಿಂದ | ಪ್ರಹ ಲ್ಲಾದ ಶ್ರೀವ್ಯಾಸಮುನೀಂದ್ರ | ಮಂತ್ರಾ ಸದ್ಮಸ್ಥ ಶ್ರೀ ರಾಘವೇಂದ್ರ | ದಾಸ ವೃಂದ ಸುಜನರುಗಳಿಂದ ||ಆಹ || ಸೇವಿತ ಪೂಜಿತ ಸ್ತುತ್ಯ ಸಂಭಾವಿತ ||ಪಾಲಿಸೋ.......... 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಪಾದ ರಾಜರ ಸ್ಮರಣೇ | ಭವತಾಪ ಪರಿಹರ ವೆಂದು ಗಣನೆ ಪ ಧೃತ - ಶ್ರೀಪತಿ ಶ್ರೀರಂಗವಿಠಲನ | ಅಪರೋಕ್ಷದಿ ಕಂಡು ಕುಣಿಯುವತಾಪಸೀಗಳ ದಯದಿ ದುರಿತವು | ಪೋಪುದೇನಿದು ನಮಗೆ ಅಚ್ಚರ ಅ.ಪ. ದಿವಿಜ ಸನ್ನುತ ಹರಿಯ ಕೀರ್ತನೆ ಸ್ತೋಮ ವಿರಚಿಸಿ ತತ್ವನೊರೆದ 1 ಕ್ಲೇಶ ಸುಕೃತ 2 ವಿಪ್ರ ವರೇಣ್ಯ 3
--------------
ಗುರುಗೋವಿಂದವಿಠಲರು
ಶ್ರೀಮದಕ್ಷೋಭ್ಯ ತೀರ್ಥರ ದಿವ್ಯ ಚರಿತಂ ಕಾಮಿತ ಪ್ರದವಹುದು ಶೃಣ್ವತಾಂ ಸತತಂ ಪ ಈ ಮಹಿಯೊಳವತರಿಸಿ ಭೂಮಿಜಾಸಹಿತ ಶ್ರೀ ರಾಮನಂಘ್ರಿದ್ವಯವ ಪೂಜಿಸುತಲಿ ನಿರ್ಜರ ಜನಸ್ತೋಮ ವಂದಿತರಾಗಿ ವ್ಯೋಮ ಕೇಶಾಂಶರೆಂದೆನಿಸಿ ಮೆರೆವಂಥ 1 ಮೋದತೀರ್ಥರ ಮತ ಮಹೋದಧಿಗೆ ಪೂರ್ಣಹಿಮ ದೀದಿತಿಯರೆಂದೆನಿಸಿ ದಿಗ್ವಲಯದಿ ಭೇದ ಬೋಧಕ ಸೂತ್ರವಾದದಿಂದಲಿ ಮಹಾ ವಾದಿ ವಿದ್ಯಾರಣ್ಯ ಯತಿವರನ ಜಯಿಸಿದ 2 ವಿಟ್ಠಲನ ಪದಪದುಮ ಷಟ್ಟದರೆಂದೆನಿಸಿ ಸ್ವಪ್ನಸೂಚಿತ ಚಂದ್ರಭಾಗತಟದಿ ಶ್ರೇಷ್ಠ ಕುದುರೆಯನೇರಿ ನದಿಯ ಜಲಕುಡಿದವರ ಇಷ್ಟರೆನ್ನುತ ಕರೆದು ಕೊಟ್ಟರಾಶ್ರಮವ 3 ಸೃಷ್ಟಿಯೊಳು ಮಧ್ವಮತ ಪುಷ್ಠಿಗೈಸುವರೆಂಬ ದೃಷ್ಟಿಯಿಂದಿವರಿಗೆ ಸುಮುಹೂರ್ತದಿ ಪಟ್ಟಗಟ್ಟಿದರು ಜಯತೀರ್ಥ ನಾಮವನಿಡುತ ಕೊಟ್ಟರಾಜ್ಞೆಯನು ದಿಗ್ವಿಜಯ ಮಾಡಿರಿ ಎಂದು 4 ದೇಶದೇಶದಿ ಬರುವ ಭೂಸುರೋತ್ತಮರ ಅಭಿ ಲಾಷೆಗಳನೆಲ್ಲ ಪೂರೈಸಿ ಪೊರೆವ ಶ್ರೀಶಕಾರ್ಪರ ಕ್ಷೇತ್ರವಾಸ ಅಶ್ವತ್ಥನರ ಕೇಸರಿಯ ನೊಲಿಸಿದ ಯತೀಶರಿವರೆಂದು 5
--------------
ಕಾರ್ಪರ ನರಹರಿದಾಸರು
ಶ್ರೀಮದನಂತಸ್ವಾಮಿ ರಕ್ಷಿಸು ಪುಣ್ಯ- ನಾಮ ಸರ್ವಾಂತರ್ಯಾಮಿ ಪ. ಸೋಮಾರ್ಕಕಾಮಸೂತ್ರಾಮ ಪ್ರಮುಖಸುರ- ಸ್ತೋಮವಂದಿತ ಭೀಮಬಲ ಗುಣ- ಧಾಮ ವರನಿಸ್ಸೀಮ ಮಹಿಮನೆ ಅ.ಪ. ಅಂತರ್ಬಹಿವ್ರ್ಯಾಪ್ತನೆ ಸತತ ರಮಾ- ಕಾಂತಗೆ ಪರಮಾಪ್ತನೆ ಚಿಂತಿಪ ಭಕ್ತರ ಚಿಂತಾಮಣಿ ನಿ- ಶ್ಚಿಂತನೊಂದೆ ಶಿರದಿ ಸಾಸವೆ- ಯಂತೆ ಲೋಕವನಾಂತುಕೊಂಡಿಹೆ 1 ರಾಮನ ಸೇವೆಗಾಗಿ ಲಕ್ಷ್ಮಣನೆಂಬ ನಾಮವ ತಾಳ್ದ ಯೋಗಿ ಯಾಮಿನೀಚರರ ನಿರ್ನಾಮಗೈದ ವೀರಲ- ಲಾಮ ನಿರ್ಜಿತಕಾಮ ಸಜ್ಜನ- ಪ್ರೇಮ ಭೌಮ ನಿರಾಮಯನೆ ಜಯ 2 ಸಂಕರ್ಷಣ ಸುಗುಣಾ-ಭರಣ ನಿ- ಶ್ಯಂಕ ವೈರಿಭೀಷಣ ಶಂಕರಾದಿಸುರಸಂಕುಲನುತಪಾದ- ಪಂಕಜನೆ ತಾಟಂಕಗೋಪಾ- ಲಂಕೃತಾಂಗ ಶುಭಂಕರನೆ ಜಯ 3 ಸಾರತತ್ತ್ವಬೋಧನೆ ಶರಣುಜನ ವಾರಿಧಿಚಂದ್ರಮನೆ ಘೋರಭವಾರ್ಣವತಾರಕನಮಲ ಪಾ- ದಾರವಿಂದದ ಸೌಂದರ್ಯ ನಿಜ ಭೂರಿ ನೇತ್ರಗಳಿಂದ ಕಾಣುವೆ 4 ಮಂಜುಳ ನಗರೇಶನೆ ಭಕ್ತಭಯ- ಭಂಜನ ಸುವಿಲಾಸನೆ ಕಂಜಾಕ್ಷಸಖ ಲಕ್ಷ್ಮೀನಾರಾಯಣನ ತೇಜಃ- ಪುಂಜ ಭಗವದ್ಭಕ್ತಜನಮನೋ-ರಂಜನಾತ್ಮ ನಿರಂಜನನೆ ಜಯ 5
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಮಧ್ವ ಚಿತ್ತಮಂದಿರನೆ ನಿನ್ನಯ ಚರಣತಾಮರಸ ನೆರೆ ನಂಬಿದೆ ಪ ಕಾಮ ಕ್ರೋಧಗಳನ್ನು ಕಡಿದು ನಿನ್ನಯ ದಿವ್ಯನಾಮಾಮೃತವನುಣಿಸೋ ಸ್ವಾಮಿ ಅ.ಪ. ಪರ ನಾರಿಯರಮೋರೆ ಬಣ್ಣವನೆ ನೋಡಿಆರು ಇಲ್ಲದ ವೇಳೆ ಕಣ್ಣು ಸನ್ನೆಯಲವಳಕೋರಿದ್ದು ಇತ್ತು ಕೂಡಿವಾರಿಜನಾಭ ನಿನ್ನಾರಾಧನೆಯ ಮರೆದುಧಾರುಣಿಗೆ ಭಾರಾಗಿ ಅಶನ ಶತ್ರುವಾದೆ 1 ಉಪರಾಗ ಮೊದಲಾದ ದಶಮಿ ದ್ವಾದಶಿ ದಿನದಿಉಪೇಕ್ಷೆಯನು ಮಾಡಿ ಜರಿದೆ |ಉಪಕಾರವೆಂದು ನಿಜವೃತ್ತಿ ಪೇಳಿದರೆನಗೆಅಪಕಾರವೆಂದು ತಿಳಿದು |ನಿಪುಣನೆನಿಸುವೆನೆಂದು ಅಜ್ಞಾನಿಗಳ ಮುಂದೆತಪವೃದ್ಧರನ್ನು ಜರಿದೆ |ಸ್ವಪನದೊಳಗಾದರೂ ವೈರಾಗ್ಯ ಬಯಸದಲೆಕಪಟ ಮನುಜರೊಳಗಾಡಿ ನಿನ್ನ ಮರೆದೆನೊ ಸ್ವಾಮಿ 2 ಭೂಸುರರು ಚಂಡಾಲ ಜಾತಿಯನ್ನದೆ ಬಲುಹೇಸಿಕಿಲ್ಲದಲೆ ತಿರಿದೆ | ಆಶಾಪಾಶಕೆ ಸಿಲುಕಿ ಕಂಡಕಂಡಲಿ ತಿಂದುದೋಷರಾಶಿಯನು ತರುವೆ |ಆ ಸತೀ ಸುತರ ಸಲಹುವೆನೆಂದು ಪರಿಪರಿವೇಷವನು ಧರಿಸಿ ಮೆರೆವೆ |ವಾಸುಕೀ ಶಯನ ವಸುದೇವ ತನಯನೆ ನಿನ್ನದಾಸನೆನಿಸದಲೆ ಅಪಹಾಸ ಮಾನವನಾದೆ 3 ಹರಿದಾಸರಲ್ಲಿ ಒಂದರಘಳಿಗೆ ಕುಳಿತರೆಶಿರವ್ಯಾಧಿಯೆಂದ್ಹೇಳುವೆ |ದುರುಳ ದುರ್ವಾರ್ತೆಗಳ ಪೇಳಲು ಹಸಿತೃಷೆಯಮರೆದು ಆಲಿಸಿ ಕೇಳುವೆ |ತರುಣಿ ತರಳರು ಎನ್ನ ಪರಿಪರಿ ಬೈದರೆಪರಮ ಹರುಷವ ತಾಳುವೆ |ಗುರು ಹಿರಿಯರೊಂದುತ್ತರವನಾಡಲು ಕೇಳಿಧರಿಸಲಾರದಲೆ ಮತ್ಸರಿಸುವೆನೊ ಅವರೊಳಗೆ 4 ನಾ ಮಾಡಿದಪರಾಧಗಳನೆಣಿಸಿ ಬರೆವುದಕೆಭೂ ಮಂಡಲವೆ ನೆರೆ ಸಾಲದೊ | ಸೀಮೆಯೊಳಗುಳ್ಳ ದುರ್ಮತಿಯೆಲ್ಲ ಕೂಡಲುಈ ಮತಿಗೆ ಆದು ಪೋಲದೋಹೋಮ ಜಪತಪವು ಇನ್ನೆಷ್ಟು ಮಾಡಲು ಪಾಪಸ್ತೋಮ ಎಂದಿಗು ವಾಲದೊ |ಸಾಮಜ ವರದ ಮೋಹನ್ನ ವಿಠ್ಠಲ ನಿನ್ನ |ನಾಮವೊಂದಲ್ಲದೆ ಪ್ರಾಯಶ್ಚಿತ್ತವ ಕಾಣೆ5
--------------
ಮೋಹನದಾಸರು
ಶ್ರೀಮಾಧವ ತೀರ್ಥರ ಸ್ತೋತ್ರ ಮಾಧವ ಸುತೀರ್ಥ ಗುರು | ಭಕ್ತಜನಕಲ್ಪತರುಆದಿ ಗುರುಗಳ ಕರಜ | ಮಾಡೆನ್ನ ವಿರಜ ಪ ಸನ್ನುತ ಚರಣ | ಮೌನದಿಂ ಭಜನನೀ ಮಾಡಿ ಆನಂದ ವಾರಿಧೀಯಲಿ ಮಿಂದುಆ ಮಹಿಮೆ ಪೊಗಳಲೂ | ಎನಗಾವ ಅಳಲೂ 1 ಜ್ಞಾನಾಯು ರೂಪಕನೆ | ಪ್ರಾಣಪತಿ ಎನಿಪನ್ನನೀನಾಗಿ ತೋರುವಲಿ | ನಿನ್ನ ದಯವಿರಲಿ |ಮೌನೀಶ ಇದ ಹೊರತು | ಅನ್ಯಬೇಡೆನು ಒಳಿತುಪ್ರಾಣ ಮುಖ ತತ್ವೇಶ | ರೊಲಿಮೆ ಸಹ ಆಶ 2 ಆನಂದ ತೀರ್ಥ ಮತ | ಶಿಷ್ಟರಲಿ ಭೋಧಿಸುತದೀನಜನ ಪರಿಪಾಲ | ಹರಿಭಕ್ತ ಲೋಲಾ |ಜಾಣ ಗುರುಗೋವಿಂದ | ವಿಠಲ ಮಹಿಮಾನಂದನೀನಾಗಿ ಕೊಟ್ಟೆನ್ನ ಉದ್ಧರಿಸೊ ಘನ್ನ 3
--------------
ಗುರುಗೋವಿಂದವಿಠಲರು
ಶ್ರೀಮೋದವಿಠಲದಾಸರ ಸ್ತೋತ್ರ ಮೋದವಿಠಲದಾಸರಾಯ ನಿನ್ನ ಪಾದವನಂಬಿದೆ ಪಾಲಿಪುದಯ್ಯ ಪ ಭೇದಮತಾಬ್ಧಿ ಪಾಠಿನ ಆದು - ರ್ವಾದಿಮಾಯಿಗಳಿಗೆ ಗಂಟಲಗಾಣ ಸಾಧುಜನರ ಪಂಚಪ್ರಾಣನೆನಿಪ ಮೇದಿನಿಯೊಳು ಹರಿಭಕ್ತ ಪ್ರವೀಣ 1 ಗುರುಪ್ರಾಣೇಶದಾಸರಲಿ ಜ್ಞಾನ ವರ ಉಪದೇಶವ ಕೊಂಡು ಭಕ್ತಿಯಲಿ ವರದೇಂದ್ರಾರ್ಯರ ಸನ್ನಿಧಿಯಲಿ ಸತತ ಹರಿಭಜನೆಯ ಮಾಳ್ಪ ನಲಿನಲಿಯುತಲಿ 2 ಸ್ನಾನಸಂಧ್ಯಾದ್ಯನುಷ್ಠಾನವನು ಙÁ್ಞನಪೂರ್ವಕದಿ ಚರಿಸುವ ನಿಧಾನ ಹೀನಜನಗಳಲ್ಲಿ ಮೌನ ನಿರುತ ಶ್ರೀನಿವಾಸನ ಮನದಲಿ ಮಾಳ್ಪ ಧ್ಯಾನ 3 ಬಾಲ್ಯತನದಿ ನಿಮ್ಮಾಜ್ಞ್ಞವನು ಮೀರಿ ಕಾಲಕಳೆದೆ ದುರ್ವಿಷಯದಿ ನಾನು ಶ್ರೀಲೋಲನಂಘ್ರಿ ಮರೆದೆನು ಮುಂದೆ ಪಾಲಿಸೆನ್ನಯ ಮೊರೆ ಶರಣು ಬಂದಿಹೆನು 4 ಶ್ರೀ ಮರುನ್ಮತಙÁ್ಞನವನು ನಮ್ಮ ಸ್ವಾಮಿ ವರದÉೀಶವಿಠಲನ ದಾಸ್ಯವನು ಆ ಮುನಿವರನ ಸೇವೆಯನು ಕೊಟ್ಟು ನೀ ಮುದದಲಿ ಕರುಣಿಸು ಸುರಧೇನು5
--------------
ವರದೇಶವಿಠಲ
ಶ್ರೀಯತಿವೃಂದ ಸ್ತೋತ್ರ ಯತಿಗಳ ಸತತ ಸಂಸ್ತುತಿಸುವೆ ಅತಿತ್ವರಿತದಲಿ ದುರಿತಗಳ ತರಿವೆ ಪ ಮೋದತೀರ್ಥಾದಿ ಸುಬೋಧೇಂದ್ರ ಪರಿಯಂತ ಮೋದದಿಂದವರ ಶ್ರೀಪಾದಕ್ಕೆ ನಮಿಪೆ 1 ಅಜನಪಿತನಪಾದ ಭಜಿಸುವ ಭಕುತ ನಿಜವಾಗಿ ಪಾಲಿಪ ಸುಜನೇಂದ್ರ ತೀರ್ಥ 2 ಆನತಜನ ಪಾಪಕಾನನದಹಿಪ ಕೃ ಶಾನನಂತಿಪ್ಪ ಸುಙÁ್ಞನೇಂದ್ರ ತೀರ್ಥ 3 ದುರ್ಮತಧ್ವಂಸ ಸದ್ಧರ್ಮ ಸಂಸ್ಥಾಪಕ ಕರ್ಮಂದಿವರ ಸುಧರ್ಮೇಂದ್ರ ತೀರ್ಥ 4 ಅಗಣಿತಮಹಿಮ ಮೂಜಗದೊಳು ಪ್ರಖ್ಯಾತ ನಿಗಮಾಗಮಜ್ಞ ಶ್ರೀ ಸುಗುಣೇಂದ್ರ ತೀರ್ಥ 5 ಸಸುಪ್ರಸಿದ್ಧ ಮುನಿ ವಿಪ್ರಸಮೂಹವ ಕ್ಷಿಪ್ರದಿಪಾಲಿಪ ಸುಪ್ರಙÉ್ಞಂದ್ರಾಖ್ಯ 6 ಶ್ರೀಶ ಪದಾರ್ಚಕ ಸುಕೃತೀಂದ್ರ 7 ಮೂಲೋಕ ವಿಖ್ಯಾತ ಶ್ರೀಲೋಲನಂಘ್ರಿ ಕೀ - ಲಾಲಜಮಧುಪ ಸುಶಿಲೇಂದ್ರ ಮುನಿಪ 8 ವರದೇಶ ವಿಠಲನ ಪರಿಪರಿ ಪೂಜಿಪ ಪರಮಹಂಸರ ಪಾದಕ್ಕೆರಗಿ ಬಿನ್ನೈಪೆ 9
--------------
ವರದೇಶವಿಠಲ
ಶ್ರೀರಾಘವೇಂದ್ರರ ಸ್ತೋತ್ರ ವಿನಯಾದಿಂದಲಿ ನಮಿಸುವೆನಾ ವೃಂದಾ ವನದಿ ರಾಜಿಪ ರಾಘವೇಂದ್ರ ಗುರವಿನ ಪ ದುರಿತವಾರಣ ಪಂಚಾನನನ ನರ - ಹರಿರೂಪಸ್ತಂಭದಿ ಪ್ರಕಟಗೈಸಿದನ ಹರಿಭಕ್ತಾಗ್ರಣಿಯೆಂದೆನಿಪನ ನಾರ - ದರ ಉಪದೇಶಗರ್ಭದಿ ಕೈಕೊಂಡಿಹನ 1 ಸಿರಿವ್ಯಾಸತೀರ್ಥರೆನಿಪನ ಪುರಂ - ದರ ದಾಸಾರ್ಯರಿಗು ಪದೇಶ ಗೈದವÀನ ವರಚಂದ್ರಿಕಾ ರಚಿಸಿದನ ದುಷ್ಟ ಪರಮಾದ್ರಿಗಳಿಗೆ ಕುಲಿಶನೆನಿಪನ 2 ಶ್ರೀ ಸುಧೀಂದ್ರ ಕರಾಬ್ಜಜನ ದಿವ್ಯ ಭಾಸುರ ಪರಿಮಳ ಗ್ರಂಥ ಕರ್ತರನ - ಮೀಸಲ ಮನದಿ ಭಜಿಪರನ ದೋಷ - ನಾಶನ ಗೈಸಿ ಪೋಷಿಸುವ ಶಕ್ತರನ3 ವರಮಂತ್ರ ಸದ್ಮನಿಲಯನ ಶ್ರೀ - ಗುರು ಮಧ್ವಮತ ದುರಂಧರದೆನಿಸುವನ ಹರಿಪ್ರೀತಿ ಪೂರ್ಣಪಾತ್ರರನ ಈ ಧರಿಯೊಳು ಬಹುಪರಿ ಮೆರೆವ ಮುನಿಪನ 4 ತುಂಗಭದ್ರಾತೀರವಾಸನ ಶುಭ ಮಂಗಲಚರಿತ ಕಮಂಡಲಧರನ ರಂಗವರದೇಶ ವಿಠಲನ ಪದ ಭೃಂಗ ಯತಿಕುಲ ಕಂಜಾರ್ಕ ಸನ್ನಿಭನ 5
--------------
ವರದೇಶವಿಠಲ
ಶ್ರೀಶ್ರೀಪ್ರಾಣೇಶದಾಸರಾಯರ ಸ್ತೋತ್ರ ದಾಸರಾಯರ ದಿವ್ಯ ಚರಣ ಭಜಿಸಿ ಶ್ರೀ ಪ್ರಾಣೇಶದಾಸಾರ್ಯ ಗುರುವರ್ಯಾ ಪ ಪಾದ ಭಜಿಪ ಸದ್ಭಕ್ತರ ಏಸುಜನುಮದ ಪಾಪರಾಶಿ ಪರಿಹರವು ಲೇಶ ಸಂಶಯವಿಲ್ಲ ಆಲಸವು ಸಲ್ಲ 1 ಮರುತಮತ ತತ್ವದ ತೆರೆಗಳಿಂ ಸೂಸುತ ಧರಣಿಸುರರಿಗೆ ರಾಮನಾಮಾಮೃತ ನಿರುತಭಜಿಸಲು ಙÁ್ಞನವೈರಾಗ್ಯ ತರುಮಣಿಯ ಹರಿಭಕುತಿ ಧೇನುವನ್ನೀವÀ ಪಾಲ್ಗಡಲೆನಿಪ 2 ಸುಜ್ಞಾನವೆಂಬಂಥ ಕಿರಣಗಳ ಪಸರಿಸುವ ಅಜ್ಞಾನತಿಮಿರವನು ದೂರೋಡಿಪ ಸೂಜ್ಞರೆಂಬುವ ತಾವರೆಗಳರಳಿಸುವಂಥ ಅಜ್ಞಕುಮುದುಗಳ ಬಾಡಿಸುವ ಭಾಸ್ಕರನೆನಿಪ 3 ನಮಿಪಜನ ಭವತಾಪಕಳೆದು ಸದ್ಭಕ್ತಿಯಂ - ಬಮಿತ ಅಹ್ಲಾದವನು ಬೀರುವಂಥ ಶಮದಮಾದಿಗಳ ಚಂದ್ರಿಕೆಯಿಂದ ಶೋಭಿಸುವ ವಿಮಲ ಹರಿಜನ ಚಕೋರಕೆ ಚಂದ್ರನೆಂದೆನಿಪ 4 ದಾಸಕುಲತಿಲಕ ಪ್ರಾಣೇಶರಾಯನ ಕವನ ಶ್ರೀಶಕಥೆಗಳ ರಾಶಿಮೀಸಲಾಗಿರಲು ಆ ಸುಭಕ್ತರಿಗೆ ಸಂತೋಷಗೊಳಿಸುಲು ಸರ್ವ ದೇಶದಲಿ ಮೆರೆಸಿ ಸತ್ಕೀರ್ತಿಯನು ಪಡೆದಂಥ5 ಈ ಗುರುಗಳ ಪಾದಕೆರಗಿದ್ದ ಶಿರಧನ್ಯ ಈ ಗುರುಗಳೀಕ್ಷಿಸಿದ ನೇತ್ರ ಧನ್ಯ ಈ ಗುರುಗಳ ವಾಣಿ ಕೇಳಿದ್ದ ಕಿವಿ ಧನ್ಯ ಈ ಗುರುಗಳನು ಮನದಿ ನೆನೆವÀನರ ಧನ್ಯ 6 ರಾಗದ್ವೇಷಾದಿಗಳ ಗೆದ್ದು ಸದ್ಭಕ್ತಿಯಿಂ ಶ್ರೀಗುರುಪ್ರಾಣೇಶ ಭಜಕರೆನಿಪ ನಾಗಪರಿಯಂತ ವರದೇಶ ವಿಠಲನ ಪ್ರೀಯ ಪಾದ ಭೃಂಗ 7
--------------
ವರದೇಶವಿಠಲ
ಶ್ರೀಹರಿ ಮೂಜಗದೊಳು ನೀನು ತೇಜವುಳ್ಳವನಾಗಿ ಪ ಕಾಲದಿ ನಿನ್ನಯ ಮೇಲಿಹ ನಿರ್ಮಾಲ್ಯ ಮಾಲೆಯನೆಲ್ಲ ವಿಸರ್ಜಿಸಿ ತೊಳೆದು ನೀಲಮಾಣಿಕ ವಜ್ರಮಯವಾದ ಪೀಠದ ಮೇಲೆ ವಾಲಗವಾಗಿ ಲೀಲೆಯ ತೋರುತ1 ಮೊದಲು ಸಂಕಲ್ಪಿಸಿ ತುಳಸಿ ಶ್ರೀಗಂಧದಿ ಉದಕ ಶುದ್ಧವ ಮಾಡಿ ಅದರೊಳು ಬಳಿಕ ವಿಧಿಸಿಯೆ ಮತ್ತೇಳು ನದಿಯನುಚ್ಚರಿಸಲು ಒದಗಿ ಬಾರೆಲೊ ಕರಚರಣ ಮಜ್ಜನಕೀಗ 2 ಮಾನಸದಘ್ರ್ಯವು ಆಚಮನಗಳು ನಾನಾ ಪಂಚಾಮೃತ ಫಲವಭಿಷೇಕವು ಗಾನ ಸೂಕ್ತಗಳಿಂದ ಮಧುಪರ್ಕಾದಿಗಳು 3 ವಸ್ತ್ರವಾಭರಣವು ಯಜ್ಞಸೂತ್ರವ ತೊಡಿಸಿ ಚಿತ್ರವಾಗಿಹ ಗಂಧ ಅಕ್ಷತೆವಿಡಿಸಿ ಪತ್ರಪುಷ್ಪವು ಶ್ರೀತುಳಸಿ ಮಾಲೆಗಳಿಂದ ಸ್ತೋತ್ರವು ಸಾಹಸ್ರನಾಮಗಳಾಯಿತು 4 ಧೂಪಮಾಧ್ರೂಪಯ ದೀಪದ ದರುಶನವು ಆದಷ್ಟು ಸರ್ವೋಪಚಾರಗಳು ಕದಳಿ ನಾರಿಕೇಳÀವು ಪರಿ ನೈವೇದ್ಯ ದಯಾಪರಮೂರ್ತಿ 5 ಆಗರದೊಳು ಬೆಳೆದ ನಾಗವಲ್ಲಿಯ ದಳ ಪೂಗಿಯಫಲ ಸಹ ನಾಗಶಯನಗಿಟ್ಟು ಬೇಗದಿ ಮಂಗಳ ಪದಗಳ ಹೇಳಿ ಲೇ ಸಾಗಿ ಎತ್ತುವ ಅಮೋಘದಾರತಿಗಳ 6 ಮಾಡಿದ ಪೂಜೆಯ ನೋಡಿ ಕರುಣದಿಂದ ಬೇಡಿದಿಷ್ಟವನೀಯೊ ರೂಢಿಯ ಒಡೆಯ ಪಾಡಿ ಪೊಗಳುವೆ ನಿನ್ನ ಪಂಥ ಬೇಡೆನ್ನೊಳು ಅನುದಿನ ವರಾಹ ತಿಮ್ಮಪ್ಪ 7
--------------
ವರಹತಿಮ್ಮಪ್ಪ
ಶ್ರೀಹರಿ ಕೀರ್ತನೆ ಅಗಲದಿರೋ ಮನ ಮಂದೀರದಿಂದ ಲೆನ್ನ ಎಂದೆಂದಿಗೂ ಕೃಷ್ಣ ಪ ಅಗಲದಿರೋ ಬ್ರಹ್ಮಾದಿ ವಂದಿತ ಪರಿ ಪೂರ್ಣ ಏಕನೆ ವಿಶ್ವ ಸಗುಣ ನಿರ್ಗುಣ ನಿರಜ ನಿಸ್ಸೀಮ ಅ.ಪ. ಕಷ್ಟವಿಲ್ಲದೆ ಸಕಲ- ಚೇಷ್ಟೆಯ ನಡಿಸುವೆ ಕೊಟ್ಟು ದೇಹಾದಿಗಳ- ಬಿಟ್ಟೇ ಜೀವರ ಭವದಿ ಗಿಟ್ಟೀಸೆ ತಮ್ಮ ತಮ್ಮ- ಪಟ್ಟಾ ಮುಕ್ತಿಯ ಬೇಗ ಒಟ್ಟಿನಿಂದಲಿ ಜೀವ ಜಗವಂದಿಷ್ಟು ಚಲಿಸದು ಬಿಟ್ಟು ನಿನ್ನನು ಗುಟ್ಟು ತಿಳಿಯದೆ ಭವದಿ ಕಂ- ಗೆಟ್ಟು ಬಳಲಿದೆ ಭಕ್ತಬಾಂಧವ ನಷ್ಟಕಷ್ಟಗಳಿಲ್ಲದಾ ಸಂತುಷಷ್ಟ ನೀಡುವ ಪ್ರಭುವೆ ಕರುಣಾ- ದೃಷ್ಟಿ ಬೀರುತ ಭಕ್ತಿ ಭಾಗ್ಯವ ಪುಷ್ಟಿಗೈಸುತಲೆನಗೆ ಸಂತತ 1 ಶ್ರೀಶಾನೊಬ್ಬನೆ ಸರ್ವ ತಂತ್ರ ಸ್ವತಂತ್ರನು ನಾಶರಹಿತನಿಗೆಲ್ಲಾ ದಾಸರೆ ಸರಿಸತತಾ ವಾಸುದೇವನು ಜೀವ ಜಗದಿಂ ವಿಲಕ್ಷಣನು ಈಸುಜ್ಞಾನವನೀಯೋ ಜನ್ಮಜನ್ಮಾಂತರಕು ದೋಷದೂರ ವಿಶೇಷ ಮಹಿಮ ಪೂರ್ಣ ವಿಶ್ವಗ ಶಶ್ವದೇಕ ವಿ- ಲಾಸ ಮಿಷಣಾಭರಣ ಭೂಷಿತ ಸಾಮಸರ್ವಾಧಾರ ನಿರುಪಮ ಓಸು ಶಬ್ದಗಳಿಂದ ವಾಚ್ಯನೆ- ನಾಶಗೈಸುತ ಕರ್ಮತ್ರಯಗಳ ಹೃದಯಗುಹೆಯಲಿ 2 ನಿತ್ಯನಿಗಮಾತೀತ-ನೀನೆ ಸತ್ಯರ ಸತ್ಯ ನಿತ್ಯತೃಪ್ತನು ಸ್ವರತ-ಮುಕ್ತೇಶ ಚಿನ್ಮಯನೂ ನಿತ್ಯಜೀವಗೆ ನೀನಿರ್ನಿಮಿತ್ತ ಬಂಧು ಸತತ ನಿತ್ಯಸ್ತೋತ್ರವನು ನುಡಿಸು-ಮೃತ್ಯೋಮೃತ್ಯುವೆ ದೇವಾ ಧಾಮ ವಿಶ್ವೋ ತ್ಪತ್ತಿ ಸ್ಥಿತಿಲಯ ಕರ್ತ ಪರಿಪರಿ ಜೀವ ಸತ್ತಾದಿ ಭಾಸಕ ನಾಥ ಮುಕ್ತಾಮುಕ್ತ ವಂದಿತ - ಭೂತಿ ಭೂರಿದನಾಂತಾತ್ಮ ಖ್ಯಾತ ಸರ್ವೋತ್ತಮ ಪರತ:ಪರಾಕ್ಷರ ವಿಷ್ಣುಸರ್ವಜ್ಞ 3 ಅಂಬುಜಾಕ್ಷನು ನೀನೇ-ಉಂಬುವೆ ಸರ್ವಸಾರ ತುಂಬಿರುವೆ ಒಳಹೊರಗೆ-ಬೆಂಬಲನು ಜಗಕೆಲ್ಲ ಬಿಂಬ ನೀ ಚಲಿಸೆ ಪ್ರತಿ ಬಿಂಬಾ ನಾ ಚಲಿಸುವೆ ನಂಬಿದೆ ಸಲಹಯ್ಯ-ಕಂಬುಚಕ್ರಾಂಕಿತನೆ ಕುಂಭಿಣೀಪತಿ ಕೃಷ್ಣಕೈಬಿಡೆ ಗೊಂಬೆ ಸರಿನಾಲ್ಲವೇನೈ ಡಿಂಬದೊಳಗಿನ ವೈರಿವೃಂದವು ಹಂಬಲಿಸಲೆಡೆಗೊಡವುಭವ ದೊಂಬಿ ಅಡಗಿಸು ದಕ್ಷಣಾಕ್ಷಿಗ-ಸ್ಥಂಭರೂಪಿಯೆ ಶರಣುಶರಣು ಎನಿಸೈ ನೀಡಿ ವಿಜ್ಞಾನ 4 ಮಂದರೋದ್ಧರ ಗೋವಿಂದ ನಿನ್ನಯ ಮಹಿಮೆ ಇಂದಿರೆಗಾಗದು ಸಾಕಲ್ಯ ತಿಳಿಯೆಸಿದ್ಧವಿದೂ ಛಂದಾ ಛ್ಚಾದಿತ ಗಾತ್ರ-ಬಂಧ ಮೋಕ್ಷಪ್ರದನೆ ಎಂದು ಕಾಂಬೆನೋ ನಿನ್ನ-ಮಂದನಾನಿಹೆ ಜಗದೀ ಸದ್ಮ ಪೂರ್ಣಾನಂದ ನಿನ್ನಯ ನಾಮ ವೃಂದದಿ ಬಂಧಿಸಿಹೆ ಜಗವೆಲ್ಲ ವಿಷ್ಣುವೆ-ಛಂದಬೃಹತೀಪತಿಯೆ ನೀನೈ ನಾಡಿ ಮೆರೆಯುವ ಇಂದಿರಾಪತಿ ಕೃಷ್ಣವಿಠಲನೆ-ನಿಂದು ತೋರುತ ನಿನ್ನ ರೂಪವ 5
--------------
ಕೃಷ್ಣವಿಠಲದಾಸರು
ಶ್ರೀಹರಿ ಸ್ತೋತ್ರ ಪಾಲಿಸೆನ್ನನು ಶ್ರೀ ಹರಿಯೆ ಸಿರಿದೇವಿ ಧೊರೆಯೇ | ಸರಸಿಜಾಸನ ಪಿತನೇ|| ಪ ಪಾರ್ಥಸೂತ ಪನ್ನಗಗಿರಿ ನಿಲಯ ಪವಮಾನ ವಂದ್ಯ | ಶ್ರೀ ಭೂರಮಣನೇ ಸೃಷ್ಟಿಗೊಡೆಯನೆ | ಕ್ಲೇಶ ಕಳೆಯುವ ಕೈಟಭಾರಿ ಕರುಣ ಶರಧಿಯೆ ಅ.ಪ ಬ್ರಹ್ಮಾದಿ ಮನುಜಾಂತ ಶ್ರವಣ ಮನನ ಧ್ಯಾನ ದಿಂದಲೇ ಕಾಂಬೋರು ನಿನ್ನ ರೂಪ ಯೋಗ್ಯತಾನುಸಾರ | ನಿಯಮ ಭಂದ ಮೋಕ್ಷ ಕರ್ತನೆ | ಶಾಂತಿ ಕೈತಿ ಜಯಾ ರಮಣನೀನೇ ಮೋಕ್ಷದಾಯಕ ಮಾಯಾಪತಿಯೇ ಸರ್ವ ಆಶ್ರಯ ಲಕ್ಷ್ಮೀ ರಮಣನೇ ಸಮರು ಅಧಿಕರು ಇಲ್ಲದಂಥಾ | ಸಾರ್ವಭೌಮನೇ ಆದಿಮೂಲನೆ ಅಪ್ರಮೇಯನೆ ಅನಿರುದ್ಧ ಮಾರುತಿ | ಎನ್ನ ಅಪವಳಿಗಳನೆ ತಂದು ಚÉನ್ನವಾಗಿ ನಿನ್ನ ತೋರಿಸಿದ 1 ಸದೋಷಿ ನಾನಹುದೋ ಸಂಕರ್ಷಣ ಮದ್ದೋಷ ಪರಿಹರಿಸೋ ನಿಗಮ ವೇದ್ಯನೆ ನಿನ್ನಧೀನವು ಎಲ್ಲಾ | ವಿಶ್ವ ತೇಜಸ ಪ್ರಾಜ್ಞರೂಪನೇ ಮೂರು ಸ್ಥಿತಿಯಲ್ಲಿ ಮುಖ್ಯ ಪ್ರವರ್ತಕ | ಅಂಡ ಪಿಂಡ ಬ್ರಹ್ಮಾಂಡದಲ್ಲಿ ಒಳ ಹೊರಗೆ ವ್ಯಾಪ್ತನೆ ವಿಶ್ವತೋಮುಖ ವಿಧಿಭವ ನುತ ವಿಚಿತ್ರ ಮಹಿಮ ವಿಭೂತಿರೂಪನೇ ವಾಸುದೇವನೇ ವಾರಿಜಾಸನ ವಂದ್ಯ ವರಾಹನೆ ಇರುವ ತಾ¥ಟಿÀ ಹರಿದು 2 ನಿರ್ಗುಣ ಗುಣ ಭರಿತಾ ನಿನ್ನ ಪರೋಕ್ಷ ಬೇಡುವೆ ಬಹುವಿಧದಿ ಭವದ ಕ್ಲೇಶಗಳ ಬಿಡಿಸೋ ಭಕ್ತವತ್ಸಲ | ಪತಿ ಸನ್ನುತ | ಪರಮ ಹಂಸೋಪಸ್ಯ ತುರ್ಯನೆ ಆತ್ಮ ಅಂತರಾತ್ಮ | ಪರಮ ಆತ್ಮ ಜ್ಞಾನಾತ್ಮ ನೀನೆ | ಕೂರ್ಮ ಕ್ರೋಢ ನರಹರಿ ಮಾಣವಕ | ಮೋದ ಕೊಡುವ ಮುದ್ದು ಬುದ್ಧನೆ | ಕಠಿಣ ಖಳರ ಕಡಿವ ಕಲ್ಕಿಯೆ ಅನಂತ ಗುಣ ಕ್ರಿಯಾ ರೂಪದಲಿ ನೀ ಸ್ವಗತ ಭೇದ ವಿವರ್ಜಿತಾತ್ಮನೇ | ನಿರಂಜನ ನಾರಾಯಣನೇ | ಪತಿ ಪ್ರಭಂಜನ ಪ್ರಿಯ ರಾಗರಹಿತ ರಾಘವೇಂದ್ರ ಸಂಸೇವ್ಯ ನರಹರಿಯೆ | ಅಜನ ತಾತ ಪ್ರಸನ್ನ ಶ್ರೀನಿವಾಸ ಲಕ್ಷ್ಮೀ ಈಶ ಹರಿಯೆ | ಪ್ರಣತಾರ್ತಿಹರ ಪ್ರಮೋದಿ ನೀನೇ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಹರಿದಾಸವೃಂದ ಸ್ತೋತ್ರ ದಾಸವರ್ಯರಿಗೊಂದಿಪೆ ದಾಸವರ್ಯರಿಗೆರಗಿ ಜನ್ಮಾಂತರದ ದೋಷವ ಪರಿಹರಿಸಿಕೊಂಬೆ ಪ ನಾರದ ಮುನಿಹರಿಯಾಜ್ಞ್ಞೆಯಿಂದಲೆ ಪುರಂ - ದರ ದಾಸರಾಗಿಜನಿಸಿದ ದಾ - ನಾರಾಯಣನ ದಿವ್ಯನಾಮದ ಮಹಿಮೆಯ ಮೂರು ಲೋಕಗಳಲ್ಲಿ ಹರಹಿದ 1 ಭಜಿಸುವ ಭಕುತರ ಅಗಣಿತದೋಷವ ನಿಜವಾಗಿ ಪರಿಹರಿಸುವಂಥ ದಾಸ - ಸುಜನ ಪೋಷಕ ದುಷ್ಟಕುಜನ ಕುಠಾರ ಶ್ರಿ ವಿಜಯರಾಯರ ಪಾದಕ್ಕೆರಗುವೆ 2 ಕೋಪರಹಿತಭಕ್ತ ಪಾಪವಿದೂರಕ ಭೃಂಗ ದಾ - ತಾಪ ಸೋತ್ತುಮಭವ ತಾಪನಿವಾರಕ ಗೋಪಾಲದಾಸರಿಗೆರಗುವೆ 3 ಧರಿಯಸುರರ ಉದ್ಧರಿಸಲೋಸುಗ ದಿವ್ಯ ಹರಿಕಥಾಮೃತ ಸಾರಗ್ರಂಥವದಾ - ವಿರಚಿಸುತಙÁ್ಞನಪರಿಹರಿಸಿದಂಥ ಹರಿಭಕ್ತಾಗ್ರಣಿ ಶ್ರೀ ಜಗನ್ನಾಥ 4 ಧರೆಯೊಳು ಹರಿಲೀಲಾಮೃತ ವೃಷ್ಟಿಗರೆಯಲು ಪರಿಪರಿ ಕಥೆಗಳ ರಚಿಸಿದ ದಾ - ವರದೇಂದ್ರ ಮುನಿಗಳ ಪಾದಸಾರಸಭೃಂಗ ಪರನುಸುಚರಿತ ಶ್ರೀ ಪ್ರಾಣೇಶ 5 ಹರಿಭಕ್ತಿ ಮಾರ್ಗವ ಪರಿಪರಿಶಿಷ್ಯರಿ ಗರುಹಿ ಕರುಣದಿಂದುದ್ಧರಿಸಿದ ದಾ - ಪರಮತತಿಮರಕ್ಕೆ ತರಣಿಸ್ವರೂಪ ಶ್ರೀ ಗುರುಪ್ರಾಣೇಶಾರ್ಯರಿಗೆರಗುವೆ6 ಗುರುಪಾದ ಸೇವೆಯ ಪರಿಪರಿಗೈದು ಈ ಧರಿಯೊಳು ಧನ್ಯರೆಂದೆನಿಸಿದ ದಾ - ಹರಿದಾಸ ಕುಲರತ್ನ ಸರುವ ಸದ್ಗುಣ ಪೂರ್ಣ ವರಶ್ರೀಪ್ರಾಣೇಶದಾಸಾರ್ಯ 7 ಗುರುಪ್ರಾಣೇಶರ ಕರಸರಸಿಜ ಸಂಜಾತ ಪರಮಭಾಗವತರೆನಿಸಿದ ದಾ ಮರುತಮತದ ತತ್ವವರಿದಂಥ ಸುಖದ ಸುಂ - ಮೋದ ವಿಠಲರೆಂಬ 8 ಭೂಮಿಯೋಳ್ ವರದೇಶ ವಿಠ್ಠಲನ ನಿಜಭಕ್ತ ಸ್ತೋಮಕ್ಕೆ ಶಿರಬಾಗಿ ನಮಿಸುವೆ ದಾ ಆ ಮಹಾತ್ಮರಪಾದರಜಾದೊಳೆನ್ನನು ದೇವ ನೇಮದಿಂದಲಿ ಹೊರಳಾಡಿಸೊ 9
--------------
ವರದೇಶವಿಠಲ