ಒಟ್ಟು 7932 ಕಡೆಗಳಲ್ಲಿ , 127 ದಾಸರು , 4530 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಡಿ ಕೇಶವ ಕೃಷ್ಣ ನಾರಾಯಣನ ಮಾಧವ ಗೋವಿಂದ ವಿಷ್ಣುನ್ನ ಕಡಲಶÀಯನನಾದ ತಕ್ಕೊ ಮಧುಸೂದನನ ಕಡುಬ್ಯಾಗದಲಿ ತಾರೆ ತ್ರಿವಿಕ್ರಮನ ಜೋ ಜೋ 1 ವಾಮನ ಶ್ರೀಧರ ಹೃಷಿಕೇಶÀನ ಕಾಮಿಸಿ ನೀ ಕೊಳ್ಳೆ ಪದ್ಮನಾಭನ್ನ ದಾಮೋದರ ಶ್ರೀ ಸಂಕರುಷಣನ ಕೋಮಲಾಂಗಿ ತಾರೆ ವಾಸುದೇವನ್ನ ಜೋ ಜೋ 2 ಅನಿರುದ್ಧ ಪುರುಷೋತ್ತಮನ ಅಧೋಕ್ಷಜ ನಾರಸಿಂಹಾಚ್ಯುತನ ಸದ್ಯೋಜನಾದರ್Àನ್ನ ಕೊಂಡು ಉಪೇಂದ್ರನ್ನ ಸದ್ಯ ತಾರ್ಹರಿ ಭೀಮೇಶಕೃಷ್ಣನ ಜೋ ಜೋ 3
--------------
ಹರಪನಹಳ್ಳಿಭೀಮವ್ವ
ಹಿಡಿಯಬೇಕು ಶ್ರೀ ಕೃಷ್ಣನ ತುಡುಗತನವ ಧ್ರುವ ಕಡಿಯಗುಡದೆ ವೈವನು ಕೆನಿಮೊಸರ ತುಡುಗತನವನು ಮಾಡುವ ಬಲು ಹೆಸರ ಅಡಗಿಹ ಠಾವನೆ ತಾನುಸರ ಮಾಡಿ ತಾ ಕುಸರ 1 ಬಿಡಬಾರದು ಕಣ್ಣಿಲೆ ಕಟ್ಟಿ ಬಿಡಿಸಿಕೊಂಬುವ ಇವ ಬಲು ಜಗಜೆಟ್ಟಿ ಅಡಗಿಸಿಕೊಬೇಕು ಘಟ್ಟಿವಿಡಿದು ಮನಮುಟ್ಟಿ 2 ಸಾಧಿಸಿ ಸದ್ಗುರುದಯ ಕರುಣದಲಿ ಭೇದಿಸಿ ಹಿಡಿಯೊ ಮಹಿಪತಿ ಸುಮನದಲಿ ಒದಗಿಟ್ಟುಕೊ ನೀ ಹೃದಯದಲಿ ಇದೇ ನೋಡನುದಿನಲಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಿಡಿಯೊರಂಗಯ್ಯ ಉಡುಗೊರೆಕೊಡುವೆವೊ ಕೃಷ್ಣಯ್ಯಭಿಡೆ ಬ್ಯಾಡೊ ಬೆತ್ತಲಿದ್ದಿಇದೇನು ಸಡಗರ ರಂಗಯ್ಯ ಪ. ನೀಲ ದೊಡ್ಯಾಣನಿಟ್ಟುಮ್ಯಾಲೆ ಉಂಗುರವು ಮೊದಲಾಗಿಮ್ಯಾಲೆ ಉಂಗುರವು ಮೊದಲಾಗಿ ತಂದೆವಬಾಲ ಕೃಷ್ಣಯ್ಯನ ಜನಕಗೆ ಉಡುಗೊರೆ 1 ಶೌರಿ ಕೃಷ್ಣಯ್ಯನ ಜನನಿಗೆಶೌರಿ ಕೃಷ್ಣಯ್ಯನ ಜನನಿ ದೇವಕಿಗೆಕುವರಿಯರು ಕೊಟ್ಟ ಉಡುಗೊರೆ2 ಹಲವು ಸೂರ್ಯರ ಬೆಳಕು ಗೆಲವೊ ಪಿತಾಂಬರ ಬೆಲೆಯಿಲ್ಲದಂಥ ಮುಕುಟವುಬೆಲೆಯಿಲ್ಲದಂಥ ಮುಕುಟ ಮುತ್ತಿನ ಹಾರ ಬಲರಾಮನಿಗೆ ಉಡುಗೊರೆ3 ಬಿಳಿ ಬಣ್ಣದ ಸೀರೆರನ್ನ ಮಾಣಿಕದಾಭರಣಹೊನ್ನೋಲೆ ಕೊಪ್ಪು ನಡುವಿಟ್ಟುಹೊನ್ನೋಲೆ ಕೊಪ್ಪು ನಡುವಿಟ್ಟು ತಂದೆವ ಕನ್ನೆ ರೇವತಿಗೆ ಉಡುಗೊರೆ 4 ಸಕಲಾತಿ ಸೀರೆ ದೋರೆ ಕಂಕಣ ಸರಿಗೆ ಹಾರ ಪದಕಗಳ ನಡುವಿಟ್ಟುಹಾರ ಪದಕಗಳ ನಡುವಿಟ್ಟು ರಾಮೇಶನನೂರು ಮಂದಿಗೆ ಉಡುಗೊರೆ 5
--------------
ಗಲಗಲಿಅವ್ವನವರು
ಹಿಂಡು ಕರ್ಮಗಳ್ಯಾಕೆ | ಬಂಡಿ ದೈವಗಳ್ಯಾಕೆಪಂಡರಿ ದೊರೆಯು ಇರಲು ಪ ಪುಂಡರೀಕಾಕ್ಷ ಪದಬಂಡುಣಿಯವೋಲ್ ತುತಿಸಲಿಲ್ಲಾ | ಬಲ್ಲಾ 1 ಕಂಬು ಸಾರಥಿ ಕೃಷ್ಣಚರಿತೆಗಳ ಪೊಗಳುತಿರಲೋ | ಕೇಳೋ 2 ಇಂದು ಭಾಗದಿ ಭಕ್ತಸಂದಣೀಯಲಿ ಸೇರುತಾ |ತಂದೆ ತಾಯಿಯ ಸೇವೆ | ಮುಂದು ಮಾಡಿದಗೊಲಿದುನಿಂದು ಇಟ್ಟಿಗೆ ಮೆಟ್ಟಿಹಾ |ನಂದ ನಂದನ ಗುರೂ ಗೋ | ವಿಂದ ವಿಠಲನವಂದಿಸೆಲೊ ಮುದದಿ ಸತತಾ | ವಿತತಾ 3
--------------
ಗುರುಗೋವಿಂದವಿಠಲರು
ಹಿತ ನೋಡೀ ಮಾಡಿ ಸುಜನರ | ಪಥವನೆಕೂಡಿ ಪ ಗುರುವಿಗೆ ಬಾಗಿ ಶರಣವ ಹೋಗಿ | ತರಳತೆ ನೀಗಿ ಅರಹುತರಾಗಿ 1 ಭ್ರಾಂತರಕೂಡಿ ಮತಿಗಳ ಬ್ಯಾಡೀ | ಸಂತರೊಳಾಡಿ ಅನಂತನ ಪಾಡಿ 2 ಸಂಧಿಸಿ ತಂದ ಸುಕೃತಗಳಿಂದ | ಹೊಂದುವವೆಂದೇ ನರದೇಹ ಮುಂದೆ 3 ವಿವೇಕದಿಂದಾ ವಿಡಿರಿದೆ ಛಂದಾ | ಅವನಿಲಿ ಬಂದಾ ಜನುಮಕ ಛಂದಾ 4 ಗುರುಮಹಿಪತಿಯಾ ಚರಣದ್ವಿತಿಯಾ | ವರಿಸಿ ಮುಕುತಿಯಾ ಪಡೆವದು ಗತಿಯಾಜ್ಞ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿಂದೂ ದಾಸ ಇಂದೂ ದಾಸ ಮುಂದೆ ಎಂದೆಂದಿಗೂ ಅರ- ವಿಂದನಾಭ ವಿಠಲನೆ ಗತಿಯೋ ನೀ ಅವನ ದಾಸ ಪ ಬಂಧನದಿ ಬಳಲಿದಿ ಬಂದ ದುಃಖವ ನಾಶಿಸಿ ಹೊಂದಿದಿ ಶ್ರೀ ಹರಿಪಾದ ದಾಸ್ಯವಾ ಮಂದಿರವನ್ನಗಲಿದಿ ಮೂತಿ ಯಾಕೋ ಭವದ ಭೀತಿ1 ಹುಟ್ಟಿದಿ ಹರಿಮತದಿ ಇಟ್ಟ ಹರಿಚಿನ್ಹೆಫಾಲದಿ ಮುಟ್ಟಿ ಭಜಿಸೆಲೋ ದಿಟ್ಟ ಕೃಷ್ಣನ್ನಾ ಇಟ್ಟ ಕಲ್ಲಮೇಲೆ ಪಾದವಿಟ್ಟ ವಿಠ್ಠಲನು ಪೊರೆವಾ 2 ಶಿರಿವರ ನರಸಿಂಹವಿಠ್ಠಲ ಕರುಣದಿ ಪೇಳಿದಾ ನಿನಗೆ ಮರೆಯದೆ ಸೇವಿಸೋ ಹರಿಮೂರ್ತಿಯಾ ಮೂರ್ತಿ ನಿರುತ ಸೇವೆಯ ಕೈಕೊಳ್ಳುವಾ 3
--------------
ನರಸಿಂಹವಿಠಲರು
ಹಿರಣ್ಯಕಶ್ಯಪವೈರಿ ಮುರದಾನವವಿದಾರಿ ದುರಿತರೋಗ ನಿವಾರಿ ಪಾಹಿ ನೃಹರಿ ನಖಮುಖಮಹಾಯುಧ ಅಖಿಲ ಸಂಪತ್ಪ್ರದ ನಿಖಿಲ ಲೋಕಾಧೀಶ ಭಕ್ತಪೋಷ | ನೃಪಂಚಮುಖದೇವ ಸುಪವಿತ್ರ ಶ್ರೀಧವ | ಕೃಪಾರ್ಣವ ಕೇಶವ ಸುಪ್ರಭಾವ | ಘೋರ ವಿಕ್ರಮರೂಪ ವೈರಿ ಭಂಜನಕೋಪ | ಸಾರಸುಗುಣ ಕಲಾಪ ವಿಜಿತತಾಪ ವೇದವೇದ್ಯಸುಭದ್ರ ತರಳೆವರದ ಸಾಧುಸಮ್ಮತಚರಿತ ಸಿದ್ಧಿದಾತ ಕ್ಷುದ್ರದೈದ್ಯವಿನಾಶ ಚಿದ್ವಿಲಾಸ ಭದ್ರಶೇಷಾದ್ರೀಶ ಶ್ರೀನಿವಾಸ
--------------
ನಂಜನಗೂಡು ತಿರುಮಲಾಂಬಾ
ಹುಚ್ಚು ಹಿಡಿಯಬೇಕು ಭಜನೆಯ ರಚ್ಚೆ ತೊಡಗ ಬೇಕು ಪ [ಮೆಚ್ಚುತ] ಅಚ್ಯುತನಾಮವ ಉಚ್ಚರಿಸುತಲಿರೆ ಕಿಚ್ಚೂ ಮಂಜಹುದು ಅ.ಪ ನೇರುತಲಿರಬೇಕು ಊರುಹೆಜ್ಜೆಗೂ ನಾರಾಯಣ ನಾಮೋ ಚ್ಚಾರದ ಹಸಿವು ಬಾಯಾರಿಕೆಯಾಗುವತನಕ 1 ಕೀರ್ತನೆಯಲಿ ಮುಳುಗಿ ಕೃಷ್ಣನ ಮೂರ್ತಿಯ ಕಾಣುತಲಿ ಪಾರ್ಥಸಾರಥಿಯವ ಅನಾಥರಕ್ಷಕನೆಂಬ ಕೀರ್ತಿಯನಾಂತ ಮಾಂಗಿರಿಯ ಭಜನೆಯಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹುಚ್ಚು ಹಿಡಿಯಿತು ಎನಗೆ | ಹುಚ್ಚು ಹಿಡಿಯಿತು ಪ ಸ್ವಚ್ಛ ಭಾಗವತವ ಕೇಳಿ | ಅಚ್ಯುತನ್ನ ಮಹಿಮೆ ಎಂಬಮೆಚ್ಯಮದ್ದು ಶಿರಕೆ ಏರಿ | ಹುಚ್ಚು ಹಿಡಿಯಿತು ಅ.ಪ. ಶ್ರವಣ ಸ್ತವನ ಸ್ಮರಣೆ ಸೇವೆ | ಅವನ ಅರ್ಚನೆ ವಂದನೆ ಸಖ್ಯಅವ ದಾಸ್ಯ ಆತ್ಮ ಅರ್ಪಣ | ನವವು ವಿಧದ ಭಕ್ತಿಗಳಿಪ 1 ಸಪ್ತ ದಿನದ ಕ್ಲುಪ್ತಿಯಿಂದ | ಸರ್ಪಶಯನ ಮಹಿಮೆ ಶ್ರವಣಶೃತಿ ಬಧಿರ ವಾಯ್ತು ಆತ್ಮ | ರಿಕ್ತ ವಿಷಯ ಶ್ರವಣಕೆಲ್ಲ 2 ಸ್ತವನ ಮಾಳ್ಪ ಶುಕರ ದೇಹ | ಭವಣೆ ಮರೆತು ಕೀರ್ತಿಸಿದರುಅವರ ಕಂಡು ಲೋಕವಾರ್ತೆ | ಸ್ತವನ ಗೈವರ ದೂಡುವಂಥ 3 ಹರಿಯ ಸ್ಮರಿಸಿ ಪ್ರಹಲ್ಲಾದ | ಹರಿಯ ಕಂಡು ಭವವ ಗೆದ್ದಸ್ಮರಿಸಿ ಸ್ಮರಿಸಿ ಅದನ ನಾನು | ನರರ ನಡುವೆ ಮೂಕನಾಗ್ದ 4 ನಿತ್ಯ ಮಾಳ್ಪ ಹರಿಯ ಸೇವೆಅರ್ತುಸಂತರ ಸೇವೆ ವ್ಯತಿ | ರಿಕ್ತಕೆಲ್ಲ ಪ್ರತಿಯ ಭಟಿಪ 5 ಅಂಬೆ ರಮಣನರ್ಚಿಸೀದ | ಕುಂಬಾರ ಭೀಮನ ಕೇಳಿ ನಾನುಅಂಬುಜಾಕ್ಷನರ್ಚನೆಗಲ್ಲದ | ತುಂಬಿದ್ವ್ಯೊಭವ ಚೆಲ್ಲುವಂಥ 6 ಕೃಷ್ಣ ವಂದನ ಅಕ್ರೂರ ಗೈದು | ಸುಷ್ಠು ಹರಿಯ ರೂಪ ಕಂಡಜಿಷ್ಣು ಸಖನ ನಮಿಸದವರ | ಭ್ರಷ್ರ್ರರೆಂದು ಬೈಯ್ಯುವಂಥ 7 ನಿತ್ಯ ನೆನೆಯದವರ | ಕ್ಷಣವು ಅವರ ಸಂಗಜರಿವ 8 ಪಾರ್ಥ ಸಖ್ಯತನದಿ ಪರಮ | ಅರ್ಥ ಪಡೆದುದನ್ನ ಕೇಳಿನಿತ್ಯ ಸಖನ ಮರೆತ ಜನರು | ವ್ಯರ್ಥರೆಂದು ಅರ್ಥಿಲಿ ನಗುವ9 ಭೃತ್ಯ ಬಲಿಯು ತನ್ನನಿತ್ತಸತ್ಯ ವಾರ್ತೆ ಕೇಳಿ ಕೇಳಿ | ಪ್ರವೃತ್ತಿ ಗೈದಿನ್ಯತ ನೆದಿ 10 ನಿಚ್ಚ ಗುರು ಗೋವಿಂದ ವಿಠಲ11
--------------
ಗುರುಗೋವಿಂದವಿಠಲರು
ಹುಟ್ಟಿ ಹುಟ್ಟಿ ಹೊಂದಲಾರೆನಯ್ಯ ಕೃಷ್ಣನೆ ುೀಕಷ್ಟವನ್ನು ಬಿಡಿಸಿ ಕಾಯಬೇಕು ಕೃಷ್ಣನೆ ಪಇಷ್ಟು ದಿವಸ ನಿನ್ನನರಿಯದಿದ್ದೆ ಕೃಷ್ಣನೆ ನೀನುದ್ಟೃುಟ್ಟು ಹುಟ್ಟದಂತೆ ಮಾಡು ಕೃಷ್ಣನೆಅ.ಪಗರ್ಭದೊಳು ನವಮಾಸ ಸಿಕ್ಕಿ ಕೃಷ್ಣನೆ ನೊಂದೆನರ್ಭಕತ್ವದಲ್ಲಿ ಮುಗ್ಧನಾದೆ ಕೃಷ್ಣನೆನಿರ್ಬಂಧವಾುತು ವಿದ್ಯದಲ್ಲಿ ಕೃಷ್ಣನೆ ಮತ್ತೆನಿರ್ಭರದ ಪ್ರಾಯದಲ್ಲಿ ಬೆರೆತೆ ಕೃಷ್ಣನೆ 1ಮದಗಳೆಂಟರಿಂದ ಮೈಯ ಮರೆತೆ ಕೃಷ್ಣನೆ ಬೇಗಹುದುಗಿ ಕ್ಲೇಶವೈದರಲ್ಲಿ ಬಿದ್ದೆ ಕೃಷ್ಣನೆವೊದಗಿ ಪಾಶವೆಂಟರಿಂದ ಬಿಗಿದೆ ಕೃಷ್ಣನೆ ಹಮ್ಮುಇದಕೆ ಮೂಲವಾುತು ಕರ್ಮದಿಂದ ಕೃಷ್ಣನೆ 2ಅರಿಗಳರುವರಿಂದ ಕೊರಗುತಿಹೆನು ಕೃಷ್ಣನೆ ಮುಂದನರಿಯದವರ ಸಂಗವನ್ನು ಮಾಡಿ ಕೃಷ್ಣನೆಉರುಳಿಬಿದ್ದೆ ವಿಷಯಕೂಪದಲ್ಲಿ ಕೃಷ್ಣನೆ ುದನುಪರಿವ ಶಕ್ತಿಯನ್ನು ಕಾಣೆನಯ್ಯ ಕೃಷ್ಣನೆ 3ಮಾಯಾಕಾರ್ಯ ದೇಹವೆನ್ನದೆಂದು ಕೃಷ್ಣನೆ ಅದುಹೇಯವೆಂದು ಕಾಣದಾದೆನಯ್ಯ ಕೃಷ್ಣನೆ ನೋಯದಂತೆ ಪೋಷಣೆಯ ಮಾಡಿ ಕೃಷ್ಣನೆ ುೀಗ ನೋಯಲಾಗಿ ಭಯವು ಜನಿಸಿತಯ್ಯ ಕೃಷ್ಣನೆ 4ಹರಿವ ನದಿಯ ನಡುವೆ ಪರ್ಣ ಸಿಕ್ಕಿ ಕೃಷ್ಣನೆ ಸುಳಿಯಬೆರಸಿ ತಡಿಯ ತಾನು ಸೇರದಂತೆ ಕೃಷ್ಣನೆಕುರುಡ ಕೂಪವರಿಯದುರುಳುವಂತೆ ಕೃಷ್ಣನೆ ಕಾಲಶರಧಿಯಲ್ಲಿ ಮುಳುಗಿ ನೆಲೆಯ ಕಾಣೆ ಕೃಷ್ಣನೆ 5ಇರುಹೆ ಕಡೆಯು ಬ್ರಹ್ಮನಾದಿಯಾಗಿ ಕೃಷ್ಣನೆ ಲೋಕಮರುಳುಗೊಂಡು ಮಾಯೆುಂದ ಮರುಗಿ ಕೃಷ್ಣನೆ ಕೊರಗುತಿದೆ; ಮಾಯೆಯನ್ನು ದಾಟಿ ಕೃಷ್ಣನೆ ಬೇಗಪರಮನೊಳು ಬೆರೆಸಿ ಕೊರಗ ಬಿಡಿಸು ಕೃಷ್ಣನೆ 6ರಜ್ಜು ಸರ್ಪನಾಗಿ ತೋರಿ ಬೆದರೆ ಕೃಷ್ಣನೆ ಅದರಬೆಜ್ಜರವ ಪರಿವ ಮಂತ್ರವುಂಟೆ ಕೃಷ್ಣನೆರಜ್ಜುವೆಂದು ತಿಳಿವುದೊಂದೆ ಮಂತ್ರ ಕೃಷ್ಣನೆ ಹಾಗೆರಜ್ಜು ಸ್ಥಾನ ನಿನ್ನ ನಿಜವ ತೋರು ಕೃಷ್ಣನೆ 7ಕರ್ಮವೆ ಜನ್ಮಕ್ಕೆ ಹೇತುವೆನಲು ಕೃಷ್ಣನೆ ಅಂದುಬ್ರಹ್ಮವತ್ಸಪಾಲರಪಹರಿಸೆ ಕೃಷ್ಣನೆಕರ್ಮವಿತ್ತೆ ಬದುಲ ನಿರ್ಮಿಸಲು ಕೃಷ್ಣನೆ ಹಾಗೆಕರ್ಮವೆನ್ನದೀಗಲೆನ್ನ ಸಲಹು ಕೃಷ್ಣನೆ 8ದುರಿತ ದುಃಖದಿಂದ ನೋವ ಜನರ ಕೃಷ್ಣನೆ ಅವರದುರಿತಗಳ ನೂಕಿ ನಿನ್ನೊಳಿರಿಸು ಕೃಷ್ಣನೆತಿರುಪತೀಶ ದೇವ ವೆಂಕಟೇಶ ಕೃಷ್ಣನೆ ಮಾಯಾತೆರೆಯ ತೆಗೆದು ನಿನ್ನ ನಿಜವ ತೋರು ಕೃಷ್ಣನೆ 9ಓಂ ಸತ್ಯಸಂಕಲ್ಪಾಯ ನಮಃ
--------------
ತಿಮ್ಮಪ್ಪದಾಸರು
ಹುರುಡು ನಿನಗೆ ಥರವೇನೊ ಸ್ವಾಮಿ ಗರುಡವಾಹನ ಸುರಧೇನು ಪ. ಕುರುಡ ಕಾಣದೆ ಕೂಪದಲಿ ಬಿದ್ದರೆತ್ತದೆ ಮೊರಡುತನದಿ ಮುಖ ನೋಡುತ ನಗುವಂಥ ಅ.ಪ. ಜ್ಞಾನಮಾರ್ಗವ ಕಾಣದಿರುವ ದೀನ ಮಾನವನಿಗೆ ಮೋಹಭರವ ತಾನೆ ಕಲ್ಪಿಸಿ ತತ್ವದಿರುವ ಮುಚ್ಚಿ ನಾನಾ ಯೋಗಿಗಳಲ್ಲಿ ತರುವ ಮಾನವು ಸರಿಯೆ ಮಹಾನುಭಾವ ನಿನ್ನ ದೀನ ಬಂಧುತ್ವಕೆ ಹಾನಿ ಬಾರದೆ ಕೃಷ್ಣ 1 ಇಂದ್ರಿಯಾರ್ಥ ಸನ್ನಕರ್ಷವೆಂಬ ಬಂಧನದಲ್ಲಿ ಸಿಕ್ಕಿ ಬೀಳ್ವ ನಾನಾ ತಂದ್ರ ಸಾಗರ ಮುನಿಗಳ ಬಹು ಮಂಜನು ಮಾಯೆಯ ಗೆಲ್ವ ಹೊಂದಿಕೆಯನು ಸುಖ ಸಾಂದ್ರ ನೀನರಿಯೆಯ ಇಂದ್ರಾದಿಗಳನು ಎಂದೆಂದಿಗೂ ಸಲಹುವಿ 2 ಅದರಿಂದ ಸರ್ವಕಾಲದಲಿ ನೀನೆ ಒದಗಿ ಪೊಳೆವುತ್ತ ಮನದಲಿ ಪದಯುಗವಿರಿಸಿ ಶಿರದಲಿ ದಾಸಪದವ ಪಾಲಿಸು ಕರುಣದಲಿ ಭವ ವಂದ್ಯ ವೆಂಕಟಗಿರಿನಾಯಕ ಪದುಮಾಲಯೆ ಕೂಡಿ ಸದನದಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹೂ ಬೇಕೆ ಹೂವು ಪರಿಮಳದ ಹೂವು ಪ ಪರಮ ಪುರುಷ ನಮ್ಮ ಕೃಷ್ಣನ ತೋಟದ ಅ.ಪ ಮಲ್ಲಿಗೆ ಸಂಪಿಗೆ ಜಾಜಿ ಸೇವಂತಿಗೆ ಮಲ್ಲೆ ಗುಲಾಬಿ ತಾವರೆ ಪಾರಿಜಾತ ಎಲ್ಲ ವಿಧದ ಮನಕ್ಲೇಶವ ಕಳೆಯಲು ಪುಲ್ಲಲೋಚನ ನಮ್ಮ ಕೃಷ್ಣನು ಧರಿಸಿದ 1 ದಾರದಿ ಕಟ್ಟಿಲ್ಲ ಮಾರು ಹಾಕುವುದಿಲ್ಲ ಕೇರಿ ಕೇರಿಗಳಲ್ಲಿ ಮಾರುವುದಲ್ಲ ಭೂರಿಭಕುತಿ ಎಂಬ ಭಾರಿಯ ಬೆಲೆಗಿದ ಮಾರೆಂದು ಪೇಳಿದ ಶೌರಿಯ ಸೊಬಗಿನ2 ರಂಗು ರಂಗುಗಳಿಂದ ಕಂಗೊಳಸುವ ಸ್ವಚ್ಛ ಬಂಗಾರದ ಛವಿ ಹಂಗಿಸುವ ಸಿಂಧು ಪ್ರಸನ್ನ ಶ್ರೀ ಮಾಧವ ನಂಘ್ರಿಯ ಸಂಗದಿ ಮಂಗಳಕರವಾದ 3
--------------
ವಿದ್ಯಾಪ್ರಸನ್ನತೀರ್ಥರು
ಹೂವ ಮುಡಿಸಿದ ಸ್ವಾಮಿ ರುಕ್ಮಿಣಿ ಭಾಮೇರಿಬ್ಬರಿಗೆ ರಂಗಯ್ಯ ಪ ಬಂದು ರುಕ್ಮಿಣಿ ಭಾಮೇರಿಂದತಿ ಸಂಭ್ರಮ್ಮದಿಂದ ರಂಗಯ್ಯ ಕುಂದಣದ ಹಸೆಮ್ಯಾಲೆ ಕುಳಿತಿರೆ ಚೆಂದದಲಿ ನಗುತ ಚಂದ್ರವದನ ತಾ ಚತುರ್ಭುಜದಿಂದಲಿ ಅಂಗನೆಯರ ಆಲಿಂಗನೆ ಮಾಡುತ 1 ಹೂವ ಮುಡಿಸುತ ವಾರಿಜಾಕ್ಷೇರ ವಾರೆನೋಟದಿ ನೋಡಿ ನಗುತ ರಂಗಯ್ಯ ಸಾರಸಮುಖಿ ಸಹಿತ ಸರಸ- ವಾಡುತ ನಾರದರು ನಮ್ಮಿಬ್ಬರ ಕದನಕೆ ಹೂಡಿದರೆ ಹುಚ್ಚಾದಿರೆಂದೆನುತ 2 ಮಲ್ಲೆ ಮಲ್ಲಿಗೆಮೊಗ್ಗು ಶಾವಂತಿಗೆ ಕಮಲ ರಂಗಯ್ಯ ಅರಳು ಮೊಗ್ಗುಗಳು ಝಲ್ಲೆ ಕುಸುಮಗಳು ಎಲ್ಲ ತನಕೈಯಲ್ಲಿ ಪಿಡಿದು ಚೆಲ್ವ ಭೀ- ಮೇಶ ಕೃಷ್ಣ ರುಕ್ಮಿಣಿಗೆ 3
--------------
ಹರಪನಹಳ್ಳಿಭೀಮವ್ವ
ಹೂವ ಮುಡಿಸಿರೆ ಮುಡಿಗ್ಹರಸುತಲಿ ಮುತ್ತೈದೆಯಾಗೆನುತ ಹೂವ ಮುಡಿಸಿರೆ ಮುಡಿಗ್ಹರಸುತಲಿ ಪ ಮರುಗ ಮಲ್ಲಿಗೆ ಜಾಜಿ ಸುರಗಿ ಶಾವಂತಿಗೆ ಸುರಪಾರಿಜಾತ ಸಂಪಿಗೆ ಸತ್ಯಭಾಮೆಗೆ 1 ಸುರಪಾರಿಜಾತ ಪುನ್ನಾಗ ಪುಷ್ಪಗಳ 2 ಹೆರಳು ಬಂಗಾರ ರಾಗಟೆ ಗೊಂಡ್ಯ ಕ್ಯಾದಿಗೆ ಅರಳು ಮಲ್ಲಿಗೆಯ ಭೀಮೇಶಕೃಷ್ಣನ ಸತಿಗೆ3
--------------
ಹರಪನಹಳ್ಳಿಭೀಮವ್ವ
ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀ- ವತ್ಪಿತಾಮಹ ಜನಕನೇಪ ಮೃತ್ಪಿಂಡದಂತೆನ್ನ ಉತ್ಪತ್ತಿಗೆ ಕ- ಣ್ಣೆತ್ತಿ ನೋಡಲರಿಯಾ ಜೀಯಾ ಅ.ಪ ನಿತ್ಯ ನಿತ್ಯ ಜಗವೆಲ್ಲವು ನಿತ್ಯವು ನಿತ್ಯತ್ವವೆಲ್ಲ ಸರಿಯೇ ಏನಿದ್ದರೇನು ಅನಾದಿಕರ್ಮದ ಬವಣೆ ಬೆನ್ನಟ್ಟಿ ಬರುತಿರ್ಪುದ- ಜ್ಞಾನಾಂಧಕಾರದಿಂ ಧ್ಯಾನವನು ತಿಳಿಯದೇ ಕಾನನದೊಳಿಪ್ಪೆನೋ ಜ್ಞಾನಗಮ್ಯನೆಂದು ಸಾರುತಿದೆ ಶ್ರುತಿ ಶಾಸ್ತ್ರ ಜ್ಞಾನಗುರು ದೊರೆತಿಲ್ಲವೋ ಸಾನುರಾಗದಿ ನೀನೆ ಸಾಧನಕೆ ಕರುಣಿಸಿ ಧ್ಯಾನದಲಿ ಮನಸು ನಿಲಿಸೋ ಉಳಿಸೋ 1 ಬಂಧ ಮೋಕ್ಷಕೆ ಎಲ್ಲ ಮನವೆ ಕಾರಣವೆಂದು ಎಂದೆಂದಿಗು ಪೇಳುತಿಹರು ಸಿಂಧುಶಯನನೆ ಭವಬಂಧಮೋಚಕನೆಂದು ವಂದಿಸಿ ಪೊಗಳುವರೊ ಮಂದರೊದ್ಧರ ನಿನ್ನ ಮಂದಮತಿಯಿಂದಲಿ ವಂದಿಸಲು ನಾನರಿಯೆನೊ ಕಂದರ್ಪಜನಕ ನೀ ಮಂದಭಾಗ್ಯನ ಮನವ ನೋಯಿಸದೆ ನಿನ್ನ ಪದದಲ್ಲಿರಿಸೊ ಅಂದೆ ಎನ್ನಯ ಭವಬಂಧನಾಶವಾಗುವು- ದೊಂದೆ ನಿನ್ನನು ಬೇಡುವೆನೊ ಜೀಯ 2 ಜೀವರೆಲ್ಲರು ಗುಣತ್ರಯಾವರಣದಿಂದ ಕರ್ಮ- ಪ್ರವಹದೊಳಿಪ್ಪರೊ ಕವಿಸಿ ಮೋಹವ ನೀನು ಭವಕೆ ಕಾರಣವಹುದು ದೇವೇಶ ನಿನ್ನಾಟವೋ ಶ್ರವಣದಿಂದಲಿ ಭವಬಂಧಮೋಚಕನೆಂದು ತವ ಬಿರುದು ಸಾರುತಿದೇಕೋ ಭಾವ ಬಲ್ಲವರಾರೋ ಕಾವ ಕರುಣಿ ನೀನೆ ಭಾವಜನ ಪಿತನು ಅದೇ ಭವಪಾಶ ಬಿಡಿಸೆ ನಾ ಭಕುತಿಪಾಶದಿಂದ ಪಾದ ಬಿಗಿವೆನಯ್ಯ ಜೀಯ 3 ಸ್ವಾತಂತ್ರ್ಯವೆಲ್ಲಿಹುದು ಸ್ವಾಮಿತ್ವವೆಲ್ಲಿಹುದು ಅ- ಸ್ವತಂತ್ರನಾಗಿಪ್ಪೆನೊ ಕಾತುರದಿ ನಾ ಮಾಳ್ಪ ಕ್ರಿಯೆಗಳೆಲ್ಲವು ಎನ್ನ ಸ್ವಾತಂತ್ರ್ಯವೆಂದ್ಹೇಳುವೆ ನೀ ತಂತ್ರಿಯಾಗಿದ್ದೆನ್ನ ನಡೆಸುವುದನರಿಯೆ ಕು- ತಂತ್ರವನು ನಾ ಮಾಡುವೆ ಸ್ವಾ- ತಂತ್ರನು ನೀನು ಸೂತ್ರನಾಮಕ ದೇವ ಮಂತ್ರಿಯಾಗೀದೇವ ಯಂತ್ರ ನಡೆಸುವ ಎಂತಾದರಡಿಗಡಿಗೆ ಅತಂತ್ರನಾಗಿಹೆ ನಾನೇ ಭ್ರಾಂತಿಪರಿಹರಿಸಿ ಕಾಯೊ ಶೌರೇ 4 ಭಕ್ತಿ ಇಲ್ಲದೆ ನಿನ್ನ ಭಕ್ತನಾಗುವುದೆಂತೋ ಭುಕ್ತಮಾತ್ರನು ನಾನು ಮುಕ್ತರೊಡೆಯ ನೀನು ಯುಕ್ತಿತೋರಿಸು ಎನಗೆ ಭಕ್ತಾಪರಾಧಸಹಿಷ್ಣು ಶಕ್ತ ನೀನಹುದೊ ವೇದೋಕ್ತ ಮಹಿಮಾತೀತ ಸಕ್ತವಾಗಲಿ ನಿನ್ನ ಪದದಿ ಮನಸು ವ್ಯಕ್ತನಲ್ಲವೊ ಸರ್ವ ಸಾರಭೋಕ್ತನು ನೀನು ಭಕ್ತವತ್ಸಲ ಪುರುಷಸೂಕ್ತಮೇಯ ಅಪ್ರಮೇಯ ಯುಕ್ತಿಮಾತಲ್ಲಿದು ಭಕ್ತಿಪೂರ್ವಕ ನಿನ್ನ ಭಕ್ತ ಶ್ರೇಷ್ಠರ ಸೇವೆ ಕೊಟ್ಟು ರಕ್ಷಿಸೊ ದೇವಾ 5 ನಾದಕ್ಕೆ ಪರನಾಗಿ ವಾದಕ್ಕೆದೊರೆಯೇ ನೀ ವೇದವೇದಾಂತವೇದ್ಯ ಸಾಧನವು ಕಾಣೆ ಸಾಧನಶರೀರವಿದು ಸಾದರದಿ ಕರುಣಿಸಿದೆ ಅನಿರುದ್ಧದೇವ ಬಾಧಿಪುದು ಬಂಧಗಳು ಅನಾದಿಕರ್ಮದಿ ಬಂದು ನಾ ಅಧಮತಮಸಾಧನವನ್ನೆಸಗಿದೆ ನೀ ದಯಾಸಿಂಧು ಎಂದಡಿಗಡಿಗೆ ಬೇಡುವೆನು ಕೃದ್ಧನಾಗದೆ ಇನ್ನು ಉದ್ಧರಿಸು ತಂದೇ ಎಂದೇ 6 ಶಂಖಚಕ್ರಾಂಕಿತನೆ ಮಂಕುಬುದ್ಧಿಯ ಬಿಡಿಸೋ ಅಂಕಿತವೆನಗೆ ಇಲ್ಲ ಅಂಕೆ ಇಲ್ಲವೊ ನಿನ್ನ ನೆನೆಹುದಕೆ ಎಂದಿಗೂ ಶಂಕೆಯ ಪಡುವನಲ್ಲ ವೇಂಕಟಾದ್ರಿಯ ವಾಸ ಶ್ರೀ ವೇಂಕಟೇಶನು ಮಮಕುಲಸ್ವಾಮಿ ದೈವವೆಂದನುದಿನ ಸಂಕಟಾಗಾಮಿಗಳ ಕಂಟಕವ ಹರಿಸಿ ಪದ ಪಂಕಜದಿ ಮನವ ನಿಲ್ಲಿಸೋ ಬಿಂಕದ ಮಾತಲ್ಲ ಪಂಕಜದಳಾಯತಾಕ್ಷ ಅಕ- ಳಂಕಮಹಿಮ ಕಾಯೋ ಜೀಯಾ7
--------------
ಉರಗಾದ್ರಿವಾಸವಿಠಲದಾಸರು