ಒಟ್ಟು 9833 ಕಡೆಗಳಲ್ಲಿ , 131 ದಾಸರು , 5664 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀದೇವಿ 13 ಭಾಗ್ಯವ ಕೊಡು ತಾಯೆ ಪ ಭಾರ್ಗವಿ ನಿನ್ನಯ| ಪದಯುಗಕೆರಗುವೆ| ಭಾಗ್ಯದ ಲಕ್ಷ್ಮೀ ಸೌ| ಭಾಗ್ಯದ ನಿಧಿಯೇ ಅ. ಪ ಸಾಗರಸಂಜಾತೆ| ದೇವಿ| ನಾಗವರದಪ್ರೀತೆ || ಯೋಗಿಜನಾವಳಿ| ಮಾನಸಪೂಜಿತೆ | ಅಗಣಿತಗುಣಮಣಿ| ತ್ರಿಜಗದ್ವಂದಿತೆ 1 ಸುರುಚಿರಸುಮಗಾತ್ರೆ | ದೇವಿ| ಹಿಮಕರನಿಭವಕ್ತ್ರೆ || ಕಿನ್ನರ | ಸುರಮುನಿ ಪೂಜಿತೆ | ಕಾಮಿತವೀಯುವ || ಕರುಣಾಕರೆಯೆ 2 ಜನನಿಯೆ ನಿರತವು ನೀ | ಪ್ರೇಮವ | ನಿರಿಸುತಲೆನ್ನೊಳು ನೀ | ಕನಕದ ವೃಷ್ಟಿಯ | ಕರೆಯುತಲನುದಿನ | ಮನ್ಮನದಿಷ್ಟವು | ಸಿದ್ಧಿಸುವಂದದ 3 ಅಹಿಪತಿ ಶಯನನಿಗೆ | ಮೋಹದ | ಮಹಿಷಿಯು ನೀನಾಗೆ || ಮಹಿಮಾಕರೆ ನೀ | ಮಹಿಯೊಳಗನಿಶವು | ಇಹಪರ ಸುಖವನು | ಭವಿಸುವ ತೆರದಾ 4 ಅಜಭವಸುರವಿನುತೆ | ದೇವಿ | ಸುಜನಾವಳಿಪ್ರೀತೆ || ಗಜವಾಹಿನಿ ವರ | ಮದಗಜಗಮನೆಯೆ | ವಿಜಯವಿಠಲಪ್ರಿಯೆ ಶ್ರೀ ಗಜಲಕ್ಷ್ಮಿಯೆ 5 ಶುಭ | ಮಂಗಳೆ ಸುಪವಿತ್ರೆ || ಮಂಗಳಾಂಗಿ ನರ | ಸಿಂಗನ ರಮಣಿಯೆ | ಮಂಗಳಕಾರ್ಯಗ | ಳನುದಿನವೆಸಗುವ 6 ಪಂಕಜದಳನೇತ್ರೆ | ದೇವಿ | ಕಿಂಕರನುತಿಪಾತ್ರೆ || ಶಂಖಚಕ್ರಾಂಕಿತ | ಶ್ರೀ ವೈಕುಂಠನ |ಅಂಕದಿ ಮೆರೆವಖಿ | ಳಾಂಕ ಮಹಿಮಳೇ 7
--------------
ವೆಂಕಟ್‍ರಾವ್
ಲಕ್ಷ್ಮೀದೇವಿ ಅಂಬೋರುಹೇಕ್ಷಣೆ ಅಂಬಾಲತೇ ಜಗ ದಂಬಾ ಪೊರೆಯೆ ಸತತ ಗಂಭೀರ ಗಜಗಮನೆ ಪ ನಂಬಿದೆ ನಿನ್ನ ಪದಾಂಬುಜಯುಗಳವ ಕಂಬು ಕಂಧರಿ ಕನಕಾಂಬರ ಧಾರಿಣಿ ಬೆಂಬಲವೀಯೆ ವಿಳಂಬವ ಮಾಡದೆ ಅ.ಪ `ಯಂಕಾಮಯೇ'ತ್ಯಾದಿ ಶೃತಿಗಳೆಲ್ಲಾ ಪಂಕಜಭವಮುಖ ಸುಮನಸರು ಕಿಂಕರರೆನ್ನುತ ಪೊಗಳುತಿರೆ ಶಂಕೆಯುಂಟೆ ನಿನ್ನ ಮಹಿಮೆಗಳಲ್ಲಿ ಶ ಶಾಂಕ ಸೋದರಿ ಆತಂಕವ ಬಿಡಿಸೆ 1 ನೀರಜಾತಗಣ ಕೃತ ನಿಲಯೇ ಮಾರಜನಕ ಹರಿ ಪ್ರಿಯ ಜಾಯೆ ಕೋರುವೆ ನಿನ್ನಯ ಪರಮದಯೆ ಸಾರಸಾಕ್ಷಿ ಸರಿಯಾರು ನಿನಗೆ ಕರು ಣಾರಸಮಯೆ ಸುವಿಶಾರದೆ ಜನನಿ 2 ಕನ್ಯೆ ನಿಖಿಲ ಸುರನರರೊಳಗೆ ಮಾನ್ಯೆ ನಿನ್ನ ಪೋಲುವರನ್ಯರುಂಟೆ ನಿನ್ನ ದಾಸನಾದ ಎನ್ನ ಮನೋರಥ ವನ್ನು ತಿಳಿಸೆ ಪ್ರಸನ್ನ ಶ್ರೀ ಹರಿಯಲಿ 3
--------------
ವಿದ್ಯಾಪ್ರಸನ್ನತೀರ್ಥರು
ಲಕ್ಷ್ಮೀದೇವಿ ಸ್ತೋತ್ರ ಎಂದು ಬರುವಳೋ ಗೋ-ವಿಂದನೊಲ್ಲಭೆ ಲಕ್ಷ್ಮೀ ರಂಗನ ಸನ್ನಿಧಿಗೆ ಪ ಮಂಗಳಾಂಗಿ ಸರ್ವಾಂಗ ಬಳಲಿ ಮುಖಕಂದಿ ಕಳೆಗುಂದಿದಂತೆ | ಬಲು ವ್ಯಥೆಯಂತೆ ಅ.ಪ ಶೇಷನ ಶಿಖಿ ಮ್ಯಾಲೆವಾಸುದೇವರು ಲಕ್ಷ್ಮೀ ಸಮೇತರಾಗಿರುತಿರಲುಆ ಸಮಯದಿ ಭೃಗುಮುನಿ ಬಂದು ಕೋ-ಪಿಸೆ ಸೋಕಿಸಿದನು ಪಾದವಾ | ವಕ್ಷ ಸ್ಥಳವಾ 1 ಥಟ್ಟನೆ ಇಳಿದಾಳುಸಿಟ್ಟಿನಿಂದಲಿ ಬಹು ಧಿಕ್ಕಾರ ಮಾಡಿದಳುಲಕ್ಷ್ಮೀರಮಣನೆಂಬೊ ಬಿರುದು ನಿಮಗೆ ಈಹೊತ್ತಿಗೆ ಅಲ್ಲೆಂದಾಳು | ತೆರಳಿದಳು 2 ನಿಲ್ಲದೆ ಪೊರಟಾಳುಫುಲ್ಲಾಕ್ಷಿ ಮನದೊಳು ತಲ್ಲಣಿಸುತಿರಲುವಲ್ಲಭನರಿಯದ ಸ್ಥಳವಿಲ್ಲದಿರೆ ತಾಯಿ ಕೊಲ್ಲಾಪುರಕೆ ಬಂದಾಳು | ನೆಲೆಗೊಂಡಾಳು 3 ಜಾತೆ ಬಾಮಾರನ ಮಾತೆ ಬಾ ವಾರಿಜದಳನೇತ್ರೆ ಬಾಮೂರ್ಲೋಕದೊಳಗೆ ನೀ ಪ್ರಖ್ಯಾತೆ ಬಾರೆಂದು ಶ್ರೀಮ-ನ್ನಾರಾಯಣನೆ ಕರೆಯಲು | ನಸುನಗೆಯೊಳು 4 ಜಯ ಲಕ್ಷ್ಮೀರಮಣಗೆಜಯ ಶ್ರೀನಿವಾಸಗೆ ಜಯ ಮೋಕ್ಷದಾಯಕಗೆಜಯತು ಕೊಲ್ಹಾಪುರದೊಳ್ ನೆಲಸಿದವಳಿಗೆಶ್ರೀದೇವಿಯಳಿಗೆ5 ವೆಂಕಟ ವಿಠಲವೈಕುಂಠಪತಿ ಲಕ್ಷ್ಮೀ ಶಾಂತ ಏಕಾಂತದೊಳುಶಂಖಚಕ್ರಧರ ಸರ್ವಮಂಗಳಕಾರಸಂಚಿತಾಗಮದೂರನು ಮಲಗಿರುವನು6
--------------
ವೆಂಕಟೇಶವಿಟ್ಠಲ
ಲಕ್ಷ್ಮೀದೇವಿಯ ಪ್ರಾರ್ಥನೆ ಶ್ರೀನಿವಾಸನ ಕರುಣಾನು ಸಂಸರಣಿ ಜ್ಞಾನ ಭಕ್ತಿಗಳನ್ನು ಪಾಲಿಸಂಭರಣಿ ಪ. ಅಜಭವಾದಿಗಳಿಗೆ ನಿಜಪದದಾಯಿನಿ ವೃಜಿನ ಸಮೂಹ ನಿವಾರಿಣಿ ಕುಜನ ಕುಠಾರಿಣಿ ಕುಂಜರ ಗಮನೆ ಪಾಲು ದಧಿವಾಸನ ಕೂಡಿ ಸದನದಿ ನೆಲೆಗೊಳ್ಳೆ 1 ಆರಿಗೆ ನಿನ್ನ ಕರುಣಾರಸ ದೊರೆವದೊ ನೀರಜಾಲಯೆ ನಿನ್ನ ಸೇರಿಕೊಂಡಿಹ ಎನ್ನ ವೈರಿ ಜನರು ಬೇಗ ಗಾರಾಗದುಳಿವರೆ 2 ನೀನೊಲಿಯಲೂ ಸರ್ವ ಮಾನವರೊಳಗತಿ ಮಾನ ಮಹತ್ವಾದಿ ಸದ್ಗುಣವೂ ತಾನಾಗಿ ಬರುವವಿಂನೇನೆಂದು ನಿನ್ನ ಮಹಿ- ಮಾನು ವರ್ಣನೆ ಮಾಳ್ಪೆ ದೀನ ದಯಾಕಲೆ 3 ಮಂದಿರದೊಳಗೆ ನೀ ನಿಂದು ನಗುತ ನಲಿ ವಂದ ನೋಡುತ ಮಿತ್ರ ಬಂಧುಗಳು ಮಂದರಧರ ತಾನೆ ನಿಂದು ರಕ್ಷಿಸನೆಂದಾ ನಂದ ಪೂರಿತ ಮನದಿಂದ ಸೇರಿರುವರು 4 ಸರಸಿಜನಾಭ ಶ್ರೀಹರಿಯು ನಿನ್ನನ್ನೆ ಮುಂ ದಿರಿಸಿ ಚತುರ್ವಿಧ ಪುರುಷಾರ್ಥವಾ ಕರುಣಿಪೆನೆಂದು ಕಂಠಸರದ ಮಧ್ಯೂರದಲಿ ಧರಿಸಿ ಶೋಭಿಪ ಶೇಷಗಿರಿವರ ಶಿಖರದಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀನಾಥ ವಿಠಲ | ರಕ್ಷಿಸೊ ಇವನಾ ಪ ಇಕ್ಷುಚಾಪನ ಪಿತನೆ | ಅಕ್ಷರನೆ ದೇವಾ ಅ.ಪ. ನಿತ್ಯ ತೃಪ್ತಾತ್ಮಾಅರ್ಥಿಯಲಿ ಲಕ್ಷ್ಮಿಯನು | ಭಕ್ತಿಯಿಂ ಸೇವಿಸುತಪ್ರಾರ್ಥಿಸುವ ತವಪ್ರೀತಿ | ಲಕ್ಷ್ಮಿವಲ್ಲಭನೇ 1 ಅಪ್ರಮೇಯನ ಪತ್ನಿ | ಲಕ್ಷ್ಮಿಯನೆ ತುತಿಸುತ್ತಸುಪ್ರಸಾದವ ಕೊಂಡು | ಗೃಹಕಾಗಿ ತೆರಳೀಅಪ್ರತಿಮ ಸಂತಸದಿ | ಹರಿಯ ಕೊಂಡಾಡುತ್ತಅಪ್ಪವೆಂಕಟನನ್ನು | ಹಾಡಿ ಹೊಗಳಿದನಾ 2 ವೇದಾಂತ ವೇದ್ಯ ಹರಿ | ವೇದ್ಯವಾಗಲಿ ಇವಗೆಮೋದ ತೀರ್ಥರ ಮತದ | ಸಾದು ತತ್ವಗಳುಹಾದಿಯಾಗಲಿ ಮುಕುತಿ | ಸಾಧನ ಸುಮಾರ್ಗಕ್ಕೆಬಾದರಾಯಣ ದೇವ | ಮಾಧವನೆ ಹರಿಯೆ 3 ಕರ್ಮಮರ್ಮವ ತಿಳಿಸಿ | ದುಷ್ಕರ್ಮ ಪರಿಹರಿಸಿನಿರ್ಮಮನ ಮಾಡಯ್ಯ | ಬ್ರಹ್ಮಾದಿ ವಂದ್ಯಪ್ರಮ್ಮೆಯಂಗಳ ಬೋದ | ಸಲ್ಲಲಿತವಾಗಿರಲಿಅಮ್ಮಹಾ ಪರದೈವ | ಹರಿಯೆಂದು ತಿಳಿಸೊ4 ಅದೈತ ತ್ರಯದರಿವು | ಬುದ್ದಿಗೇ ನಿಲುಕಿಸುತಸಿದ್ಧಾಂತ ಪಥವೆಂಬ | ಹೆದ್ದಾರಿ ನಡಸೋಕೃದ್ಧಬಳಮರ್ದನನೆ | ಮುದ್ದು ನರಹರಿದೇವಅದ್ವಿತೀಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀಪ್ರಿಯ ಕೃಷ್ಣ ಲಕ್ಷ್ಮೀಪ್ರಿಯ ಕೃಷ್ಣ ಲಕ್ಷ್ಮೀಪ್ರಿಯ ಸತ್ಯಭಾಮಾಪ್ರಿಯ ಪ ಗೋವಿಂದ ಮುನಿವಂದ್ಯ ದೇವ ಕೇಶವ ಯೋಗಿ ಭಾವಾಗೋಚರ ಸರ್ವರೂಪ ಶ್ರೀಕೃಷ್ಣ 1 ಪರಮ ಪಾವನ ನಿತ್ಯವರದ ದಾಮೋದರ ಪದ್ಮನಾಭ 2 ನಾರಾಯಣಾಧೋಕ್ಷಜಾನಂತ ಪರಿಪೂರ್ಣ ಶ್ರೀ ರಾಘವೋಪೇಂದ್ರ ಸಂಕರ್ಷಣಾಖ್ಯ 3 ಮಾಧವ ಶ್ರೀ ವಿಷ್ಣೊ ದನುಜಮರ್ದನ ದಿವ್ಯ ರೂಪ ನರಸಿಂಹ 4 ವಾಮನ ಶ್ರೀಧರ ಹೃಷೀಕೇಶ ಶ್ರೀ ಹರೆ ಕಾಮಿತ ಫಲದ ಜನಾರ್ದನ ರಾಮ 5 ವಾಸುದೇವಾಚ್ಯುತ ವಸುದೇವ ನಂದನ ವಾಸುಕಿಶಯನ ತ್ರಿವಿಕ್ರಮ ಭೀಮ 6 ಮಧುಸೂದನಾನಂದಘನ ಪುರುಷೋತ್ತಮಬುಧವಂದ್ಯ ತಿರುಪತಿ ವೆಂಕಟರಮಣಾ 7
--------------
ತಿಮ್ಮಪ್ಪದಾಸರು
ಲಕ್ಷ್ಮೀಪ್ರಿಯರ ಚರಣ ಭಜನೆ ನಿರುತದಿಂದ ಮಾಡುವ ಪ ಲಕ್ಷ್ಮೀಪತಿಯ ಕರುಣ ಪಡೆದು ಹರುಷದಿ ನಾವ್ ಬದುಕುವ ಅ.ಪ ಸದ್ಪೈಷ್ಣವ ಕುಮುದಕಾಭಿ ವೃದ್ಧಿ ತರುವ ಗೋಸುಗ ಮಧ್ವ ಮತಾಬ್ಧಿಯಲ್ಲಿ ಉದ್ಭವಿಸಿದ ಚಂದ್ರರ 1 ವ್ಯಾಸಮುನಿಗೆ ಒಲಿದ ಕೃಷ್ಣನ ಸೋಸಿನಿಂದ ಪೂಜಿಸಿ ವ್ಯಾಸಸೂತ್ರ ಭಾಷ್ಯ ಉಪ ನ್ಯಾಸ ಮಾಡಿ ಮರೆವರ 2 ದೀನ ಜನರ ವೃಂದಕೆ ಸುರ ಧೇನು ಎನಿಪ ಮುನಿವರ ಶ್ರೀ ನರಹರಿಗೆ ತಾವು ಅನುಗರಾಗಿ ಇರುವರ 3
--------------
ಪ್ರದ್ಯುಮ್ನತೀರ್ಥರು
ಲಕ್ಷ್ಮೀರಮಣ ಮರೆಯ ಹೊಕ್ಕೆ ರಕ್ಷಿಸೈ ಪಾಂಡುಪಕ್ಷನೆ ಪ ಪಕ್ಷಿವಾಹನ ದುಷ್ಟಶಿಕ್ಷ ಮೋಕ್ಷದಾಯಕ ಶಿಷ್ಟರಕ್ಷ ಅ.ಪ ತರಳ ಧ್ರುವನ ಪೊರೆದೆಯೆಲೊ ಕರಿಮೊರೆಯ ಕಾಯ್ದಯ್ಯ ಕರುಣದಿ ಕುರುಪ ಸಭೆಯಲಿ ದ್ರೌಪದಿ ಮೊರೆಯನಿಡಲಾಕೆಮಾನವ ಕಾಯ್ದಿ 1 ನರಗೆ ಸಹಯನಾಗಿ ಸಾರ ಧರೆಯ ಗೆಲಿಸಿದಿ ನಿರುತದಿ ಕರವ ಪಿಡಿದಿ ಪರಮ ಪ್ರೇಮದಿ ಒರೆದೆಲೊ 2 ಇಂದು ಎನಗೆ ಸಂಧಿಸಿದ ಮಹ ಬಂಧನವ ನಿವಾರಿಸೈ ಪಾದ ನಂಬಿದೆ ಕಂದನನು ಪೊರೆ ಶ್ರೀರಾಮ3
--------------
ರಾಮದಾಸರು
ಲಕ್ಷ್ಮೀವಲ್ಲಭ ಜಯ ಪಕ್ಷಿವಾಹನ ಜಯಮೋಕ್ಷದಾಯಕನೆ ಜಯ ಜಯ ಪ ಮೋಕ್ಷದಾಯಕನೆ ಮಧುಸೂದನ ಪ-ದ್ಮಾಕ್ಷಗಾರುತಿಯ ಬೆಳಗಿರೇ ಅ.ಪ. ಜಲದೊಳು ಸಂಚರಿಸಿ ಬಲು ಗಿರಿಯ ಧರಿಸಿದಇಳೆಯ ದಾಡೆಯಿಂದ ನೆಗಹಿದಾ ||ಇಳೆಯ ದಾಡೆಯಿಂದ ನೆಗಹಿದ ನರಹರಿ ಚೆಲುವಗಾರುತಿಯ ಬೆಳಗಿರೆ ಶೋಭಾನೆ 1 ಚಿಕ್ಕ ಬ್ರಾಹ್ಮಣನಾಗಿ ಬಲಿಯ ದಾನವ ಬೇಡಿಆಕ್ರಮಿಸಿದನೆ ತ್ರಿಲೋಕ ||ಆಕ್ರಮಿಸಿ ತ್ರಿಲೋಕನಾಳ್ದ ಶ್ರೀರಾಮಶ್ರೀ ಕೃಷ್ಣಗಾರುತಿಯ ಬೆಳಗಿರೇ 2 ನಗ್ನನಾಗಿ ವ್ರತವಾ ವಿಘ್ನವ ಚರಿಸಿದಅಜ್ಞಾನಿ ಕಲಿಯ ಸದೆದ ||ಅಜ್ಞಾನಿ ಕಲಿಯ ಸದೆದ ಮೋಹನ್ನ ವಿಠ್ಠಲ ಸ-ರ್ವಜ್ಞಗಾರುತಿಯ ಬೆಳಗಿರೇ3
--------------
ಮೋಹನದಾಸರು
ಲಕ್ಷ್ಮೀಶ ಗೋವಿಂದ ವಿಠಲ ಪೊರೆ ಇವಳಾ ಪ ಪಕ್ಷ್ಮಗಳು ಅಕ್ಷಿಗಳ ಅಗಲದಿಪ್ಪಂತೇ ಅ.ಪ. ಕುಕ್ಷಿಯಲಿ ಜಗಧರಿಪ ಪಕ್ಷಿವಾಹನ ದೇವಅಕ್ಷರೇಡ್ಯನೆ ಕರುಣದೀಕ್ಷಿಸುತ ಇವಳ |ರಕ್ಷಿಪುದು ಸುಜ್ಞಾನ ಭಕ್ತಿದಾಯಕನಾಗಿಕಕ್ಷೆತರತಮ ಜ್ಞಾನ ಭೇದಪಂಚಕನರುಹಿ 1 ಪತಿಯೆ ಪರದೈವವೆಂಬುನ್ನತದ ಮತಿಯಿತ್ತುಪಥತೋರೊ ಸದ್ಗತಿಗೆ ಸರ್ವವ್ಯಾಪಕನೇ |ಹಿತದಿಂದ ಬಯಸುವಳು ತವಪಾದ ದಾಸ್ಯವನುಕೃತಿ ಪತಿಯೆ ನೀನಿತ್ತು ಸಲಹ ಬೇಕಿವಳಾ 2 ವಾಗ್ದೇವಿ ಪತಿ ಪ್ರೀಯಕೃಪೆಗೈದು | ತವಪಾದ ಹೃದುಹದಿ ನೋಳ್ಪ |ಸುಪಥವೆನೆ ಹರಿಗುರೂ ಸದ್ಭಕ್ತಿ ಕರುಣಿಪುದುವಿಪಗಮನ ಹಯವದನ ಶ್ರೀ ಲಕ್ಷ್ಮೀ ಸದನಾ 3 ಅಂಕಿತಿಲ್ಲದ ದೇಹ ಸಾಧನಕೆ ಸಲ್ಲದೆನೆಅಂಕಿತವ ವಿತ್ತಿಹೆನು ಗುರುಕರುಣದೀ | ನಿಂತು ನೀನಿವಳಲ್ಲಿ ತೋರು ತವ ಮಹಿಮೆಗಳಸಂತತದಿ ನಿನ್ನಂಘ್ರಿ ಸ್ಮರಣೆ ಕರುಣಿಸುತ 4 ಸರ್ವ ಶ್ರುತಿ ಸಮ್ಮತದ ಪವನಮತ ದೀಕ್ಷೆಯನುಸರ್ವ ಕಾರ್ಯದಿ ನಿನ್ನ ಸೇವೆ ಮತಿಯ |ಸರ್ವದಾ ಕರುಣಿಸುತ ಪೊರೆ ಎಂದು ಭಿನ್ನೈಪೆಪವನಾಂತರಾತ್ಮ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀಶ ನರಹರಿ ವಿಠ್ಠಲನೆ ಸಲಹೊ ಪ ಪಕ್ಷೀಂದ್ರ ವಾಹನನೆ ಈಕ್ಷಿಸುತ ಕರುಣದಿಂರಕ್ಷಿಸಲಿ ಬೇಕಿವಳ ಲಕ್ಷ್ಮಣಾಗ್ರಜನೇ ಅ.ಪ. ದೀನಜನ ಮಂದಾರ ಜ್ಞಾನದಾಯಕನೆ ಸುರ-ಧೇನು ಭಕ್ತರಿಗೆ ಕಾಮಿತವ ಕೊಡುವಲ್ಲಿ |ನೀನಿವಳಿಗೇ ಮೋಕ್ಷಜ್ಞಾನವನೇ ಪಾಲಿಸುತಸಾನುರಾಗದಿ ಸಲಹೊ ಪ್ರಾಣಾಂತರಾತ್ಮ 1 ಸೃಷ್ಟಿ ಸ್ಥಿತಿ ಸಂಹಾರ ಕರ್ತನೀನೆಂದೆನಿಪೆವೃಷ್ಟಿಕುಲ ಸಂಪನ್ನ ಜಿಷ್ಣು ಸಖ ಹರಿಯೇ |ಕಷ್ಟನಿಷ್ಠೂರಗಳ ಸಹಿಸುವಡೆ ಧೈರ್ಯವನುಕೊಟ್ಟು ಕೈ ಪಿಡಿಯುವುದು ಕೃಷ್ಣ ಮೂರುತಿಯೇ2 ಪತಿಯೆ ಪರದೈವ ವೆಂಬುನ್ನತದ ಮತಿಯಿತ್ತುಹಿತದಿಂದ ಹರಿಗುರು ಸೇವೆಯಲಿ ರತಿಯಸತತ ನಿನ್ನಯ ನಾಮ ಸ್ಮøತಿಯನ್ನೇ ವದಗಿಸುತಕೃತಿಪತಿಯೆ ನೀನಿವಳ ಉದ್ಧರಿಸು ಹರಿಯೇ 3 ತಾರತಮ್ಯ ಜ್ಞಾನ ವೈರಾಗ್ಯ ಭಕುತಿ ಕೊಡುಮೂರೆರಡು ಭೇಧಗಳ ಅರಿವಿತ್ತು ಹರಿಯೇಮಾರಪಿತ ಇವಳ ಹೃದ್ವಾರಿಜದಿ ತವ ರೂಪತೋರುತಲಿ ಸನ್ಮುದವ ಬೀರುವುದು ಹರಿಯೇ 4 ಸರ್ವಾಂತರಾತ್ಮನೆ ಗುರುಡವಾಹನ ದೇವಸರ್ವಜ್ಞ ಸರ್ವೇಶ ಮಮ ಕುಲ ಸ್ವಾಮೀ |ನಿರ್ವಿಘ್ನದಿಂದೆನ್ನ ಪ್ರಾರ್ಥನೆಯ ಪೂರೈಸೊಸರ್ವಸುಂದರ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಘುವಾವುದೆಂಬುದನು ನಿಜವಾಗಿ ನುಡಿಯುವೆನು ಸುಗುಣವಂತರು ಕೇಳಿ ವಿನಯದಲಿ ಬೇಡುವೆನು ಪ ಲಘುತೃಣವು ತಾನಲ್ಲದಿಟವೆ ಸರಿ ಈ ಮಾತು ಲಘುತೃಣವ ತಾವುಂಡು ಪಾಲ್ಕೊಡವೆ ಗೋವುಗಳು ಅ.ಪ. ನಾರಿಯನು ಸಾಕುವೆಡೆ ಕೈಲಾಗದ ಲಘುವು ಭಾರಿಸಿರಿಯನು ಪತಿಗೆ ತಾರದಾ ಸೊಸೆ ಲಘುವು ನಾರಿಯರ ಕೈಗೊಂಬೆಯಾಗಿರುವ ನರ ಲಘುವು ಸಿರಿವಂತ ನೆಂಟರಲಿ ಬಡವ ಸೇರಲು ಲಘುವು 1 ವಿತ್ತವಿಲ್ಲದ ಪಿತನು ಪುತ್ರನಿಲ್ಲಿರೆ ಲಘುವು ಪುತ್ರವತಿಯರ ನಡುವೆ ಸವತಿ ಬಂಜೆಯು ಲಘುವು ಅತ್ತಿಗೆಗೆ ಬಹು ಲಘುವು ರಿತ್ತ ಮೈದುನ ಮಂದಿ ಭತ್ರ್ಯತಾನತಿ ಲಘುವು ಶ್ರೀಮಂತ ಕನ್ನಿಕೆಗೆ 2 ಮೋದತೀರ್ಥರ ಮತಕೆ ಮಿಕ್ಕುದೆಲ್ಲವು ಲಘುವು ವೇದನುತ “ಶ್ರೀಕೃಷ್ಣವಿಠಲ”ನ ನೆನೆಯದವ ಶುದ್ಧಲಘು ತಮನೈಯ ವೃದ್ಧ ಸಮ್ಮತ ಹೌದು 3
--------------
ಕೃಷ್ಣವಿಠಲದಾಸರು
ಲಂಬೋದರನ ಸಹೋದರನೆ ಪ ಶಂಭುಜಕರುಣಾಸಾಗರನೆ ಅ.ಪ ಶೂರಪದ್ಮನ ಎದೆ ಸೀಳಿದನೆ ಮಾರನ ಪೋಲುವ ಸುಂದರನೆ ಧೀರ ಹಿರಣ್ಯಕನಾರಾಧನೆಗೆ ಮೆಚ್ಚಿ ಸೂರೆಯ ಮುಕ್ತಿಯನಿತ್ತವನೆ 1 ವರವಜ್ರ ಶಕ್ತ್ಯಾಯುಧ ಧರನೆ ಸುರಮುನಿ ನಮಿತ ಸರ್ವೇಶ್ವರನೆ ಸುರುಚಿರ ರತ್ನಾಭರಣ ವಿಭೂಷಣನೆ ಶರಣ ರಕ್ಷ ಕುಮಾರಕನೆ2 ದಾಸ ಜನರ ಮನತೋಷಕನೆ ವಾಸುದೇವನ ಸಖ ಷಟ್ಶಿರನೆ ದೋಷವಿನಾಶನೆ ನಾಶರಹಿತ ಪಾವಂಜೇಶನೆ ಕಾರ್ತಿಕೇಯನೆ ಸ್ಕಂದನೆ 3
--------------
ಬೆಳ್ಳೆ ದಾಸಪ್ಪಯ್ಯ
ಲವಕುಶರ ಹಾಡು ಹರಿಹರ ಬ್ರಹ್ಮ ತ್ರಿಮೂರ್ತಿಗಳ ಬಲಗೊಂಡು *ಗುರುಹಿರಿಯರ ಪಾದಕ್ಕೆರಗೀ | ಅಜನ ಪಟ್ಟದ ಶ್ರೀ ಸರಸ್ವತಿಯನೆ ಬಲಗೊಂಡು ತೊಡಗುವೆ ರಾಮರ ಕಥೆಯಾ 1 ಬಣ್ಣದ ಅಕ್ಷತೆ ಕಣ್ಣು ತುಂಬೆ ಪುಷ್ಪ ಸು ವರ್ಣ ದಕ್ಷಿಣೆ ತಾಂಬೂಲಾ | ಉಮ್ಮಿಯ ಪುತ್ರ ಗಣೇಶಗೆ ಅರ್ಪಿಸಿ ವರ್ಣಿಪೆ ಲವಕುಶರ ಕಥೆಯಾ 2 ಕುಲದ ಸ್ವಾಮಿ ಕದ್ರಿ ನರಸಿಂಹನ ಬಲಗೊಂಡು | ಗುರು ಮಧ್ವರಾಯರ ನೆನೆದು | ಮನದಲ್ಲಿ ವಿಷ್ಣು ದೇವತೆಗಳ ಬಲಗೊಂಡು ತೊಡಗುವೆ ರಾಮರ ಕಥೆಯಾ 3 ವೇದಪಾರಾಯಣ ಅಂತ್ಯದ ಪೀಠಕ ಮಾಧವ ಹರಿ ಸುಗೋತ್ರ | ವೇದ ಮೂರುತಿ ಕೊಂಡಪ್ಪನ ಪುತ್ರಿಕೆಗೆ (?) ಹೇಳಿದಳುಹರಿನಾಮ ಕಥೆಯಾ 4 ಯಗ್ನ ಸಂತತಿಯೂ ಪೀಠಕವೂ | ಅಜ್ಞಾನಿ ಮೂಢಜೀವರಿಗೆ 5 ಹರುವುಳ್ಳ ನಿರಯಾಗಿಗಳೂ | ಹರವುಳ್ಳ ಕೈ(?)ಮುನಿವಳ್ಳೇರು ಜಾಣರು ತಿಳಿವೂದು ಅರ್ಥಸಂದೇಶ 6 ನಾಡನ ಕಥೆಯಲ್ಲ ಬೇಡುಂಬ ಪದನಲ್ಲ ನಾಡೊಳಗೆ ಹರಿನಾಮ ಕೇಳಿದ ಜನರಿಗೆ | ವಿಲ್ಲವಾಗುವುದು 7 ಪ್ರಚಂಡರು ರಾಮಲಕ್ಷ್ಮಣರು | ಇತ್ತಬೇಟೆಯನಾಡುವ ಕ್ರಮಗಳ ಚಂದವಿನ್ನೆಂತು ವರ್ಣಿಸಲೆ 8 ತಾಂಬೂಲ ಶ್ರೀಮೊಗದಿಂದೆ | ಇಂದುವದನೆಯ ಬಿಗಿದಪ್ಪಿ ಮುದ್ದಾಡಿದ ಇಂದುವದನೆ ಗರ್ಭವೆಂದ 9 ನಳಿನನಾಭನು ತನ್ನ ಲಲನೇಯ ಮುಖನೋಡಿ ಲಲನೆ ನಿನ್ನ ಪ್ರೇಮವೇನೆ | ಮುನಿಯು ಆಮುನಿಗಳು ಕೂಡಿದ ನಂತ್ರ ವನಭೋಜನ ತನಗೆಂದ್ಲೂ 10 ಹಲವು ಕಾಲವು ಸೀತೆ ಅಸುರರ ವಡನಾಡಿ ನೆನದಳು ಋಷಿಗಳಾಶ್ರಮವಾ | ಹಸನವಲ್ಲವು ಸೀತೆ ಇನ್ನು ನೀನುಳಿವದು ಋಷಿಗಳಾಶ್ರಮಕೆ ಹೋಗೆಂದಾ 11 ಅಯೋಧ್ಯಾಪುರದ ವಾನರರೆಲ್ಲಾ ಬಿಟ್ಟು ಕೈಹಿಡಿದ ಪುರುಷನ ಬಿಟ್ಟು | ನೆನದಾಳು ಋಷಿಗಳಾಶ್ರಮವ 12 ಅಂದು ಶ್ರೀರಾಮರು ಬೇಟೆಗ್ಹೋದೇವೆಂದು ಇಂದು ಡಂಗುರವ ಸಾರಿದರೂ | ಒಂದು ಗಳಿಗೆ ಮುಹೂರ್ತತಡೆಯಲಾಗದು ಎಂದು ಮಂದಿ ಮಕ್ಕಳ ಕರಸಿದರೂ 13 ಬಂದರು ಮಂತ್ರಿ ಮಾನ್ಯರು ಪ್ರಹಸ್ತರು ಬಂದರು ಪ್ರಧಾನೇರು | ಬಂದರು ರವಿಗುರಿನವಿಗುರಿಕಾರರು (?) ಬಂದರು ವಾಲಗದೋರೊಪ್ಪಿದರು 14 ಆಟಪಾಟದೋರು ನೋಟಕ್ಕೆ ದಾರಾರು ಸೂತ್ರದವರು ಸುವ್ವಿಯವರು | ಪಾಟಕ್ಕೆ ದಾರಾರು ಪೊಗಳುವ ಭಂಟರು ರಘು ನಾಥನೋಲಗದಲೊಪ್ಪಿದರೂ 15 ಹೊನ್ನು ಹಲಗೆಯವರು ಬೆನ್ನಬತ್ತಲೆಯವರು ಚಿನ್ನಬಿನ್ನಾಣನಾಯಕರೂ | ಚೆನ್ನಿಗರಾಮರ ಪೊಗಳುವ ಭಂಟರು ಬಿನ್ನಾಣದಿಂದೊಪ್ಪುತಿಹರೂ 16 ಪಟ್ಟಾವಳಿ ಹೊಸಧೋತರವು ಇಟ್ಟರು ಆಭರಣವನ್ನೂ | ಮಕರಕುಂಡಲ ಕಿರೀಟವೂ ಇಟ್ಟರು ನೊಸಲ ಕಸ್ತುರಿಯಾ 17 ಹಾರಮಾಣಿಕನಿಟ್ಟು ಕಾಲುಪೆಂಡೆಯನಿಟ್ಟು ನ್ಯಾವಳದ ಉಡುದಾರನಿಟ್ಟು ಸೂರ್ಯನ ಕುಲದ ಕುಮಾರರು ನಾಲ್ವರು ಏರಿದರು ಹೊನ್ನ ರಥವಾ 18 ವಾಯುವೇಗ ಮನೋವೇಗವೆಂಬೋ ರಥ ಏರಿದರೆ ರಾಮಲಕ್ಷ್ಮಣರೂ | ಸೂರ್ಯ ತಾನೆ ರಥವ ನಡೆಸೆ ಕೂಡ ಬೇಟೆಗೆ ತೆರಳಿದರು 19 ಅತ್ತಿ ಆಲದ ಮರ ಸುತ್ತ ಹೆದ್ದುಮ್ಮರಿ ಉತ್ತತ್ತಿ ಬೆಳಲು ದಾಳಿಂಬ ಉತ್ತಮ ಅಶ್ವತ್ಥ ಇಪ್ಪಿಯ ವನಗಳು ವಿಸ್ತರವನವೊಪ್ಪುತಿಹವೂ 20 ನಾರಂಗ ಬೆರಸಿದ ಕಿತ್ತಳಿ ಹರಿಸಿಣದ ತೋಪು ಎಲಿತ್ವಾಟ ಅರಸುಮಕ್ಕಳು ರಾಮಲಕ್ಷ್ಮಣರೆಲ್ಲರು ಬೆರಸಿ ಬೇಟೆಯ ನಾಡುತಿಹರೂ 21 ಯಾರಾಡಿಗಿಡಗಳು ಕ್ಯಾದೀಗಿವನಗಳು ನಾಗಸಂಪಿಗೆಯ ತೋಪುಗಳು | ಜೋಡೀಲಿ ಭರತ ಶತ್ರುಘ್ನರೆಲ್ಲರು ಕಾಲಾಳು ಬೇಟೆನಾಡಿದರೂ 22 ಉದ್ದಂಡ ಕೇಕಾಪಕ್ಷಿ ಚಂದಾದ ಬಕನ ಪಕ್ಷಿಗಳೂ | ಅಂದಾದ ಆಲಿವಾಣ ಆಲಹಕ್ಕಿಯು ರಾಮ ಚಂದ್ರನು ಬೇಟೆಯಾಡಿದನು 23 ಬೇಟೆನಾಡಿ ಬಂದು ನಿಂತಾರು ನೆರಳಲ್ಲಿ ಒಂದುಗಳಿಗೆ ಶ್ರಮವ ಕಳೆದು ನಂದನವನದಲ್ಲಿ ತನಿಹಣ್ಣು ಮೆಲುವೋರು ಗಂಗೆಯ ಉದಕ ಕುಡಿಯುವೋರು 24 ನಳಿನನಾಭನು ತಾನು ಬಳಲಿ ಬೇಟೆಯನಾಡಿ ನೆರಳಲ್ಲಿ ತುರಗ ಮೇಯಿಸಿದ ಕಿರಿಯಲಕ್ಷ್ಮಣ ದೇವ ತೊಡೆಯನ್ನೆ ಕೊಡು ಎಂದು ಮಲಗೀದ ಒಂದು ನಿಮಿಷವನೂ 25 ಮುಂದಿನ ಆಗೆಂತ್ರವ(?) ಕಂಡನು ಕನಸಿನಲಿ ರಾಮ ಕಂಗೆಟ್ಟು ಮೈಮುರಿದೆದ್ದಾ | ಕಂದ ಲಕ್ಷ್ಮಣ ಕೇಳೊ ಇಂದೆನ್ನ ಸೊಪ್ನದಲಿ ಬಂದಿಹಳೊಬ್ಬ ತಾಟಕಿಯೂ 26 ಇಂದುವದನೆಮುಡಿ ಪಿಡಿದಳೆವೊ ದುಕಂಡೆ ತುಂಡರಾವಣ ಕುಯೋದು ಕಂಡೆ | ಇಂದು ನೀ ಸೀತೆಯ ಕರೆದೊಯಿದು ಕಾನನದಿ ದಿಂಜಾರಿಳಿಸೋದು ಕಂಡೆ 27 ಮುನ್ನ ಅರಿಯದೆ ನಾವು ಬಂದೆವೋ ಲಕ್ಷ್ಮಣ ಇನ್ನು ಸೀತೆಗೆ ಜಯವಿಲ್ಲಾ | ಅಂದು ಶ್ರೀರಾಮರಾ ಬೇಟೆ ಮೂಲಕದಿಂದೆ ಬಂದಾಳು ಮಾಯದ ಗರತಿ | 28 ಬಂದು ಅಯೋಧ್ಯಾಪುರದ ಬೀದಿಯವಳಗೆ ಚಂದದಿ ಕುಣಿದಾಡುತಿಹಳು | ಅಂದು ಶ್ರೀ ರಾಮರ ಅರಮನೆ ಬಾಗಿಲಿಗೆ ಚಂದುಳ್ಳ ದ್ವಾರಪಾಲಕರೂ 29 ಬಂದು ಅಸುರೆ ನಿನ್ನ ಬಿಡವಲ್ಲೆನೆಂದರೆ ಬಂದಡರಿದಳರಮನೆಗೆ ಕಂಡು ಜಾನಕಿ ತಾನು ಕರಸಿದಳಾಗಲೆ ಬಂದಳು ಮಾಯದ ಗರತಿ 30 ಬಂದು ಪಾದಕ್ಕೆರಗಿ ಕೈಮುಗಿದು ನಿಂತಳು ತಂದಳು ನಾಗ ಸಂಪಿಗೆಯಾ | ಅಂಗನೆ ಜಾನಕಿ ನೀಮುಡಿಯೆಂದು ಕೊಟ್ಟರೆ ಸಂದೇಹ ಬಟ್ಟಳಾ ಸೀತೆ 31 ಈನಾಡ ಗರತಿ ನೀನಲ್ಲ | ದಾರು ಬಂಧುಗಳುಂಟು ದಾರ ಬಳಿಗೆ ನೀ ಬಂದೀ 32 ಈರೇಳು ಲೋಕವ ಸುತ್ತಿ ತಿರುಗಿ ಬಂದೆ ನಾಗಲೋಕಕ್ಕೆ ಬಾಹೆನೆಂದು ನಾಗಲೋಕದಿಂದ ದೇವಲೋಕಕ್ಕೆ ಬಂದೆ ದೇವಿಗೆ ಕಾಣಿಕೆ ತಂದೇ 33 ಹೊನ್ನು ಹಣವನೀವೆ ಅನ್ನವಸ್ತ್ರವನೀವೆ ಇನ್ನು ನೀವಲಿದದ್ದು ಈವೆ | ಇನ್ನು ನೀವಲಿದದ್ದು ಚೆನ್ನಾಗಿ ಕೊಡುವೆನು ಬಿನ್ನವಿಸೆ ಗರತಿ ನೀ ಅಂದ್ಲೂ 34 ಹೊನ್ನು ಹಣವನೊಲ್ಲೆ ಅನ್ನವಸ್ತ್ರವನೊಲ್ಲೆ ನಿನ್ನ ಭಾಗ್ಯವು ನಾನೊಲ್ಲೆ | ಮುನ್ನಿನ ಅಸುರರೂಪ ಇನ್ನು ನೀಬರೆದರೆ ಹರಣ ಹೊರುವೆನು 35 ಮುನ್ನವನು ಕಂಡು ಕೇಳರಿಯ | ಪನ್ನಂಗಧರ ರಾಮ ಬಂದರೆ ಬೈದಾರು ಗಮನ ಮಾಡಂದ್ಲೂ36 ಅಂದರೆ ಸೀತೆ ತನ್ನಂಗಕ್ಕೆ ಬರಲೆಂದು ತಂದು ತೊಡೆದಳು ಭಸುಮವನು | ಅಂದೆನ್ನ ವನಕೆ ಪ್ರದಕ್ಷಿಣೆ ಬರುವಾಗ ಉಂಗುಷ್ಟವನು ಕಂಡುಬಲ್ಲೆ 37 ಉಂಗುಷ್ಟದಂದಕ್ಕೆ ಮುಂದೆ ಪಾದವ ಬರಿ ಹಿಂದೆ ಹಿಂಬುಡ ಮೊಣಕಾಲು | ಹೊಂದಿಸಿ ಬರೆ ಎಂದಳವಳು 38 ಚಂದಾದ ಕಾಗದ ಲೆಕ್ಕಣಿಕೆ ಪಿಡಿದು ತಂದು ಕೊಟ್ಟಳು ಸೀತೆ ಕೈಗೆ | ಒಂದು ಕಾಯಕೆ ಹತ್ತು ಸಿರಗಳ ಬರೆದಳು ಮುಂದೆರಡು ಪಾದವ ಬರೆದಳು 39 ಒಂದರ ಹಿಂದೊಂದು ವರ್ಣಿಸಿ ಬರೆದಳು ತಂದು ನಿಲಿಸಿದಳು ರಾವಣನಾ | ಚಂದವಾಯಿತು ದೇವಿ ವರವಕೊಡೆನುತಲಿ ಎಂದೆಂದಿಗೂ ಅಳಿಯದ್ಹಾಗೇ 40 ಅಳಿದು ಉಳಿಯದಿರು ಉಳಿದು ನೀ ಕೆಡದಿರು ಧರಿಯವಳಗೆ ಅಡಗದಿರು | ಕಿರಿಯ ಲಕ್ಷ್ಮಣದೇವ ಹೊಡೆದರೆ ಮಡಿ ಎಂದು ವರವ ಕೊಟ್ಟಳು ಸೀತೆ ಪಠಕೆ 41 ಮರೆ
--------------
ಹೆಳವನಕಟ್ಟೆ ಗಿರಿಯಮ್ಮ
ಲಾಲಿ ಗೋವಿಂದ ಲಾಲಿ ಕೌಸಲ್ಯಬಾಲ ಶ್ರೀರಾಮ ಲಾಲಿ ಪ ಲಾಲಿ ಮುನಿವಂದ್ಯ ಲಾಲಿ ಜಾನಕಿ-ರಮಣ ಶ್ರೀರಾಮ ಲಾಲಿ ಅ.ಪ. ಕನಕರತ್ನಗÀಳಲ್ಲಿ ಕಾಲ್ಗಳನೆ ಹೂಡಿನಾಲ್ಕು ವೇದಗಳನ್ನು ಸರಪಣಿಯ ಮಾಡಿಅನೇಕ ಭೂಮಂಡಲವ ಹಗೆಯನು ಮಾಡಿಶ್ರೀಕಾಂತನುಯ್ಯಾಲೆಯನು ವಿರಚಿಸಿದರು1 ಆಶ್ಚರ್ಯಜನಕವಾಗಿ ನಿರ್ಮಿಸಿದಪಚ್ಚೆಯ ತೊಟ್ಟಿಲಲ್ಲಿಅಚ್ಚುತಾನಂತನಿರಲು ತೂಗಿದರುಮತ್ಸ್ಯಾವತಾರ ಹರಿಯ 2 ಧರ್ಮಸ್ಥಾಪಕನು ಎಂದು ನಿರವಧಿಕನಿರ್ಮಲ ಚರಿತ್ರನೆಂದುಮರ್ಮ ಕರ್ಮಗಳ ಪಾಡಿ ತೂಗಿದರುಕೂರ್ಮಾವತಾರ ಹರಿಯ 3 ಸರಸಿಜಾಕ್ಷಿಯರೆಲ್ಲರು ಜನವಶೀಕರ ದಿವ್ಯರೂಪನೆಂದುಪರಮ ಹರುಷದಲಿ ಪಾಡಿ ತೂಗಿದರುವರಹಾವತಾರ ಹರಿಯ4 ಕರಿಕುಂಭಗಳ ಪೋಲುವ ಕುಚದಲ್ಲಿಹಾರ ಪದಕವು ಹೊಳೆಯಲುವರ ವರ್ಣಿನಿಯರು ಪಾಡಿ ತೂಗಿದರುನರಸಿಂಹಾವತಾರ ಹರಿಯ 5 ಭಾನುಮಣಿಯರೆಲ್ಲರು ಯದುವಂಶಸೋಮನಿವನೆಂದು ಪೊಗಳಿನೇಮದಿಂದಲಿ ಪಾಡಿ ತೂಗಿದರುವಾಮನಾವತಾರ ಹರಿಯ6 ಸಾಮಜವರದನೆಂದು ಅತುಳ ಭೃಗು ರಾಮಾವತಾರವೆಂದುಶ್ರೀಮದಾನಂದ ಹರಿಯ ತೂಗಿದರುಪ್ರೇಮಾತಿರೇಕದಿಂದ7 ಕಾಮನಿಗೆ ಕಾಮನೆಂದು ಸುರಸಾರ್ವಭೌಮ ಗುಣಧಾಮನೆಂದುವಾಮನೇತ್ರೆಯರು ಪಾಡಿ ತೂಗಿದರುರಾಮಾವತಾರ ಹರಿಯ8 ಸೃಷ್ಟಿಯ ಕರ್ತ ನೆಂದು ಜಗದೊಳಗೆಶಿಷ್ಟ ಸಂತುಷ್ಟನೆಂದುದೃಷ್ಟಾಂತರಹಿತನೆಂದು ತೂಗಿದರುಕೃಷ್ಣಾವತಾರ ಹರಿಯ 9 ವೃದ್ಧನಾರಿಯರೆಲ್ಲರು ಜಗದೊಳಗೆ ಪ್ರಸಿದ್ಧನಿವನೆಂದು ಪೊಗಳಿಬದ್ಧಾನುರಾಗದಿಂದ ತೂಗಿದರು ಬೌದ್ಧಾವತಾರ ಹರಿಯ 10 ಥಳಥಳಾತ್ಕಾರದಿಂದ ರಂಜಿಸುವಮಲಯಜಲೇಪದಿಂದಜಲಗಂಧಿಯರು ಪಾಡಿ ತೂಗಿದರುಕಲ್ಕ್ಯಾವತಾರ ಹರಿಯ 11 ಕನಕಮಯ ಖಚಿತವಾದ ತಲ್ಪದಲಿವನಜಭವ ಜನಕನಿರಲುವನಜನಾಭನ್ನ ಪಾಡಿ ತೂಗಿದರುವನಿತಾಮಣಿಯರೆಲ್ಲರು 12 ಪದ್ಮರಾಗವ ಪೋಲುವ ಹರಿಪಾದಪದ್ಮವನು ತಮ್ಮ ಹೃದಯಪದ್ಮದಲಿ ನಿಲಿಸಿ ಪಾಡಿ ತೂಗಿದರುಪದ್ಮಿನೀ ಭಾಮಿನಿಯರು 13 ಹಸ್ತಭೂಷಣ ಮೆರೆಯಲು ದಿವ್ಯತರಹಸ್ತಲಾಘವಗಳಿಂದಹಸ್ತಗಳ ಪಿಡಿದುಕೊಂಡು ತೂಗಿದರುಹಸ್ತಿನೀ ಭಾಮಿನಿಯರು14 ಮತ್ತಗಜಗಾಮಿನಿಯರು ದಿವ್ಯತರಚಿತ್ರವಸ್ತ್ರಗಳನುಟ್ಟುಚಿತ್ತಸಂತೋಷದಿಂದ ತೂಗಿದರುಚಿತ್ತಿನೀ ಭಾಮಿನಿಯರು 15 ಕಂಕಣಧ್ವನಿಗಳಿಂದ ರಂಜಿಸುವಕಿಂಕಿಣೀಸ್ವರಗಳಿಂದಪಂಕಜಾಕ್ಷಿಯರು ಪಾಡಿ ತೂಗಿದರುಶಂಕಿನೀ ಭಾಮಿನಿಯರು 16 ಚೊಕ್ಕ ಕಸ್ತೂರಿ ಪಂಕದಿಂ ರಂಜಿಸುವಮಕರಿಕಾಪತ್ರ ಬರೆದುಲಿಕುಚಸ್ತನಿಯರು ಪಾಡಿ ತೂಗಿದರುಅಕಳಂಕಚರಿತ ಹರಿಯ17 ಆನಂದಸÀದನದೊಳಗೆ ಗೋಪಿಯರುಆ ನಂದಸುತನ ಕಂಡುಆನಂದ ಭರಿತರಾಗಿ ತೂಗಿದರುಆನಂದ ಭೈರವಿಯಿಂದ 19 ದೇವಾಧಿದೇವನೆಂದು ಈ ಶಿಶುವುಭಾವನಾತೀತನೆಂದುದೇವಗಂಧರ್ವರ್ಪಾಡಿ ತೂಗಿದರುದೇವ ಗಾಂಧಾರದಿಂದ 20 ನೀಲ ಕರುಣಾಲವಾಲ ಶ್ರೀಕೃಷ್ಣ ಜೋ ಜೋಲೀಲಾವತಾರ ಜೋ ಜೋ ಪರಮಾತ್ಮಬಾಲಗೋಪಾಲ ಜೋ ಜೋ 21 ಇಂದುಧರಮಿತ್ರ ಜೋ ಜೋ ಶ್ರೀಕೃಷ್ಣಇಂದು ರವಿ ನೇತ್ರ ಜೋ ಜೋಇಂದುಕುಲ ಪುತ್ರ ಜೋ ಜೋ ಪರಮಾತ್ಮಇಂದಿರಾರಮಣ ಜೋ ಜೋ 22 ತುಂಗ ಭವಭಂಗ ಜೋ ಜೋ ಪರಮಾತ್ಮರಂಗ ಕೃಪಾಂಗ ಜೋ ಜೋಮಂಗಳಾಪಾಂಗ ಜೋ ಜೋ ಮೋಹನಾಂಗರಂಗವಿಠಲನೆ ಜೋ ಜೋ 23
--------------
ಶ್ರೀಪಾದರಾಜರು